ಒಟ್ಟು 12527 ಕಡೆಗಳಲ್ಲಿ , 133 ದಾಸರು , 6731 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಜೀವವರಾಯ ಪೊರೆವುದು | ಆಂಜನೇಯ ಭವ ಭಂಜನ ಭಯಹರ ಪ ಶ್ರೀರಘುವರನಾಜ್ಞೆಯಿಂ | ವಾರಧಿಯನು ಲಂಘಿಸಿ ಸಾರಿ ಕುಶಲ ವೈದೇಹಿ ಹರುವಿ | ಕ್ರೂರರಾವಣನ ಪುರವನುರವಿದ 1 ಗೋಪತಿ ಕುಲದೀಪಿಕಾ | ದ್ರೌಪದಿ ಮನೋನಾಯಕ ಪಾಪಾತ್ಮಕ ಭೂಪಾಲರಳಿದಗುರು 2 ಶ್ರೀ ಮಹಾಕಲಿಕಾಲದಿ | ನೀ ಮುದಮುನಿ ನಾಮದಿ ಭೂಮಿಯಲ್ಲಿ ಡಂಗುರವಸಾರಿದ 3
--------------
ಶಾಮಸುಂದರ ವಿಠಲ
ಸಡಿಲ ಬಿಡದೆ ಕೈಯ ಪಿಡಿದು ಉದ್ಧರಿಸಯ್ಯ ಬಡವನು ನಾನೈಯ್ಯ - ಕೊಡು ನಿನ್ನ ಸೇವೆಯ ಪ ಒಡಲಿಗೋಸುಗ ಪರರಡಿಗಳ ಪಿಡಿಯುತೆ ಭವ ಕಡಲಿನೊಳಗೆ ಅ.ಪ. ಪಡೆದು ವರಗಳನು ಕಡು ಖೂಳ ರಾವಣ ನಡುಗಿಸಿ ಸುರನರ ಭುಜಗರೊಡೆಯರನ್ನು ಹಿಡಿದು ಮುನೀಶರ ಹೊಡೆದು ಬಡಿದು ಹಿಂಸೆ - ಪಡಿಸುತ್ತ ಯುವತೇರ ದುಡುಕು ಮಾಡುತ್ತಲಿರೆ ಗಡಣೆಗಾರದೆ ಪಾಲ ಕಡಲ ತಡಿಗೆ ಬಂದು ದೃಢ ಭಕ್ತಿಯಲಿ ನಿಂದು ಜಡಜ ಭವಾದ್ಯರು ಪೊಡಮಟ್ಟು ಬೇಡಲು ಕೊಡುತೆ ಅಭಯವನು ಮಡದಿಯನೊಡಗೂಡಿ ಪೊಡವಿಗಿಳಿದು ಬಂದೆ 1 ಸತಿ ಕೌಸಲ್ಯದೇವಿಯ ಬಸುರೊಳು ಸಂಜನಿಸಿ ದಶದಿಶದೊಳು ಯಶ ಪಸರಿಸಿ ಅಸುರೆಯ ಅಸುವನು ಹಾರಿಸಿ ಕುಶಿಕ ಸುತನ ಯಜ್ಞ ಹಸನಾಗಿ ಪಾಲಿಸಿ ನಸುನಗುತಲಿ ಪದಸರಸಿಜ ಸೋಕಿಸಿ ಅಶಮವಾಗಿದ್ದ ಮುನಿಸತಿಯನುದ್ಧರಿಸಿ ಪಶುಪತಿ ಧನುಭಂಗವೆಸಗಿ ಸೀತೆಯ ಕರ ಬಿಸಜವ ನೊಶಗೈದ ಅಸಮ ಸಮರ್ಥ 2 ಚಂದದಿಂ ಶಾಙ್ರ್ಞವನೊಂದಿ ಅಯೋಧ್ಯೆಗೆ ಬಂದು ಪತ್ನಿಯಗೂಡಿ ನಂದದಿಂದಿರುತಿರ್ದು ಬಂದ ಕಾರ್ಯಕೆ ನೆವ ತಂದು ವನಕೆ ಬಂದು ನಿಂದಿರೆ ಜಾನಕಿ ಲಕ್ಷ್ಮಣರೊಡಗೊಂಡು ನೊಂದು ನೃಪನು ದಿನವನ್ನು ಹೊಂದಲು ಕರೆ- ತಂದು ಭರತನಿಗೆ ಅಂದು ರಾಜ್ಯವನೀಯೆ ಬಂದೊಲ್ಲದೆ ಬೇಗ ಬಂದು ವಂದಿಸೆ ಪದ ದ್ವಂದ್ವದ ಪಾದುಕವಂದದಿಂದೊಲಿದಿತ್ತೆ 3 ಚಿತ್ರಕೂಟಾದ್ರಿಯಿಂದತ್ತ ನಡೆದು ನೆಲ ಕೊತ್ತಿ ವಿರಾಧನ್ನ ವತ್ಸ ಲಕ್ಷ್ಮಣ ಸೀತಾ ಯುಕ್ತನು ನೀನಾಗಿ ಪೊರೆಯಲು ಇತ್ತು ಅಭಯವನ್ನು ಉತ್ತಮ ದಂಡಕದಿ ಸ್ತುತ್ಯ ಕುಂಭಜ ಮುನಿಯಿತ್ತ ಧನುವನಾಂತು ಕುತ್ಸಿತ ದನುಜೆಯ ಶಿಕ್ಷಿಸಿ ಖರ ಬಲ ಕತ್ತರಿಸುತೆ ಬೆನ್ಹತ್ತಿ ಮಾರೀಚನ್ನ ತುತ್ತು ಮೂರಾಗಿಸಿದತ್ಯಂತ ಶಕ್ತ 4 ಮೈಥಿಲಿಯಾಡಿದ ಮಾತಿಗೆ ಸೌಮಿತ್ರಿ ಪಾತಕಿ ದಶಮುಖ ಸಾತ್ವೀಕ ವೇಷದಿ ಸೀತೆಯ ನೊಯ್ದೆನೆಂದು ಆರ್ತ ಸ್ವರದಿ ಪೇಳಿ ಮೃತಿಯೊಂದೆ ಖಗಪತಿ ಆತಗೆ ಸದ್ಗತಿಯಿತ್ತು ನಡೆದು ಖಳ ಪೋತಕ ಬಂಧನ ತೋಳ್ಗಳ ಖಂಡಿಸಿ ಪ್ರೀತಿಲಿ ಶಬರಿಗೆ ಮುಕ್ತಿಯ ಪಾಲಿಸಿ ವಾತಸುತನ ಮನ ಪ್ರಾರ್ಥನೆ ಸಲಿಸಿದೆ 5 ಚರಣದಿಂದೊಗೆದು ದುಂದುಭಿಯ ಶರೀರವನ್ನು ತರುಗಳೇಳನು ಒಂದೇ ಸರಳಿನಿಂದುರುಳಿಸಿ ತರಣಿಸುತನ ಭಯ ಹರಿಸಿ ವಾಲಿಯ ಗರ್ವ ಮುರಿಸಿ ವಾನರ ರಾಜ್ಯ ದೊರೆತನ ಸಖಗಿತ್ತೆ ತರುಚರ ತತಿಗಳ ಕೆರಳಿಸಿ ಹರುಷದಿ ಪರನು ಭಕುತನನ್ನು ಕರೆದು ಕುರುಹುಗಳ ನೊರೆದು ಮುದ್ರಿಕೆಯಿತ್ತೆ ಕರುಣವಾರಿಧಿಯೆ 6 ತಿಂಗಳು ಮೀರಿತೆಂದು ಅಂಗದ ಪ್ರಮುಖರು ಕಂಗೆಟ್ಟು ಕುಳಿತಿರೆ ಭಂಗನ ಕಳೆದು ತ - ರಂಗಿಣಿ ಪತಿಯನ್ನು ಲಂಘಿಸಿ ಹನುಮನು ಕಂಗೊಳಿಸುವ ಲಂಕಾ ಪ್ರಾಂಗಣದಲಿ ನಿಂದು ಭಂಗಿಸಿ ಲಂಕಿಣಿಯನು ಸೀತಾಂಗನೆ - ಗುಂಗುರವಿತ್ತುತ್ತಮಾಂಗದ ಮಣಿಯಾಂತು ಕಂಗೆಡಿಸ್ಯಸುರರ ಜಂಗುಳಿಯನು ಭಕ್ತ ಪುಂಗವ ಬರೆ ನಿನ್ನಂಗ ಸಂಗವನಿತ್ತೆ 7 ಹರಿವರರನು ಕೂಡಿ ಶರಧಿಗೆ ಪಯಣಮಾಡಿ ಶರಣ ವಿಭೀಷಣನಿಗೆ ಸ್ಥಿರ ಪಟ್ಟವನು ನೀಡಿ ಭರದಿ ಸೇತುವೆಗಟ್ಟಿ ಅರಿಯ ಪಟ್ಟಣ ಮುಟ್ಟಿ ಧುರಕೆ ದೂತನ್ನ ಅಟ್ಟಿ ಪರಬಲವನು ಕುಟ್ಟಿ ಪುರಕೆ ಉರಿಯನಿಕ್ಕಿ ಶರವರ್ಷಂಗಳ ಕರಿ ರಥಾ ತುರಗ ಪದಾತಿಗ- ಳುರುಳಿಸಿ ದಶಶಿರನುರವನು ಇರಿದು ಪರಮ ಸಾಧ್ವಿಯ ಕರಸರಸಿಜ ಪಿಡಿದೆ 8 ಭಕ್ತ ವಿಭೀಷಣಗೆ ದೈತ್ಯಾಧಿಪತ್ಯವಿತ್ತು ಕೃತ್ತಿವಾಸನ್ನ ಸೇತು ಹತ್ತಿರ ಸ್ಥಾಪಿಸಿ ಪತ್ನಿ ಸಹೋದರ ಮಿತ್ರ ಭೃತ್ಯರ ಕೂಡಿ ಉತ್ತಮ ಪುಷ್ಪಕದಿ ಚಿತ್ರಕೂಟಕೆ ಬಂದೆ ಭಕ್ತನ ಕಳುಹಿ ಸದ್ವøತ್ತವ ಭರತಗೆ ಬಿತ್ತರಿಸಿ ಮಹದುತ್ಸವದಿ ಪುರ ಮತ್ತೆ ಪ್ರವೇಶಿಸಿ ರತ್ನ ಸಿಂಹಾಸನ ಹತ್ತಿ ಶ್ರೀಕಾಂತನೆ ನಿತ್ಯದಿ ಸಲಹುವೆ 9
--------------
ಲಕ್ಷ್ಮೀನಾರಯಣರಾಯರು
ಸಣ್ಣವರುದ್ದುಸಕಾಗಿ ಬಿನ್ನಯಿಸುವೆನು ನಾನುಎನ್ನ ಆಳುವ ದೊರೆಯೆ ನಿನ್ನ ಸ್ವಾತಂತ್ರ್ಯ ಸಂಕಲ್ಪಅರಿತವರಲ್ಲ ಚೆನ್ನಾಗಿ ಸಾಕಬೇಕು ಹರಿಯೆ ಪ. ಸಾಧುಸಂಗಗಳಿಲ್ಲ ಓದಿ ಕೇಳಿದರಲ್ಲಭೇದಅಭೇದಗಳ ಅರಿದುಯಿಲ್ಲಕ್ರೋಧ ಬಿಟ್ಟವರಲ್ಲ ಸಾಧುಗಳು ಯೋಗ್ಯತೆಲಿಹಾದಿ ಏನೀಜೀವರುಗಳಿಗೆ ಹೇ ಸ್ವಾಮಿ 1 ವಸ್ತ್ರದ ಮೂಲವು ಹತ್ತಿಯ ಕಾಳಹುದುಬಿತ್ತಿ ಬೆಳೆಸಿ ಅದರ ವ್ಯಕ್ತಿ ಮಾಡಿವಿಸ್ತರಿಸಿ ನೋಡಿಸಿದರೆ ಪಟ್ಟುವು ಆಗುವುದುವಸ್ತುಗಳ ವ್ಯಕುತಿ ನಿನ್ನಿಂದಾಗಬೇಕು 2 ಮಾಡಲರಿಯರು ತುತಿಯ ನೋಡಲರಿಯರು ನಿನ್ನಬೇಡಲರಿಯರು ತಮ್ಮ ಹಿತದ ಕಾಮಮಾಡುವರು ನಿನ್ನವರ ಮಮತೆಯಾದರು ಮನಸು-ಗೊಡು ಈಪರಿ ಜೀವಗಳಿಗೆ ಗತಿಯೇನೊ 3 ನಿನ್ನಿಂದ ಸೃಷ್ಟಿಯಾದ ಜೀವರುಗಳಿಗಿನ್ನುಇನ್ನು ಮೂರು ಬಗೆಯ ಭಕುತರೊಳಗೆಎನ್ನಿಂದ ಉತ್ತಮ ಮಧ್ಯಮಾಧಮರುಗಳುಇನ್ನಾವ ಇವರ ವಿವೇಕ ನೀ ಬಲ್ಲೆ 4 ಎನಗಿಂದುತ್ತಮರು ಎನಗೆ ಪ್ರಾರ್ಥಿಸುವರುಎನಗೆಂದವರಲೆನಗೆ ಹಿತ ಪೇಳ್ವರುಘನ ಅವರ ಮಧ್ಯಸ್ಥರನು ಹುಡುಕ ತಿಳಿಯದುಅನುವರಿತು ಅವರವರ ಗತಿಗೆ ಅನುಕೂಲನಾಗು 5 ನೀತವನು ನೀ ಬಲ್ಲೆ ಅವರವರ ಸಾಧನವುಯಾತಕೆ ಅವರಗೊಡವೆ ನಿನಗೆ ಎಂಬ್ಯನೀತವಾಗಿದೆ ನೋಡೊ ಪರಸ್ಪರ ಜೀವರಿಗೆಪ್ರಾರ್ಥನೆಯು ಎಂಬುವುದು ಮಾತು ಪುಸಿಯಲ್ಲ 6 ನಿನ್ನವರು ಆಗಿ ಪಾಡನುಬಡುತ ಇಪ್ಪುವರಕಣ್ಣಲಿಕಂಡು ನಾ ಬಿಡುವನಲ್ಲಮನ್ನಿಸು ನಿನ್ನ ಚಿತ್ತ ಮನ್ನಿಸದಲೆ ಪೋಗುಎನ್ನ ಸ್ವಭಾವವಿದೆ ಗೋಪಾಲವಿಠಲ 7
--------------
ಗೋಪಾಲದಾಸರು
ಸಂತ ಚರಣಕೆ ಭಾವದಿ ಮಣಿಯೋ | ಅಂತ ರಂಗದಿ ಬಹಯದುಕುಲಮಣಿಯೋ ಪ ಬಿಡದೇ ಮಾಡಲು ಅವರನುಸರಣಿಯೋ | ಕೊಡುವನು ನಾಮದಿ ಕನಿಭರಣಿಯೋ 1 ವರವರದ್ಹೇಳಲು ಬೋಧಕ ಹಣಿಯೋ | ದೊರೆವುದು ಸುಜ್ಞಾನತನದ ಖಣಿಯೋ 2 ಗುರುಮಹಿಪತಿ ಪ್ರಭು ವಶವರ್ತಣಿಯೋ | ಕರುಣಿಸಿ ಪುನರಪಿ ಭವದಲ್ಲಿ ದಣಿಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತಚರಿಯ ಗೂಢಾ | ತಿಳಿಯದು | ಭ್ರಾಂತರಿಗಿದು ನೋಡಾ ಪ ವೇಷವ ಸಂತರು ದೋರುವದಿಲ್ಲಾ | ಆಶಾಪಾಶಕ ಶಿಲಕುವರಲ್ಲಾ 1 ಹೊರಗಾಚರಿಯು ಲೋಕದ ಸರಿಯಾ | ಇರುತಿಹ ಏನೇನರಿಯದ ಪರಿಯಾ 2 ವಿಷಯ ರೂಪವ ಬ್ರಹ್ಮ ಭಾವನೆ ಬಗೆವಾ | ಪರಿ ಕೇಡಿಹ ಜಗವಾ 3 ತೋರನು ವಾಗ್ವಿಸ್ತಾರ ಬಹಳಾ | ಮೀರಿನೆರಿಹಿಕೊಳ್ಳ ಡಿಂಗರ ಮೇಳಾ 4 ದಾವ ಮಾನವರೆಂದು ಸಂತರ ತಿಳಿವಾ | ರವರವ ನರಕದ ಕುಂಡದಲಿಳಿವಾ 5 ಕೋಟ್ಯಾನುಕೋಟಿಗೊಬ್ಬಿಹನು ಸಾಧು | ಸಾಟಿಲ್ಲವರಿಗೆ ಧರಿಯೊಳಗಿಂದು 6 ಮಹಿಪತಿನಂದನ ಪ್ರಭುವಿನ ದಯವಿನಾ | ಮಹಿಮೆಯ ತಿಳಿಯದು ಹೇಳಲಿನ್ನೇನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸತತ ಚಿಂತಾಮಣಿಯೆ | ಸುರರೊಳಗೆ ನಿನಗೆಣಿಯೆಸಂತರನ ಪೊರೆವಂಥ ಮುನಿಯೆ | ಸುಖ ಜ್ಞಾನ ಖಣಿಯೇ ಪ ಭವ ಭುವನ ನಿಧಿ ತಾರಕನೆ 1 ಭಾರತಿ ಮನೆ | ಕುಂಬಾರನ ವುಳಹಿದನೆಭಾರತದೊಳು ನೀನೆ | ಭೂಭಾರ ನಿಳುಹಿದವನೆ2 ಶಂಖ ಚಕ್ರಾಧರನೆ ನಿ- | ಶ್ಶಂಕ ಮಹಾಮಹಿಮನೆಶಂಕರ ಸುರಪಾಲಕನೆ | ಶಂಕ ಚಕ್ರವಿತ್ತವನೆ 3 ಘಟಿಕಾಚಲ ವಾಸ | ಉತ್ಕøಷ್ಟ ನರಹರಿಯ ದಾಸಭಟ ಜನರಿಗೆ ಬಲು ಲೇಸಾ ಅ- | ಜಟವಾಗಿ ಕೊಡುವ ಸಂನ್ಯಾಸಾ 4 ಸಿರಿ ನಿತ್ಯ ಸ್ಮರಿಸುವ ಗುರು ಶಿರೋರತ್ನಾ 5
--------------
ಮೋಹನದಾಸರು
ಸತತ ನಿನ್ನ ಭಜನೆಯಲ್ಲಿ ಹಿತವ ಪೊಂದಿಸೊ ದೇವ ಪ ಅತುಲ ಮಹಿಮೆಗಳಲ್ಲಿ ಎನ್ನ ಮತಿಯ ಸೇರಿಸೊ ಶ್ರೀಪತೆ ಅ.ಪ ಕಾಲ ಕಳೆಯಿತೊ ದೇವ ನಾಳೆ ನಾಳೆಯೆಂದು ನಿನ್ನ ಪೊಗಳಲಿಲ್ಲವೊ ದೇವ 1 ಯೋಚಿಸದೆಲೆ ನಿನ್ನ ದೈನ್ಯದಿ ನೀಚ ಜನರಲಿ ನಾನು ಕರವ ಯಾಚಿಸುತ್ತ ಶೋಚನೀಯನಾದೆನೊ 2 ಸ್ಥೈರ್ಯದಿಂದ ಮನವು ನಿನ್ನೊಳು ಸೇರದಿರುವುದೋ ದೇವ ಮಾರ ಜನಕನೆ 3 ಕಾಮಕ್ರೋಧದಿಂದ ವಿಷಯ ಪ್ರೇಮಗಳಲಿ ನಾ ನಿನ್ನ ನಾಮ ಮರೆತು ಬಳಲಿದೆನೊ ಕಾಮಿತಪ್ರದ 4 ಸಣ್ಣ ಜನರ ನಡೆನುಡಿಗಳಿಂ ಖಿನ್ನನಾದೆನೊ ದೇವ ಎನ್ನಮೇಲೆ ಕರುಣದಿಂದ ಪ್ರಸನ್ನನಾಗೆಲೊ ದೇವ 5
--------------
ವಿದ್ಯಾಪ್ರಸನ್ನತೀರ್ಥರು
ಸತತ ಸದಮಲ ಪತಿತಪಾವನ ಅತೀತಗುಣತ್ರಯಾನಂದನ ಶ್ರುತಿಗಗೋಚರ ಯತಿಜನಾಶ್ರಯ ಅತಿಶಯಾನಂದಾತ್ಮನ ಭಜಿಸು ಮನವೆ ಧ್ರುವ ಪವಿತ್ರಪ್ರಣವ ಸುವಿದ್ಯದಾಗರ ವ್ಯಕ್ತಗುಣ ಅವಿನಾಶನ ಘವಿಘವಿಸುವಾನಂದಮಯ ರವಿಕೋಟಿ ತೇಜಪ್ರಕಾಶನ ಭವರಹಿತ ಗೋವಿಂದ ಗುರುಪಾವನ ಪರುಮಪುರುಷನ ಭುವನತ್ರಯಲಿಹ್ಯ ಭಾವಭೋಕ್ತ ಸಾವಿರನಾಮ ಸರ್ವೇಶನ 1 ಮೂಜಗದಿ ರಾಜಿಸುತಿಹ್ಯ ತೇಜೋಮಯ ಘನಸಾಂದ್ರನ ಅಜಸುರೇಂದ್ರ ಸುಪೂಜಿತನುದಿನ ರಾಜಮಹಾರಾಜೇಂದ್ರನ ಭಜಕ ಭಯಹರ ನಿಜ ಘನಾತ್ಮಗಜವರದ ಉಪೇಂದ್ರನ 2 ಪರಾತ್ಪರ ಪರಿಪೂರ್ಣ ಪರಂಜ್ಯೋತಿ ಘನಸ್ವರೂಪನ ಪರಂಬ್ರಹ್ಮ ಪರೇಶ ಸುರವರನಾಥ ಗುರುಕುಲದೀಪನ ನಿರಾಳ ನಿರ್ವಿಶೇಷ ನಿರಾಕಾರ ನಿರ್ವಿಕಲ್ಪನ ಕರುಣದಿಂದಲಿ ಹೊರೆವ ಮಹಿಪತಿಸ್ವಾಮಿ ಚಿತ್ಸ ್ವರೂಪನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂತರ ನೆರೆಯಲಿರುವದು ಇಳೆಯೊಳು ಬಲುಪುಣ್ಯ ಪ ಚಂದನ ಗಾಳಿಯಲನ್ಯಗಿಡ ಬೆಲೆಗಾಣುವಂತೆ | ಕುಂದದೆ ಪಾಮರನಾಗುವನು ಮಾನ್ಯಾ 1 ಶ್ರವಣ ಮಾಡಲು ಹರಿಕಥೆ ನಿಜಬೋಧವನು | ಭವದುರಿತ ಸೇರುವದು ಅರಣ್ಯಾ 2 ತಂದೆ ಮಹಿಪತಿಸುತ ಪ್ರಭುವಿನ ಖೂನಾ | ಚಂದದಲಾಗುವದೇ ತಾರ್ಕಣ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರ ನೋಡಿರೈ ಅನಂತನ ಪಾಡಿರೈ | ತಂತುವಿಡಿದು ನಿಶ್ಚಂತದಿ ಮುಕ್ತಿಯ | ಪಡೆದವರಾ ನಿಂದವರಾ ಪ ದ್ವಿತಿಯೋ ಭಾಗೀರಥಿಯೋ | ಹರಿಪ್ರಸಾದವಕೊಂಬುವ ಸಂತರ | ಉದರೋ ಶ್ರೀ ಕೇದಾರೋ | ಹೃದಯೋ ವೇದದ್ಭುಧವೋ | ಕಂಠೋ ಭೂವೈಕುಂಠೋ ಮ 1 ಕರವೋ ಕಾಶಿಪುರವೋ | ವರವೋ ರಾಮೇಶ್ವರವೋ | ಕಿವಿಯೋ ಶಾಸ್ತ್ರದ ಗವಿಯೋ | ಅಮೃತ ಸದನೋ 2 ಹರಿಪದಧ್ಯಾಯಿಸಿ ನೋಡುವ ಸಂತರ | ನಯನೋ ಸ್ವಸುಖದಯನೋ | ಹರಿನಿರ್ಮಾಲ್ಯವನಾಘ್ರಾಣಿಪನಾ | ಶಿಕವೋ ಆವಂತಿಕವೋ | ಧರೆಯೊಳು ಮತ್ತೊಂದನ್ಯಕ ಯರಗದ | ಹಣಿಯೋ ಮುತ್ತಿನ ಮಣಿಯೋ | ಶಿರವೋ ಕಂಚಿಪುರವೋ 3 ಪರರುಪಕಾರ ಬಾಳುವ ಸಂತರ | ಇರವೋ ಕಲ್ಪತರುವೋ | ಧರೆಯೊಳು ಮಾಡುವ ಸಂತರ ವ್ಯವಹಾ | ರಗಳೋ ಹರಿಶೇವೆಗಳೋ | ನುಡಿಯೋಭವದಿಕ್ಕೆಡಿಯೋ | ಹರಿಪ್ರೇಮದಿ ತುಳಕ್ಯಾಡುವ ಜಲಬಿಂ | ದುಗಳೋ ಭಕ್ತಿಯ ಮುಗಳೋ 4 ನುಡಿಯೋ ಸದ್ಗತಿಯಡಿಯೋ | ಭ್ರಮವಿಷಯಕ ಹಚ್ಚದೆ ಕುಂದದಲಿಹ | ಮನವೋ ನಂದನವನವೋ | ಕಮಲಾಕ್ಷನು ಸಂತರ ಆಜ್ಞಾ | ಧಾರಕನೋ ನೆರೆಪಾಲಕನೋ | ಕ್ರಮವರುಹಿದ ಗುರುಮಹಿಪತಿ ನಂದನ | ಪ್ರಿಯನೋ ಕರುಣಾಲಯನೋ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರನ ಸ್ಮರಿಸಿ ಜನರು ಸಂತರನ ಸ್ಮರಿಸಿ ಜನ ನಿಂತಲ್ಲಿ ಕುಳಿತಲ್ಲಿ ಇಂತೆಂತು ಸದ್ಧರ್ಮ ಚರಿಸುವ ಕಾಲಕ್ಕೆ ಅಂತರಂಗದಲಿದ್ದು ಚಿಂತೆಯನು ಬಿಟ್ಟು ಸಿರಿ ಕುಂತುಪಿತನೊಲಿಮೆಯಿಂದ ಪ ವ್ಯಾಸ ಶಿಷ್ಯರಾದ ಗುರುಮಧ್ವ ಮುನಿರಾಯ ಮಾಧವ ಮು ನೇಶ ಅಕ್ಷೋಭ್ಯ ಜಯರಾಯ ವಿದ್ಯಾಧಿರಾಜ ಪೋಷಿತ ಕವೇಂದ್ರತೀರ್ಥರಾ ನ್ಯಾಶಿ ವಾಗೀಶ ಯತಿ ರಾಮಚಂದ್ರ ನಂದ ವ್ಯಾಸ ವಿದ್ಯಾಧೀಶರೂ 1 ವೇದಮುನಿ ಸತ್ಯವ್ರತ ಸತ್ಯನಿಧಿ ರಾಯ ಬೋಧ ಮೂರುತಿ ಸತ್ಯನಾಥ ಸತ್ಯಾಭಿನವ ಕ್ರೋಧ ಜಯ ಸತ್ಯಪೂರ್ಣ ಸತ್ಯ ವಿಜಯ ವಿ ನೋದ ಸತ್ಯಪ್ರಿಯರೂ ಭೇದಾರ್ಥ ಬಲ್ಲ ವಿಭುಧೇಂದ್ರ ರಘುತನಯ ಸ ಮ್ಮೋದ ಜಿತಾಮಿತ್ರ ತೀರ್ಥ ಮುನಿಪ ಸುರೇಂದ್ರ ವಾದಿ ಎದೆ ಶೂಲ ವಿಜಯೀಂದ್ರ ಸುಧಿಯೀಂದ್ರ ಹ ಲ್ಲಾದ ರಾಘವೇಂದ್ರರು 2 ಯೋಗೆಂದ್ರ ಭೂಸುರೇಂದ್ರ ಸುಮತೀಂದ್ರ ಉಪೇಂದ್ರ ಯೋಗಿ ಶ್ರೀಪಾದರಾಯರ ಪೀ ಳಿಗೆಯ ಅತಿ ಸಾಧನವು ವ್ಯಾಸರಾಯರ ಪಾರಂಪರಿಯವ ಲೇ ಸಾಗಿ ಎಣಿಸಿ ಕೊಂಡಾಡಿ ಆಗಮನುಕೂಲ ಮಧ್ವ ಶಾಸ್ತ್ರವನುಸರಿಸಿ ವೇಗದಿಂದಲಿ ಮಹಸಂತರಿಗೆ ಶಿರ ನಿತ್ಯ 3 ಕ್ಷೇತ್ರ ಸರೋವರ ನದಿ ಮಿಗಿಲಾದ ದೇಶದಲಿ ಗಾತ್ರ್ರದಂಡಿಸಿ ಮಾಡಿ ಹರಿಯ ಮೆಚ್ಚಿಸುವ ಪಾ ರತ್ರಯವನೇ ಬಯಸುವ ಪುತ್ರ ಪೌತ್ರರ ಕೂಡಿ ಜ್ಞಾನದಲಿ ಇಪ್ಪ ಚ ರಿತ್ರಾರಾ ಮಹಿಮೆ ಕೊಂಡಾಡಿದವರ ವಿ ಚಿತ್ರವನು ಪೊಗಳುವ ದಾಸದಾಸಿಯರ ಪದ ಸ್ತೋತ್ರ ಮಾಡಿರೋ ಆವಾಗ 4 ಉದಯಕಾಲದಲೆದ್ದು ಸಂತನ ಮಾಲಿಕೆಯನ್ನು ಮೃದು ಪಂಚರತ್ನದಲಿ ನಿರ್ಮಿತವಾಗಿದೆ ಸದಮಲರು ಪೇಳಿ ಸಂತೋಷದಲಿ ಕೇಳಿ ಕೊರಲೊಳಗೆ ಪದರೂಪದಲ್ಲಿ ಧರಿಸಿ ಮದ ಮತ್ಸರವು ಪೋಗಿ ವೈರಾಗ್ಯದಲಿ ಸಾರ ಹೃದಯರ ಬಳಿ ಸೇರಿ ಜ್ಞಾನ ಸಂಪಾದಿಸಿ ಪದೋಪದಿಗೆ ವಿಜಯವಿಠ್ಠಲನ ನಾಮಾಮೃತವ ವದನದಿಂದಲಿ ಸವಿದುಂಬ 5
--------------
ವಿಜಯದಾಸ
ಸಂತರೆನ ಬಹುದೈಯ್ಯಾ ಇಂಥವರಿಗೇ | ಅಂತರಂಗದ ಹರಿ ಏಕಾಂತ ಭಕುತರೀಗೇ ಪ ಸುಖಕ ಮೈಯ್ಯವ ಮರಿಯಾ | ದುಃಖಗಳಿದಿಂದೇ ನೋಯ | ಚಕಿತನಾಗನು ಕುಮತಿ ವಿಕಳ ನುಡಿಗೆ | ಪ್ರಕಟ ಸೌಖ್ಯಕ ಹಿಗ್ಗ | ಸಕಲರೊಳು ಹರಿಯೇ ವ್ಯಾಪಕ ವರಿದು ನಿರ | ಹಂಕೃತಿಯನುಳ್ಳರಿಗೇ 1 ಪರಮ ಭಾಗವತೆನಿಸಿ | ಪರರ ಮನಿಗಳಿಗ್ಹೋಗಿ | ಪಿರಿದು ವಿದ್ಯವ ತೋರಿ ಪೊರೆಯ ನೋಡಲಾ | ಪರಧನಕ ಕರವಿಕಲ | ಪರಸತಿಯರಿಗೆ ಕುರುಡ | ಪರರ ನಿಂದೆಗೆ ಮೂಕ ಪರವಶ್ಯಾದರಿಗೆ 2 ವೇಷಡಂಭಕವಿಲ್ಲಾ | ಕ್ಲೇಶ ಕರ್ಮಗಳಿಲ್ಲಾ | ಈ ಸಿರಿಯ ಸುಖದ ಮನದಾಶೆಯಿಲ್ಲಾ | ವಾಸುದೇವನ ಪದ | ಧ್ಯಾಸದನುಭವದಿ ನಟ | ಪರಿ ಸಂಸಾರ ಲೇಶ ದೋರ್ವರಿಗೆ 3 ಹರಿಯ ನಾಮವ ನೆನೆದು | ಹರಿಯ ಕೀರ್ತನೆಯಲ್ಲಿ | ಹರುಷಗುಡಿಗಟ್ಟಿ ತನು ಮರದು ನಿಂದು | ಬರುವ ಪ್ರೇಮಾಂಜಲಿಯ | ಭರಿತಲೋಚನನಾಗಿ | ತರಿಸಿ ತಾರಿಸುವ ಘನಕರುಣವಂತರಿಗೆ 4 ಇಂತು ದುರ್ಗಮವಿರಲು | ಸಂತರಾವು ನೀವೆಂದು | ಸಿಂತರವ ಹೋಗಿ ಜನ ಸಿಂತರಿಸುವಾ | ಭ್ರಾಂತ ಮೆಚ್ಚುವನಲ್ಲಾ | ಶಾತಗುರು ಮಹಿಪತಿ ಸ್ವಂತನುಜಗೆಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರೆನಬಹುದುದಯ್ಯ ಇಂತಿವರಿಗೆ ಅಂತರಂಗಲಿ ಹರಿಯ ಏಕಾಂತ ಭಕ್ತರಿಗೆ ಧ್ರುವ ಸುಖಕ ಮೈಯವ ಮರಿಯಾ ದು:ಖಗಳಿದಿರಿಡೆ ನೋಯಾ ಚಕಿತನಾಗನು ಕುಮತಿ ವಿಕಳ ನುಡಿಗೆ ಪ್ರಕಟಸ್ತೋತ್ರಕ ಹಿಗ್ಗ ನಿರಹಂಕೃತಿಯನ್ನುಳ್ಳರಿಗೆ 1 ಕ್ಲೇಶ ಕರ್ಮಗಳಿರಲು ಈ ಶಿರಿಯ ಸುಖದ ಮನದಾಶೆವಿರಲು ವಾಸುದೇವನ ಪದ ಧ್ಯಾಸದನುಭವ ದಿಟ ವೇಶ ಹರಿ ಸಂಸಾರ ಲೇಶದೋರ್ವರಿಗೆ 2 ಪರಮ ಭಾಗವತೆನಿಸಿ ಪರರ ಮನಗಳಿಗ್ಹೋಗಿ ಕರ ವಿಕರ ಪರಸತಿಯರಿಗೆ ಕೂರವು ಪರನಿಂದೆಗೆ ಮೂಕ ಪರವಶಾದರಿಗೆ 3 ಹರಿಯ ನಾಮವ ನೆನಿದು ಹರಿದು ಕೀರ್ತನೆಯಲ್ಲಿ ಹರುಷಗುಡಿಗಟ್ಟಿ ತನುಮರದು ನಿಂದು ಬರುದೆ ಪ್ರೇಮಾಂಜಲಿಗೆ ಭರಿತ ಲೋಚನನಾಗಿ ತರಿಸಿ ತಾರಿಸುವಂದ್ಯನ ಕರುಣವಂತರಿಗೆ 4 ಇಂತು ದುರ್ಗಮವಿರಲು ಸಂತರಾವು ನೀವೆಂದು ಸಿರಿತರವ ಹೋಗಿ ಜನ ಸಿಂತರಿಸುವಾ ಭ್ರಾಂತವೇಷಕ್ಕೆ ಸಿರಿಕಾಂತ ಮೆಚ್ಚನಲ್ಲಾ ಶಾಂತಗುಣ ಮಹಿಪತಿ ಸ್ವಂತಗೆಂದಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತಿ ಸರಸದಿ ಶಾಲೆಯೊಳು ಬಂದು ಪ ಪಿತನಿಂದಲಿ ಪತಿನಿಂದ್ಯವ ಕೇಳಿದನೆಂದು ಬಂದು ಅ.ಪ. ಧಡಿಗೆ ಬಿಡುಬಿಡುತಲಿ ಕಣ್ಣೀರಿಡುತಲಿ ಕೆಂಡದಿ ಧುಮುಕಲುಜಡೆಧರ ಕೇಳಿದಾಕ್ಷಣ ಜಡೆ ಅಪ್ಪಳಿಸಲು ಮೇದಿನಿಗೆ ಸಂದುದಿತ ಸದಾಶಿವನೆ ಬಂದು ಭಂಜಿಸಲು ಮತ್ತೆಮೇಲು ಬಂದು 1 ಮಾವನ ಶಿರವಳಿದಾ ಮತ್ತೆ ಮಾವನಿಂದಲಿ ತುತಿಸಿಕೊಂಡ ಮಂದಜಾಸನ ಬಂದು ಬಹುಪರಿ ಪೇಳಿದಾಮಂದ ಜನರ ಪೊರೆದಾ ಮಾರನಯ್ಯನಾ ಕರುಣವ ಪಡೆದಾಮತ್ತೆ ಮಾರನ ಮದ ಮುರಿದಾ ಮಾರನ ಬದುಕಿಸಿಮಾರಿಗೆ ವರವಿತ್ತು ನಾರಿಗೆ ತೋರಿಸೆ ಬಂದು2 ನಸುನಗುತಲಿ ಬಸವನು ಭೃಗು ಋಷಿಗಳ ಮೀಸೆಗಳ್ಳುದಾ ಬಸುಮಾದರ ಬಹುಪರಿಯಾಗದ ಬಸುಮಗೈದಾಳಳಿದಾ ಭಾರ್ಯಳ ಮೊರೆಕೇಳಿ ಭಾರವನಿಳುಹಿಪ ಪರಭಾರೆಪುರಕೆ ಪೋದಾಭಾರತೀಶ ಪಿತ ತಂದೆವರದಗೋಪಾಲವಿಠಲನಭಜಿಸುತ ಬಂದು 3
--------------
ತಂದೆವರದಗೋಪಾಲವಿಠಲರು
ಸಂತಿಯ ಕೆಲವುರ ವಾಸನ ಸ್ತೋತ್ರ (ಲಿಂಗಸುಗೂರಿನ ಹತ್ತಿರವಿರುವ ಸಂತಿಕೆಲೂರ ಗ್ರಾಮದಲ್ಲಿಯ ಪ್ರಾಣದೇವರು) ಸಂತಿಯ ಕೆಲವುರವಾಸ ಭಾರತಿ |ಕಾಂತನು ಶ್ರೀ ಹರಿದಾಸಾ ||ಸಂತಸ ಸೇವಿಪರಘ ಓಡಿಸಿ | ನೀ |ಶ್ಚಿಂತರಮಾಡಿ ಪೊರೆವ ದಯಾಳೋ ಪ ದಾಶರಥಿಯ ಪದಕೆರಗೀ | ನಿಂದುಲೇಸಾಗಿ ತುತಿಸುವ ಯೋಗೀ ||ಸಾಸಿರ ನಾಮನ ರಾಣಿಯಕಂಡು |ತೋಷದಿ ಸ್ವಾಮಿಗೆ ವಾರ್ತಿಯ ಪೇಳಿದ 1 ಕುಂಚಿ ಕುಮಾರಕ ನೆನಸೀ | ಮಹಹಂತ ಕೌರವರನೊರಸೀ ||ಕಾಂತಿಗೆ ಸೌಗಂಧಿಕ ಪುಷ್ಪವ ಮುಡಿಸಿ | ಶ್ರೀಕಾಂತನ ಪ್ರಿಯ ಭೂಭಾರವನಿಳುಹಿದ 2 ಆನಂದ ತೀರಥರಾಗಿ | ಪರಮಾನಂದದಿ ಕುಮತವನೀಗಿ ||ನಂದನ ಸುತ ಶ್ರೀಶ ಪ್ರಾಣೇಶ ವಿಠಲಾ |ನಂದನೆ ಪರನೆಂದು ಡಂಗುರ ಸಾರಿದ 3
--------------
ಶ್ರೀಶಪ್ರಾಣೇಶವಿಠಲರು