ಒಟ್ಟು 2086 ಕಡೆಗಳಲ್ಲಿ , 116 ದಾಸರು , 1514 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತ್ರಯೋದಶಿಯ ದಿವಸ ಲೀಲೆ ಪೇಳುವದೇನೆ ಬಾಲೆ ಪರಮಾತ್ಮನ ಲೀಲೆ ಮೂಡ ಗಿರೀಶನು ಪಾಡಿಲ್ಲದ ಪ್ರಭೆ ಗೂಡಿದ ಮಂಟಪಕ್ಕೇರಿದ ವಿಸ್ತರ 1 ಕುಂದಣ ಪೂರಿತವಾ- ಹೇಮದ ಬಂದಿತವ- ಪ್ರಜ್ವಲದಿಂದಿರುವ ಶ್ರೇಷ್ಠವಾಗಿಹ ನಾಗರಹೆಡೆವದನದಿ ಇಷ್ಟದಿ ನೇತಾಡುವ ಸರಮಾಲೆಯ 2 ಶುಕಪಿಕ ಮುಂತಾಗಿಹ ಧ್ರುವಮಂಡಲ ಪರಿಯಲಿ ನೋಡುವರತಿ ಚಂದ ಸುತ್ತಲು ಶೋಭಿಪ ಮುತ್ತಿನ ಬಿಂತಿಯ ಪೊತ್ತು ವಿನೂತನವೆತ್ತಿದ ವಿಸ್ತರ 3 ಮಿನುಗುವದೋರಂತೆ ಕಾಣುವದೆಲೆ ಕಾಂತೆ ಕಾಣೆನು ಇದರಂತೆ ಚಾತುಷ್ಕಂಬದೊಳೂತು ನಡುವೆಯಿಹ ಕೌತುಕವಾಗಿಹನಾಥರದಾತನ 4 ಬರುವನು ಗೋವಿಂದ ಪೊರೆಯುವದಿದು ಚಂದ ಭಕ್ತರ ಕೈಯಿಂದ ಪೊಂಬಣ್ಣದ ದಿವ್ಯಾರತಿ ಕೊಳ್ಳುತ ಇಂಬಾಗಿಹ ಕರುಣಾಂಬುಧಿ ಭರಿತ 5 ವೇದವ ಲಾಲಿಪನು ಪ್ರೇಮನಾಗುತ ಸಂಗೀತಗಳನು ಕೇಳುತ ಸುತ್ತುವನು ತಾ ಮಮಕಾರದಿ ಬರುವನು ಮೇಣು ಕೋಮಲಕಾಯವ ಸಂತತ ಮಂಡಿಸಿ ಸಾಮಗಾನ ಲೋಲೋಪ್ತಿಯೊಳಿರುವನು 6 ಭಕ್ತರ ಸಮುದಾಯಕೆ ತದನಂತರ ಗೈದೇ- ಕಾಂತ ಸೇವೆಯ ತಾ ಕೈಕೊಂಡ ಸಂತಸದಲಿ ಶ್ರೀಕಾಂತನು ಭಕುತರ ಚಿಂತಿತವೆಲ್ಲ ನಿರಂತರ ಕೊಡುವನು 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತ್ರಯೋದಶಿಯ ದಿವಸ ಲೀಲೆ ಪೇಳುವದೇನೆ ಬಾಲೆ ಪರಮಾತ್ಮನ ಲೀಲೆ ಮೂಡ ಗಿರೀಶನು ಪಾಡಿಲ್ಲದ ಪ್ರಭೆ ಗೂಡಿದ ಮಂಟಪಕ್ಕೇರಿದ ವಿಸ್ತರ1 ಕುಂದಣ ಪೂರಿತವಾ- ಹೇಮದ ಬಂದಿತವ- ಪ್ರಜ್ವಲದಿಂದಿರುವ ಶ್ರೇಷ್ಠವಾಗಿಹ ನಾಗರಹೆಡೆವದನದಿ ಇಷ್ಟದಿ ನೇತಾಡುವ ಸರಮಾಲೆಯ2 ಶುಕಪಿಕ ಮುಂತಾಗಿಹ ಧ್ರುವಮಂಡಲ ಪರಿಯಲಿ ನೋಡುವರತಿ ಚಂದ ಸುತ್ತಲು ಶೋಭಿಪ ಮುತ್ತಿನ ಬಿಂತಿಯ ಪೊತ್ತು ವಿನೂತನವೆತ್ತಿದ ವಿಸ್ತರ3 ಮಿನುಗುವದೋರಂತೆ ಕಾಣುವದೆಲೆ ಕಾಂತೆ ಕಾಣೆನು ಇದರಂತೆ ಚಾತುಷ್ಕಂಬದೊಳೂತು ನಡುವೆಯಿಹ ಕೌತುಕವಾಗಿಹನಾಥರದಾತನ4 ಬರುವನು ಗೋವಿಂದ ಪೊರೆಯುವದಿದು ಚಂದ ಭಕ್ತರ ಕೈಯಿಂದ ಪೊಂಬಣ್ಣದ ದಿವ್ಯಾರತಿ ಕೊಳ್ಳುತ ಇಂಬಾಗಿಹ ಕರುಣಾಂಬುಧಿ ಭರಿತ5 ವೇದವ ಲಾಲಿಪನು ಪ್ರೇಮನಾಗುತ ಸಂಗೀತಗಳನು ಕೇಳುತ ಸುತ್ತುವನು ತಾ ಮಮಕಾರದಿ ಬರುವನು ಮೇಣು ಕೋಮಲಕಾಯವ ಸಂತತ ಮಂಡಿಸಿ ಸಾಮಗಾನ ಲೋಲೋಪ್ತಿಯೊಳಿರುವನು6 ಭಕ್ತರ ಸಮುದಾಯಕೆ ತದನಂತರ ಗೈದೇ- ಕಾಂತ ಸೇವೆಯ ತಾ ಕೈಕೊಂಡ ಸಂತಸದಲಿ ಶ್ರೀಕಾಂತನು ಭಕುತರ ಚಿಂತಿತವೆಲ್ಲ ನಿರಂತರ ಕೊಡುವನು7
--------------
ತುಪಾಕಿ ವೆಂಕಟರಮಣಾಚಾರ್ಯ
ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಗುರುನಾಥ ಬಾಹ್ಯಾಂತ್ರ ಪರಿಪೂರ್ಣ ನೀನೆ ಸದೋದಿತ ಸಹಕಾರ ನಿಜವಸ್ತು ನೀನೆ ಅಖಂಡಿತ ಗುಹ್ಯ ತಿಳಿಯದೊ ನಿನ್ನ ಸದ್ಗುರು ಸಮರ್ಥ 1 ಸೆರಗ ಸಿಲುಕದೆಂದು ತಿರುಗಿತು ವೇದ ಸರಸ್ವತಿ ಸ್ತುತಿಗೆ ತಾ ತೀರಲಿಲ್ಲ ಬೋಧ ವರಣಿಸಲಿಕ್ಕೆ ಶೇಷ ತಲೆಯು ಬಾಗಿದ ಮೊರೆ ಇಡುತಿಹುದೆಲ್ಲ ನಿನಗೆ ಗೋವಿಂದ 2 ಋಷಿಮುನಿಗಳಿಗೆ ತಾ ಪೆಸರೊಡೆಯದು ತುಸು ಕೊರತೆಲ್ಲ ತಾ ಪಸರಿಸಿಹ್ಯದು ಮಸಿ ಮಣ್ಣಾಯಿತು ಲೋಕ ಹೆಸರಿಗೆ ಬಂದು ದೆಸೆಗೆಟ್ಟಾಯಿತು ಬಹಳ ಉಸುರೊಡಿಯೆಂದು 3 ಮಾಡದ ಮಾಡಿತು ಲೋಕ ನೋಡೊ ನಿನಗಾಗಿ ಬಡದ ಭವಣೆಬಟ್ಟು ಹಿಡಿಯಲಿಕ್ಕೆ ಹೋಗಿ ಕೊಡಲಿಲ್ಲ ನಿಜಗುಟ್ಟು ಇವ್ಹನೀ ಅಡಗಿ ಯೋಗಿ 4 ಇದೆ ಮುಂದಣುವಾದ ನನ್ನದೇನು ಪಾಡು ಸಾಧಿಸಿ ಸದ್ಗುರು ಕೃಪೆ ನೀನೆ ದಂiÀiಮಾಡು ಒದಗಿ ಮಹಿಪತಿ ನೀ ದಯದಿಂದ ನೋಡು ಸದಮಲ ಸುಖವಾದ ಸುಧಾರಸವ ಕೊಡು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತ್ರಿಮೂರ್ತಿಗಳ ಲಾಲಿ ಜೋಜೋ ಬಾಲಕೃಷ್ಣ ಜೋಗುಳವ ಹಾಡುತ್ತ ತೂಗುವೆ ನಾ ಪ. ನವರತ್ನ ಖಚಿತದ ತೊಟ್ಟಿಲ ಕಟ್ಟಿ ನಾಗಸಂಪಿಗೆ ಜಾಜಿ ಮಾಲೆಯನ್ಹಾಕಿ ನಾಲ್ಕುವೇದದ ಸರಪಣಿ ಬಿಗಿದು ನಾಗಶಯನನ ಮಲಗಿಸಿ ಬೇಗ ರಾಗದಿ ಅನುಸೂಯ ಪಾಡಿ ತೂಗಿದಳು ಜೋ 1 ಮುತ್ತು ಮಾಣಿಕ್ಯದ ತೊಟ್ಟಿಲ ಕಟ್ಟಿ ಮುತ್ತು ಪವಳದ ಸರಪಣಿ ಬಿಗಿದು ಮುದದಿ ಮಲ್ಲಿಗೆ ಜಾಜಿ ಪುಷ್ಪವ ಕಟ್ಟಿ ಮುಕ್ತ ಬ್ರಹ್ಮನ ಮಲಗಿಸಿ ಬೇಗ ಅರ್ತಿಲಿ ಅನಸೂಯ ತೂಗಿದಳಾಗ 2 ನೀಲ ಮಾಣಿಕ್ಯದ್ವಜ್ರತೊಟ್ಟಿಲ ಕಟ್ಟಿ ಮೇಲೆ ಕೆಂಪಿನ ಸರಪಳಿ ಬಿಗಿದು ಮಾಲತಿ ಮಲ್ಲಿಗೆ ಮಾಲೆಯ ಕಟ್ಟಿ ನೀಲಕಂಠನ ಮಲಗಿಸಿ ಬೇಗ ಬಾಲನ ಅನಸೂಯ ತೂಗಿದಳಾಗ 3 ಈ ಪರಿಯಿಂದಲಿ ತೂಗುತಿರೆ ತಾಪಸ ಅತ್ರಿಋಷಿಯಾಗ ಬರೆ ಭೂಪರ ತೊಟ್ಟಿಲು ಕಾಣ ಬರೆ ಪರಿ ಶಿಶುಗಳು ಯಾರೆನ್ನುತಾ ಶ್ಚರ್ಯದಲಿ ಸತಿಯ ಕೇಳುತಾ 4 ನಮ್ಮ ಪುಣ್ಯದ ಫಲ ವದಗಿತೆಂದು ಮುನ್ನ ತ್ರಿಮೂರ್ತಿಗಳು ಶಿಶುರೂಪದಿ ಬಂದು ತನ್ನ ಪತಿಯ ಕೂಡ ಅರುಹುತಲೆ ಚಿನ್ನರ ತೂಗುತ್ತ ಹರುಷದಿ ಚೆನ್ನ ಶ್ರೀ ಶ್ರೀನಿವಾಸನ್ನ ತೂಗಿದಳು 5
--------------
ಸರಸ್ವತಿ ಬಾಯಿ
ಥರವಲ್ಲ ಸ್ವಾಮಿ ಥರವಲ್ಲ ಪ. ಥರವಲ್ಲ ಸ್ವಾಮಿ ಈ ತೆರನ ಮಾಡುವುದು ಕರುಣ ಸಾಗರನೆಂಬ ಬಿರುದಿನ್ನು ನಿಲದು ಅ.ಪ. ಊರೊಳಗಿಹ ಜನರೆಲ್ಲರು ಕೂಡಿ ವಾರಿಜಾಕ್ಷನ ದಾಸನೆಂದು ಕೊಂಡಾಡಿ ಸಾರಿಸಾರಿಗೆ ನಿನ್ನ ಕೀರ್ತನೆ ಮಾಡಿ ಪೋರ ಪೇಚಾಡುವನೆಂಬರು ಕೂಡಿ1 ಪಾರಾಯಣದ ಪುಸ್ತಕವ ಕಟ್ಟಿಟ್ಟು ವಾರಿಜನಾಭ ನಿನ್ನಯ ಪೂಜೆ ಬಿಟ್ಟು ಕಾರಿ ಕೆಮ್ಮುತ ಬಿದ್ದಿರುವ ದೊಡ್ಡ ಗುಟ್ಟು ಯಾರ ಮೇಲಿನ್ನು ತೋರಿಸಲೆನ್ನ ಸಿಟ್ಟು 2 ಮೋಹ ಪಾಶದಿ ಮುಸುಕಿ ಕಟ್ಟಿದರೆ ಬಹ ಪಾತಕಗಳಿಗೆಲ್ಲ ನಾನಿದಿರೆ ನೀ ಹದಿನಾಲ್ಕು ಲೋಕೇಶನೆಂದೊದರೆ ದೇಹವ ಬಳಲಿಸಿದರೆ ನಾನೇನ್ಹೆದರೆ 3 ನಂಬಿರೊ ಭಕ್ತ ಕುಟುಂಬಿಯನೆಂದು ಅಂಬುಜಸಂಭವನ್ಯಾಕೆಂದನಂದು ಹಂಬಲಿಸಿದರು ನೀ ದಯದೋರದಿಂದು ಬೊಂಬೆಯೆ ಸರಿಯೆಂದು ಜನರೆಂಬೊ ಕುಂದು 4 ಸರ್ವದೋಷಹರ ಸಾಗರಜೇಶ ನಿರ್ವೇದದಿಂದ ನಾ ನುಡಿದೆನಾಕ್ರೋಶ ಸರ್ವಕಾಲಕು ಸಲಹುವ ನೀನೆ ಶ್ರೀಶ ಶರ್ವಾದಿ ವಂದ್ಯ ಶೇಷಾಚಲವಾಸ 5
--------------
ತುಪಾಕಿ ವೆಂಕಟರಮಣಾಚಾರ್ಯ
ದಯದೋರು| ದಯದೋರು | ದಯದೋರು | ಜನನಿ ಪ ಜಯ ಜಗನ್ಮಾತೆ ನೀ | ದಯದೋರಿ ಪೊರೆ ನೀ ಅ.ಪ ಆದಿ ನಾರಾಯಣಿ | ಮಾಧವಭಗಿನಿ || ಸಾಧುಸುಪ್ರೀತೆ ನೀ| ವೇದವಂದಿತೆ ನೀ 1 ಭುವನಪಾಲಿನಿ ದೇವಿ | ಭುವನವಂದಿತೆ ನೀ || ಭವಭಯಹಾರಿಣಿ | ಭುವನೇಶ್ವರಿ ನೀ 2 ಶಂಖಚಕ್ರಾಂಕಿತೆ | ಶಂಕರಿ ಸುಗುಣಿ | ವೆಂಕಟರಮಣನ | ಪ್ರೇಮದ ಭಗಿನಿ 3
--------------
ವೆಂಕಟ್‍ರಾವ್
ದಯಮಾಡೊ ರಂಗ ದಯ ಮಾಡೊಕೈವಲ್ಯಪತಿ ನಮಗೆ ಕರುಣೆ ಮಾಡೊ ಕೃಷ್ಣ ಪ. ಕುಂತಿ ದೇವಿಯರು ತಂದ ಅನಂತ ಪದಾರ್ಥವ ಶಾಂತ ಮೂರುತಿಯೆ ಕೈಕೊಳ್ಳೊ ಕೃಷ್ಣಶಾಂತ ಮೂರುತಿಯೆ ಕೈಕೊಳ್ಳೊ ಎನುತಲಿ ಕಾಂತೆ ಸುಭದ್ರಾ ನುಡಿದಳು1 ಶ್ರೀದೇವಿಯರಸನ ಪಾದವ ತೊಳೆದರು ಕ್ಯಾದಿಗೆ ಗಂಧ ತುಳಸಿಕ್ಯಾದಿಗೆ ಗಂಧ ತುಳಸಿ ಅಕ್ಷತೆಯಿಂದ ವೇದಗೋಚರನ ಉಪಚರಿಸಿ 2 ಕರವ ಜೋಡಿಸುತ ಐವರು3
--------------
ಗಲಗಲಿಅವ್ವನವರು
ದರುಶನವಾಯಿತು ಪಂಢರೀಶನ ಪ ದರುಶನದಿಂದಲಿ ಧನ್ಯರಾದೆವು ಸರಸಿಜಭವನ ನಾಭಿಯಲಿ ಪಡೆದವನ ಅ.ಪ ತಂದೆತಾಯಿಯರ ಭಕ್ತಿಯಿಂದ ಸೇವಿಸುವರಿಗೊಲಿದಾ- ನಂದಪದವಿಯನಿತ್ತ ನಂದನ ಕಂದನ 1 ಇಷ್ಟ ಭಕುತ ಕೊಟ್ಟ ಇಟ್ಟಿಗೆ ಮೇಲೆ ನೆಲಸಿ ಶಿಷ್ಟರ ಸಲಹುವ ವಿಠ್ಠಲರಾಯನಂಘ್ರಿ 2 ಉರದಲಿ ಸಿರಿಯನು ಧರಿಸಿ ಸುರರ ಕಾರ್ಯ ನೆರವೇರಿಸುವ ಜಗದ್ಭರಿತನ ಶ್ರೀಪಾದ 3 ನಾಗಶಯನ ನಿಖಿಲಾಗಮವೇದ್ಯನ 4 ಮುಕುತಿದಾಯಕ ಗುರುರಾಮವಿಠಲ ಚರಣ5
--------------
ಗುರುರಾಮವಿಠಲ
ದಶಾವತಾರ ಸ್ತೋತ್ರ ನಾರಾಯಣ ಗೋವಿಂದ | ಹರಿ |ನಾರಾಯಣ ಗೋವಿಂದ |ಪಾರಾಶರ ಸುತನಂದ | ಹರಿ |ನಾರಾಯಣ ಗೋವಿಂದ ಪ ವೇದವ ಕದ್ದೊಯ್ಯಲು ಆತಮನಾ |ಬಾಧಿಸಿ ನಿಗಮವ ತಂದ 1 ದಿವಿಜರು ಚ್ಯುತಬಲರಾಗಿರಲಮೃತವ |ದಿವಿಜರಿಗುಣಿಸಿದ ನಂದಾ 2 ಖಳನು ಭೂಮಿಯ ಕದ್ದೊಯ್ಯಲುತಾ |ಪೊಳೆವ ಕೋರಿಯಲಿ ತಂದಾ 3 ತರುಳನ ಪರಿಪರಿ ಬಾಧಿಸುತಿರಲಾ |ದುರುಳ ದೈತ್ಯನ ಕೊಂದ 4 ಬಲಿಯಪರಾಧವ ನೊಂದೆಣಿಸದೆ ತಾ |ವರಿದು ಬಾಗಿಲಲಿ ನಿಂದ 5 ಕ್ಷತ್ರಿಯ ಬಲವನೆಲ್ಲ ಸವರಿ ನಿ |(ಶ್ಚ) ಕ್ಷತ್ರರ ಮಾಡಿದ ನಂದಾ 6 ವರಮುನಿ ಶಾಪದಿ ಶಿಲೆಯಾಗಿರಲು |ದ್ಧರಿಸಿದ ಪರಮಾನಂದಾ 7 ಮಡದಿ ಗೋಪಿಯರ ಒಡನಾಡಿದ |ಪಾಲ್ಗಡಲ ಶಯನ ಮುಕ್ಕುಂದಾ 8 ತ್ರಿಪುರದ ಸ್ತ್ರೀಯರ ವೃತಗೆಡಿಸಿದ | ವಟು |ವಪು ಮೃಡಮುಖ ಸುರವಂದ್ಯಾ 9 ಪುರುಷೋತ್ತಮ ಯವನರ ಸಂಹರಿಸಿ |ತುರಗವನೇರಿ ನಿಂದಾ 10 ಶ್ರೀಶ ಪ್ರಾಣೇಶ ವಿಠಲ ಈ ಸರ್ವರ |ಪೋಷಕ ನಾನಹುದೆಂದಾ 11
--------------
ಶ್ರೀಶಪ್ರಾಣೇಶವಿಠಲರು
ದಾಮೋದರ ವಿಠಲನೆ | ಸಲಹ ಬೇಕಿವಳಾ ಪ ಸನ್ನುತ ಹರಿಯೆ | ಸ್ವಾಮಿ ಪಾಲಿಪುದೊ ಅ.ಪ. ತರಳೆ ದ್ರೌಪತಿ ವರದ | ಕರಿಯು ಮೊರೆಯಿಡೆ ಕಾಯ್ದವರ ಅಹಲ್ಯೆಯ ಪೊರೆದ | ತರಳ ಧ್ರುವ ವರದಕರುಣದಿಂದಲಿ ಮನದ | ಪರಿಪರಿಯ ಸತ್ಕಾಮಗರೆದು ಪಾಲಿಪುದಿವಳ | ಶಿರಿ ರಾಮಚಂದ್ರಾ 1 ಪತಿ ಸೇವೆ ಪರಳೆನಿಸು | ಗತಿಗೋತ್ರ ನೀನೆನಿಸುಸತತ ನಿನ್ನಯ ನಾಮ | ಸ್ಮøತಿಗೊದಗಿಸೊತತುವೇಶರೊಲಿಮೆಯಲಿ | ಸತತ ಗೈಯ್ಯುವ ಕಾರ್ಯವಿತತವಾಗಲಿ ನಿನ್ನ | ಹಿತಸೇವೆ ಎಂದೂ 2 ಕಾಲ ಕಾಲಕೆ ನಿನ್ನಓಲಯಿಪ ಭಾಗ್ಯದಲಿ | ಕೀಲಿಪುದು ಮನವಾ 3 ಮೂರೆರಡು ಭೇದಗಳ | ತಾರತಮ್ಯವನರುಹಿತೋರೊ ತವರೂಪ ಹೃ | ದ್ವಾರಿಜದನಡುವೇಕಾರುಣಿಕ ನೀನೆಂದು | ಸಾರುತಿವೆ ವೇದಗಳುಮಾರಾರಿ ಸಖ ನಿನ್ನ | ಕಾರುಣ್ಯ ತೋರೋ 4 ಪಾವಮಾನಿಯ ಪ್ರೀಯ | ಭಾವದಲಿ ಪ್ರಾರ್ಥಿಸಲುಪೂವನಿತ್ತಭಯವನು | ಓದಿ ಪಾಲಿಸಿಹೇಕೇವಲಾ ನಂದಮಯ | ಗೋವಿದಾಂಪತಿಯೆ ಗುರುಗೋವಿಂದ ವಿಠ್ಠಲನೆ | ಭಿನ್ನಪವ ಸಲಿಸೋ 5
--------------
ಗುರುಗೋವಿಂದವಿಠಲರು
ದಾರಿ ತೋಚದಲ್ಲಾ ನನಗೆ ಏನು ಪ ನೀರಜಾಕ್ಷ ನಿನ್ನ ನೊಲಿಸುವ ಅ.ಪ ವಿಧಿ ಸಾಧಿಸುತ ವೇದವ್ಯಾಸ ನಿನ್ನ ಪ್ರೀತಿ ಸಾಧಿಸಲು ಮೂಢನಾನು 1 ದಂಡಕಾಲ ಕಳೆದುದಯ್ತು ಮಂಡೆಗೀಗ ಹತ್ತದವು ಫಂಡರೀಶ ಕೃಪೆಯಮಾಡೊ 2 ಹಾಡಿಪಾಡಿ ವಲಿಸಾಲು ರಾಗ ಈ ಭಾವ ತಾಳ ಕಾಣೆ ಕಾಡು ಕೋಣನಂತೆ ಇರ್ಪೆ ನೀಡಿ ಸಲಹೊ ಸರ್ವ ಶಕ್ತಿ 3 ದಾನಧರ್ಮತೀರ್ಥಯಾತ್ರೆ ನಾನು ಮಾಡೆ ಹುಟ್ಟು ಬಡವ ಶ್ವಾನನಂತೆ ತಿರಿದು ಉಂಬೆ ಸಾಧ್ಯವೇನು ನೀನೇ ನುಡಿಯೊ4 ನೆಂಟರಿಷ್ಟರೆಲ್ಲ ಎನ್ನ ಕೈಯ ಬಿಟ್ಟು ಹೋದರೈಯ ಒಂಟಿಯಾಗಿ ಅಲೆದು ಅಲವೆ ಭಂಟನೆನಿಸಿ ಕಾಯಬೇಕೊ 5 ದಾಸನಾಗಿ ಬಾಳೋದಕ್ಕೆ ಆಶೆಯಿನ್ನು ತೊಲಗಲಿಲ್ಲ ಮೊಸವೇನೆ ಬರಿಯ ವೇಷ ದೋಷದೂರ ಶ್ರೀಶವಲಿಯೊ 6 ಹಿಂದಿನವರ ಕಾಯ್ದಬಗೆಯು ಇಂದಿನವರಿಗೆ ಬರಿಯ ಕಥೆಯು ಮಂದನೆನ್ನ ಈಗ ಪಿಡಿದು ಮುಂದು ಮಾಡೊ ನಿನ್ನ ಖ್ಯಾತಿ7 ಶರಣ ಜನರ ಬಿಡನು ಎಂಬ ಖರೆಯಬಿರುದು ನಿನ್ನದೆಂದು ಹಿರಿಯರಿಂದ ಅರಿತುಬಂದೆ ಪರಮ ಕರುಣಿ ಕೈಯ ಪಿಡಿಯೊ8 ನಿನಗೆ ಯೆನ್ನ ಪೊರೆಯೆ ಕ್ಷಮಿಸಿ ದೋಷ ಪೊರೆಯೊ ಬೇಗ ನಮಿಪೆ ನಂಬಿ ನಿನ್ನನೀಗ 9
--------------
ಕೃಷ್ಣವಿಠಲದಾಸರು
ದಾಸನೆನಿಸಿಕೊ ಎನ್ನನು ದಾಸನೆನಿಸಿಕೊ ಹರಿ ಪ ದಾಸನೆನಿಸಿಕೊ ಶ್ರೀಶ ನಿ ಮ್ಮ ಶ್ರೀಪಾದಕಮಲದಾಸನೆನಿಸಿಕೊ ಅ.ಪ ದೇಶ ದೇಶ ತಿರುಗಿ ನಾನು ಆಶಬದ್ಧನಾಗಿ ಇನ್ನು ಏಸುಕಾಲ ಕಳೆಯಲ್ಹೀಗೆ ಭಾಸುರಾಂಗ ದಯವನಿತ್ತು 1 ಏಸು ಜನ್ಮ ಸುಕೃತವಡೆದು ವಾಸನ್ಹಿಡಿದು ನಿನ್ನ ಪಾದ ಆಸೆಯಿಂದ ಬೇಡ್ವೆ ನೆನ್ನ ಧ್ಯಾಸದಲ್ಲಿ ವಾಸಮಾಡಿ2 ಭಕ್ತರಿಷ್ಟಪೂರ್ಣನೆಂದು ನಿತ್ಯ ಬಿಡದೆ ಕೂಗುವಂಥ ಸತ್ಯವೆನಿಸು ವೇದದೋಕ್ತಿ ನಿತ್ಯ ನಿರ್ಮಲಾತ್ಮ ರಾಮ 3
--------------
ರಾಮದಾಸರು
ದಾಸರ ನೋಡಿರೈ ಮನದಭಿಲಾಷೆಯ ಬೇಡಿರೈ | ಭಾಸುರ ಕಾರ್ಪರಾಧೀಶನಾ ಸನ್ನಿಧಿ ವಾಸ ಕೃತನತ ಪೋಷಾ || ಹಿಂದೆ ಪ್ರಲ್ಹಾದನು ಮಾತೆಯ ಗರ್ಭದೊಳಿರಲು ಮುಂದೆ ಈತ ಹರಿಭಕ್ತಾಗ್ರೇಸರನೆಂದು ಮನಸ್ಸಿಗೆ ತಂದು | ಛಂದದಿ ಹರಿಪರನೆಂಬೊ ತತ್ವ ಬೋಧಿಸಿದ ಜ್ಞಾನವ ಗರೆದ || ವೃಂದಾರಕ ಮುನಿಯೆಂದಿವರನು ಭಾವಿಸುತ ಅಭಿವಂದಿಸುತ 1 ಬೋಧ ಸಚ್ಛಾಸ್ತ್ರ ಧರ್ಮವ ಮುದದಿ ತಿಳಿಗನ್ನಡದದಿ ಸತಿ ಸುಳಾದಿ ರೂಪದಿ ವಿರಚಿಸಿ ದಯದಿ ಸಾರುತ ಜಗದಿ | ಬಲುವಿಧ ಭವದೊಳು ಬಳಲುವ ಸಜ್ಚನ ಕೊಲಿದ ಕಲುಷವ ಕಳೆದ | ಇಳೆಯೊಳು ಇವರು ಪೇಳಿದ ವಚನವು ವೇದ ದೊಳಗಿನ ಸ್ವಾದ 2 ಈ ಮಹಾಕ್ಷೇತ್ರದ ಸ್ವಾಮಿ ನರಸಿಂಹ ಪಾದ ಅರ್ಚಕರಾದ | ಭೀಮಾರ್ಯರ ಸದ್ಭಕ್ತಿಗೆ ನೆಲಸಿಹರಿಲ್ಲಿ ಅನುದಿನದಲ್ಲಿ || ನೇಮದಿ ತನ್ನನು ಸೇವಿಪ ಭಕುತರ ಕರವ ಕರುಣದಿ ಪಿಡಿವ || ಜಗದೊಳು ಮೆರೆದ 3
--------------
ಶಾಮಸುಂದರ ವಿಠಲ
ದಾಸರ ಭಾಗ್ಯವಿದೂ | ಮಾನವೀದಾಸರ ಭಾಗ್ಯವಿದೂ || ಪ ಸುರಭೂಸುರ ಸೇವ್ಯವು | ಹರಿಕಥೆ ಅಮೃತವನೆರೆದು ಜನಾಳಿಯ | ಪೊರೆದಿಹುದೆಲ್ಲ ಅ.ಪ. ವೇದೋಪನಿಷದೆಲ್ಲ | ಶೋಧಿಸಿಬೋಧಿಸಿಹರು ಗ್ರಂಥ ||ವಾದಿಗಳನು ತಾ | ವಾದದಿ ಜಯಿಸುತಶ್ರೀದನೆ ಪರೆನೆಂಧ್ಹೇಳಿದುದೆಲ್ಲ 1 ಪಾತ್ರರ ಸಹವೆರಸೀ | ಭುವಿಯಲಿತೀರ್ಥ ಕ್ಷೇತ್ರ ಚರಿಸೀ ||ಗಾತ್ರ ಮಜ್ಜನದಿ | ತೀರ್ಥಂಗಳ ಪಾವಿತ್ರ್ಯ ಗೈಸಿದ ಮಹಿಮೆಗಳೆಲ್ಲ 2 ಇಂದು ಭಾಗದಲ್ಲೀ | ಅಂಕಿತಸಂದಿತು ಪಂಢರಿಲೀ ||ನಂದ ನಂದನ ಗುರು ಗೋವಿಂದ ವಿಠಲನೆಛಂದ ಬಂಧುರದಿಂದ ವಂದಿಪುದೆಲ್ಲ 3
--------------
ಗುರುಗೋವಿಂದವಿಠಲರು
ದಾಸರಾಯ ಪುರಂದರದಾಸರಾಯ ಪ. ಘಾಸಿಗೊಳಿಸದೆ ಇತ್ತು ಕರುಣಿಸಿ ವಾಸುದೇವನ ಕೃಪೆಗೈಸಿರಿ ಅ.ಪ. ದಾಸಕೂಟಕೆ ಮೊದಲನೆ ಗುರು ದೊಷವರ್ಜಿತ ಭಕ್ತರೆನಿಸಿ ಆಶಪಾಶವೆ ತೊರೆದು ಹರಿಯ ದಾಸತನವನು ತೋಷದಲಿ ಕೊಂಡು ಕೇಶವನು ಸರ್ವೋತ್ತಮನು ಎನ್ನುತ ಶ್ರೀಶನ ಗುಣಗಳನೆ ಪೊಗಳುತ ಭೂಸುರರ ರಕ್ಷಿಸುತ ಭಕ್ತರ ಕ್ಲೇಶಗಳೆÉದಂಥ ಗುರುವರ 1 ವೀಣೆ ಕರದಲಿ ಗಾನಮಾಡುತ ಜಾಣತನದಲಿ ಕೃಷ್ಣನೊಲಿಸುತ ಆನಂದದಲಿ ನರ್ತಿಸುತ್ತ ಧ್ಯಾನದಲಿ ಶ್ರೀ ಹರಿಯ ನೋಡುತ ಆನನವ ತೂಗುತ್ತ ವೇದ ವಿ- ಧಾನದಲಿ ಪದಗಳನೆ ರಚಿಸುತ ಮೌನಿವ್ಯಾಸರ ಶಿಕ್ಷೆಯಿಂದಲಿ ದಾನವಾಂತಕ ಹರಿಯನೊಲಿಸಿದ 2 ಪಾಪಿಗಳ ಪಾವನಗೈಸುತ ಶ್ರೀ ಪತಿಯ ಅಂಕಿತವ ನೀಡುತ ಈ ಪರಿಯಲಿ ಮೆರೆದ ಮಹಿಮೆಯ ನಾ ಪೇಳಲಳವಲ್ಲವಿನ್ನು ನಾ ಪಿರಿಯರಿಂ ಕೇಳಿದುದರಿಂ ದೀಪರಿ ನುಡಿದಿರುವೆನಲ್ಲದೆ ಗೋಪಾಲಕೃಷ್ಣವಿಠ್ಠಲನ ರೂಪ ನೋಡುತ ಸುಖಿಸುವಂಥ 3
--------------
ಅಂಬಾಬಾಯಿ