ಒಟ್ಟು 568 ಕಡೆಗಳಲ್ಲಿ , 86 ದಾಸರು , 494 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಂಗಾವೇತಕೆ ಅಲ್ಪರೊಡನೆ ಗುಣವಿಲ್ಲಮಂಗ ಮನುಜನ ಕೂಡ ಮಾತಾಡಸಲ್ಲ ಪ.ಪರರ ಕೆಣಕಿ ತನ್ನ ಹಿರಿಯತನ ಕೆಡಲೇಕೆ ?ಹರಕೆಯಿಲ್ಲದ ಮೇಲೆ ಹಾದಿಯಿಸಲೇಕೆ ?ಮುರುಕು ಮನೆಯಲಿ ತಾ ಕಷ್ಟವ ಪಡಲೇಕೆ ?ಸರಿಬಾರದವರೊಡನೆ ಸರಸ ಮಾತುಗಳೇಕೆ ? 1ತೊತ್ತಿನ ಕೂಡಾಡಿ ಅತಿದೀಕ್ಷೆ ಕೆಡಲೇಕೆ ?ಹೊತ್ತಿಗಲ್ಲದವನ ಕೂಡ ಗೆಳೆತನದ ಮಾತೇಕೆ ?ರತ್ನವನು ನಾಯ ಕೊರಳಿಗೆ ಸುತ್ತಿ ಬಿಡಲೇಕೆ ?ಕತ್ತೆಯ ಮೇಲೇರಿ ಕೆಡಲೇಕೆ ಮನುಜಾ ? 2ನೆಲೆ ತಪ್ಪಿದ ಮೇಲೆ ನಂಟ - ಬಂಧುಗಳೇಕೆ?ಸಲುಗೆಯಿಲ್ಲದ ಮೇಲೆ ಛಲವು ತನಗೇಕೆ ?ಬುಲುದೈವ ಪುರಂದರವಿಠಲನಿರಲಿಕ್ಕೆ ?ಹಲವು ದೈವದಗೊಡವೆನವಗೇಕೆ ಮನುಜಾ ?3
--------------
ಪುರಂದರದಾಸರು
ಸತ್ಕರ್ಮವೆಂಬುದು ಸಾಧನವಲ್ಲದಲೆಸತ್ಕರ್ಮವೀಗ ಶುದ್ಧಬ್ರಹ್ಮವಲ್ಲವುಸತ್ಕರ್ಮ ಭಕ್ತಿಭಾವ ಸುಗುಣವಾದ ಮಾರ್ಗವುಸತ್ಕರ್ಮತ್ಯಾಗ ನಿಶ್ಯಬ್ದ ವಸ್ತುಪಗಾರುಡಿಯನರಿವೆನೆಂದು ಮಹೋರಗನ ಮೇಳವೇಆರು ನಂಬಲು ಬಹುದು ವಿಕಾರ ಮನವನುನಾರಿ ಪುತ್ರರೊಳಗೆ ಕೂಡಿ ನಾನು ಮುಕ್ತನು ಎನಲುಸೇರುವುದು ಎಂತು ಪೂರ್ಣ ಬ್ರಹ್ಮ1ಬ್ರಹ್ಮನರಿದು ಸಂಸಾರವಮಾಡುಈಗ ಎಂಬನುಬ್ರಹ್ಮಘಾತನು ಅವನು ಮಿಥ್ಯವಲ್ಲವುನಿಮ್ಮ ಮನಕೆ ತಿಳಿದು ನೋಡಿ ನಿಶ್ಚಿತದ ಮಾತ ಪೇಳ್ವೆಸುಮ್ಮನೆ ಬಿಡಲಿಬೇಕುಸತಿಸುತರನು2ವಾಸನಾಕ್ಷಯವು ವಸ್ತು ಎಂಬ ಮಾತು ದಿಟವದಿರಲುವಾಸನಾಕ್ಷಯವು ಎಂತು ಸಂಸಾರದಿಗೋಪನಾರಬೇಡವೆನಲು ನಾರುವುದು ಬಿಡುವುದೇಕಾಸ ವೀಸಿಯಲ್ಲದಲೆ ನಿಶ್ಚಯಿಲ್ಲವು3ಸಾಕ್ಷಿ ತಿಳಿದ ಬಳಿಕ ಸಂಸಾರವನೀಗ ತ್ಯಜಿಸಿದೆಅಕ್ಕಿನೀರುವಗ್ಗಿದಂತೆ ಆಗಬಾರದುರಕ್ಷಕನು ಇಲ್ಲದಲೆ ಸಂಸಾರವ ಬ್ರಹ್ಮವೆನಲುಭಕ್ಷಣಹುದುಬ್ರಹ್ಮಜ್ಞಾನಬಿಡುವುದಿಲ್ಲವು4ಸಂಸಾರದಿಮುಕ್ತನಾನು ಎನಲುತಿಲಾಂಶ ಮಾತ್ರ ಅನ್ನವಾಸನ ಅಂಟದಿಹುದೇಸಂಸಾರವ ತ್ಯಜಿಸಿದರೆ ಸಾಧ್ಯವಹುದು ವಸ್ತುಹಂಸಪರಮ ಚಿದಾನಂದ ತಾನೆಯಾಹನು5
--------------
ಚಿದಾನಂದ ಅವಧೂತರು
ಸಂದಿತಯ್ಯ ಪ್ರಾಯವು |ಸಂದಿತಯ್ಯ ಪ್ರಾಯವು ಪಮೂರು ತಿಂಗಳುಸಂದುಹೋಯಿತು ತಿಳಿಯದೆ ||ಬಂದೆ ತಾಯಿಯ ಜಠರದಲಿ ಮ-|ತ್ತೊಂದು ಬುದ್ಧಿಯನರಿಯದೆ ||ಬೆಂದೆ ನವಮಾಸದಲಿ ಗರ್ಭದಿ |ಒಂದು ದಿವಸವು ತಡೆಯದೆ ||ಕುಂದದೀಪರಿಯೊಂದು ವರುಷವು |ಇಂದಿರೇಶನೆ ಕೇಳು ದುಃಖವ 1ಕತ್ತಲೆಯೊಳಿರಲಾರೆನೆನುತಲಿ |ಹೊತ್ತೆ ಹರಕೆಯ ನಿನ್ನನು ||ಮತ್ತೆ ಜನಿಸಲು ಭೂಮಿಯೊಳು ನಾ |ಅತ್ತುನಿನ್ನನು ಮರೆತೆನು ||ಮತ್ತೆ ಮಲ-ಮೂತ್ರದೊಳು ಬಾಲ್ಯದಿ |ಹೊತ್ತು ದಿನಗಳ ಕಳೆದೆನು ||ಮತ್ತೆ ನರಕದೊಳುರುಳುತುರುಳುತ |ಉತ್ತಮೋತ್ತಮ ನಿನ್ನ ನೆನೆಯದೆ 2ಚಿಕ್ಕತನವನು ಮಕ್ಕಳಾಟದಿ |ಅಕ್ಕರಿಂದಲಿ ಕಳೆದೆನು ||ಸೊಕ್ಕಿ ಹದಿನಾರಲಿ ನಾನತಿ |ಮಿಕ್ಕಿ ನಡೆದೆನು ನಿನ್ನನು ||ಸಿಕ್ಕಿ ಬಹು ಸಂಸಾರ ಮಾಯೆಯ |ಕಕ್ಕುಲಿತೆಯೊಳು ಬಿದ್ದೆನು ||ಹೊಕ್ಕುದಿಲ್ಲವು ನಿನ್ನ ಪಾದವ |ರಕ್ಕಸಾರಿಯೆ ಕೇಳು ದುಃಖವ 3ಸುಳಿದೆ ಮನೆಮನೆ ಕಳೆದೆ ಕಾಲವ |ಉಳಿದ ಯೋಚನೆ ಮಾಡದೆ ||ಬೆಳೆದೆ ತಾಳೆಯ ಮರದ ತೆರದಲಿ ||ಉಳಿವ ಬಗೆಯನು ನೋಡದೆ ||ಎಳೆಯ ಮನದೊಳೆ ಇಳೆಯ ಜನರೊಳು |ಬಳಕೆ ಮಾತುಗಳಾಡಿದೆ ||ಕಳೆದೆ ಈ ಪರಿಯಿಂದ ಕಾಲವ |ನಳಿನನಾಭನೆ ನಿನ್ನ ನೆನೆಯದೆ 4ಎಡೆಬಿಡದೆಅನುದಿನದಿ ಪಾಪದ |ಕಡಲೊಳಗೆ ನಾನಾಳ್ದೆನು ||ದರವ ಕಾಣೆದೆ ಮಧ್ಯದಲಿ ಎ-|ನ್ನೊಡಲೊಳಗೆ ನಾನೊಂದನು ||ದೃಢದಿ ನಿನ್ನಯ ಧ್ಯಾನವೆಂಬಾ |ಹಡಗವೇರಿಸು ಎನ್ನನು ||ಒಡೆಯ ಪುರಂದರವಿಠಲ ಎನ್ನನು |ಬಿಡದೆ ಕಾಯೈ ಬೇಗ ಶ್ರೀಹರಿ5
--------------
ಪುರಂದರದಾಸರು
ಸಾಕು ಸಾಕಿನ್ನು ಸಂಸಾರಸುಖವು |ಶ್ರೀಕಾಂತ ನೀನೊಲಿದು ಕರುಣಿಸೈ ಹರಿಯೆ ಪಉದಿಸಿದುವು ಪಂಚಭೂತಗಳಿಂದ ಔಷಧಿಗ-|ಳುದಿಸಿದುವು ಔಷಧಿಗಳಿಂದನ್ನವು ||ಉದಿಸಿದುವು ಅನ್ನದಿಂ ಶುಕ್ಲ-ಶೋಣಿತವೆರಡು |ಉದಿಸಿದುವು ಸ್ತ್ರೀ-ಪುರುಷರಲ್ಲಿ ಹರಿಯೆ 1ಸತಿಪುರುಷರೊಂದಾಗಿ ರತಿಕ್ರೀಡೆಗಳ ಮಾಡೆ |ಪತನವಾದಿಂದ್ರಿಯವು ಹೊಲೆ-ರುಧಿರವು ||ಸುದತಿಯುದರದೊಳೆರಡು ಏಕದಲಿ ಸಂಧಿಸಲು |ಬುದಬುದನೆ ಮಾಸಪರ್ಯಂತರದಿ ಹರಿಯೆ 2ಮಾಸವೆರಡರಲಿ ಶಿರಮಾಸಮೂರರಲಂಗ |ಮಾಸನಾಲ್ಕರಲಿ ಚರ್ಮದ ಹೊದಿಕೆಯು ||ಮಾಸವೈದರೊಳುನಖರೋಮ ನವ ರಂಧ್ರಗಳು |ಮಾಸವೇಳಲಿ ಧಾತು ಹಸಿವು ತೃಷೆಯು 3ತಿಂಗಳೆಂಟರಲಿ ಪೂರ್ವಾನುಭವ ಕರ್ಮಗಳ |ಭಂಗವನು ಪಡಲಾರೆ ಭವಭವದೊಳು ||ಅಂಗನೆಯ ಉದರಕಿನ್ನೆಂದಿಗೂ ಬರೆನೆಂದು |ಹಿಂಗದಲೆ ಧ್ಯಾನಿಸುತ ಕಳೆದೆನೈ ದಿನವ 4ಇನಿತು ಗರ್ಭದೊಳು ನವಮಾಸ ಪರಿಯಂತರದಿ |ತನು ಸಿಲುಕಿ ನರಕದಲಿ ಆಯಾಸಗೊಂಡು ||ಘನಮರುತವೇಗದಿಂ ಅರುಹನಲ್ಲಿಯೆ ಮರೆತುಜನಿಸುವಲಿ ಮೃತಭಾವದೊಳು ನೊಂದೆ ಹರಿಯೆ 5ಧರೆಯಮೇಲುದಿಸಿ ಬಹು ವಿಷ್ಣುಮಾಯೆಗೆ ಸಿಲುಕಿ |ಪರವಶದೊಳಿರಲು ನೀರಡಿಸಲಾಗ ||ಹೊರಳಿ ಗೋಳಿಡುತ ಕಣ್ದೆರೆಯ ಹರಿಯನು ಮರೆವ |ದುರಿತರೂಪದ ತನುವ ಧರಿಸಿದೆನೊ ಹರಿಯೆ 6ಶಿಶುತನದೊಳಿರಲು ನೊಣ ಮುಸುಕಲಂದದಕಳಲು |ಹಸಿದನಿವನೆಂದು ಹಾಲನೆ ಎರೆವರು ||ಹಸು-ತೃಕ್ಷೆಗಳಿಂದಳಲು ಹಾಡಿ ತೂಗುವರಾಗ |ಪಶುವಂತೆ ಶಿಶುತನದೊಳಿರಲಾರೆ ಹರಿಯೆ 7ನಡೆಯಲರಿಯದ ದುಃಖ ಮನಸಿನೊಳು ಬಯಸಿದುದ |ನುಡಿಯಲರಿಯದ ದುಃಖ ವಿಷಮದಿಂದ ||ಅಡಿಯಿಡುತ ಮೆಲ್ಲನೇಳುತ ಬೀಳುತಲಿ ತೊದಲು-|ನುಡಿಯೊಳಿಹ ಬಾಲ್ಯದೊಳಗಿಲಾರೆ ಹರಿಯೆ 8ಬಾಲ್ಯದೊಳು ಕೆಲವು ದಿನ ಬರಿದೆ ಹೋಯಿತು ಹೊತ್ತು |ಗೋಳಿಡುತವಿದ್ಯೆಕರ್ಮಗಳ ಕಲಿತು ||ಮೇಲೆ ಯೌವನದುಬ್ಬಿನೊಳು ಮದುವೆಯಾಗಿ ನಾಬಾಲೆಯರ ಬಯಸಿ ಬಹು ಮರಳಾದೆ ಹರಿಯೆ | 9ಜ್ವರದ ಮೇಲತಿಸಾರ ಬಂದಂತೆ ಯೌವನದಿ |ತರುಣಿಯೊಡನಾಡಿಕೂಡಿದವಿಷಯದಿ ||ತರುಣಿ-ಸುತರ್ಗನ್ನ ವಸ್ತ್ರಾಭರಣವೆಂದೆನುತ |ಪರರ ಸೇವೆಯಲಿ ನಾ ಕಡುನೊಂದೆ ಹರಿಯೆ 10ನೆತ್ತರವು ತೊಗಲು ಮಾಂಸದ ಹುತ್ತು ಜೊತ್ತುಗಳ |ಹತ್ತು ಇಂದ್ರಿಯದ ಬಹುರೋಗದಿಂದ ||ಮತ್ತೆ ಕಾಲನ ಬಾಯತುತ್ತು ಬಹುವಿಧ ಕರ್ಮ-||ಕತ್ತಲೆಯೊಳೀ ದೇಹ ಕರಕಾಯ್ತು ಹರಿಯೆ 11ದಿಟ್ಟತನದಲಿ ಗಳಿಸಿ ತರುವಾಗ ಸತಿಸುತರು |ಕಟ್ಟಿಕಾದಿಹರು ಮುಪ್ಪಡಸಲಾಗ ||ತಟ್ಟನೇ ಕೆಟ್ಟನುಡಿಗಳ ಬಯ್ಯುತಳಲುವರು |ಮುಟ್ಟಿನೋಡರು ಸರಕುಮಾಡರೈ ಹರಿಯೆ 12ಎಷ್ಟವಜೆÕಯ ಮಾಡೆ ಮತ್ತವನಿಗಳಲುತಿರೆ |ಕಟ್ಟಳೆಯ ದಿನತುಂಬಿಮೃತನಾಗಲು ||ಕುಟ್ಟಿಕೊಂಡಳುತ ಹೋಯೆನುತ ಬಂಧುಗಳೆಲ್ಲ |ಮುಟ್ಟದಲೆ ಹೆಣನೆಂದು ದೂರದೊಳಗಿಹರು 13ಸತ್ತ ಹೆಣಕಳಲೇತಕೆಂದು ಬಂಧುಗಳೆಲ್ಲ |ಸುತ್ತಿರ್ದು ಹೊತ್ತು ಹೋಯಿತು ಎನ್ನುತ ||ಹೊತ್ತು ಕೊಂಡಗ್ನಿಯಲಿ ತನುವ ಬೀಸಾಡುವರು |ಮತ್ತೆ ಧರಣಿಯಲಿ ನಾ ಜನಿಸಬೇಡವೊ ಹರಿಯೆ 14ಇನ್ನು ಈ ಪರಿಪರಿಯ ಯೋನಿಮುಖದಲಿ ಬಂದು |ಬನ್ನವನು ಪಡಲರೆ ಭವಭವದೊಳು ||ಜನ್ಮ-ಮರಣಾದಿ ಕ್ಲೇಶಗಳನ್ನು ಪರಿಹರಿಸಿ |ಸನ್ಮತಿಯೊಳಿರಿಸೆನ್ನ ಪುರಂದರವಿಠಲ 15
--------------
ಪುರಂದರದಾಸರು
ಸಾಧನವೇಕೆ ಸಾಧನವೇಕೆಸದ್ಗುರುನಾಥ ಸನಿಹದಿ ಇರಲಿಕೆಪಯಮನಿಯಮಾಸನ ಎಂಬಿವು ಯಾಕೆಕಮಲಾಸನವನು ಬಲಿಯಲದೇಕೆಶ್ರಮದಲಿ ವಾಯುವ ಬಿಗಿಯಲದೇಕೆಭ್ರಮಿತದಿ ಬ್ರಹ್ಮನ ಕಾಣುವುದೇಕೆ1ಮಿತ ಆಹಾರವ ಮಾಡಲದೇಕೆಅತಿ ವೈರಾಗ್ಯವು ದೇಹಕೆ ಯಾಕೆಸತತವು ಕಾಡನು ಸೇರುವುದೇಕೆಮತಿ ತಿಳಿಯದೆ ತಿರುಗಾಡುವುದೇಕೆ2ಶರಧಿಯು ತಾನಿರೆ ಒರತೆಯದೇಕೆತರಣಿಯೆ ತಾನಿರೆ ದೀಪವದೇಕೆಗುರುಚಿದಾನಂದನಿರೆ ಯೋಗಗಳೇಕೆಗುರುಕೃಪೆ ದೊರೆತರೆ ಭಯ ತಾನೇಕೆ3
--------------
ಚಿದಾನಂದ ಅವಧೂತರು
ಸಿಕ್ಕಿದೆಯೋ ಎಲೆ ಜೀವ-ನಿನ್ನ-ಕುಕ್ಕಿ ಕೊಲ್ಲದೆ ಬಿಡರು ಪಸೊಕ್ಕಿದ ಹೆಣ್ಣಿಗೆ ನೀ ಮರುಳಾದೆ |ಉಕ್ಕಿನ ಕಂಬಕೆ ನೀ ಗುರಿಯಾದೆ ಅ.ಪಹಾಳೂರ ಕೋಳಕೆ-ಕಾಲು ಚಾಚಿದ ಹಾಗೆ |ಮೂಳ ಸಂಸಾರಕೆ ನೀ ಗುರಿಯಾಗಿ ||ತೇಲುತ ಮುಳುಗುತ ಇಲ್ಲಿಗೆ ಬಂದೆ 1ಸತಿ-ಸುತರೆಂಬುವರೆ - ಹಿತರೆಂದು ನಂಬಿದೆಯೊ |ಯತಿಗಳ ತಿಥಿಗಳು ಬಂದರೆ ಮನೆಗೆ-||ಗತಿಯಿಲ್ಲವೆಂದು ಖತಿಗೊಂಡೆಯಲ್ಲೊ 2ಶುನಕನಂದದಿ ನೀನು ಮನೆಮನೆಯನು ತಿರುಗಿ |ಘನಘನವಾದ ಕೂಳನೆ ತಿಂದು ||ತನುವ ತಗ್ಗಿಸಿ ಇಲ್ಲಿಗೆ ಬಂದೆ 3ಕಂಡವರ ಒಡವೆಯ-ಖಂಡುಗ ಧನವನು |ಮಿಂಡೆಯರ ಒಡವೆಯ ಭಂಡತನದಲಿ ||ಕಂಡುಕಾಣದೆ ನೀ ತಿಂದೆಯಲ್ಲೊ 4ಗೋಪಾಲಕೃಷ್ಣಯ್ಯ-ತಾಪತ್ರಯವ ಕಳೆವ |ಆಪತ್ತೆಲ್ಲ ಪರಿಹಾರ ಮಾಡುವ ||ಶ್ರೀಪತಿ ಪುರಂದರವಿಠಲನ ನೆನೆಯದೆ 5
--------------
ಪುರಂದರದಾಸರು
ಸೇವಕತನದ ರುಚಿಯೇನಳೆದೆಯೋ |ದೇವ ಹನುಮರಾಯ ನೀ ವೈರಾಗ್ಯ ಬೇಡಿ ಪಉದಧಿಯ ದಾಟಿ ಸೀತೆಯ ಕಂಡು ಬಂದಾಗಮದುವೆಯ ಮಾಡೆನ್ನಬಾರದಿತ್ತೆ ||ಪದದಿ ಪಾಷಾಣವ ಪೆಣ್ಣ ಮಾಡಿದನಿಗೆಇದು ಏನಾಶ್ಚರ್ಯವೊ ನೀ ಬಯಸಲೊಲ್ಲದೆ 1ಕ್ಷಣದೊಳು ಸಂಜೀವನ ಗಿರಿ ತಂದಾಗಧನವನು ಬೇಡಲು ಕೊಡದಿಹನೇ ||ವಿನಯದ ವಿಭೀಷಣಗೆ ರಾಜ್ಯಪದವನಿತ್ತವನಿಗೆನಾಶ್ಚರ್ಯವೊ ಹನುಮ ನೀನೊಲ್ಲದೆ 2ಸಾರ್ವಭೌಮನು ತಾನೆ ಮೆಚ್ಚಿ ಬಂದಾಗಲೆಉರ್ಪಿಯ ಬೇಡಲು ಕೊಡದಿಹನೇಸರ್ವವ ತೊರೆದು ಶ್ರೀ ಪುರಂದರವಿಠಲನನಿವ್ರ್ಯಾಜ ಭಕುತಿಯ ಬೇಡಿಕೊಂಡೆಯಲ್ಲದೆ 3
--------------
ಪುರಂದರದಾಸರು
ಸ್ತ್ರೀಯ ತ್ಯಜಿಸಲು ಬೇಕು ಶಿವಧ್ಯಾನಕೆಬಯ್ಯಬೇಡಿರಿ ಬುದ್ಧಿ ಎಂದೆನ್ನಿರಯ್ಯಪಮಹಿಳೆಯ ಮೋಹದಲಿ ಮಗನು ತನ್ನವನೆಂಬೆಮಹಿಳೆಯು ತೆರಳೆ ಮಗನಿಗಾರೋಇಹುದು ಪ್ರಪಂಚವೆಲ್ಲ ಎಲ್ಲ ಸತಿಯಿಂದಲಿಮಹಾದೇವ ಚಿಂತನೆಗೆ ಮರೆವೆ ಸ್ತ್ರೀಯಯ್ಯಾ1ಮಗನು ಶಿಶುವಾಗಿರಲು ಮಾನಿನಿಯ ಬಡಿವನುಮಗ ಬಲಿಯೆ ಮುರಿವನು ನಿನ್ನೆಲುಬನುಮಗನು ಯಾರವ ಹೇಳು ಮನೆಯು ಯಾರದು ಹೇಳುನಗುವು ಅಲ್ಲದೆ ನನ್ನದೆಂತೆನಲಿಕಯ್ಯಾ2ಪತ್ನಿಯನು ಬಯ್ಯೆ ಮಗ ಬಡಿವನು ಎಂಬಹೆತ್ತಾಕೆ ಬಯ್ಯೆ ಹೇವಿಲ್ಲದಿಹನುತೊತ್ತಿನ ಮಗನಾಗಿ ನಿನ್ನ ತಳ್ಳುವನುಮಿತ್ರನಾಗಿಹನವನು ತಾಯಿಗಯ್ಯಾ3ಮನೆಯು ಸವತಿಯವಳದು ಮಕ್ಕಳೆಲ್ಲ ಸವತಿಯದುಎನಿತೆನಿತು ಭಾಗ್ಯ ಸೊದೆ ಎಲ್ಲ ಸವತಿಯಳದುಮನಕೆ ಹೇಸಿಗೆ ಹುಟ್ಟಿ ಮಹಾತ್ಮನಾಗಲುತನ್ನ ಹಿಂದೆ ತಿರುಗುವರೆ ತಿಳಿದು ನೋಡಯ್ಯ4ಸಂಗತಿಯ ಮೂಲದಲಿ ಸುತ್ತಿಹುದು ಪ್ರಪಂಚಕಂಗಳೊಳು ಕಸ ಚೆಲ್ಲಿದಂತೆ ಇಹುದುಮಂಗಳ ಚಿದಾನಂದಮುಕ್ತತಾನಾಗುವುದಕೆಅಂಗನೆಯ ಬಿಡಬೇಕು ಚಿಂತೆ ಯಾಕಯ್ಯಾ5
--------------
ಚಿದಾನಂದ ಅವಧೂತರು
ಸ್ನಾನ ಮಾಡಿರಯ್ಯ ಜಾÕನತೀರ್ಥದಲಿನಾನು ನೀನೆಂಬಹಂಕಾರವ ಬಿಟ್ಟು ಪ.ತನ್ನೊಳು ತಾನೆ ತಿಳಿದರೊಂದು ಸ್ನಾನಅನ್ಯಾಯಗಾರಿ ಕಳೆದರೊಂದು ಸ್ನಾನಅನ್ಯಾಯವಾಡದಿದ್ದರೊಂದು ಸ್ನಾನಚೆನ್ನಾಗಿ ಹರಿಯ ನೆನೆದರೊಂದು ಸ್ನಾನ 1ಪರಸತಿಯ ಬಯಸದಿದ್ದರೆ ಒಂದು ಸ್ನಾನಪರನಿಂದೆ ಮಾಡದಿದ್ದರೆ ಒಂದು ಸ್ನಾನಪರದ್ರವ್ಯ ಅಪಹರಿಸದಿರೆ ಒಂದು ಸ್ನಾನಪರತತ್ವತಿಳಿದುಕೊಂಡರೆ ಒಂದು ಸ್ನಾನ2ತಂದೆತಾಯಿಗಳ ಸೇವೆ ಒಂದು ಸ್ನಾನಮುಂದಿನಮಾರ್ಗ ತಿಳಿದರೊಂದು ಸ್ನಾನಬಂಧನವನು ಬಿಡಿಸಿದರೊಂದು ಸ್ನಾನಸಂಧಿಸಿ ತಿಳಿದುಕೊಂಡರೆ ಸೇತು ಸ್ನಾನ 3ಅತ್ತೆ ಮಾವನ ಸೇವೆಯೊಂದು ಸ್ನಾನಭರ್ತನ ಮಾತು ಕೇಳುವುದೊಂದು ಸ್ನಾನಕ್ಷೇತ್ರಪಾತ್ರರ ಸಹವಾಸ ಒಂದು ಸ್ನಾನಪಾರ್ಥಸಾರಥಿ ನಿಮ್ಮ ಧ್ಯಾನವೆ ಧ್ಯಾನ 4ವೇದ ಶಾಸ್ತ್ರಗಳನೋದಿದರೊಂದು ಸ್ನಾನಭೇದಾಭೇದ ತಿಳಿದರೊಂದು ಸ್ನಾನಸಾಧು ಸಜ್ಜನರ ಸಂಗ ಒಂದು ಸ್ನಾನಪುರಂದರವಿಠಲನ ಧ್ಯಾನವೆ ಸ್ನಾನ 5
--------------
ಪುರಂದರದಾಸರು
ಹರನೆ ನಾ ನಿನ್ನ ಪರಿಸರನಯ್ಯಾ77 ಅಸುರವರ ಸ್ಮರಮುಖ ನುರಗಣಸೇವ್ಯನೆ ಪನರವರನಿಗೆ ನೀ ಹರಿಮಹಿಮೆಯ ಪೇಳಿದೆ ಅ.ಪಅಂಬಾಧವ ಹೇರಂಬನತಾತಶರಜನ್ಮನ ಪಿತನಂಬಿದೆ ನಿನ್ನನು ತ್ರ್ಯಂಬಕ ಪಾಲಿಸೊ 1ತಂದೂತಂದರ ಚಂದ್ರದ್ಯುಮಣಿಪಾವಕನೇತ್ರ ತ್ರೀಣಿಇಂದುಶೇಖರಭವಕಂಧರಮಾಲಿಯೆದಂದಶೂರ ನಿಜಛಂದ ಕಲಾಪನೆ 2ತುಂಗಮಹಿಮ ಭಸಿತಾಂಗ ಶುಭಾಂಗ 3ಧನವನು ಪಾಲಿಸು ಧನಪÀನ ಸಖನೆ 4ದಾತಾಗುರುಜಗನ್ನಾಥಾ - ವಿಠಲದೂತಾಪಾತಕಕಾನನವೀತಿಹೋತ್ರಶುಭವ್ರಾತವ ಪಾಲಿಸ್ಯನಾಥನ ಪೊರಿಯೋ 5
--------------
ಗುರುಜಗನ್ನಾಥದಾಸರು
ಹರಿಪದಯುಗಲವನಿತ್ಯ ನೆನೆದವೆಗೆ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಪರಮಪದವಿಯೇ ಸಾಕ್ಷಿ ||ಹರಿ -ಗುರು ದೂಷಣ ಮಾಡಿದ ಮನುಜಗೆ |ನರಕರೌರವವೆ ಸಾಕ್ಷಿ ಪ.ಕಡುಭಕ್ತಿಯಲಿ ಕೃಷ್ಣನÀ ನೆನೆದರೆ |ನಡೆಯಲಿ ಸತ್ಯವೆ ಸಾಕ್ಷಿ ||ದೃಡ ಭಕುತಿಯಿಂದ ಉಣಬಡಿಸಿದವಗೆ |ಷಡುರಸಾನ್ನವೇ ಸಾಕ್ಷಿ 1ತಾನೊಂದುಂಡು ಪರರಿಗೊಂದಿಕ್ಕುವಗೆ |ಗುಲ್ಮರೋಗವೇ ಸಾಕ್ಷಿ ||ಹೀನನಾಗಿ ಹಿರಿಯರನು ದೂಷಿಪಗೆ |ಹೀನ ನರಕವೇ ಸಾಕ್ಷಿ 2ಕನ್ಯಾದಾನವ ಮಾಡಿದವಗೆ ದಿವ್ಯ |ಹೆಣ್ಣಿನ ಭೋಗವೆ ಸಾಕ್ಷಿ ||ಕನ್ಯಾದಾನವ ಮಾಡದ ಮನುಜಗೆ |ಹೆಣ್ಣಿನ ದೈನ್ಯವೇ ಸಾಕ್ಷಿ 3ಅನ್ನದಾನ ಮಾಡಿದ ಮನುಜಗೆ ದಿ - |ವ್ಯಾನ್ನವನುಂಬುದೆ ಸಾಕ್ಷಿ ||ಅನ್ನದಾನ ಮಾಡದ ಮನುಜಗೆ ತಿರಿ -ದುಣ್ಣುತಿರುವುದೇ ಸಾಕ್ಷಿ 4ಕ್ಷೇತ್ರದಾನ ಮಾಡಿದ ಮನುಜಗೆ ಏತ - |ಛತ್ರವನಾಳ್ವುವದೆ ಸಾಕ್ಷಿ ||ಪಾತ್ರವರಿತು ಧರ್ಮಮಾಡಿದವಗೆ ಸತ್ -ಪುತ್ರರಾಗುವುದೆ ಸಾಕ್ಷಿ 5ಕಂಡ ಪುರುಷರಿಗೆ ಕಣ್ಣಿಡುವ ನಾರಿಗೆ |ಗಂಡನು ಕೇಳುವುದೆ ಸಾಕ್ಷಿ ||ಪುಂಡನಾಗಿ ಪರಸ್ತ್ರೀಯರ ಸೇರುವಗೆ |ಹೆಂಡಿರ ಕಳೆವುದೆ ಸಾಕ್ಷಿ 6ಭಕ್ತಿಯರಿಯದ ಅಧಮನಿಗೊಂದು |ಕತ್ತಲಮನೆಯೇ ಸಾಕ್ಷಿ ||ಮುಕ್ತಿಪಡೆವುದಕೆ ಪುರಂದರವಿಠಲನ |ಭಕ್ತನಾಗುವದೆ ಸಾಕ್ಷಿ 7
--------------
ಪುರಂದರದಾಸರು
ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
--------------
ಪುರಂದರದಾಸರು
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು
ಹೊಲೆಯ ಹೊಲತಿ ಇವರವರಲ್ಲಹೊಲಗೇರಿಯೊಳು ಹೊಲೆಯ ಹೊಲತಿಯಿಲ್ಲ ಪ.ಸತಿಯಳ ವಶನಾಗಿಜನನಿ - ಜನಕರಿಗೆಅತಿ ನಿಷ್ಟುರ ನುಡಿವವ ಹೊಲೆಯಸುತರ ಪಡೆದು ವಾರ್ಧಿಕ್ಯ ಮದವೇರಿಪತಿದ್ಟೇಷ ಮಾಡುವಳೆ ಹೊಲತಿ 1ಗುರುಗಳಲ್ಲಿ ವಿದ್ಯೆಗಳನು ಕಲಿತುಹಿರಿಯರ ಬಳಲಿಸುವವ ಹೊಲೆಯಪರಪುರಷಗೊಲಿದು ತನ್ನ ಪುರುಷನವಿರಸವ ಮಾಡುವ ಕುಲಕೇಡಿತೆ ಹೊಲತಿ 2ಒಡೆಯನನ್ನವನುಂಡು ಅಡಿಗಡಿಗೆ ಬಾಯ್ಬಿಡದೆ ತರ್ಕಿಸುವ ಜಡ ಹೊಲೆಯಬಡತನ ಬಂದರೆ ಪುರುಷನ ರಚ್ಚೆಗೆಬಿಡದೆ ತಹಳೆ ಶುದ್ಧ ಹೊಲತಿ 3ನೂರೊಂದು ಕುಲ ಕುಂಬಿಪಾಕಕಟ್ಟುವಪರನಾರಿಯಲ್ಲಿ ವೀರ್ಯವಿಟ್ಟವ ಹೊಲೆಯಆರೊಳು ಕಲಹಾಪಸ್ಮಾರಿ ದುರ್ಮುಖಿಯು - ಕಠೋರಕುಮತಿ ಶುದ್ಧ ಹೊಲತಿ 4ಅಜನುತ ಪುರಂದರವಿಠಲನ ದಾಸರಭಜನೆಯ ದಾರಿಯ ಬಿಟ್ಟವ ಹೊಲೆಯನಿಜವರ್ಯರಾದ ಸಜ್ಜನರ ಪಾದಪದ್ಮವಭಜಿಸದಿರುವಳೆ ಶುದ್ಧ ಹೊಲತಿ 5
--------------
ಪುರಂದರದಾಸರು