ಒಟ್ಟು 3847 ಕಡೆಗಳಲ್ಲಿ , 123 ದಾಸರು , 2597 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾವೇರಿ ತ್ರಿಭುವನಕಾಯೆ | ಸುರಮುನಿಗೇಯೆ | ಕಾವೇರಿ | ಆವಾವ ಜನುಮಕೆ ಬಿಡದೆ ಎನ್ನನು ಕಾಯೆ ಪ ಅಜನನಂದನೆ ಚಂದ್ರವದಗೆ | ಚತುರಮಯೆ | ಸುಜನರಿಗಾನಂದ ಸದಗೆ | ಧವಳಕಾಯೆ | ಭಜಿಸಿ ಬೇಡುವೆ ನಿನಗಿದನೆ | ಸೃಜಿಸಿ ಕೊಡುವುದು | ತ್ರಿಜಗದೊಳಗೆ ಹರಿ | ನಿಜ ಭಕ್ತರಪಾದ | ರಜವಾಗಿ ಯಿಪ್ಪ ಸ | ಹಜ ಮತಿಯನುದಿನ | ಕುಜನ ನಿವಾರೆ 1 ಕಲಿನಾಶ ಕಾರುಣ್ಯ ನಿಧಿಯೆ | ನಿರ್ಮಳಶೀಲೆ | ಕಲಕಾಲಾ ಸುಜ್ಞಾನಾಂಬುಧಿಯೆ | ತಲೆವಾಗಿ ನಮಿಸುವೆ | ಹಲವು ಜನ್ಮಂಗಳ | ಒಳಗೊಳಗೆ ಬಿದ್ದು | ಹಲಬುತಿಪ್ಪ ವ್ಯಾ | ಕುಲವನು ಕಳೆದು ನಿ | ಶ್ಚಲ ಮತದೊಳಗಿಡು 2 ನಿತ್ಯ ಉತ್ತಮ ಗುಣಸಮುದ್ರೇ | ಸಿಂಹಜೆ ಮಾರುದೃತೆ ಎನಿಪ ಲೋಪಾಮುದ್ರೆ | ಕವೇರಕನ್ಯೆ ......ಗಿತ್ತ ಪೊಳೆವ ಸೂಭದ್ರೆ | ಸತ್ಯ ಸಂಕಲ್ಪ ಶ್ರೀ ವಿಜಯವಿಠ್ಠಲನ್ನ ಭೃತ್ಯನೆನೆಸಿಕೊಂಡು ಸ್ರೌತ್ಯದಿಂದಲಿ ಬಲು | ನೃತ್ಯಮಾಡುವ ಸಂ |ಪತ್ತನೆ ಕರುಣಿಸು 3
--------------
ವಿಜಯದಾಸ
ಕಾಶಿಯ ಹಾದಿಯಲಿ ಕೇಶವನಿದ್ದಾನೆ ರಾಮರಾಮ ಕೇಶವನ ದಯದಿ ಕಾಶಿಯಾತ್ರೆಯ ಕಂಡೆ ರಾಮರಾಮ 1 ಬದರಿಕಾಶ್ರಮದಲ್ಲಿ ನಾರಾಯಣನಿದ್ದಾನೆ ರಾಮರಾಮ ಬದರಿಕಾಶ್ರಮ ಕಂಡೆ ನಾರಾಯಣನ ದಯದಿ ರಾಮರಾಮ 2 ಪ್ರಯಾಗ ನದಿಯಲ್ಲಿ ಮಾಧವನಿದ್ದಾನೆ ರಾಮರಾಮ ಪ್ರಯಾಗ ನದಿ ಮಿಂದೆ ಮಾಧವನ ದಯದಿ ರಾಮರಾಮ 3 ಗೋಕುಲದಲ್ಲಿ ಶ್ರೀ ಗೋವಿಂದನಿದ್ದಾನೆ ರಾಮರಾಮ ಗೋಕುಲವನು ಕಂಡೆ ಗೋವಿಂದನ ದಯದಿ ರಾಮರಾಮ 4 ವಿಷ್ಣು ತೀರ್ಥದಲಿ ಶ್ರೀವಿಷ್ಣುವಿದ್ದಾನೆ ರಾಮರಾಮ ವಿಷ್ಣು ತೀರ್ಥದಿ ಮಿಂದೆ ವಿಷ್ಣುವಿನ ದಯದಿಂದ ರಾಮರಾಮ 5 ಮತ್ಸ್ಯತೀರ್ಥದಲ್ಲಿ ಮಧುಸೂದನನಿದ್ದಾನೆ ರಾಮರಾಮ ದಯದಿ ರಾಮರಾಮ6 ತ್ರಿವೇಣಿಯಲ್ಲಿ ತ್ರಿವಿಕ್ರಮನಿದ್ದಾನೆ ರಾಮರಾಮ ತ್ರಿವಿಕ್ರಮನ ದಯದಿ ತ್ರಿವೇಣಿಯಲ್ಲಿ ಮಿಂದೆ ರಾಮರಾಮ7 ವಾಮನ ನಮ್ಮನು ಒಲಿದು ಕಾಯುವನಂತೆ ರಾಮರಾಮ ವಾಮನನ ದಯದಿ ಭೂವೈಕುಂಠವ ಕಂಡೆ ರಾಮರಾಮ8 ಶ್ರೀಧರ ನಮ್ಮ ಹೃದಯದಲ್ಲಿದ್ದಾನೆ ರಾಮರಾಮ ಶ್ರೀಧರನ ದಯದಿಂದ ಹೃದಯವಾಸನ ಕಂಡೆ ರಾಮರಾಮ9 ಋಷಿಗಳಾಶ್ರಮದಲ್ಲಿ ಹೃಷಿಕೇಶನಿದ್ದಾನೆ ರಾಮರಾಮ ಹೃಷಿಕೇಶನ ದಯದಿ ಋಷಿಗಳಾಶ್ರಮ ಕಂಡೆ ರಾಮರಾಮ10 ಪದ್ಮನಾಭದಲ್ಲಿ ಪದ್ಮನಾಭನಿದ್ದಾನೆ ರಾಮರಾಮ ಪದ್ಮನಾಭನ ದಯದಿ ಪದ್ಮನಾಭನ ಕಂಡೆ ರಾಮರಾಮ11 ಸಾಧು ಬೃಂದದಲ್ಲಿ ದಾಮೋದರನಿದ್ದಾನೆ ರಾಮರಾಮ ಸಾಧು ಬೃಂದವ ಕಂಡೆ ದಾಮೋದರನ ದಯದಿ ರಾಮರಾಮ 12 ಸಕಲ ತೀರ್ಥದಲ್ಲಿ ಸಂಕರ್ಷಣನಿದ್ದಾನೆ ರಾಮರಾಮ ಸಂಕರ್ಷಣನ ದಯದಿ ಸಕಲ ತೀರ್ಥವೆ ಮಿಂದೆ ರಾಮರಾಮ 13 ವಸುಧೇಯ ಮೇಲೆಲ್ಲ ವಾಸುದೇವನಿದ್ದಾನೆ ರಾಮರಾಮ ವಾಸುದೇವನ ದಯದಿ ವಸುಧೆಯೆಲ್ಲವ ಕಂಡೆ ರಾಮರಾಮ 14 ವೃದ್ಧಗಂಗೆಯಲ್ಲಿ ಪ್ರದ್ಯುಮ್ನನಿದ್ದಾನೆ ರಾಮರಾಮ ಪ್ರದ್ಯುಮ್ನನ ದಯದಿ ವೃದ್ಧಗಂಗೆಯ ಮಿಂದೆ ರಾಮರಾಮ 15 ಅಲಕನಂದೆಯಲ್ಲಿ ಅನಿರುದ್ಧನಿದ್ದಾನೆ ರಾಮರಾಮ ಅಲಕನಂದನೆ ಮಿಂದೆ ಅನಿರುದ್ಧನ ದಯದಿ ರಾಮರಾಮ 16 ಪುಣ್ಯಕ್ಷೇತ್ರದಲ್ಲಿ ಪುರುಷೋತ್ತಮನಿದ್ದಾನೆ ರಾಮರಾಮ ಪುಣ್ಯಕ್ಷೇತ್ರವ ಕಂಡೆ ಪುರುಷೋತ್ತಮನ ದಯದಿ ರಾಮರಾಮ 17 ವೈತರಣಿಯಲ್ಲಿ ಅಧೋಕ್ಷಜನಿದ್ದಾನೆ ರಾಮರಾಮ ವೈತರಣಿದಾಟಿದೆ ಅಧೋಕ್ಷಜನ ದಯದಿ ರಾಮರಾಮ 18 ನಿರ್ಮಲ ಗಂಗೆಲಿ ನರಸಿಂಹನಿದ್ದಾನೆ ರಾಮರಾಮ ನಿರ್ಮಲ ಗಂಗೆಯ ಮಿಂದೆ ನರಸಿಂಹನ ದಯದಿ ರಾಮರಾಮ 19 ವೈಕುಂಠಗಿರಿಯಲ್ಲಿ ಅಚ್ಯುತನಿದ್ದಾನೆ ರಾಮರಾಮ ವೈಕುಂಠಗಿರಿ ಕಂಡೆ ಅಚ್ಯುತನ ದಯದಿ ರಾಮರಾಮ20 ಜಾಹ್ನವಿಯಲ್ಲಿ ಜನಾದರ್Àನಿದ್ದಾನೆ ರಾಮರಾಮ ಜನಾರ್ದನನ ದಯದಿ ಜಾಹ್ನವಿಯಲಿ ಮಿಂದೆ ರಾಮರಾಮ21 ಉಡುಪಿ ಕ್ಷೇತ್ರದಲ್ಲಿ ಉಪೇಂದ್ರನಿದ್ದಾನೆ ರಾಮರಾಮ ಉಡುಪಿ ಕ್ಷೇತ್ರವ ಕಂಡೆ ಉಪೇಂದ್ರನ ದಯದಿ ರಾಮರಾಮ 22 ಹರಿಯುವ ನದಿಯಲ್ಲಿ ಶ್ರೀ ಹರಿಯಿದ್ದಾನೆ ರಾಮರಾಮ ಹರಿಯ ದಯದಿಂದ ಹರಿವ ನದಿಯ ಮಿಂದೆ ರಾಮರಾಮ 23 ಕೃಷ್ಣನ ದಯದಿ ಸಕಲ ಕಷ್ಟ ಬಿಟ್ಟಿತು ರಾಮರಾಮ 24 ಭಕ್ತಿಲಿಪ್ಪತ್ನಾಲ್ಕು ನಾಮ ಪೇಳುವರಿಗೆ ರಾಮರಾಮ ಭುಕ್ತಿ ಮುಕ್ತಿಯ ನೀವ ವಿಜಯವಿಠ್ಠಲರೇಯ ರಾಮರಾಮ 25
--------------
ವಿಜಯದಾಸ
ಕಾಶಿಯಿಂದ ಬಂದ ಬಾಗೀರಥಿಯು ತನ್ನ ವಾಸಕ್ಕೆ ತೆರಳಿದಳು ಲÉೀಸಾಗಿ ತನ್ಹ ಮನದ ಸಂಕಲ್ಪವು ವಾಸಿಯಾಗಲು ತನ್ಹಾಶೆ ಪೊರೈಸಿಸಿ ಪ ಮದದಾನೆ ತನ್ನ ಕಾಲುಗಳ ಸಂಕೋಲೆಯ ನೊದೆದು ಕಳೆವ ತೆರದಿ ಪದುಳದಿ ಶ್ರೀಗುರು ಮುದದಿ ಬಿಡಿಸಿ ತನ್ನ ಸದಮಲಾನಂದವ ಸತತ ಪಡೆವೆನೆಂದು 1 ಮುತ್ತೈದೆತನದಿ ತೆರಳಿಹೋಗಬೇಕೆಂಬ ಚಿತ್ತದಿವಿಸ್ಮರಣೆಗೈದು ಪ್ರತ್ಯುಗಾತುಮ ಆತ್ಮಾರಾಮನ ಸಂಗಡ ಚಿತ್ತೈಸಿದಳು ತನ್ನ ಉತ್ತಮ ಕಾಶಿಗೆ 2 ಪತಿಯ ವಚನದ ಸಂಗತಿಗಳ ಕೇಳುತ ಅತಿ ಹಿತ ತನಗಾಗಲು ಮತಿಗೆ ಮಂಗಲವಾದ ಮುಕುತಿಯ ಸಾಧಿಸಿ ನುತ ವಿಮಲಾನಂದ ಸತತ ಪಡುವೆನೆಂದು 3
--------------
ಭಟಕಳ ಅಪ್ಪಯ್ಯ
ಕಾಳ ಬೆಳದಿಂಗಳು ಈ ಸಂಸಾರ ಕತ್ತಲೆ ಬೆಳದಿಂಗಳು ಪ ಸತ್ಯಕ್ಕೆ ಧರ್ಮನು ಲೆತ್ತವನಾಡಲುಅರ್ಥ ಭಾಂಡರವೆಲ್ಲವ ಸೋತುಮತ್ತೆ ವಿರಾಟರಾಯನ ಮನೆಯಲ್ಲಿತೊತ್ತಾದಳು ದ್ರೌಪದಿ ಒಂದು ವರುಷ1 ಪುಂಡರೀಕಾಕ್ಷ ಪುರುಷೋತ್ತಮ ಹರಿಯಬಂಡಿಬೋವನಾದ ಪಾರ್ಥನಿಗೆ ಭೂ -ಮಂಡಲನಾಳುವ ಹರಿಶ್ಚಂದ್ರರಾಯನುಕೊಂಡವ ಕಾಯ್ದನು ಹೊಲೆಯನಾಳಾಗಿ2 ಉಂಟಾದ ಕಾಲಕ್ಕೆ ನೆಂಟರು ಇಷ್ಟರುಬಂಟರಾಗಿ ಬಾಗಿಲ ಕಾಯ್ವರುಉಂಟಾದತನ ತಪ್ಪಿ ಬಡತನ ಬಂದರೆಒಂಟೆಯಂತೆ ಗೋಣ ಮೇಲೆತ್ತುವರು 3 ಉಂಬಾಗ ಉಡುವಾಗ ಕೊಂಬಾಗ ಕೊಡುವಾಗಬೆಂಬಲದಲಿ ನಲಿನಲಿವುತಿಹರುಬೆಂಬಲತನ ತಪ್ಪಿ ಬಡತನ ಬಂದರೆಇಂಬು ನಿನಗಿಲ್ಲ ನಡೆಯೆಂಬರು4 ಏರುವ ದಂಡಿಗೆ ನೂರಾಳು ಮಂದಿಯುಮೂರು ದಿನದ ಭಾಗ್ಯ ಝಣ ಝಣವುನೂರಾರು ಸಾವಿರ ದಂಡವ ತೆತ್ತರೆರಂಗವಿಠಲನೆ ಸರಿಯೆಂಬೊರಯ್ಯ5
--------------
ಶ್ರೀಪಾದರಾಜರು
ಕಿನ್ನೇಶದೂತರು ಎಳಿಯಾರೆ ಪ ಹಿಂದಿನ ದುಃಖವ ನೆನಸಿಕೊ | ನೀನು | ಬಂದದೆ ಒಂದೊಂದು ಗುಣಿಸಿಕೊ | ಮುಂದೀಗ ಎಚ್ಚತ್ತು ನೋಡಿಕೊ | ಇದು ಸಂದೇಹವೆನದೆ ನಿಜವಾಗಿ ತಿಳಿದಕೊ 1 ಗರ್ಭಯಾತನೆ ಬಲು ಹೇಸಿಕೆ | ವಳಗೆ | ನಿರ್ಬಂಧವಾಗಿ ಬೆಳೆದು ಮೇಲಕೆ | ದೊಬ್ಬುವರು ನಿನ್ನ ಕೆಳಿಯಿಕೆ | ಬಿದ್ದು ಅಬ್ಬಬ್ಬ ಐಯ್ಯಯ್ಯವೆಂದು ಅಳಲೇಕೆ2 ಬಾಯಿಗೆ ಬಜೆ ಬೆಣ್ಣೆ ಕೊಡುವರು | ತಾಯಿ | ಬಳಗವೆಲ್ಲ ಸಂತೋಷಬಡುವರು | ಆಯಿತು ಮಗುವೆಂದು ನುಡಿವರು | ಇವನ ಆಯುಷ್ಯ ಕಡಿಮೆಯೆಂದದು | ಅರಿಯದೆ ಕೆಡುವರು 3 ಚಿಕ್ಕಂದು ಎತ್ತಿ ಮುದ್ದಾಡಿ ಬೆಳಸಿ | ಅಕ್ಕರದಿಂದಲಿ ನೋಡಿ ಕೊಂಡಾಡಿ | ಫಕ್ಕನೆ ಕುಲಗೋತ್ರರ ಕೂಡಿ | ಒಬ್ಬ | ರಕ್ಕಸಿಯ ತಂದು ನಿನಗೆ ಜತಿ ಮಾಡಿ 4 ನೆಲೆ ಇಲ್ಲದ ಮಮತೆಯೊಳು | ಮುಳುಗಿ | ತಲೆಕೆಳಗಾಗಿ ನಡೆದು ಹಗಳಿರುಳು | ಕುಲನಾಶಕನೆಂಬೊದು ಬಾಳು | ಬಿಡು | ತಿಳಿಯ ಪೇಳುವೆನು ಎತಾರ್ಥವ ಕೇಳು5 ದುರ್ವಾಸನೆ ನಾರುವ ಬೀಡು | ಇದು | ಸ್ಥಿರವಲ್ಲ ಎಂದಿಗು ಹಂಬಲ ಬಿಡು | ಹರಿದಾಸರ ಸಂಗ ಮಾಡು | ಇನ್ನು | ಹರಿನಾಮಗಳ ಕೊಂಡಾಡು 6 ಆವಾವ ಜನ್ಮದಲಿ ನೀನು | ಒಮ್ಮೆ | ದೇವ ಎಂದೆನಲಿಕ್ಕೆ ನಾಲಿಗಿತ್ತೇನು | ಈ ಉತ್ತಮವಾದ ಈ ತನು | ಬಂತು | ಕೋವಿದನಾಗಿ ಶ್ರೀ ಹರಿಯನ್ನು ಕಾಣು7 ಆ ಮರ ಈ ಮರ ಎನಲಾಗಿ | ಅವನ | ತಾಮಸದ ಜ್ಞಾನ ಪರಿಹಾರವಾಗಿ | ಸ್ವಾಮಿಯ ದಯದಿಂದ ಮಹಯೋಗಿ | ಎನಿಸಿ | ಭೂಮಿಯೊಳಗೆ ಬಾಳಿದನು ಚನ್ನಾಗಿ 8 ಸಿರಿ | ರಂಗ ಯೆನಲಾಗಿ ಕಾಯ್ದ ಶ್ರೀಪತಿ | ವಿಜಯವಿಠ್ಠಲ ನಂಬು 9
--------------
ವಿಜಯದಾಸ
ಕುಟ್ಟಿ ಕೊಳ್ಳೊ ಮಾಣಿ ನಿನ್ನ ಹುಟ್ಟಿಸಿರುವ ದೈವಕೆ ಹೊಟ್ಟೆ ತುಂಬ ಬಾಯಿಗಾನು ಬಿಟ್ಟೆನೆಂದ್ರೆ ಕ್ಷೀರವಿಲ್ಲ ಪ ಕೊಟ್ಟು ಪಡೆಯಲಿಲ್ಲ ಮುನ್ನಹುಟ್ಟಿ ಪಡೆಯಲಿಲ್ಲ ಮುಂದೆ ಹಟ್ಟಿಯೊಳಗಣಾಕಳೆಲ್ಲ ನಷ್ಟವಾಯ್ತು ರೋಗದಿಂದ 1 ಅತ್ತು ಸಾಯ ಬೇಡ ನೀನು ಎತ್ತಿ ಕೊಂಬರೊಬ್ಬರಿಲ್ಲ ಭತ್ತವನ್ನು ಕುಟ್ಟಿ ನಾನು ತುತ್ತಮಾಡಿ ತಿನ್ನಿಸುವೆನು 2 ನೀರು ಕಾದು ಬಂತು ಬಿಸಿಯ ನೀರ ನೆರೆವೆನೀಗ ನಿನಗೆ ಸಾರಿ ಮೊಲೆಯ ನೂಡಿ ನನ್ನ ಸೀರೆ ಸೆರಗಹಾಸಿ ಕೊಡುವೆ 3 ದೊಡ್ಡ ಕೂಸ ಕಾಣೆಯವಳು ಗುಡ್ಡೆ ಬಸವಿಯಾದಳೀಗ ಚಡ್ಡೆಯಲ್ಲದೆ ಹೋಗುತಿಹಳು ಸಡ್ಡೆ ಮಾಡಳೆನ್ನಮಾತ 4 ಇಂತೆನುತ್ತ ಬಾಲಕನ್ನ ಸಂತವಿಟ್ಟು ನಾರಿ ಲಕ್ಷ್ಮೀ ಕಾಂತ ಮಾಡ್ದ ಲೀಲೆಗಳನು ನಿಂತು ಪಾಡಿಪೋದಳಾಕೆ 5
--------------
ಕವಿ ಪರಮದೇವದಾಸರು
ಕುಣಿದಾಡೊ ರಂಗ ನಲಿದಾಡೊ ಪ. ಕುಣಿದಾಡೊ ಕುಂದಣದ ಸರಳೆನಲಿದಾಡೊ ಮಾಣಿಕದ ಹರಳೆ ಅ.ಪ. ಪತಿಶಾಪದಿ ಶಿಲೆಯಾದ ಗೌತಮಸತಿಯ ಮೆಟ್ಟಿ ಪೆಣ್ಣಮಾಡಿಅತಿದಿವ್ಯ ಶ್ರೀಚರಣಾರವಿಂದಗತಿಯಿಂದಲಿ ಧಿಂಧಿಮಿಕೆನ್ನುತ 1 ಗಕ್ಕಸದಿಂ ಶಕಟಾಸುರನಸೊಕ್ಕ ಮುರಿದು ಬಂಡಿಯನೊದೆದುಚೊಕ್ಕ ಶ್ರೀಚರಣಾರವಿಂದಧಿಕ್ಕಿಟ ಧಿಮಿಕಿಟ ಝಂಕಿಟವೆನ್ನುತ 2 ಬಲಿಯ ಮೆಟ್ಟಿ ಕಾಳಿಂಗನ ಹೆಡೆಯತುಳಿದು ನಾಟ್ಯವನಾಡಿಚೆಲುವ ಶ್ರೀಹಯವದನ ನಿಮ್ಮಘಲುಘಲು ಗೆಜ್ಜೆ ಘಿಲುಘಿಲುಕೆನ್ನುತ 3
--------------
ವಾದಿರಾಜ
ಕುತ್ಸ್ಸಿತರೊಲ್ಲದ ಮತ್ಸರವಿಲ್ಲದ ಸತ್ಸಭೆ ಕೇಳಲೀ ಕೃತಿಯ ಪ. ಈ ಯುಗದವರಿಗೆ ಕಲಹ ಮಂಡಿಸಿದಗೆ ಆ ಯುಗದವರುಕ್ತಿ ಬೇಕು ನ್ಯಾಯದವರ ಕೇಳು ಪೂರ್ವಶಾಸನ ಸಾಕ್ಷಿ ಹೇಯವೆಂದಾರು ಪೇಳುವರು1 ನಿಮ್ಮವರಾಗಮ ನಮ್ಮವರಿಗೆ ಸಲ್ಲ ನಮ್ಮೋಕ್ತಿ ನಿಮಗೆ ಮೆಚ್ಚಲ್ಲ ಇಮ್ಮನದವರಿಗೆ ಇನ್ನೊಬ್ಬ ಹಿರಿಯರ ಸಮ್ಮತಿ ಬೇಕು ನಿರ್ಣಯಕೆ2 ಯುಕ್ತಿ ಮಾತ್ರವ ನಂಬಿ ನಡೆವುದುಚಿತವಲ್ಲ ಯುಕ್ತಿ ಸರ್ವತ್ರ ಬಂದಿಹುದು ಕುತ್ಸಿತ ದೇಹಬಂಧವ ಬಿಡಿಸುವ ನರ- ರುತ್ತಮರೆಂದರೇನೆಂಬೆ 3 ಹಿಂಸೆ ಸಲ್ಲದು ಗಡ ಕರದ ಚಿಮುಟಿಯಿಂದ ಏಸು ಕೂದಲ ಕೀಳುತಿರಲು ಏಸೋ ಜೀವಗೆ ನೋವು ಅದು ಹಿಂಸೆ ದೋಷದ ಒಂದಂಶಕ್ಕೆ ಸರಿ ಬಂದಿಹುದೆ 4 ಕೇಶ ಆಚ್ಛಾದನ ಸಂಕಟದಿಂದೆಂದ ಕ್ಲೇಶ ಸೂಸುವ ನಯನಾಂಬುಧಾರೆ ಆ ಸಮಯದಿ ಪರಮಸುಖವೆಂಬ ಮಾತು ಸತ್ಯವ್ರತಕೆ ಎಂತೊಪ್ಪಿಹುದೊ 5 ವೇದಶಾಸ್ತ್ರವ ಬಲ್ಲ ಹಾರವನಲ್ಲ ಹು- ಟ್ಟಿದ ದಿವಸ ಮೊದಲಾಗಿ ಪಾತಕಿ ತಮ್ಮೊ - ಳಾದನೆಂಬುದು ಬಲು ಚೋದ್ಯ6 ಪಾಪ ಸಲ್ಲದು ಗಡ ಪರನಿಂದೆಯಿಂದಾದ ಪಾಪವೆ ತಾವು ಶುದ್ಧರೆಂಬ ಪರಿ ಆತ್ಮಸ್ತುತಿಯಿಂದೊಂದಾ ಪಾಪ ಲೇಪಿಸದಿಹುದೆ ತಮ್ಮವರ 7 ಸ್ಥಾವರಜೀವರ ಸಾವಿರ ಕೋಟಿಯ ಆವಾಗ ಕೊಂದು ತತ್ತನುವ ಜೀವಿಪೆನೆಂದು ಬೇಯಿಸಿ ತಿಂಬ ಪಾಪವ ಆವ ನಿಮಗೆ ಅಹುದೆಂದ 8 ಇಂದ್ರಿಯಹತ್ತಿಲ್ಲದವರ ಕೊಲ್ಲುವುದಕ್ಕೂ ಹಾ- ಗೆಂದ ಗುರುವ ನಾನೇನೆಂಬೆ ಅಂದಚೆಂದಗಳ ಮೂಕರ ಪಕ್ಷ್ಷಿಯಂಡದ ನಿಂದ್ಯ ಹಿಂಸೆಯ ಸಲಿಸುವರೆ 9 ಸಂಗೀತಶ್ರವಣದಿ ಧೂಪಾಘ್ರಾಣದಿ ಮೂಲ ಹಿಂಗೂಡಿದುದಕ ಸ್ವಾದನಾದಿ ಅಂಗನೆ ಈಕ್ಷಣ ಸ್ಪರ್ಶನದಿಂ ಸ್ಥಾವ- ರಂಗಳು ಜಂಗಮದಂತೆ 10 ತಮ್ಮ ಕರ್ಮದಿ ತಾವೆ ಸಾವರೆಂಬ ಮತದಿ ಕಮ್ಮಿಯಾದ ವ್ರಣಕ್ಕೆ ಮದ್ದನಿಕ್ಕಲು ನಿರ್ಮಾಯನದೊಳಗೇಸೊ ಹಿಂಸೆ 11 ಅಕ್ಕಿಯ ಕುಟ್ಟಲು ಬಕ್ಕು ಜೀವರ ಹಿಂಸೆ ಮಕ್ಕಳುಂಬುದು ಮಾಂಸ ಪ್ರಿಯಳ ಚೆಂದುಟಿ ಮಾಂಸ ಇಕ್ಕು ಬಾಯೊಳು ದಂತದೆಲುವೆ 12 ಕರದ ತುಂಬವಿದೇನು ಕೊರಳ ಹಾರವಿದೇನು ಚರಣದ ನಖಪಂಕ್ತಿಯಿದೇನು ಖರ ಭೂತಪಂಚಕ ಅನ್ನ ಮಾಂಸಗಳೊಳು ಬರಿದೆ ನಿಂದಿಸಲೇಕೆ ಪರರ 13 ಉಪ್ಪಿನೊಳಗೆ ತೋರ್ಪ ಚಿಪ್ಪ ನೋಡದೆ ಪರ- ರಲ್ಪ ದೋಷಗಳರಸುವರೆ ಒಪ್ಪುವುದೆಂತೊ ಶತ್ರುಗಳ ನಿಂದನೆ ಕೊಲು- ತಿಪ್ಪ ನೃಪಗೆ ಜಿನಮಾರ್ಗ 14 ಬಸ್ತಿಯ ಕಟ್ಟಲು ಭೂಸ್ಥ ಜೀವರ ಹಿಂಸೆ ಸುತ್ತ ಯಾತ್ರೆಯ ಮಾಡಲೇಸೊ ತತ್ತಜ್ಜೀವರ ಹಿಂಸೆ ತೈಲಸ್ನಾನದಿ ಹಿಂಸೆ ವಸ್ತ್ರ ಒಗೆಯಲೇಸೋ ಹಿಂಸೆ 15 ಸಲ್ಲದ ಹಿಂಸೆಯ ಸಲಿಸಿದರೆಂಬರ ಬಲ್ಲವಿಕೆಯ ನಾನೇನೆಂಬೆ ಬಲ್ಲಿದ ಹಿಂಸೆಗೆ ಒಳಗಾದರು ಎಲ್ಲ ತಾ- ಕೈವಲ್ಯ ಸಾಧಕರು 16 **** ತೊಳೆಯದ ಬಲುಹಿರಿಯರ ನಾತಕ್ಕೆ ಸೋತು ಬೆಂಬಿಡದೆ ಆತುರದಿಂ ಬಪ್ಪನೊಣಗಳ ಗೀತವ- ನೋತು ಕೇಳುವ ಶಿಷ್ಯ ಧನ್ಯ 17 ಮೂತ್ರ ದ್ವಾರದ ಮಲ ಶ್ರೋತ್ರನೇತ್ರದ ಮಲ ಗಾತ್ರ ನಾಸಿಕದ ಮಲ ಯಾತ್ರೆಯ ಮಾಡುವರಕ್ಷಿಗೆ ಕೌತುಕ ಪಾತ್ರವಾಯಿತು ಬಲು ಚಿತ್ರ 18 ******************* 19 ಏಕ ಭಾಗದೊಳು ಸ್ತ್ರೀ ವಾಸ ಏಕಾಂತದಿಪ್ಪುದು ಲೋಕಸಲ್ಲದೆಂಬರ ಈ ಕಾಮನೆಂತು ಬಿಟ್ಟಿಹನು 20 ಬಸ್ತಿಯ ಪ್ರತಿಮೆಯಲಿಪ್ಪ ದೇವನದಾರು ಮುಕ್ತರಿಗೀಭೋಗ ಸಲ್ಲ ಮುಕ್ತರÀಲ್ಲದ ಜೀವ ದೇವರೆಂತಹರೆಂದು ವ್ಯರ್ಥವಾಯಿತು ನಿನ್ನುತ್ಸಾಹ 21 ನೋಡುವ ನಯನಕ್ಕೆ ಮಾಡುವ ಪೂಜೆಗೆ ಕೂಡಿದ ಬಹುವಿತ್ತ ವ್ಯಯಕ್ಕೆ ಈಡಾಯಿತಂಶ ಕೇವಲ ಬೊಂಬೆ ಶಿವಶಿವ ಆಡುವ ಶಿಶುಗಳ್ಪೇಳಿದರೆ 22 ಹೆಂಡಿರೆ ಸಂಸಾರವಾದರೆ ಹಸಿತೃಷೆ ಉಂಡು ಮಲಗುವುದು ಮುಕ್ತರಿಗೆ ಮಂಡೆಯ ಬೋಳಿಸಿ ದೇಹದಂಡನೆ ಮಾಡಿ ಕೈ- ಕೊಂಡ ಮಾತ್ರದಿ ಮುಕ್ತರಹರೆ 23 ಮತ್ರ್ಯ ದೇಹವಿರಲು ಮುಕ್ತರೊಬ್ಬರು ಅಲ್ಲ ಸತ್ತಮೇಲೇನಾದರೆಂತೊ ಅತ್ತು ಕಾಡುವ ಶಿಷ್ಯರೆಂತರು ಕಾಂಬರು ಸರ್ವ- ಕರ್ತೃ ಶ್ರೀಹರಿ ತಾನೆ ಬಲ್ಲ 24 ದುಃಖವೆ ಸಂಸಾರ ದುಃಖವಿಲ್ಲದ ಸುಖ ಮುಕ್ತಿಯೆಂಬುದು ಬುಧರ್ಗೆ ಮಾತ್ರ ಮಿಕ್ಕದೆ ದುಃಖವಿತ್ತರೆ ಭವವೆನಿಪುದು ದುಃಖವೆ ದೂರ ಮುಕ್ತರಿಗೆ 25 ಪುನರ್ಭವವೆÉನ್ನೆ ಶ್ರುತಿ ಅಮೃತವುಂಡರೆ ಮೋಕ್ಷ ಜನನ ಮರಣವಿಲ್ಲದಖಿಳ ಜನರ ದುಃಖವನವತರಿಸಿ ಕಳೆವ ನಾರಾ- ಯಣನೆ ನಿರ್ದೋಷ ನಿತ್ಯಸುಖಿ 26 ಪಾತಕ ವ್ರತವ ಕೈಗೊಂಡ ಸ್ತ್ರೀ- ಜಾತಿಯ ಮುಟ್ಟಲ್ಲೆಂಬುವನು ಖ್ಯಾತ ಶ್ರೀಹರಿಗೆ ಪಾತಕಮುಟ್ಟದೆಂಬರ ಮಾತನದೇಕೆ ಮನ್ನಿಸನು 27 ಕೆಸರ ತೊಳೆದ ನೀರು ಕೆಸರ ಬಾಧಿಪುದೆ ತಾ- ವೈರಿ ಸೂರ್ಯನೊಳು ತಮವೆ ವಿಷಹರ ಗರುಡಗೆ ವಿಷ ಲೇಪಿಸುವುದೆ ಕ- ಲುಷ ಮುಟ್ಟುವುದೆ ಪಾಪಾಂತಕನ 28 ಸುಡುವಗ್ನಿ ಕಡಿವಸ್ತ್ರ ಕಡುಕೋಪಿ ಸರ್ಪನ ತಡೆಯಬಲ್ಲರೆ ತುಡುಕುವರೆ ಬಿಡು ಮನಭ್ರಾಂತಿಯ ಹಯವದನನೆ ಜಗ- ದೊಡೆಯ ಸರ್ವತ್ರ ನಿರ್ದೊಷ 29
--------------
ವಾದಿರಾಜ
ಕುಲ ಕುಲವೆಂದು ಹೊಡೆದಾಡದಿರಿ ನಿಮ್ಮಕುಲದ ನೆಲೆಯನೇನಾದರೂ ಬಲ್ಲಿರ ಪ ಹುಟ್ಟದ ಯೋನಿಗಳಿಲ್ಲ ಮೆಟ್ಟದ ಭೂಮಿಗಳಿಲ್ಲಅಟ್ಟು ಉಣ್ಣದ ವಸ್ತುಗಳಿಲ್ಲಗುಟ್ಟು ಕಾಣಿಸ ಬಂತು ಹಿರಿದೇನು ಕಿರಿದೇನುನೆಟ್ಟನೆ ಸರ್ವಜ್ಞನ ನೆನೆ ಕಂಡ್ಯ ಮನುಜ 1 ಜಲವೆ ಸಕಲ ಕುಲಕ್ಕೆ ತಾಯಲ್ಲವೆಜಲದ ಕುಲವನೇನಾದರೂ ಬಲ್ಲಿರಜಲದ ಬೊಬ್ಬುಳಿಯಂತೆ ಸ್ಥಿರವಲ್ಲವೀ ದೇಹನೆಲೆಯನರಿತು ನೀ ನೆನೆ ಕಂಡ್ಯ ಮನುಜ 2 ಹರಿಯೆ ಸರ್ವೋತ್ತಮ ಹರಿಯೆ ಸರ್ವೇಶ್ವರಹರಿಮಯವೆಲ್ಲವೆನುತ ತಿಳಿದುಸಿರಿ ಕಾಗಿನೆಲೆಯಾದಿಕೇಶವರಾಯನಚರಣ ಕಮಲವ ಕೀರ್ತಿಸುವನೆ ಕುಲಜ 3
--------------
ಕನಕದಾಸ
ಕುಲಾಂಬುಧಿ ಚಂದ್ರ ಶ್ರೀ ರಾಮಚಂದ್ರ ಪ ಒಂದೇ ಭಾಷಣ ನಿನಗೊಂದೇ ಮಾರ್ಗ ಸಾಕು ಒಂದೇ ಸ್ಥಾನದೊಳಾಶ್ರಿತರನೇ ನಿಲ್ಲಿಸುವಿ ಒಂದೇ ಬಾರಿಯೆ ಕೊಟ್ಟುದ್ಧರಿಸುವೆÉ ಭೃತ್ಯರ ಒಂದೇ ಪತ್ನಿಯು ನಿನಗೆಂಬುದು ಬಿರುದು 1 ನಿನ್ನ ತಮ್ಮನು ನಿನ್ನ ರಾಣಿಯ ಭೃತ್ಯನು ನಿನ್ನಂಥ ಭಾಗ್ಯ ಮತ್ತೆಲ್ಲಿ ತೋರುವುದು ಘನ್ನ ಮಹಿಮ ನೀನು ಮಲತಾಯಿ ನುಡಿಯಲು ತನ್ನ ರಾಜ್ಯಗಳನ್ನು ತಮ್ಮನಿಗೊಪ್ಪಿಸಿದೆ 2 ಭರತನು ನಿನ್ನಡಿಗಾಗಿ ಬೇಡಿದರೂ ನೀ ಹರುಷದಿಂದಲಿ ಕಾಲಾಂತರವ ಪೇಳಿರುವಿ ಮರಳಿ ರಾಜ್ಯದಿ ಬಂದು ರಾಜೇಶ ಹಯಮುಖ ಕರುಣಿಸಿ ಪಟ್ಟಾಭಿಷಿಕ್ತನಾಗಿರುವಿ 3
--------------
ವಿಶ್ವೇಂದ್ರತೀರ್ಥ
ಕುಶಲಿಯಾಗಿರೈ ಯಶವಪೊಂದಿರೈ ಪ. ಕುಶಿಕತನುಜ ಯಾಗಪಾಲಕನೊಲವ ಪಡೆಯಿರೈ ಅ.ಪ. ಕಾಂತಾಪುತ್ರರಿಂ ಅನಂತ ಭಾಗ್ಯಮಂ ಶಾಂತಚಿತ್ತಮಾಂತುಧರೆಯೊಳನಂತ ಕಾಲಮುಂ 1 ವಂಶದೀಪನುಂ ಪ್ರಶಂಸನೀಯನುಂ ಕಂಸದಮನ ಭಕ್ತನುಂ ಎನಿಸಿ ಸಂತತಂ2 ಶೇಷಗಿರಿವರಂ ಪೋಷಿಸಲ್ಕೆ ತಾಂ ದೇಶಭಕ್ತರಾಗಿ ಬಾಳಿ ವಾಸಿಪಂಥದಿಂ 3
--------------
ನಂಜನಗೂಡು ತಿರುಮಲಾಂಬಾ
ಕೂಗಳತಿ ಎಂಬೊ ಸಂಶಯಸಲ್ಲಾಪ ಸಮಚಿತ್ತದಲ್ಲಿ ಇದ್ದು | ಸಮ ವಿಷಮ ತಿಳಿದೆದ್ದು | ಕುಮತ ಮತವನು ವದ್ದು | ಬಲು ಉಬ್ಬೆದ್ದು | ಕಮಲ ಪೀಠನ ಹೊದ್ದು | ಕ್ರಮಣಿ ಯೋಪಾದಿಯಲಿದ್ದು | ತಮಕ್ಕೆ ಹರಿನಾಮ ಮದ್ದು | ಶ್ರಮ ಕಳುಕದವಗೆ1 ಭಾಗವತರ ನೋಡಿ | ವೇಗ ಮನಸನು ಮಾಡಿ | ಬಾಗಿ ಸಿರವನೆ ನೀಡಿ | ನಲಿದು ಪಾಡಿ | ಯೋಗವಾಗದೆ ಕೂಡಿ | ಭೋಗವನು ಈಡಾಡಿ | ತೂಗಿ ಮೈಯಲಾಡಿ ಪುಣ್ಯದನವನಿಗೆ 2 ಹರಿ ಭಕುತಿಯ ಬೇಕು | ನರಹರಿಯ ಸ್ಮರಣೆ ಬೇಕು | ಹರಿಕಥಾ ಬೇಕು | ಹರಿ ಎನಲಿ ಬೇಕು | ಹರಿಯ ಭಜಿಸಲಿ ಬೇಕು | ಹರಿವೊಲಿಮೆ ಇರಬೇಕು | ಹರಿಯಲ್ಲದಿಲ್ಲೆಂದು ಹರಿದು ನುಡಿದವನಿಗೆ 3 ಆಸಿಯನು ಕಳೆದು | ದುರ್ವಾಸನೆ ಹಮ್ಮು ಕಳೆದು | ಕ್ಲೇಶವನು ಅಳಿದು | ತೋಷದಲಿ ಬೆಳೆದು | ದೋಷರಾಶಿಗೆ ಮುಳಿದು | ದೂಷಕರನೆ ಅಳಿದು | ಭೇಷಜವನೆ ಅಳಿದು | ದಾಸರ ಬಳಿಗೆ ಸುಳಿದವಗೆ 4 ಆಚಾರವನು ಪಿಡಿದು | ಸೂಚನೆ ಅರಿತು ನಡೆದು | ವಾಚಗಳ ಮಿತಿ ನುಡಿದು | ನಾಮಗುಡಿದು | ಸಿರಿ ವಿಜಯವಿಠ್ಠಲರೇಯನ | ಯೋಚನಿಂದಲಿ ಬಿಡದೆ | ದಿನವ ಹಾಕುವನಿಗೆ 5
--------------
ವಿಜಯದಾಸ
ಕೂಗಿತು ತಾಮ್ರದ ಚೂಡ ಪರ ಇಲ್ಲ್ಲೆಂದು ಪ ಪಕ್ಕಗಳೆರಡು ಚಪ್ಪರಿಸಿ ಡಂಗುರುವ ಹೊಯ್ಯೆ ಸೂಕ್ಕಿದವರ ಎದೆ ಜರ್ಝರಿಸೆ ರೆಕ್ಕಿಯ ಮುಖವೆತ್ತಿ ಹರಿಸರ್ವೋತ್ತಮನೆಂದು ಕೊಕ್ಕಟೆ ಕೊಕ್ಕಟೆ ಕೊಕ್ಕಟ್ಟೆ ಕೋ ಎಂದು1 ಒಂದು ಝಾವದಿ ಓಂಕಾರನೆಂದು ಕೂಗೆ ಇಂದಿರಾಪತಿ ವಿಧಿಜನಕನೆಂದೂ ಸಂದೇಹಪಡಬೇಡಿ ಸಕಲಾಂತರ್ಯಾಮಿ ಶ್ರೀ ಬಿಂದುಮಾಧವನಲ್ಲದಿಹಪರವಿಲ್ಲವೆಂದು 2 ಎರಡು ಝಾವದಿ ಪುರುಷೋತ್ತಮನೆಂದು ಗರುಡಾಚಲ ನರಸಿಂಹನೆಂದು ಮೂರನೆ ಝಾವಕ್ಕೆ ವೀರನಾರಾಯಣ ಹÀರಿಗಯಾಗದಾಧರನಲ್ಲದಿಲ್ಲವೆಂದು3 ಏಕೋ ನಾರಾಯಣ ದೇವನೆಂದು ಗೋಕುಲಪತಿಯಲ್ಲದಿಹಪರ ಇಲ್ಲವೆಂದು 4 ಯಾಮ ಆರರೊಳು ವ್ಯಾಸಮೂರ್ತಿ ಎಂದು ರೋಮಕೋಟಿ ಬ್ರಹ್ಮರುದ್ರರೆಂದು ಸಾಮಗಾಯನ ಕಾವೇರಿ ರಂಗೇಶ ಸ್ವಾಮಿ ಅಳಗಿರಿ ತಿಮ್ಮನಲ್ಲದಿಲ್ಲವೆಂದು 5 ಏಳು ಝಾವದಿ ವೇಣಿಮಾಧವನೆಂದು ಮೇಲಗೋಟೆ ಚಳ್ಳಾಬಳ್ಳನೆಂದು ಶ್ರೀಲೋಲ (ಆಯೋಧ್ಯಾ) ರಘುರಾಮ ಗಂಡಕಿ ಪರ ಇಲ್ಲೆಂದು6 ಶ್ವೇತ ವರಾಹನೆಂದು ಮಾವ ಮರ್ದನ ಜನಾದರ್Àನನೆಂದು ಶ್ರೀ ಉಡುಪಿಯ ಕೃಷ್ಣ ವಿಜಯವಿಠ್ಠಲ ತಿಮ್ಮ ದೇವನಲ್ಲದೆ ಬೇರೆ ಇಹಪರ ಇಲ್ಲವೆಂದು 7
--------------
ವಿಜಯದಾಸ
ಕೂಗಿದರು ಒಳಗೇ ಕದವ ತೆಗೆಯಂದು ಪ ಸತಿಯರು ತಾವು ಆಗ ಆನು- ನಿನ್ನ ನಾವು ಬಲ್ಲೆವು 1 ಮೆಲ್ಲನÉ ಬಾರೆ ನೀ ನಿಜವ ಮಾಡೀಗ 2 ಮನೆಯೊಳಿರಲು ' ಮಾರಜನಕನೆಂಬೊದು ಬಲ್ಲೆನೆ 3 ಇನ್ನು ನೀರೆ ನಿನ್ನ ಗಂಡನೆ ನಾನು ಓಯನ್ನ ಪ್ರಾಣಸಖಿ ಬೇಗ ಬಂದು ಕದವ ತೆಗೆ ಈಗ 4 ಎಲ್ಲಿಯವನು ಭಂಡತನ ಬಿಡುಇನ್ನು 'ಓಹೆನ್ನೆ ವಿಠಲ’ ಮಾಡುವದು ಇದು ರೀತಿಯಲ್ಲವು 5 ಚಂಡಿನಾಟ ಬಾ ಸಭಯದಿ ಓಯನ್ನ ಪ್ರಾಣಸಖಿ ಚಲುವೆ ಹೊರಗೆ ಬಾರದಿರುವೇ 6 ಅಷ್ಟು ಜಗದಲ್ಲಿ ಬಲ್ಲಿ 'ಓಹೆನ್ನೆ ವಿಠಲ’ ಚೇಷ್ಟಿಮಾಡದಲೆ ನಡಿಯಯ್ಯಾ 7 ದೇವರನ್ನು ಕೂಡಿತೆ ಓಯನ್ನ ಪ್ರಾಣಸಖಿ ಈಗ ಆಣಿ ಮಾಡಿಸಿ ಕೇಳು 8 ಅತ್ತಿಯನ್ನು ಕೂಡಿದವನೆ ಉತ್ತಮನೆ ನೀನು ಇನ್ನು ಎತ್ತಲ ಆಣೆಯು ನಿನಗೇ 'ಓ ಹೆನ್ನೆ ವಿಠಲ’ ಸತ್ಯವಂತನಾಗಿ ಹೇಳುವಿ 9 ಕಾಕು ಹೆಣ್ಣು ನಿನಗೆ ಥರವೆ ಓಯನ್ನ ಪ್ರಾಣಸಖಿ ಕಣ್ಣಿಲೆ ನೋಡದೆ ಕರಿಯೆ 10 ಪರಮ ಪರುಷನುಳ್ಳವರು ಪರಮಪುರುಷನ ಪಡೆವಂಥ ದೂರನಡಿಯೆ ಇಲ್ಲಿ ಎನಯ್ಯ 11 ಇನ್ನು ಸ್ವಲ್ಪ ನಿನಗೆ ತಿಳಿಯದೆ ಓಯನ್ನ ಪ್ರಾಣಸಖಿ ಸಾಗಿ ಬಂದು ನೋಡೆ ಬೇಗನೆ 12 ಏನು ಆಶ್ವರ್ಯವು ನಿನಗೆ ನಡಿಯಯ್ಯಾ 13 ಇನ್ನು ನಿನಗೆ ಇನ್ನಾದರೆ ಮನಸಿಗೆ ತಾರ 14 ನಿನಗೆ ಅರುವು ಇರಲು ಸೋಗು ಮಾಡಿನಡಿಯಯ್ಯಾ 15 ತಿಳಿಸುವೆನು ಮನಸು ಇಟ್ಟು ಮನ್ನಿಸೆನ್ನನು ಓಯನ್ನ ಪ್ರಾಣಸಖಿ ಮಾಡಬೇಡ ಹೀಗೆಯನ್ನನು 16 ಮರ್ಮವು ತಿಳಿಯದೆ 'ಒಹೆನ್ನೆವಿಠಲ’ ಮೋಸಮಾಡ ಬಂದಿ ನಡಿಯಯ್ಯಾ 17 ಹೇಳಿ ಎಲ್ಲರು ಹಿಗ್ಗುವ ವೇಳ್ಯೆದಿ 'ಓ ಯನ್ನ ಪ್ರಾಣಸಖಿಕೇಳಿದ ಮಾತನು ಹೇಳುವೆ 18 ಬಂದು ವಾಸವಾಗಿ ಹೇಸದೆ ಏನೆಂದು ಬಂದೆ 19 ಮಾನ ಪತಿಯೆಂಬ ಮಾರ್ಯದೆ ಓಯನ್ನ ಪ್ರಾಣಸಖಿ ಮನಸಿನಲ್ಲಿ ಏನು ಇಲ್ಲವು 20 ಮುನಿವಳಗೇ ಮಾನಪತಿ ಪುರುಷನೇನಯ್ಯಾ 21 ಮಾಡಿಕೊಳ್ಳದವನಿಗೆ ಧೈರ್ಯ ವಿಲ್ಲವೆ 22 ಅಂಜಿಕೆ ಏನಯ್ಯಾ 'ಓಹೆನ್ನೆ ವಿಠಲ’ ಧೈರ್ಯವು ಯಾಕೆ ನಿನಗಯ್ಯ 23 ಬಂದು ಇಷ್ಟು ತಡ ನಿನ್ನ ಗಂಡನೆನಾನು24
--------------
ಹೆನ್ನೆರಂಗದಾಸರು
ಕೂಗೆಲೋ ಮನುಜ ಕೂಗೆಲೋ ಪ ಸಾಗರಶಯನನೆ ಜಗಕೆ ದೈವವೆಂದು ಅ ಮಾಧವ ಕೃಷ್ಣ ಸಚ್ಚಿದಾನಂದೈಕ ಸರ್ವೋತ್ತಮ ಸಚ್ಚರಿತ ರಂಗ ನಾರಾಯಣ ವೇದ ಮತ್ಸ್ಯ ಮೂರುತಿಯೆಂದು1 ನರಹರಿ ಮುಕುಂದ ನಾರಾಯಣ ದೇವ ಪರಮ ಪುರುಷ ಹರಿ ಹಯವದನ ಸಿರಿಧರ ವಾಮನ ದಾಮೋದರ ಗಿರಿ ಕೂರ್ಮ ಮೂರುತಿಯೆಂದು2 ಪುರುಷೋತ್ತಮ ಪುಣ್ಯಶ್ಲೋಕ ಪುಂಡರೀಕ ವರದ ಅಪಾರ ಸದ್ಗುಣನಿಲಯ ಮುರುಮರ್ದನ ಮಂಜು ಭಾಷಣ ಕೇಶವ ನಿರ್ಮಲ ದೇವ ಭೂವರಾಹಮೂರುತಿ ಯೆಂದು 3 ನಿಗಮವಂದಿತ ವಾರಿಜನಾಭ ಅನಿರುದ್ಧ ಅಪ್ರಾಕೃತ ಶರೀರ ಸುಗುಣ ಸಾಕಾರ ಜಗದತ್ಯಂತ ಭಿನ್ನ ನರಮೃಗ ರೂಪಾನೆಂದು 4 ವಟಪತ್ರಶಯನ ಜಗದಂತರ್ಯಾಮಿ ಕೌಸ್ತುಭ ವಿಹಾರ ತಟಿತ್ಕೋಟಿ ನಿಭಕಾಯ ಪೀತಾಂಬರಧರ ನಿಟಿಲಲೋಚನ ಬಾಲವಟು ಮೂರುತಿಯೆಂದು5 ವಿಷ್ಣು ಸಂಕರುಷಣ ಮಧುಸೂದನ ಶ್ರೀ ಕೃಷ್ಣ ಪ್ರದ್ಯುಮ್ನ ಪ್ರಥಮ ದೈವವೆ ಸಾರಥಿ ರಾಮ ಅಚ್ಯುತಾಧೋಕ್ಷಜ ಸೃಷ್ಟಿಗೊಡೆಯ ಭಾರ್ಗವ ಮೂರುತಿಯೆಂದು 6 ಇಭರಾಜ ಪರಿಪಾಲ ಇಂದಿರೆಯರಸ ನಭ ಗಂಗಾಜನಕ ಜನಾದರ್Àನನೆ ವಿಭುವೇ ವಿಶ್ವರೂಪ ವಿಶ್ವನಾಟಕ ಋ ಷಭ ದತ್ತಾತ್ರೇಯ ಶ್ರೀ ರಾಮಮೂರುತಿಯೆಂದು 7 ವಾಸುದೇವ ರಂಗ ನವನೀತ ಚೋರ ಜಾರ ಗೋಕುಲವಾಸಿ ಗೋವಳರಾಯ ಶ್ರೀಧರ ಏಕಮೇವ ಶ್ರೀ ಕೃಷ್ಣ ಮೂರುತಿಯೆಂದು 8 ಹೃಷಿಕೇಶ ಪರಮಾತ್ಮ ಮುಕ್ತಾಮುಕ್ತಾಶ್ರಯ ಭಂಜನ ಕುಸುಮ ಶರನಯ್ಯ ಶಾರ್ಙಧರಾಚಕ್ರಿ ವಿಷಹರ ಧನ್ವಂತ್ರಿ ಬೌದ್ಧ ಮೂರುತಿಯೆಂದು 9 ಸರ್ವಮಂಗಳ ಸರ್ವಸಾರ ಭೋಕ್ತ ಸರ್ವಾಧಾರಕ ಸರ್ವ ಗುಣಗಣ ಪರಿಪೂರ್ಣ ಸರ್ವ ಮೂಲಾಧಾರ ಕಲ್ಕಿ ಮೂರುತಿಯೆಂದು 10 ಪರಿ ಅಪಾರ ಜನ್ಮ ಬೆಂಬಿಡದಲೆ ಸಪ್ತ ದ್ವೀಪಾಧಿಪ ನಮ್ಮ ವಿಜಯವಿಠ್ಠಲರೇಯ ಅಪವರ್ಗದಲ್ಲಿಟ್ಟು ಆನಂದಪಡಿಸುವ 11
--------------
ವಿಜಯದಾಸ