ಒಟ್ಟು 777 ಕಡೆಗಳಲ್ಲಿ , 99 ದಾಸರು , 661 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀನಿವಾಸದೇವರು ಬಾರಯ್ಯ ವೇಂಕಟ ಮನ್ಮನಕೆ ತ್ವರಿತದಿ ನಿಜನಾರೀಸಹಿತದಿ ಈ ಸಮಯಕೆ ಶರಣೆಂಬೆನು ಪದಯುಗಕೆ ಪ ಸಾರಿದ ನಿಜಶÀರಣನ ಈ ಭವಭÀವ ಘೋರಭಯವ ಪರಿಹÀರಿಸುವುದಕ್ಕೆಅ.ಪ ವ್ಯಕ್ತಾವ್ಯಕ್ತ ತ್ರಿಜಗದ್ವ್ಯಾಪ್ತಾ ದೋಷ ನಿರ್ಲಿಪ್ತಾ ಮುಕ್ತಾ ಮುಕ್ತ ಜೀವರ ಗಣದಾಪ್ತಾ ನೀ ಸರ್ವತ್ರದಿ ವ್ಯಾಪ್ತ ಭಕ್ತನ ಹೃದಯದಿ ವ್ಯಕ್ತನಾಗಿ ನಿಜ ಮುಕ್ತಿಪಥವ ತೋರೊ ಭಕ್ತಿಯನಿತ್ತು 1 ಕವಿಜನಗೇಯಾ ಆನಂದದಾಯಕ ನಿರ್ಜಿತಮಾಯಾ ಕಾಯಯ್ಯಾ ಜೀಯಾ ಆನತಜನಸನ್ಮಾನದ ಮನ್ಮನ ವನಜದಿ ನೀ ಸನ್ನಿಹಿತಾಗುವುದಕೆ 2 ಸೋಮಾಸುರನಾಮಕ ದೈತ್ಯನ ಕೊಂದೂ ವೇದವ ತಂದೂ ಕೂರ್ಮ ಕಿಟ ನರಹರಿ ರೂಪದಿ ನಿಂದೂ ವಾಮನನೆಂದೂ ರಾಮ ಭಾರ್ಗವ ಯದುಕುಲಸಾಗರ - ಸೋಮ ಬೌದ್ಧ ಕಲ್ಕಿ ಪ್ರೇಮದಿ ಮನಕೆ 3 ನಿಗಮಗೋಚರ ನಿತ್ಯಾನಂದಾ ಬಗೆಬಗೆ ಜನ್ಮವನೈದಿದೆ ಮುಕುಂದಾ ಮುಗಿವೆನೊ ಕರದಿಂದಾ ಅಗಣಿತ ಗುಣನಿಧಿ ಸುಗಮದಿ ಭವದ ಬಗೆಯನು ತಿಳಿಸೊ ನಗೆ ಮೊಗದಿ ಬಾ 4 ವಿಧಿಶಂಭುವಂದಿತ ಪದಯುಗಕಮಲಾ ನಿತ್ಯ ನಿರ್ಮಲಾ ಆಧಿಭೂತಾಧ್ಯಾತ್ಮಿಕತಾಪದ ಶಮಲಾ ನೀ ಮಾಡೆನ್ನನು ವಿಮಲಾ ಸದಯ ಸುಧಾಕರ ಹೃದಯದಿ ತವಪದ ಪದುಮ ಭಜಿಪೆ ನೀ ಮುದದಲಿ ಮನಕೆ5 ಸಾಸಿರನಾಮ ನತಜನಪ್ರೇಮಾ ಪೊರೆಯೋ ಶ್ರೀ ರಾಮಾ ಆಶೀ ಪೂರ್ತಿಸಿ ಮಾಡೆನ್ನಲಿ ಪ್ರೇಮಾ ಸುರಸಾರ್ವಭೌಮಾ ವಾಸಮಾಡಿ ಅಭಿಲಾಷೆಯ ಪೂರ್ತಿಸೊ ವಾಸುದೇವ ವಾರಾಸಿಜರಮಣಾ 6 ಶರಣಾಗತಜನಪರಿಪಾಲಾ ಕರುಣಾಲವಾಲಾ ಕರುಣಿಸೆನ್ನನು ಹೇ ಶಿರಿಲೋಲಾ ನಮಿತಜನಸುgಸಾಲ ಅಜ ಭವ ಸುರ ನಿಕರಾರ್ಚಿತಪದ ಸರಸಿಜಯುತ ನೀ ಸುರವರದೇವಾ 7 ಪನ್ನಗಗಿರಿ ನಿಜಕೃತವಾಸಾ ಪೊರೆ ಎನ್ನನು ಶ್ರೀಶಾ ಬಿನ್ನಪ ಮಾಳ್ಪೆನು ಹೇ ಶ್ರೀನಿವಾಸಾ ಕೊಡು ಎನಗೆ ಲೇಸಾ ಎನ್ನ ಸಲಹೋದಕೆ ಅನ್ಯರ ಕಾಣೆನೊ ಮನ್ನಿಸು ನೀನಾಪನ್ನಜನಸುಖದಾ 8 ಲಕ್ಷ್ಮೀನಾಯಕ ವರಪಕ್ಷಿಗಮನಾ ಅಕ್ಷಯ ಫಲವನ್ನ ರಕ್ಷಿಸಿ ಕಾಯ್ವದೋ ನೀ ಎನ್ನಾ ಲಕ್ಷ್ಮಣನಣ್ಣಾ ಕ - ಟಾಕ್ಷದಿ ಎನ್ನ ವೀಕ್ಷಿಸು ಕ್ಷಣ ಕ್ಷಣ..... 9 ಧರ್ಮಾರ್ಥಕಾಮಮೋಕ್ಷವ ನಾನೊಲ್ಲೇ ಕರ್ಮದ ಸುಳಿಯಲ್ಲೇ ಮರ್ಮವ ತಿಳಿಯದೆ ಬೀಳುವೆ ನಾನಲ್ಲೇ ನಿರ್ಮಿಸದಿರು ಎನ್ನಲ್ಲೇ ಕರ್ಮಭವದ ಮಹÀ ಮರ್ಮವ ತಿಳಿಸೀ ದುರ್ಮನ ಬಿಡಿಸೆಲೊ ಬೊಮ್ಮನ ತಾತಾ 10 ದಿಟ್ಟ ಗುರು ಜಗನ್ನಾಥವಿಠಲ ನಾನನಾಥಾ ಥಟ್ಟಾನೆ ನೀ ಎನ್ನನು ಕಾಯೋ ಶ್ರೀನಾಥಾ ಇಷ್ಟೇ ಎನಮನದರ್ಥ ಸೃಷ್ಟಿಯೊಳಗೆ ಬಹು ಭ್ರಷ್ಟರಸ್ತುತಿಸಿ ನಿ - ಕೃಷ್ಟನಾದೇನೋ ಶ್ರೇಷ್ಠ ಮೂರುತೀ 11
--------------
ಗುರುಜಗನ್ನಾಥದಾಸರು
ಶ್ರೀನಿವಾಸನಮಲನಾಮನ ಸೊಗಸಿನಿಂದ ಗಾನಮಾಳ್ವ ಧೀರನಾವನೋ ಪ ತಾಳತಂಬೂರಿಗಳನು ಮೇಳವಿಸಿ ಸರಾಗದಿಂದ1 ಹಿಂದೆ ಮೃದಂಗದಿಂದ ಸಂಗಡಿಸಿ ಸುಲಲಿತವಾಗಿ 2 ಗುಂಭವಾದ್ಯವನ್ನು ಪರಮ ಸಂಭ್ರಮದಲ್ಲಿ ಬಾರಿಸುತ್ತ3 ಜತೆಗೆ ಸೇರಿದವರ ಕೂಡಿ ಶ್ರುತಿ ಲಯಗಳಿಂದ ಪಾಡಿ 4 ಪರಮಪುರುಷ ವ್ಯಾಘ್ರಗಿರಿಯ ವರದ ವಿಠಲನೆಂದು ಮುದದಿ 5
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸವಿಠಲರ ಹಾಡು ಶ್ರೀಶ ಪ್ರಾಣೇಶ ದಾಸರಾಯರ |ಬ್ಯಾಸರದಲೆ ಕೊಂಡಾಡೆಲೋ |ಏಸು ಜನ್ಮದ ದೋಷರಾಶಿಯು |ಲೇಶಿತಿಲ್ಲದೆ ಕಳೆವರು ಪ ಉದಯ ಕಾಲಸ್ತಮಯ ಪರಿಯಲಿ |ಹೃದಯದೊಳು ಹರಿಯ ಮೂರ್ತಿಯಾ |ಮುದದಿ ಸ್ಮರಿಸುತ ಪದುಮನಾಭನ |ಪದಗಳರ್ಚಿಪ ಗುರುಗಳಾ 1 ನಾನು ನನ್ನದು ಎಂಬ ದುರ್ಮತಿ |ಹೀನ ಜನರನು ಸೇರದೆ ||ಜ್ಞಾನಿಗಳವೊಡಗೂಡಿ ಹರಿಕಥೆ |ಸಾನುರಾಗದಿ ಪೇಳುವಾ 2 ಪರ |ಪದ್ಮಾರಾಧಕರಿವರೆಲಾ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀನಿವಾಸಾರ್ಯರ ಶೃಂಗಾರ ಗುಣಂಗಳಆನೆಂತು ವರ್ಣಿಸುವೆನು ಪ ದಾನವಾಂತಕ ಹರಿಯ ಮಾನಸಾರ್ಚನೆ ಮಾಳ್ಪಮಾನಿಸಾ ವೇಷಧರರ ಇವರ ಅ.ಪ. ನಿರ್ಜರ ಪತಿಯ ಚಿತ್ತ ಸಂಪಾದಿಸುವರಮತ್ತು ಗಜವೆಂಬ ದುರ್ವಾದಿಗಳನೇ ಮುರಿದು ಹತ್ತು ದಿಕ್ಕಿಲಿ ಮೆರೆವರ ಇವರ 1 ಪಾದ ಅಂಗಾರ ಕರಮುಟ್ಟಿ ಪಾಲಿಸುತ್ತಿಹರ ||ವರ ಮಂತ್ರಾಕ್ಷತೆಯನ್ನಿತ್ತು ಮುದದಿಂದ ಪಾ-ಮರರನ್ನೆ ಪೊರೆವರ ಇವರ2 ಲಕ್ಷ್ಮೀಪತಿ ಶ್ರೀನಿವಾಸಾರ್ಯರೆಮ್ಮನು ಬಿಡದೆ ರಕ್ಷಿಸಲೆಂತೆಂಬೆನೊಅಕ್ಷರ ಪುರುಷ ಅಪ್ರಾಕೃತನ ತೋರಿ ಮದ ಮತ್ಸರವ ಬಿಡಿಸೆಂಬೆನೊ ||ಸೂಕ್ಷ್ಮಾಂಬರಧರ ಮೋಹನ ವಿಠಲನಈ ಕ್ಷಣದಿ ತೋರಿಸೆಂಬೆನೊ ನಾನು 3
--------------
ಮೋಹನದಾಸರು
ಶ್ರೀಪತಿಯ ನೈವೇದ್ಯ ಕೊಡುವದು ಧೂಪದಾಂತರ ಭೂಮಿಶೋಧನ ಆಪದಿಂ ಮಂಡಲವ ಮಾಡುತ ರಂಗವಲಿ ಹಾಕಿ ಸೂಪ ಅನ್ನವು ಅಗ್ನಿಕೋಣದಿ ಆ ಪರಮ ಅನ್ನವನು ಈಶಾ ನ್ಯಾಪೆಯಾಲೇಹಗಳ ನೈರುತದಲಿ ಇಟ್ಟು ತಥಾ 1 ವಾಯುದಿಶದಲಿ ಉಪಸುಭೋಜ್ಯವು ವಾಯಸಾನ್ನದ ಮಧ್ಯ ಘೃತಸಂ ಸ್ತೂಯಮಾನ ನಿವೇದನವು ಈ ಕ್ರಮದಿ ಹೀಂಗಿಟ್ಟು ಬಾಯಿಯಿಂದಲಿ ದ್ವಾದಶ ಸ್ತುತಿ ಗಾಯನದಿ ನುಡಿಯುತಲಿ ಈ ಕಡೆ ಆಯಾ ಅಭಿಮಾನಿಗಳು ದೇವತೆಗಳನು ಚಿಂತಿಸುತ 2 ಓದನಕ ಅಭಿಮಾನಿ ಶಶಿಪರ ಮೋದನಕ ಅಭಿಮಾನಿ ಭಾರತಿ ಆದಿವಾಕರ ಭಕ್ಷ ಕ್ಷೀರಾಬ್ಧೀಜೆ ಸರ್ಪಿಯಲಿ ಸ್ವಾದುಕ್ಷೀರಕ ವಾಣಿ ಮಂಡಿಗಿ ಲೀ ದ್ರುಹಿಣನವನೀತ ಪವನಾ ದಾದಧಿಗೆ ಶಶಿವರುಣ ಸೂಪಕೆ ಗರುಡ ಅಭಿಮಾನಿ 3 ಶಾಕದಲಿ ಶೇಷಾಮ್ಲ ಗಿರಿಜಾ ನೇಕನಾಮ್ಲದಿ ರುದ್ರಸಿತದಲಿ ಪಾಕಶಾಸನ ಶೇಷುಪಸ್ಕರದಲ್ಲಿ ವಾಕ್ಪತಿಯೂ ಈ ಕಟು ಪದಾರ್ಥದಲಿ ಯಮ ಬಾ ಹ್ಲೀಕ ತಂತುಭದಲ್ಲಿ ಮನ್ಮಥ ನೇಕ ವ್ಯಂಜನ ತೈಲ ಪಕ್ವದಿ ಸೌಮ್ಯನಾಮಕನೂ 4 ಕೂಷುಮಾಂಡದ ಸಂಡಿಗಿಲಿ ಕುಲ ಮಾಷದಲಿ ದಕ್ಷ ಪ್ರಜಾಪತಿ ಮಾಷ ಭಕ್ಷದಿ ಬ್ರಹ್ಮಪುತ್ರನು ಲವಣದಲಿ ನಿಋತಿ ಈ ಸುಫಲ ಷಡ್ರಸದಿ ಪ್ರಾಣ ವಿ ಶೇಷ ತಾಂಬೂಲದಲಿ ಗಂಗಾ ಆ ಸುಕರ್ಮಕೆ ಪುಷ್ಕರನು ಅಭಿಮಾನಿ ದೇವತೆಯೂ 5 ಸಕಲ ಭಕ್ಷ್ಯಗಳಲ್ಲಿ ಉದಕದಿ ವಿಶ್ವ ಮೂರುತಿ ಮುಖದಲೀ ನುಡಿ ಅಂತಿಲೀ ಶ್ರೀ ಕೃಷ್ಣ ಮೂರುತಿಯ ನಖ ಚತು ಪದಾರ್ಥದಲಿ ಆ ಸ ಮ್ಯಕು ಚತುರವಿಂಶತಿ ಅಭಿಮಾ ನಿಕರ ಚಿಂತಿಸಿ ಸರ್ಪಿ ಸಹ ಶ್ರೀ ತುಳಸಿಯನು ಹಾಕಿ6 ಕ್ಷೀರ ದÀಧಿ ಕರ್ಪೂರ ಸಾಕ ರ್ಜೀರ ಪನಸ ಕಪಿಥ್ಥ ಪಣ್ಕದ ಳೀರಸಾಲ ದ್ರಾಕ್ಷ ತಾಂಬೂಲದಲಿ ಚಿಂತನೆಯೂ ಪೂರ ಶಂಖದಿ ಉದಕ ಓಂ ನಮೊ ನಾರೆಯಣಾ ಅಪ್ಟಾಕ್ಷರವು ತನ ಮೋರೆ ಮುಚ್ಚಿ ಶತಾಷ್ಟವರ್ತಿಲಿ ಮಂತರಿಸಿ ತೆರೆದೂ7 ಸೌರಭೀ ಮಂತ್ರದಲಿ ಪ್ರೇಕ್ಷಿಸಿ ಮೂರೆರಡು ಮೊದಲಾಗಿ ಶಂಖವು ಅಂತಿಮಾಡಿ ತಥಾ ಪೂರ್ವ ಆಪೋಶನವು ಹೇಳಿ ಅ ಪೂರ್ವ ನೈವೇದ್ಯವು ಸಮರ್ಪಿಸಿ ಸಾರ್ವಭೌಮಗ ಉತ್ತರಾಪೋಶನವು ಹೇಳಿ ತಥಾ 8 ಪೂಗ ಅರ್ಪಿಸಿದಂತರದಿ ಅತಿ ಬ್ಯಾಗದಲಿ ಲಕ್ಷ್ಯಾದಿ ನೈವೇ ದ್ಯಾಗ ಅರ್ಪಿಸಿ ತಾರತಮ್ಯದಿ ಉಳಿದ ದೇವರಿಗೆ ಸಾಗಿಸೀ ಶ್ರೀ ಹರಿಯ ಸಂಪುಟ ದಾಗ ನಿಲ್ಲಿಸಿ ವೈಶ್ವದೇವವು ಸಾಗಿಸೀ ಶ್ರೀ ವಿಜಯವಿಠಲನ ಧೇನಿಸುತ ಮುದದಿ9
--------------
ವಿಜಯದಾಸ
ಶ್ರೀಮಾಧವ ಪಾದವ ಸಂತತ ಮನದಿ ನೇಮದಿ ಧ್ಯಾನಿಸು ನೀ ಪ ಪ್ರೇಮಮೂರ್ತಿಯನೆನೆವರಾರಾದರೇನಯ್ಯ ಸ್ವಾಮಿತಾನವರನು ಸರ್ವತ್ರ ಸಲಹುವನು ಅ.ಪ ಮದಗಜವನುಸರದಿ ಮೊಸಲೆಯನು ತಾನು ಅಧಿಕ ಕಷ್ಟವ ಗೊಳಸೆ ಪದುಮನಾಭ ನೀನೆ ಪೊರೆಯಬೇಕೆನ್ನಲು ಮುದದಿಂದಲೊದಗುತ್ತ ಸೌಖ್ಯವ ತೋರಿದೆ 1 ತರಳನಾದ ಧ್ರುವನು ಪ್ರಹ್ಲಾದನು ಶರಣೆಂದು ಮೊರೆವೋಗಲು ಸರಸಿಜಾಕ್ಷ ಶ್ರೀಶ ತ್ವರಿತದಿಂದಲಿ ಬಂದು ಕರುಣದಿ ಕರೆದೆತ್ತಿಕೊಂಡು ಮುದ್ದಾಡಿದ 2 ಮಾನಿನಿ ದ್ರೌಪದಿಯು ತನ್ನಯ ಘನ ಮಾನಭಂಗದ ಕಾಲದಿ ದೀನರಕ್ಷಕ ಕೃಷ್ಣ ದಾನವಾರಿಯೆನೆ ಸಾನುರಾಗದಿಂದಲಕ್ಷಯ ವರವಿತ್ತ3 ಅಜಮಿಳ ಬಹುಪಾಪದಿ ಮೆರೆಯುತಲಿದ್ದು ನಿಜಸುಖ ಮರೆತಂತ್ಯ ಕಾಲದಿ ಬಜಬಜಿಸುತಮಗನನು ಹೆಸರೆತ್ತಲು ಭಜನೆಯಾಯ್ತು ನಾರಾಯಣ ನಾಮವು 4 ವಿದುರನುಧ್ದವನರ್ಜುನ ಕುಚೇಲನು ಮೊದಲಾದ ಭಕ್ತರೆಲ್ಲ ಹೃದಯದಿ ಬಚ್ಚಿಟ್ಟು ನಿರುತ ಪೂಜೆಯ ಮಾಡೆ ಪದವಿಯಿತ್ತು ಕಾಯ್ದ ಜಾಜಿಯೀಶನ5
--------------
ಶಾಮಶರ್ಮರು
ಶ್ರೀಮೋದವಿಠಲದಾಸರ ಸ್ತೋತ್ರ ಮೋದವಿಠಲದಾಸರಾಯ ನಿನ್ನ ಪಾದವನಂಬಿದೆ ಪಾಲಿಪುದಯ್ಯ ಪ ಭೇದಮತಾಬ್ಧಿ ಪಾಠಿನ ಆದು - ರ್ವಾದಿಮಾಯಿಗಳಿಗೆ ಗಂಟಲಗಾಣ ಸಾಧುಜನರ ಪಂಚಪ್ರಾಣನೆನಿಪ ಮೇದಿನಿಯೊಳು ಹರಿಭಕ್ತ ಪ್ರವೀಣ 1 ಗುರುಪ್ರಾಣೇಶದಾಸರಲಿ ಜ್ಞಾನ ವರ ಉಪದೇಶವ ಕೊಂಡು ಭಕ್ತಿಯಲಿ ವರದೇಂದ್ರಾರ್ಯರ ಸನ್ನಿಧಿಯಲಿ ಸತತ ಹರಿಭಜನೆಯ ಮಾಳ್ಪ ನಲಿನಲಿಯುತಲಿ 2 ಸ್ನಾನಸಂಧ್ಯಾದ್ಯನುಷ್ಠಾನವನು ಙÁ್ಞನಪೂರ್ವಕದಿ ಚರಿಸುವ ನಿಧಾನ ಹೀನಜನಗಳಲ್ಲಿ ಮೌನ ನಿರುತ ಶ್ರೀನಿವಾಸನ ಮನದಲಿ ಮಾಳ್ಪ ಧ್ಯಾನ 3 ಬಾಲ್ಯತನದಿ ನಿಮ್ಮಾಜ್ಞ್ಞವನು ಮೀರಿ ಕಾಲಕಳೆದೆ ದುರ್ವಿಷಯದಿ ನಾನು ಶ್ರೀಲೋಲನಂಘ್ರಿ ಮರೆದೆನು ಮುಂದೆ ಪಾಲಿಸೆನ್ನಯ ಮೊರೆ ಶರಣು ಬಂದಿಹೆನು 4 ಶ್ರೀ ಮರುನ್ಮತಙÁ್ಞನವನು ನಮ್ಮ ಸ್ವಾಮಿ ವರದÉೀಶವಿಠಲನ ದಾಸ್ಯವನು ಆ ಮುನಿವರನ ಸೇವೆಯನು ಕೊಟ್ಟು ನೀ ಮುದದಲಿ ಕರುಣಿಸು ಸುರಧೇನು5
--------------
ವರದೇಶವಿಠಲ
ಶ್ರೀವಿನಾಯಕ ಪಿನಾಕಿ ಸುತ ಜಗ ದೇಕನಾಥನ ನಾಭಿಮಂದಿರ ಲೇಖಕಾಗ್ರಣಿ ವಿಷ್ಣುಕೀರ್ತನ ಮಾನಿ ಸಾಧಕನೆ ಪರಾಕು ನುಡಿಯುವೆ ನೂಕಿ ವಿಘ್ನವ ಸಾಕು ನಮ್ಮನು ನೋಕನೀಯನ ಭಜಿಸಲನುವಾಗೆಂದು ಬೇಡುವೆನು 1 ಕಾಣೆ ನಿನಗೆಣೆ ಮೂರುಲೋಕದಿ ಮಾನ್ಯನಾಗಿಹೆ ಸರ್ವರಿಂದಲು ಶ್ರೀನಿಧಿಯ ದಯದಿಂದ ಪ್ರಾಣಾವೇಶಸಂಯುತನೆ ಧ್ಯಾನ ಮಾಡುವೆ ವಿಶ್ವತೈಜಸ ನನ್ನು ಮಹದಾಕಾಶಮಾನಿಯೆ ಆನತಾಮರಧೇನು ಸಿದ್ಧಿವಿನಾಯಕನೆ ನಮಿಪೆ 2 ದೈತ್ಯಗಣಗಳಿಗಿತ್ತು ವರವು ನ್ಮತ್ತರನು ಮಾಡುತಲಿ ಶ್ರೀಪುರು ಷೋತ್ತಮನ ಸೇವಿಸುವೆ ವಿದ್ಯಾಧೀಶ ಸುಖಭೋಕ್ತ ಮಾತರಿಶ್ವನ ದಾಸರಿಗೆ ಹರಿ ಭಕ್ತಿ ವಿಷಯ ವಿರಕ್ತಿ ನೀಡುವೆ ಶಕ್ತಿ ನೀ ನಾಲ್ಕೆರಡು ಕಲ್ಪದಿ ಸಾಧಿಸಿರೆ ಪದವಿ 3 ವಕ್ರ ತುಂಡನೆ ನೀಗಿಸೆನ್ನಯ ವಕ್ರಬುದ್ಧಿ ವಿವೇಕನೀಡುತ ದಕ್ಕಿಸೈ ಶಾಸ್ತ್ರಾರ್ಥ ಚಯನವ ಚಾರುವಟು ಗಣಪ ರಕ್ತಗಂಧಪ್ರೀಯ ಸೋಮನ ಸೊಕ್ಕು ಮುರಿದೆಯೊ ಭೂಪ ಭಕ್ತಿಯ ಉಕ್ಕಿ ಸೈ ಹರಿಯಲ್ಲಿ ತವಕದಿ ಮಂಗಳಪ್ರದನೆ 4 ರಂಗ ಮಂದಿರ ದಕ್ಷಿಣಸ್ಥವಿ ಹಂಗಗಮನನ ರಾಣಿ ರುಕ್ಮಿಣಿ ಯಂಗದಲಿ ಪುಟ್ಟುತಲಿ ದಿತಿಜಾಂತಕನೆನಿಸಿಕೊಂಡು ಗಂಗೆಪಿತನನು ಸೇವಿಸಿದೆ ಮಾ ತಂಗಮುಖ ಮಹಕಾಯ ನಾರೀ ಸಂಗವರ್ಜಿತ ಬೀರು ಕರುಣಾಪಾಂಗ ದೃಷ್ಟಿಯನು 5 ಮೊದಲು ಪೊಜೆಯ ನಿನಗೆ ವಿಹಿತವು ವಿಧಿ ಭವಾದ್ಯರ ಪೊರೆವ ವಿಶ್ವನು ಮುದದಿ ನೀಡಿಹ ವರವ ಸಿದ್ಧಿಯ ಕೊಡುವೆ ಭಕ್ತರಿಗೆ ಮದದಿ ಬಿಡುವರಿಗೆಲ್ಲ ಖೇದವೆ ಒದಗಿ ಬರ್ಪುದು ಬಾಗಿ ಭಜಿಸುವೆ ಸದಯನಾಗುತ ವಿಷ್ಣು ಭಕ್ತರ ಸಂಗ ನೀಡೆನಗೆ 6 ವ್ಯಾಪ್ತ ದರ್ಶಿಯೆ ವಂದಿಸುವೆ ಪರ ಮಾಪ್ತ ಹರಿ ಭಕ್ತರಿಗೆ ನೀನಿಹೆ ಸೂಕ್ತ ಸಾಧನೆ ಗೈಸು ಖೇಶನೆ ಸೋಮಪಾನಾರ್ಹ ಆರ್ತನಿಹೆ ಬಹುಮೂಢ ಖರೆವೇ ದೋಕ್ತಮರ್ಮವ ಭಾಸಗೈಸಿ ಕೃ ತಾರ್ಥನೆನಿಸೈ ಮೃದ್ಭವ ವಿರೂಪಾಕ್ಷ ತತ್ವೇಶ 7 ಬರೆದೆ ಭಾರತ ವೇದವ್ಯಾಸರ ಕರುಣದಿಂದಲಿ ಭಕ್ತಿಯೋಗಿಯೆ ಶರಣು ಶೇಷಶತಸ್ಥರಿಗೆ ಗುರುವಿರ್ಪೆ ಹೇರಂಭ ದುರಳ ಗಣಗಳ ಕಾಟತಪ್ಪಿಸಿ ಹರಿಗೆ ಸಮ್ಮತವಿಲ್ಲ ದೆಡೆಯಲಿ ಮರುಳುಗೊಲ್ಲದ ಮನವು ನನಗಿರಲೆಂದು ಹರಸೆಂಬೆ 8 ಜಯಜಯತು ವಿಶ್ವಂಭರ ಪ್ರೀಯ ಜಯಜಯವು ಮೈನಾಕಿತನಯಗೆ ಜಯಜಯವು ಶ್ರೀಕೃಷ್ಣವಿಠ್ಠಲನ ದಾಸವರ್ಯನಿಗೆ ಜಯಜಯವು ಸದ್ವಿದ್ಯೆಕೋಶಗೆ ಮೀನಾಂಕ ಭ್ರಾತೃವೆ ಜಯಜಯವು ವಿಘ್ನೇಶ ಮಂಗಳಮೂರ್ತಿ ಗಣಪನಿಗೆ 9
--------------
ಕೃಷ್ಣವಿಠಲದಾಸರು
ಶ್ರೀಶನ ಸತಿಯರ ಹಾಸ್ಯವ ಮಾಡುತ ಸೋಸಿಲೆ ಕೋಲಹೊಯ್ದೇವ ಕೋಲ ಪ. ಧಿಟ್ಟೆ ನಾನೆಂಬೋದು ಸೃಷ್ಟಿಕರ್ತನೆ ಬಲ್ಲಗಟ್ಯಾಗಿ ನಿನ್ನ ಗುಣಗಳಗಟ್ಯಾಗಿ ನಿನ್ನ ಗುಣಗಳ ವರ್ಣಿಸಲು ಸಿಟ್ಟು ಬಂದಿತು ಸಭೆಯೊಳು1 ಗಂಡನ ಬಳಗವ ಕಂಡರೆ ನಿನಗಾಗದುಲೆಂಡರ ಮನೆಗೆ ನಡೆದ್ಹೋಗಿಲೆಂಡರ ಮನೆಗೆ ನಡೆದ್ಹೋಗಿ ಸೇರಿದ್ದುಪಂಡಿತರು ಕಂಡು ನಗುತಾರೆ 2 ಘಟ್ಯದೆಗಾರಳು ಪೆಟ್ಟಿಗಂಜುವಳಲ್ಲಎಷ್ಟು ಧೈರ್ಯವೆ ಎಲೆನಾರಿಎಷ್ಟು ಧೈರ್ಯವೆ ಎಲೆನಾರಿ ನಿನ್ನ ಕೂಡಕೃಷ್ಣ ಕಡಿ ಬೀಳೋ ತೆರನಂತೆ 3 ಮುದದಿಂದಲೆ ದ್ವಾರಕಾಸದನದೊಳಗ್ಹೋಗಿಕದನವ ಹೂಡಿ ಕೆಡಿಸುವೆಕದನವ ಹೂಡಿ ಕೆಡಿಸುವೆ ನಿನ್ನಗುಣಕೆಮದನನಯ್ಯನೆಂತು ಮನಸೋತ4 ಹಲವು ರಾಯರ ಗೆದ್ದ ಬಲುಧೀರರೆಲ್ಲನಿನ್ನ ಬಲೆಯೊಳು ಬಿದ್ದು ಬಳಲೋರುಬಲೆಯೊಳು ಬಿದ್ದು ಬಳಲೋರು ಇದ ಕಂಡುಬಲರಾಮ ತಾನು ನಗುತಾನ5 ಸುರರು ಜರಿದು ನಾರಿಹರಿಯು ಗುಣಪೂರ್ಣ ನೆನುತಲೆಹರಿಯು ಗುಣಪೂರ್ಣ ನೆನುತಲೆ ಮಲ್ಲಿಗೆಸರವ ಹಾಕಿದಿಯೆ ಕೊರಳಿಗೆ 6 ಕೇಳೆ ರುಕ್ಮಿಣಿ ನಿನ್ನ ಭಾಳ ಚಾಪಲ್ಯ ನೋಡಿಹೇಳ ಕೇಳದಲೆ ಹಿರಿಯರಹೇಳ ಕೇಳದಲೆ ಹಿರಿಯರ ಕೃಷ್ಣಯ್ಯಭೋಳೆ ತನದಿಂದ ಮದುವ್ಯಾದ 7 ಗಂಡನ ಎದುರಿಗೆ ಗಂಡುಗಚ್ಚಿಯ ಕಟ್ಟಿಗಂಡಸಿನಂತೆ ಧನುವೆತ್ತಿಗಂಡಸಿನಂತೆ ಧನುವೆತ್ತಿ ಕಾದಿದಬಂಡುಗಾರತಿಯೆನಿನ ತಂಗಿ8 ಅಕ್ಕ ತಂಗಿಯರ ಶೌರ್ಯ ಶಕ್ಯವೆ ವರ್ಣಿಸಲುನಕ್ಕು ನಾರಿ ಸರಿಯವರುನಕ್ಕು ನಾರಿ ಸರಿಯವರು ರಾಮೇಶಗೆತಕ್ಕವರೇನೆ ಮಡದಿಯರು ಕೋಲ9
--------------
ಗಲಗಲಿಅವ್ವನವರು
ಶ್ಲೋ||ಶª-Àುದಮ ಸಹಿತೇನಸ್ವಾನುಭಾವೇನ ನಿತ್ಯಂಸಮಮತಿಮನುಯವ್ಯಣ ಸರ್ವದಾ ಸೇವಕಾನಾಂಯಮ ನಿಯಮ ಪರಾಣಾಮೇಕ ತತ್ಪಾದರಾಣಾಮಮಿತನಿಜ ಮಹಿಮ್ನಾ ದೇಶಿಕೇಂದ್ರೊ ವಿಭಾತಿಯೇನು ವಿಚಿತ್ರ ಪೇಳೆ ಯೇ ಮತಿಯೆ ನಿದಾನವನೆನ್ನೊಡನೆಮಾನಸ ವೃತ್ತಿಯಾತ್ಮನ ಕೂಡಿಬರಲೊಂದು ಗಾನ ತೋರುವುದಿದೇನೆ ಪಎಲ್ಲವನುಳಿದೀಗಲೂ ಬಗೆಗೊಂಡು ಮುದದಿಂದ ಬಂದು ನಿಂದುಸಲ್ಲಲಿತಾನಂದ ಪದವ ನೋಡುವೆನೆಂದು ಸವರಿಸಿ ಬರಲು ಮುಂದುಇಲ್ಲ ಮತ್ತೊಂದಾತ್ಮನಿಂದಧಿಕವೆಂದು ನಿಲ್ಲದೆ ಧ್ಯಾನಿಸಲುಝಲ್ಲನೆ ಜಲಧಿಯ ಮೊರವಿನಂದದಿ ತೋರಲಲ್ಲಿ ನಾ ಬೆರಗಾದೆನು 1ಅಂಜದೆ ಚಿಂತಿಸಲು ಮುರಜ ಭೇರಿ ಮಂಜುಳ ವೀಣೆಗಳಸಿಂಜಿತಗಳು ಮೇಘನಾದ ಮುಂತಾದವು ಸಂಜನಿಸಿದವೊಳಗೆರಂಜನೆುಂದವನು ಕೇಳುತ ಹೃತ್ಕಂಜದೊಳ್ಬೋಧೆಯೆಂಬಅಂಜನವಚ್ಚಲು ಬಿಂದು ಪೊಳೆುತು ನಿರಂಜನ ರೂಪಿನಲಿ 2ಮತ್ತೆ ಮುಂದೆ ನೋಡಲು ಬಿಂದುವೆಂಬುತ್ತಮ ಹಿಮಕರನಕತ್ತಲೆಗವಿದುದು ಅದ ನೋಡುತ ಮನ ತತ್ತರಿಸಿತು ನಿಲ್ಲದೆಚಿತ್ತವನಲುಗದೆ ಗುರುಪಾದವ ಧೃತಿವೆತ್ತು ಚಿಂತಿಸುತಿರಲುಕತ್ತಲೆ ಪರಿದು ಕಳಾ ವಿಶೇಷ ನೋಡಲೆತ್ತಲೆತ್ತಲು ತುಂಬಿತು 3ಛಂದದಿತೇಜವನು ನೋಡುತಲದರಿಂದಲಧಿಕ ಸುಖವೂಮುಂದೆ ಪುಟ್ಟಲದರನುಭವದಲಿ ಹಿಗ್ಗಿ ನಿಂದು ಜುಂಮುದಟ್ಟಲುಎಂದೆಂದು ಕಾಣದ ಸುಖದೊಳು ಮನ ಬಳಿಸಂದು ಲಯವನೈದಲುಒಂದಲ್ಲದೆರಡಿಲ್ಲದ ನಿಜ ನಿತ್ಯಾನಂದವೆ ನಾನಾದೆನೂ 4ತಾಪತ್ರಯಗಳಡಗಿ ಕರ್ಮಕಲಾಪವಿಲ್ಲದೆ ಪೋದುದುಗೋಪಾಲಾರ್ಯರ ಕೃಪೆುಂದ ಭವಬಂಧವೀ ಪರಿ ಬಯಲಾದುದುವ್ಯಾಪಾರವೆಲ್ಲವನಿತ್ಯವಾದವು ನಿರ್ಲೇಪತೆಯೆನಗಾದುದುದೀಪಿತ ವಿಜ್ಞಾನ ರತ್ನವೆಂದೆನಿಸುವ ದೀಪ ಸುಸ್ಥಿರವಾುತೂ 5
--------------
ಗೋಪಾಲಾರ್ಯರು
ಷೋಡಶೋಪಚಾರ ಪೂಜೆಪೂಜಿಸುವೆನನವರತ ಪರಮ ಪುರುಷನನುನೈಜ ಮೂರ್ತಿಯನೀಗಲಭಿಮುಖಿಸಿ ನಿರ್ಗುಣದಿ ಪಹೃದಯಕಾಶಿಯಲಿಪ್ಪ ಜ್ಞಾನಗಂಗೆಯ ಮಿಂದುಮೃದುತರದ ಸತ್ವಗುಣವೆಂಬ ನಿತ್ಯಕರ್ಮವ ಮಾಡಿಒದಗಿ ಶಮೆದಮೆಯೆಂಬ ನಿತ್ಯಕರ್ಮವ ಮಾಡಿಮುದದಿಂದ ಪರಮಾತ್ಮನಿಹ ಮಂದಿರಕೆ ಬಂದು1ಧ್ಯಾನಪ್ರಣವ ಮಂಟಪದಲ್ಲಿ ಕನಕಮಯ ಪೀಠವನುತನುಕರಣಮನಃಪ್ರಕೃತಿ ಯೆಂಬ ನೆಲೆಗಳನುಅನುಕೂಲದಿಂ ರಚಿಸಿ ಸಚ್ಚಿದಾನಂದನನುಮನದಲ್ಲಿ ಧ್ಯಾನವನು ಬಳಿಕೀಗ ಮಾಡುವೆನು2ಆವಾಹನ-ಆಸನ-ಪಾದ್ಯದೇಶಕಾಲಾತೀತ ಪರಿಪೂರ್ಣನಾಗಿರುವವಾಸುದೇವನನೊಮ್ಮೆಯಾವಾಹಿಸುವೆನುಆಸನವನೀವೆ ಸರ್ವಾಧಾರವಸ್ತುವಿಗೆದೋಷರಹಿತನ ಪಾದಗಳ ತೊಳೆವೆನೊಲವಿನಲಿ 3ಅಘ್ರ್ಯ-ಆಚಮನ-ಮಧುಪರ್ಕಬೆಲೆರಹಿತಗಘ್ರ್ಯವನು ನೆರೆಕೊಟ್ಟು ಕರಗಳಿಗೆಸಲಿಲದಿಂ ಶುದ್ಧನಿಗೆ ಶುದ್ದಾಚಮನವಸಲಿಸಿ ಮಧುಪರ್ಕವನು ಕ್ಷೀರಸಾಗರಗಿತ್ತುವಿಲಯಾದಿ ಪಂಚಪದಗೆರೆದು ಪಂಚಾಮೃತವ 5ಸ್ನಾನ-ವಸ್ತ್ರಸ್ಮರಿಸಿದರೆ ಸಂಸಾರಮಲವಳಿವ ಮಹಿಮನಿಗೆಸುರನದಿಯ ಪಡೆದವನಿಗಭಿಷೇಕಗೊಳಿಸಿನಿರತ ದಿಗ್ವಸ್ತ್ರನಿಗೆ ವರದುಕೂಲವನುಡಿಸಿಕರಣ ಪ್ರೇರಕನಿಗುಪವೀತದುಪಚಾರದಲಿ 5ಆಭರಣಅಷ್ಟವಿಧಗಂಧವನು ಅಷ್ಟಮದ ರಹಿತನಿಗೆನಿಷ್ಠೆುಂ ಭಕ್ತಿರಸದಿಂದ ಹದಗೊಳಿಸಿಅಷ್ಟ ವಿಧಮೂರುತಿಗೆ ಮುಟ್ಟ ಲೇಪವ ಮಾಡಿದುಷ್ಟಮದವನು ಕುಟ್ಟಿ ದಿವ್ಯ ಕುಂಕುಮವಿಟ್ಟು 7ಪುಷ್ಪ-ಧೂಪ-ದೀಪ-ನೈವೇದ್ಯ-ತಾಂಬೂಲಪರಿಪರಿಯ ಪುಷ್ಪಗಳ ನಿರ್ವಾಸನಗೆ ತಿಮಿರಹರಪ್ರಭಗೆ ಧೂಪದೀಪಂಗಳನು ಬೆಳಗಿಪರಿಪೂರ್ಣಕಾಮನಿಗೆ ಷಡುರಸಾನ್ನವನಿತ್ತುಪರಮ ಮಂಗಳಗೆ ತಾಂಬೂಲದುಪಚಾರದಲಿ 8ಕೋಟಿಸೂರ್ಯಪ್ರಭಗೆ ಕೋಟಿವರ್ತಿಗಳುಳ್ಳಮೀಟಾದ ಮಂಗಳಾರತಿಯ ಪಿಡಿದೆತ್ತಿಕೋಟಿ ಮೂವನ್ಮೂವರೂರ ಪುಷ್ಪವ ಚಂದ್ರಜೂಟಸಖ ತಿರುಪತಿಯ ವೆಂಕಟನ ಪದಕಿತ್ತು 9ಓಂ ಶ್ರೀಶಾಯ ನಮಃ
--------------
ತಿಮ್ಮಪ್ಪದಾಸರು
ಸಂಕ್ಷಿಪ್ತ ವಿರಾಟಪರ್ವ ಕೇಳು ಜನಮೇಜಯರಾಜ ಭೂಮಿ- ಪಾಲ ಪಾಂಡವರ ಸತ್ಕಥೆಯಪ. ಭೂರಿ ವ- ನಾಳಿಯನು ಸಂಚರಿಸಿ ಸಜ್ಜನ ಕೇಳಿಯಲಿ ವನವಾಸದವಧಿಯ ಕಾಲವನು ಕಳೆಕಳೆದು ಬಂದರುಅ.ಪ. ದರ್ವೀಧರಹಸ್ತನಾಗಿ ಮಹಾ ಪರ್ವತದಂತುರೆ ಮಸಗಿ ನಿರ್ವಹಿಸಿ ಸೂದತ್ವವನು ಸಲೆ ಗರ್ವಿತಾಧಮ ಕೀಚಕನ ಕುಲ ಸರ್ವವನು ಸಂಹರಿಪ ಭೀಮ ಪೆ- ಸರ್ವಡೆದ ಗುರುವರ್ಯ ಬಂದನು 1 ಕಡುಗಲಿ ಕಲಿಮಲಧ್ವಂಸ ಎದ್ದು ನಡೆದು ಬಂದನು ಪರಮಹಂಸ ನಿಡುಕಿ ಮನದಿ ವಿರಾಟರಾಯನ ಪೊಡವಿಗಿಡೆ ಪದ ಕೀಚಕಾಖ್ಯನ ಎಡದ ಭುಜ ಕಂಪಿಸಿತು ಮೂಜಗ ದೊಡೆಯನುಡುಪತಿಕುಲಶಿಖಾಮಣಿ2 ಗಂಗಾದಿ ನದಿಗಳ ತೀರ ಪಟ್ಟ ಣಂಗಳ ಗೈದ ಸಂಚಾರ ತುಂಗಬಲ ಮಲ್ಲರುಗಳನು ಸಲೆ ಸಂಘಟಿಸಿ ಜೀಮೂತವೀರಪ್ಪ ಸಂಗದಲಿ ವೈರಾಟಪುರ ರಾ ಜಾಂಗಣಕೆ ಭದ್ರಾಂಗ ಬಂದನು3 ಇಂತು ಮಲ್ಲರನೆಲ್ಲ ಸದೆದು ಬಲ ವಂತರಿರಲು ನೃಪಗೊಲಿದು ಸಂತಸವ ಬಡಿಸುತ್ತಲಿರಲ್ವಾ ಕುಂತಿತನಯರು ಹರಿಯ ನಾಮವ ಚಿಂತಿಸುತ ದಶಮಾಸ ಕಳೆದಾ ನಂತರದ ವೃತ್ತಾಂತವೆಲ್ಲವ4 ಕಥೆಯಂತೆ ಹಿಂದೆ ರಾವಣನ ಕೆಟ್ಟ ಗತಿಗನುಚರ ಕೀಚಕನ ಸ್ಥಿತಿಯು ದ್ರುಪದಜೆಗಾದ ಮಾನ ಚ್ಯುತಿಗೆ ಕಾರಣನಾದ ಜಡ ದು- ರ್ಮತಿ ಖಳಾಧಮನೊಂದು ದಿನ ನೃಪ ಸತಿಸಭೆಗೆ ಅತಿ ಹಿತದಿ ಬಂದನು5 ಪಾಪಿ ಕೀಚಕನಿಗಿಂತುಸುರಿ ದ್ರುಪದ ಭೂಪಾಲಕನ ಕಿಶೋರಿ ಶ್ರೀಪತಿಯ ನಾಮವನು ಸ್ಮರಿಸುತ- ಲಾ ಪತಿವ್ರತೆ ತೊಲಗಲಂಗಜ ತಾಪತಪ್ತಾಂತಃಕರಣ ನಾ ಪರಿಯ ಮತಿ ವ್ಯಾಪಿಸಿದನು6 ಲಾಲಿಸಿ ಮಾಲಿನಿವಚನ ತೋಷ ತಾಳಿದ ದುರ್ಗುಣಸದನ ಕಾಲಪಾಶದಿ ಬಿಗಿವಡೆದು ಹೇ- ರಾಳ ಮುದಕೀಲಾಲ ಸಲೆ ಕ- ಲ್ಲೋಲಜಾಲದಿ ಮುಳುಗಿ ನರ್ತನ ಶಾಲೆಗಾಗಿ ಕರಾಳ ಬಂದನು7 ಮಥಿಸಿ ಕೀಚಕನ ಮಂಟಪದಿ ದ್ರುಪದ ಸುತೆಗೆ ತೋರಿಸಲತಿ ಮುದದಿ ಸತಿಶಿರೋಮಣಿ ಕಂಡು ಮನದೊಳ- ಗತುಳ ಹರುಷವನಾಂತು ಸರ್ವೋ ನ್ನತಭುಜನ ಚುಂಬಿಸಿದಳು ಪತಿ ವ್ರತೆಯರ ಶಿರೋರತುನೆ ಪಾವನೆ8 ಇತ್ತ ವಿರಾಟನಗರದ ಸರ್ವ ವೃತ್ತಾಂತವೆಲ್ಲವ ತಿಳಿದ ಧೂರ್ತ ದುರ್ಯೋಧನ ದುರಾಗ್ರಹ ಚಿತ್ತಗ್ರಹಿಸಿದ ಕಾರ್ಯಕಾರಣ ವೃತ್ತಿಯಲ್ಲಿ ಪಾಂಡವರು ನಿಜವೆಂ- ದಾಪ್ತಜನರೊಳು ವಿಸ್ತರಿಸಿದನು9 ಕರ್ಣ ದ್ರೋಣ ಕೃಪಾ ದ್ಯರು ಕೂಡಿ ಕುಜನಪ್ರವೀಣ ಪೊರಟ ಪರಮೋತ್ಸಾಹ ಸಾಹಸ ಭರತಿ ಕೌರವರಾಯ ಮತ್ಸ್ಯನ ಪುರವರ ಸಮೀಪದಿ ಸುಶರ್ಮನ ಕರೆದೊರೆದ ಭೂವರ ನಿರ್ಧರ10 ನುಡಿಯ ಕೇಳುತಲಿ ಸುಶರ್ಮ ನಿಜ ಪಡೆಯ ನೆರಹಿ ವೈರಿವರ್ಮ ದೃಢಕರಿಸಿ ದಿನಮಣಿಯು ಪಶ್ಚಿಮ- ಕಡಲ ಸಾರುವ ಸಮಯ ಗೋವ್ಗಳ ಪಿಡಿದು ಗೋಪರ ಕೆಡಹಿ ಬೊಬ್ಬಿ- ಟ್ಟೊಡನೊಡನೆ ಪಡಿಬಲವನರಸಿದ11 ಹಾರಿಸಿದನು ರಥ ಪಾರ್ಥ ನರ ನಾರಿವೇಷದ ಪುರುಷಾರ್ಥ ತೋರಿಸುವೆನೆಂಬುತ್ಸಾಹದೊಳು ಬ್ಬೇರಿ ಮನದೊಳು ಕೃಷ್ಣನಂಘ್ರಿಸ- ರೋರುಹಕೆ ಮಣಿದುತ್ತರನ ಸಹ ಸೇರಿ ನಗರದ್ವಾರ ದಾಟಿದ12 ಭೀತಿಯ ಬಿಡು ಬಾರೆಂದು ಪುರು ಹೂತಸುತನು ಎಳತಂದು ಘಾತಿಸುವೆ ರಿಪುಬಲವನೆಂದು ವ- ರೂಥದಲಿ ಕುಳ್ಳಿರಿಸಿ ನೃಪತನು ಜಾತಸಹ ಪಿತೃವನದ ಮಧ್ಯ ಶ- ಮೀತರುವಿನೆಡೆಗೋತು ಬಂದರು13 ಇಂತು ತಿಳಿಸುತಲರ್ಜುನನು ಬಲ ವಂತನು ಧನುಶರಗಳನು ತಾಂ ತವಕದಿಂ ಧರಿಸಿ ವಿಜಯ ಮ- ಹಾಂತ ವೀರಾವೇಶಭೂಷಣ ವಾಂತು ಶಂಖನಿನಾದದಿಂ ರಿಪು ತಿಂಥಿಣಿಯ ಭಯಭ್ರಾಂತಗೊಳಿಸಿದ 14 ಹೂಡಿ ಬಾಣವನುರ್ಜುನನು ಚೆಂ- ಡಾಡಿದ ರಿಪುಬಲವನ್ನು ಮೂಢ ದುರ್ಯೋಧನನ ಕಣೆಗಳ ಜೋಡಣೆಗಳಿಂ ಬಿಗಿದು ತನ್ನೋಶ ಮಾಡಿಕೊಂಡನು ಗೋಪಗೋವ್ಗಳ ನಾಡಲೇನದ ಪ್ರೌಢತನವನು15
--------------
ತುಪಾಕಿ ವೆಂಕಟರಮಣಾಚಾರ್ಯ
ಸಖಿ ಬಾರೆ ಬಾರೆ ಬೆಡಗತೋರೆ ನಡೆದು ಬಾರೆಲೆ ಸುಖದ ಸುಗ್ಗಿಯಿದೆಂದು ಸಾರೆ ಭ್ರಮರಕುಂತಲೆ ಪ. ಜಲಜಮುಖಿಯೆ ನಲಿದುಬಾರೆ ಕೋಲವಾಡುವ ಕಲಕೀರಕಂಠದಿಂದ ನಾವು ನಲಿದು ಪಾಡುವ 1 ಇಳೆಯ ಸುಖದ ಗೆಳೆಯ ಬಂದ ಬಳಿರೆ ಬಾಪುರೆ ಬೆಳಗುತಿರ್ಪ ದೀಪಾವಳಿಯೆ ಬಲಿಯ ಕೀರ್ತಿಯೆ 2 ವಿಜಯಯಾತ್ರೆಗೆಂದು ಹರಕೆಯೆತ್ತಿ ಭರದಲಿ ಅಜಸುರಾರ್ಚಿತಾಂಘ್ರಿಯುಗನ ಭಜಿಸಿಮುದದಲಿ 3 ನೀರನೆಮಗೆ ಮಾರತಾತನೆಂದು ಸಾರುವಾ ಶಾರದಾಗಮ ಸಮಯವಿದನು ಸಾರಿಯಾಡುವಾ 4 ಶೇಷಶೈಲಶಿಖರ ಧಾಮನೆಮ್ಮ ಮೆಚ್ಚುವೋಲ್ ಮೀಸಲೆತ್ತಿಯೊಸಗೆ ಪೇಳಿ ಪೊಸತಿದೆನ್ನುವೋಲ್ 5
--------------
ನಂಜನಗೂಡು ತಿರುಮಲಾಂಬಾ
ಸಂಜೀವರಾಯ ಸಾಧುಜನಪ್ರಿಯ ಪ ಭುಂಜಿಪ ಸದ್ಭಕ್ತರ ಸೇವೆಯೊಳಿರಿಸೆನ್ನನು ಅ.ಪ ರಾಮನಾಜ್ಞೆಯಲಿ ಶರಧಿಯದಾಟುತಲಿ | ರಾವಣನ ಪಟ್ಟಣದಿ ಭೂಮಿಜಾತೆಗುಂಗುರವನು ನೀಡುತಲಿ ಆ ಮಹಾಶಿರೋ ಮಾಣಿಕ್ಯವ ಸೀ- ತಾ ಮಹಾದೇವಿಯಿಂದ ಕೈಕೊಂಡ 1 ವನವ ಕೀಳುತಕ್ಷಾದಿ ರಾಕ್ಷಸರನು ವಧಿಸಿ | ಮುದದಿ ದಶಕಂ- ಠನ ತೃಣೀಕರಿಸಿ ವರಪುರವನುದಹಿಸಿ ಇನಕುಲಂಗೆ ವಾರ್ತೆಯ ತಿಳುಹಿಸಿ ನೀ ವನಜ ಸಂಭವನ ಪಟ್ಟವ ಪಡೆದೆ 2 ಕೋಲಾಹಲನಗರ ನಿವಾಸವಗೈಯ್ವೆ ಕುಜನರನು ತರಿವೆ | ಕರು- ಣಾಲವಾಲ ಭಕ್ತರಿಗೀಪ್ಸಿತವೀವೆ ಶ್ರೀಲತಾಂಗಿಪತಿ ಗುರುರಾಮವಿಠಲ ನೋಲಗಿಸುವ ಭಾಗ್ಯವಂತರೊಡೆಯನೆ 3
--------------
ಗುರುರಾಮವಿಠಲ
ಸತತ ಹರಿಯ ನಾಮವನ್ನು ಯತುನದಿಂದ ನುಡಿವ ನರನು ಪ ಅತಿತ್ವರೆಯಲಿ ಸರ್ವಕಾರ್ಯ ಸಿದ್ಧಿಪೊಂದುವ ಅ.ಪ ದುರ್ಗಮಾರ್ಗ ಪಿಡಿದು ಕುರುಕ್ಷೇತ್ರ ಪಯಣವೇಕೆ ಜಿಹ್ವ ಯಗ್ರದಲ್ಲಿ ಹರಿಯನಾಮವಿರುವ ನರನಿಗೆ 1 ಮೂರು ಲೋಕಗಳಲಿ ಇರುವ ಹೇರು ಪುಣ್ಯಲಾಭ ಒಂದು ಸಾರಿ ಹರಿಯನಾಮದಿಂದ ಸಾಧ್ಯವಿರುವುದು 2 ಉಚ್ಚರಿಸಲು ಹರಿ ಎಂದೆರಡು ಅಕ್ಷರಗಳ ನರನು ಕ್ಷಣದಿ ಮೋಕ್ಷ ಪಾಥೇಯವನ್ನು ಸಿದ್ಧಗೊಳಿಸುವ 3 ಹರಿಯನಾಮ ಒಂದೇ ಎನಗೆ ಸರ್ವವಿಧದ ಜೀವನವು ಹರಿಯನಾಮ ಹೊರತು ಕಲಿಯೊಳರಿಯೆ ಗತಿಯನು 4 ಹರಿಯೇ ಗಂಗಾ ಹರಿಯೇ ಗಯಾ ಹರಿಯೇ ಕಾಶಿ ಸೇತು ಪುಷ್ಕರ ಹರಿಯ ನಾಮ ಜಿಹ್ವೆಯಲ್ಲಿ ಇರುವ ನರನಿಗೆ 5 ನೂಕಿ ಕಾಮಕ್ರೋಧಗಳನು ಏಕವಾರ ಹರಿಯೆಂದೆನಲು ನಾಕುವೇದಗಳನು ಓದಲೇಕೆ ಮನುಜನು 6 ಅಶ್ವಮೇಧ ಪುರುಷಮೇಧ ಯಜ್ಞಫಲವು ಲಬ್ಧವಿಹುದು ವಿಶ್ವಾಸದಿ ಹರಿಯನಾಮ ನುಡಿದ ನರನಿಗೆ 7 ಕೋಟಿ ಶತ ಗೋದಾನ ಕನ್ಯಾಭೂಮಿ ದಶಶತಕಗಳ ದಾನ ಸಾಟಿ ಹರಿಯನಾಮ ನುಡಿಯು ಭಕ್ತಜನರಿಗೆ 8 ಸಪ್ತ ಕೋಟಿ ಮಹಾಮಂತ್ರ ಚಿತ್ತ ವಿಭ್ರಮ ಕಾರಕಗಳು ಯುಕ್ತಿಯೊಂದೇ ಹರಿಯನಾಮದಕ್ಷರದ್ವಯ 9 ಮುನ್ನ ವರ ಪ್ರಹ್ಲಾದ ನುಡಿದ ಘನ್ನನಾಮ ಪಠನದಿಂದ ಪ್ರ ಸನ್ನ ಹರಿಯು ತನ್ನ ಪದವನೀವ ಮುದದಲಿ 10
--------------
ವಿದ್ಯಾಪ್ರಸನ್ನತೀರ್ಥರು