ಒಟ್ಟು 779 ಕಡೆಗಳಲ್ಲಿ , 83 ದಾಸರು , 539 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋಪಿಹೇಳೆ ರಂಗಗೆ ಬುದ್ಧಿ ಪಗೋಪಿಹೇಳೆ ರಂಗಯ್ಯಗೆ ಬುದ್ಧಿ ಪುರದೊಳು |ರಾಪು ಮಾಡುವದು ವೆಗ್ಗಳವಮ್ಮ ಅ.ಪ.ಪೋರರ ಒಡಗೂಡಿ ಬಂದು ಎಲ್ಲರು ನೋಡಸೀರೆಯಸೆರಗುಪಿಡಿವರೇನೇ ||ಜಾರೆ ಹೆಂಗಳೆರಾದರೊಳ್ಳತು ತಾಂ ತಡವಲುಈ ರೀತಿಯೆ ಪತಿಯಿದ್ದವರ ಕೂಡ 1ಹಿರಿಯಣ್ಣಗಿಟ್ಟಿದ್ದ ಮೀಸಲ ತುಪ್ಪವಸುರಿದು ಗಡಿಗೆ ವಡದೋಡಿದ |ಗೋಪಿ||ಥರವೆ ನಿಮ್ಮಮ್ಮನಲ್ಲಿಗೆ ಬಾರೋ ಎಂದರೆಸೆರಗ ಕೊಸರಿಮಾನಕೊಂಬನೆ | ಗೋಪಿ 2ಕತ್ತಲೊಳಗೆ ಮಕ್ಕಳಂತೆ ಸಣ್ಣವನಾಗಿಹತ್ತಿಲಿ ಬಂದೊರಗುವನಮ್ಮ |ಗೋಪಿ||ಇತ್ತತ್ತ ಬಾ ಕಂದಯೆಂದಪ್ಪಿಕೊಳಲವಕೃತ್ಯವ ಮಾಡಿ ಓಡುವನಮ್ಮ | ಗೋಪಿ 3ಆಕಳ ಮೊಲೆಯುಂಡು ತರುವಾಯ ಕರುಬಿಟ್ಟುತಾ ಕೂಗುವನೆ ಕರಕೊಳಿರೆಂದು |ಗೋಪಿ||ಗೋಕುಲದೊಳು ಬಹು ದಿವಸವಾಯಿತು ದುಡ್ಡುತೂಕ ಕ್ಷೀರವಮಾರಕಾಣೆವೇ | ಗೋಪಿ 4ಬಚ್ಚಲೊಳಗೆ ಪ್ರಾಯದವಳು ಕುಳಿತು ಎಣ್ಣೆಹಚ್ಚಿಕೊಂಡೆರಕೊಳ್ಳುತಿದ್ದೆವೆ |ಗೋಪಿ||ಎಚ್ಚರಿಸದೆ ಬಂದು ಎದುರಿಗೆ ನಿಲ್ಲುವಹುಚ್ಚನೆ ಬಹು ಜಾಲಗಾರನು | ಗೋಪಿ 5ಪುರುಷಗೆ ಸಂಶಯ ನಮ್ಮ ಮನೆಗೆ ಕೃಷ್ಣಬರುವನೆಂಬು ಮಜ್ಜನಕೆ ಜಲ |ಗೋಪಿ||ಬೆರಸಿಟ್ಟರೆಲ್ಲವು ಚೆಲ್ಲಿ ಪೋಗುವಗಂಡಕರೆಕರೆಮಾಡುವ ಪರಿಪರಿ | ಗೋಪಿ 6ಪೋಗಲಿನಿತೂ ಮುಂದೆ ಪ್ರಾಣೇಶ ವಿಠಲಗೆಹೀಗಿರುಯೆಂದು ನೀ ಪೇಳಮ್ಮಾ |ಗೋಪಿ||ಈಗುಸುರಿದ ಮಾತು ಸರಿಬಾರದಿದ್ದರೆಸಾಗಿರೆಂದಪ್ಪಣೆ ಕೊಡಿರೆಮ್ಮ | ಗೋಪಿ 7
--------------
ಪ್ರಾಣೇಶದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ತಂದು ತೋರೆ ತಡಿಯೆನೆ ತಾಳಲಾರೆನೆ ತಂಗಿಹೆಂದಳ ವೇಲಾಪುರದ ಚೆನ್ನಿಗನಭಾವಕಿಪ.ಮಂಗಳ ನೋಟಕೆ ಮೆಚ್ಚಿ ಮರುಳಾದೆನೆಲೆ ತಂಗಿಅಂಗವೆಲ್ಲ ಕಮಠಾದವನಪ್ಪಿಸಮ್ಮಭಾವಕಿ1ಕೊನೆವಲ್ಲಿಗೆಧರೆಸೋಂಕಲು ವಶ್ಯವಾದೆನೆಲೆ ತಂಗಿಘನಕೋಪವ್ಯಕ್ತನ ಕೂಡಿಸಮ್ಮಭಾವಕಿ2ಮಾನದಂತಿದ್ದ ಬಲಿಯ ಮೆಚ್ಚಿ ನುಂಗುವರೆ ತಂಗಿಕ್ಷಣಯುಗವಾಗಿದೆ ಸದ್ವೀಕ್ಷಣ ಕಾಣದೆಭಾವಕಿ3ಹೆಂಗಳ ಬಿಟ್ಟೊಬ್ಬನೆ ತಾ ಹ್ಯಾಗೆ ಹೋದ ಹೇಳೆ ತಂಗಿಪೊಂಗೊಳಲೂದುತಲೆನ್ನ ಪಾಲಿಸೆನ್ನೆಭಾವಕಿ4ಮೋಹನ ಬಾರದೀ ಗಂಧಮಲ್ಲಿಗ್ಹಾರ್ಯಾಕೆ ತಂಗಿ ಬರಹೇಳೆ ಪ್ರಸನ್ನವೆಂಕಟನ ವಾಜಿಯಿಂದಭಾವಕಿ5
--------------
ಪ್ರಸನ್ನವೆಂಕಟದಾಸರು
ತನಗಲ್ಲದಾ ವಸ್ತು ಎಲ್ಲಿದ್ದರೇನುಮನಕೆ ಬಾರದ ಹೆಣ್ಣು ಮತ್ತೆ ಬಂದರೆ ಏನು ? ಪ.ಆದರಣೆಯಿಲ್ಲದೂಟ ಅಮೃತಾನ್ನವಾದರೇನುವಾದಿಸುವಸತಿ - ಸುತರಿದ್ದು ಫಲವೇನು ?ಕ್ರೋಧ ಬಳೆಸುವ ಸಹೋದರರು ಇದ್ದರೇನುಮಾದಿಗರ ಮನೆಯೊಳೆ ಮದುವೆಯಾದರೇನು ? 1ನಾಲಿಗಿಲ್ಲದ ಪÀದವು ಸಂಚಿತುಂಬ ಇದ್ದರೇನುದೇವಾಂಕಿತವಿಲ್ಲದ ಕವಿತ್ವವೇನು ?ಹೇಮವಿಲ್ಲದ ಹೆಣ್ಣು ಹೆಚ್ಚು ಬಾಳಿದರೇನುಹಾವಿನ ಘಣಿಯೊಳಗೆ ಹಣವಿದ್ದರೇನು ? 2ಸನ್ಮಾನವಿಲ್ಲದೆ ದೊರೆ ಸಾವಿರಾರು ಕೊಟ್ಟರೆ ಏನುತನ್ನ ತಾನರಿಯದ ಜ್ಞಾನವೇನು ?ಎನ್ನುತ ಪುರಂದರವಿಠಲನ ನೆನೆಯದವಸಂನ್ಯಾಸಿಯಾದರೇನು ಪಂಡಿತನಾದರೇನು ? 3
--------------
ಪುರಂದರದಾಸರು
ತಾರಕತಾರಕತಾರಕತಾರಕವೆಂಬತವನಿಧಿಯನು ತಪಿಸುತಲಿದೆ ನೋಡಾಪಮುಗಿಲಾಕಾರದಿ ಮೋಹರಿಸುತಲಿಹ ಮಿಂಚುಗಳನೆಭುಗಿಲು ಭುಗಿಲು ಎನಿಸುವ ಕಳೆಗಳಬುದು ಬದಗಳ ನೋಡ1ಥಳಕು ಥಳಕು ಥಳಥಳನೆಂದೆಂಬ ಥರಗಳನದ ನೋಡಬೆಳಕುಗಳಹ ಬಲು ಬೆಳಗನೆ ಬೆಳಗುವ ಭೇದಗಳನೆ ನೊಡ2ತೋರುತಡುಗುವ ತೋರು ಕಿಡಿಗಳ ಕೋಟಿಗಳನೆ ನೋಡಮೀರಿಯೆ ಮಿಣಿ ಮಿಣಿ ಮಿಣಿಕಿಪ ವಿಸರದ ಮಿಶ್ರಿಗಳನೆ ನೋಡ3ಝಣಝಣರೆಂಬ ಝಾಗಟೆ ಮೊಳಗಿನ ಝೇಂಕಾರವ ನೋಡಎಣಿಸಲು ಬಾರದ ಎಡೆದೆರಪಿಲ್ಲದ ಏಕಾರವ ನೋಡ4ಸಾಗರ ಸುಖವನು ಸವಿಸವಿದುಣ್ಣುವ ಸಾಕಾರವೇ ನೋಡಯೋಗಿಎನಿಪ ಚಿದಾನಂದನೊಲಿದ ಯೋಗಿಗೆ ಇದು ನೋಡ5
--------------
ಚಿದಾನಂದ ಅವಧೂತರು
ತ್ವರಿತಾ ಬಾರಯ್ಯ ಹೇ ಶ್ರೀಯರಸ ವೆಂಕಟ ದೀನ |ಸುರತರುವೆ ದೇವೇಶವರಾಹಭೂಧರಧಾಮ|ಕರುಣಾ ಪಯೋದಧೆ ಸರ್ವ ರಕ್ಷಿ ಕಂಧರದೊಳ- |ಗಿರುತಿಹ ನರಗಜ ವದನನೇ ಪಇಳಿಪತಿಗಳ ಕೂಡ ಕಲಹ ಮಾಡಿ ತೋರೆಂದುಅಂಗಲಾಚಲಾ ಕುಂತೀದೇವಿ |ಗೊಲಿದಾಸೆ ಪೂರ್ತಿಸಿ ಅನಿಲಜನಾಗ ನಿನ್ನ ತೇರೊ-ತ್ತಲು ಹಿಂದಕ್ಕೆ ನೀ ನಗು- |ತ್ತಲೆ ಮುಂದಕ್ಕೆ ಬಂದಿ ದೂರಲಾಘವವಾದಿಂದಂದೀಗಹಲವು ಜನರು ಬಹು |ಬಲುವಿಂದ ರಥವನೆಳೆದರೂ ಬಾರದಿದುಖಲು ಸೋಜಿಗವೆಲೆ |ಹಲಧರನನುಜ ಕಡಲ ಮನೆ ಕಾರವಡಲ ರವಿದಶ ಧರಖಳವಿಪಿನದ್ವಿದಲ 1ಬರಬೇಡವೆಲವೊ ನಮ್ಮ ಮಂದಿರಾಕೆಂದು ಬಹಳಾ ಬೈ-ದರೂ ಮುದದಿಂದ ಗೋಪಿ- |ಯರ ಸದ್ಮಕೆ ಪೋಗುವೆಜರಿದುನಿನ್ನನು ತಾನಾತರಳನ ಕಾಯ್ವೆನೆಂದಾ |ನರನ ತಪ್ಪೆಣಿಸದೆ ಕರೆಯದಲೆ ಪೋದೆ ನಿ-ನ್ನರಮನೆಯ ತನಕಲಿ |ಎರಡೇ ಘಳಿಗೆಯೊಳು ಪರಿಪರಿ ಭಕುತ ಜನರುಗಳು ಬಿನ್ನೈ-ಪರು ಬೀದಿಗಳೊಳು |ಮೆರೆಯುತಲೀಗಲೆ ಸರಸರ ಬರುವದುಪರಮಾಯಾಸವೇ 2ಮೀನಾಕ್ಷಿ ಯಶೋದೆ ನಿನ್ನನು ಪೊತಾನೆಂದುನುಣ್ಣನೆ ತೊಟ್ಟಿಲೊಳಿಟ್ಟು |ತಾ ನುಡಿಯಲು ಜೋಗುಳಾನು ಕೇಳ್ವೆ ಕಿವಿಗೊಟ್ಟುನಾನಾಗಮ ಸಮ್ಮತ |ಗಾನ ಮಾಳ್ಪುದು ವಿದ್ವಾಂಸಾನೀಕವೀಗ ನಿನ್ನಧ್ಯಾನಕೆ ಬಾರದೆಯೇನು |ನಿನ್ನ ಬಗೆ ತಾನರಿಯಳು ಶ್ರೀಮಾನಿನಿಖಗವಹಶ್ರೀನಿಧೆ ಮೂರೊಂದು |ಹಾನಿರಹಿತ ಗದಾಪಾಣಿ ಹರಿಯೇ ಶ್ರೀ-ಪ್ರಾಣೇಶ ವಿಠಲನೆ 3
--------------
ಪ್ರಾಣೇಶದಾಸರು
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು
ದೂತ ಸಂವಾದ ದೇವಿಯೊಡನಾದುದು ಪ್ರೀತಿಯಲಿ ಕೇಳಿರೆಲ್ಲದಾತೆ ಶುಂಭನ ಯುದ್ಧಕೆತಾಯೆಂದಟ್ಟಿ ಮಾತ ಮುಗಿಸಿದಳಲ್ಲಪತೆರೆಕಣ್ಣ ಮುಚ್ಚಿದ್ದಿ ಯಾಕೆ ಕಾಡೊಳಗಿರುವೆ ಕೇಳೆಲೆ ಮಹಾದೇವಿಪುರುಷರು ನಿನಗಾರು ಓರ್ವಳೆ ಮಾತಾಡು ಕೇಳೆಲೆ ಮಹಾದೇವಿಕರೆಯಲು ಬಂದೆ ಹಿಮಾಚಲಕೆ ನಿನ್ನ ಕೇಳೆಲೆ ಮಹಾದೇವಿಅರಸ ಶುಂಭನ ದೂತ ಸುಗ್ರೀವ ನಾನೀಗ ಕೇಳೆಲೆ ಮಹಾದೇವಿ1ಕಣ್ಣ ತೆರೆದು ನುಡಿದಳು ದೇವಿ ಖಳನಿಗೆ ಕೇಳೆಲೋ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವನಿನ್ನಧಿಕಾರವದೇನು ಶುಂಭನಾರು ನೀನಾರು ಕೇಳೆಲೊ ಸುಗ್ರೀವನನ್ನಗೊಡವೆಏನು ನುಡಿಯಿಂದ ಕೆಲಸವೇನು ಕೇಳೆಲೋ ಸುಗ್ರೀವ2ನಂಬೆನ್ನ ಮಾತನು ಕಪಟವೇನಿಲ್ಲ ಕೇಳೆಲೆ ಮಹಾದೇವಿಶುಂಭನ ಭಾಗ್ಯ ಹೇಳಲಿಕಳವಲ್ಲ ಕೇಳೆಲೆ ಮಹಾದೇವಿತುಂಬಿವೆ ಮನೆಯೊಳು ದಿವ್ಯ ರತ್ನವು ಕೇಳೆಲೆ ಮಹಾದೇವಿಶುಂಭಗೆ ನೀನು ಕಡೆರತ್ನ ದೊರಕಲು ಕೇಳೆಲೆ ಮಹಾದೇವಿ3ಕರುಣದಿ ಕಪಟವಿಲ್ಲದಲೆ ನೀನು ಕೇಳ್ವೊಡೆ ಕೇಳೆಲೋ ಸುಗ್ರೀವಇರಬಾರದು ಸುಮ್ಮಗಿದ್ದುದನಾಡಿವೆವು ಕೇಳೆಲೋ ಸುಗ್ರೀವಪುರುಷರು ಇಂದಿನವರೆಗಿಲ್ಲ ನಾ ಸ್ವತಂತ್ರ ಕೇಳೆಲೋ ಸುಗ್ರೀವಪುರುಷರಿಗೋಸ್ಕರ ನಾನು ತಪವನು ಮಾಡುವೆ ಕೇಳೆಲೋ ಸುಗ್ರೀವ4ಶುಂಭನು ಶೀಘ್ರದಿ ಕರೆತಾರೆಂದನು ನಿನ್ನ ಕೇಳೆಲೆ ಮಹಾದೇವಿಶುಂಭನ ಭಾಗ್ಯ ದೊರಕಿದಡೆ ನೀ ಕೃತಾರ್ಥೆ ಕೇಳೆಲೆ ಮಹಾದೇವಿಶುಂಭಗೆ ನಿನಗೆ ಸಕ್ಕರೆ ಹಾಲು ಬೆರೆತಂತೆ ಕೇಳೆಲೆ ಮಹಾದೇವಿಶುಂಭಗೆ ಚಾಕರ ನಿನಗೆ ಚಾಕರ ನಾನು ಕೇಳೆಲೆ ಮಹಾದೇವಿ5ಮಾಡಬಾರದ ಪ್ರತಿಜೆÕಯ ಮಾಡಿಹೆನು ಕೇಳೆಲೋ ಸುಗ್ರೀವಆಡಲಿ ಏನ ಅದೃಷ್ಟಹೀನೆಯು ಕಂಡ್ಯಾ ಕೇಳೆಲೋ ಸುಗ್ರೀವಖಾಡಾ ಖಾಡಿಯಲಿ ಜಯಿಸಿದವನೆ ಭರ್ತನೆಂದೆನೆ ಕೇಳೆಲೋ ಸುಗ್ರೀವಕೂಡಿ ಬರುವೆ ಮಾಡಿದ ಭಾಷೆಯ ಹುಸಿಯದೆ ಕೇಳೆಲೋ ಸುಗ್ರೀವ6ಕರೆಯಲು ಬಿಗಿಯಲು ಬೇಡವೆ ನೀನೀಗ ಕೇಳೆಲೆ ಮಹಾದೇವಿಥರಥರ ಸಾಲು ಸಾಲಿನ ಛತ್ರಿ ನಿನ್ನವು ಕೇಳೆಲೆ ಮಹಾದೇವಿಇರುವನು ನೀ ಹೇಳಿದಂತ ಶುಂಭನು ಕೇಳೆಲೆ ಮಹಾದೇವಿದೊರೆವುದು ನಿನಗೆ ತ್ರೈಭುವನದರಸುತನ ಕೇಳೆಲೆ ಮಹಾದೇವಿ7ಕಂಡುದಿಲ್ಲವೋ ಈವರೆಗೆನ್ನ ಜಯಿಸಿದವರನ್ನು ಕೇಳೆಲೋ ಸುಗ್ರೀವದಿಂಡುಗಡೆದರು ಎನ್ನೆದುರು ನಿಂತವರೆಲ್ಲ ಕೇಳೆಲೋ ಸುಗ್ರೀವಗಂಡನ ಪಡೆದಿರೆಶುಂಭಜಯಿಸುವನೆನ್ನ ಕೇಳೆಲೋ ಸುಗ್ರೀವಗಂಡನಾವನಿಲ್ಲದಿರೆ ಏನ ಮಾಡುವೆ ಕೇಳೆಲೋ ಸುಗ್ರೀವ8ಚಾರ್ವಾಕರ ಮಾತಾಡಲು ಬೇಡ ಕೇಳೆಲೆ ಮಹಾದೇವಿಬರ್ವಳು ನಿನ್ನ ಮಾತಿಗೆಶುಂಭಬಹನೇ ಕೇಳೆಲೆ ಮಹಾದೇವಿಉರ್ವಿಗೆ ಕರ್ತನ ಎದುರಿಗೆ ನೀ ನಿಲ್ಲುವೆಯ ಕೇಳೆಲೆ ಮಹಾದೇವಿಗರ್ವವ ಮಾಡಲು ಮುಂದಲೆ ಹಿಡಿದೊಯ್ವರು ಕೇಳೆಲೆ ಮಹಾದೇವಿ9ಎನ್ನ ಪ್ರಾರಬ್ಧವು ಇದ್ದಂತೆ ಆಗುವುದು ಕೇಳೆಲೋ ಸುಗ್ರೀವನಿನ್ನ ಮೇಲೇನು ಮಾತಿಲ್ಲವೋ ಕೇಳೆಲೋ ಸುಗ್ರೀವಎನಗೆ ಹಿತಕಾರಿ ನೀನು ಅಹಿತ ನಾನೇ ಕೇಳೆಲೋ ಸುಗ್ರೀವಇನ್ನು ಮಾತಾಡಬೇಡವೋ ಕರೆತಾನಡಿ ಕೇಳೆಲೋ ಸುಗ್ರೀವ10ಇಂತು ವಿಳಾಸ ಮಾತನಾಡಿಯೆ ಖಳನನು ಕಳುಹಿದಳು ಪರಾಂಬೆಎಂತು ಹೇಳ್ವನೋ ಶುಂಭನಾವಾಗ ಬರುವನೋ ಎನುತಲಿ ಜಗದಂಬೆಚಿಂತೆ ಹರಿಪೆ ಸುರರನು ಶುಂಭನನುಕಟ್ಟಿಎನುತಲಿ ಸರ್ವಾಂಬಚಿಂತಯಕ ತಾನಾದ ಚಿದಾನಂದ ಕರುಣೆಯು ಬಗಳಾಂಬ11
--------------
ಚಿದಾನಂದ ಅವಧೂತರು
ದೋಷ ಎಣಿಸದೆ ಕಾಯೊ ಜೀಯಾ ಪಕಂಡ ಕಂಡವರ ಭಜಿಸೀ -ಬೇಡಿತೋಂಡವತ್ಸಲ ಕರುಣೆ ಸಲಿಸೀಪಾದಪುಂಡರೀಕ್ಯನ್ನೊಳಗೆ ಇರಿಸಿಕಾಯೋ 1ಮಾqಬಾರದ ಕೃತ್ಯವಾ - ನಾ ಬಲುಮಾಡಿದೆಗೃಹಕೃತ್ಯವಾಬೇಡದಕಿ ಭೃತ್ಯತ್ವವಾ - ಈ ದೋಷನೋಡದಲೆ ಭಕ್ತತ್ವವಾ ನೀಡೊ 2ದೀನ ಜನಪಾಲ ನಿನ್ನಾ-ರೂಪಧ್ಯಾನ ಮಾಡಿದೆ ಬಿಡದೆ ಘನ್ನಾ-ಗತಿಎನು ಪೇಳಯ್ಯಾ ಎನಗೆ ಮುನ್ನಾ ಸ್ವಾಮಿ 3ಗುರುರಾಘವೇಂದ್ರರಾಯ - ಎನ್ನಶರಣು ಪೊಕ್ಕೆನೊ ನಿನಗೆ ನಾನಯ್ಯಾ ಕರುಣೀ 4ಮಾತ ಪಿತ ಭ್ರಾತ್ರÀ ಬಂಧೂ - ಎನಗೆದಾತನಿನ್ನ ದೂತನೆಂದೂ- ಬಂದ-ನಾಥನನು ನೀ ಕಾಯುವುದು ಪ್ರಭುವೇ 5ಕರುಣಸಾಗರನೆ ಈಗ - ತವರೂಪಶರಣು ಪೊಕ್ಕವನ ವೇಗಾ-ಭವ-ಅರಣ ದಾಟಿಸುವಂಥ ಯೋಗಾ ಪೇಳಿ 6ಹೋಗುತಿದೆ ಹೊತ್ತು ಪದುಮಾಕ್ಷ -ಹ್ಯಾಗೆಆಗುವದೊ ನಿನ್ನಅಪರೋಕ್ಷಜಾಗುಮಾಡದೆಸಲಿಸ್ಯನ್ನಪೇಕ್ಷಾ ಸ್ವಾಮಿ7ಪಾರದೋಷಗಳನ್ನೆ ತಾಳೋಘೋರಅಙ್ಞÕನ ಕೀಳೋ- ಪರಲೋಕಸೇರಿಸೆನ್ನನು ಕೃಪಾಳೋ ಸ್ವಾಮಿ 8ಎಷ್ಟು ಪೇಳಲಿ ಎನ್ನ ತಾತಾ - ಕೃಪಾ -ದೃಷ್ಟಿಯಲಿನೋಡುನಾನಿನ್ನ ಪೋತಾಧಿಟ್ಟ ನೀಗುರುಜಗನ್ನಾಥಾ- ವಿಠಲನನಿನ್ನೊಳಗೆ ತೋರೋದಾತಾಖ್ಯಾತಾ9
--------------
ಗುರುಜಗನ್ನಾಥದಾಸರು
ಧನವಗಳಿಸಬೇಕಿಂತಹದು - ಈಜನರಿಗೆ ಕಾಣಿಸದಂತಹದು ಪ.ಕೊಟ್ಟರೆ ತೀರದಂತಹದು - ತನ್ನಬಿಟ್ಟು ಅಗಲಿ ಇರದಂತಹದುಕಟ್ಟಿದ ಗಂಟನು ಬಯಲೊಳಗಿಟ್ಟರೆಮುಟ್ಟರು ಆರು ಅಂತಹದು 1ಕರ್ಮವ ನೋಡಿಸುವಂತಹದುಧರ್ಮವ ಮಾಡಿಸುವಂತಹದುನಿರ್ಮಲವಾಗಿದೆ ಮನಸಿನೊಳಗೆ ನಿಜಧರ್ಮವ ತೋರಿಸುವಂತಹದು 2ಅಜ್ಞಾನವು ಬಾರದಂತಹದು - ನಿಜಸುಜ್ಞಾನವ ತೋರುವಂತಹದುವಿಜಾÕನಮೂರ್ತಿ ಪುರಂದರವಿಠಲನಪ್ರಜೆÕಯನ್ನು ಕೊಡುವಂತಹದು 3
--------------
ಪುರಂದರದಾಸರು
ಧರ್ಮಕ್ಕೆ ಕೈಬಾರದೀಕಾಲ - ಪಾಪ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕರ್ಮಕ್ಕೆ ಮನ ಬಾಹುದೀ ಕಲಿಕಾಲ ಪ.ದಂಡದೋಷಕೆ ಉಂಟು ಪುಂಡುಪೋಕರಿಗುಂಟು |ಹೆಂಡಿರು - ಮಕ್ಕಳಿಗಿಲ್ಲವೀ ಕಲಿಗಾಲ ||ಭಂಡೆಯರಿಗುಂಟು ದಿಂಡೆಯರಿಗುಂಟು - ಬೇಡಿ - |ಕೊಂಡಿವರಿಗಿಲ್ಲವು ಈ ಕಲಿಕಾಲ 1ಒತ್ತೆಸೂಳೆಗುಂಟು ಮತ್ತೆ ಹಾದರಕುಂಟು |ಹೆತ್ತತಾಯಿಗಿಲ್ಲ ಈ ಕಲಿಕಾಲ ||ತೊತ್ತೆಯರಿಗೆ ಉಂಟು ಅರ್ತಿಕಾರ್ತಿಗಿಲ್ಲ |ಉತ್ತಮರಿಗೆ ಇಲ್ಲವೀ ಕಲಿಕಾಲ 2ಹುಸಿದಿಟವಾಯಿತು ರಸ - ಕಸವಾಯಿತು |ಮಸಿ ಮಾಣಿಕವಾಯಿತೀಕಾಲ ||ವಸುಧೆಯೊಳಗೆ ನಮ್ಮ ಪುರಂದರವಿಠಲನ |ಬೆಸಸಿ ಪೂಜಿಪರ್ಗಿಲ್ಲ ಈ ಕಲಿಕಾಲ 3
--------------
ಪುರಂದರದಾಸರು
ನದೀದೇವತೆಗಳ ಸ್ತುತಿ116ಸ್ಮರಿಸುವೆನನುದಿನ ಮುದದಿಂದ | ಈಧರಿಯ ಮ್ಯಾಲುಳ್ಳ ಮಹಾ ನದಿಗಳ ಪಗೌತಮನಘ ಪರಿಹಾರ ಮಾಡಿದ ಗೋದಾ |ಮಾತೆ ಶ್ರೀ ಕೃಷ್ಣವೇಣೀ ಸರಸ್ವತೀ ||ಆ ತರೂವಾಯ ಶ್ರೀ ಕಾವೇರಿ, ಸರಿಯು ಶ್ರೀ ಯಮುನಾ |ಧೌತ ಪಾತಕೆ ಶ್ರೀ ನರ್ಮದ ತುಂಗಾ 1ಸಿಂಧೂ ಭವನಾಶಿನಿ ಕುಮದ್ವತಿ ಶ್ರೀ ವಂಝಾರ |ಸುಂದರ ಭೀಮಾ ತಾಮ್ರಪರಣೀ ಮಲಹಾ ||ಮಿಂದರೆ ಪಾವನ ಮಾಡುವ ಬಹು ನದಿಗಳ |ಒಂದೇ ಮನಸಿಲಿಂದಾ ಪೊಗಳುವೆ 2ವಾರಣೀ ಫಲ್ಗುಣೀ ಶ್ರೋಣ ಭದ್ರಾ ಗಂಡಕಿಹೇಮ|ಮೂರುವೇಣಿಗಾಯತ್ರಿ ವೇಗವತೀ ||ಸೂರಿಗಮ್ಯ ಕೌಸಿಕ ಮಣಿಕರಣಿಕ ಗೌತಮಿ ಭಾ |ಗೀರಥಿ ಕಾಗಿನಿ ಶ್ರೀ ವೇತ್ರವತೀ3ಹೇಮವತಿ ನೇತ್ರವತಿ ಪಾಪನಾಶಿ ಶ್ರೀ ಸೀತಾ |ಆ ಮಹಾಳಕನಂದಾ ಹಯಗ್ರೀವ ||ಹೇಮಮುಖರ ತಾಪಿನಿ ಕಾಳಿ ಸೌಪರಣಿ ಪಿನಾಕೀ |ಶ್ರೀ ಮತ್ಕಪಿಲ ಜಮದಗ್ನಿಪ್ರಣವಸಿದ್ಧ4ಮರುದ್ವತಿ ಮದಿರ ಮೇನುಕಾ ಸೂನಾಸಿ ಚಕ್ರವತಿ |ಗರುಡ ಶಂಖವತೀ ಕುಹು ಮಹೇಶ್ವರೀ ||ಸರಯು ಜಯ ಮಂಗಳ ಯೋಗಕೃತು ಮಾಲಾ ಗದಾ |ಧರಿ ಮಾಲಿನೀ ಗಾರ್ಗಿಣೀ ದೇವವತಿ5ಸಾವಿತ್ರಿ ಧನ್ಯಮಾಲಾ ಧರ್ಮ ಚಕ್ರತೀರ್ಥಹರಿ|ದ್ರಾವತಿ ಇಂದ್ರಾಣಿ ಪಾತಾಳಗಂಗಾ ||ಶೈವಕುಂಡ ಕುಂಡಿನಿ ನೀರ ಕುಮಾರ ಧಾರೀ ಶು |ಶಾವರ್ತಿ ಮೌಳೀ ಲೋಕಪಾವನೀ 6ಸ್ವಾಮಿ ಪುಷ್ಕರ್ಣಿ ಚಂದ್ರ ಪುಷ್ಕರ್ಣಿ ಮಾನಸ ಪುಷ್ಕರ್ಣಿ |ಶ್ರೀ ಮಧ್ವ ಸರೋವರ ಪದ್ಮ ಸರಾ ||ಸೋಮಭಾಗಾ ವ್ಯಾಸಸಿಂಧುಶ್ರೀ ಪಂಪಾ ಸರೋವರ |ವಾಮನ ಶ್ರೀ ಮಯೂರ ಸರೋವರ 7ರೋಮ ಹರ್ಷಣ ತೀರ್ಥ ಸೀತಾ ಸರೋವರ ಪುಣ್ಯ |ಧಾಮಾ ಶ್ರೀ ಕಪಿಲತೀರ್ಥ ಧವಳಗಂಗಾ ||ಭೀಮಸೇನ ತಟಾಕಬ್ರಹ್ಮಜ್ಞಾನಕನ್ಯಹೃದಯ |ಶ್ರೀ ಮದ್ವಿಶಿಷ್ಟ ತೀರ್ಥ ತಾರಾ ತೀರ್ಥ 8ಈ ತೀರ್ಥಗಳ ದಿವ್ಯನಾಮನಿತ್ಯಪಠಿಸಲು |ಯಾತಕ್ಕಾದರೂ ವಿಘ್ನ ಬಾರದು ||ಮಾತರಿಶ್ವಪ್ರೀಯ ಪ್ರಾಣೇಶ ವಿಠಲನು ಬಹು |ಪ್ರೀತನಾಗಿ ಬಿಡದೆ ಪೊರೆವನು 9
--------------
ಪ್ರಾಣೇಶದಾಸರು
ನಾರಾಯಣ ಎನ್ನಬಾರದೆ - ನಿಮ್ಮ |ನಾಲಿಗೆಯೊಳು ಮುಳ್ಳು ಮುರಿದಿಹುದೇ ? ಪ.ವಾರಣಾಸಿಗೆ ಪೋಗಿ ದೂರ ಬಳಲಲೇಕೆ |ನೀರ ಕಾವಡಿಯನು ಪೊತ್ತು ತಿರುಗಲೇಕೆ ||ಊರುರು ತಪ್ಪದೆ ದೇಶಾಂತರವೇಕೆ |ದಾರಿಗೆ ಸಾಧನವಲ್ಲವೆ ಹರಿನಾಮ ? 1ನಿತ್ಯ ಉಪವಾಸವಿದ್ದು ಹಸಿದು ಬಳಲಲೇಕೆ |ಮತ್ತೆ ಚಳಿಯೊಳು ಗಂಗೆ ಮುಳಗಲೇಕೆ ||ಹಸ್ತವ ಪಿಡಿದು ಮಾಡುವ ಜಪ - ತಪವೇಕೆಮುಕ್ತಿಗೆ ಸಾಧನವಲ್ಲವೇ ಹರಿನಾಮ ? 2ಸತಿ - ಸುತರನು ಬಿಟ್ಟು ಯತಿಗಳಾಶ್ರಮವೇಕೆವ್ರತ - ಕೃಚ್ಛ್ರ ನೇಮ - ನಿಷ್ಟೆಗಳೇತಕೆ ||ಪೃಥಿವಿಯೊಳಗೆ ನಮ್ಮ ಪುರಂದರವಿಠಲನ |ಅತಿ ಭಕುತಿಯಿಂದೊಮ್ಮೆ ನೆನೆದರೆ ಸಾಲದೆ 3
--------------
ಪುರಂದರದಾಸರು
ನಾರಾಯಣನೆಂಬ ನಾಮವ ನೇಮದಿ ನೆನೆಯುತಿರೆಚ್ಚರಿಕೆ |ನೀರ ಮೇಲಿನ ಗುಳ್ಳೆ ನಡೆಯೆಂಬ ಡಿಂಭವ ನಂಬದಿರೆಚ್ಚರಿಕೆ ಪ.ಪರರು ಮಾಡಿದ ಪಾತಕವ ನಾಲಿಗೆಯೊಳುಚ್ಚರಿಸದಿರೆಚ್ಚರಿಕೆಗುರು ಹಿರಿಯರ ಸೇವೆ ಮಾಡದೆ ಉದರವ ಪೊರೆಯದಿರೆಚ್ಚರಿಕೆ ||ಹರಿದಿನದುಪವಾಸ ಇರುಳ ಜಾಗರವ ನೀ ಮರೆಯದಿರೆಚ್ಚರಿಕೆನರಹರಿಯಂಘ್ರಿಯ ಸ್ಮರಿಸದೆ ನರಸ್ತುತಿ ತರವಲ್ಲ ಎಚ್ಚರಿಕೆ 1ಹೀನ ಮಾನನಿಯರ ಧ್ಯಾನಕಾನನದೊಳಿಳಿಯದಿರೆಚ್ಚರಿಕೆನಾನೆಂಬ ಅಹಂಕಾರ ಮಾಡಿ ನರಕದೊಳು ನರಳದಿರೆಚ್ಚರಿಕೆ ||ಜಾಹ್ನವಿ ಸ್ನಾನಸಂಧ್ಯಾನ ಧಾನ್ಯವ ಸುಜಾÕನ ಮುಂದೆ ಜ್ಞಾಚ್ಚರಿಕೆಜಾನಕಿರಮಣನ ಧ್ಯಾನವೆ ಧರ್ಮ ಸಂತಾನ ಮುಂದೆಚ್ಚರಿಕೆ 2ಮಡದಿ ಮಕ್ಕಳೆಂಬ ಕಡುಮೋಹಕೆ ಸಿಲುಕಿ ಕೆಡಬೇಡವೆಚ್ಚರಿಕೆನಡೆವಾಗ ನುಡಿವಾಗ ಗಿಡವೆಲ್ಲ ನೆಂಟರು ಕಡೆಗಿಲ್ಲ ಎಚ್ಚರಿಕೆ ||ಕೊಡುಗೈಯ ಮಾಡದೆ ಮಡುಗಿದ ಧನ ಸಂಗಡ ಬಾರದೆಚ್ಚರಿಕೆ |ಒಡೆಯ ಶ್ರೀ ಪುರಂದರವಿಠಲನ ನೆನೆದು ನೀ ಕಡೆ
--------------
ಪುರಂದರದಾಸರು