ಒಟ್ಟು 869 ಕಡೆಗಳಲ್ಲಿ , 78 ದಾಸರು , 725 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೇಷವಂದ್ಯ ಹರಿ ವಿಠಲ | ನೀ ಸಲಹೊ ಇವಳಾ ಪ ವಾಸುದೇವನೆ ಕೃಷ್ಣ | ಶ್ರೀಶ ಪುರುಷೋತ್ತಮ ಅ.ಪ. ಸೂಕರ ನೀಚ | ಯೋನಿಗಳಲಿ ಜನಿಸಿಜ್ಞಾನಾನು ಸಂಧಾನ | ಕಾಣದಿದ್ದಾಗ್ಯೂಅನೇಕ ಪೂರ್ವವೆನೆ | ಪುಣ್ಯ ಸಂಚಿತದಿಂದಮಾನವ ಸುಜನ್ಮದೊಳು | ಜನುಮ ಪೊತ್ರಿಹಳೊ 1 ತೈಜಸ ಸೂಚಿ | ವರ ಅಂಕಿತವನಿತ್ತೆಮರುತಾಂತರಾತ್ಮಕನೆ | ಮದ್ಬಿಂಜ ಪೊರೆಯಿವಳಾ 2 ವರಸು ಸೌಭಾಗ್ಯವನೆ | ಪರಿಹರಿಸಿ ದುಷ್ಕರ್ಮನಿರುತ ನಿನ್ನಯ ನಾಮ | ಸ್ಮರಣೆ ಸುಖವಿತ್ತೂಮರುತ ಮತ ತತ್ವಗಳ | ಅರಿವಾಗುವಂತೆಸಗೋಕರಿವರದ ಕಮಲಾಕ್ಷ | ಕಾರುಣ್ಯ ಮಾರ್ತೇ 3 ಪತಿಸುತರು ಹಿತರಲ್ಲಿ | ಕೃತಿರಮಣ ಸುವ್ಯಾಪ್ತಮತಿಇತ್ತು ಪೊರೆ ಇವಳ | ಕ್ಷಿತಿರಮಣ ದೇವಾಮತಿಮತಾಂ ವರರಂಘ್ರಿ | ಹಿತಸೇವೆ ದೊರಕಿಸುತಕೃತ ಕೃತ್ಯಳೆಂದೆನಿಸೊ | ಅತಿ ಚಿತ್ರ ಚರಿತಾ 4 ಕಾವ ಕರುಣಿಯೆ ದೇವ | ಭಾವುಕರ ಪರಿಪಾಲನೀವೊಲಿಯ ದಿನ್ನಿಲ್ಲ | ಆವತ್ರೈ ಜಗದೀನೋವುಸುಖ ದ್ವಂದ್ವಗಳ | ಸಮತೆಯು ಉಂಬಂತೆನಿವೊಲಿಯೊ ದೇವ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶೇಷಾದ್ರಿ ವಾಸಾ ಪಾಲಿಸೋ | ನಿನ್ನ ಶ್ರೀಪಾದದಾಸ ಜನರೊಳಗಾಡಿಸೊ ಪ ಭವ | ಪಾಶಗಳಳಿಯುತವಾಸಿಸೊ ಮನದಾ | ಕಾಶದೊಳಗೆ ಶ್ರೀಶಾವೃಷ್ಣೀಶ ಸರ್ವೇಶ - ಕೃತ ಖಳಕುಲ ಬಹುನಾಶ ಅ.ಪ. ಮದನ ಕೋಟಿ ಲಾವಣ್ಯಾ | ಶ್ರೀ ಭೂ ವರೇಣ್ಯಾಪದುಮೆ ಮನಮೋಹನಾ |ಮುದ ಮನದಲಿ ಮನದವಕಾಶದಿ ಪೊಳೆಸುರಭೂಜ | ರವಿತೇಜ | ಮಹ ಓಜ ವೈರಾಜಾ 1 ತರುಜಾತಿ ಫಲ ಸುಮನಾ | ಸುರರೀ ಭವನಾಧರಿಸಿ ಮೆರೆವ ಸುಜನಾ |ಗಿರಿಯೊಳು ನೆಲೆಸುತ - ಸುರರ ಸೇವೆ ವಿಸ್ತಾರಗಂಭೀರ ಮನೋಹಾರ - ಕೃತಕ್ರತು ಸಮ ಅಪಾರ 2 ಭಾರತೀಶ ಪ್ರಾಣಾಂತರ್ಗತ | ಕಾಮಿತದಾತಾಸಾರ ಸದ್ಗುಣ ಭರಿತಾ ||ನೀರಜಾಕ್ಷ ಗುರು | ಗೋವಿಂದ ವಿಠಲನೆಮೈದೋರೊ | ಮುದಬೀರೊ | ನಿನಗೆಲ್ಲು ಸರಿಯಾರೋ 3
--------------
ಗುರುಗೋವಿಂದವಿಠಲರು
ಶೋಧಿಸದೆ ನಿಜ ಬೋಧಿಪೆನೆಂಬ ಈ ಹಾದಿಯೆಲ್ಲಿ ಕಲಿತಿರೆಲೊ ಎಲೋ ಆಧರವರಿಯದ ವಾದಿಮೂರ್ಖರಿಗೆ ಬೋಧ ಸಿದ್ಧಿಪುದೇನೆಲೋ ಎಲೋ ಪ ಋತುಯಿಲ್ಲದವಳಲ್ಲಿ ರತಿಕಲಹ ಬೆಳೆಸಲು ಸುತರ ಪಡೆವಳೇನೆಲೋ ಎಲೋ ಅತಿಮಂದಮತಿಗಳಿಗಹಿತವ ಬೋಧಿಸೆ ಸು ಗತಿಗೆ ಬಾಹರೇನೆಲೋ ಎಲೋ ಕತ್ತೆಗೆ ಮುತ್ತಿನ ಕಂಟಲಿ ಹೇರಲು ಅರ್ತೀತೆ ಬೆಲೆಯನು ಎಲೋ ಎಲೋ ಕೃತ್ರಿಮರಿಗಾತ್ಮದ ಸ್ಮøತಿಯ ಬೋಧಿಸೆ ದು ರ್ಗತಿಯು ತಪ್ಪೀತೇನೆಲೋ ಎಲೋ 1 ಕೋಣನ ಮುಂದೆ ವೇಣುಬಾರಿಸಲು ಅನಂದತಾಳೀತೇನೆಲೋ ಎಲೋ ಶ್ವಾನನ ಮುಂದೆ ಸುಗಾನ ಮಾಡಲದು ಧ್ಯಾನಕ್ಕೆ ತಂದೀತೇನೆಲೋ ಎಲೋ ಹೀನಸಂಸಾರಿಗೆ ದಾನಿಗಾಂಭೀರ್ಯದ ಖೂನ ತಿಳಿದೀತೇನೆಲೋ ಎಲೋ ಜ್ಞಾನಬೋಧಾಮೃತ ಅಜ್ಞಾನಿಗೆ ಉಸುರಲು ಹೀನಭವ ಬಿಟ್ಟೇತೇನೆಲೋ ಎಲೋ 2 ಆಸೆಗಾರಗೆ ಮಹ ಶಾಶ್ವತ ಪೇಳಲು ಲೇಸಾಗಿ ತೋರೀತೇನಲೋ ಎಲೋ ದಾಸರ ದೂಷಿಪ ನಾಶಮತಿಗೆ ಯಮ ಪಾಶವು ತೊಲಗೀತೇನೆಲೋ ಎಲೋ ಈಶನೊಲಿಮಿಲ್ಲದೆ ನಿಜಬೋಧಲಂಬಿಸಿ ಮುಕ್ತಿ ಅಸನ ಸಿಕ್ಕೀತೇನೆಲೋ ಎಲೋ ಹೇಸಿಜನರಿಗೆಲ್ಲ ಶ್ರೀಶ ಶ್ರೀರಾಮನ ದಾಸತ್ವ ದೊರಕಿತೇನೆಲೋ ಎಲೋ 3
--------------
ರಾಮದಾಸರು
ಶ್ರೀ ಅನಂತಶಯನನ ಸ್ತೋತ್ರ (ಬೆಳಗಾವಿಯ ಶಹಪೂರ ಪೇಟೆಯ ಅನಂತಶಯನನು ಸ್ತುತಿಸುತ್ತ ಅಲ್ಲಿಯ ಕಟ್ಟಿಯ ಆಚಾರ್ಯರನ್ನು ರಕ್ಷಿಸಬೇಕೆಂದು ಪ್ರಾರ್ಥಿಸಿದ್ದು) ನೋಡಿ ನಾನು ಧನ್ಯನಾದೆನು ಅನಂತಶಯನನ |ನೋಡಿ ನಾನು ಧನ್ಯನಾದೆನು ಪ ನೋಡಿ ನಾನು ಧನ್ಯನಾದೆ |ರೂಢಿಯೊಳಗೆ ಮರುತಮಂದಿರ |ರೂಢಿ ಬೆಳಗಾವಿಯೊಳು ನಿಂದು |ಈಡು ಇಲ್ಲದೆ ಮೆರೆವ ದೇವನ ಅ.ಪ. ಮೂಲರೂಪನು ವೈಕುಂಠ ಬಿಟ್ಟು |ಪಾಲ ಸಾಗರ ಶಾಯಿ ಶ್ರೀಲೋಲ |ಕಾಲಕಾಲದಿ ಭಕ್ತರ ಮೌಳಿ |ಪೊರಿಯಬೇಕೆಂದು ನಿಂದನ 1 ಸಂತಾನ ಸಂಪತ್ತು ಜ್ಞಾನ ಸುಬುದ್ಧಿಯ |ನಂತ ಶಯನ ಇವರಿಗಾ |ನೆಂತು ಸುಖವ ನೀವೆನೆಂದು |ಸ್ವಾಂತದೊಳಗೆ ಬಂದು ನಿಂದನ 2 ಶ್ರೀಶ ಪ್ರಾಣೇಶ ವಿಠಲರೇಯ |ಶ್ರೀ ಸಹಿತವಾಸ ವಾಗಿಲ್ಲ |ಭೂಸುರೋತ್ತಮ ಕಟ್ಟಿಯವರನ್ನ |ಪೋಷಿಸಬೇಕೆಂದು ನಿಂದನ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಇಭರಾಮಪುರ ಕೃಷ್ಣಾಚಾರ್ಯರ ಸ್ತೋತ್ರ (ಅಪ್ಪಾವರು) 140 ಇಭರಾಮಪುರ ಅಪ್ಪ ಸೌಭಾಗ್ಯದಾಯಕರೇ | ಶುಭನಾಮ ಶ್ರೀ ಕೃಷ್ಣಾಚಾರ್ಯರೇ ನಮಸ್ತೇ || ಇಭರಾಜ ವರದನಿಗು ದ್ರುಪದಾತ್ಮಜಾಪತಿಗು | ಶುಭಚರಿತ ರಾಘವೇಂದ್ರಾರ್ಯರಿಗು ಪ್ರಿಯ ಪ ಶ್ರೀರಾಮನರಹರಿ ಶ್ರೀಕರನಾರಾಯಣ | ವರಾಹ ಹಯಶೀರ್ಷ ಶ್ರೀಕೃಷ್ಣನ ಪೂರ್ಣಾ || ನುಗ್ರಹಕೆ ಪೂರ್ಣಪಾತ್ರರೇ ನಿಮ್ಮ ಚರಣ | ಅರವಿಂದದಲಿ ನಾನು ಶರಣು ಶರಣಾದೆ 1 ಪಂಚಮುಖ ಹನುಮಂತ ನರಸಿಂಹ ಗರುಡ ವರಾಹ ಹಯವದನ || ಈ ಅಂಜನಾಸುತನನ್ನು ತತ್ ಅಂತಸ್ಥ | ಪಂಚರೂಪ ಶ್ರೀಶನ್ನ ಪೂಜಿಪಮಹಂತ 2 ಅಪ್ಪಾವರೆಂದು ಪ್ರೇಮದಿ ಕರೆಸಿಕೊಂಡು ಅಪ್ಪಮಕ್ಕಳಂತೆ ಕಾಯ್ದಿರಿ ಜನರ || ಅಪ್ಪಾ ಎಂದೀಗಲೂ ಸ್ಮರಿಸಿದರೂ ನಿಮ್ಮ ಸಹ ಶ್ರೀಪ ತಿಮ್ಮಪ್ಪ ಬಂದೆಮ್ಮನು ಕಾಯ್ವ 3 ಮೇಲಿಂದ ಬಿದ್ದವನ್ನ ದೂರ ಇದ್ದರೂ ಕಾಯ್ದು ತಾಳಿಗೋರೂಪ ಪಾದಜ ಧಾನ್ಯ ಉಂಡು || ಜಲದಿಂದ ವಿಪ್ರತಮ ಭಕ್ತವರನನ್ನ ಕಾಯ್ದು | ಜಲಜನಾಭನ ಗಾಯಕನೆಂದು ಆಶಿಸಿದಿರಿ 4 ಬೊಮ್ಮನ ಪಿತ `ಶ್ರೀ ಪ್ರಸನ್ನ ಶ್ರೀನಿವಾಸನಲಿ' ಪ್ರೇಮ ಅಚ್ಛಿನ್ನ ಭಕ್ತಿ ನಿಮಗೆ ದ್ವಿಜವರರೆ || ನಿಮ್ಮವನು ಭುವಿಯಲ್ಲಿ ತೋರಿಹ ಎನ್ನನ್ನು ಪ್ರೇಮಾನುಗ್ರಹದಯದಿ ಪಾಲಿಪುದು ಶರಣು 5 ಪ || ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕುಮಾರ ಚಾರು ಚರಣಕೆ ನಾ ನಮಿಪೆ ಕೃಪಾಕರ ಪ ಸುಂದರಾನನ ಸ್ಕಂಧ ಕಾಮಗೋ ವಿಂದಸುತ ಸುಂದರಾಂಗ ಪ್ರದ್ಯುಮ್ನನೆ ಇಂದಿರೇಶನ ದಯ ತಂದು ನೀ ಒದಗಯ್ಯ ವಂದಿಪೆ ನಿನ್ನರವಿಂದ ಪಾದಕೆ ನಾ 1 ಸೂರ ಪದುಮಾದಿ ಅಸುರರೆಲ್ಲ ನೀ ಮುರಿದು ಪೊರೆದೆಯೊ ಮೂರು ಜಗವ ಎನ್ನ ಘೋರ ಬಾಧೆಗಳನ್ನು ತರಿದು ನೀ ಪೊರೆಯಯ್ಯ ಧೀರ ಉದಾರನೆ ಸುರಸೇನಾಧಿಪ 2 ಸೋಮವದನ ಉಮೇಶಸುತ ಗುಹ ಪ್ರೇಮದಯದಿ ಭ್ರಮಾಕಲುಷ ಕೀಳೊ ಬೊಮ್ಮನ ತಾತ ಪ್ರಸನ್ನ ಶ್ರೀನಿವಾಸ ವಾಮನ ಶ್ರೀಶನ ಪ್ರೇಮ ಸುಪಾತ್ರನೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಗುರು ಜಗನ್ನಾಥಾರ್ಯ ಕರುಣಿಸಯ್ಯ ಮೊರೆಹೊಕ್ಕೆ ತ್ವತ್ವದಕೆÉ ಮರಿಯದಲೆ ಪಿಡಿ ಕೈಯ್ಯ ಪ ಪ್ರಹ್ಲಾದನನುಗ್ರವು ಎಲ್ಲ ಕಾಲದಲಿ ನಿ ನ್ನಲ್ಲಿ ಸಂಪೂರ್ಣವಾಗಿರುವದೆಂಬ ಸೊಲ್ಲು ಲಾಲಿಸಿ ನಿನ್ನ ಪಲ್ಲಾವಾಂಘ್ರಿಗೆ ನಮಿಪೆ ಬಲ್ಲಿದನೆ ಹರಿಧ್ಯಾನದಲ್ಲಿ ನಿಲ್ಲಿಸು ಮನವ 1 ಜನಕಾಗ್ರಜಾತಾರ್ಯ | ನರನಿಸಿ ಜನಿಸುತ ಮಂತ್ರಮುನಿ ನಿಲಯ ಮುನಿವರ್ಯ ಶ್ರೀ ರಾಯರ ಗುಣಸ್ತವನ ವಿರಚಿಸುತ ಪ್ರಣತರಿಗೆ ಪಠಿಸುತ್ತ ಮನದಿಚ್ಛೆ ಪಡೆವುದರೆ ಅನುಕೂಲಿಸಿದ ಜ್ಞಾನಿ 2 ಶ್ರೀಶಾಮಸುಂದರನ ದಾಸವರ್ಯರ ಉಪ ದೇಶವನು ಕೊಂಡು ಉಪಾಸನೆಯನು ಲೇಸಾಗಿ ಬಿಡದೆ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಕೋಸಿಗೆ ವಾಸ 3
--------------
ಶಾಮಸುಂದರ ವಿಠಲ
ಶ್ರೀ ಗುರು ರಾಜರಿಗೆ ಆರುತಿ ಬೆಳಗಿರೆ ಪ ಸೂರಿ ಪರಾಕು ಪರಾಕು |ಗುರು ವಸುಧೇಂದ್ರರ ಕುವರ ಪರಾಕೆಂದು |ಹರದೇರಾರುತಿಯಾ ಬೆಳಗಿರೆ 1 ಪರಾಕು ಪರಾಕು ಪರಾಕು |ಗಂಡುಗಲಿ ಹರಿಯಾ ಪರಾಕೆಂದು |ಪುಂಡಲೀಕದಾರುತಿಯಾ ಬೆಳಗೀರೆ2 ಶ್ರೀಶ ಪ್ರಾಣೇಶ ವಿಠಲದೂತ ಪರಾಕೂ |ಶ್ರೀಶನ ಗುಣಗಳ ತುತಿಪ ಪರಾಕೂ |ಆಶೇಶು ಹೇಮಂತ ಮೆರೆವ ಪರಾಕೂ |ದೇಶಿಕ ಶ್ರೇಷ್ಠ ನಿರ್ದುಷ್ಟ ಪರಾಕೆಂದು |ಸಾಸಿರ ಆರುತಿಯ ಬೆಳಗಿರೆ3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಜಗನ್ನಾಥದಾಸರ ಸ್ತೋತ್ರ ರಾಯರ ನೋಡಿರೈ ದಾಸರಾಯರ ಪಾಡಿರೈ |ಮಾಯ ರಮಣಪ್ರಿಯಾ |ಇವರ ಮನದೊಳಗೆ ಸುಳಿದಾ | ಶ್ರೀರಂಗವಲಿದ ಪ ಮೋದ |ಕಾಣಿಸುವದು ಜಗದೊಳಗೆ, ಇವರಿಗೆ ಕೀರುತಿಯ |ಪುಣ್ಯ ಮೂರುತಿಯು |ಧೇನಿಸಿ ಎರಡನೆ ಜನ್ಮದಿ, ಈತನೆ ಶಲ್ಯಾ |ತತ್ವವ ಬಲ್ಲಾ 1 ಮೂರನೆ ಜನ್ಮದಿ ಕೊಂಡಪ್ಪ, ರಾಜನದೂತ | ಸುಪ್ರಖ್ಯಾತಾ |ಸಾರ ಜನರ ಪ್ರಿಯ ಶ್ರಿ ಪುರಂದರದಾಸಾರ್ಯ |ಸುತ ಆಶ್ಚರ್ಯ |ತೋರುವ ಐದನೆ ಜನ್ಮದಿ ಶ್ರೀಹರಿದೂತ |ಗುರು, ಜಗನ್ನಾಥ 2 ನರಹರಿಯ ತುತಿಪ ವಂದಂಶದಿ ಸಾಂಶರೆಂದುಖಂಬದಿ ನಿಂದು |ಮೆರೆವರು ಊಧ್ರ್ವಪುಂಢವು ತುಲಸಿಯಮಾಲಾ |ಅಕ್ಷ ಸುಶೀಲಾ |ಪರಿಪರಿ ಸೇವಿಪ ಜನರಿಗಭೀಷ್ಟವ ಗೆರೆವಾ |ದುರಿತವ ತರಿವಾ 3 ದೇಶದೇಶವ ಜನರುಗಳೆಲ್ಲರು ಬಂದು |ನೋಡಲು ನಿಂದು |ಸೋಸಿಲಿ ದರುಶನಕೊಳಲವರಿಗೆ ಆನಂದ |ವಾಹುದು ಛಂದ |ಮೀಸಲಹುದು ಮನ, ಕೈಸೇರುವ ಶ್ರೀಪತಿಯೂ |ಹರ ಅಘತತಿಯು 4 ಎಷ್ಟು ಪೇಳಲಿ ಇವರ ಮಹಿಮೆ ತುತಿಸಲ್ಕೆ |ವಶವಲ್ಲ ಮನಕೆ |ನಿಷ್ಠಿಯಿಂದಿವರನು ತುತಿಸಲು ಶ್ರೀವರತುಷ್ಟಾ |ಪಾಪವು ನಷ್ಟಾ |ಸೃಷ್ಟಿಯೊಳಗೆ ಶ್ರೀಶ ಪ್ರಾಣೇಶವಿಠಲನ ದಾಸ |ದಾಸೋತ್ತಂಸ 5
--------------
ಶ್ರೀಶಪ್ರಾಣೇಶವಿಠಲರು
ಶ್ರೀ ಜಂಬುಖಂಡಿ ವಾದಿರಾಜಾಚಾರ್ಯರ ಸ್ತೋತ್ರ ಕಂಡು ಬಹಳ ಧನ್ಯನಾದೆನೋ |ಸಿರಿಮಂಗಳಾತ್ಮರ ಪ ಪಾದ ||ಪುಂಡರೀಕ ವೀಕ್ಷಣ ಮಾತ್ರ ಘ |ತುಂಡುಗೈಸಿ ಪೊರೆವರನ್ನ ಅ.ಪ. ಸುಕೃತ ಜಂಬುಖಂಡಿ ಶ್ರೀನಿ |ವಾಸಾರ್ಯಾಬ್ಧಿ ಸಂಭವ ||ಕೋವಿದಾಗ್ರಣಿಯ ಆದ |ಶ್ರೀ ವಾದಿರಾಜಾಚಾರ್ಯರನ್ನ 1 ಭೂತದಯಾ ಶೀಲ ದಮನಮೋ |ಪೇತರಾಗಿ ಪೃಥ್ವಿಯೊಳು ಶ್ರೀ |ನಾಥನೊಲುಮೆಯನ್ನು ಪಡೆದು |ಖ್ಯಾತ ಭುವನ ಪಾವನ ಮಾಳ್ಪರಾ 2 ಶ್ರೀಶ ಪ್ರಾಣೇಶ ವಿಠಲ ಹೃದಯಾ |ಕಾಶದಲ್ಲಿ ಸಿರಿಯು ಸಹಿತ ||ವಾಸವಾಗಿ ತೋರಿ ಪೊಳೆವ |ಭಾಸುರ ಕೀರ್ತಿಲಿ ಮೆರೆವರನ್ನೆ 3
--------------
ಶ್ರೀಶಪ್ರಾಣೇಶವಿಠಲರು
ಶ್ರೀ ತಾಂದೋಣಿ ವೆಂಕಟರಮಣ ಇಂದು ವೆಂಕಟನ ಕಂಡು ಅನ್ಯರೊಬ್ಬರು ಇವಗೆ ಸರಿಪರರು ಇಲ್ಲ ಪ ಅಮರರಿಗು ಮನುಜರಿಗು ಸರ್ವ ಪ್ರಾಣಿಗಳಿಗು ಸ್ವಾಮಿ ರಕ್ಷಕ ಸರ್ವ ಪ್ರೇರಕನು ದೇವ ಅಮರಾವತಿ ಸರಿತತೀರ ಗಿರಿಯಲಿ ನಿಂತ ಪ್ರೇಮದಿಂದಲಿ ಭಜಿಸೆ ಅಭಯ ವರವೀವ 1 ಎನ್ನ ಕುಲದೇವನು ತಿರುಪತಿ ವೆಂಕಟನು ತಾನೇವೆ ಭಕ್ತರಿಗೆ ಒಲಿಯೆ ಬಂದಿಹನು ಅನಂತ ಗುಣಪರಿಪೂರ್ಣ ತನ್ನ ಸೇವಿಸುವರ ಅನುಗಾಲ ರಕ್ಷಿಸುವ ಅನಿಮಿತ್ತಬಂಧು 2 ಮಧ್ವಮುನಿ ಹೃತ್ಸದನ ದೇವದೇವೋತ್ತಮನು ಮಧ್ವಮುನಿ ಗುರುಸ್ವಾಮಿ ವಿಧಿತಾತ ಶ್ರೀಶ ಶುದ್ಧಕಾರುಣ್ಯನಿಧಿ ಪ್ರಸನ್ನ ಶ್ರೀನಿವಾಸ ಉದ್ಧರಿಪ ಸಂಸ್ಮರಿಸೆ ಇಹಪರದಿ ಎಂದೂ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧ್ರುವಚರಿತ್ರೆ ಪದ ಭಜ ಭಜ ಭಜ ಶ್ರೀ ಗಣರಾಜ ತ್ಯಜ ತ್ಯಜ ತ್ಯಜ ತಾಮಸ ಬೀಜ ಪ ಶಂಕರ ಪುತ್ರ ಶುಭಂಕರ ವರನಿಜ ಪಾದ ಸರೋಜ 1 ಲಂಬೋದರ ಪೀತಾಂಬರಧರ ಕರು ಣಾಂಬುಧಿ ವರ ದೇವ ಮಹೀಜ 2 ಶ್ರೀಶಾನಂತಾಜದ್ರೀಶ ವರಾನ್ವಿತ ದಾಸ ಸುವೃತ ಮಾನಸ ಪೂಜ 3 ಆರ್ಯಾ ರಾಜ ಸುಪೂಜಿತ ರಾಜ ರಾಜ ನೃಪ ರಾಜ್ಯ ಮಾಡುತಾ ಇರುತಿಹನು ದುರ್ಜನ ಪುರುಷರ ತರ್ಜನ ಮಾಡುವ ಸಜ್ಜನ ಆತ್ಮಾರಿಂಗ್ಯತಿ ಪ್ರಿಯನು 1 ದೀನ ಬಂಧು ಬಹುದಾನವಂತ ಉ ಪಾದ ಎಂಬುವ ಹೆಸರು ಮಾನಿತರೊಳಗತಿ ಮಾನಯುಕ್ತರು ಮಾನಿನಿಯರು ಇಬ್ಬರು ಇಹರು2 ಸುರಚಿ ಗಣ್ಯಳು ಪಟ್ಟದರಸಿ ಸುನೀತಿಯು ವಿರಸದಿ ಆರಸಗ ನಿಷ್ಟ್ರಿಯಳು 3 ಮುತ್ತಿನಂಥ ವರಪುತ್ರರಿಬ್ಬರು ಉತ್ತಮನೆಂಬ ಸುರುಚಿಪುತ್ರಾ ಉತ್ತಮ ಗಣ್ಯ ಗುಣೋತ್ತಮ ಧ್ರುವನು ಮತ್ತ ಸುನೀತಿಗೆ ತಾ ಪುತ್ರಾ 4 ಮಂದಿರದೊಳಗೆ ವಸುಂಧರೇಶನು ಛಂದದಿ ತಾ ಸುಖದಿಂದಿರಲು ಒಂದಿನದಲಿ ಬಹುಸುಂದರಸಭಿಯಲ್ಯಾ ನಂದದಿ ಬಂದು ತಾ ಕುಳಿತಿರಲು 5 ಶ್ಲೋಕ ಕೂಡಿಸಿತಾ ತೊಡಿಯಲ್ಲಿ| ಮುದ್ದಿಸಿದಾ ಸಭಿಯಲ್ಲಿ | 1 ಛಂದ ನೋಡಿ ಧ್ರುವನು ತಾ ಹರುಷದಿಂದಲಿ ಓಡಿ ಬಂದನು ರಾಜ ಸಭಿಯಲಿ ಕೂಡಬೇಕು ತಾ ಎಂದು ತೊಡಿಯಲಿ ಇಂದು ಮನದಲಿ 1 ನಾಥ ಭೂಮಿಪಾ ನೋಡಿ ಬಾಲನ ಪ್ರೀತಿಯಿಂದಲ್ಯೊಂದು ಮಾತನಾಡನು ತಾತ ಸುತಗೆ ಬಾಯೆಂದು ಕರೆಯನು ಆತ ಧ್ರುವನು ತಾ ಅನಾಥನಾದನು 2 ಆಗ ಸುರುಚಿ ಬಾಲನ್ನ ನೋಡುತಾ ಬ್ಯಾಗನುದರದಲ್ಲಿ ಬಹಳ ಗರ್ವಿತಾ ಯೋಗ್ಯವಲ್ಲ ಕೂಡಲಿಕ್ಕೆ ತೊಡಿಯಲಿ ಹೀಂಗ ದುಷ್ಟ ಮಾತುಗಳು ಬಾಯಲ್ಲಿ 3 ಪದ ಬಾರದೊ ಧ್ರುವಾ ನಿನಗೆ ಸಿಂಹಾಸನ ಪದವಿ ಬಾರದೊ ಧ್ರುವಾ ನಿನಗೆ ಸಾರಸಿಂಹಾಸನವು ಪ ಏರ ಬೇಕೆಂಬುವಂಥಾ ಘೋರತನವ ಬಿಡು ಅ.ಪ ಅನ್ಯಳ ಮಗನೊ ನೀ ಯನ್ನಲಿ ಜನಿಸಿಲ್ಲಾ ಚೆನ್ನಿಗ ಉತ್ತುಮಾಗಿನ್ನ ನೀ ಸರಿಯೇನೋ 1 ಇಂದಿನಾ ಮನೋರಥಾ ಎಂದಿಗಾವುದಲ್ಲಾ ಕಂದ ಸುನೀತಿಯಾ ಮುಂದ ಕೂಡಾಲಿ ಪೋಗೊ 2 ಇಚ್ಛಿ ಮಾಡಾದಿರೋ ಹೆ ಚಿನ್ನಾ ಶ್ರೀ ವತ್ಸನಾರಾಧನಿ ಮಾಡಿಲ್ಲಾ 3 ವೀರ ಸಿಂಹಾಸನ ಏರಬೇಕಾದರೆ ವಾರಿಜನಾಭ ನಾರಾಧನಿ ಮಾಡೊನೀ 4 ` ಚೆನ್ನಿಗಾನಂತಾದ್ರೀಶ್ನ ' ನೀ ಪೂಜಿಸಿ ಯೆನ್ನಲ್ಲಿ ಪುಟ್ಟಾದೆ ಉನ್ನತ ಪದವಿಯು 5 ಶ್ಲೋಕ ಅತ್ಯಂತ ಘೋರತರ ವಾಕ್ಯಗಳನ್ನು ತಾಳಿ ಸಂತಪ್ತನಾದ ಮನದಲ್ಲಿ ಸುನೀತಿ ಬಾಲಾ ಪುತ್ರನ್ನ ನೋಡಿ ಪಿತ ಸುಮ್ಮನೆ ಕೂತನಾಗಾ ತಾತನ್ನು ಬಿಟ್ಟು ನಡದಾ ಧ್ರುವ ತಾನು ಬ್ಯಾಗಾ 1 ಶ್ವಾಸೋಚ್ಛ್ವಾಸವು ಬಾಯಿಲಿಂದ ಬಿಡುತಾ ಕಣ್ಣಿಂದ ನೀರ ಹೋಗುತಾ ಸೂಸು ಬಾಹುವ ದು:ಖದಿಂದ ಮರಗಿತಾ ರೋದನಾ ಮಾಡುತಾ ಬಂದಾ ತೀವ್ರದಿ ತಾಯಿ ಸನ್ನಿಧಿಯಲ್ಲಿ ಆಳುತಾಗ ತುಟಿ ಬಿರಿಗಿಸಿ ಬಂದಾ ಕಂದನ ಮುಂದ ಕುಳ್ಳಿರಿಸಿ ಸತಿ ಕೇಳ್ಯಾಳು ವಿಚಾರಿಸಿ 2 ಪದ ಕಂದ ನೀ ಬ್ಯಾಗ ಹೇಳೊ ಎಲ್ಲೊ ನಿನಗೆ ಇಂದು ಬಡಿದವರ್ಯಾರು ನಿನಗೆ ಪ ಎಂದು ಪೋಗದಲೆ ತನಯ ನೀನು ಇಂದು ಪೋಗಿದ್ದಿಯೊ ದಾರ ಮನಿಗೆ 1 ಘೋರತರ ದು:ಖವೇನೊ ಈ ಪರಿ ನೀರ ತುಳಕುವ ಕಣ್ಣುಗಳಿಗೆ 2 ಏನಂತ ಪೇಳಲಿ ಸ್ವಲ್ಪ ಇಲ್ಲಾ `ಅನಂತಾದ್ರೀಶನ ' ದಯವು ನಮಗೆ 3 ಪದ ತನಯನ ಕೇಳಲು ಹೀಂಗೆ ಪೌರಜನರು ನುಡದರಲ್ಯಾಗೆ ಅರುಚಿನುಡಿಗಳ ಲ್ಹ್ಯಾಂಗೆ ಆ ಸುರುಚಿ ನುಡಿದಳ್ಹಾಂಗೆ 1 ಕೇಳಿದಳೀ ಪರಿವಾಣಿ ಮನ ಪನ್ನಗ ವೇಣಿ ಸಾಗರ ಬಿದ್ದಳು ತರುಣಿ ತಾ ಕೂಗುತ ಕೋಕಿಲವಾಣಿ 2 ಒಡಲೊಳು ಕಿಚ್ಚುರದಂತೆ ಬಹು ಮಿಡುಕೊಳು ತಾಮನದಂತೆ ನಡುಗುತ ಹಿಮ ಹೊಡದಂತೆ ತಾ ನುಡು(ಡಿ)ವಳು ಕರುಣಾದಂತೆ 3 ಏನು ಮಾಡಲಿ ಇನ್ನಯ್ಯೋ ಬಹು ದೀನಳಾದೆ ನಯ್ಯಯ್ಯೊ ಮಾನದ ಪತಿಯೆನ ಕಾಯೊ ಗುರು ಮಾನಸ ದು:ಖವ ತಿಳಿಯೋ4 ಶರಣು ಕೇಳು ದೇವೇಶಾಯನ್ನೊಳು ಕರುಣಾಬಾರದೆ ಲೇಶಾ ಚರಣಕೆರಗುವೆನು ಶ್ರೀಶಾ ಮರಣ ಕುಡಾ`ನಂತದ್ರೀಶ' 5 ಛಂದ ನಾರಿ ಸುರುಚಿಯಾ ಮಾತು ಮರಿಯದೆ ಘೊರ ದು:ಖದಾಪಾರ ತಿಳಿಯದೆ ನೀರ ಧಾರಿಯ ಕಣ್ಣಲ್ಯುದುರುತಾ ಧೈರ್ಯ ಭಾವ ತಾ ಬಿಟ್ಟಳು ಸರುತಾ 1 ಸುಂದರಾಂಗಿಯು ನೊಂದು ಮನದೊಳು ಕಂದಧ್ರುವನ ತಾ ಮುಂದ ನುಡದಳು ಬಂದ ತಾಪವ ಸಹಿಸಬೇಕಯ್ಯಾ ಇಂದು ಮನಸಿನಾ ಕೋಪ ತಾಳಯ್ಯಾ 2 ಕೇಳು ಬಾಲನೆ ರಾಜಯನ್ನನು ಭಾಳ ತುಚ್ಛವ ಮಾಡುತಿಹನು ಭಾಳ ಲಜ್ಜದಿ ಸುನೀತಿ ಭಾರ್ಯಳೆಂದು ಹೇಳಲಿಕ್ಕೆ ನಾಚುತಿಹನು 3 ಯನಗ ಪುತ್ರ ನೀನಾದ ಕಾರಣಾ ನಿನಗ ಮಾಡುವಾ ಅರಸು ನಿರ್ಘೃಣಾ ಕನಸಿಲಿಲ್ಲವೊ ಯನಗ ಹಿತಕರು ತನಯ ವೈಯಲಿಲ್ಲವೊ ಯನ್ನದೇವರು 4 ಮಿಥ್ಯವಲ್ಲವೊ ಸುರುಚಿ ನುಡಿಗಳು ಸತ್ಯ ವಾದ ಮಾತುಗಳು ನುಡಿದಳು ಪಥ್ಯವೆ ಸರಿ ಪರಮ ನಿನಗಿವೆ ಪೊತ್ತುಗಳಿಯದೆ ಪೋಗರಣ್ಯಕೆ 5 ಗುರ್ವನುಗ್ರಹ ಶಿರಸಿ ಗ್ರಹಿಸೈಯ್ಯಾ ಶರ್ವಸಖಗ ನೀ ಪೂಜಿಮಾಡಯ್ಯಾ ಪೂರ್ವದಲ್ಲಿ ನಿನ್ನ ಮುತ್ಯ ಮಾಡಿದಾ ಸಾರ್ವಭೌಮ ಆಧಿಪತ್ಯ ಏರಿದಾ 6 ಇಂದಿರೇಶನಾ ಬ್ರಹ್ಮ ಪೂಜಿಸಿ ಮುಂದ ಏರಿದಾ ಸತ್ಯಲೋಕ ನೇಮಿಸಿ ಕಂದ ಭಜಿಸು ನೀ ಛಂದದಿ ಧ್ರುವಾ ಮುಂದ ಕೇಶವಾನಂದ ಸುರಿಸುವಾ 7 ಶ್ಲೋಕ ಜನನಿಯಾಡಿದ ವಾಕ್ಯವು ಕೇಳಿ ಆಗಾ ಮನಿ ಆಸಿಯು ಬಿಟ್ಟು ನಡದಾನು ಬ್ಯಾಗಾ ಘನಾರಣ್ಯಕೆ ಪೋಗಲು ಶೋಕಸಿಂಧು ಸಿಂಧು 1 ಆರ್ಯಾ ಇಂದಿರೇಶನಾ ಸುಂದರ ಗುಣಗಳ ಬಂದಾಕ್ಷಣಹೀಗೇಂದು ನುಡದನು ಕಂದಗ ಮುನಿ ಆ ಸಮಯದಲಿ 1 ನಿಲ್ಲೆಲೊ ಬಾಲಕ ಬಲ್ಲಿದರಣ್ಯದಿ ನಿಲ್ಲದೆ ಪೋಗುತಿ ಎಲ್ಲಿಗೆ ನೀ ಯೆಲ್ಲಿಂದ ಬಂದಿ ನೀ ಫುಲ್ಲಲೋಚನ ಯೆಲ್ಲ ಬಳಗ ಬಿಟ್ಟಿಲ್ಲಿಗೆ ನೀ 2 ಕಂದ ಬಿಟ್ಟ ನೀ ಬಂದ ಕಾರಣಾ ಇಂದು ತಾಯಿ ತಂದೆಗಳೆಲ್ಲ ಸುಂದರಾನನಾ ಛಂದದಿ ನುಡಿನೀ ಮಂದಿರ ವೃತ್ತಾಂತಗಳೆಲ್ಲಾ 3 ಶ್ರೇಷ್ಠನಾರದ ನೀ ಅಷ್ಟುಲೋಕವಾ ದೃಷ್ಟಿಲಿ ನೋಡುವಿ ಇಷ್ಟರಿಯಾ ಕೆಟ್ಟ ಮಾತು ಆದುಷ್ಟ ಮಳಾಯಿಯು ಎಷ್ಟು ನುಡದಳೊ ಯನಗÀಯ್ಯಾ4 ಏನು ಪೇಳಲಿ ನಾನು ಮುನೀಶ್ವರ ಮಾನ ಗೇಡಿ ಮಾಡಿದಳೆನ್ನಾ ಮಾನ ಹೋಗಿ ಅಪಮಾನಿತನಾಗಿ ಕಾನನ ಶೇರಿದೆ ನಾ ಮುನ್ನ 5 ಮಾನಪಮಾನಗಳೆನಾದರೂ ಸರಿ ಧ್ಯಾನಕ ತರಬಾರದು ನೀನು ನಾನಾ ಲೀಲಿಯಾ ಮಾಡುವ ಬಾಲಕಗೇನು ಚಿಂತೆ ಕೇಳರೆ(ಳುವೆ?) ನಾನು 6 ಶಾಂತನಾಗು ಗುಣವಂತ ಬಾಲ ನಿ ನ್ನಂತರಂಗ ಚಿಂತಿಯು ಬಲ್ಲೆ ಚಿಂತಿಸಿ ಬಂದ್ಯೋ ನೀ ಸತತ ಸುಖ ಭಗವಂತನನೆ ಬ(ರ?) ಬೇಕಂತಿಲ್ಲೆ 7 ಎಂಥವರಿಗೆ ಭಗವಂತ ದೊರಕ ನಿ ನ್ನಂಥ ಬಾಲನಾ ಗತಿಯೇನು ಕಾಂತನಯನ ಶ್ರೀಕಾಂತ ದೊರಕ ಛೀ ಭ್ರಾಂತಿ ಬಿಟ್ಟು ತ್ವರ ನಡಿ ನೀನು 8 ಪದ ನಡಿನಡಿ ನಡಿ ಧ್ರುವಾನೆ ತಿರುಗಿ ಮನಿಗೆ ನಡಿ ನಡಿ ನಡಿ ದೊಡ್ಡ ಅಡವಿಯು ಸೇರಾದೆ ಹುಡುಗ ಬುದ್ಧಿಯನು ಬಿಡು ತಡಮಾಡದೆ ಪ ಅಂಬಕಗಳಿಗೆ ತಾನು ತೋರಾನು ಪೀ ತಾಂಬರಧರ ದೇವಾನು ಅಂಬುಜನಾಭನ ನಂಬಿ ಭಜಿಸುವಂಥ ಹಂಬಲ ಬಿಟ್ಟು ವಿಳಂಬನ ಮಾಡದೆ 1 ಕಾಲಾವಲ್ಲವೋ ಬ್ಯಾಡಯ್ಯ ವಿಗ(ಹಿ?)ತವಾದ ಕಾಲಕೆ ತಪ ಮಾಡಯ್ಯ ಕಾಲಕಾಲಕೆ ಸ್ತನ ಪಾಲನುಂಬುವ ಸಣ್ಣ ಬಾಲ ಈ ವಚನ ಬಿಟ್ಟು ಕಾಲಗಳಿಯದೆ 2 ದೇಶದೇಶವ ತಿರುಗಿ ಬಹಳ ಕಾಸೋಸಿ ಇಂದಲೆ ಮರುಗಿ ಕ್ಲೇಶಾದಿ `ಅನಂತಾದ್ರೀಶ' ದೊರಕ ಘಾಸಿ ನೀ ಆಗದೆ 3 ಆರ್ಯಾ ಮುನಿಯ ವಚನ ನೃಪತನಯ ಕೇಳಿ ಬಹುವಿನಯದಿಂದಲಿ ಹೀಗೆಂದಾ ಘನದು:ಖದಿ ಯನ್ನ ಮನಿಗೆ ಪೋಗಲಿಕ್ಕೆ ಮನಸುವಲ್ಲದು ವಲ್ಲೆಂದಾ 1 ಪದ ಮನಿಗೊಲ್ಲೆ ವಲ್ಲೆ ಮುನಿರಾಯಾಪ ಬಹುತಲ್ಲಣಗೊಳು ತಿಹ(ಹೆ?)ನೈಯ್ಯಾ ಅ.ಪ ಶೋಣೀತ ವಸ್ತ್ರನೆ ಪಾಣಿವಿನಾದಿತ ವೀಣಾಧರ ಕೇಳಯ್ಯ 1 ದುಷ್ಟಮಳಾಯಿಯ ಕೆಟ್ಟಮಾತು ಒಂದಿಷ್ಟು ಸಹಿಸಲಾರೈಯ್ಯ 2 ದೀನದಯಾಳುವೆ ಮಾನಗಳಿದು ಮು ನ್ನೇನು ಉಳಸಲಿಲ್ಲೈಯ್ಯ 3
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ನರಸಿಂಹ ನರಸಿಂಹ ಪಾಹಿ ಶ್ರೀಶ ಪೊರೆವರಾರಿಲ್ಲ ಬೇರೆ ಸೇವ್ಯ ಪ ಅನಿರುದ್ಧ ನಾ ನಿನ್ನ ಮರೆತೆ ಶುದ್ಧವೈಷ್ಣವತನವನೀಯೊ ಪ್ರಸಿದ್ಧಿ ಅದ್ಭುತಶಕ್ತ ವಿಭುವೆ 1 ಸಾಧ್ಯಸಾಧನವನ್ನು ಬಿಟ್ಟು ಪ್ರದ್ಯುಮ್ನ ನಾ ನಿನ್ನ ಮರೆತೆ ವಿದ್ಯುದೀಶನೆಸ್ವಾಮಿ ಸಲಹೊ ವೇದವೇದ್ಯಾನಂತ ಮಹಿಮ 2 ಸಂಚಿಂತೆ ಸಂಸ್ಮರಣೆ ತೊರೆದು ಸಂಕರ್ಷಣ ನಿನ್ನ ಮರೆತೆ ಸಂಸಾರತಾಪಗಳ 1 ತೊರೆಯೊ ಶಂಕರ ಸುರ ಶಂಭು ಸೇವ್ಯ 3 ವಸನ ಮನೆ ಹಣ ಹೆಣ್ಣು ಹುಡುಕಿ ವಾಸುದೇವನೆ ನಿನ್ನ ಮರೆತೆ ಪಸು ಶಿಶುವಾದೆನ್ನ ಪೊರೆಯೊ ಶ್ರೀಶ ಮುಕ್ತೇಶ ಸರ್ವೇಶ 4 ಅನಿಮಿತ್ತಬಂಧು ಮೂಲೇಶ ಅನ್ಯರ ನಾನರಿಯೆ ನಾರಾಯಣ ವನರುಹಾಸನ ತಾತ ಪ್ರಸನ್ನ ಶ್ರೀನಿವಾಸನೆ ಕೃಷ್ಣವ್ಯಾಸ 5
--------------
ಪ್ರಸನ್ನ ಶ್ರೀನಿವಾಸದಾಸರು