ಒಟ್ಟು 667 ಕಡೆಗಳಲ್ಲಿ , 93 ದಾಸರು , 588 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೃಷ್ಟಿಯೊಳಗೆಲ್ಲ ದುಷ್ಟರ ಪ್ರಭೆಯಾಗಿ ನಿಷ್ಠರುದೋರದಂತಾದರು ಮಾ ಧ್ರುವ ಭ್ರಷ್ಟರು ಬೂಟಿಕಿ ಶಿಷ್ಠರೆ ಕೈಕೊಂಡು ನಿಷ್ಠರಿಗಾಟ್ಲಿ ತಂದರು ಮಾ ತುಟ್ಟಿಲೆ ಮಿಸುಕದೆ ಗುಟ್ಟಿಲಿದ್ದವರ ಬಟ್ಟೆಗ್ಯಳದಿನ್ನು ತಾಹರು ಮಾ ಹೊಟ್ಟೆಯೊಳು ಹೊಕ್ಕು ಕಟ್ಟಲೆ ಕುಳಿತಿನ್ನು ನೆಟ್ಟ ನೇರಿಷ್ಟ ನೇಮಿಸುರು ಮಾ ಇಟ್ಟ ತೊಟ್ಟವರನು ಕೆಟ್ಟದೃಷ್ಟಿಲೆ ನೋಡಿ ದಿಟ್ಟತನದಿ ಪ್ರಾಣಕೊಂಬರು ಮಾ 1 ಕೊಟ್ಟು ಹಣಹೊನ್ನು ಇಟ್ಟದ್ದು ಬೇಡಲು ಕುಟ್ಟಿ ಅವನಬಾಯಿ ಹಾರರು ಮಾ ತುಟ್ಟಿಲೆ ವಂದಾಡಿ ಹೊಟ್ಟಲೆ ವಂದಿಟ್ಟು ನೆಟ್ಟನೆ ಘಾಸಿಮಾಡರು ಮಾ ಗಂಟುಳ್ಳವರ ಕಂಡು ಕಟ್ಟಿದಂಡಗಳನ್ನು ನಷ್ಟತನದಿ ಹೊಟ್ಟೆ ಹೊರುವರು ಮಾ ಬಟ್ಟಿಲೆ ತೋರಲು ಬಿಟ್ಟಿಯ ಹಿಡಿದಿನ್ನು ಹೆಟ್ಟಿ ಅವನ ಮುಂದೆ ನಡೆಸುರು ಮಾ 2 ಶುದ್ದಿಯು ಇಲ್ಲದೆ ರಾಜ್ಯಾಧಿಪತಿಗಳು ಇದ್ದು ಇಲ್ಲದಂತಾದರು ಮಾ ಮಂದಮತಿಗಳು ಅಂದಣವೇರಿನ್ನು ಬುದ್ಧಿವಂತರೀಗ್ಹೀನತಂದರು ಮಾ ಮುದ್ರಾಧಾರಿಗಳೆಲ್ಲ ಕ್ಷುದ್ರದೃಷ್ಟಿಯು ಮಾಡಿ ಕ್ಷುದ್ರತನದಿ ಕೆಡುತಿಹರು ಮಾ ಸಿದ್ಧಸಾಧಕರೆಲ್ಲ ಗುದ್ದನೇ ಹೊಕ್ಕರು ಇದ್ದರೆ ಬುದ್ಧಿಹೀನರು ಮಾ 3 ಉಳಿಯಮುಟ್ಟಿದ ದೈವ ಉಳಿಯದೇ ಹೋದವು ಉಳಿಗಾಲ ವಿಲ್ಲದಂತಾಯಿತು ಮಾ ತಿಳಿವಳಿಕುಳ್ಳವರೆಲ್ಲ ತಲೆಮುಸಕ್ಹಾಕಿನ್ನು ಕಳ್ಳರೆ ಸಾಜರು ಆದರು ಮಾ ಒಳ್ಳೆಯವರ ನುಡಿ ಎಳ್ಳಷ್ಟು ಮಾಡುತ ಸುಳ್ಳರು ನಿಜನುಡಿವೆಂಬುರು ಮಾ ಉಳ್ಳವರು ಖಳಬುದ್ಧಿ ಕೈಕೊಂಡು ಇಳೆಯೊಳು ಧರ್ಮವ ಜರೆದರು ಮಾ 4 ಸಾಧುಸಜ್ಜನರೆಲ್ಲ ಭೇದವ ಅಡಗಿಸಿ ಮೇಧಿನಿಯಲು ಗುಪ್ತರಾದರು ಮಾ ಇದ್ದರ ಘನಸುಖ ಸಿದ್ಧರ ನೆರೆಯಲಿ ಬುದ್ಧಿಹೀನರು ತಾವು ಅರಿಯರು ಮಾ ಸದ್ಗುರು ಕೃಪೆಯಿಂದ ಸದ್ಬ್ರಹ್ಮದ ನೆಲೆಯ ಸತ್ ಶಿಷ್ಯಮಹಿಪತಿ ತಿಳಿದನು ಮಾ ಎಂದಿಗೆ ಬೇಡಿನ್ನು ದುರ್ಜನರ ಸಂಗವು ತ್ರಾಹಿ ತ್ರಾಹಿ ತ್ರಾಹಿ ಎಂದನು ಮಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸೇರಿದರೇನು ಫಲ ಪ ಅಕ್ಕರೆಯಿಲ್ಲದ ರಕ್ಕಸಿ ಯುದರದಿ ಮಕ್ಕಳು ಜನಿಸಿದರೇನು ಫಲ ದುಃಖಿಪಜನರನು ಲೆಕ್ಕಿಸದಾತನ ಒಕ್ಕಲುತನದಿಂದೇನು ಫಲ 1 ಜನಿಸಿದ ಮಕ್ಕಳುಜೀವಿಸದಿದ್ದರೆ ಜನನೀಜನಕರಿಗೇನು ಫಲ ಕನಸಿಲಿ ಕಾಣುವ ಧನಕನಕಂಗಳ ನಂಬಿದ ಜನರಿಗೇನು ಫಲ 2 ಅರಿಯದೆಕೊಂಡವಗೇನು ಫಲ ಹಿರಿಯವನಾಗಿರಲೇನು ಫಲ 3 ಗಂಡನ ದೂರುತ ಮಿಂಡನ ಸೇರುವ ಹೆಂಡತಿಯಿರಲೇನು ಫಲ ಹೆಂಡಿರ ಮಕ್ಕಳ ದಂಡಿಸದಾತನ ಗಂಡಸುತನದಿಂದೇನು ಫಲ 4 ಸಿಂಗರಿಸಿದರೇನು ಫಲ ಪುಣ್ಯದಿಂದೇನು ಫಲ5
--------------
ಸರಗೂರು ವೆಂಕಟವರದಾರ್ಯರು
ಸೇರಿದೆನು ಸೇರಿದೆನು ಗುರುವರನ ಪದವಾ ಮೀರಿದೆನು ಘೋರತರ ನರಕದತಿಭಯವಾ ಪದೂರ್ವೆ ಮೊದಲಾದ ತೃಣಧಾನ್ಯ ಗರ್ಭವ ಮೆಟ್ಟಿಸರ್ವ ಸ್ಥಾವರ ಜಾತಿಗಳಲಿ ಪುಟ್ಟಿಪಾರ್ವಪಕ್ಷಿಗಳ ಬಸುರೊಳು ಪುಟ್ಟಿ ಬಹಳ ಪಶೂದರ್ವೀಕರಂಗಳಲಿ ಪುಟ್ಟಿ ಕಂಗೆಟ್ಟೂ1ಮನುಜರೊಳು ಪದಿನೆಂಟು ಜಾತಿಗಳೊಳಗೆ ಬಂದುಬಿನುಗುತನದಿಂದಖಿಳ ವಿಷಯಗಳ ತಿಂದೂಅನುವರಿಯದಜ್ಞಾನದೊಳಗೆ ಬಳಿಸಂದು ಪಾರ್ವನ ಜನ್ಮದಲಿ ವಿಹಿತಕರ್ಮದಲಿ ಮನನಿಂದು2ಮೆಲ್ಲ ಮೆಲ್ಲನೆ ಕಾಮ್ಯ ನಿಷ್ಕಾಮ ಕರ್ಮಗಳಬಲ್ಲ ಬಲ್ಲಂತೆ ಮಾಡುತ ಪೂರ್ವದಾಸಲ್ಲಲಿತ ಪುಣ್ಯದೊಳು ಭಕ್ತಿಯೊಳ್ಮನ ಮುಟ್ಟಿಅಲ್ಲಲ್ಲಿ ಹರಿನಾಮ ಕಥೆಯೊಳಳವಟ್ಟೂ 3ಭಾಗವತ ಜನ ಸಂಗದಿಂದ ಹರಿಕಥೆಗಳನುರಾಗದಿಂ ಕೇಳಿ ಗುರುವಿನ ಮಹಿಮೆಯಾಶ್ರೀಗುರುಗಳಿಂದಲೆ ಧನ್ಯತ್ವವಹುದೆಂದುಯೋಗ ಸಂಪದವೆ ತನಗಾಗಬೇಕೆಂದೂ 4ಸದಸದ್ವಿವೇಕ ಶಮೆ ದಮೆ ತಿತಿಕ್ಷೆಗಳಿಂದಲಧಿಕ ಮೋಕ್ಷೇಛ್ಛೆ ಮುಂತಾದ ಸಾಧನವೂಒದವಿರಲು ಬೇಕು ಗೋಪಾಲಾರ್ಯ ಗುರುವರನಪದವೆ ಸತ್ಯಾನಂದ ರೂಪವೆಂತೆಂದೂ 5
--------------
ಗೋಪಾಲಾರ್ಯರು
ಸೇವಕತನದ ರುಚಿಯನೇನರಿದೆಯೊದೇವ ಹನುಮರಾಯ ವೈರಾಗ್ಯ ಬೇಡಿ ಪ ಪಾಷಾಣ ಪೆಣ್ಣ ಮಾಡಿದಾತಗೆಇದೇನಸಾಧ್ಯವೊ ನೀ ಬಯಸಲೊಲ್ಲದೆ1 ಕ್ಷಣದಲ್ಲಿ ಸಂಜೀವನ ಪರ್ವತ ತಂದಾಗಹಣ ಹೊನ್ನುಗಳ ಬೇಡ ಬಾರದಿತ್ತೆವಿನಯದ ವಿಭೀಷಣಗೆ ರಾಜ್ಯವನಿತ್ತಂಥಧಣಿಗೆ ಏನಸಾಧ್ಯವೊ ಹನುಮ ನೀನೊಲ್ಲದೆ 2 ಸಾರ್ವಭೌಮನು ತಾನೆ ಮೆಚ್ಚಿ ಬಳಿಗೈದಾಗಉರ್ವಿಯನು ಬೇಡಿದಡೆ ಕೊಡದಿಹನೆಸರ್ವವನು ತೊರೆದು ಶ್ರೀ ನೆಲೆಯಾದಿ ಕೇಶವನನಿವ್ರ್ಯಾಜ ಭಕುತಿಯನು ಬೇಡಿಕೊಂಡೆಯೊ 3
--------------
ಕನಕದಾಸ
ಸೋತುಹೋಗಣ್ಣ ಮಾತುಬಂದಲ್ಲಿ ಜಾಣನಾಗಿ ಸೋತುಹೋಗಣ್ಣ ಮಾತುಬಂದಲ್ಲಿ ಪ ಸೋತುಹೋಗದೆ ಮಾತುಮಾತಿಗೆ ವಾದಿಸಲ್ಕೆ ಘಾತಕತನದ್ವಿಧಿಯು ಬಂದು ಆತುಕೊಂಡು ಕೂತುಕೊಳ್ವುದು ಅ.ಪ ಸೋತೆನೆನ್ನಲು ನಾಚಬೇಡಣ್ಣ ದೇವರು ಕೊಟ್ಟಿಹ್ಯ ಖ್ಯಾತಿಯೇನು ಹೋಗೋದಿಲ್ಲಣ್ಣ ಸುಳ್ಳಲ್ಲವಣ್ಣ ಸೋತೆನೆಂಬುದು ಜಯದ ಮಾತಣ್ಣ ಸತ್ಯ ತಿಳಿಯಣ್ಣ ನೀತಿಗಡಕರ ಮಾತಿನ ತಳ್ಳಿಗೋತ ಕುಣಿಯೊಳೆಳೆವ ಬಳ್ಳ್ಯೆಂದು ಮಾತನಾಡದೆ ಸುಮ್ಮನ್ಹೋಗಲು ನೀತಿವಂತರು ಮೆಚ್ಚುತಾರ 1 ದುಡುಕುಮಾತಿಗೆ ಮಿಡುಕಬೇಡಣ್ಣ ಸತ್ಯದ್ಹೇಳುವ ದೃಢತರ್ವಚನದ ಅಡಕು ತಿಳಿಯಣ್ಣ ಪಡಕೊ ಸುಖವಣ್ಣ ನೀ ತೊಡರಿಕೊಂಡರೆ ತಪ್ಪದು ಕಡೆಯತನಕ 2 ಸೋತೆನೆನದ್ಹತ್ತುವದನಂದೇನಾಯ್ತು ಸೋತು ಓಡಿದ ನೀತಿವಂತ ವಿಭೀಷಣಂದೇನಾಯ್ತು ಮತ್ತು ನಳರಾಜ ಸೋತ ರಾಜ್ಯ ಭಂಡಾರೆಲ್ಲ ಮುಳುಗಿತು ತಿಳಿ ನೀತಿ ಅರಿತು ಮಾತುಮಾತಿಗ್ವಾದಿಸಿ ಕುಲಘಾತಕ್ಕಾದನು ಕೌರವೇಂದ್ರನು ಸೋತಜನರಭಿಮಾನಿ ಶ್ರೀರಾಮ 3
--------------
ರಾಮದಾಸರು
ಸ್ಮರಿಸಿ ಬದುಕಿರೊ ಗುರುವರರಾ ನರ- ಹರಿಸ್ಮರಣೆ ಮರೆಯದಲೆ ಕೀರ್ತಿಸಿ ನಲಿದವರ ಪ ದಾಸದೀಕ್ಷೆಯ ವಹಿಸಿದವರ ಹರಿ ದಾಸರ ಕೂಡಿ ನರ್ತಿಸಿ ನಲಿದವರ ಶ್ರೀಶನ ಮಹಿಮೆ ಬಲ್ಲವರ ಭವ ಪಾಶಗಳಳಿವ ಸನ್ಮಾರ್ಗಬೋಧಕರ 1 ಬಡತನದಲಿ ಬಳಲಿದವರ ಭಾಗ್ಯ ಬಿಡದೆ ಬಂದೊದಗೆ ಹಿಗ್ಗದೆ ತಗ್ಗಿದವರ ಮೃಡಸಖನೊಲುಮೆ ಪಡೆದವರ ಬಹು ಸಡಗರದಲಿ ಹರಿ ಭಜನೆ ಮಾಡ್ದವರ 2 ಪಂಕಜಾಕ್ಷನ ಪೊಗಳಿದವರ ತಂದೆ ವೆಂಕಟೇಶ ವಿಠ್ಠಲ ದಾಸರಿವರ ಬಿಂಕದಿ ಹರಿಯ ಮರೆತವರ ಗರ್ವ ಬಿಂಕಗಳಳಿಯ ಸನ್ಮಾರ್ಗಕೆಳದವರ3 ತಾಳ ತಂಬೂರಿ ಪಿಡಿದವರ ಗೆಜ್ಜೆ ತಾಳ ಮೇಳದಿ ನರ್ತಿಸಿ ನಲಿದವರ ವ್ಯಾಳ ಶಯನನ ಭಕ್ತರಿವರ ಸಂಜೆ ವೇಳೆ ಹರಿಭಜನೆ ಮಾಡಿ ನಲಿದವರ 4 ಮಡದಿ ಮಕ್ಕಳು ಬಂಧು ಜನರ ಕೂಡಿ ಕಡು ಸಂಭ್ರಮದಿ ಹರಿಭಜನೆ ಮಾಡ್ದವರ ಕಡಲ ಶಯನನ ಭಕ್ತರಿವರು ಭಾಗ್ಯ ಬಡತನ ಸಮವೆಂದು ತಿಳಿಯ ಹೇಳ್ದವರ 5 ಹರಿಗುಣ ಕೀರ್ತಿಸಿದವರ ನರ ಹರಿಯ ಮಹಿಮೆಗಳ ಶಿಷ್ಯರಿಗೊರೆದವರ ಹರಿಯೆ ಸರ್ವೋತ್ತಮನೆಂದವರ ನಮ್ಮ ಉರುಗಾದ್ರಿವಾಸ ವಿಠ್ಠಲನ ನಂಬಿದವರ6 ಮಮತೆಯ ಬಿಡಬೇಕೆಂದವರ ದೇಹ ಮಮತೆಯ ಬಿಡುತ ಹರಿಪುರ ಸೇರಿದವರ ಕಮಲಾಕ್ಷನ ಭಕ್ತರಿವರ ನಮ್ಮಕಮಲನಾಭನ ವಿಠ್ಠಲನ ನಂಬಿದವರ 7
--------------
ನಿಡಗುರುಕಿ ಜೀವೂಬಾಯಿ
ಸ್ವಾಗತ ಸುಗುಣಗೆ ಸ್ವಾಗತ ಕರುಣಿಗೆ ಸ್ವಾಗತವು ನವಸಚಿವರಿಗೆ | ಸ್ವಾಗತ ಸ್ವಾರ್ಥ ವಿದೂರರಾದ ಜಗನ್ನಾಯಕ ನಾಮ ರಾಯರಿಗೆ || ತರಳತನದಿ ಇವರು ಸರಳ ಮನಸ್ಸಿನಲ್ಲಿ ಸರಸ್ವತಿದೇವಿಯನೊಲಿಸಿದರು | ಪರಮಪೂಜ್ಯ ಮಹತ್ವರ ತತ್ವ ತಿರುಳು ತಿಳಿದು ಆಚರಿಸಿದರು 1 ಪ್ರಾಂತದ ಬಡವರ ಚಿಂತೆಕಡಿಯಲು ಸ್ವಾಂತದಿ ಪಂಥವ ಗೈದವರೋ || ಕ್ರಾಂತಿಯ ಹೂಡುತ ಶಾಂತಿ ಸಂಗರದಿ ನಿಂತು ಹೋರಾಡಿದ ಯೋಧರು 2 ದುರುಳರಾಳಿಕೆಯಲಿ ಜರಿದು ಧಿಃಕರಿಸಿ ಸೆರೆಮನೆ ಕಷ್ಟವ ಸಹಿಸಿದರು | ದೊರೆಯ ಸ್ವತಂತ್ರವು ಬಹುಮತದಲಿ ಸ್ವೀಕರಿಸಿದರು ಮಂತ್ರಿಪದವಿಯನು 3 ಉಚ್ಚನೀಚವೆಂಬ ಕುತ್ಸಿತ ಭಾವವ | ಕೊಚ್ಚಿ ಬೀಸಾಡಿದ ಜಾಣರು | ಅಚ್ಚಗನ್ನಡದ ವೀರ ಜನನಿಗೆ ಅಚ್ಭದ ಪ್ರೀಯ ಸುಕುಮಾರರು 4 ಈ ಮಹಾಚತುರನ ಪಡೆದ ಚಂಡ್ರಿಕಿ ಗ್ರಾಮದೇವಿ ಬಹುಪುಣ್ಯವತಿ | ಪ್ರೇಮ ದಿಂದಿವರ ನೇಮವ ನಡೆಸುವ ಶಾಮಸುಂದರನು ದಿನಂಪ್ರತಿ5
--------------
ಶಾಮಸುಂದರ ವಿಠಲ
ಸ್ವಾತಂತ್ರ್ಯವೆನಗುಂಟೆ ಸರ್ವಾಂತರ್ಯಾಮಿ ಪ ನಿಂತು ನೀ ನಡೆಸುವಿಯೊ ಜೀವಾಂತರ್ಯಾಮಿ ಅ.ಪ ಜೀವ ಸ್ವರೂಪದಲಿ ಜೀವನಾಕಾರದೊಳಿದ್ದು ಅನಾದಿಕರ್ಮ ಜೀವರಿಗೆ ಪ್ರೇರಿಸಿ ಜೀವಕೆ ಚೇತನ ಕೊಟ್ಟು ಜೀವಕ್ರಿಯೆಗಳನ- ಭಿವ್ಯಕ್ತಿ ಮಾಡಿ ಸತತ ಪೊರೆಯುವ ಕರುಣಿ 1 ದತ್ತಸ್ವಾತಂತ್ಯ ತನಗಿತ್ತಿಹನು ದೇವನೆಂದು- ನ್ಮತ್ತತನದಿ ತಾ ಕರ್ತನೆಂದೆನಿಸಿ ಸುತ್ತಲಹ ನಿತ್ಯ ಅವಸ್ಥೆಗಳ ಪರಿಹರಕೆ ಶಕ್ತನಾಗನು ಏಕೆ ಆಪತ್ತುಗಳು ಬರಲು 2 ಪೂರ್ಣವಾಗಿ ತಾ ಜಡನಂತಿಹಾ ಕರಣದಲಿ ಶ್ರೀರಮಣ ಸೇರಿ ಚೇತನ ಕೊಟ್ಟು ಕ್ರೀಡೆಗೋಸುಗ ಬಿಡುವ ಸರ್ವ ಜೀವರನಾ 3 ಅನಾದಿಕರ್ಮ ಎನ್ನದೆಂದಿಗು ಸರಿಯೆ ಮುನ್ನ ಪ್ರಳಯದಿ ನಿನ್ನ ಘನ್ನೊಡಲೊಳಿಂಬಿಟ್ಟೆ ಎನ್ನ ಕರ್ಮಗ್ರಂಥಿ ಎನ್ನಿಂದ ಬಿಡಿಸೊ 4 ಅನಿರುದ್ಧ ಲಿಂಗಾ ಅಂಗೋಪಾಂಗದಲಿ ನೀನ್ಹಾಂಗೇ ಮೆರೆವೆ 5 ಹೃಷೀಕಪನೆ ನಿನಗೆ ಇದು ಸಂತೋಷವೇನೊ ಈಷಣತ್ರಯ ಹರಿಸಿ ಪೋಷಿಸೋ ದೇವಾ 6 ತರಣಿ ತರಣಿಕಿರಣನನುಸರಿಸಿ ವೃತ್ತಿಯಹುದೊ ತ್ವರಿತದಲಿ ಸ್ಥೂಲದಲಿ ಕಾರ್ಯಾಭಿವ್ಯಕ್ತಿಯೊ 7 ನಾನತ್ತು ಫಲವೇನೊ ಸ್ಥಿತಿಕಾಲದಿ ನೀನಿಲ್ಲದಿನ್ನಿಲ್ಲ ಪ್ರತಿಬಿಂಬ ಕಾರ್ಯವಹುದೋ 8 ಹೆಚ್ಚು ಮಾತೇನು ಜೀವನಿಚ್ಛೆಯನನುಸರಿಸಿ ಅಚ್ಯುತ ತಾನೆ ಸ್ವೇಚ್ಛಚರಿಸಿ ಎಚ್ಚರಿಸಿ ಸ್ಥೂಲದಿಂದೆಚ್ಚರದಿ ನಡೆವುದೊ 9 ನಿನ್ನ ಸಂಕಲ್ಪವಲ್ಲದಿನ್ನಿಲ್ಲ ಅನ್ಯಥಾಗುವುದುಂಟೆ ಇನ್ನು ಹರಿಸೋದೇವಾ 10 ಶ್ರೀದನಿಂ ದತ್ತಸ್ವಾತಂತ್ರ್ಯ ಸಮ್ಮತವೇನು ಆದರಿಸಿ ಸಲಹಯ್ಯ ಮೋದತೀರ್ಥಾ- ರಾಧ್ಯ ಶ್ರೀ ವೇಂಕಟೇಶಾ11
--------------
ಉರಗಾದ್ರಿವಾಸವಿಠಲದಾಸರು
ಹಡಪ ಕಾಳಾಂಜಿ ಚಾಮರ ಛತ್ರ ವ್ಯಜನ ಪಾ ವಡಗಾಡಿ ವಸಡುಗ ಪಾವುಗೆ ಸುವರ್ಣದರ್ಪಣವಾ ಪ ಪಿಡಿದ ನಾರಿಯರು ಯಡಬಲದ ಕೈದೀವಿಗೆಯ ಕೊಡುತ ಕೈಲಾಗಿನವರಡಿಗಳೆಚ್ಚರಿಕೇ ಅ.ಪ ವೀಣೆ ದಂಡಿಗೆ ತಾಳ ಮೇಳ ಸನಕಾದಿ ಸುರ ನಾರಿಯರು ಗೀತ ಪ್ರಬಂಧ ನರ್ತನದ ಪು ರಾಣ ಕೋವಿದರು ಪಾಠಕನಿಕರ ಸಹಿತ ಗೀ ರ್ವಾಣರೈದಿರಲು ಅವಧಾನವೆಚ್ಚರಿಕೇ 1 ಗಂಧ ಪರಿಮಳ ಪುಷ್ಪ ತಾಂಬೂಲ ಫಲಗಳನು ತಂದು ಉಡುಗೊರೆಯ ಕಾಣೆಕೆಯಿಟ್ಟು ಜಯವೆನುತ ನಂದ ಮುಕುಂದ ಗೋವಿಂದ ಕೇಶವಯೆನುತ ವಂದನೆಗಳನೆ ಮಾಡಿ ನಿಂದರೆಚ್ಚರಿಕೇ 2 ಭಾಗವತ ಜನರು ಬಿರುದಾವಳಿಯ ಪೊಗಳೆ ಮುನಿ ಯೋಗಿಗಳು ತತ್ವ ಪ್ರಬಂಧದಧ್ಯಾಪಕರು ಮೇಘವಾಹನ ಪೂಮಳೆಗರೆಯೆ ಸಕಲ ವಿನಿ ಯೋಗದವರನು ಕಳುಹುವಾಗಲೆಚ್ಚರಿಕೇ3 ಸರಸಿಜೋದ್ಭವನು ದಿಕ್ಪಾಲನಾರದ ಧ್ರುವನು ಗರುಡ ಗಂಧರ್ವ ವಿದ್ಯಾಧರರು ಅನಿಲಜನು ಪರಮ ಭಕ್ತಿಯಲಿ ಊಳಿಗಕೆ ಬಂದೈದಾರೆ ಧರೆಗಧಿಕ ವೈಕುಂಠ ಚನ್ನ ಕೇಶವ ಚಿತ್ತೈಸೋ 4
--------------
ಬೇಲೂರು ವೈಕುಂಠದಾಸರು
ಹರಿ ನೀನೆವೆ ಸರ್ವ ಚೇತನ ಧೃತಿಯ ಸಕಲವೇ | ಧರಿಯೊಳು ನಾನೆಂಬುವ ಗುಣವೇ ವರಶೃತಿ ನೇಹನಾ ನಾಸ್ತಿಯಂದು | ಸಾರುವದಿದಕನು ಮಾನವೇ ಪ ಬಯಲೊಳು ಪುಟ್ಟದ ಪರಿಪರಿನಾದದ | ಹೊಯಿಲಿನ ಮಂಜುಳ ಶಬ್ದವಾ | ಬಯಲದಿ ಕೇಳಿತಲ್ಲಿನವ ಹೊಂದುವಾ | ಬಯಲಾಧಾರ ನೀನಲ್ಲವೇ 1 ಸೃಷ್ಟಿಯೊಳಗ ಕಮನೀಯ ಲಾವಣ್ಯದು | ತ್ಕøಷ್ಟತರ ಮೋಹನ ರೂಪವಾ | ದೃಷ್ಟಿಲಿ ಕಾಣುತ ಸುಖದೋಳಗಾಗುವ | ದೃಷ್ಟಸ್ವ ತೇಜ ನೀನಲ್ಲವೆ 2 ಕಮಲ ಪಾರಿಜಾತ ಮಲ್ಲಿಗೆ ಮಕ | ರಂಗದೊಳಗ ಸುಳಿದಾಡುತ | ಮಂದ ಮಾರುತ ಬಂದು ಸೋಕಲು ನಲಿವಾ | ಸುಂದರ ರೂಪನು ನೀನಲ್ಲವೆ 3 ರಸಭರಿತ ಬೇರೆ ಬೇರೆ ದೋರುತಲಿಹಾ | ಅಸಮತೆರೆದ ಪದರ್ಥವನು | ರಸನಾದಿ ಕೊಂಡು ಸವಿಗೆ ತಲೆದೂಗುವಾ | ಕುಶಲ ಭೋಕ್ತನುನೀನಲ್ಲವೇ 4 ಚೆನ್ನಾಗಿ ಕಸ್ತೂರಿ ಪುಳಕವ ಕೂಡಿಸಿ | ಪನ್ನೀರವನು ಮೇಲೆದಳಿದು | ಉನ್ನತ ಚಂದನ ಲೇಪಿಸೆ ಸುವಾ | ಸನೆ ಕೊಂಬುವ ನೀನಲ್ಲವೇ 5 ಅಷ್ಟದಳ ಕಮಲದಳ ಗದ್ದುಗಿಯೊಳು ನಿಂದು | ಅಷ್ಟಮ ಸ್ಥಳಗಳ ಮುಟ್ಟಿಸಿ | ನೆಟ್ಟಿನೆ ಮುಖದೊಳು ಸವಿಸವಿ ಮಾತವ | ಸ್ಪಷ್ಟದಿ ನುಡಿಪ ನೀನಲ್ಲವೇ 6 ಭಜಕನ ಮಾಡಿ ಸೌಮ್ಯತನದಿ ಕರದಿಂದ | ರಜತಮ ವಿರಹಿತ ದಾನವನಾ | ದ್ವಿಜರಿಗೆ ಕುಡಿಸಿ ಅದರಶ್ರಯ ಕೊಂಬುವ | ನಿಜಶಯ ಕರ್ತನು ನೀನಲ್ಲವೇ 7 ಪವನಭ್ರವ ನಡೆಸುವಪರಿಚರಣದಿ | ಜವದಿ ಸುಕೇತ್ರ ಯಾತ್ರೆಯಾ | ಬವರದಿ ಮಾಡಿ ಪುಣ್ಯ ಅರ್ಪಿಸಿ ಕೊಂಬಾ | ಭುವನ ಪಾವನ ನೀನಲ್ಲವೇ 8 ರಸನುಂಡು ಕಬ್ಬ ಹಿಪ್ಪಿಯುಗುಳುವಂತೆ | ಅಸಮತೆ ರಚಿಸಿ ಸರ್ವಾಂಗರ | ರಸವಿತ್ತು ಮಲವಘ ಮುಖದಿಂದ ಪವನದಿ | ಬಿಡಸುವನು ನೀನಲ್ಲವೇ 9 ಅಂಗನೆಯರ ಧೃಡಾಲಿಂಗನವನು ಮನ| ದಿಂಗಿತದಂದದಿ ಗೈಯ್ಯಲು | ಅಂಗಸಂಗದ ಲೋದಗುವ ಭೋಗಿಪ | ಅಂಗಜ ಜನಕ ನೀನಲ್ಲವೇ 10 ಯಂತ್ರವಾಹಕ ನಂದದಿ ಜಗನಿರ್ಮಿಸಿ | ಚಿತ್ರ ವಿಚಿತ್ರವ ದೋರುವಾ | ಅಂತ್ರ ಬಾಹ್ಯವ್ಯಾಪಕ ಮಹಿಪತಿ ಸುತ ಪ್ರಭು | ಸೂತ್ರಧಾರಿ ನೀನಲ್ಲವೆ 11
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿ ಹರಿ ಎನ್ನಬಾರದೇ ಮನವೇ ನೀನು ಪ ಕಂಡವರಾ ಬಿಡ ಮಾತುಗಳಾಡುತ | ಭಂಡತನದಿ ಫಲವೇನು 1 ಊರಗುದ್ದಲಿ ಕೊಂಡು ನಾಡಗಾವಲಿಯಾ | ದಾರಿ ತಿದ್ದುವರೇ ತಾನು 2 ಮಹಿಪತಿ ಸುತ ಪ್ರಭು ನಾಮವ ನೆನೆದರೆ | ಪರ ಸುಖಕರ ಧೇನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿನಾಮಾಮೃತವನು ಸುರಿದು ಪರಿಪಕ್ವರಾಗಿ ಜರೆಮರಣೆಂದೆಂಬ ಉರುಲನು ಗೆಲ್ಲಿರೊ ಪ ತರಳತನದಿ ಸುರಿದು ಪರಮ ಪ್ರಹ್ಲಾದನು ಪರಮಕಂಟಕ ಗೆಲಿದು ವರಮೋಕ್ಷಕೈದಿದ ನಿರುತದಿಂ ವಿಭೀಷಣ ಸುರಿದು ಈ ಅಮೃತ ಸ್ಥಿರಪಟ್ಟವೇರಿದ್ದು ಅರಿವಿಟ್ಟು ನೋಡಿ 1 ಅಮೃತ ಕರಿ ತನ್ನ ಭಾವದಿ ಪರಮಾಪತ್ತು ಗೆಲಿದದ್ದರಿದು ಸ್ಮøತಿಯಿಂದ ಅಮೃತ ನರನು ಧರೆಯನೆಲ್ಲ ತಿರುಗುತ ಪರತರಧುರವ ಜೈಸಿದರಿದು 2 ಸೇವಿಸಿಅಮೃತ ಪಾವನೆನಿಸಿ ಯುವತಿ ಕೇವಲಮಾನದಿಂ ಬುವಿಯೊಳ್ಬಾಳಿದಳು ದೇವ ಶ್ರೀರಾಮನ ಪಾವನ ನಾಮಾಮೃತ ಭಾವದೊಳ್ಸವಿಯುತ ಕೇವಲರೆನಿಸಿರೊ 3
--------------
ರಾಮದಾಸರು
ಹರಿಮುಖಿ ಹರಿವಾಣಿ ಹರಿವೇಣಿ ಹರಿಣಾಕ್ಷಿಹರಿಮಧ್ಯೆ ಹರಿಗಮನೆ ಪ ಹರಿಯ ನಂದನ ಸಖನೆನಿಪ ಅಹೋಬಲದಹರಿಯ ನೀ ತಂದು ತೋರೆ ಅ ಎರವಿನ ತಲೆಯವನಣ್ಣನಯ್ಯನಪರಮ ಸಖನ ಸುತನಹಿರಿಯಣ್ಣನಯ್ಯನ ಮೊಮ್ಮನ ಮಾವನತಂದೊಟ್ಟಿದನ ಹಗೆಯಗುರುವಿನ ಮುಂದೆ ಮುಂದಿಹ ಬಾಹನಕಿರಿಯ ಮಗನ ರಾಣಿಯದುರುಳತನದಿ ಸೆಳೆದುಕೊಂಡನ ಕೊಂದನತರಳೆ ನೀ ತಂದು ತೋರೆ 1 ಸೋಮನ ಜನಕನ ಸತಿಯ ಧರಿಸಿದನರೋಮ ಕೋಟಿಯೊಳಿಟ್ಟಹನಕಾಮಿನಿ ಸತಿಯ ಕಂದನ ತಮ್ಮಗೊಲಿದನಭಾಮೆ ನೀ ತಂದು ತೋರೆ 2 ಶ್ರುತಿಯನುದ್ಧರಿಸಿ ಭೂಮಿಯ ಪೊತ್ತು ಅಡವಿಯಪಥದೊಳು ತಿರುಗಿದನ ಅತಿಶಯ ನರಹರಿ ವಾಮನ ರೂಪಿನಪಿತನ ಮೋಹದ ರಾಣಿಯ ಹತ ಮಾಡಿ ಸತ್ಯಕ್ಕೆ ನಿಂತು ನಗವ ಹೊತ್ತುಪತಿವ್ರತೆಯರ ಭಂಗಿಸಿಕ್ಷಿತಿಯೊಳು ರಾಹುತನಾದ ಬಾಡದಾದಿಕೇಶವನ ತಂದು ತೋರೆ3
--------------
ಕನಕದಾಸ
ಹರಿಯೆನ್ನ ನರಜನ್ಮ ವ್ಯರ್ಥವಾಯ್ತು ಪರಮ ಭಕ್ತಿಯೊಳಿನ್ನು ಭಜಿಸುವೆನು ಕಾಯೋ ಪ ತೊಡೆಯ ಮೇಲಾಡುತಿಹ ಶಿಶುವಿನಾನುಡಿ ಕೇಳಿ ಕಡು ಮೂರ್ಖತನದಿಂದ ಭ್ರಮೆಗೊಂಡೆನೋ ಸಡಗರದಿ ಕಿವಿಗೊಟ್ಟು ಕಿಂಕಿಣಿಯ ದ್ವನಿಗಳನು ಎಡಬಿಡದೆ ಕೇಳುತಿಹ ಹರಿಣನಂತಾದೇ 1 ತೊಡೆಗÀುಹ್ಯ ಕುಚಗಳಿಗೆ ಅನುದಿನವು ನಲಿಯುತ್ತ ಮಡದಿಯರ ಅಂಗ ಸಂಗದ ನಂಬುತಾ ಒಡಲ ಶಾಂತಿಯಗೊಳಿಸೆ ಬಡಿಗೋಲು ಕೆಡಹಿಕೊಂ ದಡಗುತಿಹ ಮೂಷಕನ ತೆರದಲ್ಲಿ ಕಳೆದೇ 2 ನಿರುತದಿಂ ಪರಸತಿಯ ಲಾವಣ್ಯವನು ನೋಡಿ ಚರಿಸಿತೆನ್ನಯ ಮನವು ಅವಳ ಕೂಟಕ್ಕೇ ಉರಿವ ದೀಪವ ಕಂಡು ಕನಕ ಮಣಿಯೇಯೆಂದ ಎರಗುತಿಹ ಹುಳದಂತೆ ಹಾಳಾದೆ ಬರಿದೇ 3 ಜರಿದು ನಿಜವೃತ್ತಿಯನು ಪರದಾಸ್ಯದಲಿ ಮುಳುಗಿ ಪೊರದೆ ಹೊಟ್ಟೆಯನಾ ಪರಾನ್ನ ಭಕ್ಷದಲೀ ಹರುಷದಿಂ ಬಲೆಯತುದಿ ಮಾಂಸಕ್ಕೆ ಮೆಚ್ಚಿದಾ ಮರುಳಾ ಮೀನಿನ ಗತಿಯು ಯನಗಾಯ್ತು ನಿಜದೀ4 ನಾರಿಯರ ಜಾಲಕ್ಕೆ ಪ್ರತಿದಿನವು ಸಿಲುಕುತ್ತ ಮಾರಿಯರ ಸಾಕಿ ನಾ ಫಲವ ತಿಂದೆ ಭ್ರಮರ ಸಂಪಿಗೆಯಸಳ ಸಾರಿ ಕೊಡಲೆ ಮೃತ್ಯುವಶವಾಗುವಂತೇ 5 ಮೂರಾರು ಶತ್ರುಗಳು ತರಿದೆನ್ನ ಮನವನ್ನು ಗಾರು ಮಾಡುತಲಿಹವು ತಿಳಿಯದಾ ಹರಿಯೇ ನರಸಿಂಹನೇ ಐದು ಇಂದ್ರಿಯವ ಗೆಲಲಾರೆ ಭೂರಿ ಭಕ್ತಿಯೊಳೆರಗಿ ಮರೆಹೊಕ್ಕೆ ಕಾಯೋ 6 ಪನ್ನಗಶಯನ ಶ್ರೀ ವೇಣುಗೋಪಾಲನೆ ಚನ್ನಿಗಕೇಶವನೇ ದೂರ್ವೇಶನೇ ನಿಂನನಾ ಬಿಡಲಾರೆ ಮಾರಮಣ ಪೊರೆಯಂನ ಯೋನಿ ಜನ್ಮಕೆ ಮುಂದೆ ಬರದಂತೆ ಮಾಡೋ 7
--------------
ಕರ್ಕಿ ಕೇಶವದಾಸ
ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು