ಒಟ್ಟು 1587 ಕಡೆಗಳಲ್ಲಿ , 100 ದಾಸರು , 1299 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ ಪ ನಿನಗಿಂತ ಕುಂದೇನೋ ಸನಕಾದಿಗಳ ಸ್ವಾಮಿಮನಸಿಜನೊಡೆಯನೆ ಕನಕಗರ್ಭನ ಜನಕ ಅ ಮಚ್ಚ್ಯಾವತಾರ ನೀನಾದರೆ - ಆಕೆಮಚ್ಚ್ಯಗಂಗಳೆ ತಾನಾದಳೊಹೆಚ್ಚಿನ ಶಂಖವ ಪಿಡಿದರೆ - ಆಕೆನಿಚ್ಚ ಶಂಖಕಂಠಳಾದಳಯ್ಯ 1 ನೀಲವರ್ಣ ನೀನಾದರೆ - ಆಕೆನೀಲಕುಂತಳೆ ತಾನಾದಳೊಲೋಲ ಕಮಲನಾಭನಾದರೆ - ಆಕೆಬಾಲ ಕಮಲಮುಖಿಯಾದಳಯ್ಯ2 ಬೆಟ್ಟವ ನೀನೊಂದು ಪೊತ್ತರೆ - ಆಕೆಬೆಟ್ಟದಂಥ ಕುಚವೆರಡು ಪೊತ್ತಳೊಮೆಟ್ಟಿ ಶೇಷನ ನೀ ತುಳಿದರೆ - ಆಕೆಕಟ್ಟಿ ಬಾಸೆಗೆ ಶೇಷನ ನಿಲಿಸಿಹಳಯ್ಯ3 ಗಜರಾಜವರದ ನೀನಾದರೆ - ಆಕೆಗಜಗಮನೆಯು ತಾನಾದಳಯ್ಯನಿಜ ನರಸಿಂಹ ನೀನಾದರೆ - ಆಕೆಭಜಿಸಿ ಸಿಂಹಮಧ್ಯೆಯಾದಳಯ್ಯ 4 ಈ ಪರಿಯೊಳು ನೀನು ಜನಿಸಿದೆ - ಭಲೆಭಾಪುರೆ ಬಾಡದೊಳು ನೆಲೆಸಿದೆಗೋಪಿಯರ ಮೋಹ ಸಲಿಸಿದೆ - ಚೆಲುವಶ್ರೀಪತಿ ಆದಿಕೇಶವರಾಯ ಮೆರೆದೆ5
--------------
ಕನಕದಾಸ
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನಗ್ಯಾಕೆ ದುರ್ಮತಿ ಎಲೆ ಕೋತಿ ಪ ಅನುದಿನದಿ ನಾನು ನನದೆಂಬ ಅ.ಪ ಮೊದಲಿಂದಲಿ ಅವಿವೇಕದಿಂದ ಮೋಹಪಡುತ ನೀನಿರಲ್ ತುದಿಗೆಯಮನ ಬಾಧೆಯಹುದು ಬಲು 1 ಚಪಲಾತ್ಮರಾದವರಲಿ ಸೇರಿ ಚಾಟು ಮಾತುಗಳಾಡುವೇ ವಿಪರೀತ ಜ್ಞಾನವಿದಲ್ಲವೇ 2 ನಡೆನುಡಿಗಳಾದಿಯಾದ ಎಲ್ಲಕು ನಾಥ ನೀನೆಯೇನಲಾ ದೃಢವಾಗಿ ನಿನ್ನೊಳು ತಿಳಿದು ನೋಡೋ 3 ಸುರರು ಹಿತವಾಗದೆಂದಿಗು ನೀನಲ್ಲ ದೊರೆ 4 ಭಾರ ಗುರುರಾಮವಿಠಲ ಪೊರೆಯುವನು 5
--------------
ಗುರುರಾಮವಿಠಲ
ನಿನ್ನ ಚಿತ್ತ ನಿನ್ನ ಚಿತ್ತ ನಿನ್ನ ಚಿತ್ತವೋ ಪ. ಬನ್ನ ಬಡಿಸಬೇಡವಿನ್ನು ಭಯವ ಬಿಡಿಸಿ ಕಾಯೊ ಎನ್ನ ಅ.ಪ. ಘನ್ನ ಮನಸು ಮಾಡಿ ಈಗ ಎನ್ನ ಸಲಹಿದರೆ ಜಗದಿ ನಿನ್ನ ಕೀರ್ತಿಯು ಉನ್ನತದಲಿ ಮೆರೆವುದಿದೆಕೊ ಬನ್ನ ಬಡಿಸಬೇಡವಿನ್ನು ಘನ್ನಮಹಿಮ ಕೇಳು ಸೊಲ್ಲ ಇನ್ನು ಸುಮ್ಮನಿರಲು ಸಲ್ಲ ಘನಮಹಿಮನೆ 1 ಬುದ್ಧಿ ಭ್ರಮೆಯಿಂದ ನಾನು ಪೊದ್ದಿರುವ ಭಯವ ಬಿಡಿಸಿ ನಿದ್ದೆಯಲಿ ತಿಳಿಸಿದ್ವಾರ್ತೆ ಶುದ್ಧಗೊಳಿಸುತ ಮುದ್ದುಕೃಷ್ಣ ಅಭಯ ತೋರಿ ಉದ್ಧರಿಸಿದರೆ ಎನ್ನ ಶ್ರದ್ಧೆಯಿಂದ ನಿನ್ನ ಕೀರ್ತಿ ಮಧ್ವಮತದಿ ಸಾರುವೆನು2 ಬೆದರಿಸುವ ಪರಿಯದೇನು ಬದಿಗನಾಗಿ ಅರಿಯದೇನು ಹೃದಯದಲ್ಲಿ ನಿಂತ ಮೇಲೆ ಎನ್ನದಿನ್ನೇನು ಪದುಮನಾಭ ನಿನ್ನ ನಂಬಿ ಪದೋಪದಿಗೆ ನೆನೆಸುತಿರಲು ವಿಧ ವಿಧದಿ ಪರಿಕಿಸುವ ವಿಧವನರಿಯೆ ಪದುಮೆಯರಸ3 ಉಡಲು ಉಣಲು ಆಸೆಯಿಲ್ಲ ತೊಡಲು ಇಡಲು ಮಮತೆಯಿಲ್ಲ ಎಡದ ಬಲದ ನೆಂಟರಭಿಮಾನವಿಲ್ಲವು ಎಡರು ಬರಲು ಭಯವು ಇಲ್ಲ ಬಿಡಲು ದೇಹ ಅಂಜಿಕಿಲ್ಲ ನಡುವೆ ಕರೆವುದುಚಿತವಲ್ಲ ಮೃಡನ ಸಖನೆ ಕೇಳೊ ಸೊಲ್ಲ 4 ನಿರ್ದಯವನು ಮಾಡಲಿಕ್ಕೆ ಮಧ್ಯಮಧಮಳಲ್ಲವಿನ್ನು ಮಧ್ವಮುನಿಯ ಮತದಿ ಜನಿಸಿ ಶುದ್ಧ ಭಾವದಿ ಶುದ್ಧ ಸಾತ್ವಿಕರು ತಂದೆ ಮುದ್ದುಮೋಹನ ಗುರುಗಳಿಂದ ಪೊದ್ದಿ ದಾಸ್ಯರೀಗ ಜಗದಿ ಬದ್ಧ ಕಂಕಣಧರಿಸಿ ಮೆರೆವೆ 5 ಒಡೆಯ ನೀನು ಎನ್ನ ಧರೆಗೆ ಬಿಡದೆ ತಂದು ಜನ್ಮವಿತ್ತು ಬಿಡದೆ ಕಾಯ್ವ ಗುರುಗಳನ್ನು ಅಗಲಿಸುತ್ತಲಿ ಅಡಿಗಡಿಗಭಯವ ತೋರಿ ಪಿಡಿದು ಕೈಯ್ಯ ಸಲಹದಿರಲು ಅಡಿಗಳಾರದಿನ್ನು ನಾನು ಪಿಡಿಯೆ ಕಡಲಶಯನ 6 ನಾಥರಾರು ಎನಗೆ ಇಲ್ಲ |ಅ- ನಾಥಗಳನ್ನು ಮಾಡಿ ನಿನ್ನ ಮೂತಿ ತಿರುಹಿ ಸಲಹದಿರಲು ಪಾತಕಲ್ಲವೆ ಪಾತಕಾದಿ ದೂರನೆಂಬೊ ಖ್ಯಾತಿ ಸಟೆಯದಾಯ್ತು ಈಗ ನೀತಿಯರಿತು ಪೊರೆಯದಿರಲು ಜಾತರಹಿತ ಜಗದಿ ಸಲಹು 7 ದಾಸತನದಿ ಮೆರೆವೊದೊಂದು ಆಸೆಯಿಲ್ಲದಿನ್ನು ಬೇರೆ ಆಸೆಯೊಂದು ಇಲ್ಲ ಕೇಳು ನಾಶರಹಿತನೆ ಪಾಶಕರ್ಮ ಹರಿಸಿ ನಿನ್ನ ದಾಸಳೆಂದು ಮೆರೆಸೆ ಜಗಕೆ ಈಶನೆಂದು ನಿನ್ನ ಮೆರೆಸಿ ಆಸೆ ಪೂರೈಸಿಕೊಂಬೆ 8 ಮೃತ್ಯುವಿಗೆ ಮೃತ್ಯುವಾಗಿ ತುತ್ತುಮಾಡಿ ಜಗವ ನುಂಗಿ ಮತ್ತೆ ಬ್ರಹ್ಮಾಂಡ ಸೃಜಿಸಿ ಪೆತ್ತು ಜೀವರ ಭಕ್ತ ಜನಕೆ ಬಂದ ಎಡರು ಮೃತ್ಯುಗಳನು ಕಾಯ್ದ ದೇವ ಮೃತ್ಯು ಮೃತ್ಯು ಶರಣು ನೃಹರಿ ಮೃತ್ಯು ಹರಿಸಿ ಕಾಯೊ ಶೌರಿ9 ಬಿಡಲಿಬೇಡ ಕೈಯ್ಯ ಇನ್ನು ಬಿಡದೆ ಕಾಯೊ ಶರಣು ಶರಣು ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲಾತ್ಮಕ ಕಡೆಗೆ ನಿನ್ನ ಪಾದಸೇವೆ ಬಿಡದೆ ಕೊಡುವ ದೃಢವ ಬಲ್ಲೆ ಕರವ ಪಿಡಿಯೊ 10
--------------
ಅಂಬಾಬಾಯಿ
ನಿನ್ನ ದಾಸರ ದಾಸ ನಾನಯ್ಯ-ಹರಿ- ಯನ್ನನುಪೇಕ್ಷಿಪರೇನಯ್ಯ ಪ ಕಾಮಕ್ರೋಧಗಳಿನ್ನೂ ಬಿಡಲಿಲ್ಲ-ನಿನ್ನ- ಪ್ರೇಮವೆನ್ನೊಳುಕಾಲಿಡಲಿಲ್ಲ ತಾಮಸಬೀಜವ ಸುಡಲಿಲ್ಲ1 ಆಚಾರದಲಿ ಕಾಲಗತಿಯಿಲ್ಲ-ಬಲು-ನೀಚರ ಸಂಗಕೆ ಮಿತಿಯಿಲ್ಲ ಪ್ರಾಚೀನ ಕರ್ಮಕ್ಕೆ ಚ್ಯುತಿಯಿಲ್ಲ-ಇದ- ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ-ವ್ಯಾ- ಮೋಹವು ಬಿಡದಲ್ಪವಾದರೂ ಗೇಹದಿ ಸುಖವಿಲ್ಲದಿದ್ದರು-ಈ ಸೋಹಮೆಂಬುದಕಿಲ್ಲ ಬೆಸರು 3 ದಾಸರ ಸಂಗದೊಳಾಡಿಸು-ಹರಿ-ವಾಸರವ್ರತದೊಳು ಕೂಡಿಸು ವಾಸುದೇವನೆ ನಿನ್ನ ಪಾಡಿಸು-ಸಿರಿವಾಸನಾಮದ ಸವಿ ಯಾಡಿಸು4 ಶರಣವತ್ಸಲನಹುದಾದರೆ-ಘನ-ಕರುಣಾರಸನಿನಗುಳ್ಳರೆ ವಿಠಲ ನೀನೆ ನಮ್ಮದೊರೆ 5
--------------
ಸರಗೂರು ವೆಂಕಟವರದಾರ್ಯರು
ನಿನ್ನ ದಾಸರದಾಸ ನಾನಯ್ಯ ಹರಿ ಎನ್ನನುಪೇಕ್ಷಿಪರೇನಯ್ಯ ಪ ಪ್ರೇಮವೆನ್ನೊಳು ಕಾಲಿಡಲಿಲ್ಲ ಭವ ತಾಮಸ ಬೀಜವ ಸುಡಲಿಲ್ಲ 1 ನೀಚರ ಸಂಗಕೆ ಮಿತಿಯಿಲ್ಲ ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ ವ್ಯಾ ಮೋಹವು ಬಿಡದಲ್ಪವಾದರೂ ಸೋಹಮೆಂಬುದಕಿಲ್ಲ ಬೇಸರು3 ದಾಸರ ಸಂಗದೊಳಾಡಿಸು ಹರಿ ವಾಸರವ್ರತದೊಳು ಕೂಡಿಸು ಸಿರಿ ವಾಸನಾಮದ ಸವಿಯೂಡಿಸು 4 ಕರುಣಾರಸನಿನಗುಳ್ಳರೆ ಸಿರಿವರದವಿಠಲ ನೀನೆ ನಮ್ಮ ದೊರೆ 5
--------------
ವೆಂಕಟವರದಾರ್ಯರು
ನಿನ್ನ ನಂಬಿರುವೆ ಪ್ರಸನ್ನನಾಗು ಬ್ಯಾಗಚನ್ನಿಗವರದ ವಿಜಯರಾಯ ಪ ಮನ್ನಿಸಿ ಎನ್ನ ಪಾವನ್ನ ನೀ ಮಾಡದಿರೆಬೆನ್ನ ಬಿಡೆನೊ ನಿನ್ನ ಜೀಯಾ ಅ.ಪ. ಕರುಣಸಾಗರನೆಂಬೊ ಬಿರಿದು ನಿನಗಿಹುದೆಂದುಹಿರಿಯರಿಂದರಿತಿರುವೆ ಜೀಯಾ ||ಮರೆಯದೇ ಪೊರೆ ನಿನ್ನ ಚರಣಭಜಕನೆಂದುಸರುವ ಅಘವನು ಕ್ಷಮಿಸಿ ರಾಯಾ ||ದುರುಳ ವಿಷಯಕ್ಕಿಳಿವ ಮರುಳ ಮನವನ್ನು ನಿನ್ನಚರಣದಲಿ ನಿಲಿಸಿನ್ನು ಜೀಯಾ ರಾಯಾ 1 ವಿಧಿ ಜಪ ತಪವ ಅರಿಯೆ ಹೋಮ ನೇಮಅರಿಯೆ ಮಂತ್ರ ಸ್ತೋತ್ರವ ||ಬರಿದೆ ಧರಿಯೊಳು ತಿರುಗಿ ಹರಿಯ ಸ್ಮರಿಸದೆ ದಿನವಇರುಳು ಹಗಲು ಕಳದೆನು ||ಕರುಣವಿಲ್ಲವ್ಯಾಕೆ ಶರಣಾಗತನ ಇನ್ನುಪೊರೆಯದೇ ಬಿಡುವದು ಥರವಲ್ಲವೆಂದಿಗೂ 2 ಅಜ ಭವರಿಂದೊಂದ್ಯನಾದ್ವಿಜಯ ಮೋಹನ ವಿಠಲಭಜಕರಿಗೊಲಿದಂತೆ ಉಪಾಯ ||ನಿಜವಾಗಿ ಮಾಡದಿರೆ ಬಿರುದಿಗೆ ಕುಂದುಗಜರಾಜವರದನ ಪ್ರಿಯಾ ||ಕುಜನರ ಮತ ಬಡಿದು ವಿಜಯ ವಿಠಲನೇ ಪರನೆಂದುತ್ರಿಜಗದೊಳು ಮೆರಸಿದ ಭಜಕಾಗ್ರೇಸರ ಗುರುವೆ 3
--------------
ಮೋಹನದಾಸರು
ನಿನ್ನ ನಾ ಮರೆತರೂ ಎನ್ನ ಕೈ ಬಿಡದಿರು ಕರುಣಿಚನ್ನಕೇಶವ ಶ್ರೀ ವೆಂಕಟಾದ್ರಿನಿಲಯ ಪ ಎನ್ನ ತಪ್ಪುಗಳ ನಾನು ಮರೆಯಲೆಂತು ಎನ್ನಬೆನ್ನ ನೋಡಿಕೊಳ್ಳಲಹುದೆ ಎನ್ನಿಂದ ಅ ಮಂಜು ಮರೆಯಾಗುವುದು ಮಾರ್ತಾಂಡ ಮೂಡೆಕಂಜಲೋಚನ ನಿನ್ನ ಪದಕಮಲ ಸ್ಮರಣೆರಂಜಿಸಿ ಮನವನು ಪಾರಾಗಿಪುದು ಪಾಪಗಳಅಂಜಿಕೆಯ ಬಿಡಿಸುತ ಅನುಗ್ರಹಿಪ ಕರುಣಿ 1 ದಯೆ ನಿನ್ನದಿರೆ ಭಯ ಎನಗಿಲ್ಲ ಹರಿಮಾಯೆ ಮೋಹಗಳಿಗೆ ಮರುಳಾಗಿಹ ಬೊಂಬೆಜಯವಾಗಿಸಿ ಈ ಜನ್ಮ ಕೃತಾರ್ಥವ ಮಾಡುತೋಯಜಾಕ್ಷ ಶ್ರೀ ನೆಲೆಯಾದಿಕೇಶವರಾಯ2
--------------
ಕನಕದಾಸ
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ
ನಿನ್ನ ಮರೆದಿಹ ಜನಕೆ ಮಂಗಳವು ಎಂತೋ ಪ ಶರಧಿ ಗೋಪಾಲ ಚಿನ್ಮಯನೆ ಅ.ಪ ಎದೆ ಭುಗಿಲು ಎನ್ನುವುದು ಮದದ ಮನುಜರ ನೋಡಿ ವಿಧಿ ಬರಹ ತಿಳಿಯದೆ ಸರ್ವಜ್ಞರಂತೆ ಮದ ಮತ್ಸರದಿಂದ ಆಯುವ ಕಳೆಯುತ ಮೋದ ಪದವಿ ಬಯಸುವ ಮನುಜ ಪಶುರಾಸಿ ನೋಡಯ್ಯ 1 ತನ್ನಾದಿ ಕೊನೆಗಾಣ ಘನ್ನ ಮೋಹದಿ ಮೆರೆವ ಭಿನ್ನ ಸುಖಮೂಲನ್ನ ಸ್ವಪ್ನದಲಿ ಅರಿಯ ತನ್ನ ವಶಮೀರಿ ಬಹು ಸುಪ್ತಿಯಲಿ ಪೊಂದುವ ಇನ್ನು ಮರಿಯನು ಮನುಜ ತನ್ನ ಸ್ವಾತಂತ್ರ್ಯವ 2 ನಿರುತ ಮೃತ್ಯೋವದನ ಸ್ಥಿತನಾಗಿ ಭೋಗಗಳ ಪರಿಪರಿ ಹಾರೈಪÀ ಸತತ ಬಿಡದೆ ಬರದು ಬಯಸಿದ ಸುಖವು ಒತ್ತಿ ಬರುವುದು ದುಃಖ ಮರತು ಈ ಪರಿಸ್ಥಿತಿಯ ಕರ್ತ ನಾನೆಂಬುವನು 3 ಅಜ್ಞಾನ ತಿಮಿರದಲಿ ಪ್ರಾಜ್ಞ ತಾನೆಂಬುವನು ಪಥ ಸುದ್ದಿ ಸ್ವಪ್ನದಲಿ ಅರಿಯ ಜಿಜ್ಞಾಸೆಗ್ಹೊತ್ತಿಲ್ಲ ಭವಪ್ರವಹ ಪೊಂದಿಹನು ಪ್ರಜ್ಞೆ ಇಲ್ಲದ ಪ್ರಾಜ್ಞಗೆಂತಹುದೊ ಶುಭಪ್ರಾಪ್ತಿ 4 ರೋಗರುಜಿನದಿ ಜೀವವಾಗರವೆ ವಿರೂಪಹುದು ಬಾಗನೊ ಭಗವಂತಗಂಜಿ ಮೂಢ ಯೋಗೀಶರೊಂದ್ಯ ಶ್ರೀ ಜಯೇಶವಿಠಲ ಹ್ಯಾಗಪ್ಪ ಈ ಜನಕೆ ಕಲ್ಯಾಣಸಂಪದವು 5
--------------
ಜಯೇಶವಿಠಲ
ನಿನ್ನ ಸೇರಿದೆ ಮಹಾಲಿಂಗ ಎನ- ಗಿನ್ಯಾರು ಗತಿ ಕಾಣೆ ಕರುಣಾಂತರಂಗ ಪಾರ್ವತಿ ಮೋಹನಾಂಗ ಪ. ನಿನ್ನಂತೆ ಕೊಡುವ ಉದಾರ ತ್ರಿಭು- ವನ್ನದೊಳಿಲ್ಲದಕ್ಯಾವ ವಿಚಾರ ಮುನ್ನ ಮಾರ್ಕಾಂಡೇಯ ಮುನಿಯ ಭಯ ವನ್ನು ಪರಿಹರಿಸಿದೆಯೊ ಸದುಪಾಯ ನಮೋ ಶಿವರಾಯ 1 ಸರ್ವಾಪರಾಧವ ಕ್ಷಮಿಸು ಮಹಾ- ಗರ್ವಿತರಾಶ್ರಯಕ್ಕೊಲ್ಲದು ಮನಸು ಶರ್ವರೀಶಭೂಷ ನಿನ್ನ ಹೊರ- ತೋರ್ವರಿಲ್ಲ ರಣಮಲ್ಲ ಮುಕ್ಕಣ್ಣ ಕಾಯೊ ಸುಪ್ರಸನ್ನ 2 ಅಂತರಂಗದ ದಯದಿಂದ ಯುದ್ಧ- ಮಂ ತೊಡಗಿದೆ ಪಾರ್ಥನೊಳತಿಚಂದ ಪಂಥದ ನೆಲೆಯನ್ನು ತಿಳಿದು ಸರ್ವ- ದೊಡ್ಡದು ನಿನ್ನ ಬಿರುದು 3 ಸಿದ್ಧಿಸು ಸರ್ವಸಂಕಲ್ಪ ಅಡ್ಡ- ಬಿದ್ದು ಬೇಡುವೆ ನಿನಗ್ಯಾವದನಲ್ಪ ಹೊದ್ದಿದವರಿಗಿಲ್ಲೆಂದಿಗು ಕೇಡು ದುಷ್ಟರದ್ಯಾವ ಪಾಡು4 ಅಂಜಿಕೆ ಬಿಡಿಸಯ್ಯ ಹರನೆ ಪಾ- ವಂಜಾಖ್ಯವರಸುಕ್ಷೇತ್ರಮಂದಿರನೆ ಸಂಜೀವನ ತ್ರಿಯಂಬಕನೆ ನವ- ಸಲಹೊ ಪಂಚಮುಖನೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಿನ್ನನಗಲಿ ಪೋಗಲಾರೆವೋ ನೀರಜಾಕ್ಷ ನಿನ್ನ ಸೇರಿ ಸುಖಿಸ ಬಂದೆವೊ ಪ ಮನ್ನಿಸದೆ ಮಮತೆಯಿಂದ ಭಿನ್ನ ನುಡಿಗಳಾಡಿ ನಮಗೆ ಹಣ್ಣು ತೋರಿ ಕಾಳಕೂಟವನ್ನು ಕೊಡುವರೇನೊ ಕೃಷ್ಣ ಅ ಐದುವದಕೆ ಶಕ್ಯವಲ್ಲದ ಅಪ್ರಮೇಯ ಆದಿಪುರುಷ ಅಮರಸನ್ನುತ ಶ್ರೀದ ನಮ್ಮ ಕೈಯ ಬಿಡದೆ ಆದರಿಸಬೇಕು ಪರವ- ರಾದರೇನು ನಿನ್ನ ಶರಣರಾದ ಮೇಲೆ ಬಿಡುವುದುಂಟೆ1 ಬಂಧುವರ್ಗವನ್ನು ಬಿಡುವುದು ಸ್ತ್ರೀಯರಿಗೆ ನಿಂದ್ಯವೆಂದು ಶಾಸ್ತ್ರ ಪೇಳ್ವುದು ಎಂದೆಗೆಂದಿಗೆಮಗೆ ನೀನೆ ಬಂಧುವೆಂದು ಬಂದಿಹೆವೊ ಇಂದು ಹೋಗಿರೆಂಬೆ ನೀನು2 ಶಮದಮಾದಿ ಗುಣಗಳಿಂದಲಿ ಸಜ್ಜನರು ಮೂರ್ತಿ ಮನದಲಿ ಮಮತೆಯಿಂದ ಪೂಜಿಸುತ್ತ ಗಮಿಸುವರೊ ನಿನ್ನ ಪುರಕೆ ನಮಗೆ ಮಾತ್ರ ಪತಿಸುತಾದ್ಯರಮಿತ ಸುಖವ ಕೊಡುವರೇನೊ 3 ಮೋಕ್ಷ ಇಚ್ಛೆಯಿಂದ ನಿನ್ನನು ಭಜಿಪ ಜನರಾ ಪಕ್ಷ ವಹಿಸಿದಂತೆ ನಮ್ಮನು ರಕ್ಷಿಸದೆ ಬಿಡುವರೇ ಕಟಾಕ್ಷದಿಂದ ಈಕ್ಷಿಸದೆ ಲಕ್ಷ್ಮೀದೇವಿ ನಿಮಗೆ ಬಹಳಾಪೇಕ್ಷೆಯಿಂದ ಮೋಹಿಸಿದಳೆ 4 ಅನಘ ನಿನ್ನ ನೋಡಿ ಮೋಹಿಸಿ ಅಂತರಾತ್ಮ ತನುವು ಮನವು ನಿನಗೆ ಅರ್ಪಿಸಿ ಜನನ ಮರಣದಿಂದ ಜನರು ದಣಿವರೇನೂ ಕಾಂತ ನಮ್ಮ ಮನಸಿನಂತೆ ಒಲಿದು ಸಲಹೊ ವನಜನಾಭ ವಿಜಯವಿಠ್ಠಲ 5
--------------
ವಿಜಯದಾಸ
ನಿನ್ನವಳೆನಿಸೊ ಎನ್ನ ಘನ್ನ ಗೋಪಾಲ ನಿನ್ನವಳೆನಿಸೊ ಎನ್ನ ಪ. ಅನ್ಯರೊಬ್ಬರ ಕಾಣೆ ಮನ್ನಿಸುವರ ಜಗದಿ ನಿನ್ನ ಹೊರತು ಇಲ್ಲ ಪನ್ನಗಾದ್ರಿವಾಸ ಅ.ಪ. ಜನನ ಮರಣ ಕಷ್ಟ ಘನಭವ ಜಲಧಿಯೊಳ್ ಮುಣಗಿ ಮುಣಗಿ ದಡವನು ಕಾಣದಿರುವೆನೊ 1 ದುಷ್ಟ ವಿಷಯಗಳ ಅಟ್ಟಿ ದೂರದಿ ನಿನ್ನ ಶ್ರೇಷ್ಠ ನಾಮಾಮೃತ ಕೊಟ್ಟು ಪುಷ್ಟಿಯನಿತ್ತು 2 ಭಕ್ತಿ ಜ್ಞಾನವು ನಿನ್ನ ಭಕ್ತ ಸಂಗವು ವಿ- ರಕ್ತಿ ಪಥವ ತೋರಿ ಮುಕ್ತಿಯ ಪಾಲಿಸಿ 3 ನಿತ್ಯ 4 ಸಾರ ಉದ್ಘೋಷಿಸುವಂತೆ ಬುದ್ಧಿಪ್ರೇರಕನಾಗಿ ಶುದ್ಧ ಜ್ಞಾನವನಿತ್ತು 5 ನಿನ್ನ ಪದುಮ ಪಾದವನು ನಂಬಿದ ಎನ್ನ ನಿನ್ನ ದಾಸಳೆನಿಸಿ ಘನ್ನ ಮಾರ್ಗವ ತೋರಿ6 ಅಂತರಂಗದ ಧ್ಯಾನ ನಿಂತು ನೀ ನಡಿಸುತ ಅಂತರಂಗದಿ ನಿನ್ನ ಶಾಂತರೂಪವ ತೋರಿ 7 ತಂದೆ ಮುದ್ದುಮೋಹನ ಗುರುಹೃದಯ ಮಂದಿರ ನಿವಾಸ ಎಂದೆಂದಿಗಗಲದೆ 8 ಗೋಪಾಲಕೃಷ್ಣವಿಠ್ಠಲದೇವ ಸರ್ವೇಶಆಪನ್ನಿವಾರಕ ಆಪದ್ಭಾಂದವನಾಗಿ9
--------------
ಅಂಬಾಬಾಯಿ
ನಿಮ್ಮ ನುಡಿಗಳ ಕೇಳಲೆನಗೆ ಹೊತ್ತೆಲ್ಲಿಯದುನಮ್ಮ ಗೃಹಕೃತ್ಯಗಳು ಬಹಳವಾಗಿಹವೊ ಪನಮ್ಮಯ್ಯನೊಂದು ಗ್ರಾಮವನೇಕಸ್ವಾಮ್ಯದಲಿತಮ್ಮ ದಂಪತಿಗಳುಪಭೋಗಕೆಂದುತಮ್ಮಲ್ಲಿ ತಾವೆ ಸಂವಾದಿಸಿದರವರಲ್ಲಿಹಮ್ಮು ಕಡೆಯಾದ ಹದಿಮೂವರುದಿಸಿದರೂ 1 ಕ್ಲೇಶ ಬಡಿಸುವರು 2ಸ್ತ್ರೀ ಕಾಮನೆ ರಾಗ ಪ್ರತಿಕೂಲದಿಂ ದ್ವೇಷ ಬೇಕೆಂಬದನೆಕಾದುನುಳಿಯೆ ಕ್ರೋಧಾಆಕ್ರಮಿಸಿ ಸಕಲವನು ಬಚ್ಚಿಡುವನವ ಲೋಭಸಾಕು ಗುರುಹಿರಿಯರೆಂಬವರರಿಯೆ ಮೋಹಾ 3ನಿತ್ಯವಲ್ಲದ ಸಿರಿಯ ನಂಬಿ ಬೆರೆತಿಹಮದನುಉತ್ತಮರ ಕೂಡೆ ಸೆಣೆಸುವನು ಮತ್ಸರನುಮತ್ತೆ ಈಷ್ರ್ಯನು ದುಃಖನನ್ಯರಿಗೆ ಬಗೆಯುತಿಹವ್ಯರ್ಥದಿಂ ಬಸವಳಿಯುತಿಹನಸೂಯಕನು 4ದಂಭವನೆಂಬವನಲ್ಲಿ ಪುರುಷಾರ್ಥವಿಸಿಕಿಲ್ಲಹಂಬಲಿಸುತಿಹ ದರ್ಪಕೊಬ್ಬಿ ಬರಿದೆಉಂಬರೊಬ್ಬರಿಗಿಲ್ಲ ಸಕಲವೂ ನನಗೆಂದುದೊಂಬಿಯಲಿ ನಾ ಸಿಕ್ಕಿ ಬಳಲುತಿಹೆನಾಗಿ 5ವೃತ್ತಿಯೆರಡದರಲ್ಲಿ ಫಲವೆರಡು ಜನ್ಮಕ್ಕೆಬಿತ್ತಿ ಬೆಳೆವರೆ ಚೌಳು ಜಲವ ಕಾಣೆಒತ್ತರಿಸಿ ಬರುತಿರುವ ಜ್ಞಾತಿಗಳ ಬೆಂಕಿಯಲಿಹೊತ್ತು ಹೊತ್ತಿಗೆ ಬರಿದೆ ದಹಿಸುತಿಹೆನಾಗೀ 6ಬರಿಯ ಭ್ರಾಂತಿನ ಬಲೆಯ ಬೀಸಿ ನೋಡುತ್ತಿರುವತಿರುಪತಿಯ ವೆಂಕಟನ ಚರಣಗಳನುಕರಗಳಲಿ ಬಿಗಿಯಪ್ಪಿ ಶಿರವೆರಗಿ ಗುರುಮುಖದಿಅರುಪಿದುದ ನಿಲಿಸೆಂದು ಬೇಡಿಕೊಳುತಿಹೆನು 7ಕಂ||ತನುವಿನೊಳಭಿಮಾನವಿರಲೀಘನತರ ಸಂಸಾರ ದುಃಖ ತೊಲಗದು ಸತ್ಯತನು ನಿತ್ಯತೆದೋರ್ದಕಾರಣಮನದೊಡನಿಂತೆಂದು ಜೀವನನು ವಾದಿಸಿದಂ
--------------
ತಿಮ್ಮಪ್ಪದಾಸರು
ನಿರಂಜನ ಈಶ ಬಾರೊ ಕಾವ ಕರುಣ ಭವಭಂಜನ ಗುರು ಆತ್ಮ ಹಂಸ ಬಾರೊ ಧ್ರುವ ಅಗಣಿತ ಗುಣ ಅಗಾಧ ಅಪಾರಾಗಮ್ಯ ಬಾರೊ ನಿತ್ಯ ನಿರ್ಗುಣಾನಂದನುಪಮ್ಯ ಬಾರೊ ಯೋಗಿ ಜನರ ಹೃದಯ ಮುನಿಮನೋರಮ್ಯ ಬಾರೊ ಜಗದೊಳು ಭಕ್ತಜನರಿಗೆ ಪೂರಿತಕಾಮ್ಯ ಬಾರೊ 1 ಝಗಿಝಗಿಸುವ ಜಗಜ್ಯೋತಿ ಜಗನ್ಮೋಹನ ಬಾರೊ ಮಘ ಮಘ ಮಿಂಚುವ ಮಗುಟಮಣಿ ಗುಣರನ್ನ ಬಾರೊ ಬಗೆಬಗೆಯಿಂದ ಸದ್ಗೈಸುವ ಪತಿತಪಾವನ್ನ ಬಾರೊ 2 ಋಷಿ ಮುನಿವಂದಿತ ಸಾಧು ಜನ ಹೃದಯ ಬಾರೊ ಗುಹ್ಯ ಬಾರೊ ದಾಸ ಮಹಿಪತಿಯ ರಕ್ಷಿಸುವ ಪ್ರಾಣ ಪ್ರಿಯ ಬಾರೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು