ಒಟ್ಟು 4509 ಕಡೆಗಳಲ್ಲಿ , 123 ದಾಸರು , 3059 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡು ನಮಿಸಿದೆ ನಿನ್ನ | ಕಡಗೋಲ ಪಿಡಿ- ದುದ್ದಂಡ ದೇವವರೇಣ್ಯ ತಾಪತ್ರಯಗಳಘ ಹಿಂಡು ಓಡಿಸು ರನ್ನ ಪೊರೆ ಸುಪ್ರಸನ್ನ ಪ. ಕಂಡೆ ನಿನ್ನಯ ಬಾಲರೂಪವ ಪುಂಡರೀಕದಳಾಯತಾಕ್ಷನೆ ಕುಂಡಲೀಶಯ ನಿನ್ನ ಚರಣದಿ ದಂಡವಿಕ್ಕುವೆ ಗೋಪಿಬಾಲ ಅ.ಪ. ಜನನ ಮರಣದಿ ನೊಂದೆ | ಶ್ರೀ ಜಾನಕೀಪತೆ ಪ್ರಣತ ಜನರಿಗೆ ತಂದೆ | ನೀ ಕಾಯದಿದ್ದರೆ ಘನವೆ ನಿನಗಿದು ಎಂದೆ | ಪಾಲಿಪುದು ಮುಂದೆ ಜನಮ ಜನುಮದ ಕರ್ಮಗಳ ನಾ ಅನುಭವಿಸಿ ಪೂರೈಸಲಾಪೆನೆ ಘನಮಹಿಮ ದಯ ಮಾಡಿದಲ್ಲದೆ ಕೊನೆಯ ಕಾಣೆನು ವಿಷಯ ವಾಸನೆ ವನಜ ಸಂಭವ ಪವನ ರುದ್ರಾ ದ್ಯನಿಮಿಷಿರಿಗಿನಿತಿಲ್ಲ ಮಹಿಮೆಯು ನಿನಗೆ ವಿೂರಿದರುಂಟೆ ದನುಜದಲ್ಲಣ ದಯದಿ ಸಲಹೊ 1 ಕಾಮಪಿತ ಮಧ್ವೇಶ | ಸೌಂದರ್ಯ ಸಾರ ತಾಮಸರ ವಿಧ್ವಂಸ | ಸಜ್ಜನರ ಕಾಯುವ ಕೋಮಲಾಂಗನೆ ಶ್ರೀಶ | ಲಕ್ಷ್ಮೀ ನಿವಾಸ ಹೋಮಕುಂಡದಿ ಪುಟ್ಟಿದಾ ಸತಿ ಕಾಮಿಗಳ ಉಪಟಳಕೆ ಸಹಿಸದೆ ಶ್ರೀ ಮನೋಹರ ಕಾಯೊ ದ್ವಾರಕೆ ಧಾಮ ನೀ ಗತಿ ಎನುತವರಲೆ ಪ್ರೇಮದಿಂದಕ್ಷಯವನಿತ್ತ ನಾಮ ಮಂಗಳ ನಿರ್ಮಲಾತ್ಮಕ ಸೋಮಶತಪ್ರಭ ಸೌಮ್ಯರೂಪ ತ್ರಿ- ಧಾಮ ಭಕ್ತರ ಕಾಮಿತಾರ್ಥನೆ 2 ಆದಿಮಧ್ಯವಿದೂರ | ಆನಂದ ಪೂರ್ಣ ಸಾಧು ಮನದಿ ವಿಹಾರ | ಸರ್ವಜ್ಞರಾಯರ ಹಾದಿ ತೋರಿಸೊ ಧೀರ | ಸುಜ್ಞಾನಸಾರ ವೇದ ಶಾಸ್ತ್ರಗಳರ್ಥವರಿಯೆನು ಮಾಧವನೆ ಮಮಕಾರದಲಿ ನಾ ಹಾದಿ ತಿಳಿಯದೆ ನೊಂದೆ ಅಜ್ಞತೆ ಹೋದಡಲ್ಲದೆ ನಿನ್ನ ಕಾಣುವ ಮೋದ ಬರುವುದೆ ಮಧ್ವವಲ್ಲಭ ಭೇದ ಮತಿ ಕೊಡು ತಾರತಮ್ಯದಿ ನೀ ದಯದಿ ಒಲಿದೆನ್ನ ಮನದಲಿ ಆದರದಿ ನೆಲೆಸಿನ್ನು ಪೊಳೆಯೊ 3 ಕಡಲಶಯನನೆ ಶ್ರೀಶ | ಕಡಗೋಲ ಕೈ ಪಡುಗಡಲ ತೀರದಿ ವಾಸ | ಕಮಲೇಶ ನಾ ನಿ- ನ್ನಡಿಯ ಕಂಡೆನು ನಾಶ | ರಹಿತನೆ ಪ್ರಕಾಶ ಎಡೆಬಿಡದೆ ನಿನ್ನಸ್ಮರಿಪ ಧ್ಯಾನವ ಕೊಡುತ ಮಧ್ಯದಿ ತಡೆವ ಸಂಸೃತಿ ತಡೆದು ಸಂತ ಚಿಂತನೆಯ ದೃಢ ಒಡಲೊಳಗೆ ನೆಲೆಸಯ್ಯ ಬಿಡದೆ ಪತಿ ಸತಿ ಪಿತ ಕಡಲವಾಸನೆ ಕಡಲ ಬಂಧನ ಕಡಲ ಮಧ್ಯದಿ ಪುರವ ರಚಿಸಿದೆ ಕಡು ದಯಾಂಬಯಧೆ ಕಾಯೊ ಸತತ 4 ಅಷ್ಟಯತಿ ನುತಪಾದ | ಸುಖ ತೀರ್ಥ ಹೃದಯ ದೀಷ್ಟಿತನೆ ಸನ್ಮೋದ | ಸಜ್ಜನರ ಮನದಾ ಭೀಷ್ಟವೀವ ಪ್ರಮೋದ | ಕರುಣಿ ಸುಪ್ರಸೀದ ಕೊಟ್ಟೆ ಮನು ಮುನಿಗಳಿಗೆ ಜ್ಞಾನವ ತುಷ್ಟಿಪಡಿಸುತÀ ಸುರರ ಸುಧೆಯಲಿ ಕುಟ್ಟಿ ಅಸುರನ ಕೋರೆದಾಡಿಲಿ ಕುಟ್ಟಿ ಅರಸರ ಕಟ್ಟಿ ಜಟೆಯನು ಮಟ್ಟಿ ಕಂಸನ ಬಿಟ್ಟು ವಸನವ ದಿಟ್ಟ ಕಲ್ಕಿ ಗೋಪಾಲಕೃಷ್ಣ ವಿಠ್ಠಲನೆÀ ಶ್ರೀ ಉಡುಪಿಲೋಲ5
--------------
ಅಂಬಾಬಾಯಿ
ಕಂಡು ಹಿಗ್ಗಿದಳೆ ಕಮಲಾಕ್ಷನ್ನ ಯಶೋದ ಎತ್ತಿ ಕೊಂಡು ಮುದ್ದಿಸಿದಳೆ ಯದುನಾಥನ್ನ ಪ ಪಾಲವಾರಿಧಿ ಮಧ್ಯದಲ್ಲಿ ಶ್ರೀದೇವಿ ಸಹಿತ್ವೊಂ ದಾಲದೆಲೆಯ ಮ್ಯಾಲಾಡುತಲಿ ಕಾಲಬೆರಳು ಕಟಬಾಯಲಿ ಚೀಪುವ ನೀಲವರ್ಣದಲಿ ತನ್ನ ಬಾಲನೆಂದೆನುತ 1 ಕೋಟಿ ಸೂರ್ಯದ ಕಾಂತಿ ಹರಣಮಾಡುವ ಮುಖ ಕಿ- ರೀಟ ಕೌಂಸ್ತುಭ ಮಣಿಯಾಭರಣ ಹಾಟಕಾಂಬರನುಟ್ಟ ನಾಟಕಧಾರಿ ಕಿ ಸಾರಥಿ ಪಕ್ಷಿರಾಟವಾಹನನ 2 ಚೆನ್ನವಾಗೀರೇಳು ಲೋಕವನು ತನ್ನುದರದೊಳಡಗಿಸಿ ಪನ್ನಂಗಶಾಯಿ ಪರಮಾತ್ಮನ್ನ ಚಿನ್ನ ಮಾಣಿಕ್ಯದ ತೊಟ್ಟಿಲೊಳಿಟ್ಟು ತೂಗುತ ಎನ್ನ ಕಂದ ನೀ ತೋಳನ್ನಾಡೆಂದೆನುತ 3 ಕಡಗ ಕಿರುಗೆಜ್ಜೆ ಚರಣದಿಂದಲಿ ನಡೆಯುತಲಿ ಬಂದು ದಧಿ- ಗಡಿಗೆ ತಾ ಒಡೆದನೆ ಕಡಗೋಲಿಂದ ಹಿಡಿದು ಕಟ್ಟಲು ಒರಳೆಳೆದ್ವಿಮಳಾರ್ಜುನ ಗಿಡವ ಕೆÀಡಹಿ ಮುಕ್ತಿಕೊಡುವ ಶ್ರೀ ಕೃಷ್ಣನ 4 ಭವ ಭಯ ನಾಶ ಮಾಡುವಾತ ಭುವ- ನೇಶ ಹದಿನಾಲ್ಕು ಲೋಕದ ವಾಸ ರಾಸಕ್ರೀಡೆಲಿ ವ್ರಜದ್ವನಿತೆಯರ ಸಂತೋಷಬಡಿಸಿದ ಭೀ- ಮೇಶ ಕೃಷ್ಣನ ಮುಖ5
--------------
ಹರಪನಹಳ್ಳಿಭೀಮವ್ವ
ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಂಡೆ ಕಂಡೆ ಸ್ವಾಮಿಯ ಕಂಡೆ ಕಂಡೆ ನಾ ಬ್ರಹ್ಮಾಂಡದೊಡೆಯನ ಪಾಂಡವರ ಪರಿಪಾಲಿಸುವನ ಪ್ರ- ಚಂಡ ಅಸುರರ ಶಿರವ ಚಕ್ರದಿ ಚೆಂಡನಾಡಿದ್ದ ಚೆಲುವ ಕೃಷ್ಣನ ಪ ಪಾದನಖದಿ ಭಾಗೀರಥ್ಯುದಿಸಿದಳು ಈರೇಳು ಲೋಕವನಿಟ್ಟ ಉದರದೊ- ಳಾದಿ ಮೂರುತಿ ಸಾರ್ವಭೌಮ 1 ಎಳೆದುಳಸಿ ಶ್ರೀವತ್ಸ ಕೌಂಸ್ತುಭ ಅ- ರಳು ಮಲ್ಲಿಗೆ ಹಾರ ಪದಕವು ಕೊ- ವೈಜಯಂತಿ ಮಾಲೆಯಂ- ತ್ಹೊಳೆವೊ ಮಾಣಿಕಾಭರಣ ಭೂಷಿತ 2 ಶೀಘ್ರದಲಿ ಜರೆಸುತನ ವಧÉ ಮಾ ಡ್ಯಜ್ಞದಲಿ ಶಿಶುಪಾಲರಂತಕ ರುಕ್ಮಿಣೀಪತಿ ಧರ್ಮಭೀಮರಿಂ- ದಗ್ರಪೂಜೆ ತಕ್ಕೊಂಡ ಕೃಷ್ಣನ 3 ಕಂಕಣ ಕರದಲಿ ಶಂಖ ಚಕ್ರವು ಅರ- ವಿಂದ ರೇಖವು ಚರಣದಲಿ ಪಂಕಜಾಕ್ಷನ ಮುಖದ ಕಾಂತಿಯು ಶಂಕೆಯಿಲ್ಲದೆ ಸೂರ್ಯರಂದದಿ 4 ಎಂಟು ಮಂದ್ಯೆರಡೆಂಟು ಸಾವಿರ ಸತಿಯ- ರಿಂದ ದ್ವಾರಾವತಿಯನಾಳಿದ ಪತಿತಪಾವನ ಪಾರಿಜಾತವ ಸತಿಗೆ ತಂದ ಶ್ರೀಪತಿಯ ಪಾದವ 5 ನಳಿನಮುಖಿ ದ್ರೌಪದಿಯು ಕರೆಯಲು ಸೆಳೆಯೆ ವಸ್ತ್ರ ಅಕ್ಷಯವ ಮಾಡಿಸಿ ಖಳರ ಮರ್ದನ ಕರುಣ ಸಾಗರೆಂ ದಿಳೆಯೊಳಗೆ ಹೆಸÀರಾದ ಕೃಷ್ಣನ 6 ನಂಬಿದವರನು ಬಿಡದೆ ತಾನಿ- ದ್ದಿಂಬಿನಲಿ ಸ್ಥಳಕೊಟ್ಟು ಕರೆವನು ಸುಂದರಾಂಗ ತಾ ಸೋಮಕುಲದಲಿ ಬಂದುದಿಸಿದ ಭೀಮೇಶ ಕೃಷ್ಣನ 7
--------------
ಹರಪನಹಳ್ಳಿಭೀಮವ್ವ
ಕಂಡೆ ಕಂಡೆನೊ ಕಂಗಳಲಿ ಭೂ | ಮಂಡಲಾಬ್ಧಿಗೆ ಸೋಮನೆನಿಪ ಅ | ಖಂಡ ಮಹಿಮಾ ವಾದೇಂದ್ರ ಗುರುಗಳ ಪ ನಸುನಗಿಯ ಮೊಗ | ಪಸರಿಸಿದಾ ದ್ವಾದಶನಾಮಗಳು ಶ್ರೀ ಮುದ್ರೆ ಮುದದಿಂದ | ನೊಸಿಲಿಲೊಪ್ಪುವ ಗಂಧ ಅಕ್ಷತಿ ಎಸೆವ ಸಣ್ಣಂಗಾರ ಕಿವಿಯಲಿ ಹಸನಾದ ಎಳೆ ತುಲಸಿ ಶೋಭಿಸಿ | ಬೆಸಸುವ ಒಂದೊಂದು ಮಾತಾ | ಲಿಸಿದರದು ವೇದಾರ್ಥತುಲ್ಯಾ | ಲಸವ ಗೈಯಿಸದೆ ಬರುವ ಗುರುಗಳ1 ಮೊಸಳಿವಾಯಪಲಕ್ಕಿ ಸುತ್ತಾ ಭಾ | ರಿಸುವ ನಾನ ವಾದ್ಯಾದಾ ಘೋಷಾ | ಪುಸಿಕರೆದೆದಲ್ಲಣರು ಎಂಬಾ | ದಶ ದಿಕ್ಕಿನೊಳು ಕೀರ್ತಿ ತುಂಬಿರೆ | ಶಿಶುವು ಮೊದಲಾದವರು ತಮ ತಮ | ಬೆಸನೆ ಪೇಳಲು ಕೇಳಿ ಅವರು | ಋಷಿಕುಲೋತ್ತಮರಾದ ಗುರುಗಳ2 ಶ್ವಶನ ಮತ ವಾರಿಧಿಗೆ ಪೂರ್ಣ | ಶಶಿ ಎನಿಸಿಕೊಂಬ ಧೀರುದಾರರೆ | ಅಸಮ ತತ್ವ ಪ್ರಮೆಯದಲಿ ನಿರ್ಮಿಸಿದನೆ | ಲೋಕೇಶ ಇವರನ್ನ ವಸುಧಿ ಅಮರರು | ಪ್ರಸರ ಎಡಬಲ ಎಸದು ತುತಿಸಲು ಹಿಗ್ಗಿ ಕರುಣಾ | ರಸಭರಿತರಾಗಿ ನೋಡುತ್ತ ಮಾ | ಸನದಿ ಹರಿಪದ ಭಜಿಪ ಗುರುಗಳ3 ಕುಸುವಶರನ ಬಾಣವನು ಖಂಡ್ರಿಸಿ ಬಿಸುಟ ಸಂಪನ್ನ ವಿದ್ಯಾ | ವಸುವಿನಲಿ ಆವಾಗ ತಲೆ ತೂ | ಗಿಸುವರು ಪಂಡಿತರ ಮೆಚ್ಚಿಸಿ | ವಶವೆ ಪೊಗಳಲು ಎನಗೆ ಇವರ ದ | ರುಶನದಿಂದಲಿ ಗತಿಗೆ ಪಥನಿ | ವಿಷದೊಳಗೆ ಇದು ಸಿದ್ಧವೆಂದು ವಂ | ದಿಸಿದಿರೊ ಮರಿಯದೆ ಈ ಗುರುಗಳಾ 4 ಮಿಸುಣಿ ಮಂಟಪದೊಳಗೆ ರಂ | ಜಿಸುವ ರಾಮನÀ ಕುಳ್ಳಿರಿಸಿ ಅ | ರ್ಚಿಸುವ ಚಿತ್ತೇಕಾಗ್ರದಲಿ ವೊ | ಲಿಸುವ ತಂತ್ರ ಸಾರೋಕ್ತ ಬಗೆಯನು | ಕುಶಲರಾದ ಉಪೇಂದ್ರ ಮುನಿಕರ | ಬಿಸಜದಿಂದಲಿ ಜನಿಪ ಭಕುತಿಲಿ | ಸಿರಿ ವಿಜಯವಿಠ್ಠಲನ್ನ | ಪೆಸರುಗಳು ಎಣಿಸುವ ಗುರುಗಳ 5
--------------
ವಿಜಯದಾಸ
ಕಂಡೆ ನಾ ಕಣ್ಣೆದುರಲಿ ಕೃಷ್ಣನಾ ಪ ಕಂಡೆ ನಾನೀಗ ಬ್ರಹ್ಮಾಂಡದೊಡೆಯ ತಾ ತಾಂಡವಾಡಿ ಭೂಖಂಡದಿ ಮೆರೆದನ ಅ.ಪ ಜಯಮುನಿಹೃತ್ಕುಮುದಾಲಯದಿ ಸುಲೀ- ಲೆಯಾಡುತಿಹ ವಾಯ್ವಂತರ್ಗತ ಕೃಷ್ಣ ಜಯಜಯಜಯ ಶ್ರೀ ವಿಜಯಸಾರಥಿ ಭವ- ಭಯಹಾರಿ ಭಕ್ತರಭಯಪ್ರದಾಯಕ ದಯವನಧಿಯೆ ಮನದಾಮಯ ಕಳೆದು ನಿ- ರ್ಭಯ ದೊಳು ಕಾಯುವ ಜಗದೊಡೆಯಾ ಧೇಯವು ನಿನಗಿದು ಸದ್ಭಕುತರಾಶ್ರಯ ತಟಿತಕೋಟಿ ನಿಭಕಾಯ ಶ್ರೀಭೂಕಾಂತ ದೈತ್ಯಕೃತಾಂತ ಜಗದಾದ್ಯಂತ ನಿಂತು ಜೀವರಾದ್ಯಂತ ಕೃತ್ಯಗಳ್ ಸಂತತನಡೆಸುವ ಕಂತುಪಿತನ ನಾ 1 ಶ್ರೀಕಳತ್ರ ಪರಲೋಕೈಕನಾಥ ಜಗ- ದೇಕವಂದ್ಯನೆ ನರಲೋಕದ ಕ್ರೀಡೆಯೊಳ್ ಭೀಕರಿಲ್ಲದೆ ಬಕಶಕಟಾಕಂಸಾದಿಗಳ ಏಕಘಳಿಗೆ ಯೊಳು ನೀ ಕೊಂದು ನಲಿದು ನಿಂದೆ ಪಾಕಶಾಸನ ದಿವೌಕಸವಂದ್ಯನೆ ಪ್ರಕಟನಹುದೊ ನಿಪ್ಕುಟಿಲರಿಗೆ ದಿಟ್ಟತನದಿ ಹೃತ್ತಟದಲಿ ಧೇನಿಸೆ ತಟಿತದಂದದಲಿ ಒಳಗೇ ಭಟಜನರುಗಳಾ ಕಂಟಕದೆಡರಾಕಟಕಪರಿಹರ ವಿಟ್ಟು ಕರುಣಾಕಟಾಕ್ಷದಿಂದ ಸಂತ ವಿಟ್ಟು ನಟಿಸುವಾ ಸೃಷ್ಟಿಕರ್ತನ ನಾ 2 ರಂಗಾ ನಿನ್ನವರುಗಳಿಂಗಿತದಂತೆ ಮಾ- ತಂಗವರನ ನಿನ್ಹಾಂಗೆನಡೆಸಿ ಶುಭಾಂಗ ಸದ್ಭಕ್ತಕೃ- ಪಾಂಗ ಮಂಗಳಾಂಗ ತುಂಗಮಹಿಮ ಸ- ಪ್ತಾಂಗ ಏಕೋನವಿಂಶತಿ ಮಂಗಳವಿಶ್ವನೆ ಕಂಗಳಲಿದ್ದು ಜಗಂಗಳ ಕಾರ್ಯಂಗಳಿಗೀವೆ ಹಿಂಗಿಸಿ ಅಂಗದ ಕಾರ್ಯವ ನೀ ಮನ ಕಂಗಳಿಗಿತ್ತು ಎಂದಿಗು ಪೊರೆವಾ ಮಂಗಳ ಪ್ರಾಜ್ಞಭೋಗಂಗಳ ಪ್ರಜ್ಞ ಆಗದುಸೂಜ್ಞ ರಂಗನಾಥ ಹೃದ್ರಂಗದಿ ನಲಿಯುತ ಹಾಂಗೆ ನಿಂದಿಹ ಈ ಶ್ರೀವೇಂಕಟೇಶನ ನಾ 3
--------------
ಉರಗಾದ್ರಿವಾಸವಿಠಲದಾಸರು
ಕಂಡೆ ನಾ ಬ್ರಹ್ಮಾಂಡಯೊಡೆಯ ಶ್ರೀ ವೆಂಕಟೇಶನ ಪ ಕಂಡೆ ನಾ ಭಕುತರ ಹಿಂಡುಗಳು ನೆರೆ ಕೊಂಡಾಡುತಲಿದೆ ಪದಪುಂಡರೀಕವ ನಾ ಅ.ಪ ತುಂಗ ಮಹಿಮ ಸತ್ಸಂಗವಿತ್ತು ಮನದಂತರ ವರಿ- ತಾಂಗೀರಸದೀ ಮಂಗಳ ಪೌರ್ಣಿಮೆಭಾರ್ಗವವಾಸರದಿ ಭಾರ್ಗವಿಪತಿ ನಿನ್ನನು ಗ್ರಹದಿ ನಗದೊಡೆಯ ಭಕ್ತ- ರಘಹರಿಸುತ ಪನ್ನಗಗಿರಿಯೊಡೆಯ ನಿನ್ನಯ ಗುಡಿಯನ್ನು ಬಗೆ ಬಗೆ ಸುತ್ತಿಪರ ಹಿಂಡನ್ನು ನಾ ಕಂಡೆನೋ ಜಾಗು ಮಾಡದೆ ಬಾಯಿಬೀಗವ ಕೈಕೊಂಡು ಸಾಗಿ ಕಾಸಾರದಿ ಸ್ನಾನ ಮಾಡಿಕೊಂಡು ಬಾಗಿ ವರಾಹದೇವರ ವಂದಿಸಿ ಬೇಗದಿ ಹರಕೆ ಕೈಕೊಂಡಿಹ ದೇವನ 1 ಮುಕ್ತರೊಡೆಯ ಪುರುಷೋತ್ತಮ ನಿನ್ನಯ ಭಕ್ತರ ವಿಪತ್ತುಗಳೆಲ್ಲ ಹರಿಸಿಶಕ್ತ್ಯಾನುಸಾರ ತ್ವ- ದ್ಭಕ್ತರೆಸಗುವ ಅತ್ಯಲ್ಪಭಕ್ತಿಯ ಸ್ವೀಕರಿಸಿ ಭಕ್ತಿಯಿಂದ ಪ್ರಾಕಾರದಿ ಸುತ್ತಲು ಹೊತ್ತಗಂಡದೀಪಸಾರುತಲಿ ನಿತ್ಯನೂತನ ನಿನ್ನ ಸ್ತುತಿಸುತಲೀ ಮತ್ತೆ ಉರುಳುತಲೀ ಉತ್ತಮಗತಿಪ್ರದ ವ್ಯಕ್ತನಹುದೊ ತ್ವ- ದ್ಭಕ್ತರ ಮನೋರಥ ಪೂರ್ತಿಮಾಡುವ ಭಕ್ತವತ್ಸಲನೆಂಬ ಬಿರುದು ಪೊತ್ತ ಸ- ರ್ವೋತ್ತಮ ಶ್ರೀ ಪುರುಷೋತ್ತಮ ನಿನ್ನನು2 ಬೊಮ್ಮಜನಕ ಪರಬೊಮ್ಮನೆ ನಿನ್ನಯ ಸನ್ಮಹಿಮೆಯ ನಾ ಒಮ್ಮನದೀ ಒಮ್ಮೆಯಾದರು ಮನ್ಮನದಲಿ ನಿನ್ನಯ ಸನ್ಮಂಗಳರೂಪವ ನಿಲ್ಲಿಸದೆ ಸುಮ್ಮನೆಕುಳಿತು ಇಮ್ಮನನಾಗಿರೆ ಘಮ್ಮನೆ ಎನ್ನನು ಒಳಕ್ವೈದೆ ಕಣ್ಮನದೆದುರಲಿ ನೀ ನಿಂದೆ ನೀನೆನ್ನಯ ತಂದೆ ಸನ್ಮುದದಿಂದೆ ಪಾಮರನೆಂದೆನ್ನ ಪ್ರೇಮದಿ ಕರುಣಿಸಿ ಸನ್ಮಹಿಮೆಯ ತೋರ್ದೆ ಜಗದೀಶ ಕಾಮಿತಜನರ ಕಲ್ಪದ್ರುಮ ನೀನೆಲೊ ಈ ಮೇಲುಗಿರೀಶ ಶ್ರೀ ವೆಂಕಟೇಶಾ ನಿನ್ನ3
--------------
ಉರಗಾದ್ರಿವಾಸವಿಠಲದಾಸರು
ಕಡೆಯ ಬಾಗಿಲ ಎನ್ನಕಡೆಗೆ ನಿಲಿಸಯ್ಯ ಪ ಕಡೆಬಾಗಿಲೊಳು ನಿಲಿಸು ಅಡಿಗಡಿಗೆ ನಾನಿನ್ನ ಕಡೆನೋಡಿ ಪೊಡಮಡುತೆ ಕೈಮುಗಿಯುವಂತೆ ಅ.ಪ ಕಡೆಯ ಬಾಗಿಲಿನಿಂದ ದೃಢ ಭಕ್ತರೈತಂದು ಕಡುಮುದದಿ ನಾಮಗಳ ನುಡಿವರಯ್ಯ ನುಡಿಗಳೆಲ್ಲ ಎನ್ನ ಕಿವಿಗಿಡಿಯುತಿರಲಯ್ಯ ಬಡವನಾದೆನಗಿದೇ ಉಪದೇಶವಯ್ಯ 1 ಸಾಮೀಪ್ಯದವರೆಲ್ಲ ಮನದಲ್ಲೇ ಜಾನಿಪರು ಮಾ ಮುನಿಗಳೆಲ್ಲರು ಶ್ರುತಿಯ ಸಾರುವರು ನಾಮಗಳನುಚ್ಚರಿಸಿ ನಮಿಸುವರು ಪಾಡುವರು ಆ ಮಧುವು ಸಾಕೆನಗೆ ಮಾಂಗಿರಿಯ ರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಡೆಯಾ - ಮನವೇ - ನೀನಿಂದು - ಕಂಡೆಯಾ ಪ ಕಂಡೆಯ ಮನವೆ ನೀನಿಂದು - ತನ್ನತೊಂಡರ ಸಲಹುವ ಬಂಧು - ಆಹಮಂಡೆಯ ಬೋಳಿಸಿ | ಪುಂಡರೀಕಾಕ್ಷನೆಹಿಂಡು ದೈವಂಗಳ | ಗಂಡನೆಂದೇಳ್ವರ ಅ.ಪ. ಪಾದ ಸೊಬಗು - ವೇಗತೆರಳುತ್ತಿದ್ದರದು ಮೆಲ್ಲಗು - ನಖವರರತ್ನ ಕೆಂಪಿನ ಬೆಡಗು - ಊರುಕರಿಯ ಸೊಂಡಿಲಿನಂತೆ ಬೆಳಗು _ ಆಹ ಪರಿಶುದ್ದ ಕಟಿಯಲ್ಲಿ | ಸುರಚಿರಾಂಬರನುಟ್ಟುವರಕಂಠ ಫಣೆಯುದರ | ತ್ರಿವಳಿಯಂ ಮೆರೆವರ 1 ಮೃದುರೋಮ ಶಾಲು ಪ್ರಾವರಣ - ನೋಡಲದು ಭಾಸ ಉದಯಾರ್ಕ ವರಣ - ಪೋಲ್ವದದು ಮೇರು ಗಿರಿಯಂತೆ - ವರ್ಣ ನೋಡುಎದೆಯ ವಿಸ್ತರಾ ಭರಣ - ಆಹಸದಮಲುನ್ನತಾಂಸ | ಉರುಟು ನೀಳದ ತೋಳುಪದುಮ ರಾಗದ ಭಾಸ | ಧ್ವಜರೇಖೆ ಹಸ್ತವ 2 ಮೋದ ಪೋಲ್ವ - ಮತ್ತೆಮಂದ ದೂರನು ಅತಿ ಚೆಲ್ವಾ - ಆಹಕುಂದಾಭ ರದನವು | ಸುಂದರಾರುಣ ಓಷ್ಠಮಂದಜೇಕ್ಷಣ ನೋಟ | ದಿಂದ ಬೀರುವ ಮುದ 3 ಕಿವಿಗಳಲೊಪ್ಪುವ ತುಳಸೀ - ಮೂರುಭುವನ ಭೂತಿ ಭ್ರೂವಿಲಾಸಿ - ಮತ್ತೆಅವನೆ ಅಭೂತಿದನೆನಿಸೀ - ಚೆಲ್ವದವಡೆಯಿಂದೊಪ್ಪುವ ಶಿರಸಿ - ಆಹಅವಯವ ಲಕ್ಷಣ | ಪ್ರತಿ ಪ್ರತಿ ಜನ್ಮದಿವಿವರವೀತೆರವೆಂದು | ವಿಭುದರು ತಿಳಿದರು 4 ಈ ವಿಶ್ವವೆಲ್ಲವೂ ಸತ್ಯ - ಮತ್ತೆಸಾರ್ವ ಭೇದವು ತಾರತಮ್ಯ - ವಿಧಿಪೂರ್ವಕಲ್ವೊರೆಯುತ್ತ ದಿವ್ಯ - ತತ್ವಸಾರ್ವವ ಪೇಳುತ್ತ ಭವ್ಯ - ಆಹಕಾವ ಕೊಲ್ಲುವ ಗುರು ಗೋವಿಂದ ವಿಠಲನೆಸರ್ವೋತ್ತುಮಾನೆಂದು | ಈ ವಿಧ ಮೆರೆವರ 5
--------------
ಗುರುಗೋವಿಂದವಿಠಲರು
ಕಡೆಯಿಲ್ಲದೀ ಭವಾಂಬುಧಿಯ ದಾಂಟುವೊಡೆ ಜಗ ದೊಡೆಯ ಶ್ರೀಕೃಷ್ಣನೊಬ್ಬನ ನಂಬು ಮರುಳೆ ಪ ನೆಲೆಯಾದುದಿಲ್ಲ ತಾಯುದರ ಬಾಲತ್ವವಿದು ನೆಲೆಯಾದುದಿಲ್ಲ ಜವ್ವನವೆಂಬುದೂ ನೆಲೆಯಾದುದಿಲ್ಲ ಜರೆಯು ಚಕ್ಷುರಾಜಿಗಳು ಒಡಲು ನಿನಗೆ ಮರುಳೆ 1 ಹುಟ್ಟಿದನಳಿದನೇಕೆ ಜೀವ ನಿಜ ಜನನಿಯಲಿ ಹೊಟ್ಟೆಯಲಿ ಹೊತ್ತು ಹೆತ್ತುದಕೈಸಲೆ ಕೊಟ್ಟುಕೊಂಡುದಕೆ ಪಡೆದಿತ್ತು ಸುತರೆಂದೆನಿಸಿ ನೆಟ್ಟನೈದುವರು ನಿನಗೇನಹರು ಮರುಳೆ 2 ನೀನಳಿದ ಬಳಿದ ಸತಿಸುತರಿಗೇನ್ಹೇಳುವೆ ಏನಹರು ನಿನಗವರು ಮೃತವಾದ ಬಳಿಕಾ ದೀನನಹೆ ಬಯಲಮಮತೆಗಳೆಂದು ತಿಳಿದುಕೊ ನೀನೆತ್ತಲವರೆತ್ತಲಿಹರವರು ಮರುಳೆ 3 ಮಗನಾವ ತಂದೆಯಾವನು ಜೀವ ಜೀವರಿಗೆ ಮಗನು ತಂದೆಯು ಕರ್ಮವಾಸನೆಗಳಾ ಬಗೆಯಿಂದಲೀಶ್ವರನು ಜೀವಕೋಟಿಗಳ ಸೃಜಿಸೆ ಜಗದೊಳಾಡುವರು ನಿನಗೇನಹರು ಮರುಳೆ 4 ಅತಿಭಕ್ತನೆಂದು ವೈಕುಂಠ ವೇಲಾಪುರದ ಪತಿ ಅರ್ಜುನಗೆ ನಿರೂಪಿಸಿದರ್ಥವ ಮತಿಗೆಟ್ಟು ಬಿಟ್ಟು ನಾನಾ ದೈವದಡಿಗಳಿಗಾ ನತನಾಗಿ ಸಂಸಾರಿಯ[ಹೆ] ಇದೇಕೆ ಮರುಳೆ 5
--------------
ಬೇಲೂರು ವೈಕುಂಠದಾಸರು
ಕಡೆವ ಬನ್ನಿ ಸಡಗರದಿಂದ ಘುಡಘುಡಿಸಿ ದೃಢವೆಂಬುದು ಕಡುಕಂಬನೆ ಮಾಡಿ ನಡನಡಿಸಿ ನುಡಿ ನಿಜ ವಡನೆ ಪಡಗವ ತಂದು ಜಡದಿಡಸಿ ಜಡದಿಡಸಿ ನವನೀತ ಗಡಬಡಿಸಿ ಗಡಬಡಿಸಿ 1 ಮೀಸಲಮನ ಕೆನೆ ಮೊಸರನೆ ಮಾಡಿ ಶೋಧಿಸಿ ಶೋಧಿಸಿ ವಾಸನೆ ಮೊಸರ ಕರುಣಿಕುಸಕಿರಿದು ಮರ್ದಿನಿ ಮರ್ದಿನಿ ಮೋಸಹೋಗದೆ ದುರಾಶದ ಕಿಲ್ಮಿಷ ಝಾಡಿಸಿ ಝಾಡಿಸಿ ಧ್ಯಾನ ಬಲಿದು ಸುವಾಸನೆಕಳಲ ಕಡೆವದಾರಂಭಿಸಿ 2 ನಾಮದಿವ್ಯಮಂತ್ರÀವ ಕಟ್ಟಿ ವಿಷಮ ಬಿಡಿಸಿ ವಿಷಮಬಿಡಿಸಿ ನೇಮದಿಂದ ಸುಪ್ರೇಮದರವಿಗಿ ಘಮಗುಡಿಸಿ ಘಮಗುಡಿಸಿ ಶಮೆದಮೆವೆಂಬ್ಹಗ್ಗನೆ ಸಮವಿಡಿದು ಧಿಮಿಗುಡಿಸಿ ಧಿಮಿಗುಡಿಸಿ ಶ್ರಮಜನ್ಮದಹರುವ ಕ್ರಮಗೊಂಡಾಹಂಬಿಡಿಸಿ 3 ನಾವು ನೀವೆಂಬ ಹೊಲೆಗುಡತಿಯನ್ಯರೆ ಬಿಡಿಸಿನ್ಯರೆಬಿಡಿಸಿ ಸಾವಧಾನದಲಿ ಅನುಭವಾಮೃತ ನಿಜಕುಡಿಸಿ ನಿಜಕುಡಿಸಿ ನವನೀತ ಝಲ್ಲಿಸಿ ಝಲ್ಲಿಸಿ ಸವಿಸವಿಗೊಂಡು ಸುವಿದ್ಯಸಾರಾಯವ ಅನುಭವಿಸಿ 4 ಕಡವು ಕುಶಲಿ ಒಬ್ಬಳೇ ಬಲುನಿಜಙÁ್ಞನಶಕ್ತಿ ಶಕ್ತಿ ಒಡಗೂಡಲು ನಿಜಬಾಹುದು ಕೈಗೂಡಿ ಸದ್ಗತಿ ಸದ್ಗತಿ ಪಡಕೊಂಡರು ಇದರಿಂದಲಿ ಮುನಿಜನ ವಿಶ್ರಾಂತಿ ವಿಶ್ರಾಂತಿ ಕೊಂಡಾಡಿದ ಅನುಭವಸ್ತುತಿ ಮೂಢಮಹಿಪತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಣ್ಣಿಗೆ-ಕಟ್ಟಿದಂತಿದೆ ಪ ಬಣ್ಣದ ಕೊಳಲ ಭಾವಿಸಿ ನೋಡಬಾರದೆಅ.ಪ. ಕೂಡಿಹ ಸೋಗೆಗರಿಯ ಕಡುಸೊಂಪುಸೊಗಸುವಡೆದ ಸುಳಿಗುರುಳಿನ ಗುಂಪುಆಡುವ ಮುರುಹು ಮಾಗಾಯ್ಗಳ ಪೆಂಪುಕೂಡಿ ಕುಣಿವ ಕುಡಿಹುಬ್ಬಿನಲಂಪು 1 ಕೊಳಲೆಡೆÉಗೆಡೆಗೆ ತೋರುವ ಕೆಂಬೆರಳುಕೊನಬು ವಡೆದ ಕೊಂಕಿದ ಗೆರೆಗೊರಳುಥಳಥಳಿಸುವ ತೇಲುವ ಕಣ್ಣರಳುತನುಗಂಪನು ಸೂಸುವ ಸುಯ್ಯೆಲರು 2 ಸಿರಿ ಗಂಧದ ತಿಗುರುಕೊರಳ ದಂಡೆಯ ತುಳಸಿಯ ಹೊಸ ಚಿಗುರುಕೊನೆ ಮುಸುಕಲು ಪೊನ್ನುಗುರಿನ ಪೊದರು 3 ಮುಳಿದು ಯಶೋದೆ ಕಟ್ಟಿದ ಪೊಡೆದಾರಮುದ್ದು ಪೊಳೆಯನೇವಳದುಡಿದಾರಬಳಸಿದ್ಹವಳಸರದ ಶೃಂಗಾರಬಣ್ಣದುಡಿಯ ಬಿಗಿದುಟ್ಟ ವೈಯಾರ 4 ಒಂದಡಿ ನೆಲದೊಳು ನಿಂದಿಹ ನಿಲುವು, ಮ-ತ್ತೊಂದಡಿ ಸಾರ್ಚಿಪ ಬಲು ಗೆಲುವುಮುಂದೆ ಪಶುಗಳ ಮನ್ನಿಪನಿಲವು ತಂದೆ ಶ್ರೀಕೃಷ್ಣನಂದಿಗೆ ಪಾದದೊಲವು5
--------------
ವ್ಯಾಸರಾಯರು
ಕಣ್ಣಿಲಿ ನೋಡಿದೆನೆ ಕಾಮಿನಿಮಣಿ ಪ ಕಣ್ಣಿಲಿ ನೋಡಿದೆ ಘನ್ನ ಪುಸ್ತಕ ನವವರ್ಣಭಾಷಿತ ಹರಿವನ್ನಿತೆ ಸೌಭಾಗ್ಯ ಅ.ಪ. ಹೇಮ ಸರಿಗಿ ಕಠ್ಠಾಣಿಯ 1 ಅಕ್ಷರವೆಂಬುವ ನಕ್ಷತ್ರಮಾಲೆಯುವಕ್ಷದೊಳರ್ಥಿಲಿ ಅಂಬುಜಾಕ್ಷಿಯೇ ಲಕ್ಷ್ಮೀ 2 ವಿಷಯನಳಿದು ಕೃಷ್ಣನೊಶಳಾಗುತ ಲಕ್ಷ್ಮೀವಿಭಸಾರ್ಚನ ಮುಖ ಬಿಸುಜಾಕ್ಷಿ ತೋರ್ವಳು 3 ಗೋಪಿ ಶಿಶುವ ಪೂಜಿಪಳು 4 ಶ್ರೀಶನ ಗುಣಗಳ ಭಾಷಿಸಿ ವದನದಿಪೋಷಜನಕೆ ಇಂದಿರೇಶನ ತೋರ್ಪಳು 5
--------------
ಇಂದಿರೇಶರು
ಕಂತುಜನಕ ನರಪಂತವೇನಿದು ಪ ಮಂದರೋದ್ಧರ ವಂದಿಸುವೇ ಧೀರ ಸುಂದರಾಂಗ ಗೋವಿಂದ ಪಾಲಿಸಯ್ಯ1 ಮಾರಸುಂದರ ಘೋರ ದುರಿತದೂರ ಸಾರನುಗುಣಪೂರ ಪೂಜಿಪೆ ಕೇಶವ 2 ಈ ಜಗದೊಳು ರಾಜಿಸುತ್ತಿರುವ ಜಾಜೀಶ್ವರ ದೇವ ಮಾಜದೆನ್ನ ಪೊರೆ 3
--------------
ಶಾಮಶರ್ಮರು
ಕಂತುಪಿತನೆ ನಿನ್ನ ಎಂತು ವರ್ಣಿಪೆ ಲಕ್ಷ್ಮೀ -ಕಾಂತ ಪಾಲಿಸೆನ್ನನು ನಿರಂತರದಲಿ ಪ ಕುಂತಿಪುತ್ರಗೆ ನೀನತ್ಯಂತ ಸಾರಥಿತ್ವವ ಮಾಡಿನಿಂತು ದುರ್ಯೋಧನನ ಶಿರವ ಅಂತಕನಿಗೊಪ್ಪಸಿದ ಧೀರ ಅ.ಪ ಸುಂದರವದನ ನಿನ್ನ ಕಂದ ಭಜಿಸಲು ಮುದದಿಂದ ಕಂಬದೊಳ್ಬಂದೆ ಮಂದರೋದ್ಧರಸಿಂಧುಶಾಯಿ ರಕ್ಕಸನ ಕೊಂದು ಕರುಳ ಮಾಲೆಯನ್ನುಚೆಂದದಿಂ ಕಂಧರದೊಳ್ಧರಿಸಿದಾನಂದಮೂರ್ತಿ ಇಂದಿರೇಶ1 ಕದಂಬ ಪೂಜಿತಾಂಘ್ರಿಯುಗಳನಂಬಿದ ಭಕ್ತರ ಕಾಯ್ವ ಅಂಬುಜನೇತ್ರಅಂಬರೀಷ ದ್ವಾದಶಿ ವ್ರತವ ಸಂಭ್ರಮದಿ ಮಾಡುತಿರೆಡೊಂಬಿಯಿಂ ದೂರ್ವಾಸ ಶಪಿಸೆ ಬೆಂಬಿಡದೆ ಚಕ್ರದಿ ಸಲಹಿದ2 ಗಂಗೆಯ ಜನಕ ನಿನ್ನ ಅಂಗನೆ ದ್ರೌಪದಿದೇವಿಭಂಗಬಿಡಿಸೆಂದು ಕೂಗೆ ಮಂಗಳಾಂಗನೆಸಾಂಗದಿಂದ ವಸ್ತ್ರಂಗಳ ಹಿಂಗದೆ ಪಾಲಿಸಿದಂಥರಂಗವಿಠಲ ಪಾಲಿಸೀಗ ತುಂಗ ವಿಕ್ರಮ ಎನ್ನ ಮಾತ 3
--------------
ಶ್ರೀಪಾದರಾಜರು