ಒಟ್ಟು 3520 ಕಡೆಗಳಲ್ಲಿ , 121 ದಾಸರು , 2542 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಾಯೋ ದಯದಿಂದೆನ್ನ ಕಾರುಣ್ಯ ನಿಧಿಯೇ | ಯದು ನಾಯಕನೇ ದೇವ ದೇವಾ ಪ ಪುಷ್ಯರಾಗದಿ ನವರತ್ನ ಪದಕಧರ | ಘನಶ್ಯಾಮ ಉರಗಶಯನಾ | ಕಶ್ಯಪ ವಸಿಷ್ಠಾದಿ ಸ್ಮರಣೆ ಮಾಳ್ವವರಿಂಗೆ | ದೃಶ್ಯನಾಗಿಹ ಮುರಾರಿ ಶೌರಿ1 ನಂದಸುಕುಮಾರ ಸಿರಿನಾರಿಯ | ಸದ್ಬಕ್ತವೃಂದ ರಕ್ಷಕ ಭೂಧರಾ | ಇಂದಿರಾ ಭಾವನೆಯೂ ಪೂರಿತಿಕೇಳು | ಜಗವಂದ್ಯ ಮುಕುಂದ ಗರುಡರೂಢಾ2 ಚಕ್ರಕರ ಕಮಲಾಕ್ಷ ಚತುರಾಸ್ಯ ಜನಕ ಬಲಿ | ಚಕ್ರವರ್ತಿಗೆ ವರದನಾ | ಶಕ್ರನುತ ಮಹಿಪತಿ ಸ್ವಾಮಿ ಸುತ ಪ್ರೀಯಾ | ತ್ರಿವಿಕ್ರಮನೆ ಕೋಮಲಾಂಗಾ ರಂಗಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾಯೋ ದಯಾಭರಿತ ಮಾರುತಿ ಪ ಸುರಪಾ ಫಣಿಪಾ ಧ್ವಿಜಪಾ ಸೇವಿತಾ ವಿನುತ ಭರಿತ 1 ಹೇಸಿ ವಿಷಯದಾಸೆಯ ಬಿಡಿಸಿ ದಾಸನೆಂದುದಾಸೀನ ಮಾಡದೆ 2 ಶಾಮಸುಂದರ ಪ್ರೇಮದ ತನಯ ಭೀಮಾನಂದ ಮುನಿಯೆ ಧಣಿಯೇ 3
--------------
ಶಾಮಸುಂದರ ವಿಠಲ
ಕಾಯೌ ಶ್ರೀ ರಮಾದೇವಿಯೆ ಸದಾ ತೋಯಜಾಂಬಕಿಯೇ ಭಯವ ಬಿಡಿಸಿ ಭರದಿಂದ 1 ಕ್ಷೀರಾಂಬೋನಿಧಿ ತನಯೇ ತಾಯೇ ಮಾರನಯ್ಯನರಸಿ ಕರುಣಾವೆರಸಿ ನಲವಿಂದ 2 ಶಿ ್ರೀ ಶೇಷಾದ್ರೀಶ ಮನೋಲ್ಲಸಿತೆ ಕಾಂತೇ ವಾಸವಾದಿ ವಿನುತೇ ಮಹಿತೇ ವರದಾತೇ ತಾಯೆ 3
--------------
ನಂಜನಗೂಡು ತಿರುಮಲಾಂಬಾ
ಕಾರಣನೇ ಇವನು ಎಲ್ಲಕ್ಕೂ ಕಾರಣನೇ ಇವನು ಪ ಕಾರಣನಿವನು ಸಾಧಾರಣನಲ್ಲನು ಮಾರಮಣನು ಕರುಣಾರಸಮಯನು ಅ.ಪ ಇಚ್ಛೆಯಿಂದಲಿ ತಾನು ಅಖಿಲ ಜಗ ತ್ಸøಷ್ಟಿಯ ಮಾಡುವನು ಸ್ವಚ್ಛನಾದರು ತನ್ನ ಮೆಚ್ಚಿಗೆಯಿಂದಲಿ ತುಚ್ಛನೆಂಬೊ ಶಬ್ದ ವಾಚ್ಯನಾಗಿರುವನು 1 ಎಲ್ಲವ ಬಲ್ಲವನು ಈಶನು ಇಲ್ಲದ ಸ್ಥಳವಿಲ್ಲ ಚಿಲ್ಲರೆ ದೈವಗಳೆಲ್ಲರು ಈತನ ಚೆಲ್ಲಾಟಗಳಿಗೆ ಉಲ್ಲಾಸಿಸುವರು 2 ಭಿನ್ನರೂಪಗಳಿಂದ ಜಗದೊಳು ತನ್ನ ಲೀಲೆಯ ತೋರ್ಪ ಸನ್ನುತ ಭಕುತಗೆ ಮನ್ನಣೆಯಿಂದ ಪ್ರ ಸನ್ನನಾಗಿ ಉನ್ನತ ಪದವೀಯಲು 3
--------------
ವಿದ್ಯಾಪ್ರಸನ್ನತೀರ್ಥರು
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕಾಲ ಭುಜಗವೇಣಿಯೆ ಪೊರೆಯೆ ಲೋಲೆ ಶ್ರೀ ವರಲಕ್ಷ್ಮಿಯೆ ಪ ಫಾಲ ವಿರಾಜಿತೆ ಅ.ಪ ಇಂದು ಸುಂದರ ಭಾಸಿತೆ ವಿನುತೆ ಬಂಧುರಾಲಕ ಭೂಷಿತೆ ಇಂದಿರೆ ವಿಮಲೆ 1 ಅಂಬುಜಾನನೆ ಕಾಮಿನಿ ವಿಮಲೆ ಬಿಂಬರದನ ವಾಸೆಯೆ ಶಂಬರವೈರಿ ಶುಭಂಕರಿ ಮಹಿತೆ 2 ಪೊಳೆವ ಲೋಚನ ಥಳಕು ದೇವಿ ಬೆಳೆವ ಮಿಂಚಿನ ಬೆಳಕು ದಳಿತ ಕುಸುಮಾವಳಿ ಕಲಿತ ಮುಖಾಮಲೆ 3 ಭೃಂಗವೇಣಿಯೆ ಭಜಿಪೆ ತಾಯೆ ಶೃಂಗಾರ ಭೂಷೆ ಮಂಗಳೆ ಮಾಧವ ಮಂಗಳರೂಪೆ 4 ಮಾನಿನಿ ಗುಣಭೂಷಿತೆ ಸತತಂ ಸಾನುರಾಗದೆ ಸಲಹು ಸರ್ವಸುಖ ಸಂಪದೆ ವರದೆ5
--------------
ಬೇಟೆರಾಯ ದೀಕ್ಷಿತರು
ಕಾಲ ಸಜ್ಜನರಿಗನ್ನಕಿಲ್ಲದ ಸಾವಕಾಲ ಪ ಅರಮನೆಯ ಬಾಗಿಲನು ಕಾದು ಕೊಂಡಿರ್ದು ನೃಪ ವರನೊಡನೆ ಮಾತುಕಥೆಗಳ ನಡೆಸುತ ವರಮಂತ್ರಿಯಾಗಿ ರಾಜಾಧಿ ಕಾರಂಗಳನು ಕಾಲ 1 ಅಡಗಡಿಗೆ ಮಂತ್ರಿಗಳನಾಶ್ರಯಿಸಿ ಕೋವಿದರು ಗಡಿಗಳನು ಕೊಡಿಸೆನಗೆ ತನಗೆನ್ನುತ ಕಾಲ 2 ಮತ್ತಿವರನಾಶ್ರಯಿಸಿ ಕೆಲರು ಮಣಿಹಂಗಳನು ಪೊತ್ತು ಸೀಮೆಯ ಗ್ರಾಮಗಳ ನೋಡುತ ಇತ್ತ ಕುಳ ಸ್ಥಳ ವಂಚನೆಗಳೆಂದು ಬಂದ ಕಾ ಕಾಲ 3 ಬುಡಗಳನ್ನು ಗೈದೆ ಹಾಳ್ಮಾಡಿ ಕೊಂಡಿರ್ದರಿಗೆ ಕಡ ಮೊದಲುಗಳ ಕೊಟ್ಟು ಪೋಗೆಂಬರು ಅಡೆಯಂಚು ಮೂಲೆಗೆಳಗೈದು ಕುಳದೆರಿಗೆಯನು ಕಾಲ ಕಾಲ 4 ಚಾಡಿ ಕೋರರು ಹೆಚ್ಚಿ ಕೆಡಿಸಿವರ ರಾಜ್ಯವನ್ನು ರೂಢಿ ಪತಿಗಳಿಗೆಲ್ಲ ಕಿವಿಯೇ ಕಣ್ಣು ನೋಡಿದರೆ ಮರುತ ಸುತ ಕೋಣೆ ಲಕ್ಷ್ಮೀರಮಣ ನಾಡಿಸಿದ ವೋಲು ಜಗವಾಡುತಿಹುದು 5
--------------
ಕವಿ ಪರಮದೇವದಾಸರು
ಕಾಲಮಹಿಮೆ ಕೇಳಿ ಜಗದಾಲೋಚನೆ ತಾಳೀ ಪ ಕೀಳು ಖೂಳರಿಗೆ ಮೇಲು ಹಾಸಿಗೆ ಮಂಚ ಬಾಲಾಜಿ ಭಜನೆ ಜನಕೆ ಜೋಳಿಗೆ ಯೀ ಪ್ರಪಂಚಾ 1 ಉತ್ತಮಪುರುಷರಿಗೆಲ್ಲ ತುತ್ತಿಗೆ ಮಾನಹೋಗಿ ಹೆತ್ತವ್ವೆ ಹೋಗೆ ಕಳ್ಳ ಚಿತ್ತರ್ಗೆ ಮಂಚಾ ತೂಗೆ 2 ಡಂಬಾಚಾರಿಗಳಿಗೆಲ್ಲಾ ಕೊಂಬು ಕುದುರೆಯಗಾಡಿ ಶಂಬೂನುತರೂ ಪಾಪಿಗಾಡಿಗಳ ಹಿಂದೆ ವೋಡೆ 3 ನಿಚ್ಚಾ ಮುತ್ತೈದೆರ್ಗೆಲ್ಲಾ ಅಂಜಿಕೆ ಅರುಶನವಿಲ್ಲಾ ಬಿಚ್ಚಾಲೆಯಿಲ್ಲದ ರಂಡೇರ್ಹೆಚ್ಚಿ ಹೀಗಾಯಿತಲ್ಲ 4 ದೋಷರಹಿತ ಹರಿದಾಸ ತುಲಸೀರಾಮಾ ದೇಶಿಕಾ ತನ್ನ ನಿಜದಾಸಾನ ಮಾಡಿಕೊಂಡಾ 5
--------------
ಚನ್ನಪಟ್ಟಣದ ಅಹೋಬಲದಾಸರು
ಕಾಲವೆಂತು ಕಳೆಯಲೆನ್ನಯ್ಯ ಪ ಕಾಲಕಳೆಯಲೆಂತು ನಾನು ತಾಳಿಮೂಗುತಿ ಕಾಣದೊನಿತೆಯ ಹಾಳುಮುಖವ ನೋಡೆವೆಂದು ಶೀಲಮುತ್ತೈದೇರ್ಹಳಿಯುತಿಹ್ಯರು ಅ.ಪ ಏಳುಸುತ್ತಿನಕೋಟಿ ಪಟ್ಟಣದಿ ಖೂಳರುಪಟಳ ಹೇಳಲಳವಲ್ಲ ಸೇರಿ ವಿಧ ವಿಧದಿ ದಾಳಿನಿಕ್ಕಿ ಹಾಳು ಮಾಡ್ವರು ಮನಕೆ ಬಂದತೆರದಿ ಗೋಳು ಕೇಳುವರಿಲ್ಲವೋರ್ವರು ತಾಳೆನೀಬಾಧೆ ಶೀಲದೆನ್ನ ಬಹು ಜೋಕಿಯಿಂ ಮೇಲ್ಮಾಲಿನೋಳಿಟ್ಟು ಆಳುವಂಥ ಮೂಲಪುರಷನಿಲ್ಲದಿನ್ನು 1 ಆರು ಕೇಳುವರಿಲ್ಲ ಇವಳಿಗೆಯೆನುತ ಕೀಳ ಮೂರು ಮಂದಿ ಊರ ಬೀದಿಯೊಳಗೆ ದಾರಿ ತರುಬಿ ಸಾರಿ ತರಿವರು ಮಾರಕೇಳಿಗೆ ಸೈರಿಸಲಿ ಹ್ಯಾಗೆ ಚೋರನೋರ್ವನು ಮೀರಿ ಬಾಧಿಪ ಆರು ಮಂದಿ ಬಿಡದೆ ಎನ್ನನು ಘೋರಿಸುವರು ನಾನ ವಿಧದಿ ಪಾರುಗಾಣೆನು ವ್ರತದಿ ಇನ್ನು 2 ಪತಿಯು ಇಲ್ಲದ ಜನ್ಮವ್ಯಾತಕ್ಕೆ ಕ್ಷಿತಿಯಮೇಲೆ ಸತಿಗೆ ಪರಮ ಗತಿಯ ಕೊಡಲಿಕ್ಕೆ ಪತಿಯೆ ಬಾಧ್ಯ ಇತರರು ಕಾರಣಲ್ಲ ಕಾಯಕ್ಕೆ ಜತನ ಗೈಲಿಕ್ಕೆ ಪ್ರಥಮ ಮುತ್ತಿನ ಮೂಗುತಿಯನು ಹಿತದಿ ಕರುಣಿಸಿ ಪತಿಯಾಗೆನಗೆ ಗತಿಯ ನೀಡಿ ಹಿತದಿಂ ಸಲಹು ಪತಿತ ಪಾವನೆನ್ನ ಪ್ರಾಣ ಶ್ರೀರಾಮ 3
--------------
ರಾಮದಾಸರು
ಕಾವೇರಿ ಕನ್ಯಾರ್ಚಿತ ಸುಚರಿತ ದಿವಾಕರಾನತ ಸುರೇಶ ವಿನಮಿತ ಪ ಭವಾಬ್ಧಿ ವಿರಹಿತ ಸಮೀರಸುತನುತ ಶಿವಾ ನೃಹರಿ ಮಾಧವಾ ಕೃಪಾಯುತ ಅ.ಪ ರಮೇಶ ಧರಣಿಪ ಕುಮಾರ ಶಿರಧರ ಸುಮಾನ ವಿರಹಿತ ಪರಾತ್ಪರಾ ಶಮಾ ದಮಯು ತಕ್ಷಮಾ ಸುಧಾಕರ ನಮಾಮಿಶಂಕರ ವಿಮಾನಮಂದಿರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಶಿಯಿಂದ ಬಂದ ಬಾಗೀರಥಿಯು ತನ್ನ ವಾಸಕ್ಕೆ ತೆರಳಿದಳು ಲÉೀಸಾಗಿ ತನ್ಹ ಮನದ ಸಂಕಲ್ಪವು ವಾಸಿಯಾಗಲು ತನ್ಹಾಶೆ ಪೊರೈಸಿಸಿ ಪ ಮದದಾನೆ ತನ್ನ ಕಾಲುಗಳ ಸಂಕೋಲೆಯ ನೊದೆದು ಕಳೆವ ತೆರದಿ ಪದುಳದಿ ಶ್ರೀಗುರು ಮುದದಿ ಬಿಡಿಸಿ ತನ್ನ ಸದಮಲಾನಂದವ ಸತತ ಪಡೆವೆನೆಂದು 1 ಮುತ್ತೈದೆತನದಿ ತೆರಳಿಹೋಗಬೇಕೆಂಬ ಚಿತ್ತದಿವಿಸ್ಮರಣೆಗೈದು ಪ್ರತ್ಯುಗಾತುಮ ಆತ್ಮಾರಾಮನ ಸಂಗಡ ಚಿತ್ತೈಸಿದಳು ತನ್ನ ಉತ್ತಮ ಕಾಶಿಗೆ 2 ಪತಿಯ ವಚನದ ಸಂಗತಿಗಳ ಕೇಳುತ ಅತಿ ಹಿತ ತನಗಾಗಲು ಮತಿಗೆ ಮಂಗಲವಾದ ಮುಕುತಿಯ ಸಾಧಿಸಿ ನುತ ವಿಮಲಾನಂದ ಸತತ ಪಡುವೆನೆಂದು 3
--------------
ಭಟಕಳ ಅಪ್ಪಯ್ಯ
ಕಾಳಿ ಭವಾನಿ ಶಿವೆ ಪಾಲಿಸೇ | ಪ ಗೋತ್ರೋದ್ಬವೆಸಿತ ಗೋತ್ರ ಕೃತಾಲಯೆ | ಗೋತ್ರಸುರಾರ್ಚಿತೆ ಗೋತ್ರಾರಿಯನುತೆ 1 ಭುವನೇಶ್ವರಿತ್ರೈ ಭುವನಾರ್ಚಿತಪದ | ಭುವನಜಯುಗ್ಮಳೆ ಭುವನಜ ಲೋಚನಳೇ 2 ನಾಗಾಂಬರ ಪ್ರಿಯೆ ನಾಗ ಸುವೇಣಿಯೇ | ನಾಗತಿ ಬೆಡುವೆ ನಾ ಗಿರಿಜೇಶಳೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೀಚಕಾಂತಕ ಭೀಮಸೇನರಾಯ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು ಪ ಕುಂತಿ ಜಠರೋದ್ಭವನೆ ಕುವಲಯದೊಳಗಿಪ್ಪಮ ಹಂತರಿಗೆ ಬಪ್ಪ ಜನ್ಮಾದಿರೋಗ ಚಿಂತೆಗಳ ಕಳೆದ ನಿಶ್ಚಿಂತರನು ಮಾಡು ಸ ರ್ವಾಂತರಾತ್ಮಕ ಸುಖದ ಸರ್ವೇಶ ಶಕ್ರಾದಿ ನುತ 1 ದ್ರೌಪದೀರಮಣ ಜ್ಞಾತಾಜ್ಞಾತ ಕರ್ಮಜ ಮ ಹಾಪರಾಧಗಲೆಸದನು ದಿನದಲಿ ನೀ ಪೊರೆಯಬೇಕುಪೇಕ್ಷಿಸದೆ ನಿನ್ನವರ ವಿ ವಿಶ್ವ ಚೇಷ್ಟಕನೆ 2 ಕೌರವಾಂತಕನೆ ಕಾಶ್ಯಪಿಸುತರ ಸಂತೈಪ ಭಾರ ನಿನ್ನದು ಭವದಿ ಭಕ್ತಬಂಧೋ ಪ್ರೇರಕ ಪ್ರೇರ್ಯ ರೂಪಗಳಿಂದ ಸರ್ವರ ಶ ರೀರದೊಳಗಾಡುವೆ ದೇವತೆಗಳೊಡನೆ 3 ಪವಮಾನತನಯ ಪಾಪಿಷ್ಠರೊಳಗಿದ್ದು ನಿ ನ್ನವರನೀಪರಿ ದಣಿಸಿ ನೋಡುತಿಹುದು ಭುವನತ್ರಯೇಶ ಭೂಷಣವೇನೋ ನಿನಗೆ ಸ ತ್ಕವಿ ಕುಲೋತ್ತಂಸ ಕಾವರ ಕಾಣೆ ನಿನ್ನುಳಿದು 4 ಧನಧಾನ್ಯ ಪಶುಪತ್ನಿ ಜ್ಞಾನಭಕುತಿ ತನಗೆ ತಾನೊದಗಿ ಬಪ್ಪುದು ಸುನಿಶ್ಚಯ ಸನಾ ತನ ಜಗನ್ನಾಥ ವಿಠ್ಠಲನೊಲುಮೆ ಪಾತ್ರ 5
--------------
ಜಗನ್ನಾಥದಾಸರು
ಕುಟ್ಟಿ ಕೊಳ್ಳೊ ಮಾಣಿ ನಿನ್ನ ಹುಟ್ಟಿಸಿರುವ ದೈವಕೆ ಹೊಟ್ಟೆ ತುಂಬ ಬಾಯಿಗಾನು ಬಿಟ್ಟೆನೆಂದ್ರೆ ಕ್ಷೀರವಿಲ್ಲ ಪ ಕೊಟ್ಟು ಪಡೆಯಲಿಲ್ಲ ಮುನ್ನಹುಟ್ಟಿ ಪಡೆಯಲಿಲ್ಲ ಮುಂದೆ ಹಟ್ಟಿಯೊಳಗಣಾಕಳೆಲ್ಲ ನಷ್ಟವಾಯ್ತು ರೋಗದಿಂದ 1 ಅತ್ತು ಸಾಯ ಬೇಡ ನೀನು ಎತ್ತಿ ಕೊಂಬರೊಬ್ಬರಿಲ್ಲ ಭತ್ತವನ್ನು ಕುಟ್ಟಿ ನಾನು ತುತ್ತಮಾಡಿ ತಿನ್ನಿಸುವೆನು 2 ನೀರು ಕಾದು ಬಂತು ಬಿಸಿಯ ನೀರ ನೆರೆವೆನೀಗ ನಿನಗೆ ಸಾರಿ ಮೊಲೆಯ ನೂಡಿ ನನ್ನ ಸೀರೆ ಸೆರಗಹಾಸಿ ಕೊಡುವೆ 3 ದೊಡ್ಡ ಕೂಸ ಕಾಣೆಯವಳು ಗುಡ್ಡೆ ಬಸವಿಯಾದಳೀಗ ಚಡ್ಡೆಯಲ್ಲದೆ ಹೋಗುತಿಹಳು ಸಡ್ಡೆ ಮಾಡಳೆನ್ನಮಾತ 4 ಇಂತೆನುತ್ತ ಬಾಲಕನ್ನ ಸಂತವಿಟ್ಟು ನಾರಿ ಲಕ್ಷ್ಮೀ ಕಾಂತ ಮಾಡ್ದ ಲೀಲೆಗಳನು ನಿಂತು ಪಾಡಿಪೋದಳಾಕೆ 5
--------------
ಕವಿ ಪರಮದೇವದಾಸರು