ಒಟ್ಟು 5630 ಕಡೆಗಳಲ್ಲಿ , 130 ದಾಸರು , 3590 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ಚಲುವರೋ ರಾಮಕೃಷ್ಣರೆಷ್ಟು ಚಲುವರೊಎಷ್ಟು ಚಲುವರಿವರ ಶಿರದಿ ಬಿಟ್ಟ ಜುಲುಪಿ ಕೇಶ ಚಂದ ಪುಟ್ಟ ಬಾಲಕಾರು ಕೂಡಿ ಗೋಷ್ಟದೊಳಗೆ ಚಲಿಸಿದಾರೊ ಪ ನಿನಗು ಇದ್ದವೋ ಈ ಜುಲುಪಿ ನಿನ್ನನುಜಗಿದ್ದವೊಮುನಿಯ ಕೂಡಿ ಪೋಗುವಾಗ ವನದಿ ನಾಲ್ಕು ಹತ್ತು ವರುಷಜನತೆಗಾದ ನಯನ ಸುಖದ ಘನತೆ ನೀನು ತಿಳಿದು ಪೇಳೋ 1 ಬಹಳ ಶೂರನೋ ತಥೋಪಿ ಧೈರ್ಯಶೀಲನಾಮನೋಶೂಲ ಪಾಣಿ ಧನದ ಭೂಮಿ ಪಾಲು ಸಾಧಿಸಿ ಮುರಿದು ನಿಂತಬಾಲಕೃಷ್ಣ ಶತ್ರುಗಣದಿ ಬಾಲೆಯೆತ್ತಿಕೊಂಡು ಪೋದ 2 ಕಾಲ ಎತ್ತಜೀವ ಎತ್ತಕಾಯಪುತ್ರ ವೃತ್ತಿ ಮಾತೆ ಗುರು ಸುಪಾತ್ರರನ್ನು ಸುಖಿಸಿದಾರು 3 ಪಿತೃನಾಗ್ಞದಿ ನೋಡುತಲೆ ವನದೊಳ್ಹೆತ್ತೆ ಮಾಡಿದೆಮತ್ತ ಆನೆಯಮಲ್ಲ ಕಂಸನೊತ್ತಿ ತುಳಿದು ಮಧುರೆಯಲ್ಲಿಹತ್ತು ಒಂದು ವಯದ ಬಾಲ ಮುತ್ಯಾ ಮಾತೆಯರನು ಕಾಯ್ದ 4 ಕೂಸುಪಿಡಿಯಿತು ಪೂಥಣಿಯ ಮೊಲೆಯ ತಾಸು ತಿಂದಿತುಈ ಶರೀರದೊಳಗೆ ತಾಟಕಾಸುರೀಯ ಕೊಂದ ಇಂದಿರೇಶಅದ್ಭುತಾವದಿದರೊಳಾರು ಪೇಳೊ ದಾಶರಥಿಯೆ 5
--------------
ಇಂದಿರೇಶರು
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿನ್ನ ವಿ- ಶಿಷ್ಟ ಮಹಿಮೆಗಳನು ಭಕ್ತರಿಗೆ ಬಂದಾ ಕಷ್ಟ ಕಳೆಯುವೆಯೋ ನೀನು ಸುರಕಾಮಧೇನು ವಿಷ್ಣುವೇ ಪರದೈವವೆಂದು ದುಷ್ಟರಾಕ್ಷಸರನ್ನೆ ಕೊಂದು ಸೃಷ್ಟಿಪಾಲಿಪ ಶ್ರೀ ರಮೇಶನೇ ಇಷ್ಟ ಭಕುತರೊಳು ಶ್ರೇಷ್ಠನೆನಿಶಿದಿ ಪ ತಾಯಿಯೂ ಬಂದು ಸೇವೆಗೆ ರಘುಪತಿ ರಾಯನಲೆ ನಿಂದು ಬಯಸಲಿಲ್ಲಾ ಒಂದು ಶ್ರೀಹರಿಗೆ ಬಂದು ಕಾಯಬೇಕು ಸುಗ್ರೀವನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯ ಉ- ಪಾಯದಿಂದಲಿ ಕೊಲಿಸಿ ರವಿಜಗೆ ಸ- ಹಾಯ ಮಾಡಿದಿ ವಾಯುತನಯನೆ 1 ಕಡಲ ಬೇಗನೆ ಹಾರೀ ಶ್ರೀರಾಮನ ಮಡದಿಗುಂಗುರ ತೋರಿ ಅಲ್ಲಿದ್ದ ಅಸುರರ ಜಡಿದೆ ಬಲು ಹೊಂತಕಾರಿ ಮಾಡಿಯೊ ಸೂರಿ ಒಡೆಯಗ್ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರ ಹೊಡೆಸಿದಾಕ್ಷಣ ಲೋಕಮಾತೆಯ ಒಡಗೂಡಿಸಿದೆಯೋ ಶ್ರೀರಾಮಚಂದ್ರಗೆ 2 ಮೂರು ರೂಪವ ತಾಳ್ದಿ ಮಹಯೋಗ್ಯ ಜನರಿಗೆ ಸಾರ ತತ್ವವ ಪೇಳ್ದಿ ಶರಣ್ಹೊಕ್ಕ ಜನರಪಾರ ದುಃಖವ ಶೀಳ್ದಿ ಮೊರೆಯ ಕೇಳ್ದಿ ಧೀರ ಕದರುಂಡಲಗಿ ಹನುಮಯ್ಯ ಸೇರಿದೆನೊ ನಿನ್ನಂಘ್ರಿ ಕಮಲವ ಗಾರು ಮಾಡದೆ ಸಲಹೊ ಕರುಣವಾರಿಧಿ ನೀಯೆನ್ನನೀಗಲೆ 3
--------------
ಕದರುಂಡಲಗಿ ಹನುಮಯ್ಯ
ಎಷ್ಟು ಪೊಗಳಲಿ ನಾನು ಎನ್ನೊಡೆಯ ನಿಮ್ಮ ವಿ- ಶಿಷ್ಟ ಮಹಿಮೆಗಳನು ಸುಜನರಿಗೆ ಬಂದ ಕಷ್ಟವಳಿಯಲ್ಕೆ ನೀ ಸುರಕಾಮಧೇನು ಪ ವಿಷ್ಣುವೆ ಪರಮದೈವವೆಂದು ದುಷ್ಟ ರಾಕ್ಷಸರ ಕೊಂದೆ ಸೃಷ್ಟಿಸಿ ಪಾಲಿಪ ಶ್ರೀರಾಮರ ಇಷ್ಟ ಭಕ್ತರೊಳು ಶ್ರೇಷ್ಠನೆಂದೆನಿಸಿದೆ ಅ ತಾಯಿಯಪ್ಪಣೆಗೊಂಡು ಸೇವೆಗೆ ರಘುಪತಿ ರಾಯನಲ್ಲಿ ನಿಂದು ತನ್ನಾತ್ಮ ಸುಖ ಬಯಸೆನೆಂದು ಶ್ರೀ ಹರಿಗೆ ನುಡಿದುಕಾಯಬೇಕು ಸುಗ್ರೀವನನೆನುತಲಿ ತೋಯಜಾಕ್ಷಗೆ ಪೇಳಿ ವಾಲಿಯನು ಪಾಯದಿಂದಲಿ ಕೊಲ್ಲಿಸಿ ರವಿಜಗೆ ಸ- ಹಾಯ ಮಾಡಿದೆ ವಾಯುತನಯ1 ಶೌರಿ ಒಡೆಯಗೆ ವಾರ್ತೆಯ ಪೇಳಿ ಶೀಘ್ರದಿ ನಡೆಸಿ ಸೈನ್ಯವ ದಶಮುಖನ ಶಿರವ ನೊಡಿಸಿದಾಕ್ಷಣ ಲೋಕಮಾತೆಯ ನೊಡಗೂಡಿಸಿದೆ ಶ್ರೀವಾಸುದೇವರಿಗೆ 2 ಸಾರ ತತ್ತ್ವವ ಪೇಳ್ದೆ ಶರಣು ಹೊಕ್ಕ ಮನುಜರ ಘೋರ ದುರಿತವ ಸೀಳ್ದೆ ಧೀರ ತನು ಧುರದುಂಡಿ ಹನುಮಯ್ಯರಿಂ ಸೇವಿಸಿದ ನಿಮ್ಮಂಘ್ರಿ ಕಮಲವದೂರ ಮಾಡದೆ ಎನ್ನ ಸಲಹಯ್ಯ ಕರುಣಾವಾರಿಧಿ ಕಾಗಿನೆಲೆಯಾದಿಕೇಶವ ಮುತ್ತತ್ತಿ ದೊರೆಯೆ3
--------------
ಕನಕದಾಸ
ಎಷ್ಟು ಪ್ರೀತಿಯೊ ಮನಕೆ ಎಷ್ಟು ಪ್ರೀತಿಯೊ ಪ ಇಷ್ಟವೆಂದು ತಿಳಿದು ಈ ಕಷ್ಟ ಸಂಸಾರ ಹೊರುವುದು ಅ ಹಸಿವು ತೃಷೆಯು ಶೋಕ ಮೋಹ ಅಸುವಗೊಂಬ ಜನನ ಮರಣವಿಷ ಸಮಾನವಾದ ಬಹಳ ವ್ಯಸನ ಮೆರವಣಿಮುಸುಕಿ ಕವಿವ ವ್ಯಾಘ್ರದಂತೆ ಅಡಗಿ ಮುಪ್ಪುಗೊಂಬ ರೋಗವಿಷಯದೊಳಗೆ ಕ್ಲೇಶಪಟ್ಟು ವಿಷಯದಿಚ್ಛೆ ಬಿಡದ ಮನಕೆ 1 ನೀರಗುಳ್ಳೆ ಎನಿಪ ಕಣ್ಣ ನೀರಜಾಕ್ಷಿ ಎಂದು ಮತ್ತೆಸೋರುವ ಜಘನ ಕರಿಯ ಕುಂಭ ಸುರಿವ ಶ್ಲೇಷ್ಮದಮೋರೆ ಚಂದ್ರಬಿಂಬ, ಮಾಂಸವಿಕಾರವಾದ ಕುಚವ ಕನಕಕಲಶಸಾರವೆಂದು ನರಕರೂಪಿನ ನಾರಿಯರಿಗೆ ಭ್ರಮಿಸಿ ಬಾಳ್ವುದು2 ಕುಸುಮ ಗಂಧಮಾಲೆ ಕಸ್ತೂರಿಯನು ಪೂಸಿಕೊಂಡುವಸ್ತ್ರ ಒಡವೆ ಇಟ್ಟು ಬಹಳ ಶಿಸ್ತು ನರಕಿಯೆನಿಸಿ ಮೆರೆವುದು3 ಕಾಯ ಸೌಖ್ಯದಿಆಯಾಸಪಟ್ಟು ಗಳಿಸಿದರ್ಥ ಹೇಯವೆನದೆ ಭೋಗಿಸುತ್ತಬಾಯ ಸವಿಯನುಂಡು ಕಡೆಗೆ ನಾಯ ಸಾವು ಸಾಯೋ ಬಾಳಿಗೆ 4 ಮನ್ನಿಸಿ ಗುರುಹಿರಿಯರುಕ್ತಿಯನ್ನು ಕೇಳದೆ ಕಿವುಡುಗೆಟ್ಟುಜೊನ್ನೆಯ ತುಪ್ಪ ಅನ್ನ ಒಲ್ಲದೆ ಎಲುವು ಮಾಂಸವನ್ನು ತಿಂಬಕುನ್ನಿಯಾದೆನಯ್ಯ ಕೃಷ್ಣ ನಿನ್ನ ಮಾಯದೊಳು ಸಿಲ್ಕಿದಎನ್ನನುದ್ಧರಿಸೊ ಸುಪ್ರಸನ್ನ ಆದಿಕೇಶವ5
--------------
ಕನಕದಾಸ
ಎಷ್ಟು ಭಾಗ್ಯ ಎಷ್ಟು ಭಾಗ್ಯಕೃಷ್ಣನ ಮುಖವ ದಿಟ್ಟಿಸಿ ನೋಡಿ ಸುಖಿಸುವ ಸಭೆಯ ಜನರು ಪ. ಕಡಗ ಸರಪಳಿಯು ದಿವ್ಯ ಬೆಡಗಿನಾಭರಣಮುಕುಟ ಕಡಿಗಂಟೆ ಮುತ್ತುಗಳ ಜಡವುತಕಡಿಗಂಟೆ ಮುತ್ತುಗಳ ಜಡವುತಲಿ ರಂಗನಾಯಕನ ಎಡಬಲದಿ ಕುಳಿತ ಅರಸಿಯರು ಸಖಿಯೆ 1 ಕೆತ್ತಿಗೆ ಕುಸುರಾದ ಉತ್ತಮ ಆಭರಣಗಳುಮುತ್ತಿನ ಮಾಲೆಗಳು ಅಲಗುತಮುತ್ತಿನ ಮಾಲೆಗಳು ಅಲಗುತ ರಂಗಯ್ಯನ ಹತ್ತಿರ ಕುಳಿತ ದೊರೆಗಳು ಸಖಿಯೆ2 ಕುಂಡಲ ಮಂಡಿತ ಪಂಡಿತರೆಲ್ಲರುಭೂಮಂಡಲ ಪತಿಯ ಸ್ತುತಿಸುತ ಭೂಮಂಡಲ ಪತಿಯ ಸ್ತುತಿಸುತ ಸಭೆಯಲಿತಂಡ ತಂಡದಿ ಕುಳಿತಾರೆ ಸಖಿಯೆ 3 ಋಗ್ವೇದಾದಿಗಳೆಲ್ಲರು ಶಬ್ದವಾದದಿಂದಲಿರುಕ್ಮಿಣಿ ಪತಿಯ ಸ್ತುತಿಸುತರುಕ್ಮಿಣಿ ಪತಿಯನೆ ಸ್ತುತಿಸುತ ಸಭೆಯಲಿಹಿಗ್ಗಿ ಹರುಷದಲಿ ಕುಳಿತಾರೆ ಸಖಿಯೆ 4 ಮಿಂಚು ಮಡಿಯುಟ್ಟು ಪಂಚ ಮುದ್ರೆಯನೆ ಧರಿಸಿ ಚಂಚಲಾಕ್ಷನ ಸಭೆಯೊಳು ಚಂಚಲಾಕ್ಷನ ಸಭೆಯೊಳು ಜೋಯಿಸರುಪಂಚಾಂಗ ಹೇಳುತ ಕುಳಿತಾರೆ ಸಖಿಯೆ 5 ತಾಳ ಮದ್ದಳೆ ದಿವ್ಯ ಮೇಲೆ ತಂಬೂರಿಯವರು ಮೇಲು ಸ್ವರದಿಂದ ಸಭೆಯೊಳುಮೇಲು ಸ್ವರದಿಂದ ನುಡಿಸುತ ಕುಳಿತಾರೆ ಕಾಳಿ ಮರ್ದನನ ಸಭೆಯೊಳು ಸಖಿಯೆ 6 ಚಲುವ ರಾಮೇಶನ ಆದರದಿ ಸ್ತುತಿಸುತಲೆವೇದಗೋಚರನ ಸಭೆಯೊಳು ವೇದಗೋಚರನ ಸಭೆಯೊಳಗೆ ಹರುಷದಿಯಾದವರೆಲ್ಲ ಕುಳಿತಾರೆ ಸಖಿಯೆ 7
--------------
ಗಲಗಲಿಅವ್ವನವರು
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಎಷ್ಟು ಸುಸ್ವರ ಊದುತಿಹನಮ್ಮ ಶ್ರೀಕೃಷ್ಣ ಕೊಳಲನ ಪ ಎಷ್ಟು ಸುಸ್ವರ ಊದುತಿಹನೋ ಗೋಷ್ಠಿಯೊಳು ಗೋವುಗಳಕಿವಿಗಳು ನೆಟ್ಟನಿಲ್ಲಿಗೆ ಕೇಳಿ ಮೋದದಿ ಕಟ್ಟಿದೆಲೆ ಕಣ್ಣಿಗಳಹರಿವವೊಅ.ಪ ತರಣಿ ತನುಜನ ತೀರದಲ್ಲಿಹನೆ ಕೊರಳೊಳಗೆ ಕೌಸ್ತುಭಹರಳಿನಿಂದ ಜಗವ ಬೆಳಗುವನೆ ಕುರುಳು ಕುಣಿಸುತಬಾಲಬಿಂಬದಿಕರ್ಣಕುಂಡಲ ಗಂಡ ಸುಪ್ರಭ ಮರುಳು ಮಾಡುತಮೂರು ಲೋಕವಸಿರಿಯ ಮೋಹಿಪ ಪರಮ ಪುರುಷನು1 ನಗ ಮುರಿಗೆ ತೋಡೆ ಸುಹಾರಭೂಷಿತಉರದಿ ಕುಳಿತಿಹ ಸಿರಿಯ ಮೋಹಿಪ 2 ಅರಗೀಮನೆ ಬಾಂಧವರು ಬೇಕೆ ನಿಜ ಪತಿಗಳೆಮ್ಮನುಮೀರಿ ಪೋದರು ಅಂದರೆನಲೇಕೆ ಮಾರನಯ್ಯನ ಮುರಲಿಸುಸ್ವರಸಾರಿ ಮನಸಪಹಾರ ಮಾಡಿತು ನಾರಿ ಮಣಿಯರೆ ಕ್ಷಣವುತಡೆಯದೆವಾರಿಜಾಸನ ವನಕೆ ತೆರಳಿರೆ 3 ಎಷ್ಟು ಜನ್ಮದ ಪುಣ್ಯವಿರುತಿಹದೆ ಈ ಮುರಲಿ ಬಾಲನಪುಟ್ಟತುಟಿಯಲಿ ಸುಧೆಯ ಸುರಿಸುವದೇಸೃಷ್ಟಿರವ ಬಳ್ಳಿಮನದಲಿ ವೃಷ್ಟಿಹಿಡಿಸದೆ ಕುಸುಮಫಲಗಳುವೃಷ್ಟಿಯಿಂದಲೆ ಹೊರಗೆ ಚೆಲ್ಲುತ ಅಭೀಷ್ಠೆ ಸುರಿಸುತಪೇಳುತಿಹವೊ 4 ಅರುಣನಂದಧಿ ಅದರ ಸೌಭಗವೊ ವನ ನಿಲಯ ಮೃಗಗಳುತೊರೆದು ವೈರವ ಸುತ್ತು ನಿಂತಿಹವೋ ಹರುಷದಲೆ ಮನತೊರೆದು ನಿಲ್ಲಲು ಇಂದಿರೇಶನ ತರುಣಿಯರು ಪೋಗೋಣ ನಡೆಯಿರಿ 5
--------------
ಇಂದಿರೇಶರು
ಎಸೆವ ಸಮುದ್ರವ ಮಥನ ಮಾಡಿತಯ್ಯಾ ನಿನ್ನ ನಾಮ ಹರಿ ಶಶಿಧರ ಶಿವನಿಗೆ ಶಾಂತಿಮಂತ್ರಾಯ್ತಯ್ಯಾ ನಿನ್ನ ನಾಮ ಪ ಚೋರನೆನಿಸಿವನ ಸೇರಿಕೊಂಡವನಿಗೆ ನಿನ್ನ ನಾಮಾ ಪಾರ ಜ್ಞಾನವಿತ್ತು ಮುಂದಕ್ಹಾಕಿತಯ್ಯಾ ನಿನ್ನ ನಾಮ1 ಮೀರಿದ ನಿನ್ನ ಮಾಯೆಗೆ ಸಿಲ್ಕಿದ್ಯೆತಿವರಗೆ ನಿನ್ನ ನಾಮ ಭೂರಿಕರುಣದಿನೆರಗಿ ರಕ್ಷಿಸಿತಯ್ಯಾ ನಿನ್ನ ನಾಮ 2 ಅಮೃತ ಮಾಡುಣಿಸಿ ಪಾಲಿಸಿತಯ್ಯಾ ನಿನ್ನ ನಾಮ 3 ಕಡುರೋಷದೆಸೆದ ವಜ್ರಾಯುಧದೆಚ್ಚೆ ನಿನ್ನ ನಾಮ ಸಿಡಿ ಮುಳ್ಳಿಗಿಂತ ಕಡೆಮಾಡಿಬಿಟ್ಟಿತಯ್ಯಾ ನಿನ್ನ ನಾಮ 4 ನೂರುಯೋಜನದ ವಿಸ್ತೀರ್ಣದ್ವಾರಿಧಿಯ ನಿನ್ನ ನಾಮ ತೋರಿಸಿತೊಂದು ಕಿರಿ ಸರೋವರ ಸಮಮಾಡಿ ನಿನ್ನ ನಾಮ 5 ಮೀರಿದ ದೈತ್ಯರಪಾರಂಗರುವಮಂ ನಿನ್ನ ನಾಮ ಹೀರಿ ಕ್ಷಣದಿ ಸುರಲೋಕ ಸೇರಿಸಿತಯ್ಯಾ ನಿನ್ನ ನಾಮ 6 ತ್ರಿಣಯರ್ಹೊಗಳಲು ಶಕ್ತಿ ಸಾಲದ ಪಟ್ಟಣ ನಿನ್ನ ನಾಮ ಅಣುಗಿಂತ ಅಣುಮಾಡಿ ತೋರಿಸಿತ್ಹನುಮಂಗೆ ನಿನ್ನ ನಾಮ 7 ಅಸಮಪರಾಕ್ರಮ ಅಸುರಕುಲಾಳಿಯಂ ನಿನ್ನ ನಾಮ ನಶಿಸೆ ಶಿವಪುರ ಭಸ್ಮಮಾಡಿತಯ್ಯಾ ನಿನ್ನ ನಾಮ 8 ಪಕ್ಷಿಗಮನ ಪಾಂಡುಪಕ್ಷನೆನಿಸಿತಯ್ಯಾ ನಿನ್ನ ನಾಮ ಅಕ್ಷಯಾಂಬರವಿತ್ತು ಸತಿಯ ರಕ್ಷಿಸಿತಯ್ಯಾ ನಿನ್ನ ನಾಮ 9 ಕಾದು ದಳ್ಳುರಿಹತ್ತಿದೆಣ್ಣೆ ಕೊಪ್ಪರಿಗೆಯ ನಿನ್ನ ನಾಮ ಸುಧನ್ವಂಗನುಪಮ ಶೀತಲವೆನಿಸಿತು ನಿನ್ನ ನಾಮ 10 ಅರಿತು ಭಜಿಪರ ಭವರೋಗಕ್ವೈದ್ಯೆನಿಸಿತು ನಿನ್ನ ನಾಮ ಅರಿದು ಭಜಿಪೆ ನಿನ್ನವರ ಮುಕ್ತಿ ಕರುಣಿಸೋ ಸಿರಿರಾಮ 11
--------------
ರಾಮದಾಸರು
ಏ ರಂಗಧಾಮ ರಂಗ ಏ ರಂಗಧಾಮ ಪ. ನಾರುವ ಮೈಯವನತ್ತ ಸಾರು ಮುಟ್ಟದಿರೊ ಎನ್ನ ದೂರನಿಲ್ಲು ತರವಲ್ಲ ಏ ರಂಗಧಾಮ ಧೀರ ಮತ್ಸ್ಯರೂಪಕಾಣೆ ಎಲೆ ಸತ್ಯಭಾಮೆ 1 ಚೆಂದವಂತನೆಂದು ನಾ ಬಂದೆ ತರ್ಕಿಸಿ ನಿನ್ನ ಬೆನ್ನು ಡÉೂಂಕಿದೇನೋ ಪೇಳೋ ಏ ರಂಗಧಾಮ ಮಂದರ ಮುಳುಗೆ ಕೂರ್ಮ ಎಲೆ ಸತ್ಯಭಾಮೆ 2 ನೋಡಿದರೆ ಮೈಯೊಳಗೆ ಮೂಡಿರುವ ರೋಮಗಳು ಗಾಡಿಕಾರ ನೀನಾರಯ್ಯ ಏ ರಂಗಧಾಮ ಕ್ರೋಡರೂಪದಿಂದಿಳೆಯ ದಾಡೆಯ ಮೇಲಿಟ್ಟು ತಂದ ಕಾಡವರಾಹನು ಕಾಣೆ ಎಲೆ ಸತ್ಯಭಾಮೆ 3 ಮನುಷ್ಯಾಗಿದ್ದಮೇಲಣಕಾನನದ ಮೃಗರಾಜ ಆನನವಿದೇನೊ ಪೇಳೊ ಏ ರಂಗಧಾಮ ಮಾನಿನಿ ಕೇಳೆ ಪ್ರಹ್ಲಾದನ್ನ ಮಾನಭಂಗಕ್ಕೊದಗಿದ ಶ್ರೀ ನರಸಿಂಹ ಕಾಣೆ ಎಲೆ ಸತ್ಯಭಾಮೆ 4 ದೊರೆತನವುಳ್ಳವನೆಂದು ಮರುಳುಗೊಂಡೆ ನಾ ನಿನಗೆ ತಿರುಕನೆಂಬೋದರಿಯದಾದೆನೊ ಏ ರಂಗಧಾಮ ತರಳೆ ಸುರರಿಗಾಗಿ ಬಲಿಯ ತುಳಿದು ಪಾತಾಳಕೊತ್ತಿದ ಗರುವ ವಾಮನ ಕಾಣೆ ಎಲೆ ಸತ್ಯಭಾಮೆ 5 ಅಡವಿಯೊಳು ಕಟ್ಟಿಗೆಯ ಕಡಿವವನಂತೆ ಕೊಡಲಿಯ ಪಿಡಿವುದೇನೊ ಪುಣ್ಯವಾಸ ಏ ರಂಗಧಾಮ ಮಡುಹಿ ಕ್ಷತ್ರೇರನೆಲ್ಲ [ಮುದದಿ] ಸೇರ್ದ ಮಾತೆಗಾಗಿ ಒಡೆಯನಾದ ಪರಶುರಾಮ ಎಲೆ ಸತ್ಯಭಾಮೆ 6 ಊರಬಿಟ್ಟರಣ್ಯವನು ಸೇರಿ ಮುನಿಗಳಂತಿಪ್ಪ [ಕಾರಣ]ವಿದೇನೊ ಪೇಳೊ ಏ ರಂಗಧಾಮ ಕ್ರೂರರಾವಣನ ಗೆಲಿದು ನಾರಿಸೀತೆಯನು ತÀಂದ ಧೀರರಾಘವನು ಕಾಣೆ ಎಲೆ ಸತ್ಯಭಾಮೆ 7 ವಲ್ಲಭೆಜನರಿಗೆಲ್ಲ ನೀ ವಲ್ಲಭನಾಗಿ ಗೊಲ್ಲನಂತೆ ಗೋವ ಕಾಯುವ ಕಾರಣವೇನೊ ಏ ರಂಗಧಾಮ ಬಿಲ್ಲಹಬ್ಬಕ್ಕೆ ಹೋಗಿ[ಮಲ್ಲ] ಕಂಸನ ಕೊಂದ ಬಲ್ಲಿದ ಶ್ರೀಕೃಷ್ಣ ಕಾಣೆ ಎಲೆ ಸತ್ಯಭಾಮೆ 8 ನಗೆಗೀಡು ಮಾಡಿಕೊಂಡು ದಿಗ್ವಸನನಾಗಿ ನಿಂತ ಹಗರಣವಿದೇನೊ ಪೇಳೊ ಏ ರಂಗಧಾಮ ಮಿಗೆ ಮೂರುಪುರದ ಸತಿಯರ ವ್ರತವ ಕೆಡಿಸಿ ಜಗವ ಮೋಹಿಸುವ ಬೌದ್ಧ ಎಲೆ ಸತ್ಯಭಾಮೆ 9 ಕರದಿ ಖಡ್ಗವನೆ ಪಿಡಿದು ತರಳ ಅಶ್ವವನೇರಿ ತಿರುಗುವುದಿದೇನು ಪೇಳೊ ಏ ರಂಗಧಾಮ ವರ ಹಯವದನ ಹರುಷದಿಂದಲಾಡಿ ಪಾಡಿ ಕಲ್ಕಿಯಾದೆ ಹರಿಲೋಚನೆ ಎಲೆ ಸತ್ಯಭಾಮೆ 10
--------------
ವಾದಿರಾಜ
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏಕಿಷ್ಟು ಕರುಣವೊ ಶ್ರೀಕೃಷ್ಣದೇವ ಪ ನಾಲ್ಕ್ಹತ್ತು ಲೋಕದಲಿ ಸುಖ ಸೂರೆ ಮಾಳ್ಪೊ ಹರಿ ಅ.ಪ ಮುಕ್ತಗಣ ನೋಡಯ್ಯ ನಿತ್ಯಮುಕ್ತಳ ನೋಡು ಶಕ್ತವಿಧಿ ವಾಣೀಶ ಭಕ್ತಿ ದೇವ ಫಣಿ ರುದ್ರ ಇವರ ಸತಿಯರ ನೋಡು ಉತ್ತಮೋತ್ತಮ ಸುಖವ ಸೂರೆಗೊಂಬರೊ ಹರಿಯೆ 1 ನಿನ್ನಾರು ಮಹಿಷಿಯರ ಸುರಪ ಸುರಗಣ ನೋಡು ಪುಣ್ಯತಮ ಸುರಮನಿಯ ಭೃಗುವ ನೋಡು ಚಿಣ್ಣ ಪ್ರಹ್ಲಾದನನ್ನ ಬಲಿ ಧ್ರುವ ಭೀಷ್ಮನ್ನ ಇನ್ನು ದ್ರೌಪದಿ ಶುಕನ ಆನಂದ ನೋಡಂiÀi್ಯ 2 ಅಂಬರೀಷನ ನೋಡು ರಾವಣಾನುಜ ಜನಕ ಪರೀಕ್ಷಿತ ವೃತ್ತ ಶಬರಿ ತುಂಬಿದ ಸದ್ಭಕ್ತ ಋಷಿಪತ್ನಿಯರ ನೋಡು ಕಂಬನಿಯ ಸುರಿಸುವೆನೊ ಕರುಣಿಸೊ ಹೃದ್ಗøಹದಿ 3 ನೀಯೆನ್ನ ಸತ್ವ ನೀಯೆನ್ನ ಜ್ಞಾನ ನೀಯೆನ್ನ ಮನ ಬುದ್ಧಿ ಕರುಣ ನಿಧಿಯೆ ನೀಯೆನ್ನ ಪ್ರಾಣರತಿ ನೀಯೆನ್ನ ಸತ್ಕರಣ ನೀಯೆನ್ನ ಧೃತಿ ಶಾಂತಿ ನೀಯೆನ್ನ ಸರ್ವನಿಧಿ 4 ನೀ ಮಾಡೆ ನಾ ಮಾಳ್ಪೆ ನೀನಾಡಿಸಿದರಾಡ್ವೆ ಕಾಮದನೆ ಕಾಮಪಿತ ಜಯೇಶವಿಠಲ ಶ್ರೀ ರಮಣ ಸರ್ವೇಶ ಈ ಮನಸು ನಿನ್ನಲ್ಲಿ ಪ್ರೇಮದಿ ನೆಲಸಿ ಇರುವಂತೆ ಕೃಪೆಮಾಡು 5
--------------
ಜಯೇಶವಿಠಲ
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನು ಕರುಣವೊ ಕೃಷ್ಣ ಎಮ್ಮ ಮೇಲೆ ಪ ನಾನಾಪತ್ತುಗಳ ಕಳೆದು ಸಲಹಿದೆಯೊ ಅಕಳಂಕ ಅ.ಪ. ಕೌರವ ಕೊಟ್ಟ ಪರಿಪರಿಯ ಕಷ್ಟಗಳ ಪರಿಹರಿಸಿ ನೀ ಕಾಯ್ದೆ ಪರಮ ಕರುಣಿ ಅರಗಿನ ಮನೆಯಲಿ ಉರಿದುಪೋಗದ ತೆರದಿ ಭರದಿಂದ ರಕ್ಷಿಸದೆ ಭೀಮನೊಳು ನೀನಿದ್ದು 1 ಕಾನನದಿ ನಾವ್ ನಿದ್ರೆಗೈಯುತಿರೆ ಕಡುಘೋರ ದಾನವ ಹಿಡಿಂಬಕನು ಕೊಲ್ಲ ಬರಲು ಪ್ರಾಣಸುತ ನಮ್ಮ ಈ ಭೀಮನಿಗೆ ಬಲಕೊಟ್ಟು ಹೀನಖಳನನು ಸೋಲಿಸಿ ಕಾಯ್ದೆ ಸ್ವಾಮಿ 2 ಲೋಕಕಂಟಕನಾದ ಭೀಕರ ಬಕಾಸುರನ ನೀ ಕೊಂದು ಈ ವೃಕೋದರನಲಿ ನಿಂದು ಏಕಚಕ್ರಪುರದ ಲೋಕವನು ನೀ ಕಳೆದೆ ಏಕಮೇವಾದ್ವಿತೀಯ ಶ್ರೀ ಕರಿಗಿರೀಶ 3
--------------
ವರಾವಾಣಿರಾಮರಾಯದಾಸರು
ಏನು ಕಾರಣವಿಲ್ಲೆ ನಿಂದೇ ಅಶ್ವತ್ಥ ಶ್ರೀ ನಾರಸಿಂಹೆನಿಸಿ ಅಜಭವರ ತಂದೇ ಪ ಹೊರೆಯ ಲೈತರಲು ಹಂಬಲಿಪ ಪ್ರಲ್ಹಾದಿಲ್ಲ | ಹಿರಣ್ಯ ಕಾಸುರನಿಲ್ಲ | ಸುರರಿಗುಪಟಳವೇನು ಇಲ್ಲ ಸ್ತಂಭ | ಬಿರಿದು ದೋರುವ ಅಹೋಬಲದ ಸ್ಥಳವಲ್ಲ 1 ಸಿರಿಯ ಮೋಹನ ನಿಮ್ಮ ರೂಪವನೆ ಆವರಿಸಿ | ಮರದ ಪೇರ್ಗಳೆಪಾದ ಕೊಂಬುಗಳ ಕರಧರಿಸಿ | ಸಿರಸಾಗ್ರ ಮಧ್ಯುದರ ವೆರಸೀ ಪರ್ಣ| ದಿರುವ ಅವಯವ ಮಾಡಿ ಪಾದರ್ಪೆದ್ರನಿಸೀ2 ಧರೆಗಧಿಕ ಸುಕ್ಷೇತ್ರ ಶೂರ್ಪಾಲಯವೆ ನೋಡಿ | ಮೆರೆಯುತಿಹ ಕೃಷ್ಣ ವೇಣಿಯ ತೀರದಲಿ ಮೂಡಿ | ಹರಗರುಡ ಗಣಪರೋಡಗೂಡಿ ನಲಿವ | ಗುರುಮಹಿಪತಿ ಸ್ವಾಮಿ ಕಾಯೋದಯ ಮಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು