ಒಟ್ಟು 1194 ಕಡೆಗಳಲ್ಲಿ , 98 ದಾಸರು , 911 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭೀಮಸೇನನ ಸ್ತ್ರೀವೇಷ ಭೀಮನು ಸರ್ವಜನಾ ಮೋಹಿಸುವಂಥಕಾಮಿನಿ ರೂಪವ ತೊಟ್ಟನು ಪ ಸೋಮ ಸಮಾನನ ತಾಮರಸಾಂಬಕಹೇಮಾಂಬರ ಕಂಠೀಮಣಿ ಗಣ ಸು -ತ್ರಾಮ ಕಾಮಿನಿಯಾ ಮೋಹಿಪ ಅಬಿ -ರಾಮರೂಪ ನಿಸ್ಸೀಮ ಬಲಾಢ್ಯ ಅ.ಪ. ಬಟಕುಚಪಟ ಕರಪುಟದಿಂದ ಹಿಗ್ಗಿಸಿ ತೀಡುತ ಅಂ-ಗುಟ ತುದಿಲೆಳೆದೆಳೆದುಟಿ ರಕ್ತಿಮೆಯನು ನೋಡುತಕುಟಿಲಾಳಕನ್ಯಾವರಿಸುತ ಪಟುಮಾತಾಡುತವಿಟರಿಗೆ ಸ್ಮರಸಂಕಟವನು ಹೃದಯದಲೂಡುತ ಪುಟ್ಟಚಂಡ ಹಾರಿಸಿ ನಟನೆ ಮಾಡುವಾ -ರ್ಭಟಕಂಜಿಹ ವಿಟಪಟಲ ಹಾಂಗಿರಲದುವಟುರಿದ್ದರು ಯತಿ ಮಠಮಂದಿರ ಲಂ -ಪಟವ ಬಿಟ್ಟ ಮಿಟಿಮಿಟಿ ನೋಡುವರೋ 1 ಕರಿಕಲಭಗಮನ ಸೊರಗಿದ ಕಟಿಕಂಠೀರವುವಿಠಲ ನಯನಜತ ಎರಳೆಗಳ್ ಮನೆಯನು ಸೇರವುಸರಸ ಸ್ವರದಿಂದ ಪರಿಭ್ರಮಿಸಿತು ಕಲಕಿರವುಸುರನರವರ ಸುಂದರಿಯರ ಚಲುವಿಕೆ ಮಾರವು ಹೆರಳ್ ಬಂಗಾರವು ಮಲ್ಲಿಗೆ ಸರಗೀ ಸರಹರಳ್ ಕಂಕಣ ಬಳೆ ಸರಳ್ ಬೆರಳುಂಗುರಅರಳ್ ಮಲ್ಲಿಗೆ ಸರ ಕೊರಳ್ ಗಂಧವ ಕಂಡುಮರುಳ್‍ಗೊರಡ ಜನ ಹಗಲಿರುಳು ಧೇನಿಪರೊ 2 ಮೃಗಮದತಿಲಕವು ಮುಗುಳ್ ನಗೆಮೊಗ ಬಿಂಬಾಧರಖಗಯುಗದಂದದಿ ಝಗಝಗಿಸುತಿಹ ಪಯೋಧರಅಘಹರ ರಾಜಗೋಪಗ ಸಖ ಪಾರ್ಥ ಸಹೋದರಬಗೆ ಬಗೆಯಲಿ ಮನದಗ ಅಘಹರನ ಕೃತಾದರಮುಗುಳ್ ಮಲ್ಲಿಗೆ ಸರ ತೆಗೆತೆಗೆದ್ಹಾಕುತಸೊಗಸು ಸುಗುಣರೂಪ ತಗುಬುಗಿಲೆನುತಿರೆಜಗದ ಜನರ ಮನ ಭುಗಿಭುಗಿಲೆನುತಿರೆಬಗೆ ಬಗೆಯಲಿ ಒಂದ್ಹಗಲ್ಯುಗವಾಗೆ 3
--------------
ರಾಜಗೋಪಾಲದಾಸರು
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಭುವನದೊಳಗೆ ಒಬ್ಬ ಶಿವಯೋಗಿನಾ ಕಂಡೆ ಅವತರಿಸಿರುವನದ್ಯಾರಮ್ಮಾ ಪ ತುಂಬಿ ನಡುನಾಡಿಯೊಳಗಾಡೊ ಪವನರೂಪನ ಬೇಗ ತೋರಮ್ಮಾ ಅ.ಪ ಉಪಜೀವಿಯನು ಕಂಡು ಉಷ್ಣಶೀತವನಳಿದು ತಪಸು ಮಾಡುವನ್ಯಾರದೇಳಮ್ಮಾ ಅಪಮೃತ್ಯುವನು ಕಂಡು ಆನಂದವನು ಬಿಟ್ಟಾ ವಿಪರೀತವೇನಿದು ಹೇಳಮ್ಮಾ 1 ಬುದ್ಧಿ ಮನಸು ಚಿತ್ತ ಅದ್ವಯವನು ಮಾಡಿ ಇದ್ದನಹುದು ಆತಾ ಕಾಣಮ್ಮಾ ಮದ್ಗುರುವಾದ ಶ್ರೀ ತುಲಶಿರಾಮದಾಸ ಪರೀಕ್ಷಿತ ಕಾಣಮ್ಮಾ 2
--------------
ಚನ್ನಪಟ್ಟಣದ ಅಹೋಬಲದಾಸರು
ಭೂಮಂಡಲಕೆ ಮಿಗಿಲೆನಿಸಿದ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಸಂಭ್ರಮದಿರಾಯನು ತುಂಬಿಸಿದ ಮನೆಯೊಳಗೆ ಉಂಬೊ ಪದಾರ್ಥ ಕೋಟಿ ಫಲಕದಳಿ ತಿಂಬೊ ಪದಾರ್ಥ ಕೋಟಿಷಡ್ರಸವೆಂಬೊ ಪದಾರ್ಥ ಕೋಟಿಈ ತೂಗಿಕೊಂಬ ಮಣಿಮಂಚ ಕೋಟಿ ತಾಯಿ1 ವಿತ್ತ ಕೋಟಿಯು ರಾಶಿ ರಾಯನಚಿತ್ತ ಸಂತೋಷ ರಾಶಿ 2 ಏಸುಮುನಿ ಬಳಗ ದಾಸರು ದಾಸಿಯರು ಬೀಸಿ ತೊಟ್ಟಿಲವ ತೂಗÀುವರುಮಕ್ಕಳನ ಸೋಸಿಲೆ ಕರೆದೊಯ್ಯುವರುಮಂಚದಲಿ ಹಾಸಿಗೆ ಹಾಸುವರು ರಾಯಗೆ ಈ ಬಗೆ ಸೇವಕರು ತಾಯೆ 3 ಎಲ್ಲ ಮನೆಯೊಳಗೆ ಮಲ್ಲಿಗೆ ಸಂಪಿಗೆ ಅಲ್ಲೆ ಕ್ಯಾದಿಗೆದವನವುಬುಕ್ಕಿಟ್ಟು ಅಲ್ಲಲ್ಲೆ ಶ್ರೀಗಂಧವುಎಲಿ ಅಡಕಿ ಅಲ್ಲಲ್ಲಿ ತಬಕಿಹೋದುರಾಯಗೆ ಈ ಬಗೆ ಸೇವಕರು ತಾಯೆ 4 ಆನೆಗಳು ಕಟ್ಯಾವ ಕುದರಿಯ ಸಾಲು ರಥಗಳು ಇಟ್ಟಾವ ಬಿಲ್ಲುಗಳು ಪಲ್ಲಕ್ಕಿ ಧಿಟ್ಟಾದ ವಯಿರಗಳು ರಮೆ ಅರಸಗಿಷ್ಟು ಉಪಚಾರಗಳು ತಾಯೆ 5
--------------
ಗಲಗಲಿಅವ್ವನವರು
ಭೂರಿ ನಿಗಮವ ಕದ್ದ ಚೋರದೈತ್ಯನ ಗೆದ್ದ ಸಾರ ವೇದಗಳ ವಿಧಿಗಿತ್ತ ಸಾರ ವೇದಗಳ ವಿಧಿಗಿತ್ತ ಮತ್ಸ್ಯಾವ- ತಾರಗಾರತಿಯ ಬೆಳಗಿರೆ 1 ವಾರಿಧಿ ಮಥನದಿ ನೀರೊಳು ಗಿರಿ ಮುಳುಗೆ ತೋರಿ ಬೆನ್ನಾಂತ ಸುರನುತ ತೋರಿ ಬೆನ್ನಾಂತ ಸುರನುತ ಕೂರ್ಮಾವ- ತಾರಗಾರತಿಯ ಬೆಳಗಿರೆ 2 ಧಾತ್ರಿಯ ಕದ್ದೊಯ್ದ ದೈತ್ಯನÀ ಮಡುಹಿದ ಎತ್ತಿ ದಾಡೆಯಲಿ ನೆಗಹಿದ ಎತ್ತಿ ದಾಡೆಯಲಿ ನೆಗಹಿದ ವರಾಹ- ಮೂರ್ತಿಗಾರತಿಯ ಬೆಳಗಿರೆ 3 ಕಡು ಬಾಲನ ನುಡಿಗೆ ಒಡೆದು ಕಂಬದೊಳುದಿಸಿ ಒಡಲ ಸೀಳಿದ ಹಿರಣ್ಯಕನ ಒಡಲ ಸೀಳಿದ ಹಿರಣ್ಯಕನ ನರಸಿಂಹ ಒಡೆಯಗಾರತಿಯ ಬೆಳಗಿರೆ 4 ಸೀಮಾಧಿಪತಿ ಬಲಿಯ ಭೂಮಿ ಮೂರಡಿ ಬೇಡಿ ಈ ಮೂರು ಜಗವ ಈರಡಿಯ ಈ ಮೂರು ಜಗವ ಈರಡಿ ಮಾಡಿ ಅಳೆದ ವಾಮನಗಾರತಿಯ ಬೆಳಗಿರೆ 5 ಅಂಬರಕೇಶನ್ನ ನಂಬಿದ ಕತ್ರಿಯರ ಸಂಭ್ರಮ ಕುಲವ ಸವರಿದ ಸಂಭ್ರಮ ಕುಲವ ಸವರಿದ ಪರಶುರಾ- ಮೆಂಬಗಾರತಿಯ ಬೆಳಗಿರೆ 6 ತಂದೆ ಕಳುಹಲು ವನಕೆ ಬಂದಲ್ಲಿ ಸೀತೆಯ ತಂದ ರಾವಣನ ತಲೆಹೊಯ್ದ ತಂದ ರಾವಣನ ತಲೆಹೊಯ್ದ ರಘುರಾಮ- ಚಂದ್ರಗಾರತಿಯ ಬೆಳಗಿರೆ 7 ಶಿಷ್ಟ ಯಮಳಾರ್ಜುನರಭೀಷ್ಟವ ಸಲಿಸಿದ ದುಷ್ಟ ಕಂಸನ್ನ ಕೆಡಹಿದ ದುಷ್ಟ ಕಂಸನ್ನ ಕೆಡಹಿದ ನಮ್ಮ ಶ್ರೀ ಕೃಷ್ಣಗಾರತಿಯ ಬೆಳಗಿರೆ 8 ರುದ್ರನ್ನ ತ್ರಿಪುರದೊಳಿದ್ದ ಸತಿಯರ ಬುದ್ಧಿ ಭೇದಮಾಡಿ ಕೆಡಿಸಿದ ಬುದ್ಧಿ ಭೇದಮಾಡಿ ಕೆಡಿಸಿ ಬತ್ತಲೆ ನಿಂದ ಬೌದ್ಧಗಾರತಿಯ ಬೆಳಗಿರೆ 9 ಪಾಪಿಜನ ಭಾರಕ್ಕೆ ಈ ಪೃಥ್ವಿ ಕುಸಿಯಲು ತಾ ಪಿಡಿದು ಖಡ್ಗ ತುರಗವ ತಾ ಪಿಡಿದು ಖಡ್ಗ ತುರಗವೇರಿದ ಕಲ್ಕಿ- ರೂಪಗಾರತಿಯ ಬೆಳಗಿರೆ 10 ಮುತ್ತೈದೆ ನಾರಿಯರು ಮುತ್ತಿನಾರತಿ ಮಾಡಿ ಹತ್ತವತಾರಿ ಹಯವದನ ಹತ್ತವತಾರಿ ಹಯವದನನ ಪಾಡುತ ಚಿತ್ರದಾರತಿಯ ಬೆಳಗಿರೆ 11
--------------
ವಾದಿರಾಜ
ಭ್ರಷ್ಟನಾದೆನಲ್ಲಾ ಶ್ರೀಹರಿ ಪೂಜೆ ಮಾಡಲಿಲ್ಲಾ ಸೃಷ್ಟಿಗೀಶ ಕಡು ಕಷ್ಟವ ತೊಲಗಿಸಿ ಶಿಷ್ಟದಾಗದೊಳು ನಿಷ್ಠೆಯಗೊಳಿಸಿದ ಪ ದುಷ್ಟ ವಿಷಯ ಪಾದೋದಿ ಜಲದಿನಾ [?] ಕಷ್ಟದಿಂದೀಸಿನೆಷ್ಟು ಹೈರಾಣಾದೆ 1 ಸುತ ವ್ಯಾಮೋಹದಿ ಮತಿಯ ಶಿಲುಕಿ ಹರಿ ಪಥವೆಂಬುದನ ಗತಿ ಗಹನಪ್ಪುದು 2 ಶರಣವತ್ಸಲೆಂಬ ಬಿರುದನಾಂತ ಶ್ರೀ ನರಸಿಂಹವಿಠ್ಠಲ ಪೊರೆ ಎನ್ನ ಕರುಣದಿ 3
--------------
ನರಸಿಂಹವಿಠಲರು
ಮಂಗಳ ಜಯ ಜಯ ಮಂಗಳ ತುಳಸಿಗೆ ಮಂಗಳ ಜಯ ಜಯ ರಂಗನಾಯಕಗೆ ಪ ವಾರಿಧಿ ಮಥÀನದಿ ವಾರಿಜನಾಭನ ವಾರಿಜನೇತ್ರನ ವಾರಿಗಳಿಂದ ತೋರಿದ ತುಳಸಿಯು ಸೇರಿದಳೆಲ್ಲ ಶ- ರೀರವ ಪಾವನ ಮಾಡಬೇಕೆನುತ 1 ತುಳಸಿಯ ನಾಮವ ಬೆಳೆಸಿಯೆ ಲೋಕವ ಬಳಸಿಕೊಂಡಿರುವೆನು ಎನುತಲೆ ಬಂದು ಕಳಸಿದ ಮನುಜರ ಉಳಿಸಬೇಕೆನುತಲೆ ಕಳಸದ ತೆರನಂತೆ ಉದಿಸಿದಳು ತುಳಸಿ 2 ಸಾಲಿಗ್ರಾಮವು ಇಲ್ಲದಾತನ ಮನೆಯೊಳು ಕಾಲೂರಿ ನಿಲ್ಲಳು ಹರುಷದೊಳಿವಳು ಪಾಲಿಪ ಹರಿಶಿಲೆಯಿರುವಂಥ ಸ್ಥಳದೊಳು ಓಲಗವಾಗಿಯೆ ತೋರುತ್ತಲಿಹಳು3 ಎಲ್ಲಿಯು ತುಳಸಿಯು ಅಲ್ಲಿಯೆ ಶ್ರೀಹರಿ ವಲ್ಲಭೆ ಸಹವಾಗಿ ಇರುತಿಪ್ಪ ಬಿಡದೆ ಫುಲ್ಲನಾಭನು ಕೃಷ್ಣ ಆಡಿದ ಪರಿಯನು ಗೊಲ್ಲತಿಯರು ಕಂಡು ನಾಚಿ ಹಿಗ್ಗಿದರು 4 ಬಂದಳು ಭಕ್ತರ ಮಂದಿರದೆಡಗೆ ಗೋ- ವಿಂದನ ಕಂಡಿರೆ ಎಂದು ಕೇಳಿದಳು ವೃಂದಾವನದೊಳು ನಿಂದಳು ತುಳಸಿಯು ಚಂದವು ನಿಮ್ಮಯ ಭವನದೊಳೆನುತ 5 ಗೋವಿನ ತುಪ್ಪದಿ ದೀವಿಗೆಯಿರಿಸಿಯೆ ಭಾವ ಶುದ್ಧತ್ವದಿ ಬಲವಂದರವಳು ಕಾವಲು ಪೋಗಿಯೆ ಕರ್ಣದ ಒಳಗಿದ್ದು ಜೀವಿತ ಮುಕ್ತಿಯ ತೋರುವೆನೆನುತ 6 ಸರ್ವತೀರ್ಥಗಳನ್ನು ಮೂಲದಿ ಧರಿಸಿಯೆ ಸರ್ವ ದೇವರ್ಕಳ ಮಧ್ಯದೊಳಿರಿಸಿ ಸರ್ವ ವೇದಂಗಳ ಶಿರದೊಳು ಧರಿಸಿಯೆ ಸರ್ವವ ಕಾಲಗೆ ನಿರ್ವಹಿಸುತಿಹಳು 7 ಅಂಗಳದೊಳಗಿಹ ಮಂಗಳ ಮಹಿಮಗೆ ರಂಗುವಲ್ಲಿಯನಿಕ್ಕಿ ಶೃಂಗಾರವಾಗಿ ಸಾಂಗ್ಯದೊಳಿಹ ಒಂದು ಮಂಗಳ ಬರೆದರೆ ಬಂಗಾರ ಮನೆಯನ್ನು ತೋರುವಳಿವಳು 8 ಮೂಲದ ಮೃತ್ತಿಕೆ ಮೂಲ ಪಣೆಯೊಳಿಟ್ಟು ಕಾಲದಿ ಸ್ನಾನವ ಮಾಡಿದ ನರರು ಭಾಳವಾಗಿಹ ಅಘರಾಶಿಯನೆಲ್ಲವ ಚಾಳಿಸಿ ಕಳೆವರು ಕಾಲನ ಗೆಲಿದು 9 ತನ್ನ ಕಾಷ್ಟವ ತಂದು ಚಿನ್ನದಿ ಸುತ್ತಿಸಿ ಕರ್ಣದಿ ಧರಿಸಿದ ಮನುಜರಿಗೆಲ್ಲ ಉನ್ನತ ಪದವಿಯ ತೋರುವೆನೆನುತಲೆ ಪನ್ನಗಶಯನಗೆ ಪ್ರೀತಿಯಾಗಿಹಳು 10 ಉತ್ತಮವಾಗಿಹ ಕಾರ್ತಿಕ ಮಾಸದಿ ಅರ್ತಿಯಿಂದಲೆ ನಲಿನಲಿಯುತ್ತ ದೇವಿಯ ಕರ್ತನ ಕೀರ್ತನೆ ರಚಿಸುವ ಮನದಿ 11 ಬ್ರಾಹ್ಮಿ ಮುಹೂರ್ತದಿ ಸ್ನಾನ ತರ್ಪಣವನ್ನು ನಿರ್ಮಲ ತೀರದಿ ತಿದ್ದಿಯೆ ಕೊಂಡು ಧರ್ಮಕ್ಕೆ ಯೋಗ್ಯಳ ಪೂಜೆಯ ಮಾಡಲು ಕರ್ಮ ಬಂಧಗಳೆಲ್ಲ ಕಡಿದುಕೊಳುವುದು 12 ಸಾಯಂಕಾಲದಿ ದೀವಿಗೆ ಹಚ್ಚಲು ಮಾಯಗಳೆಲ್ಲವು ಮರುಗಿ ಪೋಗವುವು ದಾಯವಾಗಿಯೆ ಸುರರಾಯನೊಳರ್ಥವ ಬೇವಿನವರು ಕಂಡು ಹೊರಸಾರುತಿಹರು 13 ಸರ್ವದಾನಗಳನ್ನು ಸರ್ವಪೂಜೆಗಳನ್ನು ಸರ್ವರು ಋಷಿ ಪಿತೃ ತರ್ಪಣಗಳನು ಸರ್ವಥಾ ತುಳಸಿಯ ತಪ್ಪಿಸಬೇಡೆಂದು ನಿರ್ವಾಹವಾಗಿಯೆ ಶ್ರುತಿಯು ಪೇಳಿದುದು 14 ಅಂಗದೊಳಗಿಹ ಮಂಗಳ ಮಹಿಮಗೆ ಸಾಂಗ್ಯದೊಳಿದನು ಪಠಿಸಿ ಪೇಳಿದರೆ ಗಂಗೆ ಗೋದಾವರಿ ತುಂಗಭದ್ರೆಯ ಮಿಂದು ರಂಗನ ಕ್ಷೇತ್ರವ ನೋಡಿದ ಫಲವು 15 ಅಂಗಳ ತುಳಸಿಯ ದಿನ ದಿನದಿ ತಾವೆದ್ದು ಹಿಂಗದೆ ನೋಳ್ಸ ಶ್ರೀರಂಗನ ಭಕ್ತರಿಗೆ ಬಂಗಾರಗಿರಿವಾಸ ವರಾಹತಿಮ್ಮಪ್ಪನ ಮಂಗಳಮೂರ್ತಿಯ ನೋಡಿದ ಫಲವು 16
--------------
ವರಹತಿಮ್ಮಪ್ಪ
ಮಂಗಳಂ ಜಯ ಸುಂದರ ಮೂರುತಿಗೆ ಮಾ ಮನೋಹರನಿಗೆ ಪ ಮಂಗಳ ಮಧುಸೂದನನಿಗೆ ಮಂಗಳ ಮುರಮರ್ದನನಿಗೆ ಮಂಗಳಾಂಗ ಶ್ರೀ ಮದನಂತ- ರಂಗನಿಗೆ ಶುಭಾಂಗ ಹರಿಗೆ 1 ರಂತಿದೇವನನ್ನು ಪೊರೆದ ಚಿಂತಿತಾರ್ಥ ಪ್ರದಾತನಿಗೆ ಸಂತತವು ಭಕುತರನು ಸಂತೋಷದಿ ಪೊರೆವ ಹರಿಗೆ2 ಪಾಂಡವರನು ಪೊರೆದÀಗೆ ಪುಂಡರೀಕಗೆ ಒಲಿದಗೆ ತಂಡತಂಡದ ಭಕ್ತರನ್ನು ಕಂಡುಪೊರೆವ ಮಹಮಹಿಮಗೆ3 ನಾರಿ ರುಕ್ಮಿಣಿ ಭಾಮೆ ಸಹಿತದಿ ದ್ವಾರಕಾಪುರ ವಾಸನಿಗೆ ಸೌಳಸಾಸಿರ ಸತಿಯರಾಳ್ದ ಸಾರಸಾಕ್ಷ ಹರಿಗೆ ಬೇಗ4 ಕಡಲೊಡೆಯಗೆ ಮೃಡಸಖನಿಗೆ ಕಡುಹರುಷದಿ ಕಾಮಿನಿಯರು ಸಡಗರದಲಿ ಕಮಲನಾಭ ವಿಠ್ಠಲನಂಘ್ರಿ ಭಜಿಸಿನಲಿದು5
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ನರಹರಿಗೆ ಜಯ ಜಯ ಮಂಗಳ ಮುರಹರಗೆ ಪ ಮಂಗಳ ಮದನಗೋಪಾಲ ಶ್ರೀಕೃಷ್ಣಗೆ ಮಂಗಳ ಮಾಧವಗೆ ಅ.ಪ ವಸುದೇವ ಸುತನಾಗಿ ಗೋಕುಲದೊಳು ಮೊಸರು ಬೆಣ್ಣೆಯ ಕದ್ದು ಶಶಿಮುಖಿಯರ ಕೂಡಿ ನಿಶಿರಾತ್ರಿಯಲಿ ರಾಸ ಕ್ರೀಡೆಯಾಡಿದ ಹರಿಗೆ 1 ನಳಿನಮುಖಿಯರೆಲ್ಲ ನೀರೊಳಗಾಡಿ ಬಳಲಿ ಮೇಲಕೆ ಬರಲು ಲಲನೆಯರ ಕಂಡು ಪರಿಹಾಸ್ಯ ಮಾಡಿದ ಚೆಲುವ ಗೋಪಾಲಕೃಷ್ಣಗೆ2 ಬೆಟ್ಟವ ಬೆರಳಿನಲಿ ಎತ್ತಿದ ಭಕ್ತವತ್ಸಲ ಹರಿಗೆ ಮಿತ್ರೆಯರಿಗೆ ಮೊಸರು ಬುತ್ತಿಯ ಭುಕ್ತಿಯನೆವದಲಿ ಮುಕ್ತಿ ತೋರಿದ ದೊರೆಗೆ 3 ಪುಟ್ಟಬಾಲಕನಾಗಿ ಗೋವ್ಗಳನೆಲ್ಲ ಅಟ್ಟಿಯ ಮನೆಗೆ ಪೋಗಿ ದುಷ್ಟ ಕಾಳಿಂಗನ ಮೆಟ್ಟಿ ತುಳಿದ ಹರಿಗೆ ರತ್ನದಾರತಿ ಎತ್ತಿರೆ 4 ಕೊಂದು ಕಂಸನÀ ಬೇಗ ಮಧುರೆಲಿ ನಿಂತ ಮಹಾನುಭಾವಗೆ ತಂದೆ ಶ್ರೀ ಕಮಲನಾಭವಿಠ್ಠಲಗೆ ಕುಂದಣದಾರತಿಯ 5
--------------
ನಿಡಗುರುಕಿ ಜೀವೂಬಾಯಿ
ಮಂಗಳೆಂದು ಬೆಳಗಿರಾರುತಿ ರಂಗಗೇ ನೀಲಾಂಗಗೆ ಪ ತುಂಗವಿಕ್ರಮನಿಮಗಿ ಭೂವರದಗೆ ನರಮೃಗನಿಗೆ ಅ.ಪ ಬಾಲ ಭಾರ್ಗವ ರಾಮ ಮಾತುಳಕಾಲ ವೀತಚೈಲಗೆ | ಶೀಲ ಮೂರುತಿಯಾದ ಕಲ್ಕಿರೂಪಗೆ | ರಮೆಯರಸಗೆ 1 ಧುರದಿ ರವಿಸುತ | ಉರುಗಗಳವನು ಭರದಿ ಬಿಡೆ ಕಡು ಕರುಣದಿ ನರನರಧ ಧರೆಗೊತ್ತಿ ಸಲಹಿದ ಶೌರಿಗೆ ಮುರವೈರಿಗೆ 2 ವಟದ ವೃಕ್ಷದಿ ವಟುರೂಪಿಯಲಿ ಪವಳಿಸಿದ ಪರಮಾತ್ಮಗೆ | ತಟತಸನ್ನಿಭ ಶಾಮಸುಂದರವಿಠಲಗೆ ವಿಪಗಮನಗೆ 3
--------------
ಶಾಮಸುಂದರ ವಿಠಲ
ಮಗುವ ತಡೆಯಬಾರದೆ ಮಾನಿನಿಯರುಸುಗುಣ ಚೆನ್ನಿಗನೆಂಬ ಸೊಬಗುಳ್ಳ ಮಗುವ ಪ ನೀರೊಳಗೆ ಪೊಕ್ಕು ತಾ ಬೀರುತಿದೆ ಮಾತುಗಳಧರಣಿಧರ ತಳಕಿಳಿದು ಬಾರದಿದೆಕೊಘೋರ ಪಾತಕವೆಂಬ ಬೇರ ಮೆಲ್ಲುತಲಿದೆಕೊಬಾರಯ್ಯ ಎನೆ ಕೋಪವೇರುತಿಹ ಮಗುವ 1 ಬೇಡುತಿದೆ ದಾನವನು ನೀಡುತಿದೆ ಪಾದವನುರೂಢಿಪಾಲರ ಕಂಡು ಕೊಲ್ಲುತಿದೆಕೊಓಡುತಿದೆ ಮೃಗದೊಡನೆ ಆಡುತಿದೆ ಕಪಿಗಳೊಳುನೋಡಲ್ಕರಿನಾಗರ ಹಾವ ತುಳಿಯುತಿದೆಕೊ 2 ಇತ್ತ ಬಾರೆಂದೆನಲು ಬತ್ತಲೆ ನಿಲ್ಲುತಿದೆಕೊಮತ್ತೆ ತೇಜಿಯನೇರಿ ನಲಿಯುತಿದೆಕೊಹತ್ತೆ ಬಂದವರಿಗೆ ಅರ್ತಿಯನು ನೀಡುತಿಹನಿತ್ಯ ವೈಕುಂಠದಲಿ ನಲಿವ ಮಗುವ 3
--------------
ಕನಕದಾಸ
ಮಂಡೆ ಬೋಳಾದರೇನು ಮನಶುದ್ಧಿಯಿಲ್ಲವು ಪ. ಕಂಡು ಹಯವದನನ್ನ ಒಲಿಸಿಕೊಂಡವ ಧನ್ಯ ಅ.ಪ. ನಾರದÀರವತಾರವೆಂದು ಜಗಕೆ ತೋರಿ ಸಿರಿಪುರಂದರದಾಸರ ಮನೆಯಲ್ಲಿಪರಿಪರಿ ಲೀಲೆಯ ಮಾಡಿ ಬಿಡದೆ ನಿತ್ಯಅರಿತು ಅವರ ಸಾಧನಕೆ ಸಾರಥಿಯಾದಿ 1 ಗುರುವ್ಯಾಸಮುನಿ ನಿಮ್ಮ ನೋಡುವೆನೆಂತೆಂದೊಡೆಮರೆಮಾಡಿ ಮೂರುರೂಪ ಜನುಮವೆಂದಿಹರÀÀುಷದಿ ಕನಸಿನೊಳಗೆ ಬಂದುಭಯರಿಗೆಅರುಪಿಸಿ ಸ್ವರೂಪ ಅರಿಯದಂತಿದ್ಯೊ ದೇವ 2 ಅವರ ಮೇಲಿದ್ದ ದಯ ಎನ್ನ ಮೇಲೆಂದಿಗೋ ದೇವಯಾವುದು ಭರವಸೆದೋರದಯ್ಯಕವಿದೆಮ್ಮಭಿಮಾನ ಬಿಟ್ಟರೆ ಬಿಡದಯ್ಯಆವಕಾಲಕ್ಕೆ ನಿನ್ನ ದಾಸನೆಂಬಂತೆ ಮಾಡೊ 3 ನಮ್ಮ ಗುರುಗಳ ಸಮ್ಮತದಿಂದುಡುಪಿಯಲಿಗಮ್ಮನೆ ಪೇಳಿದೆನು ಸಟೆಯಲ್ಲವುಸುಮ್ಮನೆ ತಿಳಿಯದೆ ಅಲ್ಲವೆಂದವÀರ್ಗಿನ್ನುಗಮ್ಮನೆ ತಮಸಿನೊಳಿಹುದು ಸತ್ಯವು 4 ಓದಿದಾಕ್ಷಣದಿಂದ ಧನ್ಯನೆಂದೆನು ನಾನುಸಾಧಿಸಲಾಪೆನೆ ನಿನ್ನ ಸೇವೆಯನುಆದಿಮೂರುತಿ ಸಿರಿಹಯವದನರೇಯಮೋದದಿಂದ ನಿನ್ನ ದಾಸರ ಸಂಗದಲ್ಲಿಡು ಕಂಡ್ಯ 5
--------------
ವಾದಿರಾಜ
ಮದನನಗೇಹ ಸುಖ ಮರಣ ಸುಖಮದನನ ತೊತ್ತಿನ ಮಕ್ಕಳಾಗ ಬೇಡಿರೋ ಪ ಸ್ತ್ರೀಯರೂಪವ ಕಂಡು ಸೈರಿಸದೆ ಕಳಕಳಿಸಿಸುಯ್ಗರೆದು ಶರೀರವು ಬೆವರೇರುತಕೈಕಾಲ್ಗಳಿಗೆ ನಡುಕ ಹುಟ್ಟಿ ಕಾಮ ಶರಕೆ ಮೈಯನಿತ್ತುಕೊಯಿಸಿಕೊಳ್ಳುವ ಕೊರಳ ನಿತ್ಯದಿ ಕಷ್ಟದಿ ಸುಖವು 1 ಮುಖ ಕಾಂತಿಯ ನೋಡಿ ಮೋಹದಲಿ ಮುಳುಗಾಡಿಸುಖವೆಂದು ಬಗೆಯುತ ಸಂಗಯೋಗದಕಕುಲಾತಿಪಡುತಲಿ ಕೆಡೆದುತಾಪದಿ ಹೊರಳಿಬಕಧ್ಯಾನದಲಿ ತನ್ನ ನಿಜಸುಖವ ಮರೆವ 2 ಪತಿ ಚಿದಾನಂದ ಕಾಣದ ಸುಖವು3
--------------
ಚಿದಾನಂದ ಅವಧೂತರು
ಮಧ್ವರಾಯರ ಶುದ್ಧಸಿದ್ಧಾಂತ ಪದ್ಧತಿಯಲಿ ಇದ್ದ ಮನುಜಗೆ ಕರಸಿದ್ಧವೈಯ್ಯಾ ಮುಕುತೀ ಪ ಬಿದ್ದು ಪೋಗುವುದಘ ವೃಂದಗಳೆಲ್ಲವು ಶುದ್ಧಜ್ಞಾನದಿ ಸತ್ಯ ಉದ್ಭರಿಪ ಹರಿ ವೇದಸಿದ್ಧವಿದುಕಾಣೋ ಅ.ಪ. ಖ್ಯಾತಿಯಿಂದಲಿಲಂಕೆ ಸುಟ್ಟು ಪ್ರೀತಿಲಿ ರಾಮನ ಭಜಿಸಿದರೋ ವ್ರಾತಖಳಕುಲ ಘಾತಿ ಮಾಡಿಸಿ, ವೀತಿಹೋತ್ರಗೆ ತುತ್ತು ನೀಡುತ ನಾಥರಾಮನ ವರದಿ ಮುಂದಿನ ಧಾತನಾಗಿ ಬರುವ ನಮ್ಮ 1 ದ್ವಾಪರದಲಿವರು ಪಾಪಿ ದುರ್ಯೋಧನನ ಭೂಪನಂದದಿ ಅಳಿಸಿ ಶ್ರೀಪತಿಸೇವೆನಡಿಸಿದರೋ ಶ್ಯಾಮಸುಂದರ ಕೃಷ್ಣರಾಯನ ನೇಮದಿಂದಲಿನಾಮ ಪಠಿಸುತ ತಾಮಸಾರನು ಯಮಗೆ ಕಳಿಸಿ ಕಾಮವಿಲ್ಲದೆ ಯಜ್ಞವನಡೆಸಿದ ಭಾಮೆ ದ್ರೌಪದಿ ಪ್ರೇಮ ಪತಿಯಾದ2 ಕಲಿಯುಗ ಕಳ್ಳರು ಸಲ್ಲದರ್ಥಗಳನ್ನು ಸುರರು ಮೊರೆಯಿಡಲು ವಲ್ಲಭನು ಶ್ರೀನಲ್ಲ ನಲ್ಲದೆ ಇಲ್ಲ ಜಗದೊಳು ಎಂದು ಸ್ಥಾಪಿಸಿ ಎಲ್ಲವೇದದ ಎಲ್ಲನಾದವು ನಲ್ಲ ಹರಿ ಯಂತೆಂದು ತೋರಿದ 3 ಜೀವೇಶ ಬೇಧವು ಪಂಚಬೇಧವು ಸುಳ್ಳು ತಾವೆ ನಾಥರು ಜಗಕೆ ತಾರತಮ್ಯವು ಠಕ್ಕೂ ಶಿವನೆ ಸರ್ವೋತ್ತಮ ಬ್ರಹ್ಮನಿರ್ಗುಣನು ಈ ವಿಧವಾದವ ವೇದವ್ಯಾಸರ ಕಂಡು ಬದರಿಲಿ ಸೂತ್ರ ಭಾಷ್ಯವ ಮಾಧವನೆ ಜಗದಾದಿಕಾರಣ ಮೋದ ನೀಡಿದ 4 ಮಧ್ವರಾಯರವಾಣಿ ಶುದ್ಧವೇದದಸಾರ ವೇದವ್ಯಾಸರ ಮತವು ಇದುಸಿದ್ಧ ಹರಿ ಆಣೆ ಕೇಳಿ ಗದ್ದರಾಗದೆ ಬಿದ್ದು ಇವರಡಿ ತಿದ್ದಿ ಮನವನು ಒದ್ದುದುರ್ಮತ ಪದ್ಮನಾಭನ ಪಾದಧ್ಯಾನದಿ ಅದ್ದಿ ಚಿತ್ತವ ಸಿದ್ಧಮಾಡಿರೋ ಮುಕ್ತಿಪಥವ 5 ಪರಿಸರನೀತನು ಪರಮಾಪ್ತನುಹರಿಗೆ ಗುರುವೊ ಜಗಕೆಲ್ಲ ಬರುವ ಬ್ರಹ್ಮನು ಕಾಣೋ ಓಡಿಸುಮಾರಿಮತಗಳ ಇಲ್ಲವೊ ಹರಿಯ ಧಾಮವು 6 ಮೂರುಹತ್ತು ಎರಡು ಗುರುಲಕ್ಷಣ ಕಾಯರು ನಿರುತ ಹಂಸೋಪಾಸನೆ ಮೂರುವಿಧದಲ್ಲಿ ಮಾಳ್ವರು ಭಾರತೀಶನ ಸಾರಗುಣಗಳ ಸೂರಿಗಳಿಗಳವಲ್ಲ ಅರಿಯಲು ಚರಣಪಿಡಿಯಿರೋ 7 ದಶದಿಶೆಗಳ ವಳಗೆ ಬಿಸಜನಾಭನ ಕೀರ್ತಿ ಎಸೆದು ಹಿಗ್ಗುವ ನಮ್ಮ ಅಸಮ ಮಧ್ವರನೋಡೋ ನಾಶಮಾಡುತ ಭಾಸಕರು ಎಂದೆನಿಸಿದ 8 ಅನಿಲದೇವನ ನಾಮ ಕನಸಿಲಾದರು ಒಮ್ಮೆ ನೆನೆದವನೇ ಧನ್ಯ ಮಾನ್ಯನೋ ಜಗದೊಳಗೆ ದೀನನೆನಿಸುತಲಿ ದಾನಿ ಜಯಮುನಿ ಅನಿಲನಂತರ ಶ್ರೀನಿವಾಸ ಕೃಷ್ಣವಿಠಲಗೆ ಶರಣು, ಶರಣು, ಶರಣೆಂದು 9
--------------
ಕೃಷ್ಣವಿಠಲದಾಸರು