ಒಟ್ಟು 1038 ಕಡೆಗಳಲ್ಲಿ , 103 ದಾಸರು , 834 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನಸಿಗೆ ಬಂತು ತಾ ಘನ ಗುರುಮೂರ್ತಿ ಶ್ರೀಪಾದ ಧ್ರುವ ಕನಸಿಲೆ ಕಾಣದ ಕುರುಹು ಮನಸಿಗೆ ಬಂತೆನ್ನೊಳು ತಾ ಪೂರ್ಣ ಏನೆಂದ್ಹೇಳಲಿ ಸೂಕ್ಷ್ಮ ಅನುಭವದ ಖೂನ 1 ಮನಸಿಗೆ ಬಾರದೆ ಹೋಗಿ ಜನಸಿತು ನಾನಾ ಯೋನಿಲೆನ್ನ ಏನೋ ಎಂತೋ ತಿಳಿಯದು ಅನಂದ ಘನ 2 ಮನಸಿಗೆ ಬಂದ ತಾ ವಸ್ತು ಜನವನದೊಳು ತಾ ತುಂ ಬ್ಯಾದೆ ಅನುಕೂಲವಾಯಿತು ಎನಗೆ ದೀನ ಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನ್ಮನೋಜ್ಞಾ ಮನ್ನಿಸಿಲ್ಲಿಗೇ ಪ ಕಷ್ಟ ಪರಂಪರೆ ಕಳೆಯುವಾ ಇಷ್ಟಮೂರ್ತಿ ನಿನ್ನ ನೋಡದಾ 1 ಸಾಧುಗಳು ಸಾಧಿಸುತ್ತಿಹಾ ವೇದವೇದ್ಯ ಧನ್ಯನಾಗದಾ 2 ಪ್ರೇಮ ರೂಪಾ ಜಾಜೀಕೇಶವಾ ಸ್ವಾಮಿನಿನ್ನ ಪಾದಸೇರದಾ 3
--------------
ಶಾಮಶರ್ಮರು
ಮರತರ ತಾ ಮರವಲ್ಲದು ನೋಡಲು | ಅರತರತಾ ಅರವಲ್ಲದು ನಿಜದೊಳು | ಘನದರುವೇ ತಾನಾಗಿ | ಕುರುವಿನೊಳಿರುವಾಗಿಹ ಸ್ವಾನಂದದಿ | ತೆರವಿಲ್ಲದೆ ಸಲೆ ತುಂಬಿತುಳುಕುತಿಹ | ಜಯ ಜಯತು 1 ತೋರುವ ದೃಶ್ಯವ ಕಾಂಬುವ ನಯನಕ | ಸಾರಿಯಮನವನು ನೋಡುವ ಬುದ್ಧಿಗೆ | ನಿತ್ಯ ನಿರಂಜನ ವಿಶ್ವ ಭರಿತನೆಂದು || ಸಾರುವ ಶೃತಿಯಿಂದಾತ್ಮ ಪ್ರಚೀತಿಯ | ಭವ | ವಾರಿಸಿ ಚಿತ್ಸುಖಲಿರಿಸಿದ ಮಹಿಪತಿ | ಸದ್ಗುರು ಜಯ ಜಯತು 2 ಮೊದಲಿಗೆ ಜಯದಾರ್ಜ ಲಕ್ಷಣವನು | ಹೃದಯದಿ ನೆಲೆಗೊಳಿಸಿ | ಇದರದರಿಸಿ ಭವದ್ಹೆದರಿಕೆÉ ಹಾರಿಸಿ | ಸದಮಲ ಬ್ರಹ್ಮನ ಕಳೆಯನು ತೋರಿಸಿ | ಗುರುಮೂರ್ತಿಗೆ ಶರಣು 3 ಆಡುವ ರೇಚಕ ಪೂರ್ವಕ ನಂದಿಯ | ಜೋಡಿಸಿ ಯರಡನೆ ಮೆರೆವಸುಷಮ್ನಿಯ | ನಿಜವiನ ಸಾರಥಿಯಾ | ಕೂಡಿಸಿ ಹರುಷದ ತೇರಿ ನಡಸುತ ಸ | ಫಾಡಿರೆಯಿಂದಲಿ ಮೇಲ್ಗಿರಿಯಾತ್ರೆಯ | ಗುರುಮೂರ್ತಿಗೆ ಶರಣ 4
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮರವೆ ಮುಸುಕಿತುಋಣದ ಬಾಧೆ ಹತ್ತಿತು ರೋಗವಡಸಿತುಜನರ ಪ್ರೀತಿ ತೊಲಗಿತು ಜಾಣ್ಮೆ ತಾನು ಸಡಿಲಿತು... ದಿಯ ವಾಸ'ಲ್ಲವಾಯ್ತು ... ಮರೆ ದೂರವಾಯ್ತು 1ನಿನ್ನ ಸನ್ನಿಧಿಯ 'ುೀರಿ ಪುಣ್ಯವ ಬೇರೆ ಬಯಸಿದೆನೆನಿನ್ನ ಮೂರ್ತಿಯನುಳಿದು ಅನ್ಯರ ನೆನೆದೆರಗಿದೆನೆನಿನ್ನ ಸೇವೆಗಧಿಕವೆಂದನ್ಯದೇವರ ಸೇ'ಸಿಕೊಂಡೆನೆ 2ಸನ್ನಿಕರ್ಷವನಾದರತೆಯನ್ನು ಕೊಡುವದೆದೆಂದೆನೆ ಅರಿವೆನ್ನೊಳುದಿಸಿತೆ ದೂರನಾದೆನೇತಕೆಇನ್ನುದಾಸೀನಗೈದರೆ ಎನ್ನಿಂದಾಹುದೇನು ಬೇರೆಮನ್ನಿಸಿ ನೀನೊಂದಿರೆ ಸೈರಿಸಲಾರೆಂ 3ಪತಿತಪಾವನನು ನೀನು ಪರಮಕರುಣಾನಿಧಿ ನೀನು ಪತಿಕರಿಸಿ ಬಿಡುವದೇ ಪಾಪಿಯೆ ನಾನು ಸತತ ನಿನ್ನ ನೆನೆಯುವೆನು ಸೇವೆಗೆ ಕಾತರಿಸಿಹೆನು ಅತಿಶಯವ ತೋರಿಸು ಆ ನನ್ನನಿಧಿಯೆ ನೋಡಿನ್ನು 4ಕರೆದು ಮೂಢರಜ್ಞತೆಯ ಪರಿದು 'ಜ್ಞಾನ ಸುಧೆಯಎರೆದು ಕಾಯೆ ಚಿಕ್ಕನಾಗಪುರದೊಳು ನೀನೆಗುರುವರ್ಯ ವಾಸುದೇವಾರ್ಯ ಚರಣಕೆರಗಿದೆನಯ್ಯಾನಿರತ ಮಂಗಳಾರತಿಯಸಿರಿಯ ತೋರಿಸೊ ದಮ್ಮಯ್ಯಾ 5
--------------
ವೆಂಕಟದಾಸರು
ಮರುತನಾತ್ಮಜ ನಿನ್ನ ಚರಣ ಕಮಲಯುಗ್ಮ ನೆರೆನಂಬಿದವ ಧನ್ಯನೊ ಪ ಧರೆಯೊಳಗೆ ರಘುವರನ ಶೇವಿಸಿ ಶರಣು ಜನರನು ಪೊರೆವುದಕೆ ಭೂಸುರಗಣದಿ ರಾಜಿಸುವ ರಾಯಚೂರ ಪುರದ ಕೋಟೆಯೊಳಿರಲು ಬಂದಿಹ ಅ.ಪ ಬಹುಭರದಿವಾರಿಧಿ ಲಂಘಿಸಿ ಹರಿಭಟನೆಂದು ತಿಳಿಸಿ ತ್ವರದಿ ರಾಮನಿಗರ್ಪಿಸಿ ಧೀರನೆ ಸುರವಿನುತ ತವ ಪರಿಮಳವಿರಚಿಸಿದ ಗುರುವರರ ನೋಡಿದೆ 1 ಗೋವಿಂದನಂಘ್ರಿಯ ಭಜಿಸಿ ಮನದಿ ಭಾವಿಸಿ ನಂದಸುತನಿಗರ್ಪಿಸಿ ಪ್ರಥಮಾಂಗನೆನಿಸಿ ಸಮರ್ಥ ತವಪದ ಕೊಂದಿಸುವೆ ಮನ ಮಂದಿರದಿ ಯದುನಂದನನ ಪದದ್ವಂದ್ವ ತೋರಿಸು 2 ಪುಟ್ಟಿಯತಿರೂಪವನೆಧರಿಸಿ ಕ್ಷಿತಿಯೊಳಗಖಿಲ ದುರ್ಮತಗಳೆಂಬುವ ಮೇಘತತಿಗೆ ಮಾರುತನೆನಿಸಿ ಪ್ರತಿಪಾದ್ಯನೆಂದು ತಿಳಿಸಿ ಸುಖ ತೀರ್ಥರೆನಿಸಿ ಅತಿಹಿತದಿ ಸತ್ಪಥವ ತೋರಿದಿ ಅತುಳ ಮಹಿಮನೆನುತಿಸುವೆನು ಸತತ ಪಾಲಿಸೋ 3 ತನುಮರೆಯಲು ಧುರದಿ ಜೀವನವಿತ್ತಕಾರಣದಿ ವನಜನಾಭನು ದಯದಿ ತನ್ಮೂರ್ತಿ ಸಹಿತದಿ ತಟಿತ್ಕೋಟಿ ಸೇವಕಜನರ ಸಲಹುವಿ ಕೊಳುತಲಿ ಮೆರೆವದೇವನೆ 4 ಶಿರದಿ ಮುಕುಟ ಮಂಡಿತ ಮೂರ್ತಿ ದರುಶನವನೆ ಕೊಳ್ಳುತ ವಿಸ್ತರ ಮಂಟಪದಿರಾಜಿತ ಸುರಪೂಜಿತ ಕÀರುಣ ಶರಧಿಯೆ ಪೊರೆವದೆನ್ನನು ಶರಣು ಜನರಘ ಕರುಣವ ಪಡೆದ ಧೀರನೆ 5
--------------
ಕಾರ್ಪರ ನರಹರಿದಾಸರು
ಮರೆಯದೆ ಸಲಹೊ ಮಾರುತೀಶ ಎನ್ನ ಶರಣೆಂಬೆನು ನಿನ್ನ ಪ ಶರಣಾಗತರನು ಬಿಡದೆ ಪೊರೆವ ಫನ್ನ- ಗಿರಿ ಅಂಜನೆತನಯಅ.ಪ ವನನದಿಗಿರಿಗುಹೆಗಳಲಿ ನಿನ್ನ ರೂಪ ತೋರುವುದೈ ಭೂಪ ಶರಧಿ ಲಂಘಿಸಿ ರಾವಣನಿಗೆ ತಾಪ ಪುಟ್ಟಿಸಿದೆಯೊ ರಘುಪ- ನಡಿಗಳ ಬಿಡದೆ ಸೇವಿಸುವರ ಪಾಪ ಮಾಡುವಿ ನಿರ್ಲೇಪ ಸಡಗರದಲಿ ನಿನ್ನೊಡೆಯನ ತೋರಪ್ಪ ಘನಗಿರಿ ಹನುಮಪ್ಪ 1 ಊರಿನಲಿ ಊರ್ಹೊರಗು ನಿನ್ನ ಮೂರ್ತಿ ಎಷ್ಟ್ಹೇಳಲಿ ಕೀರ್ತಿ ಪಾಡುತ ಪೊಗಳ್ವರು ನಿನ್ನಯ ಸತ್ಕೀರ್ತಿ ವರ್ಣಿಸುವುದೆ ಅರ್ಥಿ ಪಾಮರನೊಮ್ಮೆ ಪಾಡಲು ನಿನ್ನ ವಾರ್ತೆ ಪರಿಹಾರವೋ ಭೀತಿ ನಾಡೊಳು ನಿನ್ನ ಭಜಿಸುವವರ ಸಂಗ ನೀಡು ಕೃಪಾಪಾಂಗ2 ಕಡಲ ಶಯನನ ಅಡಿಗಳ ಸೇವಿಸುತ ಕಡುಹರುಷವ ಪಡುತ ಬಿಡದೆ ನಿನ್ನಯ ಸೇವಕರಿವರೆನುತ ಶ್ರೀಶಗೆ ಪೇಳುತ್ತ ಕೊಡಿಸುವಿ ಮುಕ್ತಿಯ ಧೃಡಭಕ್ತರಿಗೆ ಸತತ ರಾಮರ ಸ್ಮರಿಸುತ್ತ ಕಮಲನಾಭ ವಿಠ್ಠಲನನು ಸೇವಿಸುತಭಕ್ತರ ಸಲಹುತ್ತ3
--------------
ನಿಡಗುರುಕಿ ಜೀವೂಬಾಯಿ
ಮರೆಯುವರಾರೆ ಶ್ರೀ ಮುರಳೀಧರನ ಕಂಡು ವರವ ಬೇಡದವರಾರೆ ಪಡೆಯದವರಾರೆ ಪ ಮುರಳೀದನಿಯ ಕೇಳಿ ಪರಿದೋಡದವರಾರೆ ಅವನೆಡೆ [ಪರಮಸುಖ] ಪಡೆಯದವರಾರೆ ಅ.ಪ ಕಂಜನಾಭನು ಬಂದು ಪುಂಚವನದಿ ನಿಂದು ಮಂಜುಳಗಾನವ ಮಾಡುತಿರೆ ಅಂಜುವರೇನೆ ನಿರಂಜನನವ ಪಾಪ ಭಂಜಕನೇ ತಂಗಿ ಹೋಗೋಣ ಬಾರೆ 1 ಮಂಗಳಮೂರ್ತಿ ಮಾತಂಗವರದ ಭವ ಭಂಗನ ಚರಣವ ನೋಡುವ ಬಾರೆ ಮಂಗಳ ಜಯ ಜಯ ಮಂಗಳ ಮಾಂಗಿರಿ ರಂಗಗೆ ಶುಭವೆಂದು ಪಾಡುವ ಬಾರೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರೆವರೇನೊ ರಾಮ ನಿನ್ನ ಚರಣ ಸೇವಕನÀನ್ನು ಪರರಿಗೊಪ್ಪಿಸಿ ಹೀಗೆ ಪ ಪರಮ ದಯಾನಿಧಿ ಅಲ್ಲವೆ ಮುನ್ನ ಶರಣರ ಪಾಲಿಸಲಿಲ್ಲವೆ ಇದು ಸರಿಯೇನೊ ಜನ ನಗರೇನೊ ಇನ್ನು ಧರಣಿಯೊಳ್ ನಾನೇನು ಭಾರವೆ ದೂರವೆ ಅ.ಪ. ಗತಿಹೀನರಿಗೆ ನೀ ಗತಿಯೆಂದು | ನೀನೆ ಪತಿತರ ಪತಿಕರಿಸುವನೆಂದು ಕೇಳಿ ಬಂದೆನೈ ಭವದಿ ನೊಂದೆನೈ ಮುಂದೆ ಗತಿದೋರೆಂದು ಸಾರಿದೆ ಚೀರಿದೆ ದೂರಿದೆ 1 ದೋಷರಾಶಿಗಳೆಲ್ಲ ಅಳಿಸಯ್ಯ ವಿಷಯ ವಾಸನೆ ವಿಷವೆಂದು ತಿಳಿಸಯ್ಯ | ನಿನ್ನ ದಾಸಾನುದಾಸ ದಾಸನು ಎನಿಸಿ | ಪರಿ- ಪೋಷಿಸಬೇಕಯ್ಯ ದಮ್ಮಯ್ಯ ಎಮ್ಮಯ್ಯ 2 ಏನು ಸಾಧನವನ್ನು ನಾ ಕಾಣೆ | ನಿನ್ನಾ- ಧೀನದವನು ನಾ ನಿನ್ನಾಣೆ ದೀನ ಬಂಧುವೆ ದಯಾಸಿಂಧುವೆ ನಿನ್ನ ಪರಮಾನಂದ ಮೂರ್ತಿಯ ತೋರೋ ಶ್ರೀಕಾಂತನೆ 3
--------------
ಲಕ್ಷ್ಮೀನಾರಯಣರಾಯರು
ಮರೆವಾರೆ ಎನ್ನ ರಾಘವೇಂದ್ರ ಗುರುವೆ ಸಂಪನ್ನ ಕರೆದು ಕಾಮಿತಗಳ ಕರವೆ ನಾ ನಿನಗೆಂದು ಪ ದಾರಿಯ ತಪ್ಪಿ ಪೋಗುವ ಧೀರ ಫೋರನ್ನ ದಾರಿಯ ಪಿಡಿಸಿನ್ನು ಪುರವನ್ನೆ ತೋರಿಸೆ ಊರಿನವೊಳಗೆ ಅವನ ಆಗಾ ದೂರ ನೋಡುವರೆ ದೋಷಗಳ ವಿಚಾರಮಾಡುವರೆ ಧೀರರು ಆವ ಪರಿಯಲವನ ಪಾರಗಾಣಿಪರಲ್ಲದೆ 1 ಹಸಿದು ಪರರ ಕೇಳದ ದ್ವಿಜವರಿಯನ್ನ ಶಿಶುವಿನ ನೋಡಿ ದಯದಿಂದ ಕರದಿನ್ನು ಹಸಿದ್ಯಾಕೊ ಎಂದು ಪಾಕವ ಮಾಡಿ ಹಸನಾಗಿ ತಂದು ಬಡಿಸುವ ಅವಸರದಿ ನಿಂದು,ಅವನ ದೋಷ ಪಸರಿಸಿ ಉಣಿಸಿದ ಜನರುಂಟೆ ಧರೆಯೊಳು 2 ಜಲಪಾನಾತುರನಾಗಿ ಜಲವ ಕೇಳಿದ ವಿಪ್ರ- ಕುಲ ತರಳನನು ನೋಡಿ ಕೃಪೆಯಿಂದ ಸುರನದಿ ಜಲವನೀವೆನೆಂದು ಬ್ಯಾಗನೆ ದಿವ್ಯ ಕಲಶವ ತಂದು ಬಾರೆಲೊ ಬಲು ಆಲಸ್ಯವ್ಯಾಕೆಂದು ನಿನ್ನಯ ಪಂಕ ತೊಳಿಯ ಕೊಡುವೆನೆಂದು ತಡವ ಮಾಡುವರೆ 3 ಸುಶರೀರ ತನುವನು ಮನದಲಿ ಬಯಸಿ ತಾ ಉಸರದ ಮುನಿತನಯನ ಕಂಡು ತಾವಾಗಿ ಕುಶಲವ ಕೇಳಿ, ದೇವತ ವೈದ್ಯ ಅಸಮರೆಂದೇಳಿ, ರಸ ಮಾಡೆಂದೇಳಿ, ಅವಗೆ ದಿವ್ಯ ರಸವನು ಪೇಳಿ, ಪಸಿ ನಿನ್ನಲಿದ್ದಾ ಕಿಸರು ಪೋದರೆ ಕೊಡುವೆವೆಂದು ನಿಲುವರೆ 4 ಅರ್ತಿಯ ಭಕುತನ್ನ ನೋಡೀಗ ನಿನ ದಿವ್ಯ ಕೀರ್ತಿಯ ನೋಡಿಕೊ, ವಾಸುದೇವವಿಠಲನ ಮೂರ್ತಿಯ ಭಜಕ ಭಕ್ತರಾಭೀಷ್ಟ ಪೂರ್ತಿಗೆ ಜನಕ ನಿನ್ನಯ ಗುಣ ಸ್ಫೂರ್ತಿಗೆ ಜನಕ, ನಿನ್ನಯ ಗುಣ ಸ್ಫೂರ್ತಿ ಉಳ್ಳನಕ ಪಾಪದ ಲೇಶ ವಾರ್ತಿ ಎನಗೆ ಇಲ್ಲವೆಂದು ನಿಶ್ಚೈಸಿದೆ 5
--------------
ವ್ಯಾಸತತ್ವಜ್ಞದಾಸರು
ಮರ್ದಳವನಿದ ಮನ್ನಿಸು ಮಾರಮಣವರ್ಧಿಸುವದಾನಂದವಸಿದ್ಧವಹ ಶಬ್ದಗಳನು ಸೂಚಿಸುತಲಿದ್ದು ಪ್ರೇರಿಪುದರ್ಥವ ಪಉಭಯ ಮುಖದಿಂದಲುದಿಸಿ ತಾನಿಂತುಶುಭತರಾಕೃತಿಯೆನ್ನಿಸಿಲಭಿಸುತ್ತ ನರ್ತಕಿಯನು ಲಾಲಿಸುತವಿಭು ನಿನ್ನ ನೋಲೈಪುದು 1ಸ್ಥೂಲತರ ಸ್ವನವಾದರೂ ಕಿಂಕಿಣೀಜಾಲಕಿದು ಜೋಡಾಗುತಪಾಲಿಸುತ ಪದಗತಿಯನು ಮನದ ಬಲಕಾಲಯವದಹುದೆನ್ನಲು2ಮೊದಲ ವರ್ಣವು ರುದ್ರನು ಮಧ್ಯದಲಿಹುದುಗಿದಕ್ಷರ ವಿಷ್ಣುವುತುದಿಳಕಾರವು ಬ್ರಹನು ಇಷ್ಟಕ್ಕೆಸದನವಾಗ್ಯನುಸರಿಸಲು 3ಮೂರು ಮೂರ್ತಿಗಳಂಗವ ವರ್ಣಗಳುತೋರೆ ನಡುವೆ ದಕಾರವಸೇರಿದ ರಕಾರ ತಾನು ವ್ಯಂಜನದಿತಾರಕಬ್ರಹ್ಮವಾಗೆ 4ಇಂತು ಮರ್ದಳವೆಸೆಯಲು ಇಂದಿರಾವಂತ ನೀ ಕಟ್ಟಿದಂತೆಕಂತುಪಿತ ತಿರುಪತೀಶಾ ಇಲ್ಲಿ ನೀನಿಂತು ಕೇಳ್ವೆಂಕಟೇಶಾ 5ಓಂ ಗೋಪಗೋಪೀಶ್ವರಾಯ ನಮಃ
--------------
ತಿಮ್ಮಪ್ಪದಾಸರು
ಮಹದೇವ ಮದ್ರೋಗ ಮೂಲವಳಿಯೊ ಪ ಮಹದಾದಿಗಳ ದೈವ ಹರಿಯಲ್ಲಿ ರತಿ ನಿಲಿಸಿ ಅ.ಪ. ಸರ್ವಸಿದ್ಧನೆ ವಿಷಯ ಪರ್ವತಕೆ ಮಹಕುಲಿಶ ಕಮಲ ಭೃಂಗ ಮರ್ವೆಂಬ ಮಾರಿಯನು ಅವಳ ನೇತ್ರದಿ ಸುಟ್ಟು ಸರ್ವಾತ್ಮ ಹರಿಧ್ಯಾನಮಗ್ನ ಮನ ನೀಡೆನಗೆ 1 ತಾಳಲಾರೆನೊ ಸ್ವಾಮಿ ಕಾಳ ವಿಷಯದ ದೋಷ ಫಾಲಾಕ್ಷ ಬಿಡಿಸೈಯ್ಯ ಭೋಗದಾಸೆ ಶೀಲ ಮನದಲಿ ಹರಿಯ ಲೀಲೆ ಲಾವಣ್ಯಗಳ ಮೇಲಾಗಿ ನೋಡುವ ಮಹಕರುಣ ಮಾಡೆನ್ನ 2 ಭಾರತೀಶನ ಪಾದಕಮಲ ಮಧುಪನೆ ನಿನ್ನ ಕಾರುಣ್ಯವಾದವನೆ ಶೌರಿವಶನೊ ಮಾರಾರಿ ಮದ್ಭಾರ ವಹಿಸಿ ಪಾಲಿಸು ಎನ್ನ ಧೀರ ತವ ಚರಣಾಬ್ಜ ವಾರಿಜಕೆ ಮೊರೆ ಹೊಕ್ಕೆ 3 ಎನ್ನ ಹೀನತೆ ನೋಡಿ ಘನ್ನ ಭಯಗೊಂಡಿಹೆನೊ ಧನ್ಯರ ಮಾಳ್ಪ ದಯ ನಿನ್ನದಯ್ಯಾ ಪುಣ್ಯತಮ ಮೂರುತಿಯ ಪ್ರತಿಬಿಂಬ ಹರಿಸಖನೆ ಧನ್ಯನಾ ಮಾಡೆನ್ನ ವಿಷಯ ಜಯ ದಯಮಾಡಿ 4 ಅಮಿತ ಮಂಗಳದಾಯಿ ವಿಭವ ವಾಮದೇವ ಮಮತಾದಿ ಅಭಿಮಾನ ದೋಷವರ್ಜಿತ ಮಹಾ ಸಾಮ್ರಾಜ್ಯ ಯೋಗಕ್ಕೆ ಅಧಿನಾಥ ಕರುಣಿಪÀುವುದು 5 ಶಂಭು ಶಂಕರ ತವ ಪದಾಂಬುಜದಿ ಶಿರವಿಟ್ಟು ಹಂಬಲಿಪೆನಿಷ್ಟಪದ ಪಾಲಿಸೆಂದು ತುಂಬಿತ್ವಕ್ಕರಸನ ಹೃದಂಬುಜದೊಳರಳಿಸಿ ಮೂರ್ತಿ ದರುಶನ ನೀಡೊ 6
--------------
ಜಯೇಶವಿಠಲ
ಮಾತಿನೊಳು ಕಡುಜಾಣ ನೀತಿಯೆಂಬುದ ಕಾಣ ಪ್ರೀತಿಯಿಲ್ಲದ ಪ್ರಾಣನಾಥನಮ್ಮ ಕಪಿಜನಗಳೊಡನಾಡಿ ಚಪಲಚಿತ್ತನುಮಾದ ಕೃಪೆಯಿಲ್ಲವೆಳ್ಳನಿತು ಕೃಪಣನಕಟ ಸ್ತ್ರೀಹತ್ಯ ನರಹತ್ಯ ಬ್ರಹ್ಮಹತ್ಯವಗೈದ ಸಾಹಸಿಯೆದೇನೆಂಬೆ ಘನನಿತಂಬೆ ಪಕ್ಷಪಾತಿಗಳೊಳಗೆ ಈಕ್ಷಿಸಲ್ ಧರೆಯೊಳಗೆ ದಕ್ಷನೀತಗೆ ಸರಿಯೆ ಪೇಳೆ ಸಖಿಯೆ ಶರವೊಂದು ನುಡಿಯೊಂದರಿಂದ ನಲಿವ ತಿರುಕ ಹಾರುವರೊಡನೆ ಚರಿಸುತಿರುವ ಪರಮಸಾತ್ವಿಕ ಮೂರ್ತಿಯೆಂದು ನುಡಿವ ವರಶೇಷಗಿರಿವಾಸ ನೆಂದುಮೆರೆವ
--------------
ನಂಜನಗೂಡು ತಿರುಮಲಾಂಬಾ
ಮಾತೆ ಸರಸ್ವತಿ ಮಂಜುಳ ಮೂರುತಿ ಚೇತನಾತ್ಮಕಿ ಭಾರತಿ ಪ. ಪ್ರೀತಿಯಿಂದೀವುದು ಪೀತಾಂಬರಧರನ ಸಾತಿಶಯದ ಭಕುತಿ ಅ.ಪ. ಗುರುಹಿರಿಯರ ಕಂಡು ಬಿರುನುಡಿ ನುಡಿಸದೆ ಕರುಣಿಸೆನಗೆ ಸನ್ಮತಿ ಪರಮಪಾವನ ವೈಷ್ಣವರ ಪಾದಾಂಬುಜ ಮಧು- ಕರದಂತಿರಲಿ ಮದ್ರತಿ 1 ಮೂರ್ತಿ ತಾರೇಶನಂದದಿ ಹೃದಯಾ- ಕಾಶದೊಳು ಕಾಣುತಿ ದೂಷಣ ಕಾಮಾದಿ ಕ್ಲೇಶವ ಬಿಡಿಸುತ್ತ ಗೈಸಮ್ಮ ಹರಿಯ ಸ್ತುತಿ 2 ಮನುಜರ ರೂಪದಿ ದನುಜರು ಭೂಮಿಯೊಳ್ ಜನಿಸಿದರ್ಜಲಜನೇತ್ರಿ ಅನಘ ಲಕ್ಷುಮಿನಾರಾಯಣನ ದಾಸರಿಗೆಲ್ಲ ಜನನಿಯೆ ನೀನೆ ಗತಿ 3 ಭಾರತಿದೇವಿಯ ಸ್ತುತಿ
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಧವ ದೇವಾದಿ ದೇವಾ ಪ ಪ್ರೇಮದಿಂದ ಕಾವ ಶ್ರೀ ಮಹಾನುಭಾವ ಅ.ಪ. ಯಾರು ಇಲ್ಲದೆ ಘೋರಾಂಧಕಾರದೆ ಸೇರಿ ಸಾಗರ ಧೀರನಾಗಿದ್ದವ 1 ಸೃಷ್ಟಿ ಸ್ಥಿತ್ಯಾದಿ ಅಷ್ಟಕರ್ತನಾದಿ ಇಷ್ಟದಾತನೀತ ಶಿಷ್ಟ ಕೃಪಾನ್ವಿತ 2 ಅಚ್ಯುತಾನಂದ ಸ್ವಚ್ಛಮೂರ್ತಿನಾಥ ನೆಚ್ಚಿದವರ ಬಿಡ ಲಕ್ಷ್ಮೀಕಾಂತ ದೃಢ 3
--------------
ಲಕ್ಷ್ಮೀನಾರಯಣರಾಯರು
ಮಾಧವ ಸಾಧುಜನ ಕಾದಿರುವರೊ ಪ ಆದರದಿಂದ ನಿನ್ನ ನೋಡುವುದಕೆ ಅ.ಪ ಶಾಸ್ತ್ರಗಳಿಂದಲು ಅರಿಯದ ನಿನ್ನ ಪ ವಿತ್ರ ರೂಪವನು ನೋಡಲೋಸುಗ 1 ಘೋರತಪಗಳಿಂದ ಸೇರದೆÀ ನಿನ್ನನು ಚಾರಿಯೊಳ್ ಪೊಂದಲು ಕೋರುತಿಹರೊ 2 ದಾನ ಧರ್ಮಗಳಿಗೂ ಸುಲಭದಿ ದೊರೆಯದ ನೀನೆ ಬಂದಿರಲು ವಿನೋದಿಸುವರೊ 3 ತೀರ್ಥಯಾತ್ರೆಯು ಮನ ಮಾತ್ರ ಶೋಧಿಪುದೆಂದು ಮೂರ್ತಿ ನೋಡಲು ನಿನ್ನ ಪ್ರಾರ್ಥಿಸುವರೊ4 ಅನ್ನದಾನವ ಮಾಡೆ ಹೊನ್ನು ಇವರಿಗಿಲ್ಲ ಮನ್ನಣೆ ಮಾಡಿ ಪ್ರಸನ್ನನಾಗೆಲೊ 5
--------------
ವಿದ್ಯಾಪ್ರಸನ್ನತೀರ್ಥರು