ಒಟ್ಟು 750 ಕಡೆಗಳಲ್ಲಿ , 80 ದಾಸರು , 610 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹದ್ದೇಹಿ ಭಟರಿಂದ ಯಮನಾಜ್ಞೆಯಂತೆ ಪ ಶರಣಜನನಿಂದಕಗೆ ಪರಮಕುಂಭೀಪಾಕ ಪರಮಭೀಕರಜ್ವಾಲೆ ಕರುಣಶೂನ್ಯರಿಗೆ ಪರನಾರಿಗಳುಕುವಗೆ ಮೂತ್ರ ರಕ್ತಾಮೇಧ್ಯ ಉರುಬಾಧೆ ಕರ್ಮದುರ್ಗಾ ಪರಮ ನೀಚರಿಗೆ 1 ಮಾತಾಪಿತದೂಷಕಗೆ ಪ್ರೇತಕ್ರಿಮಿಕುಂತ ಭಯ ಪಾತಕಗೆ ರಾಕ್ಷಸರ ಭೂತಕ್ರಮಿದೀರ್ಘ ಘಾತಕಗೆ ಉಗ್ರತರ ವ್ಯಾಘ್ರಮುಖ ಭಟ ಶಿಕ್ಷೆ ರೋತು ಮಲತ ಮಜ್ಜ ನೀತಿಬಾಹಿರಗೆ 2 ಕಂಚಿನ್ವಾಯಸ ನರಕ ಕೇಳಾ ಕಪಟರಿಗೆ ಪಂಚಮಹಾಪಾತಕರಿಗುಳಿವಿನ ಉರುನರಕ ಕೂಪ 3 ಕಾದ ಉಕ್ಕಿನ ಪ್ರತಿಮೆ ಕಾಮಾಂಧ ಮೂಢರಿಗೆ ಕಾದು ಉರಿವರಗಿನೂಟ ಕಡುಲೋಭಿಗಳಿಗೆ ಕಾದ ಸೀಸದ ಮಡುವು ಮನೆಮುರುಕ ತುಂಟರಿಗೆ ಕಾದೆಣ್ಣೆಕೊಪ್ಪರಿಗೆ ಕುಟಿಲ ಕುಹಕರಿಗೆ 4 ಪರದ್ರವ್ಯಪಹಾರಿಗೆ ಭೇದಿ ಭೈರವಕೂಪ ನೆರೆನಂಬಿ ಕೊಲ್ಲವಗೆ ಮಸೆದಲಗುಕೊಡಲಿ ಪರರೊಗತನರಿದಗೆ ನರಕ ಚಂದ್ರಾರ್ಕಪರಿ ಗುರು ಹಿರಿಯರ್ಹಳಿದರಿಗೆ ಉರಿಸರಳ ಮಂಚ 5 ಕಾಲಯಮಪಾಶವು ತುಳಸಿದಳ ತುಳಿದವರಿಗೆ ಕಾಲಭೈರವ ಮೃತ್ಯು ಮಾಯಮೋಹಿಗಳಿಗೆ ಕಾಲಕರ ಶೂಲ ಕೊಂಡಿ ಚಾಂಡಾಲಗೆ ಸೂಳೆಯರ ಸೇವಕಗೆ ಕಾಲಯಮದಂಡ 6 ಸಂತ ಸಜ್ಜದಾನಸಂಗರಿಯದಧಮರಿಗೆ ಇಂತು ಎಂಬತ್ತು ಕೋಟಿ ನರಕಯಾತನವು ಅಂತಕಾರಿ ನಿನ್ನಾಜ್ಞೆಯಂತೆ ನಡೆಯುತಿವೆ ಎನ್ನ ಅಂತರದಿ ನಿಂತಿದನು ಗೆಲಿಸು ಶ್ರೀರಾಮ7
--------------
ರಾಮದಾಸರು
ಹನುಮ - ಭೀಮ - ಮಧ್ವರು ಅಮಮ ಎನಿತÀದ್ಭುತಮಹಿಮೆ ಪೊಗಳನು ಪಮ ದೇವ ಜೀವೋತ್ತಮ ಸುರಸಾರ್ವಭೌಮ ಹನುಮ ಪ ಭೀಮ ರಿಪುಕುಲಧೂಮ ಯತಿಕುಲಸೋಮ ಶ್ರೀಮದಾನಂದ ಮುನಿಮಹಿಮಾಅ.ಪ ಜೀಯ ಈ ಪಯೋಜಾಂಡದೊಳಿನ್ನೆಣೆಯಿಲ್ಲ ಬಲದೊಳು ಶೌರ್ಯ ಕಾಯನೋಡಲು ಆಖಣಾಶ್ಮಸಮನು ನಿನ್ನೊಳು ಹರಿಯರೂಪಗಳೆನಿತು ಇಹುದಯ್ಯ ನಿನ್ನಲ್ಲಿಹುದು ಇನ್ನೆಷ್ಟಯ್ಯ ಶ್ರೀಯರಸ ಶ್ರೀ ಶಿಂಶುಮಾರನು ನಿನ್ನ ಮುಖಕಮಲದಲ್ಲಿಹನೂ ವಾಯುಮೂರುತಿ ನಿನ್ನ ನಾಸಾಗ್ರದೊಳು ಶೋಭಿಪ ಮತ್ಸ್ಯಮೂರುತಿಯು ಜೀಯ ನಿನ್ನಯ ನಾಸಪೃಷ್ಠದಿ ಕೂರ್ಮ ಮೂರುತಿಯು ಅಲ್ಲಿ ನೆಲೆಸಿಹನು ನಯನದ್ವಯದಿ ಕಪಿಲವಿಷ್ಣು ಶ್ರವಣದ್ವಯಗಳೊಳು ಕೃಷ್ಣರಾಮರು ನಾರಾಯಣ ಇಹನು 1 ಬಾಹುದ್ವಯಗಳೋಳ್ಕಲ್ಕಿ ಬುದ್ಧರೂಪಿರೆ ಬಾಹುಬಲವಿನ್ನೆಷ್ಟಯ್ಯ ಅಹುದು ಪವನಹಸ್ತದೊಳ್ ಪಾವನ್ನ ಶ್ರೀ ಬಾದಾರಾಯಣ ಕಂಗೊಳಿಪನಯ್ಯ ಶ್ರೀ ಹರಿಯು ನೆಲೆಸಿಹನು ಪಾದ ಮಧ್ಯಸ್ಥಾನದಲಿ ಸಲೆ ಬೆಳಗುತಿಹನು ಮಹಮಹಿಮ ನಿನ್ನಯ ಪಾದಪೃಷ್ಠದಿ ಹೃಷೀಕೇಶ ಹರಿಯು ನಿಂತಿಹನು ಇಹರಯ್ಯ ದಕ್ಷಿಣ ವಾಮಜಾನುಗಳಲಿ ಯಜ್ಞ ಶ್ರೀಧರರಿಹರು ಕಟಿ ಪ್ರದೇಶದಿ ದಿಟ್ಟರಾಗಿಹರು 2 ದಕ್ಷಿಣದಲ್ಲಿಹ ವನಮಾಲೆಯಲ್ಲಿಹರು ಗುಣನಿಧಿಯೆ ತದುಪರಿ ಸೂರ್ಯವರುಣಅಶ್ವಿನಿಗಳೆಲ್ಲ ನಿನ್ನಯ ವನಮಾಲೆಯಲಿಹರು ಎಣಿಸೆ ದಕ್ಷಪ್ರಜಾಪತಿಯು ನಿನ್ನ ವಾಮ ವನಮಾಲದೊಳಲ್ಲಿ ಇರುತಿಹನು ಮಣಿದು ಸೇವಿಪ ಜಯಂತ ಮನುಯಮ ತದನಂತರ ವನಮಾಲೆಯಲ್ಲಿಹರು ಜಾಣ ಬೃಹಸ್ಪತಿ ದಕ್ಷಿಣ ವನಮಾಲದೊಳು ಆಶ್ರಯಿಸಿ ತಾವಿಹರು ಪ್ರಾಣ ಅಪಾನ ವ್ಯಾನೋದಾನ ಸಮಾನ ವನಮಾಲದಲ್ಲಿಹರು 3 ಪದುಮನಾಭನು ಸಲೆ ಬೆಳಗುತಿಹನು ವಾಮದಕ್ಷಿಣ ಕುಕ್ಷಿಯೊಳಿಹರು ಹರಿಮೂರುತಿ ನಿನ್ನಾಂತರದಿಂದ ನಿಂತಿಹನು ಪಾದಪಾಶ್ರ್ವಗಳಲ್ಲಿ ಋಷಭ ಗೋವಿಂದ ಮೂರುತಿ ಅಲ್ಲೆ ಇರುತಿಹರು ಮುದದಿ ನಿನ್ನಯ ವಕ್ಷದೊಳು ಶ್ರೀ ವರಹಮೂರುತಿ ಅಲ್ಲೆ ನೆಲೆಸಿಹನು ಎದುರಿಲ್ಲ ನಿನಗೆ ಕಪೋಲದೊಳು ಶ್ರೀ ವಾಸುದೇವನು ಇಹನು ವಿಧಿವಾಯುಗಳು ನಿನ್ನಯ ವಾಮಭುಜದೊಳು ಮುದದಿ ನಲಿಯುತಿಹರು ವಿಧಿ ವಾಯುಸತಿಯರು ದಕ್ಷಿಣಭುಜದೊಳು ನುತಿಸುತಿಹರು 4 ಪವನಶಕ್ತಿ ಹನ್ನೆರಡೆಲ್ಲ-ನಿನ್ನಯ ಹೃದಯದಾಭರಣ ಪವನಿಸಿರ್ಪುದು ಕ್ರಮದಿ-ಶಕ್ತಿ ಪ್ರತಿಷ್ಠೆ ಸಂವಿತ್ ಸ್ಪೂರ್ತಿ ಭವಹಾರಿ ನಿನಗೆ ಕಲಾವಿದ್ಯಾಮತಿ ನಿಯತಿ ಮಾಯಾ ಕಾಲಪುರುಷ ಈ ಪರಿಯು ಜೀವೇಶ ನಿನ್ನಯ ಮಹಿಮ ಗುಣಗಳ ಪೊಗಳಲಳವೇ ಹರಮುಖಾದ್ಯರಿಗೆ ಜೀವರೆಸಗುವ ಕಾರ್ಯಗಳು ಲವಲೇಶ ನಿನ್ನ ಬಿಟ್ಟು ನಡೆಯದೊ ಪವಮಾನಮೂರುತಿ ಹರಿಯ ಕರುಣಾಕಟಾಕ್ಷ ನಿನ್ನೊಳು ಇಟ್ಟುಇರುವುದು ಇನ್ನೆಷ್ಟೊ ದೇವ ನಿನ್ನಯ ಖ್ಯಾತಿ ಎಷ್ಟೋ ಬಲದಿ ಶೇಷಶೈಲವ ತಂದೆ ಕಾವುದಯ್ಯ ಶ್ರೀ ವೇಂಕಟೇಶನ ಪ್ರೇಮದ ದೂತ 5
--------------
ಉರಗಾದ್ರಿವಾಸವಿಠಲದಾಸರು
ಹನುಮಂತ ವಿಠ್ಠಲಾ | ಪೊರೆಯ ಬೇಕಿವಳಾ ಪ ಘನ ಮಹಿಮ ನಿನ್ಹೊರತು | ಅನ್ಯರನು ಕಾಣೇ ಅ.ಪ. ಸ್ವಾಪದಲಿ ಗುರುದರ್ಶ | ಅಂತೆ ಅಂಕಿತ ಪತ್ರತಾ ಪಿಡಿದು ನಿಂತಿಹಳೊ | ಶ್ರೀಪ ಸೀತಾಪತೇ |ಕಾಪಟ್ಯರಹಿತಳನು | ಕೈಪಿಡಿದು ಸಲಹೆಂದುನಾ ಪ್ರಾರ್ಥಿಪೆನೊ ನಿನ್ನಾ | ತಾಪಸ ಸುವಂದ್ಯಾ 1 ಕನ್ಯೆಯಗಭಯದನಾಗಿ | ಮುನ್ನಪತಿ ಸೇವೆಯನುಚೆನ್ನಾಗಿ ದೊರಕಿಸುತ | ಕಾಪಾಡೊ ಹರಿಯೇ |ಅನ್ನಂತ ಮಹಿಮ ಕಾರುಣ್ಯ | ಸಾಗರನೆ ಹರಿನಿನ್ನನೇ ನಂಬಿಹಳೊ | ಭಾವಜ್ಞಮೂರ್ತೇ 2 ಭವ ಶರಧಿ ಸನ್ನುತ ಸ್ವಾಮಿ | ಭೂಮಗುಣ ಧಾಮಾ 3 ಮರುತ ಮತ ತತ್ವಗಳು | ಸ್ಛುರಿಸಲಿವಳಿಗೆ ಹರಿಯೇತರತಮಾತ್ಮಕ ಜ್ಞಾನ | ದರಿವು ವೃದ್ಧಿಸಲೀ |ಹರಿಯ ಸರ್ವೋತ್ತಮತೆ | ಸ್ಥಿರವಾಗಿ ಇವಳೀಗೆಪರಮಸಾಧನ ಮಾರ್ಗ | ಕ್ರಮಿಸುವಂತೆಸಗೋ 4 ಕಾಮಿತಪ್ರದ ದುಷ್ಟ | ಆಮಯವ ಪರಿಹರಿಸಿಈ ಮಹಿಳೆಯುದ್ಧರಿಸೊ | ಸ್ವಾಮಿ ರಾಮಚಂದ್ರಾ |ನಾಮಾಂತ ಇತ್ತುದಕೆ | ಸಾರ್ಥಕವ ಮಾಡೆಂದುಸ್ವಾಮಿ ಗುರು ಗೋವಿಂದ | ವಿಠಲ ಭಿನ್ನವಿಪೆ 5
--------------
ಗುರುಗೋವಿಂದವಿಠಲರು
ಹಯ ಮುಖ ಪದಾಬ್ಜ ಮಧುಪಾ | ದುರ್ಭವಭಯವ ತಾರಿಸು ಮುನಿಪಾ ಪ ವ್ರಯವಾಯಿತು ಮಮ | ಆಯುವು ಎಲ್ಲವುಪ್ರಿಯ ನೀನಲ್ಲವೆ | ಭಯ ಪರಿಹರಿಸೈ ಅ.ಪ. ರಜತ ಪುರಿಲಿ ನಿಂದೂ | ವಿಧಿಸಿದಿಅಜಪಿತ ಭಜನೆಯ ನಂದೂ |ಋಜಗಣದಲಿ ಬಹು | ರಾಜಿಪ ಗುರುವೇಅಜನ ಸುಪದವಿಗೆ | ನಿಜದಿ ಬರುವ ಯತಿ 1 ಸೋದೆ ಪುರದಿ ವಾಸಾ | ಭಕ್ತರ$ಗಾಧ ದೋಷ ನಾಶಾ ||ವಾದಿ ಜನರ ಮದ | ಛೇದನ ದಶಮತಿಬೋಧಪ್ರೀಯ ಗುರು | ಮೋದವ ಪಾಲಿಸು 2 ಪಂಚ ವೃಂದಾವನವಾ | ರಚಿಸುತಪಂಚರೂಪಿ ಹರಿಯಾ ||ಸಂಚಿಂತಿಸಿ ಭಕ್ತ | ವಾಂಛಿತ ಗರೆಯಲುಸಂಚುಗೊಳಿಸಿ ಪ್ರ | ಪಂಚವ ತೊರೆದೇ 3 ಅಮರೇಂದ್ರ ನಾಳ್ಬರಲೂ | ತ್ರೈವಿಕ್ರಮ ದುತ್ಸವದೋಳೂ ||ಸಮಯವಲ್ಲವಿದು | ನಿಮಗೆಂದೆನುತಲಿಕ್ರಮಿಸುವ ತೆರ ನೀ | ಮಾಡಿದೆ ಯತಿವರ 4 ಪೂವಿಲ್ಲನ ಪಿತನಾ | ಗುರುಗೋವಿಂದ ವಿಠ್ಠಲನಾ ||ಭಾವದಿ ಕಾಣುತ ಮೈಮರೆದ್ಹಿಗ್ಗುವಈ ವಿಧ ಸುಖ ಯಾವಾಗಲೂ ಕಾಣುವ 5
--------------
ಗುರುಗೋವಿಂದವಿಠಲರು
ಹಯಾನನ ವಿಠಲಾ ನೀ ದಯದಿ ಸಲಹೊ ಇವಳಾ |ದಯಾಪಯೋನಿಧಿ ಎಂದು ನಿನಗೆ ಭಿನ್ನೈಪೇ ಪ ಕುಕ್ಷಿಯೊಳು ಜಗಧರಿಪ ಪಕ್ಷಿವಾಹನದೇವಲಕ್ಷಿಸದಲೇ ದೋಷ | ಲಕ್ಷವನು ಇವಳಾಈಕ್ಷಿಪುದು ಕರುಣಾಕಟಾಕ್ಷದಲ್ಲೆಂದೆನುತಲಕ್ಷ್ಮೀರಮಣನೆ ಹರಿಯೆ ಪ್ರಾರ್ಥಿಸುವೆ ನಿನಗೇ 1 ವಿನುತ | ಬಾಗಿ ಬೇಡುವೆನೋ |ಜಾಗುಮಾಡದೆಲೆ ವೈ | ರಾಗ್ಯ ಭಕ್ತಿಜ್ಞಾನಯೋಗ ಕೊಟ್ಟುದ್ದರಿಸು | ಸಾಗರಜೆ ರಮಣಾ 2 ವಾಚಾಮ ಗೋಚರನೆ | ನೀಚೋಚ್ಚಕ್ರಮ ತಿಳಿಸಿಮೋಚ ಕೇಚ್ಛೆಯ ಮಾಡೊ | ಪಾಚಕಸುವಂದ್ಯಾಪ್ರಾಚೀನ ಕರ್ಮಾಳಿ ಯೋಚಿಸಲು ಅಳವಲ್ಲಆಚರಿತ ಸಂಚಿತವ | ಮೋಚಿಸಾಗಾಮೀ 3 ಸಿರಿ | ನಲ್ಲ ನಿನಗೀಪರಿಯಸೊಲ್ಲ ಪೇಳುವುದುಚಿತೆ | ಚೆಲ್ವ ಹಯವದನಾಬಲ್ಲಿದನೆ ನೀನಾಗಿ | ಚೆಲ್ವ ರೂಪವ ತೋರೆಸಲ್ಲಲಿತ ಅಂಕಿತವ | ಸಲ್ಲಿಸಿಹೆ ದೇವಾ 4 ಭಾವುಕಾರ್ಜುನ ಬಂಡಿ | ಬೋವನಾಗುತ್ತ ಭವನೋವಕಳೆವೋಪಾಯ | ನೀವಲಿದು ಪೇಳೀತಾವಕರ ಪೊರೆದಂತೆ | ಭಾವುಕರ ಪೊರೆ ಬೇಡ್ವೆಗೋವುಗಳ ಪಾಲ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಹರಿತ್ರಿವಿಕ್ರಮ ವ್ಯಾಸವಿಠಲ | ಪೊರೆ ಇವಳಾ ಪ ದುರಿತ ದುಷ್ಕøತವೆಲ್ಲ | ದೂರಮಾಡುತಲೀ ಅ.ಪ. ಸಾರ | ಪಠಿಸೆಂದು ಪೇಳ್ದಾ 1 ವರುಷ ಪೈಂಗಳ ಪುಷ್ಯ | ಆರಾಧನೆಯದಿನದಿಗುರುಗಳನು ಕಂಡೀಕೆ | ಅವರೆ ಇವರೆಂದುಭರದಿ ನಿಶ್ಚಯಿಸುತಲಿ | ಹರಿದಾಸ್ಯ ಕಾಂಕ್ಷಿಸುತಗುರುವೆಂದು ಎನ್ನ ಬಳಿ | ಪ್ರಾರ್ಥಿಸುತ್ತಿಹಳಾ 2 ಕಂಸಾರಿ ಕಳೆದು ಭವಸಂಸಕ್ತಳಾಗಿಸದೆ | ಉದ್ದರಿಸೊ ಇವಳಾಶಂಸಿಸೀ ತವಪಾದ | ಪಾಂಸುವನೆ ಧರಿಸಿ ನಿ-ಸಂಶಯದಿ ತವದಾಸ್ಯ | ಸಿದ್ದಿಸೊ ಹರಿಯೇ 3 ಪತಿತ ಪಾವನ ರಂಗ | ಪತಿವ್ರತೆಗೆ ಸುಜ್ಞಾನಭಕ್ತಿ ಹರಿಗುರುಗಳಲಿ | ಇತ್ತು ಅಧಿಕಧಿಕಾವತ್ತಿ ಬಹ ವಿಘ್ನಗಳ | ಹತ್ತಿಕ್ಕಿ ಪೊರೆಯೆಂದುಅರ್ಥಿಯಲಿ ಬಿನೈಪೆ | ಮರುತಂತರಾತ್ಮ 4 ದರ್ವಿ ಜೀವಿಯ ಪೊರೆಯೊ | ದುರ್ವಿಭಾವ್ಯನೆ ಹೃದಯಗಹ್ವರದಿ ತವರೂಪ | ತೋರ್ವ ಮನಮಾಡೀಸರ್ವತ್ರ ತವನಾಮ | ದಿವ್ಯ ಸಂಸ್ಕøತಿ ಈಯೊಸರ್ವೊತ್ತಮನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿನಾಮದರಗಿಳಿಯು ದೊರಕಿತಿಂದು ವರ ಹಿರಿಯರಾ ಕರುಣದಿಂದೆನಗೆ ಪ. ಸಾರ ಹಾದಿಯಲಿ ವರದ ಮಾಧವನೆಂಬ ಸಾಧಿಸಿ ಕಂಸನ ಗೆದ್ದ ಗೋವಿಂದ 1 ದುಷ್ಟರನು ಶಿಕ್ಷಿಪ ವಿಷ್ಣುವಿನ ನಾಮವು ಕಷ್ಟವನು ಪರಿಹರಿಪ ಮಧುಸೂಧನ ಇಷ್ಟ ಮೂರುತಿ ತ್ರಿವಿಕ್ರಮನ ನಾಮವು ಉತ್ಕøಷ್ಟ ವಾಮನನೆಂಬ ಕಠ್ಠಾಣಿ ಮುತ್ತಿನ 2 ಭವ ಚಂದಿರಾನನನಾದ ದಾಮೋದರನಾ 3 ವಾಸುದೇವ ಎಂಬ ಸಂಕಟವ ಪರಿಹರಿಪ ಪ್ರದ್ಯುಮ್ನನೆಂಬುವನ ಎನ್ನ ಸಂಕುಚಿತ ಮಂಕನಳಿವ ಅನಿರುದ್ಧನ 4 ಪರಮ ಪದವಿಯನಿತ್ತು ಪೊರೆವ ಪುರುಷೋತ್ತಮನ ಪರರ ಬೇಡಿ ಸದ್ವಸ್ತು ಅಧೋಕ್ಷಜನಾ ವರ ಜ್ಞಾನಿಗಳ ಮಾನಸ ನಾರಸಿಂಹನ ಪರಮಪುರುಷನೆಂಬ ಅಚ್ಚುತನ್ನಾ 5 ಮುದ್ದು ಮುಖದೊಳು ತಿಲಕ ತಿದ್ದಿದ ಜನಾರ್ಧನನ ಹದ್ದುವಾಹನನಾದ ಉಪೇಂದ್ರನ ಮುದ್ದು ರಮೆಯರಸ ಶ್ರೀ ಶ್ರೀನಿವಾಸನೆಂಬುವನ 6
--------------
ಸರಸ್ವತಿ ಬಾಯಿ
ಹರಿಯ ಪಟ್ಟದರಾಣಿ ನಿಮ್ಮ ಸಿರಿಚರಣಕ್ಕೆ ನಾ ಶರಣೆಂಬೆಧರಣಿ ಒರೆಸಮ್ಮ ದುರಿತಘಮ್ಮ ಹರಿಸುದಮ್ಮ ಪ. ಧನಧಾನ್ಯವಿತ್ತು ಮತ್ರ್ಯರ ಪೊರೆವೆ ಎಂದೆಂದುಮನೆಗಿಂಬುಕೊಟ್ಟು ರಕ್ಷಿಸಿದೆದಿನದಿನದಿ ಚರಣವಿಟ್ಟರೆ ನೊಂದುಕೊಳೆ ನಿನ್ನಗುಣಕೆ ಭೂದೇವಿ ಸರಿಗಾಣೆ ಸಕಲಮುನಿ-ಜನರ ಪೊರೆವುದು ನಿಮ್ಮಾಣೆ ನಾರಾಯಣ ಬಂದುನಿನ್ನ ಸಲಹುವ ಪ್ರವೀಣೆ1 ನಿತ್ಯ ಸಮಸ್ತಪರ್ವತಭಾರವ ನೀ ತಾಳ್ವೆಉತ್ತಮ ತ್ರಿವಿಕ್ರಮನ ರಥೋತ್ಸವವೆ ಮೊದಲಾದಪವಿತ್ರಾಂಕುರಾರ್ಪಣಕೆ ನೀ ಬಂದು ವರಿಯಸುತ್ತಿನ ಪವಳಿಯೊಳಗೆ ನಿಂದು ನಮಗೆಮುಕ್ತಿ ಪದವೀವುದಕೆ ಬಾ ಕೃಪಾಸಿಂಧು 2 ಕೊಂಡ ಸಿರಿ ಹಯವದನಹರಿಯಕರ ಕರಿಭೇರುಂಡ ಸಿರಿಗೆ ಸರಿಯೆನಿಸಿನಿನ್ನನ್ನು ಪೊರೆಯುತಲಿಹನು ಕಂಡಾ3
--------------
ವಾದಿರಾಜ
ಹರಿರೇವ ಪರೋ ಹರಿದೇವ ಗುರೋ ಹರಿಯೇ ಗುರುವೆಂದರವ್ಹಿರೋ ಧ್ರುವ ಗುರುಮಧ್ವಪರ್ಹೇಳಿದ ನಿಜಕೀಲು ಅರಿತುಕೊಂಬುವಾದಿದೆವೆ ಮೇಲು ಪರಮ ಭಗತರನುಭವದ ಬಾಗಿಲು ಪರಗತಿ ಸಾಧನಕಿದೆ ಮಿಗಿಲು 1 ಹರಿಗುರುವೆರಡಾಗಿ ತೋರಿತು ನಾಮವು ಅರಿಯಲರಿಯದವಾಗಿದೆ ಭ್ರಮವು ತೋರುವದೊಂದೇ ಸಜ್ಜನರಿಗಿದೇ ನೇಮವು ಅರಿಕ್ಯುಳ್ಳವರಿಗಿದೇ ಕ್ರಮವು 2 ಹರಿಗುರು ಒಂದಾಗಿ ತೋರಿತು ನಿಜಘನ ತರಳ ಮಹಿಪತಿಸ್ವಾಮಿಯ ಕರುಣ ಗುರುಭಾನುಕೋಟಿತೇಜನೆ ಪರಿಪೂರ್ಣ ತೋರುವದೊಂದಾಗಿದೆ ನಿಜಖೂನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹಾಲಹಲ ಉಂಡ ನಮ್ಮ ಪಾರ್ವತಿಯ ಗಂಡ ಪ. ನೀಲಕಂಠನೆಂದೆನಿಸುತ ಸುರರನು ಪಾಲಿಸಿದನು ಕಂಡ್ಯಾ ಅ.ಪ. ಸುರರು ಅಸುರರು ಕೂಡಿ ಶರಧಿಯ ಭರದಿ ಮಥನವ ಮಾಡಿ ಗರಳವು ಉದ್ಭವಿಸಲು ಕಂಗೆಡುತಲಿ ಹರನನು ಸ್ತುತಿಮಾಡಿ 1 ಮೃತ್ಯುಂಜಯ ಪಾಹಿ | ಸಲಹೊ ಕೃತ್ತಿ ವಾಸನೆ ಪಾಹಿ ಮೃತ್ಯುವಾದ ವಿಷ ಭಯವನೆ ಬಿಡಿಸೈ ಸತ್ಯವಿಕ್ರಮ ಪಾಹಿ 2 ಪರಿಪರಿ ಸ್ತುತಿಗೈಯೆ | ಹರಮನ ಕರಗುತ ಕೃಪೆ ಗೈಯೆ ಗಿರಿಜೆ ನೀಡು ಅಪ್ಪಣೆ ವಿಷ ಕುಡಿವೆನು ಪರಮ ಮಂಗಳ ಕಾಯೆ 3 ತನುಸುಖವ ತೊರೆದು | ಲೋಕವ ಘನಕೀರ್ತಿಯನು ಪಡೆಯಲು ಹರಿ ಮೆಚ್ಚುವ ಎನುತ ಗಿರಿಜೆಗೆ ಪೇಳ್ದು 4 ಕರದಿ ಸೆಳೆದು ಕುಡಿದ | ವಿಷವನು ವಿಧಿ ಕಂದ ಹರಿಯ ಕೃಪೆಯಿಂದ 5 ನಗಜೇಶನು ಕೇಳ ಬಿಗಿದು ಕಂಠದಿ ನಿಲ್ಲಿಸಿ ಲೋಕವ ಪೊರೆದನು ಉರಿಫಾಲ 6 ಪೋಯ್ತು ಕಾಳರಾತ್ರಿ | ಮಂಗಳ ಆಯಿತು ಶಿವರಾತ್ರಿ ಶ್ರೀಯರಸ ಗೋಪಾಲಕೃಷ್ಣ ವಿಠ್ಠಲನ ಪ್ರೀತಿ ಪಾತ್ರ 7
--------------
ಅಂಬಾಬಾಯಿ
ಹಿಡಿ ಕೇಶವ ಕೃಷ್ಣ ನಾರಾಯಣನ ಮಾಧವ ಗೋವಿಂದ ವಿಷ್ಣುನ್ನ ಕಡಲಶÀಯನನಾದ ತಕ್ಕೊ ಮಧುಸೂದನನ ಕಡುಬ್ಯಾಗದಲಿ ತಾರೆ ತ್ರಿವಿಕ್ರಮನ ಜೋ ಜೋ 1 ವಾಮನ ಶ್ರೀಧರ ಹೃಷಿಕೇಶÀನ ಕಾಮಿಸಿ ನೀ ಕೊಳ್ಳೆ ಪದ್ಮನಾಭನ್ನ ದಾಮೋದರ ಶ್ರೀ ಸಂಕರುಷಣನ ಕೋಮಲಾಂಗಿ ತಾರೆ ವಾಸುದೇವನ್ನ ಜೋ ಜೋ 2 ಅನಿರುದ್ಧ ಪುರುಷೋತ್ತಮನ ಅಧೋಕ್ಷಜ ನಾರಸಿಂಹಾಚ್ಯುತನ ಸದ್ಯೋಜನಾದರ್Àನ್ನ ಕೊಂಡು ಉಪೇಂದ್ರನ್ನ ಸದ್ಯ ತಾರ್ಹರಿ ಭೀಮೇಶಕೃಷ್ಣನ ಜೋ ಜೋ 3
--------------
ಹರಪನಹಳ್ಳಿಭೀಮವ್ವ
ಹಿರಣ್ಯಕಶ್ಯಪವೈರಿ ಮುರದಾನವವಿದಾರಿ ದುರಿತರೋಗ ನಿವಾರಿ ಪಾಹಿ ನೃಹರಿ ನಖಮುಖಮಹಾಯುಧ ಅಖಿಲ ಸಂಪತ್ಪ್ರದ ನಿಖಿಲ ಲೋಕಾಧೀಶ ಭಕ್ತಪೋಷ | ನೃಪಂಚಮುಖದೇವ ಸುಪವಿತ್ರ ಶ್ರೀಧವ | ಕೃಪಾರ್ಣವ ಕೇಶವ ಸುಪ್ರಭಾವ | ಘೋರ ವಿಕ್ರಮರೂಪ ವೈರಿ ಭಂಜನಕೋಪ | ಸಾರಸುಗುಣ ಕಲಾಪ ವಿಜಿತತಾಪ ವೇದವೇದ್ಯಸುಭದ್ರ ತರಳೆವರದ ಸಾಧುಸಮ್ಮತಚರಿತ ಸಿದ್ಧಿದಾತ ಕ್ಷುದ್ರದೈದ್ಯವಿನಾಶ ಚಿದ್ವಿಲಾಸ ಭದ್ರಶೇಷಾದ್ರೀಶ ಶ್ರೀನಿವಾಸ
--------------
ನಂಜನಗೂಡು ತಿರುಮಲಾಂಬಾ
ಹೊಡಿ ಜೈಭೇರಿ ಮ್ಯಾಲೆ ಕೈಯ ತಿವ್ರ್ಹೊಡಿ ಪ ಕಡಲೊಳು ಭೇದಿಸಿ ಅಡಗಿದ್ದ ್ಹಯಾಸುರ- ನ್ಹೊಡೆದು ವೇದವ ತಂದೊಡೆಯ ಶ್ರೀಕೃಷ್ಣನೆಂದ್ಹೊಡಿ 1 ಮಂದರೋದ್ಧರ ತಾ ಸುಂದರಿ ರೂಪದಿ ತಂದಮೃತೆರೆದ ಮುಕುಂದ ಶ್ರೀಹರಿಯೆಂದ್ಹೊಡಿ 2 ಖಳಹಿರಣ್ಯಾಕ್ಷನ ಸೆಳೆದಪ್ಪಳಿಸಿದ ಇಳೆಧಾರಕ ನಳಿನಾಕ್ಷ ಶ್ರೀಹರಿಯೆಂದ್ಹೊಡಿ3 ನಾಶ ಮಾಡಿದ ಲಕ್ಷ್ಮೀಶ ಶ್ರೀಹರಿಯೆಂದ್ಹೊಡಿ4 ತ್ರಿಚರಣದ ಇಳೆ ಬೇಡಿ ತ್ರಿವಿಕ್ರಮ- ರೂಪ ಧರಿಸಿದ ಉಪೇಂದ್ರ ಶ್ರೀಹರಿಯೆಂದ್ಹೊಡಿ 5 ಕೊಡಲಿ ಪಿಡಿದು ತಾ ಮಡುಹಿದ ದÉೂರೆಕುಲ ಕಡು ಮಾಋಷಿ ಪೊಡವ್ಯೇಶ ಶ್ರೀಹರಿಯೆಂದ್ಹೊಡಿ 6 ದಶಶಿರ ಹತ ಮಾಡಿದ ಸತಿ ಸೀತಾಂಗನೆ ಪತಿಯೆ ಶ್ರೀಹರಿಯೆಂದ್ಹೊಡಿ7 ಗೋಕುಲದೊಳಗಾನೇಕ ಸೂರ್ಯರಂ ತಾಕಳ ಕಾಯ್ದ ಗೋಪಾಲ ಶ್ರೀಹರಿಯೆಂದ್ಹೊಡಿ 8 ಮುದ್ದು ಸ್ತ್ರೀಯರ ವ್ರತ ಮೋಹಿಸಿ ಕೆಡಿಸಿದ ಶುದ್ಧ ವೈಷ್ಣವರಿಗೆ ಸುಲಭ ಶ್ರೀಹರಿಯೆಂದ್ಹೊಡಿ 9 ದುಷ್ಟ ಕಲಿಗಳಿಗೆ ಶಿಕ್ಷಕ ತಾ ನಿ- ರ್ದುಷ್ಟನು ಭೀಮೇಶಕೃಷ್ಣ ಶ್ರೀಹರಿಯೆಂದ್ಹೊಡಿ 10
--------------
ಹರಪನಹಳ್ಳಿಭೀಮವ್ವ
ಹೊಂದಿಕೊಂಡಿರಬೇಕು ಮನವೆ ಘನಚೈತನ್ಯಸಂದೋಹನಾದ ದೇಶಿಕನ ಪಾದಾಬ್ಜದೊಳು ಪರಾಗವನು ನೆರೆಬಿಟ್ಟು ರತಿಯ ಮನದಲಿ ನೆಟ್ಟುಭಾಗವತನಾಗದರೊಳು ಭಕ್ತಿಯುಟ್ಟುಭೋಗವಾಂಛೆಯ ಬಿಟ್ಟು ಬೋಧಿಸುತಲೊತ್ತಟ್ಟುಯೋಗ ರಾಜ್ಯವ ಕಟ್ಟು ಯುಕ್ತಿುಂ ಸುಖಬಟ್ಟು 1ಯಮ ನಿಯಮಗಳ ಮಾಡಿ ಏಕಾಗ್ರತೆಯೊಳಾಡಿಸಮ ಚಿತ್ತದೊಳ್ಪಾಡಿ ಸೌಖ್ಯವನು ಬೇಡಿಕ್ರಮದಿ ಸಾಧನೆಗೂಡಿ ಕಾಯ ದಂಡನೆ ಮಾಡಿವಿಮಲ ವೇದಾಂತ ವಿದ್ಯವನೊಲಿದು ನೋಡಿ2ಭೇದ ಬುದ್ಧಿಯನುಳಿದು ಭಿಕ್ಷಾನ್ನದೊಳ್ಬೆಳೆದುವಾದ ವಿದ್ಯವ ಕಳೆದು ವಸ್ತುವೆಂದರಿದೂಸಾಧನಗಳೊಳ್ಮೆರೆದು ಸಂಸ್ಕøತಿ ಪಥವ ತರಿದುಸಾಧು ಗೋಪಾಲಾರ್ಯ ಗುರುವಿನೊಳ್ಬೆರೆದೂ 3
--------------
ಗೋಪಾಲಾರ್ಯರು