ಒಟ್ಟು 12179 ಕಡೆಗಳಲ್ಲಿ , 134 ದಾಸರು , 5885 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಷ್ಟು ಬಡಿವಾರೊ ನಿನ್ನಶ್ರೇಷ್ಠ ಸುಖಪೂರ್ಣ ಫನ್ನಅಷ್ಟ ಗುಣವನುಅತಿಗಳದ್ಯೊ ಯಾದವರನ್ನ ಪ.ಕುಕ್ಷಿಲೋಕನೆ ನಿನಗೆ ರಕ್ಷೆ ಇಟ್ಟಾಳೊಗೋಪಿವಕ್ಷ ಸ್ಥಳದಲ್ಲಿಹ ಲಕುಮಿಯುವಕ್ಷ ಸ್ಥಳದಲ್ಲಿಹ ಲಕುಮಿಯುಬೆರಗಾಗಿ ವೀಕ್ಷಿಸುತಲಿ ನಗತಾಳೊ 1ಅಂಧಕಾರದಿ ಜಲವೃಂದದಿ ದುಡುಕಿಸಿಒಂದೇ ಕೂಸಲ್ಲೊ ಪ್ರಳಯದಿಒಂದೇ ಕೂಸಲ್ಲೊ ಪ್ರಳಯದಿ ರಕ್ಷವತಂದು ಇಟ್ಟವರು ನಿನಗಾರೊ 2ಪುಟ್ಟ ಕೂಸೆಂದು ಸ್ತನ ಕೊಟ್ಟ ನಾರಿಯ ಕೊಂದೆಇಷ್ಟು ಕರುಣೆ ನಿನಗಿಲ್ಲೊಇಷ್ಟು ಕರುಣೆ ನಿನಗಿಲ್ಲೊ ದಯಾಬುದ್ದಿಕೆÀಟ್ಟು ಹೋಯಿತೇನೊ ಪ್ರಳಯದಿ 3ಕೃಷ್ಣ ಕೃಷ್ಣ ಎನುತ ಬಿಟ್ಟಳು ಪ್ರಾಣವದೃಷ್ಟಿಗೆ ಬೀಳೋದು ತಡವೇನೊದೃಷ್ಟಿಗೆ ಬೀಳೋದು ತಡವೇನೊ ನಿನ್ನವ್ಯಾಪ್ತಿ ಕೆಟ್ಟು ಹೋಯಿತೇನೊ ಪ್ರಳಯದಿ 4ಮಂದಮತಿಯರಗಂಡಮುಂದಕ್ಕೆ ಬಿಡಲೊಲ್ಲಇಂದಿರಾ ಪತಿಯೆ ಗತಿಯೆಂದಇಂದಿರಾ ಪತಿಯೆ ಗತಿಯೆಂದ ಭಕ್ತಳಕೊಂದೆಯಲ್ಲೊ ಪಾಪ ಬರಲಿಲ್ಲ 5ಕಡಲಶಾಯಿ ನಿನ್ನ ಬೆಡಗು ಎಷ್ಟು ಹೇಳಲಿಹಿಡ ಹಿಡಿದುಲಾಳಿಕೊಡುವಾಗಹಿಡ ಹಿಡಿದುಲಾಳಿಕೊಡುವಾಗ ಗೊಲ್ಲರಹುಡುಗರಿಗಿಂತ ಕಡೆಯೇನೊ 6ವೀರ ರಾಮೇಶ ನಿನ್ನಚಾರುಗುಣಗಳನೆಲ್ಲಸೂರಿಬಿಟ್ಟೇನೊ ಸುರರಿಗೆಸೂರಿಬಿಟ್ಟೇನೊ ಸುರರಿಗೆ ನಿನಗಿನ್ನುಯಾರೂ ಮನ್ನಿಸದ ಪರಿಯಂತ 7
--------------
ಗಲಗಲಿಅವ್ವನವರು
ಎಷ್ಟು ಮರುಗಿದರು ನಿನ್ನ ಹಣೆಯ ಬರೆಹಅಷ್ಟಲ್ಲದಿಲ್ಲ ಸ್ತುತಿ ವಚನದ ಫಲ ಕಂದಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಂಬರದೊಳಾಡುವ ಪಕ್ಷಿ ತನ್ನ ವಶವಹುದೇಉಂಬುವರ ಕರುಬಿದಡೆ ಉದರ ತುಂಬುವುದೇಕಂಬಳಿಯ ಕೊಡಲು ಕನಕಾಂಬರ ತನಗಹುದೆಹಂಬಲಿಸಿ ಹಲವ ಹಲುಬಿದಡೆಸಿರಿಬಹುದೆ1ಇಲ್ಲದುದ ಬಯಸಿ ಬೇಡಿದೊಡೆ ಭಂಗಬಹುದೊಬಲ್ಲೆನೆಂದೊಡೆ ಮಣಿಸದೆ ಬಿಡಳು ವಿಧಿಯುಬಲ್ಲಿದನು ಬಡವನಿವನೆಂದು ನೋಡರುಸಿರಿವಲ್ಲಭನ ಮಗಳ ಮೀರುವರಾರು ಕಡೆಗೆ2ಸಿರಿಗೆ ಹಿಗ್ಗದೆ ಬಡತನಕೆ ಬೆಂಡಾಗದಿರುಸೇರಿದ ನೆಲೆಯಲಾ ಸುಖ ಸಾವ ಕಾಲದಲಿಶರಣ ಜನಾಶ್ರಿತ ನೆಲೆಯಾದಿಕೇಶವನಚರಣಕಮಲವ ಭಜಿಸಿ ಸುಖಿಯಾಗು ಮನವೆ3
--------------
ಕನಕದಾಸ
ಎಷ್ಟು ಸಾಹಸ ಬಟ್ಟಳಮ್ಮ ಧಿಟ್ಟೆ ರುಕ್ಮಿಣಿಇಷ್ಟು ನಾರಿಯರೊಳಗೆಶ್ರೀ ಕೃಷ್ಣ ತನಗೆ ಒಲಿಯಲೆಂದು ಪ.ಮಂಚವಾಗಿ ಮನೆಯು ಆಗಿಪಂಚರತ್ನದ ವಸ್ತಗಳಾಗಿಮಿಂಚುದೀವಿಗೆ ಮಲ್ಲಿಗೆಸಂಪಿಗೆ ಕೆಂಚಿತಾನಾಗಿ 1ಮಂದಗಮನೆ ಸಹವಾಸವಒಂದೂ ಲೆಕ್ಕಿಸದಲೆ ಕೃಷ್ಣಚಂದ್ರ ಸೂರ್ಯರ ಚದುರರನಿರ್ಮಿಸಿ ಚಂದದಿ ತೋರಿದನೆ 2ವಟ ಪತ್ರಳು ತಾನಾಗಿಚಟುಲಚಮತ್ಕಾರಿ ಯಾಗಿಸಟಿಯಿಲ್ಲದೆ ರಾತ್ರಿ ಒಲವುಕುಟಿಲದಿ ತೋರಿದಳೆ 3ದೇಶಕಾಲತಾನಾಗಿ ರಾಮೇಶÀಗೆತೋರಿದಳೆ ಕುಶಲಲೇಸು ಲೆಕ್ಕಿಸದೆಗುಣದ ರಾಶಿ ತೋರಿದಳೆ 4
--------------
ಗಲಗಲಿಅವ್ವನವರು
ಎಷ್ಟು ಸೊಗಸು ಎಷ್ಟು ಸೊಗಸಕೃಷ್ಣರಾಯರು ಕುಳಿತ ಸಭೆಯುಅಷ್ಟದಿಕ್ಕು ಬೆಳಗಿಉತ್ಕøಷ್ಟವಾಗಿ ತೋರುವುದಮ್ಮ ಪ.ಚದುರೆ ರುಕ್ಮಿಣಿ ಭಾಮೆಹದಿನಾರು ಸಾವಿರದನೂರು ಸುದತೆಯರೊಪ್ಪುತಿಹರುಅದ್ಭುತವಾಗಿ ಸಖಿಯೆ 1ಜತ್ತಾದ ದೀವಿಗೆ ಎಷ್ಟುರತ್ನದ ಪ್ರಕಾಶ ಎಷ್ಟುಹಸ್ತಿಗಮನೆಯರÀ ಕಾಂತಿಚಿತ್ತಹರಣಮಾಡುವುದಮ್ಮ 2ಭ್ರಾಂತಿಗೈದು ಮುಯ್ಯ ಮರೆದುನಿಂತು ಕುಳಿತು ನೋಡೋರೆಷ್ಟಕಂತುನೈಯನ ಸಭೆಯಇಂಥ ಅಂದವ ಎಲ್ಲೆ ಕಾಣೆ 3ನಟ ನರ್ತಕರು ಎಷ್ಟುಚಟುಲಚಮತ್ಕಾರಿ ಎಷ್ಟುವಟ ಪತ್ರ ಶಾಯಿ ಕುಳಿತಸಭೆಗೆ ಸಾಟಿ ಇಲ್ಲವಮ್ಮ 4ವೀರ ಪಾಂಡವರ ಪುಣ್ಯಯಾರು ವರ್ಣಿಸಲೊಶವಶ್ರೀರಾಮೇಶ ಒಪ್ಪುತಿಹನುಮೂರುಲೋಕ ಮಿಗಿಲಾಯಿತಮ್ಮ 5
--------------
ಗಲಗಲಿಅವ್ವನವರು
ಎಳ್ಳು ಕಾಳಿನಷ್ಟು ಭಕುತಿ ಎನ್ನೊಳಗಿಲ್ಲವಯ್ಯಬೆಳ್ಳಕ್ಕಿಯಂತೆ ನಿನ್ನ ಧ್ಯಾನವ ಮಾಡುವೆನಯ್ಯಾ ಪಗಂಡು ಮುಳುಗಹಕ್ಕಿಯಂತೆ ನೀರ ಕಂಡ ಕಡೆಗೆ ಮುಳುಗಿಮಂಡೆಶೂಲೆಯಲ್ಲದೆ ಗತಿಯು ಇಲ್ಲಮಂಡೆಮುಸುಕನಿಕ್ಕಿ ಮಂತ್ರ ಜಪಿಸುವೆನಯ್ಯ1ಗಾಣದೆತ್ತಿನಂತೆ ಕಣ್ಣಕಟ್ಟಿ ಪ್ರದಕ್ಷಿಣೆ ಮಾಡಿಕಾಣದೆ ನಾ ತಿರುಗಿದೆ ಕಂಡುದಿಲ್ಲಮಾಣಿಕ್ಯದ ರಾಶಿ ಅಡಿಗೆ ಕಂಗಳಯ್ಯನು ಪೋಗಿಆಣಿಕಾರಿಕೆ ಮಾಡಿದಂಥ ಈ ಕುಯುಕ್ತಿಯು 2ಇಕ್ಕಳವ ಕೈಯ ಪಿಡಿದುಕೊಂಡು ಕಾದ ಕಬ್ಬಿಣದಂತೆಸಿಕ್ಕಿಸಿಕೊಂಡಲ್ಲದೆ ಗತಿಯು ಇಲ್ಲಪೊಕ್ಕಳ ಪೂವಿನ ಶ್ರೀ ಪುರಂದರವಿಠಲನೆಮಕ್ಕಳಾಟಿಕೆಯ ಬಿಡೊ ರಕ್ಷಿಸೊ ಎನ್ನೊಡೆಯ 3
--------------
ಪುರಂದರದಾಸರು
ಏಕೆ ಕಡೆಗಣ್ಣಿಂದ ನೋಡುವೆ - ಕೃಷ್ಣ |ನೀ ಕರುಣಾಕರನಲ್ಲವೆ ? ಪಭಕ್ತ ವತ್ಸಲ ನೀನಲ್ಲವೆ -ಕೃಷ್ಣ |ಚಿತ್ಸುಖದಾತ ನೀನಲ್ಲವೆ ? ||ಅತ್ಯಂತ ಅಪರಾಧಿ ನಾನಾದಡೇನಯ್ಯ|ಇತ್ತಿತ್ತ ಬಾ ಎನ್ನಬಾರದೆ ರಂಗ 1ಇಂದಿರೆಯರಸ ನೀನಲ್ಲವೆ - ಬಹುಸೌಂದರ್ಯನಿಧಿ ನೀನಲ್ಲವೆ ? ||ಮಂದಮತಿ ನಾನಾದಡೇನು ಕೃಪಾ-ಸಿಂಧುನೀ ರಕ್ಷಿಸಬಾರದೆ ರಂಗ2ದೋಷಿಯು ನಾನಾದಡೇನಯ್ಯ - ಸರ್ವ -ದೋಷರಹಿತ ನೀನಲ್ಲವೆ ? ||ಗಾಸಿಯೇತಕೆ ನಿನ್ನ ನಂಬಿದೆ ಸಲಹಯ್ಯ |ಶೇಷಶಾಯಿ ಶ್ರೀಪುರಂದರವಿಠಲ3
--------------
ಪುರಂದರದಾಸರು
ಏಕೆ ಗೋಪಾಲ ಕರೆಯುತಾನೆ - ಎಲೆ ಸಖಿಯೆ ಎನ್ನ |ಏಕೆ ಗೋಪಾಲ ಕರೆಯುತಾನೆ ? ಪಕಣ್ಣ ಸನ್ನೆ ಮಾಡುತಾನೆ - ಮತ್ತೆ ಬಗೆ ಬಗೆ |ಹಣ್ಣ ಕೈಯಲಿ ತೋರುತಾನೆ - ಎನ್ನ ಚೆಲುವಿಕೆ ||ಬಣ್ಣಿಸುತಲಿ ತಿರುಗುತಾನೆ - ಇವನೇನೆ |ಇನ್ನೂರು ವರಹಗಳ ಕೊಟ್ಟು ಮದುವೆಯಾದನೇನೆ ಎಲೆ ಸಖಿಯೆ 1ಹವಳ ಸರವ ತೋರುತಾನೆ - ದುಂಡು ಮುತ್ತಿನ - |ಧವಳಹಾರವ ನೀಡುತಾನೆ - ಹಾಸಿಗೆಯ ಮೇಲೆ ||ಪವಡಿಸಬೇಕೆನುತಾನೆ - ಇವನೊಡನಿರಲು ನ-|ಮ್ಮವರು ಸುಮ್ಮನೆ ಇಹರೇನೆ - ಎಲೆ ಸಖಿಯೆ 2ಬಟ್ಟಲ ಪಿಡಿದು ಬರುತಾನೆ - ಹಗಲೆ ಬಾ ಎಂದು -|ಬಟ್ಟ ಬಯಲೊಳು ಕರೆಯುತಾನೆ - ಎನ್ನ ಮನದೊಳು ||ದಟ್ಟು ಧಿಗಿಲು ಎನ್ನದೇನೆ - ಪುರಂದರವಿಠಲ - |ಇಟ್ಟು ಕೊರಳಾಣೆ ಈಗ ಬಾ ಎಂಬುವನೆ - ಎಲೆ ಸಖಿಯೆ 3
--------------
ಪುರಂದರದಾಸರು
ಏಕೆ ದಯಮಾಡಲೊಲ್ಲೆ - ಎಲೊ ಹರಿಯೆ |ಮೂಕನಾಗುವರೆ ಹೀಗೆ ಪಲೋಕವನು ರಕ್ಷಿಪ ಲಕ್ಷ್ಮೀಕಾಂತನು ನೀನೇ |ವಾಕುಮೊರೆಗಳಕೇಳಿಒಲಿದು ದಯಮಾಡಯ್ಯಅ.ಪಅರ್ಥವಿಲ್ಲದ ಬಾಳ್ವೆಯು - ಇರುವುದಿದು|ವ್ಯರ್ಥವಾಗಿದೆ ಶ್ರೀಪತಿ ||ಕರ್ತುನಿನ್ನೊಳು ನಾನು ಕಾಡಿ ಬೇಡುವನಲ್ಲ|ಸತ್ವರದಿ ದಯಮಾಡೊ ತುಳಸೀದಳಪ್ರಿಯ 1ಮನದೊಳಗಿನ ಬಯಕೆ - ಎಲೈಸ್ವಾಮಿ |ನಿನಗೆ ಪೇಳುವೆನು ನಾನು ||ಬಿನುಗುದೇವತೆಗಳಿಗೆ ಪೇಳಲಾರೆವೊ ಹರಿಯೆ|ತನುಮನ ನಿನ್ನ ಕೂಡ ಇಹವು ದಯಮಾಡೊ 2ಮೂರು ಲೋಕವ ಪಾಲಿಪ - ಎನ್ನಯ ಸ್ವಾಮಿ |ಭಾರವೆ ನಿನಗೆ ನಾನು ||ಕಾರುಣ್ಯನಿಧಿ ನಮ್ಮ ಪುರಂದರವಿಠಲ ಶ್ರೀ - |ದಾರಾಮನೋಹರ ಸಾಕಾರ ದಯವಾಗೊ3
--------------
ಪುರಂದರದಾಸರು
ಏಕೆ ದೇಹವನು ದಂಡಿಸುವೆ ವೃಥಾ - ಬಿಡ - |ದೇಕ ಚಿತ್ತದಿ ಲಕ್ಷ್ಮೀಕಾಂತಹರಿಎನ್ನದೆಪ.ಸ್ನಾನವನು ಮಾಡಿ ಧ್ಯಾನಿಸುವೆನೆನುತಲತಿ - |ಮೌನವನು ಪಿಡಿದು ಬಕಪಕ್ಷಿಯಂತೆ |ಹೀನ ಬುಧ್ಧಿಗಳ ಯೋಚಿಸಿ ಕುಳಿತು ಫಲವೇನು ||ದಾನವಾಂತಕನ ನಾಮಕೆ ಮೌನವುಂಟೆ ? 1ಜಪವ ಮಾಡುವೆನೆನುತ ಕಪಟಬುದ್ಧಿಯ ಬಿಡದೆ |ಗುಪಿತದಿಂದಲಿ ನೀನು ಕುಳಿತು ಫಲವೇನು ||ಅಪರಿಮಿತಮಹಿಮ ಶ್ರೀ ನಾರಾಯಣನೆಂದರೆ ||ಸಫಲವಲ್ಲದೆ ಬೇರೆ ಗತಿಯುಂಟೆ ಮರುಳೆ 2ಅಂದಜಾಮಿಳಗೆ ಸ್ಮರಣೆಯ ಮಾತ್ರದಲಿ ಮುಕುತಿ |ಹಿಂದೆ ಶ್ರೀಹರಿಯು ತಾ ಕೊಡಲಿಲ್ಲವೇ ? |ಸಂದೇಹವೇಕೆ ನೀನೊಂದು ಕ್ಷಣವಗಲದೆ |ತಂದೆ ಶ್ರೀ ಪುರಂದರವಿಠಲ ನೆನೆಮನವೆ 3
--------------
ಪುರಂದರದಾಸರು
ಏಕೆ ಮೈ ಮರೆದೆ ನೀನು - ಜೀವನವೇ - |ಏಕೆ ಮೈಮರೆದೆ ನೀನು ಪಏಕೆ ಮೈಮರೆದೆ ನೀ - ಲೋಕಾರಾಧ್ಯನ ಪಾದ|ಬೇಕೆಂದು ಭಜಿಸು ಕಾಣೋ - ಜೀವನವೇ ಅ.ಪ.ಮದ್ದಾನೆಗಳೆಂಟು ಸೊಕ್ಕಿನಿಂ ಬರುವಾಗ |ಎದ್ದು ಕುಳ್ಳಿರಬಾರದೆ - ಜೀವನವೇ ||ಅಧ್ಯಾತ್ಮಕಾ ಹರಿನಾಮವ ಶ್ರುತಿಮಾಡಿ |ಒದ್ದು ಬಿಸಾಡು ಕಣೊ - ಜೀವನವೇ 1ಕಂದರ್ಪನೆಂಬವ ಕಾದುತ ಬರುವಾಗ |ನಿಂದಿಸುತಿರಬಾರದೆ - ಜೀವನವೇ ||ಒಂದೇ ಮನಸು ಎಂಬ ವಜ್ರಾಯುಧವ ಪಿಡಿದು |ಕೊಂದು ಬೀಸಾಡು ಕಾಣೊ - ಜೀವನವೇ 2ವಿಷಯದಿ ಸುಖಕಾಣೆ ಪಶುಜನರೊಳು ದೇಹ |ಹಸನುಗಳೆಯಲು ಬೇಡವೋ - ಜೀವನವೇ||ಬಿಸಜಾಕ್ಷ ಪುರಂದರವಿಠಲನೊಲಿಯೆ ಸುಖ -|ರಸದಿ ಲೋಲಾಡು ಕಾಣೋ - ಜೀವನವೇ 3
--------------
ಪುರಂದರದಾಸರು
ಏಕೆನ್ನೊಳಿಂತು ಕೃಪೆಯಿಲ್ಲ ಹರಿಯೆಕಾಕಮಾಡದೆ ಕಾಯೊ ಸಂಗದೊಳು ಬಳಲಿದೆನು ಪಕಂದರ್ಪಬಾಧೆಯಿಂ ಮಾನಿನಿಯ ವಶನಾಗಿಮಂದಮತಿಯಿಂದ ನಾ ಮರುಳಾದೆನೋ ||ಸಂದಿತೈ ಯೌವನವು ಬುದ್ದಿ ಬಂದಿತು ಈಗಸಂದೇಹಪಡದೆ ನೀ ಕರುಣಿಸೈ ಎನ್ನ 1ಹೆಂಡತಿಯು ಕಡೆಗಣ್ಣಿನಿಂದ ನೋಡುವಳೀಗಹಿಂಡುಮಕ್ಕಳು ಎನ್ನ ತಿನ್ನುತಿಹರು ||ಮುಂಡಮೋಚಿದೆ ನಾನು ಇನ್ನಾರು ಗತಿಯೆನಗೆಪುಂಡರೀಕಾಕ್ಷನೀ ಪಾಲಿಸೈ ಎನ್ನ2ಅಟ್ಟಮೇಲೊಲೆಯುರಿಯುವಂತೆಹರಿಎನಗೀಗಕೆಟ್ಟ ಮೇಲರಿವು ತಾ ಬಂದಿತಯ್ಯ ||ನೆಟ್ಟನೇಪುರಂದರವಿಠಲನೆ ಕೈ ಬಿಡದೆದಿಟ್ಟಿಯಲಿ ನೋಡಿ ಪರಿಪಾಲಿಸೈ ಎನ್ನ 3
--------------
ಪುರಂದರದಾಸರು
ಏತರ ಚೆಲುವು-ರಂಗಯ್ಯ ಪಹಡೆದ ತಾಯಿ ತನಗುಳ್ಳೊಡೆ-ರಂಗ |ಬುದ್ದಿ ಪೇಳುವ ಪಿತನುಳ್ಳೊಡೆ-ರಂಗ |ಸಿರಿಯುಳ್ಳೊಡೆ ತಾನು ಬಲಿಯ ಮನೆಗೆ ಪೋಗಿ |ಮದನಜನಕನಿಚ್ಚಚೆಲುವನೆಂತೆಂಬೆನೆ |
--------------
ಪುರಂದರದಾಸರು
ಏನ ಮಾಡಲಿ ಮಗನೆ ಏಕೆ ಬೆಳಗಾಯಿತು |ಮಾನಿನಿಯರು ಬಂದುಮಾನಕಳೆಯುವರುಪಹಾಲು, ಮೊಸರು, ಬೆಣ್ಣೆ, ಕದ್ದನೆಂತೆಂಬುವರು |ಮೇಲಿಟ್ಟ ಕೆನೆಯನು ಮೆದ್ದನೆಂಬುವರು ||ಬಾಲರನೆಲ್ಲರ ಬಡಿದನೆಂಬರು ಎಂಥ |ಕಾಳು ಹೆಂಗಸು ಇವನ ಹಡೆದಳೆಂಬುವರೊ 1ಕಟ್ಟಿದ ಕರುಗಳ ಬಿಟ್ಟನೆಂತೆಂಬರೊ |ಮೆಟ್ಟಿ ಸರ್ಪನ ಮೇಲೆ ತುಳಿದನೆಂಬುವರೊ ||ಪುಟ್ಟ ಬಾಲೆಯರ ಮೋಹಿಸಿದನೆಂಬುವರೊ ಎಂಥ |ಕೆಟ್ಟ ಹೆಂಗಸು ಇವನ ಹಡೆದಳೆಂಬುವರೊ 2ಗಂಗಾಜನಕನಿನ್ನ ಜಾರನೆಂತೆಂಬರೊ |ಶೃಂಗಾರ ಮುಖ ನಿನ್ನ ಬರಿದೆ ದೂರುವರೊ ||ಮಂಗಳಮಹಿಮ ಶ್ರೀ ಪುರಂದರವಿಠಲ |ಹಿಂಗದೆ ಎಮ್ಮನು ಸಲಹೆಂತೆಂಬುವರೊ 3
--------------
ಪುರಂದರದಾಸರು
ಏನ ಮಾಡಲಿ ಶ್ರೀಹರಿ- ಇಂಥ |ಮಾನವಜನ್ಮ ನಚ್ಚಿಸಬಹುದೆ? ಪಮಾತನಾಡದೆ ಮೌನದೊಳಿದ್ದರೆ-ಮೂಕ-|ನೀತನೆಂದು ಧಿಕ್ಕರಿಸುವರು ||ಚಾತುರ್ಯದಿಂದಲಿ ಮಾತುಗಳಾಡಲು |ಈತನು ಬಲು ಬಾಯ್ಬಡಿಕನೆಂಬುವರಯ್ಯ 1ಮಡಿ ನೇಮ ಜಪ-ತಪಂಗಳ ಮಾಡುತಿದ್ದರೆ |ಬಡಿವಾರದವನೆಂದಾಡುವರು ||ಮಡಿ ನೇಮ ಜಪ-ತಪಂಗಳ ಮಾಡದಿದ್ದರೆ |ನಡತೆ ಹೀನನೆಂದು ಬಲು ನಿಂದಿಸುವರಯ್ಯ 2ಗಟ್ಟಿಯಾಗಿ ಒಪ್ಪತ್ತಿನೂಟದೊಳಿದ್ದರೆ |ನಿಷ್ಟೆಯೇನು ಸುಟ್ಟಿತೆಂಬರು |ಗಟ್ಟಿಯಾಗಿ ಎರಡು ಮೂರು ಬಾರಿಯುಂಡರೆ |ಹೊಟ್ಟೆ ಬಾಕನೆಂದು ತೆಗಳಾಡುವರಯ್ಯ 3ಒಲಪಿನೊಳ್ಚೆನ್ನಿಗತನವನು ಮಾಡಲು |ಬಲು ಹೆಮ್ಮೆಗಾರನೆಂದಾಡುವರು ||ಸುಲಭತನದಿ ತಾ ನಿಗರ್ವಿಯಾಗಿದ್ದರೆ |ಕಲಿಯುಗದಲಿ ಮಂದಮತಿಯೆಂಬುವರಯ್ಯ 4ನರಜನ್ಮದೊಳಗಿನ್ನು ಮುಂದೆ ಪುಟ್ಟಿಸಬೇಡ |ಮೊರೆ ಹೊಕ್ಕೆ ಮತ್ಸ್ಯಾವತಾರ ನಿನ್ನ ||ಧರೆಯೊಳಗಿಹ ಪರಿಯಂತರ ಸಲಹೆನ್ನ |ಕರುಣವಾರಿಧಿ ಶ್ರೀಪುರಂದರವಿಠಲ5
--------------
ಪುರಂದರದಾಸರು
ಏನಮಾಡಿದರೆನ್ನ ಭವಹಿಂಗದು |ದಾನವಾಂತಕ ನಿನ್ನ ದಯವಾಗದನಕ ಪಅರುಣೋದಯಲೆದ್ದು ಅತಿಸ್ನಾನಗಳ ಮಾಡಿ |ಬೆರಳನೆಣಿಸುತ ಸ್ಮರಿಸಿ ನಿಜವರಿಯದೆ ||ಶರಣು ಸಾಷ್ಟಾಂಗವನು ಹಾಕಿದೆನು ಶತಸಹಸ್ರ |ಹರಿನಿನ್ನ ಕರುಣಾ ಕಟಾಕ್ಷವಿರದನಕ1ಶೃತಿಶಾಸ್ತ್ರ ಪುರಾಣಗಳನೋದಿ ಬೆಂಡಾದೆ |ಅತಿ ಶೀಲಗಳನೆಲ್ಲ ಮಾಡಿ ದಣಿದೆ ||ಗತಿಯ ಪಡೆಯುವೆನೆಂದು ಗಯೆ ಕಾಶಿಯ ಮಾಡಿದೆನು |ರತಿಪತಿಯ ಪಿತ ನಿನ್ನ ದಯವಾಗದನಕ 2ದಾನವನು ಮಾಡಿದೆನು ಮೌನವನು ತಾಳಿದೆನು |ಙ್ಞÕನ ಪುರುಷಾರ್ಥಕ್ಕೆ ಮನವೀಯದೆ ||ಶ್ರೀನಾಥ ದಯಪೂರ್ಣ ಪುರಂದರವಿಠಲನ |ಧ್ಯಾನಿಸುವರೊಡನಾಡಿ ನೆಲೆಗೊಳ್ಳದನಕ 3
--------------
ಪುರಂದರದಾಸರು