ಒಟ್ಟು 8036 ಕಡೆಗಳಲ್ಲಿ , 131 ದಾಸರು , 4635 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಶೇಖರ ರಕ್ಷಿಸೋ ಎನ್ನ ತಂದೆ ಶಂಕರ ಹಿಂದೆ ಪೊಂದಿದ ದೇಹದ ಮತ್ತಿಂದು ಹಿಡಿಯುತ ಪ ಹಿಂದೆ ಬಿಸುಟೊಡಲು ಮರು ಕೊಳಿಸಿ ಸಾರಿ ಬಂದುದು ತಂದೆ ತಾಯಿಯ ಗಣನೆ ಉರ್ವಿಸಿಕವನು ಮೀರಿತು ಅಂದು ಮೊದಲು ಜನನೀಸ್ತನವನುಂಡು ಪಾಲಸವಿದುದು ಇಂದು ಕಂದು ಗೊರಳನೆ 1 ಕಾಲ ಬಾಲವನಿತೆ ಬಾಳು ಬದುಕಿನೊಳಗೆ ತೊಳಲಿ ಬಳಲಲು ಕಾಯದೊಳಗೆ ಮುಸುಕಲು ಕೊಳುವೋದೆ ಯಮಗೆ ಶೂಲ ಪಾಣಿ ನೀಲಕಂಠನೆ 2 ಎನ್ನದಾನದೆಂಬ ಹಮ್ಮವಶದಿ ಸುಮ್ಮನೆ ಹೊನ್ನು ಹೆಣ್ಣು ಮಣ್ಣು ಮೂರು ತನ್ನದೆಂದು ನಂಬುತ ಬನ್ನ ಬಟ್ಟು ಸಾಯುತ ಭವದಶರಧಿ ಬೇಗೆಯನ್ನು ಈಸಲಾರೆನೋ 3 ಸಿಂಧು ತೆರೆಯೊಳು ಮಂದ ಗಜವು ಕುಣಿಯೋಳ್ ಬಿದ್ದು ಏಳಲಾರದಂದದಿ ಇಂದ್ರಜಾಲದೊಳಗೆ ಸಿಲುಕಿಮಂದಗೆಟ್ಟು ನೊಂದೆನೋ 4 ದುರಿತ ಮರಣ ಕಾಲದೊಳಗೆ ನಾಮಸ್ಮರಣೆ ಯಾದಗುವಂದದಿ ತರಣಿ ತಮವ ಕಡಿಸಿ ಧರೆಯ ಬೆಳಗುವಂತೆ ಹೃದಯದಿ ಕರುಣದಿಂದಲಿ ನಿರುತಸಲಹೋ ಇಕ್ಕೆರಿ ಅಘೋರೇಶಲಿಂಗನೆ 5
--------------
ಕವಿ ಪರಮದೇವದಾಸರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇಂದು ಸಾರ್ಥಕವಾಯ್ತು ಹಿಂದೆ ಮಾಡಿದ ಪೂಜೆ ಪ ಬಂದು ಗುರುವರ್ಯರ ಬೃಂದಾವನವ ನೋಡಿ ಅ.ಪ ಮಂಗಳತರಂಗಿಣಿಯ ತಂಗಾಳಿ ಸೇವಿಸುತ ತುಂಗ ಫಣಿಶಾಯಿಯ ಅಪಾಂಗಪಾತ್ರರ ಕಂಡು1 ಜ್ಞಾನ ವೈರಾಗ್ಯ ಭಕ್ತಿಗಳ ಮೂರ್ತಿಗಳಂತೆ ನಾನಾಭರಣ ಸೇವೆ ಅರ್ಪಿಸಿದವರ ಕಂಡು 2 ಸ್ವಾಂತವನು ಗೆಲಿದು ಪ್ರಸನ್ನ ಮಾನಸರಾಗಿ ಶಾಂತಿಯನು ಪಡೆದ ಏಕಾಂತ ಭಕುತರ ನೋಡಿ 3
--------------
ವಿದ್ಯಾಪ್ರಸನ್ನತೀರ್ಥರು
ಇಂದು ಸುದಿನ ಶುಭದಿವಸ ನೋಡಿ ಬಂದು ಕೂಡಿದ ಸದ್ಗುರು ದಯಮಾಡಿ ಧ್ರುವ ಮುನ್ನ ಮಾಡಿದ ಸುಪಣ್ಯ ಒದಗಿತು ಭಿನ್ನವಿಲ್ಲದೆ ಸುಚಿನ್ಹ ಹೊಳೆಯಿತು ಧನ್ಯಗೈಸುವ ಸುಫಲದೋರಿತು ಎನ್ನ ಜನುಮ ಸಾಫಲ್ಯವಾಯಿತು 1 ಸ್ವಾಮಿ ಕಂಡೆ ಕಣ್ಣಿನೊಳಂತರಂಗ ಬ್ರಹ್ಮಾನಂದ ಭಾಸುತದೆ ಸರ್ವಾಂಗ ಸಮಾರಂಭದೋರುತದೆ ಸುಸಂಗ ಒಮ್ಮಿಂದೊಮ್ಮೆ ಬಂದ ನೋಡಿ ಶ್ರೀರಂಗ 2 ಗುಹ್ಯ ಒಡೆದು ಹೇಳಲು ಸುವಿಚಾರ ದಯವಿಟ್ಟು ಬಂದ ನೋಡಿದರ ಇಹಪರಕೆ ಸದ್ಗುರು ಸಹಕಾರ ಮಹಿಪತಿಗೆ ಮಾಡಿದ ಮನೋಹರ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸುದಿವಸ ನೋಡಿ ಕಂಡೆವು ಕಣ್ಣಾರೆ ಚಂದವಾಗಿ ಗುರು ಪೂರ್ಣಮಾಡಿದ ಮನೋಹರ ಧ್ರುವ ಕೇಳದಾ ಕೇಳಿದೆವು ಫೇಳಿಸುವದೆನ್ನೊಳಗೆ ಹೇಳೇನೆಂದರೆ ಬಾರದು ಸುಳವು ಇನ್ನೊಬ್ಬರಿಗೆ ತಾಳಮೃದಂಗ ಭೇರಿ ಭೋರಿಡುತ ಒಳ ಹೊರಗೆ ತಿಳಿದೇನಂದರದೇ ನೋಡಿ ಉಲುವು ತಾ ತನ್ನೊಳಗೆ 1 ಕಾಣದ ಕಂಡೆವು ಖೂನ ತಾ ಕಣ್ಣಿನ ಕೊನೆಯೊಳಗೆ ಪ್ರಾಣ ಪಾವನ್ನವಾಯಿತು ಪುಣ್ಯ ಪ್ರಭೆಯೊಳಗೆ ಭಾನುಕೋಟಿತೇಜ ಧನ್ಯಗೈಸಿದ ಎನಗೆ ಸ್ವಾನುಭವದ ಸುಖ ಎದುರಿಟ್ಟಿತು ಜಗದೊಳಗೆ 2 ನುಡಿಯು ಕೇಳಿದಂಥ ನುಡಿಗೇಳಿದೆವಿಂದು ಕಡಿಗಾಯಿತು ನೋಡಿ ಹುಟ್ಟಿಬಾಯ ಜನ್ಮಸಂದು ವಿಡಿದು ಗುರುಪಾದ ಜನ್ಮಸಾರ್ಥಕಾಯಿತಿಂದು ಪಡೆದ ಮಹಿಪತಿ ನಿಜಾನಂದ ವಸ್ತುವಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸೈರಿಸಿರಿ ಶ್ರೀಕೃಷ್ಣನ ತಪ್ಪ ಪ ಮುಂದಕೆ ನಿಮ್ಮ ಮನೆಗೆ ಬಾರನಮ್ಮಅ ಮಗುವು ಬಲ್ಲುದೆ ಇಷ್ಟು ಬೆಣ್ಣೆಯ ಕದ್ದರೆಬಿಗಿಯ ಬಹುದೇ ಶ್ರೀ ಚರಣವನುಅಗಣಿತ ಮಹಿಮನ ಅಂಜಿಸಲೇಕಮ್ಮಬಗೆಯ ಬಾರದೆ ನಿಮ್ಮ ಮಕ್ಕಳಂತೆ 1 ಹಸುಮಗುವನು ಕಂಡು ಮುದ್ದಿಸಲೊಲ್ಲದೆಹುಸಿಗ ಕಳ್ಳನೆಂದು ಕಟ್ಟುವಿರಿವಸುಧೆಯೊಳಗೆ ನಾನೊಬ್ಬಳೆ ಪಡೆದೆನೆ ನಿಮ್ಮಹಸು ಮಗುವಿನಂತೆ ಭಾವಿಸಬಾರದೆ 2 ಎಷ್ಟು ಸಾರಿಯು ನಾ ಬೇಡವೆಂದರೆ ಕೇಳದುಷ್ಟ ಮಕ್ಕಳ ಕೂಡೆ ಒಡನಾಟವಕಟ್ಟಿದ ನೆಲುವಿನ ಬೆಣ್ಣೆಯನೀವೆನುಬಿಟ್ಟು ಕಳುಹಿರಮ್ಮ ಆದಿಕೇಶವನ 3
--------------
ಕನಕದಾಸ
ಇಂದು ಹೊಳೆವುತದೆ ಸುಚಿನ್ಹಬೋಧ ತಂದಿ ಕಂಡೆವೇನೊ ಸದ್ಗುರು ಶ್ರೀಪಾದ ಧ್ರುವ ಪ್ರಾಣದೊಡಿಯ ಬಾವ್ಹಾಂಗನೇನೊ ಪೂರ್ಣಕ್ಷಣಕೊಮ್ಮಾಗುತದೆ ಸುಶಕುನ ಕಣ್ಹುಬ್ಬಾರುತದೆ ಬಲದೆನ್ನ ಚೆನ್ನಾಗ್ಯಾಗಮ್ಮ ತಾನೇನೊ ಸುಪ್ರಸನ್ನ 1 ತೋಳಭುಜಹಾರುತದೆ ಬಲುಬಹಳ ವ್ಯಾಳ್ಯಕೊದಗಿಬಂದೆನೇನೊ ದಯಾಳ ಸುಳವುದೋರುತದೆ ನಿಶ್ಚಳ ಸುಳಿದೊಮ್ಮೆ ಬಂದನೇನೊ ಕೃಪಾಳ 2 ಬುದ್ಧಿ ಮನಸಿಗಾಗುತದೆ ವಿಕಾಸ ಸಿದ್ಧಿಸೋರುವ್ಹಾಗಾದೆ ಪ್ರಕಾಶ ಸದ್ಯ ಹೃದಯವಾಗುತದೆ ಉಲ್ಹಾಸ ಸಾಧ್ಯವಾಗುವ್ಹಾಂಗ್ಹಾನೇನೊ ತಾ ಸರ್ವೇಶ 3 ಪ್ರೇಮ ಉಕ್ಕಿಬರುದೆನ್ನೊಳಗೆ ಸ್ವಾಮಿದರುಷಣಾದೀತೇನೊ ತಾ ಈಗ ರೋಮರೋಮವು ಬಿಡದೆ ಎನಗೆ ಬ್ರಹ್ಮಾನಂದ ಭಾಸುತದೇನೊ ಬ್ಯಾಗ 4 ಖೂನದೋರಿಬರುತದೆನಗೊಂದು ಭಾನುಕೋಟಿ ತೇಜ ತಾ ಬಾವ್ಹಾಂಗಿಂದು ದೀನ ಮಹಿಪತಿಗುರು ಕೃಪಾಸಿಂಧುಮನೋಹರ ಮಾಡುವ್ಹಾಂಗ್ಹಾನೆ ಬಂದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದುವದನೆ ಪಾರ್ವತಿಯೆ ನಾ ಇಲ್ಲಿಗೆ ಬಂದೆನು ಬಾಗಿಲು ತೆಗೆಯೆ ಜಾಣೆ ಬಂದೆನು ಬಾಗಿಲು ತೆಗೆಯೆ 1 ಬಂದವರ್ಯಾರೀ ವ್ಯಾಳ್ಯದಿ ಬಾಗಿಲು ಬಂದು ತೆಗೆಯೊರ್ಯಾರಿಲ್ಲ ಈಗ ಬಂದು ತೆಗೆಯೊರ್ಯಾರಿಲ್ಲ 2 ಅಂಗನಾಮಣಿ ಕೇಳೆ ಗಂಗಾಧರೆನಿಸಿದ ಚಂದ್ರಶೇಖರ ನಾ ಬಂದೀನೆ ಜಾಣೆ ಚಂದ್ರಶೇಖರ ನಾ ಬಂದೀನೆ 3 ಸಿಂಧುರಾಜನ ಸತಿಸುತರನ್ಹೊತ್ತಿಲ್ಲಿಗೆ ಬಂದ ಕಾರಣವೇನು ನೀನು ಅವ ರಿಂದ ಕಾರಣ ಮತ್ತೇನು 4 ಪಶುಪತಿ ನಾ ಬಂದೆ ಕುಶಲದಿ ಬಾಗಿಲು ತೆಗೆಯೆ ಜಾಣೆ ಕುಶಲದಿ ಬಾಗಿಲು ತೆಗೆಯೆ 5 ಪಶುಗಳಿಗೆಲ್ಲ ಪತಿಯಾದರೆ ನಿನ ಕೊಂಬು ಹಸನಾಗಿ ತೋರಿಸೊ ಎನಗೆ ಕೊಂಬು ಹಸನಾಗಿ ತೋರಿಸೊ ಎನಗೆ 6 ಸರ್ವಶರೀರದಲ್ಲೆತ್ತಿಕೊಂಡಿರುವಂಥ ಶ್ರೇಷ್ಠ ಶಿವನು ನಾ ಬಂದೀನೆ ಜಾಣೆ ಶ್ರೇಷ್ಠ ಶಿವನು ನಾ ಬಂದೀನೆ 7 ಸರ್ವ ಸೇರಿರುವಂಥ ಹುತ್ತ ನೀನಾದರೆ ಇತ್ತ ಬರುವೋದುಚಿತಲ್ಲ ಪೋಗೊ ಇತ್ತ ಬರುವೋದುಚಿತಲ್ಲ 8 ಕಾಂತೆ ಪಾರ್ವತಿ ನೀಲಕಂಠ ನಾ ಬಂದೀನಿ ಸಂತೋಷದಿ ಬಾಗಿಲು ತೆಗೆಯೆ ಸಂತೋಷದಿ ಬಾಗಿಲು ತೆಗೆಯೆ 9 ಕಂಠದೊಳಗೆ ಕಪ್ಪಿದ್ದರೆ ನೀ ನವಿ- ಲಂತೆ ಕುಣಿದು ತೋರಿಸೆನಗೆ ನವಿ- ಲಂತೆ ಕುಣಿದು ತೋರಿಸೆನಗೆ 10 ಫಾಲಾಕ್ಷ ನಾ ರುಂಡಮಾಲೆ ಧರಿಸಿದಂಥ ಶೂಲಿಯು ನಾನು ಬಂದೀನೆ ತ್ರಿ- ಶೂಲಿಯು ನಾ ಬಂದೀನೆ11 ಮೂರು ಶೂಲೆಗಳ್ಯಾವ್ಯಾವ ಕಡೆಯಲುಂಟು ಭಾಳ ಬಲ್ಲವರಲ್ಲೆ ಪೋಗಯ್ಯ ನೀ ಭಾಳ ಬಲ್ಲವರಲ್ಲೆ ಪೋಗಯ್ಯ 12 ಸ್ಥಾಣು ನಾ ಬಂದೀನಿ ಜಾಣೆ ನೀ ಬಾಗಿಲು ತೆಗೆಯೆ ಒಳ್ಳೆ ಜಾಣೆ ನೀ ಬಾಗಿಲು ತೆಗೆಯೆ 13 ಸ್ಥಾಣು ನೀನಾದರೆ ವೇಣುಮದ್ದಲೆ ಮಾಡೊ ಜಾಣರ ಮನೆಗೆ ನೀ ಪೋಗಯ್ಯ ಒಳ್ಳೆ ಜಾಣರ ಮನೆಗೆ ನೀ ಪೋಗಯ್ಯ 14 ಗಜ ಚ- ರ್ಮಾಂಬರಧಾರನು ನಾನೇ ಚ- ರ್ಮಾಂಬರಧಾರನು ನಾನೇ 15 ವೈರಿ ಭಸ್ಮಾಂಗವ ಧರಿಸಿz À ಸಾಮಜ ವಸನವ ನೋಡಿ ಇರ- ಲಾರೆನು ನಿನ್ನೊಡಗೂಡಿ 16 ಭೂತಗಣಂಗಳ ನಾಥನಾಗಿರುವೊ ಪ್ರ- ಖ್ಯಾತನು ನಾನು ಬಂದೀನೆ ಸದ್ಯೋ- ಜಾತನು ನಾನು ಬಂದೀನೆ 17 ಭೂತಗಣವ ಕೂಡಿ ಯಾತಕೆ ಬರುವುದು ಭೀತಿ ಬಡುವೆ ಮುಂಚೆ ಸಾಗೋ ನಾ ಭೀತಿ ಬಡುವೆ ಮುಂಚೆ ಸಾಗೋ18 ಮಾತಿಗೆ ಮಾತನಾಡುವೋರೆ ಪಾರ್ವತಿ ಕೇಳೆ ಮೂಕನಂತಿರುವೆನೆ ನಾನು ಇನ್ನು ಮೂಕನಂತಿರುವೆನೆ ನಾನು 19 ಮೂಕನಂತಿರುವುದ್ವಿವೇಕ ಭೀಮೇಶಕೃಷ್ಣ- ನ್ನ ಕಾರುಣಕೆ ಪಾತ್ರಳೇನೋ ನಿನಗೆ ನಾ ಕೈಯ ಮುಗಿವೆ ಬಾ ನೀನು 20
--------------
ಹರಪನಹಳ್ಳಿಭೀಮವ್ವ
ಇದುವೆ ಕೈವಲ್ಯವು | ಸದ್ಗುರುವೇ | ನಿಮ್ಮಿಂದೆವೆ ಕೈವಲ್ಯವು | ನಂದನ ಕಂದ ಮುಕುಂದನ | ಛಂದದಿ ನೆನೆವುತಾನಂದದಲಿಪ್ಪರಾ ಪ ಭಂಗ ಬಡುವಾ ಭವದಾ | ಚಿರಳಿಯೆನಿಸ್ಸಂಗ ಶಸ್ತ್ರವ ವಿಡಿದಾ | ಹಂಗವಳಿದು ದೇಹದಾ ಪ್ರಪಂಚದ ರಂಗನೊಳಗ ಬೆರೆದಾ | ಅನುದಿನ | ಮಂಗಳ ಹರಿಚರಿತಂಗಳ ಕೇಳುವಗಿಂದೇ 1 ಕಂತು ಪಿತನ ಧ್ಯಾಯಿಸೀ ಮನಸಿನಿಂದಾ | ಅಂತರಂಗದಿಪೂಜಿಸೀ | ಶಾಂತಿಯ ಗುಣ ಧರಿಸೀ | ತಂತು ವಿಡಿದು ನಿಶ್ಚಿಂತದಿ ಇಹಪರ ಭ್ರಾಂತಿಯಳಿದು ವಿಶ್ರಾಂತಿಯ ಪಡೆದವಗಿದೇ2 ಮುಂದಾಗುವ ಮುಕ್ತಿಯನು ಗುರುದಯದಿ | ಇಂದೇಕಾಣುತ ಧನ್ಯನು | ಸಂದೇಹ ವಳಿದನು ತುರ್ಯಾತೀತಾ | ವಂದಿಸಿ ಭಾವದಿ ತಂದೆ ಮಹೀಪತಿ | ದ್ವಂದ್ವ ಚರಣವನು ಹೊಂದಿದ ನಂದನಗಿದೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದುವೇ ಸಾಧಕ ವೃತ್ತಿಗಳು | ಇದೇ ಅಬಾಧಕ ಯುಕ್ತಿಗಳು ಪ ಸದ್ಗುರು ಪಾದಕ ಸದ್ಭಾವದಿ ನಂಬಿ | ಹೃದ್ಗತ ಗುಜವನು ಪಡೆದಿಹನು | ಸದ್ಗತಿಕಾಂಕ್ಷಿತ ಹರಿ ಕೀರ್ತನೆಗಳ | ಉದ್ಗಾರ ಪ್ರೇಮದ ಮಾಡುವನು 1 ಬಲ್ಲವನು ಕಂಡೆರಗಿ ಸಿದ್ಧಾಂತದಾ | ಉಳ್ಳಸದ್ಭೋಧವ ಕೇಳುವನು | ಮೆಲ್ಲನೆ ಮನನದಿ ಧ್ಯಾಸವು ಬಲಿಯುತ | ಕ್ಷುಲ್ಲರ ಮಾತಿಗೆ ಮನ-ವಿದನು 2 ಅನ್ಯರ ಸದ್ಗುಣ ವಾರಿಸಿ ಕೊಳುತಲಿ | ತನ್ನವಗುಣಗಳ ಜರಿಸಿದವನು | ಸನ್ನುಡಿ ಬಿರುನುಡಿಗಳಕದೆ ಕುಜನರ | ಮನ್ನಿಸಿ ಶಾಂತಿಯನು ಜಡಿದಿಹನು 3 ಬುದ್ಧಿಯ ಹೇಳಿದರೆ ನೀ ಹಿತ ಬಗೆಯದೆ | ತಿದ್ದುದರಂದದಿ ತಿದ್ದುವನು | ಇದ್ದಷ್ಟರೊಳಗೆ ಸಾರ್ಥಕದಲಿ ದಿನ | ಗದ್ದಿರ ಹೊರಿಯಲು ಉದರವನು 4 ಸರ್ವರೊಳಗೆ ಬಾಗಿ ಶಮೆ ದಮೆಯಿಂದಲಿ | ಗರ್ವವ ತ್ಯಜಿಸಿಹ ಜನರೊಳಗೆ | ಸರ್ವಭಾವದಿ ಗುರು ಮಹಿಪತಿ ಸ್ವಾಮಿಯು | ಅರ್ವವ ಜಗಸನ್ಮತನು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದೆ ಕುಂದುಗಳನು ಹರಿಸು ಪ ಕಂದನಮುಂದಕೆ ಬರುತಲಿ ಚಂದವಾದ ನಿನ್ನಯ ಮುಖ ಚಂದ್ರಮನಂ ತೋರಿ ನೇತ್ರೇಂದ್ರಿಯಕಾನಂದ ಬೀರೈ ಅ.ಪ ಶ್ರೀವರ ನಿನ್ನ ಭಕ್ತರ ಭಾವಿಸುತ್ತ ತಪ್ಪ ಕ್ಷಮಿಸಿ ನೋವಕೊಡದೆ ರಕ್ಷಿಸುವ ಕೃಪಾಳುವು ನೀನೈ ದೇವಕಿನಂದನ ನಿನ್ನಯ ಪಾವನತರ ಪದಪದ್ಮಕೆ ನಾ ವಿನಯದಿ ನಮಿಸಿ ತಳಿವೆ ಹೆಜ್ಜಾಜಿಕೇಶವಾ ಓ ವಿಭೀಷಣಹಿತಕರ ಸಾವಕಾಶ ಮಾಡದೆ ನೀ ಕಾವುದೆನ್ನ ಸಮಯವರಿತು ಸಾಮಗಾನಸನ್ನುತ 1 ಚಿಟ್ಟೆಸ್ವರಕ್ಕೆ ಭವ ಭಯ ಭಂಗ ವರಭಕ್ತೇಷ್ಟ ದಾತಾರ ದೈತ್ಯಾರಿ ವೈಕುಂಠ ಪುರಹರನುತ ಶುಭಗುಣಯುತ ಪರಮಚರಿತ ನಿರುಪಮಪದ ಕು ವರ ಧ್ರುವನಿಗೊಲಿದ ದ್ವಿಜನ ಪೊರೆದ ಕರುಣಾ ಧರಣೀ ಭರಹರಣಾ ಪಾವನಚರಣ ಜಾಜಿಕೇಳುವ 2
--------------
ಶಾಮಶರ್ಮರು
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಸಮಯವು ನೋಡು ಸಖನೇ ರತಿ ಕ್ರೀಡೆಗೆ ಶುಭಕಾಲ ಪ ರತಿಪತಿಪಿತ ನಿನ್ನತಿಶಯ ಹಿತವಾಗುವ ಸುಖಸವಿಯದ ಮ್ಯಾಲೆ ಸಖಿಯರ ಬಾಳೇ ಅ.ಪ. ಮದನ ಸಾರ ಸುರಿಸೋ ಸರಸಿಜಾಕ್ಷಾ 1 ಜಾಣೆ ನೀಯೆನ್ನ ಪ್ರಾಣದಾಣೆಯೆ ಗೇಣು ವಳಗಡೆ ಜೀವದೊಳಗಿದ್ದುಪೂರ್ಣಸುಖವಿತ್ತು ಪಾರುಗಾಣಿಪೆ ಪ್ರಾಣಕಾಂತೆಯೆ 2 ಎಂತು ಪೇಳಲಿ ನಿನ್ನ ಮಹಿಮೆಯ ಪ್ರಾಂತಗಾಣದೆ ಶ್ರಾಂತರಾಗುವರೈ ಹನುಮಂತ ಮೊದಲಾದ್ಯನಂತ ಗುಣಿಗಳು ದಿಗ್ಭ್ರಾಂತರಾದರು ತಂದೆವರದಗೋಪಾಲಕಂತುಪಿತ 3
--------------
ತಂದೆವರದಗೋಪಾಲವಿಠಲರು
ಇದೇ ಹೌದು ಭವತರಿಯುವ ಶಸ್ತ್ರ ಪದೇ ಪದೇ ಸಿರಿವರನ ಸ್ತೋತ್ರ ಪ ಅಧಮಮತಿಯ ಬಿಟ್ಟು ಸದಮಲ ಮನದಿಂ ವಿಧವಿಧ ಹರಿಯೆಂದೊದುರುತ ಕಾಣುವುದೆ ಅ.ಪ ದಾನಧರ್ಮಯಜ್ಞ ಇವು ಯಾಕೊ ಸ್ನಾನ ಮೌನ ಜಪ ಮತ್ತ್ಯಾಕೊ ನಾನಾ ಮಂತ್ರ ತಂತ್ರ ಗೋಜ್ಯಾಕೆಬೇಕೊ ಕ್ಷೋಣಿ ತಿರುಗಿ ಬಹು ದಣಿಲ್ಯಾಕೊ ನಾನಾಪರಿಯಲಿಂದ ದೀನದಯಾಪರ ಗಾನಲೋಲನ ಭಜನಾನಂದ ಪಡೆವುದೆ1 ವೇದಪುರಾಣ ಪುಣ್ಯ ಶಾಸ್ತ್ರಗಳ್ಯಾತಕೊ ಸಾಧನಸಿದ್ಧಿಗಳ ಬಲವ್ಯಾಕೋ ಭೇಧಯೋಗದ ಬಹು ಬೋಧಗಳ್ಯಾತಕೊ ಓದಿಓದಿ ದಿನಗಳಿಲ್ಯಾಕೊ ವೇದಗಮ್ಯದಾದಿ ಮೂರುತಿ ಶ್ರೀ ಪಾದವರಿತು ಆರಾಧಿಸುತಿರುವುದೆ 2 ಕಾಶಿ ಕಂಚಿ ಕಾಳಹಸ್ತಿ ತಿರುಗಲ್ಯಾಕೊ ಸಾಸಿರದೈವಕೆ ಬಾಗುವುದ್ಯಾಕೊ ಮಾಸಪಕ್ಷ ವ್ರತ ನೇಮಗಳ್ಯಾತಕೊ ಘಾಸಿಯಾಗಿ ದೇಹ ದಂಡಿಸಲ್ಯಾಕೊ ಶೇಷಶಯನ ನಮ್ಮ ಶ್ರೀಶ ಶ್ರೀರಾಮನ ಲೇಸಾದ ನಾಮವೊಂದೆ ಧ್ಯಾಸದಿಟ್ಟು ನುಡಿ 3
--------------
ರಾಮದಾಸರು