ಒಟ್ಟು 40875 ಕಡೆಗಳಲ್ಲಿ , 138 ದಾಸರು , 10069 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರದ್ಯಾಕೊ ಕೃಪಾಧರ ದೇವ ನಿನಗೆನ್ನೊಳ್ಕರುಣಾ ಪ. ಸರಸಿಯೊಳಂದು ಬೆದರಿದ ಕರಿರಾಜನನು ಪೊರೆದ ಬಿರುದ ನೀ ಮರೆವುದು ನೀತಿಯೇನೊ ವರದ 1 ತಾಳಲಾರದಂಥ ವೇದನೆ ಇನ್ನು ಪೇಳಲೇನು ಕಂಸಸೂದನ ಇಳೆಯ ಮ್ಯಾಲೇಳಲಾರದಂತಾಯ್ತೆನ್ನ ಹದನ2 ಸಂಕಟಾಬ್ಧಿ ಪರಿಶೋಷಣಾ ಶ್ರೀ ವೆಂಕಟೇಶ ಚಕ್ರಭೂಷಣ ಕಿಂಕರರಾತಂಕವನ್ನು ದೂರಿಸುತಿಹದಯ್ಯ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರನಲ್ಲೆ ಸಖಿ ಪರಿಪೂರ್ಣ ಕಾಮನು ಪ ತೋರನಲ್ಲೆ ಅವನ ಚರಣ ಕಮಲವನ್ನು ಅ.ಪ ಪತಿಸುತರ ಬಿಟ್ಟು ಕೃಷ್ಣನೆ ಗತಿಯೆಂದು ನಂಬಿದ ಸತಿಯರ ದಣಿಸುವುದು ಲಕ್ಷ್ಮೀಪತಿಗೆ ಸರಿಯೆ ನಲ್ಲೆ 1 ಸರಸಿಜಾಕ್ಷಿಯರ ಕೂಡ ಅವನೂ ಸರಸವಾಡುವ ತುರುಗಳಲ್ಲಿ ಗುಡುಗ್ಯಾಡಿ ಕರುಗಳನು ಬಿಚ್ಚುವ2 ಒರಳನೆಳೆದು ಮರವನ್ನು ಮುರಿದು ನಿಲ್ಲುವ ಅರಿಯದಬಲೆಯರ ಸೀರೆ ಮರಕೆ ಕಟ್ಟಿ ಪೋಗುವ 3 ವÀ್ರಜದ ನಾರೇರ ಬಿಟ್ಟು ಕುಬುಜೆ ಗಂಧವ ಬೇಡುವ ಭುಜಬಲವನ್ನು ತೋರಿ ನಿಜ ವೈರಿಯರ ಕೊಲ್ಲುವ 4 ಏಸು ಕಾಲದಿಂದ ಅವನ ಬಯಸಿ ನಾ ಬೇಡುವೆ ವಾಸುದೇವ ವಿಜಯ ರಾಮಚಂದ್ರವಿಠಲನ 5
--------------
ವಿಜಯ ರಾಮಚಂದ್ರವಿಠಲ
ಬಾರನೇಕೆ ಬಾಲಕೃಷ್ಣನೂ | ಎನ್ನ ಮನಕೆಪೋರ ಶೀಲ ಗೋಪ ಕೃಷ್ಣನೂ ಪ ಸಾರಿ ಸಾರಿ ಕೂಗಿದಾರೂ | ದೂರವಿರುವನಂತೆ ನಟಸಿತೋರಗೊಡನು ತನ್ನ ರೂಪ | ಅರಿಗ್ಹೋಗಿ ಪೇಳಲಮ್ಮ ಅ.ಪ. ಗೋಪಿ ಕೊಟ್ಟ | ಕಲ್ಲಿ ಬುತ್ತಿಯೊಡನೆ ಪೋಗಿಹಳ್ಳ ಕೊಳ್ಳದಲ್ಲಿ ಕುಳಿತು | ಮೆಲ್ಲುತಿರುವನೇನೊ ಅಮ್ಮ 1 ಗೋಪಿ ಜನರ | ಕಂಡು ಕಾಣಧಾಂಗೆ ಇಹನೆ 2 ತಂದೆ ಮುದ್ದು ಮೋಹನ ಗುರುಗಳೂ | ನಿನ್ನ ರೂಪತಂದು ತೋರಿ ಮನದಿ ನಿಲ್ಲಲೂ ||ಅಂದು ಕೇಳಿಕೊಂಡು ಇಹರು | ಅಂದ ವಚನ ಮರೆತೆಯೇನೋತಂದೆ ಗುರು ಗೋವಿಂದ ವಿಠಲ | ಇಂದೆ ನೀನೆ ಮನಕೆ ಪೊಳೆಯೊ 3
--------------
ಗುರುಗೋವಿಂದವಿಠಲರು
ಬಾರನ್ಯಾತಕ ಯದು ವೀರಾ|ಪದಾಂಬು ಜವದೋರಾ| ದಯರಸವಾಬೀರಾ| ಸಾರಿದವರಿಗಿನ್ನುದರಾವಾಗಿರಾ ಧೀರಾ ಪ ಮಂದ ಮುಗುದೆಯು ನಾನೆಂದು ಅರಿತು ಮೊದಲಿಂದು| ಕೈಯ್ಯ ಪಿಡಿದು ಬಂದು| ಕುಂದಾಲಿಸುವ ದಯಸಿಂಧು|ಉಚಿತ ವೇನಿಂದು 1 ಎನ್ನ ಬಿನ್ನಹ ಹೇಳಲೇ ಜಾಣೇ| ತಾಪಕೌಷಧಕಾಣೆ| ಕ್ಷಣಯುಗವ ನಿನ್ನಾಣೆ| ಮನ್ನಿಸಿ ತಂದು ತೋರಿನ್ನೆನೆ ಬಾರೇ ಪ್ರವೀಣೇ 2 ಶರಣ ಹೊಕ್ಕವರೆಂದು ಮರೆಯಾ|ನೆಂಬ ಮಾತಿದು ಖರೆಯಾ ಬಂದು ಕೂಡಿದ ತ್ವರಿಯಾ| ಗುರು ಮಹಿಪತಿ ಸ್ವಾಮಿಚರಿಯಾ ಬೊಮ್ಮತಾನರಿಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರನ್ಯಾತಕೆ ಕೃಷ್ಣ ಬಾರನ್ಯಾತಕೆ ಪ ಹರಿಯ ಮನಕೆ ಹರುಷಪಡಿಸಿ ಹರಿಯ ಕರೆಸಿ ಮನದೊಳಿರಿಸಿ ಹೊರಗೆ ಬಿಡರೆಂಬೊ ಭಯಕೆ ಮರೆಯೊಳಿದ್ದುಕಾಲ ಕಳೆಯುವ 1 ಮದಗಜಗಮನೆಯರೆಲ್ಲ ಮದನಕದನ ದೊಳಗೆ ಸೋಲಿಸಿ ಮುದದಿ ಎನ್ನಬಿಡದೆ ಮನೆಯೊಳು ಸದರದಿಂದ ನೋಡುವರೆಂದು 2 ಆಣಿ ಮುತ್ತಿನ ಮಾತನಾಡಿ ಜಾಣ ಪ್ರಾಣನಾಥ ವಿಠಲನ ವಿನಯದಿಂದ ಕರೆದು ತಂದರೆ ವನಜಮುಖಿಯೆ ಹರುಷ ಪಡುವೆ 3
--------------
ಬಾಗೇಪಲ್ಲಿ ಶೇಷದಾಸರು
ಬಾರನ್ಯಾತಕೆ ನೀರೆ ನೀ ಕರೆತಾರೆ ಸುಗುಣ ಗಂಭೀರನ ಪ. ತೇಜಿಯನೇರಿ ಮೆರೆವನ ಅ.ಪ. ಕೋಮಲಾಂಗನ ಕಂತುದಹನನ ಸೋಮಾರ್ಕ ಶಿಖಿನೇತ್ರನ ವಾಮದೇವನ ವನಜಭವಸಂಭವ ಮುನಿಸ್ತೋಮ ವಿನುತ ಎನ್ನ ಪ್ರೇಮನ 1 ನೀಲಕಂಠನ ನಿಗಮಸಾರನ ಬಾಲಶಶಿಧರ ಭರ್ಗನ ಶೀಲಸದ್ಗುಣ ಫಾಲನೇತ್ರನ ಕಾಲಾಂತಕ ಎನ್ನ ಕಾಯ್ವನ 2 ಮಂಗಳಾತ್ಮನ ಮಲ್ಲರಿಪುದಲ್ಲಣ ದೇವೋತ್ತುಂಗ ಹೆಳವನಕಟ್ಟೆ ರಂಗಗತಿಸಖನಾದ ನೀಲಗಿರಿ ಲಿಂಗ ಮೂರುತಿಯ3
--------------
ಹೆಳವನಕಟ್ಟೆ ಗಿರಿಯಮ್ಮ
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಮ್ಮ ಇಂದಿರಮ್ಮ ಪ ನೀರೇಜ ಪದಯುಗಕೆ ಸಾರಿ ವಂದಿಪೆನಮ್ಮ ಹಾರಗಳನರ್ಪಿಸುವೆ ಸ್ವೀಕರಿಪುದಮ್ಮ ಅ.ಪ ಆವ ತೆರದಲಿ ನಿನ್ನನರ್ಚಿಸಿದರೂ ಕೊರೆಯೆ ಭಾವಶುದ್ಧಿಯಲಿ ಪೂಜೆಗೈವೆನಮ್ಮ ಓವರಿಗೆ ದಯಮಾಡು ದೇವಗಂಗಾ ಜಲದಿ ಪಾವನ ಪಾದಾಂಬುಜವ ತೊಳೆವೆನಮ್ಮಾ 1 ತವದಿವ್ಯ ಭೂಷಣವ ನವರತ್ನ ಹಾರಗಳ ಸುವಿಲಾಸದಿಂದಿತ್ತು ಮಣಿವೆನಮ್ಮ ಪವಳಪದುಮಾಸನ ವಿಶ್ರಾಂತಳಾಗಮ್ಮ ನವಪುಷ್ಪ ಕುಂಜಗಳ ಧರಿಪೆನಮ್ಮ 2 ಅಗರು ಚಂದನ ಧೂಪಮಿಗೆ ದಿವ್ಯ ಗಂಧಗಳ ಬಗೆಬಗೆಯ ದೀಪಗಳ ನೀಡುವೆನಮ್ಮಾ ಸೊಗಸಾದ ಭಕ್ಷ್ಯ ಭೋಜ್ಯಂಗಳನು ಅರ್ಪಿಸುವೆ ನಗುನಗುತ ಸ್ವೀಕರಿಸಿ ಪಾಲಿಸಮ್ಮ3 ದೇವಕನ್ಯೆಯರೆಲ್ಲ ದಿವ್ಯಗಾನವ ಪಾಡಿ ದೇವಿ ತವಕರುಣೆಯನು ಬೇಡುತಿಹರು ಶ್ರೀವನಿತೆ ನಾನೀವ ತಾಂಬೂಲವನು ಸವಿದು ಜೀವಕೋಟಿಗೆ ಸುಖವನೀವುದಮ್ಮಾ 4 ಪೊಡಮಡುವೆ ನಿನ್ನಡಿಗೆ ಕೊಡು ಭಕ್ತಿಭಾಗ್ಯವನು ಎಡೆಬಿಡದೆ ಹರಿಪಾದ ಸೇವೆಗೈದು ಕಡುಮುದದಿ ನಿನ್ನ ಸಂಕೀರ್ತನೆಯ ಪಾಡಿಸು ಬಡವರಾಧಾರಿ ಮಾಂಗಿರಿಯೊಡೆಯನ ರಾಣಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬಾರಮ್ಮ ಭಾಗ್ಯನಿಧಿಯೆ | ಸಿರಿಯೆ ಪ ಬಾರಮ್ಮ ನಿನ್ನ ಪಾದಾರವಿಂದ ತೋರಲು ಅ.ಪ ಸರಸಿಜಾಕ್ಷನ ವಕ್ಷ ಮಂದಿರೆ ಇಂದಿರೆ ಸರಸಿಮುದವೆರಸಿ ನಿನ್ನರಸನೊಡನೆನೀ 1 ಸೀತಾರುಕ್ಮಿಣ್ಯಾದ್ಯವತಾರಿಣಿ ಬುಧ- ವ್ರಾತ ಮನಃ ಪದ್ಮ ವಿಹಾರಿಣಿ ಚೇತೋದ್ಭವ ಜನನೀ ಶ್ರೀತರುಣೀಮಣಿ 2 ಬ್ರಹ್ಮರುದ್ರೇಂದ್ರಾದಿ ಸುರಸೇವಿತೆ ಬ್ರಹ್ಮಾಣಿ ಗಿರಿಜಾ ಶಚೀವಂದಿತೆ ಪರ- ಬ್ರಹ್ಮ ಗುರುರಾಮವಿಠಲನ ದಯಿತೆ 3
--------------
ಗುರುರಾಮವಿಠಲ
ಬಾರಮ್ಮಾ ಬಾರಮ್ಮಾ ಭಾಗ್ಯದನಿಧಿಯೇ ತೋರಮ್ಮಾ ತೋರಮ್ಮಾ ಕರುಣಾನಿಧಿಯೇ ಪ. ಬಾರಮ್ಮಾ ಮಹಲಕ್ಷ್ಮಿ ತೋರುತ ಕರುಣವ ಬೀರುತ ತವಕದಿ ಸೇರುತ ಪತಿಸಹ ಅ.ಪ. ಶ್ರೀ ರಮಾದೇವಿ ಇನ್ನಾರು ಸಮನಾಗರೇ ಭೂ ರಮೇಶನ ಸೇವೆಗೆ ನಿಲ್ಲಲು ಬಾರಮ್ಮಾ ಭಕ್ತರುದ್ಧಾರ ಮಾಡಲು ಎಲ್ಲಾ ಕಾರಳು ನೀನಾಗಿ ವಾರುಧಿಶಯನಗೆ ಸೇವಿಸಲು ಘೋರತರ ಸಂಸಾರ ಸಾಗರ ಪಾರುಗಾಣಿಪ ಹರಿಯು ನಿನ್ನೊಳು ಸೇರಿಯಿರುತಿಹನೇ ತೋರಿ ಭಕ್ತರಿಗೆ ಚಾರುಕಮಲ ಕರಾರವಿಂದದಿ ಧೀರೆಯೆತ್ತುಪಕಾರ ಮಾಡಲು ವಾರಿಜಾಕ್ಷಿಯೆ ಸಾರುತೀಗಲೆ 1 ಪುಲ್ಲಲೋಚನೆ ನಿನ್ನ ಗಲ್ಲ ಮಿಂಚಿನ ಸೊಬ ಗೆಲ್ಲ ನೋಡುತ ನಿನ್ನ ಒಡನಾಡುವ ಪಲ್ಲವಾಧರೆ ನಿನ್ನ ವಲ್ಲಭ ಹರಿಯಲ್ಲಿ ಎಲ್ಲ ಭಕ್ತರ ಮನಸಲ್ಲ ಅರುಹು ತಾಯೆ ನಿಲ್ಲದೆಲೆ ಕಾನಲ್ಲಿ ಇಹ ಹರಿ ಎಲ್ಲಿ ಭಕ್ತರು ಕರೆ ದಲ್ಲಿ ಬರುತಿಹನೆ ಮಲ್ಲಮರ್ಧನ ಶ್ರೀ ನಲ್ಲ ಕೃಷ್ಣನು ಚೆಲ್ಲಿ ಕರುಣವ ಬಲ್ಲೆ ನಿನಪತಿ ಗುಣಗಳನೆಲ್ಲ ಕಾಯೆ 2 ರಂಗನರ್ಧಾಂಗಿಯೆ ಮಂಗಳ ಮೂರುತಿ ನಿ ನ್ನಂಗಜನಯ್ಯನ ಕಾಣೆ ಕಾಯೆ ಗಂಗಜನಕ ಸಹ ಸರ್ವರಂಗದೊಳಿದ್ದು ನೀ ರಂಗನ ಲೀಲೆಯತಿಸಂಭ್ರಮದಲಿ ನೋಳ್ಪೆ ತುಂಬುರು ನಾರದರು ಪಾಡಲು ರಂಭೆ ಊರ್ವಶಿ ನಾಟ್ಯವಾಡಲು ಸಂಭ್ರಮದಿ ಶ್ರೀ ಶ್ರೀನಿವಾಸನ್ನ ಇಂಬತೋರಿಸೇ ಅಂಬುಜಾಕ್ಷಿಯೇ ಬೆಂಬಿಡದೇ ಎನ್ನ ನಂಬಿರುವೇ ನಿನ್ನ ಕಂಬುಕಂಧರೆ ಕುಂಭಿಣೀಪತಿ ಸಹಿತ ಬೇಗನೆ 3
--------------
ಸರಸ್ವತಿ ಬಾಯಿ
ಬಾರಮ್ಮಾ ಶ್ರೀಗುರು ಜನನೀ | ಘನಕರುಣೀ | ಬಾರ ನಿಜ ಸುಖ ದಾನೀ ಪ ಭವದಾಟವ ಕೇರಿಯೊಳು ಹೋಗಿ | ಮನಮರವಾಗಿ | ಪರಿ ಬಲು ಪಾಡಿದೆ | ಬಂದೇ ತವಕದಿ ಓಡಿ 1 ಬೋಧದ ಸ್ತನಪಾನ ಮಾಡಿಸೇ | ಸುಧೆ ಉಣಿಸೇ | ತಾಪ | ಬಾಧೆಯ ಬಿಡಿಸೇ | ನಿನ್ನುದರೊಳಗಿರಿಸೇ 2 ಭಕುತಿ ತೊಟ್ಟಿಲವನ್ನು ತೂಗಿಸೀ | ಯನ್ನ ಕೂಡಿಸೀ | ಪಾಡುತಖಿಲೇಶ ನಾಮಾ | ಬಾಲಕಗ ಮಹಿಪಮ್ಮ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾರಯ್ಯ ಎನ್ನ ಮನ ಮಂದಿರಕೆ ಪ ಬೇರೊಂದು ಯೋಚನೆ ಮಾಡದೆ ಸಿರಿಪತಿಅ.ಪ ಸೋನೆ ಸೊರಗುವುದೆವಾರ ವಾರಕೆ ಮೇಘವಾರಿಯ ಕರೆದರೆಧಾರುಣಿಗೆ ಕ್ಷಾಮ ಬರುವುದೆ ಕೃಷ್ಣ1 ತಾಮಸ ಬುದ್ಧಿಯೆಂಬಿಯ ನಿನ್ನಶ್ರೀಮೂರ್ತಿ ಹೊಳೆದರೆ ತಮವಡಗದೆಶ್ರೀ ಮನೋಹರನೆ ಭಾನು ಉದಿಸಿದರೆತಾಮಸವಡಗದೆ ಜಗದೊಳು ಕೃಷ್ಣ 2 ನಾ ದೋಷಿ ಕಠಿಣನೆಂತೆಂಬೆಯ ನಿನ್ನಪಾದಪದುಮ ಪಾಪಹರವಲ್ಲವೆಆ ದುಷ್ಟ ಶಿಲೆ ಸೋಕೆ ಋಷಿಪತ್ನಿಯಾದಳುನೀ ದಯಮಾಡೆ ನಾ ನೀಚನೆ ಸಿರಿಕೃಷ್ಣ 3
--------------
ವ್ಯಾಸರಾಯರು
ಬಾರಯ್ಯ ಕೃಷ್ಣ ಬಾರೈ ಬಾಹದಿದ್ದಡೆಕಾರುಣ್ಯನಿಧಿಯೆಂಬ ಕಥೆಯ ಅ-ದಾರು ಬಣ್ಣಿಪರು ವೇದಾಂತದೇವಿಯರೆಮ್ಮದೂರುವರೀಗೆ ಪ. ಕುಂಜರವರದ ನೀಲಾಂಜನವರ್ಣ ನೀಕಂಜನೇತ್ರನೆ ಕಾಮನಯ್ಯಮಂಜುಳಮೂರ್ತಿ ಮನೋಹರಕೀರ್ತಿ ಪ್ರ-ಭಂಜನನೊಡೆಯ ಬಾರೊ 1 ಮಂದರಗಂಧದ ಮಂದಮಾರುತ ಬಂದಚಂದಿರಮುಡಿದ ಚದುರಬಂದಕಂದರ್ಪನರವಿಂದನೆಂಬ ಕಣೆಯ ತೊಟ್ಟ ಮಂದರಧರನೆ ಬಾರೊ2 ನೋಡುವೆ ನುಡಿಸುವೆ ಪಾಡುವೆ ಬಯಕೆಯಬೇಡುವೆ ಹಯವದನನಮಾಡುವೆ ಪೂಜೆಯ ಕೂಡುವೆ ನಿನ್ನೊಡ-ನಾಡುವೆನೊ ಬೇಗನೆ ಕಾಡದೆ ಬೇಗ ಬಾರೊ 3
--------------
ವಾದಿರಾಜ
ಬಾರಯ್ಯ ಗುರು ಸ್ವಾಮಿ ಶ್ರೀಸದ್ಗುರು ಎನ್ನ ಮನೋಮಂದಿರಕೆ ಕರುಣಾನಂದದ ಸುಖ ಬೀರುತ ಬಾರೈ ಆತ್ಮಾನುಭವಕೆ ಧ್ರುವ ಕಣ್ಣು ಹಾರುತಿದೆÀ ಬಲದೆನ್ನ ಖೂನದೋರವ್ಹಾಂಗಿಂದು ಚೆನ್ನಾಗ್ಹೊಳಿಯುತಿ ಸುಚಿಹ್ನ ನೀನೊಲಿಯವ್ಹಾಂಗೆ ಬಂದು ಎನ್ನೋಳೀವ್ಹಾಂಗ ಸನಾತನ ಪಾಲಿಸಿದೆನಗೊಂದು ಧನ್ಯಗೈಸುವ ದಯಾಳು ನೀನಹುದೊ ಕೃಪಾಸಿಂಧು 1 ಏನೊಂದರಿಯೆ ಒಂದು ಸಾಧನ ಧ್ಯಾನಮೌನ ಹ್ಯಾಗೆಂದು ಖೂನಬಲ್ಲೆನೊ ನಿಮ್ಮ ಬಿರುದಿನ ದೀನನಾಥ ನೀ ಎಂದು ನ್ಯೂನಾರಿಸದೆನ್ನೊಳಗಿನ ನೀನೆ ಅನಾಥಬಂಧು ಎನಗುಳ್ಳ ಸ್ವಾಮಿ ಸದೋದಿತ ನೀನಹುದೊ ಎಂದೆಂದು 2 ತಾಯಿ ಶಿಶುಸ್ತನಪಾನಕೆ ಬಾಯಿಯೊಳಗಿಡುವ್ಹಾಂಗ ಸಾಯಾಸವಿಲ್ಲದೀಪರಿ ದಯಮಾಡುವದೆನಗೆ ಶ್ರೇಯಸುಖದಾಯಕೊಬ್ಬನು ನೀನೆ ಭಾನುಕೋಟಿ ಎನಗೆ ಅನುದಿನ ದೀನಮಹಿಪತಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರಯ್ಯ ಗುರುದೇವರಾಯ ಶ್ರೀ ಹರಿಯೆ ನಮ್ಮಯ್ಯ ಗುರು ಭಕ್ತಜನ ಪ್ರಿಯ ಧ್ರುವ ನೀರೊಳು ಪೂಕ್ಕು ನಿಗಮನ ತಂದಿ ಬಾರಯ್ಯ ಧರಿಯ ಬೆನ್ನಿಲಿ ಪೊತ್ತು ನಿಂದಿ ನೀ ಬಾರಯ್ಯ ಧಾರುಣಿಯ ಗೆದ್ದು ಹಿರಣ್ಯಕನ ಕೊಂದಿ ಬಾರಯ್ಯ ಎಂದೆನಯ್ಯ ಗುರುತಂದೆಬಾರಯ್ಯ 1 ಮೂರು ಪಾದವನಳಿದುಕೊಂಡಿ ನೀ ಬಾರಯ್ಯ ಶಿರಗಳನೆ ಚೆಂಡಾಡಿ ಸಿರಿ ತಂದಿ ಬಾರಯ್ಯ ಗಿರಿಯೆನೆತ್ತಿ ನಿಂದಿ ಬಾರಯ್ಯ ಶ್ರೀ ಹರಿ ಮುಕುಂದಯ್ಯ ಗೋವಿಂದ ಬಾರಯ್ಯ 2 ಬರಿಯ ಬೆತ್ತಲೆ ಆಗಿ ವ್ರತವಳಿದಿ ಬಾರಯ್ಯ ಏರಿ ಕುದುರಿಯನೆ ರಾವುತನಾದಿ ಬಾರಯ್ಯ ಪರಮಭಕ್ತರನು ಹೊರಿಯಲಿ ಬಂದಿ ಬಾರಯ್ಯ ಪರಿಪರಿ ರೂಪವಾದಯ್ಯ ತರಳ ಮಹಿಪತಿ ಪ್ರಾಣದೊಡೆಯ ಬಾರಯ್ಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು