ಒಟ್ಟು 1007 ಕಡೆಗಳಲ್ಲಿ , 98 ದಾಸರು , 852 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ರಹ್ಮಾದಿದೇವಗಣ ನಮಿತ ಪಾದಯುಗಳನೆ ನಿನಗೆ ರಂಗಧಾಮನೆ ಪ ಸುಮನಸರೊಡೆಯನೆ ಕಮಲಾಪತಿಯೆ ಅ.ಪ. ಗೋಪಾಲ ಬಾಲಕಿಯರ ಮನಕುಮುದ ಚಂದ್ರನೆ ನಿನಗೆ ರಂಗಧಾಮನೆ ಕಪಟ ರಕ್ಕಸರನು ಮಡುಹಿದನೆ 1 ಕಾವೇರಿ ತೀರದಲ್ಲಿ ನಿಂದ ಪಾವನರೂಪನೆ ಹಾವಿನಹÉಡೆಯೊಳ್ಕುಣಿದವನೆ ಸನ್ಮಂಗಳಂ ನಿನಗೆ ರಂಗಧಾಮನೆ ನಮ ತೋಹನಾಂಗೀಯ ರಾಮನಾಪಹಾರಿಯೆ 2 ಮಾನಿನಿ ದ್ರೌಪದಿಯ ಮಾನವನ್ನು ಕಾಯ್ದನೆ ನಿನಗೆ ರಂಗಧಾಮನೆ ದಿನಕರ ಕೋಟಿತೇಜನೆ ರಂಗೇಶವಿಠಲನೆ 3
--------------
ರಂಗೇಶವಿಠಲದಾಸರು
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ
ಭಕುತರಿಗಾಗಿ ನೀ ಬಡುವ ಕಷ್ಟಗಳು ಅಕಟ ಪೇಳಲಳವೆ ( ನೋಡಲಳವೆ) ಲಕುಮಿ ಪತಿಯೆ ಯಾತಕೆ ವೃಥಾನಿಕರಕೆ ಸುಖವೀವೆಕಾವೆ ಪ ಮಂದಿಮನ ವಲಿಸಿ ಮದುವೆ ನೀನು ಮ ತ್ತೊಂದು ಮಾಡಿಕೊಳುತ್ಯಾ ಅಂದಣಾದಿ ಐಶ್ವರ್ಯವನ್ನು ಪರರಿಂದ ಕೇಳಿಕೊಳುತ್ಯಾ ನಿಂದೆ ಮಾಡುವರೆಂಬೊ ಭಯದಿ ಅವರ್ಹಿಂದೆ ಹಿಂದೆ ಇರುತ್ಯಾ ಅಂದವಾದ ಆಟಗಳೊಳಗೆ ಇದುವಂದು ಎನುತ್ಯಾದೇವ 1 ಸಡಗರದಲಿ ಕರಪಿಡಿದು ಕಾಯ್ದೆ ನೀ ಹುಡುಗರೀರ್ವರನ್ನು ಮಡುವಿನೊಳಗೆ ಆ ಮಕರಿಯಿಂದ ಕಾಲ್ಹಿಡಿಸಿಕೊಂಡವನ್ನ ಮಡದಿಗಂತು ಗಡಿತಡಿಯದೆ ನೀಡಿದಿ ಉಡುಗೆ ಅಗಣಿತವನ್ನು ಕಡಿಗೆ ನಿನ್ನ ಕರದೊಂದು ದಿನಾದರು ಬಡಿಶ್ಯಾರೆ ಸುಖವನ್ನು ಏನು 2 ಏನು ತಪ್ಪು ನಿನ್ನವರು ಮಾಡಿದರು ಕಾಣಬಾರವು ನಿನಗೆ ವೈರಿ ಪರಪ್ರಾಣಹಾರಿಗಳ ಪೊರೆದು ಕರುಣಿ ಸುರಧೇನು ಬಾರೊ ಬ್ಯಾಗ ಮಾನಸ ಮಂದಿರಕೆ ಈಗ 3
--------------
ಅಸ್ಕಿಹಾಳ ಗೋವಿಂದ
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ
ಭಕ್ತರನ ನಂಬದಿರು ಭವದೂರನೆ ಮುಕ್ತಿಯನು ಬೇಡದಲೆ ನಿನ್ನೆ ಪೂಜಿಸುವರು ಪ ಪ್ರಸ್ತ ಮಾಡುವ ಸಾಧನಕ್ಕೆ ಪೋಗಿ ನಿಂದು ಬಲು ಹಸ್ತು ಬಂದವನು ತುತ್ತನ್ನ ಕೇಳೆ ಸ್ವಸ್ತವಾಗಿ ಕುಳಿತು ಭೋಜನ ಮಾಳ್ಪ ಆ ಗ್ರಹಸ್ತ ಪೊಟ್ಟಿ ತುಂಬದೆ ಬರಿದೆ ಏಳುವನೆ1 ಹಾದಿಕಾರನು ಬಂದು ವಸ್ತಿ ಮಾಡುವದಕ್ಕೆ ಆದರದಲಿ ಸ್ವಲ್ಪ ಸ್ಥಳವ ಕೇಳಿ ಪಾದ ಇಡುವನಿತರೊಳು ಕುಳಿತು ಆಮೇಲೆ ಸಂ ಪಾದಿಸುವ ತನ್ನ ತಕ್ಕಷ್ಟು ಧರಣಿಯನ್ನು2 ಆವದೊಲ್ಲೆವೆಂದು ಆಡುವರು ನಿತ್ಯದಲಿ ಕಾವ ಕರುಣಿ ನೀನೆಂದು ತಿಳಿದು ಸಿರಿ ವಿಜಯವಿಠ್ಠಲ ನಿನ್ನ ಇಂದು 3
--------------
ವಿಜಯದಾಸ
ಭಕ್ತಿಯಲಿ ನಡೆವರಿವರೇ ಸುಗುಣರೊ ಮುಕ್ತಿಯನು ಬಯಸಿ ಮುರಾರಾತಿಯ ಚರಣದಲ್ಲಿ ಪ ಉದಯದಲೆದ್ದು ಉನ್ನತ ಸ್ವರದಿಂದ ಹರಿ ಪದವೇ ಗತಿ ಎನುತಾ ಎಲ್ಲ ಕಾಲಕೆ ಉದರ ಚಿಂತಿಯ ಮರೆದು ಮನ ಉಬ್ಬಿ ಉತ್ಸವದಿ ಪದೋಪದಿಗೆ ಮಂಗಳಾವಾರ್ತಿ ಪೇಳುತ ನಿತ್ಯಾ 1 ಭಾಗವತ ಮಿಕ್ಕ ಪುರಾಣಾದಿ ನುಡಿಗೆ ಕಿವಿಗೊಟ್ಟು ಹಾಹಾ ಎನತಲಿ ಒಡನೊಡನೆ ಹರಿ ಮಹಿಮೆಯಲಿ ಇದ್ದು ಮಾರಿಗಳ ಅಡಿಮಾಡಿ ಆದ್ಯಂತಕಾಲ ಸುಖಿಸುವ ನಿತ್ಯಾ 2 ಈ ದೇಹ ತ್ಯಾಗ ಮಾಡದೆ ಆಗಲಿ ಪಂಚ ಭೇದ ಪೇಳುವದು ಬಿಡೆನೆಂಬೊ ಸೊಲ್ಲು ಆದಿತ್ಯ ಲೋಕಕ್ಕೆ ಮುಟ್ಟುವಂತೆ ಕೂಗಿ ಸಾಧನ ಮಾಡುತಲಿಪ್ಪ ಶುಭಮಾರ್ಗದಲಿ ನಿತ್ಯಾ 3 ಅವಾವ ಮೋಹಕವು ಶಾಸ್ತ್ರದಲ್ಲಿದ್ದರೂ ಭಾವದಲಿ ಗುಣಿಸದೆ ನಿಕ್ಕರಿಸೀ ದೇವದೇವೇಶನೆ ಬ್ರಹ್ಮಾದಿಗಳು ವಂಚಿಪ ಕಾವ ಕೊಲ್ಲುವನೀತನೆಂದು ತಿಳಿದು ನಿತ್ಯಾ 4 ಅನ್ಯಶಬ್ದವು ಅನ್ಯಸ್ಪರಿಶ ರೂಪಕ ರಸಾ ಅನ್ಯಗಂಧಗಳಿಗೆ ಇಂಬುಗೊಡದೇ ಧನ್ಯರಾಗಿದ್ದವರ ಕರುಣ ಸಂಪಾದಿಸಿ ಪುಣ್ಯಭೂಮಿಯನು ಹಾರೈಸುವ ನಿತ್ಯಾ 5 ಅವೈಷ್ಣವನು ಹರಿ ಎಂದು ನುಡಿವಡೆ ತಾನು ಅವನಂತೆ ಸ್ಮರಿಸದೇ ಸುಮ್ಮನಿದ್ದೂ ಭವವದ್ದು ಭಾಗ್ಯವನು ಅಪೇಕ್ಷಿಸದೇ ಮುಂದೆ ನಿತ್ಯ 6 ಭೂಸುರರ ಪಾದದಲಿ ವಿಶ್ವಾಸ ಇಟ್ಟು ದು ರಾಶೆಯನು ಮಾಡಿ ನರರಾಶ್ರೈಸದೆ ಏಸೇಸು ವಿಪತ್ತು ಗುಣ ಮೇಲಟ್ಟಿದರು ನಿತ್ಯ 7 ಕಾಲ ಮೃತ್ಯು ಬಂದು ಹುಂಕರಿಸಿ ನಿಂದು ಮಹ ಜ್ವಾಲೆಯನು ತೋರಿ ಕಠಿಣೋಕ್ತಿಯಲ್ಲೀ ಏಳೇಳು ಎನುತ ಎಬ್ಬಿಸಿದ ಕಾಲಕೆ ತನ್ನ ನಾಲಿಗೆಲಿ ಹರಿ ಕೃಷ್ಣ ಕೇಶವನೆನುತ ನಿತ್ಯಾ 8 ಸಕಲ ಚೇಷ್ಟಾದಿಗಳು ಹರಿಮಾಡಿಸಲು ಉಂಟು ಮುಕುತಿ ನರಕವೆಂಬ ಯೋಚನ್ಯಾಕೆ ಸಿರಿ ವಿಠ್ಠಲನಲ್ಲಿ ಸುಖ ದು:ಖವಿತ್ತದು ಸಮ್ಮತವೆನುತ ನಿತ್ಯಾ 9
--------------
ವಿಜಯದಾಸ
ಭಜನೆ ಶ್ರೀ ರಾಮ ಭಜನೆ ಆಮ್ನಾಯ ವಿಸ್ತರ | ಭೂಮಾ ಗುಣಾರ್ಣವಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಪ ಶ್ರೀಶನೇ ವಿಭುದೇಶನೇ ||ಅಸುರಿ ವೃಷಹರ | ಶೇಷಾದ್ರಿ ಮಂದಿರಶ್ರೀ ಮನ್ನಾರಾಯಣ | ರಾಮ್ ರಾಮ್ ರಾಮ್ ಅ.ಪ. ಪೃಥ್ವಿಧರಾಧರ | ಸತ್ಯ ಮನೋಹರಭಕ್ತಾರ್ತಿ ಪರಿಹರ | ರಾಮ್ ರಾಮ್ ರಾಮ್‍ನಿತ್ಯನೇ ನಿರ್ಲಿಪ್ತನೇ ||ಶಕ್ತ್ಯಾದಿ ರೂಪಧರ | ಆಪ್ತರೊಳಗೆ ವರಭೃತ್ಯರ್ಗ ಭೀಷ್ವದ | ರಾಮ್ ರಾಮ್ ರಾಮ್ 1 ದಾನವ ಧ್ವಂಸನೆ | ಆನಂದ ಪೂರ್ಣನೆಆನಂದ ಮುನಿನುತ | ರಾಮ್ ರಾಮ್ ರಾಮ್‍ಶ್ರೀ ನಿಧೇ ಕರುಣಾಂಬುಧೇ ||ಮಾನುನಿ ವರದನೆ | ಮೌನಿಯ ಕಾಯ್ದನೆಜ್ಞಾನ ಸುಗಮ್ಯನೆ | ರಾಮ್ ರಾಮ್ ರಾಮ್ 2 ಈಶಾಹಿ ವಂದ್ಯನೆ | ವಾಸಿಷ್ಠ ಕೃಷ್ಣನೆವಸುದೇವ ತನಯನೆ | ರಾಮ್ ರಾಮ್ ರಾಮ್‍ಈಶನೇ ವರದೇಶನೇ ||ದಶಾಸ್ಯ ಕುಲವನ | ಕೃಶಾನು ಎನಿಪನೆದಾಶರಥಿüಯೆ ಪಾಹಿ | ರಾಮ್ ರಾಮ್ ರಾಮ್ 3 ಕಾಯ ಸೂರ್ಯ ವೀರ್ಯದಾತಪ್ರೇರ್ಯ ಪ್ರೇರಕ ಪಾಹಿ | ರಾಮ್ ರಾಮ್ ರಾಮ್ 4 ನೀರದ ನಿಭಕಾಯ | ವಾರಿಜಾಕ್ಷಿಗೆ ಪ್ರಿಯನಾರಿ ಚೋರಾರಿಯೆ | ರಾಮ್ ರಾಮ್ ರಾಮ್‍ಧೀರನೆ ಗಂಭೀರನೇ ||ಮೂರು ಲೋಕಗಳಲ್ಲಿ | ಆರುಂಟು ನಿನ್ನ ಸರಿಕಾರುಣ್ಯ ಮೂರುತಿ | ರಾಮ್ ರಾಮ್ ರಾಮ್5 ಪತಿ | ನಂಬೀದ ಭಕ್ತರಬೆಂಬಿಡದಲೆ ಕಾವ | ರಾಮ್ ರಾಮ್ ರಾಮ್ 6 ಜಗ ಪ್ರಾಣನೊಳಗೆ ಇದ್ದು | ಜಗವನ್ನು ಸೃಜಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್‍ಪ್ರಾಣನೇ ಜಗತ್ತ್ರಾಣನೇ ||ಅಗಜೆ ಪತಿಯೊಳಿದ್ದು | ಜಗವೆಲ್ಲ ಲಯಿಸುವಿಜಗದೇಕ ಕಾರಣ | ರಾಮ್ ರಾಮ್ ರಾಮ್ 7 ಪ್ರಾಣನೀತಾನುಜ | ಪ್ರಾಣದಾತೃ ಹರಿಪ್ರಾಣಂಗೆ ಪ್ರಾಣನೆ | ರಾಮ್ ರಾಮ್ ರಾಮ್‍ಪ್ರಾಣನಾ ಆಲಿಗಂನಾ ||ನೀನಾಗಿ ಮಾಡಿ ಅವಗೆ | ಸಾಷ್ರ್ಣಿ ಮುಕ್ತಿಯನಿತ್ತೆಕಾಣೆ ಕಾರುಣ್ಯ ಕೆಣೆ | ರಾಮ್ ರಾಮ್ ರಾಮ್ 8 ಅಂಜನಿ ಸುತನಾಗಿ | ಕಂಜಸಖನಿಗ್ಹಾರ್ದಸಂಜೀವ ಧರ ಧರ | ರಾಮ್ ರಾಮ್ ರಾಮ್‍ದೈತ್ಯನಾ ಪ್ರಭಂಜನಾ ||ಸಂಜೆಯ ಚರರನು | ಭಂಜಿಸಿ ಅರ್ಪಿಸಿದಸಂಜೀವರಾಯ ಪಿತ | ರಾಮ್ ರಾಮ್ ರಾಮ್ 9 ಪತಿ | ಪದ್ಮಾಸನನ ಪಿತಪದ್ಮನಾಭನೆ ಪಾಹಿ | ರಾಮ್ ರಾಮ್ ರಾಮ್‍ರುದ್ಧನೇ ಅನಿರುದ್ಧನೇ ||ಮುದ್ದಿನ ಮೊಗದವ | ಗೆದ್ದು ಕುಜನ ತತಿಸದ್ಮದೊಳಗೆ ತೋರೊ | ರಾಮ್ ರಾಮ್ ರಾಮ್ 9 ಇಂದಿರೆ ರಮಣನೆ | ಚಂದಿರ ವದನನೆಮಂದರೋದ್ಧಾರಿಯೆ | ರಾಮ್ ರಾಮ್ ರಾಮ್‍ಸುಂದರಾ ಬಹು ಸುಂದರಾ ||ಕಂದರ್ಪ ಕೋಟಿ ಬಹು | ಸುಂದರ ಗುರು ಗೋ-ವಿಂದ ವಿಠಲ ಪಾಹಿ | ರಾಮ್ ರಾಮ್ ರಾಮ್10
--------------
ಗುರುಗೋವಿಂದವಿಠಲರು
ಭಜಿಸಿ ನೋಡಿರೋ ಭಾವಭೋಕ್ತನ ಅಜಸುರೊಂದ್ಯ ಸುಜನಪಾಲ ತ್ರಿಜಗದಾತ್ಮನ ಧ್ರುವ ಭಾವಕ ಸುಲಭ ಜೀವದ ನೆಲೆನಿಭ ಕಾವಕರುಣ ದೇವನೀತ ಪ್ರಾಣವಲ್ಲಭ 1 ರಾಜಿಸುತಿಹ್ಯನು ತೇಜೋಮಯದಲಿ ಭಜಕ ಪ್ರಿಯನಾಗಿ ಒಲಿವ ನಿಜಸುಮನದಲಿ 2 ಡಂಭಭಕುತಿಗೆ ಇಂಬದೋರನು ನಂಬಿನಡೆವ ಭಕ್ತಜನರ ಮನೆಯೊಳಿಹ್ಯನು 3 ಭಕುತಿ ಭಾವಕ ನೆಲಿಯುಗೊಂಬನು ಮಕುಟಮಣಿ ಸುಭಾನುಕೋಟಿ ಪ್ರಕಟ ಹೊಳೆವನು 4 ಒಂದು ಮನದಲಿ ಹೊಂದಿ ಸುಖಿಸಿರ್ಯೊ ಎಂದೆಂದು ಬಿಡದೆ ಸಲಹುತಿಹ್ಯ ಮಹಿಪತಿ ಸ್ವಾಮಿಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಜಿಸುವರ ಭಾಗ್ಯವೆ ಭಾಗ್ಯ ಭುವನದಲಿತ್ರಿಜಗದೊಡೆಯನು ರಾಮಕೃಷ್ಣ ರೂಪಿನಲಿರಲು ಪಶ್ರುತಿ 'ಧಿತ ನಿಯಮಗಳ ಮಾಡಿ ತದನಂತರದಿಶತಸಹಸ್ರರಿಗೊರೆದು ಕಾವ್ಯ ಪಾಠವನುಶ್ರುತಿಗಗೋಚರ ಕೃಷ್ಣ ಪಾದಪೂಜೆಯ ನಿತ್ಯಜಿತಮನಸ್ಕದಿ ರಚಿಸಿ ನಲಿವ ಮೂರ್ತಿಯನು 1ವೇದಾಂತ ಶಾಸ್ತ್ರವನು ವೇದ'ತ್ತುಗಳಿಂಗೆವಾದಗುಟ್ಟದ ತೆರದಲುಪದೇಶಗೈದುವೇದಶಾಸ್ತ್ರಾರ್ಥವನು ಸಾದರದಿ ಸಕಲರಿಗೆಬೋಧಿಸುವ ಸಂಸಾರಸಾಗರೋತ್ತಾರರನು2ರಾಮಾವತಾರದಲಿ ರಾಮನೆಂದೇ ನಾಮವಾಮೇಲೆ ದ್ವಾಪರದಿ ರಾಮ ಕೃಷ್ಣರೆಂದುನಾಮವೆರಡವರಿಂಗೆ ತನುವೆರಡು ಬಳಿಕೀಗರಾಮಕೃಷ್ಣನಾಮದಲಿ ಕಲಿಯುÀಗದಿ ಜನಿಸಿರಲು 3ಅವತಾರವೆಂಬುದುಪಚಾರವಲ್ಲಿದು ಕೇಳಿಭವನ ಪ್ರತಿಬಿಂಬ ಶ್ರೀ ಶಂಕರಾಚಾರ್ಯಭವದೂರ ಗುರುಮೂರ್ತಿ ಕೃತ ಗ್ರಂಥ ವ್ಯಾಖ್ಯಾನಕಿವರೆಂದು ಆನಂದ ಘನ ಸ್ವಪ್ನವಾಗಿರಲು 4ಅಜನ ಭಜನೆಯಲಜನು ತ್ರಿಜಗರಕ್ಷಾರ್ಥದಲಿಅಜನ ಪೌತ್ರತ್ವದಲಿ ನಿಜಸತಿಯ ನೆವದಿತ್ರಿಜಗ ಕಂಟಕ ರಾವಣನ ಮುರಿದು ಭಜಕರಿಗೆಅಜ ಪದ' ಮೊದಲಾಗಿ ಕೊಟ್ಟ ರಾಮನನು 5ಭೂ'ು ಭಾರವನಿಳುಹಲೆಂದು ನೇಮವ ಧರಿಸಿರಾಮನನುಜನು ತಾನು ಕೃಷ್ಣನೆಂದೆನಿಸಿಭೀಮ ಘಲುಗುಣ ಧರ್ಮ ಮುಖದಿ ಕೌರವ ಪಡೆಯಭೂ'ುಯಲಿ ನೆಲೆಗೊಳಿಸಿದಮಲ ಮೂರ್ತಿಯನು 6ಧರೆಗಧಿಕವೆಂದೆಂಬ ದೃಷದಪುರದಲಿ ನಿಂದುಶರಣಾಗತರ ಸಲ' ಮ'ಮೆಗಳ ಮೆರೆದುತಿರುಪತಿಯ ವೆಂಕಟನ ಪ್ರತಿಬಿಂಬ ಗುರುವರ್ಯಪರವಾಸುದೇವ ಶ್ರೀ ರಾಮಕೃಷ್ಣಾರ್ಯರನು 7ಓಂ ಪುಣ್ಯಾಯ ನಮಃ
--------------
ತಿಮ್ಮಪ್ಪದಾಸರು
ಭದ್ರ ಮೂಜಗದಂತರ್ಯಾಮಿ ಪ ಸಾರ ಸಾಕ್ಷಿಯರೆಲ್ಲಾ ಮುದ್ದು ಸೀತೆ ಸಹಿತ ಹುವ್ವಿನ ಮಂಚದಿ ಮಲಗಿ ಅ.ಪ ಪೋಗಿ ನಿಮ್ಮಯ ಸದನಗಳಿಗೇ | ಉದಯ ವಾಗೋದು ಬನ್ನಿ ಸನ್ನಿಧಿಗೇ ಯೋಗೀ ಜಾಣರು ಪರಮ ಭಾಗವತೋತ್ತಮರು ಸಾಗಿ ಪೋದರು ನಿಜಾಶ್ರಮಗಳಿಗೆಲ್ಲರು 1 ತುಂಬುರಾ ನಾರದಾದಿಗಳು | ವೀಣೆ ತಂಬೂರಿ ದಿವ್ಯನಾದದೊಳು ಗಂಭೀರಾ ಸ್ವರದಿಂದಾಗಾಯನಗಳ ಮಾಡೆ ಸಂಭ್ರಮದಲಿ ಇತರ ಹಂಬಲ ಮರೆತೀಗ 2 ಹದಿನಾಲ್ಕು ಲೋಕಾವನಾಳಿ | ತಾದ- ಣಿದೆನೆಂದು ಜನರಿಗೆ ಪೇಳಿ ಸದಮಲಾತ್ಮಕ ಶ್ರೀ ಗುರುರಾಮ ವಿಠಲ ನಂ-ಬಿದವರಿಗಭಯವ ಕೊಡುವ ಇಚ್ಛೆಯಿಂದ 3
--------------
ಗುರುರಾಮವಿಠಲ
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಭವ ಭಾವಿಸುವೊದು ಸೂಚನಾ | ಪಾವನರಂಗಾ | ಜೀವಾಂತರಂಗ | ಜೀವ ತುರಂಗಾ | ಹೃದ್ದಾವರೆಯಲಿ ನಿಲ್ಲು | ಆವಾವ ಬಗೆ ಸು | ರೂಹ | ಆವಾಗ ತೋರುತ ಪ ನಂದನಂದನಾ ಆನಂದಾ | ನಾಗನಾ | ಬಂಧಾ | ಬೀಡಾದೆಕ್ಕೆಂದಾ | ದಾ ಖಳನ ಕೊಂದೆ | ನಂದವ್ರಜದ ಗೋವಿಂದಾ | ಯಶೋದೆ ಕಂದಾ | ಮಂದನು ನಾನು | ಇಂದೀಗ ನೀನು | ಬಂದು ಸುರಧೇನು | ಪೊಂದು | ಇನ್ನೇನು | ಮುಂದಣ ಇಹಸುಖ | ಒಂದು ವಲ್ಲೆನು ಸಖ | ಕಂದ ನಂದದಿ ನೋಡು | ಕುಂದದ ವರವ ಕೊಡು | ಎಂದೆಂದಿಗೆ ಪದದ್ವಂದಾರವಿಂದಕೆ | ವಂದಿಸುವೆನು ಬಾ | ಲೇಂದು ವದನ ಪೊರಿಯೋದೆ ಲೋಕದ ತಂದೆ 1 ಮಂದರಧರ ಮಾಧವಾ | ಮಹದಾದಿ ದೇವಾ | ಬೋವಾ | ಇಚ್ಛೈಸಿದರೆ ಕಾವಾ | ವಾಸುದೇವ | ನಿಂದು ಕರೆವೆನು ಒಂದೆ ಮನಸನು | ತಂದು ವೇಗಾನು | ಸಂಧಿಸೆಂಬೆನು | ಚಂದ ಚಂದದಿ ನಿನ್ನನಂದಕೆ ಹಿಗ್ಗುವೆ | ಪತಿ | ಬಂಧು | ಅತಿ ದಯಾಸಿಂಧು || 2 ಶ್ರೀಲತಾಂಗೀಯ ರಮಣಾ ಶೃಂಗಾರ ಚರಣಾ | ಮಾಲಾ ಕೌಸ್ತುಭಾ ಭರಣಾ | ಶೀಲಾ ಸದ್ಗುಣಗಣ ಸಿದ್ಧಸವ್ಯಾಕಾರಣ | ನೀಲಲೋಹಿತ ಪಾಲಿಪನೆ ಪ್ರೀತ | ಮೂಲೋಕದ ದಾತಾ | ಲಾಲೀಸಿ ಮಾತಾ | ಪಾಲ ಸಾಗರಶಾಯಿ ಪತಿತ ನರನ ಕಾಯಿ | ಮೇಲುಗಿರಿಯಲಿಪ್ಪಾ | ಮೇಲಾದ ತಿಮ್ಮಪ್ಪಾ ವಾಲಗ ವೆಂಕಟ | ಶೈಲಾ ವಿಜಯವಿಠ್ಠಲಾ | ನೀಯೋ ಗೋಪಾಲಾ 3
--------------
ವಿಜಯದಾಸ
ಭಳಿರೆ ಭಳಿರೆ ನರಸಿಂಹ ಮಹಾಸಿಂಹ | ವೈರಿ ಉರಿಮಾರಿ ಪ ನಗನಗಾ ನಗನಗಗಳಲ್ಲಾಡೆ ಚತುರ್ದಶ | ಜಗಜಗ ಜಗವೆಲ್ಲ ಕಂಪಿಸಿ ಕಂಬನಾಗೆ || ಹಗೆ ಹಗೆ ಬಲವ ದೆಶೆಗೆಡಿಸಿ ರೋಷಗಿಡಿ | ಉಗು ಉಗು ಉಗುಳುತ್ತ ಬಂದ ನರಸಿಂಹ 1 ಬಿಗಿ ಬಿಗಿ ಬಿಗಿದು ಹುಬ್ಬುಗಂಟನೆ ಹಾಕಿ | ಹೊಗೆ ಹೊಗೆ ಹೊಗೆ ಸುತ್ತಿ ಸರ್ವರಂಜೆ || ನೆಗ ನೆಗ ನೆಗ ನೆಗದು ಕುಪ್ಪಳಿಸಿ ಅಸುರನ್ನ | ಮಗು ಮಗು ಮಗು ಮಗು ಬೇಡಿಕೊಂಡ ನರಸಿಂಹಾ 2 ಉಗು ಉಗು ಉಗು ಉಗರಿಂದ ಕ್ರೂರನ್ನ ಹೇರೊಡಲ | ಬಗ ಬಗ ಬಗ ಬಗದು ರಕುತವನ್ನು | ಉಗಿ ಉಗೀ ಉಗೀ ಉಗಿದು ಚಲ್ಲಿ ಕೊರಳಿಗೆ ಕರುಳ | ತೆಗೆ ತೆಗೆ ತೆಗೆ ತೆಗೆದು ಇಟ್ಟ ನರಸಿಂಹಾ 3 ಯುಗ ಯುಗ ಯುಗ ಯುಗದೊಳಗೆ ಪ್ರಣತಾರ್ತಿ ಹರನೆಂದು | ಝಗ ಝಗಾ ಝಗಝಗಿಪ ಮಕುಟ ತೂಗೆ | ಸುರರು ಗಗನದಿ ನೆರೆದು | ಮಿಗಿ ಮಿಗಿ ಮಿಗಿ ಮಿಗಿಲೆನೆ ನರಸಿಂಹಾ 4 ಒಂದೊಂದೊಂದೊಂದು ಮುನಿಗಳಿಗೊಲಿದು | ಅಂದಂದಂದಂದದೀಗಾಯತ ವೊಲಿದು | ಅಂದಂದಂದವ ಕಾವ ಚೊಳಂಗಿರಿ | ಮಂದಿರನೆ ವಿಜಯವಿಠ್ಠಲ ನರಸಿಂಹಾ 5
--------------
ವಿಜಯದಾಸ
ಭಾಗವತ ಮಹಿಮೆ ಬಣ್ಣಿಸಲಳವೇ ಪ ಈ ಭವಶರಧಿಗೆ ಸುನಾವೆಯಂತಿಹುದಯ್ಯಅ.ಪ ಸೂನು ಶ್ರೀ ಮನ್ನಾರಾಯಣ ಆಪದ್ಬಾಂಧವನಲ್ಲದಿನ್ನಿಲ್ಲವೆಂಬುವಾ1 ಮತ್ತೆ ಶಾಪದಲಿ ನಾರದನ ವಿಷಯವ ಪೇಳ್ವ 2 ಪರೀಕ್ಷಿತ ಶುಕ ಶ್ರೀಹರಿಯ ಅವತಾರಗಳ ವರ್ಣನೆಗಳು ಮತ್ತೆ ಮಹದಾದಿ ತತ್ವ ಸೃಷ್ಟಿಕ್ರಮ ಇತ್ಯಾದಿ ಪುಣ್ಯಚರಿತಗಳನು ಪೇಳ್ವ 3 ಆ ಬೊಮ್ಮಂಡದಿಂದೆ ಚತುರ್ಮುಖನ ಸೃಷ್ಟಿಯು ವಿಭಾಗವ ಪೇಳ್ವ ಸೂಕ್ಷ್ಮ ಪರಮಾಣು ಅಬ್ದಾದಿ ಕಾಲಗಳು ವ್ಯಷ್ಟಿ ಭೂತೋತ್ಪತ್ತಿ ಶ್ರೀ ವರಹ ರೂಪದಿ ತೋರಿದ ಮಹಿಮೆಯಾ 4 ವರಹಾವತಾರದೀ ಧರಣೀಯ ತಂದಂಥ ಶ್ರೀ ಕಪಿಲ ದೇವಹೂತಿಯ ಸಂವಾದವ ಪೇಳ್ವ 5 ಚತುರ ಸ್ಕಂದದಿ ನವಬ್ರಹ್ಮರ ಉತ್ಪತ್ತಿ ಪ್ರಾಚೀನ ಬರ್ಹಿಷರ ವೃತ್ತಾಂತವನು ಪೇಳ್ವ 6 ನೃಪರ ಋಷಭ ಚರಿತೆಗಳು ಪುತ್ರ ಭರತನ ಕಥೆಯು ನದ ನದಿಗಳ ಸೃಷ್ಟಿ ಜ್ಯೋತಿಶ್ಚಕ್ರ ನರಕ ಪಾತಾಳಗಳ ಪೇಳ್ವ 7 ಮಾನವ ವೃತ್ರನ ಜನನ ಮರಣಗಳೆಲ್ಲ ಪೇಳ್ವ 8 ಹಿರಣ್ಯಕಶಿಪುವಿನ ದುರುಳತನವು ಮತ್ತೆ ಧೀವರನಾದ ಪ್ರಹ್ಲಾದರಾಯನಿಂ ವ- ರ್ಣಿತಮಾದ ಶ್ರೀಹರಿಯ ಮಹಿಮೆಯ ಪೇಳ್ವ 9 ಅಷ್ಟಮ ಸ್ಕಂದದಿ ಮನ್ವಂತರ ವಿವರವು ಕಮಠ ಹಯವದನನವತಾರ ಸುಧೆಯಿತ್ತ ಮಹಿಮೆಯ10 ಇಳೋಪಾಖ್ಯಾನವ ತಾರೋಪಾಖ್ಯಾನವ ಪೇಳ್ವ 11 ಶರ್ಯಾತಿ ಕಾಕುಸ್ಥ ಖಟ್ವಾಂಗ ಧೀರ ಮಾಂ- ಧಾತೃ ಸೌಭರಿ ಸಗರರ ಚರಿತೆ ಪರಮಾತ್ಮ ರಘುರಾಮನ ಚರಿತೆಗಳನು ಪೇಳ್ವ12 ಮತ್ತೆ ನಿಮಿಯ ದೇಹತ್ಯಾಗದ ವಿಷಯವು ಉತ್ತಮ ಚಂದ್ರವಂಶದ ನಹುಷಾಸುತ ಯ- ಯಾತಿ ಶಂತನುಯದು ಚರಿತೆಗಳುಳ್ಳ 13 ದಶಮ ಸ್ಕಂದದಿ ಹರಿ ಯದುವಂಶದಿ ಜನಿಸಿ ಶಿಶುಲೀಲೆಗಳ ತೋರಿ ಅಸುರಿ ಪೂತನಿ ಕೊಂದು ಅಸುರಭಂಜಕ ಹರಿಯು ಮೆರೆದ ಮಹಿಮೆಯ ಪೇಳ್ವ 14 ಮಾಯಾ ಮಹಿಮಧೇನು ಪ್ರಲಂಬಕರಾ ಕೊಂದು ಕಾಡುಕಿಚ್ಚಿನಿಂದ ಗೋಪಾಲರ ಕಾಯ್ದ ನೋಯಿಸಿ ಕಾಳಿಯ ಬಾಯ ಬಿಡಿಸಿ ಕಾಳಿಮರ್ದನ ಕೃಷ್ಣ ನಾಡಿದ15 ಗೋಪಸ್ತ್ರೀಯರ ಚರಿತ ಗೋವರ್ಧನೋದ್ಧಾರಣ ಕಂಸವಧೆಯ ಮಾಡಿ ಗುರುಸುತನನು ತೋರ್ದ 16 ಜರೆಯ ಸೇನೆಯ ಜಯಿಸಿ ಕಾಲಯವನರ ಕೊಂದು ಸಿರಿ ರುಕ್ಮಿಣಿಯ ಪಡೆದು ಸೆರೆಯ ಬಿಡಿಸಿ ರಾಜಕನ್ಯೆಯರನು ಕಾಯ್ದ 17 ದ್ವಿವಿಧ ಮುರಾಸುರರೆಲ್ಲರ ನಾಶಪಡಿಸಿ ಕಾಶೀಪುರವ ದಹನ ಮಾಡಿ ಪಾಂಡವರನ್ನು ಕಾಯ್ದ ಪರಮ ಮಹಿಮೆಯ ಪೇಳ್ವ 18 ಭೂಭಾರನಿಳುಹಲು ಕುರು ಪಾಂಡವರೊಳು ಸದ್ಧವರ್i ಸ್ಥಾಪಿಸಿದ ಶ್ರೀಕೃಷ್ಣಚರಿತೆಯ ಪೇಳ್ವ 19 ಭೂಸುರ ಶಾಪದಿ ಯುದ್ಧವನೆ ಮಾಡಿ ಏಕನಾಗಿದ್ದ ಉದ್ಧವನಿಗೆ ಬೋಧಿಸಿ ಲೋಕಾವನೈದು ನಿಜಧಾಮಕ್ಕೆ ತೆರಳಿದ 20 ನಿತ್ಯನೈಮಿತ್ತಿಕ ಪ್ರಾಕೃತಗಳ ಸೃಷ್ಟಿ ವೇದ ವಿಭಾಗವು ಹರಿರಾತನ ಅಂತ್ಯ ಮಾರ್ಕಂಡೇಯ ಚರಿತ ಸೂರ್ಯಗಣಗಳ ಪೇಳ್ವ 21 ಮರೆ ವೆಯಿಂದಾಗಲಿ ರುಜೆಯಿಂದಾಗಲಿ ಹರಿಯೇನಮಃ ಎಂದುಚ್ಚರಿಸಿದ ಮಾತ್ರದಿ ದುರಿತಪಾಪವು ನಾಶವಾಗಿ ಪೋಗುವುದಯ್ಯ 22 ದುರಿತವ್ಯಾಧಿಗಳು ತ್ವರಿತದಿ ಓಡುವುವು ಹರಿಸಂಬಂಧವಲ್ಲದ ಮಾತೆಲ್ಲವೂ ವ್ಯರ್ಥವೋ 23 ಭಾಗವತದ ಸಪ್ತಾಹದ ಪುಣ್ಯಫಲವು ಪಾವನವಾದ ಶ್ರೀಪಾದವ ಸೇರುವ24
--------------
ಉರಗಾದ್ರಿವಾಸವಿಠಲದಾಸರು