ಒಟ್ಟು 24320 ಕಡೆಗಳಲ್ಲಿ , 137 ದಾಸರು , 9123 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಪ್ಪಾ ಕೇಳೊ ನಿನ್ನ ಗುರುತ ನೀನೆ ತಪ್ಪಿದೆಪ್ಪ | ತುಪ್ಪ ಹಾಲು ಬಿಟ್ಟು ನೀ ಅಡವಿಯ ಸೊಪ್ಪು ಮೆಲಬ್ಯಾಡಪ್ಪ ಪ ಅನುದಿನ ನೆನೆದು ಮಾಡುವ ಕರ್ಮವು ನಿನಗಿಲ್ಲಪ್ಪ | ಚಿನುಮಯಾತ್ಮಕ ಬ್ರಹ್ಮನು ನೀನು ಅನುಮಾನ ಇದಕಿಲ್ಲಪ್ಪ 1 ನಿತ್ಯ ಬೋಧಾಮೃತವ ಕುಡಿಯಪ್ಪ | ನಾದ ಬಿಂದು ಕಲಾತೀತರು ಹಾಡುವ ಪದವ್ಯಾಕಪ್ಪ | ಸಾಧು ಪುರುಷರು ಹೋದ ಹಾದಿಯ ಹಿಡಿದು ಮುಕ್ತಿ ಪಡೆಯಪ್ಪ 2 ಇಂದು ನಾಳೆ ಎಂಬುವದೊಂದು ಸಂಶಯ ನಿನಗೆ ಬ್ಯಾಡಪ್ಪ | ಕುಂದು ಕೊರತೆಯು ಇಲ್ಲಾತನಿಗೆ ಆನಂದವೆ ಸ್ವಾದವಪ್ಪ | ಬಂದು ಹೋಗಿ ನೀ ಭವಸಾಗರದೊಳು ಬಹು ಪರಿಯಿಂದಲಿ ನೊಂದೆಪ್ಪ | ತಂದೆಯಾದ ಭವತಾರಕನ ಹೊಂದಿ ದಿನವ ಕಳೆಯಪ್ಪ 3
--------------
ಭಾವತರಕರು
ಅಪ್ರಾಕೃತ ಕಾಯಾ ಪ ಶ್ರೀಕರಾರ್ಚಿತಪಾದ ಲೋಕೇಶ ವಂದಿತ ಅ- ವ್ಯಾಕೃತಾಕಾಶದೊಡೆಯನೆ ವಾಸುಕೀಶಯನ ಸರ್ವೇಶ ನೀನೆ ಪ್ರಾಕೃತ ಸಜ್ಜಮಜ್ಜನ ಕಾರ್ಯಕೆ ಕಾರಣನಯ್ಯ ಏಕೋ ನಾರಾಯಣ ಅ.ಪ ಪ್ರಳಯಕಾಲದಿ ಜೀವರ ನಿಲಯಾ ಕಲ್ಪಿಸಿ ತತ್ತ ನಾಲ್ಕುವಿಧಗಳ ರೂಪಗಳನು ಧರಿಸಿ ಪ್ರಳಯದೊಳಿಂಬಿಟ್ಟು ಎಳೆಸಿದ ಕಟಾಕ್ಷವೀಕ್ಷಣದಿಂದಲಿ 1 ಅಳವು ಇಲ್ಲದ ಸೃಷ್ಟಿಯನೆಸಗಿದೇ ಸಾಧುಜೀವರು ತಮ್ಮ ಸಾಧನ ಪೊರೈಸಿ ಸ್ವದೇಹದೊಳು ಬಂದ ಮೋದದಿಂದಲಿ ನೋಡಿ ಬಾಧಿಪ ಲಿಂಗಭಂಗವೈದಿಹ ಪ್ರಾರಬ್ಧನಾಶನವಿಹ ವಿ- ವಿಧ ಸುಜೀವರ ಮೋದಪಡಿಸಿ ನಿ- ಉದರದೊಳಿಟ್ಟ್ಯಯ್ಯ ಸದಮಲಮೂರುತಿ ಅದುಭುತಮಹಿಮ ಶ್ರೀ ವಾಸುದೇವನೆ2 ಸಂಚಿತ ನೀಗಿ ಪ್ರಾರಬ್ಧ ಶೇಷ ಭೋಗ ಉಳ್ಳವರೆಲ್ಲ ಆಗದೆ ಪೂರ್ಣ ಸಾಧನೆ ನೀಗದೆ ಲಿಂಗಭಂಗ ಆಗ ಬಿಂಬನ್ನ ನೋಳ್ಪರ ನಾಗಶಯನ ನಿನ್ನಂಗದೊಳಿಂಬಿಟ್ಟೆ ಜಾಗುಮಾಡದೆ ನೀನಾಗಲೆ ಜೀವರ ಭೋಗವ ತರಲು ಭಾಗವಗೈಸಿ ಭೂಭಾಗದ ಸಾಧನ ಮಾಳ್ಪ ಜೀವಗಣ ಭಾಗವ ಕಾಯ್ದೆ ಸಂಕರುಷಣ ಮೂರುತೆ 3 ನಿತ್ಯಸಂಸಾರಿಗಳಿಗೆ ಇತ್ತೆ ನಿನ್ನುದರದೊಳು ಮುಕ್ತರೊಡೆಯ ದೇವ ಶಕ್ತನಹುದೋ ನೀ ಮೊತ್ತ ಮೊದಲು ನೀನಿತ್ತು ಪೊರೆದೆ ಬರಲಿತ್ತ ಕಾರಣ ಪ್ರ- ಸುತ್ತಿ ಸುತ್ತಿರುವೆ ಬಿತ್ತರಿಸಲೇನನಿರುದ್ಧಮೂರುತೇ 4 ಅಣುವಿಗೆ ಅಣುವಾಗಿ ಘನತೆ ಘನತಮನಾಗಿ ತೃಣಜೀವರಾದಿ ಬ್ರಹ್ಮಗಣರೆಲ್ಲರೊಳು ಗಣನೆ ಇಲ್ಲದ ಕಾರ್ಯ ಕ್ಷಣಬಿಡದಲೆ ನಡೆಸಿ ಎಣೆಯಿಲ್ಲದಿಹ ಸುಗುಣ ಸಾಂದ್ರನೆ ಪ್ರಣವದೊಳು ಪ್ರತಿಪಾದ್ಯನಾಗಿಹೆ ತ್ರಿಗುಣರಹಿತ ಮುಖ್ಯ ಪ್ರಾಣಾಂತರ್ಗತ ಪ್ರಣತಕಾಮದ ಪೂರ್ಣ ಸಂಪೂರ್ಣ5 ಮುಕ್ತಾಮುಕ್ರಾಶ್ರಯ ಭಕ್ತಪರಾಧೀನ ಶಕ್ತಾನೆ ಸರ್ವವೇದೋಕ್ತ ಮಹಿಮಾತೀತ ಉಕ್ತನಾಗಿಹೆ ಪುರುಷಸೂಕ್ತಾದೊಳಪ್ರಮೇಯ ಶಕ್ತಿಯನರಿಯರು ಅಜಭವಾದ್ಯರು ಶಕ್ತನೆ ಜೀವನ್ಮುಕ್ತರೌಘ ಸಕ್ತರಾಗಿ ನಿನ್ನ ಸ್ತೋತ್ರವ ಮಾಳ್ಪರು 6 ಶ್ರೀಶಾ ಸರ್ವೋತ್ತಮ ವಾಸ ವೈಕುಂಠಾಧೀಶ ವಾಸವಾದಿ ವಂದಿತ ಭಾಸುರಾಂಗನೆ ವಿಶ್ವಾಸ ನಿನ್ನೊಳಿಟ್ಟ ದಾಸ ಜನರ ಕಾಯ್ವ ಈಶಾವ್ಯಾಸಮಿದಂಸರ್ವಂ ಎಂದೆಂದು ಎಂದು ಉಸುರುವ ವೇದಗಳ್ ಏಸುಕಾಲಕು ಸಾಕಲ್ಯದಿ ವರ್ಣಿಸ ಲೀಶ ಕೋಟಿ ಪ್ರವಿಷ್ಟೆಗೆ ಅಸದಳ 7 ಅಂಗಜಪಿತ ರಂಗ ಮಂಗಳಾಂಗನೆ ಮಾ- ತಂಗವರದ ದೇವ ಗಂಗಾಜನಕ ಕಾಳಿಂಗನಾ ಮದ ಮೆಟ್ಟಿ ಭಂಗಾಗೈಸಿದ ಭುಜಂಗಶಯನ ಎನ್ನಂತಾ- ರಂಗದಿ ನಿಲ್ಲೋ ಇಂಗಿತ ಬಲ್ಲೆ ಶ್ರೀರಂಗಶಾಯಿ ಸಾ- ರಂಗಪಾಣಿ ಕೃಪಾಂಗ ಎನ್ನಯ ಭವಭಂಗಗೈಸಿ ಸ- ತ್ಸಂಗವೀಯೋ ಯದುಪುಂಗವ ಮಂಗಳಮೂರುತಿ ಶೌರೇ8 ಕಾಲ ಜಾಲವ ತಂದೆ ಪಾಲಿಪ ಸಲಹಿಪ ಕರ್ತ ನೀನಲ್ಲದಿ- ನ್ನಿಲ್ಲವಯ್ಯ ಶ್ರೀ ವೇಂಕಟೇಶ ಪ್ರಭೋ 9
--------------
ಉರಗಾದ್ರಿವಾಸವಿಠಲದಾಸರು
ಅಂಬ ಪ ಸನ್ನುತ ಅಂಬ ಅ.ಪ ಪಾತಕ ವಿಪಿನ ಶರ್ವಾಣಿ ಶಂಕರಿ ವಿಶಾಲಾಕ್ಷಿ ತ್ರಿಪುರ ಸುಂದರಿ 1 ದಾಕ್ಷಾಯಣಿ ದಯಯಾಮಾಂ ವೀಕ್ಷಸ್ವಾದ್ಯ ಭವಾನಿ ಅಂಬ 2 ಅಂಬ 3
--------------
ಗುರುರಾಮವಿಠಲ
ಅಂಬಾ ತ್ರಿಪುರ ಸುಂದರೀ ಅದ್ವೈತಕಾರೀ ಸಾಂಬೆ ಪರಬ್ರಹ್ಮಣಿ ಪ ಶುಂಭಾಸುರ ಮರ್ದಿನೀ ಸಹಜಾನಂದೆಕ್ಯವಾಣಿ ತುಂಬುರಗಾನ ಪ್ರಿಯೆ ಮಹಾಮಾಯೆ ಸುಖದಾಯೆ ಸರಸಿಜದಳಾಯೆ ಅ.ಪ. ತ್ರಿದಶ ವಂದಿತೆ ತ್ರಿಮೂರ್ತಿ ತ್ರೈಲೋಕ್ಯಗಾತ್ರಿ ತ್ರಿಗುಣರಹಿತೆ ಪಾರ್ವತಿ ತ್ರಿಪುರ ಪ್ರಹಾರೆ ದೇವೀ ತ್ರಿಶೂಲಧರ ಸಂಜೀವಿ ತ್ರಿಗುಣ ಸೋಮ ಸೂರ್ಯಗ್ನಿ ನೇತ್ರೆ ಶುಭಗಾತ್ರೆ ಸುಚರಿತ್ರೆ ಸನ್ಮುನಿಸ್ತೋತ್ರೆ 1 ಪರತರದೇವಿ ಪರಮಪಾವನ ಪ್ರಭಾವಿ ಪರಮಾತ್ಮ ಸ್ವರೂಪಿಣಿ ಪರಮಾನಂದೆಕ್ಯವಾಣಿ ಪರಿಪೂರ್ಣಭರಿತೆ ಶರ್ವಾಣಿ ಶಿವರಾಣಿ ಫಣಿವೇಣಿ ನಿತ್ಯಕಲ್ಯಾಣಿ 2 ವರಕೊಡಶಾದ್ರಿ ನಿವಾಸೆ ವರÀಸುಪ್ರಕಾಶೆ ವರ ಸಿಂಹಾ ರೂಢೆ ಮಹೇಶೇ ವರದೇ ಶ್ರೀ ಮೂಕಾಂಬಿಕೇ ವಿನುತಾನಂದೈಕ್ಯರೂಪಿ ಗುರುವಿಮಲಾನಂದ ಸ್ವರೂಪಿ ಸುಪ್ರತಾಪಿ ಸ್ತುತಿ ದೀಪಿ ಮಂತ್ರಕಲಾಪಿ 3
--------------
ಭಟಕಳ ಅಪ್ಪಯ್ಯ
ಅಂಬಾ ನಿಖಿಳಲೋಕ ಜನನಿ ಜಗದಂಬಾ ಪ. ನಿಖಿಳಲೋಕಸತಿ ಮುಕುತಿಪ್ರದಾಯಕಿ ಶುಕಶೌನಕಾದಿ ವಿನುತೇ ಕಾತ್ಯಾಯಿನಿ 1 ಆದಿಶಕ್ತಿ ದಿವಿಜಾದಿವಂದಿತೆ ಶಿವೆ ಯಾದವೇಂದ್ರ ದಾಮೋದರಭಗಿನಿ 2 ಕಂಬುಕಂಠಿಣಿ ಸ್ವರ್ಣಕುಂಭಯೋಧರಿ ಅಂಬುಜಾಸನವಿನುತೆ ಕಾತ್ಯಾಯಿನಿ 3 ಸರ್ಪವೇಣಿ ವರಬಪ್ಪ ಪುರೇಶ್ವರಿ ಮುಪ್ಪುರನಾಶನರ್ಧಾಂಗಿ ಕಾತ್ಯಾಯಿನಿ 4 ಸಿರಿಕಾತ್ಯಾಯಿನಿ ಗೌರಿ ಭವಾನಿ ಹರಿ ಲಕ್ಷುಮಿನಾರಾಯಣ ಭಗಿನಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಅಂಬಾ ನಿಖಿಳಲೋಕ ಜನನಿ ಜಗದಂಬಾ ಪ. ನಿಖಿಳಲೋಕಸತಿ ಮುಕುತಿಪ್ರದಾಯಕಿ ಶುಕಶೌನಕಾದಿ ವಿನುತೇ ಕಾತ್ಯಾಯಿನಿ1 ಆದಿಶಕ್ತಿ ದಿವಿಜಾದಿವಂದಿತೆ ಶಿವೆ ಯಾದವೇಂದ್ರ ದಾಮೋದರಭಗಿನಿ2 ಕಂಬುಕಂಠಿಣಿ ಸ್ವರ್ಣಕುಂಭಯೋಧರಿ ಅಂಬುಜಾಸನವಿನುತೆ ಕಾತ್ಯಾಯಿನಿ 3 ಮುಪ್ಪುರನಾಶನರ್ಧಾಂಗಿ ಕಾತ್ಯಾಯಿನಿ4 ಸಿರಿಕಾತ್ಯಾಯಿನಿ ಗೌರಿ ಭವಾನಿ ಹರಿ ಲಕ್ಷುಮಿನಾರಾಯಣ ಭಗಿನಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಅಂಬಾ ನೀ ಹೂವ ಪಾಲಿಸೆÉ ವರ ನೀಡೆ ಶ್ರೀ ಜಗ- ದಂಬಾ ನೀ ಹೂವ ಪಾಲಿಸೆ ಅಂಬಾ ನೀ ಹೂವ ಪಾಲಿಸೆ ಶಂಭು ಶಂಕರನ ರಾಣಿ ರಂಭೆ ಪಾರ್ವತಿ ನಿನ್ನ ಪಾದಾಂಬುಜಕ್ಕೆರಗುವೆ ಪ ಬಳೆಯು ಕರಿಯಮಣಿ ಕೊರಳÀ ಮಂಗಳ ಸೂತ್ರ ಸ್ಥಿರವಾಗಿಯಿರುವಂತೆ ಸರ್ವ ಸಂಪತ್ತು ನೀಡಂಬಾ 1 ಮಕ್ಕಳು ಮನೆ ಭಾಗ್ಯ ತೊಟ್ಟಿಲು ತೂಗುವಂತೆ ಮೃಷ್ಟಾನ್ನ ದಾನ ಮಾಡಲಿಷ್ಟಾರ್ಥದ್ವರಗಳ ಅಂಬಾ2 ರುದ್ರನ ಸತಿಯಳೆ ಬುದ್ಧ್ಯಾತ್ಮಳೆನಿಸುವಿ ಭದ್ರೆ ನಿನ್ನಯ ಮುಡಿಯಲ್ಲಿದ್ದ ಮಲ್ಲಿಗೆಯ ನೀಡಂಬಾ 3 ಇಂತು ಬೇಡುವೆ ನಿನ್ನ ಸಂಪಿಗೆ ಮುಡಿಮ್ಯಾಲಿ- ದ್ದಂಥ ಕುಸುಮದೊಳು ಶಾವಂತಿಗೆ ಸರವ 4 ಭೀಮೇಶಕೃಷ್ಣನ ನಿಜ ಪಾದಭಜಕಳೆ ನೀ ದಯದಿಂದ ಧರ್ಮ ಕಾಮ್ಯಾರ್ಥದ್ವರಗಳ 5
--------------
ಹರಪನಹಳ್ಳಿಭೀಮವ್ವ
ಅಂಬಾ ಮಹೇಶ್ವರ ಮನಮೋಹಿನಿ ಪ ರಮಾವಿನುತ ಹರಿಸಹೋದರೀ ನಮಾಮಿ ಶಂಕರೀ ಲೋಕೇಶ್ವರೀ 1 ಮಾರವೈರಿರಾಣಿ ನೀರಜಾತಪಾಣಿ ಶಾರದೇ ಶರ್ವಾಣಿ ಗೌರಿ ಕಲ್ಯಾಣಿ ಸಾರ ಮಧುರವಾಣಿ ನಾರಿ ಭುಜಗವೇಣಿ ಘೋರದೈತ್ಯ ಸಂಹಾರಿಣಿ ದೇವಿ ರುದ್ರಾಣಿ 2 ಈಶ ಮನೋಹರೆ ಪಾಶಾಂಕುಶಧರೇ ಶ್ರೀಶಿತಿಕಂಠ ವಿಲಾಸ ವಿಹಾರೆ ಕ್ಲೇಶನಾಶಕರೇ ಭಾಸುರ ಮುಕುರೇ ಶ್ರೀಶ ಮಾಂಗಿರಿವಾಸ ತೋಷಣಚತುರೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಅಂಬಾ ಮೈದೋರು ಶಾರದಾಂಬಾನಂಬಿದೆ ನಿನ್ನ ಅಂಬಾ ಮೈದೋರು ಶಾರದಾಂಬಾಪತಾಯೆ ಕಮಲಾಸನಜಾಯೆ ನ'ುಸಿದೆ ನಿನ್ನತಾಯೆ ಬಿಡದೆನ್ನನಸೂಯೆ ರಾಗಾದಿಗಳಿಂನೋಯೆ ನೋಡದಿಹರೆ ಮಾಯೆ ಬೇಡಿದವರ'ೀಯೆ ಪಾಪಕರ್ಮಗಳು ಬೇಯೆ ದಾರಿದ್ರವುಸೀಯೆ ಸರ್ವಲೋಕಪ್ರಿಯೆ ಕೃಪಾಲಯೆ 1ಮರತು ನಿನ್ನ ಧ್ಯಾನವ ಬೆರತು ಸತಿಸುತರೊಳು ಕರ್ಮಕಾಮ್ಯವ ಮಾಡಿ ಮರೆತು ಪೋಗಿ ಸುಖವುನರತು ಮೈಯೆಲ್ಲ ಮೋಹತೊರದ ನೊಂದೆನಿದಕೆಹೊರತು ನಾನಿನಿಸು ಪಾಪ ಬರತು ಪೋಗಲಿದರಿತು ಭಕ್ತಿಯ ಭಕ್ತ ಸರಿತೂಕದವನೆ ನೀನು2ಬಂದು ಚಿಕನಾಗಪುರದಿ ನಿಂದು ವರವೆಂಕಟಗಿರಿಚಿಬಂಧು ವಾಸುದೇವಾರ್ಯನೆಂದು ಜನರ ದುರಿತದಂದುಗವಳಿದು ಬಾರೆಂದು ಕರೆದು ಜ್ಞಾನಸಿಂಧು'ನೊಳು ಗೀತಾರ್ಥ'ದೊಂದು ನಿನಗೆ ಸಾಕೆಂದು ಧನ್ಯತೆಯನು ಹೊಂದುಯೆನಿಸಲೆಂದೆಂದೂ 3
--------------
ತಿಮ್ಮಪ್ಪದಾಸರು
ಅಂಬಾ ಸರಸ್ವತೀ ದೇವಿ ಜಗ- ದಂಬಾ ಸರಸ್ವತೀ ದೇವಿ ಪ. ಅಂಭೋಜನಯನೆ ರೋ- ಲಂಬಕುಂತಳೆ ಜಗ . . . . ಅ.ಪ. ರುದ್ರಾದಿ ಸುರಕುಲ ಸಿದ್ಧಿಪ್ರದಾಯಕಿ ಶುದ್ಧ ಸತ್ವಕಲಾಪೆ ಶ್ರದ್ಧಾಭಕ್ತಿಸ್ವರೂಪೆ 1 ಮಾತ್ರಾಸ್ವರವರ್ಣಮಾನಿ ವಾಣಿ ಕಲ್ಯಾಣಿ ಸೂತ್ರಾರ್ಥಬೋಧಿನಿ ವಿಧಾತನ ರಾಣಿ 2 ಕ್ಷೀರಾಬ್ಧಿಶಾಯಿ ಲಕ್ಷ್ಮೀನಾರಾಯಣನ ಕರು- ಣಾರಸಪೂರೆ ಸುವಿಚಾರೆ ಗಂಭೀರೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಅಂಬಾ ಸರಸ್ವತೀ ದೇವಿ ಜಗ- ದಂಬಾ ಸರಸ್ವತೀ ದೇವಿ ಪ. ಅಂಭೋಜನಯನೆ ರೋ- ಲಂಬಕುಂತಳೆ ಜಗ . . . . ಅ.ಪ. ರುದ್ರಾದಿ ಸುರಕುಲ ಸಿದ್ಧಿಪ್ರದಾಯಕಿ ಶುದ್ಧ ಸತ್ವಕಲಾಪೆ ಶ್ರದ್ಧಾಭಕ್ತಿಸ್ವರೂಪೆ 1 ಮಾತ್ರಾಸ್ವರವರ್ಣಮಾನಿ ವಾಣಿ ಕಲ್ಯಾಣಿ ಸೂತ್ರಾರ್ಥಬೋಧಿನಿ ವಿಧಾತನ ರಾಣಿ 2 ಕ್ಷೀರಾಬ್ಧಿಶಾಯಿ ಲಕ್ಷ್ಮೀನಾರಾಯಣನ ಕರು- ಣಾರಸಪೂರೆ ಸುವಿಚಾರೆ ಗಂಭೀರೆ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಅಂಬೆ ಶಿರಿ ವಿಹಾರಾ | ಜಗದಂಬೆ ಶಿರಿ ವಿಹಾರಾ | ಜಯ | ಶ್ರೀ ಬಿಂಬ ಪ್ರಾಣಾದಿ ರೂಪಿ ಬಹುರೂಪಿ ಪ ಜನಿತ ಪಾದ | ಶ್ರೀ ಕುಮದಾಪ್ತ ಕುಲಜ | ಭೋಸುದೀಪ್ತ ಅನಂತ ಅಚಿಂತ್ಯ 5Àುಹಿಮೋಪೇತ ಸುವ್ಯಾಪ್ತಅ.ಪ. ತುಂಬಿದಾಂಗ | ಸಿಂಧುಜೆ ಶಿರಿ ಸು | zs5iÁ | ಪ್ರತಿಬಿಂಬ ನೆನಿಪ | ಜಂಭಾರಿಯಾ | ಪ್ರೇಮಾ | ಸ್ಪದಕಂಬುಧರ ಘನ | ಶ್ಯಾಮಾ ವರ್ಣ ಸ | ನ್ನಾಮಾಜಾಂಬೂನದ | ದಾಮಧರ ಸು | ವೇಷಾ | ದು-ರ್ಗಾಂಬೆ ರಮಣ | ಭಕುತ ಸಂ | ತೋಷಾ | ನೀ-ಲಾಂಬುದಾಭ | ಸತಿರಕ್ಷಕ | ದಯೆ ಭೂಷಾ | ಭೂಮಾಂಬೆ ಸುತನ | ಹರಣ ಹರ ಸು | ವಿಶೇಷಾ | ಶ್ರೀಅಂಬುಜನಾಭ ಗೋವಿಂದ | ಅಂಬೆಯ ಅಗ್ರಜ ಮುಕುಂದನಂಬೀದವರನು ಕಾವ | ಗುರು ಗೋವಿಂದ ವಿಠಲ 1
--------------
ಗುರುಗೋವಿಂದವಿಠಲರು
ಅಭಯವನಿತ್ತು ಕಾಯೊ ರಂಗಯ್ಯ ನಿನ್ನಡಿಗೆರಗುವೆನು ನಾನು ಪ ಭಾಷ್ಯಕಾರರಿಗೆರಗಿ ಶ್ರೀವೇದಾಂತ ಗುರುಗಳಿಗೆ ವಂದಿಸಿ ಪತಿಯ ಪಾದಾರವಿಂದಕೆ ನಮಸ್ಕರಿಸಿ ಲಕ್ಷ್ಮೀಪತಿ ನಿಮ್ಮ ಕರಗಳ ಸ್ತುತಿಸಿ ಬೇಡುವೆ ನಾನು 1 ಮತ್ಸ್ಯಾವತಾರನಾಗಿ ವಾರಿಧಿಯೊಳಗಿರ್ಪ ದೈತ್ಯನ ಕೊಂದು ಹೆಚ್ಚಿನ ವೇದವ ಅಜನಿಗೆ ತಂದಿತ್ತೆ ಭಕ್ತವತ್ಸಲ ನಿಮ್ಮ ಕರಕಮಲಗಳಿಂದ 2 ದೇವದೈತ್ಯರ ಮಧ್ಯದೀ ವಾರಿಧಿಯನ್ನು ವೇಗದಿಂದಲೆ ಮಥಿಸೇ ಆವಸುರರು ಅಪಹರಿಸಿದ ಅಮೃತವ ಸಾಧುಜನಗಿತ್ತ ಆ ವಿನೋದದ ಕರಗಳಿಂದ 3 ಕ್ರೋಢರೂಪವ ಧರಿಸಿ ಹಿರಣ್ಯಾಕ್ಷನ ಕೋರೆಯಿಂದಲೆ ಕೊಂದು ಧಾರುಣಿಯನು ತಂದು ಆದಿಮಾನವಗಿತ್ತ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 4 ಕರುಳ ಬಗೆದ ವನಮಾಲೆಯ ಧರಿಸಿದೆ ಶ್ರೀಪರಮಪಾವನ ನಿಮ್ಮ ಕರುಣಹಸ್ತಗಳಿಂದ 5 ತಟ್ಟನೆ ಯಜ್ಞಶಾಲೆಗೆ ಬಂದು ದಾನವ ಪುಟ್ಟ ಕರಗಳಿಂದ ಅರ್ತಿಯಲಿ ಬೇಡಿದ 6 ಅಂದು ಕ್ಷತ್ರಿಯರ ಕುಲವ ಕೊಡಲಿ ಪಿಡಿದುದ್ದಂಡ ದಿಂದಲಿ ಕಡಿದು ತಂದೆಯ ನುಡಿ ಕೇಳಿ ತಾಯಿ ಶಿರವನರಿದೆ ಇಂದಿರಾಪತಿ ನಿಮ್ಮ ಆನಂದ ಕರದಿಂದ 7 ಶಶಿಮುಖಿ ಸೀತೆಗೋಸ್ಕರ ಧನುವನು ಮುರಿದ ಅಸಮಸಾಹಸ ನಿಮ್ಮ ಕುಶಲಹಸ್ತಗಳಿಂದ 8 ಘೋರ ಪ್ರಳಯಸುರನ ಸಂಹರಿಸಿದೆ ವಾರಿಜಾಕ್ಷನೆ ನಿಮ್ಮ ಧೀರಹಸ್ತಗಳಿಂದ 9 ಮಧುರೆಯೊಳಗೆ ಜನಿಸಿ ಗೋಕುಲಕೈತಂದು ಲೀಲೆಯ ತೋರಿ ಮುದದಿಂದ ಪಾಲಬೆಣ್ಣೆ ಕದ್ದು ಗೋಪಿಯರಲ್ಲಿ ಪಿ ಡಿದೆಳೆದೆ ಉಡುರಾಜನನು ಶ್ರೀಕರದೊಳು 10 ಪತಿವ್ರತೆಯ ವ್ರತವ ಭಂಗವ ಮಾಡಿ ಚಪಳಚಾರನಾಗಿ ಅತಿಶಯವಾದ ರಾಕ್ಷಸರ ಸಂಹರಿಸಿದೆ ಪೃಥವಿ ಪಾಲಿಪ ನಿಮ್ಮ ಚತುರಹಸ್ತಗಳಿಂದ 11 ಕಲ್ಯ್ಕಾವತಾರನಾಗಿ ಕುದುರೆ ಏರಿ ಸಂಹರಿಸುತಲೆ ಬಹು ಮಲಕರಗಳಿಂದ ದೇವ ಪರಮಪುರುಷ 12 ಕಂದ ಧ್ರುವ ತಾನಡವಿಯಲಿ ನಿಂದು ತಪ ಮಾಡಲು ಚಂದದಿ ಮಾಡಲು ಬಂದು ಸೇವೆಯನಿತ್ತು ಮತಿಗಾಗಿ [ಅಂದು] ಶಂಖವನೊತ್ತಿದ ಕರದೊಳು 13 ಕಾಲ ಪಿಡಿಯೆ ಗಜೇಂದ್ರ ನಿಮ್ಮ ಸ್ತುತಿಸೆ ಚಕ್ರ ಬಂದ ಕರುಣಹಸ್ತಗಳಿಂದ 14 ಅಂದು ಸುಧಾಮ ತಾನು ಶ್ರೀಹರಿಯ ಮಂದಿರಕೆ ಬರಲು ಚಂದದಿಂದಲೆ ಆತಿಥ್ಯ ಮಾಡಿ ಅವ ಕೊಂಡ ಕರಗಳಿಂದ 15 ದುರುಳ ದುಶ್ಯಾಸನ ಸಭೆಯೊಳು ದ್ರೌಪದಿಯ ಸೀರೆಯೆಳೆಯು ತಿರುವಾಗ ಹಾ ಕೃಷ್ಣ ದ್ವಾರಕಾವಾಸ ಯೆಂದು ಮೊರೆಯಿಡೆ ಕೇಳಿ ಅಕ್ಷಯವೆನುತ ನೆಚ್ಚವನೆಚ್ಚ ಕರದೊಳು 16 ಗ್ರಾಸವ ಬೇಡಲು ಪರಮಪುರುಷ ನೀನೇ ಗತಿಯೆಂದು ದ್ರೌಪದಿ ಮೊರೆಯಿಡೆ ಅಕ್ಷಯವ ಮಾಡಿದ ಕರದೊಳು * 17 ಮಂದಮತಿಯು ಜ್ಞಾನವೂ ನಿಮ್ಮ ಮಹಿಮೆ ಒಂದು ತಿಳಿಯದು ಇಂದಿರೆ ರಮಣ ಶ್ರೀರಂಗನ ದಯದಿಂದ ವಂದಿಸಿ ಬೇಡಿದೆ ಆನಂದಕರಗಹಳನ್ನು 18 ವೇದಶಾಸ್ತ್ರಗಳನ್ನು ಅರಿಯದ ಪಾಮರಸ್ತ್ರೀಜನ್ಮವು ಕಾಮ ಕ್ರೋಧವು ಲೋಭ ಮೋಹದಿಂದಲೆ ಬಿಡಿಸಿ ನಿಮ್ಮ ಪಾದದೊಳಿರಿಸೆನ್ನ ಶ್ರೀನಿವಾಸನೆ ಅಭಯವನಿತ್ತು ಕಾಯೊ 19
--------------
ಯದುಗಿರಿಯಮ್ಮ
ಅಭಾಗ್ಯಾದ ಲಕ್ಷ್ಮಿ ಹೋಗಮ್ಮ ದೊಡ್ಡಮ್ಮ ನೀ ಪ ಪೀಡೆಕಾಲುಗಳ ಮುಚ್ಚುತ ನೀವೋ ಡÉೂೀಡಿ ಪೋಗುತಲಿ ನಿಲ್ಲದೆ ವ್ಯಾಜ್ಯಗ- ಳಾಡುವ ಸ್ಥಳದಲಿ ನೆಲೆಯಾಗುತ ಹಾಳ ಗೋಡೆಯೊಳಿರುತಿಹ ಕತ್ತೆಯಂತೆ 1 ದೀಪದ ನೆರಳಲಿ ಕೋಪಿಯಮನದಲಿ ಲೋಪವಾದಕರ್ಮದಿ ಸಂತತವು ನಾಪರನೆಂಬುವ ಮಾಢನಲ್ಲಿ ನಿ- ವ್ರ್ಯಾಪಾರಿಯ ಚಿತ್ತದಿ ಯಾವಾಗಲು 2 ಪಾದ ಗದರಿಸುತಾಡುವ ಬಿರುನುಡಿಯಲಿ ನಿಂ- ದ್ಯದ ಮಾತಾಡುವವರÀ ಬಾಯಲಿನೀ ಮುದದೊಳಿದ್ದು ಅಜ್ಞಾನವ ಪಾಲಿಸೆ 3 ಪ್ರತಿದಿನದಲಿ ಅಳುತಿಹ ಸಂಸಾರದಿ ನೀ ಪತಿಯೊಡನವರೊಳಿರುತ ಮೂರ್ಖರಲಿಯ- ನೃತವಾಡಿಸಿ ನರಕವ ಪೊಂದಿಸಲು 4 ಮರವೆ ಸುಷುಪ್ತಿಯು ಬಹುವಿಧ ಮೋಹವು ನೆರೆನಂಬಿದವರಿಗೀವುತ ನೀಹಗ- ಲಿರುಳು ಕಲಿಯೊಡನೆ ಯೆಡೆಬಿಡದಲ್ಲಿಗೆ 5 ಹಾಳುಮಾಡಿಕೊಂಬುವ ಜನಗಳು ನಿ- ವೂಳಿಗವನು ಕೈಕೊಳ್ಳುತ ಬಿಡದೆ 6 ಗುರುರಾಮ ವಿಠಲನ ಶರಣ ಜನರ ಕ- ಣ್ದೆರದು ನೋಡದಿರು ಬೇಡುವೆ ನಿನ್ನನು ನಿರುತವು ನಿರ್ದಯ ಮಾಡುತ ದುರುಳರ ಪರಮ ಕೃಪಾದೃಷ್ಟಿಯಲಿ ನೋಡಲು 7
--------------
ಗುರುರಾಮವಿಠಲ
ಅಭಿಮಾನ ಕಳೆವಂಥ | ಸುಲಭ ಮಾರ್ಗವನೇ |ಪ್ರಭುವೆ ಹರಿ ನಿನ್ನ ಸ್ಮøತಿ | ಸರ್ಬದಲಿ ಈಯೋ ಪ ಕರ್ಮ | ಸೃಷ್ಟಿ ನಡೆಸುವಲಿ |ಇಷ್ಟು ತತ್ವೇಶರನು | ಸುಷ್ಠು ಕರ್ಮವ ನಡೆಸೆಭ್ರಷ್ಟ ಎನ್ನಿಂದೆಂಬ | ಕರ್ತೃತ್ವದಲ್ಲಿರುವಾ 1 ಕರ್ಮ ಕರ್ಮ ನಾಮಕನೇ 2 ತನುನಿಷ್ಠ ತತ್ವೇಶರ | ಗಣಿತದ ಕರ್ಮಗಳತನು ತಮ್ಮ ಇಂದ್ರಿಯದಿ | ಅನುನಯದಿ ಗೈಯ್ಯೋ |ಎನ ತನುವು ಇಂದ್ರಿಯವೆ | ಕಾರಣವು ಎಂಬಂಥಹೀನ ಕಾರಕ ಸ್ವಾಮ್ಯ | ಮಾನವೆಂಬಂಥಾ 3 ಹಲವು ತತ್ವರು ದೇಹ | ದಲಿ ನಿಂತು ಕರ್ಮಗಳಹಲವು ಗೈಯುತ ಹರಿಗೆ | ಒಲಿದು ಅರ್ಪಿಸುತಿರೇ |ಫಲವು ಹಂಚಿಪ ಹರಿಯ | ಫಲಸ್ವಾಮ್ಯ ತಿಳಿಯದಿಹತಿಳಿಗೇಡಿ ಯೆನ್ನ ಭ್ರಮ | ಒಲಿದು ನೀ ಕಳೆಯೋ 4 ಅಹಿಕ ಪಾರತ್ರಿಕವು | ವಿಹಿತ ಸುಖವೆರಡರಲಿಅಹಿಕ ದುಃಖದ ವಿರಲು | ಬಹುದು ಮೋಕ್ಷೆರಿ ಬಾ |ಅಹಿತ ಮತಿ ಕಳೆಯುತ | ಶ್ರೀಹರಿಯೆ ನಿನ್ವೊಲಿಮೆಮಹಿತ ಮೋಕ್ಷದವೆಂಬ | ವಿಹಿತ ಮತಿ ಈ ಯೋ 5 ವಿಷಯದಲಿ ಮೈ ಮೆರೆತು | ವಿಷಯೋಪ ಭೋಗಗಳೆಅಸಮ ಪುರುಷಾರ್ಥಗಳ | ಲೇಸು ಪ್ರದವೆಂಬಾ |ವಿಷಯಾಭಿಮಾನಗಳು | ನಶಿಪಂತೆ ನೀ ಮಾಡಿವಿಷಯಾದಿಗಳಿಗೆಲ್ಲ | ಈಶ ನೀವೆನೆ ತಿಳಿಸೋ 6 ಕಕ್ಕಸದ ಅಭಿಮಾನ | ಷಟ್ಕಗಳ ನೀ ಕಳೆದುಅಕ್ಕರದಿ ತಾಯ್ತನ್ನ | ಮಕ್ಕಳನು ಪೊರೆವಂತೇ |ಲೆಕ್ಕಿಸದಲೆನ್ನಯ | ಲಕ್ಷ ಅಪರಾಧಗಳ ಕ್ಷಮಿಸಿಚೊಕ್ಕ ಗುರು ಗೋವಿಂದ | ವಿಠ್ಠಲನೆ ಸಲಹೋ 7
--------------
ಗುರುಗೋವಿಂದವಿಠಲರು