ಒಟ್ಟು 766 ಕಡೆಗಳಲ್ಲಿ , 94 ದಾಸರು , 608 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂತರೆನ ಬಹುದೈಯ್ಯಾ ಇಂಥವರಿಗೇ | ಅಂತರಂಗದ ಹರಿ ಏಕಾಂತ ಭಕುತರೀಗೇ ಪ ಸುಖಕ ಮೈಯ್ಯವ ಮರಿಯಾ | ದುಃಖಗಳಿದಿಂದೇ ನೋಯ | ಚಕಿತನಾಗನು ಕುಮತಿ ವಿಕಳ ನುಡಿಗೆ | ಪ್ರಕಟ ಸೌಖ್ಯಕ ಹಿಗ್ಗ | ಸಕಲರೊಳು ಹರಿಯೇ ವ್ಯಾಪಕ ವರಿದು ನಿರ | ಹಂಕೃತಿಯನುಳ್ಳರಿಗೇ 1 ಪರಮ ಭಾಗವತೆನಿಸಿ | ಪರರ ಮನಿಗಳಿಗ್ಹೋಗಿ | ಪಿರಿದು ವಿದ್ಯವ ತೋರಿ ಪೊರೆಯ ನೋಡಲಾ | ಪರಧನಕ ಕರವಿಕಲ | ಪರಸತಿಯರಿಗೆ ಕುರುಡ | ಪರರ ನಿಂದೆಗೆ ಮೂಕ ಪರವಶ್ಯಾದರಿಗೆ 2 ವೇಷಡಂಭಕವಿಲ್ಲಾ | ಕ್ಲೇಶ ಕರ್ಮಗಳಿಲ್ಲಾ | ಈ ಸಿರಿಯ ಸುಖದ ಮನದಾಶೆಯಿಲ್ಲಾ | ವಾಸುದೇವನ ಪದ | ಧ್ಯಾಸದನುಭವದಿ ನಟ | ಪರಿ ಸಂಸಾರ ಲೇಶ ದೋರ್ವರಿಗೆ 3 ಹರಿಯ ನಾಮವ ನೆನೆದು | ಹರಿಯ ಕೀರ್ತನೆಯಲ್ಲಿ | ಹರುಷಗುಡಿಗಟ್ಟಿ ತನು ಮರದು ನಿಂದು | ಬರುವ ಪ್ರೇಮಾಂಜಲಿಯ | ಭರಿತಲೋಚನನಾಗಿ | ತರಿಸಿ ತಾರಿಸುವ ಘನಕರುಣವಂತರಿಗೆ 4 ಇಂತು ದುರ್ಗಮವಿರಲು | ಸಂತರಾವು ನೀವೆಂದು | ಸಿಂತರವ ಹೋಗಿ ಜನ ಸಿಂತರಿಸುವಾ | ಭ್ರಾಂತ ಮೆಚ್ಚುವನಲ್ಲಾ | ಶಾತಗುರು ಮಹಿಪತಿ ಸ್ವಂತನುಜಗೆಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರೆನಬಹುದುದಯ್ಯ ಇಂತಿವರಿಗೆ ಅಂತರಂಗಲಿ ಹರಿಯ ಏಕಾಂತ ಭಕ್ತರಿಗೆ ಧ್ರುವ ಸುಖಕ ಮೈಯವ ಮರಿಯಾ ದು:ಖಗಳಿದಿರಿಡೆ ನೋಯಾ ಚಕಿತನಾಗನು ಕುಮತಿ ವಿಕಳ ನುಡಿಗೆ ಪ್ರಕಟಸ್ತೋತ್ರಕ ಹಿಗ್ಗ ನಿರಹಂಕೃತಿಯನ್ನುಳ್ಳರಿಗೆ 1 ಕ್ಲೇಶ ಕರ್ಮಗಳಿರಲು ಈ ಶಿರಿಯ ಸುಖದ ಮನದಾಶೆವಿರಲು ವಾಸುದೇವನ ಪದ ಧ್ಯಾಸದನುಭವ ದಿಟ ವೇಶ ಹರಿ ಸಂಸಾರ ಲೇಶದೋರ್ವರಿಗೆ 2 ಪರಮ ಭಾಗವತೆನಿಸಿ ಪರರ ಮನಗಳಿಗ್ಹೋಗಿ ಕರ ವಿಕರ ಪರಸತಿಯರಿಗೆ ಕೂರವು ಪರನಿಂದೆಗೆ ಮೂಕ ಪರವಶಾದರಿಗೆ 3 ಹರಿಯ ನಾಮವ ನೆನಿದು ಹರಿದು ಕೀರ್ತನೆಯಲ್ಲಿ ಹರುಷಗುಡಿಗಟ್ಟಿ ತನುಮರದು ನಿಂದು ಬರುದೆ ಪ್ರೇಮಾಂಜಲಿಗೆ ಭರಿತ ಲೋಚನನಾಗಿ ತರಿಸಿ ತಾರಿಸುವಂದ್ಯನ ಕರುಣವಂತರಿಗೆ 4 ಇಂತು ದುರ್ಗಮವಿರಲು ಸಂತರಾವು ನೀವೆಂದು ಸಿರಿತರವ ಹೋಗಿ ಜನ ಸಿಂತರಿಸುವಾ ಭ್ರಾಂತವೇಷಕ್ಕೆ ಸಿರಿಕಾಂತ ಮೆಚ್ಚನಲ್ಲಾ ಶಾಂತಗುಣ ಮಹಿಪತಿ ಸ್ವಂತಗೆಂದಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸತ್ಯಾದ ನಡಿ ಹಿಡಿರೋ ಮನಜರು ಸತ್ಯದಾ ನಡಿಗಿನ್ನು ಮತ್ತೊಂದು ಭಯವಿಲ್ಲ ಧ್ರುವ ಸತ್ಯದಾನಡಿಗಿನ್ನು ಸತ್ಯ ನುಡಿಯಲು ಬೇಕು ಸತ್ಯಂ ಸತ್ಯ ಶರಣರೆಲ್ಲಾ ಎತ್ಯಾಡಿಸುವಂತೆ ಮೈಯೊಳಗಿಹ ಕಾವನೈಯನ ಮರಿಯಬ್ಯಾಡಿ 1 ಹುಸಿಯಾಡಿ ನೀವಿನ್ನು ಘಾಸಿಗೆ ಬೀಳಲಿ ಬ್ಯಾಡಿ ವ್ಯಸನಕಾಗಿ ಬಿದ್ದು ದೆಶೆಗೆಟ್ಟು ಹೋಗಬ್ಯಾಡಿ 2 ಅಶೆಯಕೊಟ್ಟು ನಿರಾಶಯೆ ಮಾಡಲಿಬ್ಯಾಡಿ ಘಾಸಿ ಮಾಡಲಬ್ಯಾಡಿ 3 ಘಟ್ಟಿಸಿ ಒಬ್ಬರ ಹೊಟ್ಟೆಹೊರಿಯಬ್ಯಾಡಿ ಸಿಟ್ಟಿಲಿ ನೆಂಟರು ತುಟ್ಟಿಸಿ ಬಿಡಬ್ಯಾಡಿ4 ಗುಟ್ಟಿನೊಳಿಹ ಮಾತು ತುಟ್ಟಿಗೆ ತರಬ್ಯಾಡಿ ಹೊಟ್ಟೆಲೆ ಹಡೆದವರ ಕಟ್ಟಿಗೆ ತರಬ್ಯಾಡಿ 5 ಲೆತ್ತಪಗಡಿ ಅಡಿ ಹೊತ್ತುಗಳಿಯಬ್ಯಾಡಿ ತುತ್ತುಕುಡಿಯೊಳಿದ್ದಾ ಪತ್ತಬಡಲಿಬ್ಯಾಡಿ 6 ಹರಿಹರ ಭಕ್ತಿಗೆ ಬ್ಯಾರೆ ನೋಡಲಿಬ್ಯಾಡಿ ಗುರುಕೃಪೆ ಪಡೆದಿನ್ನು ಗುರುತಿಟ್ಟು ನೋಡಿರೋ 7 ಅನ್ನಬೇಡಿದವ ಗಿಲ್ಲೆನ ಬ್ಯಾಡಿ ಹೊನ್ನು ಹೆಣ್ಣಿನ ಮ್ಯಾಲೆ ಕಣ್ಣಿಟ್ಟು ಕೆಡಬ್ಯಾಡಿ 8 ಅಂತರಾತ್ಮದ ಪರಮಾತ್ಮನ ತಿಳಕೊಳ್ಳಿ ಸ್ವಾತ್ಮ ಸುಖದ ಸವಿ ಸೂರ್ಯಾಡಿಕೊಳಲಿಕ್ಕೆ 9 ಸ್ವಹಿತ ಸುಖದ ಮಾತು ಸಾಧಿಸಿಕೊಳಲಿಕ್ಕೆ ಮಹಿಪತಿ ಹೇಳಿದ ಮಾತು ಮನ್ನಿಸಿ ತಿಳಿಕೊಳ್ಳಿ 10
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸನ್ನುತ ವಿಠಲ | ಇವನ ಪೊರೆಯೋ ಪ ಅವಿಕಾರಿ ಆದ್ಯ ನಿರ | ವದ್ಯ ಎಲೊ ಹರಿಯೆ ಅ.ಪ. ತೈಜಸನೆ ನೀನಾಗಿ | ಮಾಜದಲ್ಯುಪದೇಶಯೋಜಿಸುವೆನೆಂದೆನುತ | ಪೇಳ್ದುದಕ್ಕಾಗೀಆರ್ಜವದ ಮನದಲ್ಲಿ | ಪ್ರಾರ್ಥಿಸಲು ಸ್ವಪ್ನದಲಿಯೋಚಿಸಿಹೆ ಅಂಕಿತವ | ಹೇ ನೈಜಮೂರ್ತೇ 1 ಚಿಣ್ಣನಿರುವನು ಇವನು | ಕಣ್ಣೆಗೆವೆಯಂದದಲಿಇನ್ನೀವನ ಕಾಯುವುದು | ಬನ್ನಬಡಿಸದಲೇಅನ್ನ ಆರೋಗ್ಯಕ್ಕೆ | ನಿನ್ನನೆ ಮೊರೆಯಿಡಲಿಅನ್ಯ ಹಂಬಲ ನೀಗೊ | ಪನ್ನಂಗ ಶಯನಾ 2 ತೊಡರು ಬರಲಿ | ಬಿಡದೆ ನಿನ್ನಂಘ್ರಿಯನುಧೃಡಭಕ್ತಿಯಿಂ ಸ್ಮರಿಪ | ಮುದ ಮನವ ನೀಯೋ |ಎಡಬಲದಿ ನೀನಾಗಿ | ಬಿಡದೆ ಬೆಂಬಲ ವಿರಲುಕಡು ಭವಾರ್ಣವವೆಲ್ಲ | ಅಡಿಯ ಪರಿಮಿತಿಯೋ 3 ಸಿರಿ ವಾಯು ಮೊದಲಾದಸುರರೆಲ್ಲ ಹರಿಯ ಕಿಂಕರರೆಂಬ ಮತಿಯಿತ್ತುಪೊರೆವುದಿವನನ ಎಂದು | ಹರಿಯೆ ಭಿನ್ನವಿಪೆ 4 ನಾಮ ಸ್ಮರಣೆ ಯೆಂಬ | ವಜ್ರಕವಚವ ತೊಡಿಸಿಈ ಮಹಾ ಕಲಿಯುಗದಿ | ಸಾಧನವ ಗೈಸೋಶ್ರೀ ಮನೋಹರ ಗುರು | ಗೋವಿಂದ ವಿಠಲಯ್ಯಈ ಮಹತ್ತುಪಕಾರ | ನಾ ಮರೆಯನಯ್ಯ 5
--------------
ಗುರುಗೋವಿಂದವಿಠಲರು
ಸನ್ನುತ ವಿಠಲ | ಭಾರ್ಗವಿಯ ರಮಣಾ ಪ ಯೋಗ ಮಾರ್ಗದಲಿ ಹೃ | ದ್ರೋಗ ಹರಿಸಿವಗೇ ಅ.ಪ. ಮುಗ್ದ ತರಳನು ಇವಗೆ | ದಗ್ಧ ಪಾಪವ ಮಾಡಿಮಧ್ವ ಸಿದ್ಧಾಂತಗಳ | ಪಧತಿಯ ತಿಳಿಸೋ |ಕೃದ್ಧಖಳ ದುರ್ಯೋಗ | ವದ್ದು ಕಳೆದೂರಕ್ಕೆಬುದ್ಧಿ ಜನ ಸಂಯೋಗ | ಬದ್ಧವಾಗಲಿ ಇವಗೇ 1 ನಿತ್ಯ ಮಂಗಳನೇ 2 ಭಾವಿ ಬೊಮ್ಮರು ಹಾಗು | ಭಾವಿ ಮರುತರ ಕರುಣಭಾವುಕಗೆ ಇರುವುದನು | ಭಾವಿತವು ಅವಗೇಭಾವ ಉದ್ರೇಕ ಸ | ದ್ಭಾವ ಭಾವಿತ ನನ್ನನೀವೊಲಿದು ಕಾಯೊ | ಕೃಪಾವಲೋಕನದಿ3 ಹರಿ ನಿನ್ನ ವಾರ್ತೆಯಲಿ | ಇರಲಿ ರತಿ ಇವಗಿನ್ನುಗುರು ಹಿರಿಯರಾ ಸೇವೆ | ಪರಮ ಭಕುತಿಂದಾವಿರಚಿಸುವ ಸೌಭಾಗ್ಯ | ಕರುಣಿಪುದೊ ಶ್ರೀ ಹರಿಯೆಮರುತಾಂತರಾತ್ಮ ತವ | ಸ್ಮರಣೆ ಸುಖ ಕೊಡುತಾ 4 ಭವ | ರೋಗವನೆ ಪರಿಹರಿಸೋನಾಗೇಶ ಶಯ್ಯ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಸರಳಕವಿ ರಾಮಾರ್ಯ ಹರುಷದಿ ವಿರಚಿಸಿದ ವರವೆಂಕಟೇಶನ ಪರಮಲೀಲೆಯ ಚರಿತೆಯುನ್ನತ ಕೀರ್ತಿಯಾಂತಿಹುದು ನರರ ಭಕ್ತಿಯ ಪೆರ್ಚಿಸಲ್ಕಿದು ಕರದ ದಿವ್ಯಜ್ಯೋತಿಯಪ್ಪುದು ಬರೆದಕವಿಯಾಸೂರಿವಂಶದ ಶರಧಿಚಂದಿರನು 1 ಭರತಭಕ್ತಿ ಯೆನಿಪ್ಪ ಚರಿತೆಯ ಬರೆದು ತಾನೇ ಭರತನಾಗಿಹ ಪರಿಯ ತೋರುವ ಭಕ್ತಿಬೋಧಕ ಭಾವಭಂಗಿಯಲಿ ಸರಸ ಸರಳತೆ ಲಲಿತಪದಗಳ ಶರಧಿಯಪ್ಪುದು ಕಾವ್ಯಮಿದನಾ ದರದಿ ಮುದ್ರಣಗೊಳಿಸಿ ಹಂಚಿದ ಕವಿಯು ಧನ್ಯನಲೇ 2 ಕವಿ ವಿಶಿಷ್ಠಾದ್ವೈತತತ್ವೋ ದ್ಭವನು ಹರಿಹರ ಭೇದರಹಿತನು ನವರಸಾಲಂಕೃತಯುತ ಗೋಕರ್ಣ ಮಹಿಮೆಯನು ಶಿವನ ಸನ್ನುತಿಗೈದು ರಚಿಸುತೆ ಭುವಿಯ ರಕ್ಷಣೆಗೈವ ಶಿವಕೇ ಶವರ ನಾಮವನೇಕ ವೊಬ್ಬನೆ ದೈವತಾನೆಂಬ 3 ಭಕ್ತಿಕಾವ್ಯಂಗಳನು ರಚಿಸಿಹ ಭಕ್ತನೀತನ ವಹ್ನಿಪುರಕಾ ಸಕ್ತಿಯಾಂತೈತರ್ಪುದೆಂದೆವು ವೇಂಕಟೇಶ್ವರನ ಭಕ್ತಿಬೋಧಕ ಕೃತಿಗೆ ಮಂಗಳ ದುಕ್ತಿಯುತ್ಸವಕಾಗಿ ನಾವತಿ ಭಕ್ತಿ ಸುಸ್ವಾಗತವನೀವೆವು ಕೈಗಳಂ ಮುಗಿದು 4 ಕೃತಿಯ ರಚನೆಗೆ ಮೋಹಗೊಂಡೆವು ಕೃತಿಯನೋದಿಸಿ ಕೇಳಿ ನಲಿದೆವು ಕೃತಿಯ ಬರೆದಾ ಕವಿಯ ಭಕ್ತಿಗೆ ಮನವ ತೆತ್ತಿಹೆವು ಕೃತಿಯ ಕರ್ತಗೆ ಮಣಿದು ಮಹದುಪ ಕೃತಿಯ ಗೈದಿಹಿರೆಂಬುದಲ್ಲದೆ ಕೃತಿಯ ಬರೆದವಗಾವಭಾಗ್ಯವನಿತ್ತು ತಣಿಸುವೆವು5 ಪರಮಭಕ್ತನಿಗಿಂದು ವಂದಿಸಿ ನೆರೆದ ಪಂಡಿತ ಪೌರಸಭಿಕರ ನೇಮಗಳಪೊತ್ತು ಹರಿಯ ಪಾದಂಗಳಿಗೆ ವಂದಿಸಿ ವರಕವಿಗೆ 'ಕವಿರತ್ನ’ ನೆನ್ನುವ ಬಿರುದನೀವೆವು ಸರಳಕವಿವರನಿದನು ಕೈಗೊಳಲಿ 6 ಗಮಕಕೋಕಿಲನೆನಿಪ ಕೌಶಿಕ ನಮಲಕೃತಿವಾಚನವಗೈಯಲು ಅಮಿತಸಂತಸದಿಂದ ವಿವರಿಸುತಂತರಾರ್ಥಗಳ ಕ್ರಮದಿ ಪೇಳಲು ಸೂರ್ಯನಾರಣ ನಮಿತ ಹರ್ಷಾಂಬುಧಿಯೊಳಿಳಿಯುತೆ ರಮೆಯ ರಮಣನ ಪಾದಕೆರಗಿದ ಸರಳಕವಿರತ್ನ7 ಆ ಮಹಾಮುನಿ ಸೂತನಂದದಿ ರಾಮಚರಿತಾಮೃತವ ರಚಿಸುತೆ ಆ ಮಹೇಶ್ವರನಾತ್ಮಲಿಂಗವು ಭೂಮಿಗಿಳಿದಾಕಥೆಯ ಕಾವ್ಯವ ನೀ ಮಹಾಮತಿ ರಚಿಸಿ ಮುಕ್ತಿಯ ಮಾರ್ಗವಿಡಿದಿಹನು8 ಸರಳಕವಿರತ್ನನಾಸೂರಿ ರಾಮಾರ್ಯತಾಂ ವಿರಚಿಸಲಿ ಸದ್ಭಕ್ತಿ ಕಾವ್ಯಗಳನೋರಂತೆ ಸಿರಿಕಾಂತನೀತಂಗೆ ದೀರ್ಘಾಯುರಾರೋಗ್ಯಗಳ ಕುಡಲಿ ಕಡುಕೈಪೆಯೊಳು ನೆರೆ ಗಮಕ ಕಲೆಯ ಸತ್ಕೀರ್ತಿ ವಿಸ್ತರಗೊಳಲಿ ಸಿರಿಗನ್ನಡಂ ಚಿರಂ ಬಾಳ್ಗೆ ಸುಕ್ಷೇಮದಿಂ ವರವಹ್ನಿಪುರದರಸನೆಲ್ಲರಂ ರಕ್ಷಿಸಲಿ ಭದ್ರಂ ಶುಭಂ ಮಂಗಳಂ9
--------------
ಪರಿಶಿಷ್ಟಂ
ಸರ್ಪಭೂಷಣನ ಸುತನ ಭಕ್ತಿಯಿಂದ ಬಲಗೊಂಡು ಮತ್ತೆ ಅಜನಸತಿಯ ಪಾದಕ್ಕೆ ಎರಗುವೆ 1 ಎಲ್ಲ ದೇವತೆಗಳಿಗೆ ಎರಗಿ ಭಕ್ತಿಯಿಂದ ಲಕ್ಷ್ಮೀ- ವಲ್ಲಭನ ಕತೆಗಳ ವರ್ಣಿಸುವೆನು 2 ಸ್ವಾಮಿ ಶ್ರೀಕೃಷ್ಣನ ಪ್ರೇಮವನ್ನು ಪಡೆದ ಸು- ದಾಮನೆಂಬೊ ಭಕ್ತ ಬಡವ ಬ್ರಾಹ್ಮಣಿದ್ದನು 3 ಸ್ನಾನ ಹೋಮ ಜಪವಮಾಡಿ ನೇಮ ನಿಷ್ಠೆಲಿಂದ ಉಪ್ಪು ಕಾಲ ಕಳೆಯುತಿದ್ದನು 4 ಅಶನವಿಲ್ಲ ವಸನವಿಲ್ಲ ಹಸಿದ ಮಕ್ಕಳನ್ನು ನೋಡಿ ವ್ಯಸನದಿಂದ ಪತಿಯ ಪಾದಕ್ಕೆರಗಿ ನಿಂತಳು 5 ತಂದೆ ತಾಯಿಗಳ ಕಡೆಯ ಬಂಧು ಬಳಗ ಯಾರು ಹತ್ತಿ ದ್ಹೊಂದಿದವರುಯಿಲ್ಲೆ ನಿಮಗೆ ಎಂದು ನುಡಿದಳು 6 ಪತ್ನಿ ಮಾತು ಕೇಳಿ ಪರಮ ಭಕ್ತಿಯಿಂದ ನುಡಿದ ಧ- ರ್ಮಾರ್ಥ ಕಾಮ್ಯಗಳನೆ ಕೊಡುವೋ ಮೋಕ್ಷದಾಯಕ 7 ಆದಿಮೂರುತಿ ಕೃಷ್ಣ ಓದಿಕೊಂಡ ಗೆಳೆಯನೊಬ್ಬ ಮಾಧವನ ಬಿಟ್ಟು ಮತ್ತೊಬ್ಬರಿಲ್ಲವು8 ಆತನ ಕಂಡು ಬಂದರ್ಯಾತರ ದಾರಿದ್ರ್ಯ ನಮಗೆ ಪ್ರೀತಿಯಿಂದ ಹೋಗಿಬನ್ನಿರೆಂದು ನುಡಿದಳು 9 ವರಮಾಲಕ್ಷ್ಮಿ ಅರಸು ಕೃಷ್ಣನರಮನೆಗೆ ಪೋಗಲಿಕ್ಕೆ ನ- ದರ ಏನುವೊಯ್ಲೆ ನರಹರಿಗೆ ಎಂದನು 10 ಲಕ್ಕುಮೀಶನ್ನ ದರ್ಶನಕ್ಕೆ ಒಯ್ಯಲಿಕ್ಕೆ ಮೂರು ಮುಕ್ಕು ಅವಲಕ್ಕಿ ತಿರಿದು ತಂದುಕೊಟ್ಟಳು 11 ಅದನು ಗಂಟು ಕಟ್ಟಿ ತನ್ನ ಹೆಗಲಮ್ಯಾಲೆ ಇಟ್ಟುಕೊಂಡು ನ- ಗಧರನ್ನ ನಗರಕ್ಕಾಗ ಬರುತಲಿದ್ದನು 12 ಲಕ್ಷಣಾದ ಶಕುನವ ಆ ಕ್ಷಣದಿ ಕಂಡು ವಿಪ್ರ ಲಕ್ಷ್ಮೀಪತಿಯ ದಯವು ನಮಗೆ ಆಗೋದೆಂದನು 13 ಹಾದಿಲ್ಹರಿವೊ ಜಲವ ಕಂಡು ಸ್ನಾನವನ್ನು ಮಾಡಿಕೊಂಡು ವೇದ ಪುಸ್ತಕವ ಹಿಡಿದು ಓದಿಕೊಳುತಲಿ 14 ಮಲ್ಲೆ ಮಲ್ಲಿಗೆ ದವನ ಅಲ್ಲೆಯಿದ್ದ ಫಲಗಳು ಲಕ್ಷ್ಮೀ- ವಲ್ಲಭಗೆ ಅರ್ಪಿತವೆಂದು ನಡೆದನು 15 ಗೋಪುರವ ಕಂಡು ದ್ವಾರಕಾಪುರಕ್ಕೆ ಕೈಯಮುಗಿದು ಶ್ರೀಪತಿಯ ಬಾಗಿಲಲಿ ಬಂದು ನಿಂತನು 16 ದ್ವಾರದಲ್ಲಿ ನಿಂತವರು ದಾರುಯೆಂದ್ವಿಚಾರಿಸಲು ನಾರಾಯಣನ ಸಖನು ನಾನೆಂದ್ಹೇಳುತಿದ್ದನು 17 ನುಡಿದ ನುಡಿಯ ಕೇಳುತ ನಡೆದು ಬಂದು ಚಾರಕರು ಒಡೆಯ ನಿಮ್ಮ ಗೆಳೆಯನಂತೆ ಬಡವ ಬ್ರಾಹ್ಮಣ 18 ಹುಟ್ಟ ಮೊದಲೆ ಅನ್ನ ತನ್ನ ಹೊಟ್ಟೆಗುಂಡ ಮನುಜನಲ್ಲ ಗಟ್ಟಿಗಾಳಿ ಬರಲೀಗ್ಹಾರುವಂತೆ ತೋರುವ 19 ಅಸ್ಥಿ ಚರ್ಮ ಆತನಂಗಕ್ಹತ್ತಿಕೊಂಡ ಹೊಟ್ಟೆಬೆನ್ನು ಮತ್ತೆ ನಡೆಯಲಾರ ಮಾತನಾಡಲಾರನು 20 ಒಡೆದ ಗುಂಡುತಂಬಿಗೆ ಬಡಿದನದರ ಸುತ್ತ ಮ್ಯಾಣ ಹಿಡಿದ ಗಂಟ ಬಿಡದಲ್ಹೊತ್ತು ನಡೆದು ಬಂದನು 21 ಮರದ ಗುಂಡು ಸರದಗುದ್ದಿ ಕೊರಳೊಳಗೆ ಹಾಕಿಕೊಂಡು ಎರಳೆ ಚರ್ಮ ಸುತ್ತಿ ಎಡದ ಬಗಲಲ್ಲಿಟ್ಟನು22 ದೊಡ್ಡನಾಮ ಹಚ್ಚಿಕೊಂಡು ಮುದ್ರೆಮಯ್ಯಲೊತ್ತಿಕೊಂಡು ಶುದ್ಧ ಚಂದ್ರಮನ ಕಾಂತಿ ತೋರುತಿದ್ದನು 23 ಛಿದ್ರವಾದ ಬಟ್ಟೆನುಟ್ಟು ಚಿಗುರು ತುಳಸಿ ಕಿವಿಯಲ್ಲಿಟ್ಟು ಪದ್ಮನಾಭ ಪಾಲಿಸೆನುತ ಕೂಗುತಿದ್ದನು24 ನಾಮಾಂಕಿತÀವ ಕೇಳಲು ಸುದಾಮನೆಂದು ಹೇಳುವ ನಾನಾ ಪರಿಯಲ್ನಿಮ್ಮ ಸ್ತುತಿಯ ಮಾಡುತಿದ್ದನು 25 ಅಪ್ಪುಣಾದರಾತನ ಇತ್ತ ಕರೆದು ತಾವೆನೆನಲು ಭಕ್ತರೊಡೆಯ ಭಾಳ ಸಂಭ್ರಮದಿ ಎದ್ದನು 26 ಕರವ ಪಿಡಿದು ಕುಳ್ಳಿರಿಸಿ ದಿವ್ಯಾಸನದ ಮ್ಯಾಲೆ ತರಿಸಿ ಚಾಮರದ ಗಾಳಿ ಹಾಕುತಿದ್ದನು 27 ಪನ್ನೀರು ತಂದು ಪಾದತೊಳೆದು ದ್ರಾಕ್ಷಿ ಕಿತ್ತಳೆ- ಹಣ್ಣು ಎಳನೀರು ತಂದು ಮೆಲಲು ಕೊಟ್ಟನು 28 ಮದುವೆ ಆಯಿತೇನೊ ಸಖನೆ ಎಂದು ಕೇಳಿದ 29 ಸೋಳಸಾವಿರ ಸತಿಯರಾಳುವೊ ಶ್ರೀರಮಣ ಕೇಳೊ ರಾಣಿವೊಬ್ಬಳಿರುವೊಳಯ್ಯ ನಮಗೆಯೆಂದನು 30 ಇಷ್ಟುದಿವಸ ಇಲ್ಲಿಗೆ ಬಾರದಿದ್ದ ಕಾರಣೇನು ಚಿಕ್ಕಂದಿನ ಸ್ನೇಹವೆಲ್ಲ ಮರೆತ್ಯ ಎಂದನು 31 ಬರದಲಿದ್ದೆ ನಾನು ಪಾಮರನೂ ಆದಕಾರಣ ಕಳುಹಿಕೊಟ್ಟಳೆನ್ನ ಭಾರ್ಯಳೀಗ ಎಂದನು 32 ಅಣ್ಣ ನಮ್ಮತ್ತಿಗೆ ನಮಗೇನು ಕಳಿಸಿದಳು ನಿನ್ನ ಹೆಗಲ ಗಂಟು ಬಿಚ್ಚಿ ತೋರಿಸೆಂದನು 33 ವಿಪ್ರ ನಾಚಿ ನೆಲನ ನೋಡುತಿರಲು ಕೃಷ್ಣ ಸಲಿಗೆಲಿಂದ ಗಂಟನೆಳೆದು ಬಿಚ್ಚಿಸಿದನು 34 ಸುಜನ ಜನರು ಮಾಡುವಂಥ ಭಜನೆಯೊಂದೆ ಸಾಕುಯೆನೆಗೆ ಹೇಮ ರತ್ನಾಭರಣವ್ಯಾತಕೆಂದನು 35 ಕುಂದಣದ ಪಾತ್ರೆಯೊಳಗೆ ತಂದು ಸುರುವೆ ಪ್ರತಕವನ್ನು ಮಂದರೋದ್ಧರನು ಮುಷ್ಟಿ ತೆಗೆದುಕೊಂಡನು36 ಮುಷ್ಟ್ಟಿಗೊಂದು ಬಾರಿ ಶ್ರೀಕೃಷ್ಣ ತೆಗೆದು ಮೆಲ್ಲುತಿರಲು ಕಷ್ಟ ದಾರಿದ್ರ್ಯವೆಲ್ಲ ಹರಿದು ಹೋಯಿತು 37 ಎರಡನೇ ಮುಷ್ಟಿ ಪಾಲ್ಗಡಲಶಯನ ಮುಕ್ಕುತಿರಲು ಸಡ- ಸಡಗರ ವೈಕುಂಠಪದವಿ ಮುಕ್ತಿ ಆಯಿತು 38 ಮೂರನೇ ಮುಷ್ಟಿಗೆ ನಾರಿ ರುಕ್ಮಿಣಿ ಬಂದು ಕೃಷ್ಣಯೇನು ಕೊಡುವಿ ಕರವ ಪಿಡಿದಳು 39 ಭಾವನವರು ತಂದುಕೊಟ್ಟ ದೂರದ ಪದಾರ್ಥವನ್ನು ನೀವೆ ಸವಿಯ ನೋಡುವೋದು ದಾವ ನೀತಿಯು40 ಅಕ್ಕ ಕಳಿಸಿದ್ದು ಅವಲಕ್ಕಿ ನಮಗಿಲ್ಲದ್ಹಾಗೆ ಮುಕ್ಕಿ ಬಿಡುವರೇನೊ ಎಂದು ನÀಕ್ಕಳಾಗಲೆ41 ಇಷ್ಟು ಮಂದಿಯೊಳಗೆ ಎನ್ನ ಮುಷ್ಟಿ ಹಿಡಿದು ನಿಲ್ಲುವಂಥ ದಿಟ್ಟತನಗಳೆಲ್ಲ್ಲಿ ಕಲಿತೆ ಹೇಳೆಯೆಂದನು 42 ಚಿಕ್ಕ ಸತ್ಯಭಾಮೆ ನೋಡಿ ನಕ್ಕಾಳೆಂಬೊ ನಾಚಿಕಿಲ್ಲ ಮುಕ್ಕು ಅವಲಕ್ಕಿಗೆನ್ನ ಕÀರವ ಪಿಡಿವೋರೆ 43 ಸರ್ವರೊಳಗೆ ಅಧಿಕಳೆಂಬೊ ಗರುವಿನ ರುಕ್ಮಿಣಿಗೆ ಬುದ್ಧಿ ಕರೆದು ಹೇಳಬಾರೆ ಸತ್ಯಭಾಮೆಯೆಂದನು 44 ಎನ್ನ ಭಕ್ತರಲ್ಲಿ ಪ್ರೇಮ ನಿನಗೆ ಉಂಟಾದರೆ ಇನ್ನೂ ಒಂದು ಮುಕ್ಕು ನಿನಗೆ ಕೊಡುವೆನೆಂದನು45 ಅಕ್ಕಗಾಡೋ ಮಾತಕೇಳಿ ಚಿಕ್ಕ ಸತ್ಯಭಾಮೆ ತಾನು ಅಕ್ಕರದಿ ಬಂದು ಕೃಷ್ಣನೆದುರು ನಿಂತಳು 46 ರಂಗ ನಿನ್ನ ಪಟ್ಟದರ್ಧಾಂಗಿಯಾದ ರುಕ್ಮಿಣಿಗೆ ಮುಂಗೈ ಹಿಡಿವೋದಕ್ಕೆ ದಾರಭಯವೇನೆಂದಳು47 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಸರ್ಪಶಯನನೆಂಬೊ ದಿವ್ಯಕಲ್ಪತರು ಸೇರಿದ ದರ್ಪವೆಷ್ಷನಿಮ್ಮಿಬ್ಬರ ಧಿಮಾಕುಭಾಳೆ ನಾರಿ ಪ. ನಿರತ ದಾಸಿ ನಾನೆಂಬೋದು ಸರಸಿಜಾಕ್ಷತಾನೆ ಬಲ್ಲಅರಸು ಅರಸನ ಹುಡುಕುತಅರಸು ಅರಸರನ ಹುಡುಕುತಲೆ ಹೋಗುವದುಸರಸ ತೋರುವುದೆ ಐವರಿಗೆ ಕೇಳನಾರಿ1 ಒಬ್ಬ ರುಕ್ಮಿಣಿ ನಿನ್ನ ಮುಂದೆ ಗುಬ್ಬಿಕಾಗೆ ಹಿಂಡುಕಬ್ಬೆಕ್ಕು ಕೋಳಿ ನೆರೆದಾವಕಬ್ಬೆಕ್ಕು ಕೋಳಿ ನೆರೆದಾವ ಶ್ರೀಕೃಷ್ಣತಬ್ಬಿಬ್ಬುಕೊಂಡು ನಗುತಾನ ಕೇಳ ನಾರಿ 2 ಅತ್ತಿಗೆ ನಿನ್ನ ಮೈಗೆ ಹತ್ಯಾವ ರುದ್ರಾಕ್ಷಿನೆತ್ತಿಯ ಮ್ಯಾ¯ ಜಡದಾವ ನೆತ್ತಿಯ ಮ್ಯಾ¯ ಜಡದಾವ ಅತ್ತಿಗೆ ನಿನ್ನಹತ್ತಿಲಿದ್ದವರು ನಗುತಾರೆ ಕೇಳನಾರಿ3 ಜಾಣೆ ನಿನ್ನಂಥವಳ ಕಾಣೆ ನಾ ಜಗದೊಳುಕೋಣನ ಹೊಡೆವ ಕೌಶಲ್ಯಕೋಣನ ಹೊಡೆವೊÀ ಕೌಶಲ್ಯಕ್ಕೆ ಬೆರಗಾಗಿಸುರನಾರಿಯರು ಬಹಳೆ ನಗುತಾರೆ ಕೇಳ ನಾರಿ4 ನಿತ್ಯ ಪ್ರಕಾಶನ ಉತ್ತಮೋತ್ತಮ ಗುಣವಅತ್ಯಂತ ನೋಡಿ ಸುಖಿಸದೆಅತ್ಯಂತ ನೋಡಿ ಸುಖಿಸದೆ ಎಲೆಭಾವೆಕತ್ತಲೆಗೈದ ಬಗಿಹೇಳ ಕೇಳನಾರಿ5 ಕತ್ತಲೆಂಬುದು ನಿನ್ನ ಸುತ್ತುಮುತ್ತಲಾಗಿರೆಎತ್ತನೋಡಿದರು ಜನರಿಲ್ಲಎತ್ತನೋಡಿದರು ಜನರಿಲ್ಲ ಅವರೊಳು ಚಿತ್ತ ಸ್ವಾಸ್ಥ್ಯದ ಬಗಿ ಹೇಳ ಕೇಳನಾರಿ6 ಹರಿ ಬಲು ಪ್ರೀತಿಯಿಂದ ಉರದೊಳು ಸ್ಥಳಕೊಟ್ಟಇರಬಾರದೇನೆ ವಿನಯದಿಇರಬಾರದೇನೆ ವಿನಯದಿ ಜಗಳಾಡಿಉರಿಯ ಹೊಗುವರೆ ಉನ್ಮತ್ತೆ ಕೇಳನಾರಿ 7 ಮೂಡಲಗಿರಿಪತಿಗೆ ಜೋಡೆಂದು ನೀವಿಬ್ಬರುಮಾಡಿ ಸಹವಾಸ ಎಡಬಲಮಾಡಿ ಸಹವಾಸ ಎಡಬಲ ಹಿಡಿದಿರಿ ನೋಡಿದವರೆಲ್ಲ ನಗುವಂತೆ ಕೇಳನಾರಿ8 ಕರಿ ಮಣಿಯು ಹೋಲುವುದೆಹರಿಯ ಚಲ್ವಿಕೆಗೆ ಹವಣಿಸಿಹರಿಯ ಚಲ್ವಿಕೆಗೆ ಹವಣಿಸಿ ರಾಮೇಶಗೆಸರಿಯಾಗುವೆ ಏನೆ ಬಿಡು ಬಿಡು ಕೇಳ ನಾರಿ 9
--------------
ಗಲಗಲಿಅವ್ವನವರು
ಸರ್ವ ವಿದ್ಯದಾಗರಾ | ಪಾರ್ವತಿ ಕುಮಾರಾ | ದೋರ್ವ ವಿಘ್ನ ಸಂಹಾರಾ | ಶ್ರೀಗಣ ನಾಯಕನೇ | ಊರ್ವಿಲಿ ನಿನ್ನ ಬಲಗೊಂಬೆ 1 ತರುವಾಣಿ ಕರುಣಾ ಸಾಗರೆ | ಶರಣು ಶರಣು ಕಲ್ಯಾಣಿ 2 ಸಾರಸ ಲೋಚನ | ಕಾರುಣ್ಯ ನಿಧಿಯೇ ಸಲಹಯ್ಯಾ 3 ಮೂರಾವ ತಾರಿ ಸಹಕಾರೋ | ಶ್ರೀ ಹನುಮಂತಾ | ತಾರಿಸೋ ಭವದಿಂದಾ 4 ರಜನೀಶ ಮೌಳಿ | ನಿಜ ದೋರಿ ಎನ್ನ ಸಲಹಯ್ಯಾ 5 ಛಂದಾಗಿ ಸಲಹು ತಂದೆ ಗುರು ಮಹಿಪತಿ ರಾಯಾ 6 ಇಂದು ನಮ್ಮನಿಯಲಿ ಮುಂದಾಗಿ ನೀವು ವದಗೀರೇ 7 ಬನ್ನಿ ಭಾವಕಿಯರು ಮುನ್ನಿನಾಗುಣಬಿಟ್ಟು | ಅನ್ಯ ಕೆಲಸಕೆ ತೊಡಗದೇ | ನೈವೇದ್ಯಕೀಗ | ಸನ್ನೆಲ್ಲಕ್ಕಿ ಮಾಡೀರೇ 8 ಸೇರಲಿ ಅನುಮಾನಾ ತವಕದಿ ನೀವು ಕುಳ್ಳಿರೆ 9 ಉರ್ವಿಲಿ ನೀವು | ಕುಟ್ಟರೆ | ಜ್ಞಾನ ವಿಜ್ಞಾನದಿ | ಮೆರ್ವ ವನರೆಯಾ ಧರಿಸೀಗಾ 10 ಅಮೃತ ನಾಮವಾ ನೀವು ಬೆರೆಯಿರೇ 11 ಸಮಭಾವ ಯಾರಿಯಾ ಕ್ರಮಗೊಂಡು ಹಾಕುತಾ | ದಮಿಸಿ ಕ್ರಮ ಈಡ್ಯಾಡಿ ಕುಟ್ಟಿರೆ 12 ಕೆಟ್ಟ ಹೊಟ್ಟವ ಹಾರಿಸಿ | ಶುದ್ಧ ಅಕ್ಕಿಯ ನೆಟ್ಟನೆ ನೀವು ವಡಗೂಡೀ 13 ಏಕೋ ದೇವಗೆ ಅರ್ಪಿಸ | ದಯದಿಂದ ದೇವ | ಬೇಕಾದ ಸುಖ ಕೊಡುವನು 14 ಸಾರಥಿ ಬಂಧು ಬಳಗವು ಯನಗಾಗಿ | ಸಲಹುವಾ ನಮ್ಮ ಎಂದೆಂದು ಸಿಂಹಾದ್ರೀಶನು 15
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸರ್ವಾಮಯ ಹರ ವಿಠಲನೇ | ಸರ್ವದಾನೀನಿವರ ಸಲಹ ಬೇಕೊ ಪ ಶರ್ವಾದಿ ಸುರವಂದ್ಯ ಸಾರ್ವಭೌಮ ಸ್ವಾಮೀಅ.ಪ. ತ್ರಿವಿಧ ಭವ ಹಾರೀ 1 ಸರ್ವಸೃಷ್ಟೀಶನೇ ಸರ್ವಪಾಲಕ ಹರಿಯೇಸರ್ವ ಸಂಹಾರಕನೇ ಸರ್ವೋತ್ತಮಾಸರ್ವಾಂತರಾತ್ಮ ಶ್ರೀ ವೆಂಕಟೇಶನೆ ನಿನ್ನಸರ್ವದಾ ಭಜಿಸುವಗೆ ಸರ್ವಮಂಗಳವೀಯೋ 2 ಭಾವಿಮರುತಲೀತ | ಭಾವ ಭಕುತಿಗಳಿಂದಸೇವಿಸುವ ಹಯಮೊಗನ | ತವ ದಿವ್ಯ ರೂಪಾಆವ ತನುಕರಣ ಮನ | ಸರ್ವಾರ್ಪಣೆಂಬ ಮತಿಓವಿನೀನಿವಗಿತ್ತು | ಪಾವನವಗೈಯ್ಯೊ 3 ಪಂಚಬೇಧದ ಜ್ಞಾನ | ಸಂಚಿಂತನೇ ಇತ್ತುಅಂಚೆವಹ ಮತ್ತೆ ಹರಿ | ಮಂಚವಿಪಗೇಂದ್ರಾ |ಮುಂಚೆ ತರತಮ ತಿಳಿಸಿ | ವಾಂಛಿತಾರ್ಥದ ನಿನ್ನಸಂಚಿಂತನೆಯಲೇ ಇರಿಸೊ ಪಂಚಾಸ್ಯ ಪ್ರಿಯನೆ 4 ಅದ್ವೈತ ಚಿಂತನೆಯನೀವೊಲಿದು ಇವಗಿತ್ತು | ಭಾವದಲಿ ತೋರೊ ತವರೂಪ |ಈ ವಿಧದಿ ಬಿನೈಪೆ ಪವನಾಂತರಾತ್ಮ ಗುರುಗೋವಿಂದ ವಿಠಲಯ್ಯ ಪಾಲಿಸೋ ಜೀಯಾ 5
--------------
ಗುರುಗೋವಿಂದವಿಠಲರು
ಸಾಧನಕೆ ಸಾಧನಾಖ್ಯಾನ ವೃಂದಾವನಾ ಪ ಸೋದೆ ಪುರವಾಸಿ ಶ್ರೀ ವಾದಿರಾಜರ ಕರುಣಾ ಅ.ಪ. ಕುರುಡು ಶುನಕವು ತಾನು ನೆರೆದ ಸಂತೆಗೆ ಬಂದುಸರಕು ವಿನಿಮಯ ಮಾಡಿ ಮರಳಿ ಬರುತಿರುವಾ |ಪರಿಯ ಮಾಡದಲೆನ್ನ ಇರುವ ಸ್ವಪ್ನದಿ ತಿಳುಹಿಕರುಣಿಸಿಹೆ ಮಹ ಮಹಿಮ ಗುರು ಸಾರ್ವಭೌಮಾ 1 ಕಾರ್ಯ ವೃಂದಾವನಚಾರ್ಯರೊಡೆವೆರಸುತ್ತಧೈರ್ಯದಿಂದಲಿ ಗೈಸಿ ಭಾರ್ಯಸಹಕೃತದಿ |ಪ್ರೇರ್ಯ ಪ್ರೇರಕ ಹೃದಯ ಧಾರ್ಯಮಾರ್ಗವನರುಪಿಸ್ಥೈರ್ಯವನು ಎನಗಿತ್ತ ಆಯ್ ಲಾತವ್ಯಾ2 ಜೀವ ಅಸ್ವಾತಂತ್ರ ದೇವ ನಿಜ ಸ್ವಾತಂತ್ರನೀವೆ ಎಮ್ಮೊಳು ನಿಂತು ಸರ್ವ ಕಾರ್ಯಗಳಾ |ಓವಿ ಗೈವುತ ದೇವ ದೇವ ಹಯ ಮೊಗ ಗುರುಗೋವಿಂದ ವಿಠಲಂಗಿತ್ತು ತಾವಕನ ಸಲಹುವುದು 3
--------------
ಗುರುಗೋವಿಂದವಿಠಲರು
ಸಾರಿ ಭಜಿಸಿರೋ ವಾದಿ ರಾಜ ಗುರುಗಳಾಘೋರ ಸಂಕಟದಿಂದಾ ಪಾರು ಮಾಳ್ಪರಾ ಪಭುಜಗುಣಸ್ಥರಾ ಅಜನ ಪದಕೆ ಅರ್ಹರಾಸುಜನವಂದ್ಯರಾ ವಾಜಿವದನ ದಾಸರಾ 1ವಕ್ರತರ್ಕದಾ ವಾದಿ ಸೊಕ್ಕು ಮುರಿದರಾಯುಕ್ತಮಲ್ಲಿಕಾ ರಚಿಸಿ ಮುಕ್ತಿ ತೋರ್ಪರಾ 2ಕುದುರೆ ಮೋರೆಯಾ ದೇವ ಮುದದಿ ಮೆಲುವನುಕಡಲೆ ಹೂರಣಾ ನೀವು ಕೊಡಲು ಅನುದಿನಾ3ಭೂತರಾಜನು ಸೋತ ದಾಸನಾದನುಅತಿ ಮಹತ್ವದಾ ಸೇವೆ ಸತತ ಮಾಳ್ವನು 4ಭಕ್ತಿುಂದಲಿ ಇವರ ಸ್ತುತಿಯ ಮಾಡಲುಭೂಪತಿ'ಠ್ಠಲಾ ಒಲಿದು ವರವಾ ಕೊಡುವನು 5'ಜುೀಂದ್ರರು
--------------
ಭೂಪತಿ ವಿಠಲರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಸಿಂಧುಶಯನನೆ ಸರ್ವಬಂಧುಬಳಗ ನೀನೆ ತಂದೆ ನೀ ಬಿಟ್ಟರೆ ಬಂಧುಗಳ್ಯಾರಿಲ್ಲ ಪ ಒಂದು ವೃಕ್ಷದಿ ಬಂದು ಪಕ್ಷಿಗ ಳ್ವøಂದ ಗೂಡಗಲ್ಹೋಗುವಂದದಿ ಒಂದಕೊಂದು ಸಂಬಂಧವಿಲ್ಲದ ಬಂಧುವೆಂಬುವರೆಲ್ಲ ಪುಸಿಯು ಅ.ಪ ಕೊಳದಿ ಮಕರಿಗೆ ಸಿಲ್ಕಿ ಬಳಲುತಿರುವ ಕÀರಿಯ ಬಲವಾಗುಳಿಸಿದರಾರು ಬಳಗ ಹಿಂಡುಗಳಿರ್ದು ನಳಿನಲೋಚನ ನೀನೆ ಗತಿಯೆನೆ ಒಲದು ಆ ಕ್ಷಣ ಕರಿಯನುಳುಹಿದಿ ತಿಳಿದು ಭಜಿಸುವ ದಾಸಜನಕತಿ ಸುಲಭನೆಲೊ ನೀ ಜಲಜನಾಭ 1 ಕುರುಪತಿಸಭೆಯೊಳು ಇರುತಿರೈವರು ಪರಿ ದುರುಳ ಕೊಳ್ಳುತಲಿರೆ ನೆರೆದ ಪತಿಗಳು ಸುಮ್ಮನಿರುತಿರೆ ಹರಿಯೆ ಗತಿಯೆಂದು ತರುಣಿ ಮೊರೆಯಿಡೆ ಮಾನವ ಕಾಯ್ದಿ ಚರಣಭಕ್ತರ ನಿರುತರಸುರಧೇನು 2 ದೃಢದಿ ಶ್ರೀಹರಿಯೆಂದು ನುಡಿಯುವ ಬಾಲಗೆ ಹಿರಣ್ಯ ಕಡುವೈರಿಯಾಗಿ ಗಡನೆ ತೋರ್ಹರಿ ಮೂಢ ಎಲ್ಲೆನೆ ಒಡನೆ ಕಂಬದಿ ಮೂಡಿ ದುರುಳನ ಒಡಲ ಬಗಿದು ಪಿಡಿದು ಭಕ್ತನ ಬಿಡದೆ ಸಲಹಿದಿ ಕಡುದಯಾನಿಧೆ 3 ಇಳೆಪತಿ ಪಿತನಿದಿರೊಳ್ ಮಲತಾಯಿಕೃತಿಯಿಂದ ಬಲುನೊಂದು ಧ್ರುವರಾಜ ಕಳವಳಗೊಂಡು ಜಲಜನಾಭನ ಮೊರೆಯನಿಟ್ಟು ಚಲಿಸದೆ ಮನಮುಟ್ಟಿ ತಪಿಸಲು ಒಲಿದು ಧ್ರುವಪದವಿತ್ತಿ ಭಕ್ತರ ಕಲ್ಪಿತವನೀವ ಕಲ್ಪತರು ನೀನು 4 ಪ್ರಾಣೇಶ ಶ್ರೀರಾಮ ಧ್ಯಾನಿಪರಿಗೆ ಸತ್ಯ ನಾನಾದೈವದ ಬಲವು ನೀನೆಯಾಗಿರುವಿ ಕಾನನದಿ ಕಲ್ಲನ್ನು ತುಳಿದು ದಾನ ಕೊಟ್ಟೆಯ ಜೀವ ಸುದತಿಗೆ ಜ್ಞಾನವಿಲ್ಲದಧಮ ಎನಗೇನು ಶಕ್ಯ ನಿನ್ನ ಮಹಿಮೆ ಪೊಗಳಲು 5
--------------
ರಾಮದಾಸರು
ಸಿರಿಜಾನಕೀಪತಿ ವಿಠಲ ನೀನಿವನ ಕಾಯೋಗರುಡ ಶೇಷಾದಿ ಮನೋ ಮಾನಿ ಪ್ರೇರಕನೆ ಹರಿಯೇ ಪ ಮಂದ ಜನರುದ್ಧಾರಿ | ತಂದೆ ಮುದ್ದು ಮೋಹನ್ನನಂದನರ ದ್ವಾರದಿಂ | ಪೊಂದಿ ಅಂಕಿತವಾ |ಅಂದ ಸತ್ಸಾಧನವ | ಮುಂದುವರಿಪಲಿಕಾಂಕ್ಷೆಯಿಂದ ಸತ್ಕಾರ್ಯ ಪ್ರತಿ | ಬಂಧ ಪರಿಹರಿಸೋ 1 ಪಾದ | ವನಜ ಆಶ್ರಿತಗೇ 2 ಭಾವಜಾರಿಯ ಮಿತ್ರ | ಭಾವುಕರ ಪರಿಪಾಲಗೋವಿದಾಂ ಪತಿಯೆ ಗುರು | ಗೋವಿಂದ ವಿಠಲಾ |ಪಾವಮಾನಿಯ ಪ್ರೀಯ | ನೀವೊಲಿದು ಭಕ್ತನ್ನತೀವರುದ್ಧರಿಸೆಂದು | ದೇವ ಭಿನ್ನವಿಪೇ3
--------------
ಗುರುಗೋವಿಂದವಿಠಲರು