ಒಟ್ಟು 1563 ಕಡೆಗಳಲ್ಲಿ , 111 ದಾಸರು , 1190 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನ್ನ ಅಂಜಿಕೆಯು ಎನಗೇನುದೇವಾ ನಿನ್ನ ಭಕುತರಿಗಲ್ಲದಲೆ ಅಂಜುವೆನೆ ನಾನು ಪ ನಿನ್ನ ಬೈದವನಿಗೆ ಪುಣ್ಯಲೋಕಗಳುಂಟು ನಿನ್ನವರ ನಿಂದಕರಿಗನ್ಯಗತಿಯು ನಿನ್ನ ನಿಂದಿಸಲು ಫಲವ ನೀಡುವಿ ದೇವಾ ಜನ್ಮ ಜನ್ಮಕೆ ನಿನ್ನ ಜನ ದ್ವೇಷಸಲ್ಲಾ 1 ರೂಪಕೆಡಿಸಿದವಗಾಪಾರ ಗತಿಯನೆ ಇತ್ತಿ ಪಾಪಿಯವನಾದರೂ ಪುಣ್ಯಶಾಲೀ ಕೋಪದಿಂದಲಿ ಒದ್ದ ಭೃಗುಮುನಿಯನು ಕಾದ್ಯಾ ಮೋಸದ್ವೇಷವ ಮಾಡೆ ಪಾಪನರಕಾ ಅಹುದು 2 ಧಾತಜನಕನೆ ನಿನ್ನ ಘಾತಿಸಲು ಪರವಿಲ್ಲ ಯಾತಕಾದರು ನಿನ್ನ ದೂತರನ್ನಾ ಮಾತಿನಿಂದಲಿ ದೂರೆ ಪಾತಕವೆ ಬರುವುದು ನಿತ್ಯಲ್ಲ ಗುರುಜಗನ್ನಾಥ ವಿಠಲರೇಯಾ 3
--------------
ಗುರುಜಗನ್ನಾಥದಾಸರು
ನಿನ್ನ ಕ್ಲೇಶವ ಕೇಳೆ ಎನಗೆ ಮರುಕಪ ಎನ್ನ ಕ್ಲೇಶವ ನಿನಗೆ ತಿಳಿಸಬಹುದೆ ದೇವ ಅ.ಪ ಹದಿನಾಲ್ಕು ಲೋಕಗಳ ಹುಡುಗತನದಲಿ ಪಡೆದು ಅದಕೆಲ್ಲ ಅನ್ನವೀಯುವ ಚಿಂತೆಯು ಹದಿನಾಲ್ಕು ಲೋಕಗಳ ಸರ್ವಕರ್ಮಗಳಿಗೂ ಹಗಲಿರುಳು ಪ್ರೇರಣೆಯ ಮಾಡುವಾತಂಕ 1 ಹಿರಿಮಗನದೊಂದುಸಿರ ತರಿದರೆಂಬಾತಂಕ ಕಿರಿಮಗನ ದೇಹ ಪೊಸಕಿದ ಚಿಂತೆಯು ಹರನು ಮೊಮ್ಮಗ ಹಾಲಾಹಲವ ಕುಡಿಯುತ ಹಲ್ಲು ಕಿರಿಯುವಾತಂಕಕ್ಕೆ ಹರವು ತೆರವಿಲ್ಲ 2 ಚಂಚಲಳು ಸತಿಯೆಂದು ಹೊಂಚು ಕಾಯುವ ಚಿಂತೆ ಮಂಚದಲಿ ಘಟಸರ್ಪ ವಿಷದ ಚಿಂತೆ ಸಂಚಿತಾಗಮ ಪ್ರಾರಭ್ಧಗಳನಳಿಸುವಗೆ ವಂಚಕರು ಏನು ಮಾಡುವರೆಂಬ ಚಿಂತೆ 3 ಹಲವು ವಿಧ ವೇಷಗಳ ತಾಳಿ ಜಗಂಗಳಲಿ ನೀ ತಲೆಯ ಮರಿಸಿಕೊಂಡರೇನು ಫಲವೊ ಬಳಸಿ ಹುಡುಕಿ ಗೂಢಚಾರಿ ಯೋಗಿಯು ನಿನ್ನ ತಿಳಿದು ಬೆಳಕಿಗೆ ತರುವ ಮರೆಮಾಚಲೇಕೊ 4 ತಾಪತ್ರಯ ತಳೆಯೆ ಗೋಪನಲಿ ಪುಟ್ಟಿದರು ಗೋಪಿಯರ ಸಾಸಿರದ ಗೋಳು ನಿನಗೆ ಭೂಪ ದಶರಥನ ಮಗನಾಗಿ ಪುಟ್ಟಿದರಯ್ಯೊ ಪಾಪ ಸತಿಯಳ ಕಳೆದುಕೊಂಡ ಬಲುಚಿಂತೆ 5 ನಿನ್ನ ಬೇಡುವುದಿಲ್ಲ ನಿನ್ನ ಕಾಡುವುದಿಲ್ಲ ನಿನ್ನ ನೋಡಲು ಎನಗೆ ಬೇಸರವು ಜಗಕೆ ನಿನ್ನ ಚಿಂತೆಯು ಮನ ಪ್ರಸನ್ನತೆ ನೀಡುವುದು ಇನ್ನೇನು ನಿನಗೆ ಚಿಂತೆಯೊ ತಿಳಿಸಿ ಪೊರೆಯೊ 6
--------------
ವಿದ್ಯಾಪ್ರಸನ್ನತೀರ್ಥರು
ನಿನ್ನ ಚಿತ್ತಕೆ ಬಂದುದನು ಮಾಡು ಸರ್ವೇಶ ಎನ್ನ ಸ್ವಾತಂತ್ರ್ಯ ಲವಮಾತ್ರ ಉಂಟೇ ಸ್ವಾಮಿ ಪ ಅನಂತಾನಂತ ಜನ್ಮ ಕಾದರು ಒಮ್ಮೆ ಚೆನ್ನ ಗೋಪಾಲ ಕೃಷ್ಣದೇವ ಅ.ಪ. ಛೀ ಎನಿಸು ಜನರಿಂದ ನಿಂದ್ಯವನು ಮಾಡಿಸು ಬಾಯದೆರೆಸೊ ಹೊಟ್ಟೆಗಾಗಿ ಗಾಯನವ ಮಾಡಿಸು ಗುಪ್ತದಲ್ಲೇ ಇರಿಸು ದಾಯಾದಿಗಳಿಗೊಪ್ಪಿಸು ರಾಯಪದವಿಯ ಕೊಡಿಸು ರಾಜ್ಯವೆಲ್ಲವ ಮೆರೆಸು ಕಾಯಕ್ಲೇಶವನು ಪಡಿಸು ಮಾಯಾಧವನೆ ನಿನ್ನ ಮಹಿಮೆ ತಿಳಿದವರಾರು ನ್ಯಾಯ ಅನ್ಯಾಯವಾಗಿ ಶ್ರೀಶ 1 ಧನವನ್ನೆ ಕೊಡಿಸು ದಾನವನೆ ಮಾಡಿಸು ಗುಣವುಳ್ಳ ಮನುಜನೆನಿಸು ಮನಸು ಚಂಚಲನೆನಿಸು ಮಾತುಗಳ ಪುಸಿಯೆನಿಸು ಕ್ಷಣದೊಳಗೆ ಶುದ್ಧನೆನಿಸು ಋಣದ ಭಯವನೆ ಹೊರಿಸು ರಿಕ್ತ ನಾನೆಂದೆನಿಸು ತೃಣದಂತೆ ಮಾಡಿ ನಿಲಿಸು ನಿತ್ಯ ಮನದಿಚ್ಛೆಗಾರನೆ ದಿನ ಪ್ರತಿದಿವಸವಾಗೆ, ದೇವ 2 ಯಾತ್ರೆಯನೆ ಮಾಡಿಸು ಯೋಚನೆಯಲೇ ಇರಿಸು ಪಾತ್ರ ಜನರೊಳು ಪೊಂದಿಸು ಗೋತ್ರ ಉತ್ತಮನೆನಿಸು ಗೋವುಗಳ ಕಾಯಿಸು ಧಾತ್ರಿಯೊಳು ನೀಚನೆನಿಸು ಮೈತ್ರರೊಳು ಕೂಡಿಸು ಮೈಗೆಟ್ಟವನೆನಿಸು ಸ್ತೋತ್ರಕ್ಕೆ ಯೋಗ್ಯನೆನಿಸು ನೇತ್ರ ಮೂರುಳ್ಳವನು ಸ್ತುತಿಸಿದ ಮಹಾಮಹಿಮ ರಾತ್ರಿ ಹಗಲು ಎನ್ನದೆ ದೇವ 3 ಉಪವಾಸದಲ್ಲಿರಿಸು ಉಚಿತ ಭೋಜನ ಉಣಿಸು ಜಪತಪವನೆ ಮಾಡಿಸು ಅಪಹಾಸ್ಯ ಮಾಡಿಸು ಅದ್ಭುತವನೈದಿಸು ಗುಪಿತರೊಳಗಧಿಕನೆನಿಸು ಉಪಕಾರಿ ನರನೆನಿಸು ಉದ್ದಂಡನಿವನೆನಿಸು ವಿಪುಳ ಮತಿಯಲಿ ನಿಲಿಸು ಅಪರಿಮಿತ ಗುಣನಿಧಿಯೆ ಆನಂದ ಮೂರುತಿಯ ಸಫಲಮತಿಯೀವ ದೇವ 4 ವೇದವನು ಓದಿಸು ವೇದಾರ್ಥಗಳ ನುಡಿಸು ಓದಿದರು ದಡ್ಡನೆನಿಸು ಹಾದಿಯನು ತಪ್ಪಿಸು ಹಿತದವರನಗಲಿಸು ಸಾಧು ಮಾರ್ಗವನೆ ಕೊಡಿಸು ಬಾಧೆಗಳನಟ್ಟಿಸು ಭಕುತಿವೆಗ್ಗಳನೆನಿಸು ಉದರಕೋಸುಗ ತಿರುಗಿಸು ಪಾದದಲಿ ಗಂಗೆಯನು ಪೆತ್ತ ಪರಮಾನಂದ ಮೋದ ವಿನೋದವಾಗೆ ದೇವ 5 ಕುಣಿಕುಣಿದಾಡಿಸು ಕಾಶಿಯಲಿ ಪೊಂದಿಸು ಮಣಿ ಭೂಷಣವ ತೊಡಿಸು ಘನ ಕವನ ಪೇಳಿಸು ಕೌತುಕವನೈದಿಸು ವನ ಭುವನದೊಳು ನಿಲಿಸು ಪ್ರಣವ ಮಂತ್ರವ ಜಪಿಸು ಪ್ರಕಟಭಯವನೆ ಬಿಡಿಸು ಬಿನುಗು ವೈರಾಗ್ಯನೆನಿಸು ಜನನಿ ತನುಜರ ಕೂಡೆ ಅನುಸರಿಸಿ ನಡೆವಂತೆ ಎನಗೆ ನೀನೆ ಸದ್ಗತಿ ಸ್ವಾಮಿ 6 ಯಾವುದಾದರು ನೀನು ಇತ್ತುದಕೆ ಎನಗಿಷ್ಟು ನೋವು ಒಂದಾದರಿಲ್ಲ ಜೀವೇಶರೊಂದೆಂಬ ದುರ್ಮತವ ಕೊಡದಿರು ಭಾವದಲಿ ನಾ ಬೇಡುವೆ ಆವಾವ ನರಕದಲಿ ಬಹುಕಾಲವಿಟ್ಟರು ಇಪ್ಪೆ ನಾನೊಲ್ಲೆ ಮಿಥ್ಯಮತವ ಕಾವ ಕರುಣೆ ನಮ್ಮ ವಿಜಯವಿಠ್ಠಲರೇಯ ಪಾವನ್ನ ಮಾಳ್ಪ ಶಕ್ತ ವ್ಯಕ್ತ 7
--------------
ವಿಜಯದಾಸ
ನಿನ್ನ ನಂಬಿದೆನಯ್ಯ ಚನ್ನಕೇಶವರಾಯ ಇನ್ನಾದಾರೂ ಕೃಪೆಯ ತೋರಿಸಯ್ಯ ಪ ಎನ್ನ ಕರ್ಮದ ಫಲದಿ ಬನ್ನಗೊಂಡಿಹೆನಯ್ಯ ನಿನ್ನ ಚರಣವನೆನಗೆ ಸನ್ನಿಹಿತ ಮಾಡಯ್ಯ ಅ.ಪ ನಡೆವುದೂ ನಿನಗಾಗಿ ನುಡಿವುದೂ ನಿನಗಾಗಿ ಪಡೆವುದೂ ನಿನಗಾಗಿ ಎನ್ನಿಸಯ್ಯ ಕೊಡುವವನು ನೀನಾಗಿ ಪಡೆವವನು ನಾನಾಗಿ ಪೊಡವಿಯಲೆಷ್ಟುದಿನ ಬಾಳ್ವುದಯ್ಯ 1 ಕಲಿಯುಗದಿ ಭಜನೆಯಿಂದಲೆ ಭವವು ಕಳೆವುದೆಂದು ಉಲಿದರೈ ವ್ಯಾಸಾದಿ ಮುನಿವರ್ಯರು ಕಲುಷ ಪೂರಿತನಾಗಿ ಬಲುನೊಂದೆ ಕೈ ಪಿಡಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನ ಪಾದವ ನಂಬಿ ಅನ್ಯರಾಶ್ರಯವ್ಯಾಕೆಚನ್ನ ಗುರು ವಿಜಯರಾಯ ಪ ಇನ್ನೇನು ಯಿನ್ನೇನು ಯೆನ್ನ ಕುಲಕೋಟಿ ಪಾ-ವನ್ನವಾದುದು ನಿಶ್ಚಯಾ ಜೀಯ ಅ.ಪ. ಪಂಚ ಮಹ ಪಾತಕರೊಳಗೆ ಮೂರನೆ ಕಕ್ಷಿಕಾಂಚನ ದ್ರೋಹಿ ನಾನು ಯೆನ-ಮುಂಚೆ ಬಂದಾಗ ಕೈ ಬಿಡದೆ ಪ್ರಾ-ಪಂಚವನೆ ಬಿಡುಯೆಂದು ನುಡಿದೆ ಯೆನ್ನಸಂಚಿತಾಗಮವೆಲ್ಲ ತೊಡದೆ ಯೆನ್ನ ||ಕಂಚು ಕಟ್ಬುಳಿ ಕಲ್ಲೊತ್ತಿನ ಮೇಣ್ ಕಾಶಿಗೆ ||ಪಂಛೇರು ಮಾಡಿ ನಡದೆ ಬಿಡದೆ 1 ವ್ಯಾಸರಾಯರ ಗುಹೆಯೊಳಗೆ ನವ ಸಂ-ನ್ಯಾಸಿಗಳ ಸಮಕ್ಷಮದಲಿ ಯೆನ್ನದಾಸನಾಗೆನುತ ನೀ ಪೇಳ್ದೆ ಯೆನ್ನವಾಸಿ ಪಂಥಗಳೆಲ್ಲ ತಾಳ್ದೆವೊಲಿದುದೋಷಾಂಕುರಗಳೆಲ್ಲ ಸೀಳ್ದೆ ಸ್ವಾಮಿ ||ಶ್ರೀಶ ಸರ್ವೋತ್ತಮನೆಂದು ನೀ ಪೇಳಿ ಸಂ-ತೋಷದಿಂದೆನ್ನ ಪೊರದೆ ಬಿಡದೆ 2 ನಿತ್ಯ ಮೆರೆವೆ ಯೆನ್ನ ||ಪೂಜಾ ಫಲವೆಂದು ಆವಾಗೆ ನಿನ್ನ ಪದರಾಜೀವ ಧ್ಯಾನಿಸುವೆ ಸ್ವಾಮಿ 3 ಪುಶಿಯು ಜಗವೆಲ್ಲ ದೈವವು ತಾನೆನುತಅಸಮ ವೇದ ಪೌರುಷ ಯೆಂಬಂಥಭಸುಮಧಾರಿಯನೆ ಕರದೆ ಅವನಅಸುರ ಭಾವವನೆಲ್ಲ ಮುರಿದೆ ನಮ್ಮಬಿಸಜಾಕ್ಷ ಪರನೆಂದು ಪೊರೆದೆ ಸ್ವಾಮಿ ||ಎಸೆವ ದ್ವಾದಶನಾಮ ಪಂಚಮುದ್ರಿಯನಿಡಿಸಿನಸುನಗುತಲವನ ಪೊರದೆ ಬಿಡದೆ 4 ವಾಕು |ಅನ್ಯಥಾ ಮಾಡುವುದು ಸಲ್ಲ ಮೋ-ಹನ್ನ ವಿಠ್ಠಲ ಯಿದನು ಬಲ್ಲ ಮುನ್ನಾಪನ್ನಗಶಯನ ಪ್ರಸನ್ನನಾದದಕೆ ಯಿದುಎನ್ನ ಮನೋರಥ ಸಿದ್ಧಿಯೊ ಸ್ವಾಮಿ 5
--------------
ಮೋಹನದಾಸರು
ನಿನ್ನ ಬಗೆ ಬಗೆ ರೂಪಗಳ ಉರಗ ಶಯ್ಯ ರಂಗಯ್ಯಾ ಪ ದಿತಿಸುತ ಸೋಮಕ ಶ್ರುತಿತತಿ ಕದ್ದೊಯ್ಯೆ ಶತಧೃತಿ ತಲೆವಾಗಿ ಚತುರತೆÉಯಿಂದಲಿ ಮತಿಪತಿ ಮತ್ಪಿತಾ ಪ್ರತಿಪತಿ ಕಲ್ಪಕ್ಕೆ ಗತಿಸ್ಥಿತಿ ನೀನೆಂದು ಅತಿ ತುತಿಸಲು ಸಂ ತತ ಹಿತ ಹಿರಿದಾಗಿ ಪ್ರತಿಯಿಲ್ಲವೆನಿಸಿದ್ದು ರಿತ ಪುಂಜದಾನವನ ತರಿದೊಟ್ಟಿ ಮತ್ಸ್ಯಾಕೃತಿಯಾ ಜಯ ಜಯವೆನುತಿರೆ ತ್ರಿಭುವನಾ 1 ಕೃತು ಭುಕು ದೇವಾರಿತತಿ ಸಂಗತಿಯಿಂದ ಮತಿ ಏಕರಾಗಿ ಸಂಮತದಿಂದ ನಡೆದು ಪ ರ್ವತವ ಕಿತ್ತಿ ತಂದು ಉ ನ್ನತವಾದ ಕ್ಷೀರೋದ ಪತಿಯೊಳಗಿಟ್ಟು ಅತಿಬಲದಿಂದ ನಗುತ ಮಥಿಸಲು ಮಹಾ ಕ್ಷಿತಿಧರ ಮುಣಗಿ ಪೋಗೆ ಹಾಹೋ ಎಂದು ಗತಿಗೆಟ್ಟ ಯೆಲ್ಲ ಕೂಗೆ ಕೇಳುತ ಬಂದು ಅತುಳ ಕಮಠನಾಗಿ ಪೊತ್ತೆ ಭಳಿರೆ ಮಿಗೆ2 ಗತಮಂದ ಮಾರೀಚ ಸುತ ಹೇಮನೇತುರಾ ಕ್ಷಿತಿಯ ಕದ್ದೌಯಿದು ದುರ್ಮತಿಯಿಂದ ವಿಬುಧÀರ ಖತಿಗೊಳಾಗೈಸಿ ಹಿಗ್ಗುತಲವ ತಿರುಗುತ್ತ ಪ್ರತಿಕೂಲನಾಗಿ ಸುವ್ರತಗಳ ಕೆಡಿಸುತ್ತ ಮಿತಿ ಮೀರಿ ಪಾತಾಳ ವಾಸವಾಗಿರಲು ಅದ್ಭುತ ಕಿಟಿ ರೂಪವಾಗಿ ರುತಲಿರೆ ಸತತಮರರು ಪಾಡೆ ಏನೆಂಬೆ ಶಿರವಾಗಿ 3 ಚತುರ ಮೊಗನವರನುತಿಸಿ ಪಡೆದು ಪ್ರಾಗ ರ್ವಿತನಾಗಿ ನೀಲಲೋಹಿತನ ಭಕುತಿಯಿಂದ ತತುವೇಶಜನರ ಶಕುತಿ ಕುಂದಿಸಿ ತಾನೆ ರತುನ ಗರ್ಭದೊಳು ದೇವತಿಯೆಂದು ಸಾರಿ ಬಾ ಳುತ್ತ ತನ್ನಾತ್ಮಜ ಭಾಗವತನ ಭಾಧಿಸಿ ಶಿರಿ ಗತಿಯೆಂದು ವಂದಿಸಲೆ ಕಂಭದಿ ಬಂದು ಸುರರು ಪೂಮಳೆ ಚೆಲ್ಲೆ 4 ಸುತಳ ಲೋಕಕ್ಕೀಶ್ವರ ಶತಕೃತ ಕವಿಯ ರಚಿಸಿ ಸಿತನಾಗಿ ರಥ ನನ್ನ ಚ್ಯುತ ಪದಸ್ಥನ ಮಾಡಿ ಸತುವ ಮಾರ್ಗದಲಿ ಪೂರಿತ ಭಾಗ್ಯತನದಲ್ಲಿ ಕೃತಕಾರ್ಯನಾಗಿರೆ ರಿತಮದದಲಿ ತಾ ನುತಿಸಲಾದಿತಿಯ ಗರ್ಭದಲ್ಲಿ ಜ ವಿತರಣೆ ನೆವದಿ ನಿಂದು ಭೂಮಿಯ ಕೊಂಡಜ ತತಿ ವಿಕ್ರಮತೀರಿತವಾದ ದಯಾಸಿಂಧು 5 ಸೂನು ಪೂಜಿತನಾಗಿ ಮುನಿಯಿಂದ ಪಿತನಗೋಸುಗ ಉಗ ಳುತ ರೋಷ ಕಿಡಿಗಳಾದ ಈರೈದು ಬಾಹೋ ದ್ವಿತೀಯ ಜಾತಿಯವನ ಹುತವ ಮಾಡಿದ ಗಂಭೀರಾ ನಿ ರುತ ಸತ್ಯವತಿ ನಂದನಕುವರ ಪರುಶ ಪಾಣಿ ಮೃತ ಜೀವಿಗಳ ಬದುಕಿಸಿದ ಮಹಾಧೀರಾ 6 ಚತುರಾತ್ಮ ಹರಿದೈವ ವೈವಸ್ವತ ಮನುಕುಲೋಧ್ಭವನಾ ಅನುಜ ಸಹಿತ ಪೋಗಿ ಮುನಿಯ ವಾ ರುತಿಯ ಮನ್ನಿಸಿ ಶಿಲಿ ಸತಿಯಳ ಮಾಡಿ ಭೂ ಪುರವಸಾರಿ ಪಿತನಾಜ್ಞ ತಿಳಿದು ಮಾ ರುತಿಯಿಂದ ಕಪಿಯ ವಿಗತಸಂತಾಪನ ಮಾಡಿ ಸೇತುವೆ ಕಟ್ಟಿ ಪತಿತರ ಶಿರ ಚೆಂಡಾಡಿ ಲಂಕಾನಗರ ಹಿತದಿಂದ ಭಕ್ತಗೆ ಪಟ್ಟಗಟ್ಟಿದÀ ನೋಡಿ 7 ಶತ್ರಪತ್ರಾರುಣ ದಳಾಯುತ ನಯನಾದೇವ| ತತಿ ವಂದ್ಯ ಗೋಕುಲ ಸ್ಥಿತಿ ಉದ್ಧಾರಕ | ಭಂಗ ಬಲಾ | ಚರಿತಪೂರ್ಣ ಕಂಸಾರಿ ಯುತ ಷೋಡಶಾಖ್ಯ ಯುವತಿಯರ ತಂದ ಅ| ಪ್ರತಿಮಲ್ಲ | ರತಿಪತಿ ಪಿತ ಫಲ್ಗುಣಗೆ ಭಾ | ಸಾರಥಿ ಎನಿಸಿ ಕಾಳಗದೊಳು | ಧೃತರಾಷ್ಟ್ರಜರ ಕೊಲ್ಲಿಸೆ ಸಭಯಲ್ಲಿ ಪರೀ | ಕ್ಷಿತಿನ ಉಳಿಹಿ ಕೀರುತಿ ಪೊತ್ತ ಗುಣರಾಶಿ 8 ವ್ರತದಿಂದ ಖಳರು ಧರಿತ ಸತ್ಕರ್ಮವ ಮಾಡೆ | ಗತಿಗೆಟ್ಟು ಸುರರ ಉಕುತಿಯಿಂದ ಕೈಮುಗಿದು | ಅಪ್ರಾಕೃತ ಕಾಯ ಶಿಶುವಾಗಿ || ಶ್ರುತಿ ಸರ್ವದಲಿ ಅನೃತವೆಂದು ತಿಳುಪಿ ಉ | ಚಿತ ಮಾರ್ಗದ ಬಿಡಿಸಿ ನಿ | ರ್ಜೀತ ಕಾರು ಪಾರ್ವತಿ ಪತಿಗೆ ಮಾರ್ಗಣವೆನಿಸಿ ತ್ರಿಪುರಾರಿಗೆ ಹುತಗೈಸಿ ಶಿವನ ಗೆಲಿಸಿ ವಿವಶಳನೆ ಪತಿವ್ರತೆಯರ ಲಜ್ಜೆಗೊಳಿಸಿದೆ ವಂಚಿಸೀ 9 ವಿಹಿತ ಧರ್ಮ ಮರೆದು | ಮಮತೆ ಜಾತಿ ಸಂಕರ | ವ್ರತದಲ್ಲಿ ನಾನಾ ದುಷ್ಕøತ ತುಂಬಿರಲು ದೇವತೆಗಳು ಮರುಗಿ ಅ | ರತರಾಗಿ ತುತಿಸಿ ತ್ವರಿತ ಸ್ವಭಾವದಲ್ಲಿ ನಿ | ಸಿತ ಖಡ್ಗಧರಿಸಿ ರಾ ಶೌರಿ | ಸುಕೃತ ನೆನೆವವರಿಗೆ ಭವಸಾಗರ ತಾರಿ10 ಶ್ರುತಿ ಶೀರ್ಷ ಶ್ರುತಿ ಉಪ | ಕೃತಿನಯ ಪಂಚಮ ಶ್ರುತಿ ಪಂಚರಾತ್ರಾ ಸಂ | ವತ ಮೂಲ ರಹಸ್ಯ | ತತುವಾದಿನಾಮನು | ಶ್ರುತಿಕಲ್ಪ ಕಥೆ ಸರ್ವ ಪ್ರತಿಪ್ರತಿ ವರ್ಣ ಸಂತತಿಯಲ್ಲಿ ನೀನೆ ವ್ಯಾ | ಪುತಮೂರ್ತಿ ಸಪ್ತ ಸಪುತ ಭುವನೇಶನೆಂದು ಅಚೌಧ್ಯರೊ ಪ್ಪುತ ಕೊಂಡಾಡುವರು ನಿಂದು | ಭಕುತಪೂ ಜಿತ ಕಾಯಾ ವಿಜಯವಿಠ್ಠಲನೆ ಪಾಲಿಸೊ ಇಂದು11
--------------
ವಿಜಯದಾಸ
ನಿನ್ನ ಮಹಿಮೆಗಿಂಥವರು ಹೊಣೆಯೆ ? ಪ ಚಿನ್ಮಯನೆ ಸಕಲಭುವನಾಧಾರವೆಂಬುದನುಬಣ್ಣಿಸಲು ಎನ್ನಳವೆ ಪನ್ನಗೇಂದ್ರನು ಹೊಣೆಯೆ ? ಅ ವಿಧಿ ಕೌಸ್ತುಭ ರತ್ನವರ ಪೀತ ವಸನ ಕ್ಷೀರಾಬ್ಧಿ ಹೊಣೆಯೊಶರಣರಿಚ್ಛೆಯಲಿ ನೀನಿದ್ದುದಕೆ ದ್ರೌಪದಿಯುಕರಿರಾಜ ಶಂಭು ಅಂಬರೀಷ ಹೊಣೆಯೊಕರುಣಿಯು ಉದಾರಿ ನೀನೆಂಬುದಕೆ ಧ್ರುವರಾಯಮರುತಸುತ ಸಾಂಧೀಪ ಹೊಣೆಯೊ ಕೃಷ್ಣ 1 ಸುಲಭ ಭಕುತರ ಕಾಯ್ವನೆಂಬುದಕ್ಕೆಲೊ ದೇವಫಲುಗುಣನು ವಿದುರ ಅಕ್ರೂರ ಹೊಣೆಯೊಛಲದಂಕನೆಂಬುದಕೆ ಬಾಣನು ಹಿರಣ್ಯಕನುಜಲಧಿ ದಶಮುಖ ಕಾರ್ತವೀರ್ಯ ಹೊಣೆಯೊಒಲಿಸಿ ನಿನ್ನನು ತುತಿಸಿ ಮುಕುತಿಯನು ಪಡೆದುದಕೆಸಲೆ ಶ್ರುತಿಯು ಗಿರಿಜೆ ಅಜಮಿಳನು ಹೊಣೆಯೊನಳಿನಾಕ್ಷ ಸತ್ತ್ವಗುಣ ನಿನಗೆ ಉಂಟೆಂಬುದಕೆಸಲಿಲಜೋದ್ಭವ ಭೃಗುಮುನೀಂದ್ರ ಹೊಣೆಯೊ 2 ವಾತ ಸತ್ತ್ವಗುಣ ಹೊಣೆಯೊಶ್ರೀಕಾಂತ ನೀನಿತ್ತ ವರವು ಸ್ಥಿರವೆಂಬುದಕೆನಾಕೇಶಜಿತನ ಪಿತನನುಜ ಹೊಣೆಯೊಲೋಕದೊಳು ಕಾಗಿನೆಲೆಯಾದಿಕೇಶವ ಭಕ್ತಸಾಕಾರನೆಂಬುದಕೆ ಸಕಲ ಭುವನವೆ ಹೊಣೆಯೊ 3
--------------
ಕನಕದಾಸ
ನಿನ್ನ ಸಂಕಲ್ಪಾನುಸಾರ ಮಾಡೋ ಎನ್ನ ಸಾಕುವ ಧೊರೆಯೆ ತಿಳಿದು ನೀ ನೋಡೋ ಪ ಪಾತ್ರನೆಂದೆನಿಸೋ ಬಹು ಪಾಪಾತ್ಮನೆಂದೆನಿಸೋ ಶ್ರೋತ್ರೀಯನೆಂದೆನಿಸೋ ಶುಂಠನೆನಿಸೋ ಪುತ್ರಮಿತ್ರಾದ್ಯರಿಂ ಬಯಸಿ ಪೂಜೆಯಗೈಸೋ ಕರ್ತೃ ನೀ ಜಗಕೆ ಸರ್ವತ್ರ ವ್ಯಾಪಕನೆ 1 ಜನರೊಳಗೆ ನೀನಿದ್ದು ಜನ್ಮಗಳಲ್ಲಿ ಗುಣಕಾಲಕರ್ಮ ಸ್ವಭಾವಂಗಳಾ ಅನುಸರಿಸಿ ಪುಣ್ಯ ಪಾಪಗಳ ಮಾಡಿಸಿ ಫಲಗ ಳುಣಿಸಿ ಮುಕ್ತರ ಮಾಡಿ ಪೊರೆವೆ ಕರುಣಾಳು 2 ಯಾತಕೆನ್ನನು ಇನಿತು ದೂಷಕನ ಮಾಡುವಿ ಧ ರಾತಲದೊಳನುದಿನದಿ ಮಾಯಾಪತೇ ಭೀತಿಗೊಂಬುವನಲ್ಲ ಭಯನಿವಾರಣ ಜಗ ನ್ನಾಥ ವಿಠ್ಠಲ ಜಯಪ್ರದನೆ ಜಗದೀಶಾ3
--------------
ಜಗನ್ನಾಥದಾಸರು
ನಿನ್ನ ಸೊಬಗಿದೇನೊ ಶ್ರೀಹರಿ ವಿಭವ ಚನ್ನಕೇಶವಾ ಪ ಸತಿ ಸಿರಿದೇವಿಯು ಅತಿ ಚಂಚಲೆಯು ಸುತಮದನ ತಾನನಂಗನೂ ಸುತೆ ಬಾಗೀರಥಿ ವಕ್ರಮಾರ್ಗಳೋ ಅತಿಶಯ ಮೈದುನ ಕ್ಷಯರೋಗಿ 1 ಇರುವ ಮಂದಿರವು ಸಾಗರ ಮಧ್ಯವು ಉರಗನ ಮೇಲೆ ಪವಡಿಸಿಹೆ ಗರುಡನೇರಿ ಗಗನದಿ ತಿರುಗಾಡುವೆ ನೆರೆ ತುಲಸಿಯ ಮಾಲೆಯ ಹಾಕಿರುವೆ 2 ದಾನಕೊಟ್ಟವನ ಭೂಮಿಗೆ ತುಳಿದೆ ಧ್ಯಾನ ಗೈದವನ ಶಿರವರಿದೆ ಮಾನಿನಿ ಕೊಟ್ಟ ಸವಿಫಲಭಂಜಿಸಿ ಕೂರ್ಮ ವರಹನು ನೀನಾದೆ 3 ಹೀಗಿದ್ದರೂ ಸತ್ಸತಿಸುತ ಬಾಂಧವ ಭೋಗ ಭವನ ಭಾಗ್ಯಗಳಿತ್ತು ರಾಗದಿ ರಕ್ಷಿಪೆ ಶರಣರ ನಿರುತವು ಭಾಗವತಪ್ರಿಯ ಜಾಜಿಕೇಶವಾ 4
--------------
ಶಾಮಶರ್ಮರು
ನಿನ್ನನಲ್ಲದೆ ಯಾರ ಸನ್ನುತಿಸಿ ಫಲವೇನೋ ಪನ್ನಗಾದ್ರಿನಿವಾಸ ಶ್ರೀವೆಂಕಟೇಶ ಪ ಮನ್ನಣೆಯು ಬೇಡಯ್ಯ ಎನ್ನ ತಪ್ಪುಗಳನ್ನು ಮನ್ನಿಸೆಂದೊರಲುವೆನು ಶ್ರೀವೆಂಕಟೇಶ ಅ.ಪ ತಪ್ಪುಹಾದಿಯ ಹಿಡಿದು ಬೆಪ್ಪನಾಗಿರುವೆನ್ನ ಒಪ್ಪಿ ಪರಿಪಾಲಿಸುವ ಅಪ್ಪ ನೀನೋ ತಪ್ಪೊಪ್ಪುಗಳನೆಲ್ಲಾ ಒಪ್ಪಿಸಿದೆ ನಿನಗೆ ತಿಮ್ಮಪ್ಪ ಮಾಂಗಿರಿವಾಸ ಕೈಹಿಡಿದು ಕಾಯೋ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿಮ್ಮ ನುಡಿಗಳ ಕೇಳಲೆನಗೆ ಹೊತ್ತೆಲ್ಲಿಯದುನಮ್ಮ ಗೃಹಕೃತ್ಯಗಳು ಬಹಳವಾಗಿಹವೊ ಪನಮ್ಮಯ್ಯನೊಂದು ಗ್ರಾಮವನೇಕಸ್ವಾಮ್ಯದಲಿತಮ್ಮ ದಂಪತಿಗಳುಪಭೋಗಕೆಂದುತಮ್ಮಲ್ಲಿ ತಾವೆ ಸಂವಾದಿಸಿದರವರಲ್ಲಿಹಮ್ಮು ಕಡೆಯಾದ ಹದಿಮೂವರುದಿಸಿದರೂ 1 ಕ್ಲೇಶ ಬಡಿಸುವರು 2ಸ್ತ್ರೀ ಕಾಮನೆ ರಾಗ ಪ್ರತಿಕೂಲದಿಂ ದ್ವೇಷ ಬೇಕೆಂಬದನೆಕಾದುನುಳಿಯೆ ಕ್ರೋಧಾಆಕ್ರಮಿಸಿ ಸಕಲವನು ಬಚ್ಚಿಡುವನವ ಲೋಭಸಾಕು ಗುರುಹಿರಿಯರೆಂಬವರರಿಯೆ ಮೋಹಾ 3ನಿತ್ಯವಲ್ಲದ ಸಿರಿಯ ನಂಬಿ ಬೆರೆತಿಹಮದನುಉತ್ತಮರ ಕೂಡೆ ಸೆಣೆಸುವನು ಮತ್ಸರನುಮತ್ತೆ ಈಷ್ರ್ಯನು ದುಃಖನನ್ಯರಿಗೆ ಬಗೆಯುತಿಹವ್ಯರ್ಥದಿಂ ಬಸವಳಿಯುತಿಹನಸೂಯಕನು 4ದಂಭವನೆಂಬವನಲ್ಲಿ ಪುರುಷಾರ್ಥವಿಸಿಕಿಲ್ಲಹಂಬಲಿಸುತಿಹ ದರ್ಪಕೊಬ್ಬಿ ಬರಿದೆಉಂಬರೊಬ್ಬರಿಗಿಲ್ಲ ಸಕಲವೂ ನನಗೆಂದುದೊಂಬಿಯಲಿ ನಾ ಸಿಕ್ಕಿ ಬಳಲುತಿಹೆನಾಗಿ 5ವೃತ್ತಿಯೆರಡದರಲ್ಲಿ ಫಲವೆರಡು ಜನ್ಮಕ್ಕೆಬಿತ್ತಿ ಬೆಳೆವರೆ ಚೌಳು ಜಲವ ಕಾಣೆಒತ್ತರಿಸಿ ಬರುತಿರುವ ಜ್ಞಾತಿಗಳ ಬೆಂಕಿಯಲಿಹೊತ್ತು ಹೊತ್ತಿಗೆ ಬರಿದೆ ದಹಿಸುತಿಹೆನಾಗೀ 6ಬರಿಯ ಭ್ರಾಂತಿನ ಬಲೆಯ ಬೀಸಿ ನೋಡುತ್ತಿರುವತಿರುಪತಿಯ ವೆಂಕಟನ ಚರಣಗಳನುಕರಗಳಲಿ ಬಿಗಿಯಪ್ಪಿ ಶಿರವೆರಗಿ ಗುರುಮುಖದಿಅರುಪಿದುದ ನಿಲಿಸೆಂದು ಬೇಡಿಕೊಳುತಿಹೆನು 7ಕಂ||ತನುವಿನೊಳಭಿಮಾನವಿರಲೀಘನತರ ಸಂಸಾರ ದುಃಖ ತೊಲಗದು ಸತ್ಯತನು ನಿತ್ಯತೆದೋರ್ದಕಾರಣಮನದೊಡನಿಂತೆಂದು ಜೀವನನು ವಾದಿಸಿದಂ
--------------
ತಿಮ್ಮಪ್ಪದಾಸರು
ನಿಮ್ಮಿಂದ ಗುರು ಪರಮ ಕಲ್ಯಾಣವು ನಿಮ್ಮಿಂದಲೆನಗೆ ಘನ ಪರಿಪೂರ್ಣವು ದ್ರುವ ಹುರಿದು ಭವಬೀಜ ಧರೆಯೊಳುದಯ ಕರುಣದಲಿ ಪರಮ ಆನಂದ ಸುಖ ಮಳೆಯಗರೆದು ಕರ್ಮ ಪಾಶಗಳೆಂಬ ಕರಿಕಿ ಬೇರವು ಕಿತ್ತಿ ಹರಗಿ ಬಿತ್ತಲು ನಾಮ ತಾರಕುಪದೇಶದಲಿ 1 ತುಂಬಿ ತುಳುಕುವ ಸಿರಿಯು ಸರ್ವಮಯವೆಂಬ ತೆನೆಗಳು ತುಂಬಿ ಏರಿ ಸುಷಮ್ನನಾಳದ ಮಂಚಿಕಿಯ ಮೆಟ್ಟಿ ಪರಿಪರಿ ಅವಸ್ಥೆ ಹಕ್ಕಿಗಳು ಹಾರಿಸಲಾಗಿ2 ಮುರಿದು ಭೇದಾಭೇದವೆಂಬ ಗೂಡಲೊಟ್ಟಿ ಅರಿವು ಕಣದಲಿ ಥರಥರದಲಿಕ್ಕಿ ಙÁ್ಞನ ವೈರಾಗ್ಯವೆಂಬೆರಡೆತ್ತುಗಳ ಹೂಡಿ ಸರ್ವಗುಣ ತೆನೆ ತೆಗೆದು ತುಳಿದು ರಾಸಿಮಾಡಿಸಲಾಗಿ 3 ಸರ್ವಮಯವೆಂಬ ರಾಶಿಯು ಒಬ್ಬುಳಿಯ ಮಾಡಿ ತೂರಿ ತರ್ಕ ಭಾಸ ಗಳೆದು ಮಿಥ್ಯಾಪ್ರಪಂಚವೆಂಬ ಕಾಳವು ಕಡೆಮಾಡಿ ಸಫಲ ಸಹಕಾರದಲಿ ಸುಗ್ಗಿ ಮಾಡಿಸಲಾಗಿ 4 ಏಕೋ ಬ್ರಹ್ಮದ ಗತಿ ನಿಧಾನ ರಾಶಿಯುದೋರಿ ಜನ್ಮ ಮರಣವು ಕೊಯಿಲಿಯ ಸುಟ್ಟು ಉರುಹಿ ಸದ್ಗತಿ ಮುಕ್ತಿ ಸುಕಾಲ ಸಾಧನವಿತ್ತು ಮೂಢ ಮಹಿಪತಿ ಪ್ರಾಣ ಸದ್ಗೈಸಲಾಗಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿರಂಜನ ಶರಧಿಜಕಂಜಕರದಿ ಸುರಸ ಭುಂಜಿಸೋ ದೇವ ಪ ಜಂಬು ನೀರಲ ಸುಗೋಡಂಬಿ ಪಲಸು ದಾ-ಳಿಂಬ ಸುರಸ ಇಕ್ಷುರಂಭೆ ಫಲಗಳಾ 1 ನಾರಿಕೇಳವು ದ್ರಾಕ್ಷಿ ಪೇರು ಖರ್ಜೂರ ಕವಳಿಭೂರಿ ಕಿತ್ತಳೆ ಚೂತಕೇರು ಫಲಗಳು2 ಕಾಯಿಸಿದಾ ಪಾಯಸ ದೋಸೆ ಮೊಸರುಬೆಣ್ಣೆದೋಸೆ ಕೊಡುವೆ ಇಂದಿರೇಶ ಯಾದವಗೆ3
--------------
ಇಂದಿರೇಶರು
ನಿರವದ್ಯ ಪ ಸದ್ಗುಣಪೂರ್ಣ ನೀನೇನೊ ಮೂಢ ಅ.ಪ ಬ್ರಹ್ಮಜಿಜ್ಞಾಸದ ಕ್ರಮವ | ನಿರ- ಸಮ್ಯಕ್ ಶೋಧಿಸದೇ ಅಹಂ ಬ್ರಹ್ಮಾಸ್ಮಿ ಎಂಬುವ ಆಮ್ನಾಯ ವಾಕ್ಯಕೆ ಅರ್ಥವ ತಿಳಿಯದೆ 1 ಕಾಕುಮಾಡುತಲರ್ಥ ಪೇಳ್ವುದಧರ್ಮ ಏಕವಾವುದು ಇನ್ನು ಏಕವಾವುದು ಎಂದು ನೀಕಳವಳಿಸುತ ನಿಜತತ್ವವರಿಯದೆ 2 ಆತ್ಮನಾತ್ಮಗಳೆಂದರೇನೊ | ಪರ- ಮಾತ್ಮ ಜೀವಾತ್ಮರೊ ಜೀವದೇಹಗಳೊ ಸ್ವಾತ್ಮಾನುಸಂಧಾನದಿಂದಲಿ ನೋಡ- ಧ್ಯಾತ್ಮ ವಿದ್ಯಾಭ್ಯಾಸ ಮಾಡದೆ ಬಾಯೊಳು 3 ರವಿ ಗಣಪತಿ ಶಿವ ಶಕ್ತಿ | ಭೈ- ರವ ವಿಷ್ಣು ಎಂಬುವ ಷಣ್ಮತಯುಕ್ತಿ ಎವೆ ಮಾತ್ರ ಸ್ವಾತಂತ್ರ್ಯವಿಲ್ಲ ಕೇಳ್ ಸರ್ವಶ- ಬ್ದವುಯಾವನಲ್ಲಿ ಸಮನ್ವಯವರಿಯದೆ 4 ಜೀವ ಜೀವರಿಗೆಲ್ಲ ಭೇದ | ವಿದುಸ್ವ ಭಾವವಾಗಿರುವುದು ಯಾತಕೀವಾದ ಜೀವರೂಪದಿ ಸರ್ವಜೀವರೊಳಗಿದ್ದು ದೇವಸಕಲ ಕರ್ಮಗಳ ಮಾಡಿಸುವನು 5 ಕರ್ಮವೆಂಬುದು ಅವನಿಗೆ ಲೋಪವಿಲ್ಲ ನಿರ್ಮಲ ಸಚ್ಚಿದಾನಂದ ಬ್ರಹ್ಮ ಎಂದು ನೀನೆ ಪೇಳುವೆಯಲ್ಲ ನಿನಗೆ ನಿಜವಿಲ್ಲ 6 ಸೂರ್ಯ | ಚಂದ್ರ ಕಿನ್ನರ ಸಿದ್ಧ ಸಾಧ್ಯ ನರತಿರ್ಯಕ್ ಪಶುಪಕ್ಷಿ ಕೀಟಾದಿ ನಾಮಗಳು ಪರಮಾತ್ಮನಲಿ ಸಮನ್ವಯವರಿಯದೆ 7 ಮಾಯಾ ಪ್ರಪಂಚವಿದೆನ್ನುತ | ನಿ- ಮಾಯೆಯಧಿಷ್ಠಾನದೊಳನಂತ ಜೀವನಿ- ಕಾಯವು ಗುಣಗಳಿರುವ ಮರ್ಮವರಿಯದೆ 8 ಸಾರ ಭೇದವಬದ್ಧ ಅಭೇದ ನಿಶ್ಚಯವೆಂದು ವಾದಿಸುವುದಕೇನಾಧಾರ ನಿನಗುಂಟೊ 9 ಜೀವಬ್ರಹ್ಮೈಕ್ಯವೆ ಮುಕ್ತಿ | ವೇ- ದಾವಳಿಗಳ ಪರಮಾರ್ಥದ ಉಕ್ತಿ ಜೀವನಿಂದೇನಾಗುವುದೆಂಬುದರಿಯದೆ 10 ದ್ವಾಸುಪರ್ಣವೆಂಬುವುದಕೆ | ವಿಷ- ಯಾಸಕ್ತ ಜೀವ ಆತ್ಮನು ಸಾಕ್ಷಿಯದಕೆ ನೀಸರ್ವೋತ್ತಮನಾದರೆ ಇನ್ನು ಮಹದಾದಿ ಈ ಸೃಷ್ಟಿ ಸ್ಥಿತಿಲಯವೇತಕೆ ತಿಳಿ ಜೋಕೆ 11 ಅಂಧ ಪರಂಪರವಾದ | ಬಿಟ್ಟು ಚಂದಾಗಿ ಪರಿಶೋಧಿಸು ಭÉೀದಾಭÉೀದ ತಂದೆತಾಯಿಗು ಮಗನಿಗೂ ಎಷ್ಟು ಭÉೀದ ಆ- ಪರಿ ತಿಳಿದರೆ ನಿರ್ವಾದ 12 ಪೂರ್ವೋತ್ತರ ವಿರೋಧವಿಲ್ಲ | ದಂತೆ ಸರ್ವಶೃತಿಗಳರ್ಥ ತಿಳಿದು ನುಡಿಸೊಲ್ಲ ಗರ್ವವೇತಕೆ ನಿನಗಿದರೊಳೇನಿಲ್ಲ ನೀ ಸರ್ವಜ್ಞನೊ ಕಿಂಚಜ್ಞನೊ ನೋಡು ದೃಢಮಾಡು 13 ಯೋಗ ಒದಗಿದಾಗ ಒಂದೆ ಎಂಬುವರೆ ಈಗೇನು ಆಗೇನು ಇಲ್ಲೇನು ಉಂಟೆ ನಾ- ವಾಗಲು ಜೀವರಿಗೆ ಹರಿಕರ್ತನಾಗಿರೆ 14 ಕಾಲಕರ್ಮ ಸ್ವಭಾವ ಜೀವ | ಹರಿಯ ಆಲಸ್ಯ ಬಿಟ್ಟು ಅವನಿಗೆ ದಾಸನಾಗದೆ 15 ಆಲೋಚಿಸಿದರರ್ಥ ನಿಜವಾಗಿ ತಿಳಿಯದೆ 16 ಜ್ಞಾನವೆ ನಾನು ಕರ್ಮವೆ ಮಿಥ್ಯವೆಂದು ನೀನಾಡುವುದಕೇನು ನೆಲೆ ಮೂಲ ಯಾವುದು ಸ್ವಾನುಭವವೋ ಶಾಸ್ತ್ರವೊ ಮನಕೆ ತೋರಿದ್ದೊ 17 ಹೋಮ ಜಪವು ಸ್ನಾನ ದಾನ | ನಿತ್ಯ ಭೃತ್ಯ ನ್ಯಾಯವರಿಯದವನು ಶುದ್ಧ ತತ್ವಾರ್ಥಿ ಎನಿಸುವನೆ 18 ಕರ್ತನು ನೀನೆಂದು ಭೃತ್ಯನು ನಾನೆಂದು ತೀರ್ಥಪಾದನ ದಿನದಿನದಿ ಸಂಸ್ತುತಿಸದೆ 19 ಪಾದ ವನಜಕೊಪ್ಪಿಸಿ ಸಂಸಾರದ ಕರಕರೆಯ ಮನದಿ ಲೆಕ್ಕಿಸದೆ ಚಿಂತನಗೈದು ಸರ್ವತ್ರ ಘನಮಹಿಮನ ದಿವ್ಯಗುಣರಾಶಿ ಪೊಗಳದೆ 20 ಹೊರಗಣ್ಣ ಮುಚ್ಚಿ ಮೋದದಲಿ | ಒಳ- ಗಿರುವಾಧಾರಾದಿ ಚಕ್ರಗಳ ಸ್ಥಾನದಲಿ ಸರಸಿಜಭವ ಶಂಕರಾದಿ ಸುರರ ನೋಡಿ ತರತಮವಾಗಿ ಮುಂದಿನ ಪರಿಯ ತಿಳಿಯದೆ 21 ಮಂಗಳ ಮೂರ್ತಿಯ ನೋಡಿ ಕೊಂಡಾಡಿ ಅ- ನಂಗಗೆ ಸಿಲುಕದೆ ಅರ್ಥಿಯ ಪೊಂದದೆ 22 ಎಪ್ಪತ್ತೆರಡು ಸಹಸ್ರನಾಡಿ | ಗಳೊ- ಳೊಪ್ಪುವ ಭಗವದ್ರೂಪಗಳನು ನೋಡಿ ಅಪ್ಪ ನೀನೆಂದು ಭಕ್ತಿಯಲಿ ಕೊಂಡಾಡಿ ಪುನ- ರಾವರ್ತಿರಹಿತ ಶಾಶ್ವತ ಸುಖಿಯಾಗನೆ 23 ವಿಪರೀತ ಮತಿಪುಟ್ಟದಂತೆ | ಧ್ಯಾನ- ಗುಪಿತವಾಗಿರುತ ಜನರಿಗೆ ಹುಚ್ಚನಂತೆ ಅಪವರ್ಗಾಪೇಕ್ಷಯಿಂ ನಿಷ್ಕಾಮಿಯಾಗದೆ24 ಆಪಾದಮಸ್ತಕ ದೇಹ | ದಿಸು ರಾಪದಜನಕ ಶ್ರೀಗುರುರಾಮವಿಠಲ ವ್ಯಾಪಾರವೆಲ್ಲ ಮಾಡಿಸುವನೆಂದರಿತರೆ ಸಾಫಲ್ಯನಾಗಿ ಜೀವನು ಧನ್ಯನಾಗುವ 25
--------------
ಗುರುರಾಮವಿಠಲ