ಒಟ್ಟು 635 ಕಡೆಗಳಲ್ಲಿ , 86 ದಾಸರು , 509 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಶ ಶ್ರೀಹಯವದನ ಮೂರ್ತಿಗೊಂದಿಸುವೆಸಾಸಿರ ನಾಮದ ಒಡೆಯನೀನೆಂದು ಪನಿನ್ನ ನೋಡುವ ಇಚ್ಛೆಯಿಂದ ನಿನ್ನದಾಸರುಇನ್ನು ಗಾವುದ ದೂರದಿಂದ ಬರುತಿಹರುನಿನ್ನ ಭಕ್ತರ ಕೂಡಿ ನಿನ್ನ ಸೇವೆಯ ಮಾಡಿನಿನ್ನ ದರುಶನದಿಂದ ಧನ್ಯರಾಗುವರು 1ಹರಿದಾಸರೆಲ್ಲರೂ ಪರಮಸಂಭ್ರಮದಿಂದಹರಿದಿನದಜಾಗರಹರಿಸ್ಮರಣೆಯಿಂದಪರಮವೈಭವದಿ ತನ್ನ ಸ್ಮರಿಸುತಿಹ ಸುಜನರನುಕರುಣದಿಂದಲಿಕಾವಸಿರಿರಮಣನೆಂತೆಂದು2ಆಪತ್ತು ತಾಪತ್ರಯಂಗಳೆಲ್ಲವುನೀಗಿಶ್ರೀಪತಿಯೆ ರಕ್ಷಿಸು ರಕ್ಷಿಸೆಂದೆನುತಗೋಪತೀ ಕೃಷ್ಣನ್ನಪಾಡಿ ಪೊಗಳುವರನ್ನುಕಾಪಾಡುವನು ಸಕಲಪಾಪಗಳ ಹರಿಸಿ 3ಸೋದೆಯಲಿ ನೆಲೆಸಿರುವ ವಾದಿರಾಜರಿಗೊಲಿದುಆದರದಿ ಅವರಿತ್ತ ಸೇವೆ ಕೈಗೊಂಡುಶೋಭ ಕೃತುನಾಮ ಸಂವತ್ಸರದಿ ಸುಜನರಿಗೆಶೋಭನಂಗಳನಿತ್ತು ನೀದಯದಿ ಪೊರೆವೆ 4ಕಡು ಹರುಷದಿಂದಿತ್ತ ಕಡಲೆ ಹೂರಣ ಸವಿದುದೃಢ ಭಕ್ತರನು ಪೊರೆದೆ ಕಡುಹರುಷದಿಮೃಡನಸಖನಿನ್ನಂಘ್ರಿ ಬಿಡದೆ ಧ್ಯಾನಿಪ ಭಾಗ್ಯತಡೆಯದಲೆ ಪಾಲಿಸೈ ಕಮಲನಾಭ ವಿಠ್ಠಲ 5
--------------
ನಿಡಗುರುಕಿ ಜೀವೂಬಾಯಿ
ಸರಸ್ವತೀ ಶ್ರೀ ಗಾಯತ್ರೀ | ಪರಮೇಷ್ಟಿಜೆ ಸಾವಿತ್ರಿ ||ಸರುವ ವೇದಾತ್ಮಿಕೆ ಪ್ರೀತಿ | ಸರಸ್ವತಾ ದೇವೀ ಪವಾಣೀ ದೇವೀ ಸುವೀಣಾಪಾಣಿ ಕಾಯೆ |ಬ್ರಹ್ಮನ ರಾಣಿ ಗರುಡಾರಾದ್ಯಾರಾಧಿತೇ ||ಜಾಣೆ ತವ ಪದ ಕಂಜಾರೇಣು ಸೇವಿಪೆನಿತ್ಯಪೋಣಿಸಾಬೇಕೆ ಸನ್ಮತಿಯಾ 1ಹಂಸ ವರೂಢೆ ಮಾತೆಕಂಸಾರಿನಿಜದೂತೆಸಂಸೇವಿಸುವರ ದಾತೆ ||ದೋಷರಹಿತೆ ಯನ್ನಾ ಆಶಿ ಪೂರ್ತಿಸೆ ನಿನ್ನಾನಾ ಸೇವಿಸೂವೇನೆಯೆಮ್ಮಾ 2ಶಿರಿ ಪ್ರಾಣೇಶ ವಿಠಲನ ಚರಣಾಂಬುಜ ಷಟ್ಟಾದೆಕರವಮುಗಿದು ಬಿನ್ನೈಸುವೆ ||ಬರವ ನುಡಿಗೆ ವಿಘ್ನತೆ ಬರದಂತೆಪಾಲಿಸವ್ವಾ ಕರಣಾ ಸಾಗರೆ ಪವಿತ್ರೆ3
--------------
ಪ್ರಾಣೇಶದಾಸರು
ಸರ್ವ ಪರಬ್ರಹ್ಮ ಸರ್ವ ಪರಬ್ರಹ್ಮಸರ್ವ ಪರಬ್ರಹ್ಮ ತಾನೆ ಪರಬ್ರಹ್ಮಪಹುದುಗಲ್ಲ ಕಣುಕಲ್ಲ ಬೇಳೇ ಭಕ್ಷ್ಯವು ಅಲ್ಲಅದರೊಳಗಣ ಸಿಹಿ ಅದುವೆ ಪರಬ್ರಹ್ಮ1ತೊಳೆಯಲ್ಲ ಬೀಜಲ್ಲ ತೊಗಟಲ್ಲ ಹಣ್ಣಲ್ಲತಿಳಿಯೆ ರುಚಿಯು ಬೇರೆ ಅದುವೆ ಪರಬ್ರಹ್ಮ2ಹಾಲು ನವ ನೀತವಲ್ಲ ಮೊಸರು ಮಜ್ಜಿಗೆಯಲ್ಲಹಾಲೊಳಗಣಘೃತಅದುವೆ ಪರಬ್ರಹ್ಮ3ದೇಹವಲ್ಲ ತತ್ವವಲ್ಲ ಮನ ಬುದ್ಧೀಂದ್ರಿಯವಲ್ಲದೇಹದೊಳಗಣ ದೇಹಿ ಅದುವೆ ಪರಬ್ರಹ್ಮ4ಸರ್ವಮಾಯೆ ಮಾತುಮಿಥ್ಯಸರ್ವಬ್ರಹ್ಮವೇ ಸತ್ಯಸರ್ವ ಚಿದಾನಂದ ಸರ್ವ ಪರಬ್ರಹ್ಮ5
--------------
ಚಿದಾನಂದ ಅವಧೂತರು
ಸಲ್ಲದು ಸಲ್ಲದು ಜ್ಞಾನ ಬೋಧೆಸುಳ್ಳರಿಗೆ ಮತ್ತು ಶುಂಠರಿಗೆಪಮುಂದೆ ಹೊಗಳಿ ಹಿಂದೆ ನಿಂದಿಸುವರಿಗೆಸಂದೇಹಿಸುತ ಸಜ್ಜನರಿಗೆ ಹಳಿಯುತಮುಂದೆ ಕಾಣದೆ ಮೂರ್ಖತೆಯಲಿ ನುಡಿಯುತಕುಂದುಕೊರತೆಯಹ ಕುಹಕರಿಗೆ1ಬರಡು ಮಾತಿನಲಿಕಾಲಕಳೆಯುತಜರಿದುನುಡಿಯುತಾ ಕೂಡಿ ನಗುವರಿಗೆಇರುಳು ಹಗಲು ಇಹಪರದಿ ಬಿದ್ದಿಹನರರುಗಳಿಗೆ ಮತಿ ನಷ್ಟರಿಗೆ2ಬ್ರಹ್ಮ ನುಡಿಯ ಮೂರು ನುಡಿಯನೆ ಕಲಿತಬ್ರಹ್ಮ ವಿದ್ವಾಂಸರು ವಾದಿಸುವಬ್ರಹ್ಮತಾವಾಗುವ ಪರಿಯೆಂತೋಪರಬ್ರಹ್ಮ ಚಿದಾನಂದನ ಕಾಣದವರಿಗೆ3
--------------
ಚಿದಾನಂದ ಅವಧೂತರು
ಸಿಕ್ಕಿದನೆಹರಿಅಕ್ಕಕ್ಕ ಸುಖದಕ್ಕಿಸಿ ಕೊಳಬನ್ನ್ಯಕ್ಕಕ್ಕಚಿಕ್ಕವನಿವನಲ್ಲಮ್ಮಮ್ಮ ಬಿಡೆಪುಕ್ಕಟೆ ಜಾರುವನಮ್ಮಮ್ಮ ಪ.ಚಲ್ಲಿದ ಹಾಲ್ಮೈಯೆಲ್ಲಾಗಿದೆ ಹೊನ್ಚಲ್ಲಣ ತೊಯಿದಿದೆ ನೋಡವ್ವೆಅಳ್ಳೆದೆಗಾರನು ಅಳುಕುವನೆ ಹಗಲ್ಗಳ್ಳನ ಮಾಟವ ನೋಡವ್ವೆ 1ಮುಂಗುರುಳಿಗೆ ಮೆತ್ತಿದೆ ಕೆನೆಮೊಸರುಕಂಗಳುತುಪ್ಪಾಗಿದೆ ತಂಗಿ ರತ್ನದುಂಗುರ ಬೆರಳು ಮುಂಗೈಯ ಮತ್ತಂಗೈ ಬೆಣ್ಣ್ಯಾಗಿದೆ ತಂಗಿ 2ಪಡಗೊಡಿದು ಬಿಸಳಿಗೆ ನುಗ್ಗಲ್ಲೆಅಡಗ್ಯಡಗ್ಯಾಡುವನಿವನಂತೆಬಡಗಣ ಮೂಡಣ ಪಡು ತೆಂಕಣದಿತುಡುಗನ ಹುಯ್ಯಲು ಘನವಂತೆ 3ಗೋಡೆಯನೇರುವ ಧುಮುಕುವ ತಾ ಸಿಡಿದೋಡುವನಂಜದೆ ಅಲ್ಲಲ್ಲೆನೋಡಲು ಬಾಲಕ ಬಾಲೆಯರ ಪಿಡಿದಾಡ್ಯಾಲಂಗಿಪನಲ್ಲಲ್ಲೆ 4ಈಗಲೆ ಕಟ್ಟುವ ಬಿಟ್ಟರೆ ಇನ್ನಾವಾಗಲಿ ಸಿಕ್ಕುವನೆ ಬಾಲೆಹ್ಯಾಗಾದರೆ ಪ್ರಸನ್ವೆಂಕಟಗಿರಿಭೋಗಿಯ ಹೊಂದುವ ಬಾಲೆ 5
--------------
ಪ್ರಸನ್ನವೆಂಕಟದಾಸರು
ಸುಮ್ಮನೆ ವಿಷ್ಣುವ ಜರಿದೀರಿ ಯಾಕೆಸುಮ್ಮನೆ ಶಿವನಿಂದ್ಯ ಗೈವಿರಿಪಬ್ರಹ್ಮ ಸುಜ್ಞಾನದಿ ಹರಿಹರರಾರೆಂಬಮರ್ಮವರಿತು ಧರ್ಮಾಧರ್ಮ ಯೋಚಿಸದೀಗಾಅ.ಪಗರುಡವಾಹನನು ಶ್ರೀವರನು ನೋಡಿಉರಗಭೂಷಣನು ಗೌರೀಶ್ವರಗೂಗರುಡೋರಗರ ದ್ವೇಷ ಹರಿಹರರೊಳಗುಂಟೆಎರಡು ಮೂರ್ತಿಗಳೇಕ ರೂಪವೆಂದರಿಯಾದೆ1ಸ್ಮರನ ತಾತನು ನಾರಾಯಣನುಕೇಳಿಸ್ಮರನ ವೈರಿಯು ತ್ರಿಗಣೇಶ್ವರನುಹರಿನಿಂದನೆ ಶಿವ ಶಿರದಿ ತಾನ್ ಧರಿಸಿದಹರನ ಲಿಂಗವನಿತ್ಯಪೂಜಿಸಿ ನಮಿಸುವಾ2ಕ್ಷೀರಾಬ್ಧಿ ವಿಷ್ಣುಗೆಸತಿಗೃಹವೊ ಶಿವನನಾರೀ ಮಂದಿರ ಹಿಮಾಲಯವೂನಾರೀ ರಮೆಯ ಹೃದಯದಿ ಧರಿಸಿದವಿಷ್ಣುಮಾರನಂತಕ ಉಮೆಗಿತ್ತನರ್ಧಾಂಗವ3ಬಲಿಯೊಳ್ ಬಾಗಿಲ ಕಾಯ್ದ ಹರಿಯೂ ಬಾಣಗೊಲಿದು ದ್ವಾರದಿ ನಿಂತ ಹರನೂಗೆಲಿದು ತಾ ಅಜಾಮಿಳನ ಸಲಹಿದ ವಿಷ್ಣುಒಲಿದು ಮಾರ್ಕಾಂಡೆಗಂತಕನ ಮರ್ದಿಸೆ ಶಿವ4ಚೋರನೆನ್ನುವಿರಿ ಕೇಶವನ ಬಲೋ-ತ್ಕಾರಿ ಎಂಬಿರಿ ಪರಮೇಶ್ವರನಾನಿರ್ವಾಣಿಬೌದ್ಧನುಶರ್ವದಿಗಂಬರಹರಿಯು ಜಾರನು ಜಗಪೀಠ ಶಂಕರಗೆಂದು5ರುದ್ರಾಕ್ಷಿ ಭಸ್ಮಲೇಪನವು ಶಿವಗೆಮುದ್ರೆಯು ತುಳಸಿಮಣಿ ಸರವುಊಧ್ರ್ವ ಪೌಂಡ್ರಕಗೋಪಿಕೃಷ್ಣಾಜಿನಾಸನರುದ್ರ ಜಡೆಯ ಪಠಿಸು ವ್ಯಾಘ್ರ ಚರ್ಮದಿ ಕುಳಿತು6ಸ್ಮಾರ್ತರ್ ವೈಷ್ಣವರು ಮತ್ಸರದೆ ದ್ವಯಮೂರ್ತಿಯೊಳ್ ಸಮದೆ ಯೋಚಿಸದೇವ್ಯರ್ಥ ಕೆಡುವಿರಿ ಗೋವಿಂದನ ದಾಸರುಸ್ವಾರ್ಥವಾಗದು ಕಾರ್ಯ ಹರನ ಭಕ್ತರುಕೇಳಿ7
--------------
ಗೋವಿಂದದಾಸ
ಸೈಸಲಾರೆನೆಗೋಪಿನಿನ್ನ ಮಗನ ಲೂಟಿ |ಏಸೆಂದು ಪೇಳಲಮ್ಮ ||ವಾಸುದೇವನು ಬಂದು ಮೋಸದಿಂದಲಿ ಎನ್ನ |ವಾಸವಸೆಳಕೊಂಡು ಓಡಿ ಪೋದನಮ್ಮಪದೇವರ ಪೆಟ್ಟಿಗೆ ತೆಗೆದು ಸಾಲಿಗ್ರಾಮ |ಸಾವಿರ ನುಂಗುವನೆ ||ಭಾವಜನಯ್ಯಇದೇನೆಂದರೆ ನಿಮ್ಮ |ಕಾಮದೇವರು ನಾನು ಕೇಳಿಕೊ ಎಂಬನೆ 1ಅಗ್ರೋದಕತಂದು ಜಗುಲಿ ಮೇಲಿಟ್ಟರೆ |ವೆಗ್ಗಳದಲಿ ಕುಡಿವ ||ಮಂಗಳ ಮಹಿಮನ ವಿೂಸಲೆಂದರೆ ನಿಮ್ಮ |ಮಂಗಳಮಹಿಮನ ಅಪ್ಪನಾನೆಂಬುವ 2ಅಟ್ಟಡಿಗೆಯನೆಲ್ಲ ಉಚ್ಛಿಷ್ಟವ ಮಾಡಿ |ಅಷ್ಟು ತಾ ಬಳಿದುಂಬನೆ ||ವಿಷ್ಣು ದೇವರ ನೈವೇದ್ಯವೆಂದರೆ ನಿಮ್ಮ |ಇಷ್ಟದೇವರು ತೃಪ್ತನಾದನೆಂತೆಂಬುವ 3ಋತುವಾದ ಬಾಲೆಯರು ಪತಿಯೆಡೆ ಪೋಪಾಗ |ಕೃತಕದಿಂದಡಗಿಹನೆ ||ಮತಿಗೆಟ್ಟ ಪೆಣ್ಣೆ ಸುಂಕವ ಕೊಡು ಎನುತಲಿ |ಪ್ರತಿಯಾಗಿ ಮಾರನ ಸೂರೆಗೊಂಬುವನೆ 4ಅಚ್ಚಪಾಲು-ಮೊಸರುನವನೀತಮಜ್ಜಿಗೆ |ರಚ್ಚೆಮಾಡಿ ಕುಡಿವ ||ಅಚ್ಚ ಪುರಂದರವಿಠಲರಾಯನ |ಇಚ್ಛೆಯಿಂದಲಿ ನಿಮ್ಮ ಮನೆಗೆ ಕರೆದುಕೊಳ್ಳಿ 5
--------------
ಪುರಂದರದಾಸರು
ಸ್ಕಂದಗುರು ಸ್ಕಂದಗುರು ಸುರ-ವೃಂದ ಮುನಿಜನರು ವಂದಿಪರು ಪ.ಮಂದರಧರಗೋವಿಂದನ ಶರಣರಸಂದೋಹಕಾವ ವೃಂದಾರಕತರು ಅ.ಪ.ತಾಮಸರು ದ್ವೇಷ ಬೇಡುವರುಕಾಮಿತ ಕೇಳ್ವರು ರಾಜಸರುಸ್ವಾಮಿ ಶ್ರೀಹರಿಯ ಭಕ್ತಿಜ್ಞಾನವಪ್ರೇಮದಿ ಕೇಳ್ವರು ಸಾತ್ವಿಕರು 1ವಿಘ್ನಹರನು ನಿನ್ನಗ್ರಜನು ವಿಬು-ಧಾಗ್ರಣಿಯೆನಿಸುವೆಯೊ ನೀನುಉಗ್ರ ತ್ರಿಯಂಬಕತಾತನು ಖ್ಯಾತನುದುರ್ಗಾದೇವಿಯೆಜನನಿನಿರುಪಮಳು2ತಾರಕಾಂತಕ ನಿಶ್ಯೋಕ ಲಕ್ಷ್ಮೀ-ನಾರಾಯಣನಿಗೆಸಖಭೂರಿನಿಗಮಾರ್ಥಸಾರ ಕೋವಿದನೆಧೀರನೆ ವೀರ ಮಹಾರಣಶೂರನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹಣ್ಣು ಕೊಂಬುವ ಬನ್ನಿರಿ ಹರಿದಾಸರುಹಣ್ಣು ಕೊಂಬುವ ಬನ್ನಿರಿ ಪ.ಚೆನ್ನ ಬಾಲಕೃಷ್ಣನೆಂಬಕನ್ನೆಗೊನೆಬಾಳೆಹಣ್ಣು ಅಪಸುತ್ತೇಳು ಲೋಕದಿಸುರರು ಬಿತ್ತಿದ ಹಣ್ಣುಭಕ್ತರ ಬಾಯೊಳು ನೆನೆವ ಹಣ್ಣುಅರ್ತಿಯುಳ್ಳವರೆಲ್ಲ ಕೊಳ್ಳಿ ಬೇಕಾದರೆನಿತ್ಯಮಾಧವನೆಂಬ ಅಚ್ಚಮಾವಿನ ಹಣ್ಣು1ಅಜನ ಪಡೆದ ಹಣ್ಣು ಗಜವ ಕಾಯ್ದ ಹಣ್ಣುನಿಜಮುನಿಗಳಿಗೆ ತೋರಿಸಿದ ಹಣ್ಣುತ್ರಿಜಗವಂದಿತ ಪಾಲ್ಗಡಲೊಡೆಯನೆ ಹಣ್ಣುಸುಜನಭಕ್ತರೆಲ್ಲಕೊಳ್ಳಬನ್ನಿರಿ ಹಣ್ಣು2ತುರವ ಕಾಯ್ದ ಹಣ್ಣು ಉರಗನ ತುಳಿದಾ ಹಣ್ಣುಕರೆದರೆ ಕಂಬದೊಳು ಓಯೆಂಬ ಹಣ್ಣುಮರುಗುವ ಧೃವನಿಗೆ ಪಟ್ಟಗಟ್ಟಿದ ಹಣ್ಣು
--------------
ಪುರಂದರದಾಸರು
ಹರಿದಿನ ಇಂಥ ಹರಿದಿನ ಪ.ಹರಿದಿನದ ಮಹಿಮೆ ಹೊಗಳಲಗಾಧಪರಮಭಾಗವತರಾಚರಣೆಗಾಹ್ಲಾದÀದುರಿತದುಷ್ಕøತ ಪರ್ವತಕೆ ವಜ್ರವಾದಮರುತ ಸದ್ವ್ವ್ರತಕೆಲ್ಲ ಶಿರೋರತ್ನವಾದ ಅ.ಪ.ಭಕ್ತಿಗೆ ಮೊದಲು ವಿರಕ್ತಿ ಬೀಜವೆಂಬಸಕಲ ತಪದೊಳೆಲ್ಲ ಮೇಲೆನಿಸಿಕೊಂಬಮಖಕೋಟಿಗಧಿಕ ಫಲಸ್ಥಿರ ಸ್ತಂಭಮುಕ್ತಿ ಸೋಪಾನ ನಿಧಾನತ್ವವೆಂಬ 1ತ್ವಕ್ ಚರ್ಮ ಅಸ್ತಿ ಮಜ್ಜ ಮಾಂಸರುಧಿರಯುಕ್ತ ಸಪ್ತ ಧಾತುಗಳಿಹ ಶರೀರನಖಕೇಶ ಕಫ ಸ್ವೇದ ಮಲ ಮೂತ್ರಾಗರ ಈನಿಖಿಳಪಾವನ ಮಾಡುವ ನಿರಾಹಾರ2ವರವಿಪ್ರಕ್ಷತ್ರಿಯ ವೈಶ್ಯ ಶೂದ್ರ ಜನರುತರಳಯೌವನ ವೃದ್ಧ ನಾರಿಯರುಕಿರಾತಪುಲತ್ಸ್ಯಾಂದ್ರ ಹೂಣ ಜಾತಿಯವರುಹರಿವ್ರತ ಮಾತ್ರದಿ ಮುಕ್ತಿಯೈದುವರು 3ದ್ವಿಜಗೋವಧ ನೃಪರನು ಕೊಂದ ಪಾಪನಿಜಗುರು ಸತಿಯರ ಸಂಗದ ಪಾಪಅಜಲಪಾನದ ದಿನದುಂಡ ಮಹಾಪಾಪನಿಜನಾಶ ಮೋಕ್ಷ ಪ್ರಾಪ್ತಿಯು ಸತ್ಯಾಲಾಪ 4ಯಾಮಿನಿಯಲಿ ಅನಿಮಿಷದ ಜಾಗರವುಶ್ರೀ ಮದ್ಭಾಗವತ ಶ್ರವಣ ಗೀತಾಪಠಣಪ್ರೇಮವಾರಿಧಿಲಿ ಮುಳುಗಿ ಸಂಕೀರ್ತನೆಯುಧಾಮತ್ರಯದ ಸುಖಕಿದೇ ಕಾರಣವು 5ಅರ್ಧಕೋಟಿ ತೀರ್ಥಸ್ನಾನವೆಲ್ಲ ಅಜಸ್ರಪ್ರಯಾಗ ಕಾಶಿವಾಸವೆಲ್ಲ ಸಹಸ್ರ ಕೋಟಿ ಭೂಪ್ರದಕ್ಷಿಣೆಯೆಲ್ಲಸುಶ್ರದ್ಧೆ ಸಹ ಜಾಗರಕೆ ಸರಿಯಲ್ಲ 6ಪಂಚಮಹಾ ಪಾಪ ಪ್ರಪಾಪವವಗೆವಂಚಕ ಪಿಶುನ ಜನರ ಪಾಪವವಗೆಮಿಂಚುವ ಕ್ಷೇತ್ರವಳಿ ಪಾಪವವಗೆಪಂಚಕವ್ರತ ಪೆತ್ತ ವ್ರತ ಉಲ್ಲಂಘಿಪಗೆ 7ಸರ್ಪಶಯನಗೆ ನೀರಾಜನವೆತ್ತಿ ನೋಡಿಉಪವಾಸದಿ ಭಗವಜ್ಜನ ನೃತ್ಯವಾಡಿಚಪ್ಪಾಳಿಕ್ಕುತ ದಂಡಿಗೆ ಮುಟ್ಟಿ ಪಾಡಿತಪ್ಪೆ ನಾಯಿ ನರಕ ಫಲ ಕೈಗೂಡಿ 8ಶ್ರುತಿಪಂಚರಾತ್ರಾಗಮವು ಸಾರುತಿವೆಯತಿ ಮಧ್ವರಾಯರುಕುತಿ ಪೇಳುತಿವೆಕ್ರತುಪ್ರಸನ್ವೆಂಕಟ ಕೃಷ್ಣ ಮತವೆಕ್ಷಿತಿಪತಿ ಸುರರತಿಶಯದ ಸದ್ವ್ವ್ರತವೆ 9
--------------
ಪ್ರಸನ್ನವೆಂಕಟದಾಸರು
ಹರಿಯಲ್ಲದನ್ಯ ದೈವಂಗಳು ಕೈವಲ್ಯವೀವವೇನೈ ಶ್ರೀಹರಿಯ ಕರುಣಾಸಾಗರಕೆ ಕೂಪವಾಪಿಯು ಹೋಲ್ವವೇನೈ ಪ.ಹಳುವದ ಬಿದಿರಮೃತದ ಮಳೆಯಲಿ ಇಕ್ಷುವಹದೇನೈಹಲಕಾಲವರೆಯ ಬೇಯಿಸಿದರೆ ಮೃದುರುಚಿಯಹದೇನೈ 1ಕೆಸರು ಮಳಲು ಮೆದ್ದರೊಡಲಗ್ನಿ ತಣ್ಣಸವಹದೇನೈಬಿಸಿಲ ತೊರೆಗೆ ಮಂಜುವನಿಗೆ ಧಗೆಯತೃಷೆಹೋಹದೇನೈ2ಮಲಯಜಲೇಪಕೆ ಬಲವತ್ತರ ಭವತಾಪ ಶಾಂತವೇನೈಎಳೆಗರು ಮಣ್ಣಾವಿನ ಮೊಲೆಯುಂಡು ಜೀವಿಪುದೇನೈ 3ಹರಿಯೊಪ್ಪದಿರದಾ ಹಲವು ಧರ್ಮಕರ್ಮದ ಕಾರಣೇನೈಕರಿಯುಂಡ ಬೆಳವಲ ಹಣ್ಣಿನ ತಿಳಲೆಂದಿಗುಳಿವುದೇನೈ 4ಏಕೋ ನಾರಾಯಣ ಆಸೀತ್ ಹಾಗಂದಿಲ್ಲವೇನೈಸಾಕು ನ ಬ್ರಹ್ಮಾ ನ ಚ ಶಂಕರ:ಎಂಬೊ ಮಾತದೇನೈ 5ವಾಸುದೇವನ ಡಿಂಗರರಿಗೆ ಅಶುಭ ಹೊಂದಬಲ್ಲದೇನೈಕ್ಲೇಶಾಧಿಕವು ನೋಡಿ ಅವ್ಯಕ್ತಾಸಕ್ತರಿಗಲ್ಲವೇನೈ 6ಪ್ರಸನ್ನವೆಂಕಟಪತಿ ಅರ್ಚನೆದಾರಿಲಿ ಕಂಟಕೇನೈಹುಸಿಯಲ್ಲ ಧ್ರುವಬಲಿವಿಭೀಷಣರೆ ಸಾಕ್ಷಿ ನಂಬಿರಿನ್ನು7
--------------
ಪ್ರಸನ್ನವೆಂಕಟದಾಸರು
ಹುಚ್ಚು ಹಿಡಿಸಿದೆಯಾಮಾಧವ|ನಿಚ್ಚನಿನ್ನ ಪಾದಾಂಬುಜವ ಭಜಿಪರಿಗೆ ಪಮತ್ತಗಜವೆಂಟು ಸೊಕ್ಕಿಲಿ ಕೊಲ್ವವು |ಕುತ್ತಿಗೆ ಮುರಿವರಾರು ಮಂದಿಯೂ ||ಎತ್ತ ಹೋಯಿತೋ ಬುದ್ಧಿ ಕುಳಿತುಕೊಂಡರೆ ಮೇಲೆ |ಹುತ್ತ ಬೆಳದರೆಚ್ಚರಿಕೆಯಿಲ್ಲದಂಥ 1ದಾರಾಸುತರೆನ್ನದಾರೆಂದು ನೋ |ಡರಾಗಾರ ನಮ್ಮದೆಂದು ಪೋಷಿಸರು ||ಆರಣ್ಯದಲಿ ಮುಸುಕಿಕ್ಕಿ ಧ್ಯಾನಿಸುವರು |ಶಾರೀರದ ಪರವಿಯನ್ನು ಬಿಟ್ಟಹರು 2ಬಿದ್ದು ಯದ್ದ ಕಾಳು ಆದುಕೊಂಡುಂಬರು |ಇದ್ದ ಬದುಕು ಜೋಕೆ ಮಾಡೊಲ್ಲರು ||ಪ್ರದ್ಯುಮ್ನ ಪ್ರಾಣೇಶ ವಿಠಲನೇ ಇಂಥ |ಬುದ್ಧಿಯ ಪ್ರೇರಿಸಿ ನೋಡಿ ಹಿಗ್ಗುವೆನೀ 3
--------------
ಪ್ರಾಣೇಶದಾಸರು
ಹೆಣ್ಣ ನಿಚ್ಛಿಸುವರೆ ಮೂಢ - ಇದನುಕಣ್ಣು - ಮೈ ಮನಗಳಿಂಗಳಿಂ ಸೋಂಕಲು ಬೇಡ ಪ.ತಾಯಾಗಿ ಮೊದಲು ಪಡೆದಿಹುದು - ಮತ್ತೆಬಾಯಯೆಂದನಿಸಿ ಕಾಮದಿ ಕೆಡಹುವುದುಕಾಯದಿ ಜನಿಸುತ ಬಹುದು - ಇಂತುಮಾಯೆಯು ನಿನ್ನ ಬಹು ವಿಧದಿ ಕಾಡುವುದು 1ಹಿತ ಶತ್ರುವಾಗಿ ಹೊಂದುವುದು - ನಿಮಿಷರತಿಗೊಟ್ಟುನಿತ್ಯ ಮುಕ್ತಿಯ ಸೆಳೆಯುವುದುಕ್ಷಿತಿಯ ಪೂಜ್ಯತೆ ಕೆಡಿಸುವುದು - ಮುಂದೆಶತಜನ್ಮಗಳಿಗೆ ಹೊಣೆಯಾಗಿ ನಿಲ್ಲುವುದು2ಬಗೆಯದು ತನುವೆಲುವುನರ - ಖಂಡ - ಅದರೊಳಗೆ ವಾಯುರಂದ್ರ ಕಿಸುಕುಳದ ಉದ್ಧಂಡಭಗವೆಂಬುದು ಮೂತ್ರದಭಾಂಡ - ಆದನೊಗಡಿಸದೆ ನಿಜಸುಖವಿಲ್ಲಕಂಡೆಯ3ವಶನಾದ ವಾಲಿಯ ಕೊಲಿಸಿಹುದು - ಹೀಗೆಹೆಸರು ಮಾತ್ರದಿ ದಶಶಿರನಳಿದಿಹುದುಶಶಿಯಂಗದಲಿ ಕ್ಷಯವಿಹುದು - ಹೀಗೆಹೆಸರು ಪಡೆದ ಕೀಚಕನನಳಿದಿಹುದು 4ಪಶುಪತಿಯ ದೆಸೆಗೆಡಿಸಿಹುದು - ಹೀಗೆವಸುಧೆಯೊಳ ಜೀವರ ಹಸಗೆಡಿಸಿಹುದುವಸುಧೇಶನ ನಾಮ ಮರೆಸುವುದು - ನಮ್ಮಅಸಮ ಪುರಂದರವಿಠಲನ ತೊರೆಸುವುದು 5
--------------
ಪುರಂದರದಾಸರು
ಹೆಸರು ತಂದಿರ್ಯಾ ಭಿಕ್ಷಕೆ |ಹೆಸರು ತಂದಿರ್ಯಾಪಅಸಮವೀರರೆಂಬ ಹೆಸರು |ಕುಶಲಗಾರರೆಂಬ ಹೆಸರುಶಶಿಯಂತೆ ಶೋಭಿಸುವ ಶಿಶುವು |ಕುಲಕೆ ಯೋಗ್ಯನೆಂಬ ಹೆಸರು ||ಹೆಸರು||1ದಾನಶೀಲರೆಂಬ ಹೆಸರು |ಮಾನವಂತರೆಂಬ ಹೆಸರು |ಸಾನುರಾಗದಲ್ಲೂ ಆತ್ಮ |ಜ್ಞಾನಿಗಳೆಂದೆಂಬ ಹೆಸರು2ಹಿರಿಯ ಮನೆತನದ ಹೆಸರು |ಗುರುಗಳಾ ಭಕ್ತಿಯಲಿ ಹೆಸರು |ಪರಮಭಾಗವತರ ತೆರದಿ |ಹರಿಯ ಶರಣರೆಂಬ ಹೆಸರು3ಪುತ್ರವತಿಯರೆಂಬ ಹೆಸರು |ಸತ್ಯಶೀಲೆಯರೆಂಬ ಹೆಸರು |ಪತಿಯ ಸೇವೆಯಲ್ಲಿನಿರತ|ಪತಿವ್ರತೇಯರೆಂಬ ಹೆಸರು4ಸತ್ಯಸಂಧರೆಂಬ ಹೆಸರು |ತತ್ವಜÕರೆಂದೆಂಬ ಹೆಸರು |ಚಿತ್ತ ಶುದ್ಧರೆನಿಸಿ | ಗೋವಿಂದಾನ |ದಾಸರೆಂಬ ಹೆಸರು5
--------------
ಗೋವಿಂದದಾಸ