ಒಟ್ಟು 13403 ಕಡೆಗಳಲ್ಲಿ , 136 ದಾಸರು , 5923 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೇವೇ ಶ್ರೀರಮಣಂ-ಸದಾ-ಸೇವಕಾರ್ತಿಹರಣಂ ಪ ಪಾವಕ ಶತರುಚಿ ರುಚಿರಾಭರಣಂ ಪಾವನವ್ಯಾಘ್ರಾಚಲವಿಹರಣಂ ಅ.ಪ. ಪುಂಡರೀಕಾಯತ ನೇತ್ರಂ ಮಂಡಿತ ಖಗಪತಿ ಪತ್ರಂ ಶತ ಸನ್ನಿಭಗಾತ್ರಂ1 ಕುಲಿಶಧರಾತ್ಮಜಮಿತ್ರಂ-ಸುಲಲಿತ ಕರಧೃತ ಗೋತ್ರಂ ನಿಜ ಚಾರಿತ್ರಂ2 ಭಾವಿತ ಜನ ಮಂದಾರಂ-ಭಾವಜ-ಜನಕ ಮುದಾರಂ ಸಮೂಹಾಕಲಿತ ವಿಹಾರಂ3 ಶಂಕರ ಹೃದಯಧ್ಯೇಯಂ ಕಿಂಕರ ಜನ ಸಮುದಾಯಂ ನಿಜನಾಮಧೇಯಂ 4 ಪರಮ ಪುರುಷಮನವದ್ಯಂ ಸರಸಗುಣಾಕರ ಮಾದ್ಯಂ ವಿಠಲ ಮಖಿಳಾಗಮ ಬೋಧ್ಯಂ 5
--------------
ಸರಗೂರು ವೆಂಕಟವರದಾರ್ಯರು
ಸೈಯವ್ವ ಇದು ಸೈಯೆ, ಗೋಪಿ, ಸೈಯವ್ವ ಇದು ಸೈಯೆ ಪ ಸೈಯೆ ಗೋಪಿ, ನಿನ್ನ ಮಗರಾಮನಿಗೆ ಒಳ್ಳೆ ಬುದ್ಧಿ ಕಲಿಸಿದ್ದೀಯೆ ಅ ಸಂಜೆಯ ವೇಳೆಗೆ ಬಂದು - ಸಟೆಯಲ್ಲ - ಮನೆಯ ಒಳಗಡೆ ನಿಂದುಕುಂಜರಗಮನೆ ಬಾರೆಂದು ಎನ್ನ ಮುಂಗುರುಳ ತಿದ್ದಿದಗಂಜಿ ಶಲ್ಯವ ಎನಗೆ ಮುಸುಕಿಟ್ಟು ಮುದ್ದಾಡಿ ಕಡೆಗೆಕಂಜಲೋಚನೆ ಕುಚದ ಗಂಟು ಬಿಚ್ಚೆಂದ ನೋಡು 1 ಬಿಟ್ಟ ಮಂಡೆಯಲಿ ಗಂಡ ಮೈಮರೆತು ಮಲಗಿಹುದ ಕಂಡುಜುಟ್ಟನ್ನು ಬಿಚ್ಚಿ ಮಂಚದ ನುಲಿಗೆ ಬಿಗಿದು ಕಟ್ಟಿದಕೊಟ್ಟಿಗೆ ಸುಡುತಿದೆ ಏಳೆಂದು ಬೊಬ್ಬೆಯಿಟ್ಟುದ ಕೇಳಿಥಟ್ಟನೇಳಲು ಗಂಡ, ಜುಟ್ಟು ಕಿತ್ತು ಹೋಯಿತಮ್ಮ2 ಅಡವಿ ಜಟ್ಟಿಂಗನ ಮಾಡಲಿಕೆ ಒಳ್ಳೆ ಸಡಗರ ಸಂಭ್ರಮದಿಂದಹೆಡಗೆ ತುಂಬ ಹೋಳಿಗೆ ಮಾಡಿ ಕೊಡ ನೀರು ತರಲು ಹೋದೆನೆಕಡೆಗೊಂದು ಹೋಳಿಗೆ ಬಿಡದೆ ಕೊಡದುಪ್ಪ ಹಾಲ್ಮೊಸರು ಪಾಯಸಕಡು ಫಟಿಂಗ ತುಡುಗು ತಿಂದು ಮೀಸಲಳಿದು ಎಡೆಗೆಡಿಸಿ ಹೋದನೆ 3 ಊರೊಳಿಂತಾಯ್ತೆಂದು ಸಾರಿದೆವೆ ನಾರೇರುಅಡವಿಯಲಿ ಕೂಡಿದೆವೆ ಹಲವಾರು ಹೆಂಗಸರುನೂರಾರು ಗೆಳತೇರು ಉಳಿದ ಹಾಲನು ಮಾರಿದಾರಿ ಹಿಡಿದು ಬರುವಾಗೊಂದು ಕೊಳವ ಕಂಡೆವೆ ನೊಡು 4 ಓರಗೆ ಹೆಂಗಳು ನಾವು ನೀರಾಟವಾಡಲಿಕೆಸೀರೆ ಕುಬಸವ ದಡದೊಳಿಟ್ಟು ಕೊಳಕೆ ಧುಮುಕಿದೆವೆಚೋರ ನಿನ್ನ ಮಗ ಸೀರೆಕುಬಸವನೆಲ್ಲ ತಕ್ಕೊಂಡು ಹೋಗಿತೋರದುಂಚ ಕಡಹದ ಮರನೇರಿ ನೋಡುತ ಕುಂತನೆ 5 ನೆಟ್ಟನೆ ನೀರಾಟವಾಡಿ ನಾಲ್ಕೂ ದಿಕ್ಕಿನಲಿ ನಾವು ಅಡರಿದೆವೆಇಟ್ಟಲ್ಲಿ ಸೀರೆಕುಬಸಗಳಿಲ್ಲ ಕೆಟ್ಟೆವಯ್ಯಯ್ಯೋಕಿಟ್ಟನ ಕೈಚಳಕವೆಂದು ನಾವಷ್ಟದಿಕ್ಕುಗಳ ನೋಡಿದೆವೆತುಟ್ಟತುದಿ ಕೊಂಬೆಯಲಿ ಕುಂತಿರುವ ಪುಟ್ಟನ್ನ ಕಂಡೆವೆ 6 ಮುಂದೆ ಹಸ್ತದಿ ಮುಚ್ಚಿಗೊಂಡು ಕೃಷ್ಣನಿಗೆ ಗೋಗರೆದು ಕೇಳಲುವಂದನೆ ಮಾಡಿದರೆ ನಿಮಗೆ ಸೀರೆ ಕುಬಸವ ಕೊಡುವೆನೆಂದಒಂದು ಕರದಿ ಮುಗಿವೆವೆಂದರೆ ಎರಡು ಕರದಿ ಮುಗಿಯಿರೆಂದಬಂಧನಕ್ಕೊಳಗಾದೆವೆಂದು ವಿಧಿಯಿಲ್ಲದೆ ಮುಗಿದೆವೆ 7 ಪುಷ್ಪಗಂಧಿಯರೆ ಒಪ್ಪಿತವಾಗಲಿಲ್ಲ ನನ್ನ ಮನಕೆಚಪ್ಪಾಳೆ ಇಕ್ಕುತ ಮರದ ಸುತ್ತ ತಿರುಗಿರೆಂದತಪ್ಪದು ಎಷ್ಟೊತ್ತಾದರು ಬಿಡನೆಂದು ಜಯಜಯವೆನುತಚಪ್ಪಾಳೆ ಇಕ್ಕುತ ಮರದ ಸುತ್ತಲೂ ತಿರುಗಿದೆವೆ8 ಪಗಡೆಕಾಯಿ ಕುಚದ ದಗಡಿಯರೆ ಪುಗಡಿ ಹಾಕಿರಿ ಎನ್ನೆದುರುತೆಗೆದು ಕೊಡುವೆ ನಿಮ್ಮ ವಸ್ತ್ರಗಳ ಬಗೆಬಗೆಯಿಂದಜಗದೊಳು ನಗೆಗೇಡಾದೆವು ಇನ್ನು ನುಡಿದು ಫಲವಿಲ್ಲೆಂದುಪುಗಡಿ ಹಾಕಿದೆವೆ ನಾವು ಛೀ ಛೀ ಎನ್ನುತಲಿ 9 ಕಡೆಯಾಟ ಕಮಲನೇತ್ರೆಯರೆ ಎಡೆಯಾಗಿ ಹೋಗಿ ನಿಲ್ಲಿರಿಓಡಿಬಂದರೊಂಟಿಯಾಗಿ ಹಿಡಿದು ನೋಡಿ ಕೊಡುವೆ ಎಂದಕೋಡಗ ಕೊರವಂಗೆ ಸಿಕ್ಕಿ ಆಡಿದಂತೆ ನಾವಾಡಿದೆವೆಓಡಿ ಬಂದೊಬ್ಬೊಬ್ಬರಿಗೂ ಹಿಡಿದು ಸವರಿ ವಸ್ತ್ರವನಿತ್ತನೆ 10 ತಂಡತಂಡದ ನಮಗೆ ಬಣ್ಣಬಣ್ಣದ ಬಳೆಯನಿಟ್ಟುಮಂಡೆ ಬಾಚಿ ಕುರುಳ ತಿದ್ದಿ ಕುಂಕುಮವಿಟ್ಟನೆಪುಂಡ ನಿನ್ನಣುಗ ನೆಲೆಯಾದಿಕೇಶವರಾಯಬಂಡು ಮಾಡಿ ಬಳಲಿಸಿ ಕೊನೆಗೆ ರಮಿಸಿ ಕಳಿಸಿಕೊಟ್ಟನೆ 11
--------------
ಕನಕದಾಸ
ಸೊಕ್ಕಿದ ಕಲಿ ಇಕ್ಕೊ ಶಿಕ್ಷಿಸು ಬೇಗ ಎಲೆಲೆರಕ್ಕಸಾಂತಕ ನಿನ್ನ ಪಕ್ಕದೊಳಿಟ್ಟು ರಕ್ಷಿಸೆನ್ನ ಪ. ಅನುದಿನ ಎನ್ನಬೆಚ್ಚಿ ಬೇಸರಿಸಿ ಕೆಡಿಸುವುದು ನಿನ್ನಹೆಚ್ಚಿಗೆಗದು ಸಾಕೆ ಸಚ್ಚರಿತ ಗುಣಭರಿತ 1 ಆನೆಗಳು ಪಿಡಿಯಲತಿಭರದಿಂದ ಬಂದುಚಕ್ರಧರ ಮಕರಿಯನೆ ತರಿದುಶರಣನ ನೀ ಪೊರೆದೆ ಗಡ ಮರೆಯೊಕ್ಕವರ ಕಾವಕರುಣಿ ಆ ತರುಣಿಗಕ್ಷಯಾಂಬರವ ಕುರುಸಭೆಯೊಳಿತ್ತೆ 2 ಉತ್ತರೆಯ ಗರ್ಭದಲಿ ಸುತ್ತಸುಳಿವುತ್ತ ಹರ-ನಸ್ತ್ರವನು ನಿನ್ನಸ್ತ್ರದಿಂದ-ಲತ್ತತ್ತಲೇ ವತ್ತಿ ಚಿತ್ತಪರಾಕಿಲ್ಲದೆ ಪರೀ-ಕ್ಷಿತನ ಕಾಯಿದೆ ಭಕ್ತವತ್ಸಲ ಪಾಥರ್Àಮಿತ್ರ ಹಯವದನ 3
--------------
ವಾದಿರಾಜ
ಸೊಂಡಿಲಾನಗರದ ಭೂಪನ ಕೊಂಡಾಡಲ್ವಶವಲ್ಲ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಥೋರ ಮುತ್ತಿನ ಝಲ್ಲೆ ಬಿಗಿದ ತೇರುವಾಜಿ ಶೃಂಗರಿಸಿದ ದಾರಿ ಮ್ಯಾಲ ನಿಂತಾವ ನಮ್ಮ ವೀರ ರಂಗನ ಕರೆಯ ಬರಲು 1 ಅಚ್ಚ ಮುತ್ತಿನ ಝಲ್ಲೆ ಬಿಗಿದಹೆಚ್ಚಿನ ರಥಗಳುವಾಜಿಜತ್ತಾಗಿ ನಿಂತಾವಮ್ಮಅಚ್ಯುತನ ಕರೆಯ ಬರಲು2 ಬರಿಯ ಮಾಣಿಕ ರತ್ನ ಬಿಗಿದ ದೊರೆಗಳೇರೊ ರಥ ವಾಜಿಸರಿಯಾಗಿ ನಿಂತಾವಮ್ಮ ನಮ್ಮಹರಿಯ ಕರೆಯ ಬರಲು 3 ನಾನಾ ಮುತ್ತು ರತ್ನ ಬಿಗಿದ ಆನೆ ಅಂಬಾರಿಗಳು ಕೋಟಿಮಾನವಂತರು ಏರಬೇಕುಶ್ರೀನಿವಾಸನ ಕರೆಯ ಬರಲು 4 ಮುತ್ತು ಮಾಣಿಕ ರತ್ನ ಬಿಗಿದಹೆಚ್ಚಿನ ರಥಗಳು ವಾಜಿಮಿತ್ರೆಯರಿಂದ ಬರತಾರಮ್ಮನಮ್ಮ ಅಚ್ಯುತನ ಕರೆಯ ಬರಲು 5 ಏಳು ಕೋಟಿ ಕಾಲಾಳುಗಳುಭಾಳ ಮುತ್ತಿನ ರತ್ನವಿಟ್ಟುತಾಳ ಮೇಳದಿ ನಿಂತಾರಮ್ಮವ್ಯಾಳಾ ಶಯನನ ಕರೆಯ ಬರಲು6 ಸಾವಿರ ಬಂಡಿಯ ಮ್ಯಾಲೆ ಹೇರಿ ಬುಕ್ಕಿಟ್ಟು ಗುಲಾಲು ಸೂರ್ಯಾಡಿ ರಂಗನ ಕರೆಯಲು ವೀರರೈವರು ಬರುತಾರಮ್ಮ 7 ಕೊಲ್ಹಾರಿ ಬಂಡಿಯ ಮ್ಯಾಲೆ ಮಲ್ಲಿಗೆ ಸಂಪಿಗೆ ಹೇರಿಚೆಲ್ಲಾಡಿ ರಂಗನ ಕರೆಯ ಬಲ್ಲಿದ ಐವರು ಬರುತಾರಮ್ಮ 8 ಮದ್ದು ಬಾಣ ಬಿರುಸು ಕೋಟಿ ಶೀಘ್ರವಾಗಿ ನಿಂತಾವಮ್ಮಮುದ್ದು ರಂಗನ ಕರೆಯ ಬರಲು ಮಧ್ವ ಮತದ ಬಿರುದು ಹಿಡಿಸಿ 9 ಬಿಡವೋ ಬಾಣ ಬಿರುಸು ಕೋಟಿ ಕಡು ಭಾಗÀವತರು ಕೋಟಿಷಟಶಾಸ್ತ್ರ ಬಲ್ಲವರು ಕೋಟಿಒಡೆಯ ರಂಗನ ಕರೆಯ ಬರಲು 10 ತಂದೆ ರಾಮೇಶನ ಗುಣವ ಬಂಧುಗಳು ಹೊಗಳೋರು ಕೋಟಿಅಂದು ಆರಣ ಬ್ರಾಹ್ಮಣ ಕ್ರಮ ಜಟಿ ಬಂದು ಕರೆವೊ ದ್ವಿಜರು ಕೋಟಿ 11
--------------
ಗಲಗಲಿಅವ್ವನವರು
ಸೋಜಿಗ ಸೋಜಿಗ ಗೋವಿಂದನ ಸೋಜಿಗ ಗೋಪಾಲನ ಸೋಜಿಗ ಪ ಇಂದಿರೆ ರಮಣ ಈ ಪರಬ್ರಹ್ಮ | ಮಂದರೋದ್ಧಾರ ಈ ದೇವಾ | ತಂದೆ ತಾಯಿ ತ್ರೈಲೋಕ್ಯಕ್ಕೆ ತಾನಾಗಿ ನಂದ | ಆನಂದ ಯಶೋದೆಗೆ ಮಗನಾದ ನೋಡಮ್ಮ || ಸೋಜಿಗ 1 ಸದಮಲ ಸ್ವರೂಪ ಸಚ್ಚಿದಾನಂದನು |ಮುನಿಜನ ವಂದಿಪನು ಈ ದೇವ ಮುನಿಜನ ವಂದಿಪನು |ಪದುಮನಾಭ ಪೀತಾಂಬರಧರ ದೇವ ವಿದುರನ | ಆವಿದುರನ ಮನೆಯಲ್ಲಿ ಉಂಡದ್ದು ನೋಡಮ್ಮ ಸೋಜಿಗ2 ನಾನಾ ದೇವರ ದೇವ ನಾರಾಯಣ ಹರಿ ನಿಜಸುರ ವಂದಿ-ಪನು ಈ ದೇವ | ಭಾನು ಕೋಟಿ ತೇಜ ಜ್ಞಾನ-ಬೋಧನ ಸ್ವಾಮಿ | ತಾನಾಗಿ ಭಕುತಿಗೆ ಒಲಿದದ್ದುನೋಡಮ್ಮ ಸೋಜಿಗ 3
--------------
ಜ್ಞಾನಬೋದಕರು
ಸೋದಾಕ್ಷೇತ್ರವೆ ದಿವ್ಯ ಕ್ಷೇತ್ರ ಬಂದ ಜನರಿಗಿಷ್ಟವನೀವ ಕ್ಷೇತ್ರ ವೀರಶೈವರ ಗೆದ್ದ ಕ್ಷೇತ್ರ ಪ ಒಂದು ಭಾಗದಿ ರೂಪ್ಯಪೀಠ ಮ- ತ್ತೊಂದು ಭಾಗದಿ ಸೋದಾಕ್ಷೇತ್ರ ಕುಂದು ಎಳ್ಳಷ್ಟಿಲ್ಲದೆ ತೋರ್ಪು ದೆಂದು ಹರಿಭಕ್ತರಾದರಿಸುವರು 1 ವೈಕುಂಠನಂತಾಸನಗಳು ಚೆಂದವೇನೆಂದು ಪೇಳಲಿ ಮನವೆ 2 ರಾಜೇಶ ಹಯಮುಖ ಚರಣ ಕಂಜ ಮಧುಪನಂತಿರುವ ಶ್ರೀಭಾವಿ- ಕಂಜಜಾತನ ಪದಕರುಹ ವಾದಿರಾಜರಾಯರ ದಿವ್ಯ ಕ್ಷೇತ್ರ 3
--------------
ವಿಶ್ವೇಂದ್ರತೀರ್ಥ
ಸೋದಾಪುರದಲ್ಲಿ ವಾಸಿಪ ಯತಿವರನ್ಯಾರೇ ಪೇಳಮ್ಮಯ್ಯಾ ಪ ಹರಸುರಪತಿ ಸ್ಮರವರನುತ ನಮ ಸಮೀರ ಸದ್ವಾದಿರಾಜಕಾಣಮಾ ಅ.ಪ. ವಿನುತ ಬೋಧ ಮುನೀಶ್ವರ ಮತಾಂಭೋನಿಧಿಚಂದ್ರ ಕಾಣಮ್ಮ 1 ಸತ್ವಾದಿತ್ರಯ ಗುಣಜ ಕರ್ಮರಹಿತರಾರೆ ಪೇಳಮ್ಮಯ್ಯಾ ಶುದ್ಧ ಸತಿಸ್ವರೂಪದಿಂದ್ರಮಿಸುವರಾರೆ ಪೇಳಮ್ಮಯ್ಯಸಾರ ಶಾಸ್ತ್ರ ಶೃತಿಸಾರವಿನುತ ಖಳಾರಿಯೆಂದೆನಿಸುವರಾರೆ ಪೇಳಮ್ಮಯ್ಯಾರಾಶಿ ಪೂರ್ಣ ಸಪ್ತನಾಮಹರ ನೇತ್ರ ದ್ವಯಾಂಶ ಸಹಿತರೇ ಪೇಳಮ್ಮಯ್ಯಾ 2 ಪಂಚಭೇದ ಶೂನ್ಯ ಪರ ವಂಚಕರಿಗೆಯಂದೆನಿಸುವರಾರೇ ಪೇಳಮ್ಮಯ್ಯ ಪಂಚ ಪಂಚ ತತ್ವ ಪಂಚರೂಪ ತಂದೆವರದಗೋಪಾಲವಿಠಲನಪೂಜಿಪರೇ 3
--------------
ತಂದೆವರದಗೋಪಾಲವಿಠಲರು
ಸೋಬಾನವೆನ್ನಿರೆ ಶ್ರೀದೇವಿ ಅರಸಗೆ ನಾಭಿಯಲೆ ಅಜನ ಪಡೆದವಗೆ ಪ. ಬರಿಯ ಮಾಣಿಕದ ಹಸೆಗೆ ಕಿರಿಯ ಚನ್ನಿಗ ಬಾರೊಸರಿಯವರು ನೋಡಿ ನಗುವಂತೆ ಸರಿಯವರು ನೋಡಿ ನಗುವಂತೆ ಎನುತಲೆ ದೊರೆಗಳು ನುಡಿದು ಕರೆದರು1 ಮುತ್ತು ಮಾಣಿಕದ ಹಸೆಗೆ ಭಕ್ತವತ್ಸಲ ಬಾರೋಹತ್ತು ದಿಕ್ಕುಗಳ ಬೆಳಗುತ ಹತ್ತು ದಿಕ್ಕುಗಳ ಬೆಳಗುತ ಎನುತಲಿಮಿತ್ರಿ ಸುಭದ್ರಾ ಕರೆದಳು2 ಚದುರ ರಾಮೇಶನ ಮುದಿಮಾರಿವನಿತೆಯರು ಬದಿಯಲಿ ಬನ್ನಿ ಹಸೆಮ್ಯಾಲೆ ಬದಿಯಲಿ ಬನ್ನಿ ಹಸೆಮ್ಯಾಲೆ ಎನುತಲಿ ಸುದತೆÉ ಸುಭದ್ರಾ ಕರೆದಳು3
--------------
ಗಲಗಲಿಅವ್ವನವರು
ಸೋಮ ಸುರ್ಯೋಪರಾಗದಲಿ ಗೋಸಹಸ್ರಗಳ ಭೂಮಿದೇವರಿಗೆ ಸುರನದಿಯ ತಟದಿ ಶ್ರೀ ಮುಕುಂದಾರ್ಪಣವೆನುತ ಕೊಟ್ಟ ಫಲವಕ್ಕು ಈ ಮಧ್ವನಾಮ ಬರೆದೋದಿದವರಿಗೆ 1 ಪುತ್ರರಿಲ್ಲದವರು ಸತ್ಪುತ್ರರೈದುವರು ಸ ರ್ವತ್ರದಲಿ ದಿಗ್ವ್ವಿಜಯವಹುದು ಸಕಳ ಶತ್ರುಗಳು ಕೆಡುವರಪಮೃತ್ಯು ಬರಲಂಜುವುದು ಸೂತ್ರನಾಮಕನ ಸಂಸ್ತುತಿ ಮಾತ್ರದೀ 2 ಶ್ರೀ ಪಾದರಾಯರು ಪೇಳಿದ ಮಧ್ವ ನಾಮ ಸಂ ತಾಪ ಕಳೆದಖಿಳ ಸೌಖ್ಯನೀವುದೂ ಶ್ರೀಪತಿ ಜಗನ್ನಾಥವಿಠಲನ ತೋರಿ ಭವ ಕೂಪಾರದಿಂದ ಕಡೆಹಾಯಿಸುವುದು 3
--------------
ಜಗನ್ನಾಥದಾಸರು
ಸೋಮಶೇಖರ ತಾನೆ ಬಲ್ಲ ಶ್ರೀ-ರಾಮನಾಮಾಮೃತ ಸವಿಯನೆಲ್ಲ ಪ ಮದನಪಿತಾಯೆಂದು ಕುಣಿಕುಣಿದಾಡಲುಕೆದರಿದ ಕೆಂಜೆಡೆಗಳ ಪುಂಜದಿಒದಗಿದ ಗಂಗೆ ತುಂತುರು ಹನಿಗಳ ಕಂಡುಪದಮಜಾಂಡಹಿತ ರಾಮರಾಮಾ ಎಂಬ 1 ಆನಂದ ಜಲದ ಸೋನೆಗೆ ಲಲಾಟ-ದಾನೇತ್ರ ಬಡಬಾನಲನಂತಿರೆ ಏನೆನ್ನಲಿಬಹುದು ಸುಖ ಸಾಗರದೊಳುತಾನೆದ್ದು ಮುಳುಗುತ ರಾಮ ರಾಮಾಯೆಂಬ2 ಶಿರದ ಗಂಗೆಯ ವರ ಅಗ್ಗಣಿಯಾಗಿರೆಸರಸಿಜ ಬಾಂಧವ ಚೆಂದಿರ ದೀಪಉರಿಗಣ್ಣಿನ ಹೊಗೆ ಧೂಪವನೇರಿಸಿಕರಣವೆ ನೈವೇದ್ಯಯೆಂದು ರಾಮ ಎಂಬ 3 ಚಂದದ ಸ್ಫಟಿಕದ ಕರಡಿಗೆಯಲ್ಲಿಪ್ಪಇಂದ್ರನೀಲದ ಚೆನ್ನಪುತ್ಥಳಿಯಂತೆಚಂದದಿ ತನ್ನಯ ಹೃದಯ ಮಧ್ಯದಿ ರಾಮ-ಚಂದ್ರ ಹೊಳೆಯೆ ಶ್ರೀ ರಾಮ ರಾಮ ಎಂಬ4 ಫಣಿ ಮಣಿಯಾಘಾತನಾದ ತಾಳವಾಗೆ ರಾಮ ರಾಮ ಎಂಬ 5 ಒಮ್ಮೆ ಹರಿಯ ಗುಣ ಅಜಪೇಳಲಾಯೆಂಬಒಮ್ಮೆ ನಾರದ ಪಾಡೆ ತತ್ಥೈಯೆಂಬಒಮ್ಮೆ ರಾಣಿಗೆ ಪೇಳಿ ಶಿರವನೊಲಿದಾಡುವಒಮ್ಮೆ ತನ್ನೊಳು ನೆನೆಸಿ ರಾಮ ರಾಮ ಎಂಬ6 ಅರಸಂಚೆಯ ಕಂಜ ಪುಂಜಗಳಲಿಪ್ಪಅರೆ ಮುಚ್ಚಿದ ಹದಿನೈದು ನೇತ್ರಗಳಿಂಹರಿಯ ಕೊಂಡಾಡುತ ಪಂಚ ಮುಖಗಳಿಂದಸಿರಿಕೃಷ್ಣ ಮುಕುಂದ ನರಹರಿ ರಾಮ ಎಂಬ7
--------------
ವ್ಯಾಸರಾಯರು
ಸೋಮಾಸುರನೆಂಬ ಅಸುರನು ಸಾಮಕವೇದವ ಒಯ್ಯಲು ಮಾ ಸೋಮಾಸುರದೈತ್ಯನ ಕೊಂದು ಸಾಮಕವೇದವ ತಂದನು ಮಾ 1 ಗುಡ್ಡವು ಮುಳುಗಿ ಪೋಗಲು ನಮ್ಮ ದೇವ ಗುಡ್ಡ ಬೆನ್ನೊಳಗಿತ್ತನು ಮಾ ಗುಡ್ಡದಂಥ ದೈತ್ಯರನೆಲ್ಲ ಅಡ್ಡ ಕೆಡಹಿ ಬಿಸುಟನು ಮಾ 2 ಚಿನ್ನಗಣ್ಣಿನವನು ಬಂದು ಕನ್ನೆ ಹೆಣ್ಣನೊಯ್ಯಲು ಮಾ ವರ್ಣರೂಪವ ತಾಳಿದಸುರನ ಛಿನ್ನಭಿನ್ನವ ಮಾಡಿದನು ಮಾ 3 ಕಂಬದಿಂದಲಿ ಬಂದು ನಮ್ಮ ದೇವ ಇಂಬಾದಸುರನ ಬಗಿದನು ಮಾ ನಂಬಿದ ಪ್ರಹ್ಲಾದನ ಕಾಯ್ದ ಅಂಬುಜನಾಭ ನೃಸಿಂಹನು ಮಾ 4 ಮುರುಡನಾಗಿ ಬಂದು ನಮ್ಮ ದೇವ ಬಲಿಯ ದಾನವ ಬೇಡಿದನು ಮಾ ಇಳೆಯ ಈರಡಿಯ ಮಾಡಿ ಬಲಿಯ ಪಾತಾಳಕ್ಕೊತ್ತಿದನು ಮಾ 5 ಕೊಡಲಿಯನು ಪಿಡಿದು ನಮ್ಮ ದೇವ ಕಡಿದ ಕ್ಷತಿಯರಾಯ (ಯರ?) ನು ಮಾ ಹಡೆದ ತಾಯಿಯ ಶಿರವ ತರಿದು ಪಡೆದನಾಕೆಯ ಪ್ರಾಣ(ಣವ?) ನು ಮಾ 6 ಎಂಟು ಎರಡು ತಲೆಯ ಅಸುರನ ಕಂಠವ ಛೇದಿಸಿ ಬಿಸುಟನು ಮಾ ಒಂಟೀ ರೂಪವ(?) ತಾಳಿದಸುರನ ಗಂಟ ವಿಭೀಷಭಣಗಿತ್ತನು ಮಾ 7 ಸೋಳಸಾಸಿರ ಗೋಪಿಯರೊಡನೆ ಕೇಳಿಮೇಳದೊಳಿದ್ದನು ಮಾ ಬಾಲಕನಾಗಿ ತನ್ನುದರದಲಿ ಲೋಲ ಲಕ್ಷ್ಮಿಗರಸನು ಮಾ 8 ಒಪ್ಪದಿಂದಲಿ ಬಂದು ನಮ್ಮ ದೇವ ಇಪ್ಪ್ಪೆವನದೊಳಗಿಪ್ಪನು ಮಾ ಸರ್ಪಶಯನನಾಗಿ ಪೋಗಿ ತ್ರಿಪುರಸಂಹಾರ ಮಾಡಿದನು ಮಾ 9 ಏನು ಮಾಯನು ಮಾಯನು ಮಾ ನಮ್ಮ ದೇವ ಬಲ್ಲಿದ ಕಲ್ಕ್ಯಾವತಾರನು ಮಾ ಇಳೆಯ ಸ್ವರ್ಗ ಪಾತಾಳಕ್ಕೊಡೆಯ ಚೆಲುವ ಶ್ರೀ ಹಯವದನನು ಮಾ 10
--------------
ವಾದಿರಾಜ
ಸ್ಕಂದ ದೇವನಿಗೆ - ಜಯ ಜಯ ವೆಂದು ಪಾಡುತ ವಂದಿಸುವೆ ಮು- ಕುಂದ ಮಿತ್ರನಿಗೆ ಪ ನಂದ ಮೂರುತಿ ಸುಂದರಾಂಗ ಅ.ಪ ಮಾರರೂಪಗಪಾರ ಮಹಿಮಗೆ 1 ಪುಲ್ಲನಯನನಿಗೆ - ಆನತ ನಲ್ಲನಿಗೆ ಖಳದಲ್ಲಣಗೆ ಸುರ- ರೊಲ್ಲಿಭಗೆ ವಿಶ್ವಕೆಲ್ಲ ಒಡೆಯನಿಗೆ 2 ಪಾವಂಜೆ - ಪುರದಧೀಶಗೆ ಗಿರಿಜೆ ತನುಜಗೆ 3
--------------
ಬೆಳ್ಳೆ ದಾಸಪ್ಪಯ್ಯ
ಸ್ಕಂದಗುರು ಸ್ಕಂದಗುರು ಸುರ- ವೃಂದ ಮುನಿಜನರು ವಂದಿಪರುಪ. ಮಂದರಧರ ಗೋವಿಂದನ ಶರಣರ ಸಂದೋಹಕಾವ ವೃಂದಾರಕತರುಅ.ಪ. ತಾಮಸರು ದ್ವೇಷ ಬೇಡುವರು ಕಾಮಿತ ಕೇಳ್ವರು ರಾಜಸರು ಸ್ವಾಮಿ ಶ್ರೀಹರಿಯ ಭಕ್ತಿಜ್ಞಾನವ ಪ್ರೇಮದಿ ಕೇಳ್ವರು ಸಾತ್ವಿಕರು1 ವಿಘ್ನಹರನು ನಿನ್ನಗ್ರಜನು ವಿಬು- ಧಾಗ್ರಣಿಯೆನಿಸುವೆಯೊ ನೀನು ಉಗ್ರ ತ್ರಿಯಂಬಕತಾತನು ಖ್ಯಾತನು ದುರ್ಗಾದೇವಿಯೆ ಜನನಿ ನಿರುಪಮಳು2 ತಾರಕಾಂತಕ ನಿಶ್ಯೋಕ ಲಕ್ಷ್ಮೀ- ನಾರಾಯಣನಿಗೆ ಸಖ ಭೂರಿನಿಗಮಾರ್ಥಸಾರ ಕೋವಿದನೆ ಧೀರನೆ ವೀರ ಮಹಾರಣಶೂರನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ತುತಿಸಿ ಪ್ರಾರ್ಥಿಪೆ ನಿನ್ನನು ಸರಸ್ವತಿ ಸ್ತುತಿಸಿ ನಮಿಪೆ ನಿನ್ನನು ಪ. ಸ್ತುತಿಸಿ ನಮಿಸಿ ನಿನ್ನ ಜತನ ಮಾಡುತ್ತ ವದನದಿ ಸ್ತುತಿಸುವ ಭಾಗವತರನು ತೋರಮ್ಮಾ ಅ.ಪ. ಅಕ್ಷರಕ್ಷರ ರೂಪದಿ ಶ್ರೀಹರಿಯಾ ಅಕ್ಷಯ ನಾಮವನು ಸ್ತುತಿಯ ಮಾಳ್ಪ ಸುಕ್ಷೇಮ ಪಡೆದಿಹ ಮಾತೆ ಸರಸ್ವತಿ ಪ್ರತಿ ಅಕ್ಷರವನು ಅರಿವಾ ಭಾಗ್ಯವ ತೋರೆ 1 ರಾಗರಾಗದಿ ಭಜಿಪೆ ಶ್ರೀ ಹರಿಯಾ ಅನು ರಾಗಕೆ ಪಾತ್ರಳಾಗಿ ವಲಿಸಿಹೆ ಭಾಗವತಾಗ್ರಣಿ ಶ್ರೀಹರಿ ನಾಮವ ಶೀಘ್ರದಿ ಸ್ತುತಿಸುವ ಭಾಗವತರ ತೋರೆಂದು 2 ಅಗಣಿತ ಮಹಿಮೆಯನೂ ಬಲ್ಲವಳು ನೀ ಸುಗುಣಿ ಸರಸ್ವತಿಯೆ ಶ್ರೀ ಶ್ರೀನಿವಾಸನ ಅಗಣಿತ ಗುಣಗಳ ಪೊಗಳುವ ಮತಿಯಿತ್ತು ಅಘಹರ ಹರಿಭಕ್ತರಾ ಲಗುಬಗೆಯಲಿ ತೋರೆ 3
--------------
ಸರಸ್ವತಿ ಬಾಯಿ
ಸ್ಥಿರ ನೀಡೆನ್ನ್ವದನಾಬ್ಜದಿ ಪರಮ ಪುರುಷ ನಿನ್ನ ಸ್ಮರಣೆ ಪ ಸೌಖ್ಯ ಸುಭೋಗದಿರಲಿ ಬೇನಿಯಿಂದ ಒರಲುತಿರಲಿ ತ್ರಾಣಗುಂದಿ ತೊಳಲುತಿರಲಿ ದಾನವಾಂತಕ ನಿನ್ನ ಧ್ಯಾನ 1 ಭೂಮಿಪರು ಸನ್ಮಾನ ಕೊಡಲಿ ಪಾಮರೆಂದು ಒದೆದು ನೂಕಲಿ ಭೂಮಿಜನರಪಹಾಸ್ಯ ಗೈಯಲಿ ಸ್ವಾಮಿ ನಿಮ್ಮ ಭಜನಾನಂದ 2 ಚಿಂತೆಯಿರಲಿ ಶ್ರೀಮಂತಿಕಿರಲಿ ಸಂತಸೆಂಬುದು ಸಿಗದ್ಹೋಗಲಿ ಅಂತಕಾರಿ ಶ್ರೀರಾಮ ನಿನ್ನ ಚಿಂತನೆ ಎನ್ನ ಅಂತ್ಯಕಾಲದಿ 3
--------------
ರಾಮದಾಸರು