ಒಟ್ಟು 1900 ಕಡೆಗಳಲ್ಲಿ , 109 ದಾಸರು , 1384 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧ್ಯಾನವಿರಲಿ ಗುರುವೆ ನಿನ್ನಯಧ್ಯಾನವಿರಲಿ ಗುರುವೆನಿನ್ನ ನಿತ್ಯಾ ಕಾಲದಿ ಪದಧ್ಯಾನದೊಳಗೋಲಾಡುವಂತೆ ಗುರು ಚಿದಾನಂದ ಎಂಬ ಪ ಗಿರಿಯೊಳಿರಲಿ ಧರೆಯೊಳಿರಲಿಗಿರಿಯ ಗುಹೆಯ ಗೃಹದೊಳಿರಲಿಪುರದೊಳಿರಲರಣ್ಯಗಳೊಳುಚರಿಸುತಿರಲಿ ಮರೆಯದೇ 1 ಮರದೊಳಿರಲಿ ಮುಳ್ಳೊಳಿರಲಿಕೆರೆಯ ತೀರ್ಥ ಕ್ಷೇತ್ರದೊಳಿರಲಿಹರವು ಹಳ್ಳ ಕೊಳ್ಳಗಳೊಳುಹರಿವುತಿರಲಿ ಮರೆಯದೆ2 ಹಸಿವೆಯಿರಲಿ ತೃಷೆಯೊಳಿರಲಿಬಿಸಿಲು ಮಳೆ ಛಳಿಗಳೊಳಿರಲಿವಿಷಯ ವ್ಯಾಧಿ ಕಂಟಕಗಳೊಳ್ವಿಷಮವಿರಲಿ ಮರೆಯದೇ 3 ನಡೆವುತಿರಲಿ ಎಡವುತಿರಲಿನಡೆಯಲಾರದೆ ಕೆಡೆಯುತಿರಲಿಕಡುವಿರೋಧದಿಂ ಕುವಾದತಡೆಯುತಿರಲಿ ಮರೆಯದೆ 4 ಹೆಂಡೆಲಿಡಲಿ ಹೆಂಟೆಲಿಡಲಿಕಂಡ ಕಂಡದರಲಿಡಲಿಭಂಡ ಮನುಜರವರು ಏನುಮಾಡುತಿರಲಿ ಮರೆಯದೇ5 ನಿನ್ನ ಧ್ಯಾನ ಷಟ್ಸಮಾಧಿನಿನ್ನ ಧ್ಯಾನ ಮುಕ್ತಿ ನಿಲಯನಿನ್ನ ಧ್ಯಾನಕಧಿಕವಿಲ್ಲ ನಿನ್ನ ಧ್ಯಾನವೆನಗೆ ನಿತ್ಯವಿರಲಿ ಮರೆಯದೆ6 ಪಾದ ಯೋಗಿ 7
--------------
ಚಿದಾನಂದ ಅವಧೂತರು
ಧ್ಯಾನಿಸು ಶ್ರೀಹರಿಯ ಧ್ಯಾನಿಸು ಪ ಧ್ಯಾನಿಸು ಮನವೆ ಶ್ರೀ ಹರಿಯ ಪಾದ ಧ್ಯಾನವಂತರ್ಯಾಮಿ ಹರಿಯ, ಆಹ ಪ್ರಾಣಾಪಾನ ವ್ಯಾನೋದಾನ ಸಮಾನರ್ಗೆ ಪ್ರಾಣನಾಗಿಹ ಮುಖ್ಯ ಪ್ರಾಣಾಂತರ್ಗತನ ಅ.ಪ ಪರಮಾಣು ಪ್ರದೇಶದಲ್ಲಿ, ಪ್ರಾಣಿ ರಾಸಿ ಅನಂತವುಂಟಲ್ಲಿ ಹೀಗೆ ವರಲುತಿದೆ ವೇದದಲ್ಲಿ ದೃಷ್ಟಾಂ ತರವ ಪೇಳುವೆ ದೃಢದಲ್ಲಿ-ಆಹ ಪರಮ ಸೂಕ್ಷ್ಮ ವಟತರು ಫಲದಲ್ಲಿಹ ನಿತ್ಯ 1 ನಿರುತ ಸುವರಣ ಬ್ರಹ್ಮಾಂಡದಲ್ಲಿ ಪರಿಪೂರ್ಣವಾಗಿ ಅಖಂಡವಾಗಿ ಮೆರೆವುತಲಿಪ್ಪ ಮಾರ್ತಾಂಡ ದಿವ್ಯ ಕಿರಣದಂತಿರುವ ಪ್ರಚಂಡ-ಆಹ ಹೊರಗೆ ಒಳಗೆ ಹರಿ ಚರಿಸುವ ಪರಿಯ ನೀ ನರಿತು ಆವಾಗಲು ದೊರಕಿದ ಸ್ಥಳದಲ್ಲಿ 2 ಸಲಿಲ ಭೂಗಿರಿ ಲತೆ ನಾನಾ-ವೃಕ್ಷ ಮೃಗ ಪಕ್ಷಿ ಕಾನನ-ಮುಕ್ತ ಸ್ಥಳಗಳವ್ಯಾಕೃತ ಗಗನ, ತೃಣ- ಪಾವಕ ತರು ಪವನ-ಆಹ ಒಳಗೆ ಹೊರಗೆ ಎಲ್ಲ ಸ್ಥಳದಲ್ಲಿ ಹರಿಮಯ ನೆಲೆಯ ನೀ ನಲವಿಂದ ತಿಳಿದು ಆವಾಗಲು3 ವಿಶ್ವ ಮತ್ಸ್ಯಾದಿ, ತೇಜೊ ರಾಶಿ ಹಯಗ್ರೀವಾದಿ, ಜೀವ ರಾಶಿಯೊಳಿದ್ದು ಅನಾದಿ ಸರ್ವ ದೇಶ ಭೇದಿಸುವಂಥ ವೇದಿ-ಆಹ ಮೂರ್ತಿ ಶ್ರೀಶ ರಂಗನೆಂದು ನಿತ್ಯ 4 ಸಪ್ತಾವರಣ ದೇಹದಲ್ಲಿ, ದಶ ಸಪ್ತ ದ್ವಿಸಹಸ್ರ ನಾಡಿಯಲಿ, ದಶ ಸಪ್ತ ದ್ವಿಸಹಸ್ರ ರೂಪದಲಿ ಹರಿ ವ್ಯಾಪ್ತ ನಿರ್ಲಿಪ್ತ ಸ್ಥಾನದಲಿ-ಆಹ ಆಪ್ತನಂತಿಪ್ಪ ಸುಷುಪ್ತಿ ಜಾಗರದೊಳು ತಪ್ತ ಕಾಂಚನದಂತೆ ದೀಪ್ತಿಸುತಿಪ್ಪನ್ನ5 ಜೀವರಿಂದತ್ಯಂತ ಭೇದ, ಪ್ರತಿ ಜೀವಾಂತರದಲ್ಲಿ ಮೋದನಾಗಿ ಯಾವಾಗಲಿರುತಿಹ ವೇದ-ದಲ್ಲಿ ಪೇಳುವುದು ಸತ್ಯಂಭಿದಾ-ಆಹ ಈ ವಿಧ ವೇದಾರ್ಥ ಸಾವಧಾನದಿ ತಿಳಿದು ಶ್ರೀ ವಾಯುಮತದ ಸುಕೋವಿದರೊಡಗೂಡಿ 6 ಶ್ರೀಕೇಶವನೆ ಮೂಲರಾಶಿ, ಶ್ರುತಿ- ಏಕೋ ನಾರಾಯಣ ಆಸೀತ್ ನಾನಾ ಲೋಕ ಸೃಷ್ಟಿಪ ಧಾತನಾಸೀತ್, ಜಗ ದೇಕತಾರಕ ಉಪದೇಶೀ-ಆಹ ನೀ ಕೇಳಿ ನಿಗಮಾರ್ಥ ನೀಕರಿಸು ಸಂಶಯ ಏಕಮೇವ ದ್ವಿತಿಯ ಶ್ರೀಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉ- ತ್ತುಂಗ ಗುಣಾಂತರಂಗ, ಕಾ ಳಿಂಗ ಸರ್ಪನ ಮದಭಂಗ, ಭು ಜಂಗಶಯನ ಅಮಲಾಂಗ-ಆಹ ಮಂಗಳ ಇಡಾ ಪಿಂಗಳ ಸುಷುಮ್ನ ಸಂಗಡ ಮಧ್ಯದಿ ತಿಂಗಳಂತಿಪ್ಪನ್ನ 8 ಹೃದಯಸ್ಥಾನದಲಿದ್ದ ಮೂರ್ತಿ, ಬಲು ಅದುಭುತಾತನ ದಿವ್ಯಕೀರ್ತಿ, ಅದು ಪದುಮುಜಾಂಡದಿ ಪರಿಪೂರ್ತಿ ತರು ವುದಕೆ ಬೇಕು ವಾಯು ಸಾರಥಿ-ಅಹಾ ಅದು ಬಿಂಬಮೂರ್ತಿ ಜೀವದಾಕಾರಾವಾಗಿದ್ದ ಪದುಮಕೋಶದಲ್ಲಿ ಸದಮಲಾತ್ಮಕನನ್ನು 9 ಧರೆಯನಳೆದ ದಿವ್ಯ ಚರಣ, ಅದು ಮೆರೆವುತಿಹುದು ಕೋಟಿ ಅರುಣನಂತೆ ಪರಿಪೂರ್ಣ ಭರಿತವು ಕಿರಣ, ಸ್ಮರಿ- ಪರಿಗೆ ಮಾಡುವುದು ಕರುಣ-ಆಹ ತರಣಿಯಂಥ ನಖದಿ ಸುರನದಿಯನು ಹೆತ್ತ ಎರಡೈದು ಬೆರಳಲ್ಲಿ ಕಿರುಗೆಜ್ಜೆ ಪೆಂಡೆಯು 10 ಪೆರಡು ಜಾನು ಜಂಘೆ ಘನ್ನ ಸುರು- ಚಿರ ವಜ್ರಾಂಕುಶ ಧ್ವಜ ನಾನಾ, ದಿವ್ಯ ವರ ರೇಖೆಯಿಂದಲೊಪ್ಪುವನ, ಜಘನ ಪರಮ ಶೋಭಿತ ಸುಂದರನ-ಆಹ ಕದಳಿ ಕಂಬ ಇರುವೂರು ಶೋಭಿಸೆ ಸರಿಗಾಣೆ ಹರಿವುಟ್ಟ ವರ ಪೀತಾಂಬರವನ್ನು 11 ಗಜವೈರಿಯಂತಿಪ್ಪ ಮಧು ಬಲು ವಿಜಯ ವಡ್ಯಾಣ ಅಚ್ಛೇದ್ಯ, ಭೇದ್ಯ ನಿಜಘಂಟೆ ಘಣರೆಂಬೊ ವಾದ್ಯ, ಕು ಬುಜೆ ಡೊಂಕ ತಿದ್ದದನಾದ್ಯ-ಆಹ ಅಜ ಜನಿಸಿದ ನಾಭ್ಯಂಬುಜದಳ ಚತುರ್ದಶ ಕುಕ್ಷಿ ನಿಜಪೂರ್ಣ ಸಖನನ್ನು 12 ಉದರ ತ್ರಿವಳಿ ನಾನಾ ಹಾರ ದಿವ್ಯ ಪದಕ ಪವಳದ ವಿಸ್ತಾರ ರತ್ನ ಮುದದಿಂದ ಧರಿಸಿದ ಧೀರ ಸುಂದರ ವಾದ ಕಂಬುಕಂಧರ-ಆಹಾ ಪದುಮಜ ಭವರಿಂದ ತ್ರಿದಶರು ತಿಳಿಯುತ್ತ ಸದಾಕಾಲ ಧ್ಯಾನಿಪ ಹೃದಯಾಂಬರವನ್ನು 13 ಸಿರಿವತ್ಸ ಕೌಸ್ತುಭಹಾರ, ಮೇಲೆ ಸರಿಗೆ ನ್ಯಾವಳದ ವಿಸ್ತಾರ ಅಲ್ಲಿ ವೈಜಯಂತಿ ಮಂದಾರ, ಗುರು ತರವಾದ ಭುಜ ಚತುರ-ಆಹ ಮರಿಯಾನೆ ಸೊಂಡಿಲಂತಿರೆ ಬಾಹು ಕೇತಕಿ ಬೆರಳು ನಕ್ಷತ್ರದ ಅರಸಿನಂತೆ ನಖ14 ಕರಚತುಷ್ಟಯದಲ್ಲಿ ಶಂಖ, ಚಕ್ರ ವರಗದೆ ಪದುಮು ನಿಶ್ಶಂಕನಾಗಿ ಧರಿಸಿ ಮೆರೆವೊ ಅಕಳಂಕ, ದುರು ಳರ ದಂಡಿಸುವ ಛಲದಂಕ ಆಹ ಬೆರಳು ಮಾಣಿಕದುಂಗುರ ಕಡಗ ಕಂಕಣ ಬಿರುದಿನ ತೋಳ್ಬಂದಿ ವರ ಭುಜಕೀರ್ತಿಯ15 ಅಗರು ಚಂದನ ಗಂಧÀಲೇಪ, ಕಂಬು ಸೊಗಸಾದ ಕಂಠಪ್ರತಾಪ, ಮಾವು ಚಿಗುರಲೆ ಕೆಂದುಟಿ ಭೂಪ, ನಸು ನಗುವ ವದನ ಸಲ್ಲಾಪ-ಆಹ ಮಗನಾಗಿ ತಾನು ಗೋಪಿಗೆ ವದನದೊಳು ಅಗಣಿತ ಮಹಿಮನ್ನ 16 ಮುಗುಳು ಮಲ್ಲಿಗೆ ಮೊಗ್ಗೆ ದಂತ ಪಙÂ, ಜಗವ ಮೋಹಿಸುವ ಸುಶಾಂತ ಜಿಹ್ವೆ ನಿಗಮಕೆ ವೇದ್ಯವಾದಂಥ ಬಲು ಬಗೆಯಿಂದ ನಡೆಸುವ ಪಂಥ-ಆಹ ಪೊಗಳಲಾರದು ವೇದ ಖಗವಾಹನನ ಮಹಾ ಅಗಣಿತ ಮಹಿಮೆ ಸಂಪಿಗೆಯ ನಾಸಿಕನನ್ನು 17 ಪೊಳೆವೊ ವಿದ್ಯುತ ಕಪೋಲ, ನೀಲೋ- ತ್ಪಲದಳ ನೇತ್ರ ವಿಶಾಲ, ದಿವ್ಯ- ತಿಲಕವನಿಟ್ಟ ಸುಫಾಲ, ನೀಲಾ- ಚಲಕಾಂತಿ ತನುರುಹ ಜಾಲ-ಆಹ ಕುಂಡಲ ಕರ್ಣದೊಲುಮೆಯ ಚೆಲುವಿಕೆ ಇಳೆಯೊಳಗೆಣೆಗಾಣೆ ಇಂದಿರಾಲೋಲನ್ನ 18 ಶುಭ ನೋಟ, ಕಂಗ- ಳೆರಡ ಚೆಲುವಿಕೆ ಮಾಟಕಿನ್ನು ಅರವಿಂದ ಸರಿಯಿಲ್ಲ ದಿಟ ಅಲ್ಲಿ ತರಣಿ ಚಂದ್ರಮರ ಕೂಟ-ಆಹ ಶರಣ ಜನರ ಮನೋಹರುಷ ವಾರ್ಧಿಗೆ ಸುಧಾ ಕರ ದುಷ್ಟಜನರ ತಿಮಿರಕ್ಕೆ ಭಾಸ್ಕರನ್ನ 19 ಹೊಳೆವ ಹುಬ್ಬುದ್ವಯ ಸ್ಮರನ ಚಾಪ- ತಲೆ ತಗ್ಗಿಸುವಂಥ ರಚನ ಫಾಲ- ದಲ್ಲಿಟ್ಟು ತಿಲಕ ಸುಂದರನ ಲೋಕ- ಕಳವಳಗೊಳಿಸುವ ಸುಗುಣ-ಆಹ ನಲಿವ ವದನದಲ್ಲಿ ಅಳಿಗಳಂತೊಪ್ಪುವ ಸುಳಿಗುರುಳಿನ ಮೇಲೆ ವಲಿವಾರಳೆಲೆಯನ್ನು 20 ರೂಪ ಶೃಂಗಾರ ವಿಲಾಸ ಉಡು- ಭೂಪ ನಾಚುವ ಮುಖಹಾಸ ವಿಶ್ವ ರೂಪ ಧೃತ ಸ್ವಪ್ರಕಾಶ ಸರ್ವ ವ್ಯಾಪಕಾಖಿಳ ಜಗದೀಶ-ಆಹ ತಾಪಸರಿಗೆ ಕರುಣಾಪಯೋನಿಧಿ-ಅಣು ರೂಪಿನೋಳ್ ಪರಮಾಣು ರೂಪನಾಗಿಪ್ಪನ್ನ21 ಕೋಟಿಮಾರ್ತಾಂಡ ಸಂಕಾಶ ಕಿ ರೀಟಕ್ಕೆ ಅಸಮ ಪ್ರಕಾಶ ಎಲ್ಲು ಸಾಟಿಗಾಣೆನು ಲವಲೇಶ ಕಪಟ- ನಾಟಕ ಶ್ರೀ ಲಕುಮೀಶ-ಆಹ ನಖ ಲಲಾಟ ಪರಿಯಂತ ನೋಟದಿಂದಲೆ ಈಶ ಕೋಟಿ ಸಹಿತನಾಗಿ 22 ಕಾಮಾದಿಗಳನೆಲ್ಲ ತರಿದು ಮುಕು- ತೀ ಮಾರ್ಗವನ್ನೆ ನೀನರಿದು ಅತಿ- ಪ್ರೇಮದಿ ಗುರುಗಳ ನೆನೆದು ಹೇಮ ಭೂಮಿ ಕಾಮಿನಿಯರ ಜರಿದು-ಆಹ ಸಾಮಜ ವರದ ಶ್ರೀ ವಿಜಯವಿಠ್ಠಲನಂಘ್ರಿ ಯುಗ್ಮ ನಿತ್ಯ 23
--------------
ವಿಜಯದಾಸ
ಧ್ರುವತಾಳ ಬಂದೆನ್ನ ಕಾಯೊ ಕರುಣದಿಂದ ಕೈಪಿಡಿದು ದೀನ ಬಂಧುವೆ | ಒಂದೂರು ಮಂದಿರಾರ್ಯ | ಸಂದೇಹವ್ಯಾಕೆ ನಿನ್ನ ಪೊಂದಿದ ಸತ್ಯಶಿಷ್ಯವೃಂದದೊಳಗೆ ನಾ ಕಡೆಯವನೋ ತಂದೆ ನೀನಗಲಿದಕೆ ನೊಂದೆನೊ ನಾ ಭವ ಬಂಧದೊಳಗೆ ಬಿದ್ದು ಬಹುವಿಧದಿ ನಮಗಿನ್ನು ಹಿಂದು ಮುಂದು ಮನಕೆ ನೀ ತಾರದಲೆ ಕಣ್ಣೆರೆದು ಈಕ್ಷಿಸಿ ಎನ್ನೊಳಿದ್ದ | ಮಂದಮತಿಯ ಬಿಡಿಸಿ ಮಧ್ವಶಾಸ್ತ್ರವ ತಿಳಿಸೋ | ಮಂದರಕುಜ ಭಕ್ತಸಂದೋಹಕೆ | ಹಿಂದೆ ವರದಾತನೆಂದೆನಿಸಿದ ಕರ್ಮಂದಿಗಳರಸರ ಕ್ಷೇತ್ರದಲ್ಲಿ | ಬಂದ ಸಮಯವೆನ್ನ ಬಿನ್ನಪ ಚಿತ್ತಕೆ | ತಂದು ತವಕದಿಂದ ಭೂಸುರರ ಸಂದಣಿಯಲ್ಲಿ ನಿನ್ನ ಮಹಿಮೆ ಪ್ರಕಟಿಸಿ ಇಂದುವಿನಂತೆ ಪೊಳೆದು ಮೆರೆದ ಕರುಣೀ ಅಂದಿನಾರಭ್ಯ ನೀನೆ ಸ್ವರೂಪೋದ್ಧಾರಕರ್ತನೆಂದು ದೃಢನಾಗಿ ನಂಬಿ ತ್ವತ್ವಾದಕೆ ವಂದಿಸಿ ಮೊರೆ ಇಡೆ ಇಂದು ನೀನು ನಮ್ಮ ಛಾತ್ರಮಾಲೆಯಲ್ಲಿ ಸಂದವನೆಂದು ಮನದಿ ಭಾವಿಸಿದೆವು | ಎನುತ ಛಂದದಿ ಸಿಂಧು ಪೋಲುವ ಕರುಣಿ ಸುಜ್ಞಾನ ಸದ್ಭಕ್ತಿ ಕುಂದದ ವೈರಾಗ್ಯ ಭಾಗ್ಯವ ಕೊಟ್ಟು ಧಾಮ ಶಾಮಸುಂದರವಿಠಲನ ಒಂದೇ ಮನದಿ ಭಜಿಪಾನಂದ ಭಾಗ್ಯವ ನೀಡೋ 1 ಮಟ್ಟತಾಳ ಅನುಪಮಸುಚರಿತ್ರ | ಅನುದಿನದಲಿ ಎನ್ನ ಅಣುಗನೆಂದರಿತೊಂದು ಕ್ಷಣವಗಲದೆ ಇದ್ದು ಬಿನುಗು ಬುದ್ಧಿಯ ಕಳದು | ಧನದಾಶೆಯ ಕಡಿದು ಮನದ ಚಂಚಲ ಬಿಡಿಸಿ | ಹನುಮ ಭೀಮಾನಂದ ಮುನಿಕೃತ ಪಾದವನಜ ಸೇವಿಪುದಕೆ ತನುವಿಗೆ ಬಲವಿತ್ತು ದಿನದಿನದಲಿ ನೆನೆಯುವ ಸಂಪದ ಗುಣನಿಧಿಯನುಗ್ರಹಿಸೋ 2 ತ್ರಿವಿಡತಾಳ ಭವ ಮೊದಲಾದ ಬುಧರು ಹರಿಯಾಜ್ಞೆಯಲಿ ಮದಡಾರುದ್ಧರಿಸಲು ಜಗದಿ ಬಂದು | ಸುಧೆಯಂತೆ ಸವಿಯಾದ ಮಧುರ ಕನ್ನಡದಲ್ಲಿ | ಮುದದಿ ರಚಿಸಿದಂಥ | ಪದಸುಳಾದಿಗಳಲ್ಲಿ ಹುದುಗಿದ ವೇದಾರ್ಥ ತ್ವತ್ವಾದಾಶ್ರಿತರಿಗೆ | ವಿಧ ವಿಧದಿಂದಲಿ ಬೋಧಿಸುತಾ | ವದಗಿದ ಅಜ್ಞಾನ ಸದೆದು ಸುಮತಿ ಕೊಟ್ಟು ಸದಾಚಾರ ಸಂಪನ್ನನೆನಿಸಿ | ಅವರ ಬದಿಗನು ನೀನಾಗಿ ಸುಕ್ಷೇಮ ಚಿಂತಿಸಿ | ಅಧಮರಿಂದಲಿ ಬಾಧೆ ಬಾರದಂತೆ ಸದಯನೆ ಸಲಹಿದ ಕಾರಣದಿಂದಲಿ | ವಿದಿತವಾಯಿತು ನಿನ್ನ ಮಹಿಮೆ ಮನಕೆ ಪದೆ ಪದೆ ಪ್ರಾರ್ಥಿಪೆ ಸದಮಲಗಾತ್ರನೆ ಅಧೋಗತಿ ತಪ್ಪಿಸಿ ಬಿಡದೆ ಒಲಿದು | ಯದುಕುಲೋದ್ಭವ ಪೊಳೆವಂತೆ ಕೃಪೆಮಾಡು 3 ಅಟ್ಟತಾಳ ಗುರುವರ ಶ್ರೀ ನರದ್ವಿರದಾರಿ ನಾಮಕ | ವರ್ಣಿಸಲಳವಲ್ಲ ನಿನ್ನುಪಕಾರವು | ಜ್ವರಬಹುಜನರಿಗೆ ಪರಿಹಾರ ಮಾಡಿದಿ ತುರಗ ಕಚ್ಚಿದ ಘಾಯ ತಕ್ಷಣ ಮಾಯಿಸಿದಿ | ಶರಣಗೆ ಬಂದಪಮೃತ್ಯು ಓಡಿಸಿದಿ | ಅರಿಯದರ್ಭಕಿ ಹೋಮಕುಂಡದಿ ಬೀಳೆ | ತ್ವರಿತಭಿಮಂತ್ರಿಸಿ | ಭಿಸ್ಮವಲೇಪಿಸಿ ಉರಿತಂಪುಗೈಸಿದಿ || ಪುರದವರ ಮೊರೆ ಕೇಳಿ ಮಾರಿಯ ಭಯ ಕಳೆದಿ | ತರುಳರು ದಕ್ಕದ ದೀನಕುಟುಂಬಕ್ಕೆ ಚಿರಕಾಲ ಬಾಳುವ ಸಂತಾನ ನೀಡಿದಿ | ಸ್ಮರದೂರ ನಿಮ್ಮಾಜ್ಞೆ ಮೀರದ ಕಿಂಕರನ ತರುಣಿಗೆ ಸೋಂಕಿದ ಭೂತವ ಬಿಡಿಸಿದಿ | ನೆರೆನಿನ್ನ ಪದವನುಸರಿಸೀದ ಸುಜನಕ್ಕೆ ವರಭಾಗವತಶಾಸ್ತ್ರ ಅರುಹೀದಿ ಸಲುಹೀದಿ | ಹರಿಕಥಾಮೃತಸಾರವ ಸಾರೀದಿ | ತರತಮದ ಭೇದಜ್ಞಾನವ ಬೀರಿದಿ | ವರದಾಯಕ ಸತ್ಯದೇವನ ಪಾವನ ಚರಿತೆ ವಿಚಿತ್ರವಾಗಿ ಪರಿಪರಿ ಪೇಳುತ್ತ ಪೊರೆದೆ ನಿನ್ನವರನ್ನು ಧರೆ ಋಣ ತೀರಿದ ಕುರುಹು ಅರಿತು ಒಬ್ಬರಿಗೆ ಸೂಚಿಸದೆ ಪರಲೋಕಯಾತ್ರೆಗೆ ತೆರಳಿದದಕೆ ನಿನ್ನ ಪರಿವಾರದ ನಾವೆಲ್ಲರೂ ನಿತ್ಯಸಿರಿಯ ಕಳೆದುಕೊಂಡ ಲೋಭಿಗಳಂದದಿ ಶರಧಿ ಕಾಯ ತೊರೆದರೇನಾಯಿತು ಮರೆಯಾದೆ ಗೋವತ್ಸನ್ಯಾಯದಂತೆ ನೀ ದರುಶನ ಸ್ವಪ್ನದಿಗರೆದು ಸಂತೈಸುತ ನಿರಯಕೆ ನಮ್ಮನು ಗುರಿಮಾಡದೆ ಪೊರೆ ತರುಳಗೊಲಿದ ಶಾಮಸುಂದರವಿಠಲ ಸರಸಿಜಾಂಘ್ರಿಯುಗ್ಮ ಮಧುಪನೆಂದೆನಿಸಿ 4 ಆದಿತಾಳ ಭೂಮಿ ವಿಬುಧವರ ರಾಮವಿಠಲಾರ್ಯರ ಶ್ರೀ ಮುಖದಿಂದ ಸಕಲಶಾಸ್ತ್ರಮನನಮಾಡಿ | ಶ್ರೀಮತ್ಸು ಶೀಲೇಂದ್ರಸ್ವಾಮಿಗಳಿಂದಲಿ ನೀ ಮಾನಿತನಾಗಿ ಕಾಮಿತಫಲಪ್ರದ ರಾಯರ ದಯಪಡೆದು ಕಾಮಾದಿ ಷಡ್ರಿಪುವರ್ಗ ಜಯಿಸುತಲಿ | ನೇಮನಿಷ್ಟೆಯಲಿ ಜಪತಪಾಚರಿಸುತ ಹೇಮರಜತಧನ ತೃಣಸಮಾನೆನಿಸುತ ಸಾಮಜವರದನ ಕಳೆಯದೆ ಪಾಮರ ಜನರನು ಪ್ರೇಮದಿಂದದ್ಧರಿಸಿ | ಸಾಮಗಾನಪ್ರೇಮ ಶಾಮಸುಂದರನ ಧಾಮವ ಸೇರಿದ ಹೇ ಮಹಾಮಹಿಮನೆ 5 ಜತೆ ನಿನ್ನೊಡೆಯನ ದ್ವಾರಾ ಶ್ರೀ ಶಾಮಸುಂದರನ ಎನ್ನಂತರಂಗದಿ ನೋಳ್ವಂತೆ ಕರುಣಿಸೋ ||
--------------
ಶಾಮಸುಂದರ ವಿಠಲ
ಧ್ರುವತಾಳ ಹಿಂದಿನ ಜನ್ಮಜನ್ಮಾಂತರದಿ ಮಾಡಿದಘವ ನಿವಾರಿಸುವರು ನಿನ್ನ ದಾಸರು ದುರಿತ ದುರ್ಜಯ ದುಃಖವ ದೂರ ಮಾಡುವರು ನಿನ್ನ ದಾಸರು ಮುಂದಣ ಅಪಾರ ಆನಂದ ಸುಖವ ಅನವರತ ಈವರು ನಿನ್ನ ದಾಸರು ಯೆಂದು ಇಲ್ಲದಿರೆ ಬ್ಯಾರೆಗತಿಯುಂಟೆ ನಿನ್ನನರಿವ ಬಗೆ ಮತ್ತುಂಟೆ ಎಲೆದೇವ ನಂದನಂದನ ನಿನ್ನವರೆ ಜೀವನ ಅಚಲಾನಂದವಿಠಲರೇಯ ಬ್ಯಾರೆಗತಿ ಮತ್ತುಂಟೆ 1 ಮಠ್ಯತಾಳ ಭೂತದಯಾಪರ ನರನಾಥ ದೇವತೆಯೆಂಬರು ಭೂತವಿರೋಧ ಮಾಡಿ ಕೈಯ್ಯಾತು ಬೇಡುವ ದೈವವ ಸಾತ್ವಿಕವೆಂದು ಬಗೆವರು ಜನರು ಈ ರೀತಿಯೇನೆಂಬೆ ಅಜಾತ ಸಕಲದೇವರ ದಾತನೆ ಅಚಲಾನಂದವಿಠಲ ನೀನಿರೆ ಸಾತ್ವಿಕವೆಂದು ಅನ್ಯದೈವವ ಈ ಭೂತಳದ ಜನರು ಬಗೆವರು ಪ್ರತಿದಿನ 2 ತ್ರಿಪುಟತಾಳ ಮಾನವನೆ ಕೇಳು ಕಬ್ಬಿಣ ಸೋಸಿ ಕಾಸಿ ಬಡಿಯಲು ತಾನು ಪರುಷ ಸೋಕದೆ ಸುವರ್ಣ ಅಪ್ಪುದೇ ಅನಾದಿ ಅವಿದ್ಯ ತಾಪದಿಂದ ಬೆಂದು ತಾನು ನೀರೊಳು ಮಿಂದರೇ ಹೋಹುದೇನೊ ಅನಾದಿದೈವ ಅಚಲಾನಂದವಿಠಲನ ಧ್ಯಾನಮಾಳ್ಪರ ಪಾದಪರುಷ ಸೋಕದನಕ 3 ಅಟ್ಟತಾಳ ಎನ್ನ ಹಳಿಯಲಿ ಉಗುಳಲಿ ಬಂಧುಗಳೆನ್ನ ಮನ ರಂಗ ನಿನ್ನನೆ ನೆಚ್ಚಿಹ್ಯದೆನ್ನಮನ ಕೃಷ್ಣ ನಿನ್ನನೆ ನಂಬಿಹ್ಯದೆನ್ನ ಮನ ಅಚಲಾನಂದವಿಠಲರೇಯ ನಿನ್ನವರೊಲುಮೆಯ ಸಾರಿತೆನ್ನ ಮನ 4 ಆದಿತಾಳ ಹಲವು ಮಾತೇನು ಹಲಧರನನುಜನ ಚೆಲುವಿಕೆಯನೆ ಕಂಡು ಮನಸೋತೆನವ್ವ ಕೆಲಬಲದಾ ಕುಲದವರೆನ್ನ ಹಳಿಯಲಿ ಚಲಿಸದು ಚಿತ್ತ ಚಂಚಲವಾಗದೆನ್ನ ಮನ ಕೆಲಚಿತಿ ವೆಂಣೆಲ್ಲ (?) ತಾನೊಲಿವಂತೆ ಮಾಡಿದ ನಿಲುಕುವನಚಲಾನಂದವಿಠಲರೇಯ ಕ್ಯಲಬಲದ ಕುಲದವರೆನ್ನ ಹಳಿಯಲಿ 5 ಜತೆ ಬೆಂದ ಸಂಸಾರದಿ ಬಂದು ಬಂದು ಹೋದೆನೊ
--------------
ಅಚಲಾನಂದದಾಸ
ನಗಬಹುದು ನೀ ಮುಗುಳು ನಗೆಯಾ ಗುರುರಾಯಮಿಗೆ ಕಂಡು ದೇಹಾಭಿಮಾನಿಗಳ ಬಗೆಯಾ ಪತನ್ನ ತಾನರಿಯಲೀಸದ ಮಾಯೆಗೊಳಗಾಗಿಅನ್ಯರೇತೋಜಾತಮಾದ ದೇಹವ ನೋಡಿತನ್ನಿಂದ ತಾ ಕಾಣಪಡುತಿಹುದಿದಲ್ಲವೆಂದೆನ್ನಲಾರದೆ ದೋಷದಿಂದಾಉನ್ನತದ ಮಾಂಸ ರಕ್ತಾಸ್ತಿಮಲ ಮೂತ್ರಂಗಳಿನ್ನೆನೆದುನಾರುವ ನವದ್ವಾರ ಮಾರ್ಗದಿಂತನ್ನ ಮರಸುವದೇಹವೆತನ್ನದೆಂದು ಮರೆದುಣ್ಣುರಿವಾತಗಳ ಕಂಡೂ ಮಾಯೆ ಭಾಪೆನ್ನುತ್ತ ಬೆರಳೊಲದು ಕೊಂಡು ಬಗೆಗಂಡೂ 1ಬಿಟ್ಟ ಮನೆ ಜನ ಧನಂಗಳಲಿ ಮತ್ತೂ ಮನವನಿಟ್ಟು ವಾಂತ್ಯಾಶನವನುಂಬ ನಾಯಂದದಲಿಪಟ್ಟಣಂಗಳಲಿ ತಿರುಗುತ ಪರರ ಬಾಧಿಸುತಕೆಟ್ಟ ಬುದ್ಧಿುಂದ ಧೃತಿಗುಂದಿಕೊಟ್ಟಪುದು ಕರ್ಮವೆಂಬುದ ಮರೆತು ಗೇಣುದ್ದಹೊಟ್ಟೆ ಬಟ್ಟೆಗೆ ದೈನ್ಯ ಬಟ್ಟು ಮೂಢತೆುಂದಕೆಟ್ಟೆನಿನ್ನಾರು ರಕ್ಷಿಪರೆಂದು ಚಿಂತಿಸುವಹೊಟ್ಟೆಹೊರಕರನು ನೋಡುತ್ತಾ ಕಟಕಟಾಕೆಟ್ಟರಿವರೆಂದು ಹಾಸ್ಯವನು ಮಾಡುತ್ತಾ 2ತಾನಾತ್ಮನೆಂಬುದನು ಕೇಳಿದ್ದುದೃಷ್ಟಾನುಮಾನಂಗಳಿಂ ನಂಬಿಗೆಯೆುಲ್ಲದದರಲ್ಲಿಮಾನಾವಮಾನಂಗಳಿಂ ಹರುಷ ಶೋಕಾದಿಹೀನಬುದ್ಧಿಗಳ ಮಾಡುತ್ತಾಜ್ಞಾನಮಾರ್ಗದಲಿ ವಿಶ್ವಾಸವಿಲ್ಲದೆ ತನ್ನ ಕಾಣಲಾರದೆ ಭೇದ ಬುದ್ಧಿುಂ ವ್ರತತೀರ್ಥಸ್ನಾನಾದಿುಂದ ಮುಕುತಿಯ ಪಡೆಯಬೇಕೆಂಬಮಾನವರ ಭ್ರಾಂತಿಯನು ತಿಳಿದೂ ಇವರ್ಗಳಿಗೆಸ್ವಾನುಭವವಿಲ್ಲೆಂದು ಸಮತೆಯಲಿ ನಿಂದೂ 3ರಾಗವನು ಬಿಡಲಾರದಾಶಾಪಿಶಾಚಕೊಳಗಾಗಿ ಸತ್ಸಂಗ ಸತ್ಕಥೆಯ ಕೇಳಿಕೆಗಳನುನೀಗಿ ಧನಿಕರೊಳಿಚ್ಚಿತವನಾಡಿ ಸದ್ಧರ್ಮತ್ಯಾಗಿಯಾಗ್ಯನೃತಕ್ಕೆ ಪೊಕ್ಕೂಹೀಗೆ ತಿರುಗುತ ಪರಾನ್ನಾದಿ ಭೋಗಕ್ಕಾಗಿಕಾಗೆಯಂದದಲಲ್ಲಿಗಲ್ಲಿಗೆ ಸದ್ಗತಿುೀವಯೋಗ ಮಾರ್ಗವ ಬಿಟ್ಟುಭ್ರಾಂತರಾದಿರಿ ಮಹದ್ರೋಗಿಗಳ ಕಂಡು ಬೆಸಗೊಂಡು ಇವರ್ಗೆ ಭವರೋಗ ಬಿಡದೆಂದು ನಿಜಪದದಲ್ಲಿ ನಿಂದೂ 4ಇಂತರಿವ ಜನರಲ್ಲಿ ನಿಂತು ಸನ್ಮತಿುತ್ತುಚಿಂತೆಗಳ ಬಿಡಿಸುತ್ತಲಂತರಾತ್ಮಕನಾಗಿಸಂತಗೋಪಾಲಾರ್ಯ ಗುರುವರ್ಯನಾಗಿ ವೇದಾಂತದರ್ಥವನು ಬೋಧಿಸುತಾಅಂತವಿಲ್ಲದ ನಿಜವ ತೋರಿ ಪಾಲಿಸಿ ಮುದವಂತಾಳ್ದು ಸಕಲ ಸಂಶಯಗಳನು ಪರಿಹರಿಸಿಶಾಂತರಾದಿರಿ ಮೋಹಹೋುತ್ತು ನಿತ್ಯ ಸ್ವಾತಂತ್ರ್ಯವಾುತು ಗೆದ್ದಿರೆನುತಾಸಂತತಾನಂದಕನುಗೈದು ಕೈ ಹೊುದೂ 5
--------------
ಗೋಪಾಲಾರ್ಯರು
ನಗುವರಲ್ಲವೊ ರಂಗ ನಾಚಿಕೆ ಇಲ್ಲವೊನಿನಗೆ ಹಗೆಯ ಮಾಡಿದವಳ ಬಗೆಯ ಕಾಣೆರಂಗ ಪ. ಅನ್ಯಾಯ ನ್ಯಾಯವೆಂಬುದಿನ್ನು ನೀ ಅರಿಯೆಲೊಮನ್ನೆಯಳ ವೀಳ್ಯ ಹಿಡಿದೆಯಲ್ಲೊನೀ ಹಿಡಿದೆಯಲ್ಲೊ ರಂಗ1 ಭರದಿ ಕೋಪಿಸಿ ಭೀಷ್ಮ್ಮೆ ತಿಳುವಳಿಕೆ ನಿನಗಿಲ್ಲಹರದೆಯರಿಬ್ಬರು ಎನಗೆ ಸರಿಯರಲ್ಲಎನಗೆ ಸರಿಯರಲ್ಲ ಭೀಷ್ಮ್ಮೆ ದೂರುವರೇನೆ2 ಹೀಂಗೆ ಯಾರೂ ನಗರೇನ ಭೀಷ್ಮ್ಮೆಇರುವೆಗಿಂತ ಕಡಿ ಮಾಡಿದೆಲ್ಲಎನ್ನ ಕಡಿಮಾಡಿದೆಲ್ಲ 3 ಅತಿ ಕೋಪದಿಂದ ಭೀಷ್ಮೆ ಸ್ಮøತಿಯಿಲ್ಲ ನಿನಗಿನ್ನುಸತಿಯರಿಬ್ಬರು ಎನಗೆ ಸರಿಯರಲ್ಲಎನಗೆ ಸಮರಲ್ಲ4 ಅಕ್ಕ ತಂಗಿಯರೆಂಬೊ ದಿಕ್ಕಿನ ಮೂಲೆಗೆ ಬೆಕ್ಕಿನಕಿಂತ ಕಡಿ ಮಾಡಿದೆಲ್ಲೊಎನ್ನ ಮಾಡಿದೆಲ್ಲೊ ರಂಗಾ 5 ವಾರಿಜಾಮುಖಿ ಎನಗೆ ಯಾರು ಹಿರಿಯರು ಹೇಳೆನಾರಿಯರಿಬ್ಬರು ಎನಗೆ ಪೊರರಲ್ಲಎನಗೆ ಪೊರರಲ್ಲ್ಲ 6 ಹುಡುಗಿಯರೆಂಬುವನುಡಿಯ ಕೇಳುತ ಭೀಷ್ಮಿಕಡುಹರುಷ ಬಡುತಲೆ ಮನದೊಳಗೆತನ್ನ ಮನದೊಳಗೆ7 ಕೃಷ್ಣನ ಮಡದಿಯರು ಎಷ್ಟು ಗುಣವಂತರೆಂದುಅಷ್ಟ್ಟೂರಕ್ಕಿಂತ ಮೊದಲೆ ಮದಿವ್ಯಾದೆನಿಮ್ಮನ್ನು ಮದುವ್ಯಾದೆ8 ಸಿಟ್ಟು ಬಿಟ್ಟಿಬ್ಬರು ಕೃಷ್ಣ ನಮ್ಮವನೆನ್ನಿಧಿಟ್ಟಿ ರಾಮೇಶ ಸಕಲೇಷ್ಟವೆನ್ನಿಸರ್ವೇಷ್ಟವೆನ್ನಿ9
--------------
ಗಲಗಲಿಅವ್ವನವರು
ನಡುನೀರೊಳಗೆ ಕೈಯ್ಯ ಬಿಡುವುದೆ ಸಿರಿನಲ್ಲ ಕಡೆ ಹಾಯಿಸದೆ ಮೋಸ ಕೊಡುವುದು ತರವಲ್ಲ ಪ. ನಾನಾ ವಿಧದ ನೀಚಯೋನಿಗಳನು ದಾಟಿ ಮಾನುಷೋತ್ತಮ ಮಧ್ವಮತದಿ ಪುಟ್ಟಿ ನೀನೆ ಮುಕ್ತಿದನೆಂಬೊ ಜ್ಞಾನವಂತರ ಭೇಟಿ ನಾನೈದಬೇಕೆಂದು ಧ್ಯಾನಗೊಂಡಿಹೆನೆಂದು 1 ವೇದ ವಿಹಿತಕರ್ಮವಾದರು ಕ್ರಮವಾಗಿ ಸಾಧಿಸಲಿಲ್ಲ ಸಂತತಿಗಳಿಲ್ಲ ಪಾದ ಪದ್ಮ ಪರಾಗ ಮೋದಾನುಭವದಿ ಶುಭೋದಯಗೊಳಲಿಲ್ಲ 2 ಕೆಲವು ಕಾಲವ ಬಾಲ್ಯದಲಿ ಕಳೆದೆನು ಮತ್ತೆ ಲಲನೇರ ಮೋಹದಿ ಬಳಲಿದೆನು ಬಲವು ಕುಂದುತ ದೇಹ ಗಳಿತವಾಗುವುದಿನ್ನು ನಳಿನಾಕ್ಷ ಪದಪದ್ಮ ನೆಳಲನೈದದ ಮುನ್ನು 3 ಮೂರೊಂದು ಪುರುಷಾರ್ಥ ತೋರುವ ಪುರುಷ ಶ- ರೀರವ ಕರುಣಿಸಿದವನೆ ನೀನು ಮೂರಾರು ವಿಧ ಭಕ್ತಿ ಸಾರುವ ತಿಳಿಸಿ ಕಂ ಪಾದ ಪರಿಯಂತ 4 ಸಂಚಿತಾಗಾಮಿ ದುಷ್ಕøತಗಳನಳಿಸಿ ಪ್ರಾ ಪಂಚಿಕ ಭೋಗ ಪೂರಣಗೊಳಿಸಿ ಪಂಚಭೌತಿಕ ಹರ ವಂಚನೆ ಮಾಡದೆ ಶ್ರೀ ವಿ ರಿಂಚಿವರದ ದೇವ ವೆಂಕಟೇಶ ನೀ ಕರುಣಿಸು 5
--------------
ತುಪಾಕಿ ವೆಂಕಟರಮಣಾಚಾರ್ಯ
ನಡೆದು ಬಾರಯ್ಯ ಕೃಷ್ಣ ನಡೆದು ಪ ಪಕ್ಷಿವಾಹನ ಪರಪೇಕ್ಷಾರಹಿತ ನಿನ್ನ ಕುಕ್ಷಿಯೊಳಗೆ ಜಗ ರಕ್ಷಿಸುವಾತನೆಂದು ವಕ್ಷಸ್ಥಳದಿ ಶ್ರೀಮಾ- ರೀಕ್ಷಕನುಳುಹಿದಂತಕ್ಷದಿ ನೋಡುತಧೋಕ್ಷಜ ಹರಿಯೆ 1 ಸತ್ಯವಂತನೆ ಕೇಳಸತ್ಯ ಅಜ್ಞಾನ ಭವ- ಕತ್ತಲೊಳಗೆ ಬಹಳ ಶತ್ರು ಸಮೂಹದಲ್ಲಿ ಸುತ್ತಿ ಬಳಲುವೆ ಕೇಳಾಪತ್ತು ಬಾಂಧವ ನಿನ್ನ ಚಿತ್ತಕ್ಕೆ ತಂದು ಸಮಸ್ತ ಸುರೇಶ ನಿನ್ನ ಕರಿ ಸರ್ವೋತ್ತಮ ಹರಿಯೆ 2 ಚಾರ ಮಾಡಿದರು ನಿನ್ನಾರು ತಿಳಿಯಲಿಲ್ಲೊ ಶೂರ ಸುತಗೆ ಸುಕುಮಾರನೆನಿಸಿದಂಥ ಅ- ಸಮೀರಜ ಭವ ಸುರ ನಾರದಪ್ರಿಯನೆ ಉದ್ಧಾರಮಾಡು ಎನ್ನನು 3 ಧ್ವಜ ವಜ್ರಾಂಕುಶ ಪಾದಭಜಕರೆನಿಸುವಂಥ ಸುಜನರ್ವಂದಿತನಾದ ಕುಜನ ಕುಠಾರಿಯೆ ನೀ ಅಜಮಿಳಗೊಲಿದಂಥಜಗಣೇಂದ್ರನ ಪ್ರಿಯ ನಿಜವಾಗಿ ನೋಡೆನ್ನ ರಜತಮ ಕಳೆಯುವ 4 ಕಡಲಶಯನನಾದ ಉಡುರಾಜ್ವದನ ಬಿಟ್ಟು ಭಿಡಿಯ ಭೀಮೇಶ ಕೃಷ್ಣ್ನೆನ್ನೊಡೆಯನೆನುತ ಬಂದ ಬಡವ ಸುದಾಮಗಿಟ್ಟಿ ಹಿಡಿ ಹಿಡೀ ಎಂದು ಭಾಗ್ಯ ತಡೆಯದೆ ನಾ ನಿನ್ನಡಿಗಳಿಗೆರಗುವೆ ಕೊಡು ಕೊಡು ವರಗಳ ಪೊಡವಿ ಪಾಲಿಪನೆ 5
--------------
ಹರಪನಹಳ್ಳಿಭೀಮವ್ವ
ನಂದಗೋಪನ ಕಂದ ನಾನುವೃಂದಾರಕೇಂದ್ರ ಖಳಕುಲ ಮರ್ದನಪ. ಎಂದೆಂದು ಎನ್ನ ನಂಬಿದ ಭಕುತರಿಗೆ ಸುತ್ತಿಂದಬಂದ ಕ್ಲೇಶಗಳನ್ನೆಲ್ಲ ಖಂಡಿಸಿತಂದೆ ಮಕ್ಕಳ ಪೊರೆವಂತೆ ಪಾಲಿಸುತಿಹೆಕಂದರ್ಪನಾಣೆ ಇದು ಎನಗೆ ಬಿರುದು 1 ಅಂದಂದು ಅವರು ಬೇಡಿದ ಇಷ್ಟಂಗಳನಿತ್ತೆಸಂದೇಹವಿಲ್ಲ ಸಂತತ ಸಲಹುವೆಮಂದಜನರೊಡನಾಡಿ ಮರುಳುಗೊಳದಿರು ಮನುಜ ಚೆಂದದಿಂದೆನ್ನ ಪೂಜೆಯನು ಮಾಡು 2 ಇಂದ್ರ ಗರ್ವಿಸಲವಗೆ ಸಾಂದ್ರ ಸುರತರುವ ಆನಂದನವನವನು ಪೊಕ್ಕು ಕಿತ್ತುತರಲುಒಂದಾಗಿ ರಣಕೆ ಬಂದು ನಿಂದಮರರನು ಕರುಣದಲಿಅಂದು ಪಾಲಿಸಿದೆ ಭಕ್ತರ ಬಂಧುವೆನಿಸಿ 3 ಇಂದುಮುಖಿ ಸಭೆಯಲ್ಲಿ ಕರೆಯಲಾಕ್ಷಣದೊಳಗೆಬಂದವಳ ಅಭಿಮಾನವನು ಕಾಯ್ದೆಇಂದುಧರ ಭಸ್ಮನುಪದ್ರದಲಿ ಬಳಲುತಿರೆಬಂದೊದಗಿ ಶಿವನÀ ಕಾಯಿದವನರಿಯಾ4 ಅಂಧಂತಮವ ದಾಟಿ ಅನಂತಾಸನಕೆ ಪೋಗಿಒಂದು ನಿಮಿಷದೊಳಗೆ ದ್ವಿಜನ ಸುತನ ತಂದೆಸಿಂಧುವಿನೊಳಗೆ ದೈತ್ಯನ ಕೊಂದು ಸಾಂದೀಪ -ನಂದನನÀ ಯಮನಪುರದಿಂದ ತಂದೆ 5 ನೃಪರ ಬಹುಬಲ ಜರಾ -ಸಂಧನ ಗಧೆಯ ಗಾಯದಿ ಕೊಲಿಸಿಅಂದವನ ದೆಸೆಯಿಂದ ನೊಂದ ನೃಪರನು ಬಿಡಿಸಿಕುಂದದುಡುಗೊರೆಯ ನಾ ಕೊಡಿಸಿ ಮೆರೆದೆ6 ಹಿಂದಾಗಜೇಂದ್ರನಿಗೊದಗಿದವನಾರು ಪಿತನಿಂದನೊಂದ ಪ್ರಹ್ಲಾದನ್ನ ಕಾಯ್ದವರದಾರುಮಂದರಗಿರಿಯನೆತ್ತಿ ಸುರರಿಗಮೃತ ಉಣಿ-ಸಿಂದಿರೆಯನಾಳ್ದ ಹಯವದನನರಿಯಾ7
--------------
ವಾದಿರಾಜ
ನದೀದೇವತೆಗಳು ಕಂಗಳಿಂದಲಿ ನಿನ್ನ ಕಂಡೆ ನಾನೀಗ ಹಿಂಗಿತೇ ಎನ್ನ ಅಘದ್ಹಿಂಡು ಕಾವೇರಿ ಪ. ಮಂಗಳಾಂಗಿಯೆ ಶ್ರೀ ರಂಗನಾಥನ ಪದ ಭೃಂಗಳೆನಿಸಿ ಜನರ ಪಾವನಗೈವೆ ತುಂಗವಿಕ್ರಮ ಹರಿಗೆ ಮೂಲರೂಪಳಾಗಿ ಅಂಗ ಶುದ್ಧಿಯಗೈವೆ ಪಾಪಿಗಳ ಸತತ 1 ಎಲ್ಲೆಲ್ಲಿ ನೋಡೆ ಶ್ರೀರಂಗನ್ನ ಸೇವಿಸುವೆ ಪುಲ್ಲಲೋಚನೆ ನಿನ್ನ ಬಗೆಯರಿವೆನೆ ಬಲ್ಲ ಭಕ್ತರು ಬಂದು ನಿನ್ನಲ್ಲಿ ಸ್ನಾನವಗೈದು ಉಲ್ಲಾಸದಿಂದ ಆನಂದಪಡುತಿಹರೆ 2 ನೊರೆಸುಳಿಗಳಿಂದ ಭೋರ್ಗರೆಯುತ್ತ ಹರಿ ಇರುವ ಅರಮನೆಯೆ ವೈಕುಂಠವೆಂದು ಸೂಚಿಸುತ ಹರಿಸದನ ಸುತ್ತಿರುವೆ ವಿರಜೆ ನಾನೆಂದೆನುತ ಅರುಹುವಾ ತೆರದಿ ಬಹು ರಭಸದಿಂ ಪರಿವೆ 3 ನಿನ್ನ ಧ್ವನಿ ಇಂಪೆಂದು ಆನಂದದಿಂದಾಲಿಸುತ ಚನ್ನ ಶ್ರೀರಂಗ ತಾ ಪವಡಿಸಿಹನೆ ಘನ್ನ ಮಹಿಮಳೆ ಸಕಲ ಜೀವರಾಶಿಯ ಪೊರೆವೆ ಎನ್ನ ಮನ ಹರಿಪದದಿ ನಲಿವಂತೆ ಮಾಡೆ 4 ನಿನ್ನನೇ ವಿರಜೆ ಎಂತೆಂದು ಭಾವಿಸಿ ಈಗ ಎನ್ನ ಗುರುಗಳ ದಯದಿ ಸ್ನಾನಗೈದೆ ಇನ್ನು ಶ್ರೀ ವೈಕುಂಠದೊಡೆಯನಾ ತೋರಮ್ಮ ಘನ್ನ ಶ್ರೀ ಗೋಪಾಲವಿಠ್ಠಲನ 5
--------------
ಅಂಬಾಬಾಯಿ
ನನಗಾವ ಬಲವಿಲ್ಲ ನಿರುಪಮನೆ ಹೇಳೈಯ ವನಜ ಸಂಭವ ಜನಕ ತವ ಚರಣ ವಲ್ಲದಲೆ ಪ ಮಣಿದು ಬೇಡುವೆನೈಯ ಪ್ರಣತಾರ್ಥಿ ಹರಕೃಷ್ಣ ಜನುಮಗಳ ಹರಿಸುತಲಿ ಭವಬಂಧ ಬಿಡಿಸೈಯಅ.ಪ ನರರ ನಂಬಿದೆ ನೈಯ ಸಿರಿಯುರಿಗೆ ಬಾಯ್ಬಿಟ್ಟೆ ಅರಿಯದೆಲೆ ತವ ಮಹಿಮೆ ಬರಿದೆ ಬಳಲಿದೆಭವದಿ ಧೊರೆ ತನವು ಸವಿಯಹುದೆ ತವ ಸವಿಯ ಕಂಡವಗೆ ಜರಿಯ ದಲೆ ಬಡವನನು ಕರೆದು ಪಾಲಿಸು ತಂದೆ 1 ಹಣ ವನಿತೆ ಭೂ ವಿಷಯ ಉಂಡುಂಡು ಬೆಂಡಾದೆ ತನುಜ ಕರಣಗಳಿನ್ನು ಶತ್ರುಗಳ ಸಮವಿಹವು ಗುಣ, ಪೂರ್ಣ ಬಿಂಬನನು ನೆನೆಯ ಗೊಡದಲೆ ನಿತ್ಯ ಇನಸುತನ ಪುರದೆಡೆಗೆ ಸೆಳೆಯುತಿಹವೋ ಸ್ವಾಮಿ 2 ಸುರರು ಸುರರಿಗಾಶ್ರಯ ನೀರ ಮರುತಗಾಶ್ರಯ ಸಿರಿಯು ಸಿರಿರಮಣನೀನಿರಲು ಚರಣ ಸೇವಕ ನೆನ್ನ ನರರಿಗೊಡ್ಡುವರೇನೊ ಸರ್ವೇಶ ಅಕ್ಷರನೆ ಮೊರೆ ಹೊಕ್ಕೆ ಸಲಹೈಯ 3 ದೇವ ದೇವರ ದೇವ ದೇವತ್ವ ನೀಡುವನೆ ಕಾವ ಜೀವರ ನಿಚಯ ಸಾರ್ವಭೌಮನು ನೀನು ನೀವಲಿದು ಪೊರೆಯದಿರೆ ಆಗುವುದೆ ಸುಖಮುಕ್ತಿ ನಾವಿಕನು ನೀನೆಂದು ನಂಬಿದೆನು ಕೈಪಿಡಿಯೊ 4 ಅಗಲಿ ಬದುಕಿರಲಾರೆ ಗೋಪ ಪುರುಷನೆ ನಿನ್ನ ಸುಗಮ ಮಾಡಿಸು ಪಥವ ಸರ್ವಜ್ಞ ತವಪುರಕೆ ನಗವೈರಿ ಜಯತೀರ್ಥ ವಾಯು ವಂತರದಿರ್ಪನಗೆ ಮೊಗದ ಶ್ರೀಕಾಂತ ಕೃಷ್ಣವಿಠಲನೆ ಬೇಗ 5
--------------
ಕೃಷ್ಣವಿಠಲದಾಸರು
ನಂಬಿ ಭಜಿಸಿರೋ _ ಜನರೆಲ್ಲರೂ _ ನಂಬಿ ಭಜಿಸಿರೊ ಪ ಅಂಬುಜಾಕ್ಷ ಪ್ರಿಯಾ _ ನಮ್ಮ ಜಯರಾಯರಾ ಅ.ಪ ಕ್ಲೇಶ ಯಾತಕೇ ಕಾಸು ಕಳಕೊಂಡು _ ಅತಿಘಾಸಿ ಯಾತಕೇ ಶ್ರೀಶನಂಘ್ರಿ ಭಜಕರಾದ _ ವಾಸವಾವೇಶರಿವರ ಪಾದ ಆಶೆಯಿಂದ ಭಜಿಸಲೂ _ ವಾಸುದೇವನೊಲಿವನು 1 ನೇಮ ಯಾತಕೇ _ ನಿಷ್ಠೆ ಯಾತಕೇ ಹೋಮ ಯಾತಕೇ _ ಕಷ್ಟಯಾತಕೇ ಪ್ರೇಮದಿಂದಲೀ _ ಇವರ ಭಜಿಸಲೂ ತಾಮಸಗುಣ _ ತಾನೇ ಓಡೋದು 2 ಮಧ್ವಶಾಸ್ತ್ರದ _ ಚಂದ್ರರಿವರು ಅದ್ವೈತವಾದವ _ ಗೆದ್ದಸಿಂಹರು ಮಧ್ವರಾಯರಾ _ ಮುದ್ದುಮೊಮ್ಮಗ ಸಿದ್ಧಸೇವ್ಯರು _ ಸುಧೆಯ ಕರ್ತರು 3 ಇವರ ಧ್ಯಾನವೂ _ ಜ್ಞಾನದಾಯಕಾ ಇವರ ಪೂಜೆಯೂ _ ಪಾಪನಾಶನ ಇವರ ಸ್ಮರಣೆ _ ಕಲಿವಿ ಭಂಜನೆ ಇವರ ಸೇವೆಯು _ ಮುಕ್ತಿಸೋಪಾನ 4 ಶ್ರೀಕಳತ್ರನಾ _ ಆಜ್ಞೆಯಿಂದಲಿ ನಾಕದಿಂದಲೀ _ ಇಲ್ಲಿ ಬಂದರು ಏಕಮನದಿ _ ಶರಣು ಹೋಗಲು ಪಾಪನಾಶನ _ ಪುಣ್ಯವೆಗ್ಗಳಾ 5 ಮಳಖೇಡದೀ _ ನೆಲಸಿ ಇಪ್ಪರೂ ನಳಿನನಾಭನ _ ಒಲಿಸುತನುದಿನಾ ನಲಿಸಿ ಮನದೊಳು _ ಒಲಿಸುವಾತನೆ ಶೀಲವಂತನು _ ಧನ್ಯ ಮಾನ್ಯನು6 ನರನ ವೇಷದಿ _ ಸುರರ ಒಡೆಯನೊ ಹರಿಯ ಕರುಣದಿ _ ಮೆರೆಯುತಿರ್ಪರು ಶರಣಜನರ _ ದುರಿತರಾಶಿಯ ತರಿದು ಶೀಘ್ರದಿ _ ಪೊರೆಯುತಿಪ್ಪರು7 ಎತ್ತಿನ್ವೇಷದಿ _ ವಾತದೇವನ ಪ್ರೀತಿ ಪಡೆದು _ ಖ್ಯಾತಿಆದರು ಮತ್ತೆ ಯತಿಯಾಗಿ _ ಕೀರ್ತಿಯಿಂದಲಿ ಬಿತ್ತರಿಸಿದರು, ತತ್ತ್ವಶಾಸ್ತ್ರವ 8 ಕಾಗಿನೀನದೀ _ ತೀರವಾಸರು ವಿಗತರಾಗರು _ ನಿತ್ಯತೃಪ್ತರು ಜಾಗರೂಕದಿ _ ಪೊಗಳಿ ಪಾಡಲು ನಿಗಮವೇದ್ಯನು _ ಬೇಗ ಪೊರೆಯುವ 9 ಶೇಷಾವೇಷದಿ _ ವಾಸಿಸುವರು ಶೇಷಶಯನನ _ ದಾಸರೀವರು ಬೆಸರಿಲ್ಲದೆ _ ಆಸೆ ತೊರೆದು ದಾಸನೆನ್ನಲು _ ಪೋಷಿಸೂವರು 10 ಕೆರೆಯ ಏರಿಯು _ ಬಿರಿದು ಪೋಗಲು ಮೊರೆಯ ಇಟ್ಟರು _ ಇವರ ಅಡಿಗೆ ಭರದಿ ಕರುಣದಿ ಹರಿಯ ಸ್ತುತಿಸಿ ಕರದಿ ಮುಟ್ಟಲು _ ಏರಿ ನಿಂತಿತು 11 ಯರಗೋಳದ _ ಗುಹೆಯ ಒಳಗೆ ಮರುತದೇವನ _ ಕರುಣದಿಂದಲಿ ಪರಿಪರಿಯಲಿ _ ಬರೆದು ಟೀಕೆಯ ಕರೆದು ಸುರಿದರು _ ತತ್ತ್ವಕ್ಷೀರವ 12 ಇವರ ನಾಮವು _ ವಿಜಯ ಸೂಚಕ ಇವರ ಕೀರ್ತನೆ _ ಭವಕೆ ಔಷಧ ಇವರ ಕರುಣದಿ _ ಅನಿಲನೊಲಿವನು ಇವರ ಶಿಷ್ಯರೇ _ ಅವನಿಶ್ರೇಷ್ಠರು 13 ಸರ್ವಕ್ಷೇತ್ರದ _ ಯಾತ್ರೆಯಾ ಫಲ ಸರ್ವದಾನವ _ ಮಾಡಿದ ಫಲ ಇವರ ಪಾದವ _ ನಂಬಿ ಭಜಿಸಲು ತವಕದಿಂದಲಿ _ ತಾನೇ ಬರುವುದು 14 ಜಯತೀರ್ಥರ _ ಹೃದಯವಾಸಿಯು ವಾಯುಹೃದಯಗ _ ಕೃಷ್ಣವಿಠ್ಠಲನು ದಯದಿ ನುಡಿಸಿದಾ _ ಪರಿಯು ಪೇಳಿದೆ ಜೀಯ ಕೃಷ್ಣನೆ _ ಸಾಕ್ಷಿ ಇದಕ್ಕೆ15
--------------
ಕೃಷ್ಣವಿಠಲದಾಸರು
ನಂಬಿದೆ ಧನ್ವಂತ್ರಿ ನಿನ್ನ ಕರುಣಾಂಬುಧಿ ಚಿನ್ಮಯ ಪರಿಪಾಲಿಸೆನ್ನ ಪ. ದೇವಾಸುರರೆಲ್ಲ ಸೇರಿ ಏಕ ಭಾವದಿಂದಲಿ ತಮ್ಮ ಸಾಹಸವ ತೋರಿ ತಾವಾಗಿ ಕಡೆಯಲಂಬುಧಿಯ ಭವ ನಾವನ ಸಮಯದಿ ಬಂದಿಯನ್ನೊಡೆಯ 1 ಕುಲಿಶಧರಗೆ ಯುಕ್ತಿ ಕಲಿಸಿ ಬಲಿವಲ ಶಂಬರಾದಿ ದೈತ್ಯರ ಮೋಹಗೊಳಿಸಿ ಕಲಶಪೂರಿತ ದಿವ್ಯ ಸುಧೆಯ ದೇವ ಬಲಕಿತ್ತು ಸಲಿಸಿದ ಸಾಮ್ರಾಜ್ಯನಿಧಿಯ 2 ಪೂರ್ಣೇಂದು ಗಣಜಾಯಿ ಸುಮುಖಾ ಶ್ಯಾಮ ವರ್ಣ ಸುಬಾಲಕ ದುರ್ಜನ ವಿಮುಖಾ ಸ್ವರ್ಣಾವದಾತ ಸುವಾಸ ದಿವ್ಯ ಕರ್ಣಾಭರಣಾದಿ ಭೂಷ ಸುನಾಸಾ 3 ದೀರ್ಘಪೀವರ ದೋರ್ದಂಡ ಪಂಚ ಶುಭ ಶುಂಡಾ ಜನಿತ ಬ್ರಹ್ಮಾಂಡ ವ್ಯಾಧಿ ವರ್ಗವ ಓಡಿಸುವರೆ ಸುಪ್ರಚಂಡಾ 4 ಕಂಬುಗ್ರೀನ ಪರೇಶ ಅರು- ಣಾಂಬುಜಾಕ್ಷ ಸುಖ ಚಿದ್ಘನ ವೇಷಾ ನಂಬಿದವರ ಕಾವ ಶ್ರೀಶಯನ ನಿಂಬಾಗಿ ರಕ್ಷಿಸು ಶ್ರೀ ವೆಂಕಟೇಶಾ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಂಬಿದೆನೊ ನಂಬಿದೆನೊ ಅಂಬುಜಾಕ್ಷ ತೊಂಬಲಿಗೆ ಹಂಬಲಿಸಿ ಹಾರೈಸಿದೆ ನಿನ್ನ ಪ ಮೊದಲುಂಡ ಪಾಪದಲಿ ಕಳೆಗುಂದಿ ಕಳೆಗುಂದಿ ಮುದದಿಂದ ನಿತ್ರಾಣನಾದೆನಯ್ಯಾ ಪದುಮನಾಭನೆ ನಿನ್ನಭಯದೊಂಬಲನಿತ್ತು ವದನ ಚೇತನನಾಗುವಂತೆ ದಯಮಾಡೊ 1 ವಿಷವ ಸೇವಿಸಿದ ತರುಣನಂತೆ ಮೆಲವು ಭಾವಿಸದೆ ಬೀಳುತೀ ನೀ ನೆಲೆಗಾಣದೆ ಬಿಸಿಜಾಕ್ಷ ನೀನೆ ಕೃಪಾಳು ಎಂದೆಂದಿಗೆ ರಸ ಸುರಿವ ಸುರಿವ ಬಾಯದೊಂಬಲಾನಿತ್ತು ಸಲಹೊ2 ಆವದಾದರುವಲ್ಲೆ ಅನಿಮಿತ್ತ ಬಂಧು ಕೇಳು ಜೀವವೇ ನಿನ್ನ ಪಾದದಾಧೀನವೋ ಶ್ರೀವಧುರಮಣ ನಮ್ಮ ವಿಜಯವಿಠ್ಠಲ ನೀನೆ ದೇವ ಯನಗ ಹುದು ತೊಂಬಲನಿತ್ತು ಪೊರಿಯೊ 3
--------------
ವಿಜಯದಾಸ
ನಂಬಿದೆನೊ ನಿನ್ನ ಅಂಬುಜನಯನ ಕೃ ಪಾಂಬುಧೆ ದೃಢದಲಿ ಪ ಸಂಭ್ರಮದಲಿ ಕಿವಿ ತುಂಬುತಿರುವ ಆ ಡಂಬರ ವಚನಕೆ ಮುಂಬರಗೊಳ್ಳುತ ಅ.ಪ ನವ ಘನ ನಿಭಕಾಯ ನಿನ್ನಯ ಕರುಣಮಯ ಸಹಾಯ ವಿಲ್ಲದೆ ಬಿಗಿಯುತಿರುವ ಮಾಯಾ ಪಾಶವ ತೊರೆಯಲಳವೆ ಜೀಯಾ ನಿನ್ನಯ ದಯವ ಪಡೆದ ಪರಿಯನರುಹುವ ಯತಿವರೇಣ್ಯ ಗುರುಮಧ್ವರಾಯರ ಪರಮ ಸಮಯ ಸಾರಗಳನು ಸಂತತ ಶ್ರವಣ ಮನನ ಧ್ಯಾನಗಳಿಂದ ಪರಿಚಯ ಪಡೆದು ದು ಷ್ಟ ವಿಷಯಗಳಲಿ ಮತಿಯನು ಮುರಿಯುವಂತೆ ಕರುಣಿಸೋ ಸುಗುಣಾಲಯ 1 ನೀರಜದಳ ನೇತ್ರ ವರ ಸುಖ ಚಿನ್ಮಯೈಕ ಗಾತ್ರ ಸುಜನ ಮಿತ್ರ ಸುರವರ ಸರಸಿಜಭವ ಪುತ್ರ ರುಚಿರರ ಮುಕುಟಾಕ್ಷಪಾತ್ರ ನಿನ್ನಯ ವಿವಿಧ ಲೀಲೆಗಳು ಚಿತ್ರವಿಚಿತ್ರವು ಅರಿತೆನೆಂದು ತಿಳಿದು ಮೆರೆಯುತಲಿರುವ ನರರ ಮದವ ಮುರಿದು ದೈನ್ಯದಿಂದಲಿ ಮರೆತೆನೆಂದು ದಿನದಿನದಲಿ ಭಜಿಪರ ಪೊರೆವ ಪರಮ ಕರುಣಾರಸಮಯನೆ 2 ದೀನಭಕುತರನ್ನು ಪೊರೆಯುವ ದಾಸಿಯೆಂದು ನಿನ್ನ ಪೊಗಳುವ ಮಾನತತಿಗಳನ್ನು ಸಂತತ ಧ್ಯಾನ ಮಾಡಿ ಎನ್ನ ಕ್ಲೇಶವ ಮೌನದಿಂದ ಇನ್ನೂ ಸಹಿಸುತ ಜಾನಕೀಶ ತವ ಪಾದಕಮಲದ ರೇಣುವನ್ನು ಶಿರದಿ ಧರಿಸುತಲಿ ಅನು ಮಾನವನ್ನು ತೊರೆದು ಮುದದಿ ಸುವಿಮಲ ಜ್ಞಾನಮೂರ್ತೆ ಜ್ಞಾನಿವರ ಪ್ರಸನ್ನನೆ ನೀನೆ ಎನ್ನ ರಕ್ಷಕನೆಂದರಿಯುತ 3
--------------
ವಿದ್ಯಾಪ್ರಸನ್ನತೀರ್ಥರು