ಒಟ್ಟು 1900 ಕಡೆಗಳಲ್ಲಿ , 109 ದಾಸರು , 1384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇಹದ ಒಳಗಿಹ್ಯ ದೇವರ ತಿಳಿದಿಹ ಆತನೆ ದೇಹಾತೀತನು ಮಾ 1 ಆತನೇ ಶ್ರೀಹರಿಭಕ್ತನು ಮಾ2 ಲಿಂಗವಂತನು ಮಾ3 ಷಟಸ್ಥಳ ಶೋಧಿಸಿ ಸಾಧಿಸಿ ತಿಳದಿಹ ಆತನೆ ಶೀಲವಂತನು ಮಾ 4 ಶುದ್ಧಾತ್ಮ ಶಿವತತ್ವ ಸೂತ್ರವ ತಿಳದಿಹ ಆತನೆ ಶಿವಭಕ್ತನು ಮಾ 5 ದೃಢ ನಿರ್ವಾಣೆಯು ಮಾ 6 ಆತನೆ ಮಹಾಪಂಡಿತನು ಮಾ 7 ಆತನೆ ಆಚಾರ ನಿಷ್ಠನು ಮಾ 8 ಐದು ತತ್ವದ ಗತಿಗಳ ತಿಳದಿಹ ಆತನೆ ಮಹಾ ವೈದಿಕನು ಮಾ 9 ಪಂಚ ಮುದ್ರೆಯ ಸ್ಥಾನವು ತಿಳದಿಹ ಆತನೆ ಸುಬ್ರಾಹ್ಮಣನು ಮಾ 10 ಗುರುವೆಂದರುವದು ಮಾ 11 ಆತನೆ ಸಿದ್ದ ಶರಣನು ಮಾ 12 ಆತನೆ ಮಹಾ ಸತ್ಪುರುಷನು ಮಾಟ 13 ಆತನೆ ವರಗುರು ಮೂರ್ತಿಯು ಮಾ 14 ಅವತಾರ ಮಹಿಮನು ಮಾ 15 ಆತನೆ ಸಾಧು ಸಂತನು ಮಾ 16 ಸದ್ಗುರು ಮೂರ್ತಿಯು ಮಾ 17 ಮಹಾ ಜ್ಞಾನಿಪುರುಷನು ಮಾ 18 ಮರುಳಮಂಕ ಮನುಜರು ಮಾ 19 ಆತನೆ ಶ್ರೀ ಗುರುದಾಸನು ಮಾ 20 ಮಹಿಪತಿ ಭವನಾಶವಾಯಿತು ಮಾ 21
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೊರೆಯೆ ಪೊರೆವರ ಪ. ಹರಿಯನು ಧ್ಯಾನಿಪ ಪರಿಯನು ಮನಕೆ ವರೆದಾದರದೊಳು ಕರುಣಿಪುದು 1 ಭ್ರಮರವು ಪರಿಮಳ ಭ್ರಮಿಸುವಂತೆ ಮನ ಕಮಲನಯನನಲಿ ಒಲಿವಂತೆ 2 ಪಾರ್ವತೀರಮಣ ಪಾಲಿಸು ಎನ್ನನು (ಪಾರುಗಾಣಿಸು ಭವ) ಶ್ರೀವರ ಶ್ರೀ ಶ್ರೀನಿವಾಸನ್ನ ತೋರಿ 3
--------------
ಸರಸ್ವತಿ ಬಾಯಿ
ದೊರೆಯೆನ್ನನು ಕಾಯೈ ಶ್ರೀಚಕ್ರಪಾಣಿ ಪ ನಿರುತವು ಶರಣೆಂದೆನ್ನುತ ಕೋರುವೆ ಪರಿಯೊಳುಸೇರೇ ಬಂದಿಹೆ ಕರಪಿಡಿ ಅ.ಪ ಆಯುರಾರೋಗ್ಯ ಸುಖಸಂಪದಕೊಡುವ ಸೌಭಾÀಗ್ಯ ಕರ್ತೃವು ಶ್ರೇಯದ ವಿದ್ಯೆಯ ಕರುಣಿಸ ಪ್ರಭೆಯೊಳು ಸನ್ಮಾನವೀವಾ ಧ್ಯೇಯನೇಭತ್ತಿಜ್ಞಾನವೈರಾಗ್ಯವನಿತ್ತುವಿಮುಕ್ತಿಕೊಡುವ ಅ ನ್ಯಾಯದೆ ನಡೆವರ ವ್ಯರ್ಥರಗೈವನು ನೀನೈ ಶ್ರೀಶ್ಯಾಮಸುಂದರ 1 ಮನ್ನರೋಗಕ್ಕೆ ನಿನ್ನ ಪಾದತೀರ್ಥ ಔಷಧವು ಬೇಡ ಉನ್ನತ ಭಯಕ್ಕೆ ಸುದರ್ಶನ ಸ್ಮರಣೆ ಮಂತ್ರವೇತಕ್ಕೆ ಇನ್ನಿತರ ಕಷ್ಟಗಳಿಗೆಲ್ಲ ನಿನ್ನ ನಾಮಮಂತ್ರ ಭಜನ ಚೆನ್ನಪಾದಕೃಪೆ ಇನ್ನೊದಗಿಹುದೈ ನಾಂ ನಿತ್ಯಸಂತೊಷಿ 2 ನಿರಾಯಾಸದಿಂ ದಾಸಗಂತ್ಯದಲಿ ಪ್ರಶಾಂತನಾಗಿ ಹರಿನಾರಾಯಣ ನಾರಾಯಣಯೆಂದು ಕರೆವಂತೆ ಮಾಡಿ ಹರುಷದಿ ನೋಹರಾಕಾರವ ತೋರಿ ವೈಕುಂಠಕೆನ್ನನು ಕರುಣದಿ ಕರೆದೊಯ್ ಅಜಪೂಜಿತ ಹೆಜ್ಜಾಜಿಕೇಶವ 3
--------------
ಶಾಮಶರ್ಮರು
ದೋಷನಾಶ ಜಗದೀಶ ಈಶ ಕೈ ಲಾಸವಾಸ ಸದಾನಂದ ಹರ ಜೈಜೈ ಪರಮಾನಂದ ಪ ದಂಡಧರನೆ ಹರ ರುಂಡಮಾಲ ರುದ್ರ ಕೆಂಡನಯನ ಸದಾನಂದ ಹರ ಜೈ ಜೈ ಪರಮಾನಂದ1 ಗೌರಿನಾಥ ಪ್ರಭು ಮಾರಮರ್ದನ ಮೃಡ ವಾರಿಧಿಧರ ಸದಾನಂದ ಹರ ಜೈ ಜೈ ಪರಮಾನಂದ 2 ಅಗಜಾವಲ್ಲಭ ನಿಗಮವಂದ್ಯ ಭಕ್ತ ರಘನಾಶನ ಸದಾನಂದ ಹರ ಜೈ ಜೈ ಪರಮಾನಂದ 3 ಗಜಚರ್ಮಾಂಬರ ಸುಜನರ ಪರಿಪಾಲ ತ್ರಿಜಗಪೂಜ್ಯ ಸದಾನಂದ ಹರ ಜೈ ಜೈ ಪರಮಾನಂದ 4 ತ್ರಿಪುರಸಂಹರ ನುತ ಸುಫಲದಾಯಕ ಮಹ ಕೃಪಾಕರ ಶಿವ ಸದಾನಂದ ಹರ ಜೈ ಜೈ ಪರಮಾನಂದ 5 ನೀಲಕಂಠ ಭವಮಾಲನಿವಾರ ತ್ರಿ ಶೂಲಧಾರಿ ಸದಾನಂದ ಹರ ಜೈ ಜೈ ಪರಮಾನಂದ 6 ಚಂದ್ರಚೂಡ ಶರಣೇಂದ್ರ ಮೃಕಂಡುಮುನಿ ಕಂದಗೊಲಿದ ಸದಾನಂದ ಹರ ಜೈ ಜೈ ಪರಮಾನಂದ 7 ಫಾಲನಯನ ಸುಖದಾಲಯ ನುತಜನ ಮೇಲುಮಂದಿರ ಸದಾನಂದ ಹರ ಜೈ ಜೈ ಪರಮಾನಂದ 8 ಭವ ಭೂತಿಖ್ಯಾತ ಜಗ ದಾತ ಸದಾನಂದ ಹರ ಜೈಜೈ ಪರಮಾನಂದ 9 ನಾದತೀತ ಅಮರಾದಿವಿನುತ ಮಹ ದಾದಿದೇವ ಸದಾನಂದ ಹರ ಜೈ ಜೈ ಪರಮಾನಂದ 10 ನತಜನ ಸುಖದಾಶ್ರಿತ ಹಿತಮತಿ ದೇ ನುತಿಪೆ ಸತತ ಸದಾನಂದ ಹರ ಜೈಜೈ ಪರಮಾನಂದ 11 ಭಾಗವತರ ಪ್ರಿಯ ಭಗವತ್ಶಿಖಾಮಣಿ ನಾಗಭೂಷ ಸದಾನಂದ ಹರ ಜೈ ಜೈ ಪರಮಾನಂದ 12 ಖೊಟ್ಟಿಲೋಹ ಸುಟ್ಟು ಕಿಟ್ಟತೆಗೆವಂತೆನ್ನ ಭ್ರಷ್ಟತ್ವಕಳಿ ಸದಾನಂದ ಹರ ಜೈ ಜೈ ಪರಮಾನಂದ 13 ಹರಣಪೋದರು ಹರಿಚರಣಸ್ಮರಣೆಬಿಡ ದ್ವರವ ಪಾಲಿಸು ಸದಾನಂದ ಹರ ಜೈ ಜೈ ಪರಮಾನಂದ 14 ಲಿಂಗಪುರೇಶ ಶಿವಲಿಂಗರೂಪ ಭವ ಭಂಗಸಂಗ ಸದಾನಂದ ಹರ ಜೈ ಜೈ ಪರಮಾನಂದ 15 ಮಂದರಧರನಡಿ ಚಂದದೊಲಿಸಿ ಎನಗಾ ನಂದಕೊಡು ಸದಾನಂದ ಹರ ಜೈ ಜೈ ಪರಮಾನಂದ 16 ಮಂಗಳಮೂರುತಿ ತುಂಗವಿಕ್ರಮ ಶ್ರೀ ರಂಗ ರಾಮ ಭಕ್ತಾನಂದ ಹರ ಜೈ ಜೈ ಪರಮಾನಂದ 17
--------------
ರಾಮದಾಸರು
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ದ್ವಾದಶನಾಮ ನಿರ್ವಚನ ಶ್ರೀಕೃಷ್ಣ ನಿನ್ನ ಚರಣಾರವಿಂದಕ್ಕೆರಗಿ ಭಕುತಿಯಿಂ ನಿನ್ನ ಪನ್ನೆರಡು ರೂಪಗಳ ನಾಮ ನಿರ್ವಚನದಿಂ ಕೂಡಿ ನುತಿಸುವೆ ನಾನು ಸರ್ವಸಿದ್ಧಿಯನ್ನಿತ್ತು ಕಾಪಾಡು ಹರಿಯೆ 18 ಸೃಷ್ಟಿಲಯಕಾರಿಗಳು ಬೊಮ್ಮರುದ್ರರು ಇವರೆ ಕೇಶವೆಂಬಕ್ಷರದಿ ಮೆರೆಯುತ್ತಲಿಹರು ವರ್ತನವು ಯಾರಿಂದಲಹುದವನೆ ಪರದೇವ ಕೇಶವಾತ್ಮಕನವನು ಶ್ರೀಕೃಷ್ಣ ದೇವ 19 ನಾರವೆಂದರೆ ದೋಷ ಲೇಶವಿಲ್ಲದ ಗುಣವು ನಾರವೆಂದರೆ ನೀರು ಜೀವನಾಧಾರ ನಾರವಯನವು ಯಾರಿಗವನೆ ನಾರಾಯಣನು ರಜತಪೀಠದ ಪುರದ ಪರದೈವವವನು 20 ಮಾಧವನು ಮಾಲಕುಮಿಗೊಡೆಯನವ ಪರಮಾತ್ಮ ಮಾಯೆಯನು ಎದೆಯಲ್ಲಿ ತಾಳ್ದ ಸಿರಿವರನು ಮಾಯೆಯಿಂದಲಿ ಮಾನವಗೆ ಮುಸುಕನು ಹಾಕಿ ತನ್ನ ರೂಪವನಾರು ನೋಡದಂತಿಹನು 21 ಹಿರಿ ಬೆಟ್ಟವನು ತಾನು ಕಿರಿ ಬೆಟ್ಟಿನಲಿ ಹೊತ್ತು ಗೋವುಗಳ ರಕ್ಷಿಸಿದ ಗೋಪಾಲ ನೀನು ವೇದರಕ್ಷಕನಾಗಿ ಗೋವಿಂದನೆನಿಸಿರುವೆ ಶ್ರೀಕೃಷ್ಣ ನಿನ್ನ ಮಹಿಮೆಯನೇನ ಪೇಳ್ವೆ 22 ಚೇಷ್ಟಕನು ಬಲರೂಪನಾಗಿರುವ ಕಾರಣದಿ ವಿಶ್ವದಲ್ಲೆಲ್ಲು ವ್ಯಾಪಿಸಿರುವುದರಿಂ ವಿಷ್ಣುನಾಮದ ನೀನು ವೈಷ್ಣವರ ಕುಲದೊಡೆಯ ಮಧ್ವಹೃನ್ಮಂದಿರದ ನೆಲೆಯಲ್ಲಿ ಇರುವೆ 23 ಮಧುವೆಂಬ ದೈತ್ಯನನು ಸೃಜಿಸಿಯವನನು ಕೊಂದು ಮಧುಸೂದನನು ಎಂಬ ಬಿರುದು ನೀ ಪೊತ್ತೆ ದುರ್ಜನರ ಸಂಹಾರ ಸಜ್ಜನರ ಉದ್ಧಾರ ಎಂಬೆರಡು ಕಾರ್ಯಗಳಿಗಾಗಿಯವತಾರ 24 ತ್ರೈವಿಕ್ರಮಾವತಾರವ ತಾಳ್ದು ದೇವ ಕಾಲ ತೊಳೆದು ಮೂರು ಲೋಕದ ಭಕುತರಿಗೆ ದರ್ಶನವ ಕೊಟ್ಟು ಭಕ್ತರಕ್ಷಕನಾಗಿ ಮೆರೆದೆ ಸಿರಿವರನೆ25 ವಾಮನನು ನೀನಾಗಿ ವಾಮಪಂಥದಿ ಹೋಗಿ ಬಲಿ ಚಕ್ರವರ್ತಿಯಲಿ ಮೂಹೆಜ್ಜೆ ಬೇಡೆ ಭಕುತಿಯಿಂದವ ಕೊಡಲು ಮುಕುತಿಯನು ಕೊಡಲೆಂದು ಬಲಿಯ ಮನೆಯೂಳಿಗವ ಗೈದೆ ಪರಮಾತ್ಮ26 ಸಿರಿಯನೆದೆಯಲಿ ಪೊತ್ತು ಶ್ರೀಧರನು ನೀನಾಗಿ ಸರ್ವ ಭೂಷಣಗಳಿಂ ಶೋಭಿಸುತಲಿರುವೆ ಅನ್ನದಾತನು ನೀನು ಅನ್ನಭೋಕ್ತøವು ನೀನು ಭುಕ್ತಿ ಮುಕ್ತಿ ಪ್ರದನು ನೀನಿರುವೆ ದೇವ 27 ಇಂದ್ರಿಯಗಳು ಹೃಷೀಕಾಭಿಧಾನದಲಿಹವು ನೀನವುಗಳಿಗೆ ಎಲ್ಲ ಒಡೆಯನಾಗಿರುವೆ ಹೃಷೀಕೇಶ ನಾಮವದು ನಿನಗೊಪ್ಪುವದು ಹರಿಯೆ ನನ್ನ ಮನ ನಿನ್ನಡಿಯೊಳಿರುವಂತೆ ಮಾಡು28 ಸಾಗರವನುದರದಲ್ಲಿರಿಸಿ ನೀನದರಿಂದ ನಾಭಿಯಲಿ ಪದುಮವನು ಸೃಷ್ಟಿಸಿದೆ ದೇವಾ ಪದುಮನಾಭನು ನೀನು ಬೊಮ್ಮಪಿತನಾಗಿರುವೆ ಮಾಯಾ ರೂಪವನೇನಪೇಳ್ವೆ29 ಮೊಸರ ಕುಡಿಕೆಯನೊಡೆದು ತಾಯಿಯಿಂ ಬಂಧಿತನು ದಾಮೋದರನು ಎನಿಸಿ ಉಜಡೆಯನ್ನೊಯ್ದು ಮರಗಳೆಡೆಯಲಿ ಪೊಕ್ಕು ಬೀಳಿಸುತಲವುಗಳನು ಭಕುತರಾ ಶಾಪಮೋಚನೆಯ ನೀ ಮಾಡ್ದೆ30 ಕೇಶವನೆ ಮೊದಲಾದ ಪನ್ನೆರಡು ನಾಮಗಳ ಅರ್ಥವರಿತನವರತ ಪೇಳಲವಗೊಲಿದು ಸಂಸಾರ ಬಂಧನವ ತೊಲಗಿಸಿಯೆ ಪರಮಾತ್ಮ ತನ್ನ ಬಳಿಗೊಯ್ಯುವನು ನಿಜ ಪೇಳ್ವೆ ನಾನು31 ಶ್ವೇತ ರಕ್ತವು ಪೀತ ಕೃಷ್ಣ ವರ್ಣಗಳೆಂಬ ನಾಲ್ಕು ಬಣ್ಣದ ದೇವನೊಬ್ಬನೇ ಇಹನು ಕಲಿಯುಗದ ಕಾಲದಲಿ ಕೃಷ್ಣನೊಬ್ಬನ ನೆನೆದು ನಾಮಜಪ ಮಾಡಿದರೆ ಮುಕ್ತಿಯನು ಕೊಡುವ 32
--------------
ನಿಡಂಬೂರು ರಾಮದಾಸ
ಧಣಿ ನೀನಿರಲು ತಣಿಸಿ ಪರರ ದಣಿವುದುಂಟೆ ಲೋಕದಿ ಪ ಕ್ಷಣ ಕ್ಷಣದಲಿ ಪೊರೆವ ಚಿಂತಾ ಮಣಿ ನೀನಿರೆ ತ್ರಿಭುವನಕೆ ಅ.ಪ ಕರದಲಿರುವ ಮಣಿಯ ಬೆಲೆಯ ನರಿಯದಂಥ ಮೂಢ ಜನರು ಪರರಿಗಿತ್ತು ಹರುಷದಿಂದ ಪುರಿಯ ಕೊಂಬ ತೆರದಲಿ 1 ದುರಿತ ದೂರ ಮಾಡಿ ಸಾರ ಫಲಗಳನ್ನು ಕೊಡುವ ನಾರಸಿಂಗ ಮಂತ್ರವಿರಲು ಭೈರವನನು ಜಪಿಸುವಂತೆ 2 ಪಡೆದ ಜನಕನಲ್ಲದೆನ್ನ ನುಡಿಗೆ ಒಲಿವರುಂಟೆ ಜಗದಿ ಕಡಲಶಯನ ಎನ್ನ ಕರವ ಪಿಡಿಯುತ ಪ್ರಸನ್ನನಾಗೋ 3
--------------
ವಿದ್ಯಾಪ್ರಸನ್ನತೀರ್ಥರು
ಧನಪ್ರದ ಶ್ರೀಕರ ಕಾರುಣ್ಯ ಸ್ತೋತ್ರ ಧನಕೀರ್ತಿಗಳ ಹುಡುಕಿ ತಿರುಗಾಡಲಾರೆ ಧನಕೀರ್ತಿಗಳ ಕೊಡುವಿ ನೀನಾಗಿ ನೀನೆ ಪ ಶ್ರೀಕರನೇ ನೀನಾಗಿ ನೀನೇ ಸುಧಾಮನಿಗೆ ಬೇಕಾದ ಸೌಭಾಗ್ಯ ಧನ ಧಾನ್ಯವಿತ್ತಿ ಸಾಕಿ ಸಲಹುವ ಸ್ವಾಮಿ ನೀನಿರಲಿಕೆ ನಾನು ಏಕೆ ತಿರುಗಾಡುವುದು ಕುಳಿತಲೆ ಕೊಡುವಿ 1 ಪತಿ ಹೃಸ್ಥ ಶ್ರೀ ರಮಾಪತಿ ಸರ್ವ ಪ್ರೇರಕಾಂತರ್ಯಾಮಿ ಆರ್ತಿಹರ ನೀನು ವರಜ್ಞಾನ ಯೋಗಿವರ್ಯನು ರೈಕ್ವ ಕುಳಿತಲೆ ಪೌತ್ರಾಯಣ ದ್ವಾರ ಭಾರಿ ಧನವಿತ್ತೆ 2 ದೇವ ವೃಂದದಿ ಪ್ರವರ ಗುರು ವಾಯು ಪ್ರೇರಿಸಲು ದೇವ ಶರ್ಮನು ಬಂದು ಏನೂ ಬೇಡದಲೆ ನಿವ್ರ್ಯಾಜ ಭಕ್ತಿ ಆನಂದದಲಿ ಸ್ತುತಿಸಿದನು ದ್ರವಿಣಾದಿ ಧನವಿತ್ತಿ ನೀನಾಗಿ ನೀನೇ 3 ಸರ್ವದೊಳು ನೀನಿರುವಿ ಸರ್ವವಶಿ ನಿಸ್ಸಂಗ ಸರ್ವಧಾರಕ ಶ್ರೀಶ ಸರ್ವಗುಣ ಪೂರ್ಣ ಭೂಮಿಯಲಿ ಮಾರ್ಜಾಲ ತನ್ನ ಮರಿಯ ತಾನೇ ಎತ್ತಿ ಕಾಯುವಂತೆ ನೀ ಎನ್ನ ಸರ್ವದಾ ಕಾಯುತಿ ಕೃಪೆಯಿಂದ 4 ಶಂಖ ನಿಧಿ ಪದ್ಮನಿಧಿ ರವಿ ಸೋಮಕೈಗಳಲಿ ಶಂಖಾರಿಧರ ದ್ರವ್ಯ ಕೊಡುವ ಹಸ್ತಗಳು ಸ್ವಾಂಕಸ್ಥ ಲಕ್ಷ್ಮೀ ಸಮೇತ ಗರುಡಾ ರೂಢ ಶ್ರೀಕರನೇ ಅಜಪಿತ ನಮೋ ಪ್ರಸನ್ನ ಶ್ರೀನಿವಾಸ 5
--------------
ಪ್ರಸನ್ನ ಶ್ರೀನಿವಾಸದಾಸರು
ಧನವಂತನಾದವನೆ ಘನವಂತ ಜಗದಿ ಧನವಂತನಾಗದವ ಹೆಣಕೆ ಕಡೆ ಇಹ್ಯದಿ ಪ ಧನಿಕನ ಮನೆಮುಂದೆ ದಿನಕರನ ಪ್ರಭೆಯಂತೆ ಜನಸಮೂಹ ನೆರೆಯುತಿಹ್ಯದನುದಿನವು ಬಿಡದೆ ಮಣಿದು ಅವನಿಗೆ ತಮ್ಮ ಮನೆಯ ಪರಿವ್ಯಿಲ್ಲದೇ ಮನ್ನಿಪರು ಅವನೊಚನ ಘನಭಕುತಿಲಿಂದ 1 ಸಿರಿಯಿಲ್ಲದವ ಬಂದು ಶರಣೆಂದು ಕರಮುಗಿಯೆ ಗರುವದಿಂ ಕೂಡ್ರುವರು ಶಿರವೆತ್ತಿ ನೋಡದೆ ತಿರುಕುದೆ ಇವನು ಹೆರಕೊಂಡು ತಿನಲಿಕ್ಕೆ ತಿರುಗುವನು ಎಂದೆನುತ ತಿರಿಸುವರು ಹೀನ 2 ಬಂಧುಬಳಗವುಯೆಂದು ಬಂದು ಕರೆಯಲವನ ಮುಂದೆ ನುಡಿಯುವರು ನಿನ್ನ ಮಂದಿರಕೆ ಬಂದು ಚಂದದಿಂದುಂಡೇವೇನೆಂದು ಜರೆವರು ಮನಕೆ ಬಂದ ತೆರದವನ ಮನನೊಂದಳಲುವಂತೆ 3 ಹತ್ತಿರದವರಾರು ಹತ್ತಿರಕೆ ಬಾರರು ಸತ್ತ್ಹೆಣನ ಕಂಡಂತೆ ಮತ್ತಿವನ ಕಂಡು ಅತ್ತಿತ್ತ ಪೋಗುವರು ಸುತ್ತಿ ಪಥಸೇರುವರು ಆರ್ಥಿಲ್ಲದವನಿರವು ವ್ಯರ್ಥ ಮತ್ರ್ಯದೊಳು 4 ಹರಿದ್ಹೋಗ ಸಿರಿಯೆಂದು ಅರಿಯದೆ ಗರುವದಿ ಚರಿಸುವ ಅಧಮಜನರಿರವೇನು ಜಗದಿ ಗರುವಿಕರ ಸಿರಿಗಿಂತ ಶರಣರ ಬಡತನವೇ ಪಿರಿದೆಲೋ ಶ್ರೀರಾಮ ಅರಿದು ನಾನು ಬೇಡ್ವೆ 5
--------------
ರಾಮದಾಸರು
ಧನ್ವಂತ್ರಿ ನಾ ನಿನ್ನ ಅಣುಗನೋ - ತ್ರೈಗುಣದೂರ ಅಣುಗಣು ಘನಘನಾ ಪ ಭವ ಹಂತ್ರಿ 1 ಭವ ಹಂತ್ರೀ 2 ಸ್ನಾನ ಸಂಧ್ಯಾವಿಲ್ಲ ಧನ್ವಂತ್ರೀ | ಸೂಕ್ಷ್ಮಸ್ನಾನಾನು ಸಂಧಾನ ಧನ್ವಂತ್ರೀ |ಜ್ಞಾನಾವೆ ಪಾಲಿಸೊ ಧನ್ವಂತ್ರೀ | ಈಸುಜ್ಞಾನವೇ ಸ್ಥಿರವಿರಲಿ ಭವಹಂತ್ರೀ 3 ಸತಿಸುತರ ಪ್ರಾರ್ಥನೆಗೆ ಧನ್ವಂತ್ರೀ | ಅತಿಹಿತದಿಂದ ಸಲಹೀದೆ ಧನ್ವಂತ್ರೀ |ಗತಿಪ್ರದ ಬಿರುದಾಂಕ ಧನ್ವಂತ್ರೀ | ಮಮರತಿ ಇರಲಿ ತವ ಪದದಿ ಭವಹಂತ್ರೀ 4 ಭೇಷಜ ಧನ್ವಂತ್ರೀ | ಎನ್ನಅವಗುಣವೆಣಿಸೋರೆ ಧನ್ವಂತ್ರೀ |ಧೃವ ಬಲಿ ಕರಿವರದ ಧನ್ವಂತ್ರೀ | ಗುರುಗೋವಿಂದ ವಿಠಲನೇ ಧನ್ವಂತ್ರೀ 5
--------------
ಗುರುಗೋವಿಂದವಿಠಲರು
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ಧರ್ಮೇಂದ್ರಿಯಕ್ಕೆ ದಟ್ಟಡಿಯನಿಡಲೊಲ್ಲೆ ದುಷ್ಕರ್ಮೇಂದ್ರಿಯಕ್ಕೆ ಕಾಲ್ಗೆರಗುತ್ತಲಿಹೆ ಮರುಳೆ ಪ ಪುಸ್ತಕವ ಬಿಚ್ಚಿ ಪೌರಾಣ ಶಾಸ್ತ್ರಂಗಳಿಂವಿಸ್ತರಿಸಿ ಹರಿಯ ಕಲ್ಯಾಣಗುಣ ಕಥೆಯನ್ನುಸ್ವಸ್ಥದಿಂ ಕುಳ್ಳಿರ್ದು ಕೇಳೆಂಬ ಠಾವಿನಲಿಮಸ್ತಕಕೆ ವ್ಯಥೆಯೆಂದು ಮನೆಯತ್ತ ನೀ ನಡೆವೆಹಸ್ತದಿಂ ಹಣ ಭತ್ತ ಹಚ್ಚಡಂಗಳ ಕೊಟ್ಟುಕುಸ್ತರಿಸಿ ಬಿನಗು ಚಾರಿತ್ರ್ಯವಂ ಲಾಲಿಸುತದುಸ್ತರದ ಲೆತ್ತ ಚದುರಂಗ ಪಗಡೆಯನು ಉದಯಾಸ್ತದವರೆಗಾಡುತ ಮೇಲೇಳದಿಹೆ ಮರುಳೆ 1 ಸುರಭಿ ಸೇವಂತಿ ಮಲ್ಲಿಗೆ ಮೊಲ್ಲೆ ಬಕುಳ ಪಾದರಿ ಚಂಪಕಾ ಕಂಜ ಕಣಿಗಲು ಶ್ರೀ ತುಳಸಿಪರಿಮಳದ ಪಚ್ಚೆತೆನೆ ಹರಿಪಾದಕರ್ಪಿಸುತೆನಿರುಮಾಲ್ಯ ಪರಿಮಳವನಾಘ್ರಾಣಿಸೆನೆ ಒಲ್ಲೆಬಿರಿದ ಕೆಂಜಾಜಿ ಪುಷ್ಪಂಗಳಂ ವನಿತೆಯರಸಿರಿ ಮುಡಿಗೆ ಮುಡಿಸಿ ಕುಂತಳ ಸೌರಭವ ಕಂಡುಹರುಷದಿಂ ರೋಮ ಪುಳಕಿತನಾಗುತಡಿಗಡಿಗೆಪರಮ ಸಂತೋಷಮಂ ನೀ ಪಡೆಯುತಿಹೆ ಮರುಳೆ 2 ಭಾಗವತ ನೃತ್ಯವಂ ನೋಡುತತಿಶಯದ ಹರಿದಿನವ್ರತದಲ್ಲಿ ಜಾಗರವ ಮಾಡದಲೆ ನಿದ್ರೆಗೈವೆಕೃತಕ ಪಣ್ಯಾಂಗನೆಯ ಚತುರ ನೃತ್ಯಕೆ ಮನೋ-ರಥ ಸಿದ್ಧಗೊಳಿಸಿ ಈಕ್ಷಿಪೆನೆಂದು ಕುಜನ ಸಂ-ಮತವೆರಸಿ ಬೆಳತನಕ ಕುಳ್ಳಿರುತ ನಿದ್ರಾ ವ-ರ್ಜಿತನಾಗಿ ಪರಮ ಸಂತಸ ಪಡೆಯುತಿಹೆ ಮರುಳೆ 3 ಗಂಧ ಶಾಲ್ಯಾನ್ನ ನವಘೃತ ತೋಯ ಪಳಿದ್ಯ ನಲ-ವಿಂದ ಪರಮಾನ್ನ ಮಹಶಾಕ ಸೀಕರಣೆಯನುಒಂದೆರಡು ಪರುಠವಿಸಿ ದ್ವಾದಶಿ ದಿನದಂದು ಮು-ಕುಂದಾರ್ಪಣವ ಮಾಡಿ ಮನೆಯೊಳಗೆ ಉಣ್ಣದಿಹೆಬಂದಾವನಾದೊಡಂ ಕರೆಯೆ ದೇಹದ ಪುಣ್ಯವೆಂದವರ ಮನೆಗಳಿಗೆ ಹೋಗಿ ನೀ ಕುಳ್ಳಿರ್ದುಚಂದದಿಂ ಬಣ್ಣಿಸುತ ಮಿಂಚುಕೂಳುಗಳನ್ನುತಿಂದೊಡಲ ಪೊರೆದು ಕಾಲವ ಕಳೆಯುತಿಹೆ ಮರುಳೆ4 ಸಿರಿ ವೈಕುಂಠ ಪದವಿಯನು ಪಡೆ ಮರುಳೆ 5
--------------
ಕನಕದಾಸ
ಧವಳಗಂಗೆಯ ಗಂಗಾಧರ ಮಹಾಲಿಂಗ ಮಾ- ಧವನ ತೋರಿಸಯ್ಯ ಗುರುಕುಲೋತ್ತುಂಗ ಪ. ಅರ್ಚಿಸಿದವರಿಗಭೀಷ್ಟವ ಕೊಡುವ ಹೆಚ್ಚಿನ ಅಘಗಳ ಬೇಗನೆ ತರಿವ ದುಶ್ಚರಿತರನ್ನೆಲ್ಲ ದೂರದಲ್ಲಿಡುವ ನ- ಮ್ಮಚ್ಚುತಗಲ್ಲದ ಅಸುರರ ಬಡಿವ 1 ಮಾರನ ಗೆದ್ದ ಮನೋಹರಮೂರ್ತಿ ಧಾರುಣಿಯೊಳಗೆ ತುಂಬಿದೆ ನಿನ್ನ ಕೀರ್ತಿ ಹರಿಯ ತೋರಿಸಯ್ಯ ನಿನಗೆ ಶರಣಾರ್ಥಿ 2 ಚೆನ್ನ ಪ್ರಸನ್ನ ಶ್ರೀ ಹಯವದನನ್ನ ಅನುದಿನ ನೆನೆವಂತೆ ಮಾಡೊ ನೀ ಎನ್ನ ಅನ್ಯರನರಿಯೆನೊ ಗುರುವೆಂಬೆ ನಿನ್ನ ಇನ್ನಾದರು ಹರಿಯ ತೋರೊ ಮುಕ್ಕಣ್ಣ 3
--------------
ವಾದಿರಾಜ
ಧೀಮಂತಮನಂತಂ ಚಿಂತಯಾಮಿ ಭಗವಂತಂ ಪ ಹೇಮಾಂಬರವೇಷ್ಟಿತಂ ಸಾಮಜವರಪೂಜಿತಂಅ.ಪ ವಾಸವಾದಿ ಸನ್ನುತಂ ಮಾರುತಾತ್ಮಜಾನತಂ ವಾಸುದೇವಮಚ್ಯುತಂ ಸೋಮಶೇಖರಾರ್ಚಿತಂ 1 ಭಾಸಮಾನಮಣಿಯುತಂ ಮೌನಿನಿಕರಸೇವಿತಂ ಕೋಸಲೇಯ ಮಾಂಗಿರೀಶಿಖರ ನಿಲಯರಾಜಿತಂ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು