ಒಟ್ಟು 1168 ಕಡೆಗಳಲ್ಲಿ , 97 ದಾಸರು , 915 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ವ ಸರೋವರದ ಸ್ನಾನವ ಮಾಡಿರೊ ಬುದ್ಧಿವಂತರು ಕೇಳಿ ಇದರ ಮಹಾತ್ಮೆಯನು ಪ ತ್ರೇತಾಯುಗದಲ್ಲಿ ವರುಣತೀರ್ಥ ಕ್ಷಿತಿಯೊಳಗೆ ದ್ವಾಪರದಿ ಚಂದ್ರ ಪುಷ್ಕರಣಿ ಉ- ನ್ನತ ಕಲಿಯುಗದಲ್ಲಿ ಮಹಾ ತೀರಿಥ 1 ಸುರನದೀ ಮಿಕ್ಕಾದ ಸ್ಥಾನದಲಿ ಸೇವೆ ವಿ- ಸ್ತರವಾಗಿ ಕೊಳುತಿಪ್ಪಳು ಉಪೇಕ್ಷದಿ ಧರೆಯೊಳಗೆ ಇಲ್ಲಿ ಗುರು ಮಧ್ವಮುನಿ ಸರ್ವಾರ್ಥ ನಿರುತದಲ್ಲಿ ತೀವ್ರಗತಿ ಕೊಡುವಳೂ2 ಸಕಲ ವೇದಶಾಸ್ತ್ರ ಓದಿದವನಾದರೂ ಶಕುತಿವಂತನಾಗಿ ಇದ್ದನಾಗೆ ಸುಖ ತೀರ್ಥ ಸರೋವರದ ಸ್ನಾನ ಮಾಡದಿರಲು ಶಕಲ ಮತಿಯಲಿ ಮಹಾನರಕ ಭುಂಜಿಸುವಾ 3 ಮಜ್ಜನ ತಂದು ಕೊಡುವದು ನರಗೆ ಮಿಂದ ಫಲವೊ ಎಂದೆಂದಿಗೆ ಇಲ್ಲಿ ಬಿಡದೆ ವಾಸವಾದ ಮಂದಿಗಳ ಪುಣ್ಯ ಪ್ರತಾಪ ಎಣಿಸುವರಾರು 4 ಛೇದಿಸುವದಕೆ ಇದೇ ಸ್ನಾನವೆನ್ನಿ ಮೋದ ಮೂರುತಿ ನಮ್ಮ ವಿಜಯವಿಠ್ಠಲ ಕೃಷ್ಣ ಭೇದಾರ್ಥ ಮತಿಕೊಟ್ಟ ಭೇದವನು ತೊಲಗಿಸುವಾ5
--------------
ವಿಜಯದಾಸ
ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮನಗೊಂಡವರಲ್ಲಿ ಘನಗೊಳ್ಳಿ ಜ್ಞಾನಾಗಮ್ಯದ ಧ್ರುವ ಮುನಿಜನರಾರಾಧಿಸುವ ನಿಧಾನ ಅನಿಮಿಷದಲಿ ನೋಡುವ ತ್ರಾಣ ಉನ್ಮನಲಿಹ ಧನ 1 ಜಾಣನೇ ಮಾಡಿಕೊಂಬನು ಪರೀಕ್ಷೆ ಸ್ವಾನುಭವದಲಿ ಪ್ರತ್ಯಕ್ಷ ಅನುದಿನದಲಿಹುದ ದಕ್ಷ ಘನಗುರು ಕಟಾಕ್ಷ 2 ಮಹಿಪತಿಸ್ವಾಮಿಯು ಪರಬ್ರಹ್ಮ ಖೂನಮಾಡವಗಿದು ಸಂಭ್ರಮ ಅನಂದೋಬ್ರಹ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನವೆ ನೀ ಸ್ಥಿರವಾಗಿ ಹರಿಯ ಪಾದಾಂಬುಜ_ವನು ಸೇರಿ ಅಲ್ಲಿಯೆ ನಿಲ್ಲಯ್ಯ ಬಿಡದೆ ಪ ಅನುದಿನ ಸೇವಿಸಲನುವಾಗುದಯ್ಯಾಘನ ಚಂಚಲ ನೀನು ಎಚ್ಚರ ಎಚ್ಚರ ಅ.ಪ. ಅಲ್ಲಲ್ಲಿ ಇಲ್ಲೆಂದು ಎಲ್ಲೂ ಹುಡುಕಲು ಬೇಡಎಲ್ಲೆಲ್ಲ್ಯೂ ಇರುವ ಶ್ರೀವಲ್ಲಭನುಬಲ್ಲವರಾಡುವ ಸೊಲ್ಲನು ಲಾಲಿಸುಖುಲ್ಲನೆಂಬುವ ನಿಂದೆಗೀಡಾಗಬೇಡಾ 1 ನಿತ್ಯ 2 ಧ್ಯಾನದ ದಾರದಿಂ ಜಪವೆಂಬ ಗಂಟಿರಲಿಶ್ರೀನಿವಾಸನ ಪಾದವೆಂಬ ಗೂಟಕೆ ಕಟ್ಟಿಮೌನದಿಂ ಕಟ್ಟಿಸಿಕೊಂಡಲ್ಲೇ ಸುಳಿದಾಡುಸ್ಥಾನವ ಬಿಟ್ಟನ್ಯನಿಟ್ಟಿಗೆ ಪೋಗದೆ 3 ಸಕಲರ ಪಾಪವ ತೊಳೆದು ಪಾವನಗೈದುಮುಕುತಿಯ ದಾರಿಯ ತೋರುವ ನದಿಗಂಗೆಪ್ರಕಟವಾಗಿರುವಂತೆ ಚರಣದೊಳುರುಳಾಡುಭಕುತಿಯ ಬೇಡು ನೀ ಪ್ರತಿದಿನ ನೋಡು 4 ಗದುಗಿನ ವೀರನಾರಾಯಣಗೂ ನಿನಗೂ ಹೃದಯವೆ ಮಂದಿರವಲ್ಲವೆ ದೀಪದಕದಿರಂತ ಚಾಚುತ ಪೋಗಿಬರುವದೇತಕೆಸದನವ ಬಿಡದಲ್ಲೇ ಹರಿಯನು ಸೇವಿಸು 5
--------------
ವೀರನಾರಾಯಣ
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮನವೆ ಮಾನ್ಯನ ಮನ್ನಿಸು ಶ್ರೀವ್ಯಾಸ ಮುನಿಗೆ ಒಲಿದಿಹ ವಾಯು ನಾ ಪ ಪ್ರತಿ ಸಂಚರ ಕಾಲದಿ ಅವಿಲೀನ ಮತಿಯುಳ್ಳ ದೇವನಿವನು ಸುತ ಜಯಾದೇವಿಗೀತ ತನ್ನ ಸರಿ ಚತುರಾಸ್ಯ ದೇಹದೊಳಿಹ 1 ಚತುರವಿಂಶತಿ ತತ್ವಕೆ ಅಭಿಮಾನಿ ಮತಿಯುಳ್ಳ ಸೂತ್ರನಾಮ ಹರಿರೂಪ ಮಿತಿ ಇಲ್ಲದಲೆ ಕಾಂಬನೊ 2 ಯತಿಯಾಗಿ ಬಂದು ಹರಿಯ ಕಾರ್ಯಗಳ ಕೃತಿಸಿ ತಾ ನಿಂದು ವ್ಯಾಸ ವ್ರತಿಯಿಂದ ಮಾಡಿಸಿದ ಈತಗೆ ಪತಿ ವಾಸುದೇವವಿಠಲ3
--------------
ವ್ಯಾಸತತ್ವಜ್ಞದಾಸರು
ಮನವೇ ಮರೆವರೇನೊ ಹರಿಯಾ ಪ ಬಹು ಜನುಮಗಳಲ್ಲಿ ಬಟ್ಟ ಬವಣಿಗಳರಿಯಾ ಅ.ಪ. ವಿಷಯ ಚಿಂತನೆ ಮಾಡಸಲ್ಲ ಮೇಷ ವೃಷನನಾದನು ಹಿಂದೆ ಪೌಲೋಮಿ ನಲ್ಲ ಝಷ ಕೇತುವಿನ ಮ್ಯಾಳ ಹೊಲ್ಲ ನಿರಾ ಶಿಷನಾಗು ಯಮರಾಯನೆಂದೆಂದೂ ಕೊಲ್ಲ 1 ಧನವೆ ಜೀವನವೆಂಬಿ ನಿನಗೆ ಸುಯೋ ಧನ ನೋಡು ಧನದಿಂದ ಏನಾದ ಕೊನೆಗೆ ಅನಿರುದ್ಧ ದೇವನ ಮನೆಗೆ ಪೋಪ ಘನ ವಿಜ್ಞಾನವನೆ ಸಂಪಾದಿಸು ಕೊನೆಗೆ 2 ಹರಿದಾಸನಾಗಿ ಬಾಳೋ ಗುರು ಹಿರಿಯರ ಪಾದಕಮಲಕೆ ನೀ ಬೀಳೋ ನರರ ನಿಂದಾಸ್ತುತಿ ತಾಳೋ ದೇಹ ಸ್ಥಿರವಲ್ಲ ಸಂಸಾರ ಬಹು ಹೇಯ ಕೇಳೋ 3 ಹಲವು ತೀರ್ಥಗಳಲ್ಲಿ ಸ್ನಾನ ಮಾಡೆ ಮಲ ಪೋಯಿತಲ್ಲದೆ ನಿರ್ಮಲ ಜ್ಞಾನ ಫಲಿಸದೆಂದಿಗು ಹೀನ ಬುದ್ಧಿ ಕಳೆದು ಸೇವಿಸು ಸಾಧುಗಳನನುದಿನ 4 ಜಿತವಾಗಿ ಪೇಳುವೆ ಸೊಲ್ಲಾ ಹರಿ ಕಥೆಯಲ್ಲಿ ನಿರತನಾಗಿರು ಲೋಹ ಕಲ್ಲಾ ಪ್ರತಿಮೆ ಪೂಜಿಸಿದರೇ ನಿಲ್ಲ ಪರೀ ಕ್ಷಿತನೆಂಬ ರಾಯ ಈ ಮಹಿಮೆಯ ಬಲ್ಲಾ 5 ಜ್ಞಾನೇಚ್ಛಾ ಕ್ರಿಯಾ ಶಕ್ತಿ ತ್ರಯವಾ ತಿಳಿ ದಾನಂದ ಪಡು ಬಯಸದಿರುಭಯವಾ ಸಾನುರಾಗದಿ ಬೇಡು ದಯವಾ ನೀ ಮ ದ್ದಾನೆಯಂದದಿ ಚರಿಸು ಬಿಟ್ಟು ಭಯವಾ 6 ಭಾವ ಕ್ರಿಯಾ ದ್ರವ್ಯಾದ್ವೈತ ತ್ರಯ ಆವಾಗ ಚಿಂತಿಸು ಭೂಮ್ಯಾದಿ ಭೂತಾ ಜೀವಿಗಳೊಳು ಜಗನ್ನಾಥ ವಿಠಲ ಗಾವಾಸ ಯೋಗ್ಯವೆಂದರಿಯೋ ಸಂತತಾ 7
--------------
ಜಗನ್ನಾಥದಾಸರು
ಮನವೇನೆಂಬುದನರಿಯೋ ಮನುಜ ಮನ ವೇನೆಂಬುದನು ಧ್ರುವ ಮನವೇನೆಂಬುದನನುಭವಕೆ ತಂದು ಖೂನದಲಿಡದೆ ಜ್ಞಾನದಲಿ ನಾನಾ ಶಾಸ್ತ್ರವ ಓದಿ ನೀ ಅನುದಿನ ಏನು ಘಳಿಸಿದ್ಯೊ ಮರುಳ ಮನುಜ1 ಉತ್ಪತ್ತಿ ಸ್ಥಿತಿ ಲಯ ಕರ್ತನೆಂದೆನಿಸಿ ಪ್ರತ್ಯೇಕರವನು ತೋರುತಲಿ ಮತ್ತೆ ಬ್ಯಾರ್ಯಾದ ಪರಬ್ರಹ್ಮೆಂದು ತಾ ಚಿತ್ತ ಭ್ರಮಿಸುದು ದಾವುದೊ ಮನುಜ 2 ಏಕೋ ವಿಷ್ಣು ವೆಂದೆನಿಸಿ ಮುಖದಲಿ ಪೋಕ ದೈವಕೆ ಬಾಯದೆರೆಸುತಲಿ ನಾಕುವೇದವ ಬಲ್ಲವನೆಂದೆನಿಸಿ ವಿಕಳಿಸುತಿಹ್ಯದು ದಾವುದೊ ಮನುಜ 3 ಉತ್ತಮೊತ್ತಮರ ಕಂಡಾಕ್ಷಣ ಹರುಷದಿ ನಿತ್ಯಿರಬೇಕೀ ಸಹವಾಸವೆನಿಸಿ ಮತ್ತೊಂದರಘಳಿ ಗಾಲಸ್ಯವ ತೋರಿ ಒತ್ತಿ ಆಳುವದು ದಾವುದೊ ಮನುಜ 4 ಪಾಪವ ಮಾಡಬಾರದು ಎಂದೆನಿಸಿ ವ್ಯಾಪಿಸಿಗೊಡದೆ ಕಾಣದನಕ ಉಪಾಯದಲಿ ಅಪಸ್ವಾರ್ಥವು ಇದಿರಡೆ ಅಪಹರಿಸುವದು ದಾವುದೊ ಮನುಜ 5 ಪ್ರಾಚೀನವೆ ತಾಂ ನಿಜವೆಂದರುಹಿಸಿ ಆಚರಣೆಯ ಬ್ಯಾರೆ ತೋರುತಲಿ ನೀಚ ಊಚ ಹೊಡೆದಾಡಿಸುತ ನಾಚಿಸುತಿಹುದು ದಾವೊದೊ ಮನುಜ 6 ಸಗುಣ ನಿರ್ಗುಣ ಬ್ಯಾರೆರಡನೆ ತೋರಿ ಬಗೆ ಬಗೆ ಸಾಧನ ತೋರಿಸುತ ಬಗೆದೊಂದೆವೆ ಭಕುತಿಗೆ ನೆಲೆಗೊಳಿಸಿದ ಪ್ರಗತಿ ತೋರುವುದು ದಾವುದೊ ಮನುಜ 7 ಧ್ಯಾನಕೆ ಕೂಡಿಸಿ ಮೋನವ ಹಿಡಿಸಿ ಅನುದಿನ ಜಪವನು ಮಾಡಿಸುತ ಘನವಾಗಿಹÀ ಅನುಭವ ಸುಖದಾಟದ ಖೂನ ದೋರಿಸುದು ದಾವುದೊ ಮನುಜ 8 ಮರವಿಗೆ ತಾನೆ ಅರಿವೇ ಕೊಟ್ಟು ತಿರಿವು ಮರವಿನಂಕುರದ ಕುರ್ಹುವಿನ ಇರಹು ತೋರಿಸುದು ದಾವುದೊ ಮನುಜ 9 ಮನವಿನ ಮೂಲವು ತಿಳಿವದು ಭಾನುಕೋಟಿ ಪ್ರಕಾಶನ ಕರುಣದಲಿ ನಾನು ನಾನೆಂಬವರಿಗೆ ಇದರ ಖೂನ ಲೇಶ ತಿಳಿಯದೊ ಮನುಜ 10 ಹರಿಯೆ ಗುರುವೆಂದರುಹಿಸಿ ಆತ್ಮಲಿ ಶರಣಹೋಗುವ ಭಾವನೆದೋರಿ ತರಳಮಹಿಪತಿ ಗುರುದಯ ಪಡಕೊಂಡಿಂದು ಯೋಗ್ಯನಾಗುವದಿದೊಂದೆ ಮನುಜ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನ್ನಿ ಮನ್ನಿಗೆ ಉಣ್ಣ ಬಂದಾ | ತನ್ನವರೊಳಗಿದ್ದ ಸರ್ವ ಸಾರಭೋಕ್ತಾ ಪ ಭಕುತರಗೋಸುಗ ಭಕುತಿಯ ಕೈಕೊಂಡು ಇಂದು 1 ಭೂವದರೊಳಗಿದ್ದು ದೈತ್ಯರ ಗೆದ್ದಂತೆ | ಆವಿಷ್ಣುವಾಗಿ ಮನ್ನಣೆಯ ಕೈಕೊಳುವಲಿ 2 ನಂಬಿದ ದಾಸರ್ಗೆ ಪ್ರಾರಬ್ಧ ಕರ್ಮವು | ಉಂಬೋದು ಬಿಡದಂದು ತದಾಕಾರ ರೂಪದಿ3 ದಿವಿಜರ ಒಡಗೂಡಿ ದಿನ ಪ್ರತಿದಿನದಲ್ಲಿ 4 ತನ್ನ ಸಂಕಲ್ಪವು ಸಿದ್ಧಿ ಮಾಡುವೆನೆಂದು ಘನ್ನತೆಯಲಿ ನಮ್ಮ ವಿಜಯವಿಠ್ಠಲಸ್ವಾಮಿ 5
--------------
ವಿಜಯದಾಸ
ಮನ್ನಿಸೈ ಹರಿ ಪನ್ನಗೇಂದ್ರಶಯನ ಪ ಘನ್ನವಾದ ಪಾಪವನ್ನು ಮಾಡಿ ಜಗದಿ ನಿನ್ನ ನಾಮ ಮರದೆ ಸನ್ನುತಾಂಗ ಸಲಹೊಅ.ಪ ಜ್ಞಾನ ಶೂನ್ಯವಾಗಿ ನಾನಾ ವಿಷಯಗಳಲಿ ನಾನು ನನ್ನದೆಂಬ ಹೀನ ಮಮತೆಯಿಂದ ದಾನವಾರಿ ನಿನ್ನ ಧ್ಯಾನಿಸದಲೆ ಕಾಲ ಸಾನುರಾಗದಿಂದ ಶ್ವಾನನಂತೆ ಕಳೆದೆ 1 ರೋಗಹರನೆ ಭವದ ರೋಗವೈದ್ಯನೆಂದು ಬಾಗಿ ನಿನ್ನನುತಿಪೆ ನಾಗಾರಿವಾಹನ ಯೋಗಿವಂದ್ಯನೆ ಚನ್ನಾಗಿ ನಿನ್ನ ಸ್ತುತಿಪ ಭಾಗವತರ ಸಂಗ ದೇವ ಪಾಲಿಸಯ್ಯ 2 ರಕ್ಷಿಸೆಮ್ಮ ಬಿಡದೆ ಲಕ್ಷ್ಮಿರಮಣದೇವ ಕುಕ್ಷಿಯೊಳಗೆ ಜಗವ ರಕ್ಷಿಸುತ್ತ ಪೊರೆವ ಸೂಕ್ಷ್ಮ ಸ್ಥೂಲದೊಳು ಪ್ರತ್ಯಕ್ಷನಾದ ಹರಿ ಉ- ಪೇಕ್ಷಿಸದಲೆ ಕಾಯೋ ಪಕ್ಷಿವಾಹನ ದೇವ 3 ಕಡಲೊಡೆಯನೆ ದೇವ ಮೃಡನ ಸಖವೆ ಕಾಯೊ ಅಡಿಗಡಿಗೆ ಸ್ತುತಿಸಿ ಬಿಡದೆ ಮುಗಿವೆ ಕಯ್ಯ ಎಡಬಲದಲಿ ಶ್ರೀ ಭೂಮಡದೇರಿಂದ ಮೆರೆವ ಉಡುಪ ಮುಖನೆ ಕಾಯೋ ಕಡಲೊಡೆಯನೆ ರಂಗ 4 ಕಮಲಪತ್ರದಳಾಕ್ಷ ಕಮಲಜೋದ್ಭವೆ ಪ್ರಿಯ ಕಮಲಸಂಭವ ಜನಕ ಕಮನೀಯ ಸ್ವರೂಪ ಕಮಲನೇತ್ರೆರ ರಸಕಮಲಪುಷ್ಪಮಾಲಾ ಹೃ- ತ್ಕಮಲದೋಳು ಶೋಭಿಪ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
ಮರುದಂಶ ಮಧ್ವಮುನಿರನ್ನ ನಿನಗೆಸರಿಗಾಣೆ ಜಗದೊಳಗೆ ಸರ್ವರೊಳು ಪೂರ್ಣ ಪ. ಹಿಂದೆ[ರಾಮರು] ಮುಂದೆ ಬಂಟನಾಗಿ ನೀ ನಿಂದೆಚಂದ್ರದ್ರೋಣದ ಗಿರಿಯ ತಂದೆ ದನುಜರ ಕೊಂದೆ[ಎಂದೆಂದಿಗಳಿವಿಲ್ಲದ]ಬ್ರಹ್ಮ ಪದವಿಗೆ ಸಂದೆಇಂದ್ರಾದಿ ಸುರರುಗಳ ತಂದೆ ಸ್ವಾಮಿಇಂದೆಲ್ಲರಿಗೆ ನೀನು ಗುರುವೆನಿಸಿ ನಿಂದೆ 1 ಕೌರವ ಬಲವ ತರಿದೆ ಕೀಚಕನ ಕುಲವ ಮುರಿದೆಒರ್ವನೆ ಬೇಸರದೆ ಷಡ್ರಥಿಕರನು ಗೆಲಿದೆಉರ್ವಿಯೊಳು ಭುಜಬಲದಿ ಭೀಮನೆನಿಸಿ ಮೆರೆದೆ ಹರಿಯ ಕಿಂಕರರ ಪೊರೆದು ಈಗಸರ್ವವನು ತೊರೆದು ಶಾಸ್ತ್ರಾಮೃತವಗರೆದೆ 2 ದುರುಳವಾದಿಗಳೆನಿಪ ಘನತಾಮಸಕೆ ದಿನಪಸಿರಿಯರಸ ಹಯವದನಪದಕಂಜಯುಗಮಧುಪಗುರುಮಧ್ವಮುನಿಪ ನಿರ್ಲೇಪ ಶುದ್ಧಸ್ಥಾಪ ವರ-ವಿದ್ಯಾಪ್ರತಾಪ ಭಾಪುರೆಪರಮಪಾವನರೂಪ ಭಳಿರೆ ಪ್ರತಾಪ 3
--------------
ವಾದಿರಾಜ
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಹಿಮೆಯನಾರು ಬಲ್ಲರುನಹಿಪ್ರತಿಯೆಂದು ನಿನ್ನ ಪಾಡುವರಲ್ಲದೆ ರಂಗ ನಿನ್ನ ಪ. ವಾಮನನಾಗಿ ಬಂದು ಬಲೀಂದ್ರನಿಗೆ ಸಂದಸೀಮೆಯನೆಲ್ಲವ ಸಲೆವಿಟ್ಟ ತ್ರಿವಿಕ್ರಮ ನಿನ್ನಸಾಮಥ್ರ್ಯವ ಶ್ರುತಿಗಳು ಪೇಳೆ ಉಗುರ್ಗೊನೆಆ ಮಹಾ ಬೊಮ್ಮಾಂಡವ ಸೀಳೆ ದೇವೇಂದ್ರನುಸಾಮ್ರಾಜ್ಯದಿ ಸುಖದಿಂ ಬಾಳೆ ಕೃಷ್ಣ ನಿನ್ನ1 ಇಂದ್ರ ಕೋಪಿಸಿ ಮಳೆಗರೆಯಲು ನಿನ್ನತಂದೆ ತಾಯಿ ಬಂಧು ಬಳಗಂಗಳೆಲ್ಲ ಕಂಗೆಡಲುಅಂದು ಬಲುಗಿರಿಯನೆತ್ತಿ ಗೋ ಗೋಪಾಲರವೃಂದದ ಭಯವ ನುಗ್ಗೊತ್ತಿ ಪಾಲಿಸಿದೆಚೆಂದದಿ ನಿನ್ನಯ ಸಂಪತ್ತಿ ಕೃಷ್ಣ ನಿನ್ನ2 ಇಂದು ಮಧ್ವಮುನೀಂದ್ರಗೊಲಿದು ಕಡುಕೃಪೆಯಿಂದತÀಂದೆ ಹಯವದನ ಮುಕುಂದ ಉಡುಪಿನೊಳಗೆನಿಂದು ಸದಾ ಪೂಜಿಸಿಕೊಂಡೆ ನಿನ್ನ ಮುಂದೆನಂದಾದೀಪಗಳನು ಕಂಡೆ ಭಕ್ಷ್ಯಭೋಜ್ಯಕಂದಮೂಲ ಫಲಂಗಳುಂಡೆ ಕೃಷ್ಣ ನಿನ್ನ 3
--------------
ವಾದಿರಾಜ
ಮಾತು ಸವಿಯೋ ಅವರ ಮಾತು ಸವಿಯೋ ಮಾತಿಲಾತ್ಮಾನುಭವದ ಸ್ಥಿತಿಯಗೂಡಿಸುವರ ಧ್ರುವ ನಿತ್ಯಾನಿತ್ಯದಿತ್ಯರ್ಥದ ತತ್ವಾರ್ಥಸಾರಾಯ ಬೀರಿ ಸತ್ಯ ಸನಾತನದ ಸುಪಥವಗೂಡಿಸುವರ 1 ಚಿತ್ತ ಶುದ್ದವನೆ ಮಾಡಿ ಮತ್ತವಾದ ಪರಬ್ರಹ್ಮಯ ಎತ್ತ ನೋಡಿದರತ್ತ ಪ್ರತ್ಯಕ್ಷ ತೋರಿಸುವರ 2 ಸ್ವಾನುಭವಾಮೃತವನು ಙÁ್ಞನಾಂಜನದುಲುಣಿಸಿ ತಾನೆ ತಾನಾದ ದೀನ ಮಹಿಪತಿ ಸ್ವಾಮಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು