ಒಟ್ಟು 9847 ಕಡೆಗಳಲ್ಲಿ , 135 ದಾಸರು , 5174 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧನ್ಯರೆ ನೀವು ಧನ್ಯರೆಪನ್ನಂಗ ಶÀಯನನ ಕನ್ಯೆಯರುನಮಮ್ಯಾಲೆ ಅನಂತ ದಯಮಾಡಿಮನ್ನಿಸಿ ಬನ್ನಿರಿ ಪ.ಇಂದಿರಾ ದೇವಿಯರು ಕುಂದುನೋಡದೆನಮ್ಮ ಮಂದಿರಕ್ಕೆ ಬನ್ನಿರೆಂದು ದ್ರೌಪತಿಯು 1ಮುದ್ದು ಪಾದಕೆ ನಾನು ಬಿದ್ದು ಬೇಡುವೆದಯಇದ್ದರೆ ಬಾ ಅನಿರುದ್ಧನ ರಾಣಿ 2ಕಡುಬ್ಯಾಗಸುಭದ್ರಾ ಅಡಿಗೆರಗುತಕರಹಿಡಿದು ರಾಮೇಶನ ಮಡದಿ ಬಾರಮ್ಮ 3
--------------
ಗಲಗಲಿಅವ್ವನವರು
ಧೂಪಾರತಿಯ ನೋಡುವ ಬನ್ನಿ ನಮ್ಮಗೋಪಾಲಕೃಷ್ಣನ ಪೂಜೆಯ ಸಮಯದಿ ಪ.ಅಗುರುಚಂದನ ಧೂಪ ಗುಗ್ಗುಳ ಸಾಮ್ರಾಣಿಮಘಮಘಿಸುವ ಧೂಪದಾರತಿಯು ||ಮಿಗಿಲಾದ ಏಕಾಂತ ಭಕ್ತಿಯಲಿ ನಮ್ಮಜಗನ್ನಾಥ ಕೃಷ್ಣನ ದೇವರ ಪೂಜೆಯ 1ಮದ್ದಳೆ ಜಾಂಗಟಿ ತಾಳ ತಮ್ಮಟೆಭೇರಿತದ್ಧಿಮಿ ಧಿಮಿಕೆಂಬ ನಾದಗಳು ||ಹೊದ್ದಿದಧವಳ ಶಂಖದ ಘೋಷಣಂಗಳಪದ್ಮನಾಭನ ದಿವ್ಯ ದೇವರ ಪೂಜೆಯ 2ಢಣ ಢಣ ಢಣರೆಂಬ ತಾಳ ದಂಡಿಗೆವೇಣುಢಣಕು ಧಿಮಿಕು ಎಂಬ ಮದ್ದಳೆಯು ||ಝಣಿಝಣಿಸುವ ವೀಣೆ ಕಿನ್ನರಿ ಸ್ವರಗಳಘನರಾಗದಿಂದಲಿ ಹಾಡುತ ಪಾಡುತ 3ಮುತ್ತು ಛತ್ರ ಚಾಮರ ಪತಾಕ ಧ್ವಜರತ್ನ ಕೆಚ್ಚಿದ ಪದಕ ಹಾರಗಳು ||ಮತ್ತೆ ಕೋಟಿಸೂರ್ಯ ಪ್ರಭೆಯ ಧಿಕ್ಕರಿಸುವಸತ್ಯಭಾಮೆ ರುಕ್ಮಿಣಿಯರರಸನ 4ಹರ ಬ್ರಹ್ಮಸುರಪತಿ ದೇವತೆ ಮೊದಲಾದಪರಮ ಪಾವನಮೂರ್ತಿ ಪುರುಷೋತ್ತಮನ ||ಪರದೈವತವೆಂದು ಬಿರುದು ಪೊಗಳಿಸಿಕೊಂಬಪುರಂದರವಿಠಲನ ಪೂಜೆಯ ಕಾಲದ 5
--------------
ಪುರಂದರದಾಸರು
ನಕ್ಕರಮ್ಮ ಕೆಲದೆಯರುಸಖ್ಯದಿಂದ ಕೈ ಹೊಯ್ದು ಪ.ಚಿಕ್ಕ ಸುಭದ್ರೆ ಬರೆಸಿದ ಚಿತ್ರಕ್ಕೆಅಕ್ಕಜಬಟ್ಟಾರವರುಭಾಳಅಪಶೌರಿಕೃಷ್ಣನರಸಿಯರು ಗೌರಿಯ ಕಂಡರುತೋರುತಿರೆ ಬರೆಸಿದ ಚಿತ್ರ ನೀರೆ ನೀನು ವರ್ಣಿಸಲೆಂದು 1ನಾರಿ ಬರೆಸಿದ ಗೊಂಬೆನೋಡೆ ನೀರೊಳು ಹರಿದಾಡತಾವೆಮಾರಿಸಣ್ಣದು ಮಾಡಿ ಭಾಳೆ ಭಾರಪೊತ್ತು ಭೋರ್ಯಾಡುತಾವೆ2ನಲ್ಲೆನೆಲವ ಕೆದರೋದೊಂದು ಹಲ್ಲು ತೆರೆದು ಬೇಡೋದೊಂದುಕಲ್ಲು ಮನದಿಕೊಡಲಿ ಎತ್ತಿ ನಿಲ್ಲಗೊಡದೆ ಜನನಿಯ 3ಮಡದಿಯ ಒಲ್ಲದ್ದೆÉೂಂದು ಕಿಡಿಗೇಡಿ ಪುರುಷನೊಂದುಕಡುಬತ್ತಲೆಯಾದದ್ದೊಂದು ಹಿಡಿದೇಜಿ ಏರೋದೊಂದು 4ವೀರತನವೆಲ್ಲನೀಗಿನಾರಿರೂಪ ಆದದ್ದೊಂದುಆ ರಾಮೇಶನ ಹಾಡಿಪಾಡಿ ಸಾರಿ ಸಾರಿ ಹೊಗಳೋದೊಂದು 5
--------------
ಗಲಗಲಿಅವ್ವನವರು
ನಗಲುಬಹುದು ನಗಲುಬಹುದುನಗು ನಗು ರಂಗಯ್ಯಜಗದ ಮಾತು ಅ‌ಘದ ಧಾತುಬಗೆಯನರಿತು ಮುಗಳುನಗೆಯ ಪ.ಒರೆದು ಒರೆದು ಭಾರತದರ್ಥಅರಿದುಅರಿದುವರಭಾಗವತಪರಿಯ ಪರಿಯ ಪುರಾಣಶ್ರ್ರುತಿಯಪಾರಾಯಣ ಮಾಡಿ ಕುರುಡಬಧಿರನರರ ತೆರದಿಅರಹುಮರಹುಬೆರೆತು ಬೆರೆತು ತರತಮಿಲ್ಲದೆಹರಿಹರಜರು ಬೇರೆಬೇರಿಲ್ಲೆಂಬಪರಮಪಾತಕರಿರವ ನೋಡಿ 1ಮಕ್ಕಳ ಮಡದೇರಕ್ಕರ ಬಡಿಸಿರೊಕ್ಕದ ಮದದಿ ಸೊಕ್ಕಿ ಸಜ್ಜನರಲೆಕ್ಕಿಸದವಗೆ ರಕ್ಕಸರಂತೆನಿಕ್ಕರ ನುಡಿದು ಕಕ್ಕಸದಿಂದಪುಕ್ಕಟೆ ಪುಣ್ಯದ ಲೆಕ್ಕವ ಕಳೆದುಘಕ್ಕನೆ ಜವನೋರಿಕ್ಕಿದ ಬಲೆಗೆಸಿಕ್ಕಿ ಬಳಲುತ ನರ್ಕವನುಂಬಮೂರ್ಖರ ತಾಮಸಮುಖ್ಯರ ನೋಡಿ 2ಸುಂದೋಪಸುಂದ ಜಲಂಧರ ಕೀಚಕಕಂದರದಶಕ ಸೈಂಧವ ಜಟಾದ್ಯರಂದು ಪರಸ್ತ್ರೀಯ ಸೌಂದರ್ಯಕ್ಕೆ ಮತಿಗುಂದಿ ಲಯವಾದರೆಂದುಕೇಳಿಇಂದುಮುಖಿಯರ ಚಂದಕೆ ಹುಚ್ಚಿಟ್ಟುಕಂದರ್ಪವಿಶಿಖವೃಂದ ವಶಾಗಿ ನೂರೊಂದುಕುಲ ಯಮಮಂದಿರ ಹೊಂದಿಪಮಂದರಮದೋನ್ಮತ್ತಾಂಧರ ನೋಡಿ3ಸುರರ ಸಂಪದ ಪರಮಪದಕೆಕಾರಣವಾಗಿರೆ ಸುರೇತರರೆಲ್ಲಇರುಳೆ ಹಗಲೆ ಸೈರಿಸಲಾರದೆಒರಗಿಹೋದ ವಿವರಕೇಳಿದುರುಳಕೌರವರ್ವರ ಪಾಂಡವರಸಿರಿತಮ್ಮದೆಂದ್ಹುರಿದು ಹೋಗಿರೆಪರರ ದ್ರವ್ಯಕ್ಕೆ ಮರುಗಿ ಬಯಸಿನರರು ಕೆಡುವ ಪರಿಯ ನೋಡಿ 4ಪ್ರತಿದಿನ ನಿನ್ನ ಪ್ರತಿಮ ಪೂಜೆ ಸದ್ವ್ರತವ ಮಾಡಿ ಸತ್ಕಥೆಯ ಶ್ರೀಮಧ್ವಮತ ಮಹಿಮೆಯನತಿಕ್ರಮಿಸಿ ಕುತ್ಸಿತವೆನಿಸುವ ಪಥದಲಿಪತಿತರಾಗಿ ಸದ್ಗತಿಯ ಕಾಣದಚತುರ ಪರಿಯ ಅಮಿತ ಭಕ್ಷಕರಸ್ಥಿತಿಯರಿತು ಮಾನಾಥ ಪ್ರಸನ್ವೆಂಕಟಪತಿಯೆ ನೀ ಮಂದಸ್ಮಿತದಲಿ 5
--------------
ಪ್ರಸನ್ನವೆಂಕಟದಾಸರು
ನಗೆಯು ಬರುತಿದೆ - ಎನಗೆನಗೆಯು ಬರುತಿದೆ ಪ.ಜಗದೊಳಿದ್ದ ಮನುಜರೆಲ್ಲಹಗರಣಮಾಡುವುದ ನೋಡಿಅಪಪರಸತಿಯರ ಒಲುಮೆಗೊಲಿದುಹರುಷದಿಂದಅವರ ಬೆರೆದುಹರಿವ ನೀರಿನೊಳಗೆ ಮುಳುಗಿಬೆರೆಳನೆಣಿಸುವರ ಕಂಡು 1ಪತಿಯ ಸೇವೆ ಬಿಟ್ಟು,ಪರಸತಿಯ ಕೂಡೆ ಸರಸವಾಡಿಸತತ ಮೈಯ ತೊಳೆದು ಹಲವುವ್ರತವ ಮಾಡುವರ ಕಂಡು 2ಹೀನಗುಣವ ಮನದೊಳಿಟ್ಟುತಾನು ವಿಷದ ಪುಂಜನಾಗಿಮಾನಿ ಪುರಂದರವಿಠಲನಧ್ಯಾನ ಮಾಡುವವರ ಕಂಡು 3
--------------
ಪುರಂದರದಾಸರು
ನಡುಮನೆಯೊಳಗೊಂದು ನಾಲ್ಕು ತೆಂಗಿನಮರ -ಹೇ ಗಿಣಿ - ಹೇ ಗಿಣಿಯೇ |ಕಡೆಮೊದಲಿಲ್ಲದೆ ಅದುಕಾತು ಹಣ್ಣಾಯ್ತ - ಹೇಗಿಣಿಪ.ಕಾಲಿಲ್ಲದವ ಹತ್ತಿ ಕೈಯಿಲ್ಲದವ ಕೊಯ್ದ - ಹೇ ಗಿಣಿತಲೆಯೆಲ್ಲದವ ಬಂದು ಹೊತ್ತು ಕೊಂಡುಹೋದ - ಹೇ ಗಿಣಿ 1ಕಣ್ಣಿಲ್ಲದವ ನೋಡಿ ಕೆಂಪಿನ ಹಣ್ಣೆಂದ - ಹೇ ಗಿಣಿಬಾಯಿಲ್ಲದವ ನುಂಗಿ ಬಸಿರೊಳಗಿಂಬಿಟ್ಟ - ಹೇ ಗಿಣಿ 2ಬಲೆಯ ಹಾಕಿದರು ಬಲೆಯದಾಟುವದಯ್ಯ - ಹೇ ಗಿಣಿಚೆಲುವ ಪುರಂದರವಿಠಲನೇ ಬಲ್ಲ - ಹೇ ಗಿಣಿ 3
--------------
ಪುರಂದರದಾಸರು
ನನಗೆ ಮನಕೆ ಬಡಿದಾಟೆಳೆದಾಟ ಶ್ರೀಸನಕಾದಿವಂದ್ಯ ಬಿಡಿಸಿ ಕಾಯೊದಾತಪ.ಸಲಿಲಸ್ನಾನವ ಮಾಡಿ ಊಧ್ರ್ವ ತಿಲಕವನಿಟ್ಟುನಳಿನಾಕ್ಷ ನಿನ್ನಂಘ್ರಿ ಜಪಿಸೆಂದರೆಛಲದಿಂದ ವಿಹಿತವಲ್ಲದ ದಾರಿಗೊಯ್ದೆನ್ನತೊಳಲಿಸಿ ನೆಲೆಗಾಣಿಸದೆ ಛಲವಿಡಿದಿದೆ 1ಬೇಡಿಕೊಂಡರೆ ಕೇಳದಾಡಿಕೊಂಡರೆ ಕೇಳದೀಡಾಡಿ `ಬಿಸುಟೆನ್ನ ದಣಿಸುತಿದೆನೋಡುನಾನಾಕ್ರೋಶ ಮಾಡಿದರಂಜದುಬಾಡಿ ಬಳಲಿದೆನೆನ್ನ ಕರುಣಿಲ್ಲವಿದಕೆ 2ಮನಪಶುಕಟ್ಟಲು ಜ್ಞಾನಧಂಗಡವಿಲ್ಲಘನವೈರಾಗ್ಯದ ಕಟ್ಟು ದೃಢವಿಲ್ಲವುಮಿನುಗುವ ಭಕುತ್ಯೆಂಬ ಎಳೆಹುಲ್ಲಿನಾಸಿಲ್ಲನೀನೆ ವಶಮಾಡಿಕೊ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ನಂಬಿದೆ ನಿನ್ನ ಗಣೇಶ ಜಗ-ದಂಬಿಕಾತನಯ ವಿಶ್ವಂಭರದಾಸ ಪ.ಲಂಬೋದರ ವಿಘ್ನೇಶ ಶರ-ಣೆಂಬುದು ಸುರನಿಕುರುಂಬ ಮಹೇಶ ಅ.ಪ.ತರುಣಾದಿತ್ಯಪ್ರಕಾಶ ನಿನ್ನಶರಣಾಗತನಾದೆ ಮೋಹನ ವೇಷಸುರುಚಿರಮಣಿಗಣಭೂಷ ಜಗದ್ಗುರುವೆ ಗುಹಾಗ್ರಜ ಪೊರೆಯೋನಿರ್ದೋಷ1ಸಂತಜನರ ಮನೋವಾಸ ಮೋಹಭ್ರಾಂತಿಯಜ್ಞಾನಧ್ವಾಂತವಿನಾಶಶಾಂತಹೃದಯ ಸುಗುಣೋಲ್ಲಾಸ ಏಕದಂತ ದಯಾಸಾಗರ ದೀನಪೋಷ 2ಲಕ್ಷ್ಮೀನಾರಾಯಣನೆ ವ್ಯಾಸಗುರುಶಿಕ್ಷಿತ ಸುಜ್ಞಾನ ತೇಜೋವಿಲಾಸಅಕ್ಷರಬ್ರಹ್ಮೋಪದೇಶವಿತ್ತುರಕ್ಷಿಸು ದನುಜಾರಣ್ಯಹುತಾಶ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ-ರಂಭಸೂತ್ರಳೆ ಇಂಬುದೋರಿನ್ನು ಪ.ಅಂಬುಜಾಂಬಕಿ ಶುಂಭಮರ್ದಿನಿಕಂಬುಗ್ರೀವೆಹೇರಂಬಜನನಿಶೋ-ಣಾಂಬರಾವೃತೆ ಶಂಭುಪ್ರಿಯೆ ದಯಾ-ಲಂಬೆ ಸುರನಿಕುರುಂಬಸನ್ನುತೆ ಅ.ಪ.ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ-ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ-ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ-ಗಾರೆ ರಿಪುಸಂಹಾರೆ ತುಂಬುರುನಾರದಾದಿಮುನೀಂದ್ರ ನುತಚರ-ಣಾರವಿಂದೆ ಮಯೂರಗಾಮಿನಿಸೂರಿಜನ ಸುಮನೋರಥಪ್ರದೆ 1ಮೂಲರೂಪೆ ದಯಾಲವಾಲೆವಿಶಾಲಸುಗುಣಯುತೆ ಮುನಿಜನ-ಲೋಲತರುಣಮರಾಳೆ ಸಚ್ಚರಿತೆ ನವಮಣಿಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ-ಬಾಲೆ ನೀಲತಮಾಲವರ್ಣೆ ಕ-ರಾಳಸುರಗಿ ಕಪಾಲಧರೆ ಸುಜ-ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ 2ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ-ವಾಕರಾಭೆಪರಾಕುಶರಣಜನೈಕಹಿತದಾತೆ ಸುರನರ-ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ-ವಾಕುಕಾಯದಿಂದ ಗೈದಾನೇಕ ದುರಿತವ ದೂರಗೈದು ರ-ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ-ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ-ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ-ಲ್ಲಾಸೆ ಯೋಗೀಶಾಶಯಸ್ಥಿತೆವಾಸವಾರ್ಚಿತೆ ಶ್ರೀಸರಸ್ವತಿದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ 4ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ-ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ-ವಾಮಭಾಗಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯಶ್ರೀಮಹಾಲಕ್ಷ್ಮಿ ನಾರಾಯಣಿರಾಮನಾಮಾಸಕ್ತೆ ಕವಿಜನ-ಸ್ತೋಮಕೃತ ಪರಿಣಾಮೆ ಭೌಮೆ ಪುಲೋಮಜಾರ್ಚಿತೆಸೋಮಶೇಖರಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿರೈ ಕರುಣಾಂಬುಧಿ ಕೋಮಲಕಂಬುಕಂಧರಹರಿಯಪ.ಯೋಗಿಮನಮುದ ರಾಗ ಮೂರುತಿಯ ದೊರೆಯಪಾಲಿತ ಕೌಂತೇಯಭಾಗವತತನಕಾಗಿ ತಾ ದಯವಗೈದ ಭರದಿಂದ ತೋರ್ವಯೋಗ ಮಾಯಾಧೀಶ ಸತ್ಸಕಲಾಗಮಾರ್ಚಿತಭೋಗಿಶಯನಸ-ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ 1ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟುಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದುನಿಂದುವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು 2ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನುದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನುಘಾಸಿಯಾಗದೆ ಧನಿಯ ಹಣವನುಸೂಸಿ ಕರುಣಾರಾಸ ರಾಜ್ಯದವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ 3ಕಷ್ಟವಿಲ್ಲದೆ ಇಷ್ಟ ದೊರಕುವದು ನೆನೆದುಸುಖದಿಂ ಬಾಳುವದುದೃಷ್ಟಿಯಿಂದಲಿನೋಡುನಮ್ಮ ದೊರೆಯ ಹರಿಯಪರಿಯ ನೀನರಿಯಾಸಿಟ್ಟುಮಾಡುವ ಸ್ವಾಮಿನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ 4ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬೊ ನಂಬೊ ಹರಿಪದವ ನಂಬೊ ಪ.ಮಾತುಳನಚಂದನಪ್ರೀತಿಲಿ ಕೊಟ್ಟ ಮನಸೋತವಳಂಗಪುನೀತಮಾಡಿದನಂಘ್ರಿಯ1ಅಜಾಮಿಳ ಸಹಜ ತನುಜನ ಕರೆಯಲಾಗಿನಿಜಭಟರಟ್ಟಿದ ಸುಜನೇಶನಂಘ್ರಿಯ 2ನಂಬಿದರವಗುಣಕುಂದನೋಡದೆಹೊರೆವತಂದೆ ಪ್ರಸನ್ನವೆಂಕಟೇಶನಂಘ್ರಿಯ 3
--------------
ಪ್ರಸನ್ನವೆಂಕಟದಾಸರು
ನಮಿಸೊ ಗಂಧವಹಗೆ ಪ್ರತಿದಿನ ನಿನ್ನ |ಶ್ರಮವ ಕಳೆದು ಅಭೀಷ್ಟಿಯ ಕೊಡುವ ಮನುಜ ಪಹರಿಕರುಣಿಸದಿರೆಗುರುಕರುಣಿಸುವನು |ಗುರುಕರುಣಿಸದಿರೆಹರಿಜರೆವ ||ಧರೆಯೊಳು ವಾತಪ್ರಸಾದ ಸಂಪಾದಿಸಿ |ಶಿರಿವಲ್ಲಭಗೆ ಬೇಕಾದವರ ಕೇಳು ಮನುಜ 1ಹನುಮನೊಲಿದನೆಂದು ಒಲಿದ ಸುಗ್ರೀವಗೆ |ಮನಸಿಜಪಿತನು ತನ್ನಯಚರಣ|ಘನವಾಹ ಸುತ ಭಜಿಸಿದರಿನ್ನವಗೆ ಪ್ರಭಂ |ಜನನೊಲಿಯದಕೆ ಕೊಂದನು ಕೇಳೆಲೊ ಮನುಜ 2ದುರ್ಜನಾಂತಕಗೆ ಬೇಕಾದ ಕಾರಣದಿಂದ |ಅರ್ಜುನಾದಿಗಳು ಸುಖವ ಬಿಟ್ಟರು ||ಅಬ್ಜಾಪ್ತಸುತ ಅಸಮರ್ಥನೆ ರಣದೊಳು |ನಿರ್ಜಿತನಾಗಲು ತಿಳಕೊ ಇದು ಮನುಜ 3ಸುರರೆಲ್ಲ ಕೂಡಿ ನ್ಯಾಯವ ಮಾಡಿ ನೋಡಲು |ಸರಿಯಾಗಲಿಲ್ಲವು ಮಾರುತಗೆ ||ಗಳವುದ್ಭವಿಸಲುಮಥನಕಾಲದಿ ಆದಿತ್ಯರ |ಮೊರೆಕೇಳಿಪ್ರಾಶನ ಮಾಡಿದ ಮನುಜ 4ಶಮೆಯಲ್ಲಿ ದಮೆಯಲ್ಲಿ ಸರ್ವಗುಣದಲ್ಲಿ |ಪವಮಾನಗೆ ಸರಿಯುಂಟಾವನು ಜಗದಿ ||ಅಮಲ ಪ್ರಾಣೇಶ ವಿಠಲಗಲ್ಲದವನು |ಯಮ ಸದನಕೆ ಯೋಗ್ಯ ಯಮಗಲ್ಲೆಂಬ ಮನುಜ 5
--------------
ಪ್ರಾಣೇಶದಾಸರು
ನಮೋ ನಮಸ್ತೇ ಉಮಾತನಯ ಕುಮಾರಾಗ್ರಜ ಪ.ಅಮೋಘ ಶಮದಮಾದಿಗುಣಸಮೂಹ ಗತವಿಮೋಹ ಸದಾ ಅ.ಪ.ಭಾರತವ ಬಾದರಾಯಣನು ಪೇಳಿದಂತೆ ಬರೆದೆ ಭಾರತವಮಾರಜ ಭ್ರಮೆಯ ದೂರಗೈದ ಸುವಿ-ಚಾರಧೀರ ಸುರವಾರವಿನುತ ಪದ 1ವಂದಿಸುವೆವೃಂದಾರಕೇಂದ್ರಯೋಗೀಂದ್ರತವಚರಣಕೆ ವಂದಿಸುವೆವೃಂದಾರಮಂದಾರಚಂದನಚರ್ಚಿತಚಂದ್ರಚೂಡ ಮನೋನಂದ ಮೂರುತಿಯೆ 2ಸುಕ್ಷೇಮವಸುಜನಪಕ್ಷಪಾವನಮುಮುಕ್ಷುಜನಪ್ರಿಯ ಸುಕ್ಷೇಮದಲಕ್ಷ್ಮೀನಾರಾಯಣ ಲಕ್ಷಿತಾತ್ಮನೆ ವಿ-ಪಕ್ಷರಕ್ಷೋಗಣಶಿಕ್ಷ ಸೂಕ್ಷ್ಮ ಮತೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮೋ ನಮೋ ಕಾಲಭೈರವ ಹರಿಯ ಚರಣ-ಸಮೀಪದೊಳಗಿದ್ದು ಮೆರೆವ ಪ.ಸಮೀಚೀನಜ್ಞಾನಭಕ್ತ-ಸಮೂಹವಕಾವಲಕ್ಷ್ಮೀ-ರಮಣನ ಕಾರ್ಯಮಂತ್ರಿ-ಯು ಮಾಧವನ ಸಮಾನಬಲ ಅ.ಪ.ಬೆಟ್ಟದೊಡೆಯ ಶ್ರೀನಿವಾಸನ ಪಾದಕಮಲ-ಮುಟ್ಟಿ ಭಜಿಪ ವೈರಿಮರ್ದನಸೃಷ್ಟಿ ಮೂರರಲ್ಲಿ ಕೀರ್ತಿ-ಪಟ್ಟ ದಿಟ್ಟ ಧೀರಪರಮನಿಷ್ಠ ಪುಷ್ಪ ತುಷ್ಟಿಪ್ರದ ಬ-ಲಿಷ್ಠ ಶ್ರೇಷ್ಠ ಭೂತಪತಿಯೆ 1ಶ್ರೀನಿವಾಸನಾಜೆÕ ಮೀರದೆ ನಡೆಸುವದೆ ಪ್ರ-ಧಾನ ಕಾರ್ಯ ನಿನ್ನದೆಂಬುದೆತಾನು ಕಿಂಚಿದರಿತು ಸನ್ನಿ-ಧಾನವನ್ನೋಲೈಸಿ ಬಂದೆದೀನಬಂಧು ಸುಗುಣಸಿಂಧುಮಾನತ್ರಾಣವಿತ್ತು ಸಲಹೊ 2ಅಂತರಂಗದಲ್ಲಿ ಪ್ರಾರ್ಥನೆ-ಮಾಡಿದರೆಸ್ವಂತ ಬಂದುಮಾಡುರಕ್ಷಣೆಅಂತ್ಯಕಾಲದಲ್ಲಿ ಹರಿಯಚಿಂತನೆಗೆ ವಿಘ್ನ ಬಾರ-ದಂತೆಕಾವಮಹಾ ತೇಜೋ-ವಂತ ಹೊಂಕಾರಿಸೂರಿ3ಕಾಲಕಾಲದಲ್ಲಿ ಭಕ್ತರ ಮನೋಭೀಷ್ಟಪಾಲಿಸುವ ಚಂದ್ರಶೇಖರಖೂಳಜನರ ಗರ್ವಮುರಿವಶೂಲಪಾಣಿ ಸುಗುಣಶ್ರೇಣಿಮೂಲಪತಿಯ ಪಾದಪದ್ಮಮೂಲದೊಳಗೆ ನಲಿವ ಚೆಲುವ 4ತೋರಿಕೊಳ್ಳದೆಭೂರಿಮಹಿಮೆಯ ಭಕ್ತರಿಂಗಾ-ಧಾರವಾಗಿ ರಾಜಿಸಿರುವೆಯಧೀರ ಲಕ್ಷ್ಮೀನಾರಾಯಣನಸೇರಿದಾನತರ್ಗೆ ಮಂ-ದಾರಮಹೋದಾರ ಗಂ-ಭೀರ ಧೀರ ಚಾರುಚರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ