ಒಟ್ಟು 1112 ಕಡೆಗಳಲ್ಲಿ , 99 ದಾಸರು , 907 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾ ಬಾ ರಾಘವ ಬಾ ವೀರ ರಾಘವ ಪ ಮತ್ಸ್ಯರೂಪನಾಗಿ ಹೆಚ್ಚಿದ ದೈತ್ಯನ ಇಚ್ಛೆಯಿಂದಲಿ ಕೊಂದ ಅಚ್ಯುತರಾಯನೆ 1 ಕೂರ್ಮರೂಪನಾಗಿ ಅಮರರಿಗೊಲಿದು ನೀ ಕಾಮಜನಕ ಸುಪ್ರೇಮಾವನಿತ್ಯಂತೆ4 2 ವರಹರೂಪನಾಗಿ ಧರಣಿಯ ಚೋರನ ಶಿರವ ತಂದು ನೀ ಜಗವ ಪೊರೆದ್ಯಂತೆ 3 ದುರುಳ ರಕ್ಕಸನ ಕರುಳ ತೆಗೆದು ನಿನ್ನ ಕೊರಳೊಳಗಿಟ್ಯಂತೆ 4 ಚೆಲುವತನದಿ ಪೋಗಿ ಬಲಿಯದಾನವ ಬೇಡಿ ಕಲುಷ ಹರಿಸಿ ಅವನ ಪಾತಾಳಕ್ಕೊತ್ತಿದ್ಯಂತೆ 5 ಕೊಡಲಿಯ ಪಿಡಿಯುತ ದುಗುಡ ರಾಯರುಗಳ ಸೊ ಗಡು ಮುರಿದು ನೀ ಸಡಗರ ಪಟ್ಯಂತೆ 6 ಸೀತೆಗೋಸ್ಕರ ಪೋಗಿ ಸೇತುವೆಯನೆ ಕಟ್ಟಿ ಭೂತ ರಾವಣನ ಖ್ಯಾತಿಯಿಂದಲಿ ಕೊಂದ 7 ವಾರಿಜಾಕ್ಷಿಯರ ಕೂಡಿ ನೀರಾಟದೊಳು ಪೊಕ್ಕು ನೀರೆಯರ1 ಮನ ಅಪಹಾರಮಾಡಿದ ಕೃಷ್ಣ 8 ಚಿತ್ತಜಪಿತ ನೀನು ಬತ್ತಲೆಯೊಳು ಬಂದು ಉತ್ತಮ ಸ್ತ್ರೀಯರ ವ್ರತಗಳಳಿದ್ಯಂತೆ 9 ಸುಂದರ ವಾಜಿಯ ಚೆಂದಾದಿಂದೇರುತ ಮಂದಗಮನೆಯರ ನಂದವಳಿದ್ಯಂತೆ 10 ದೋಷರಹಿತ ನಮ್ಮ ಶೇಷವಿಠ್ಠಲನೆ ಬ್ಯಾಸರವಿಲ್ಲದೆ ಪೋಷಿಸಿ ಸಲಹಲು 11
--------------
ಬಾಗೇಪಲ್ಲಿ ಶೇಷದಾಸರು
ಬಾದರಾಯಣನ ಪಾದವ ನಂಬದೆ ಪ ತುಂಬಿ ತುಳುಕುತಿರೆ ವದನದಿ ಮಂತ್ರವ ಪಠಿಸಿ ಫಲವೇನು ಉದರ ಪೋಷಣೆಗಾಗಿಯೆ ಮಾಡುವ ಕರ್ಮ ನೋಡಿ ನಗುವರು 1 ಕಂಣನು ಮುಚ್ಚಿ ಮೌನದಿ ಕುಳಿತು ಪರ ಹೆಂಣಿನ ರೂಪವ ಮನದೊಳು ನೆನೆದು ಚಿಂಣತನದಿ ಅವಳ ಬೆರೆಯಲು ಯೋಚಿಸಿ ಹೊನ್ನು ಕೂಡಿಸುವ ಪರಿಯದಲ್ಲದೆ 2 ಗುಟ್ಟಲಿ ಪೂಜಿಪ ಗುರುತನು ಅರಿಯದೆ ಪಟ್ಟೆ ನಾಮವ ಹಚ್ಚಿ ಮಡಿಗಳನು ದಿಟ್ಟ ರಂಗೇಶವಿಠಲನ ಮರೆದು 3
--------------
ರಂಗೇಶವಿಠಲದಾಸರು
ಬಾರನ್ಯಾತಕ ಯದು ವೀರಾ|ಪದಾಂಬು ಜವದೋರಾ| ದಯರಸವಾಬೀರಾ| ಸಾರಿದವರಿಗಿನ್ನುದರಾವಾಗಿರಾ ಧೀರಾ ಪ ಮಂದ ಮುಗುದೆಯು ನಾನೆಂದು ಅರಿತು ಮೊದಲಿಂದು| ಕೈಯ್ಯ ಪಿಡಿದು ಬಂದು| ಕುಂದಾಲಿಸುವ ದಯಸಿಂಧು|ಉಚಿತ ವೇನಿಂದು 1 ಎನ್ನ ಬಿನ್ನಹ ಹೇಳಲೇ ಜಾಣೇ| ತಾಪಕೌಷಧಕಾಣೆ| ಕ್ಷಣಯುಗವ ನಿನ್ನಾಣೆ| ಮನ್ನಿಸಿ ತಂದು ತೋರಿನ್ನೆನೆ ಬಾರೇ ಪ್ರವೀಣೇ 2 ಶರಣ ಹೊಕ್ಕವರೆಂದು ಮರೆಯಾ|ನೆಂಬ ಮಾತಿದು ಖರೆಯಾ ಬಂದು ಕೂಡಿದ ತ್ವರಿಯಾ| ಗುರು ಮಹಿಪತಿ ಸ್ವಾಮಿಚರಿಯಾ ಬೊಮ್ಮತಾನರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಮ್ಮಾ ಶ್ರೀಗುರು ಜನನೀ | ಘನಕರುಣೀ | ಬಾರ ನಿಜ ಸುಖ ದಾನೀ ಪ ಭವದಾಟವ ಕೇರಿಯೊಳು ಹೋಗಿ | ಮನಮರವಾಗಿ | ಪರಿ ಬಲು ಪಾಡಿದೆ | ಬಂದೇ ತವಕದಿ ಓಡಿ 1 ಬೋಧದ ಸ್ತನಪಾನ ಮಾಡಿಸೇ | ಸುಧೆ ಉಣಿಸೇ | ತಾಪ | ಬಾಧೆಯ ಬಿಡಿಸೇ | ನಿನ್ನುದರೊಳಗಿರಿಸೇ 2 ಭಕುತಿ ತೊಟ್ಟಿಲವನ್ನು ತೂಗಿಸೀ | ಯನ್ನ ಕೂಡಿಸೀ | ಪಾಡುತಖಿಲೇಶ ನಾಮಾ | ಬಾಲಕಗ ಮಹಿಪಮ್ಮ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೆ ನೀ ಹಂಸಗಮನೆ ಮಾರನ ಪೀಠಕ್ಕೆ ಸಾರಿ ಕರೆವೆ ಲಕ್ಷ್ಮೀದೇವಿಯೇ ಪ. ಕಮಲ ಪುಷ್ಪದೊಳು ನೆಲಸಿದ ಲಕ್ಷ್ಮಿಯೆ ಕಮಲದ ಹಾಸಿಗೆ ಕಾಮಜನಕನ ಸಹಿತ 1 ಮುತ್ತು ಮಾಣಿಕ್ಯವು ಕೆತ್ತಿದ ಹಾಸಿಗೆ ಮುತ್ತೈದೆರೆಲ್ಲರೂ ಮುದದಿಂದ ಕರೆಯುವೊರು 2 ಶ್ರೀ ಲಕ್ಷ್ಮೀದೇವಿಯೆ ಶ್ರೀ ಕೃಷ್ಣನರಸಿಯೆ ಶ್ರೀನಿವಾಸನ ಕೂಡಿ ಪ್ರೀತಿಯಿಂದ ಸರಸನಯನೆ 3
--------------
ಸರಸ್ವತಿ ಬಾಯಿ
ಬಾರೈ ನಂದನ ಕಂದನೆ ನೀರಜನೇತ್ರ ಪ ನೀಲಮಣಿ ಮಂಟಪದ ಮೇಲೆ ಮಾಣಿಕ್ಯಕಲಶ ಜಾಲು ಜಲ್ಲರಿ ರತ್ನ ನೀಲಪೀಠಕೆ ನೀ 1 ಮುತ್ತಿನಾಕ್ಷತೆಗಳ ನೆತ್ತಿಯಲಿಡುವೋಲು ಸುತ್ತಭೂಸುರರೆಲ್ಲರಸುತ್ತ ಬಾರೆನ್ನುವರು 2 ಶೃಂಗಾರಶೀಲನೆ ಸಂಗೀತಲೋಲನೆ ರಂಗನಾಯಕಿಸಹಿತ ತುಂಗಪೀಠಕೆ ನೀ 3 ಅಂಗನೆಯರು ಕೂಡಿ ಮಂಗಳಗಾನ ಪಾಡಿ ರಂಗ ಬಾರೆನ್ನುವರು ಮಾಂಗಿರಿನಿಲಯ4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರೊ ನೀಯನ್ನಮನಿಗೆ ಗೋಪಾಲಕೃಷ್ಣ ಪ ಅಂದದಿ ಚಂದದಿ ಆಡುತ ಪಾಡುತ ಧಿ ಮಿಧಿಮಿಯನ್ನುತ ದಿನ ದಿನ ಕುಣಿಯುತ 1 ಅಂದುಗೆ ಗೆಜ್ಜೆಗಳಿಂದ ಶೋಭಿತನಾಗಿ ಮಂದಾರ ಕೂಡಿಕೊಂಡು ಗಜಗು ಭೊಗರಿಯಾಡುತ 2 ಬಾಲಕನಾಗಿ ನೀ ಲೀಲೆಯ ತೋರುತ ಲಾಲಿಯ ನಾಡುವ ಬಾಲಕರ ಕೂಡ 3 ಕುಡಿಯಲು ನಿನಗೆ ಕೊಡುವೆನು ನೊರೆಹಾಲ ಹುಡುಗರ ಕೂಡಿಕೊಂಡು ಶಿಡಿಗುಡಿನಾಡುತ 4 ಪತಿ ಹೆನ್ನೆ ವಿಠಲ 5
--------------
ಹೆನ್ನೆರಂಗದಾಸರು
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾಲಕೃಷ್ಣ ತುರುವು ಕಾಯಲು ಕಳುಹಿದಳು ತನ್ನಬಾಲನ ಗೋಪಿಯು ಮುದ್ದಿಸುತಿಹಳು ಪ ಕರೆದು ಪಾಲನು ಕುಡಿಸುತಿಹಳು ನಿಂಬುಪರಿಮಳುಪ್ಪಿನಕಾಯ ಬುತ್ತಿ ಕಟ್ಟಿದಳುಸುರಭಿಯ ಮೊಸರು ಬೆಣ್ಣೆಯನು ದೋಸೆಸುರುಳಿ ಹೋಳಿಗೆ ಮಂಡಿಗೆಯ ಕಟ್ಟಿದಳುಸಂಡಿಗೆಯ ಕಟ್ಟಿದಳು 1 ಕರುಗಳೆಲ್ಲ ಕೂಡಿಸಿದಳು ನಿನ್ನಪರಿವಾರದವರು ಬಂದಾರೆ ನೋಡುನೀನು ಬಲರಾಮನು ಜೋಡು ಇಲ್ಲೇಯಮುನಾ ತೀರದಲ್ಲಿ ಆಡೋಹತ್ತಿರದಲ್ಲಿ ಆಡೋ 2 ಕೂಸಿಗೆ ಕುಂಚಿ ಹೊಚ್ಚಿದಳು ಬಿದ್ದಕೇಶಗಳೆಲ್ಲವು ತೀಡುತ್ತಲಿಹಳುಭೂಷಣಂಗಳ ಇಡುತಿಹಳುಇಂದಿರೇಶನ ಕೈಯ್ಯಲ್ಲಿ ಕೋಲು ಕೊಟ್ಟಿಹಳು(ಮುರಲಿ) ಕೊಳಲ ಕೊಟ್ಟಿಹಳು 3
--------------
ಇಂದಿರೇಶರು
ಬಾಳೊ ಸುಖದಿ ಬಾಲನೆ ವರಗುಣ ಶೀಲನೆ ಪ ಬಾಳೊ ಸುಖದಿ ಬಹುಕಾಲಶ್ರೀವೇಣು ಗೋ- ಪಾಲನ ದಯದಿ ಸುಶೀಲ ಸತಿಯಳ ಕೂಡಿ 1 ಪಾದ ತೋಯಜ ಸ್ಮರಿಸುತ ಕಾಯದಾರೋಗ್ಯದೀರ್ಘಾಯುತ್ವವ ಪಡೆದು 2 ಕೃದ್ಧನಾಗದೆ ಜ್ಞಾನ ವೃದ್ಧರಸೇವಿಸಿ ಮಧ್ವಮತದ ತತ್ವ ಶ್ರದ್ಧದಿ ಕೇಳುತ 3 ತಂದೆ ತಾಯಿಗಳಲ್ಲಿ ಇಂದಿರೆರಮಣನೆ ನಿಂದು ಪಾಲಿಪನೆಂದು ವಂದನೆ ಪಾಡುತ 4 ಭಕ್ತಿಯಿಂದತಿಥಿಗಳ ನಿತ್ಯದಿ ಸೇವಿಸುತ ಪುತ್ರ ಪೌತ್ರಾದಿ ಸಂಪತ್ತಿಯ ಪಡೆದು 5 ಭೂಸುರರೊಡಗೂಡಿ ತೋಷದಿಕೃತ ಹರಿ ವಾಸರ ವೃತ ಫಲ ಶ್ರೀಶನಿಗರ್ಪಿಸುತ 6 ಧಾರುಣಿಯೊಳು ಕೃಷ್ಣಾತೀರ ಕಾರ್ಪರನಿಲಯ ನಾರಸಿಂಹನ ಪದ ವಾರಿಜ ಸೇವಿಸುತ 7
--------------
ಕಾರ್ಪರ ನರಹರಿದಾಸರು
ಬಿಡ್ವು-ದುತ್ತ ಮವು ಪ ಹೋದಯೋಚನೆ ಮಾಡಲು ಮನದಲ್ಲಿ ಅತಿಶಯವೇನಲ್ಲಿ ಫಲವೇನಿಲ್ಲಾ ಬಹು ಭಾದಕ ವಂದೆ ಬುದ್ಧಿಯು ತಿಳಿಯದೆ ಸುಲಭದಿಂದಲಿ ಮುನಿವಂದ್ಯನ ಸ್ತುತಿಯ ಮಾಡಿದಲ್ಲಿ ಖನಿಯಂತೆ ಭಾಗ್ಯವು ಬೇಗನೆ ಕೊಡುವನು---ಸ್ಥಿರವಲ್ಲಿ 1 ಹೊಟ್ಟಿಯ ದೆಸೆಯಿಂದಾ ಕೃಷ್ಣನ ಚರಣಾರವ ಕ್ರಿಯದಲಿ ಪೂಜಿಸಿ ನಿಷ್ಟವಾಗು---- ಕಷ್ಟವೆಲ್ಲ ಕಳೆದು ಕರುಣಿಸಿ ಶೀಘ್ರದಿ ಕಾಯುವ ಗೋವಿಂದ 2 ಕೂಡಿ ಪುಣ್ಯವು ಕಳೆದು ಪಾಪಕೆ ಹೋಗಬೇಡಾ ಮಂqಲದೊಡೆಯನ ಮಹಿಮ ವುಳ್ಳ ದಾಸರ ಮನ್ನಿಸದಿರ ಬೇಡಾ -------- ಪಾದ ಬಿಡಬೇಡಾ 3
--------------
ಹೆನ್ನೆರಂಗದಾಸರು
ಬೀದಿಯೊಳು ಯಾತರಾ ನಂಟು ಬೇಡ ದಮ್ಮಯ್ಯ ಪ ಭೇದಿಸಿ ನೋಡುವರುಂಟು ಬೆಂಬತ್ತಿ ಬಾರದಿರಯ್ಯ ಅ ಕಂಡ ಕಂಡ ಠಾವಿನಲಿ ಕಣ್ಣೆತ್ತಿ ನೋಡದಿರಯ್ಯಕಂಡಿಯೊಳು ಕೈಸನ್ನೆ ಮಾಡದಿರಯ್ಯಗಂಡನುಳ್ಳವಳ ಜೊತೆ ಭಂಡಾಟವ್ಯಾಕಯ್ಯಕೊಂಡೆಗಾತಿಯರುಂಟು ದುಡುಕದಿರಯ್ಯ 1 ಬೇಳುವೆಯ ಮಾತಾಡಿ ಗಾಳ ಹಾಕದಿರಯ್ಯಬಾಳೆ ಹಣ್ಣಿಗೆ ಕೊಡಲಿ ಬೇಕೆ ದಮ್ಮಯ್ಯಆಳುವ ಅರಸಾಗಿ ನಿನಗಾವ ಬರವಯ್ಯಮೇಳದವರ ಬಿಟ್ಟು ಮೇರೆದಪ್ಪುವರೇನಯ್ಯ 2 ನೋಡುವರು ಜನರೆಲ್ಲ ನಾಚಿಕೆ ಇಲ್ಲವೇನಯ್ಯಜೋಡು ಕಳಸವ ಹಿಡಿಯದಿರು ಜೋಕೆ ದಮ್ಮಯ್ಯಮಾಡುವ ದೈನ್ಯ ಬಲ್ಲೆ ಮದ್ದೂರು ನರಸಿಂಹಯ್ಯಕೂಡಿದ ಕನಕನಾದಿಕೇಶವ ನೀನಹುದಯ್ಯ 3
--------------
ಕನಕದಾಸ
ಬೂಟಾಟಿಗನು ನಾನು ಸತ್ಯಮಾಯ ಝಾಟ ನಾಟಕವಾಡಿ ದಾಟಿ ಬೈಲಿಗೆ ನಿಂತ ಪ ಮಿಥ್ಯ ಪ್ರಪಂಚ ಮರೆದು ಅರ್ತು ನಿತ್ಯಸುಖದಿ ಮನ ಬೆರೆದು ಅರ್ತುಅರಿಯದೆ ಮತ್ರ್ಯದೊರ್ತನದೊಳಗಿರ್ದು ಗುರ್ತಿಟ್ಟು ಪರಲೋಕ ಸುರ್ತುಮಾಡಿಕೊಂಡ 1 ಸಾಧುವರ್ತನದ್ಹಾದಿ ತಿಳಿದು ನಿಜ ಶೋಧಿಸಿ ಕಾಲನ ಬಾಧೆ ಗೆಲಿದು ವಾದಿಮೂರ್ಖರ ಕೂಡಿ ವಾದಿಸದನುದಿನ ಸಾಧಿಸಿ ಪರಸುಖಸ್ವಾದ ಸವಿಯುವಂಥ2 ಕಾಮಕ್ರೋಧಾದಿಗಳಳಿದು ಮಹ ಪ್ರೇಮ ಮೋಹಂಗಳ ತುಳಿದು ಸ್ವಾಮಿ ಶ್ರೀರಾಮನ ಪ್ರೇಮ ಪಡೆದು ಮುಕ್ತಿ ಸಾಮ್ರಾಜ್ಯಸುಖ ಸಂಪಾದಿಸಿಕೊಂಡಂಥ 3
--------------
ರಾಮದಾಸರು