ಒಟ್ಟು 794 ಕಡೆಗಳಲ್ಲಿ , 42 ದಾಸರು , 702 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವರವ ಕೊಡೆ ವಾರಿಜಾಕ್ಷಿ ನೀರೆ ತುಳಸಿಯೆ ಕರಕರೆಯಗೊಳಿಸಬೇಡೆ ಕರುಣ ಪೂರ್ಣಳೆ ಪ. ಸಿರಿವರನ ಸಹಿತ ನಿನ್ನ ಪೂಜಿಪೆ ಮುನ್ನ ಪರಿಪರಿಯ ಧೂಪ ದೀಪ ಗಂಧಾಕ್ಷತೆಗಳಿಂ 1 ವಾರಿಜಾಕ್ಷಿ ಷಡ್ರಸಗಳ ಆರೋಗಣೆ ಕೊಳ್ಳೆ ನಾರಿ ನಿನಗೆ ಸರ್ವವಿಧದಿ ನಾನು ಎರಗುವೆ 2 ಸಿರಿವರ ಗೋಪಾಲಕೃಷ್ಣವಿಠ್ಠಲನರಸಿಯೆ ಕರದು ಎನಗೆ ಸರ್ವಾಭೀಷ್ಟ ಕೊಟ್ಟು ಪಾಲಿಸೆ 3
--------------
ಅಂಬಾಬಾಯಿ
ವರ್ಣಿಸಲಳವೆ ಕರುಣಾಳು ಗುರುವರ ನಿಮ್ಮ ವರ್ಣವರ್ಣದ ಚರಿತೆ ಗುಣಗಣಗಳ ಪ. ವರ್ಣಪ್ರತಿಪಾದ್ಯ ದೇವತೆಗಳಿಗೆ ಅಳವಲ್ಲ ಇನ್ನಿದನು ಪಾಮರರು ಅರಿಯುವರೆ ಜಗದಿ ಅ.ಪ. ಪ್ರತಿಪ್ರತಿ ಕಲ್ಪದಲಿ ಅತಿಶಯದ ತಪಚರಿಸಿ ಪತಿತಪಾವನ ಹರಿಯ ಮನ ಮೆಚ್ಚಿಸಿ ಕ್ಷಿತಿಯೊಳಗೆ ಅವತರಿಸಿ ದೇವಾಂಶರೆಂದೆನಿಸಿ ಪತಿತರನು ಪಾವನವಗೊಳಿಪ ಘನಮಹಿಮ 1 ಭಕ್ತರು ಕರೆದಲ್ಲಿ ಆಸಕ್ತಿಯಿಂ ಬಂದು ಯುಕ್ತಯುಕ್ತಗಳಿಂದ ತತ್ವಗಳನರುಹಿ ಮುಕ್ತಿಗೊಡೆಯನ ಮಾರ್ಗ ಮುಕ್ತಾರ್ಥ ಜನಕರುಹಿ ಮುಕ್ತಿಪಥ ಸವಿತೋರ್ವ ಶಕ್ತಿ ಮಹಿಮೆಗಳ 2 ಪಾದ ಪದ್ಮಸುತ ತಂದೆ ಮುದ್ದು ಮೋಹನದಾಸರಾಯರೆಂದೆನಿಸಿ ಮಧ್ವಮತಸಾರಗಳ ಹೀರಿ ಮಕರಂದವನು ಸಿದ್ಧಿಗೊಳಿಸಿ ಸುಜನಕೀವ ಶ್ರೀ ಗುರುವೆ3 ಕರಿಗಿರಿ ನರಹರಿಯ ಚರಣಕಮಲ ಧ್ಯಾನ ಅರಘಳಿಗೆ ಬಿಡದೆ ಮನಮಂದಿರದಿ ಸ್ಮರಿಪ ಕರುಣಜಲನಿಧಿಯೆ ನಿಮ್ಮ ಮೊರೆಹೊಕ್ಕವರ ಕಾಯ್ವ ಪರಮಪ್ರಿಯರೆಂತೆಂಬ ಬಿರುದುಳ್ಳ ಗುರುವೇ 4 ಕಮಲಾಂತ ಪ್ರೀತ ಶ್ರೀ ಕಮಲನಾಭನ ಪಾದ ಕಮಲ ಮನದಲಿ ಸ್ಮರಿಪ ಕಮನೀಯ ಗಾತ್ರ ಕಮಲಾಕ್ಷ ಗೋಪಾಲಕೃಷ್ಣವಿಠ್ಠಲನ ಪದ ಕಮಲ ಮನದಲಿ ತೋರಿ ಕೃಪೆಯಗೈಯ್ಯುವುದು 5
--------------
ಅಂಬಾಬಾಯಿ
ವಲ್ಲಭೆ ಬಲು ಸುಲಭೆ ಪ ಮೂಕಾಸುರನ ಕೊಂದು ಮೂಕಾಂಬಿಕೆನಿಸಿದೆ ಶ್ರೀ ಕಮಲೆ ಎಲ್ಲಿನಾ ಕಾಣೆ ನಿನಗೆ ಸಮಾ 1 ಕೋಲ ಮುನಿಗೊಲಿದಮಲ ಮೃಗನಾಭಿ ಫಾಲೆ ಸಜ್ಜನರ ಪಾಲೆಬಾಲೆ ಜಾತರಹಿತೆ ಲೀಲೆ ನಾನಾ ಪುಷ್ಪಮಾಲೆ ಕಮಲಹಸ್ತೆ2 ಶಿವದುರ್ಗೆ ನೀನೆಂದು ಶ್ರವಣಮಾಡಲು ಮನುಜ ರವರವ ನರಕದಲ್ಲಿ ಬವಣೆಪಟ್ಟ ಮೇಲೆ ಸವಿಯದಂತೆ ತಮಸುನಿವಹದೊಳಗೆ ಇಪ್ಪನು 3 ಕಾಮತೀರ್ಥ ಬಳಿಯ ಪ್ರೇಮದಿಂದಲಿ ನಿಂದೆ ಸೀಮೆಯೊಳಗೆ ನಿನ್ನಯ ನಾಮಕೊಂಡಾಡಲು ತಾಮಸಗಳ ಕಳೆದು ನಿಷ್ಕಾಮ ಫಲ ಪಾಲಿಪೆ 4 ಧರೆಯೊಳು ಷೋಡಶಗಿರಿಯ ಪ್ರಾದೇಶ ಮಂ ನಿತ್ಯ ಸಿರಿ ವಿಜಯವಿಠ್ಠಲನ್ನಪರಮ ಪ್ರೀತಿ ಅರ್ಧಾಂಗಿ 5
--------------
ವಿಜಯದಾಸ
ವಸುಮತೀಶ ವಿಠ್ಠಲನೇ ನೀನಿವಗೆ | ಎಸೆವ ಜ್ಞಾನವನಿತ್ತುಹಸನಾಗಿ ಕಾಪಾಡಬೇಕೊ ಹರಿಯೆ ಪ ಕುಸುಮ ಸಂಭವ ಪಿತನೆ | ವಾಸುದೇವನೆ ಕೃಷ್ಣನಸು ನಗೆಯಲೀ ನಿನ್ನ ಉಪಾಸನವ ಕೊಡೊ ಹರಿಯೆ ಅ.ಪ. ತರತಮವು ಪಂಚಭೇದದ ಜ್ಞಾನ | ನಿರತಿಶಯ ಹರಿಭಕ್ತಿಗುರುಭಕ್ತಿಗಳ ಕರುಣಿಸೀ ಕಾಪಾಡಬೇಕೊ ಹರಿಯೇ |ವರ ಪ್ರದಾಯಕ ಸ್ವಾಮಿ ವೈರಾಗ್ಯ ಭಾಗ್ಯಗಳ ನೀನಿವರಿಗಿತ್ತುಕರುಣದಿಂ ಕಾಪಾಡಬೇಕೊ ಹರಿಯೇ 1 ನಿನ್ನ ಮೊರೆ ಹೊಕ್ಕವನ | ಇನ್ನು ಕೈ ಪಿಡಿಯುವುದುನಿನ್ನ ಧರ್ಮವಲ್ಲವೆ ಸ್ವಾಮಿ ರಾಮಚಂದ್ರ |ನನ್ನೆಯಿಂದಲಿ ಇವನ ಪಾಪಗಳ ಪರಿಹರಿಸಿನಿನ್ನ ಪದ ಸೇವಕನ ಮಾಡೊ ವೈಕುಂಠ ಪತಿಯೇ 2 ಖಗವರಧ್ವಜ ದೇವ ಜಗಜ್ಜನ್ಮಾದಿ ಕಾರಣನೆಬಗೆಬಗೆಯ ಮಹಿಮೆಗಳ ತೋರಿ ಕಾಪಾಡೊ ಹರಿಯೇ |ಸುಗುಣ ಮೂರುತಿ ದೇವ ತ್ರಿಗುಣ ವರ್ಜಿತ ಸ್ವಾಮಿಹಗರಣಗಳೀಯದಲೆ ಕಾಪಾಡೊ ಹರಿಯೇ 3 ಇಷ್ಟಮೂರುತಿ ದೇವ ಸೃಷ್ಟ್ಯಾದಿ ಕಾರ್ಯಗಳದೃಷ್ಟಿಯಿಂದಲಿ ಮಾಳ್ಪ ಮಹಮಹಿಮ ಹರಿಯೇ |ಕೃಷ್ಣಮೂರುತಿ ಹೃದಯ ಅಷ್ಟದಳ ಮಧ್ಯದಲಿದೃಷ್ಟಿಗೋಚರನಾಗಿ ಕಾಪಾಡೊ ಹರಿಯೇ 4 ಮೂರ್ತಿ ಹಯ ಮೊಗಾತ್ಮಕನೇ |ವೇದಾಣಿ ವಂದ್ಯ ಗುರುಗೋವಿಂದ ವಿಠ್ಠಲನೇನೀ ದಯದಿ ಕೈ ಪಿಡಿದು ಕಾಪಾಡೊ ಹರಿಯೇ 5
--------------
ಗುರುಗೋವಿಂದವಿಠಲರು
ವಾಜಿ ವದನ ವಿಠಲ ಕಾಪಾಡೊ ಇವಳಾ ಪ ತೈಜಸೀ ರೂಪದಲಿ | ಆಶಿಷವನಿತ್ತೇ ಅ.ಪ. ಕಾಮಿತಾರ್ಥದನೆ ಸ | ತ್ಕಾಮ ಫಲಿಸುತಲಿವಳಕಾಮ ಜನಕನೆ ದೇವ | ಕಾಪಾಡೊ ಹರಿಯೇ |ಕಾಮ ಮದ ಮಾತ್ಸರ್ಯ | ಶತ್ರು ವರ್ಗವ ಕಡಿದುಕಾಮಿನಿಯ ಕೈ ಪಿಡಿದು | ಕಾಪಾಡೊ ಹರಿಯೇ 1 ಜ್ಞಾನಾನು ಸಂಧಾನ | ಪಾಲಿಸುತಲಿವಳೀಗೆಪ್ರಾಣೇಶ ತವನಾಮ | ಸತತ ಸ್ಮರಿಸೂವಾ |ಜಾಣೆ ಎಂದೆನಿಸಿ ಸಂ | ಧಾನ ಸುಖವೀಯೊ ಹರಿಮಾನನಿಧಿ ಮಧ್ವಾಖ್ಯ | ಪ್ರಾಣಸನ್ನುತನೇ 2 ನೀವೊಲಿಯದಿನ್ನಿಲ್ಲ | ದೇವ ದೇವನೆ ಹರಿಯೆಗೋವತ್ಸದನಿ ಕೇಳಿ | ಆವು ಬರುವಂತೇ |ಧಾವಿಸೀ ಬಾರೋ ಗುರು | ಗೋವಿಂದ ವಿಠ್ಠಲನೆಭಾವುಕಳ ಪೊರೆಯಲ್ಕೆ | ದೇವ ಹಯವದನಾ 3
--------------
ಗುರುಗೋವಿಂದವಿಠಲರು
ವಾಣೀ ನೀ ತೋರೆ ವಾರಿಜನಾಭನ, ಮಹಾಲಾಭನ್ನ ನಿತ್ಯ ಸುಲಭನ ಭಾನು ಸನ್ನಿಭನ ಪ ಕ್ಷೋಣೀಯೊಳಗಣ ಪ್ರಾಣಶ್ರೇಷ್ಠ - ಜಗ ತ್ರಾಣನ ತೋರಿಸೆ ಭಾನು ಸನ್ನಿಭಳೆ ಅ. ಪ. ಚೈತನ್ಯರಾಣಿ ಪುಸ್ತಕಪಾಣಿ-ಸುನೀಲವೇಣಿ ಅತ್ಯಂತ ಮಹಿಮೆ ಗುಣಗುಣಶ್ರೇಣಿ ತ್ರಿಲೋಕ ಜನನಿ ಸತ್ಯವ ತೋರುತ ನಿತ್ಯೋಪಾದಿಲಿ ಸತ್ಯ ಸಂಕಲ್ಪಳೆ ನಿತ್ಯದಿ ಪೂಜಿಪೆ ತ್ವತ್ಪಾದಾಂಬುಜವಿತ್ತು ನೀ ಸಲಹೆ1 ನಾಲಿಗೆಯಲ್ಲಿ ಬಂದು ನಿಂದು ದಯದಿಂದ ಇಂದು ಶ್ರೀಲೋಲ ಹರಿಯೆ ದೈವವೆಂದು ಕೊಂಡಾಡೆ ಮುಂದು ಕಾಲ ಹಿಂಗಿಸಿ ವಿ- ಶಾಲ ಮತಿಯ ಕೊಟ್ಟು ಆಳುಗಳೊಡನೆ ಸು- ಶೀಲ ಜ್ಞಾನವಿತ್ತು ಆಲಸ್ಯಮಾಡದೆ ಶೀಲ ಮುಕ್ತಿಗನುಕೂಲವಾಗುವುದಕ್ಕೆ2 ಜನ್ಮ ಬಂದಿದೆ ಕಡೆಗೆ ಮಾಡು ದಯದಿಂದ ನೋಡು ಘನ ಕೀರ್ತಿವಂತೆ ಅಭಯವ ನೀಡು, ನಿನಗಲ್ಲ ಈಡು ಕನಸಿಲಿ ಮನಸಿಲಿ ಮನಸಿಜನೈಯನ ನೆನೆಸುವ ಸೌಭಾಗ್ಯವನುದಿನ ಕೊಟ್ಟು ಘನಪ್ರೇರಣೆಯಿಂದ ವಿಜಯವಿಠ್ಠಲನಂಘ್ರಿ ವನಜವ ತೋರಿ ಸನ್ಮೋದವನೀಯೆ3
--------------
ವಿಜಯದಾಸ
ವಾಣೀ ಪರಮ ಕಲ್ಯಾಣಿ - ವಾರಿಜೋದ್ಭವನ ರಾಣೀ ನಾರೀ ಶಿರೋಮಣಿ ಪ ಕ್ಷೋಣಿಯೊಳಗೆ ಸರಿಗಾಣೆನೆ ನಿನಗೆ ಸು- ಪ್ರಾಣಿಯೆ ಹರಿಪದರೇಣು ಧರಿಪೆ ಸದಾ ಅ. ಪ. ಸರಸ್ವತಿ ನಿತ್ಯಾಸಾವಿತ್ರಿ ದೇವಿ ಗಾಯತ್ರಿ ಸರಸಿಜದಳ ಸುನೇತ್ರಿ ನಿಕರ ಸ್ತೋತ್ರಿ - ಶೋಭನಗಾತ್ರಿ ಕರುಣಾಸಾಗರೆ ಪವಿತ್ರಿ ಚರಣದಂದಿಗೆ ಪಂಚ ಬೆರಳು ಭೂಷಣ ಧ್ವನಿ ಸರವು ಕನಕ ಗೆಜ್ಜೆ ಸರಪಳಿ ಪೊಳೆವಾಂ- ಬರಧರೆ ಸುಂದರಿ ಎರಗುವೆ ಎನ್ನನು ಎರವು ಮಾಡದೆ ತ್ರಿಕರಣ ಶುಧ್ಧನೆ ಮಾಡೆ 1 ಸರ್ವರಾತ್ಮಕೆ ಪ್ರಖ್ಯಾತೆ-ಧವಳಗೀತೆ ಸರ್ವರಿಗೆ ಮಹಾ ಪ್ರೀತೆ ನಿರ್ವಾಹವಂತೆ ಪತಿವ್ರತೆ ನಿರ್ಮಲ ಚರಿತೆ ಪೂರ್ವದೇವತೆ ಹರಿಜಾತೆ ಉರ್ವಿಯೊಳಗೆ ಮದಗರ್ವದ ಮತಿನಾ- ನೋರ್ವನಲ್ಲದೆ ಮತ್ತೋರ್ವನ ಕಾಣೆನು ಪೂರ್ವಜನ್ಮದ ಪಾಪ ಪರ್ವತದಂತಿದೆ ನಿರ್ವಾಹವನುಮಾಡೆ ದೂರ್ವಾಂಕುರದಿ 2 ನಿಗಮಾಭಿಮಾನಿ ಸುಜ್ಞಾನಿ ಅಗಣಿತ ಫಲದಾಯಿನಿ ಝಗಝಗಿಸುವ ಕರಯುಗಳ ಭೂಷಣ ಪ - ನ್ನಗವೇಣಿ ಕುಂಕುಮ ಮೃಗಮದ ವೊಪ್ಪಲು ಜಗತ್ಪತಿ ಪ್ರದ್ಯುಮ್ನ ವಿಜಯವಿಠ್ಠಲನಮಗಳೆ ಸುಖಾತ್ಮಕೆ ಜಗದಿ ಶುಶ್ರೋಣೆ 3
--------------
ವಿಜಯದಾಸ
ವಾದಿರಾಜರ ಸ್ತೋತ್ರ ಇದಿರ್ಯಾರೋ ಗುರುವೆ ಸಮರ್ಯಾರೋ ಶ್ರೀ ಹಯವದನ ಪದ ಪ್ರಿಯ ವಾದಿರಾಜ ಪ ಸಿರಿನಿಲಯನ ಗುಣಗಳ ಸ್ಮರಿಸುತಗುರು ಮಧ್ವ ಮುನಿಪನ ಮಹಿಮೆಯ ಪೊಗಳುತನೆರೆದಿದ್ದ ಮಾಯ್ಮದ ಕರಿಗಳ ಶಿರವನುಭರದಿ ಛೇದಿಪ ಬಲಿ ವಿಬುಧ ಕೇಸರಿಯೆ 1 ಸಾರ ಸಜ್ಜನರಿಗೆ ತಿಳಿಯದೇಪರಿಪರಿ ಕುಸಮಯ ತಮ ಕವಿಯಲು ನೀಸರಸ ಭಾರತಿ ಮೊದಲಾದ ಗ್ರಂಥಗಳನುವಿರಚಿಸಿ ತಮ ಹರಿಸಿದ ದಿನಕರನೇ 2 ಸೋದೆಯ ಪುರದಲ್ಲಿರುವ ಹಯವದನನಮೋದದಿ ಭಜಿಸುತ ಈ ಧರೆಯೊಳ್ ಪೂರ್ಣಬೋಧ ತೀರ್ಥರ ಪಾದಸೇವಕರಿಗೆಆದರ ಮಾಳ್ಪ ಯತಿಕುಲ ಶಿರೋಮಣಿಯೇ 3 ಮುದ್ದು ಲಕ್ಷ್ಮೀಶ ವೆಂಕಟ ವಿಠ್ಠಲನಹೊದ್ದಿದ ಭಕ್ತರ ಸಂತಾಪ ಕಳೆಯುತ ಮಧ್ವಮುನಿಯ ಮತ ದುಗ್ಧವಾರಿಧಿಯೊಳುಉದ್ಭವಿಸಿದ ಪೂರ್ಣ ಶುದ್ಧ ಚಂದ್ರಮನೇ 4
--------------
ವೆಂಕಟೇಶವಿಟ್ಠಲ
ವಾದಿರಾಜಾಶ್ರಮ ನೋಡಲು ಸಂಭ್ರಮ ಪಾಡಿ ಪೊಗಳುವರಿಗಾಹುದು ಪ್ರೇಮ ಪ ಕಾಡೊಳಗೆ ಸಂಚರಿಪ ಋಷಿಗಳು ಪಾಡಿಪೊಗಳುತ ಪರಮ ಪುರುಷನ ಬೇಡಿದಿಷ್ಟಾರ್ಥಗಳ ಪಡೆಯುತ ಕೂಡಿ ಸುಖಿಸುವ ಶಿಷ್ಟರಂದದಿ ಅ.ಪ ಪರಮಸಾತ್ವಿಕರೆಲ್ಲ ಪುರಂದರದಾಸರ ಪರಮ ಪುಣ್ಯದ ದಿನ ಬರಲು ಸಂಭ್ರಮದಿ ಪರಿಪರಿವಿಧದಿಂದ ಹರಿದಾಸರೆಲ್ಲರು ತ್ವರದಿಂದ ಗುರುಗಳಾಜ್ಞೆಯ ಮೀರದೆ ಭರದಿಂದ ನೆರೆದರತಿ ಶೀಘ್ರದಿಂದಲಿ ಮುದದಿಂದ ಗುರುಗಳಡಿಗೊಂದಿಸುತ ಕ್ರಮದಿಂದ ಸರಸವಾಕ್ಯಗಳಿಂದ ಶಿಷ್ಯರಿಂದ ಹರಿಸಿ ಆಶೀರ್ವಾದದಿಂದಲಿ ಸುರಿಸಿ ಅಮೃತವಾಣಿ ನುಡಿಯುತ ಹರುಷಪಡುತಿಹ ಗುರುಗಳಿಹ ಸ್ಥಳ 1 ಪವಮಾನಮತದವರೆಲ್ಲರೊಂದಾಗುತ ನಮಿಸಿ ಶ್ರೀಪತಿಗೆ ವಂದನೆ ಮಾಡುತ ವಿನಯದಿಂದಲಿ ತಮ್ಮನಿಯಮಿತ ಕಾರ್ಯವ ನÀಡೆಸುತ್ತ ತಂಬೂರಿಗಳ ಸುಸ್ವರದಿ ಮೀಟುತ ನಿಂದು ಹರುಷಿಸುತ ತಾಳಗಳ ಬಾರಿಸುತ ಶಿಷ್ಯರು ಕುಣಿಯುತ್ತ ಬಲುನಾದ ಕೊಡುತಿಹ ಕಾಲಗೆಜ್ಜೆಗಳೆಲ್ಲ ಘಲುರೆನುತ ದಾಸರಿಗೆ ಉಚಿತದ ಜೋಳಿಗೆಗಳನೆ ಪಿಡಿದು ನಡಿಯುತ್ತ ಶ್ರೀರಾಮರ ದೂತನ ಬಾರಿಬಾರಿಗೆ ನಮಿಸಿ ನಮಿಸಿ ಪೊಗಳುತ್ತ ಹರಿನಾಮ ಸ್ಮರಣೆಯಲಿ ಮಾರುತೀಶನ ಭಕುತರೆಲ್ಲರು ದ್ವಾರಬಿಡುತಲಿ ಪೊರಟು ಭಜಿಸುತ ಬೀದಿಯಲಿ ಕುಣಿಯುತ್ತ ಹರಿಗುಣ ಪಾಡಿ ಪೊಗಳುವ ಪರಮ ವೈಭವ2 ಆ ಮಾರುತನ ದಯದಿಯಾಯಿವಾರವು ಮಾಡಿ ಶ್ರೀನಿಕೇತನ ಪಾಡಿ ಪೊಗಳುತಲಿ ಜ್ಞಾನಿ ಪುರಂದರದಾಸರ ಚರಿತೆಯ ಪೇಳುವರು ಸಂಭ್ರಮದಿಂದಲಿ ನಲಿದಾಡುವರು ಹರಿದಾಸರ ಅದ್ಭುತಕಾರ್ಯಗಳ ಸುಸ್ವರದಿ ಪಾಡುವರು ಹರಿದಾಸ ಶ್ರೇಷ್ಠರ ಮಹಿಮೆಗಳ ಇನ್ನುಳಿದ ಶಿಷ್ಯರು ಪೇಳುವರು ವರ ಪಾರ್ಥಿವ ವತ್ಸರದಿ ಗುರುಗಳ ಕರುಣ ಪಡೆದವರು ನೆರೆದು ರಾತ್ರಿಕಾಲದಲಿ ಶ್ರೀ ಹರಿಯ ಭಜನೆ ಮಾಡುತಿರಲು ಹರುಷ ಪಡುತಲಿ ನಲಿದು ಕಮಲನಾಭ- ವಿಠ್ಠಲನೆ ಸಲಹು ಎನ್ನುವ3
--------------
ನಿಡಗುರುಕಿ ಜೀವೂಬಾಯಿ
ವಾಯುದೇವರ ಸ್ತೋತ್ರ ಲಾಲಿ ಲಾಲಿ ತ್ರಿಭುವನ ಪಾವನ ಲಾಲಿ ಪ ಅಂಜನದೇವಿಯ ಕಂದಗೆ ಲಾಲಿಕಂಜಾಕ್ಷಿಗೆ ಮುದ್ರಿಕೆಯಿತ್ತಗೆ ಲಾಲಿ ||ಅಂಜದೆ ಅಸುರರ ಕೊಂದಗೆ ಲಾಲಿಸಂಜೀವನ ಗಿರಿ ತಂದಗೆ ಲಾಲಿ 1 ಕುಂತಿಯುದರದಿ ಬಂದಗೆ ಲಾಲಿದಂತಿಯ ಗಗನಕ್ಕೆ ಒಗದಗೆ ಲಾಲಿ ||ಭ್ರಾಂತನ ಉದರವ ಬಗೆದಗೆ ಲಾಲಿಚಿಂತಾಮಣಿ ಭೀಮರಾಯಗೆ ಲಾಲಿ 2 ಸೋಹಂ ಎಂಬರ ತರಿದಾಗೆ ಲಾಲಿ ದಾ-ಸೋಹಂ ಎಂಬರ ಪೊರೆದಗೆ ಲಾಲಿ ||ಮೋಹನ್ನ ವಿಠ್ಠಲನ್ನ ಭಜಿಪಗೆ ಲಾಲಿಸ್ನೇಹದಿ ಭಕತರ ಪೊರೆವಗೆ ಲಾಲಿ 3
--------------
ಮೋಹನದಾಸರು
ವಾಯುದೇವರು ಇದು ಏನು ಕೌತುಕವೊ ಹನುಮರಾಯ ಪದುಮನಾಭನ ದಯಾಪಾತ್ರ ಶುಭಕಾಯ ಪ. ಅಂಜನೆಯ ಸುತನಾಗಿ ಅಂದು ಶ್ರೀ ರಾಮರಡಿ ಕಂಜಗಳ ಸೇವಿಸುತ ಮುದ್ರಿಕೆಯನು ಕಂಜಾಕ್ಷಿಗಿತ್ತು ಕ್ಷೇಮವನರುಹಿ ಬಂದಾಗ ಸಂಜೀವ ನಿನಗಿಷ್ಟು ತೊಡಿಗೆ ಕೊಟ್ಟಳೆ ದೇವಿ 1 ಮರುವಾರ್ತೆ ತಂದು ರಾಮಗರುಹಿ ಸೇತುವೆಯ ಗಿರಿಯಿಂದ ಕಟ್ಟಿ ಕಾರ್ಯವ ಸಾಧಿಸೆ ಸಿರಿಸಹಿತ ಶ್ರೀ ರಾಮ ರಾಜ್ಯಕೆ ಬಂದಾಗ ಮರುತ ನಿನಗಿಷ್ಟು ಆಭರಣ ಕೊಟ್ಟನೆ ಪೇಳು 2 ಎಲ್ಲೆಲ್ಲಿ ನಿನ್ನ ಕೀರ್ತಿಯ ಕೇಳೆ ಕೌಪೀನ ವಲ್ಲದಲೆ ಮತ್ತೊಂದರ್ಹಂಬಲಿಲ್ಲ ಮಲ್ಲ ವೈರಾಗ್ಯದಲಿ ಎಂಬುದನು ಕೇಳಿದೆನು ಇಲ್ಲಿ ನೋಡಲು ಇಷ್ಟು ವೈಭವವ ಪಡುತಿರುವೆ 3 ರಾತ್ರೆಯಲಿ ಕೀಚಕನ ಕೊಲ್ಲಲೋಸುಗ ಅಂದು ಮಿತ್ರೆ ರೂಪವ ಧರಿಸಿ ಶೃಂಗರಿಸಿಕೊಂಡು ಕತ್ತಲೊಳು ನೋಡಿಕೊಳ್ಳಲು ಆಗಲಿಲ್ಲೆಂದು ಹಸ್ತ ಕಡಗ ಹರಡಿ ಇಟ್ಟು ಮೆರೆಯುವೆಯೊ 4 ಹುಟ್ಟುತಲೆ ಸಂನ್ಯಾಸ ತೊಟ್ಟು ಬ್ಯಾಸತ್ತೊ ನಡು ಪಟ್ಟಿ ಉಡುದಾರ ಉಡುಗೆಜ್ಜೆ ಕಾಲ್ಗಡಗ ಇಟ್ಟು ನಾನಾ ಬಗೆ ಕದರುಂಡಲಿಯಲಿ ನೆಲಸಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ಪ್ರಿಯನಾದಿ 5
--------------
ಅಂಬಾಬಾಯಿ
ವಾಯುದೇವರು ಎಲ್ಲಿರುವೆ ತಂದೆ ಬಾರೊ ಮಾರುತಿ ಪ ಎಲ್ಲೆಲ್ಲಿನೋಡಿದರು ಅಲ್ಲಿ ನಿನ್ನ ಕೀರುತಿ ಅಲ್ಲಿನಿನ್ನಕೂಡಿರುವ ನಿತ್ಯಾಶ್ರೀಪತಿಅ.ಪ ವಾರಿಧಿಯ ಹಾರಿ ನೀ ಸೇರಿ ತ್ವರದಿ ಲಂಕೆಯ ಕ್ರೂರರನ್ನು ಕೊಂದು ಕುರುಹ ತಂದ ಮಹರಾಯ 1 ದುರುಳ ಕುರುಪನನ್ನು ಕೊಂದು ತರಳೆಯಮಾನ ಹರುಷದಿಂದ ಪೊರೆದು ನೀ ಮೆರೆದ್ಯೊ ಸುಮ್ಮಾನ 2 ಹಿತದಿ ಸತತ ಭಜಿಸಿ ಶೇಷ ವಿಠ್ಠಲನ ಮೋದಿಸಿದಿ 3
--------------
ಬಾಗೇಪಲ್ಲಿ ಶೇಷದಾಸರು
ವಾರಿಧಿ ಈರೇಳು ಲೋಕನಾಯಿಕೆ ಪ ದೂರ ನೋಡದಲೆ ಅಪ ನಿತ್ಯ ಕಲ್ಯಾಣಿ ವೇದವತಿಯೆ ರುಕ್ಮಿಣಿ ವೇದ ವೇದಾಂತದಭಿಮಾನಿ ವಾರಿಜ ಪಾಣಿ ಆದಿ ಮಧ್ಯಾಂತ ಗುಣಮಣಿ ಭೇದಗೊಳಿಪ ಕಾಮಕ್ರೋಧಗಳೋಡಿಸಿ ನೀ ದಯದಿಂದಲೆ ಮುಂದೆ ಗತಿಗೆ ಪಂಚ ಮಾಧವ ಪ್ರಿಯಳೆ 1 ಮಾಯಾ ಕೃತಿ ನಾಮದೊಳಪ್ಪ ಗುಣವಂತೆ ಕೋಮಲವಾದ ವೈಜಯಂತೆ ಧರಿಸಿದ ಶಾಂತೆ ಸೋಮಾರ್ಕ ಕೋಟಿ ಮಿಗೆ ಕಾಂತೆ ತಾಮರಸಾಂಬಕೆ ರಮೆ ಲಕುಮಿ ಸತ್ಯ ಭಾಮೆ ಭವಾರಣ್ಯ ಧೂಮಕೇತಳೆ ಯಾಮ ಯಾಮಕೆ ಹರಿ ನಾಮವ ನುಡಿಸಿ ಉತ್ತಮರೊಡನೆ ಪರಿ ಣಾಮವನೀಯುತ 2 ಅನೇಕಾಭರಣ ಭೂಷಿತೆ ಧರಣಿಜಾತೆ ಜ್ಞಾನಿಗಳ ಮನೋಪ್ರೀತೆ ಆನಂದಲೀಲೆ ವಿಖ್ಯಾತೆ ಆದಿದೇವತೆ ಕಾಣೆನೆ ದಾನಿ ಇಂದಿರಾದೇವಿ ನಾನಾ ಪರಿಯಲಿ ಶ್ರೀನಿಧಿ ವಿಜಯವಿಠ್ಠಲನ ಮೂರುತಿಯಧ್ಯಾನದೊಳಿಡುವಂಥ ಜ್ಞಾನ ಭಕುತಿ ಕೊಡು3
--------------
ವಿಜಯದಾಸ
ವಾಸವನಾಮಕ ದಾಸರ ನೆರೆನಂಬೂ | ಜ್ಞಾನ ಭಕುತಿ ತುಂಬೂಕಾಸುಗಳಿಸಿ ಕೋಟಿಶ್ವರ ನೆನಿಸಿದನಾ | ಸರ್ವವು ಚಲ್ಲಿದನಾ ಅ.ಪ. ಆಶೆಯೆಂದೆನಿಸುವ | ಪೈಶಾಚವ ಕಳೆಯೇ | ದ್ವಿಜಸೋಗಿನಲ್ಹರಿಯೇಕೂಸಿಗೆ ಬ್ರಹ್ಮಚಾರಿ | ಆಶ್ರಮಕೇ ಬೇಡೇ | ಮತ್ತೆ ಕೊಂಡಾಡೇಭೂಸುರ ಬಹುಪರಿ | ಕ್ಲೇಶನಟಿಸಿ ಪೇಳೇ | ಮತ್ತು ಅವನಕೇಳೇಲೇಸುಕಾಸು ಕೊಡ | ದಾಶ್ಮ ಹೃದಯ ವಿವರಾ | ತೆರಳಿದ ದ್ವಿಜವರ 1 ಅತ್ತಿತ್ತಲು ತಿರುಗುತ | ಮತ್ತೆ ಮನೆಗೆ ಬಂದಾ ತಾನಲ್ಲೆ ನಿಂದಹಿತ್ತಲ ಬಾಗಿಲೊಳ್ | ನಿಂತ ಸತಿಯನಾಸಾ ನೋಡಿದ ತಾ ಶ್ರೀಶಾಚಿತ್ತವ ಪ್ರೇರಿಸಿ | ಮತ್ತೆ ಬೇಡಿತಂದಾ | ಮೂಗುತಿ ಬಲು ಛಂದಾವಿತ್ತತಾರೆನುತವ | ನ್ಹತ್ತಿರಿತ್ತು ಪೋದಾ | ಮತ್ತೆ ಬರಧೋದಾ 2 ಸತಿ ಗರ | ಬಟ್ಟಲ ಕುದಿಪೋಗೇ | ಮೂಗುತಿ ಬಿತ್ತಾಗೇ 3 ಸುಂಡಿಪೋಗೆ ತನ | ದಿಂಡು ವ್ಯಸನಕಾಗೀ | ತನಪಾಪಕೆ ಮರುಗೀಕಂಡು ಈಸೋಜಿಗ | ಕೊಂಡಾಡಿದ ಸತಿಯ | ಆದನು ಹೊಸಪರಿಯ ಭಂಡತನದ ಭಂಡಿ | ಭಂಡಿ ದ್ರವ್ಯವೆಲ್ಲ | ದಾನ ಮಾಡ್ದನಲ್ಲಿ ಗಂಡುಗಲಿಯು ಆಗಿ | ಪುಂಡರಿಕಾಕ್ಷಪದಾ | ಬಂಡುಣಿ ತಾನಾದಾ 4 ಪಾದ ಸಿರಿ ಪಾದ ಭಜಿಸೇ | ಇಂದ್ರ ದಾಸನೆನಿಸೇ ಸಂಗ ರಹಿತರಿಗೆ | ಮಂಗಳ ಸಂದೇಶ | ಇತ್ತು ತಾನುಪದೇಶಾ ಅಂಗಜ ಪಿತ ಗುರು | ಗೋವಿಂದ ವಿಠ್ಠಲನಾ ಚರಿತೆಗಳ್ ಬಿತ್ತಿದನಾ 5
--------------
ಗುರುಗೋವಿಂದವಿಠಲರು
ವಾಸುದೇವನ ದಾಸ ವಾಸುಕೀಭರಣನೇ ಭೂಷಾ ಪ ಭಾರತೀಶ ಅ.ಪ. ಬಯಸಬಾರದ ಬಯಕೆಗಳಿಂದ ಬಾಧೆಗೊಳಗಾದೆನೊ ಬಾಧೆಗಳ ಬಿಡಿಸಿ ಭವದಿ ಭಕ್ತರೊಳು ಕೂಡಿಸೋ 1 ಕೊಟ್ಟವರ ಸಾಲವನು ಕೊಟ್ಟು ಮುಟ್ಟಿಸದೆ ದಿಟ್ಟತನದಿ ಬೆಂಬಿಟ್ಟು ಅಗಲದಲಿಟ್ಟು ಕೊಟ್ಟು ತೀರಿಸುವಂತೆಮಾಡೋ ಪ್ರೇಷ್ಯಾ 2 ಏಸೇಸು ಕಲ್ಪಕ್ಕೂ ದಾಸನೆಂಬುದು ಬಲ್ಯಲ್ಲಾ ಈಶ ನೀ ಗತಿಯೆಂಬುದು ಚೆನ್ನಾಗಿ ಬಲ್ಲೆ ಕಾರಣದಿ ಮೊರೆ ಪೊಕ್ಕ ತಂದೆವರದಗೋಪಾಲವಿಠ್ಠಲನಶರಣಾಗ್ರೇಸರಾ3
--------------
ತಂದೆವರದಗೋಪಾಲವಿಠಲರು