ಒಟ್ಟು 19658 ಕಡೆಗಳಲ್ಲಿ , 137 ದಾಸರು , 8696 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತೀ ಪತಿನುತ ವಿಠಲ ನೀನಿವಳ ಉದ್ಧಾರ ಮಾಡುವುದು ಹರಿಯೇ ಪ ತಾರಕನು ನಿನಗನ್ಯ ಉಂಟೇ ಈರೇಳು ಲೋಕದಲಿ ಧೊರೆಯೇ ಅ.ಪ. ಜನ್ಮಜನ್ಮದಲಿ ಬಲುನೊಂದು ಸತ್ಪುಣ್ಯಗಳನೇ ಮಾಡಿಜನ್ಮಪೊಂದುತಲಿ ಸತ್ಕುಲದಿ ಸನ್ಮತದವನ ಕೈಯ ಪಿಡಿದು |ಸನ್ಮಧ್ವಮತ ದೀಕ್ಷೆಗಳ - ಒಮ್ಮನದಿ ತಾಳುತ್ತನಿಮ್ಮಡಿಯ ನಾಶ್ರಯಿಸಿ ಬಂದಿಹಳ ಸಲಹುವುದು 1 ತರತಮ ಜ್ಞಾನದಲಿ - ಉರುತರೋತ್ಸುಕತೆಯನುನಿರತ ಹರಿಗುರುಗಳಲಿ ಉರುತರದ ಭಕ್ತಿಯನೂ |ಹಿರಿಯರನು ವಿನಯದಿಂ ಪರಿಚರಿಪ ಮತಿಯನ್ನುಕರುಣಿಸೀ ಸಲಹಯ್ಯ ಮರುತಾಂತರಾತ್ಮಾ 2 ಪಂಚಭೇಧದ ಜ್ಞಾನ ಸಂಚಿಂತನೆಯನೇ ಕೊಟ್ಟುಮಿಂಚಿನಂದದಿ ತೋರೊ - ಹೃತ್ಪಂಕಜನಲೀಅಂಚೆವಹಪಿತ ನಿನ್ನ ಪದಕಮಲ ಭಜಿಪಳಿಗೆವಾಂಛಿತಾರ್ಥದನಾಗಿ - ಸಲಹ ಬೇಕಿವಳಾ 3 ಪತಿ ನೀನೆ ಎಂಬಂಥಮತಿಯಿತ್ತು ಭವಗಳನ ಉತ್ತರಿಸು ಹರಿಯೇ 4 ನಿನ್ನ ಪದ ಕಮಲದಲಿ ಜ್ಞಾನಭಕುತಿಗಳಿತ್ತುನನ್ನೆ ಯಿಂದಿವಳ ಚೆನ್ನಾಗಿ ಸಲಹೊ ಹರಿಯೇ |ಸನ್ನುತಿಸಿ ಪ್ರಾರ್ಥಿಸುವೆ - ಮನ್ನಿಸೆನ ಬಿನ್ನಪವಘನ್ನ ಮಹಿಮನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಾರತೀ ಮಜ್ಜನನಿಯ ಭಾರತೀ ಪ ಭಾರತೀ ಭರತನಾರ್ಧಾಂಗಿ ಕರು ಣಾರಸ ಪೂರಿತಾಪಾಂಗಿ ಅಹ ತಾರಕ್ಷ್ಯ ಪ್ರಮುಖ ವೈಕಾರಿಕ ದೇವಗ ಣಾರಾಧಿತಾಂಘ್ರಿ ಸರೋರುಹೆ ಪಾಲಿಸೆ ಅ ವಿದ್ಯುನಾಮ್ನಮಕೆ ವಿಧಿಜಾತೆ ಕೃತಿ ಪ್ರದುಮ್ನ ಜಠರಸಂಭೂತೆ ಅನ ವದ್ಯ ಸದ್ಗುಣಗಣವ್ರಾತೆ ಬ್ರಹ್ಮ ವಿದ್ಯವ ಪಾಲಿಸು ಮಾತೆ ಅಹ ಬುಧ್ಯಾಭಿಮಾನಿಯೆ ಸದ್ಯೋಜಾತನ ಪೆತ್ತ ಶ್ರದ್ಧಾ ನಾಮಕೆ ಅನಿರುದ್ಧನ ತೋರಿಸೆ 1 ಗುಣತ್ರಯಾತ್ಮಕವಾದ ಲಿಂಗದೊಳು ಅಣರೂಪಳಾಗಿ ತುರಂಗ ಮುಖ ಅನಿಲಾಂತರ್ಗತ ಪಾಂಡು ರಂಗನಂಘ್ರಿ ಭೃಂಗ ಆಹ ಅನಿರುದ್ಧ ದೇಹಸ್ಥ ಅನಿಮಿಷರೊಳು ಪೊಕ್ಕು ದ್ವಿನವರೂಪದಿ ಮಾಳ್ಪೆ 2 ಕಾಳಿದ್ರೌಪದಿ ಶಿವಕನ್ಯಾ ಮನ್ಮ ನಾಲಯದೊಳು ನಿಲ್ಲೆ ಘನ್ನ ಪ್ರಾಜ್ಞ ನಿತ್ಯ ಎನ್ನ ಪರಿ ಪಾಲಿಸು ನಂಬಿದೆ ನಿನ್ನ ಆಹ ಶೈಲಜೆ ಶ್ಯಾಮಲೆÉ ಪೌಲೋಮಿ ಉಷೇರಿಂದ ಓಲಗ ಕೈಕೊಂಬ ಕಾಲಾಬ್ಧಿ ಮಾನಿಯೆ 3 ವಂದಿಪೆ ನಿನಗಿಂದ್ರಸೇನಾ ನಳ ನಂದಿನಿ ಕರುಣಿಸು ಜ್ಞಾನ ಶ್ರೀ ಮು ಕುಂದನ ಪರಮ ಕಲ್ಯಾಣ ಗುಣ ಸಿಂಧುವಿನೊಳಗೆ ಪಾಠೀನ ಆಹ ನಂದದಿ ಚರಿಸುವ ಗಂಧವಾಹನ ರಾಣಿ ಸಿಂಧೂರ ಗಮನೆ ಪುರಂದರಾರಾಧಿತೆ 4 ನಿಗಮತತಿಗಳಭಿಮಾನಿ ನಿನ್ನ ಪೊಗಳಲೆನ್ನೊಳವೆ ಕಲ್ಯಾಣಿ ಆ ಪ ನ್ನಗರಾಜ ಸಹಸ್ರ ವಾಣಿಯಿಂದ ಬಗೆ ಬಗೆ ತುತಿಪ ಸುಶ್ರೋಣೆ ಆಹ ಮುಗಿವೆ ಕರಗಳೆನ್ನವಗುಣಗಳೆಣಿಸದೆ ಜಗನ್ನಾಥವಿಠಲನಂಘ್ರಿಗಳ ಧ್ಯಾನವನೀಯೆ 5
--------------
ಜಗನ್ನಾಥದಾಸರು
ಭಾರತೀ ರಮಣ ಸುರವಿನುತ ಚರಣ ಶಾರದಾ ಪುರ ಶರಣ ಪ ನೂರು ಯೋಜನಮಿರ್ದವಾರಿಧಿ ಲಂಘಿಸಿ ಬೇಗ ಧಾರುಣಿ ಸುತೆಯ ಕಂಡು ದೂರ ನಮಿಸಿ ಸಾರಿ ಮುದ್ರಿಕೆಯ ನಿತ್ತು ತೋರಿರಾಕ್ಷಸಗೆ ಭಯ ಶ್ರೀರಾಮಗೆ ಬಂದು ಕ್ಷೇಮ ವಾರುತಿಯ ಪೇಳಿದಂಥ 1 ಇಂದು ಕುಲದಲ್ಲಿ ಪಾಂಡುನಂದನನೆನಿಸಿ ಜರಾ ಸಂಧ ಮುಖರನು ಗದೆಯಿಂದವರಸಿ ಅಂದುರಣದಲ್ಲಿ ಕರುವೃಂದವ ಮಥಿಸಿ ಆ ನಂದ ಕಂದನೊಲಿಮೆಯ ಛಂದದಿ ಪಡೆದು ಗುರು 2 ಮೇದಿನಿ ಮೋದ ತೀರ್ಥರೆಂದೆನಿಸಿ ವಾದದಿಂದಲಿ ವಾದಿ ಮತ್ತ ವಾರಣ ಮೃಗಾಧಿಪರೆನಿಸಿ ಪಂಚ ಬೇಧ ಬೋಧಿಸುವ ಶಾಸ್ತ್ರ ಸಾದರದಿ ವಿರಚಿಸಿದ 3 ಕಾಲಕಾಲದಲಿ ದ್ವಿಜರಾಲಯದಿ ಬಂದು ನಿನ್ನ ಬಾಲವನಿತೆರ ಸಹ ಶೇವಿಸುವರು ಪಾಲಿಕಿ ಉತ್ಸವದಲ್ಲಿ ಶೇರುವದು ಪೌರಜನ ಪಾಲಿಸಬೇಕಯ್ಯ ಪಾಂಚಾಲಿರಮಣನೆ ನಮೊ 4 ಭವ ಕೂ ಪಾರ ನಾವಿಕನೆ ಎಂದು ಪ್ರಾರ್ಥಿಸುತಲಿ ಸೇರಿದ ಸಜ್ಜನರಘ ದೂರಮಾಡಿ ಪೊರೆವಂಥಕಾರ್ಪರ ನಿಲಯ ಸಿರಿನಾರಸಿಂಹ ನೊಲಿಸಿದ 5
--------------
ಕಾರ್ಪರ ನರಹರಿದಾಸರು
ಭಾರತೀದೇವಿ ಭಾರತಾದೇವಿಯರ ಪಾದ ಚಾರು ಚರಣಕೆರಗುವೆ ಪ ವಾರಿಜಾಕ್ಷಿ ನಿನ್ನ ಮಹಿಮೆ ಬಾರಿ ಬಾರಿ ಪೊಗಳುವೆ ಅ.ಪ ಸುಂದರಾಂಗಿ ಶುಭಕರಾಂಗಿ ಬಂದು ಎನ್ನ ಪಾಲಿಸು ಇಂದಿರೇಶನನ್ನು ಸದಾ ಆ- ನಂದದಿಂದ ಭಜಿಸಲು 1 ಬಾರಿ ಬಾರಿ ನಿನ್ನ ಸ್ತುತಿಪೆ ಮಾರುತನರ್ಧಾಂಗಿಯೆ ಸಾರಿ ಸಾರಿ ಶ್ರೀರಮಣನ ಸಾರ ಕೃಪೆಯ ಕರುಣಿಸು2 ಕರುಣಿಸಮ್ಮ ನಿನ್ನ ಪತಿಯ ಸ್ಮರಣೆ ನಿರುತ ಮರೆಯದೆ ಕರುಣಾಕರನೆ ಕಮಲನಾಭ ವಿಠಲನಂಘ್ರಿ ಧ್ಯಾನವೀಯೆ 3
--------------
ನಿಡಗುರುಕಿ ಜೀವೂಬಾಯಿ
ಭಾರತೀಯ ರಮಣ ಪ್ರಾಣಾ | ಜಗಭಾರ ನಿನ್ನದಯ್ಯ ಪವನಾ ಪ ಘೋರದುರಿತ ಅಟವಿ ದಹನಾ | ಮಾರನಯ್ಯನ ತೋರೊ ಕರುಣ ಅ.ಪ. ಪಾದ ಪಾದ ಬಿಸಜ ಭವ ವಾರಿಧಿ ಮುರ | ವೈರಿಯ ಪದ | ತೋರುತ ಉ | ದ್ಧಾರವಗೈ 1 ದಿವಿಜ ವಿನುತಾ | ನೀ ಸಲಹೊ ಸಕಲ ವ್ಯಾಪ್ತಾ ||ವೀಶ ಶೇಷ | ಈಶಾ ಸುರ | ಪೇಶಾ ರವಿ | ಭಾಸಾ ಸ್ವಪ್ರಕಾಶಕ ಜಗ | ಪೋಷಕ ಚಿ | ತ್ತಾಕಾಶದಿ | ಭಾಸಿಸನಿಲ 2 ಕರಿ ಪರಿ ಪರಿಯಲಿ | ನಿರಂತರ 3
--------------
ಗುರುಗೋವಿಂದವಿಠಲರು
ಭಾರತೀರÀಮಣನೆ ಸಾರಿದೆನು ಚರಣ ತೋರು ಮನ್ಮನದಲಿ ಭೂರಿಸುಕÀರುಣ ಪ ನಾರಾಯಣಾಂಕದಿ ಕುಳಿತಿಹ ಶೂರಾ ಸೂರಿಸ್ತೋಮತೇಜೊರಂಜಿಪುದಾರಾ ಮಾರಮಣನಾಙÁ್ಞದಿಂ ಬ್ರಹ್ಮಾಂಡಧಾರಾ ಧಾರಕಾನಂದ ವಿಠಲನ್ನಚಾರಾ 1 ದುರುಳರಕ್ಕಸತತಿಯ ದ್ವಿರದ ವಿದಾರ ಹರಿರಘುವರನಪಾದ ಶರಧಿಜ ಚಕೋರ ಹರಮುಖ್ಯ ಸುರಸರಸಿರುಹಕೆ ದಿನಕರ ವರದೇಶವಿಠ್ಠಲನ ಸ್ಮರಿಪÀ ಸಮೀರ 2 ಕುರುಕುಲ ಸಂಜಾತ ದ್ರುಪದಜಾನಾಥ ದುರಿಯೋಧನನ ಊರುತರಿದ ನಿರ್ಭೀತ ಪರಮ ಭಗವದ್ಭಕÀ್ತವೃಂದ ಸುಪ್ರೀತ ವರದೇಂದ್ರ ವಿಠ್ಠಲನ ಪ್ರೀಯ ಸುತನೀತ 3 ಅದ್ವೈತ ಮತತಿಮಿರ ಧ್ವಂಸÀನ ಧಿರ ಶುದ್ಧವೈಷ್ಣವ ಮತಸ್ಥಾಪನಾಪಾರ ಸದ್ವಾಕ್ಯದಿಂದಲಿ ಹರಿಪಾರವಾರ ಮಧÀ್ವಸುಂದರ ವಿಠ್ಠಲನ ಸುಕುಮಾರ 4 ವರದೇಶವಿಠ್ಠಲ ವರದೇಂದ್ರ ವಿಠಲ ಸುಂ - ದರ ವಿಠಲ ಆನಂದ ವಿಠ್ಠಲನ್ನ ಪರಿಪರಿ ವಿಧದಲ್ಲಿ ಕರುಣವ ಪಡೆದಿಹ ಗುರುಜಗನ್ನಾಥ ವಿಠ್ಠಲನ ನಿಜದೂತ 5
--------------
ವರದೇಶವಿಠಲ
ಭಾರತೀರಮಣ ಸದ್ಭಕ್ತ ಬಂಧೋ ಭವ ಭಯ ಪರಾಭವಗೈಸು ಬೇಗ ಪ ಲೋಕಾಂತರಾತ್ಮಕನೆ ಈ ಕಮಲಜಾಂಡದೊಳು ನೀಕೈಯ ಪಿಡಿದು ಕೃಪಾವಲೋಕನದಿಂದ ಜೋಕೆ ಮಾಡುವುದೆನ್ನ ಮೈನಾಕಿವರಜನಕ 1 ಅನಿಲ ಎನ್ನವಗುಣಗಳೆಣಿಸಲು ಕಡೆಯುಂಟೆ ಕೊನೆಗೆ ನೀನೆ ಗತಿಯೋ ಅನಿಮಿಷೇಶಾ ಜನನಿ ಜನಕ ಭ್ರಾತ ಜನಪ ಗುರುವರ ಮಿತ್ರ ಎನಗೆ ನೀ ಸಕಲ ಸೌಖ್ಯದನೆಂದು ಪ್ರಾರ್ಥಿಸಿದೆ 2 ಹನುಮ ಭೀಮಾನಂದ ಮುನಿರಾಯ ನಿನ್ನ ಪ್ರಾ ರ್ಥನೆ ಗೈಯುವರು ವಾಣಿ ಫಣಿಪ ಮೃಡರು ಅನಿಮಿತ್ತ ಬಾಂಧವ ಶ್ರೀ ಜಗನ್ನಾಥ ವಿಠ್ಠಲನ ತನಯ ತಾವಕರ ಬಂಧನವ ಮೋಚನ ಮಾಡೋ 3
--------------
ಜಗನ್ನಾಥದಾಸರು
ಭಾರತೀರಮಣಾ ಮನ್ಮನದಲಿ ತೋರು ತವ ಚರಣಾ ಪ ಮೂರೇಳು ಸಾವಿರದಾರುನೂರು ಜಪ ಓರಂತೆ ಜಪಿಸಿ ಉದ್ಧಾರ ಮಾಡುವಿ ಎಮ್ಮ ಅ.ಪ. ಮೂರುವಿಧ ಜೀವರೋಳು ಹೊರ ನೀ ಪ್ರೇರಕನೋ ದೇವ ನಾರಾಯಣನ ನಿಜಾರಾಧಕರೊಳು ಆರು ನಿನಗೆ ಸರಿ ಮೂರವತಾರನೆ 1 ಚತುರವಿಂಶಶಿ ತತ್ವೇಶರಾಪತಿಯ ನಿನ್ನ ತುತಿಪ ಉಪೇಂದ್ರ ಸುಯತಿಕರ ಪೂಜಿತ ನತಿಸುವೆ ಎಮಗೆ ಸನ್ನತಿ ಕೊಡು ಸರ್ವದಾ 2 ಪ್ರಾಣಪಂಚಕ ರೂಪನೆ ಖಳ ಶ್ರೇಣೀವಂಚಕ ಕ್ಷೋಣಿಯೊಳಗೆ ಕೃಷ್ಣ ವೇಣೀತರಂಗಿಣಿ ತ್ರಾಣಗೈದ ನಿರ್ವಾಣ ಪ್ರದಾಯಕ 3 ಲೋಕರೂಪನೆ ಜಗದೊಳನೇಕ ಚರಿತನೆ ಪಿನಾಕಿ ಸುರೇಂದ್ರ ದಿ ವೌಕಸರೆಮ್ಮನು ಸಾಕುವರನುದಿನ4 ಮಾತರಿಶ್ವನು ಜಾತಹನುಮ ಜಗನ್ನಾಥವಿಠಲನ ಪ್ರೀತಿಯಿಂದಲಿ ತೋರೋ 5
--------------
ಜಗನ್ನಾಥದಾಸರು
ಭಾರತೀಶ ಕರುಣಾರಸ ಭೂಷಾ ಖರಾರಿ ದಯಾರಸ ಪೂರಿತ ವೇಷಾ ಪ. ಅಕ್ಷಪೂರ್ವಜನ ರುಕ್ಷಶರಾಹತಿ ವಿಕ್ಷತಕಪಿಗಳನೀಕ್ಷಿಸುತ ರೂಕ್ಷನ ನುಡಿ ಕೇಳ್ದಾಕ್ಷಣದೊಳಗರೆಲಕ್ಷಯೋಜನಕೆ ಲಂಘಿಸುತ ಕರತಲದೊಳಗಿಡುತ ಅಕ್ಷಿನಿಮೋಘಕೆ ಲಕ್ಷಕೊಡದೆ ನಿಜಪಕ್ಷದ ಜನರನು ರಕ್ಷಿಸಿದ 1 ಸೇರಿ ದುರಾಕೃತ ಕೌರವರ ಧಾರುಣಿಗೊರಗಿಸಿ ಘೋರ ರೂಪ ಕಿಂಮೀರನ ರಕ್ತನ ಕಾರಿಸುತ ಭಾರಿಗದೆಯ ಪಿಡಿದಾರುಭಟಿಸಿ ಬಹುವಾರಣ ತತಿಗಳ ಹಾರಿಸುತ ವೀರಜಗಧೀರಣ ಮೂರ್ತೆ 2 ಹಿಂಡುಗೂಡಿದಾ ಖಂಡಲ ರಿಪುಗಳು ಖಂಡ ಪರಶುಹರಿತಾನೆನುವ ಭಂಡಮಾತ ಭೂಮಂಡಲ ಮಧ್ಯದಿ ಪುಂಡುತನದಿ ಪ್ರಸ್ತಾಪಿಸುವ ಪಂಡಿತ ಮಾನಿಗಳೆನಿಸಿದ ಮೈಗಳ ಖಂಡಿಸಿ ತತ್ವವ ಬೋಧಿಸುವ ಬ್ರಹ್ಮಾಂಡಕೋಟಿಪತಿಯನುತಿರುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರತೀಶ ಕಾಂತ ವಿಠಲ | ಪೊರೆಯ ಬೇಕಿವಳ |ಭೂರಿ ದೈವರ ಗಂಡ | ಮರುತಾಂತರಾತ್ಮಾ ಅ.ಪ. ಸುಕೃತ | ರಾಶಿ ಒದಗಲು ಈಗದಾಸ ಪಂಥಕೆ ಮನವ | ಆಶಿಸುತ್ತಿಹಳೋಆಶುಗತಿ ಮತ ಪೊಂದಿ | ದೋಷಗಳ ಕಳೆದಿಹಳಕೇಶವನೆ ಪೊರೆಯೆಂದು | ಲೇಸು ಬಿನ್ನವಿಪೇ 1 ಮೂರೆರಡು ಭೇದಗಳು | ತಾರತಮ್ಯವ ತಿಳುಹಿಆರು ಮೂರೂಭಕ್ತಿ | ವೈರಾಗ್ಯ ಭಾಗ್ಯಸಾರ ತತ್ವ ಜ್ಞಾನ | ದರಿವ ಇವಳಿಗೆ ಇತ್ತುಪಾರುಗೈ ಭವದ ಕೂ | ಪಾರ ಶ್ರೀ ಹರಿಯೇ 2 ಲೌಕಿಕ ಸುಸಖ್ಯ | ವೈದೀಕವೆಂದೆನಿಸುತ್ತಕಾಕು ಸಂಗವ ಕೊಡದೆ | ನೀ ಕೊಟ್ಟು ಸತ್ಸಂಗಪ್ರಾಕ್ಕು ಕರ್ಮವ ಕಳೆದು | ಸಾಕ ಬೇಕೆಂದಿವಳಮಾಕಳತ್ರನೆ ಹರಿಯೆ | ನಾಕೇಳ್ವೆ ವರವಾ 3 ಪತಿಯೆ ಪರದೈವ ವೆಂ | ಬತಿ ಶಯದ ಮನೆಯಿತ್ತುಹಿತದಿ ಹರಿ ಗುರು ಸೇವೆ | ಸತತ ಒದಗಿಸುತಗತಿಗೋತ್ರ ನೀನೆಂಬ | ಮತಿಯನೇ ಕರುಣಿಸುತಕ್ಷಿತಿಯೊಳಿವಳನು ಮೆರೆಸೊ | ಪತಿತ ಪಾವನ್ನಾ 4 ದೇವ ಹೂತಿಯ ಪೊರೆದ | ಆವ ಕಪಿಲಾತ್ಮಕನೆಭಾವದಲಿ ಮೈದೋರಿ | ನೀವೊಲಿಯಲೆಂದೂಭಾವದಲಿ ಬಿನ್ನವಿಪೆ | ಬಾವಜ್ಞ ಸಲಿಸುವುದುದೇವ ದೇವನೆ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಭಾರತೀಶ ಮದ್ಭಾರ ನಿನ್ನದಯ್ಯ | ಕರುಣದಿ ಪಿಡಿ ಕೈಯ್ಯಾ || ಪೂರೈಸೆನ್ನ ಮನೋಭಿಲಾಷೆ ಗುರುವೆ | ಭಜಕರ ಸುರತರುವೆದ್ಭ ಪ ಹರಿಭಕ್ತಾಗ್ರೇಸರನೆ ಹನುಮಂತಾ | ಹರನುತ ಬಲವಂತಾ | ತರಣಿಕುಲಜ ಶ್ರೀರಾಮನ ಕೈಯಿಂದ | ಬಲುಸಂಭ್ರಮದಿಂದಾ | ರಣದೊಳಗೋಲ್ಯಾಡಿ | ದುರುಳ ರಕ್ಕಸರ ದುಷ್ಟ ದನುಜರ | ತರಿದೆ ಲೋಕೈಕ ಸಮರ್ಥಾ 1 ಕುಂತಿ ಜಠರಾಂಭೋನಿಧಿ ಚಂದ್ರಮನೆ ರಾಜಾಗ್ರೇಸರನೆ | ಕಂತು ಜನತನಿಚ್ಛಾನುಸಾರವಾಗಿ | ರಣದೊಳಗೆ ಚೆನ್ನಾಗಿ | ನಿಂತು ದುಷ್ಟ ದುರ್ಯೋಧನಾದಿಗಳನು ಸಂಹರಿಸಿದಿ ನೀನು | ಬಲ್ಲರಯ್ಯ ಕರುಣದಿ ಪಿಡಿಯೊ ಕೈಯಾ 2 ನಡುಮನೆಯೆಂಬೊ ವಿಪ್ರನ ಮನೆಯಲ್ಲಿ | ಅವತರಿಸಿ ಚೆನ್ನಾಗಿ | ಮೃಡ ಸರ್ವೋತ್ತಮ ಹರಿಯೆ ತಾನೆಂದು | ಮಿಥ್ಯಾಜಗವೆಂದು | ನುಡಿವ ಜನರ ಮತಗಳನೆ ನಿರಾಕರಿಸಿ ಶಾಸ್ತ್ರವ ರಚಿಸಿ |ಒಡೆಯ ತಂದೆ ಶ್ರೀ ವಿಜಯವಿಠಲನ್ನ ಪೂಜಾಸಕ್ತನೇ 3
--------------
ವಿಜಯದಾಸ
ಭಾರತೀಶನ ಸೇರಿರೋ ಭವವಾರಿಧಿ ದಾಟುವರೆ ಸಾರ ತೋರುವ ಪ. ತುಂಗ ವಿಷಯಾಂಗಜನಿತೋತ್ತುಂಗ ತರಂಗದೊಳು ಅಂಗಜಾತ ತಿಮಿಂಗಿಲನು ತಾನುಂಗುವ ನಿಮಿಷದೊಳು ಮಂಗಳಾತ್ಮಕ ಮಾರುತನ ಸದಪಾಂಗಲೇಶವನೈದೆ ಸುಲಭದಿ ರಂಗನಿರವನು ತೋರಿ ಸಲಹುವ 1 ತ್ರೇತೆಯೊಳಗಿನ ಜಾತನಿಗೆ ರಘುನಾಥನ ತೋರಿಸಿದ ಕಾತುರದ ಪುರಹೂತನನು ಯದುನಾಥನಿಗೊಪ್ಪಿಸಿದಾ ಭೂತನಾಥನ ವಾಕ್ಯಬಲದಿಂದಾತ್ಮ ಜೀರಿಗೈಕ್ಯಪೇಳುವ ಪಾತಕಿಗಳನು ಗೆದ್ದು ತ್ರಿಜಗನ್ನಾಥ ಮುತ್ತಿದನೆಂದು ಮೆರಸಿದಿ 2 ಸೂತ್ರನಾಮಕ ಪ್ರಣವನಾಯಕ ಕ್ಷತ್ರಪುರದೊಳಿರುವಾ ಶತ್ರುತಾಪನ ಶೇಷಗಿರಿ ಪತಿಪುತ್ರನೆನಿಸಿ ಮೆರೆವಾ ಚಿತ್ರಕರ್ಮ ಚಿರಂತನಾಣುಗ ಪುತ್ರಮಿತ್ರಕಳತ್ರ ಭಾಗ್ಯದ ನೇತ್ರ ವಿಷಯ ಪರತ್ರ ರಕ್ಷಕ ಧಾತ್ರಪದಸತ್ಪಾತ್ರನೆನಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರತೀಶನೆ ಉದ್ಧರಿಸುವದೆನ್ನ ಪ ಕಂಸಾರಿ ಪ್ರೀಯ ಸಂ - ಸಾರ ಬಂಧನ ನಿವಾರಿಸೊ ಜವದಿ ಅ.ಪ ಅಂಜನಾದೇವಿಯ ಸಂಜಾತನೆ ಭವ ಭಂಜನ ಹರಿಪದಕಂಜಾರಾಧಕ 1 ಮಾರುತಿ ನಿನ್ನ ಸುಕೀರುತಿ ತ್ರಿಜಗದಿ ಸಾರುತಲಿದೆಯುದ್ಧಾರಕನೆಂದು 2 ಹರಿಕುಲಜಾತನೆ ಹರಿಸಂಪ್ರೀತನೆ ಹರಿಹಯ ವಿನುತನೆ ಹರಿದುರಿತವನು 3 ಕಾಮಿತ ಫಲದ ನಿಸ್ಸೀವÀು ಪರಾಕ್ರಮಿ ಪ್ರೇಮವ ಕೊಡು ಶ್ರೀ ರಾಮನ ಪದದಿ 4 ಕುಂತಿ ಕುಮಾರಾದ್ಯಂತ ವಿದೂರನೆ ಅಂತರಂಗದಿ ಹರಿಚಿಂತನೆಯಕೊಡು 5 ಧರ್ಮಾನುಜಸದ್ಧರ್ಮ ಸ್ಥಾಪಕನೆ ಕಿರ್ಮೀರಾಂತಕ ನಿರ್ಮಲ ಚರಿತ 6 ಭೀಮನೆ ಸುದ್ಗುಣ ಧಾಮನೆ ಕುರುಕುಲ ಸೋಮನೆ ಸುರಮುನಿಸ್ತೋಮನಮಿತನೆ 7 ಅರ್ಜುನಾಗ್ರಜನೆ ದುರ್ಜನ ಶಿಕ್ಷಕ ಧೂರ್ಜಟಿವಂದ್ಯನೆ ಮೂರ್ಜಗ ಕರ್ತಾ 8 ಆರ್ಯನೆ ಕೃತ ಸತ್ಕಾರ್ಯನೆ ಜಗದೊಳು ನಾರ್ಯಕುರುಪನೂರು ಶೌರ್ಯದಿ ತರಿದ 9 ಕರಿವರದನ ಚರಣಾರವಿಂದ ಯುಗ ನಿರುತ ಸ್ಮರಿಪತೆರ ಕರುಣಿಸು ಭರದಿ 10 ದುಷ್ಟದ್ವಂಸಕನೆ ಶಿಷ್ಟಪಾಲಶ್ರೀ - ಕೃಷ್ಣನಂಘ್ರಿಯಲಿ ನಿಷ್ಠೆಯ ತೋರೋ 11 ಮಧ್ಯಗೇಹ ಸುತ ಸದ್ವೈಷ್ಣವ ಯತಿ ಅದ್ವೈತಕರಿ ಹರಿ ಸಿದ್ಧಾಂತ ಕರ್ತಾ 12 ಮಿಥ್ಯಾವಾದಿಬಾಯಿ ಎತ್ತದಂತ ಶ್ರು - ತ್ಯರ್ಥವ ಪೇಳ್ದ ಸಮರ್ಥನಹುದು ನೀ 13 ಹರಿಸರ್ವೋತ್ತಮ ಸಿರಿಯು ಅಕ್ಷರಳು ಸುರರೊಳು ನೀನೆ ಪಿರಿಯನು ಸತ್ಯ 14 ಸದಮಲಚರಿತನೆ ಹೃದಯದ ತಿಮಿರವ ವದೆದು ತರಿವುದಕೆ ಉದಿತ ಭಾಸ್ಕರ 15 ಮೂರು ರೂಪಾತ್ಮಕ ಸಾರಿದೆಯನ್ನಯ್ಯs ಪಾರದುರಿತ ಪರಿಹಾರವ ಗೈಸೊ 16 ಹೇಸಿಕೆ ಭವದಲಿ ನಾಶಿಲುಕಿಹೆ ವರ - ದೇಶ ವಿಠಲನ ಸೋಶಿಲಿ ತೋರೊ 17
--------------
ವರದೇಶವಿಠಲ
ಭಾರತೀಶನೆ ಬೇಗ ಬಾರೊ ಮನ್ಮನದಲಿ ಹರಣ ಪ ಚಾರು ಭಾಸ್ಕರ ಕ್ಷೇತ್ರ ಗಾರನೆ ದಶರಥಕುಮಾರ ಸೇವಕಾಗ್ರಣಿ ಅ.ಪ ವಾರಿಧಿ ಲಂಘಿಸಿದ ಶೂರನೆ ಗಿರಿಯಾಶ್ರಯದಿ ತೋರುವಿ ಶ್ರಮಪರಿ- ಹಾರಾರ್ಥಿಗಳ ತೆರ ಘೋರ ಪಾತಕಾಂಬುದ ಸ ಮೀರ ಪಾಲಿಸೆನ್ನನು 1 ತಂದು ನೀಡಿದಿ ದ್ರುಪದ ನಂದಿನಿಯಳಿಗೆ ಸೌ ಗಂಧಿಕ ಪುಷ್ಪ ದಯದಿ ವಂದಿಸುವೆನು ಮನ ಮಂದಿರದಲಿ ಯದು ನಂದನನಂಘ್ರೀ ನೋಳ್ಪಾ ನಂದವ ಕರುಣಿಸೊ 2 ಭೇದಾಬೋಧಿಸಿ ಬಲುಮೋದವ ಗರಿವ ಶಾಸ್ತ್ರ ನೀದಯದಲಿ ರಚಿಸಿ ವಾದಿ ಮದಗಜ ಮೃ ಗಾಧಿಪನೆನಿಸಿದ ಮೋದತೀರ್ಥಾಹ್ವಯಾ- ಗಾಧ ಮಹಿಮ ಗುರು 3 ಸತತ ಸೇವಿಪ ಗರ್ಭವತಿಯಾಗಿರುವ ವಿಪ್ರ ಸತಿಯ ನುಡಿಯ ಲಾಲಿಸಿ ನತಜನ ಪಾಲನೆ ಪ- ರ್ವತ ದಿಂದಿಳಿದಶ್ವತ್ಥ ಕ್ಷಿತಿರುಹ ಮೂಲದಿ ಪಾ- ರ್ವಾತಿ ನಾಥ ಸೇವಿತನೆ 4 ಈ ಸುಕ್ಷೇತ್ರದೊಳು ವಿದ್ವಾಂಸ ದೇವರಾಜಾಖ್ಯ ಸನ್ನುತ ವಾಸಕಾರ್ಪರ ನರ ಕೇಸರಿ ಗತಿ ಪ್ರಿಯ ದಾಸ ಪಾಲಿಸೊ ಗುರು ವ್ಯಾಸರಾಜ ಪೂಜಿತ 5
--------------
ಕಾರ್ಪರ ನರಹರಿದಾಸರು
ಭಾರ್ಗವಿ ಪ ಮಹಾಲಕುಮಿ ಶ್ರೀಪತಿಗೆ ಸಮಾಸಮಳೆನಿಸಿರಲು ಅ.ಪ ಮಡುವ ಸೇರಿದ ಒಡೆಯ ಬಿಡದೆ ಮಂದರಗಿರಿಯ ಪೊಡವಿಬಗೆದು ಒಡೆದು ಕಡುಕ್ರೂರನಾದ ಬಡವನಂತೆ ಬೇಡಿ ಕೊಡಲಿ ಪಿಡಿದಿಹ ಕೆಡುಕ ಮಡದಿಯಾ ಕಳಕೊಂಡು ಕಡಹನೇರಿದ ಕ್ರಿಯಕೆ 1 ಮುಗುಧರನ ಮಾಡಿದ ಶುದ್ಧಸ್ತ್ರೀಯರನೆಲ್ಲಾ ಖಗಗಮನ ತಾ ತುರುಗವನು ಹತ್ತಿದಾಯೋಗ ಭೃಗುಮುನಿಯ ಅಪಚಯಕೆ ಕರವೀರಪುರದಲಿರೆ ನಾಗಗಿರಿಗಿಳಿದ ಪತಿಯ ಪರಿಣಯವನೆಸಗಿದೆ2 ನಾಗರಾಜನ ಕೂಗ ಕೇಳಿದಾಗ್ಹೇಳದಲೆ ಬೇಗ ಸಾಗಿಬಂದಾ ಸರಸಿನಾ ಬಳಿಗೇ ಅಂಗಜನ ವೈರಿಯ ಇಂಗಿತವನರಿತು ಹೆಂಗಳಾರೂಪದಲಿ ಮೋಹಿಸಿದ ಮಾಯಕ್ಕೆ 3 ಕ್ಷಮೆಯಸಾಗರಳೆ ನಿನ್ನ ಅನುಪಮ ಸನ್ಮಹಿಮೆ ಅಮಿತವಾಗಿಹುದು ಜಗಕಾರ್ಯದಿ ಅಮಮ ನೀನಿರಲು ನಾಭಿಕಮಲದಲಿ ಬ್ರಹ್ಮನ ಜ- ನುಮ ತೋರಿದ ಹರಿಯ ಸ್ವರಮಣನ ಕಾರ್ಯಕೆ4 ಗುಣತ್ರಯಂಗಳಭಿಮಾನಿ ಶ್ರೀ ವೇಂಕಟೇಶನರಾಣಿ ಎಣೆಯಂಟೆ ಹರಿಗುಣವನೆಣಿಸುವ ಪ್ರವೀಣೆ ಘನ್ನ ಉರಗಾದ್ರಿವಾಸವಿಠಲನ ಕರುಣ ಪೂರ್ಣಪಾತ್ರಳೆ ಹರಿಯ ವಕ್ಷಸ್ಥಳನಿವಾಸಿನಿಯೇ5
--------------
ಉರಗಾದ್ರಿವಾಸವಿಠಲದಾಸರು