ಒಟ್ಟು 2719 ಕಡೆಗಳಲ್ಲಿ , 119 ದಾಸರು , 1944 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುವರ್ಯರನು ಭಜಿಸೋ ರಾಘವೇಂದ್ರ ಗುರುವರ್ಯರನು ಭಜಿಸೋ ಪ ಧರೆತಲದಲಿ ಅವತರಿಸಿ ಸುಜನರನು ಪರಿಪÀರಿ ವಿಧದಲಿ ಪೊರೆಯುತಲಿರುವ ಸದ್ ಅ.ಪ ನಳಿನನಾಭ ಶ್ರೀರಾಮರ ರುಚಿರ ಪದಗಳ ಸಂತತದಿ ಭಜಿಸಿ ಖಳರ ದುರ್ಮತಗಳನಳಿಸಿ ದಶಪ್ರಮತಿ ಗಳ ದಿವ್ಯ ಶಾಸ್ತ್ರಾರ್ಥಗಳನು ಸುಲಭದಲಿ ಇಳೆಯೊಳು ಸುಜನಕೆ ತಿಳಿಯುವ ತೆರದಲಿ ಬೆಳಗುತಿರುವ ಪರಿಮಳ ಮುಖವರ ಗ್ರಂಥ ಗಳನು ರಚಿಸುತ ಉಳಿಸಿ ಸುಮತಿಯನು ಇಳೆಯೊಳು ವರಮಂತ್ರ ನಿಲಯದಿ ನೆಲೆಸಿದ 1 ಮಂಗಳಕರಳೆಂದು ಚರಿತೆಯುಳ್ಳ ತುಂಗಾತೀರದಿ ನೆಲೆಸಿ ಕಂಗೊಳಿಸುತ ಚರಣಂಗಳ ಭಜಿಪರ ಸಂಘಕ್ಕೆ ತಮ್ಮ ಅಪಾಂಗ ವೀಕ್ಷಣದಿಂದ ಮಂಗಳ ತತಿಗಳ ನೀಡಿ ಅವರ ಆಘ ಭಂಗವಗೈಯುತ ಅನುದಿನದಲಿ ದ್ವಿಜ ಪುಂಗವ ನಿಕರದಿ ಪೂಜೆಯಗೊಂಬ ಉ ತ್ತುಂಗ ಚರಿತರಥಾಂಗಧರ ಪ್ರಿಯ 2 ಮುನ್ನ ಪ್ರಹ್ಲಾದನೆನೆಸಿ ಶ್ರೀ ನರಹರಿಯನ್ನು ಸತತ ಭಜಿಸಿ ಇನ್ನೊಂದು ಜನುಮದಿ ಮಾನ್ಯ ಶ್ರೀ ವ್ಯಾಸಮುನಿ ಯೆನ್ನಿಸಿ ಖಲಮತವನ್ನು ಖಂಡಿಸುತಲಿ ಚಿನ್ನ ಶ್ರೀಕೃಷ್ಣನ ಉನ್ನತ ಮಹಿಮೆಗ ಳನ್ನು ಬೋಧಿಸುತ ತನ್ನ ಭಕುತಜನ ರನ್ನು ಹರುಷದಲಿ ಧನ್ಯರೆನಿಸಿದ ಪ್ರ ಸನ್ನ ಶ್ರೀರಾಮರ ಭಕುತ ಶಿರೋಮಣಿ 3
--------------
ವಿದ್ಯಾಪ್ರಸನ್ನತೀರ್ಥರು
ಗುರುವಾದಿರಾಜ ತವ | ಚರಣಗಳಿಗಭಿನಮಿಪೆದೊರಕಿಸೆನಗ್ಹರಿಪಾದ | ಸರಸಿರುಹ ಗುರುವೇ ಅ.ಪ. ಯತಿ ಕುಲಾಗ್ರಣಿ ದ್ವೈತ | ಮತ ಜನರ ಉದ್ಧಾರಸತತ ನೀ ನೆಸಗುತಲಿ | ಪ್ರತಿರಹಿತ ನೆನಿಸೀ |ಮತ ಗ್ರಂಥ ವಿಸ್ತರಿಸಿ | ಯುಕ್ತಿಗಳ ಬೋಧಿಸುತಹಿತದಿಂದ ಸಜ್ಜನಕೆ | ಗತಿ ತೋರಿ ಮೆರೆದ 1 ಪಾದ ಪೂಜೆಯನುಹವಣೆಗಳ ತಿಳಿಯೊ ನಾ | ದೈವಗತಿಯಂತೋ 2 ಭಾವಿ ಮಾರುತ ನಿಮ್ಮ | ಭಾವ ತಿಳಿವರು ಯಾರುಓವಿ ನಿಮ್ಮಡಿಗಳನು | ಸ್ತವನ ಗೈದೂ |ಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನಭಾವದಲಿ ಕಾಣ್ವಂಥ | ಭಾವ ಕೊಡು ಸಂತ 3
--------------
ಗುರುಗೋವಿಂದವಿಠಲರು
ಗುರುವಿನ ಕಾಣದೆ ಪರಗತಿ ದೊರೆಯದು ಪ ವೇದ ಶಾಸ್ತ್ರಗಳ ನೋದಿ ಭೇದಿಸದೆ | ವಾದದಿಂದ ಜನಗೆದ್ದನು | ಕೊಂಡ ಗಾದಿಯಂತೆ ನಿಜ | ಸಾಧುರ್ಹಾದಿಯನೆ ಮರೆತನು 1 ಕರ್ಮ ಧರ್ಮ ಸಾರಯಜ್ಞದಿ | ಭೂರಿಯಶವನೆ ಪಡೆದನು | ಏರಿ ಸ್ವರ್ಗದಿ ಜಾರಿ ಬಿದ್ದ ಸಂ | ಸಾರ ವಾರಿಧಿಯ ಸೇರಿದನು 2 ರಂಜನಿಂದ ವಣಭಂಜನ್ಯಾತರೆದು | ಕಂಜನಾಭನ ನೆರೆ ನಿಲುಕನು | ಅಂಜಲೆತ್ತಿದರ ಗುರು ಮಹಿಪತಿ | ಪ್ರಾಂಜಳಾಗಿ ಘನದೋರುವನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವಿನಾ ಯಾಕೆ ಮರೆಯುವಿರಣ್ಣಾ | ಈ ಲೋಕದೊಳಗ | ಶುಭ ಧರೆಯೊಳು ದೀನರುದ್ಧರಿಸುತ ಮೆರೆವಾ ಪ ಮನಸಿನ ಜಾಡ್ಯ ತನವನು ಬಿಡಿಸಿ | ಶ್ರವಣಾದಿಗಳಿಂದ | ಅನುವಾಗಿ ಬೋಧಾಮೃತವನೆ ಕುಡಿಸಿ | ಭಕ್ತಿಯ ಕಳೆಯಂಬಾ | ಘನವಾದಲಂಕಾರವನೆ ತೊಡಿಸೀ | ಯೋಗದ ಸಿರಿಯಿಂದಾ | ಚಿನುಮಯ ಮಂದಿರವನು ತೋರಿಸುವಾ 1 ನೀರಿನಾ ಬೊಬ್ಬುಳಿಯಂತೀ ತನುವು | ಮಿಂಚಿನಾ ತೆರನಂತೆ | ಮೃಗ | ನೀರಂತೆ ಕಾಣದೆ ಮೋಹಿಪ ಮನವು | ಇದನೆಚ್ಚದೆ ಬ್ಯಾಗ | ಜಾರಿ ಶುಭೇಚ್ಛೆ ವಿಚಾರಕ ತಂದು 2 ವೇದಾಂತದ ನುಡಿಯಾ | ಲೋಹ ಪರಸವ ನೆಶಿದಾ | ಸ್ವಾನುಭವ ಸುಖದಾ | ಗತಿ ಮತಿ ಕೂಡಿಸಿ ಗತಿಯನೆ ಕೊಡುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಗುರುವೇ ಮಹಾಗುರುವೇ ಚಿದಾನಂದಗುರುವೇ ಕೊಡಿರಿ ಮತಿ ನಮಗೆ ಪ ಅದ್ದಿ ಪಾಪದೊಳು ಸಮೃದ್ಧಿ ನನ್ನದೆಂಬ ಹಮ್ಮುಹೊದ್ದಿ ತುಂಬಿಹುದು ನನಗೆ ದು-ರ್ಬುದ್ಧಿ ನಮಗೆ ಕೊಡಿರಿ ನೀವುಸದ್ಬುದ್ಧಿ ಮಹಾಗುರುವೇ 1 ಅಂತೇ ಸಂಸಾರವು ಸತ್ಯಂತೆ ಇದನು ನಂಬುವನುಕತ್ಯಂತೆ ಮಾಡುವುದೆಲ್ಲ ಭ್ರಾಂತಂತೆ ನಮಗೆ ಕೊಡಿರಿ ಗುರುಚಿಂತೆ ಮಹಾಗುರುವೆ2 ಮಾನ ಉಳಿವುದಿಲ್ಲ ನಿದಾನಾ ಸಂಸಾರವೆ ಬಲುಹೀನ ತೊಳಲಿದೆ ನಾನು ಜನ್ಮನಾನಾ ನಮಗೆ ಕೊಡಿರಿ ಸು-ಜ್ಞಾನ ಮಹಾಗುರುವೇ 3 ಶಕ್ತಿ ಆದರೆಯು ವಿರಕ್ತಿ ಬ್ರಹ್ಮದಲಿ ಆ-ಸಕ್ತಿ ಕೊಡುವುದದು ಬಲುಭಕ್ತಿ ನಮಗೆ ಕೊಡಿರಿ ನೀವುಮುಕ್ತಿ ಮಹಾಗುರುವೇ 4 ಹಾರಿ ಭವದಾರಣ್ಯ ಕುಠಾರಿ ತೋರಿಸುವ ನಿಜದಾರಿ ಸಚ್ಚಿದಾನಂದ ತೋರಿ ನಮಗೆ ಹಿಡಿದು ಕೊ-ಡಿರಿ ಮಹಾಗುರುವೆ5
--------------
ಚಿದಾನಂದ ಅವಧೂತರು
ಗುರುಸುಶೀಲೇಂದ್ರ | ಚರಣವಾರಿಜ ಯುಗ್ಮ ಸ್ಮರಿಸುವ ನರರು ಶ್ರೀಹರಿದಾಸರು ಪ ಹರಿವರ ಸುಮಚಾಬ್ಧಿ | ಹರಿಣಾಂಕರೆನಿಸಿದ ವರಸುವೃತೀಂದ್ರರ ತೀರ್ಥರ ಕರಕಮಲಜ ಅ.ಪ ಮಾಸ ತ್ರಯದಿ ಸಡಗರದಲಿ ಮಹ ಸಭೆ ನಿರ್ಮಿಸಿ ಪೊಡವಿಯೊಳಿದ್ದ ಭೂಸರರಾಜ್ಞ ಪತ್ರ ಬರಮಾಡಿ ವಿದ್ವಾಂಸರ ಒಡಗೂಡಿ | ಮಧ್ವಾಗಮನವನು ನೋಡಿ ಬೆಲೆಯುಳ್ಳವೆಗ್ಗಳ ಒಡವೆ ಉಡುಪಗಳನು ಕರುಣಿಸಿ ಮೃಷ್ಟಾನ್ನ ದ್ವಿಜರಿಗೆ ಕಡು ಸುಪ್ರೇಮದಿ ಸಲಿಸಿ | ಮುದ ಬಡಿಸಿ ಜಡಕುಮಾಯ್ಗಳ | ಗಡಣ ಜಡಧಿಗೆ ವಡೆಯ ತಾನೆನಿಸಿ ಕ್ರೋಢ ಜಾಸ್ಥಿತ | ಒಡೆಯ ಶ್ರೀಗುರು ರಾಘವೇಂದ್ರರ ಅಡಿಗಳಾಬ್ಜಕಾ ರಡಿಯಂತೊಪ್ಪುತ | ಬಿಡದೆ ಸಂತತ ಧೃಢದಿ ಸೇವಿಸಿ ಜಡಜ ಜಾಂಡದಿ ಮೆರೆದ ಅಸ್ಮದ್ 1 ತರಣಿ ಕುಲೇಂದ್ರನ ಕರುಣವೆಷ್ಟಿವರೊಳು ಅರುಹಲಾರೆ ವರಕಾಪ್ಯಾಸನ ಪುರಕೆ ಎರಡಾರು ಯತಿಗಳ ವತಿಯಿಂದ ತಮ್ಮಯ ಶಿಷ್ಯ ತತಿಯಿಂದ ಬಹುವಿಧ ಬಿರುದಾವಳಿಯಿಂದ ತೆರಳಿ ಶಶಿರವಿವರ ಸುವಾದ್ಯಧ್ವಾನ ಮೊಳಗಿಸುತ ‌ಘನ ಭಕ್ತಿ ಪರವಶರಾಗಿ ಸುರಚಿರ ಕನಕಮಣಿ ಧನ ತನುಮನ ತ್ವರಿತ ತೃಣ ಬಗೆಯ ದೇವಕಿ ತರಳ ರುಕ್ಮಿಣಿ ವರ ಮುರಾಂತಕÀ ಚರಣಗರ್ಪಿಸುತ | ಆನಂದಪಡುತ ಸರ್ವಮುನಿ ಜನಗಳಿಗೆ ಬಲು ಉಪಚರಿಸಿ | ಮನ್ನಣೆ ಧರಿಸಿ ಹರುಷದಿ ವರ ಸುಧೀಂದ್ರರ ಕರಜರನು ನೆರೆಸ್ಥಾಪಿಸಿ ಆಶ್ಚÀರ್ಯ ಚರಿತ 2 ಪತಿ ಶೃತಿ ಶಾಸ್ತ್ರಾರ್ಥ ಚತುರ ತನದಿ ಪಡೆದು ವಿತತ ಮಹಿಮನಾದ ಪತಿತ ಪಾವನ ಶಾಮಸುಂದರನ ಸ್ತುತಿಸುತಲಯ ಚಿಂತನೆ ಗೈಯುತ ಶ್ರೀಯುತ ಸಂಸ್ಥಾನಮತಿ ವಿಶಾರದರಾದವರ ಸುವೃತೀಂದ್ರ ತೀರ್ಥರಿಗೆ ಹಿತದಿಂದ ಒಪ್ಪಿಸಿ | ಯತಿ ಧೀರೇಂದ್ರರ ಚಾರುಸ್ಥಳದೊಳಗೆ ತನುವಿತ್ತು | ಹರಿಪುರಪಥವ ಪಿಡಿದೈದಿದರು ಚನ್ನಾಗಿ | ಸೇವಿಪ ಜನರಿಗೆ ಅತಿದಯದಿ ಮನೋರಥವ ನೀಡುತ ಸತತ ಮಾಣದೆ ಪರಮ ಭಕುತಿಲಿ ಪೃಥ್ವಿ ಸುರಕರ ಶತಪತ್ರಗಳಿಂದ ನುತಿಸಿಕೊಳುತಲರ್ಚನೆಗೊಂಬ 3
--------------
ಶಾಮಸುಂದರ ವಿಠಲ
ಗುರುಹಿರಿಯರನುಸರಿಸಿ ಹÀರಿಯ ಮನದೊಳಗಿರಿಸಿಪರಗತಿಯ ಬೇಗ ಸಾಧಿಸಿರೊ ಪ. ಲೆಕ್ಕವಿಲ್ಲದ ದೇಹವೆಂಬ ಸೆರೆಮನೆಯೊಳಗೆಸಿಕ್ಕಿ ಬಹುಕಾಲ ಬಳಲದಿರಿರಕ್ಕಸಾರಿಯ ಭಕ್ತರೊಳು ಸೇರಿ ಮುಂದೆ ಸೆರೆ-ಯಿಕ್ಕದಂತವನ ಮರೆಹೋಗಿರೊ 1 ಕಂಬಳಿಯ ಬುತ್ತಿಯಂತೀ ದೇಹದೊಳಗೆ ಸುಖವೆಂಬುದಿಲ್ಲವು ದುಃಖಭರಿತಅಂಬುಜಾಕ್ಷನ ದಿವ್ಯ ಮಂಗಳ ಕಥಾಮೃತವ-ನುಂಬ ಸಂಭ್ರಮಕೆ ಸರಿಗಾಣೆನು 2 ಮಕ್ಕಳುಗಳಳುವಾಗ ಮಡದಿಯರು ಜರಿವಾಗಭಿಕ್ಷುಕರು ಬಂದು ಬೈದ್ಹೋಗುವಾಗಇಕ್ಕಿ ಪೊರೆವುದಕೆ ಬಗೆಯಿಲ್ಲದ ದರಿದ್ರಂಗೆಸೌಖ್ಯವೆತ್ತಣದು ಮನುಜರಿಗೆ 3 ತಾಯ ಮಾರಿ ತೊತ್ತಕೊಂಬ ಪಾಮರನಂತೆಹೇಯಕುಜನರ ಚರಣಕೆರಗಿಶ್ರೀಯರಸನಂಘ್ರಿಗಳ ನೆನೆಯಲೊಲ್ಲದ ಮನುಜರಿಗೆಆಯುಷ್ಯ ಬರಿದೆ ಹೋಯಿತಲ್ಲ 4 ಐವರಿತ್ತೊಡವೆಯನು ಅವರವರು ಒಯ್ವರು ಮ-ತ್ತೈವರೆಂಬುವರು ತೊಲಗುವರುಮೈಯ ಹತ್ತರಕೂಟ ಹರಿದು ಹೋಗುವ ಮುನ್ನಕೈಯ ಪಿಡಿದೆತ್ತುವರ ಕಾಣೆ 5 ಕಾಲು ಜವಗುಂದಿದವು ರೋಗರುಜಿನಗಳಿಂದಕಾಲನ ಭಟರು ಬಂದು ಕವಿದುಸಾಲಾಗಿ ನಿಂತಾಗ ಮುಖಘಂಟೆಯೊಳಗಿನನಾಲಿಗೆಗೆ ನಾದವೆಲ್ಲಿಹುದೊ 6 ಈಗಲೆ ಹರಿನಾಮನಾದದಿಂದೆಚ್ಚೆತ್ತುನಾಗಶಯನನ ಪುರದ ಪಥವಆಗಮಜ್ಞರ ಕೈಯ ಕೇಳಿಕೊಳ್ಳಿರೊ ನೀವುಈ ಗಾಳಿದೀಪ ಸ್ಥಿರವಲ್ಲ7 ಜರೆ ಬಂದು ಕಡೆಯಲ್ಲಿ ಗುರುಗುರುಟ್ಟುವಾಗಶರೀರಸಂಬಂಧಿಗಳ ಕಾಟತರುಣಿಯರ ಮೇಲಾಸೆ ತಮ್ಮ ಹಿತವರಿಯದೆಬರಿದೆ ಭವದೊಳಗೆ ಬಳಲದಿರಿ 8 ವೇದಶಾಸ್ತ್ರವನೋದಲಿಲ್ಲ ಜಪತಪಸಾಧು ಸತ್ಕರ್ಮಗಳ ಸರಕಿಲ್ಲಮಾಧವನ ಪೂಜೆಯನು ಮಾಡಿದವನಲ್ಲ ಹರಿಪಾದತೀರ್ಥ ವ್ರತಗಳಿಲ್ಲ 9 ಊಧ್ರ್ವಪುಂಢ್ರsÀಗಳೆಲ್ಲಿ ಹರಿಯ ಲಾಂಛನವೆಲ್ಲಿಪದ್ಮಾಕ್ಷಿ ಶ್ರೀತುಲಸಿ ಸರಗಳೆಲ್ಲಿಸದ್ಧರ್ಮಪಥವೆಲ್ಲಿ ವಿಷಯಾಂಧಕೂಪದೊಳುಬಿದ್ದು ಹೋರಳುವ ಮನುಜರೆಲ್ಲಿ 10 ಏಕಾದಶಿಯ ಮಾಡಿ ಯತಿಗಳೊಡನೆ ಆಡಿಪೋಕವೃತ್ತಿಗಳನೀಡಾಡಿಶ್ರೀಕಾಂತನನು ಬೇಡಿ ಸುಕೃತಿಗಳನೆ ಕೂಡಿಆ ಕೃಷ್ಣನಂಘ್ರಿಗಳ ಪಾಡಿ 11 ಉಕ್ಕಿ ಹರಿಯನೆ ಪೊಗಳಿ ಅವನಂಗಣದಿ ಹೊರಳಿಶುಷ್ಕ ತರ್ಕಗಳ ಮೇಲೆ ಉಗುಳಿಭಕ್ತಿಜ್ಞಾನಗಳಿರಲಿ ಮಿಕ್ಕ ಪಥದಿಂ ಮರಳಿಮುಕ್ತಿಮಾರ್ಗದಲಿನ್ನು ತೆರಳಿ 12 ಕೊಳ್ಳೆನಾಯಕ ಬಂದು ಕೋಟೆಗಡರದ ಮುನ್ನಕಳ್ಳರೈವರ ಕಾಟದಿಂದಉಳ್ಳ ಪುಣ್ಯಾರ್ಥಗಳು ಕೊಳ್ಳೆ ಹೋಗದ ಮುನ್ನಫುಲ್ಲನಾಭದಲಿ ಬಚ್ಚಿಡಿರೊ 13 ಮಲಮೂತ್ರರಕ್ತಮಾಂಸದ ರಾಸಿಗಳು ಕೂಡಿಎಲುವಿನ ಬಿಲದಲ್ಲಿ ಗೂಡಮಾಡಿಬೆಳೆಸಿದೀ ತನುವೆಂಬ ನರಕದಾಸೆಯ ಬಿಟ್ಟುಜಲಜನಾಭನ ಸೇರಿಕೊಳ್ಳಿರೊ14 ಒಂಬತ್ತು ಛಿದ್ರವುಳ್ಳ ದೇಹವೆಂಬ ಮಡಕೆಯಲ್ಲಿತುಂಬಿದ ವಾಯು ಸ್ಥಿರವೆಂದುನಂಬಿಕೊಂಡಿರಬೇಡಿ ಹಯವದನ ಹರಿಯ ಪಾ-ದಾಂಬುಜವ ಸೇರಿ ಬದುಕಿರೊ 15
--------------
ವಾದಿರಾಜ
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ 4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಗೋಕುಲಕ್ಹೋಗು ನೀ ಶೋಕವಿನಾಶಿನಿ ಲೋಕೇಶ ಪಾರ್ವತಿ ಶ್ರೀಕರೆ ಶ್ರೀಮತಿ ಪ. ದೇವಕೀಗರ್ಭದ ಕೇವಲೆಂಟಂಶದ ದೇವಶೇಷಾಖ್ಯನ ದೇವಿಗೈ ದರ್ಶನ 1 ಶಶಿಮುಖಿ ರೋಹಿಣಿ ಬಸುರೊಳಗಿಡು ನೀ ಬಿಸರುಹಲೋಚನಿ 2 ಸುಂದರಿ ದೇವಕೀ ಕಂದನಾಗುವೆ ಸುಮುಖಿ ನಂದನ ನಂದಿನಿಯೆಂದೆನಿಸು ಭವಾನಿ 3 ಜಗದಂಬಿಕೆ ಜಯೆ ಸುಗುಣೆ ವೈಷ್ಣವಿ ವಿಜಯೆ ಜಗದೊಳು ನಿನ್ನ ಪೂಜೆ ಅಗಲದ ಗೈವರಗಜೆ4 ಲಕುಮಿನಾರಾಯಣನ ಯುಕುತಿಯಂತಾಕ್ಷಣ ಸುಖದೆ ಗೈದಳು ಶಿವಸಖಿ ತಾನೆಲ್ಲವ5
--------------
ತುಪಾಕಿ ವೆಂಕಟರಮಣಾಚಾರ್ಯ
ಗೋದೆ ಸಮಸ್ತಫಲದೆ ಸ್ನಾನ ಒದಗಿಮಾ-ದರೊಮ್ಮೆ ವೈಕುಂಠಪದವೀವೆ ಪ. ಬ್ರಹ್ಮಾದಿ ಶಿಖರದಿಂ ಪುಟ್ಟಿ ನೀನು ಬಲುಬ್ರಹ್ಮ ಋಷಿಯಾದ ಗೌತಮ ಮುನಿಯಬ್ರಾಹ್ಮರಿಂದಲಿ ಬಂದ ಗೋಹತ್ಯ ಪರಿಹರಿಸಿಅಮ್ಮಮ್ಮ ಸಪ್ತಮುಖದಿಂದ ಸಾಗರವ ಬೆರೆದೆ 1 ಆದಿಯಲಿ ತ್ರಿಯಂಬಕನ ಜ[ಡೆ]ಯಲುದಿಸಿದೆ ನೀನುಮುದದಿಂದ ಪಶ್ಚಿಮಕಾಗಿ ನಡೆಯೆ ಕಂಡುಒದಗಿ ಗೌತಮನು ಕುಶದಿಂದ ತಿರುಗಿಸÀಲು ನೀಸದಮಲ ಕುಶಾವರ್ತಳೆಂದೆನಿಸಿಕೊಂಡೆ 2 ಔದುಂಬರ ವೃಕ್ಷಮೂಲದಿಂದುದ್ಭವಿಸಿಉದಧಿಯನು ಕೂಡಬೇಕೆಂದು ಬೇಗಮೇದಿನಿಯಿಳಿದು ತಿರುಗುತಲಿ ನೀ ಮುದದಿಂದಆದರದಿ ಪೂರ್ವಾಬ್ಧಿಯನು ಕೂಡಿದೆ 3 ಸಿಂಹರಾಸಿಯಲಿ ಸುರಗುರು ಬಂದುದು ಕೇಳಿಅಂವ್ಹ ರಾಸಿಗಳು ಸಂಹಾರಕಾಗಿಬಂಹ್ವಾಯಾಸದಿ ಬಂದು ನಿಮ್ಮನು ಕಂಡೆಅಂವ್ಹಂಗಳು ಪರಿಹರಿಸಿ ಮುಕುತಿಯ[ಕೊಡು]ದೇವಿ 4 ವಿನಯದಲಿ ಸ್ನಾನಪಾನವನು ಮಾಡುವರಿಗೆವನಜಾಕ್ಷ ಹಯವದನ ಹರಿಯವನಜನಾಭನ ಲೋಕಸಾಧನವಾದಘನ ಭಕುತಿಯನಿತ್ತು ರಕ್ಷಿಸುದೇವಿ 5
--------------
ವಾದಿರಾಜ
ಗೋಪಸತಿಯರೆಲ್ಲ ಕೇಳೆರೆನ್ನಯ ಮಾತ ಪರಿ ಕೂಸಿನ ಕಂಡೀರ್ಯಾ ಪ ತೊಟ್ಟಿಲೊಳಗಿಟ್ಟು ವತ್ತಿ ಮಾತಾಡದೆ ಮುಟ್ಟದೆ ಉಣಲಿಕ್ಕೆ ಕುಳಿತಿರಲು ಚಿಟ್ಟಕ್ಕಿ ಚೀರೆದ್ದು ಭೇಟಿ ತಾನಳುತಿಹ ಹೊಟ್ಟಿ ತುಂಬಾ ಉಣಲೀಸ ಎಷ್ಟೆಂದೇಳಲೆ ನಾನು 1 ಬಣ್ಣಿಸಿ ಬಣ್ಣಿಸಿ ಪದವ ಪಾಡಿ ತೂಗಿ ಥಣ್ಣಾಗೆ ಬೀಸಿ ಬೀಸಣಿಕೆಯಲಿ ಕಣ್ಣ ಮುಚ್ಚಿಸಿದೆವೆಂದರಿತು ಸುಪ್ಪಾಣಿಸೆ ಅಣ್ಣ ತಾನೇಳುವ ನಿದ್ರೆಗೈಯ್ಯಲೀಸ 2 ಅನಿಮಿಷರಾದೆವೆ ಅನಶನರಾದೆವೆ ಮನಸು ಕೂಸಿನಲ್ಲೆ ನಟ್ಟಿಹುದೆಮಗೆ ಮನೆಕೆಲಸಗಳಲ್ಲ ಎಲ್ಲಿವೆ ನಮಗಿನ್ನು ತನಯ ಪುಟ್ಟಿದ ಪುಣ್ಯದಿಂದಲ್ಲಿನ್ನೇನೆಂಬೆ 3 ಚಿಕ್ಕವರೊಳು ಪೋಗಿ ಮಕ್ಕಳಾಟಿಕೆ ಆಡಿ ಲೆಖ್ಖವಿಲ್ಲದ ದೂರು ಘಕ್ಕನೆ ತರುವ ರಕ್ಕಸರೆನÀಲು ತಾ ಲೆಕ್ಕಿಸದವರ ಸೊಕ್ಕು ಮುರಿವನಿವನಕ್ಕೊಜಾಕ್ಕೇನೆಂಬೆ4 ದೇವತೆಗಳ ಮೀಸಲಾವಾಗ ಮೆಲುವನು ಸೇವಕರಂತಲ್ಲೆ ತಾವಾ ಹೊರೆ ದಾವಾದಿ ಭಯದಿಂದ ಕಾವಾನೀತನೆ ವಾಸು - ದೇವಾವಿಟ್ಠಲನೆಂದು ಭಾವಿಸಿ ತಿಳಿವೆನು 5
--------------
ವ್ಯಾಸತತ್ವಜ್ಞದಾಸರು
ಗೋಪಾಲದಾಸರು ಕರದಾಗ ಬಾರದೇ ವೈದುಗ ಬಂದು ಬೋಧಿಸಿ ಮಾರ್ಗವ ತೋರಿಸಿ ಹೃದಯದಿ ಪಾದನಿಲ್ಲಿಸಿ ಮಂದನ ಪೋಷಿಸಿ ಭಂಗವ ಬಿಡಿಸುತಾ ಮಂಗಳ ಮೂರುತಿ ನಿನ್ನ ಮಹಿಮೆಗೆಣೆಗಾಣೆ ಧವಳ ಗುಣವಂತ ತಂದೆವರದಗೋಪಾಲವಿಠಲರೇಯನ ದಾಸನೆಂದೆನಿಸದೆಯನ್ನ 1 ವೈರಿ ಬನ್ನ ಭವ ಬನ್ನ ಪಡುತಿರೆ ಕಣ್ಣು ಕಾಣದೆ ಕರುಣವ ಬೀರುತ ಪಾಣಿಯ ಪಿಡಿದು ವೀಣಾವನಿತ್ತು ಗಾನವ ಪೇಳಿ ಗುಣವಂತನೆಂದೆನಿಸಿದೇ ಎನ್ನ ಅಣ್ಣಾ ಅಣ್ಣಾ ಭಾಗಣ್ಣ ಗಜಮುಖ ರೂಪದಿ ಬಂದು ಪಾಲಿಸಿದೈನಿನ್ನಾ ಕರುಣಾರಸಕೆಣೆಯುಂಟೆ ಯೆಣೆಯುಂಟೆ ನಿನ್ನ ದೇನಿಪರೊಳಗಿಟ್ಟುಶಿರಿಯರಮಣ ತಂದೆವರದಗೋಪಾಲನ ತೋರೋ 2 ನೂರಾರು ಸಾವಿರ ನಾರಿಯರೊಡಗೂಡಿ ಬೆಡಗು ಮಾಡೆ ನಾರಿಯಾಗಿ ನಿನ್ನಡಿಗಳ ಪೂಜಿಸಿ ಗರುಡನಂತೆ ನನ್ನ ಹೆಗಲೀನ ಕೂಡಿಸಿಕೊಂಡುತಿರುಗುವೆ ನೀತಿ ಕಪಿಯಂತೆ ನಿನ್ನ ಕಪ್ಪಾದಿ ವಲಿಸುವೆ ಕಮತವ ಮಾಡಿಸಿ ಮರ್ಮವ ಘಾಡಿಸಿ ಶರ್ಮವ ಗೂಡಿಸಿ ಚರ್ಮವ ತೊಡಿಸಿ ಕರ್ಮವ ಕೆಡಿಸಿಮೃಡನೊಡೆಯ ವಂದಿತ ತಂದೆವರದಗೋಪಾಲವಿಠಲನಡಿಗಳ ಧೇನಿಸುವಂತೆ ಮಾಡೋ 3 ಅಂಬರ ಭೋಜನೆ ಕಂಬುಕಂಧರನಿಂದ ಡಿಂಗರಪಾಲಿಪ ಡಿಂಬದಿ ಪೊಳೆಯುವಅಂಬಾರಮಣಸುತ ಭೀಮಾಂತರ್ಯಾಮಿ ತಂದೆವರದಗೋಪಾಲ ವಿಠಲನ ನಿಜ ಕೊಂಡಾ 4 ನಿಗಮ ನಿಧಿ ಕೃಷ್ಣಾಂತರ್ಯಾಮಿ ಲಕುಮಿ ಅರಸತಂದೆವರದಗೋಪಾಲವಿಠಲನ ವಾರಿಜದಲ್ಲಿ ತೋರೋ 5 ಜತೆ :ಆವಾಗ ಬಂದು ನೀ ಕಾವದಿರೇ ಸೇವಕನಾಗಲ್ಯಾಕೋ ಭಾವಜಪಿತ ತಂದೆವರದಗೋಪಾಲವಿಠಲರೇಯನ ದೂತ
--------------
ತಂದೆವರದಗೋಪಾಲವಿಠಲರು
ಗೋಪಿನಾಥ ವಿಠಲ | ನೀ ಪಾಲಿಸಿವಳಾ ಪ ಶ್ರೀಪತಿಯೆ ಕರುಣಾಳು | ಕೈ ಪಿಡಿದು ಸಲಹೊ ಅ.ಪ. ನಿತ್ಯ ಮಂಗಳನೆಯುಕ್ತಿಯಲಿ ನಿನ್ನಿಂದ | ಸ್ವಪ್ನ ಸೂಚಿಸಿದಂತೆಇತ್ತಿಹೆನು ಅಂಕಿತವ | ಸಾರ್ಥಕವ ಪಡಿಸೊ 1 ಶೃಂಗಾರ ಮೂರುತಿಯೆ | ಮಂಗಳಾಂಗನೆ ದೇವಹೆಂಗಳೀಗೆ ಸುಜ್ಞಾನ | ಭಕ್ತಿಯನೆ ಇತ್ತೂಅಂಗನಾಮಣಿಯಂತೆ | ಸಿಂಗರಿಸುತಿವಳನ್ನುಭಂಗಗೈ ಅಜ್ಞಾನ | ಭ್ರಾಂತಿ ಜ್ಞಾನವನು 2 ಭಾಗವತರೊಡನಾಟ | ಯೋಗಕರುಣಿಸು ದೇವನಾಗಾರಿವಾಹನನೆ | ಯೋಗಿಜನವಂದ್ಯಾಆಗುಹೋಗುಗಳೆಲ್ಲ | ನೀನಿಚ್ಛೆ ಸಂಕಲ್ಪಆಗು ಮಾಡೈ ದೇವ | ಮನದಭೀಷ್ಟಗಳಾ 3 ತತ್ವ ಪತಿಗಳಿಗೆಲ್ಲ | ಮರುತನೆ ಅಧಿಕೆಂಬತತ್ವವನೆ ತಿಳಿಸುತ್ತಾ | ಕಾಪಾಡೊ ಇವಳಾಪ್ರತ್ಯಹತ್ ತವನಾಮ | ಸಂಸ್ತುತಿಯ ಕರುಣಿಸುತಉತ್ತಾರಿಸೋ ಭವವನ್ನು | ಪ್ರತ್ಯಗಾತುಮನೆ 4 ಗೋವುಗಳ ಪರಿಪಾಲ | ಗೋವರ್ದನೋದ್ದರನೆಗೋಪಿಜನಪ್ರಿಯ | ಗೋಪಾಲ ಬಾಲಾಗಾವಲ್ಗಣೀವರದ | ಬಿನ್ನಪವ ಸಲಿಸಯ್ಯಕಾವುದಾನತರ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗೋಪೀಶ ವಿಠ್ಠಲನೆ | ನೀ ಪಾಲಿಸಿವಳಾ ಪ ನೀ ಪೊರೆಯದೇ ಇನ್ನು | ಕಾಪಾಡು ನರಹರಿಯೆಗೋಪಗೋಪಿಯರೊಡೆಯ | ಗೋಪಾಲ ಕೃಷ್ಣಾ ಅ.ಪ. ಹೇ ದಯಾಂಬುಧಿ ಹರಿಯೆ | ಭೇದ ಪಂಚಕ ಜ್ಞಾನಮೋದದಲಿ ಕರುಣಿಸುತ | ಸಾಧನವ ಗೈಸೀಶ್ರೀಧರಾ ದುರ್ಗೇಶ | ಕಾದುಕೋ ಈ ಶಿಶುವಸಾಧುವಂದಿತ ಹರಿಯೆ | ಸಾಧ್ಯ ನೀನಲ್ಲೇ 1 ಭೋಗಿ ಭಾಗವತ ಪ್ರೀಯಾ 2 ಹರಿಗುರೂ ಸದ್ಭಕ್ತಿ | ಹಿರಿಯರ ಸತ್ಸೇವೆನಿರತ ಪಾಲಿಸುತಿವಳ | ಪೊರೆಯಬೇಕೊ |ಮರುತಾಂತರಾತ್ಮ ಗುರು | ಗೋವಿಂದ ವಿಠ್ಠಲನೆಕರುಣಿಸೆನೆ ಬಿನ್ನಪವ | ನಿರತ ಪ್ರಾರ್ಥಿಸುವೇ 3
--------------
ಗುರುಗೋವಿಂದವಿಠಲರು
ಗೋವಿಂದ ಗೋವಿಂದ ಎನ್ನಲರಿಯದೆ - ವೃಥಾನೋವಿಂದ ಭಂಗವ ಪಡುವುದುಚಿತವೆ ? ಪ ಕ್ಷೀಣ ಶಾಸ್ತ್ರಾರ್ಥವನು ಪರಿಗ್ರಹಿಸಿ ನಿಖಿಲ ಕುರಿಕೋಣಗಳ ತಲೆಚೆಂಡ ಕುಟ್ಟಿಸುತಪ್ರಾಣ ಹತ್ಯವ ಮಾಳ್ಪುದಾವ ಸತ್ಕರ್ಮ - ನಾರಾ-ಯಣನ ನಾಮಸ್ಮರಣೆ ಮಾಡು ಮನವೆ 1 ಖಂಡವನು ಕೊಯ್ದು ಕೊಡಬೇಡ ದಳ್ಳುರಿಯಗ್ನಿಕುಂಡವನು ಹೊಕ್ಕು ಹೊರಡುವುದುಚಿತವೆಭಂಡರಂದದಿ ಬತ್ತಲೆಯೆ ಬರುವುದಾವಾಟಪುಂಡರೀಕಾಕ್ಷನ ನೆನೆ ಕಂಡ್ಯ ಮನವೆ 2 ಕುಟ್ಟಿಕೊಳ್ಳದಿರಿ ಜಟ್ಟಿ ಗುಂಡಿನಲಿ, ಶಸ್ತ್ರವನುಚಿಟ್ಟಿ ಕೊಳ್ಳದಿರಿ, ಬೆನ್ನಲಿ ಸಿಡಿಯನುಕಟ್ಟಿ ತೂಗಿಸಿಕೊಳ್ಳದಿರಿ ಕರಟಕದಂತೆಗುಟ್ಟಿನಲಿ ಗೋಪಾಲಕನ ಸ್ಮರಿಸು ಮರುಳೆ 3 ತೊಗಲ ಬಿಲ್ಲೆಗಳ ಕೊರಳಲ್ಲಿ ಕಟ್ಟಿಕೊಂಡುಹಗಲಿರುಳು ಅನ್ನಪಾನಕೆ ಹೋಗದೆಮೃಗವೈರಿಯಂತೇಕೆ ಕಿಸುಕೆಲೆವ ರಂಪಾಟಜಗದಾಧಿಪತಿಯ ನಾಮ ಸ್ಮರಿಸು ಮರುಳೆ 4 ಉತ್ತಮರು ಸುರೆಯನೀಂಟುವರೆ ತರಹರಿಸಿ ಮದೋ-ನ್ಮತ್ತರಾಗಿ ಅಸಭ್ಯ ಶಬ್ದವ ನುಡಿವರೆಸತ್ತ ಹೆಣದಂತೆ ಬಿದ್ದಿಹುದಾವ ನೀತಿ ಪುರು-ಷೋತ್ತಮನ ನಾಮ ಸ್ಮರಣೆಯ ಮಾಡು ಮನವೆ 5 ವೇದೋಕ್ತ ಪೂಜೆಯಲಿ ತೃಪ್ತಿಪಟ್ಟರೆ ನೀವುಅದರಿಂದ ಫಲವೇನು ಪೇಳಿರಯ್ಯನಾದವನು ಕೇಳ್ದ ಹರಿಣದಂದದಿ ಕೆಡದೆ ಮಧುಸೂದನನ ನಾಮ ಸ್ಮರಣೆಯ ಮಾಡು ಮರುಳೆ 6 ನಿಂದಾಪವಾದ ಘಟಿಸುವುದೈಸೆ ಇದರಿಂದಮುಂದೆ ಮುಕ್ತಿಯು ನಿಮಗೆ ಸಾಧ್ಯವಹುದೆತಂದೆ ಶ್ರೀ ಕಾಗಿನೆಲೆಯಾದಿಕೇಶವ ನಾಮಒಂದೇ ವೈಕುಂಠ ಪದವನೈದಿಪುದಯ್ಯ 7
--------------
ಕನಕದಾಸ