ಒಟ್ಟು 2875 ಕಡೆಗಳಲ್ಲಿ , 108 ದಾಸರು , 1453 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಗಶಯನಾ ನಿನಗೆ ದಯಬಾರದೇನೋ ಪ ಕೂಗಿ ಬೇಸರವಾಯ್ತು ಬಸವಳಿದೆನೋ ಸ್ವಾಮಿ ಅ.ಪ ಗುಡಿಯ ಪ್ರಾಕಾರದಲಿ ನಡುನಡುಗಿ ಕಡುನೊಂದು ಮೃಡನು ತಾ ಬಾಯೆಂದು ಕರೆಕರೆಯೆ ಕಡುಮುದದಿ ಹಿಂದಿರುಗಿ ಕನ್ನವೊಂದನು ಗೈದು ಶೌರಿ 1 ಪೀತಾಂಬರವ ಮಾರಿ ವಿತ್ತಮಂ ತಾರೆಂದ ಮಾತೆಯಾ ಮಾತಿಗಂಜಿದ ಕಬೀರಂಗೆ ಖ್ಯಾತಿಯೀಯುವ ಬಯಕೆ ನಿನಗಾಯಿತಲ್ಲವೇ ಮಾತಿಂಗೆ ಮರುಳಾಗಿ ನಲಿಯಲಿಲ್ಲವೆ ನೀನು 2 ಸತಿಯೆಪ್ರಾಣವುಯೆಂದು ಕಾರಿರುಳ ಲೆಕ್ಕಿಸದೆ ಮತಿಗೆಟ್ಟ ತುಳಸಿದಾಸಂಗೊಲಿದೆಯಲ್ತೇ ಸತತ ಮಾಂಗಿರಿರಂಗ ಪತಿತಪಾವನಾಯೆಂದು ನುತಿಸಿ ನಾ ಕೂಗುವುದು ಕೇಳದಿಹುದೇ ಸ್ವಾಮಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾಟ್ಯವಾಡಿದನು ರಂಗ ಮಂಗಳಾಂಗ ಪ. ನಾಟ್ಯವಾಡಿ ಶಕಟಾಂತಕ ಕೃಷ್ಣ ನೋಟಕರಿಗೆ ತನ್ನಾಟ ತೋರಿ ಭಂಗ ಜಗದಂಗ ಧಿಕಿಟದಿಂ ತದಾಗಿಣ ತೋಂ ತರನಾನಂದದಿ ಸುಂದರನಾಟ್ಯ ಅ.ಪ. ಅಪ್ರಮೇಯ ಹರಿ ತನುಭವ ಬಲರಾಮರ ಜತೆ ಸೇರಿ ಅನುನಯದಲಿ ಗೋವನು ಕಾಯುತಲಿರೆ ಪೀತಾಂಬರಧರನಾಟವ ನೋಡುವೆನೆಂದು ಸಾಟಿಯಿಲ್ಲದ ವಿಷಮಡುವಿಲಿ ಕಾಳಿಂಗ ನೀಟಿಲಿ ಕುಳ್ಳಿರೆ ಓಟದಿ ಪಶುಗಳು ನೀರಾಟದಿ ಕುಡಿಯಲು ನಾಟಿ ಗಾರಾದ ನೆಲಕುರುಳಲು ರಂಗ ಕೋಟಿಪ್ರಕಾಶ ಕಾಳಿಂಗನಾಟ ತೋರುವೆನೆಂದೂ ಧಿಕಿಟ1 ದುಷ್ಟನ ವಿಷಮಯ ನೀರನು ಕುಡಿದು ಉತ್ಕøಷ್ಟ ಗೋವು ಮೂರ್ಛೆಯ ಪೊಂದೆ ಪುಟ್ಟ ಬಾಲಕರು ಕೃಷ್ಣಗೆ ಪೇಳಲಾ ತಟ್ಟನೆ ಕಡಹದ ಮರವೇರುತ ಧುಮುಕೆ ಪುಟ್ಟ ರಂಗನೆಂದು ಬಿಟ್ಟನೆ ದುಷ್ಟನು ಸುತ್ತಿ ಬಾಲ ಕುಟ್ಟುಪ್ಪಳಿಶಿದನು ಕಷ್ಟವೆ ರಂಗಗೆ ನಿಷ್ಟುರ ಭಕ್ತರು ಶಿಷ್ಟಾಚಾರದಿ ಮೆಟ್ಟಿ ಬಾಲ ಕೈಗಿಟ್ಟು ತವಕದಿ ದಿಟ್ಟ ಶ್ರೀ ಕೃಷ್ಣ ಥಕಥೈ ತದಿಗಿಣಝಂ ಆನಂದ ನಾಟ್ಯ 2 ಅಂಬುಜೋದ್ಭವನ ನಾಟ್ಯವ ನೋಡೆ ಕುಂಭಿಣಿ ತಳದಾಕಾಶದಿ ಸುರರು ತುಂಬುರು ನಾರದ ಸಂಭ್ರಮಗಾನ ರಂಭಾದ್ಯಪ್ಸರ ಸ್ತ್ರೀರಂಭರ ನಾಟ್ಯ ಅಂಬರದಿಂ ಪೂಮಳೆ ರಂಗಗೆರೆಯೆ ಜಗಂಗಳು ನೋಡೆ ಶ್ರಿಂಗರ ಶ್ರೀ ಶ್ರೀನಿವಾಸಗೆ ಗೋಪಿ ರಂಗ ಬಾರೆನುತಲೆ ಮಂಗಳಾರುತಿ ಮೂರ್ತಿ ಕಾಳಿಂಗಭಂಗ ನಾಟ್ಯ 3
--------------
ಸರಸ್ವತಿ ಬಾಯಿ
ನಾದದ ಮನಿಯು ತಿಳಿಯದೆ ಬಾರದು ಸಾಧಿಸಿ ಸದ್ಗತಿ ಸುಖ ಭೇದಿಸಿ ತಿಳಿದರೆ ಬೋಧದಿ ಮನವು ಎದುರಿಡುವದು ಧ್ರುವ ತನುವಿನೊಳಿಹ ಪ್ರಣಮವು ಮುನಿಜನಗಳಿಗಿದೆ ಸಾಧನ ಮುಖ್ಯವು ಸ್ವಾನಂದದ ಸುಖಧನವು ಏನ ಬಲ್ಲವು ಖೂನದ ಮಾತು ಹೀನ ಮರುಳ ಜನವು ತಾನೆ ತಾನಾಗಿಹುದು ಓಮಿತ್ಯೇಕಾಕ್ಷರದ ಘನವು 1 ಬಲು ತಾಳ ಭೇರಿ ಮೃದಂಗ ಬ್ರಹ್ಮಾನಂದದ ಸುಖದೋರುವದು ಮೇದಿನಿಯೊಳು ಸತ್ಸಂಗ ಒಮ್ಮನನಾದರೆ ಸಾಧಿಸಿಬಹುದು ಸುಮ್ಮನೆ ಪ್ರಾಣಲಿಂಗ ಕೇಳುವದಂತರಂಗ 2 ಅನುದಿನ ಧಿಮ ಧಿಮಾಟ ಹಾದಿ ತೋರಿಕೊಟ್ಟಿತು ಅಧ್ಯಾತ್ಮದ ಸದ್ಗುರುವಿನ ದಯನೋಟ ಸುಪಥ ನೀಟ ಮಣಿಮುಕುಟ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಾನೇನಂದನೆ ಭಾವಕಿ ಒಳ್ಳೆಆನಂದಮಯ ಹರಿಹರ ಮುನಿದಿತ್ತಬಾರ ಪ ರಮಣಿ ಕುಚ ಕುಂಕುಮಾಂಕಿತ ವಕ್ಷವಾರಿಧಿಶಯನ ಶ್ರೀವಾಸವಾರ್ಚಿತನಾರದನುತ ಪಂಕಜದೈತ್ಯ ಸಂ-ಹಾರ ಶ್ರೀ ಹರಿಹರನೆಂದೆನಲ್ಲದೆಮಾರಮರ್ಧನನೆಂದೆನೆ ಮೆರೆವ ಸರ್ಪಹಾರ ಕುಂಡಲನೆಂದೆನೆ ಶೋಭಿಸುವ ವೈಯ್ಯಾರ ವಿಭೂಷಣ ಶಂಕರನೆಂದೆನಲ್ಲದೆ 1 ಮಡದಿಯೋರ್ವಳ ನುಡಿ ಕಳ್ಳನೆಂದೆನಲ್ಲದೆ ಮಿಗೆಜಡೆದಲೆಯವನೆಂದನೆ ಪುಲಿದೊಗಲದೃಢದಿ ಹೊದ್ದಿಹನೆಂದೆನೆ ತ್ರೈಲೋಕ್ಯದೊಡೆಯ ಮುರಾರಿ ಮಹದೇವನೆಂದೆನಲ್ಲದೆಧರೆಯನಳೆದು ಕ್ಷತ್ರಿಯರ ಕೊಂದು ಶರಧಿಯನಿರದೆ ಕಟ್ಟಿದ ಕೃಷ್ಣ ಬಹುರೂಪವರಕವಿಗುರುವ ಕರದಿ ಪಿಡಿದು ರಕ್ಷಿಪಬಿರುದಿನ ರಾಯ ರಾವುತನೆಂದೆನಲ್ಲದೆ2 ಗಿರಿಜಾರಮಣನೆಂದೆನೆ ಗುಹಾರಣ್ಯವಾಸಎರಡು ರೂಪದಲಿರುವ ಮೂರುತಿಯೆಂದೆ ನಾ ನಂಬಿದ-ವರಪೊರೆವ ಶ್ರೀಹರಿಹರಲಿಂಗನೆಂದನಲ್ಲದೆ3
--------------
ಕೆಳದಿ ವೆಂಕಣ್ಣ ಕವಿ
ನಾನೊರಲುವಾ ದನಿಯು ಕೇಳದೆ ರಂಗಾ ಭಂಗ ಪ ನಾರಿಯೊಬ್ಬಳು ಬಾಲರಿಬ್ಬರು ಕರಿಯೊಂದು ಕ್ಷೀರಾಬ್ಧಿಯೆಡೆಗೈದಿ ಬಾರೋವರೇನೋ ನಾರದನಾ ಯೆನ್ನಂಗ ಬಾರೆಂದೊಡೇನಾಯ್ತೋ ನೀರಜಾಂಬಕ ನೀನು ಪರಿದೋಡಲೇಕೋ 1 ಒಂದೆಲೆಯ ನೈವೇದ್ಯ ಒಂದು ಹಿಡಿಯವಲಕ್ಕಿ ಒಂದು ಹನಿಗೋಕ್ಷೀರ ಒಂದು ದಳ ಶ್ರೀತುಳಸಿ ಒಂದು ಫಲವರ್ಪಣಕೆ ತೇಗಲಿಲ್ಲವೆ ಸ್ವಾಮಿ ತಂದೆಯೆನ್ನಾತ್ಮನೈವೇದ್ಯ ಸಾಲದೆ ರಂಗಾ 2 ಕಾಲು ಕೈ ಕಣ್ಣು ಬೆನ್ನು ಸೋಲುವಂತಾದಾಗಾ ನೀಲಾಂಗ ನಿನ್ನ ಸೇವೆಯು ಸಾಧ್ಯವಲ್ಲ ಕಾಲ ಎಂದೊಳ್ಳಿತೈ ನಾಲಗೆಗೆ ನೋವಿಲ್ಲ ಬಾಲ ಗೋಪಾಲ ಮಾಂಗಿರಿಯ ರಂಗ ದಯಮಾಡೊ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಾಮಕೆಣೆ ಕಾಣೆ ಮುಕುಂದನ ಪ ಶ್ರೀ ಮನೋರಮ ಸುರಸ್ತೋಮವಿನುತ ನಾಮ ಕಾಮಿತಪ್ರದ ನಾಮ ಮುಕುಂದನ 1 ಕೆಟ್ಟ ಕಿರಾತನು ಮುಟ್ಟಿ ಭಜಿಸಿ ತಾನು ಉ- ತ್ಕøಷ್ಟ ಮುನಿಯಾದನು ಮುಕುಂದನ 2 ಘೋರ ನಾರಕಿಗಳು ನಾರಾಯಣನೆಂದು ಸೂರೆಗೊಂಡರು ಸ್ವರ್ಗವ ಮುಕುಂದನ 3 ನಾರಣ ಬಾರೆಂದು ಚೀರಲು ಅಜಾಮಿಳ ಸೇರಿದನಾಪುವರ್ಗವ ಮುಕುಂದನ 4 ಲಕ್ಷ್ಮೀಕಾಂತನ ನಾಮೋಚ್ಚಾರದಿ ದ್ರೌಪದಿ ರಕ್ಷಿತೆಯಾದಳಿಂದು ಮುಕುಂದನ 5
--------------
ಲಕ್ಷ್ಮೀನಾರಯಣರಾಯರು
ನಾರದನು ನಮರರಶಿಕರ ನಂದನಂದನೆ ಗೋಪಿ ಕಂದನೇ ಪ ಬಾರದೆನಾ ಮನಸು ದುಷ್ಕøತ ಮೀರಲಾಪುದೇ ಸುಕೃತ ದೋರಲಾಪುದೇ ದಾಸ ತುಲಶಿರಾಮ ನಿನ್ನ ದಾಸನಾದೆನೋ ದೋಷರಹಿತನ ಮಾಡೆನ್ನ ಮೋಸಹೋದೆನೋ 1
--------------
ಚನ್ನಪಟ್ಟಣದ ಅಹೋಬಲದಾಸರು
ನಾರಾಯಣ ಉದಿಸುವನೆಂದು ಆ ಪೂರ್ವಾಂತರ್ಯಾಮಿ ಅವರ ಸಲಹಲು ಸರ್ವದಾ ಅಪೂರ್ವ ತೇಜೋವಂತನಾಗಿ ಅವರ ಹೃದಯದಿ ಸೂರ್ಯತೇಜದಿ ಮೆರೆಯುತಿರುವ ಸರ್ವದಾ ಎಂದು ಅಪೂರ್ವ ಜ್ಞಾನದಿ ನೆನಯುತಿರಿ ಹರಿಭಕ್ತರು 1 ಎದ್ದು ಮುಖ ತೊಳೆದು ನಿಮ್ಮಲ್ಲಿದ್ದ ಕಲ್ಮಷ ತೊಳೆದು ನಿಮ್ಮ ಶುದ್ಧ ಮನದಲಿ ನೆನೆದು ನಿಲಿಸಿ ಹರಿ ಧ್ಯಾನದಿ ಸ್ನಾನಾನ್ಹೀಕಬದ್ಧಕಂಕಣರಾಗಿ ಬ್ರಾಹ್ಮೀಮುಹೂರ್ತದಲಿ ಗೈಯೆ ನಿಮ್ಮಲ್ಲಿದ್ದ ಕಲ್ಮಶವೆಲ್ಲ ಕಳೆದತಿ ಹರ್ಷವೀವ ನಿಮ್ಮ ಶುದ್ಧಾಚರಣೆಗೆ ಮೆಚ್ಚಿ ನಿಮ್ಮ ಭಕ್ತಿಗೆ ನಿತ್ಯ ಬದ್ಧ ಕಂಕಣರಾಗಿ ಸ್ತುತಿಸೆ ನಿತ್ಯ ಹರಿ ಭಕ್ತರು 2 ಮಾಧ್ಯಾನ್ಹಿಕಾದಿಗಳಾಚರಿಸುತ ಹರಿಯ ಮಧ್ಯವರ್ತಿಯನೆನಿಸಿ ಆ ಸೂರ್ಯನಂತರ್ಯಾಮಿ ನಾರಾಯಣನಿ- - ಗಘ್ರ್ಯಪಾದ್ಯವನಿತ್ತು ಸುಭೋಜನವ ಮಾಡಿ ನಿಮ್ಮ ಪೂರ್ವಜರನುಗ್ರಹದಿ ಮಜ್ಜನ್ಮಸಾರ್ಥಕವೆಂದಾವನರಿವನೋ ಅವನ ಹೃದಯ ಮಧ್ಯವರ್ತಿಯಾಗಿದ್ದು ಕಾವ ಸದ್ಗುಣೋಪೇತ ಭಕ್ತರ ಕೈ ಬಿಡ ಮಧ್ವಾಂತರ್ಗತ ಶ್ರೀ ಶ್ರೀನಿವಾಸ ಅವನ ಮನದಿ ನೆನೆಯಿರಿ ಹರಿ ಭಕ್ತರು 3 ಜವÀನ ಬಾಧೆಯು ಇಲ್ಲ ಹರಿ ಭಕ್ತರಿಗೆ ಯವನ ರೂಪದ ಕಲ್ಕಿ ಹರಿಯ ನೆನೆವರಿಗೆ ಜವದಿ ಯಮನಾಳ್ಗಳು ಮುಟ್ಟಲಂಜುವರು ಹರಿಭಕ್ತರನು ಕವಿ ನಾರಾಯಣನ ಧ್ಯಾನಿಪರಿಗೆ ಅವನಿಯೊಳು ಭಯವಿಲ್ಲ ಅವರಿಗೆ ಸಮನಿಲ್ಲ ಅವರಲ್ಲಿ ಹರಿಯಿದ್ದ ಕಾರಣದಿ ಜವದಿ ಹರಿ ದಾಸರೆಲ್ಲ ಶ್ರೀ ಶ್ರೀನಿವಾಸನ ಭಕ್ತರ ಸಂಗದೊಳಿರಿ ಹರಿಭಕ್ತರು 4 ಯಾರ ಭಯವಿಲ್ಲ ಹರಿ ನಾಮಕೆ ದಾರಿ ಹೋಕರು ಬಾರರಿದಕೆ ಭಾರವಿಲ್ಲವು ಮನಕೆ ಸಂಸಾರಭಯವಿಲ್ಲವರಿಗೆ ಹರಿ ಎಂಬುದನೆ ಸಕಲ ಕಾರ್ಯವ ನಿರ್ವಹಿಸುವನೆಂದರಿತವರಿಗೆ ಯುಕುತಿ ಬುದ್ಧಿಯು ಯಾತಕೆ ಯಾರ ಭಯವೇಕೆ ಹರಿಸಖರಾಗಿರಲವರಿಗೆ ಅಂಜಿಕೆಯಾಕೆ ಯಾರನಾಶ್ರಯಿಸುವ ಶ್ರಮವಿಲ್ಲ ಇದನರಿತು ಹರಿಭಕ್ತರು ಶಕುನ ಅಪಶಕುನವೆನ್ನರು ಮನದಿ ಯುಕುತಿಯ ಮಾಡರು ಪರರ ಬೇಡೆ ಶ್ರೀ ಶ್ರೀನಿವಾಸ ಭಕ್ತರು ಅವರ ಮತ ಹಿಡಿದು ಬದುಕಿ ಹರಿಭಕ್ತರು 5 ಜತೆ ಕರುಣಾಕರ ಹರಿಭಕ್ತರಭಿಮಾನಿ ವರದಭಯ ಹಸ್ತವ ಕೊಡುವ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ನಾರಾಯಣ ನಿನ್ನ ಚರಣ ಸೇವೆಯ ಬಿಟ್ಟು ಸಾರಸಾಕ್ಷನೆ ಪ್ರಾಣದಿರಲಾರೆ ಕ್ಷಣವೂ ಪ ದಾರಿಯೆನಗಿದೊಂದೇ ತೊರ್ಪದು ಸುಖನಿಧಿ ಬಾರಿಬಾರಿಗೂ ಹರಿ ದ್ಯಾನಾನಂದದೊಳಿಗೆ ಅ.ಪ ಅನ್ನವಸ್ತ್ರಂಗಳಿಗಾಗಿ ದುಡಿವದೊಂದು ಚೆನ್ನ ಪುತ್ರರ ರಕ್ಷಣೆಯೊಂದೆಡೆ ತನ್ನ ಮರ್ಯಾದೆ ಕುಂದುಗಳೆಂಬೊ ವ್ಯಸನದಿ ಭಿನ್ನಿಸಿ ತಾಪತ್ರಯ ಪಡುತಿರುವಿಲ್ಲಿ 1 ಕಾಮ ಕ್ರೋಧ ಲೋಭ ಮೋಹ ಮದ ಮತ್ಸರ ಪ್ರೇಮ ಬಾಂಧವರಾಗೆನ್ನನಪ್ಪಿಹರೋ ಸ್ವಾಮಿ ನೀಯೆನ್ನನವರ ಧಾಳಿಗಿಡದಂತೆ ಸಾಮಜವರದ ಸಲಹೆಂದು ಸಂತೋಷದಿ 2 ಭಾಗೀರತಿಪಿತ ಭಾಗವತಪ್ರೀತ ಯೋಗಿಜನಂಗಳೊಳತಿ ಹಿತನೇ ಸಾಗರಶಯನನೆ ಭೋಗಿಗಳ ಪುಣ್ಯನೆ ಬಾಗುವ ಶರಣರ ಬಹುಭಾಗ್ಯನೇ 3 ನಾನಿಲ್ಲಿಗೆ ಬಂದ ಕಾರಣ ಕಾಣೆನೋ ದೀನಪಾಲಕ ಕಾರ್ಯಮಾಡಿಸೋಯನ್ನಿಂ ಏನಾದರು ಮಾಡು ತಪ್ಪಹೊರಿಸಬೇಡ ಶ್ರೀನಿಧಿ ಹೆಜ್ಜಾಜಿಕೇಶವ ಪಾಲಿಸು 4
--------------
ಶಾಮಶರ್ಮರು
ನಾರಾಯಣ ಪರಿಪಾಹಿ-ನರಹರಿಯೆ ಪ ನಿನ್ನೊಳು ನಿರುತನಾನಪರಾಧಿ ನಾರಾಯಣ ಅ.ಪ ಹೇಸಿಕೆಯಿಂದ ಮನಕಾಸುವೀಸಕೆ ಸೋತು ಮೋಸಹೋದೆ ನಿನ್ನ ನೆನೆಯದೆ ಕೇಶವ 1 ನಿರುತ ನಿನ್ನಯ ನಾಮಸ್ಮರಣೆಯ ಬಿಟ್ಟು ಘೋರನರಕಕ್ಕೆ ಗುರಿಯಾದೆ ಪೊರೆಯೊ ನಾರಾಯಣ2 ಮುದದಿಂದ ನಾ ಹದಿಬದೆಯರ ಮುಖನೋಡಿ ಮದದಿಂದ ನಿನ್ನನು ಮರೆದೆನೊ ಮಾಧವಾ3 ಸವನತ್ರಯದಿ ಅವ್ಯವಹಿತ ಕಾರ್ಯವ ಲವಲೇಶ ಬಿಡದೆ ನಾನೆಸಗಿದೆನೋ ಗೋವಿಂದ 4 ಕ್ಷಣ ಬಿಡದಲೆ ದುಷ್ಕರ್ಮದಿಂದಲಿ ದಣಿದು ತೃಣಕೆಣೆಯಾಗಿ ನಿರ್ವಿಣ್ಣನಾದೆ ಹೇವಿಷ್ಣು 5 ಹೃದಯದೊಳಿಲ್ಲದ ಮಧುರ ನುಡಿಗಳ ಮುದದಿ ನುಡಿದೆನೋ ಮಧುಸೂದನನೇ 6 ಅವನಿಯೊಳಗೆ ಎನಗೆಣೆಯಿಲ್ಲವೆನುತ ಅವಗುಣಪ್ರತಿಮೆ ನಾನಾದೆ ತ್ರಿವಿಕ್ರಮ 7 ಅನುದಿನ ನಿಂದಿಸಿ ಯಮನ ಮಂದಿರದಿ ನಾ ನಿಂದೆನೊ ವಾಮನ8 ಬುಧನೆಂದು ಮೆರೆದು ನಾ ಆಧಮರಸೇವಿಸಿ ಅಂಧತಮಕೆ ಗುರಿಯಾದೆನೋ ಶ್ರೀಧರ 9 ವಿಷಯವೆ ಜೀವನದ ಕೃಷಿಯಾಯಿತೆನಗೆ ತೃಷೆಯ ಮೀರದೆ ನಿನ್ನ ಮರೆದೆನೊ ಹೃಷಿಕೇಶನೆ 10 ಉದುಭವಿಸಿದೆ ಈ ವಸುಧೆ ಭಾರಕ್ಕಾಗಿ ಬಾಧಕನಾದೆನೊ ಪದುಮನಾಭನೆ 11 ತಾಮಸಕೃತ್ಯದಿಂದುದರ ಪೋಷಣೆಗಾಗಿ ಪ್ರೇಮದಿ ತಿರುಗಿದೆ ದಾಮೋದರ ದೇವ 12 ಶಂಕೆಯಿಲ್ಲದ ದುರುಳಕಿಂಕರಸೇವೆಯಿಂದ ಸಂಕಟಪಟ್ಟೆನೊ ಸಂಕುರುಷಣ ದೇವ 13 ಕಾಸಿನಾಶೆಗೆ ನಾ ಹೇಸಿಕಿಲ್ಲದೆ ಮನ ಹೇಸದೆ ಯಾಚಿಸಿದೆ ವಾಸುದೇವನೇ 14 ಸದ್ಯಫಲವೆ ಮುಖ್ಯವು ಉದ್ಯೋಗವೆಂದು ಉಬ್ಬಿ ಒದ್ಯಾಡುತಿಹೆ ಪ್ರದ್ಯುಮ್ನದೇವನೆ15 ಸತಿ ಅನುಗಾಲ ಬಂಧು ಎಂದು ಅನವರತ ನಂಬಿದೆನು ಅನಿರುದ್ಧದೇವನೆ 16 ಪರಿಪರಿ ಕ್ರೀಡೆಯಿಂ ಪರಪೀಡಕನಾಗಿ ಪರರನು ಸ್ತುತಿಸಿ ಬೆಳೆದೆ ಪುರುಷೋತ್ತಮ17 ಸಾಧು ಸಜ್ಜನರೊಳು ಭೇದ ವಂಚನೆ ಮಾಡಿ ಅಧೋಕ್ಷಜ ಮೂರ್ತೇ 18 ಬಾರಿಬಾರಿಗೆ ಪರಾನ್ನವನುಂಡು ಘೊರ ದುರಿತಕ್ಕೆ ಗುರಿಯಾದೆ ಶ್ರೀ ನರಸಿಂಹನೇ19 ಕೆಚ್ಚೆದೆಯಿಂದ ನಾನು ಸ್ವೇಚ್ಛೆಯಿಂದಲಿ ಚರಿಸಿ ಹುಚ್ಚು ಹಿಡಿದಂತಾದೆ ಅಚ್ಯುತಮೂರ್ತೇ20 ಮಾನಿಗಳಿಗೆ ಅವಮಾನ ಮಾಡಿ ನಾ ಜ್ಞಾನಿ ಎಂದೆನಿಸಿದೇ ಜನಾರ್ದನನೇ ಕಾಯೊ 21 ಕೋಪತಾಪಗಳಿಂ ಪಾಪಕೃತ್ಯವೆಸಗಿ ತಾಪ ಪಡುತಲಿಪ್ಪೆನಯ್ಯ ಉಪೇಂದ್ರನೆ 22 ಕರಚರಣಗಳಿಂದ ಕಳ್ಳನಾಗಿಹೆನು ತೊರೆದೆನೊ ಹರಿಗುರು ಯಾತ್ರೆಯ ಶ್ರೀಹರೇ 23 ಶಿಷ್ಟರನ್ನೆಲ್ಲ ನಿಕೃಷ್ಟತನದಿ ನೋಡಿ ಭ್ರಷ್ಟನಾಗೀಜಗದಿ ಮೆರೆದೆ ಶ್ರೀಕೃಷ್ಣನೇ 24 ಸಂಕಟಪಡುತಿಹ ಕಿಂಕರನೊಳಿಹ ಮಂಕು ಹರಿಸಿ ಕಾಯೋ ಶ್ರೀ ವೇಂಕಟೇಶನೇ25
--------------
ಉರಗಾದ್ರಿವಾಸವಿಠಲದಾಸರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ
ನಾರಿ ನಾನರಿಯೆನೆ ನಿನ್ನಯ ಮಹಿಮ ಕರುಣದಿ ಇಡು ಪ್ರೇಮ ಪ ಬಾರಿ ಬಾರಿಗೆ ನಿನ್ನ ಭಜಿಸುವ ಭಕ್ತರ ಪಾರುಗಾಣಿಸಿ ಪೊರೆ ನಾರಿ ಶಿರೋಮಣಿ ಅ.ಪ ಕನಸು ಮನಸಿನೊಳ್ ನಿನ್ನಯ ಧ್ಯಾನ ಬಿಡದಲೆ ನಾ ಇನ್ನ ನೆನಸಿ ನೆನಸಿ ಸುಖಿಸುವೆ ಮುನ್ನ ವನಜಾಕ್ಷಿಯೆ ನಿನ್ನ ಅನುದಿನ ನಿನ್ನನು ಸ್ಮರಿಸುವ ಸುಜನರ ಘನವನುಳುಹಿ ಕಾಯೆ ಮನಸಿಜನ ತಾಯೆ 1 ಸೃಷ್ಟಿಯೊಳಗೆ ಶೆಟ್ಟಿ ಕೆರೆಯ ತಟದಲಿ ನೀ ನಿಂತು ಶ್ರೇಷ್ಠಳೆನಿಸಿ ಭಕ್ತರ ಮೊರೆಯ ನಿತ್ಯದಿ ನೀನರಿತು ಇಷ್ಟದಿ ಕೇಳುತ ಶಿಷ್ಟಜನರ ಅಘ ಹಿಟ್ಟುಮಾಡಿ ಕಾಯೆ ಶ್ರೀ ಕೃಷ್ಣನ ಜಾಯೆ 2 ಮದನನಯ್ಯನ ಮೋಹದ ರಾಣಿ ಮದಮುಖದ ಶ್ರೇಣಿ ವಧಿಸಿದ್ಯೆಲೆ ಪರಮ ಕಲ್ಯಾಣಿ ಜಗದೊಳಗತಿ ಜಾಣೆ ಸದನ ಮಾಡಿಕೊಂ ಡೊದಗಿ ಭಕ್ತರ ಮುದವಪಡಿಸಿದ್ಯೆಲೆ 3 ಜಗದೊಳು ನಿನಗೆ ಸರಿಯಾರೆ ಪರಿಪರಿ ವಯ್ಯಾರೆ ಅಗಣಿತ ಗುಣಗಂಭೀರೆ ಸುಂದರ ಸುಕುಮಾರೆ ಬಗೆಯಲಿ ಎನ್ನವಗುಣಗಣ ವೆಣಿಸದೆ ಸೊಗದಿಂದಲಿ ಕಾಯೆ ನಗಧರನ ಪ್ರಿಯೆ 4 ಅನುವನರಿತು ಪಾಲಿಸು ಮುನ್ನನಂಬಿದ ಮನುಜರನ ಅನುದಿನ ನಿನ್ನ ಪಾದಧ್ಯಾನ ಮನಸಿಗೆ ಕೊಟ್ಟೆನ್ನ ವನಜಾಕ್ಷಶ್ರೀ ಪ್ರಾಣನಾಥ ವಿಠಲನ ಸನ್ನಿಧಾನವಿತ್ತು ಮನ್ನಿಸು ತಾಯೆ 5
--------------
ಬಾಗೇಪಲ್ಲಿ ಶೇಷದಾಸರು
ನಿಗಮ ತಂದುಸುವುಸಿ ಜಗದೊಳಗೆ ಧ್ರುವ ನಗ ಬೆನ್ನೆಲಿ ತಾಳಿದ ನೀನಾರೋ ಜಗವ ಕದ್ದೊಯಿದಸುರನ ನೀ ಕೊಂಡು ಬಗೆದು ತರಳಗೊಲಿದವ ನೀನಾರೊ 1 ಧರಣಿ ನೀ ಮೂರಡಿಯನೆ ಮಾಡಿ ಹಿರಿಯಳ ಶಿರ ಹರಿಗಡಿದವನಾರೊ ಪರ ದೇವತೆಗಳ ಸೆರೆಯ ಬಿಡಿಸಿ ತುರುಗಳಗಾಯ್ದ ಗೋವಳ ನೀನಾರೊ 2 ನಾರಿಯರ ವ್ರತಗಳನೆ ಹಳಿದು ಏರಿ ಹಯವನು ಸುಳಿವವನಾರೊ ತರಳ ಮಹಿಪತಿ ಮನೋಹರವ ಮಾಡಿ ಗುರುತುತೋರಿದ ಗುರು ಮಹಿಮ ನೀ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿಜ ಭಕ್ತಿ ತೋರಿದನು ಜಗಕೆ ಕೃಷ್ಣ್ಣಾ ವಿಜಯನಾ ಸತಿಯರಿಬ್ಬರ ನೆವದಿ ಮುದದೀ ಪ. ಹಸ್ತಿವರದನು ತಂಗಿಯರ ನೋಡಬೇಕೆಂದು ಹಸ್ತಿನಾಪುರಕೆ ಬಂದ್ಹರುಷದಿಂದ ಚಿತ್ತ ನಿರ್ಮಲದಿ ಪಾಂಡವರು ಪೂಜೆಸೆ ನಲಿದು ಭಕ್ತಿ ಭಾವಕೆ ಮೆಚ್ಚಿ ದ್ರೌಪತಿಗೆ ವಲಿದೂ 1 ಅಣ್ಣನೆಂಬುವ ಭಾವದಲಿ ಸುಭದ್ರೆಯು ಇರಲು ಘನ್ನ ಮಹಿಮನು ಎಂದು ದ್ರೌಪತಿಯು ತಿಳಿದೂ ಸ್ವರ್ಣಗರ್ಭನ ಪಿತನು ಈರೇಳು ಜಗದೊಡೆಯ ಎನ್ನ ಭಾಗದ ದೈವ ಸಲಹೆಂದು ನುತಿಸೇ 2 ಅಂತರಂಗದ ಭಕ್ತಿ ಆನಂದಮಯ ತಿಳಿದು ಕಂತುಪಿತ ಕರಗಿದಾ ಮಮತೆ ಪ್ರೇಮದಲಿ ಶಾಂತಚಿತ್ತಳೆ ತಂಗಿ ದ್ರೌಪತಿಯೆ ಬಾರೆನುತ ಇಂತು ನುಡಿನುಡಿಗೆ ಆಡಲು ಕರುಣೆಯಿಂದ 3 ಕೇಳಿ ಇದನು ಸುಭದ್ರೆ ತಾಳಲಾರದೆ ಅಜ್ಞ ಬಾಲೆ ನಿಜ ತಂಗಿ ನಾನಿರಲು ಐವರಿಗೆ ಲೋಲೆಯಾದವಳೆ ಬಲು ಮೇಲಾದವಳೆ ಎಂದು ಬಾಲಚಂದ್ರನ ಪೋಲ್ವ ಮುಖ ಬಾಡಿಸಿರಿಲೂ 4 ಕಂಡು ಕಮಲಾಕಾಂತ ವಡಹುಟ್ಟಿದಳ ಬೆಂಡಾದ ತೆರವ ಪೇಳೆನಲು ಖತಿಯಿಂದಾ ಪುಂಡರೀಕಾಕ್ಷ ಎನ್ನುಳಿದು ನಿಜ ಭಾವದಲಿ ಕಂಡವರ ಸುತೆ ನಿನಗೆ ಮಿಗಿಲಾದಳೆನಲೂ 5 ಸಚ್ಚಿದಾನಂದ ವಿಗ್ರಹ ನಗುತ ನೆನೆದನೊಂ ದಚ್ಚರಿಯ ಕೌತುಕವ ತೋರ್ವೆನೆಂದೂ ಅಚ್ಛಿದ್ರ ಅಕ್ಲೇಶ ಆನಂದಮಯ ತಾನು ಕ್ಲೇಶ ಪಡುತ ವರಲಿದನೂ 6 ಬಾರಮ್ಮಾ ತಂಗಿ ಸುಭದ್ರೆ ಬೆರಳಲಿ ರಕ್ತ ಸೋರುತಿದೆ ಬೇಗೊಂದು ಚಿಂದಿ ತಾರೆ ತಾರೆನಲು ಗಡಬಡಿಸಿ ಮನೆಯಲ್ಲ ಹುಡುಕತಲಿ ಬಟ್ಟೆ ಕಂಗೆಡುತಾ 7 ಎತ್ತ ನೋಡಿದರತ್ತ ಪಟ್ಟೆ ಪೀತಾಂಬರವು ಕಂಚುಕ ಮಕುಟ ಮೆರೆಯೇ ಚಿತ್ರದಾ ವಸನ ಅರಮನೆಯಲ್ಲಿ ತುಂಬಿರಲು ಮತ್ತದರ ಮಮತೆ ಅಣ್ಣನಿಗೆ ಅಧಿಕವಾಗೆ 8 ಬರಲಿಲ್ಲ ಸುಭದ್ರೆ ಬಾರಮ್ಮ ದೌಪದಿಯೆ ವರ ತಂಗಿ ಬೇಗ ಕೊಡೆ ಹರಕು ಬಟ್ಟೆ ಸುರಿಯುತಿದೆ ರಕ್ತ ಬೆರಳಿಂದ ನೋಡೆಂದನಲು ಕಿರುನಗೆಯ ನಗುತ ಶರಗ್ಹರಿದು ಕಟ್ಟಿದಳೂ 9 ಬಂದಳಾ ವೇಳೆಯಲಿ ಸುಂದರಾಂಗಿ ಸುಭದ್ರೆ ನಿಂದು ನೋಡಿದಳೂ ದ್ರೌಪತಿಯ ಕೃತಿಯಾ ಮಂದಗಮನೆಯು ನಾಚಿ ಮೊಗವ ತಗ್ಗಿಸಿ ನಿಲಲು ಇಂದಿರೇಶನು ಇದರ ವಿವರ ತೋರಿದನು 10 ಬೆರಗಾದ ಪರಿತೋರಿ ಸಿರಿಕೃಷ್ಣ ಕೇಳಿದನು ಜರತಾರಿ ಸೆರಗ್ಹರಿದು ಕಿರುನಗೆಯ ನಕ್ಕಾ ಪರಿ ಏನೆ ಎಲೆ ತಂಗಿ ನರಳುವೋ ಎನ ನೋಡಿ ಪರಿಹಾಸ್ಯವಾಯಿತೆ ನಿನಗೆ ಎಂತೆಂದಾ 11 ಅಣ್ಣಯ್ಯ ನಿನಗೆ ಮಿಗಿಲಾಯಿತೇ ಈ ಶೆರಗು ಎನ್ನ ಅಭಿಮಾನ ಕಾಯುವ ದೈವ ನೀನೂ ಘನ್ನ ಮಹಿಮಾಂಗ ನಿನಗಿನ್ನು ಕ್ಲೇಶಗಳುಂಟೆ ನಿನ್ನ ಲೀಲೆಗೆ ಹರುಷ ಉಕ್ಕಿತೆಂದನಲೂ 12 ಹೇ ನಾರಿ ನಾನನಾಥರಿಗೆ ನಾಥನು ಮುಂದೆ ನೀನಿತ್ತ ವಸನ ಅಕ್ಷಯವಾಗಲೆಂದು ಶ್ರೀನಾಥ ದ್ರೌಪದಿ ಸುಭದ್ರೆಯ ಮನ್ನಿಸಿ ಮೆರೆದಜ್ಞಾನಿ ಜನಪ್ರಿಯನು ಗೋಪಾಲಕೃಷ್ಣವಿಠಲಾ13
--------------
ಅಂಬಾಬಾಯಿ