ಒಟ್ಟು 3738 ಕಡೆಗಳಲ್ಲಿ , 123 ದಾಸರು , 2544 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕದನ ಕಠೋರಿ ಬಂದುಕಾಲುಕೆದರ ಬ್ಯಾಡ ಮದನನ ಮಾತಿಗೆ ಇದುರೇನ ಎಲ್ಲ ನೀ ನೋಡ ಪ. ಓಡಿ ಬಂದವಳೆಂದು ಆಡಿದೆ ನೀ ಎನಗೆತಿರುಗಿ ಆಡಿದಲ್ಲೆ ಏನೂ ಹುರುಳಿಲ್ಲ ಎಲೆ ನೋಡೆತಿರುಗಿ ಆಡಿದಲ್ಲೆ ಏನೂ ಹುರುಳಿಲ್ಲ ಸುಭದ್ರ ನೋಡಿಕೋನಿನ ಮನದಲ್ಲೆ ಎಲ್ಲ ನೋಡೆ1 ಅಣ್ಣನ ವಂಚಿಸಿ ಓಡಿ ಬಂದವಳೆಂದುಎನ್ನನೆ ನುಡಿದೆ ಸುಭದ್ರಾ ಎಲೆ ನೋಡೆಎನ್ನನೆ ನುಡಿದೆ ಸುಭದ್ರಾನಿನ್ನಂತೆ ಸನ್ಯಾಸಿಯೊಡನೆ ಬರಲಿಲ್ಲ ಎಲ್ಲಿ ನೋಡೆ2 ಅತ್ತೆಯ ಮಗಳೆಂದು ಹತ್ತೆಂಟು ತಾಳಿದೆ ಒಂದುತ್ತರ ನಿನಗೆ ಕೊಡತೇನ ಎಲೆ ನೋಡೆಒಂದುತ್ತರ ನಿನಗೆ ಕೊಡತೇನ ಸುಭದ್ರಾಚಿತ್ತಕ್ಕೆ ಹೋಗಿ ನಡುವಂತೆ ಎಲೆ ನೋಡೆ 3 ಒಂದು ನುಡಿದು ಹನ್ನೊಂದು ನುಡಿಸಿಕೊಂಡೆಕುಂದದಂಥsÀವಳೆ ನಿನ್ನ ಬಣ್ಣ ಎಲೆ ನೋಡೆಕುಂದದಂಥsÀವಳೆ ನಿನ್ನ ಬಣ್ಣ ಸುಭದ್ರಾಬಂದದಾರಿ ಹಿಡಿದು ತಿರುಗಿ ಹೋಗೆ 4 ಬಾಳುವರ ಮನೆ ಮುಂದೆ ಕೋಳಿ ಕೂಗಿದಂತೆವೀಳ್ಯವ ಕೊಟ್ಟು ಯಾತರಿಂದ ಎಲೆನೋಡೆವೀಳ್ಯವ ಕೊಟ್ಟು ಯಾತರಿಂದ ಹೊಡೆಸಿಕೊಂಡಿನಿಲ್ಲದೆ ಹೋಗೆ ಮನೆತನಕ ಎಲೆ ನೋಡೆ 5 ಕುದುರೆಯ ಸಂಗಡ ಕುರಿ ಹುಲ್ಲು ಮೆಯ್ದರೆಕುದುರೆ ಹಿಂಗಾಲಿಲೆ ಒದೆಯದೆ ಎಲೆ ನೋಡೆಕುದುರೆ ಹಿಂಗಾಲಿಲೆ ಒದೆಯದೆ ಸುಭದ್ರಾಸುದತೆ ರುಕ್ಮಿಣಿಗೆ ಸರಿಯೇನೆ ನೋಡೆ6 ಆನೆಯ ಸಂಗಡ ಆಡು ಹುಲ್ಲು ಮೆಯ್ದೆರೆ ಆನೆ ಹಿಂಗಾಲಿಲೆ ಒದೆಯದೆ ಎಲೆ ನೋಡೆಆನೆ ಹಿಂಗಾಲಿಲೆ ಒದೆಯದೆ ಸುಭದ್ರಾನೀ ರಾಮೇಶನ ಮಡದಿಯ ಸರಿಯೇನೆ ಎಲೆ ನೋಡೆ 7
--------------
ಗಲಗಲಿಅವ್ವನವರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕದರ ಉಂಡಲಿಗಿಯ ಹನುಮಾ | ಕಾಯೊಉದಧಿ ಶಯನಗೆ ಬಲು ಪ್ರೇಮಾ ಪ ಸದಮಲಾಂತಃಕರಣದೊಳು ತವ | ಪದವನಜ ದ್ವಯ ಸೇವಿಸೂವರಮುದದಿ ಪಾಲಿಪ ಗುರು ದಯಾಕರ | ವದಗಿ ಭಾಸಿಸೊಮ ಮಹೃದಾಗರ ಅ.ಪ. ಪ್ರಥಮಾಂಗ ಹರಿಗೆ ನೀನೆನಿಸೀ | ಜೀವ ತತಿಯೊಳಂತರ ಬಾಹ್ಯ ನೆಲಸೀ |ತತುವ ಮಾನಿಗಳ್ಕಾರ್ಯ ನಡೆಸೀ | ಹರಿಗೆ ಪೃಥಕ್ಪøಥಕ್ಕವುಗಳರ್ಪಿಸೀ |ವಿತತ ಹರಿ ಸತ್ಪಾತ್ರನೆನಿಸುತ | ಯತನ ಜ್ಞಾನೇಚ್ಛಾದಿ ನಡೆಸುತಸತತ ವಿಶ್ವವ ಪಾಲಿಸುವ ಶ್ರೀ | ಪತಿಯ ಪದಕರ್ಪಿಸುತಲಿರುವ 1 ಶರಧಿ ದಾಟುವ ಲಂಕಾಪುರವ | ಸೇರಿವರ ಮಾತೆಗಿತ್ತೆ ಉಂಗುರವಾ |ಪುರದೊಳಗಶೋಕ ವನವಾ | ಕಿತ್ತುತರಿಯಲಕ್ಷನು ತೆತ್ತ ದೇಹವಉರು ಪರಾಕ್ರಮಿ ಇಂದ್ರ ಜಿತುವಿನ ವರಸುಅಸ್ತ್ರಕೆ ತಾನೆ ಸಿಲುಕುತಪರಿಪರಿಯಲಸುರನನು ಹಿಂಸಿಸಿ | ಉರಿಸಿ ಲಂಕೆಯ ಹರಿಗೆ ಎರಗಿz À 2 ಹದಿನೆಂಟು ಕ್ಷೋಹಿಣಿ ಬಲವಾ | ನೆರಸಿಸದೆದು ಹಾಕಿದ್ಯೊ ದೈತ್ಯಕುಲವಾ |ಮುದದಿ ದ್ರೌಪದಿಗಿತ್ತ ವರವಾ | ಸಲಿಸಿವಧಿಸಿದ್ಯೋ ದುರಳರ ಕುಲವಾ |ಮಧುಮಥನ ನರಹರಿಯ ಸ್ಮರಿಸುತ | ಅದುಭುತವು ಎಂದೆನಿಪ ಕಾರ್ಯವವಿಧಿಸಿ ಭೂಭಾರವನೆ ಕಳೆಯುತ | ಮುದದೊಳಚ್ಯುತಗಿತ್ತೆ ಭೀಮ 3 ವೇದ ವಾದಿ ಜನ ಕೊರಗೀ | ಹರಿಪಾದದ್ವಯವು ವನಜಕೆರಗೀ |ಮೋದದಿ ಸ್ತುತಿಸೈವ ಮರುಗೀ | ಕಳುಹೆ ವೇದಗಳುದ್ಧಾರಕ್ಕಾಗೀ |ಬೋಧಿಸುತ ಬುಧ ಸ್ತೋಮಗಳಿಗಾ | ವೇದಗಳ ಸಾರಾರ್ಥವೆಲ್ಲವವಾದಿಗಳ ಜೈಸುತಲಿ ಪೂರ್ಣ | ಭೋದಯತಿ ಪಾಲಿಸುವುದೆಮ್ಮ 4 ಪಂಕ ಕರ್ಮ ಸ್ವಾಂತ ದೊಳಗನವರತ ಕಾಣುವ 5
--------------
ಗುರುಗೋವಿಂದವಿಠಲರು
ಕದರ ಮಂಡಲಗಿಯ ಕರುಣಿ ಹನುಮರಾಯ |ಸದುಗುಣವಂತನೆ ಹಣುವಂತನೆ ಪ ಅಂಜನೆಯ ವರಸೂನು ಆಶ್ರಿತ ಕಾಮಧೇನುಮಂಜುಳ ಗಾನ ಗೀತ ಪರಮ ವಿಖ್ಯಾತ ಸಂಜೀವನವ ತಂದ ವ್ಯೋಮ ಮಾರ್ಗದಿ ಬಂದಅಂಜದ ಗುಣವಂತನೆ ಹಣುವಂತನೆ1 ಅಮಿತ ಜಾಮಾತ ಮುಖ್ಯ ಪ್ರಾಣನಾಥ ವಿಶಾಲ ಗುಣವಂತನೆ ಹಣುವಂತನೆ 2 ಕ್ಷೋಣಿಯೊಳು ಕನಕದಾಸನ ನೆರಳು ಅನಕ ಏನು ಬಲಿಸಿದೆಯೊ ಔಷಧಿಯ ಕುಣುಕ ನೀನಿದ್ದರೆ ಕನಕ ಪ್ರಾಣ ತೆರಳುವ ತನಕ ಶ್ರೀನಿಧೇ ಆದಿಕೇಶವ ಎನ್ನ ಜನಕ3
--------------
ಕನಕದಾಸ
ಕದವ ತೆಗೆಯೆ ಸುಂದರಿವಯ್ಯಾರಿ ಮುತ್ತಿನ ಪ ಕಡಲ ಶಯನನೆ ಮಡದಿ ಹರುಷದಿ ಸಡಗರದಿ ಮುಂದಡಿ ಇಡುತ ನಿನ್ನ ಒಡೆಯ ಬಂದಿಹನೆಂದು ಹರುಷದಿ ಬೆಡಗು ಮಾಡದೆ ಬಿಡಿಯ ಮುತ್ತಿನ 1 ಯಾರು ನಿನ್ನಯ ಪೆಸರ ಏನೆಂದು ತಿಳಿಯದೆ ಹೇಗೆ ತೆಗೆಯಲಿ ಕದವಾ ಘೋರ ರಾತ್ರಿಯ ವೇಳೆಯಲಿ ಬಂ- ದೀಗ ಬಾಗಿಲ ಬಡಿಯ ನಿಂದಿರೆ ನಾರಿಯರು ಏನೆಂದು ಕೇಳ್ಪರು ದ್ವಾರ ಬಿಡುಬಿಡುತಲಿ ಸಾಗು ಮುಂದಕೆ2 ತೆಗೆಯಲೊಲ್ಲೆನು ಕದವ ಸಮರಾತ್ರಿ ವೇಳದಿ ರುಕ್ಮನ ಅನುಜೆ ಕೇಳೆ ಪೃಥ್ವಿಯೊಳು ಎನ್ನನು ಚಕ್ರಿ ಎನ್ನುತ ಪೇಳ್ವರೆ ಅರ್ಥಿವಚನಗಳನ್ನು ಕೇಳುತ ಸತ್ವರದಿ ನೀ ಬಂದು ಮುಂದಕೆ ಮುತ್ತಿನ ಕದತೆಗೆದು ಬೇಗನೆ ರತ್ನ ಪೀಠದಿ ಕುಳ್ಳಿರಿಸೆ ಹೊಸ ಮುತ್ತಿನರಗಿಣಿ ಸತ್ಯವಾಣಿಯೆ3 ಕೇಳಿ ಹರ್ಷಿತನಾದೆನು ನಿನ್ನಯ ಮಾತ ಕೇಳಿ ನಗುವರು ಜನರು ಹೇಳಿ ಕೇಳುವರಿಲ್ಲ ನಿನ್ನ ಮನಸಾರ ಮಾತುಗಳಾಡಲೇತಕೆ ಕು- ಲಾಲ ಭವನವಿದಲ್ಲ ಸುಮ್ಮನೆ ಹೇಳ ಕೇಳದೆ ಹೊರಡು ಮುಂದಕೆ 4 ಹೀಗೆ ನುಡಿಯುವದೇತಕೆ ಈಗೆನ್ನ ಮಾತಿಗೆ ಬೇಗದಿ ತೆಗೆ ಕದವ ನಾಗವೇಣಿಯೆ ನಗುತ ಪೇಳುವೆ ಬೇಗದಲಿ ಇನ್ನೊಂದು ನಾಮವ ಈಗ ಧರಣಿಧರನು ಬಂದಿಹೆ ಸಾಗರನ ಸುತೆ ಸರ್ಪವೇಣಿಯೆ 5 ಧರಣೀಧರ ನೀನಾದರೆ ಈ ಧರೆಯನೆಲ್ಲವ ಸಿರದ ಮೇಲಿರಿಸುವೆಯ ಸರ್ವ ಜನರಿಗೆ ಭಯವ ಪಡಿಸುವ ಉರಗರಾಜ ನೀನೆಂದು ತಿಳಿದೆನು ಇರುತ ಸರ್ಪಗಳೊಳಗೆ ನೀ ಬಲು ಹರುಷದಿಂದಲಿ ಸಾಗುಮುಂದಕೆ6 ಹರಿಣಾಕ್ಷಿ ಕೇಳೆ ನೀನು ಎನ್ನನು ಜನರು ಹರಿಯೆಂದು ಕರಿಯುವರು ಕರೆ ಕರೆಯ ಮಾಡದಲೆ ಬೇಗನೆ ವರ ಕನಕ ಕದ ತೆಗೆದು ಸುಮ್ಮನೆ ಇರಿಸು ಸುಖ ಸಾಮ್ರಾಜ್ಯ ಪೀಠವ ಹರುಷದಿಂ ಕುಳಿತೆಲ್ಲ ಪೇಳುವೆ 7 ಕೋತಿ ನೀನಹುದಾದರೆ ಮಾತುಗಳ್ಯಾಕೆ ಜಾತಿ ಕಪಿಗಳ ಕೂಡುತ ಪ್ರೀತಿಯಿಂದಲಿ ಮನಕೆ ಬಂದೆಡೆ ನೀತೆರಳುತಲಿ ಪೋಗು ಮುಂದಕೆ ಕೋತಿಗಳ ಗುಂಪಿದಲ್ಲ ತಿಳಿಮಹ- ರೂಪವತಿಯರಿರುವ ಸ್ಥಳವಿದು 8 ಪ್ರೀತಿಸತಿಯೆ ನೀ ಕೇಳೆ ನಿನ್ನೊಳು ಬಹು ಪ್ರೀತಿಯಿಂದಲಿ ಬಂದೆನು ಶ್ರೀಶನ ನುಡಿಕೇಳಿ ರುಕ್ಮಿಣಿ ಆತುರದಿ ಬಾಗಿಲನೆ ತೆಗೆಯುತ ನಾಥ ಕಮಲನಾಭ ವಿಠ್ಠಲನಿಗೆ ತಾನಮಿಸಿ ವಂದಿಸುತ ಭಕುತಿಯಲಿ ಬಾಗಿಲು ತೆಗೆದಳಾಗ ಭಕುತಿಯಲಿ ಶ್ರೀಶಗೆ ಬಾಗಿಲು ತೆಗೆದಳಾಗ9
--------------
ನಿಡಗುರುಕಿ ಜೀವೂಬಾಯಿ
ಕದವನಿಕ್ಕಿದ ಕಾರಣೇನೆ ಮುದದಿ ಕೇಳೆ ಮೋಹನಾಂಗಿ ಸದನಕ್ಕಾಗಿ ಬಂದೆ ನಾನು ಸರಸವ್ಯಾತಕೆ ಸುಂದರಾಗಿ ಪ ಇಂದು ನಾನು ಬಂದೆ ದ್ರೌಪದಿ ಬಂದು ಬಾಗಿಲನ್ಹಾಕುವೋದು ಚೆಂದವೇನೆ ಚಂದ್ರಮುಖಿಯೆ ಬಂದು ಬಾಗಿಲು ತೆಗೆಯೆ ನೀನು 1 ಅಂಧಕಾರ ರಾತ್ರಿಯಲಿ ಬಂದವರ್ಯಾರೆಂದು ಅರಿಯೆ ನಿಂದು ಗುರುತೇನೆಂದು ಪೇಳಲು ಬಂದು ಬಾಗಿಲು ತೆಗೆವೆ ನಾನು 2 ಕಂಡರಿಯೆ ಎನ್ನ ಪರಾಕ್ರಮ ಖಾಂಡವವನವ ದಹಿಸಿದೆನೆ ಗಾಂಡೀವಾರ್ಜುನರಾಯ ನಾನು 3 ಗಾಂಡೀವಾರ್ಜುನರಾಯನಾದರೆ ದುಂಡು ಬಳೆ ಕಂಕಣಗಳಿಟ್ಟು ಗೊಂಡ್ಯ ರಾಗಟೆ ಹೆರಳಲ್ಹಾಕಿ ನೀ ಷÀಂಡರೂಪವ ಧರಿಸ್ಹೋಗೊ 4 ಕ್ಷೀರಸಾಗರದಲ್ಲೆ ತಾ ಮಂ- ದರ ಪೊತ್ತಮೃತವನೆ ತಂದ ಧೀರ ಕೂರ್ಮಗೆ ಮೈದುನಾದಂಥ ಶೂರ ಫಲ್ಗುಣರಾಯ ನಾನೆ 5 ಫಲ್ಗುಣರಾಯನಾದರೇನೊ ಸದ್ಗುಣ ಸಂಪನ್ನ ಬಿರುದು ಭದ್ರದೇವಿಯ ಕದ್ದು ತರುವಾಗ ಬುದ್ಧಿ ದಾರಲ್ಲಿಟ್ಟೆದ್ದಿರ್ಹೇಳೊ 6 ಪರಮೇಶ್ವರನ ಒಲಿಸಿಕೊಂಡು ಪಾಶುಪತಾಸ್ತ್ರ ಪಡೆದೆ ನಾನು ಪರಮ ಆಪ್ತ ವರಾಹನ ಕರುಣಕ್ಕೆ ಪಾತ್ರನಾದಂಥ ಪಾರ್ಥರಾಯನೆ 7 ಪಾಶುಪತಾಸ್ತ್ರ ಪಡೆದರೇನು ದೇಶ- ದೇಶ್ಯಾತ್ರೆತೀರ್ಥ ಚರಿಸಿ ಆಸೆ ಬಿಡದೆ ಸನ್ಯಾಸಿಯಾದಂಥ ಮೋಸಗಾರನೆ ಮನೆಗೆ ಪೋಗು 8 ಕೋಟಿ ದೈತ್ಯರ ಕೊಂದೆ ಎನ್ನಸರಿ- ಸಾಟಿಯಾರೀ ಲೋಕದೊಳಗೆ ಆ- ರ್ಭಟದವತಾರ ನಾರಸಿಂಹನೆ ನೀಟಾದಭಕ್ತ ಕಿರೀಟಿಯಲ್ಲವೆ 9 ಕೋಟಿ ದೈತ್ಯರ ಕೊಂದು ಜೂಜಿ- ನಾಟ ಸೋತ್ವನ ತೋಟ ತಿರುಗಿ ಪಾಟುಬಟ್ಟು ವಿರಾಟನಲ್ಲೆ ನಾ(ನ?)ಟರಾಟಕೆ ನಿಂತಿರ್ಯಾಕೊ 10 ಮಾತಿಗೆ ಮಾತಾಡೋರೇನೆ ಅ- ಭೂತಳವ ಬೇಡಿದ್ವಾಮನಗೆ ದೂತ ನಾ ಶ್ವೇತೂವಾಹನನೆ 11 ಶ್ವೇತೂವಾಹನ ನಿಮ್ಮ ಸತಿಗೆ ನಾಥರಿದ್ದೂ ಅನಾಥಳಂತೆ ಅ- ಜ್ಞಾತದಲ್ಲಿ ಸುದೇಷ್ಣೆ ಸೇವೆಗೆ ದೂತಿಯಾದ ಪ್ರಖ್ಯಾತಿ ದಾರದೊ 12 ಹೆತ್ತತಾಯಿ ಶಿರವನಳಿದ ಕ್ಷತ್ರೇ- ರಂತಕ ಭಾರ್ಗವಗೆ ನಿತ್ಯದಲಿ ನಿಜಸೇವಕ ಭೀ- ಭತ್ಸುರಾಯ ನಾನಲ್ಲವೇನೆ 13 ಧೀರ ಭೀಭತ್ಸುರಾಯ ನಿನ್ನ ನಾರಿಯ ಸಭೆಗೆಳೆದು ತಂದು ಸೀರೆ ಸೆಳೆವಾಗ ಶೂರರಾದರೆ ದಾರದಾರಂತೆ ನೋಡಿರ್ಯಾಕೊ 14 ಕಾಮ ಮೋಹಗಳಿಂದ ನಿನ್ನಲ್ಲೆ ಪ್ರೇಮದಿ ನಾ ಬಂದೆನೀಗ ರಾಮರಾಜÉ್ಞಗೆ ನಿಜ ಸೇವಕ- ನಾದ ವಿಜಯರಾಯ ನಾನೆ 15 ವಿಜಯರಾಯ ನೀನ್ಹೌದೊ ತೇಜಿದಿ- ಗ್ವಿಜಯಕೆನುತದರ್ಹಿಂದೆ ಪೋಗಿ ಮಗನ ಕೈಯಿಂದ ವಧೆಯು ನೀತವೆ ಮೊದಲೆ ಪರಾಜಿತನಾದಿರ್ಯಾಕೊ 16 ಶ್ರೇಷ್ಠರೊಳು ಮಹಾಶ್ರೇಷ್ಠ ನಾನೆ ಅಸ್ತ್ರವಿದ್ಯದಲ್ಲಧಿಕನೆಂದು ಕೃಷ್ಣಮೂರುತಿ ಒಲಿಸಿಕೊಂಡಂಥ ಕೃಷ್ಣೆ ನಲ್ಲನೆ ಕೃಷ್ಣೆ ಕೇಳೆ 17 ಸಾರಥಿ ಆದ್ದರಿಂದ ಹಸ್ತಿನಾವತಿ ಪಟ್ಟಣಾಳ್ವುದು ಇಷ್ಟು ದಾರ ದಯದಿಂದ್ಹೇಳೊ 18 ಅಂಗನಾಮಣಿ ನಿನ್ನ ಅಂಗ- ಸಂಗ ಬಯಸಿ ನಾ ಬಂದೆನೀಗ ಅಂಗದ್ವಸ್ತ್ರವಬಿಟ್ಟ ಬೌದ್ಧಗೆ ಸಖನು ನಾ ಸವ್ಯಸಾಚಿ ಅಲ್ಲವೆ 19 ಭುಜ ಪರಾಕ್ರಮಿ ಸವ್ಯಸಾಚಿ ನಿನ್ನೆರಡು ಕೈದಡ್ಡಿನ್ಯಾತಕೇಳೊ ದ್ವಿಜರ ಸುತರ ತಂದುಕೊಡದೆ ಮೊದಲೆ ಮಾಡಿದ ಪ್ರತಿಜ್ಞವೇನೊ 20 ಅಂಜೋನಲ್ಲ ನಾನರಿಗಳಿಗೆ ಕಲಿ- ಭಂಜನ ಕಲ್ಕ್ಯಾವತಾರಗೆ ಕಂಜಚರಣಕ್ಕೆ ವಂದಿಸುವೆ ಧ- ನಂಜಯ ನಾನಲ್ಲವೇನೆ 21 ಸೈಯೊ ನೀ ಧನಂಜಯರೇಯ ಸುರಪತಿಗೆ ಪತ್ರವನೆ ಬರೆದು ಶರದ ಪಂಜರ ಕಟ್ಟಿ ನೀ ಕುಂ- ಜರವನಿಳಿಸಿದ ಕಾರಣೇನೊ 22 ನಿನ್ನ ಸರಿ ಮಾತಾಡುವೋರ ಧನ್ಯರ ನಾ ಕಾಣೆನೆಲ್ಲು ಳನ್ನು ಕೇಳಿದಿನ್ಯಾಕೆ ತಡೆವೆ 23 ದಶ ನಾಮಗಳ ಕೇಳಿ ದ್ರೌಪದಿ <ಈಔಓಖಿ ಜಿಚಿ
--------------
ಹರಪನಹಳ್ಳಿಭೀಮವ್ವ
ಕನಕದಾಸನ ಮೇಲೆ ದಯ ಮಾಡಲು ವ್ಯಾಸಮುನಿ ಮಠಿಕರೆಲ್ಲರು ದೂರುತಿಹರೊ ಪ. ತೀರ್ಥವನು ಕೊಡುವಾಗ ಕನಕನ್ನ ಕರೆಯೆನಲುದೂರ್ತರಾಗಿದ್ದ ವಿದ್ವಾಂಸರೆಲ್ಲಸಾರ್ಥಕವಾಯ್ತು ಇವರ ಸನ್ಯಾಸಿತನವೆಲ್ಲಪೂತ್ರ್ಯಾಗಲೆಂದು ಯತಿ ನಗುತಲಿಹನು 1 ಕದಳಿ ಫಲವನೆ ಕೊಟ್ಟುಯಾರಿರದ ಸ್ಥಳದಲ್ಲಿ ಮೆದ್ದು ಬನ್ನಿರಿ ಎನಲು2 ಕದಳಿ ಫಲವ ತಂದು ಮುಂದಿಟ್ಟ 3 ಡಿಂಬದೊಳು ಶಬ್ದ ವಾಗಾದಿ ಶ್ರೋತೃಗಳಲ್ಲಿಇಂಬಾಗಿ ತತ್ತ್ವೇಶರೆಲ್ಲ ತುಂಬಿಹರುತಿಂಬುವುದು ಹ್ಯಾಂಗೆನುತ ವ್ಯಾಸರಾಯರ ಕೇಳೆಕಂಬದಂತಾದರವರೆಲ್ಲ ಕುಳಿತವರು 4 ಮಾಣಿಕವು ಕೋಡಗನ ಕೈಯಲ್ಲಿ ಇದ್ದಂತೆಕೋಣನಿದಿರಿಗೆ ಕಿನ್ನರಿಯ ಮೀಟಿದಂತೆವೇಣುಧ್ವನಿ ಬಧಿರನ ಬಳಿ ಹೊರಡಿಸಿದಂತೆ ಕಣ್‍ಕಾಣದವನಿಗೆ ಕನ್ನಡಿಯ ತೋರಿದಂತೆ 5 ನೋಡಿದಿರ ಈ ಕನಕನಾಡುವ ಮಾತುಗಳಮೂಢ ಜನರರಿಯಬಲ್ಲರೆ ಮಹಿಮೆಯನಾಡಾಡಿಯಂತೆಯೆ ಮಾಡಿಬಿಟ್ಟರು ಇವಗೆ ನಾಡೆಲ್ಲ ಹುಡುಕಿದರು ಈಡಾರ ಕಾಣೆ6 ಪುರಂದರ ವಿಠಲನೆಂದ 7 * ಈ ಕೀರ್ತನೆ ಕನಕದಾಸರದೆಂದೂ, ‘ಪುರಂದರ ವಿಠಲ’ ಎಂಬ ಅಂಕಿತ ಪ್ರಕ್ಷಿಪ್ತವೆಂದೂ ಪ್ರತೀತಿ.
--------------
ಕನಕದಾಸ
ಕನಕದಾಸರು ಕನಕಾ ನಿನ್ನ ಕೆಣಕಿ ನಾನು ತಿಣಕಲಾರೆನೊ ಕ್ಷಣಕು ಕ್ಷಣಕು ತಿಣಿಕಿ ತಿಣಿಕಿ ದಣಕೊಲಾರೆನೊಅಡಿಗಡಿಗೊಗೆದ ಮುಂಡಿಗೆಯನು ಒಡಿಯಲಾರೆನೊಒಡೆಯಲು ದುಡುಕಿ ದುಡುಕಿ ದಣಿವನು ತಡಕೊಲಾರೆನೊ 1 ಒಡೆಯ ದೇವನೆಂದಟ್ಟಿದ ಕುನಕವ ಮುಟ್ಟಿಲಾರೆನೋ ಮಡಿಯ ದೇವರೆಂದೊದಗಿಸಿದುರಗನ ಬಳಿಯ ಸಾರೆನೋ ಪಾತ್ರೆಯ ಒಳ ಮೈಯ್ಯ ಮಾತ್ರ ತೊಳೆದುದು ತಿಳಿಯಲಾರೆನೋಗೋತ್ರವ ಕೇಳಿ ಸುಸೂತ್ರದೊಳುತ್ತರ ಪಡೆಯಲಾರೆನೋ 2 ಅದಕೊ ಇದಕೊ ಯಾವುದಕೊ ನಾ ಕೆದಕಲಾರೆನೊಗದುಗಿನ ವೀರನಾರಾಣನ ಮರೆಯಲಾರೆನೊ 3
--------------
ವೀರನಾರಾಯಣ
ಕನಸು ಕಂಡೆನು ಕೇಳೇ ಪ್ರಾಣ ಸಖೀ ಒಳ್ಳೆ ಪ ಕನಸು ಕಂಡೆನು ಕೇಳು ಘನತರ ಸುಖದೊಳೂ ಮನದೊಳಗನುದಿನ ನೆನೆಸೇ ಸಖಿಅ.ಪ ಎಳೆಯ ಚಂದ್ರನ ಚೆಲ್ವ ಪೊಳೆವ ಬೆಳಕಿನೊಳು ಝಳಿಪಾ ಚೆಂದುಟಿಯಂ ತಿಳಿವೇ ಸಖಿ 1 ವಾಸವಾರ್ಚಿತ ಹರಿದಾಸ ತುಲಸಿರಾಮಾ ದೇಶಿಕನಾದಾನು ತಾನಹುದೇ ಸಖಿ ಅಸ್ಮದ್ದೇಶಿಕನಾದಾನು 2 ಯಾತರ ಸುಖ ಬರಿ ಮಾತಿನೊಳಿಗೆ ಜಾಣೆ ಪ್ರಿತಿಯಿಲ್ಲದೆಲೇ ತಾಮಾತರಮಳಿವುದೇನೇ 3 ಬರಿಯ ಮಾತಿನೊಳೆನ್ನಾ ಬೆರಗು ಮಾಡಲಿಬೇಡಾ ಸುರತಕೇಳಿಗೆ ಬಂದೂ ಸರಸವನಾಡೆಲೆ 4 ವಾಸವನುತ ಹರಿ ದಾಸತುಲಸಿರಾಮಾ ಆಸೆಯ ತೋರಿಯೀಪರಿಯೋಳ್ ಮೋಸಗೈವುದು ಸರಿಯೆ 5
--------------
ಚನ್ನಪಟ್ಟಣದ ಅಹೋಬಲದಾಸರು
ಕನ್ಯಾರೂಪವ ತಾಳಿದ ಚನ್ನಿಗ ಕೃಷ್ಣರಾಯನಾ ಪ ದಾನವರ ಮರಳು ಮಾಡಿ ಮಾಣದೆ ಸುಧೆಯನೆರೆದು ಆ ನಿರ್ಜರರ ಪಾಲಿಸಿದ ಶ್ರೀ ನಾರಾಯಣಿ ವೇಷವಾ 1 ಆರಾರು ಸಾವಿರ ಸಕಲ ಶರೀರದ ಎಡಕೆ ಇಪ್ಪ ಸಾರಸುಂದರವಾಗಿದ್ದ ನಾರಿ ರೂಪಗಳು ಇದೊ 2 ಭೂತಳದೊಳಗೆ ಜನಕೆ ಮಾತೆಯಾಗಿ ಕಾವುತಿಪ್ಪ ಜಾತರಹಿತ ವಿಜಯವಿಠ್ಠಲ ಶ್ರೀ ತರಣಿಯಾಳಿದ ಪೆಣ್ಣಿನ 3
--------------
ವಿಜಯದಾಸ
ಕನ್ಯೆ ಕುವರಿ ಕರುಣಿಸೆಮ್ಮನೂ | ಕಮಲನಯನೆಅನ್ಯ ದೇವತೆಯನ್ನ ಭಜಿಸೆನೇ ಪ ಮನ್ಯು ಮಿಕ್ಕ ದೋಷ ಹರಿಸಿ | ನಿನ್ನ ಪತಿಯ ಚರಣ ಕಮಲವನ್ನೆ ಭಜಪ ಮತಿಯ ಕೊಟ್ಟು | ಘನ್ನ ಪದಕೆ ದಾರಿ ತೋರೆ ಅ.ಪ. ಇಂಬು ಡಿಂಬ ಪೋಗದವರವ ಪಡಿಯೆ 1 ಖುಲ್ಲ ಕಂಸ ತನ್ನ ಭಗಿನಿಯ | ಒಯ್ದ ಬೇಗನಲ್ಲನೊಡನೆ ಗೈದ ಖೈದಿಯ |ಅಲ್ಲಿ ಉದಿಸೆ ಚೆಲ್ವ ಕೃಷ್ಣ | ನಲ್ಲೇ ನೀನು ದುರ್ಗೆ ಎನಿಸೆವಲ್ಲದವರ ಬಿಡದೆ ನೀನು | ಕೊಲ್ವೆನೆಂದು ಹಾರಿ ಪೋದೆ 2 ಶರಧಿ | ನಿಂತೆ ಅಲ್ಲಿ ಕನ್ಯೆಯಾಗಿ 3 ಮದುವೆ ನಿನಗೆ ಮಾಳ್ಪ ಮನದೊಳೂ ವರುಣ ಬೇಡೆರುದ್ರ ಅಜರು ಬಂದು ನಿಲ್ಲಲೂ ||ಒದಗಿ ಕಲಿಯ ಯುಗವು ಆಗ | ವಿಧಿಯು ಹರರು ತಾವು ಬೇಗಸುಧಿಯ ಇಂದ್ರ ಪುರದಿ ನಿಲ್ಲೆ | ಮುದದಿ ನಿಂತೆ ಶರಧಿಯಲ್ಲೇ4 ಇಂದಿರೆ ತವ ಮಾತಿನಂತೆ ಬಂಧ ಹರಿಸಿ ಮುಕ್ತಿ ಸುಖವ | ಛಂದದಿಂದ ಕೊಟ್ಟು ಕಾಯ್ವ 5
--------------
ಗುರುಗೋವಿಂದವಿಠಲರು
ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ
ಕಮಲಾಲಯ ವಿಠಲ | ಕಾಪಾಡೊ ಇವಳಾ ಪ ಅಮಿತ ಮಹಿಮಾತ್ಮಾ ಅ.ಪ. ಪಾದ | ವಂದನೆಯ ಬಯಸೀಬಂದಿಹಳು ಎನ್ನಲ್ಲಿ | ಕಂದರ್ಪಪಿತ ನಿನ್ನ |ಅಂದ ದಾಸ್ಯವ ಬಯಸಿ | ಪ್ರಾರ್ಥಿಸುತ್ತಿಹಳೋ 1 ಮನ್ನಿಸುತ ಮನ್ಮನದ | ಬಿನ್ನಪವ ಸಲಿಸುತ್ತನನ್ನೆಯಿಂ ತೈಜಸನು | ನೀನೇವೆ ಆಗೀಚೆನ್ನಮುತ್ತೈದುಳ್ಳ |ಹೆಣ್ಣೆನ್ಯ ರೂಪದಲಿಸನ್ನಿಹಿತ ದಂಕಿತವೆ ಸೂಚಿಸಿದೆ ಹರಿಯೇ 2 ವಜ್ರ ಕವಚವ ತೊಡಿಸಿಶ್ರೇಷ್ಠಭಕುತಳ ಗೈಯ್ಯೊ | ವಿಷ್ಠರ ಶ್ರವನೇ 3 ಎಲ್ಲೆಲ್ಲೂ ನೀನಿದ್ದು | ಬೆಲ್ಲದಚ್ಚಿನ ಪರಿಯಮಲ್ಲ ಮರ್ಧನ ಕೃಷ್ಣ | ಕೈಪಿಡಿದು ಇವಳಾಬಲ್ಲವರ ಸಂಗದಲಿ | ಚೆಲ್ವತವ ಮಹಿಮೆಗಳಸಲ್ಲಲಿತ ಮನದಲ್ಲಿ ಕೇಳುವಂತೆಸಗೋ 4 ಪತಿಸುತರುಹಿತರಲ್ಲಿ | ವಿತತ ನಿನ್ನಯಮೂರ್ತಿಅತಿಶಯಂಗಳ ಕಂಡು | ಮರುತಮಾರ್ಗದಲೀಹಿತ ಗುರು ಗೋವಿಂದ | ವಿಠಲನ್ನ ಸೇವಿಸುವಮತಿಯನೇ ಕೊಡು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕಮಲೋದ್ಭವನ ತಾಯೇ | ನಮಿಸುವೆನ್ನನು ಕಾಯೇ ಕಮಲಾಕ್ಷ ಹರಿ ಪ್ರೀಯೆ | ಚಿತ್ಪ್ರಕೃತೇ ಪ ಓಂಕಾರ ವಾಚ್ಯನ | ಶಂಕೆ ಇಲ್ಲದೆ ಭಜಿಸೇಸಂಖ್ಯೆ ರಹಿತ ರೂಪಳೇ |ಯಂಕಾಮಯೇ ತಂತಮು | ಗ್ರಂ ಕೃಣೋಮೆಂದು ಬಿಂಕದಿ ಶ್ರುತಿ ಪೇಳ್ವುದೇ 1 ಆಪಾಂಗ ವೀಕ್ಷಣ ಸೃಷ್ಠಿ | ವ್ಯಾಪಾರಂಗಳ ಹರಿಕೃಪೆಯಿಂದ - ಗೈಯ್ಯುವಳೇ |ಅಪವಿತ್ರರಿಗೆ ಯೋಗ್ಯ | ವಿಪರೀತ ಮತಿಯಿತ್ತು ಕುಪಥಾಂಧಂತದು ಪ್ರಾಪಕೇ 2 ಕಂಬು ಚಕ್ರಾಂಕಿತನ | ಅಂಬುಜಾಕ್ಷನ ಹೃದಯಾಂಬರದಲಿ - ತೋರಿಸೇ |ಇಂಬಿಟ್ಟು ಮನ ಬಯಕೆ | ತುಂಬಿಸುವುದು ಅನ್ಯಹಂಬಲ ನೀ ಕೊಡದೇ3 ಸನ್ನುತ | ಮೋಕ್ಷದಾಯಕ ಪರಮಾಕ್ಷರ ಶ್ರೀ ಹರಿಯ |ಈಕ್ಷಿಪ ಸುಖ ಕೊಡು | ಪೇಕ್ಷಿಸದಲೆ ತಾಯೆಲಕ್ಷಣವಂತೇ - ಗುಣವಂತೇ 4 ಕರವೀರ ಪುರದರಿಸಿ | ಶರದಿ ಸಂಭವೆ ಎನಿಸಿವರವ ನೀಡುತ ಪೊರೆವೇಗುರು ಗೋವಿಂದ ವಿಠ್ಠಲ | ಚರಣ ನೀರೇರುಹಕರುಣಿಸಿ ಸಲಹೇ - ಮಾತೇ 5
--------------
ಗುರುಗೋವಿಂದವಿಠಲರು
ಕರವ ಜೋಡಿಸಿ ಎಲ್ಲರಿಗೊಂದಿಸಿ ಪ. ಎಲ್ಲರಿಗೊಂದಿಸಿ ಫುಲ್ಲನಾ¨sನÀ ಮುಖ್ಯವಲ್ಲಭೆಯರುನಾವು ಗೆಲ್ಲಬೇಕೆಂದುಅ.ಪ. ಮಡದಿ ಇಂದಿರಾದೇವಿ ಕಡೆಗಣ್ಣನೋಟದಿ ಪಡೆದಾಳು ಲೋಕಬ್ರಹ್ಮರುದ್ರಾದಿ ಪಾದಂಗಳಿಗೆ ನೀವೆ ಮಹಾಲಕ್ಷ್ಮಿಪಾದಂಗಳೆಗೆ ನೀವೆ ಮಹಾಲಕ್ಷ್ಮಿ ದೇವಿಯಶುಭಾಂಗಿಯ ಮೊದಲೆ ಬಲಗೊಂಬೆ 1 ಪರಮೇಷ್ಠಿ ಪರಮೇಷ್ಠಿ ಪಾದ ಪದ್ಮವನೆ ಮೊದಲೆ ಬಲಗೊಂಬೆ2 ವಾಣಿ ಅಜನ ಪಟ್ಟದರಾಣಿ ಪನ್ನಂಗ ವೇಣಿಜಾಣಿ ಕೊಡು ಎಮಗೆ ಮತಿಗಳಜಾಣಿ ಕೊಡು ಎಮಗೆ ಮತಿಗಳ ನಿನ್ನಪಾದರೇಣುವ ಮೊದಲೆ ಬಲಗೊಂಬೆ 3 ಪಾದ ವನಜವ ಮೊದಲೆ ಬಲಗೊಂಬೆ4 ಭಾರತಿ ನಿನ್ನ ಪಾದವಾರಿಜ ಚರಣವ ಬಾರಿ ಬಾರಿಗೆ ಸ್ಮರಿಸುವೆಬಾರಿ ಬಾರಿಗೆ ಸ್ಮರಿಸುವೆ ನಮಗಿನ್ನುತೋರೆ ಬೇಗ ಮತಿಗಳು5 ಇಂದ್ರನ ಗೆದ್ದು ಸುಧೆಯ ತಂದ ಮಾತೆಯ ಬಂಧನ ಕಡೆದ ಬಲು ಧೀರಬಂಧನ ಕಡೆದ ಬಲುಧೀರನಾದ ಖಗೇಂದ್ರನ ಮೊದಲೆ ಬಲಗೊಂಬೆ6 ಸಾಸಿರ ಮುಖದಿಂದ ಶ್ರೀಶನ ಸ್ತುತಿಸಿದವಾಸುದೇವಗೆ ಹಾಸಿಗೆವಾಸುದೇವಗೆ ಹಾಸಿಗೆ ಯಾದಶೇಷಗೆ ಮೊದಲೆ ಬಲಗೊಂಬೆ7 ಅಪಾರ ಮಹಿಮನೆ ತ್ರಿಪುರಸಂಹಾರಕಚಂದ್ರ ಶೇಖರನೆ ಸರ್ವೇಶ ಚಂದ್ರ ಶೇಖರನೆ ಸರ್ವೇಶ ನಿನ್ನಪಾದದ್ವಂದ್ವವ ಮೊದಲೆ ಬಲಗೊಂಬೆ 8 ವಾರುಣಿ ಅಪರ್ಣಾದೇವಿಯರು ಕರುಣಿಸಿನಮಗೆ ಕಾಲಕಾಲಕರುಣಿಸಿನಮಗೆ ಕಾಲಕಾಲಕೆರಾಮೇಶನ ತರುಣಿಯರೆ ಗೆದ್ದು ಬರಬೇಕ9
--------------
ಗಲಗಲಿಅವ್ವನವರು