ಒಟ್ಟು 9833 ಕಡೆಗಳಲ್ಲಿ , 131 ದಾಸರು , 5664 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿನಾರಾಯಣ ಎನ್ನಿರೊ ಸಜ್ಜನರು ಶ್ರೀ- ಹರಿಕೃಷ್ಣ ಶರಣೆನ್ನಿರೊ ಪ ಪರಿಪರಿ ದುರಿತಗಳಳಿದು ಪೋಗುವದೆಂದು ನಿರುತವು ವೇದಪುರಾಣ ಪೇಳುವದು ಶ್ರೀ ಅ.ಪ ಹರಿ ಎಂದ ಮಾತ್ರದಲಿ ಹತ್ತಿದ ಪಾಪ ಪರಿಹಾರಾಗುವುದು ಕೇಳಿ ಹರಿದಾಸರೊಡನೆ ಕೂಡಿ ಸತ್ಸಂಗದಿ ಹರಿ ಕೀರ್ತನೆಯನು ಪಾಡಿ ಹರಿಯ ಮಹಿಮೆಯ ಸ್ಮರಿಸುತಲಿ ಹಗ ಲಿರುಳು ಚಿಂತನೆ ಮಾಳ್ಪ ಸುಜನರ ಪರಮ ಕರುಣಾ ಸಾಗರನು ತನ್ನ- ವರೊಳಿರಿಸುತ ಪೊರೆವ ಸಂತತ 1 ಕರಿರಾಜ ಕಷ್ಟದಲಿ ಮೊರೆ ಇಡೆ ಕೇಳಿ ತ್ವರದಿ ಓಡಿ ಬರಲಿಲ್ಲವೆ ಹರಿ ನೀ ರಕ್ಷಕನೆನ್ನಲು ಪಾಂಚಾಲಿಗ- ಕ್ಷಯ ವಸ್ತ್ರವೆನಲಿಲ್ಲವೆ ತರುಳರೀರ್ವರ ಪೊರೆದು ರಕ್ಷಿಸಿ ಕರೆಯೆ ನಾರಗನೆಂದ ದ್ವಿಜನಿಗೆ ನರಕ ಬಾಧೆಯ ಬಿಡಿಸಿ ಸಲಹಿದ ಹರಿಗೆ ಸಮರು ಅಧಿಕರಿಲ್ಲ ಶ್ರೀ 2 ಬಡಬ್ರಾಹ್ಮಣನ ಸತಿಯು ನಯಭಯದಿಂದ ಒಡೆಯರ್ಯಾರಿಲ್ಲೆನಲೂ ಪೊಡವೀಶ ಶ್ರೀಪತಿಯು ಪರಮಾಪ್ತನೆನಲು ಹಿಡಿಯಗ್ರಾಸವ ಕೊಡಲು ನಡೆದು ದ್ವಾರಕ ದೊಡೆಯನಿಗೆ ಒ- ಪ್ಪಿಡಿಯ ಗ್ರಾಸವ ಕೊಡಲು ಭುಂಜಿಸಿ ಕೆಡದ ಸೌಭಾಗ್ಯವನೆ ನೀಡಿದ ಬಿಡದೆ ಕಮಲಾನಾಭ ವಿಠ್ಠಲನ 3
--------------
ನಿಡಗುರುಕಿ ಜೀವೂಬಾಯಿ
ಹರಿಪಾದ ತೀರ್ಥವನು ಕರದಿ ಪಿಡಿದವರೆಲ್ಲ ತಿರುನಾಮದವರೆನಲು ನಂಬಬಹುದೇ ಪ ಪರವಾಸುದೇವನನು ಮರೆತು ಸತಿಸುತರ ವರಾಭರಣವೇ ಹಿರಿದೆಂಬ ನರರಿಲ್ಲವೇ ಅ.ಪ ಹರಿನಿವೇದನಕಾಗಿ ಕರದಿ ಫಲಪುಷ್ಪಗಳ ತರುವವರು ದಕ್ಷಿಣೆಯ ಇರಿಸಿಹರೋ ಎಂದು ಪರಿಪರಿಯ ದೃಷ್ಟಿಯಲಿ ಪರಿಕಿಸುತ ಅಲ್ಲವೆಂ ದರಿತಾಗ ಕೋಪ ನಿಷ್ಠುರ ಗೈಯುವರು 1 ಈಶಾಯನಮಃ ಓಂ ಶ್ರೀಶಾಯ ನಮಃ ಪ ರೇಶಾಯ ನಮಃ ಎಂಬುದಕೆ ಬದಲು ಆಶೋತ್ತರವನಾಂತು ಕ್ಲೇಶಪೂರಿತರಾಗಿ ನಾಶವಾಗಲಿ ಕುಡದಜನರೆಂಬರಕಟಾ 2 ಮಾನವೋತ್ತಮ ಮಾತ್ರ ತಿರುನಾಮಧಾರಿ ಜ್ಞಾನಿ ಇಂಥವನಿಂದ ತೀರ್ಥವನು ಪಡೆದವರು ಶ್ರೀನಾಥ ಮಾಂಗಿರಿಯ ಭಕ್ತರೆನಿಸುವರು3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಹರಿಭಜನವೇ ಬಹುಮಿಗಿಲು ನರನಿಗೆ ಧರೆಯಸುಖವೆಲ್ಲ ಸುಳ್ಳೊ ಸುಳ್ಳೋ ಪ ತಂದೆತಾಯಿಗಳು ಮಂದಿ ಮಕ್ಕಳು ಬಂಧುಬಳಗ ಒಂದು ಸಂಬಂಧವಿಲ್ಲ 1 ಕೋಟಿಕೊತ್ತಲ ಕೋಟಿಧನಬಲ ನೀಟಾದ ಮಹಲು ನಿಜವಿಲ್ಲ ಇಲ್ಲ 2 ರಾಜ್ಯಭಂಡಾರ ಪ್ಯಾಟೆ ತೇಜಿ ಆನೆ ಒಂಟಿ ರಾಜಿಪುದೆಲ್ಲ ಸುಳ್ಳ ಮುಷ್ಟಿಮುಷ್ಟಿ 3 ಸಿರಿ ಅಂದಣ ಭಾರಿ ನಂದಿಪೋಗುವುದೆಲ್ಲ ಹಾರಿ ಹಾರಿ 4 ವರದ ಶ್ರೀರಾಮನ ಚರಣಸ್ಮರಣಿಲ್ಲದ ನರರ ಜನುಮವೆಲ್ಲ ಹಾಳು ಹಾಳು 5
--------------
ರಾಮದಾಸರು
ಹರಿಭಜನೆ ಮಾಡುವಗೆ ಅನಂತಫಲವೂ ಹರಿ ಭಜನೆ ಇಲ್ಲದವಗೆ ಅತಿಘೋರ ತಮವೂ ಪ ಭವರೋಗ ಸಂಚಿತವು ಪರಿ ಪರಿಯ ನರಕಾದಿ ಬಂಧಕವು ಬಿಡದು 1 ಆ ರಾಮನಂಘ್ರಿಗಳ ಅರ್ತಿಯಲಿ ಅರ್ಚಿಸುವರಿ ಗಾರಾಮವಾದಂಥ ಸುಖಸೌಖ್ಯವು ಹೇರಾಮ ಎನದವಗೆ ಅತಿ ದು:ಖದಾರಿದ್ರ್ಯ ತೋರುವುದು ಅನುಗಾಲ ತಗಲಿ ಬಿಡದವೆಯಿನ್ನು 2 ವಿತರಣಾದಿ ಶ್ರೀ ಹೆನ್ನೆವಿಠ್ಠಲನ ಹೃದಯದಲಿ ಸತತಧ್ಯಾನವು ಮಾಡುವ ಸಾಧು ಜನರಾ ಪತಿತ ಪಾವನನಾದ ಪರಮಾತ್ಮ ಪಾಲಿಸೆ ಗತಿಯು ತೋರುವ ಇನ್ನು ಕರುಣದಲಿ ಹರಿಯು 3
--------------
ಹೆನ್ನೆರಂಗದಾಸರು
ಹರಿಮುಖಿ ಹರಿವಾಣಿ ಹರಿವೇಣಿ ಹರಿಣಾಕ್ಷಿಹರಿಮಧ್ಯೆ ಹರಿಗಮನೆ ಪ ಹರಿಯ ನಂದನ ಸಖನೆನಿಪ ಅಹೋಬಲದಹರಿಯ ನೀ ತಂದು ತೋರೆ ಅ ಎರವಿನ ತಲೆಯವನಣ್ಣನಯ್ಯನಪರಮ ಸಖನ ಸುತನಹಿರಿಯಣ್ಣನಯ್ಯನ ಮೊಮ್ಮನ ಮಾವನತಂದೊಟ್ಟಿದನ ಹಗೆಯಗುರುವಿನ ಮುಂದೆ ಮುಂದಿಹ ಬಾಹನಕಿರಿಯ ಮಗನ ರಾಣಿಯದುರುಳತನದಿ ಸೆಳೆದುಕೊಂಡನ ಕೊಂದನತರಳೆ ನೀ ತಂದು ತೋರೆ 1 ಸೋಮನ ಜನಕನ ಸತಿಯ ಧರಿಸಿದನರೋಮ ಕೋಟಿಯೊಳಿಟ್ಟಹನಕಾಮಿನಿ ಸತಿಯ ಕಂದನ ತಮ್ಮಗೊಲಿದನಭಾಮೆ ನೀ ತಂದು ತೋರೆ 2 ಶ್ರುತಿಯನುದ್ಧರಿಸಿ ಭೂಮಿಯ ಪೊತ್ತು ಅಡವಿಯಪಥದೊಳು ತಿರುಗಿದನ ಅತಿಶಯ ನರಹರಿ ವಾಮನ ರೂಪಿನಪಿತನ ಮೋಹದ ರಾಣಿಯ ಹತ ಮಾಡಿ ಸತ್ಯಕ್ಕೆ ನಿಂತು ನಗವ ಹೊತ್ತುಪತಿವ್ರತೆಯರ ಭಂಗಿಸಿಕ್ಷಿತಿಯೊಳು ರಾಹುತನಾದ ಬಾಡದಾದಿಕೇಶವನ ತಂದು ತೋರೆ3
--------------
ಕನಕದಾಸ
ಹರಿಯ ಚರಣ ನಿರುತ ಸ್ಮರಿಸಲೊ ಮೂಢ ಮನುಜ ನಿತ್ಯ ಪಾಡಿ ಭಜಿಸು ನರಕಭಯ ವಿಮುಕ್ತನಾಗೆಲೋ ಪ ಹಿಂಡುಬಳಗ ಕೂಡಿಹಾಕಿದಿ ಆಸಕ್ತನಾಗಿ ಬಂಡಿಹೊನ್ನು ಘಳಿಸಿ ಹೊಳಿದಿ ಬಗೆಬಗೆಯಲಿಂಡು ಬಂಡÀ ಬೆಳಸಿ ತುಂಡಗ್ವಾಣದಿ ತುಂಡಿನೇಗ ಜವನಭಟರು [?] ಬೆನ್ನ ಬಿಡವು 1 ಪಗಲು ಹರಟಿಯೊಳಗೆ ಪೋದಿತು ಆಯುಷ್ಯದೊಳಗೆ ಮಿಗಿಲು ರಾತ್ರಿ ವಿಷಯಗಳೆಯಿತು ಸುಗಂಧದ್ರವ್ಯ ಸೊಗಸಿನಿಂದ ಮೈಯ್ಯ ಮುಸುಕಿತು ಜಗದಿ ಘೂಳೆಯಂತೆ ಮೆರೆದಿ ಸೊಗಸಿನಂಗ ತೊಲಗಿತಲ್ಲಿ 2 ದುಷ್ಟತನಕೆ ದಾರಿ ಕೊಡದಿರು ಲೋಕದಲಿ ನೀನು ಭ್ರಷ್ಟನಾಗದೆ ತುಷ್ಟಿಯಿಂದಿರು ಕಷ್ಟಸುಖಗಳ್ಹರಿಗೆಯರ್ಪಿಸಿ ಸೃಷ್ಟಿಪರ ನರಸಿಂಹವಿಠಲನಷ್ಟ ವಿಧದಿ ಪೂಜೆಗೈದು ಇಷ್ಟ ಮುಕ್ತಿ ಸುಖ ಪಡೆಯೋ 3
--------------
ನರಸಿಂಹವಿಠಲರು
ಹರಿಯ ನೆನಸಿದ ದಿವಸ ಶುಭಮಂಗಳಾ ಪ ಹರಿಯ ನೆನಸಿದ ದಿವಸ ಅವಮಂಗಳಾ ಅ.ಪ ಹರಿಯ ನೆನಸಿದ ನಿಮಿಷ ಆವಾಗಲೂ ಹರುಷ | ಹರಿಯ ನೆನಸದ ದಿವಸ ದುರ್ಮಾಸನಾ || ಹರಿಯ ನೆನಸಿದ ಘಳಿಗೆ ಮುಕ್ತಿಗೆ ಬೆಳವಣಿಗೆ | ಹರಿಯ ನೆನಸದ ಘಳಿಗೆ ಯಮನ ಬಳಿಗೆ 1 ಹರಿಯ ನೆನಸಿದ ಪ್ರಹರ ಕುಲಕೋಟಿ ಉದ್ಧಾರ | ಹರಿಯ ನೆನಸದ ಪ್ರಹರ ಹೀನಾಚಾರ || ಹರಿಯ ನೆನಸಿದ ಹಗಲು ಮುಕ್ತಿಗೆ ಬಲು ಮಿಗಿಲು | ಹರಿಯ ನೆನಸದ ಹಗಲು ನರಕಕ್ಕೆ ತಗಲು 2 ಹರಿಯ ನೆನಸಿದ ಮಧ್ಯಾಹ್ನ ಸುಧಾಪಾನ | ಕಾನನ || ಹರಿಯ ನೆನಸಿದ ಸಾಯಂಕಾಲವೇ ಸುಕಾಲ | ಹರಿಯ ನೆನಸದ ಸಾಯಂಕಾಲವೇ ದುಷ್ಕಾಲ3 ಹರಿಯ ನೆನಸಿದ ದಿನವು ನರನಿಗೆ ಸಮ್ಮತವು | ಹರಿಯ ನೆನಸದ ದಿನವು ದುರ್ದಿನವು || ಹರಿಯ ನೆನಸಿದ ನರÀನು ಅವನೇ ಕೃತಕೃತ್ಯ | ಹರಿಯ ನೆನಸದ ನರಜನ್ಮ ವ್ಯರ್ಥಾ 4 ಹರಿಯ ನೆನಸಿದ ರಾತ್ರಿ ತೀರ್ಥಕ್ಷೇತ್ರದ ಯಾತ್ರೆ | ಹರಿಯ ನೆನಸದ ರಾತ್ರಿ ಪಂಚಪಾತ್ರಿ || ಸಿರಿ ವಿಜಯವಿಠ್ಠಲನಂಘ್ರಿ | ಮುರಿಯದೇ ಸದಾ ನೆನೆವವನೆ ಮುಕ್ತ 5
--------------
ವಿಜಯದಾಸ
ಹರಿಯ ನೆನೆವಲ್ಲಿ ಮನವೆ ನೀ ಪ ಅರಿವು ತಿಳಿವಲ್ಲಿ ಹರಿದುಹೋಗುವ ದುರುಳ ಸಂಸಾರಕೆ ಮರುಳನಾಗಿ ನೀ ನರಕಕ್ಹೋಗುವಿಯಲ್ಲೋ ಅ.ಪ ಖೊಟ್ಟಿಗುಣಳಿವಲ್ಲಿ ಮನಸಿನ ಭ್ರಷ್ಟತ್ವ ಕಳಿವಲ್ಲಿ ಶಿಷ್ಟರಲ್ಲಿ ಮನವಿಟ್ಟು ಉಳಿಯದೆ ನೀ ಕಷ್ಟದೊಳಗೆ ಬಿದ್ದು ಕೆಟ್ಟು ಹೋಗುವಿಯಲ್ಲೋ 1 ಮರವೆ ಮಾಯವನ್ನು ಮರುಳೆ ನೀ ತರಿಯವಲ್ಲಿ ಇನ್ನು ಪರಿ ವಿಚಾರಿಸದೆ ದುರಿತದೊಳಗೆ ಬಿದ್ದು ಮರುಗುವಿಯಲ್ಲೋ 2 ಅಸೆ ನೀಗುವಲ್ಲಿ ಸಂಸಾರ ದ್ವಾಸನೆ ಕಡಿವಲ್ಲಿ ದಾಸರ ನಡೆನುಡಿ ಸೋಸಿಲಿಂ ತಿಳಿಯದೆ ನಾಶನಾಗುವಿ ಯಮಪಾಶದೊಳಗೆ ಬಿದ್ದು 3 ಸತಿಸುತರ ಮಾಯಮೋಹದಿ ಗತಿಸಿ ಪೋಗ್ವುದು ವಯ ಕೃತ್ರಿಮನೆ ಅತಿ ಮಂದಮತಿಯೊಳು ಬಿದ್ದು ಘನ ವ್ಯಥೆಯ ಬಡುವಿ ಮಹಗತಿಮೋಕ್ಷ ಪಡೆಯದೆ 4 ಮಂದಿ ಮಕ್ಕಳ್ಯಾರು ನಿನಗೀ ಬಂಧು ಬಳಗ ಯಾರು ಕುಂದುವ ಜಗಮಾಯದಂದ ತಿಳಿದು ಮಮ ತಂದೆ ಶ್ರೀರಾಮನ ಹೊಂದಿಕೊಳ್ಳವಲ್ಲಿ 5
--------------
ರಾಮದಾಸರು
ಹರಿಯ ಪಟ್ಟದರಾಣಿ ನಿಮ್ಮ ಸಿರಿಚರಣಕ್ಕೆ ನಾ ಶರಣೆಂಬೆಧರಣಿ ಒರೆಸಮ್ಮ ದುರಿತಘಮ್ಮ ಹರಿಸುದಮ್ಮ ಪ. ಧನಧಾನ್ಯವಿತ್ತು ಮತ್ರ್ಯರ ಪೊರೆವೆ ಎಂದೆಂದುಮನೆಗಿಂಬುಕೊಟ್ಟು ರಕ್ಷಿಸಿದೆದಿನದಿನದಿ ಚರಣವಿಟ್ಟರೆ ನೊಂದುಕೊಳೆ ನಿನ್ನಗುಣಕೆ ಭೂದೇವಿ ಸರಿಗಾಣೆ ಸಕಲಮುನಿ-ಜನರ ಪೊರೆವುದು ನಿಮ್ಮಾಣೆ ನಾರಾಯಣ ಬಂದುನಿನ್ನ ಸಲಹುವ ಪ್ರವೀಣೆ1 ನಿತ್ಯ ಸಮಸ್ತಪರ್ವತಭಾರವ ನೀ ತಾಳ್ವೆಉತ್ತಮ ತ್ರಿವಿಕ್ರಮನ ರಥೋತ್ಸವವೆ ಮೊದಲಾದಪವಿತ್ರಾಂಕುರಾರ್ಪಣಕೆ ನೀ ಬಂದು ವರಿಯಸುತ್ತಿನ ಪವಳಿಯೊಳಗೆ ನಿಂದು ನಮಗೆಮುಕ್ತಿ ಪದವೀವುದಕೆ ಬಾ ಕೃಪಾಸಿಂಧು 2 ಕೊಂಡ ಸಿರಿ ಹಯವದನಹರಿಯಕರ ಕರಿಭೇರುಂಡ ಸಿರಿಗೆ ಸರಿಯೆನಿಸಿನಿನ್ನನ್ನು ಪೊರೆಯುತಲಿಹನು ಕಂಡಾ3
--------------
ವಾದಿರಾಜ
ಹರಿಯಂದು ಸ್ಮರಿಸುವರ ದುರಿತಪರಿಹಾರವೆಂದು ನೆರೆಪೇಳ್ವ ಶೃತಿ ತಿಳಿದು ಮನವೆ ಕರುಣಾಸಾಗರನಾದ ಕಮಲಾದ್ರಿವಾಸ ನರಹರಿಯಪಾದ ಭಜಿಸುವ ಮನವೆ ಪ ಸುತನ ನಿಂದಗನೆಂದು ಹಿತದಂತ್ಯಕಾಲ ಸಂಘಾತನೆ ಹಿತ ವೇಳ್ವೆ ಕರಿಯಲು ಮನವೆ ಚತುರಾಸ್ಯ ಜನಕ ಮನ್ಮಥಕೋಟಿರೂಪ ಸದ್ಗತಿ ತೋರಿಸಲಹುದೇನು ಮನವೆ 1 ಆ ಮರರೀಮರ ಎಂಬ ಪಾಮರಗೆ ಪಟ್ಟಾಭಿರಾಮ ಭಕ್ತರ ಪ್ರೇಮ ಮನವೆ ಕಾಮಿತಾರ್ಥವನಿತ್ತ ಕಂಜಾಕ್ಷದಯದಿ ಸೀತಾಮನೋಹರ ರಾಮ ಮನವೆ 2 ಕರಿಯು ಮಕರಿಗೆ ಶಿಲ್ಕಿ ನೆರಳುತಲಿ ಪರಮಾತ್ಮ ಪರಬ್ರಹ್ಮನೆಂದು ಸ್ತುತಿಸಿ ಮನವೆ ಗರುಡವಾಹನ ಹೆನ್ನೆಪುರನಿಲಯ ಮರಿಯದಲೆ ಪರಿಪಾಲಿಸಿ ಪೊರೆವ ಮನವೆ 3
--------------
ಹೆನ್ನೆರಂಗದಾಸರು
ಹರಿಯನರಿಯದ ಜನುಮ ಧೆರೆಯೊಳಗಧಮಾಧಮ ಹರಿಯ ನೆನೆಯದ ನರನು ಪಾಮರನು ಧ್ರುವ ಹರಿಗೆ ನಮಿಸದ ಸಿರವು ತೋರುವ ಬೆಚ್ಚಿನ ತೆರವು ಹರಿಗೆ ವಂದಿಸದ್ಹಣಿಯು ಹುಳಕ ಮಣಿಯು ಹರಿಗೆ ಮುಗಿಯದ ಕೈಯು ಮುರುಕ ಕೀಲಿಯ ಕೈಯು ಹರಿ(ಯ) ಕೊಂಡಾಡುವ ನಾಲಿಗೆ ಒಡಕ ಸೊಲಿಗೆಯ 1 ಹರಿಯ ಸ್ತುತಿಸದ ಮುಖ ಚೀರುವ ಚಿಮ್ಮಡಿಯ ಮುಖವು ಹರಿಕಥೆ ಕೇಳದ ಕಿವಿಯು ಹಾಳುಗವಿಯು ಹರಿಯ ನೋಡದ ಕಣ್ಣು ತೋರುವ ನವಲ್ಗರಿಗಣ್ಣು ಹರಿಯ ಆರಾಧಿಸದ ಮನವು ಹೀನತನವು 2 ಹರಿಯ ಸೇವೆಗೊದಗದ ಕಾಲು ಮುರುಕ ಹೊರಸಿನ ಕಾಲು ಹರಿಗೆ ಮಾಡದ ಭಕ್ತಿ ಮೂಢ ಯುಕ್ತಿ ಹರಿಯೆ ಶ್ರೀಗುರುವೆಂದು ಗುರುವೆ ಪರದೈವವೆಂದು ಸಲೆಮೊರೆಹೊಕ್ಕಿಹ ಮೂಢ ಮಹಿಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ ಧ್ರುವ ಹರಿಃ ಓಂ ತತ್ಸದಿತಿಯೆಂಬ ಶ್ರೀ ಹರಿ ವಾಕ್ಯವರಿಯದೆ ಬರುದೆ ಶ್ರೀ ಹರಿ ಶ್ರೀ ಹರಿಯಂದೊದರುವದ್ಯಾಕೆ 1 ಏಕಾಂಶೇನ ಸ್ಥಿತೋ ಜಗತ ಎಂಬ ವಾಕ್ಯವರಿಯದೆ ನಾಲ್ಕಾರು ವೇದಶಾಸ್ತ್ರವೋದಿ ಕೇಳುವದ್ಯಾಕೆ 2 ಎಂಬ ವಾಕ್ಯವರಿಯದೆ ಹದಿನೆಂಟು ಪುರಾಣ ಕೇಳಿ ಹೇಳುವದ್ಯಾಕೆ 3 ಮಮೈವಾಂಶೋ ಜೀವಲೋಕೇ ಜೀವಭೂತ:ಸನಾತನ ಎಂಬ ವಾಕ್ಯವರಿಯದೆ ನಾನಾವ್ರತಾಚಾರ ಸಂನ್ಯಾಸ ಕೈಕೊಂಬುದ್ಯಾಕೆ 4 ಸುದರ್ಶನ ಮಹಾಜ್ವಾಲಾ ಕೋಟಿಸೂರ್ಯ ಸಮಪ್ರಭ ಎಂಬ ವಾಕ್ಯವರಿಯದೆ ಸೀಳಿ ಸುದರ್ಶನಗಳ ಪೂಜಿ ಮಾಡುವದ್ಯಾಕೆ 5 ಮಂತ್ರ ಪ್ರಣಮ್ಯವರಿಯದೆ ತಂತ್ರ ಮಂತ್ರಸರವ್ಯಾಕೆ ಅಂತರಾತ್ಮವರಿಯದೆ ತರ್ಕಭೇದಗಳ್ಯಾಕೆ 6 ವಿಶ್ವವ್ಯಾಪಕ ಗುರು ಭಾಸ್ಕರಮೂರ್ತಿ ಶ್ರೀಪಾದ ವಿಡದಿಹ ಮಹಿಪತಿಗೆ ಭವಪಾಶದಂಜಿಕಿನ್ಯಾಕೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿಯಾ ಪಾದಕ ಶರಣೆನ್ನಿ | ಸ್ಮರಣೆಗೆ ಹರಿಯನು ಕರೆತನ್ನಿ ಪ ಅವನ ನಾಮವನೆನಿಯಲು ಭಕುತಿಲಿ | ಭವಭಯ ಮೂಲದಿ ನೀಗುವದು | ಆವಾಗ ಕಂಗಳ ಸಿರಿಸುಖ ದೋರುತ | ಜೀವನ ಗತಿನೆಲೆ ಹೊಂದುವದು 1 ಸಿಕ್ಕಿತ್ತು ನರದೇಹ ದೊರಿಯಲು ಪುಣ್ಯದಿ | ಸರ್ಕನೆ ಸಂತರ ಮೊರೆಹೊಕ್ಕು | ದಕ್ಕಿಸಿಕೊಳ್ಳದೇ ಬೋಧಾಮೃತವನು | ಪುಕ್ಕಟೆ ದಿನವನು ಗಳೆವರೇ 2 ತನುವಿದು ನೋಡಲು ನೆಚ್ಚಿಕೆ ಇಲ್ಲದ | ಮನಿಗಂಧರ್ವದ ಪುರದಂತೆ | ತನುವಿಗೆ ಹತ್ತಿದ ಸಂಸಾರ ಸುಖ | ಕನಸಿನ ಭಾಗ್ಯವ ತೆರೆದಂತೆ 3 ಇದರೋಳು ನಾ ನನ್ನದು ಎಂದೆನುತಲಿ | ಮದಮತ್ಸರವಾ ಬಗೆಯಲಿ | ಕುದಿಕುದಿದೇಳು ತಜ್ಞಾವಿಹೀನದಿ | ಉದರವ ಹೊರವುತ ತಿರುಗವರೇ 4 ಈಗಾಗಯನ್ನದೇ ಹರಿನಾಮವ | ನಾ | ಲಿಗೆ ಕೊನಿಯಲಿ ತಂದಿರಿಸೀ | ಭವ | ಸಾಗರ ಸುಳಿಯಿಂದಲಿ ತರಸೀ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಯೆ ಚಿತ್ರಲೀಲೆಗಳನು ಅರಿಯಲಳವೇ ಸುಲಭದಿ ಪ ನಿರತ ಸೇವೆ ಮಾಡುತಿರುವ ಸಿರಿಯು ತಾನಚ್ಚರಿಯಲ್ಲಿರಲು ಅ.ಪ ಪೊಡವಿಯಲಿ ದುರಿತಗಳನ್ನು ನಡೆನುಡಿಗಳಿಂದರಿಯದಿರುವ ಹುಡುಗರಾಗಿ ನಲಿಯುವರನ್ನು ಸಿಡಿಲಿನಿಂದ ತನ್ನಡಿಗಳಿಗೆಳೆವ 1 ಕ್ಲೇಶದಿಂದ ಗಳಿತವಾದ ಹೇಸಿಗೆಯ ದೇಹದಲ್ಲಿ ಆಸೆ ತೊರೆದು ನರಳುವರಲಿ ಲೇಶ ಕರುಣ ತೋರದೆ ಇರುವ2 ಸತ್ಯ ಸಂಕಲ್ಪನೆಂದರಿತು ನಿತ್ಯನನ್ನು ನೆನೆದು ತಮ್ಮ ಕೃತ್ಯಗಳನು ರಚಿಸಿ ಮುದದಿ ತೃಪ್ತನಾಗುವ ಭಕ್ತರ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಹರಿಯೆ ನಿನಗನ್ಯ ದೈವರು ಸರಿಯೆ ಮೂರ್ಲೋಕ ದೊರೆಯೆ ಪ. ಭೂತಿದೇವತಿಯು ನಿನ್ನರಸಿಯು ಮೂರ್ಲೋಕದೊಳು ಖ್ಯಾತೆಯಾಗಿರುವ ಭಾರತಿ ಸೊಸೆಯು ಸುತೆ ಭಾಗೀರಥಿಯು ಭೂತೇಶನ ಪಡೆದವನಣುಗನು ಪುರು ಹೂತ ಮುಖ್ಯರು ಸಕಲೋತ್ತಮನೆಂಬರು 1 ನಿನ್ನ ಪೋಲುವ ಕರುಣಾಳುಗಳನ ಕಾಣೆನು ಮೋಹವ ಅನ್ಯಾಯ ಘಟಿತ ಕರ್ಮಗಳನ್ನ ಮಾಡುವ ಎನ್ನನ್ನ ಮನ್ನಿಸಿ ಪಾವನ ಮಾಡುವದನ್ನ ಅನ್ಯರು ತಿಳಿವರೆ ಸುರಗಣ ಮಾನ್ಯ 2 ಪಾತಕ ಬಂಧ ನಿರ್ಮೋಕಗೈವ ವಿತತಾಚಿದಾನಂದ ಮುಕುಂದ ಪಾಲಿಸು ಕೃಪೆಯಿಂದ ಕ್ಷಿತಿವರಗತ ಬಹು ಮತಿಯನು ಕರುಣಿಪ ಹಿತ ಶೇಷಾಚಲಪತಿ ಗೋವಿಂದ 3
--------------
ತುಪಾಕಿ ವೆಂಕಟರಮಣಾಚಾರ್ಯ