ಒಟ್ಟು 925 ಕಡೆಗಳಲ್ಲಿ , 101 ದಾಸರು , 776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ನಿನಗೆ ಮನವೆ ವ್ಯಥೆಯು ಎಷ್ಟು ಲೋಕನಾಯಕ ಶ್ರೀಲೋಲ ಲಕ್ಷ್ಮಯ್ಯಾ ರಮಣ ಶ್ರೀಕಪರೇಯಾ ನಿನ್ನನ್ನೇ ಸ್ಮರಿಸುವುದು ಬಿಟ್ಟೂ ಪ ಹಲವು ಹಂಬಲಿಸಿದರೇನು ಫಲಾ ವ್ಯರ್ಥಾ ಬಳಲುವದೊಂದೇ ಅಲ್ಲದೆ ಬಾಧೆಯಿಂದಾ ಅಜ ಬ್ರಹ್ಮಾಂಬರದ ವರ-----ಆರಾರಿಗ್ವಶನಲ್ಲಾ ನಳಿನಾನಾಭನಾ ದಿವ್ಯನಾಮಾ ಭಜನೆಯ ತೊರೆದು 1 ಹರಿಶ್ಚಂದ್ರಾ ನಳರಾಜಾ-------ದಶರಥ ಮೊದಲು ಪುರಾಕೃತ ಕರ್ಮಾದಿ ಭಂಗಾ ಬಡಲಿಲ್ಲೇನೋ ಅರಿತೂನೀ ಹೃದಯಾದಿ ಅನ್ಯಚಿಂತನೆ ಹಿಡಿದು ಪರಮಾತ್ಮ ಪರಬ್ರಹ್ಮನ ಪಾದಧ್ಯಾನವೇ ಬಿಟ್ಟು 2 ಧರೆಯೊಳಾಧಿಕನಾದ ಧೋರಿ 'ಹೊನ್ನವಿಠಲನ’ ಚರಣವೇ ಗತಿಯೆಂದು ಚಿತ್ತಾದಲೆ ಸ್ಥಿರವಾಗಿ ಪೂಜಿಸಿ ಸೇವೆಯನೆ ಮಾಡಿ ಪರಮಹರುಷದಿಂದ ಪಡೆಯಾದೆ ಹರಿಕರುಣಾ 3
--------------
ಹೆನ್ನೆರಂಗದಾಸರು
ಯಾಕೆ ಮೈ ಮರೆತಿದ್ದೆ ಹೇಳೋ ಎಲೆ ಮರುಳೆ ಜೋಕÉ ತೀರೀತು ನಿನ್ನ ಬಾಳು ಪ ನಿಟ್ಟೆಲುಗಳಿಂದ ಕೈ ಕಾಲ್ಗಳೆಂಬುವನು ಮಾಡಿ ಚಿಟ್ಟೆಲುಗಳನು ಸಂದಕೂಡಿ ಪಟ್ಟಿನಲ್ಲಿ ತನುಪುರವ ಕಟ್ಟಿದರು ನರದಿಂದ ಪಟ್ಟಣವ ನಿರ್ಮಿತವ ಮಾಡಿ ಅಷ್ಟಪುರ ಕಲ್ಲಲ್ಲಿ ನವಕವಾಟವ ರಚಿಸಿ ದುಷ್ಟದುರ್ಜನರೆಲ್ಲ ಕೂಡಿ ಕಟ್ಟಿದರು ಜೀವನಿಗೆ ಇವರ ಕೂಡಾಡಿ 1 ರಕ್ತಮಾಂಸವು ಚರ್ಮಪೂಡಿ ಮತ್ತೆ ಮಲ ಮೂತ್ರ ಕ್ರಿಮಿ ಕೀಟ ರುಜೆಬಾಧೆಯಲಿ ವಿಸ್ತರದಲಿದಕೆÉ ನಲಿದಾಡಿ ವ್ಯರ್ಥದಲಿ ದಿನವ ನೀಗಾಡಿ ಅಸ್ಥಿರದ ದೇಹವನು ನಚ್ಚಿಭವ ಶರಧಿಯೊಳು ಕುಸ್ತರಿಸಿ ಬಿದ್ದು ಈಜಾಡಿ 2 ಹೊಲಸು ಹೆಬ್ಬಡಿಕೆ ನಾರುವನರಕ ಕೀವು ಕ್ರಿಮಿ ಯಲು ನರಂಗಳು ಮಜ್ಜೆ ಮಾಂಸ ಕೊಳಕು ನಾರುವ ಹಡಿಕೆಗೆಳಸುತಿಹ ನಾಯಂತೆ ಬಲಿದಿಹುದು ನಿನ್ನ ಮೇಲಂಶ ಬಳಲಿ ಬಸವಳಿದೆಲೋನ ಪುಂಸ ಕೊಳೆಯ ಮೇಧ್ಯದ ಪುಂಜ ತನುವಿದನು ನೆರೆನಂಬಿ ಫಲವಿಲ್ಲ ಹರಿಯಧ್ಯಾನಿಸೋ ಪರಮಹಂಸ 3 ಸತಿ ಹೊಂದುವರು ನಿನ್ನ ಕಣ್ಣಾರೆ ಕೇಳ್ವೆ ಕಿವಿಯಿಂದ ಗುರಿಯಾಗಿ ಇಂದಿರೇಶನ ಪೂಜಿಸಲು ನಾಕೈಯಾರೆ4 ಇದರೊಳಗೆ ಬಾಲ್ಯಕೆನೊರ್ಯ ಯೌವ್ವನವೆಂಬ ಉದಯಾಸ್ತಮಾನ ಪರಿಯಂತರವು ಸುದತಿ ಸುತರಲಿ ಮೋಹವಿರಿಸಿ ದಣಿಯದಿರು ಮನವ ನೆರೆನಿಲಿಸಿ ಲಕ್ಷ್ಮೀರಮಣನನು ಹೃದಯದೊಳುಸ್ಮರಿಸಿ 5
--------------
ಕವಿ ಪರಮದೇವದಾಸರು
ಯಾತಕಯ್ಯ ತೀರ್ಥಕ್ಷೇತ್ರಗಳುಶ್ರೀ ತುಲಸಿಯ ಸೇವಿಪ ಸುಜನರಿಗೆ ಪ. ಅಮೃತವ ಕೊಡುವ ಹರುಷದೊಳಿರ್ದಕಮಲೆಯರಸನಕ್ಷಿಗಳಿಂದಪ್ರಮೋದಾಶ್ರು ಸುರಿಯೆ ಕ್ಷೀರಾಬ್ಧ್ದಿಯೊಳುಆ ಮಹಾತುಲಸಿ ಅಂದುದಿಸಿದಳು 1 ಪರಿಮಳಿಸುವ ಮಾಲೆಯ ನೆವದಿ ಹರಿಯುದರದಲ್ಲಿಸಿರಿಯೊಲಿಹಳುತÀರುಣಿ ತುಲಸಿ ತಪ್ಪದೆಯವನಚರಣವ ರಮೆ ಭಜಿಸೆ ಭಜಿಪಳು2 ಪೂಜಿಸುವರ ಶಿರದಿ ನಿರ್ಮಾಲ್ಯಗಳವ್ಯಾಜದಿಂದ ಲಕ್ಷ್ಮಿಯ ಕೂಡೆ ಬಹಳುಈ ಜಗದೊಳು ತಾವಿಬ್ಬರಿದ್ದಲ್ಲಿಆ ಜನಾರ್ದನನಾಕ್ಷಣ ತಹಳು 3 ಒಂದು ಪ್ರದಕ್ಷಿಣವನು ಮಾಡಿದವರಹೊಂದಿಪ್ಪುದು ಭೂಪ್ರದಕ್ಷಿಣ ಪುಣ್ಯಎಂದೆಂದಿವಳ ಸೇವಿಸುವ ನರರಿಗೆಇಂದಿರೆಯರಸ ಕೈವಲ್ಯವೀವ 4 ತುಲಸಿಯ ನೆಟ್ಟವನು ಮತ್ತೆ ತನಗೆ ಇಳೆಯೊಳು ಪುಟ್ಟುವ ವಾರ್ತೆಯ ಕಳೆವಜಲವೆÀರೆದು ಬೆಳೆಸಿದ ಮನುಜರಕುಲದವರ ಬೆಳೆಸು ವೈಕುಂಠದಲ್ಲಿ 5 ತುಲಸಿಯೆ ನಿನ್ನ ಪೋಲುವರಾರುಮೂಲದಲ್ಲಿ ಸರ್ವತೀರ್ಥಂಗಳಿಹವುದಳದಲ್ಲಿ ದೇವರ್ಕಳ ಸನ್ನಿಧಾನಚೆಲುವಾಗ್ರದಿ ಸಕಲ ವೇದಗಳು 6 ತುಲಸಿ ಮಂಜರಿಯೆ ಬೇಕಚ್ಚುತಂಗೆದಳಮಾತ್ರ ದೊರಕಲು ಸಾಕವಗೆಸಲುವುದು ಕಾಷ್ಠಮೂಲ ಮೃತ್ತಿಕೆಯುಫಲವೀವನಿವಳ ಪೆಸರ್ಗೊಳಲು 7 ಕೊರಳಲ್ಲಿ ಸರ ಜಪಸರಗಳನ್ನುವರ ತುಲಸಿಯ ಮಣಿಯಿಂದ ಮಾಡಿಗುರುಮಂತ್ರವ ಜಪಿಸುವ ನರರುಹರಿಶರಣರ ನೆಲೆಗೆ ಸಾರುವರು8 ಎಲ್ಲಿ ತುಲಸಿಯ ಬನದಲ್ಲಿ ಲಕ್ಷುಮೀ-ವಲ್ಲಭನು ಸರ್ವಸನ್ನಿಹಿತನಾಗಿನೆಲಸಿಹನಿವಳೆಸಳೊಂದಿಲ್ಲದಿರೆಸಲ್ಲದವಂಗನ್ಯಕುಸುಮದ ಪೂಜೆ 9 ಎಲ್ಲ ಪಾಪಂಗಳೊಮ್ಮೊಮ್ಮೆ ಕೈಮುಗಿಯೆಎಲ್ಲಿ ಪೋಪುದು ದೇಶದೇಶಂಗಳಿಗೆನೆಲ್ಲಿ ಮಲ್ಲಿಗೆ ಮೊದಲಾದ ಸೈನ್ಯಅಲ್ಲೀಗಲು ನಮ್ಮ ಬನದಲೊಪ್ಪಿಹಳು 10 ಹರಿಪಾದಕೆ ಶ್ರೀತುಲಸಿಯೇರಿಸಿದನರರನು ಪರಮ ಪದಕೇರಿಸುವುದುನಿರುತದಿ ತುಲಸಿಯ ಕಂಡರವಗೆನರಕಗಳ ದರುಶನ ಮತ್ತಿಲ್ಲ 11 ಪಡಿ ಆಯಿತು ಗಡನ್ನಿವಳ ವೃಂದಾವನದಲ್ಲಿ ನೆಟ್ಟುಮನೆಮನೆ ಮನ್ನಿಸದವನ್ಯಾವ12 ಕನಸಿನಲಿ ಕಂಡಂತೆ ಇನ್ನೊಂದುಕೊನೆವೆರಸಿದ ಪುಷ್ಪದಿ ಜಪಿಸಿಅನುದಿನ ಹಯವದನನ್ನ ತೀರ್ಥವನು ಕೊಂಡು ನಾ ಧನ್ಯನಾದೆನು 13
--------------
ವಾದಿರಾಜ
ಯೋಗಿ ವರ್ಯಾ ಪ ಯೋಗಿ ದಶಮತಿ ಬ್ರಾತೃ | ವಂಶ ಸಂಭೂತಾ ಅ.ಪ. ಭಾವಿ ವಾಯ್ದೆನಿಸಿದ್ದು | ಆವಿಪರು ಶೇಷಾದಿದೇವ ಸದ್ವಂದ್ಯರೆನೆ | ಶ್ರೀ ವಾದಿರಾಜಾ |ಆವ ವಂಶಾಬ್ದಿಯಲಿ | ದಿವ್ಯ ಸೋಮನು ಎನಿಸಿ |ದೈವ ವಿಭವದಿ ಮೆರೆವ | ವಿಶ್ವೋತ್ತಮಾಖ್ಯಾ 1 ವಿಭವ ನಾನೋಡ್ದೆ 2 ಸುಜನ | ವೃಂದದಲಿ ಭೋಧಿಸುತಇಂದಿಲ್ಲಿ ಸಿದ್ದಾರ್ಥಿ | ಸಂದ ಅಯ ನವಮೀ |ಮಂದಿರಕೆ ಬಂದುತವ | ನಂದ ಪದ ಪೂಜಿಸುವಸಂದು ಇತ್ತಿಹ ಗುರೂ | ಗೋವಿಂದ ಭಜಕಾ 3
--------------
ಗುರುಗೋವಿಂದವಿಠಲರು
ರಂಗ ಬಾರೈಯ್ಯ ದೇವೋತ್ತುಂಗ ದಯಾಂತರಂಗ | ಅಂಗಜನಯ್ಯ ನರಶಿಂಗಾ ಸಾರಸಾಪಾಂಗ || ಮಂಗಳ ಮಹಿಮಾ ವಿಹಂಗ ಘೋರ ಭವಭಂಗರಹಿತ ರಣರಂಗ ವಿಜಯ || ಸನ್ನುತ ಶೃಂಗಾರಾಂಗ ರಮಾಂಗನಾಸಂಗ ಪ ಶತಕೋಟಿ ಭಾಸ್ಕರ ಯುತತೇಜ ಮರುತಾಂತರ್ಗತ | ಹರಿಮೃದು ಭಾಷಣ | ಕೌಸ್ತು ಭಾಭರಣ | ಜಿತದಿತಿಸುತಬಾಲ | ಶ್ರಿತಭಕ್ತ ಮಂದಾರ | ಪತಿತ ಪಾವನ ಶ್ರೀರಾಮ ಪಟ್ಟಾಭಿರಾಮ | ಅತುಲಿತ ಚರಿತ ಕಾಮಿತ ಫಲದಾಯಕ | ಶತ ಧೃತಿ ಜನಕಾಚ್ಯುತ ಸರ್ವೋತ್ತಮ | ಸತತವು ನೀನೇ ಗತಿಯೆಂದೆನುತಲಿ | ಹಿತದಿ ನಾನು ನಿಮ್ಮ ಸ್ತುತಿಸುತಲಿರುವೆನು 1 ನಂದನಂದನ ವೇಣುನಾದ ವಿನೋದ ಜಗದ್ವಂದ್ಯ ಶ್ರೀವತ್ಸಲಾಂಛನ ವಾಸುಕಿಶಯನ | ಮಂದಹಾಸ ಮುಚುಕುಂದವರದ ರಾಕೇಂದುವದನ | ಗೋವಿಂದ ಇಂದಿರಾನಂದ ಸಿಂಧು ಗಂಭೀರಾ | ಮುಕುಂದ ಧರಣೀಧರ ಕುಂದರದನ ಕಾಳಿಂದಿರಮಣ ಗಜೇಂದ್ರನ ಸಲಹಿದ ಛೆಂದದೆನ್ನ ಮೊರೆಯಿಂದಿಗೆ ಲಾಲಿಸೊ ಪರಮಾತ್ಮ ಸರಸಿಚೋದರ ಸಕಲಾಣುರೇಣು ಪರಿಪೂರ್ಣ 2 ನಿರುಪಮಧೀರ ಶರಣಾಗತ ರಕ್ಷಣ ಮಧುಸೂದನ ಸುರವರ ಪೂಜಿತ ಚರಣಾಂಭೋರುಹ ಕೃಪಾಕಾರ ಹರುಷದಲಿ 3
--------------
ಹೆನ್ನೆರಂಗದಾಸರು
ರಚಿತವಾದ ಕೀರ್ತನೆಗಳು ಕರುಣದಿ ಪಾಲಿಸೆನ್ನನು | ಶ್ರೀಕಾಂತಾ ಪ ನಂದಸನಕ ಪಾಲಕ | ನೀಲಾಳಕಾ | ನಂದಗೋಪನ ಬಾಲಕಾ | ಸಿಂಧುರ ಮುಖವರ ಸಿಂಧುರ ನತಪದ | ಭವ ಸಿಂಧು ತರಿಸುತಾ 1 ರಾಜಶೇಖರ ಪೂಜಿತಾ | ವಿರಾಜಿತಾ | ರಾಜೀವ ಪದರೀಜಿತಾ | ರಜ ರಾಜ ದ್ವಿಜ ರಾಜಗಮನ ಹರಿ | ರಾಜತಲ್ಪ ಉಡುರಾಜ ಕುಲಮಣಿ 2 ಗಿರಿಧರ ಸುತ ರಕ್ಷಣ | ಕರುಣೀಕ್ಷಣಾ | ಗಿರಿಕರ ಸುವಿ ಚಕ್ಷಣಾ | ಗಿರಿಧರಜಾಪತಿ ಗಿರಿಸಮೃತತುರಗ | ಗಿರಿಮಂದಿರ ಕೃತ ಗಿರಿಪುಜಸಖಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ರಾಗಿ ಬೆಳೆಯುವಾ ನಿರ್ಮ¯ರಾಗಿ ಬೆಳೆಯುವಾ ಪ ಸೇವಕರಾಗಿ ಬೆಳೆಯುವಾ ಭಾವುಕರಾಗಿ ಬೆಳ ಗೂವರಾಗಿಯಾದ ಮೇಲೆ ರಂಗನಪಾದವ ಪೂಜಿಪರಾಗಿ ಅ.ಪ ಪರರ ಹಳಿಯದಿರುವರಾಗಿ ಪರರಸುಖಕೆ ನಲಿವರಾಗಿ ಪರರ ಸೇವೆಗೈವರಾಗಿ ಪರಮಶಾಂತರಾಗಿ ಹಿರಿಯರೆಡೆಯ ಕಿರಿಯರಾಗಿ ಕಿರಿಯರೆಡೆಯ ಗೆಳೆಯರಾಗಿ ಹರಿಯನೆನೆವ ಮಾನಸರಾಗಿ ಪರಮಭಕ್ತಿಯಿಂದ ಜಾನಿಪರಾಗಿ1 ವಿತ್ತದಾಸೆಯ ಹಳಿವರಾಗಿ ಚಿತ್ತಪಿತ್ತವ ತೊಡೆವರಾಗಿ ನಿತ್ಯ ತೃಪ್ತರಾಗಿ ಹೊತ್ತಿಗೊದಗಿ ಬರುವರಾಗಿ ಮತ್ತು ಭ್ರಮೆಗಳಿಲ್ಲದರಾಗಿ ಪಾದಯುಗಳಕೆರಗುವರಾಗಿ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಘವೇಂದ್ರ ಜಯತು ಗುರುವರಗೌತಮ ಗೋತ್ರಜ ಪ ರಾಗರಹಿತಾಂತರಂಗ ಭಕ್ತಾವಳಿ ಸಂಗ ಶೃಂಗ ಅ.ಪ ಅಂಬಾಸುತ ಪರಿಪೂಜಿತ ಪಾದವ ತೋರೈ ವಂದಿಪೆ 1 ನಿರುತನಿನ್ನ ಪಾದಪದ್ಮವ ನಮಿಸುವಂಥ ಮನವ ಕೊಡೈ ಪರಮವೈದಿಕನ ಅರಿಯುವ ಶಕ್ತಿಯ ನೀಡು ರಾಘವೇಂದ್ರ2 ತರಳ ಸರಳ ಮೃದುವಚನಪೂರಣ ಸಾಧು ಪೂರ್ಣಸದನ ಶರಣಸುಜನ ವಾಂಚಿತಾರ್ಥದಾತ ಮಾಂಗಿರೀಶ ಪ್ರೀತ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಾಘವೇಂದ್ರ ರಾಯರಡಿಗೆ ಬಾಗಿ ನಮಿಸಿರೊ ನೀಗಿ ಭವದ ಬಂಧದಿಂದ ಮುಕ್ತರಾಗಿರೊ ಪ ಶಂಕೆಯಿಲ್ಲದೆ ವರಗಳ ಕೊಟ್ಟು ಚಿಂತೆ ಹರಿಸುವರ ಕಂತುಪಿತನ ಭಕ್ತರಿಗೆ ನಿರಂತರ ಸಂತಸ ನೀಡುವರ ಪಂಕಜನಾಭನ ಕಿಂಕರರ ಭಯ ಚಿಂತೆಯ ನೀಗುವರ ಶಂಖು ಕರ್ನರಿವರೆನ್ನುತ ಅಭಯದ ಕಂಕಣ ಕಟ್ಟಿಹರ 1 ಹಾಟಕಶ್ಯಪುತ್ರನು ವಿನಯದಿ ಪ್ರಾರ್ಥಿಸಿ ಪೂಜಿಸಿದ ಮಾಟಮುಖದ ದೇವನ ಪಾದಾಂಬುಜ ಧ್ಯಾನಿಸಿ ಸೇವಿಸಿದ ಕೋಟಲೆ ಭವದೊಳು ತಾಪವ ಪಡುವರ ಆಪದ ಪರಿಹರಿಸಿ ಭ- ವಾಟವಿದಾಟಿಸಿ ಪೊರೆದ ಪ್ರಹ್ಲಾದರ ಉಲ್ಲಾಸದಿ ಭಜಿಸಿರಿ2 ವ್ಯಾಸರಾಯರೆಂದು ಜಗದಿ ಪ್ರಖ್ಯಾತಿ ಪಡೆದವರ ದೇಶ ದೇಶದ ಭಕುತರ ಉಲ್ಲಾಸ ಕೊಡುವರ ಶ್ರೀ ಸುಧೀಂದ್ರಾರ್ಯರ ಪುತ್ರರೆನಿಸಿಕೊಂಬರ ಕ್ಲೇಶಗಳನೆ ಕಳೆವರೆಂಬ ಕೀರ್ತಿಪಡೆದರ3 ಕಂಗೊಳಿಪ ಕೋರೆಯಿಂದ ಬಂದ ಭದ್ರೆಯ ತೀರದಿ ಚಂದದಿಂದ ಮೆರೆವ ರಾಘ- ವೇಂದ್ರ ರಾಯರ ಕೊಂಡಾಡಿ ಪಾಡಿರೊ ಮನಕೆ ಸಂಭ್ರಮ ನೀಡುವರು ಪೊಂದಿದ ಪಾಪಗಳೆಲ್ಲವ ನೀಗಿಸಿ ಚಂದದಿ ಸಲಹುವರು 4 ಕರುಣದಿಂದ ಭಕ್ತರನೆಲ್ಲ ಸಲಹುತಿರ್ಪರ ಕಮಲನಾಭ ವಿಠ್ಠಲನಂಘ್ರಿ ಭಜನೆ ಮಾಳ್ಪರ ಕನಕಮಯದ ಮಂಟಪದಲಿ ಮರೆಯುತಿರ್ಪರ ಕರೆದು ಪ್ರಾರ್ಥಿಸುವವರ ಮನಕೆಹರುಷ ತೋರ್ಪರ 5
--------------
ನಿಡಗುರುಕಿ ಜೀವೂಬಾಯಿ
ರಾಜವದನೆ ನೀ ಗುರು- ರಾಜರಿರುವ ಸಂಭ್ರಮ ನೋಡೆ ಪ ರಾಜಿಸುವ ಮುಖನ ಪೂಜಿಸುವ ಯತಿವರನೆ ಅ.ಪ ದೂಷಿತ ದುರ್ಜನರ ತಾಸು ಬಾಳದಂತೆ ವಿ- ಶೇಷದಿಂದ ಭಜಿಸುವರ ಪೋಷಿಸುವ ಯತಿವರನೆ 1 ಪಾದ ನಂಬಿದವರಿಗೆ ಮೋದವೀವ ದೇವನೆ ಬೀದಿಬಿಡುವ ನಂಬಿದವರ ವಾದಿರಾಜ ದೊರೆವರನೆ 2 ಅಜಪದಕೆ ಅರ್ಹನೆಂದು ಗಜವರದನ ದಾಸನೆಂದು ಭಜನೆ ಮಾಡುವ ನಿಜವ ಪೇಳುವ ವಿಜಯವಿಠಲನ ಸೇವಕರಿವರೇ 3
--------------
ವಿಜಯದಾಸ
ರಾಮ ನಿನ್ನ ಭಜನೆಗೈಯುವೆ ಕಾಮಾರಿಮಿತ್ರ ರಾಮ ನಿನ್ನ ಭಜನೆಗೈಯುವೆ ಪ ರಾಮ ನಿನ್ನ ಭಜನೆಯನ್ನು ಪ್ರೇಮದಿಂದ ಮಾಳ್ಪ ಜನಕೆ ಕಾಮಿತಾರ್ಥವಿತ್ತು ಸುಖವ ಪ್ರೇಮದಿಂದಕರುಣಿಸುವವನೆ 1 ಜಾನಕಿಯರಮಣ ನಿನ್ನ ಧ್ಯಾನಮಾಳ್ಪೆನಯ್ಯ ಸತತ ಸಾನುರಾಗದಿಂದ ಸಲಹು ಭಾನುವಂಶ ಜಲಧಿಚಂದ್ರ 2 ಇಂದಿರೇಶ ನಿನ್ನ ಪಾದವಿಂದು ಪೂಜೆಗೈವೆ ನಾನು ತಂದೆ ಸಲಹೊ ರಾಗದಿಂದ ಸುಂದರಾಂಗ ಸುಪ್ರಸನ್ನ 3 ಹಾರ ಕುಂಡಲಾದಿಭೂಷ ಚಾರುಮಕುಟಧರಸುಶೋಭ ಸಾರಸಾಕ್ಷ ರವಿಜವರದ ತೋರೋ ಮುಖವ ರಾಘವೇಂದ್ರ 4 ರಾವಣಾದಿ ಸಕಲದನುಜ ಜೀವಹರಣ ರಘುಕುಲೇಶ ಪಾವಮಾನಿ ಪೂಜಿತಾಂಘ್ರಿ ಧೇನುಪುರನಿವಾಸ ದೇವ 5
--------------
ಬೇಟೆರಾಯ ದೀಕ್ಷಿತರು
ರಾಮ ರಕ್ಷಮಾಂ ರಾಮ ರಕ್ಷಮಾಂ ರಾಮ ರಕ್ಷಮಾಂ ರಾಮ ರಕ್ಷಾಮಾಂರಾಮ ರಕ್ಷಮಾಂ ಕಾಮಿತಾರ್ಥದ ಪ್ರೇಮಸಾಗರ ಶ್ರೀ ಮನೋಹರ ಪದಶರಥಾತ್ಮಜ ದಾನವಾಂತಕ ಶಶಿನಿಭಾನನ ಶತಮಖಾರ್ಚಿತಕುಶಿಕನಂದನ ವಶಮಖಾವನ ಶಶಿಮುಖೀತನೋಃ ಶಮಲವಾರಣ 1ಹರ ಶರಾಸನ ಹರ ಧರಾಸುತಾ ಕರ ಪರಿಗ್ರಹಾರಾಮ ನಿಗ್ರಹಗುರು ನಿಯೋಜಿತ ಗುಹ ಸುಪೂಜಿತ ವರ ವನಾಶ್ರಿತ ಭರತ ಪ್ರಾರ್ಥಿತ 2ಮೃಗ ನಿಷೂದನ ಖಗಪ ಪಾಲನ ಭಂಜನ ಶಬರಿ ಪಾವನಸುಗತಿ ದಾಯಕ ವಾಲಿಶಿಕ್ಷಕ ಮೃಗಪರಕ್ಷಕ ರಾಜ್ಯದಾಯಕ 3ಶರಧಿಬಂಧನ ಪುರ ವಿಮರ್ದನ ವರವಿಭೀಷಣ ಭಯನಿವಾರಣಧುರ ಧುರಂಧರ ದುಷ್ಟ ಖಳಸಹೋ ದರ ಶಿರೋಹರ ದೈತ್ಯಸಂಹರ 4ಧರಣಿಜಾನ್ವಿತ ದುರಿತ ವಾರಕ ಭರತವಂದಿತ ಪುರವರಸ್ಥಿತವರ ಮುನಿಸ್ತುತ ಸುರಸಮಾಶ್ರಿತ ತಿರುಪತೀಶ್ವರ ವೆಂಕಟೇಶ್ವರ 5ಓಂ ಕುಬ್ಜಾ ಕೃಷ್ಟಾಂಬರಧರಾಯ ನಮಃ
--------------
ತಿಮ್ಮಪ್ಪದಾಸರು
ರಾಮತಾರಕ ಮಂತ್ರ ಜಪಿಸಿ | ಸರ್ವಕಾಮಗಳ ಪಡೆದವನೆ ನಮಿಸಿ | ಬೇಡ್ವೆಕಾಮದುಷ್ಟಗಳ ಪರಿಹರಿಸಿ | ಹೃದ್‍ಧಾಮೆ ಹರಿ ತೋರೊ ಕರುಣಿಸೀ ಪ ಗಜ ಅಜಿನ ಧರಿಸಿ | ಮತ್ತೆಕರ್ಪರವ ಕೈಯಲ್ಲಿ ಇರಿಸಿ | ನೀನುಅಪವಿತ್ರ ಅಶಿವ ನೆಂದೆನಿಸೀ | ವರಮಸಫಲ ಶಿವ ಅಮಂಗಳವ ಹರಿಸೀ 1 ಪರಮ ಸದ್ಭಾಗವತ ಮೂರ್ತೇ | ಲಕ್ಷ್ಮೀನರಹರಿಯ ಆಣತಿಯ ಪೊತ್ತೇ | ವಿಷಯನಿರತರನು ಹರಿವಿಮುಖ ಶಕ್ತೆ | ಕಾಯೊಹರ ಸದಾಶಿವ ಭಾವ ಮೂರ್ತೇ 2 ತಪದಿಂದ ಹರಿಯೊಲಿಸೆ ನೀನು | ಹತ್ತುಕಲ್ಪ ಲವಣಾಂಭುದಿಯಲಿನ್ನು | ಗೈದೆತಪ ಉಗ್ರದಲಿ ಪೇಳ್ವುದೇನು | ನೀನು`ತಪ` ನೆಂದು ಕರೆಸಿದೆಯೊ ಇನ್ನು 3 ಶುಕಿಯಾಗಿ ಬಂದ ಅಪ್ಸರೆಯ | ಕೂಡ್ಡಅಕಳಂಕ ವ್ಯಾಸಾತ್ಮ ಧೊರೆಯ | ಮಗನುಶುಕನಾದೆ ಶಿವನೆ ಇದು ಖರೆಯ | ನುತಿಪೆಪ್ರಕಟ ಭಾಗವತಕ್ಕೆ ಧೊರೆಯ 4 ಮಾರುತನು ನಿನ್ನೊಳಗೆ ನೆಲಿಸಿ | ಗೋಪ್ಯದೂರೆಂಬ ನಾಮವನೆ ಧರಿಸಿ | ಇರಲುದೂರ್ವಾಸನೆಂಬ ಕರೆಸಿ | ಮೆರೆವಭೂ ಭೃತರ ಮಾನವನೆ ಕೆಡಿಸಿ 5 ಪತಿ ಸಂಗ ರಹಿತೆ | ಎನಿಸೆಭಾರತಿಯ ದೇಹದಲಿ ಜಾತೆ | ಇರಲುಪ್ರಾರಬ್ಧ ಭೋಗಿಸುವ ಮಾತೆ | ಎನಿಸಿವೀರ ಅಶ್ವತ್ಥಾಮ ಕೃಪೆ ಜಾತೆ 6 ಧಾಮ ಈಶಾನ್ಯದಲಿ ಇದ್ದು | ನಿನ್ನವಾಮದಲಿ ವಾಸುದೇವಿದ್ದು | ನೀನುವಾಮದೇವನ ಪೆಸರು ಪೊದ್ದು | ಧರಿಪೆಸ್ವಾಮಿ ಪೂಜಕನೆಂಬ ಮದ್ದು 7 ಕಾಲಾತ್ಮ ನಿನ್ನೊಳಗೆ ನೆಲಸಿ | ಪ್ರಳಯಕಾಲದಲಿ ಜಗವ ಸಂಹರಿಸಿ | ನಿನ್ನಕಾಲಾಖ್ಯ ನೆಂತೆಂದು ಕರೆಸಿ | ಮೆರೆವಲೀಲಾತ್ಮ ನರಹರಿಯು ಎನಿಸಿ 8 ಶಫರ ಹರಿದ್ವೇಷಿಗಳು ಎನಿಪ | ದೈತ್ಯತ್ರಿಪುರಸ್ಧರನು ಸಂಹರಿಪಾ | ಶಿವನೆವಪು ಧರಿಸಿ ಅಘೋರ ನೆನಿಪಾ | ಗೈದಅಪವರ್ಗದನ ಸೇ5ರೂಪ 9 ಹೃದ್ಯ ಹರಿಸೇವೆಂi5Àು ಗೈವಾ | ಮನದಿಬದ್ಧ ದ್ವೇಷಿಗಳೆಂದು ಕರೆವಾ | ದೈತ್ಯಕ್ರುದ್ಧರ ತಪಕೆ ಸದ್ಯ ವರವಾ | ಇತ್ತುಸಧ್ಯೋಜಾತನೆನಿಸಿ ಮೆರೆವ 10 ಹರಿಯಂಗ ಸೌಂದರ್ಯ ನೋಡಿ | ನೋಡಿಪರಮಾನಂದವನೆ ಗೂಡೀ | ಇಂಥಹರಿಪದ ದೊರಕೆ ಚಿಂತೆ ಗೂಡಿ | ಅತ್ತೆಹರುಷದಿ ಊರು ಸುತ ಪಾಡಿ 11 ಊರು ನಾಮಕ ರುದ್ರನಿಂದ | ಜಾತಕಾರಣ ಔರ್ವಭಿಧದಿಂದ | ಕರೆಸಿಉರ್ವರಿತ ರೋದನದಲಿಂದ | ಮೆರೆದೆಮಾರಾರಿ ಔರ್ವಭಿಧದಿಂದ 12 ವಿಷಯದಲಿ ಆಸಕ್ತರಾದ | ಮುಕ್ತಿವಿಷಯಕೆ ಬಹುಯೋಗ್ಯರಾದ | ಜನರವಿಷಯಾನುಕಂಪಿತನು ಆವ | ರುದ್ರಹಸನಾಗಿ ರೋದಿಸಿದಗಾಢ 13 ಕಮಲಾಕ್ಷಿ ದಕ್ಷಸುತೆ ತನ್ನ | ದೇಹವಿಮಲಯೋಗಾಗ್ನಿಯಲಿ ಭಗ್ನ | ಮಾಡಿಹಿಮದಾದ್ರಿ ಯೊಳಗೆ ಉತ್ಪನ್ನ | ವಾಗೆವಿಮಲ ಶಿವಗೊಂಡ ವ್ರತ ಕಠಿಣ 14 ಆದ್ಯಕಾಲದಲಿಂದ ಊಧ್ರ್ವ | ರೇತಬುದ್ಧಿಮಾಡುತ ತಪವು ಶುದ್ಧ | ಗೈದುಸಿದ್ಧನಾಗಿರುತಿರಲು ರುದ್ರ | ಕೇಳಿಊಧ್ರ್ವ ನೆಂಬಭಿಧಾನ ಪೊದ್ದ 15 ಕಾಮಹರ ತಪದಿಂದಲೆದ್ದು | ಬಹಳಪ್ರೇಮದಲಿ ಅದ್ರಿಸುತೆ ಮುದ್ದು | ಮಾಡಿಕಾಮಲಂಪಟನೆಂಬ ಸದ್ದು | ಗಳಿಸಿನಾಮ ಲಂಪಟ ನೆಂದು ಪೊದ್ದು 16 ಹರಪೊತ್ತ ಹನ್ನೆರಡು ನಾಮ | ದಿಂದಹರಿಮುಖ್ಯನಿಹನೆಂಬ ನೇಮ | ತಿಳಿದುಹರನ ಪೂಜಿಸೆ ಈವ ಕಾಮ | ನೆಂದುಗುರು ಗೋವಿಂದ ವಿಠ್ಠಲನ ನೇಮ17
--------------
ಗುರುಗೋವಿಂದವಿಠಲರು
ರಾಮನ ನೋಡಿರೈ ನಿಮ್ಮಯ ಕಾಮಿತ ಬೇಡಿರೈ ಪ ತಾಮರಸಸಖ ಸುವಾಂಶಾಬ್ಧಿಶರ ತ್ಸೋಮಾ ಕಮಲಧೀಮ ಅ.ಪ. ಅಜ ಜ್ಯೋತಿರ್ಮಯ ಜಾಬಾಲಿ ಮುನಿಯ ತಪವರಿದಾ ಕಾಮಿತ ನೆರೆದಾ ಭೂತಾಧಿಪನ ಭವನದೊಳರ್ಚನೆಗೊಂಡಾ ದೃತಕೋದಂಡಾ ಮಾತಂಗಾರಿ ವರೂಥಿಯ ಜನಕ ಮೇದಾಗಾರಕೆ ಪೋದಾ 1 ಸೌಭರಿ ಮುನಿಪಗೆ ಸೌಖ್ಯವ ಕರುಣಿಸಿ ಕೊಟ್ಟ ಜಗಕತಿಧಿಟ್ಟ ನಾಭಿಜನ್ಮನಿಹ ನಗವರ ಸ್ಥಾನಕೆ ಬಂದ ಶುಭಗುಣ ವೃಂದಾ ವೈಭವದಿಂದಲಯೋಧ್ಯಾ ನಗರದಿ ಮೆರೆದಾ ಕಾಮಿತವೆÀರೆದಾ ಸ್ವಾಭಿಮಾನದಲಿ ಸತಿಯಳಿಗಿತ್ತನು ವರವಾ ದೇವರ ದೇವಾ 2 ಜಾಂಬವಂತನಿಗೆ ಜಾನಕಿರಮಣನು ಇತ್ತ ತನ್ನಯಧ್ಯಾತ ಸಂಭ್ರಮದಲಿ ವೇದಗರ್ಭನೊಡನಾಡ್ದಾ ಮುಕ್ತಿಯ ನೀಡ್ದಾ ಕುಂಭೀಶ್ವರನ ಸುಕೋಶದಿ ಬಹುದಿನ ವಾಸ ವೆಸಗಿದನೀಶಾ ಒಲಿದಾ ಮೋದದಿ ನಲಿದ 3 ಅಲವಬೋಧಮುನಿ ಅತಿಮೋದದಲರ್ಚಿಸಿದ ಸಲೆ ಮೆಚ್ಚಿಸಿದ ಇಳೆಯೊಳು ಬಹು ಯತಿಕರ ಪೂಜಿತನಾದ ಲೀಲ ವಿನೊದಾ ಕಳೆದ ಮನದೊಳು ಪೊಳೆದ ಪ್ರೀಯ ಕವಿಜನಗೇಯ 4 ವಾರಿಧಿಬಂಧನ ವಾನರ ನಾಯಕರಾಳ ದೈತ್ಯರ ಸೀಳ್ದಾ ಪದಾಂಬುಜನೀತಾ ತ್ರಿಗುಣಾತೀತ ಆರಾಧಿಪರಿಗೆ ಅಖಿಳಾರ್ಥಗಳನು ಕೊಡುವಾ ದುರಿತವ ತಡೆವ ನೀರಜಾಕ್ಷ ಜಗನ್ನಾಥ ವಿಠ್ಠಲ ನಿಶ್ಚಿಂತಾ ಸೀತಾಕಾಂತ 5
--------------
ಜಗನ್ನಾಥದಾಸರು
ರಾಮನ ನೋಡಿರೈ ಮಂಗಳ ನಾಮನ ಪಾಡಿರೈ ಪ ಪೂಜಿತನ ಸೀತಾನ್ವಿತನ ಅ.ಪ ದಶರಥ ಗೃಹದಿ ಸುಜನರ ಸಲುಹಿ ಬೆಸಗೊಳಲಂದು ಸೀತಾವರನಾ 1 ಚಿಂತಿಸು ರಾಮನ ಶುಭಲಕ್ಷಣಗಳನೇಕ ಕರ್ಮವಿಪಾಕ ದೊಳಗೀ ವಿಷಯಾ- ಖರೆಯ ಯತಿಕುಲವರ್ಯ ಚರಣ ಸುಜನೋದ್ಧರಣ 2 ಕುಂದಣ ಮಣಿಮಯದ ಕಿರೀಟ ಯುಕ್ತಲಲಾಟ ಚಿನ್ಮಯಗಾತ್ರದಿ ಮಿನುಗುವ ರತ್ನಾಭರಣ ಜಿತರವಿ ಕಿರಣ ಹರಣ ಕರುಣಾಪೂರ್ಣ ರಿಪುಕುಲಮಥನಾ 3 ಶುಭಕಾಯಾಕವಿಜನಗೇಯಾ ಹೇಮ ಕೊಳುವ ಮನದೊಳು ಪೊಳೆವ ವೇದಾ ಮನಕತಿಮೋದಾ ಮುನಿ ಸಂಶೇವÀ್ಯ 4 ಶುಭಚರಿಯ ಬಹು ಆ ಮಂದಿರದಿ ಪಾರಾ- ಸುನಾದ ಕೇಳಲು ಮೋದ ಪೊಕ್ಕರು ಗೃಹದಿ 5 ಪೊಂದಿರೆ ಮುದವ ಪುಡಕಿದರಾಗೆ ಬಾಲವ ಹೀಗೆ ಕುಂಡಲಿಶಯನ ಶ್ರೀರಾಮನೆ ದರ್ಶನವಿತ್ತ ಲಕ್ಷ್ಮಣಸಹಿತ6 ಧರೆಯೊಳು ಬಹುಯತಿಕರ ಪೂಜಿತ ಪದಪದುಮಸ- ಧಾಮ ನಿರುತ ಶೇವಿಸುವ ಧರೆಸುರ ನಿಕರಕೆ ಕೊಡುವ ಬೇಡಿದ ವರವ ಶರಣು ಜನಕೆ ಸುರ ತರುವೆನಿಸಿದ ಸುರಪ್ರಿಯ ಕಾರ್ಪರನಿಲಯ ತರು ಪಿಪ್ಪಲಗತ ಶಿರಿನಾರಸಿಂಹನೆ ಈತ ಶ್ರೀರಘುನಾಥಾ7
--------------
ಕಾರ್ಪರ ನರಹರಿದಾಸರು