ಒಟ್ಟು 25998 ಕಡೆಗಳಲ್ಲಿ , 137 ದಾಸರು , 9262 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಧಕರೊಳು ಬದ್ಧನು | ಮಧುಸೂದನ ಭಕ್ತಿಗೆ ದೃಢವಿಲ್ಲದವನು ಪ ಧರೆಯೊಳು ನೋಡಲು ಕೊಳಲುಂಟು ಕೊಡಲುಂಟು | ಹರಿಪರದೈವೆಂದು ಹೇಳುವನು | ದುರಿತವು ಬಂದಡೆ ನೀಚದೈವಂಗಳಿ | ಗೆರಗಿ ಕೊಂಡಾಡುವ ಸಂದೇಹಿ ಆತ್ಮಾ 1 ನಾನಾ ಶಾಸ್ತ್ರವನೋದಿ ಕಾಂಚನದಾಶೆಗೆ | ನೃಪರ ವಾಲ್ಗೈಸುವನು | ಈ ನಿಖಿಳದ ವೃತ ಜಪ ತಪವನು ಮಾಡೀ | ನಾನೆಂಬ ಹಮ್ಮಿಲಿ ಪರರನು ಹಳಿವಾ 2 ವಾಸುದೇವ ಸರ್ವಯಂಬುವ ದೇವರ | ದಾಸರ-ಸೂಯದಿ ಬಾಳುವನು | ಲೇಸಾಗಿ ಗುರುವರ ಮಹಿಪತಿಸ್ವಾಮಿಯ | ಧ್ಯಾಸವಿಲ್ಲದೆ ವಣಡಂಬದಲ್ಲಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾಯತೋರೋ ರಂಗ ಬಾಯತೋರೋ ಮುದ್ದು ಬಾಯಲಿ ತುತ್ತು ಅನ್ನವನಿಡುವೆ ಬಾಯತೋರೋ ಪ ಕತ್ತಲಿನಂತಿರುವ ತುಟಿಗಳ ತೆರೆಯುತ ಬಾಯತೋರೋ ಜ- ಗತ್ತಿನ ಬೆಳಕನು ನೋಡುವೆ ಒಮ್ಮೆ ಬಾಯತೋರೋ ಒತ್ತೊತ್ತಿನ ತುತ್ತನಿಡಲು ಬಂದಿರುವೆ ಬಾಯತೋರೋ ತುತ್ತೇ ತುತ್ತನು ತಿನ್ನುವೆ ಜಾಣ ಬಾಯತೋರೋ 1 ಭಂಜಿಸಿ ಬಲಿಯ ದಾನವ ಬೇಡಿದ ಬಾಯತೋರೋ ಅಂಜಿದ ನರನಿಗೆ ಗೀತೆ ಬೋಧಿಸಿದ ಬಾಯತೋರೋ ಗಂಜಿಯಕುಚೇಲಗವಲಕ್ಕಿ ಬೇಡಿದ ಬಾಯತೋರೋ ಅಂಜದ ಕರ್ಣಗೆ ಗುಟ್ಟು ಹೇಳಂಜಿಸಿದ ಬಾಯತೋರೋ2 ಅಮ್ಮ ಯಶೋದೆಯ ಮೊಲೆಹಾಲನುಂಡ ಬಾಯತೋರೋ ಗುಮ್ಮ ಪೂತನಿಯ ಅಸುಮೊಲೆ ಜಗಿದ ಬಾಯತೋರೋ ಸುಮ್ಮಸುಮ್ಮನೆ ಅಂಗನೆಗೆ ಮುತ್ತನಿಟ್ಟ ಬಾಯತೋರೋ ಗಮ್ಮನೆ ಅಪ್ಪಿ ಗೋಪಿಯರ ಪೀಡಿಸಿದ ಬಾಯತೋರೋ3 ಮೋಹನಮುರಳಿಯಮೋದದಿನುಡಿಸಿದಬಾಯತೋರೋ ಮೋಹನಾಂಗನೆಯರ ಮಾಟದಿ ಮಿಡಿಸಿದ ಬಾಯತೋರೋ ಮೋಹನ ರಾಗದಿ ಗೋವುಗಳ ಕರೆದ ಬಾಯತೋರೋ ಮೋಹಿಪ ರಾಧೆಯ ಮೈಯುಲಿಯೆ ಪಾಡಿದ ಬಾಯತೋರೋ 4 ಬಳಕುವ ಗೋಪಿಯರ ಚೇಡಿಸಿದಾ ತುಂಟ ಬಾಯತೋರೋ ಬಲರಾಮನನ್ನು ಗೋಳಾಡಿಸಿದ ಆ ಬಾಯತೋರೋ ಬುಳುಬುಳು ಮಣ್ಣನೆ ಮೆಲ್ಲುವಾ ಪುಟ್ಟ ಬಾಯತೋರೋ ಭಲರೆ ಅಮ್ಮನಿಗೆ ಬ್ರಹ್ಮಾಂಡ ತೋರಿದ ಬಾಯತೋರೋ 5 ಪುರಂದರ ಬಾಯಾಗಿ ಹಾಡಿದ ಬಾಯತೋರೋ ಸೂ ಕುಮಾರ ಲಕ್ಷ್ಮೀಶರಲಿ ಬರೆದಾಡಿದ ಬಾಯತೋರೋ ಶ್ರೀಕಾಂತ ನಮ್ಮ ಜಾಜಿಪುರೀಶನೆ ಬಾಯತೋರೋ ಸಾಕಾಯಿತೋ ಭವದ ಬವಣೆನೀಗಲು ಬಾಯತೋರೋ6
--------------
ನಾರಾಯಣಶರ್ಮರು
ಬಾಯಂದು ಕರೆವೆನೊ ದೇವನಿನ್ನ ವೈರಿ ಮಧ್ವರಾಯರ ಪ್ರೀಯನೆ ಪ ರಾಮ ನಿರಾಮಯ ಮಾಮನೋಹರ ಶೌರಿ ಸೋಮಧತಾರ್ಚಿತ ಸಾಮನುತಾ ಭೂಮಿಜ ಸಾಮಜ ಪಾಲ ಬಾರೊ ಕಾಲ ಪ್ರೇಮದಿ 1 ಬಿಸಿಜಾಭಾಸ್ಪಜನ ಮಾನಸಗೆ ಅಸುರ ವೈರಿ ಕುಸಮಶರ ಪಿತ ಸುಮನಸ ವಂದಿತಾ ಅಸಮ ಶೂರ ಬಾರೊ ವಸುಧಿಧರ ಬಾರೊ ವೈರಿ ಕುಶಲದಿ 2 ಇಂದಿರೆ ಮಂದಿರ ಸುಂದರ ಶಿರಿಗೋವಿಂದ ವಿಠಲ ಮಂದರಧರ ಬಾರೋ ಚಂದಿರ ಮೊಗ ಬಾರೊ ಛಂದದ ದೈವ ಬಾರೊ ಇಂದಿನ ಯನ್ನ ಮನಸಿಗೆ 3
--------------
ಅಸ್ಕಿಹಾಳ ಗೋವಿಂದ
ಬಾಯೊಳು ಉಂಗುಷ್ಟವನಿಟ್ಟಮಾಯವ ನÉೂೀಡಮ್ಮಾ ಪ ಶ್ರೀಯರಸನೀಲಮೇಘಛ್ಛಾಯ ಕೃಷ್ಣರಾಯತನ್ನ ಅ.ಪ. ನಿರಂಜನ ತಾ ಲೀಲೆಯಿಂದ1 ಪುಟಿತ ಹಾಟಕ ಮಣಿಘಟಿತ ಕಂಕಣಾಂಗದಕಟಿಸೂತ್ರಗಳನಿಟ್ಟು ನಟನಂದದಿವಟಪತ್ರ ಶಾಯಿ ಓಷ್ಠಪುಟದಿ ಪಾದವನಿಕ್ಕಿಕಟಬಾಯೊಳಮೃತವ ಸ್ಫುಟವಾಗಿ ಸುರಿಸುತ 2 ನಿತ್ಯ ಮಂಗಳ ದೇವಿಯರಗಂಗೆಯ ಪಡೆದ ಶಿವನಂಗ ಶುದ್ಧಿಗೈಸಿದಾತನ3 ಗೋಪಿ ಗೃಹಕರ್ಮರತಳಾಗಿರಲು ಒಮ್ಮನದಿಂದಅಮರಗಣಾರಾಧೀತ ಕ್ಷಮೆಯನಳೆದ ಪಾದಸುಮ್ಮನೆ ಕರದೊಳೆತ್ತಿ ಕಮ್ಮಗಿಹದೆಂದು ತನ್ನ 4 ಕರಪಲ್ಲವಾಮೃತ ಲೋಕವಂದ್ಯರೂಪ ಫಣಿಶೇ-ಖರಾದ್ರಿವಾಸ ಭಕ್ತನಾಕ ಭೂರುಹ ನೀಕರೆಸಿ ದುರಿತವ ಸೋಕದಂತೆ ನಮ್ಮನೀಗಸಾಕುವ ಪರಮ ಕರುಣಾಕರ ಶ್ರೀಕೃಷ್ಣ 5
--------------
ವ್ಯಾಸರಾಯರು
ಬಾರಕ್ಕಾ ನಾವಿಬ್ಬರಾಡುವಾ ಯೋಗ ಸಾಧನವೆಂಬುದು ಮಾಡುವಾ ತಾಮಸ ತನುಗುಣಗಳ ಬಿಟ್ಟು ಸುಜ್ಞಾನ ಕ್ಷೀರ ಸಾಗರದೊಲಗಾಡುವಾ ಪ ಕಳೆಗೂಡಿ ಒಳನೋಟ ನೋಡುವಾ ಅಲ್ಲಿ ಒಳಸಭೆ ಪ್ರಭೆಯೊಳಗಾಡುವಾ ಥಳಥಳಿಸುವ ಮೆರೆವ ಚಿದಾತ್ಮನ ಬೆಳಕಿನೊಳ್ ಬೆಳಕಾಗಿ ಪರವಶವಾಗುವಾ 1 ಅಂಬಾ ಚಂದನ ಗಂಧಿಯೇ ಶಾರ ದಾಂಬಾ ಸುಪ್ರದವೇಣಿಯೇ ಶಂಭು ಸದ್ಗುರು ಎನ್ನೊಳು ಕಡೆನೋಡೆ ಕಂಬುಕಂಠಿನಿ ಚಲ್ವ ಕಮಲದಳಾಕ್ಷಿ 2 ಎಂಟೆರಡು ಕದಗಳ ಕಟ್ಟುವಾ ಅಲ್ಲಿ ಬಂಟರ ತಡೆಗಳ ಅಟ್ಟುವಾ ಮಂಟಪವೆಂಬುದು ಮಹಾಲಿಂಗನದೆಡೆ ಅಂತರಂಗದ ಕಾಂತೆಗಾಡುವಾ 3 ಮಂದರ ಗಿರಿಯಂತೆ ಅಲ್ಲಿ ಭೋರೈಸುವ ಘಂಟಾ ಧ್ವನಿಯಂತೆ ಸಾರ ಅಮೃತವುಂಡು ಕ್ಷೀರಸಾಗರಮಿಂದು ತೋರುವ ಗುರು ವಿಮಲಾನಂದಾ 4
--------------
ಭಟಕಳ ಅಪ್ಪಯ್ಯ
ಬಾರದ್ಯಾಕೊ ಕೃಪಾಧರ ದೇವ ನಿನಗೆನ್ನೊಳ್ಕರುಣಾ ಪ. ಸರಸಿಯೊಳಂದು ಬೆದರಿದ ಕರಿರಾಜನನು ಪೊರೆದ ಬಿರುದ ನೀ ಮರೆವುದು ನೀತಿಯೇನೊ ವರದ 1 ತಾಳಲಾರದಂಥ ವೇದನೆ ಇನ್ನು ಪೇಳಲೇನು ಕಂಸಸೂದನ ಇಳೆಯ ಮ್ಯಾಲೇಳಲಾರದಂತಾಯ್ತೆನ್ನ ಹದನ2 ಸಂಕಟಾಬ್ಧಿ ಪರಿಶೋಷಣಾ ಶ್ರೀ ವೆಂಕಟೇಶ ಚಕ್ರಭೂಷಣ ಕಿಂಕರರಾತಂಕವನ್ನು ದೂರಿಸುತಿಹದಯ್ಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರನಲ್ಲೆ ಸಖಿ ಪರಿಪೂರ್ಣ ಕಾಮನು ಪ ತೋರನಲ್ಲೆ ಅವನ ಚರಣ ಕಮಲವನ್ನು ಅ.ಪ ಪತಿಸುತರ ಬಿಟ್ಟು ಕೃಷ್ಣನೆ ಗತಿಯೆಂದು ನಂಬಿದ ಸತಿಯರ ದಣಿಸುವುದು ಲಕ್ಷ್ಮೀಪತಿಗೆ ಸರಿಯೆ ನಲ್ಲೆ 1 ಸರಸಿಜಾಕ್ಷಿಯರ ಕೂಡ ಅವನೂ ಸರಸವಾಡುವ ತುರುಗಳಲ್ಲಿ ಗುಡುಗ್ಯಾಡಿ ಕರುಗಳನು ಬಿಚ್ಚುವ2 ಒರಳನೆಳೆದು ಮರವನ್ನು ಮುರಿದು ನಿಲ್ಲುವ ಅರಿಯದಬಲೆಯರ ಸೀರೆ ಮರಕೆ ಕಟ್ಟಿ ಪೋಗುವ 3 ವÀ್ರಜದ ನಾರೇರ ಬಿಟ್ಟು ಕುಬುಜೆ ಗಂಧವ ಬೇಡುವ ಭುಜಬಲವನ್ನು ತೋರಿ ನಿಜ ವೈರಿಯರ ಕೊಲ್ಲುವ 4 ಏಸು ಕಾಲದಿಂದ ಅವನ ಬಯಸಿ ನಾ ಬೇಡುವೆ ವಾಸುದೇವ ವಿಜಯ ರಾಮಚಂದ್ರವಿಠಲನ 5
--------------
ವಿಜಯ ರಾಮಚಂದ್ರವಿಠಲ
ಬಾರನೇಕೆ ಬಾಲಕೃಷ್ಣನೂ | ಎನ್ನ ಮನಕೆಪೋರ ಶೀಲ ಗೋಪ ಕೃಷ್ಣನೂ ಪ ಸಾರಿ ಸಾರಿ ಕೂಗಿದಾರೂ | ದೂರವಿರುವನಂತೆ ನಟಸಿತೋರಗೊಡನು ತನ್ನ ರೂಪ | ಅರಿಗ್ಹೋಗಿ ಪೇಳಲಮ್ಮ ಅ.ಪ. ಗೋಪಿ ಕೊಟ್ಟ | ಕಲ್ಲಿ ಬುತ್ತಿಯೊಡನೆ ಪೋಗಿಹಳ್ಳ ಕೊಳ್ಳದಲ್ಲಿ ಕುಳಿತು | ಮೆಲ್ಲುತಿರುವನೇನೊ ಅಮ್ಮ 1 ಗೋಪಿ ಜನರ | ಕಂಡು ಕಾಣಧಾಂಗೆ ಇಹನೆ 2 ತಂದೆ ಮುದ್ದು ಮೋಹನ ಗುರುಗಳೂ | ನಿನ್ನ ರೂಪತಂದು ತೋರಿ ಮನದಿ ನಿಲ್ಲಲೂ ||ಅಂದು ಕೇಳಿಕೊಂಡು ಇಹರು | ಅಂದ ವಚನ ಮರೆತೆಯೇನೋತಂದೆ ಗುರು ಗೋವಿಂದ ವಿಠಲ | ಇಂದೆ ನೀನೆ ಮನಕೆ ಪೊಳೆಯೊ 3
--------------
ಗುರುಗೋವಿಂದವಿಠಲರು
ಬಾರನೇನೆ ಭಾಗ್ಯನಿಧಿ | ಬಡವರ ಮರೆಯದೇ | ಮಾನಿನಿ ಪ ಕಾಲಿಲ್ಲದವನಂತೆ ಕುಳಿತನೇ ಮಧುರಿಲಿ | ನೀಲಾಂಗನಂಗವೆಂತು | ನಿಬ್ಬರವೇ ಮಾನಿನೀ 1 ಮುಂದಕೆ ತಿರುಗಲೊಲ್ಲ ಹಿತಗಜಪಂಚಾನನ | ಮಾನಿನಿ 2 ಮಾನಿನಿ 3 ತಂದೆ ಮಹೀಪತಿ ಪ್ರಭು | ತುರಗವೇರಿ ಬಂದನೆಂದು | ಇಂದು ಹೇಳಿದರಿಷ್ಟಾರ್ಥ ಈವನೆಲ್ಲ ಮಾನಿನಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರನ್ಯಾತಕೆ ಕೃಷ್ಣ ಬಾರನ್ಯಾತಕೆ ಪ ಹರಿಯ ಮನಕೆ ಹರುಷಪಡಿಸಿ ಹರಿಯ ಕರೆಸಿ ಮನದೊಳಿರಿಸಿ ಹೊರಗೆ ಬಿಡರೆಂಬೊ ಭಯಕೆ ಮರೆಯೊಳಿದ್ದುಕಾಲ ಕಳೆಯುವ 1 ಮದಗಜಗಮನೆಯರೆಲ್ಲ ಮದನಕದನ ದೊಳಗೆ ಸೋಲಿಸಿ ಮುದದಿ ಎನ್ನಬಿಡದೆ ಮನೆಯೊಳು ಸದರದಿಂದ ನೋಡುವರೆಂದು 2 ಆಣಿ ಮುತ್ತಿನ ಮಾತನಾಡಿ ಜಾಣ ಪ್ರಾಣನಾಥ ವಿಠಲನ ವಿನಯದಿಂದ ಕರೆದು ತಂದರೆ ವನಜಮುಖಿಯೆ ಹರುಷ ಪಡುವೆ 3
--------------
ಬಾಗೇಪಲ್ಲಿ ಶೇಷದಾಸರು
ಬಾರನ್ಯಾತಕೆ ನೀರೆ ನೀ ಕರೆತಾರೆ ಸುಗುಣ ಗಂಭೀರನ ಪ. ತೇಜಿಯನೇರಿ ಮೆರೆವನ ಅ.ಪ. ಕೋಮಲಾಂಗನ ಕಂತುದಹನನ ಸೋಮಾರ್ಕ ಶಿಖಿನೇತ್ರನ ವಾಮದೇವನ ವನಜಭವಸಂಭವ ಮುನಿಸ್ತೋಮ ವಿನುತ ಎನ್ನ ಪ್ರೇಮನ 1 ನೀಲಕಂಠನ ನಿಗಮಸಾರನ ಬಾಲಶಶಿಧರ ಭರ್ಗನ ಶೀಲಸದ್ಗುಣ ಫಾಲನೇತ್ರನ ಕಾಲಾಂತಕ ಎನ್ನ ಕಾಯ್ವನ 2 ಮಂಗಳಾತ್ಮನ ಮಲ್ಲರಿಪುದಲ್ಲಣ ದೇವೋತ್ತುಂಗ ಹೆಳವನಕಟ್ಟೆ ರಂಗಗತಿಸಖನಾದ ನೀಲಗಿರಿ ಲಿಂಗ ಮೂರುತಿಯ3
--------------
ಹೆಳವನಕಟ್ಟೆ ಗಿರಿಯಮ್ಮ
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರಮ್ಮ ಲೋಕಮಾತೆ ಆನಂದಪ್ರದಾತೆ ಪ ಸಿಂಧುರಾಜತನಯೆ ಅರವಿಂದ ಮಂದಿರೆ ಸಿಂಧುಶಯನನ ಪ್ರಿಯೆ ಮುದದಿಂದೆಮ್ಮನು ಕಾಯೆ 1 ಕಮಲಸಂಭವನ ಮಾತೆ ಕಮಲಾಕ್ಷಗೆ ಪ್ರೀತೆ ಕಮಲಶರನ ಪೆತ್ತ ಕಮಲಾರಿ ಕೋಟಿಕಾಂತೆ 2 ರಂಗೇಶವಿಠಲನ ಉರದಲಿ ಮೆರೆಯುವ ಮಂಗಳದೇವತೆ ಸ್ಮಿತ ತಿಂಗಳ ಬೀರುತ್ತ 3
--------------
ರಂಗೇಶವಿಠಲದಾಸರು
ಬಾರಮ್ಮಾ ಶ್ರೀಗುರು ಜನನೀ | ಘನಕರುಣೀ | ಬಾರ ನಿಜ ಸುಖ ದಾನೀ ಪ ಭವದಾಟವ ಕೇರಿಯೊಳು ಹೋಗಿ | ಮನಮರವಾಗಿ | ಪರಿ ಬಲು ಪಾಡಿದೆ | ಬಂದೇ ತವಕದಿ ಓಡಿ 1 ಬೋಧದ ಸ್ತನಪಾನ ಮಾಡಿಸೇ | ಸುಧೆ ಉಣಿಸೇ | ತಾಪ | ಬಾಧೆಯ ಬಿಡಿಸೇ | ನಿನ್ನುದರೊಳಗಿರಿಸೇ 2 ಭಕುತಿ ತೊಟ್ಟಿಲವನ್ನು ತೂಗಿಸೀ | ಯನ್ನ ಕೂಡಿಸೀ | ಪಾಡುತಖಿಲೇಶ ನಾಮಾ | ಬಾಲಕಗ ಮಹಿಪಮ್ಮ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು