ಒಟ್ಟು 693 ಕಡೆಗಳಲ್ಲಿ , 94 ದಾಸರು , 583 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆಣಿಮುತ್ತಿನ ದುಂಡುಮಕರಕುಂಡಲನ |ಬಾನುಪ್ರಭೆಯ ಭುಜಕೀರ್ತಿಯೊಪ್ಪುವನ ||ಕಮಲಾಮನೋಹರ ಕಮಲಜ ಪಿತನ |ರಮಣಿಗೆ ಪಾರಿಜಾತವನೇ ತಂದವನ ||ಕ್ರಮದಿಂದ ಭಸ್ಮಾಸುರನ ಕೊಂದವನ |ರಮೆಯಾಣ್ಮನೆನ್ನಲು ಇಹಪರವೀವನ 3ಶುಕ್ರವಾರ ಪುಲಕು ಪೂಜೆಗೊಂಬವನ |ಸಕ್ಕರೆ-ಹಾಲು-ಬೆಣ್ಣೆಯ ಮೆಲ್ಲುವವನ ||ಗಕ್ಕನೆ ಸುರರಿಗೆ ಅಮೃತವಿತ್ತವನ |ರಕ್ಕಸದಲ್ಲಣ ರಾವಣಾಂತಕನ 4ಪಾಪವಿನಶಾದಿ ಸ್ನಾನವ ಮಾಡಿ |ಪಾಪಗಳೆಲ್ಲ ಬೇಗನೆ ಬಿಟ್ಟು ಓಡಿ ||ಈ ಪರಿಯಿಂದಲಿ ಮೂರುತಿ ನೋಡಿ |ಶ್ರೀಪತಿ ಪುರಂದರವಿಠಲನ ಪಾಡಿ 5
--------------
ಪುರಂದರದಾಸರು
ಆರ ಮುಂಧೇಳಲಿ ಕರಕರಿಯ ಈ |ಪೋರನು ಕೊಡವಲ್ಲನಲ್ಲೇ ಸೀರೆಯ ಪದಾರಿಯೊಳ್ಹೋಗಿ ಬಹರ್ಯಾರೆನ್ನ ಕಂಡರೆ |ಊರೆಲ್ಲ ಹೋಗಿ ದೂರರೇನೆ1ಸಂತಿಗೆ ಹೋಗ್ಯಾಕೆ ನಿಂತರೆಂದುಡುಕುತ |ಕಾಂತನೇ ಬಂದರೇನಂತ ಹೇಳುವಾ 2ಬತ್ತಲಾರಾಗಿ ಜಲ ಮತ್ತೀಗ ಸೇರುವಾಗಿ |ಮೃತ್ಯು ಬಂದನಂಬುದರ್ತಿವೇನೆ 3ನೀರ ಹಾವುಗಳೆಲ್ಲ ಶರೀರವ ಸುತ್ತುತಿವೆ |ಗಾರಾದೆವಲ್ಲೆ ವಾರಿಜಾಸ್ಯೆ 4ಮುಳ್ಳು ತೆಪ್ಪವು ಮೋರೆಗೆಲ್ಲ ಮುಚ್ಚುತಲಿವೆ |ಖುಲ್ಲಪೋರಗೆ ದಯೆಯಿಲ್ಲವಲ್ಲೇ 5ಜಲ ಜಂತುಗಳೆಲ್ಲ ಗುಳು ಗುಳು ಮಾಡುತವೆ |ಜಲಜಾಕ್ಷಗ್ಯೇತಕೆ ತಿಳಿಯದಮ್ಮ 6ಮೀನಾಗಳಲ್ಲಿ ಹತ್ತಿ ಏನೇನೋ ಮಾಡುತವೆ |ಏಣಾಕ್ಷಿ ನಮಗೇ ಏನು ಬಂತೇ 7ಹಿಂದತ್ತ ಹೋದರೆ ಕಂಧರದುದ್ದ ನೀರು |ಮುಂದತ್ತ ಬರೆ ಎದೆಗಿಂದ ಕೆಳಗೆ 8ಏಡಿಗಳೆಲ್ಲ ಕಾಲು ನೋಡಿ ಕಚ್ಚುತಲಿವೆ |ಮಾಡಲಿನೆ ಮೋರೆ ಬಾಡಿತಲ್ಲೆ 9ಮೂಗುತಿ ಮಣಿಯೆಲ್ಲ ಹೇಗೋ ಎಲ್ಲ್ಯೋ ಎನಲು |ಈ ಗತಿಯಾಗೆ ಮನೆಗೆ ಹೋಗೋದ್ಹ್ಯಾಂಗೆ 10ಏನಾದರಾಗಲಿ ಪ್ರಾಣೇಶ ವಿಠಲಗೆ |ನೀನೇ ಗತಿಯೋ ಕಾಯೊ ಎನ್ನಬೇಕೇ 11
--------------
ಪ್ರಾಣೇಶದಾಸರು
ಆರಿದ್ದರೇನಯ್ಯ ನೀನಲ್ಲದೆನಗಿಲ್ಲಕಾರುಣ್ಯ ನಿಧಿ ಹರಿಯೆ ಕೈಯ ಬೆಡಬೇಡ ಪದುರುಳಕೌರವನಂದು ದ್ರುಪದಜೆಯ ಸೀರೆಯನುಕರದಿಂದ ಸೆಳೆಯುತಿರೆ ಪತಿಗಳೆಲ್ಲ ||ಗರಹೊಯ್ದರಂತಿದ್ದರಲ್ಲದೇ ನರಹರಿಯೆಕರುಣದಿಂ ನೀನಲ್ಲದಾರು ಕಾಯ್ದವರು 1ಅಂದು ನೆಗಳಿನ ಬಾಧೆಯಿಂದ ಗಜರಾಜನನುತಂದೆ ನೀ ವೈಕುಂಠದಿಂದ ಬಂದು ||ಇಂದಿರೇಶನೆ ಚಕ್ರದಿಂದ ನೆಗಳಿನ ಬಾಯಸಂಧಿಯನು ಸೀಳಿ ಪೊರೆದೆಯೆಲೊ ನರಹರಿಯೇ 2ಅಜಮಿಳನು ಕುಲಗೆಟ್ಟು ಕಾಲದೂತರು ಬರಲುನಿಜಸುತನ ಕರೆಯಲವನತಿ ವೇಗದಿ ||ತ್ರಿಜಗದೊಡೆಯನೆಪುರಂದರವಿಠಲ ಕರುಣದಲಿನಿಜದೂತರನು ಕಳುಹಿ ಕಾಯ್ದೆ ಗಡ ಹರಿಯೇ 3
--------------
ಪುರಂದರದಾಸರು
ಇನ್ನೂ ದಯ ಬಾರದೇ-ದಾಸನ ಮೇಲೆ-ಇನ್ನೂ ದಯ ಬಾರದೇ ಪಮುನ್ನ ಮಾಡಿದ ದುಷ್ಕರ್ಮಗಳೆಲ್ಲವಮನ್ನಿಸಿ ಕಳೆವುದು ಇಂದಿರೆಯ ರಮಣಾ ಅ.ಪನಾನಾ ಜನ್ಮಗಳಲಿ ನಾನಾ ಜಾತಿಗಳಲಿನಾನಾ ಯೋನಿಗಳಲಿ ಜನಸಿ ಜನಿಸಿ ದೇವಾ ||ನಾನು ನನ್ನದು ಎಂದು ನರಕದೊಳಗೆ ಬಿದ್ದುನೀನೆ ಗತಿಯೆಂದು ಸ್ಮರಣೆ ಮಾಡಿದ ಮೇಲೆ 1ಕಾಮಾದಿ ಷಡುವರ್ಗ ಗಾಢಾಂಧಕಾರದಿಪಾಮರನಾಗಿ ಇದ್ದಂಥ ಪಾತಕನ ||ರಮಾಮನೋಹರಹರಿನೀನೇ ಗತಿಯೆಂದುನಾಮಾಮೃತವನು ಪಾನ ಮಾಡಿದ ಮೇಲೆ 2ಏನ ಓದಿದರೇನು ಏನ ಕೇಳಿದರೇನುಈ ನಾಮ ಸ್ಮರಣೆಗೆ ಸರಿಬಾರದು ||ಙ್ಞÕನಹೀನನ ಮೇಲೆ ದಯವಿಟ್ಟು ಪಾಲಿಸುದೀನ ದಯಾಕರಪುರಂದರವಿಠಲನೆ3
--------------
ಪುರಂದರದಾಸರು
ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉದರವೈರಾಗ್ಯವಿದು - ನಮ್ಮ - |ಪದುಮನಾಭನಲ್ಲಿ ಲೇಶಭಕುತಿ ಇಲ್ಲ ಪ.ಉದಯಕಾಲದಲೆದ್ದು ಗಡಗಡ ನಡುಗುತ |ನದಿಯಲಿ ಮಿಂದೆನೆಂದು ಹಿಗ್ಗುತಲಿ ||ಮದ ಮತ್ಸರ ಕ್ರೋಧ ಒಳಗೆ ತುಂಬಿಟ್ಟುಕೊಂಡು |ಬದಿಯಲಿದ್ದವರಿಗಾಶ್ಚರ್ಯದೋರುವುದು 1ಕರದಲಿ ಜಪಮಣಿ ಬಾಯಲಿ ಮಂತ್ರವು |ಅರಿವೆಯ ಮುಸುಕನು ಮೋರೆಗೆ ಹಾರೆ ||ಪರಸತಿಯರರೂಪ ಮನದಲಿ ಗುಣಿಸುತ |ಪರಮವೈರಾಗ್ಯಶಾಲಿಯೆನಿಸುವುದು 2ಕಂಚುಗಾರನಾ ಬಿಡಾರದಿಂದಲಿ |ಕಂಚು ಹಿತ್ತಾಳೆಯ ಪ್ರತಿಮೆಯ ನೆರಹಿ ||ಮಿಂಚಬೇಕೆಂದು ಬಹುಜ್ಯೋತಿಗಳನೆಹಚ್ಚಿವಂಚಕತನದಲಿ ಪೂಜೆಯ ಮಾಳ್ಪುದು 3ಬೂಟಕತನದಲಿ ಬಹಳ ಭಕುತಿ ಮಾಡಿ |ಸಾಟಿಯಿಲ್ಲವು - ಎನಗೆಂದೆನಿಸಿ ||ನಾಟಕ ಸ್ತ್ರೀಯಂತೆ ಬಯಲಡಂಬವ ತೋರಿ |ಊಟಕೆ ಸಾಧನೆ ಮಾಡಿಕೊಂಬುದಿದು 4ನಾನು ಎಂಬುದ ಬಿಟ್ಟು ಜ್ಞಾನಿಗಳೊಡನಾಡಿ |ಏನಾದುದುಹರಿ ಪ್ರೇರಣೆಯೆಂದು |ಶ್ರೀ ನಿಧಿ ಪುರಂದರವಿಠಲರಾಯನನು |ಕಾಣದೆ ಮಾಡಿದ ಕಾರ್ಯಗಳೆಲ್ಲ 5
--------------
ಪುರಂದರದಾಸರು
ಉಪಕಾರ ಮರೆವುದುಚಿತವಲ್ಲೋ |ತಪನಾಪ್ತಾಕ್ಷನೆ ನಮ್ಮ ಹಿರಿಯರಂದು ಮಾಡಿದಾ ಪಹರಿಯೆ ನಿನ್ನವರಿಗಮೃತವ ನೀಡುವೆನೆಂದು |ಭರದಿಂದ ಮಥÀನ ಮಾಡಿಸಿದೆ ಕಡಲ ||ಗರಳವುದ್ಭವಿಸಲು ದಿವಿಜರಂಜಲು ಆಗ |ತ್ವರದಿಂದದರಭಯ ಪರಿಹರಿಸಿದರಾರೊ 1ಆರಣ್ಯದೊಳು ನೀನಿರಲು ನಿನ್ನೊಲ್ಲಭಿಯ |ಆ ರಾವಣನೊಯ್ಯಲು ಕಪಿಗಳೆಲ್ಲ ||ಹಾರಲಾರೆವೊ ಸಮೂದ್ರಾ ಎನ್ನಲು ಬೇಗ |ಭಾರತೀ ರಮಣನೇ ಪೋಗಿ ವಾರ್ತೆಯ ತಂದ 2ಶರಧಿಕಟ್ಟುವುದಕ್ಕೆ ರೋಮ ರೋಮದಿ ಗುಡ್ಡ |ಧರಿಸಿ ತಂದನು ನೊಂದೆನೆನ್ನದಲೆ |ಹರಿಜಿತು ಶರದಿಂದ ಬಿಗಿಯೆ ಪ್ಲವಗರೆಲ್ಲಾ |ಧರಣಿ ಹೊಂದಲು ಸಂಜೀವನ ತಂದು ಉಳುಹಿದ 3ವಸುದೇವಜನಾಗಿ ನೀಂ ಜರಿಜನ ಭಯದಿಂದ |ವಸುಧೆಯೊಳಗೆ ನಿಲ್ಲಲಾರದಿದ್ದೆ ||ಶಶಿಕುಲದಲ್ಲಿವಾತಜನಿಸಿ ಅವನ ಕೊಂದು |ಕುಸುಮನಾಭನೆ ನಿನ್ನ ಭಯ ಬಿಡಿಸಿದನಲ್ಲೋ 4ಮಣಿಮಂತಜಗದೊಳು ನಿನ್ನ ಮಹಿಮೆಯನ್ನು |ಮುಣುಗಿಸಿದನು ತ್ವರಿತ ನಮ್ಮ ಗುರುವು ||ಘನಶಾಸ್ತ್ರಂಗಳ ರಚಿಸಿ ದುರ್ಮತವ ಸೋಲಿಸಿ |ಮನಸಿಜಪಿತನೇ ಪರನೆಂದು ಮೆರೆಸಿದ5ಇಷ್ಟು ಸೇವೆಯ ಮಾಡಿ ಮೆಚ್ಚಿಸಿದನು ಗೇಣು |ಬಟ್ಟೆಬೇಡಿದನೇನೋ ಆತ ನಿನ್ನ ||ಬಿಟ್ಟದ್ದಾನಾದಿತು ನಮ್ಮ ವಂಶಕರಿಗೆ |ಕೊಟ್ಟು ರಕ್ಷಿಸುವನು ಸ್ವಾಮಿ ಒಳ್ಳೆವನೆಂದು 6ಈಸು ಪರಿಯಿಂದ ನಮ್ಮ ಭಾರತೀಕಾಂತ |ತಾ ಸೋತಿರಲು ನಿನಗೆ ನಮ್ಮನೀಗ ||ಘಾಸಿಮಾಡದೆ ಸಲಹುವದುಚಿತವೋ ಶ್ರೀ ಪ್ರಾ- |ಣೇಶ ವಿಠ್ಠಲರೇಯ ಅಪಕೀರ್ತಿ ಕೊಳಬೇಡ7
--------------
ಪ್ರಾಣೇಶದಾಸರು
ಉಪ್ಪವಡಿಸಯ್ಯ ಹರಿಯೇಏಳೈ ಹೃಷಿಕೇಶ ಏಳುರವಿ-ಶಶಿನಯನಪ.ಏಳು ಪಶುಗಳ ಕಾಯ್ದು ಪಾಲಿಸಿದೆ ಗೋಕುಲವಏಳು ಸುರವಂದಿತನೆ ಏಳು ಭೂಸತಿರಮಣಉಪ್ಪವಡಿಸಯ್ಯ ಹರಿಯೇ ಅಪಪಚ್ಚೆ ಮುಡಿವಾಳಗಳು ಅಚ್ಚ ಸೇವಂತಿಗೆಯುಬಿಚ್ಚು ಮಲ್ಲಿಗೆ ಜಾಜಿ ಸಂಪಿಗೆಯುಪುನ್ನಾಗಅಚ್ಚರಿಯ ಬಕುಲ ಕೆಂಜಾಜಿ ಕೇತಕಿಕುಸುಮಗುಚ್ಛಗಳಅಚ್ಚ ಜಾಣೆಯರು ಶ್ರೀಗಂಧ ಕಸ್ತೂರಿ ಪುನುಗುಬಿಚ್ಚು ಬಿಳಿಯೆಲೆಯಡಿಕೆ ಪಿಡಿದು ನಿಂತಿಹರಯ್ಯಮುಚ್ಚುತಿವೆ ತಾರೆಗಳು ಹೆಚ್ಚುತಿವೆ ರವಿಕಿರಣ ಅಚ್ಯುತನೆಉಪ್ಪವಡಿಸೊ 1ಚೆನ್ನೆಯರು ಚದುರೆಯರು ಸುಗುಣಸಂಪನ್ನೆಯರುಪನ್ನೀರು ತುಂಬಿರ್ದ ಪೊನ್ನ ತಂಬಿಗೆಗಳನುರನ್ನಗನ್ನಡಿಯನ್ನು ಪಿಡಿದು ನಿಂತಿರುವರೈ ಪನ್ನಂಗಶಯನ ಏಳೈ ||ಮನ್ನಣೆಯ ನಾರದರು ಮೊದಲಾದ ಮುನಿನಿಕರನಿನ್ನ ಮಹಿಮೆಗಳನ್ನು ಪಾಡಿ ನಲಿಯುವರಯ್ಯಇನ್ನು ಏಳೇಳು ಉದಯದ ಸಮಯ ಸಿರಿಯರಸಚೆನ್ನಿಗನೆ ಉಪ್ಪವಡಿಸೊ 2ದೇವದುಂದುಭಿ ಮೊಳಗೆ ದೇವಕನ್ನೆಯರೆಲ್ಲದೇವಾಂಗ ವಸ್ತ್ರವನು ಪಿಡಿದು ನಿಂತಿಹರಯ್ಯದೇವ ದೇವೇಶ ನಿಮ್ಮೋಲಗದ ಸಂಭ್ರಮಕೆ ದೇವತೆಗಳೆಲ್ಲ ಕರೆದು ||ದೇವ ಪ್ರಹ್ಲಾದಬಲಿ ಮುಖ್ಯರನು ಕಾಯ್ದವನೆದೇವ ಬ್ರಹ್ಮನ ಪಡೆದ ದೇವಗಂಗೆಯ ಪಿತನೆದೇವ ದೇವೋತ್ತಮನೆ ದೇವಾಧಿದೇವ ಪುರಂದರವಿಠಲಉಪ್ಪವಡಿಸೊ 3
--------------
ಪುರಂದರದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂತು ನಿನ್ನ ಪೂಜೆ ಮಾಡಿ ಮೆಚ್ಚಿಸುವೆನೊ ಪಚಿಂತಾಯತನೆ ನಿನ್ನ ನಾಮ ಎನಗೊಂದು ಕೋಟಿ ಅ.ಪಪವಿತ್ರೋದಕದಿಪಾದತೊಳೆವೆನೆಂತೆಂದರೆ |ಪಾವನೆಯಾದ ಗಂಗೆ ಪಾದೋದ್ಭವೆ ||ನವಕುಸುಮವ ಸಮರ್ಪಿಸುವೆನೆಂದರೆ ಉದುಭವಿಸಿಹನುಅಜನಿನ್ನ ಪೊಕ್ಕುಳ ಹೂವಿನಲಿ1ದೀಪವನು ಬೆಳಗುವೆನೆ ನಿನ್ನಕಂಗಳುಸಪ್ತದ್ವೀಪಂಗಳೆಲ್ಲವನು ಬೆಳೆಗುತಿಹವೋ ||ಆಪೋಶನವನಾದರೀವೆನೆಂತೆಂಬೆನೆಆಪೋಶನವಾಯ್ತು ಏಳು ಅಂಬುಧಿಯು 2ಕಾಣಿಕೆಯಿತ್ತಾದರೂ ಕೈ ಮುಗಿವೆನೆಂದರೆರಾಣಿವಾಸವು ಸಿರಿದೇವಿ ನಿನಗೆ ||ಮಾಣದೆಮನದೊಳು ನಿನ್ನ ನಾಮಸ್ಮರಣೆಧ್ಯಾನವನು ದಯೆ ಮಾಡೋ ಪುರಂದರವಿಠಲ 3
--------------
ಪುರಂದರದಾಸರು
ಎಂಥ ಪುಣ್ಯವೆ ನಿನ್ನದೆಂಥ ಭಾಗ್ಯವೆಗೋಪಿ|ಇಂಥ ಮಗನ ಕಾಣೆವೆ ಪಚಿಂತಿಸಿದರೂ ದೊರಕ ಚೆಲುವ ರಾಜಗೋಪಾಲ |ಇಂತೀ ಮಾತುಗಳೆಲ್ಲವು - ಹುಸಿಯಲ್ಲವು ಅ.ಪಸರಸಿಜನಾಭನ ಸುಮ್ಮನೆ ಕೊಂಡಾಡೆ |ದುರಿತವೆಲ್ಲವು ಪೋಪುದೆ ||ಸರಸದಿಂದಲಿ ಒಮ್ಮೆ ಸವಿಮಾತನಾಡಿದರೆ |ಪರಿತೋಷ ಕೈಗೂಡುವುದೆ-ಯಶೋದೆ 1ಊರ ಒಳಗೆ ನಿಮ್ಮ ಅಂಜಿಕೆ ನೆರೆಹೊರೆ |ದೂರಿಕೊಂಬುವರಲ್ಲವೆ? ||ಅರಣ್ಯದಲಿ ನಾವು ಆಡಿದ ಆಟವು |ಆರಿಗಾದರೂ ಉಂಟೇನೆ-ಇಂದುವದನೇ? 2ನಿನ್ನ ಮಗನ ಕರೆಯೆ ಎನ್ನ ಪ್ರಾಣದೊಡೆಯ |ಪುಣ್ಯದ ಫಲವು ಕಾಣೆ ||ಚೆನ್ನ ಶ್ರೀಪುರಂದರವಿಠಲರಾಯನ |ನಿನ್ನಾಣೆ ಬಿಡಲಾರೆವೆ-ಪುಸಿಯಲ್ಲವೆ 3
--------------
ಪುರಂದರದಾಸರು
ಎಲ್ಲಿ ಬೆಣ್ಣೆಯ ಬಚ್ಚಿಡುವೆನಾ-ಈ |ಕಳ್ಳ ಕೃಷ್ಣನ ಹಾವಳಿ ಘನವಾಯಿತು ಪನೆಲುವು ನಿಲುಕದೆಂದಿಡುವೆನೆ-ನೋಡೆ |ಬೆಳೆಯಬಲ್ಲನಿವ ಬ್ರಹ್ಮಾಂಡಕೆ ||ತಿಳಿಸದೆ ಕತ್ತಲೊರೆಳಿಡುವೆನೆ-ಅಕ್ಕ |ಬೆಳಕೆಲ್ಲವೀತನ ಕಂಗಳ ಢಾಳ 1ಎವೆಯಿಕ್ಕದಲ್ಲಿ ಕಾದಿಡುವೆನೆ-ನೋಡೆ |ದಿವಿಜರೆಲ್ಲ ಈತನಮಾಯೆ||ಅವರಬಳಿಗೆ ಮೊರೆಯಿಡುವೆನೆ-ಅಕ್ಕ |ಇವನಿಟ್ಟ ಬಂಟರಿಂದ್ರಾದಿಗಳೆಲ್ಲರು 2ಈಗಲೆ ಇಂತು ಮಾಡುವನು-ಮುಂದೆ |ಅಗಲಿಸುವನು ನಮ್ಮ ಒಗೆತನವಮ್ಮ ||ಕೂಗಿ ಹೇಳಲು ಮತ್ತೆ ಕೇಡಮ್ಮ-ಮುಂದೆ |ಹೇಗೆ ಪುರಂದರವಿಠಲನಟ್ಟುಳಿಗೆ? 3
--------------
ಪುರಂದರದಾಸರು
ಎಲ್ಲಿಯ ಮಧುರಾಪುರವು | ಎಲ್ಲಿಯ ತಾ ಬಿಲ್ಲು ಹಬ್ಬ |ಎಲ್ಲಿಯ ಸೋದರಮಾವನೆ ಪಎಲ್ಲಿಯ ಮಲ್ಲರಸಂಗ |ಖುಲ್ಲಕಂಸನು ನಮಗೆ |ಎಲ್ಲಿಯ ಜನ್ಮದ ವೈರಿಯೆ-ಸಖಿಯೆ ಅ.ಪವೃಂದಾವನದೊಳಗಿರುವ ವೃಕ್ಷಜಾತಿಗಳೆಲ್ಲ |ಒಂದೊಂದು ಫಲದಿಂದಲಿ ಸಂದಣಿತವೆ ||ಕುಂದಕುಸುಮದಲಿರುವ ಮಂದಿರದಲಿಚಕೋರ|ಒಂದೊಂದು ಸುಖಭರಿತವೆ ||ಅಂದುಮಾಧವನಮ್ಮ ಹೊಂದಿ ಕರವಿಡಿದ |ನಂದನ ಕಂದನ ಚರಿತವೆ ಸಖಿಯೆ 1ಅಕ್ರೂರ ತಾನೆಲ್ಲ ಅಚ್ಯುತಗೆಎಡೆಮಾಡಿ |ಆ ಕ್ರೂರನೆನಿಸಿದನೆ |ವಕ್ರಮಾರ್ಗವ ಕೂಡಿ ವನಿತೆಯರ ಉಸಿರೆಣಿಸಿ |ಚಕ್ರಧರನಗಲಿಸಿದನೆ ||ಆಕ್ರಮಿಸಿ ಸುರಲೋಕ ಪಾರಿಜಾತವನಂಬು-|ಜಾಕ್ಷಿಗೆ ತಂದಿತ್ತನೆ-ಸಖಿಯೆ 2ನೀರ ಚೆಲ್ಲಾಟದೊಳು ನಿಲಿಸಿ ನಮ್ಮೆಲ್ಲರ |ನಾರಿಯರಿಗೆ ಚಲ್ಲಿದನೆ ||ಮೋರೆ ಮೋರೆ ನೋಡಿ ಅಧರಾಮೃತಗಳ |ಸಾರಿ ಸಾರಿ ಸವಿದುಂಬನೆ ||ದ್ವಾರಕಾಪುರವಾಸ ಪುರಂದರವಿಠಲ |ಸೇರಿ ನಮ್ಮನು ಸಲಹುವನೆ-ಸಖಿಯೆ 3
--------------
ಪುರಂದರದಾಸರು
ಒಂದೇ ನಾಮದೊಳಡಗಿದುವೊ ಆ -ನಂದದಿಂದುಸುರುವಅಖಿಳ ವೇದಗಳುಪಒಂದೇ ನಾಮವು ಪ್ರಹ್ಲಾದನ ಕಾಯ್ತು - ಮ -ತ್ತೊಂದೆ ನಾಮವೆ ಅಜಮಿಳನ ಸಲಹಿತು ||ತಂದೆ ತಾಯಿಯ ಬಿಟ್ಟ ಕಂದ ಧ್ರುವರಾಯಗಾ -ನಂದಪದವನಿತ್ತ ಅದ್ಭುತಗುಣವೆಲ್ಲ 1ಮಚ್ಛ್ಯಾದ್ಯಾನಂತಾವತಾರ ಅಷ್ಟಾದಶಸ್ವಚ್ಛ ಪುರಾಣಗಳಮೃತದಸಾರ ||ಕಚ್ಛಪನಾಗಿ ತ್ರೈಜಗಕೆ ಆಧಾರ ತ -ನ್ನಿಚ್ಛೆಯಿಂದಲಿ ತಾನು ಮಾಳ್ಪ ವ್ಯಾಪಾರ 2ಒಬ್ಬರೀತಗೆ ಸಮರಿಲ್ಲ ತ -ನ್ನಬ್ಬರದಿಂದಲಿ ಸಲಹುವನೆಲ್ಲ ||ಕಬ್ಬು ಬಿಲ್ಲನ ಪಿತಪುರಂದರ ವಿಠಲ ವೈದರ್ಭಿಯ ರಮಣನ ವರಸುಗುಣಗಳೆಲ್ಲ 3
--------------
ಪುರಂದರದಾಸರು
ಕಕ್ಷಾದೇವತೆಗಳ ಮನನ115ಪ್ರಾಣ ಪಾಲೀಸಿಂದ್ರಾನ ರಾಣೀ ದಕ್ಷಾನಿರುದ್ಧಾ |ಮಾನಿನಿರತಿಮನುಗುರುವಾಯು ಕೋಲೆ ||ಮಾನಿನಿರತಿಮನುಗುರುವಾಯು ಯಮಸೋಮ|ಮಾನವಿ ಭಾಸ್ಕರಗೆರಗೂವೆ ಕೋಲೆ 1ವರುಣ ನಾರದವಹ್ನಿತರುಣಿ ಪ್ರಸೂತಿ ಭೃಗು |ಸರಸೀಜಾಸನನ ಪುತ್ರರಾರೊಂದು ಕೋಲೆ ||ಸರಸೀಜಾಸನನ ಪುತ್ರರಾರೊಂದು ಮಂದಿಗಳ |ವರನಾಮ ವಿಸ್ತರಿಸಿ ವಂದಿಪೆ ಕೋಲೆ 2ಅಂಗೀರಾ ಪುಲಸ್ತ್ಯ ಅತ್ರಿ ಮಂಗಳಾಂಗ ಪುಲಹ ಕೃತು |ತುಂಗವಶಿಷ್ಠಿ ಮರೀಚಿಗೊಂದಿಪೆ ಕೋಲೆ ||ತುಂಗವಶಿಷ್ಠ ಮರೀಚಿ ವಿಶ್ವಾಮಿತ್ರನಿಗೆ ಮತ್ಸ್ಯಾ |ನಂಗ ಕಂಡ ವೈವಸ್ವತಗೊಂದಿಸುವೆ ಕೋಲೆ3ನಿರರುತಿ ಪ್ರಾವಾಹಿಮಿತ್ರಗುರುಪತ್ನೀಗೆ ವಂದಿಸುವೆ |ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಕೋಲೆ ||ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಅಶ್ವಿನೀಗ |ಳಿರಳೂ ಹಗಲೂ ನಾ ಸ್ಮರಿಸೂವೆ ಕೋಲೆ 4ಮರುತೂ ನಾಲ್ವತ್ತೊಂಬತ್ತುಗುರುವಿಶ್ವೇದೇವ ಹತ್ತು |ಎರಡು ಅಶ್ವೀನೀ ರುದ್ರರ್ಹನ್ನೊಂದೂ ಕೊಲೆ ||ಎರಡು ಅಶ್ವೀನೀ ರುದ್ರರ್ಹನ್ನೊಂದೂ ವಸುಯಂಟು |ಎರಡಾರು ಸೂರ್ಯರಿಗೆರಗೂವೆ ಕೋಲೆ 5ಭಾರತೀ ಭರತಾಗೆ ಮೂರು ಪಿತೃಗಳಿಗೆ |ಧಾರೂಣೀ ಋಭುವೀಗೆರಗುವೆ ಕೋಲೆ ||ಧಾರೂಣೀ ಋಭುವೀಗೆರಗೂವೆ ತಿಳೀವದು |ನೂರು ಮಂದೆಂದೂ ಕರಸೋರು ಕೋಲೆ 6ಮೂರು ಮಂದೀ ಉಳಿದೂ ಈರೈದು ಒಂದು ಮನು |ಚಾರುನಾಮಗಳ ವರ್ಣೀಪೆ ಕೋಲೆ ||ಚಾರುನಾಮಗಳ ವರ್ಣೀಪೆ ದಯಮಾಡಿ |ಸೂರಿಗಳೆಲ್ಲಾ ಕೇಳ್ವೋದು ಕೋಲೆ 7ಸ್ವಾರೋಚೀಷೋತ್ತುಮಾನು ಶ್ರೀ ರೈವತ ಚಾಕ್ಷುಷಾ |ನಾರಾಯಣನ ದಾಸ ಸಾವರ್ಣಿ ದಕ್ಷಾ ಕೋಲೆ ||ನಾರಾಯಣನ ದಾಸ ಸಾವರ್ಣಿ ದಕ್ಷ ಬ್ರಹ್ಮ |ಮಾರಾರಿದೇವ ಧರ್ಮ ಇಂದ್ರ ಸಾವರ್ಣೀ ಕೋಲೆ 8ಎಂದಿವರೀಗೊಂದೀಸಿ ಮುಂದೆ ಚವನ ಋಷಿ |ನಂದಾನೋಚಿತ್ಥ್ಯ, ಪಾವಕಾ, ಧೃವ, ನಹುಷ ಕೋಲೆ ||ನಂದಾನೋಚಿತ್ಥ್ಯಪಾವಕಧೃವನಹುಷಶಶಿ|ಬಿಂದೂ ಪ್ರಹ್ಲಾದ ಪ್ರಿಯ ವೃತಗೊಂದಿಸುವೆ ಕೋಲೆ9ಶಾಮಲಾ ಗಂಗಾ ಉಷಾ ಸೋಮರಾಣಿ ಸಂಜ್ಞಾ |ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ಕೋಲೆ ||ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ವಂದಿಸೀ ಅನ |ಭೀ ಮಾನೀ ಸೂರರನ್ನ ಮನದೊಳು ನೆನವೆನೆ ಕೋಲೆ 10ಅನಲರಸೀಬುಧಅಶ್ವಿನಿ ಭಾರ್ಯಾ ಛಾಯಾ ಪುತ್ರ |ಶನಿ ಪುಷ್ಕರಜಾನೂಜ ದೇವತಿಗಳಿಗೆ ಕೋಲೆ ||ಶನಿ ಪುಷ್ಕರಜಾನೂಜ ಮನ ದೇವತೆಗಳಿಗೊಂದಿಪೆ ಸು |ಪ್ರಾಣೇಶ ವಿಠಲಾನಲ್ಲಿರಲೆಂದು ಕೋಲೆ 11ಉರುವಸೀ ಮುಖ್ಯ ಅಪ್ಸರ ಸ್ತ್ರೀಯರೀಗೊಂದಿಸೀ |ಹರಿನಾರಿಯರ ಪಾದಕ್ಕೆರಗೂವೆ ಕೋಲೆ ||ಹರಿನಾರಿಯರ ಪಾದಕ್ಕೆರಗಿ ಪಿತೃಗಂಧರ್ವ |ನರನಾರಪತಿಮನುಷ್ಯೋತ್ತಮರಿಗೊಂದಿಸುವೆ ಕೋಲೆ12ಈ ನಿರ್ಜರರ ಧ್ಯಾನವನ್ನು ಮಾಡುತ್ತಾ |ಪ್ರಾಣೇಶ ವಿಠಲನ ಆ ನಾಭಿಯಿಂದ ||ಪ್ರಾಣೇಶ ವಿಠಲನ ಆ ನಾಭಿಯಿಂದ ಬಂದ |ಜ್ಞಾನಿಗಳ ಸಂತತೀ ನಾ ವರ್ಣಿಸುವೆ ಕೋಲೆ 13
--------------
ಪ್ರಾಣೇಶದಾಸರು