ಒಟ್ಟು 36720 ಕಡೆಗಳಲ್ಲಿ , 136 ದಾಸರು , 10408 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ನೂತನ ಗೃಹಕೆ ಹರಿಯೆ ಸಿರಿ ಮಾರುತ ಮುಖಸುರರೊಡಗೂಡಿ ಧೊರಿಯೆ ಪ ಯಾರು ಕೇಳದಲಿಹ ಸ್ಥಳವ ನೀನೆ ಪ್ರೇರಿಸಿ ಗೃಹವ ನಿರ್ಮಿಸಿದೆಯೋ ದೇವ ನೂರಾರು ಪರಿರೂಪಾಂತರವ ಪೊಂದಿ ಈ ರೀತಿ ನವಸುಸಂಸ್ಕøತವಾದ ಗೃಹವ 1 ಈರಪ್ಪÀ ಬಡಿಗನೆಂಬುವನು ಮನಿಯ ಚಾರುತನದಲಿಂದ ನಿರ್ಮಿಸಿರುವನು ತೋರುವ ಸಿಂಹಾಸನವನು ಮಧ್ಯಾ ಗಾರದಿನಿನಗಾಗಿ ವಿರಿಚಿಸಿಹನು 2 ಸುತ್ತಲು ನಿರ್ಭಯವಿಹುದು ವಂ - ಭತ್ತು ದ್ವಾರಗಳಿಂದ ಶೋಭಿಸುತಿಹುದು ಹತ್ತಿರೆ ಗುರುಗೃಹ ವಿಹುದು ಮುಂದೆ ಚಿತ್ತಜನಯ್ಯನ ಮಂದಿರ ವಿಹುದು 3 ಉತ್ತಮ ಗೃಹವೆನಿಸುವದು ಇ - ಪ್ತತ್ತುನಾಲಕುವಸ್ತುಗಳಕೂಡಿಹುದು ಸುತ್ತೇಳು ಪ್ರಾಕಾರವಿಹುದು ಸುತ್ತು ಮುತ್ತಲು ದ್ವಿಜಜನಹೊಂದಿ ಕೊಂಡಿಹುದು 4 ಗೃಹವುನಾಲ್ಕು ವಿಧವಿಹುದು ಸೂಕ್ಷ್ಮ ಗೃಹ ನಿನಗಾಗಿಯೆ ನೇಮಿಸಿಯಿಹುದು ಬಹಿರದಿ ಪಾಕಗೃಹ ವಿಹುದು ಅಲ್ಲಿ ಗೃಹಿಣಿಯಿಂ ತ್ರಿವಿಧಾನ್ನ ಪಕ್ವಗೈತಿಹುದು5 ನಡುಮನೆ ದೊಡ್ಡದಾಗಿಹುದು ಅಲ್ಲಿ ಸಡಗರದಲಿ ಬ್ರಹ್ಮವೃಂದ ಕೂಡುವದು ಬಿಡದೆ ಸತ್ಕಥೆನಡೆಯುವದು ಮುಂದೆ ಪಡಸಾಲೆಯಲಿ ಸರ್ವಜನ ಸಭೆಯಹುದು 6 ಶ್ವಸನ ಮಾರ್ಗವಲಂಬಿಸಿರುವೆ ಮನಿಯ ಹಸನ ಮೆಹದೀನಾದಿಯಿಂ ಮಾಡಿಸಿರುವೆ ಹೊಸಸುಣ್ಣವನು ಹಚ್ಚಿಸಿರುವೆ ಏಕಾ ದಶ ಸೇವಕರ ನಿನ್ನ ವಶದೊಳಿರುಸುವೆ 7 ನಾನಾಧನ ನಿನಗರ್ಪಿಸುವೆನು ತನು ಮಾನಿನಿಸಹ ನಿನ್ನಾಧೀನ ಮಾಡುವೆನು ಜ್ಞಾನಭಕ್ತಿಯೆ ಇಚ್ಛಿಸುವೆನು ನಿನ್ನ ಧ್ಯಾನಾನಂದದಿ ಧನ್ಯನೆಂದಿನಿಸುವೆನು8 ಹರಿಯೆ ಲಾಲಿಸು ಎನ್ನ ಸೊಲ್ಲಾ ಮುಂದೀ - ಪರಿಗೃಹದೊರೆವುದು ಸುಲಭವೇನಲ್ಲಾ ¨ರೆ ನಿನ್ನ ಬಿಡೆನೊ ಶ್ರೀ ನಲ್ಲಾ ಎನ್ನ ಮೊರೆಯ ನಾಲಿಸಿ ನೋಡೋ ವರದೇಶವಿಠಲಾ9
--------------
ವರದೇಶವಿಠಲ
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು
ಬಾರೋ ಬಾರೋ ಎನ್ನ ನೀ ತಾರಿಸ ಬಾರೋ ಪ ಸಾರಥಿ ಬಾರೋ | ವಾಸುಕಿ ಶಯನಾವಂತನೇ ಬಾರೋ | ವಾಸುದೇವ ಮುಕುಂದನೆ ಬಾರೋ | ವಾಸ ಮಾಡಿದೆ ಕ್ಷೀರಾಬ್ಧಿಲಿ ಬಾರೊ 1 ಕರಿವರ ಸಂಕಟ ಹರಿಸಿಹ ಬಾರೋ | ಕರುಣಾಕರ ಗೋಪಾಲನೆ ಬಾರೋ | ಕರದಲಿ ಚಕ್ರವ ಪಿಡಿದಿಹ ಬಾರೋ | ಕರಿಚರ್ಮಾಂಬರ ಮಿತ್ರನೆ ಬಾರೋ 2 ಸರಸೀರುಹದಳ ನೇತ್ರನೇ ಬಾರೋ | ಸರಸೀರುಹ ಸಂಭವ ವಂದ್ಯನೇ ಬಾರೋ | ಸರಸಿಜೋವನಾಭನೆ ಬಾರೋ | ಸಾರಥಿ ಬಾರೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಚನ್ನಕೇಶವನೇ ಬಾರೋ ಬಾರೋ ಮುರಲೀಧರನೇ ಪ ನಿತ್ಯ ನಿರ್ಮಲನೇ ಸನಕಾದಿ ವಂದಿತ ಮಧುಸೂದನನೇ 1 ಭಜಕನ ಪಾಲಿಸೋ ಮುಕ್ತಿದಾಯಕನೇ 2 ದೂರ್ವಾಪುರದಿ ನಿತ್ತ ಯದು ಕುಲಪತಿಯೇ ದೂರ್ವಾಸವಂದಿತ ಆದಿ ಮೂರುತಿಯೇ 3
--------------
ಕರ್ಕಿ ಕೇಶವದಾಸ
ಬಾರೋ ಬಾರೋ ಬಾರೋ ರಂಗಾ | ಬಾರೋ ಶುಭಾಂಗಾ| ವರಶೌರಿ ಪರೋಪರಿದೋರ್ವಲೀಲೆ | ವೀರ ದೀರ ಶೂರುದಾರಿ ವಾರಿಜಾರಿ ವಂಶಜಾ ಪ ಉತ್ಸಹದಗೆ ತ್ಯಾವಿನಾ | ವತ್ಸವ ಗಾಯಿದೇ ಪ್ರಾಣಾ | ಪರ ಸಂಹಾರಾ | ಮತ್ಸ್ಯಾವ ತಾರಾ | ಸಿರಿ ವತ್ಸ ಚಿತ್ಸ್ವರೂಪನೇ 1 ಕಾಯಜಕೋಟಿ ಲಾವಣ್ಯಾ | ಕಯಾದು ಸುತಪಾಲನಾ | ತ್ರಯಭುವನ ವ್ಯಾಪಕಾ | ತೃಯಾಕ್ಷ ಸಖಾ | ದಯ ತೋಯಧಿ ಶ್ರೀ ಯದುನಾಯಕನೇ | ತೋಯಜಾಯತಾಕ್ಷಾಕ್ಷಯ ಪಯಧೀಯ ವಾಸನೇ 2 ಮಂದಮತಿಯೆಂದು ನೋಡೋ | ಕುಂದನನಾರಿಸಬ್ಯಾಡೋ | ಬಂದು ಕೊಡೋ ಮಹಿಪತಿಯಾ | ನಂದನ ಪ್ರಿಯಾ | ಎಂದೆಂದಿಗೆ ಸದ್ವಂದ ರಕ್ಷಕ ಶ್ರೀ - ನಂದ ಕಂದ ಇಂದಿರೇಶಾನಂದನೀವಾ ನಂದನೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಭವನುತಚರಣನೆ ಸಾರಸುಗುಣ ಪರಿಪೂರಿತ ಕರುಣನೆ ಪ ಚರಣಕಮಲಗಳಿಗೆರಗುವೆ ಭಕ್ತಿಯಲಿ ಭರದಲಿ ಎನ್ನನು ಪೊರೆಯಲು ಮುದದಲಿ 1 ಅರಿದರ ವರಗಳ ಕರದಲಿ ಪಿಡಿಯುತ ಕರಿಯನು ಪೊರೆಯುವ ತ್ವರೆಯಲಿ ಬಹವೋಲ್2 ಪರಮಪುರುಷ ಫಣಿಗಿರಿಶಿಖರಾಲಯ ವರದವಿಠಲ ಸುಖಕರ ಕಮಲಾಲಯ 3
--------------
ವೆಂಕಟವರದಾರ್ಯರು
ಬಾರೋ ಬಾರೋ ಮನುಕುಲಗುರುಗುಹಾ ಸೇರಿದಾನತರ್ಗೆ ಚಾರುಸುರಭೂರುಹಪ. ಮಾನಾಭಿಮಾನ ನಮ್ಮದು ನಿನ್ನಾಧೀನ ದೀನಜನರ ಸುರಧೇನು ಮಹಾಸೇನ1 ಶಕ್ತಿ ಕುಕ್ಕುಟವಜ್ರಾಭಯ ಚತುರ್ಭುಜನೆ ಭಕ್ತಿಜ್ಞಾನವನೀಯೋ ಶಂಕರಾತ್ಮಜನೆ 2 ಲಕ್ಷ್ಮೀನಾರಾಯಣನ ಧ್ಯಾನಾಭರಣ ಸುಕ್ಷೇತ್ರಪಾವಂಜಾಧ್ಯಕ್ಷ ರವಿಕಿರಣ3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ಬಾರೋ ರಂಗಾ ಪ ಬಾರೈಯ್ಯಾ ಯದುವೀರಾ | ಈರೇಳು ಭುವನಾಧಾರಾ | ಶ್ರೀ ರಮಣಿಯ ಮನೋಹರಾ | ವಾರಣ ಭಯ ನಿವಾರಾ | ಕರುಣಾಕರಾ | ದೀನೋದ್ಧಾರಾ | ಸರ್ವಾಧಾರಾ | ಪರಮ ಉದಾರಾ | ಸುರಸಹತಾರಾ | ದಯಾಸಾಗರ 1 ಒದಗುವೆ ಸ್ಮರಣೆಗೆ ನೇಮಾ | ಮದನಜನಕ ಮಹಮಹಿಮಾ | ಜೀಮೂತ ಶಾಮಾ | ಸದ್ಗುಣ ಧಾಮಾ | ಪೂರಿತ ಕಾಮಾ | ತ್ರಿವಿಕ್ರಮಾ | ಅನಂತ ನಾಮಾ | ಲೋಕಾಭಿರಾವi 2 ಅಸುರ ಕುಲ ಸಂಹರಣಾ | ಬಿಸರುಹ ಸಖ ಶತ ಕಿರಣಾ | ಅಸಮನೆ ಮಹಿಪತಿ ಸುತನಾ | ಪೋಷಿಸುವೆ ನೀ ಪರಿಪೂರ್ಣ ಖಗವರ ಗಮನಾ | ಮೃದುತರ ಚರಣಾ | ಅಹಲ್ಯೋದ್ಧರಣಾ | ಕನPsÀರಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರೋ ಬಾರೋ ಶ್ರೀಗುರುರಾಯ ಬಾರೋ ಬಾರೋ ಭೂಸುರವರ್ಯ ಬಾರೋ ಬಾರೋ ಭಕ್ತಪ್ರೀಯ ಕಾಯ ಪ ಘೋರಾರಣ್ಯದೊಳು ಬಂದು ಸೇರಿದೆನೊ ದುಷ್ಕರ್ಮದಿ] ಕ್ರೂರ ಮೃಗಗಳೆನ್ನತಿ ಬಾಧಿಸುತಿಹವು ಚೋರರುಪದ್ರವವನ್ನು ನಾ ಸಹಿಸಲಾರೆ ಇಷ್ಟೆನುತ ದೂರ ನೋಳ್ವರೆ ವ್ಯಾಳ್ಯಕೆ ಸೂರಿವರೇಣ್ಯ 1 ಮಂದಜನ ಸಂಗದಿಂದ ತಂದೆ ತ್ವತ್ಪಾದಾರ ವಿಂದ ಪೊಂದದಿರೆ ಸಂಧಿಸಿಎನ್ನಗೆ ಬಂದÀ ಬನ್ನ ಹಿಂದೆ ನೀ ನಾಲ್ವರಿಯಲಿಲ್ಲೆ ಸಂದೇಹವ್ಯಾಕೆ 2 ಇಂದ್ರ ಸಮವಿರಾಜಿತ ಇಂದ್ರ ವಿರೋಧಿ ಸಂಭೂತ ಇಂದ್ರ ದೇವಾಧಿ ಮಾನಿತ ಆನಂದ ಪ್ರದಾತ ಇಂದ್ರ ಜಾರಿ ಸೂತ ಶಾಮಸುಂದರವಿಠಲ ದೂತ ಇಂದ್ರ ಜಾತಾಖ್ಯರ ಪ್ರೀತ ಇಂದ್ರಾರ್ಯಪೋತ 3
--------------
ಶಾಮಸುಂದರ ವಿಠಲ
ಬಾರೋ ಬೇಗ ತೋರೋ ಮುಖವನು ನಿನ್ನ ಬಾರಿಗೆ ಬಿದ್ದೆನು ಪಾರಗಾಣಿಸೊ ಪ ಅಂಗಜನಯ್ಯಾ ಭುಜಂಗ ಶಯನಾ ಶ್ರೀ ರಂಗ ಎನ್ನಾ ಅಂತರಂಗಕ್ಕೆ ನೀ 1 ಕಂಜಲೋಚನ ನಾ ನಿನಗಂಜಲಿ ಮುಗಿಯುವೆ ಕುಂಜರೇಶ ವರದ ಭುಜಂಗ ಶಯನ2 ಘನ್ನಮಹಿಮ ಸನ್ಮತಿಯ ಪಾಲಿಸು ಪ್ರ ಸನ್ನ ಪ್ರಾಣನಾಥ ವಿಠಲರಾಯನೆ 3
--------------
ಬಾಗೇಪಲ್ಲಿ ಶೇಷದಾಸರು
ಬಾರೋ ಬೇಗನೆ ಶ್ರೀಧರ ಗುಣಾಕರ ಪ ಬಾರೋ ಬೇಗನೆ ಪಾದವಾರಿಜಕೆರಗುವೆ ಚಾರು ಪರಿಯಂಕಕ್ಕೆಅ.ಪ ಶೌರಿ ಅಗ್ರಜನಾಗಿ ಕ್ರೂರರ ಸದೆದು ಭೂ ಭಾರವನಿಳುಹಿದ ಶೌರ್ಯದ ಮಂಚಕೆ1 ರಾಮನ ಶೇವಿಸಿ ಪ್ರೇಮವನು ಪಡೆದಂಥ ಸೌಮಿತ್ರಿಯೆಂಬ ಸುನಾಮದ ಹಾಸಿಗೆಗೆ 2 ಸಾಸಿರವದನದಿ ಶ್ರೀಶನೆ ತವಗುಣ ಲೇಶ ವರ್ಣಿಸುವಂಥ ಭಾಸುರ ತಲ್ಪಕೆ 3 ಇಂದಿರದೇವಿಯು ನಿಂದಿರುವಳು ತವ ಸುಂದರ ಚರಣಾರವಿಂದವ ತೋರಿಸು 4 ಶರಣರ ಪೊರೆವ ಕಾರ್ಪರನರಶಿಂಹನೆ ಹರಗೆ ಭೂಷಣವಾದ ಉರಗಪರ್ಯಂಕಕೆ5
--------------
ಕಾರ್ಪರ ನರಹರಿದಾಸರು
ಬಾರೋ ಮನ ಮೋಹನ ಭಾಮೆ ರುಕ್ಮಿಣಿ ಸತ್ಯಭಾಮೆಯರಸ ಬೇಗ ಪ ಯಮುನಾ ತೀರದಿ ಮುರಳಿಯ ನುಡಿಸಲು ಪ್ರಮದೇರು ಗೋವ್ಗಳು ಮರುಳಾಗಿರಲು ಮಮತೇಲಿ ಸಲಹಿದ ಚಲುವ ಕೃಷ್ಣನೆ ಬೇಗ 1 ಗೋಪಿಯ ಕಂದ ಶ್ರೀ ಗೋಪಾಲನೆ ಗೋವರ್ಧನೋದ್ಧಾರಿ ಶ್ರೀ ಕೃಷ್ಣನೆ ಗೋಪಿಕಾಲೋಲ ಶ್ರೀ ಗೋಪಾಲ ಕೃಷ್ಣ ಬೇಗ 2 ಕಮಲ ಸಂಭವನಯ್ಯ ಕಮಲಾಪತೆ ಕಮಲಜಾತೆಯ ಪ್ರಿಯ ಪೊರೆ ಶ್ರೀಪತೆ ಕಮಲ ಪತ್ರಾಕ್ಷ ಶ್ರೀ ಕಮಲನಾಭ ವಿಠ್ಠಲ 3
--------------
ನಿಡಗುರುಕಿ ಜೀವೂಬಾಯಿ
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾರೋ ಮನೆಗೆ ಬಾರೋ ವೆಂಕಟರಮಣಾ ಪ ಕಂಸಾಸುರಮರ್ದನನೆ ಬಾರೊ | ಕೌಶಿಕಯಜ್ಞಪ ಬಾರೊ | ಹಂಸಡಿಬಿಕನಂತಕ ಬಾರೊ | ಹಂಸವಾಹನನ ಪಿತನೆ ಬಾರೊ 1 ಸಾಸಿರ ಮುಖನ ಪೆತ್ತವನೆ ಬಾರೊ | ಅನುಜ ಬಾರೊ | ಸಾಸಿರ ವದನ ಶಯನ ಬಾರೊ | ಭೂಸುರರಿಗೆ ಪ್ರಿಯನೆ ಬಾರೊ 2 ವಾರಿಧಿಯೊಳು ಪೊಕ್ಕವನೆ ಬಾರೊ | ವಾರಿಧಿಯ ಮಾನಭಂಗನೆ ಬಾರೊ | ವಾರಿಧಿಸುತೆಯ ಪಡೆದ ಕರುಣಾ - | ಸಿರಿ ವಿಜಯವಿಠ್ಠಲ ಬಾರೊ 3
--------------
ವಿಜಯದಾಸ
ಬಾರೋ ಮನೆಗೆ ರಂಗಾ ಕರುಣಾ ಪಾಂಗ ನರಸಿಂಗ ಪ. ಬಾರೋ ನಿನ ಪರಿವಾರ ಸಹಿತಲಿ ವಾರೆರೊಡಗೂಡಿ ನೀರಜಾಕ್ಷನೆ ಭವ ಕರುಣಾಂಬುದೆ ಅ.ಪ. ಪಿಡಿದು ಖಡ್ಗವ ನಿನ್ನ ವಡೆಯನ ತೋರೆಂದು ಘುಡುಘುಡಿಸಲು ಕಂದ ವಡನೆ ಕೂಗೆ ವಡಲ ಬಗೆದು ಕರುಳ ಮಾಲೆಯ ಪಿಡಿದು ಧರಿಸುತ ವಡನೆ ಭಕ್ತನ ಬಿಡದೆ ಸಲಹಿದ ಕಡು ದಯಾನಿಧೆ 1 ಪಿತನ ತೊಡೆಯಿಂದ ಭೂಪತಿಸತಿ ನೂಕಲು ಅತಿಭಯದಲಿ ಧ್ರುವ ಖತಿಗೊಳ್ಳುತ ಪತಿತ ಪಾವನ ನಿನ್ನ ಕಾಣಲು ಮುನಿ ಪತಿಯು ಪೇಳಿದ ಪಥದಿ ಪುಡುಕೆ ಅತಿಶಯದಿ ಬಂದ್ಹಿತವ ಕೋರಿದ ಗುಣಾನ್ವಿತ ದಯಾಂಬುಧೆ2 ಕರಿ ಮೊರೆಯಿಡೆ ಸಿರಿಗ್ಹೇಳದಲೆ ಬಂದು ಗರುಡ ಗಮನನಾಗಿ ತ್ವರಿತದಿಂದ ಶರಣಪಾಲಕ ನಿನ್ನ ಚಕ್ರದಿ ತರಿದು ನಕ್ರ ನಕರಿಯ ಪೊರೆದ ತೆರದೊಳೆನ್ನ ವಗುಣಗಳೆಣಿಸದೆ ಹರುಷದಲಿ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ