ಒಟ್ಟು 596 ಕಡೆಗಳಲ್ಲಿ , 80 ದಾಸರು , 530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸಬಾರದೆ ಕಂಜನಾಭನೆ ಕೈಯ ಮುಗಿವೆನಯ್ಯಾ ಪ.ವರಫಣಿಗಿರಿ ಸುಸ್ಥಿರಮಂದಿರ ಶ್ರೀಗುರುಜನಾರ್ದನಾಮರಗಣ ಪಾಲಕಅ.ಪ.ಅಪರಾಧಗಳಾಲೋಚಿಸುವರೆ ಸರೀ-ಸೃಪರಾಜನಿಗಳವೆಕೃಪೆಯಿಂದಲಿ ಸಂರಕ್ಷಿಸದಿದ್ದರೀ-ಯಪಕೀರ್ತಿಯು ಶ್ರೀಹರಿ ನಿನಗಲ್ಲವೆ 1ಕನಕಪುರಂದರಮುಖ್ಯ ದಾಸರಂತೆಗುಣವೆನಗಿನಿತಿಲ್ಲಜನರ ವಿಡಂಬನಕೆ ದಾಸನಾದರೂಘನಕೃಪಾರ್ಣವನೆ ಕನಕಾಂಬರಧರ2ಲಕ್ಷ ಮಾತ್ಯಾತಕೆ ಲಕ್ಷ್ಮೀನಾರಾಯಣರಕ್ಷಾಮಣಿ ನೀನೆಪಕ್ಷೀಂದ್ರವಾಹನ ಪಾಪವಿಮೋಚನತ್ರ್ಯಕ್ಷಮಿತ್ರನೆನ್ನಕ್ಷಿಗೋಚರನಾಗಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾಯಲಾರೆನು ಕೃಷ್ಣಕಂಡವರ ಬಾಗಿಲನು |ನಾಯಿ ಕುನ್ನಿಗಳಂತೆ ಪರರ ಪೀಡಿಸುತೆ ಪಉದಯಕಾಲದಲೆದ್ದು ಸಂಧ್ಯಾವಿಧಿಯ ಬಿಟ್ಟು |ಪದುಮನಾಭನ ಪಾದಸ್ಮರಣೆ ಮೊದಲಿಲ್ಲದೆ ||ಮುದದಿ ನಿನ್ನರ್ಚಿಸದೆ ನರರ ಸದವನ ಪೊಕ್ಕು |ಒದಗಿ ಸೇವೆಯ ಮಾಡಿಅವರಬಾಗಿಲನು1ಕಲ್ಲಕರಗಿಸಬಹುದು ಹುರಿಗಡಲೆಯನು ಅರೆದು |ತೈಲವನು ತೆಗೆದಾದರುಣಲು ಬಹುದು ||ಬಲ್ಲಿದವರಾ ಮನಸು ಮೆಚ್ಚಿಸಲರಿಯೆನೈ |ಹಲ್ಲು ಕಿರಿಯುತಲಿ ಹಂಬಲಿಸಿ ಬಾಯ್ಬಿಡುತ 2ಇಂತು ನಾನಾ ಚಿಂತೆಯಲಿ ನಿನ್ನ ನೆನೆಯದೆ |ಭ್ರಾಂತಿಯೆಂತೆಂಬ ಹೆಬ್ಬಲೆಯೊಳು ಸಿಲುಕಿ |ಅಂತ್ಯವ ನಾ ಕಾಣೆ ಆದರಿಸುವರಿಲ್ಲ |ಚಿಂತೆಯ ಬಿಡಿಸಯ್ಯಪುರಂದರವಿಠಲ3
--------------
ಪುರಂದರದಾಸರು
ಕೃಷ್ಣಲೀಲೆಅಕ್ಕ ನಂದಗೋಪನ ಅರಮನೆಯೊಳಗೊಬ್ಬ |ಅಕ್ರೂರ ಬಂದನಂತೆ ಪಹೊಕ್ಕು ಬಳಕೆಯಿಲ್ಲ ಹೊಸಬನು ಇವನಂತೆ |ಇಕ್ಕೋ ಬಾಗಿಲ ಮುಂದೆ ಈಗ ರಥವ ಕಂಡೆ ಅ.ಪಮಧುರಾ ಪಟ್ಟಣವಂತೆ ಮಾವನ ಮನೆಯಂತೆ |ನದಿಯ ದಾಟಲುಬೇಕಂತೆ ||ಎದುರು ಅರಿವಿಲ್ಲದಂತೆ ಏನೆಂಬೆ ಏಣಾಕ್ಷಿ |ಉದಯದಿ ಪಯಣವಂತೆ 1ಒಳ್ಳೆ ವೇಳೆಗಳಂತೆ ಬಿಲ್ಲುಹಬ್ಬಗಳಂತೆ |ಎಲ್ಲಾ ಬೀದಿ ಸಿಂಗರವಂತೆ ||ಮಲ್ಲರ ಕೂಟವಂತೆ ಮತ್ತೆ ಕಾಳಗವಂತೆ |ಅಲ್ಲೆ ತಾಯ್ತಂದೆಗಳ ಕಾಲಿಗೆ ನಿಗಳವಂತೆ 2ಮತ್ತೆ ಪಾಂಡವರಂತೆ ಮೋಹದ ಸೋದರರಂತೆ |ಅತ್ತೆಯ ಮಕ್ಕಳಂತೆ ||ಸುತ್ತ ಶತ್ರುಗಳಂತೆ ಸಕಲ ಕಾರ್ಯಗಳಂತೆ |ಚಿತ್ತಜನಯ್ಯನ ಚಿತ್ತ ಎರಡಾಯ್ತಂತೆ 3ಅಲ್ಲಿ ಪುಟ್ಟಿದನಂತೆ ಅರಸನಳಿಯನಂತೆ |ಇಲ್ಲಿಗೆ ಬಂದನಂತೆ ||ಕಳ್ಳಕಪಟನಂತೆ ಎಂದಿಗೂ ಹೀಗಂತೆ |ನಿಲ್ಲದೆ ಯಶೋದೆಗೆ ಕಣ್ಣ ನೀರಂತೆ 4ತಾಳಲಾರೆವು ನಾವು ಪುರಂದರವಿಠಲನ |ಕಾಣದೆ ನಿಲಲಾರೆವೆ ||ಕಾಲದಲೊಂದಾಗಿ ಕಾಮಿನಿಯರು ಕೂಡಿ |ಆಲಸ್ಯವಿಲ್ಲದೆ ಆಣೆಯಿಡುವ ಬನ್ನಿ
--------------
ಪುರಂದರದಾಸರು
ಕೆಟ್ಟೆನಲ್ಲೊ ಹರಿಯೆ |ಸಿಟ್ಟು ಮಾಡಿ ಎನ್ನ ಬಿಟ್ಟು ಕಳೆಯ ಬೇಡ ಪಬಂದೆನು ನಾ-ತಂದೆ-ತಾಯಿಗಳುದರದಿ |ಒಂದನೂ ಅರಿಯದೆ ಬಾಲಕತನದೊಳು ||ಮುಂದುವರಿದ ಯೌವನದೊಳು ಸತಿ-ಸುತ-|ರಂದವ ನೋಡುತ ನಿನ್ನ ನಾ ಮರೆತೆನೊ 1ಸ್ನಾನ-ಸಂಧ್ಯಾನವು ಹೀನವಾಯಿತು ಬಹು-|ಮಾನವಿಲ್ಲದೆ ಕುಲಹೀನರಾಶ್ರಯದಿಂದ ||ಙ್ಞÕನಿಗಳೊಡನಾಟವಿಲ್ಲದೆ ಮನದೊಳು |ದಾನ-ಧರ್ಮದ ಬಟ್ಟೆಯಂತೆಂದು ಮರೆತನು 2ಮೊದಲೆ ಬುದ್ದಿಯು ಹೀನ ಅದರೊಳು ವೃದ್ಧಾಪ್ಯ |ಕದನವು ದಶದಿಕ್ಕಿನುದಯದ ರಾಯರ ||ಎದೆನೀರು ಬತ್ತಿತು ಅದರಿಂದ ನಿನ್ನಯ |ಪದಪದ್ಮಯುಗಳದ ತುದಿಯ ನಾ ಮರೆತೆನು 3ಮೂಢನಾದೆನು ನಿನ್ನ ಬೇಡಿಕೊಳ್ಳದೆ ನಾನು |ಕಾಡೊಳಗಾಡುವ ಮೃಗದಂತೆ ಜೀವಿಸಿ ||ಗೂಡೊಳಗಿರುತಿಹ ಗೂಬೆಯ ತೆರನಂತೆ |ಮಾಡದೆ ನಿನ್ನಯ ಸ್ಮರಣೆಯ ಮರೆತೆನು 4ಬುದ್ದಿಹೀನನು ನಾನು ಉದ್ದರಿಸೆಲೊ ದೇವಮುದ್ದು ಶ್ರೀಪುರಂದರವಿಠಲನೆನ್ನ ||ಬುದ್ದಿಯೊಳಡಗಿಯೆ ತಿದ್ದಿಟ್ಟು ನಡೆಸಯ್ಯ |ಪೊದ್ದುವೆ ನಿನ್ನಯ ಚರಣಾರವಿಂದವ 5
--------------
ಪುರಂದರದಾಸರು
ಕೊಡು ಕಂಡೆಯಾ ಹರಿಯೆ-ನಿನ್ನ ನಾಮ-|ಕೊಡು ಕಂಡೆಯಾ ಹರಿಯೆ ಪಬಡವ ನಾನೆಂದು ಕಾಡಲಿಲ್ಲ ಹರಿಯೆ ಅ.ಪಒಡಲುತುಂಬದು ಎಂದು ಬಳಲಿಸೆ ಬರಲಿಲ್ಲ |ಸಡಗರದಿಂ ಭಾಗ್ಯ ಬೇಡಲಿಲ್ಲ ||ಮಡದಿ-ಮಕ್ಕಳಿಗಾಗಿ ಕಡು ಮೋಹವೆನಗಿಲ್ಲ |ಬಿಡದೆ ನಾಮಸ್ಮರಣೆ ಕೊಡು ಒಂದೇ ಸಾಕೊ 1ಸ್ನಾನ-ಮೌನ ಜಪ-ತಪಗಳು ಎನಗಿಲ್ಲ |ನಾನಾಯೋನಿಗಳಲ್ಲಿ ಬಳಲಿ ಬಂದೆ ||ದೀನರಕ್ಷಕ ನೀನೆ ದಯದಿಂದಲೆನಗಿನ್ನು |ಧ್ಯಾನಸುಧೆಯನಿತ್ತು ಸಲಹಯ್ಯ ಹರಿಯೆ 2ಬಲೆಗೆ ಸಿಲುಕಿದ ಮೃಗದಂತೆ ಬಾಯ್ಬಿಡುತಲಿ |ಅಲಸಿ ಕೋಟಲೆಯ ಸಂಸಾರದಿಂದ |ತಲೆಹುಳಿತ ನಾಯಂತೆ ಬಯಲಾಸೆಗೆ ಸಿಲುಕಿದೆ |ಸಲಹೊ ದೇವರ ದೇವಪುರಂದರವಿಠಲ3
--------------
ಪುರಂದರದಾಸರು
ಕೌತುಕಲಕುಮಿನಾಥನು ಒಲಿದದ್ದುಭೂತಳದೊಳಗÀಂಜೋದ್ಯಾತರ ಮಾತಿದು ಪ.ವೇದ ತಂದಾತನ ಪಾದವ ನೋಡಿ ನೋಡಿಮೋದಬಟ್ಟನುಬೊಮ್ಮಮಾಧವಅಂಜಿದ್ದು1ಮಂದಾರಗಿರಿಎತ್ತಿ ತಂದ ಅಮೃತವನ್ನುಆನಂದ ಬಟ್ಟನುಬೊಮ್ಮಇಂದೈವರು ಅಂಜಿದ್ದು2ಧರಣಿ ತಂದಾತನ ವರಹಾ ಸುರರರಿಗೆ ಸುಖವಿತ್ತುದೊರೆ ಧರ್ಮನ ಕಂಡುಪರಮಭೀತನಾದ3ನರಸಿಂಹ ದೈತ್ಯನ ವಧಿಸಿಬಿಟ್ಟನೆಂದುಹರುಷವಾದನುಬೊಮ್ಮಅರಸ ಅಂಜಿದ್ದು4ವಾಮನ ರೂಪಕ್ಕೆ ಕಾಮ ಮೋಹಿತರಾಗಿಶಾಮ ವರ್ಣನ ಕಂಡು ಭೀಮ ಭೀತನಾದ 5ಜ್ಞಾನಿಗಳು ಭಾರ್ಗವನ ಧೇನಿಸಿ ನಮಿಸೋರು ಏನೆಂಬೆಪಾರ್ಥನು ತಾ ನೋಡಿ ಅಂಜಿದ್ದು 6ಚಲ್ವರಾಯನಗುಣಎಲ್ಲ ಮೋಹಿಸಬೇಕುನಲ್ಲಿ ದ್ರೌಪತಿದೇವಿಯ ವಲ್ಲಭರಂಜಿದ್ದು 7ಕೃಷ್ಣಾವತಾರಗೆ ಎಷ್ಟು ಮೋಹಿಸುವವರುಧಿಟ್ಟ ನಕುಲರಾಯ ಇಷ್ಟೊಂದು ಅಂಜಿದ್ದು 8ಬೌದ್ಧನ್ನ ಧೇನಿಸಿ ಸಿದ್ಧಿ ಪಡೆದವರೆಷ್ಟುರುದ್ರಾದಿ ವಂದ್ಯಗೆ ಬುದ್ದಿವಂತರು ಬೆದರ 9ಚಲುವ ರಂಗಯ್ಯನು ಕುದುರೆ ಏರಿ ಬರಲುಬುದ್ಧರು ನಮಿಸುವರು ಹೆದರ ಸಹದೇವನು 10ತಂದೆ ರಾಮೇಶನ ಕೊಂಡಾಡೊ ಗುಣವಿಲ್ಲಪುಂಡರಿಕಾಕ್ಷಗೆ ಪಾಂಡವ ರಂಜಿಸಿದ್ದು 11
--------------
ಗಲಗಲಿಅವ್ವನವರು
ಕ್ಷಮಾ ಸಮುದ್ರ ನಿನ್ನ ಸಮಾನರಿಲ್ಲರಮಾ ಬ್ರಹ್ಮಾದಿಗಳು ಪೊಗಳೆ ಪಉಮೆಯರಸ ನಿನ್ನ ಚರಣಮಹಿಮೆ ತನ್ನತರುಣಿಯೊಡನೆ ಹಗಲಿರುಳು ಪೇಳುವ ದಿವ್ಯ ಅ.ಪಅರಿಯದೆ ಅಜಮಿಳತರಳನಾರಗನೆಂದುಮರಣ ಕಾಲದಿ ಒದರೆಸರಸೀಜಾಕ್ಷನು ತನ್ನ ಪರಿವಾರದವರೆಂದುಸಿರಿದೇವಿಯೊಳು ಪೇಳಿ ತ್ವರಿತದಿ ರಕ್ಷಿಸಿದ 1ನಕ್ರನ ಬಾಧೆಗೆ ಸಿಕ್ಕಿದ ಗಜರಾಜಚಕ್ರಪಾಣಿಯ ಭಜಿಸೆಆ ಕ್ಷಣದಿ ತನ್ನ ಚಕ್ರಕಾಙÉÕಯ ಮಾಡಿಲಕ್ಷ್ಮೀದೇವಿಗ್ಹೇಳದೆ ಪಕ್ಷಿ ಹೆಗಲೇರಿ ಬಂದ 2ಹಿರಣ್ಯಕಶ್ಯಪು ತನ್ನತರಳಪ್ರಹ್ಲಾದನಿಗೆಪರಿಪರಿ ಬಾಧೆ ಪಡಿಸೆಹರಿಯ ತೋರೆಂದು ಆರ್ಭಟಿಸಿ ನುಡಿಯೆ ದೈತ್ಯನರಮೃಗರೂಪನಾಗಿ ಭರದಿ ಕಂಬದಿ ಬಂದ3ಪತಿಗಳೈವರು ಲಕ್ಷ್ಮೀಪತಿಯ ಧ್ಯಾನದೊಳಿರೆಮತಿಹೀನನೆಳೆತರಲುಗತಿನೀನಲ್ಲದೆ ಮತ್ತೆ ಹಿತರೊಬ್ಬರಿಲ್ಲವೆನೆಅತಿಬೇಗದಿಂದ ಧರ್ಮಸತಿಗೆ ಅಕ್ಷಯವಿತ್ತ 4ಇದರಂತೆ ತರಳಧ್ರÀುವ ಒದಗಿದ ತಾಪದಿಂದಪದುಮನಾಭನÀ ಭಜಿಸೆಮುದದಿಂದಾತಗೆ ಧ್ರುವಪದವಿಯನಿತ್ತು ಕಾಯ್ದೆಪದುಮನಾಭನೆ ನಿನಗೆದುರುಂಟೆ ತ್ರಿಜಗದಿ 5ಘಣಿಶಾಯಿ ನಿನ್ನಗುಣಮಹಿಮೆಯ ಪೊಗಳಲುಅಹಿಭೂಷಣನಿಗಳವೆಕ್ಷಣ ಬಿಡದಲೆ ನಿನ್ನ ಚರಣಸೇವೆಯ ಮಾಳ್ಪಸಿರಿದೇವಿ ಅರಿಯೆನೆಂದೆನಲು ನಿನ್ನಯಗುಣ6ಕರುಣಾಸಾಗರ ದೇವ ವಿಮಲಸ್ವರೂಪನೆ ಕಮಲನಾಭ ವಿಠ್ಠಲಶರಣಜನರ ಬಹುತ್ವರದಿಂದ ಬಂದು ಕಾಯ್ದಪರಮದಯಾಳೊ ನಿನ್ನ ಚರಣಕ್ಕೆ ನಮೋ ಎಂಬೆ7
--------------
ನಿಡಗುರುಕಿ ಜೀವೂಬಾಯಿ
ಕ್ಷೀರಸಾಗರದಲೆರಡೀರೈದು ಯೋಜನದ |ಮೇರೆಯಲಿ ವರತ್ರಿಕೂಟಾದ್ರಿ ಶೃಂಗತ್ರಯದಿ |ರಾರಾಜಿಸುವ ತಾಮ್ರ-ರಜತ-ಕಾಂಚನದಿಂದನಾರಾಯಣಾಂಶದಿಂದ ||ಪಾರಿಜಾತಾಂಭೋಜ ಬಕುಳ ಮಲ್ಲಿಗೆ ಜಾಜಿ |ಸೌರಭದಲಶ್ವತ್ಥಪೂಗಪುನ್ನಾಗಜಂ |ಬೀರತರುಗುಲ್ಮಶಾಖಾಮೃಗಗಳೆಸೆವಲ್ಲಿವಾರಣೀಂದ್ರನು ಮೆರೆದನು 2ಆನೆ ಹೆಣ್ಣಾನೆ ಮರಿಯಾನೆಗಳ ಸಹಿತಲ್ಲಿ |ಕಾನನದಿ ತೊಳಲುತ್ತ ಬೇಸಗೆಯ ಬಿಸಿಲಲ್ಲಿ |ತಾನು ನೀರಡಿಸಿ ಬಂದೊಂದು ಸರಸಿಯ ತಟಕೆಪಾನಾಭಿಲಾಷೆಯಿಂದ ||ನಾನಾಪ್ರಕಾರದಿಂ ಜಲಕ್ರೀಡೆಯಾಡುತಿರ |ಲೇನಿದೆತ್ತಣ ರಭಸವೆಂದುಗ್ರಕೋಪದಿಂ |ಒತ್ತಿ ಪಿಡಿದೆಳೆಯುತಿರೆ ಎತ್ತಣದಿನೇನೆನುತ |ಮತ್ತಇಭರಾಜನೌಡೊತ್ತಿ ನೋಡುತ್ತಂಘ್ರಿ |ಎತ್ತಿ ತಂದನು ತಡಿಗೆ ಮತ್ತೆ ನಡುಮಡುವಿನೊಳುಅತ್ತಲೇ ತಿರುಗೆನೆಗಳೆ||ಇತ್ತಂಡದಿಂತು ಕಾದಿದರು ಸಾವಿರ ವರುಷ |ಉತ್ತರಿಸಿತೇನೆಂಬೆ ಮತ್ತಾ ಗಜೇದ್ರಂಗೆ |ಸತ್ತ್ವ ತಗ್ಗಿತು ತನ್ನ ಮನದೊಳಗೆ ಚಿಂತಿಸಿತುಮತ್ತಾರು ಗತಿಯೆನುತಲಿ 4ಬಂದುದಾ ಸಮಯದಲಿ ಹಿಂದೆ ಮಾಡಿದ ಪುಣ್ಯ |ದಿಂದ ದಿವ್ಯಜಾÕನ ಕಣ್ದೆರೆದು ಮನದೊಳರ |ವಿಂದನಾಭಾಚ್ಯುತ ಮುಕುಂದಮಾಧವಕೃಷ್ಣನಿಖಿಲ ಮುನಿವೃಂದವಂದ್ಯ ||ಇಂದಿರಾರಮಣ ಗೋವಿಂದ ಕೇಶವ ಭಕ್ತ |ಬಂಧು ಕರುಣಾಸಿಂಧು ತಂದೆ ನೀ ಗತಿಯೆನಗೆ |ಇಂದುಸಿಲ್ಕಿದೆನು ಬಲು ದಂದುಗದಮಾಯಾಪ್ರ-ಬಂಧಕನೆ ನೆಗಳಿನಿಂದ 5ಪರಮಾತ್ಮ ಪರಮೇಶ ಪರತತ್ತ್ವ ಪರಿಪೂಜ್ಯ |ಪರತರ ಪರಂಜೋತಿಪರಮಪಾವನಮೂರ್ತಿ |ಪರಮೇಷ್ಟಿಪರಬ್ರಹ್ಮಪರಮಪರಮಾಕಾಶ |ಪರಿಪೂರ್ಣ ಪರಮಪುರುಷ ||ನಿರುಪಮ ನಿಜಾನಂದ ನಿರ್ಲಯ ನಿರಾಕಾರ |ನಿರವಧಿಕನಿರ್ಗುಣನಿರಂಜನನಿರಾಧಾರ |ನಿರವದ್ಯನಿಸ್ಸಂಗ ನಿಶ್ಚಿಂತ ನಿಖಿಲೇಶಇರದೆ ನೀ ಸಲಹೆಂದನು 6ಇಂತೆನುತ ಮೂಚ್ರ್ಛೆಯಲಿ ಗುಪ್ತಕಂಠಸ್ವರದ |ಕಾಂತ ನಡುನೀರೊಳಗೆ ತೇಲಿ ಮುಳುಗುತಲಿರೆ ಅ- |ನೆಗಳ ಬಾಯನು ಚಕ್ರದಲಿ ಸೀಳಿ ಕರಿವರದ |ಒಗುವ ಕರಣದಲಿ ಮೈದಡಹಲ್ಕೆ ಗಜಜನ್ಮ |ತೆಗೆದುದಾಕ್ಷಣಕೆ ಮಣಿಮುಕುಟ - ಕುಂಡಲದಿಂದನಗಧರನು ಓಲೈಸಿದ ||ವಿಗಡದೇವಲ ಮುನಿಯ ಶಾಪದಲಿ ದಾರುಣಿಯೊ- |ಳಗೆ ನಕ್ರನಾಗಿ ಹೂಹೂ ಎಂಬ ಗಂಧರ್ವ |ಮಗುಳಿಪುರವನು ಕಂಡು ನಿಜಗತಿಗೆ ಐದಿದಿನುಕಮಲಾಕ್ಷಮಿಗೆ ಮೆರೆದನು 8ಮಣಿಮುಕುಟಕುಂಡಲಪದಕಹಾರ ಕಡಗಕಂ- |ಕಣ ಕೌಸ್ತು ಭೊಜ್ವ ್ಜಲಾಂಗದವೈಜಯಂತಿಭೂ- |ಷಣ ಶಂಖ-ಚಕ್ರ-ಗದೆ-ಪದ್ಮ ಧರಿಸಿಹಹಸ್ತಪಣಿಯ ಕಸ್ತುರಿ ತಿಲಕದಾ ||ಝಣಝಣಿಪ ನೂಪುರದ ದಂತಪಂಕ್ತಿಯ ಕೃಪೇ- |ಕ್ಷಣದ ಸಿರಿಮೊಗದ ಪೀತಾಂಬರದ ಮೂರುತಿಗೆ |ಮಣಿದು ಜಂiÀi ಜಯಜಯಾಎಂಬ ಸುರನರರಸಂ- |ದಣಿಯಿಂದೆಹರಿಮೆರೆದನು 9ಹರಹರಿಎನುತ್ತಂಘ್ರಿಗೆರಗಲಿಭವರನನಾ- |ದರದಿಂದಲೆತ್ತುತಲಿ ಕೇಳ್ಮಗನೆ ನೀನೆನ್ನ |ವಿರಜಶರಪರಿಧಿಯಾ ಸರವನಹಿಪತಿಯನ್ನುಪರಜನ್ಮನೀ ಲಕುಮಿಯ ||ಪರಮೇಷ್ಟಿ-ಭವರ ಮನು-ಮುನಿಗಳನು ಧರಣಿಯನು |ಆವಾವನಿದನುದಯದಲ್ಲೆದ್ದು ಭಕ್ತಿಯಲಿ |ಭಾವಶುದ್ಧಿಯಲಿ ತಾ ಹೇಳಿಕೊಳುವನೊ ಅವನ- |ಘಾವಳಿಯ ಪರಿಹರಿಸಿ ಸುಙ್ಞÕನವೀವೆ ದೇ-ಹಾವಸಾನದಲೆನುತಲಿ ||ಶ್ರೀವಾಸುದೇವನಾಜಾÕನೆಸಿ ಗಜೇಂದ್ರ ಸಹಿ- |ತಾವಿಹಂಗಾಧಿಪನನೇರಿ ವೈಕುಂಠಕ್ಕೆ |ದೇವ ಬಿಜಯಂಗೈದಪುರಂದರವಿಠಲನ
--------------
ಪುರಂದರದಾಸರು
ಗೋಕುಲದೊಳಗೆಲ್ಲ ಕೊಳಲೂದಲು |ಬೇಕಾದ ಧ್ವನಿಗಳು ಕೂಡಿ ಕೃಷ್ಣ-ಗೋ- ||ಪಿಕಾಸ್ತ್ರೀಯರುತವಕದಿಂದ ನೋಡ- |ಬೇಕೆಂದು ನಡೆಯೆ ನೂಕ್ಯಾಡುತ ಪಎಂತೆಂತು ಪೊರಟರಂತು ನಾರಿಯರು |ಇಂಥ ವಿಪರೀತ ಯಿಂತಿಲ್ಲ ಮುಂದಿಲ್ಲ |ಸಂತೋಷವಹದು ಚಿಂತೆ ಪೋಗುವುದು |ಸಂತರು ಕೇಳಲುತಂತುಮಾತ್ರಾ ||ಭ್ರಾಂತರಾಗಿ ಯೇನು-ಎಂತು ತಿಳಿಯದೆ |ನಿಂತು ನಿಲ್ಲಲಾರದಂತರದಲೆವೆ |ಧ್ವಾಂತಕಿರಣನಂತಾನ ಮುತ್ತೂರು |ಅಂತರವಿಲ್ಲದ ಸಂತೆಯಂತೆ 1ಚಿಕ್ಕಟುಯೆಂದು ಒಬ್ಬಕ್ಕನು ಗಂಡನ |ತೆಕ್ಕೆಲಿ ಪಿಡಿದುಕಕ್ಕಸಬಡುತ |ಪೊಕ್ಕಳಿಗೆ ಬಟ್ಟನಿಕ್ಕಿ ಒಬ್ಬವಳು |ಅಕ್ಕಿಯ ನುಚ್ಚನೆ ಸಕ್ಕರೆಂದು ||ಮಕ್ಕಳಿಗೀವುತ ಮಿಕ್ಕವರೆಲ್ಲರು |ನಕ್ಕು ತಂತಮ್ಮೊಳಗೆ ಗುಕ್ಕುತ ತಲೆಯ |ಹಿಕ್ಕುತ ಬಂದರು ಫಕ್ಕನೆ ಈಕ್ಷಿಸ-ರಕ್ಕಸ ದಲ್ಲಣನಕ್ಕರದಿ 2ತತ್ತರಿಸಿ ಕರವೆತ್ತಿಗೆ ಬಿಟ್ಟರು |ಮುತ್ತಿನ ಕಟ್ಟಾಣಿವೊತ್ತಿ ಮುಡಿಗಿಟ್ಟು |ನೆತ್ತಿಗೆ ಸೀರೆಯ ಸುತ್ತಿಕೊಂಡು ಬರೆ |ಸುತ್ತಲಂಗನೆರು ಬತ್ತಲಾಗಿ ||ತುತ್ತು ಮಾಡಿ ಮಾಡಿ ಹತ್ತಿಸೆ ಎದೆಗೆ |ಹೊಸ್ತಲಿ ದಾಟಲಿ ಗತ್ತಿಡಲಾರದೆ |ಹತ್ತೆಂಟು ಮಂದಿಯು ಚಿತ್ತಪಲ್ಲಟಾಗಿ |ಉತ್ತಮಾಂಗನಿಗೆ ಸುತ್ತಿದರೊ 3ಹಾಲಿಗೆ ಪಿಲ್ಲೆಯು ಫಾಲವಿದೇಯೆಂದು |ಕಾಲಿಗೆ ಕುಂಕುಮ ವಾಲಿಟ್ಟು ಮೂಗಿಗೆ |ಮೇಲಾದ ಹೂವಿನ ಮಾಲಿಕೆ ಕಟಿಗೆ |ತೋಲಾದ ಸರಿಗೆ ಬಾಳಿಗಿಟ್ಟು ||ಹೇಳುವ ಮಾತನುಕೇಳಿಕೇಳದಂತೆ |ಇಳೆಗೆ ಅಗಾಧ ಧೂಳಿಯ ಮುಚ್ಚುತ |ಜಾಲಸಂಭ್ರಮದಿ ವಾಲಯ ಬಂದರು |ಜಾಲಜಾನಾಭನ ವಾಲಗಕ್ಕೆ 4ಭೋರೆಂಬ ಶಬ್ದವ ಮರೆತಳೆಮುನೆ |ಗಿರಿಯು ಬ್ಯಾವಿಯೆ ? ತುರುವು ಮೇವನು |ತೊರೆಯೆ, ಫಣಿಯು ಶಿರವ ತೂಗಿತು |ತೆರೆಯ ಕಟ್ಟಿತು ಶರಧಿಯು ||ಸುರರುನಭದಿ ನೆರೆದು ಪೂಮಳೆ |ಗರೆಯೆದುಂದುಭಿಮೊರೆಯೆ ಸುಖವ |ಸುರಿಯೆ ಪ್ರಾಣೇಶ ವಿಠಲ ಕೊಳಲ |ತ್ವರನುಡಿಸುವ ಸ್ವರಗೇಳಿ 5
--------------
ಪ್ರಾಣೇಶದಾಸರು
ಜಯತು ಜಯತು ಜಯತೆಂಬೆನು ವಿಠಲಭಯನಿವಾರಣ ನಿರಾಮಯ ನೀನೆ ವಿಠಲ ಪ.ಮನವೆನ್ನ ಮಾತ ಕೇಳದು ಕಾಣೊ ವಿಠಲಮನಸಿಜನಾಯಸ ಘನವಾಯ್ತು ವಿಠಲನಿನಗಲ್ಲದಪಕೀರ್ತಿಯೆನಗೇನು ವಿಠಲತನುಮನದೊಳಗನುದಿನವಿರು ವಿಠಲ 1ಕದನಮುಖದಿ ಗೆಲುವುದ ಕಾಣೆ ವಿಠಲಮದನಮುಖ್ಯಾದಿ ವೈರಿಗಳೊಳು ವಿಠಲವಿಧವಿಧದಿಂದ ಕಷ್ಟಪಟ್ಟೆನು ವಿಠಲಇದಕೇನುಪಾಯ ತೋರಿಸಿ ಕಾಯೋ ವಿಠಲ 2ಹುಟ್ಟಿದೆ ನಾನಾ ಯೋನಿಗಳೊಳು ವಿಠಲಸುಟ್ಟ ಬೀಜದ ವೋಲ್ ಫಲವಿಲ್ಲ ವಿಠಲಇಷ್ಟಾರ್ಥಗಳನಿತ್ತು ಸಲಹಯ್ಯ ವಿಠಲಇಷ್ಟಕ್ಕೆ ನೀ ಮನ ಮಾಡಯ್ಯ ವಿಠಲ 3ಬಂಗಾರ ಭಂಡಾರ ಬಯಸೆನು ವಿಠಲಮಂಗಲ ಕೊಡು ಯೆನ್ನ ಬುದ್ಧಿಗೆ ವಿಠಲರಂಗ ರಂಗನೆಂಬ ನಾಮದಿ ವಿಠಲಭಂಗವ ಪರಿಹರಿಸಯ್ಯ ನೀ ವಿಠಲ 4ಏನು ಬಂದರೂ ಬರಲೆಂದಿಗು ವಿಠಲಮಾನಾವಮಾನ ನಿನ್ನದು ಕಾಣೊ ವಿಠಲನಾನು ನಿನ್ನವನೆಂದು ಸಲಹಯ್ಯ ವಿಠಲಲಕ್ಷ್ಮೀನಾರಾಯಣ ನೀನೆ ತಂದೆ ಕೇಳ್ ವಿಠಲ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜಯಮಂಗಳಂನಿತ್ಯಶುಭಮಂಗಳಂ ||ಪ.ಶ್ರೀ ವತ್ಸಲಾಂಛನಗೆ ಕ್ಷೀರಾಬ್ಧಿ ವಾಸಗೆ |ಗೋವರ್ಧನೋದ್ಧಾರ ಗೋವಿಂದಗೆ ||ಮಾವ ಕಂಸನ ಕೊಂದುಮಕರಕುಂಡಲ ಧರಿಸಿ |ಜೀವಾತ್ಮನಾದ ಚಿನ್ಮಯರೂಪಗೆ 1ಅಂಬುಧಿಯ ಶಯನಗೆ ಅಖಿಲ ಭೂತೇಶಗೆ |ತುಂಬುರ - ನಾರದ ಮುನಿವಂದ್ಯಗೆ ||ಎಂಭತ್ತನಾಲ್ಕು ಲಕ್ಷ ಯೋನಿಗಳ ರಾಶಿಯನು |ಗೊಂಬೆಯನು ಮಾಡಿ ಕುಣಿಸುವ ದೇವಗೆ 2ಕಂದರ್ಪನಯ್ಯನಿಗೆ ಕೋಟಿ ಲಾವಣ್ಯನಿಗೆಸುಂದರ ಮೂರುತಿಹರಿ ಸರ್ವೋತ್ತಮನಿಗೆ ||ಕಂದ ಪ್ರಹ್ಲಾದನ ಕಾಯ್ದ ದೇವನಿಗೆಅರ |............................................. 3ಪನ್ನಂಗಶಯನಗೆಪಾವನ್ನ ಚರಿತೆಗೆ |ಸನ್ನುತರಾದ ಸಜ್ಜನ ಪಾಲಿಗೆ ||ಎನ್ನೊಡೆಯ ಸಿರಿದೇವಿಯರಸು ಮುದ್ದುರಂಗಗೆ |ತನ್ನ ನಂಬಿದವರನು ಸಲಹುವವಗೆ 4ಕರಿರಾಜವರದಗೆ ಕರುಣಾಸಮುದ್ರಗೆ |ಗರುಡ ಗಮನನಿಗೆ ವೈಭವಹಾರಗೆ ||ವರಪುರಂದರವಿಠಲ ಕಂಬುಕಂದರನಿಗೆ |ಅರವಿಂದನಾಭನಿಗೆ ಅಜನ ಪಿತಗೆ 5
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜಯಮಂಗಳಂನಿತ್ಯಶುಭಮಂಗಳಂಪ.ದುರುಳತಮ ವೇದವನು ಕದ್ದು ವಾತಾಳದಲಿಇರಲವನ ಕೊಂದು ವೇದಾವಳಿಗಳಸರಸಿಜೋದ್ಭವಗಿತ್ತು ಸುರಮುನಿಗಳನ್ನೆಲ್ಲಪೊರೆದ ಶ್ರೀ ವತ್ಸಾವತಾರಿ ಹರಿಗೆ 1ಸುರರು ದೈತ್ಯರಕೂಡಿ ಸಿಂಧುವನು ಮಧಿಸುತಿರೆಗಿರಿಮುಳಗಿ ಪಾತಳಕಿಳಿದು ಪೋಗೆಭರದಿಂದ ತಾ ಬಂದು ಗಿರಿಯ ಬೆನ್ನಳಗಾಂತುಸುರರ ಸಂರಕ್ಷಿಸಿದ ಶ್ರೀಕೂರ್ಮಹರಿಗೆ2ಭೂಮಿಯನು ಹಿರಣ್ಯಕ್ಷನೆಂಬ ದೈತ್ಯನು ಸುತ್ತಿಭೀಮ ವಿಕ್ರಮನು ಪಾತಾಳಕೊಯ್ಯುತಾಮರಸ ಸಂಭವನು ಬಿನ್ನೈಸಲವನಳಿದುಭೂಮಿಯನು ತಂದು ಶ್ರೀ ಭೂ ವರಾಹನಿಗೆ 3ಪರಮಭಾಗವತ ಪ್ರಲ್ಹಾದನ ಹಿರಣ್ಯಕನುಪರಿಪರಿಯ ಭಾದೆಯಿಂದಲಿ ಪೀಡಿಸಿಕರುಣಾಳು ಕೋಪದಲಿ ದೈತ್ಯನುದರವ ಬಗೆದಶರಣ ರಕ್ಷಕನಾದ ಶ್ರೀ ನರಸಿಂಹಗೆ 4ಬಲಿಚಕ್ರವರ್ತಿ ಭೂಮಿಯ ಧಾರೆಯರೆಯಲುಇಳೆಯನಳೆದವನ ಸುತಳಕೆ ಕಳುಹಿಸಿದಸಿಲುಕಿಭಕುತಿಗೆ ಮೆಚ್ಚಿ ಬಾಗಿಲವಕಾಯ್ದ ಶ್ರೀಬಲವಂಥಹರಿವಾಮಾನಾವತಾರನಿಗೆ5ಕಾರ್ತವೀರ್ಯಾರ್ಜುನನ ಸಂಹರಿಸಿ ಮುದದಿಂದಕೀರ್ತಿಯನು ಲೋಕದೊಳು ವಿಸ್ತರಿಸಿದಪ್ರಾರ್ಥಿವಾಂತಕ ಬಾಹುಬಲದಿ ಪರಿಪೂರ್ಣಗೆಆರ್ತಬಾಂಧವಗೆಭಾರ್ಗವರಾಮಗೆ6ದಶರಥನ ಮನೆಯುದ್ಭವಿಸಿ ಆ ರಾವಣನದಶಶಿರವ ನೀಡಾಡಿ ಅವನನುಜಗೆವಸುಧಾಧಿಪತ್ಯವನು ಲಂಕೆಯೊಳಗವಗಿತ್ತಅಸಮವಿಕ್ರಮ ರಾಮಚಂದ್ರ ಹರಿಗೆ 7ಯದುಕುಲದಿ ತಾ ಬಂದು ಕೊಂದು ಕಂಸನನಂದುಮುದದಿಂದ ಪಾಂಡವರನುದ್ಧರಿಸಿದಒದೆಗೆ ಕೌರವ ಬಲವ ಸಂಹರಿಸಿ ಪದವಿತ್ತುಮುದದಿ ಮನ್ನಿಸಿದ ಶ್ರೀ ಕೃಷ್ಣ ಹರಿಗೆ 8ತ್ರಿಪುರದ ಮುರಾರಿಗಳ ಸತಿಯರ ಪತಿವ್ರತವಅಪಹರಿಸಿ ದಿವ್ಯ ಮೋಹಕರೂಪದಿತ್ರಿಪುರಹರಗಂಬಾಗಿ ಶಿವಗೆ ಕೀರ್ತಿಯನಿತ್ತಅಪರಮಿತ ಬುದ್ಧಾವತಾರ ಹರಿಗೆ 9ಕರಿಯುಗದ ಕಡಯಲಿ ಖಲನೃಪರನೆಲ್ಲರನುತುಳಸಿ ಕುದುರೆಯ ಖುರದ ಪುಟಗಳಿಂದಸುಲಭದಿಂ ನಡೆಸುತೀ ಕೃತಯುಗದ ಧರ್ಮವನುಒಲಿದಂಥ ಕಲ್ಕಿಯವತಾರ ಹರಿಗೆ 10ಮಂಗಳ ಪದಂಗಳನು ಭಕ್ತಿಯಲಿ ಮೋಹನತರಾಂಗನೆಯರೆಲ್ಲ ರಾಗದಿ ಪಾಡುತಮಂಗಳಾತ್ಮಕಗೆಸಿರಿ ಪುರಂದರವಿಠಲಗೆಅಂಗನೆಯರೆಲ್ಲ ಆರತಿಯೆತ್ತಿರೆ 11
--------------
ಪುರಂದರದಾಸರು
ಜೋ ಜೋ ಯಶೋದೆಯ ನಂದ ಮುಕುಂದನೆಜೋ ಜೋ ಕಂಸಕುಠಾರಿ ಪ.ಜೋ ಜೋ ಮುನಿಗಳ ಹೃದಯಾನಂದನೆಜೋ ಜೋ ಲಕುಮಿಯ ರಮಣ ಅಪಹೊಕ್ಕುಳ ಹೂವಿನ ತಾವರೆಗಣ್ಣಿನಇಕ್ಕಿದಮಕರ ಕುಂಡಲದಜಕ್ಕುಳಿಸುವ ಕದಪಿನ ಸುಳಿಗುರುಳಿನಚಿಕ್ಕ ಬಾಯ ಮುದ್ದು ಮೊಗದ ||ಸೊಕ್ಕಿದ ಮದಕರಿಯಂದದಿ ನೊಸಲೊಳಗಿಕ್ಕಿದ ಕಸ್ತೂರಿ ತಿಲಕ |ರಕ್ಕಸರೆದೆದಲ್ಲಣ ಮುರವೈರಿಯೆಮಕ್ಕಳ ಮಾಣಿಕ್ಯ ಜೋ ಜೋ 1ಕಣ್ಣ ಬೆಳಗು ಪಸರಿಸುತಿರೆಗೋಪಿಅರೆಗಣ್ಣ ಮುಚ್ಚಿ ನೋಡಿ ನಗುತ |ಸಣ್ಣ ಬೆರಳುಗಳ ಬಾಯೊಳಗಳವಡಿಸಿಪನ್ನಗಶಯನ ತೊಟ್ಟಿಲಲಿ ||ನಿನ್ನ ಮಗನ ಮುದ್ದನೋಡು ಎಂದೆನುತಲಿತನ್ನ ಪತಿಗೆ ತೋರಿದಳು |ಹೊನ್ನ ಬಣ್ಣದ ಸೊಬಗಿನ ಖಣಿಯೆ ಹೊಸರನ್ನದ ಬೊಂಬೆಯೆ ಜೋ ಜೋ 2ನಿಡು ತೋಳ್ಗಳ ಪಸರಿಸುತಿರೆ ಗೋಪಿಯತೊಡೆಯ ಮೇಲ್ಮಲಗಿ ಬಾಯ್ದೆರೆಯೆ |ಒಡಲೊಳಗೀರೇಳು ಭುವನವಿರಲು ಕಂಡುನಡುಗಿ ಕಂಗಳನು ಮುಚ್ಚಿದಳು ||ಸಡಗರಿಸುತ ತಾನರಿಯದಂತೆಯೆಹೊಡೆ ಮರುಳಿ ಮೊಗವ ನೋಡುತಲಿಕಡಲಶಯನ ಮೊಗವ ನೋಡುತಲಿಕಡಲಶಯನ ಶ್ರೀ ಪುರಂದರವಿಠಲನುಬಿಡದೆ ನಮ್ಮೆಲ್ಲರ ರಕ್ಷಿಸುವ 3
--------------
ಪುರಂದರದಾಸರು
ತಪ್ಪುಗಳನೆಲ್ಲ ನೀನೊಪ್ಪಿಕೊಳ್ಳೊ - ನ-|ಮ್ಮಪ್ಪ ಕಾಯಬೇಕುತಿಮ್ಮಪ್ಪನೀನೆಪಸತಿ-ಸುತ ಸಂಸಾರಗಳಿಗೆ |ಮತಿ ಹೀನನಾದೆನು ವ್ಯರ್ಥ ||ಮಿತಿಗಾಣೆನಯ್ಯ ಎನ್ನ ಪಾಪಗಳಿಗೆ |ಗತಿಯದಾವುದು ಪೇಳೊ ಮುಂದೆನಗೆ 1ಬಿಸಿಲು ಬಿರುಮಳೆ ಗಾಳಿಯೊಳಗೆ-ಬಲು-|ದೆಸೆಗೆಟ್ಟು ದೇವ ತಿರುಗಿದೆ ||ಹಸಿವು-ತೃಷೆಗಳು ಬಹು ಬಾಧಿಸಲು |ಹುಸಿಯಾಡಿದೆನಯ್ಯ ಹುಟ್ಟು ಮೊದಲು 2ಸ್ನಾನ-ಸಂಧ್ಯಾವಂದನವರಿಯೆ-ನಾನಾ-|ದಾನ-ಧರ್ಮದ ಗುರುತುಗಳಿಯೆ ||ಹೀನಜನರ ಸಂಗವ ಮರೆಯೆ-ಸು-|ಙ್ಞÕನಿಗಳನು ಬಾಯೆಂದು ಕರೆಯೆ 3ಗಂಗೆ ಅಗ್ರೋದಕಗಳ ತಂದು - ನಾ-|ಮಂಗಳಮಜ್ಜನಮಾಡಲಿಲ್ಲವೆಂದೂ ||ಹೊಂಗೇದಗೆ ಪುಷ್ಪವನೊಂದು ಶ್ರೀ-|ರಂಗಗರ್ಪಿಸಲಿಲ್ಲ ಕಾಯೊ ಬಂದು 4ಪೀತಾಂಬರದಿ ವಸ್ತ್ರಗಳಿಂದ -ದಿವ್ಯ-|ನೂತನವಾದ ಆಭರಣದಿಂದ ||ಪ್ರೀತಿಪಡಿಸಲಿಲ್ಲಾದರದಿಂದ-ಹೇ-|ಸೀತಾಪತೆ ಕೃಷ್ಣ ಹರಿಮುಕುಂದ 5ಗಂಧಾಕ್ಷತೆ ಪುಷ್ಪಗಳಿಂದ -ಬರಿ-|ಒಂದುದಳಶ್ರೀ ತುಳಸಿಯಿಂದ ||ಇಂದಿರೇಶನ ಅರ್ಚಿಸದರಿಂದ -ಬಹು-|ನೊಂದು ದೂರಾದೆ ಸದ್ಗತಿಯಿಂದ 6ಏಕಾರತಿ ದೂಪಾರತಿಯ -ಎಂದು-|ಶ್ರೀಕಾಂತ ನಿನಗೆ ನಾ ಮಾಡಲಿಲ್ಲ ||ವ್ಯಾಕುಲದಲಿ ಹೋಯಿತು ಹೊತ್ತು -ಬಂದು-|ನೀ ಕರುಣಿಸು ಲಕ್ಷ್ಮೀರಮಣ 7ಪಾಯಸ ಪಂಚಭಕ್ಷ್ಯಗಳಿಂದ -ಬಲು-|ಆಯತವಾದ ಶಾಕಗಳಿಂದ ||ತೋಯೆ ಶಾಲ್ಯನ್ನ ಸದ್ಘøತದಿಂದ -ಶ್ರೀ-|ಮಾಯಾಪತಿಗೆ ಅರ್ಪಿಸಲಿಲ್ಲ 8ಮಂಗಳಾರತಿಯ ನಾ ಮಾಡಲಿಲ್ಲ-ಜಯ-|ಮಂಗಳವೆನ್ನುತ ಪಾಡಲಿಲ್ಲ ||ಕಂಗಳ ನೋಟದಿ ನೋಡಲಿಲ್ಲ -ನರ-|ಸಿಂಗನೀ ಬಾಯೆಂದು ಕರೆಯಲಿಲ್ಲ9ಹರಿಯ ಪಾದಕೆ ಬಿದ್ದವನಲ್ಲ -ನರ-|ಹರಿಗೆ ಪ್ರದಕ್ಷಿಣೆ ಮಾಡಲಿಲ್ಲ ||ಹರಿದಿನದುಪವಾಸ ವ್ರತವು ಇಲ್ಲ -ಬಲು-|ಹರಿಯ ದಾಸರ ಸಂಗ ಎನಗಿಲ್ಲ 10ಹೋಮಾರ್ಚನೆ ಔಪಾಸನವೆಲ್ಲ |ನೇಮದಿಂದಲಿ ನಾ ಮಾಡಲಿಲ್ಲ ||ಕಾಮಾತುರನಾಗಿ ಕಂಡಕಂಡ ಕಡೆ |ಸ್ವಾಮಿಯ ಕಾಣದೆ ತಿರುಗಿದೆನೊ 11ಅತಿಥಿಗಳ್ ಬಂದರೆ ಮನೆಗೆ -ಅಂದೆ-|ಗತಿಯಿಲ್ಲವಯ್ಯ ಕೊಡುವುದಕೆ ||ಯತಿಯ ಕಂಡರೆ ನಿಂದಿಸಿದೆ-ಶ್ರೀ-|ರತಿಪತಿ ಪಿತ ನೀ ದಯ ಮಾಡೊ 12ಎಷ್ಟು ಹೇಳಲಿ ಎನ್ನವಗುಣವ -ಅವು-|ಅಷ್ಟು ಇಷ್ಟೆಂದು ಎಣಿಕೆಯಿಲ್ಲ ||ದೃಷ್ಟಿಯಿಂದ ನೋಡಿ ದಯ ಮಾಡೊ -ಶ್ರೀ-|ಬೆಟ್ಟದ ವೆಂಕಟ ಪುರಂದರವಿಠಲ 13
--------------
ಪುರಂದರದಾಸರು