ಒಟ್ಟು 9952 ಕಡೆಗಳಲ್ಲಿ , 132 ದಾಸರು , 5277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಂಗನ ತಂಗಿಯರ ಮಾನಭಂಗ ಮಾಡಿಹರುಷದಿಂದ ತಂಗಿಯರುಕೋಲಹಾಕುತಾರೆ ಬಾರೆ ದ್ರೌಪತಿಪ.ದೊರೆಯರ ಮಗಳೆಂದುಬಹಳೆ ಗರವಿಲಿಂದ ಆಣಿನಿಟ್ಟುಒಳಗೆ ಹೋಗಿಸೇರಿದ್ಯಾಕ ಬಾರೆ ದ್ರೌಪತಿ 1ಒಳ್ಳೆಯವರ ಮಗಳು ನೀನುಭಾಳಮಾತನಾಡಿಗೈಯ್ಯಾಳಿ ತನವತೋರಿಕೊಂಡಿ ಬಾರೆ ದ್ರೌಪತಿ 2ಗುಡ್ಡದಷ್ಟು ರಾಗ ಮಾಡಿಅಡ್ಡಾದಿಡ್ಡಿ ಮಾತನಾಡಿಧಡ್ಡ ತನವ ತೋರಿಕೊಂಡೆಬಾರೆ ದ್ರೌಪತಿ 3ಸರ್ಪನ ಎದುರಿಗೆ ಕಪ್ಪೆದರ್ಪತೋರುವದು ಉಂಟೇನಅರಿಪುರೆಲ್ಲ ನಿನ್ನ ಬುದ್ಧಿಬಾರೆ ದ್ರೌಪತಿ 4ಬರಿಯ ಮಾತಿನ ಜಾಣೆನಿಮ್ಮನ ಕರೆಯ ಬರಲಿಲ್ಲವೆಂದುಕುರಿಯಂತೆ ಕೂಗಿದೆಲ್ಲಬಾರೆ ದ್ರೌಪತಿ 5ನರಿಯ ಸಿಂಹನ ಮರಿಗೆನೀನು ಸರಿ ಗಟ್ಟಿದಂತೆಅದರ ಪರಿಯತಿಳಕೊಳ್ಳಬಾರೆ ದ್ರೌಪತಿ 6ಅಕ್ಕ ರುಕ್ಮಿಣಿಗೆಭಾಳಸೊಕ್ಕಿಲಿಂದ ಆಣಿನಿಟ್ಟೆಬೆಕ್ಕಿನಾಂಗ ಸೇರಿದ್ಯಾಕಬಾರೆ ದ್ರೌಪತಿ 7ನಳಿನಾಕ್ಷಿ ರಾಮೇಶ ನರಸಿಯರಿಗೆತಿಳಿಯದೆ ಆಣಿಯನಿಟ್ಟುಮಾನವಎಂತು ಕಳೆದು ಕೊಂಡೆಬಾರೆ ದ್ರೌಪತಿ 8
--------------
ಗಲಗಲಿಅವ್ವನವರು
ರಂಗನಮ್ಮನೆಗೆ ತಾ ಬಂದಮತ್ತೇನು ತಂದ ಪ.ಜಗದೋದ್ದಾರ ಸಭೆಗೆ ಬಂದನಗುವ ಪರಿಯ ಹೇಳಿದ್ದು ತಂದಬಗೆ ಬಗೆ ವಸ್ತ್ರ ಕೊಳ್ಳಿರೆಂದಪಗಡಿ ಧರ್ಮಗೆ ತರಲಿಲ್ಲೆಂದ 1ವಾಣಿ ಮಾವ ಮನೆಗೆ ಬಂದಜಾಣತನವ ಹೇಳಿದ್ದು ತಂದಮಾಣಿಕ ಮುತ್ತು ಕೊಳ್ಳಿರೆಂದಕ್ವಾಣನ ಧರ್ಮಗೆ ತರಲಿಲ್ಲೆಂದ 2ಕೃಷ್ಣರಾಯಸಭೆಗೆ ಬಂದಎಷ್ಟು ಜಂಬ ಹೇಳಿದ್ದು ತಂದಪಟ್ಟಾವಳಿಕೊಳ್ಳಿರೆಂದಹುಟ್ಟು ಭೀಮಗೆತರಲಿಲ್ಲೆಂದ 3ನಳಿನಾಕ್ಷ ಸಭೆಯೊಳು ಬಂದಹೊಳೆವೊ ಎಷ್ಟು ಹೇಳಿದ್ದು ತಂದಝಳಿಸೋವಸ್ತ್ರ ಕೊಳ್ಳಿರೆಂದಬಳೆಯ ಪಾರ್ಥಗೆ ತರಲಿಲ್ಲೆಂದ 4ರಾಜ್ಯ ಲಕ್ಷಣ ನಿನಗಿಲ್ಲೆಂದಮಾಜುದಾ ಕುಲ ಧರ್ಮಕುಂದತೇಜಿ ಮುಂದೆ ಓಡಿದ್ದು ಚಂದಸೋಜಿಗವಲ್ಲ ನಕುಲನೆಂದ 5ಸುಮನಸರು ನಗುವೊರೆಂದಭ್ರಮೆಯ ಕಳೆದ್ಯೊ ಸಹದೇವ ಎಂದಅಮಿತ ದನವ ಕಾಯ್ದ್ಯೊಛಂದರಮಿಯ ಅರಸು ನಗುವ ನೆಂದ 6ಅಂದ ಮಾತಿಗೆ ಬಲರಾಮ ಹೀಗೆಂದಚಂದ ವಾಯಿತು ಕುಶಲವೆಂದನಿಂದ್ಯವ ನೀ ಮಾಡಿಕೊ ಎಂದಇಂದಿರೇಶಗೆ ತಿಳಿಸಿರೆಂದ 7
--------------
ಗಲಗಲಿಅವ್ವನವರು
ರಂಗನಹುದೋ ನೀನು ಕನಕಾಚಲರಂಗನಹುದೋ ನೀನುತುಂಗಮಹಿಮ ಕೃ-ಪಾಂಗ ಚೆಲುವ ಮುದ್ದು ರಂಗಲಕ್ಷ್ಮಿಯ ರಮ-ಣಾಂಗ ಜಪಿತಮೂರ್ತಿಪದುರುಳರಕ್ಕಸನು ವೇದ ಕದ್ದೊಯ್ಯೆಮೀನಾಗಿ ತಂದೆಯದನ ಕೂರ್ಮನಾಗಿಗಿರಿಯ ಪೊತ್ತು ಎರೆದೆ ಸುರರಿಗೆ ಅಮೃತವವರಾಹನಾಗಿ ಧರೆಯ ಕದ್ದವನಶಿರವ ಖಂಡಿಸಿ ನೃಕೇಸರಿಯಾಗಿಯೆಕಂಬವನೊಡೆದು ನಿಶಾಚರನ ಸಂಹ-ರಿಸಿದೆ ರಣಧೀರಮಾಧವ1ಪುಟ್ಟ ಮಾನವನಾಗಿ ಬಲಿಯ ದಾನವ ಬೇಡಿಅಷ್ಟು ಬ್ರಹ್ಮಾಂಡವನೆಲ್ಲಈರಡಿಮಾಡಿತುಟ್ಟ ತುದಿಗೆ ಅವನ ಶಿರದ ಮೇ-ಲಿಟ್ಟು ದ್ವಾರವ ಕಾಯ್ದನಾ ಭೂಸುರರಿಗೆಕೊಟ್ಟ ಮೇದಿನಿಯ ದಾನವ ಭಳಿರೆ ಜಗಜಟ್ಟಿ ಪರಶುರಾಮ ಕ್ಷತ್ರಿಯ ಛೇದನ2ದಶರಥನ ಸುತನಾಗಿ ವಸುಧಜೆಯ ಕಳೆದುಅಸಮ ಕಪಿವೀರರ ನೆರಪಿ ಸೇತುವೆಕಟ್ಟಿಅಸದಳ ರಾಕ್ಷಸರ ಇಂದ್ರಜಿತುದಶಶಿರಅತಿಕಾಯರ ಕುಂಭಕರ್ಣಅಸಹಾಯ ರಣಶೂರರ ಛೇದಿಸಿ ಸೀತಾಶಶಿಮುಖಿಯ ಕರೆತಂದ ರಘುರಾಮಕಂಠೀರವ3ದೇವಕೀಸುತನಾಗಿ ಬಾಣನ ಭಂಗಿಸಿಮಾವ ಕಂಸನ ಶಿಶುಪಾಲ ನರಕಾಸುರ ಕೌ-ರವ ವೀರರನು ಕೊಂದು ಪಾಂಡುರಾಜನ ಪುತ್ರ-ರನು ಪಾಲಿಸಿ ಪೃಥವಿ ಪಾವನರಾದರನು ರಕ್ಷಿಸಿ ಬೌ-ದ್ಧಾವತಾರ ತಾನಾಗಿ ವ್ರತ ಭಂಗಿಸಿದೆ ನೀನು4ತೇಜಿಯನೇರಿ ನೇಣನೆ ಹಿಡಿದು ಪಾಪದಬೀಜವನುರುಪಿ ಪುಣ್ಯದ ಬಿತ್ತನುರುಹಿಯೆಸೋಜಿಗಸಹಸ್ರರ ಕನಕಗಿರಿಮೂಜಗದೊಳು ವಿಸ್ತಾರವಾಗಿಹಘನತೇಜೋ ಮೂರುತಿ ಗಂಭೀರ ಸಿದ್ಧ ಪರ್ವತರಾಜ ಸದ್ಗುರು ಚಿದಾನಂದಾವಧೂತ5
--------------
ಚಿದಾನಂದ ಅವಧೂತರು
ರಂಗನಾಯಕಸ್ವಾಮಿ ರಾಜೀವಲೋಚನ ಬೆಳಗಾಯಿತೇಳೆನ್ನುತಅಂಗನೆ ಲಕುಮಿ ತಾ ಪತಿಯನೆಬ್ಬಿಸಿದಳುಶೃಂಗಾರದ ನಿದ್ರೆ ಸಾಕೆನ್ನುತಪ.ಪಕ್ಷಿರಾಜನು ಬಂದು ಬಾಗಿಲೊಳಗೆನಿಂದುಅಕ್ಷಿ ತೆರೆದು ಬೇಗ ಈಕ್ಷಿಸೆಂಬ ||ಪಕ್ಷಿಜಾತಿಗಳೆಲ್ಲ ಚಿಲಿಪಿಲಿಗುಟ್ಟುತಸೂಕ್ಷ್ಮದಲಿ ನಿನ್ನನು ಸ್ಮರಿಸುವುವೊ ಕೃಷ್ಣ 1ಸನಕ - ಸನಂದನ - ಸನತ್ಸುಜಾತರು ಬಂದುವಿನಯದಿ ಕೈಮುಗಿದು ಓಲೈಪರು ||ಘನಶುಕ - ಶೌನಕ - ವ್ಯಾಸ ವಾಲ್ಮೀಕರುನೆನೆದು ಕೊಂಡಾಡುವರೊ ಹರಿಯೇ 2ಸುರರು ಕಿನ್ನರರು ಕಿಂಪುರುಷರು ಉರಗರುಪರಿಪರಿಯಲಿ ನಿನ್ನ ಸ್ಮರಿಸುವರು ||ಅರುಣನು ಬಂದುದಯಾಚಲದಲ್ಲಿ ನಿಂದಕಿರಣ ತೋರುವ ಭಾಸ್ಕರನು ಶ್ರೀ ಹರಿಯೇ 3ಪದುಮನಾಭನೆ ನಿನ್ನ ನಾಮಾಮೃತವನುಪದುಮಾಕ್ಷಿಯರು ತಮ್ಮ ಮನೆಯೊಳಗೆ ||ಉದಯದೊಳೆದ್ದು ಸವಿದಾಡುತ ಪಾಡುತದಧಿಯ ಕಡೆವರೇಳು ಮಧುಸೂದನ ಕೃಷ್ಣ 4ಮುರುಮಢನನೆ ನಿನ್ನ ಚರಣದ ಸೇವೆಯಕರುಣಿಸಬೇಕೆಂದು ತರುಣಿಯರು ||ಪರಿಪರಿಯಿಂದಲಿ ಸ್ಮರಿಸಿ ಹಾರೈಪರುಪುರಂದರವಿಠಲ ನೀನೇಳೊ ಹರಿಯೇ 5
--------------
ಪುರಂದರದಾಸರು
ರಂಗನೊಲಿದ ನಮ್ಮ ಕೃಷ್ಣನೊಲಿದ |ಅಂಗನೆ ದ್ರೌಪದಿಗೆ ಅಕ್ಷಯವಸ್ತ್ರವನಿತ್ತುಪಕರಿಯಪುರದ ನಗರದಲ್ಲಿ ಕೌರವರು ಪಾಂಡವರು |ಧರೆಯನೊಡ್ಡಿ ಲೆತ್ತವಿಡಿದು ಜೂಜನಾಡಲು ||ಪರಮಪಾಪಿ ಶಕುನಿ ತಾನು ಪಾಸಿನೊಳಗೆ ಪೊಕ್ಕಿರಲು |ಧರುಮರಾಯ ಧಾರಿಣಿ - ದ್ರೌಪದಿಯ ಸೋತನು 1ಮುದ್ದುಮೊಗದ ದ್ರೌಪದಿಯ ಮುಂದೆಮಾಡಿ ತನ್ನಿರೆಂದು |ತಿದ್ದಿ ತನ್ನ ಮನ್ನೆಯರಿಗೆ ತಿಳಿಯಹೇಳಿದ ||ಮುದ್ರೆಮನ್ನೆಯರು ಬಂದು ದ್ರೌಪದಿಯ ಮುಂದೆ ನಿಂತು |ಬುದ್ಧಿಯಿಂದಲೆಲ್ಲವನು ಬಿನ್ನಹಮಾಡಲು 2ಅಮ್ಮ ಕೇಳೆ ಅರಸುಗಳು ಅಚ್ಚ ಪಗಡೆ ಪಂಥವಾಡಿ |ಹೆಮ್ಮೆಯಿಂದ ಜೂಜಿಗಿಟ್ಟು ಲೆತ್ತವಾಡಲು ||ಧರ್ಮರಾಯ ಸೋತನೆಂದು ಸತ್ಯವಚನಿ ಕೌರವಂಗೆ |ನಿಮ್ಮ ನಿಜದಿ ಸೇರಿ ಆಗ ಕೊಟ್ಟರೆಂದರು 3ಪಟ್ಟಪದವಿ ಅವರಿಗಾಗಿ ಬಡವರಾಗಿ ಇರುವೆವೆಂದರೆ |ಕಿಟ್ಟ ಪಗಡೆ ಪಂಥ ಜೂಜಿದೆಲ್ಲಿ ಒದಗಿತು ? ||ದುಷ್ಟ ಕೌರವನು ಎನ್ನ ಲಜ್ಜೆ - ನಾಚಿಕೆಯ ಕೊಂಡು |ಭ್ರಷ್ಟ ಮಾಡುವನು ಎಂದು ಬಳಲಿ ದ್ರೌಪದಿ 4ಬಾಗಿ ಬಳುಕಿ ಬೆದರಿ ಬಿಕ್ಕಿ ಕಣ್ಣ ನೀರನುದುರಿಸುತಲಿ |ಮಾಗಿಯ ಕೋಗಿಲೆಯಂತೆಕಾಯ ಒಲೆಯುತ ||ಆಗ ಕೃಷ್ಣನಂಘ್ರಿಗಳನು ಅಂತರಂಗದಲಿ ನೆನೆದು |ಸಾಗಿಸಾಗಿ ಹೆಜ್ಜೆ ಇಡುತ ಸಭೆಗೆ ಬಂದಳು 5ವೀರಕರ್ಣ ಅಶ್ವತ್ಥಾಮ ವಿದುರ ಶಲ್ಯ ಭಗದತ್ತರು |ಕ್ರೂರ ಕೌರವ ದುಃಶಾಸನ ಗುರುಹಿರಿಯರು ||ಸಾರುತಿಪ್ಪ ಭಟರು ಪರಿವಾರ ರಾವುತರ ಕಂಡು |ಧಾರಿಣಿಗೆ ಮುಖವ ಮಾಡಿ ನಾಚಿನಿಂತಳು 6ಚೆಂದದಿಂದ ದುರ್ಯೋಧನ ಚದುರಿ ದ್ರೌಪದಿಯ ಕಂಡು |ಮುಂದರಿಯದೆ ಮುಗುಳುನಗೆಯ ಮಾತನಾಡಿದ ||ಅಂದು ಸ್ವಯಂವರದಲ್ಲಿ ಐವರಿಗೆ ಆದ ಬಾಲೆ |ಇಂದು ಎನ್ನ ಪಟ್ಟದರಸಿಗೊಪ್ಪಿದೆಯೆಂದನು7ಮಲ್ಲಿಗೆಯನು ಮುಡಿಯೆ ನಾರಿ ಮುದ್ದುಮೊಗದ ಒಯ್ಯಾರಿಚೆಲ್ಲೆಗಂಗಳ ದ್ರೌಪದಿಯೇ ಬಾರೆ ಎಂದನು ||ಬಿಲ್ಲು ಎತ್ತಲಾರದವನೆ ಬಂಡಣ ಕಾದದಿದ್ದವನೇ |ಹಲ್ಲುಕೀಳುವರೈವರು ಬೇಡವೆಂದಳು 8ಬಟ್ಟೆಬಡಕರೈವರಿಗೆ ಮಿತ್ರೆಯಾಗುವುದು ಸಲ್ಲ |ಪಟ್ಟಿಮಂಚಕೊಪ್ಪುವಂತ ಬಾರೆ ಎಂದನು ||ಕೆಟ್ಟಮಾತನಾಡದಿರೊ ಕ್ರೋಧದಿಂದ ನೋಡದಿರೊ |ರಟ್ಟೆಕೀಳುವರೈವರು ಬೇಡವೆಂದಳು 9ಅಡವಿತಿರುಕರೈವರಿಗೆ ಮಡದಿಯಾಗುವುದು ಸಲ್ಲ |ತೊಡೆಯ ಮೇಲೆ ಒಪ್ಪುವಂತೆ ಬಾರೆ ಎಂದನು ||ಬೆಡಗುಮಾತನಾಡದಿರೊ ಭೀಮಸೇನನ ಗದೆಯು ನಿನ್ನ |ತೊಡೆಯ ಮೇಲೆ ಒಪ್ಪುವದು ಬೇಡವೆಂದಳು 10ಅಚ್ಚ ಪೊಂಬಣ್ಣದ ಬೊಂಬೆ ಆನೆಯಂತೆ ನಡೆವ ರಂಭೆ |ಅಚ್ಚ ಮುತ್ತಿನಂತೆ ಬಿಂಬೆ ಬಾರೆ ಎಂದನು ||ಹೆಚ್ಚು - ಕುಂದನಾಡದಿರೊ ಪರರ ಹೆಣ್ಣ ನೋಡಿದಿರೊ |ಚುಚ್ಚಿ ಹಾಕುವರೈವರು ಬೇಡವೆಂದಳು 11ಎಷ್ಟುಬಿಂಕ - ಬಡಿವಾರವು ಹೆಣ್ಣ ಬಾಲೆಗಿವಳಿಗೆಂದು |ಸಿಟ್ಟಿನಿಂದ ದುರ್ಯೋಧನ ಸಾರಿ ಕೋಪಿಸಿ ||ಉಟ್ಟ ಸೀರೆ ಸೆಳೆಯಿರಿವಳಉಬ್ಬು ಕೊಬ್ಬು ತಗ್ಗಲೆಂದು |ದೃಷ್ಟಿಯಿಂದ ದುಃಶಾಸಗೆ ಸನ್ನೆ ಮಾಡಿದ 12ದುರುಳ ದುಃಶಾಸನ ಬಂದು ದ್ರೌಪದಿಯ ಮುಂದೆ ನಿಂತು |ಕರವ ಪಿಡಿದು ಸೆರಗಹಿಡಿದು ನಿರಿಯ ಸೆಳೆಯಲು ||ಮರುಳು ಆಗದಿರೋ ನಿನ್ನ ರಕ್ತದೊಳಗೆ ಮುಡಿಯನದ್ದಿ |ಕರುಳ ದಂಡೆಯನ್ನೆ ಮಾಡಿ ಮುಡಿವೆನೆಂದಳು 13ಗುಲ್ಲುಗಂಟಿ ಹೆಣ್ಣೆ ನಿನ್ನ ಕಾಡಿ ಬಳಲಿಸುವೆನು ಎಂದು |ಗಲ್ಲದಲ್ಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ನಿಲ್ಲೊ ನಿಲ್ಲೊ ಪಾಪಿ ನಿನ್ನ ನಾಲಗೆ ಎರಡಾಗಿ ಸೀಳಿ |ಪಲ್ಲಿನಲ್ಲಿ ಕೇಶ ಹಿಕ್ಕಿಕೊಂಬೆನೆಂದಳು 14ಬೆನ್ನಿನಲಿ ಪೆಟ್ಟನಿಕ್ಕಿ ಭಂಡುಮಾಡುವೆನು ಎಂದು |ಕೆನ್ನೆಯಲಿ ಕೈಯನಿಕ್ಕಿ ನಿರಿಯ ಸೆಳೆಯಲು ||ರನ್ನೆ ವೀರಬೊಬ್ಬೆಯಿಕ್ಕಿ ರಭಸದಿಂದ ಸಾರುತಲಿ |ಪನ್ನಗಶಯನ ಕೃಷ್ಣ ಕೃಷ್ಣ ಕಾಯೊ ಎಂದಳು 15ಮಚ್ಚ ಕೂರ್ಮವರಹ ಕಾಯೊ, ಮುದ್ದು ನಾರಸಿಂಹ ಕಾಯೊ |ಹೆಚ್ಚಿನ ವಾಮನನೆ ಕಾಯೊಭಾರ್ಗವ ಕಾಯೊ ||ಅಚ್ಯುತ ರಾಮಕೃಷ್ಣ ಕಾಯೊ ಬೌದ್ಧ ಕಲ್ಕಿರೂಪ ಕಾಯೊ |ಸಚ್ಚಿದಾನಂದ ಸ್ವಾಮಿ ಕಾಯೊ ಎಂದಳು16ಸಜ್ಜನರ ಪ್ರಿಯನೆ ಕಾಯೊ ಸಾಧುರಕ್ಷಕನೆ ಕಾಯೊ |ನಿರ್ಜರವಂದಿತನೆ ಕಾಯೊ ನರಹರಿ ಕಾಯೊ |ಅರ್ಜುನನ ಸಖನೆ ಕಾಯೊ ಆನತಪಾಲಕನೆ ಕಾಯೊ |ಲಜ್ಜೆ - ನಾಚಿಕೆಯ ಕಾಯೊ ಸ್ವಾಮಿ ಎಂದಳು 17ಸಿಂಧು ಸಾಗರದ ಶಯನ ದ್ರೌಪದಿಯ ಮೊರೆಯಕೇಳಿ |ಅಂದು ಉಟ್ಟ ವಸ್ತ್ರಗಳುಅಕ್ಷಯ ವೆಂದನು||ಒಂದು ಎರಡು ಮೂರು ನಾಲ್ಕು ಕೋಟ್ಯಸಂಖ್ಯ ಸೀರೆಗಳು |ನೊಂದು ಬೆಂದು ದುಃಶಾಸನು ನಾಚಿಕುಳಿತನು 18ನೋಡಿದರು ದ್ರೌಪದಿಯ ಮಾನರಕ್ಷ ಲೀಲೆಗಳನು |ಮಾಡಿದರು ಮಾಧವನ ಮುದ್ದು ಸ್ತೋತ್ರವ ||ಮೂಢ ಕೌರವನ ಕೂಡಮಾನಿನಿ ದ್ರೌಪದಿಯು ಪಂಥ - |ವಾಡಿ ತನ್ನ ಪತಿಗಳೈವರನ್ನು ಗೆಲಿದಳು19ಕೇಶಮುಡಿಗಳನ್ನಕಟ್ಟಿ ಕ್ಯೆಯಕಾಲಮಣ್ಣನೊರಸಿ |ಸಾಸಿರನಾಮದ ಕೃಷ್ಣನು ಸುರರ ಪಾಲಿಪ |ವಾಸಿಯುಳ್ಳ ಕೃಷ್ಣ ಎನ್ನ ವಹಿಸಿ ಮಾನಕಾಯ್ದನೆಂದು | ಸಂತೋಷದಿಂದ ದ್ರೌಪದಿಯು ಮನೆಗೆ ಬಂದಳು 20ಇಂತು ಆ ದ್ರೌಪದಿಯ ಮಾನರಕ್ಷ ಲೀಲೆಗಳನು |ಸಂತತದಲಿ ಹಾಕಿಕೇಳಿ ನಲಿವ ಜನರಿಗೆ |ಸಂತಾನ ಸೌಭಾಗ್ಯ ಸಕಲಭೀಷ್ಟೆಗಳನು ಕೊಡುವ |ಕಂತು ಜನಕ ನಮ್ಮ ಪುರಂದರವಿಠಲನು21
--------------
ಪುರಂದರದಾಸರು
ರಂಗರಾಯರ ಮುಂದೆಇವರಕೊಂಗಬುದ್ಧಿಕೋಲಹೊಯ್ಸಿಹಂಗಿನ ಮುಯ್ಯ ಕಳೆದೆವಇವರ ತಂಗಿಯರಮಾರಿಭಂಗಿಸಿ ನಾವುಪ.ಅಪ್ಪ ಅರಸು ಆಗೊ ಇವರತಪ್ಪಿನ ಮಾತಿಲೆ ಸೋಲಿಸಿನಿಮ್ಮಪ್ಪ ನಿಮ್ಮರಸನೆಂಬೊಚಪ್ಪಾಳೆಯನಿಕ್ಕಿಸಿ ನಾವು 1ಒಡ ಹುಟ್ಟಿದಣ್ಣನ ದ್ರೌಪತಿಒಡಗೂಡುತಲಿ ತಾ ಇಡುವರೆಈ ಆಣೆ ನಮಗೆನುಡಿದ ಆ ನುಡಿಗೆ ನಾಚಿಸಿ ಇವರನು 2ಹುಟ್ಟು ಹೊಂದೊದೆಂಬೋದಿವರಬಿಟ್ಟು ಕಡೆಗೆ ಮಾಡಿಸಿನಾವುಶ್ರೀ ಕೃಷ್ಣನಂಫ್ರಿ ಕಮಲವನ್ನುಎಷ್ಟು ದಯದಿ ತೋರಿಸಿ 3ಅಷ್ಟ ಮದದ ತಮವು ಎಂಬೊಕುಟ್ಟಿ ಹಿಟ್ಟು ಮಾಡಿಸಿ ನಾವುಸಿಟ್ಟು ಕೋಪವೆಂಬೊ ಬಣವಿ ಒಟ್ಟಿಕೆಂಡ ಹೇರಿಸಿ ನಾವು 4ಸತ್ವರಜ ತಮವು ಎಂಬೊಕತ್ತಲೆಯ ಅಡಗಿಸಿ ನಾವುಮತ್ತೆ ಜ್ಞಾನ ಸೂರ್ಯನಪ್ರಶಸ್ತ ಉದಯ ಮಾಡಿಸಿ 5ನೀತಿ ತಪ್ಪಿದ ಬಾಲೆಯರಭೂತ ಹೊರಗೆ ಹೊರಡಿಸಿನಾವುಮಾತ್ರಗಳೆಂಬೊ ಇವರಗಾತ್ರಬಿಟ್ಟು ದೂರ ಇಡಿಸಿ6ಸಂಚಿತಗಾಮಿಯು ಇವರಕಿಂಚಿತುಳಿಯದಲೆ ಹಾರಿಸಿ ನಾವುಪಂಚ ಪಾಂಡವರ ಮಡದಿಪಾಂಚಾಲಿಯ ನಾಚಿಸಿ 7ದಶೇಂದ್ರಿಯಗಳೆಂಬೊ ಕುದುರೆಗಳದಶ ದಿಕ್ಕಿಗೆ ಓಡಿಸಿ ನಾವುಮುಸುಕು ಹಾಕಿದ ಅಂಗವನುಕೊಸರಿ ಕೊಸರಿ ಝೂಡಿಸಿ 8ನಿಂದ್ಯವಾದಪಟಲುವಿದ್ಯೆಚಿಂದಿ ಚಿಂದಿ ಮಾಡಿಸಿ ನಾವುತಂದೆ ರಾಮೇಶನ ಪಾದಕೆತಂದು ಇವರ ಹೊಂದಿಸಿ 9
--------------
ಗಲಗಲಿಅವ್ವನವರು
ರಂಭೆ-ಊರ್ವಸಿ ರಮಣಿಯರೆಲ್ಲರು ||ಚೆಂದದಿಂ ಭರತನಾಟ್ಯವ ನಟಿಸೆ |ಝಂತಕ ತಕಧಿಮಿ ತದಿಗಣತೋಂ ಎಂದು |ಝಂಪೆತಾಳದಿ ತುಂಬುರನೊಪ್ಪಿಸೆ ||ಧಾಪಮಪಧಸರಿ ಎಂದು ಧ್ವನಿಯಿಂದ |ನಾರದ ತುಂಬುರು ಗಾನವ ಮಾಡಲು |ನಂದಿಯು ಚೆಂದದಿ ಮದ್ದಲೆ ಹಾಕಲು 1ಫಣಿಯ ಮೆಟ್ಟಿ ಬಾಲವ ಕೈಯಲಿ ಪಿಡಿದು |ಫಣಘಣಿಸುತ ನಾಟ್ಯವನಾಡೆ |ದಿನಪಮಂಡಲದಂತೆ ಪೊಳೆಯುವ ಮುಖದೊಳು ||ಚಲಿಸುತ ನೀಲಕೇಶಗಳಾಡೆ |ಕಾಲಲಂದಿಗೆ ಗೆಜ್ಜೆ ಘುಲುಘುಲು ಘುಲುಘುಲು |ಘುಲುರೆಂದು ಉಡಿಗೆಜ್ಜೆ ಗಂಟೆಗಳಾಡೆ ||ದುಷ್ಟ ಕಾಳಿಂಗನ ಮೆಟ್ಟಿ ಭರದಿಂದ |ಪುಟ್ಟಿ ಪಾದವನು ಇಟ್ಟ ಶ್ರೀಕೃಷ್ಣನು |ಮೆಟ್ಟಿದ ತದ್ಧಿಮಿ ತಧಿಗಣತೋಂ ಎಂದು 2ಸುರರುಪುಷ್ಪದ ವೃಷ್ಟಿಯ ಕರೆಯಲು |ಸುದತಿಯರೆಲ್ಲರು ಪಾಡಲು |ನಾಗಕನ್ನೆಯರು ನಾಥನ ಬೇಡಲು |ನಾನಾವಿಧ ಸ್ತುತಿ ಮಾಡಲು ||ರಕ್ಕಸರೆಲ್ಲರು ಕಕ್ಕಸವನೆ ಕಂಡು |ದಿಕ್ಕಿದಿಕ್ಕುಗಳಿಗೋಡಲು ||ಚಿಕ್ಕವನಿವನಲ್ಲ ಪುರಂದರವಿಠಲ |ವೆಂಕಟರಮಣನ ಬೇಗ ಯಶೋದೆ |ಬಿಂಕದೊಳೆತ್ತಿ ಮುದ್ದಾಡೆ ಶ್ರೀಕೃಷ್ಣನ 3
--------------
ಪುರಂದರದಾಸರು
ರಾಘವನಾಡಿದ ಮಾತಿಗಾಂಜನೇಯ ಬಿನ್ನವಿಸುವದು |ಈಗ ಪೇಳುವೆ ಸಜ್ಜನರಾಲಿಸುವದು ಪಆ ರವಿನಂದನನು ತಾ ಮೇರೆ ಮಾಡಿ ಅಟ್ಟಿದನು |ವಾನರರುಗಳನು ತಿಂಗಳು ಮೀರಿತಿಂದಿಗೆ ||ಮಾರುತಿ ಕೇಳೀ ಮಾತು ಇನ್ನಾರ ಕಾಣೆ ಬಲ್ಲಿದರ |ನಾರಿಯೆಲ್ಲಿಹಳೋ ವಾರ್ತೆ ತಾರೋ ನೀ ಪೋಗಿ 1ಸ್ವಾಮಿ ಪಾಲಿಸೊ ಅಪ್ಪಣೆ ನಾ ಮುಂಚೆ ಪೋಗುವೆ |ತಡವ ಮಾಡದೆ ಎಲ್ಲೀಗೆನ್ನ ಭೂಮಿಜಾ ರಮಣ ||ಈ ಮುದ್ರೆ ಕೊಂಡು ಪೋಗೋ ಶಾಮಲಾಪತಿ ದಿಕ್ಕಿಗೆ |ಸಮುದ್ರ ದಾಟಿ ವೇಗಪಾವಮಾನಿಕೇಳೋ 2ಭೂತಲಾಕಾಶ ಲೋಕಾದಿ ಪಾತಾಳದೊಳಗಿರಲಿ |ನಾ ತರುವೇನು ವಾರ್ತೆ ಜಗನ್ನಾಥಪರಾಕು||ಹೇತರಳತ್ರಿಲೋಕ ವಿಖ್ಯಾತನಾಗಿಹ ರಾವಣ |ಪಾತಕಕೊಂಡು ಪೋಗಿಹ ಸೀತೆಯ ಕೇಳು 3ಬುದ್ಧಿದೇವ ನೀ ಕೊಟ್ಟಂಥ ಬುದ್ಧಿಯಿಂದಲೇ ಅವನ |ಗುದ್ದಿ ಸರ್ವ ಬಲವನ್ನೂ ಒದ್ದು ಬರುವೆನೊ ||ಮುದ್ದು ಕಂದ ರಕ್ಕಸರವಧ್ಯರೋವರಪಡೆದು |ರುದ್ರನಿಂದ ಮಾಡದಿರೊ ಗದ್ದಲ ಕೇಳೋ 4ತಂದೆ ರಾಮಾ ನಿನ್ನ ದಯೆಯಿಂದ ಈಡಲ್ಲವೊ ಯನಗೆ |ನಂದಿಧ್ವಜಾ ಈ ರಕ್ಕಸರೊಂದು ತೃಣವೋ ||ಕಂದ ಈ ವೇಳೆಯೊಳೇನು ಬಂದುದನು ಭೋಗಿಸಿ ನಾನು |ಕೊಂದು ಹಾಕುವ ದಿನವೂ ಮುಂದುಂಟು ಕೇಳೋ5ದೇವಿಯ ನೋಡಿ ಬರುವಾಗ ತಾವಂತು ಕೆಣಕಲು ದಾ- |ನವರು ಸುಮ್ಮನಿರಲೇನು ದೇವದೇವೇಶ ||ಕೋವಿದಾಗ್ರೇಶನೆ ನೀನು ಸಾವಿರಾಳಿಗೆ ಒಬ್ಬನೇ |ಆ ವಿಚಾರ ಮನಕೆ ತರುವದೇ ಕೇಳೋ 6ಹೇಳಿದ ಮಾತು ಕಟ್ಟಿದ ಕೂಳು ನಿಲ್ಲವೊ | ಆ ವನ-ದೊಳೇನಹದೊ ಬಲ್ಲೆನೇ ಪ್ರಾಣೇಶ ವಿಠಲಾ ||ಬಾಲಕ ಹನುಮಂತ ನಿನ್ನೊಳಗೆನ್ನಾ ರಾಣಿಯಲ್ಲಿ- |ಹಳೋ ನೋಡಿ ಬರುವುದಕಾಲಸ್ಯ ಕೇಳೋ 7
--------------
ಪ್ರಾಣೇಶದಾಸರು
ರಾಘವೇಂದ್ರಾ - ಸದ್ಗುಣಸಾಂದ್ರಾ ಪರಾಘವೇಂದ್ರಾ ಅನು - ರಾಗದಿ ಭಕ್ತರರೋಗವ ಕಳೆದು ಸು - ಭೋಗವ ಸಲಿಸೋ ಅ.ಪಧೀಮಂತರಿಗತಿ - ಕಾಮಿತವೀವೊಶ್ರೀಮಂತನೆ ಎನ - ಕಾಮಿತ ಸಲಿಸೋ 1ಆಪದ್ಬಾಂಧವ - ಕೋಪವ ಮಾಡದೆನೀ ಪಾಲಿಸೋ ಎನ್ನ - ಪಾಪವ ನೋಡದೆ 2ಅನ್ಯನಲ್ಲವೊ - ನಿನ್ನ ಸುಭಕ್ತನುಮನ್ನಿಸಿ ದಯದಿ ನೀ - ಎನ್ನನು ಕಾಯೋ 3ಜನ್ಯನ ಜನಕನು - ಮನ್ನಿಸದಿರಲುಅನ್ಯರು ಕಾಯ್ವರನನ್ಯಪಾಲಕನೇ 4ಈಶನು ನೀನೈ - ದಾಸನು ಎನ್ನನು -ದಾಶಿನ ಮಾಡದೆ - ಪೋಷಿಸಿ ಪೊರೆಯೈ 5ಎಂದಿಗೆ ನಿನ್ನನು - ಪೊಂದುವೆ ಗುರುವರತಂದೆಯೆ ತೋರಿಸೋ - ಮುಂದಿನ ಗತಿಯಾ 6ಪೋತನು ನಾನೈ - ಮಾತನು ಲಾಲಿಸೊನೀತ ಗುರುಜಗನ್ನಾಥ ವಿಠಲ ಪ್ರಿಯ 7
--------------
ಗುರುಜಗನ್ನಾಥದಾಸರು
ರಾಜ ರಾಜರ ನೋಡ ಅಮ್ಮಯ್ಯಕೋಟಿ ತೇಜರು ನಿಂತಿಹರಮ್ಮಯ್ಯ ಪ.ಕುಂತಿ ಮಕ್ಕಳ ನೋಡ ಅಮ್ಮಯ್ಯಚಂದ್ರ ಕಾಂತಿಯಿಂದೊಪ್ಪುತ ಅಮ್ಮಯ್ಯನಿಂತ ಸೊಬಗು ನೋಡ ಅಮ್ಮಯ್ಯಲಕ್ಷ್ಮೀಕಾಂತನ ಇದುರಿಗೆ ಅಮ್ಮಯ್ಯ 1ಪಾಂಡವರ ನೋಡ ಅಮ್ಮಯ್ಯಸೂರ್ಯ ಮಂಡಲದಂತಿಹರ ಅಮ್ಮಯ್ಯದುಂಡಾಗಿ ನಿಂತಿಹರಮ್ಮಯ್ಯಅವರಕೊಂಡಾಡಲ್ವಶವಲ್ಲ ಅಮ್ಮಯ್ಯ2ಶಶಿಮುಖಿಯರ ನೋಡ ಅಮ್ಮಯ್ಯಕಾಂತೆ ದೇಶಲೆಲ್ಲ ಬೆಳಕು ನೋಡ ಅಮ್ಮಯ್ಯಹಸುಳೆಯರು ನಿಂತಿಹರಮ್ಮಯ್ಯನಮ್ಮ ಕುಸುಮನಾಭನ ಮುಂದೆ ಅಮ್ಮಯ್ಯ 3ಕಡು ಚಲುವೆಯರ ನೋಡಮ್ಮಯ್ಯನಿಂತಉಡುರಾಜಮುಖಿಯರಮ್ಮಯ್ಯಕಡಲಶಯನನ ಮುಂದೆ ಅಮ್ಮಯ್ಯಅವರಬೆಡಗು ಎಷ್ಟು ಹೇಳಲಮ್ಮಯ್ಯ4ಲಕ್ಷಣವಂತರಮ್ಮಯ್ಯನಿಂತು ನಕ್ಷತ್ರ ಮಾಲೆಯಂತೆ ಅಮ್ಮಯ್ಯವೀಕ್ಷಿಸಿ ರಾಮೇಶನ ಅಮ್ಮಯ್ಯಸುಖಅಕ್ಷಯಪಡೆದಿಹರಮ್ಮಯ್ಯ5
--------------
ಗಲಗಲಿಅವ್ವನವರು
ರಾಮ ಎನ್ನುವ ಎರಡು ಅಕ್ಷರದ ಮಹಿಮೆಯನು |ಪಾಮರರು ತಾವೇನ ಬಲ್ಲರಯ್ಯ ಪರಾಯೆಂದ ಮಾತ್ರದೊಳು ರಕ್ತ ಮಾಂಸದೊಳಿದ್ದಆಯಸ್ಥಿಗತವಾದ ಅತಿಪಾಪವನ್ನುಮಾಯವನು ಮಾಡಿ ಮಹಾರಾಯ ಮುಕ್ತಿಯ ಕೊಡುವದಾಯವನು ವಾಲ್ಮೀಕಿ ಮುನಿರಾಯ ಬಲ್ಲ 1ಮತ್ತೆ ಮ ಎಂದೆನಲು ಹೊರಬಿದ್ದ ಪಾಪಗಳುಒತ್ತಿ ಒಳ ಪೊಗದಂತೆಯೆ ಕವಾಟವಾಗಿಚಿತ್ತ ಕಾಯಗಳ ಸುಪವಿತ್ರ ಮಾಡುವ ಪರಿಯಭಕ್ತವರ ಹನುಮಂತ ತಾನೊಬ್ಬ ಬಲ್ಲ 2ಧರೆಯೊಳೀ ನಾಮಕ್ಕೆ ಸರಿಮಿಗಿಲು ಇಲ್ಲೆಂದುಪರಮವೇದಗಳೆಲ್ಲ ಪೊಗಳುತಿಹವುಸಿರಿಯರಸ ಶ್ರೀಪುರಂದರ ವಿಠಲ ರಾಮನನುವರಕಾಶಿಯೊಳಗಿಪ್ಪ ಶಿವನು ತಾ ಬಲ್ಲ 3
--------------
ಪುರಂದರದಾಸರು
ರಾಮ ನಾಮಾಮೃತವ ಕೊಂಬವರೆಲ್ಲ |ಪ್ರೇಮದಿಂದಚ್ಯುತ ಪೇಟೆಗೆ ಬನ್ನಿರೆ ಪಒಮ್ಮನವೆರಸಿ ಬನ್ನಿ |ನಿಮ್ಮ ಮನಕೆ ಬಂದಂತಳೆದು ಕೊಳ್ಳಿ ||ರಾಮಟಿಂಕೆಯ ಸಲಿಸಿ ಶ್ರೀ ಕೃಷ್ಣನೆಂಬ |ಧರ್ಮದ ಸಂತೆ ನೆರೆದಿದೆ ಬನ್ನಿ 1ಉಂಟು ನಾಲ್ಕು ಕುದುರೆಗಳು |ಎಂಟಾನೆಯ ಬಿರುಬಲೆಯಲ್ಲಿ ಕಟ್ಟಬಹುದು ||ಸಾಲವರ್ಣದ ಪಟ್ಟಿಯು ಏಳಿರೆ |ಏಳುಲೋಕವು ಬಲ್ಲದು 2ಬೆಲೆಯಿಲ್ಲದ ಮುತ್ತುಂಟು |ಏಳೇಳ್ಪುಟಿಯ ಹೊಳೆವಪರಂಜಿಯ ಚಿನ್ನವುಂಟು ||ಥಳಥಳಿಸುವ ನೀಲಿಯ ಕೊಂಬುವರೆಲ್ಲ |ನಳಿನನಾಭನ ಸನ್ನಿಧಿಗೆ ಬನ್ನಿ 3ಎರಡು ಕಾಶಿಯಲಳೆವ ಕೊಳಗವು |ಪಿರಿದುದೊಂದು ಕಿರಿದೊಂದು ಉಂಟಲ್ಲಿಗೆ ||ಗರಳವವೊರಿಸಲು ರತ್ನವು |ಮರುತಾಶ್ರಯನ ಸನ್ನಿಧಿಗೆ 4ಆರಂಗಡಿಯ ಸುಟ್ಟು |ಸೂರೆಮಾಡಿ ಏಳು ಎಂಟು ಹಟ್ಟಕೊರವನೊ...ದುದು ||ಸಾರಿಸಿ ನವವಿಧ ಶುಚಿಯ ಹೇಳಿದ |ಸರ್ವಾತ್ಮಗೆ ಸೌದೆಯ 5ಸುಂಕಿಗರೈವರಿಗೆ ಹರುಷದಿಂದ |ಪಂಕಜನಾಭನ ಚೀಲ ತೋರಿ ||ಶಂಕೆಯಿಲ್ಲದೆ ನಡೆವ ಅವರನೆಲ್ಲ |ವಂಚಿಸಿ ಎದೆಯ ಟೊಣೆದು ಹೋಗುವಾ 6
--------------
ಪುರಂದರದಾಸರು
ರಾಮ ಮಂತ್ರವ ಜಪಿಸೊ - ಏ ಮನುಜಾ ಶ್ರೀರಾಮ ಮಂತ್ರವ ಜಪಿಸೊ ಪಆ ಮಂತ್ರ ಈ ಮಂತ್ರ ನೆಚ್ಚಿ ಕೆಡಲು ಬೇಡಸೋಮಶೇಖರಗಿದು ಭಜಿಸಿ ಬಾಳುವ ಮಂತ್ರ ಅಪಕುಲಹೀನನಾದರೂ ಕೂಗಿ ಜಪಿಸುವ ಮಂತ್ರಛಲದಿ ಬೀದಿಯೊಳು ಉಚ್ಚರಿಪ ಮಂತ್ರ ||ಹಲವು ಪಾತಕಗಳ ಹಸನಗೆಡಿಸುವ ಮಂತ್ರಸುಲಭದಿಂದಲಿ ಸ್ವರ್ಗ ಸೂರೆಗೊಂಬುವ ಮಂತ್ರ 1ಸನುಮುನಿಗಳಿಗೆಲ್ಲ ಸುಲುಗೆಯಾಗಿಹ ಮಂತ್ರಮನುಮುನಿಗಳಿಗೆಲ್ಲ ಮೌನ ಮಂತ್ರ ||ಹೀನಗುಣಗಳೆಲ್ಲ ಹಿಂಗಿ ಹೋಗುವ ಮಂತ್ರಏನೆಂಬೆ ಧ್ರುವನಿಗೆ ಪಟ್ಟಗಟ್ಟಿದ ಮಂತ್ರ 2ಸಕಲ ವೇದಗಳಿಗೆ ಸಾರವಾಗಿಹ ಮಂತ್ರಮುಕುತಿ ಪಢಕೆ ಇದು ಮೂಲ ಮಂತ್ರ ||ಶಕುತ ಪರಕೆ ಇದು ಬಟ್ಟೆದೋರುವ ಮಂತ್ರಸುಖನಿಧಿ ಪುರಂದರವಿಠಲ ಮಹಾಮಂತ್ರ 3
--------------
ಪುರಂದರದಾಸರು
ರಾಮ ರಾಮ ರಾಮ ರಾಮ ರಾಮವೆನ್ನಿರೊ |ರಾಮ ರಾಮವೆಂಬ ನಾಮ ಮನದಿ ನೆನೆಯಿರೊ ಪ.ಇಂದ್ರಿಯಂಗಳೆಲ್ಲ ಕೂಡಿ ಬಂದು ತನ್ನ ಮುಸುಕಿದಾಗ |ಸಿಂಧುಸುತಾಪತಿಯ ಧ್ಯಾನ ಅಂದಿಗೆ ಒದಗಲೀಯದು1ಭರದಿ ಯಮನ ಭಟರು ಬಂದು ಹೊರಡು ಎಂದು ಮುಟ್ಟಲು |ಕೊರಳಿಗಾತ್ಮ ಸೇರಿದಾಗ ಹರಿಯ ಧ್ಯಾನ ದೊರೆಯದಯ್ಯ 2ಕಾಸಶ್ವಾಸದಲ್ಲಿ ಸಿಲುಕಿ ದೋಷ ಬಲಿದು ಪೋಗುವಾಗ |ವಾಸುದೇವನೆಂಬ ನಾಮ ವದನದಲ್ಲಿ ಒದಗದಯ್ಯ 3ಶೃಂಗಾರವಾದ ದೇಹ ತಂಗಿಬಿಟ್ಟು ಪೋಗುವಾಗ |ಕಂಗಳಿಗಾತ್ಮಾ ಸೇರಿದಾಗ ರಂಗನ ಧ್ಯಾನ ದೊರಕದಯ್ಯ 4ಕಷ್ಟಜನ್ಮದಲ್ಲಿ ಬಂದು ದುಷ್ಟಕರ್ಮಗಳನು ಮಾಡಿ |ಬಿಟ್ಟು ಹೋಗುವಾಗ ಪುರಂದರವಿಠಲನ ನೆನೆಮನವೆ 5
--------------
ಪುರಂದರದಾಸರು
ರಾಮ ರಾಮ ರಾಮ ಸೀತಾ ರಾಮ ಎನ್ನಿರೋ ಪ.ಇಂದ್ರಿಯಂಗಳೆಲ್ಲ ಕೂಡಿಬಂದು ತನುವ ಮುಸುಕಲುಸಿಂಧು ಸುತೆಯ ಪತಿಯಧ್ಯಾನಎಂದಿಗಲ್ಲಿ ದೊರೆಯದೊ 1ಭರದಿ ಯಮನ ಭಟರಾಗಲೆಹೊರಡು ಎಂದು ಮೆಟ್ಟಿ ತುಳಿಯೆಕೊರಳಿಗಾತ್ಮ ಸೇರಿದಾಗಹರಿಯ ಧ್ಯಾನ ದೊರೆಯದೊ 2ದೋಷಕ್ಲೇಶ - ದುಃಖವೆಂಬಶ್ಲೇಷ್ಮದಲ್ಲಿ ಸಿಕ್ಕಿ ಇರಲುವಾಸುದೇವ ಕೃಷ್ಣನೆಂಬುದಾಸಮಯಕ್ಕೆ ದೊರೆಯದೊ 3ಸಿಂಗಾರವಾದ ದೇಹವೆಲ್ಲಅಂಗವಳಿದು ಮುರಿದು ಬೀಳೆ ||ಅಂಗಳಿಗಾತ್ಮ ಸೇರಿದಾಗರಂಗನ ಧ್ಯಾನವು ದೊರೆಯದೊ 4ಕೆಟ್ಟ ಕೆಟ್ಟರಲ್ಲೊ ಬರಿದೆಕಟ್ಟ ಕಡೆಯಲ್ಲಿಕಾಯಬಿಟ್ಟು ಹೋಗುವಾಗಪುರಂದರವಿಠಲ ಧ್ಯಾನ ದೊರೆಯದೊ 5
--------------
ಪುರಂದರದಾಸರು