ಒಟ್ಟು 18608 ಕಡೆಗಳಲ್ಲಿ , 136 ದಾಸರು , 8432 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮ್ಮಾ ಬಾ ನಮ್ಮಮ್ಮನೆ ಅಮ್ಮೆ ನೀಡಮ್ಮನೆ ಬೊಮ್ಮನಾ ಪಡೆದ ಶ್ರೀ ಹರಿ ಪರಬ್ರಹ್ಮನೆ ಧ್ರುವ ಬೇಡುವೆ ನಿಮ್ಮನೆ ಕಾಡುವೆ ಸುಮ್ಮನೆ ಓಡ್ಯಾಡಿ ಬಂದು ಅಂಡಲಿವೆ ನಾ ತಮ್ಮನೆ 1 ಬಯಸಿ ಬಂದೊಡೆ ನಾ ಕಾಯಬೇಕೆನ್ನನಾ ತಾಯಿ ತಂದ್ಯೊಬ್ಬಳೆ ನೀನೆ ಸನಾತನಾ 2 ಉಣಿಸೆ ನಾಮಮೃತ ದಣಿಸೆ ಮನೋರಥಾ ದೀನಮಹಿಪತಿ ಜೀವ ಪ್ರಾಣಕ ಸನಾಥಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅಯ್ಯಾಜಗದಯ್ಯಾ ಪ ಅಯ್ಯಾ ಜಗದಯ್ಯಾ ಜೀಯಾನಂದ ನಿಮ್ಮ ಮಹಿಮೆಯ ಅಜ ಭವಾದಿಗಳಿಗೆ ತಾಯಿಯ ಮರೆವ ಶಿಶುವಿನ ಪರಿದಣಿದೆನಾ ಪ್ರೀಯದಲಿ ಸಲಹವು ಅವಗುಣ ನೋಡದೇ 1 ಧರೆಯೊಳಗ ಸಕಲಪತಿತರನ್ನು ಉದ್ಧರಿಸಲ್ಕೆ ಪರಬೊಮ್ಮತಾನೊಂದು ರೂಪನಾಗಿ ಕರುಣದಿಂದಲಿ ಅವತರಿಸಿದನೆಂದೆನ್ನದೆ ನರನೆಂದು ಬಗೆವವನು ಗುರುತಲ್ಪಕಾ2 ಸಾಕಾರ ನಿಮೈಲನಾಗಿ ಕ್ರೀಡಿಸಿದರೆಯು ಏಕ ಮೇವಾದ್ವಿತಿಯು ಶೃತಿಯೆನುತಿರೇ ಕಾಕು ಬುದ್ದಿಯಲಿ ಪರತರ ವಸ್ತು ನಿಮಗೆಂದ ಧಿಕ ಉಂಟೆಂಬುವ ಸುರಾಪಾನಿಯು 3 ಗಗನದಂದಲಿ ಸಕಲಾತೀತನಾಗಿನೀ ಮಿಗಿಲೆನಿಸಿ ಸಂಸಾರ ಸ್ಥಿತಿಯಲಿರಲು ಅಗಣಿತತೆ ಗುಣಬಂದನವ ಕಲ್ಪಿಸುವ ಜಗದೊಳಗ ಬ್ರಹ್ಮತ್ಯಕಾರನವನು 4 ಎನಗ ತಾರಕ ವಸ್ತು ಇದೆಯೆಂದು ನಿಶ್ಚೈಸಿ ತನು ಮನರ್ಪಿಸಿ ನಿಮ್ಮ ಚರಣಾಬ್ಜಕೆ ಘನನಂಬಿ ಶರಣವನು ಪೊಕ್ಕುನೆಲೆಗೊಂಬುದಕೆ ಅನುಮಾನ ವಿಡಿವವನ ಸ್ವರ್ಣಸ್ತೇಯಾ5 ಇಂತು ಪರಿಯಾದಾ ನಾಲ್ವರ ಸಂಗಡದಲಿ ಅ ತ್ಯಂತ ಹರುಷದ ತಾವ ಬಾಳುತಿಹನು ಅಂತಿಜನ ಸಮನಾದ ಸರ್ವದ್ರೋಹಿಯವನು ಸಂತತ ಬುಧ ಜನರು ಯನುತಿರುವರು 6 ಎಂದೆಂದು ಈ ಪಂಚ ಮಹಾಪಾತಕಿಳಗಳ ಮುಖ ತಂದೆ ತೋರಿದಿರೆನ್ನ ನಯನಗಳಿಗೆ ಎಂದು ಬಿಡದೇ ಕಾಯೋ ಮಹಿಪತಿ ಸುತ ಪ್ರಾಣ ಛಂದದಲಿ ಮಂದಮತಿ ತನ ಹರಸಿಯನ್ನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅರಣೀ ಗರ್ಭದಿಂ ಸಂಭವ | ಸುರ ಜೇಷ್ಠ ಭ್ರಾತಾಸುರಪತಿ ನುತ ವೈಭವ ಪ ಭವ ಪರಿ ಹರಿಸಾಮಯೆ ಅ.ಪ. ಅಂಬಾರ ಮಣಾ - ಶಂಕರಾ | ಗೌರಿವರಾ |ಜಂಭಾಸುರ ಹರ - ಸುರ ವರ ||ಅಂಬುಜಾಸನ - ಕುವರಾ - ಗಂಗಾಧರಾ |ಹಂಬಲಿಸುವ - ಭಕ್ತರ ||ಶುಂಭ ನಿಶುಂಭರ | ಸಂಹರ ರಾಮನಅಂಬುಜ ಪದ ದ್ವಯ | ನಂಬಿದ ಭಕ್ತನೆ |ತುಂಬಿದ ಭಕುತಿಯ | ಹಂಬಲ ಹರಿಯಲಿಸಂಭ್ರಮದಲಿ ಕೊಡು | ಶಂಭು ವಂದಿಸುವೆ 1 ಪ್ರಮಥರ ಪೋಷ-ಭೂತೇಶ-ಭುವನೆ5ವ್ಯೋಮಕೆ5-ಉಗ್ರೇಶ ||¸5Àುನಸ ಮುನೀಶ - ಕೈಲಾಸ ವಾಸೇಶಅಮರಾರಿ ನಾಶ ಸತೀಶ ||ಕುಮತಿಗಳ್ಮೋಹಕ | ಕುಮತವ ವಿರಚಿಸಿರಮೆಯರಸಗೆ ಬಹು | ಪ್ರಮುದವ ಪಡಿಸಿದೆ |ಅಮರೋತ್ತಮ ನಿಮ | ವಿಮಲ ಪದಾಬ್ಜಕೆನಮಿಸುತ ಬೇಡುವೆ ಸನ್ಮತಿ ಪ್ರದನೇ 2 ಶುಕ | ಶುಕಿ ಭವನೆನಿಸೀ 3
--------------
ಗುರುಗೋವಿಂದವಿಠಲರು
ಅರಹು ಅಂಜನಾಗದನಕಾ ಪರಗತಿ ದೊರೆಯದು ಗುರುಕೃಪೆ ಆಗದನಕಾ ಧ್ರುವ ಕಣ್ಣುಕಂಡು ಕಾಣದನಕಾ ಅನುಮಾನ ಹೋಗದು ಉನ್ಮನವಾಗದನಕಾ ಙÁ್ಞನ ಉದಯವಾಗದನಕಾ ಮನ ಬೆರಿಯದು ಘನಮಯಾಶ್ಚರ್ಯವಾಗದನಕ 1 ತನ್ನೊಳು ತಾ ತಿಳಿಯದನಕಾ ಭಿನ್ನವಳಿಯದು ಅನುಭವ ಸುಖ ಹೊಳೆಯದನಕಾ ನೆನವು ನೆಲೆ ಗೊಳ್ಳದನಕಾ ಘನಪ್ರಭೆಯು ಹೊಳಿಯದು ಧ್ಯಾನ ನಿಜವಾಗದನಕ2 ಏರಿ ತ್ರಿಪುರ ನೋಡದನಕಾ ಗುರುಮಹಿಮೆ ತಿಳಿಯದು ತಾ ದೃಢಗೊಳ್ಳದನಕಾ ಮುರು ಹರಿಯಗುಡದನಕಾ ಹರಿಯದು ಜನ್ಮಗುರುಚರಣವ ನೋಡದನಕಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿ ನಿನ್ನ ನಿಜವಾ ಆನಂದಘನವಾ ಚೈತನ್ಯದಿರವಾ ಮರಣರಹಿತವಾ ಆತ್ಮಾನುಭವ ಪ ಮನವಾಣಿ ಮೀರಿ ತನು ಮೂರ ಮೀರಿ ಕಲ್ಪನ ತೀರೀ ತಾ ನಿರ್ವಿಕಾರಿ ಅದೇ ನೀನು ತಿಳಿಯೈ ಇದು ನೀನಲ್ಲ 1 ಜಗವಿದು ಕನಸೋ ಪುಸಿಯೆಂದೆಣೆಸೋ ಮನದಿ ವಿವೇಕವ ಮಾಡಿ ನಿಶ್ಚಯಿಸೋ ಶಂಕರಬೋಧಾ ಇದುವೇ ಮೋದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿ ನಿನ್ನಯ ನಿಜವನು ಜೀವಾ ಅರಿವಿಂದೆ ನೀನೆ ಆ ದೇವಾ ಪ ಸಾರಿ ಪೇಳಿತು ಈ ನುಡಿ ಶಾಸ್ತ್ರ ಅರಿತು ನೋಡಲು ನೀನೆ ಕೃತಾರ್ಥ ದೇಹಮನಗಳ ತ್ಯಾಗದಿಂದೆ ಉಳಿವುದಾ ನಿಜವೊಂದೇ 1 ಈ ಬೋಧಾದಾ ಅನುಭವ ಪಡೆಯೈ ನಾಶಮಾಡು ಈ ಮನವಾ ಈಶಜೀವರಾ ಐಕ್ಯದ ನಿಜವಾ ಪೇಳ್ದ ಶಂಕರದೇವಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿ ನೀನೆ ವೇಲಾಪುರಿ ಶ್ರೀ ಚನ್ನರಾಯಾ ಪ ಪೊಳೆವ ನಂದನವನದಲಲರ್ದ ಮಾವಿನ ನೆಳಲ ಲಲರುವಾ ಸಿರಿತೋಳ ತಲೆಗಿಂಬನೊರಗೀ ಅಳಿಯ ಮೃದುಗಾನಕ್ಕೆ ತಲೆದೂಗುತಲೆ ನುಡಿದ ವಿಲಸಿತದ ಸರಸ ವಚನವ ಚೆನ್ನರಾಯಾ 1 ಬೆಳದಿಂಗಳೆರಕದಂದದ ಸಾರದ್ಹಂದರದಿ ಪೊಳೆವಿಂದುಕಾಂತದ ಜಗುಲಿಯೊಳೆನ್ನ ತಲೆಯ ಮಗ್ಗಲನೊರಗಿ ಸುಳಿವೆಲರಗಾಳಿಗಂಜಿಸುತ ಕಲೆಯರಿತು ಮೈಮರಸಿದುದ ಚನ್ನರಾಯಾ 2 ತನುಮಿಸುಕೆ ಬಹುವಿಧದಿ ಧ್ವನಿಗೈವ ಶಕುನಿ ಪೆಸ- ರಿನ ಮಂಚದಲಿ ಹಂಸತೂಲ ತಲ್ಪದಲಿ ಮನಸಿಜಾಗಮವರಿತು ಮನವ ಮೆಚ್ಚಿಸಿದೆ ಎ- ನ್ನಿನಿಯ ಶ್ರೀ ವೈಕುಂಠಪತಿ ಚೆನ್ನರಾಯಾ 3
--------------
ಬೇಲೂರು ವೈಕುಂಠದಾಸರು
ಅರಿ ಬೇಗನೇ ಪರಮಾತ್ಮ ನೀನೈ ಪರತತ್ವನಾ ತ್ವರಿತದಲಿ ತಿಳಿಯೊ ಪ ಮೂರು ತಾಣಗಳ ಮೀರಿ ಗೋಚರಿಪ ತೋರುತಿಹ ಈ ದೇಹಾದಿಗಳಿಗೆ ಬೇರೆಯಾಗಿಪುದೆ ಪರಮಪದವು ಧೀರ ನೀನರಿಯೊ ಅದೆ ನಾನು ಎಂದು 1 ಕೋಶಪಂಚಕವ ಲೇಸಾಗಿ ಕಳೆದು ವಾಸನೆಯ ಪಾಶವನೆ ಹರಿದೊಗೆದು ಕ್ಲೇಶ ಪಡುವದನು ತ್ಯಜಿಸಿ ಮುದದಿ ನಾಶರಹಿತಾದ ಪದವು ತಾನೆಂದು 2 ಜನನಮರಣಗಳಿಗಾಚೆಗಿರುವಂಥ ಮನವಾಣಿಗಳಿಗೆ ನಿಲುಕದಿರುವಂಥ ಘನಪದವು ಇದುವೆ ಪರಮಾತ್ಮನೈ ಅನುನಯದಿ ಪೇಳ್ವ ಗುರುಶಂಕರಾರ್ಯ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಅರಿಕುಕೊಳ್ಳಿರೈಯ್ಯಾ ನೀವು ಹರಿಯ ನಾಮಾವೃತ ಗುರ್ತು ಮಾಡಿಕೊಡುವ ಪೂರ್ಣ ಸದ್ಗುರು ಸಮರ್ಥ ಧ್ರುವ ಒಳ್ಳೆಒಳ್ಳೆವರು ಬಂದು ಕೇಳಿರೊ ನೀವಿನ್ನು ತಿಳದುಕೊಳ್ಳಿ ಇದಕೆ ಬೀಳುವದಿಲ್ಲಾ ಹಣಹೊನ್ನು ಉಳ್ಳ ಬುದ್ಧಿಯಿಂದ ನೀವು ತೆರೆದುನೋಡಿ ಕಣ್ಣು ಕೊಳಲರಿಯದವನ ಬಾಯಾಗ ಬೀಳುದು ಮಣ್ಣು 1 ಬ್ರಹ್ಮಸುಖ ಇದೇ ಇದೇ ನೋಡಿರೋ ಸಾಕ್ಷಾತ ತುಂಬಿ ತುಳಕುತ್ತ ಒಮ್ಮನ ಮಾಡಿಕೊಂಡು ಬಂದು ಕೊಳ್ಯಮೃತ ನೇಮದಿಂದ ಕೊಳ್ಳಲಿಕ್ಕೆ ದೋರುದು ಸ್ವಹಿತ 2 ಇಹಪರ ನಾರ್ಥಕಿದೆ ಕೇಳಿರೋ ನೀವೆಲ್ಲ ದೇಹ ಅಭಿಮಾನಿಗಿದು ಸಾದ್ಯವಾಗುವುದಿಲ್ಲ ಸೋಹ್ಯವರಿತು ಸೂರೆಗೊಂಡು ಮಹಿಮ ತಾನೆ ಬಲ್ಲಗುಹ್ಯವಾಕ್ಯ ತಿಳಿದುನೋಡಿ ಮಹಿಪತಿ ಸೊಲ್ಲಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅರಿತರೆ ಮನುಜ ನೀನಹುದಣ್ಣಾ ನಿಜ ದರಿವುಯಿಲ್ಲದೆ ಹ್ಯಾಂಗಹುದಣ್ಣಾ ಪ ಪರಮನಪ್ಪಣೆ ಹಿಂಗಿಹುದಣ್ಣಾ ಇದ ನರಿಯದೆ ಕೆಡುವೆ ನೀನಹುದಣ್ಣಾ ಅ.ಪ ಸಪ್ತ ಸಮುದ್ರವ ನಡೆಯಣ್ಣಾ ನಿನ ಗುಪ್ತದೆ ನಾಮವ ನುಡಿಯಣ್ಣಾ ಪ್ರಾ ಣಾಪ್ತನ ಕಂಡು ನೀ ಹಿಡಿಯಣ್ಣಾ 1 ಅಂಗಪುರೀಯೆನಬಹುದಣ್ಣಾ ಜಯ ಮಂಗಳ ನಾಯಕನಹುದಣ್ಣಾ ಜಂಗಮಗುರು ಹರಿತುಲಶಿರಾಮ ನಿಜ ಲಿಂಗನೆ ತಾನಹುದಹುದಣ್ಣ 2
--------------
ಚನ್ನಪಟ್ಟಣದ ಅಹೋಬಲದಾಸರು
ಅರಿತು ನಡೆಯಲಿ ಬೇಕು ನರಕಾಯವೆತ್ತಿದ ಮೇಲೆಅರಿಯದಿದ್ದರೆ ನರಕವೇ ಪ್ರಾಪ್ತಿ ಪ ಭಂಗ ಹರಿಯೆ 1 ಭಕ್ತಿಹೀನರ ಮನೆಯ ಪಟ್ಟು ಸುಪ್ಪತ್ತಿಗೆಗಿಂತಭಕ್ತರ ಮನೆಯ ಕಡೆಬಾಗಿಲ ಕಾಯುವುದು ಲೇಸುಮುಕ್ತಿಮಾರ್ಗವ ತೋರ್ಪ ಮುರಹರನ ದಾಸರನುಸಕ್ತಿಯಿಂ ಸೇವಿಸುವುದು ಬಲು ಸೌಖ್ಯ ಹರಿಯೆ 2 ಆಶೆಕಾರರ ಮನೆಯ ವಿಲಾಸ ಸುಖಕಿಂತಆಶಾರಹಿತರ ಮನೆಯ ನಿರ್ಗತಿಕ ದೈನ್ಯ ಲೇಸುಭೂಸುರಪ್ರಿಯ ಕಾಗಿನೆಲೆಯಾದಿಕೇಶವನಮೀಸಲಿನ ಪಾದಭಜನೆ ಕಡುಲೇಸು ಮನವೆ 3
--------------
ಕನಕದಾಸ
ಅರಿತುಕೊಳ್ಳಿರೋ ನಿಮ್ಮ ಆತ್ಮವಸ್ತುವನುಪರಮ ಗುರು ಕರುಣದಿ ನೀವು ನಿಮ್ಮನು ಪ ಬಿದಿಗೆ ಚಂದ್ರನು ಆವುದೆಂದು ಕೇಳಲಿಕೆಅದಕೋ ಶಾಖಾಗ್ರ ಎಂದೆನಲು ಅರಿದಂತೆವಿಧಿಸಿ ಗುರುಮುಖದಿ ವಿವರಿಸಿ ಕಂಡು ಅರಿದುಸದಯಲಾನಂದ ತಾವೆಂದು ಭಾವಿಪುದು 1 ಊರು ಆವುದು ಎಂದು ಕೇಳುತಿರಲಿಕೆಊರದಕೋ ಗುಡ್ಡದ ಮೇಲೆನಲು ಅರಿದಂತೆಧೀರ ಗುರು ಮುಖದಿ ದಿಟ್ಟಿಸಿ ಕಂಡು ಅರಿತುಸಾರ ಸಂಪತ್ತು ತಾವೆಂದು ಧ್ಯಾನಿಪುದು 2 ಅರಸು ಅವನು ಎಂದು ಕೇಳುತಿರಲಿಕೆಅರಸ ಅಲ್ಲಿಹನೆಂದು ನಡೆವವನೆ ಅರಿತಂತೆಪರಮ ಗುರು ದಯದಿ ಪಾಟಿಸಿ ಕಂಡು ಅರಿದುಪರಮ ಗುರು ಚಿದಾನಂದ ತಾವೆಂದು ಭಾವಿಪುದು 3
--------------
ಚಿದಾನಂದ ಅವಧೂತರು
ಅರಿಯಾರೊ ಅಂದಿಗಂದಿಗನ್ಯ - ಈ ಧರೆಯೊಳಿವರ ಮಹಿಮೆ ಘನ್ನ ಪ ಮರುತಾವೇಶಯುತ - ಉರಗಾಂಶರನ್ನ ಅ.ಪ ಪ್ರಲ್ಹಾದ ಲಕ್ಷ್ಮಣ ಬಾಹ್ಲೀಕÀ ವ್ಯಾಸನು ಇಲ್ಲೀಗ ರಾಘವೇಂದ್ರ ಉಲ್ಲಾಸ ಬಡುವನು 1 ಇನ್ನೂರ ನಾಲ್ವತ್ತು ಮುನ್ನೀಗ ಪೋದದ್ದು ನನ್ನುರ ಅರವತ್ತು ಇನ್ನು ಉಳಿದಿಹದು 2 ಎಲ್ಲೀ ನೋಡಲಿವರಿಲ್ಲದ ಸ್ಥಳವಿಲ್ಲ ಬಲ್ಲಾ ಭಕುತಗೆ - ಅಲ್ಲಲ್ಲೆ ತೋರುವದು 3 ಖುಲ್ಲ ನರರಿಗೆ - ಎಲ್ಲೆಲ್ಲಿ ಇಲ್ಲವೊ ಸಲ್ಲೋದು ನಿಶ್ಚಯ - ಸುಳ್ಳಲ್ಲ ಈ ಮಾತು 4 ದುಷ್ಟ ಜನರಿಗೆ ಇಷ್ಟಾರ್ಥ ಕೊಡುವೊನೊಮ್ಮೆ ಶಿಷ್ಟಾ ಜನರಿಗ ಭೀಷ್ಠಾವ ಕೊಡುವದು 5 ಇವರ ಪೂಜಿಪ ಜನ - ದಿವಿಜರು ನಿಶ್ಚಯ ಭುವನದೊಳಗೆ ಇನ್ನು ಇವರಿಗೆ ಸರಿಯುಂಟೆ 6 ಇವರನ ಒಲಿಸಲು ಪವನಾನು ಒಲಿವನು ಮಾಧವ ತಾನೆÀ ಒಲಿವÀನು 7 ಅಮಿತ ಮಹಿಮರೆಂದು ಪ್ರಮಿತರು ಪೇಳೋರು ಸುಮತಿಗಳ ಮನಕೆ ಗಮಿಸಿ ತಿಳಿಸುವದು 8 ದಾತಾ ಗುರು ಜಗನ್ನಾಥಾ ವಿಠಲ ಬಹು ಪ್ರೀತಿಯಿಂದಲಿ ಇವರ ಖ್ಯಾತಿಯ ಮಾಡೊದು 9
--------------
ಗುರುಜಗನ್ನಾಥದಾಸರು
ಅರಿವಿನ ಅರಿವಾ ತಿಳಿ ಜೀವಾ ಆನಂದರೂಪದ ಸಿರಿಯಾ ಅದೇ ನೀನು ಜೀವಾ ಜೀವಾ ಅದೇ ನೀನು ಜೀವಾ ಪ ಅನಿಸಿಕೆಯಡಗಲು ಉಳಿಯುವ ಸತ್ಯವೆ ನೀನಿಹೆ ನೀನಿಹೆ ಮನಸಿನ ತೋರಿಕೆಅಡಗುವಿಕೆಗಳಿಂ ಬೇರಿಹೆ ಬೇರಿಹೆ ಈ ನಾನೆಂಬುದು ಮನಸಿನದು ಆನಾನೆ ನೀನಾಗಿರುವಿ ಅದೇ ನಿಜವು ಜೀವಾ 1 ಪರಿ ನೋಡು ನೀ ನೋಡು ನೀ ನಾನಾವಿಧಗಳು ಪುಸಿಯಾಗಿಹವೈ ದೂಡು ನೀ ದೂಡು ನೀ ಆನಂದಾತ್ಮನೆ ನೀನಿರುವೀ ಆನಂದದಿಂದಲಿ ತಿಳಿಯೈಶಂಕರಾನಂದಬೋಧಾ ತಿಳೀನೀನೆ ನಿನ್ನೋಳ್ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಅರುಕ್ಯುಳ್ಳ ಗುರುಪಾದವಾಶ್ರೈಸೊ ಎನ್ನ ಮನವೆ ಎgವಾಗ್ಯನುಭವ ಸುರಕಿ ಕೊಳ್ಳೊ ಧ್ರುವ ಮರಹುಮರದೀಡ್ಯಾಡಿ ಅರಹುವಿನೊಳರಿತು ಗೂಡಿ ಕುರುಹ ಗುರುತುಮಾಡಿ ಸ್ಥಿರವು ಕೂಡಿ 1 ತಿರಹು ಮರ್ಹವಿನ ಖೂನ ಅರಹು ಮರ್ಹವಿನ ಸ್ಥಾನ ಇರಹು ಆಗೀಹ್ಯ ಘನ ಬೆರಿಯೋ ಧ್ಯಾನಾ 2 ಜೀವ ಶಿವರಸಂದು ಠಾವಮಾಡಲು ಬಂದು ಭವಕ ಬೀಳುವನೆಂದು ಭಾವಿಕನೆಂದು 3 ಅಗ್ರಗುರು ಸುವಿದ್ಯ ಶೀಘ್ರಸಾಧ್ಯ 4 ಕೀಲು ತಿಳಿದರೆ ಸಾಕು ಜಾಲವ್ಯಾತಕೆ ಬೇಕು ಮೂಲಗುರುಪಾದ ಮಹಿಪತಿ ನೀ ಸೋಂಕು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು