ಒಟ್ಟು 14318 ಕಡೆಗಳಲ್ಲಿ , 131 ದಾಸರು , 5549 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧೊರೆತನ ಮಾಡುವರೀ ಪರಿಯಾಗಲು |ತರವೇ ರುಕ್ಮಿಣೀಪತಿಕೇಳು ಪಬಲು ಬಲು ಋಷಿಗಳು ತಪವನೆ ಮಾಡಿ ನಿನ್ನ |ನಿಲುವಗಾಣದೆ ಬಳಲುವರು ||ಘಳಿಗೆ ಬೇಸರದಲೆ ಊಳಿಗದವನಂತೆ |ಬಲಿಯ ಬಾಗಿಲು ಕಾಯ್ವರೇ 1ಜಲಜ ಸಂಭವ ಈಶೇಂದ್ರಾದಿ ದೇವತೆಗಳು |ಬಿಡದೆ ನಿನ್ನ ವಂದಿಸುತಿರಲು |ಬಡವನಂದದಿ ಕರೆದಾಗಲೆ ತಡೆಯದೆ |ನಡಿಸುವರೆ ಪಾರ್ಥನ ರಥವ 2ಸಚ್ಚಿದಾನಂದನಿತ್ಯತೃಪ್ತ ಪೂರ್ಣ ಕಾಮನೆಂದು |ಹೆಚ್ಚಾಗಿ ವೇದ ಕೂಗುತಿರಲು ||ಹುಚ್ಚು ಪ್ರಾಣೇಶ ವಿಠ್ಠಲನಯ್ಯನೆ ಶಬರಿಯ |ಉಚ್ಚಿಷ್ಠ ಹಣ್ಣ ಮೆಲ್ಲುವರೆ 3
--------------
ಪ್ರಾಣೇಶದಾಸರು
ಧ್ಯಾನವನೆಮಾಡುಬಿಂಬಮೂರುತಿಯಆನಂದದಲಿ ಕುಳಿತು ಅಂತರಂಗದಲಿಸದಾಚಾರನಾಗಿ ದ್ವಾದಶ ಗುರುಗಳಿಗೆರಗಿಅಂಗವನು ಚಲಿಸದೆ ಚೆಂದಾಗಿ ದೃಢದಿಂದಭಗವದ್ರೂಪಗಳೆಲ್ಲ ಒಂದು ಸಾರಿ ಸ್ಮರಿಸಿತಿರುಗಿ ಮೆಲ್ಲಗೆ ಮೂರು ರಂಧ್ರದಿಂದಲಿ ನಿನ್ನಆತನೆ ಬಿಂಬಮೂರುತಿಯೆಂದು ತಿಳಿದುಕೊಜ್ಞಾನಪ್ರಕಾಶದಲಿ ನಿನ್ನ ಹೃದಯ-ಗುಣನಾಲ್ಕರಿಂದ ಉಪಾಸನೆಯನುಮಾಡುಮಮತೆಯನು ತೊರೆದು ಮೇಲೊಂದಪೇಕ್ಷಿಸದೆಈಪರಿಧೇನಿಸಲು ದೇವ ಕರುಣವ ಮಾಳ್ಪ
--------------
ಗೋಪಾಲದಾಸರು
ಧ್ಯಾನಿಪೆ ನಿನ್ನ ಧ್ಯಾನಿಪರಘಹರ ಧ್ಯಾನಿಪೆ ನಿನ್ನಜಾನಕೀಧವ ತವಚರಣ ಕರುಣ ಕೋರಿ ಪಪರತರ ಮಹಿಮನೆ ಶರಣರ ಪ್ರಿಯಗಿರಿಧರ ಸಿರಿವರ ಮರೆ ಕರುಣಿಸು ನರಹರಿ 1ಪತಿತಪಾವನ ನಿಮ್ಮ ಶ್ರುತಿಬೋಧ್ವಾಕ್ಯಗಳಭಿರತಿಹಿಡಿದಿತ್ತು ಯತಿನುತಕ್ಪಿತಿಪತಿಪೊರೆ2ಪೋಷಿಸೆನ್ನನು ನಿನ್ನ ದಾಸತ್ವ ನೀಡಿ ಮುನ್ನದೋಷನಾಶನೆÉ ಜಗದೀಶ ಶ್ರೀರಾಮನೆ 3
--------------
ರಾಮದಾಸರು
ಧ್ವಜದತಿಮ್ಮಪ್ಪ ಪಲ್ಲಕಿಯೇರಿ ತನ್ನಯ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ನಿಜಗಿರಿಯಾತ್ರೆಗೈದಿದ ಹರುಷವಕೇಳಿಪ.ಬಲದಲಬುಜಭವ ಭವಾದಿಗಳೆಡದಲಿ |ಉಲಿವ ವೇದ - ಉಪನಿಷದುಗಳು ||ಸಲುಗೆಯಲಿ ಸನಕಾದಿಗಳು ಸೇವಿಸೆ ಮುನ್ನ |ಹಲವು ಋಷಿ - ಮುನಿನಿಕರ ಹಿಂದೆ ಬರುತಿರಲು 1ಛತ್ರವ ಶಚಿ ಚಾಮರವ ಢಾಳಿಸೆ ಇಂದ್ರ |ಚಿತ್ತಜಾತನು ವ್ಯಜನವ ಬೀಸಲು ||ಹೊತ್ತು ಮಾರುತಿ ಹಡಪ ಹೊಳೆವೆಲೆಗಳ ಕೊಡಲು |ಹಸ್ತದ ಕಾಳಂಜಿ ಹರಿಣಾಂಕನು ಬರೆ 2ವರುಣನು ಸ್ವಾದುಜಲವ ಪಿಡಿದು ಬರೆ |ತರುಣಿ ತನಗೆ ಆಧಾರದಂತಿರಲು ||ಸುರರು ಸುಮನಗಳಿಂದ ಸರ್ವರು ತಮತಮ್ಮ |ಪರಿಪರಿ ಆಯುಧಗೊಂಡು ಬಳಸಿಬರೆ 3ಮಂದರ ಮಧ್ಯಮತಾರಕ ಮೋಹನ |ದಿಂದ ಗಂಧರ್ವರು ಗಾನಮಾಡೆ ||ತೋಂಧಿಮಿಧಿಮಿಕೆಂದು ತಾಳಮೇಳದೆ ನಾ - |ರಂದ ಪಾಡಲು ಆಡುತಾಡುತ ಬರುತಿರೆ 4ಲೋಕನಾಯಕ ಲೋಕೈಕ ರಕ್ಷಾಮಣಿ |ಸಾಕಾರರೂಪ ಸದ್ಗುಣಭರಿತ ||ವೆಂಕಟೇಶ ವ್ಯಾಸಮುನಿವರದನಾದ ಕರು - |ಣಾಕರ ಪುರಂದರವಿಠಲನು ಗರುಡ 5
--------------
ಪುರಂದರದಾಸರು
ನಗಲುಬಹುದು ನಗಲುಬಹುದುನಗು ನಗು ರಂಗಯ್ಯಜಗದ ಮಾತು ಅ‌ಘದ ಧಾತುಬಗೆಯನರಿತು ಮುಗಳುನಗೆಯ ಪ.ಒರೆದು ಒರೆದು ಭಾರತದರ್ಥಅರಿದುಅರಿದುವರಭಾಗವತಪರಿಯ ಪರಿಯ ಪುರಾಣಶ್ರ್ರುತಿಯಪಾರಾಯಣ ಮಾಡಿ ಕುರುಡಬಧಿರನರರ ತೆರದಿಅರಹುಮರಹುಬೆರೆತು ಬೆರೆತು ತರತಮಿಲ್ಲದೆಹರಿಹರಜರು ಬೇರೆಬೇರಿಲ್ಲೆಂಬಪರಮಪಾತಕರಿರವ ನೋಡಿ 1ಮಕ್ಕಳ ಮಡದೇರಕ್ಕರ ಬಡಿಸಿರೊಕ್ಕದ ಮದದಿ ಸೊಕ್ಕಿ ಸಜ್ಜನರಲೆಕ್ಕಿಸದವಗೆ ರಕ್ಕಸರಂತೆನಿಕ್ಕರ ನುಡಿದು ಕಕ್ಕಸದಿಂದಪುಕ್ಕಟೆ ಪುಣ್ಯದ ಲೆಕ್ಕವ ಕಳೆದುಘಕ್ಕನೆ ಜವನೋರಿಕ್ಕಿದ ಬಲೆಗೆಸಿಕ್ಕಿ ಬಳಲುತ ನರ್ಕವನುಂಬಮೂರ್ಖರ ತಾಮಸಮುಖ್ಯರ ನೋಡಿ 2ಸುಂದೋಪಸುಂದ ಜಲಂಧರ ಕೀಚಕಕಂದರದಶಕ ಸೈಂಧವ ಜಟಾದ್ಯರಂದು ಪರಸ್ತ್ರೀಯ ಸೌಂದರ್ಯಕ್ಕೆ ಮತಿಗುಂದಿ ಲಯವಾದರೆಂದುಕೇಳಿಇಂದುಮುಖಿಯರ ಚಂದಕೆ ಹುಚ್ಚಿಟ್ಟುಕಂದರ್ಪವಿಶಿಖವೃಂದ ವಶಾಗಿ ನೂರೊಂದುಕುಲ ಯಮಮಂದಿರ ಹೊಂದಿಪಮಂದರಮದೋನ್ಮತ್ತಾಂಧರ ನೋಡಿ3ಸುರರ ಸಂಪದ ಪರಮಪದಕೆಕಾರಣವಾಗಿರೆ ಸುರೇತರರೆಲ್ಲಇರುಳೆ ಹಗಲೆ ಸೈರಿಸಲಾರದೆಒರಗಿಹೋದ ವಿವರಕೇಳಿದುರುಳಕೌರವರ್ವರ ಪಾಂಡವರಸಿರಿತಮ್ಮದೆಂದ್ಹುರಿದು ಹೋಗಿರೆಪರರ ದ್ರವ್ಯಕ್ಕೆ ಮರುಗಿ ಬಯಸಿನರರು ಕೆಡುವ ಪರಿಯ ನೋಡಿ 4ಪ್ರತಿದಿನ ನಿನ್ನ ಪ್ರತಿಮ ಪೂಜೆ ಸದ್ವ್ರತವ ಮಾಡಿ ಸತ್ಕಥೆಯ ಶ್ರೀಮಧ್ವಮತ ಮಹಿಮೆಯನತಿಕ್ರಮಿಸಿ ಕುತ್ಸಿತವೆನಿಸುವ ಪಥದಲಿಪತಿತರಾಗಿ ಸದ್ಗತಿಯ ಕಾಣದಚತುರ ಪರಿಯ ಅಮಿತ ಭಕ್ಷಕರಸ್ಥಿತಿಯರಿತು ಮಾನಾಥ ಪ್ರಸನ್ವೆಂಕಟಪತಿಯೆ ನೀ ಮಂದಸ್ಮಿತದಲಿ 5
--------------
ಪ್ರಸನ್ನವೆಂಕಟದಾಸರು
ನಡೆದು ಬಾ ನಾಲ್ವರಿದ್ದೆಡೆಗೆ ಎನ್ನಯ ನಿನ್ನಸಾಲವ ಕೇಳಲುಸಟೆಟೌಳಿಯನಾಡಿಸನಕಾದಿ ಮುನಿಗಳ ಸಾಕ್ಷಿಯಿಂದಲಿ ಎನ್ನ
--------------
ಪುರಂದರದಾಸರು
ನಡೆಯೊ ನಿಮ್ಮಮ್ಮನೆಡೆಗೆ ಹೋಗುವ ನಿನ್ನತುಡುಗಬುದ್ಧಿಯನೆಲ್ಲ ಬಿಡಿಸುವೆ ಕಳ್ಳ ನಡೆ ಗಡಪ.ಏನೆಲೆ ಠÀಕ್ಕ ನಯನವೆ ಇಕ್ಕೆನಿನ್ನ ಮೈ ಹುದುಗಿಸಿದೆ ಬಾಯಿ ಜೊಲ್ಸುರಿಸಿದೆ 1ಕಂಬವಾಶ್ರೈಸಿದೆ ನಂಬೆ ವಂಚಿಸಿದೆದಂಭಪರಳಿದೆ ಕುಂಭಿಣಿಜಳ ಕೂಡ್ದೆ 2ಕೆನೆ ಮೊಸರು ಕದ್ದೆ ವಿನೀತೆರೊಂಚಿಸಿದೆಕೊನೆಗೋಡಿ ಹೋಗ್ವೆ ಪ್ರಸನ್ನವೆಂಕಟ ಕೃಷ್ಣ 3
--------------
ಪ್ರಸನ್ನವೆಂಕಟದಾಸರು
ನಂದನ ಕಂದ ಗೋವಿಂದ ಮುಕುಂದಇಂದಿರಜವಂದಿತ ಇಂದುಕುಲೇಂದ್ರ ಪ.ಗೋರಸಚೋರ ಗೋಪೀರಮಣ ಧೀರಗೋರಜಪೂರಿತಚಾರುಅಲಂಕಾರಗೋರಕ್ಷ ಕ್ರೂರಸಂಹಾರ ಉದಾರವೀರ ಸುಯಮುನಾತೀರ ವಿಹಾರ 1ಶೇಷಶೀರ್ಷನೃತ್ಯ ಹಾಸ ವಿಲಾಸವಾಸವಮದನಾಶ ವ್ರಜಪೋಷ ನಿರಾಶರಾಸಕ್ರೀಡಾಸುಖಾಧೀಶ ರಮೇಶದಾಸಾಕ್ರೂರಾಶ್ರಯ ಕಂಸವಿನಾಶ 2ಪುಣ್ಯಗುಣಾನ್ವಿತ ಸುವರ್ಣವೇಣುಗಾಯನ್ನಚಿನ್ಮಯಪನ್ನಗನಾಗನಿಲಯ ಪೂರ್ಣಮನ್ನಿಸು ನಿನ್ನ ಭೃತ್ಯನ್ನ ಪ್ರಸನ್ವೆಂಕಟ ಧನ್ಯ ಇವ ನನ್ನವನೆನ್ನೆ 3
--------------
ಪ್ರಸನ್ನವೆಂಕಟದಾಸರು
ನನಗೆ ಮನಕೆ ಬಡಿದಾಟೆಳೆದಾಟ ಶ್ರೀಸನಕಾದಿವಂದ್ಯ ಬಿಡಿಸಿ ಕಾಯೊದಾತಪ.ಸಲಿಲಸ್ನಾನವ ಮಾಡಿ ಊಧ್ರ್ವ ತಿಲಕವನಿಟ್ಟುನಳಿನಾಕ್ಷ ನಿನ್ನಂಘ್ರಿ ಜಪಿಸೆಂದರೆಛಲದಿಂದ ವಿಹಿತವಲ್ಲದ ದಾರಿಗೊಯ್ದೆನ್ನತೊಳಲಿಸಿ ನೆಲೆಗಾಣಿಸದೆ ಛಲವಿಡಿದಿದೆ 1ಬೇಡಿಕೊಂಡರೆ ಕೇಳದಾಡಿಕೊಂಡರೆ ಕೇಳದೀಡಾಡಿ `ಬಿಸುಟೆನ್ನ ದಣಿಸುತಿದೆನೋಡುನಾನಾಕ್ರೋಶ ಮಾಡಿದರಂಜದುಬಾಡಿ ಬಳಲಿದೆನೆನ್ನ ಕರುಣಿಲ್ಲವಿದಕೆ 2ಮನಪಶುಕಟ್ಟಲು ಜ್ಞಾನಧಂಗಡವಿಲ್ಲಘನವೈರಾಗ್ಯದ ಕಟ್ಟು ದೃಢವಿಲ್ಲವುಮಿನುಗುವ ಭಕುತ್ಯೆಂಬ ಎಳೆಹುಲ್ಲಿನಾಸಿಲ್ಲನೀನೆ ವಶಮಾಡಿಕೊ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ನನ್ನಯ್ಯ ನೀನೊಬ್ಬನೆ ಮಾರುತಿವರದ ಪ.ಉನ್ಮತ್ತತಂದೆ ಕೊಲ್ಲಲು ಒಯ್ಯಲು ತಾಯಿಚಿನ್ನನ್ನುಳಿಸಿಕೊಂಡಳೆ ಬನ್ನವನುಣ್ಣುತನಿನ್ನಿಚ್ಛೆಯೆನ್ನಲು ವಹ್ನಿವಿಷಾನ್ನವ ತಣ್ಣಸವೆನ್ನಿಪೆ ತನ್ನವರಿನ್ನ್ಯಾಕೊ ನರಹರಿಯೆ 1ಉತ್ತಾನಪಾದಿ ಮುನಿದು ಅಡವಿಯ ದಾರಿಹತ್ತಿ ನಿರಾಲಂಬದಿ ಉತ್ತಮ ಮಂತ್ರನಾರದಿತ್ತರೆ ಭಕ್ತಿಂದ ಅತ್ತಿತ್ತಾಗದ ಚಿತ್ತಕೆ ಒಲಿದೆಹೆತ್ತವರೊತ್ತಾದರೆವಾಸುದೇವ2ಅಗ್ರಜಾವಜÕ ಮಾಡಲು ವಿಭೀಷಣಶೀಘ್ರ ಪಾದಾಬ್ಜಕೆರಗಲು ವ್ಯಗ್ರಪ್ಲವಗಗ್ರರು ಉಗ್ರದಿ ನಿಗ್ರಹಿಸೆ ಆಗ್ರಹಿಸಿದೆ ಭಕ್ತಾಗ್ರಣಿ ಹನುಮ ಮತಾಗ್ರದಿ ಪ್ರಸನ್ವೆಂಕಟ 3
--------------
ಪ್ರಸನ್ನವೆಂಕಟದಾಸರು
ನಂಬಿ ನೀ ಕೆಡದಿರು ಇಹಲೋಕಸುಖವೆಂಬ ಕಂಬಳಿಯೊಳಬುತ್ತಿ ನಿಂಬೆಲೆಯಾಗಿನೂಟ ಪರಲೋಕ ಸುಖಸಾರವೆಂಬೋದೆ ನಿಜ ಭಕುತಿನ್ಯಾಯವಿಲ್ಲದೆ ನಿನ್ನಕಾಯಪೋಷಣೆಂಬೋದುದಣಿಸಿ ತನ್ನ ದೇಹ ಧನವ ಕೂಡಿಸುವುದುಹರಿಯರ್ಪಣವಿಲ್ಲದವಕರ್ಮಮಾಡಲುಪರಪೀಡಕನಾಗಿ ಇದ್ದವನ ಜನ್ಮಆಸೆ ಅರ್ಥದಲ್ಲಿಟ್ಟು ಹರಿಯ ಸೇವಿಸುವಂಥಹಲವು ಸಾಧನಗಳ ಮಾಡುತಲಿದ್ದರೇನುಎಷ್ಟು ಸಾಧನಗಳು ಕೂಡಿದ್ದರೇನಿನ್ನುಗುಣತ್ರಯಕನುಸಾರ ಮಾಡಿದ ಕರ್ಮಗ-ಗುರುಉಪದೇಶವೆಂಬುದೆ ಮಹಾದುರ್ಲಭ
--------------
ಗೋಪಾಲದಾಸರು
ನಂಬಿದವರಿಗೆ ಇಂಬುದೋರುವ |ಲಂಬೋದರ ಗಣನಾಯಕ ಪಶಂಭು ಶಂಕರಸುತನೆ ಭಕ್ತಕುಟುಂಬಿ ವಿಘ್ನನಾಯಕ ಅ.ಪಏಕದಂತ ವಿವೇಕದಾತನೆ | ಲೋಕನಾಥ ಪ್ರಖ್ಯಾತನೆಶೋಕಹರಹೇರಂಬಗಜಮುಖಕಾಕುಜನಸಂಹಾರಕನೆ ಜಯತು ಜಯತು 1ಕುಂಕುಮಾಂಕಿತ ದೇವದೇವನೆ | ಕಿಂಕರನ ನುತಿಪಾತ್ರನೆಶಂಕರಿಯ ಸುಕುಮಾರ ಮಧುಪುರಪಂಕಜಾದಳನೇತ್ರನೆ ಜಯತು ಜಯತು 2ವಿಘ್ನಘನಕಾಂತಾರಕ ನಲನೆ | ವಿಘ್ನ ಮೇಘಕೆ ಅನಿಲನೆವಿಘ್ನಕರ ಯಾಮಿನಿಗೆಭಾಸ್ಕರವಿಘ್ನಸಾಮಜಕೇಸರಿಜಯತು ಜಯತು 3ಗಂಧಚಂದನ ಪುಷ್ಪಫಲಗ | ಳಿಂದ ನಿನ್ನನು ಪೂಜಿಸಿವಂದಿಸುವೆ ನಿನ್ನಂಘ್ರಿ ಕಮಲಕೆ ಸಲಹೊಸಲಹೊ ಗೋವಿಂದದಾಸನ ಜಯತು ಜಯತು 4
--------------
ಗೋವಿಂದದಾಸ
ನಂಬಿದೆ ನಾಗರಾಜ ಹರಿಯ ಪಾ-ದಾಂಭೋಜಭಕ್ತಿಭಾಜ ಪ.ಶಂಭುಶಕ್ರಾದ್ಯರು ಹಂಬಲಿಪರು ನಿನ್ನತುಂಬಿದ ಜೀವಕದಂಬಾಭಿಮಾನಿಯೆ ಅ.ಪ.ಸಾವಿರ ಜಿಹ್ವೆಯೊಳು ಹರಿಯ ಸ್ತುತಿಗೈವೆನಿರತಕೃಪಾಳುಶ್ರೀವಾಸುದೇವನ ಕರುಣ ನಿನ್ನಲ್ಲೆಷ್ಟುದೇವೇಶನಾದರು ಯಾವನು ಬಣ್ಣಿಪಶ್ರೀವಧೂವರನ ಕಮಲಪದ ರಾ-ಜೀವ ಸೌಂದರ್ಯವನು ತನ್ನಯಸಾವಿರಾಕ್ಷಿಗಳಿಂದ ಕಾಣುತಕೇವಲಾನಂದಾಬ್ಧಿ ಮಗ್ನನೆ 1ಶಿರವೊಂದರಲಿ ಬ್ರಹ್ಮಾಂಡ ಸಾಸವೆಯಂತೆಧರಿಸಿದೆ ಸುಪ್ರಚಂಡವರರಘುರಾಮನಾವರಜ ಲಕ್ಷ್ಮಣನಾದೆಹರಿಕೃಷ್ಣರಾಯನ ಪಿರಿಯನಾಗಿ ಅವ-ತರಿಸಿ ಭೂಭಾರವನುರೆ ಸಂ-ಹರಿಸಿ ವೇದ ಪುರಾಣ ತತ್ತ್ವವಶರಣಜನರಿಗೆ ಬೋಧಿಸುವ ಮಹಾಕರುಣಿ ಕಮಲಾಕಾಂತನ ಭಕ್ತನೆ 2ಲಕ್ಷ್ಮೀನಾರಾಯಣನ ನಿದ್ರಾಸ್ಪದರಕ್ಷಿಸು ಕೃಪೆಯಿಂದೆನ್ನಸಾಕ್ಷಾದಚಲರೂಪ ನಿನ್ನೊಳು ನೆಲಸಿದಪಕ್ಷಿವಾಹನ ಜಗದಧ್ಯಕ್ಷ ಶ್ರೀನಿವಾಸಮೋಕ್ಷ ಮಾರ್ಗಪ್ರದರ್ಶಿ ಸತತ ಮು-ಮುಕ್ಷು ಜನಮನಹರ್ಷ ನಿರ್ಜರ-ಪಕ್ಷ ಸುಫಲಪ್ರದ ಸದಾ ನಿರ-ಪೇಕ್ಷ ಗುರುವರ ರಾಕ್ಷಸಾಂತಕ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆ ನಿನ್ನ ಗಣೇಶ ಜಗ-ದಂಬಿಕಾತನಯ ವಿಶ್ವಂಭರದಾಸ ಪ.ಲಂಬೋದರ ವಿಘ್ನೇಶ ಶರ-ಣೆಂಬುದು ಸುರನಿಕುರುಂಬ ಮಹೇಶ ಅ.ಪ.ತರುಣಾದಿತ್ಯಪ್ರಕಾಶ ನಿನ್ನಶರಣಾಗತನಾದೆ ಮೋಹನ ವೇಷಸುರುಚಿರಮಣಿಗಣಭೂಷ ಜಗದ್ಗುರುವೆ ಗುಹಾಗ್ರಜ ಪೊರೆಯೋನಿರ್ದೋಷ1ಸಂತಜನರ ಮನೋವಾಸ ಮೋಹಭ್ರಾಂತಿಯಜ್ಞಾನಧ್ವಾಂತವಿನಾಶಶಾಂತಹೃದಯ ಸುಗುಣೋಲ್ಲಾಸ ಏಕದಂತ ದಯಾಸಾಗರ ದೀನಪೋಷ 2ಲಕ್ಷ್ಮೀನಾರಾಯಣನೆ ವ್ಯಾಸಗುರುಶಿಕ್ಷಿತ ಸುಜ್ಞಾನ ತೇಜೋವಿಲಾಸಅಕ್ಷರಬ್ರಹ್ಮೋಪದೇಶವಿತ್ತುರಕ್ಷಿಸು ದನುಜಾರಣ್ಯಹುತಾಶ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿದೆ ನಿನ್ನ ಪಾದವ - ವೆಂಕಟರಮಣನಂಬಿದೆ ನಿನ್ನ ಪಾದವ || ಪನಂಬಿದೆ ನಿನ್ನ ಪದಾಂಬುಜಯುಗಳವಇಂಬಿತ್ತು ಸಲಹಯ್ಯ ಶಂಖ-ಚಕ್ರಧರನೆ . ಪತಂದೆಯು ನೀನೆ ತಾಯಿಯು ನೀನೆಬಂಧು ಬಳಗವು ನೀನೆ ||ಬಂದ ದುರಿತವೆನ್ನ ಹೊಂದಿಕೊಳ್ಳದಂತೆತಂದೆ ಸಲಹೊ ಮುಕುಂದ ಮುರಾರಿ 1ಚಿಕ್ಕಂದು ಮೊದಲು ನಾನು ನಿನ್ನಯಪಾದಹೊಕ್ಕು ಜೀವಿಸುತಿಹೆನು ||ಗಕ್ಕನೆ ಜ್ಞಾನವನಕ್ಕರೆಯಲಿ ಕೊಡುಮಕ್ಕಳ ಮಾಣಿಕ್ಯ ರುಕ್ಮಿಣಿಯರಸಾ 2ಮರೆತು ನಾ ಮಾಯೆಯೊಳು ಮುಳುಗಿದೆ ಅದನರಿತು ಅರಿಯದಾದೆ ||ಮರೆಯದೆ ಎನ್ನನು ಪೊರೆಯೆ ಕೃಪಾನಿಧಿವರದ ಶ್ರೀವೆಂಕಟಪುರಂದರವಿಠಲ3
--------------
ಪುರಂದರದಾಸರು