ಒಟ್ಟು 1104 ಕಡೆಗಳಲ್ಲಿ , 105 ದಾಸರು , 911 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಾರತಿ ದೇವಿಯೆ ಮಾರುತಿ ರಾಣಿಯೆ ಪ. ಮಂದಿ ನಾಲ್ವರನು ಹೊಂದಿಸಿ ಉದರÀದಿಒಂದೆ ರೂಪದಿ ಜನರಿಗೆ ತೋರುವ ಸತಿ1 ಸೀತಾಕಾಂತನ ದೂತನಾಗಿ ಪ್ರ-ಖ್ಯಾತಿಯ ಪಡೆದನ ಪ್ರೀತಿಯ ಸತಿಯಳೆ 2 ದುಷ್ಟ ಕಲಿಯ ಕುಲಕುಟ್ಟಿ ಕೆಡಹಿದ ಭಲಕಟ್ಟಾಳು ಭೀಮನ ಪಟ್ಟದಸತಿಯಳೆ 3 ಮೂರುಏಳುಕುಲ ಮಾಯಿಗಳನು ಗೆದ್ದುಬೋರೆಮರದ ಕೆಳಗಿರುವನ ಸತಿಯಳೆ 4 ಹಗಲಿರುಳೆನ್ನದೆ ಹಯವದನನ ಪದಹೃದಯ ಕಮಲದೊಳು ಭಜಿಪನ ಸತಿಯಳೆ 5
--------------
ವಾದಿರಾಜ
ಭಾರತಿದೇವಿ ಭಕ್ತಿಯನು ನೀಡಮ್ಮ ಭಾರತೀದೇವಿ ಪ. ಭಕ್ತಿ ದಾತೆಯು ಎಂದು ಶ್ರುತಿ ಶಾಸ್ತ್ರ ಸಾರುತಿವೆಅ.ಪ. ಕಾಮ ಕ್ರೋಧಗಳೆಲ್ಲ ಮನೆಮಾಡಿಕೊಂಡುತಾವೆನೇಮದಿಂ ಪರಿಪರಿ ಕಾಡುತಿಹವುಪ್ರೇಮಿ ನಿನ್ನಯ ಪಾದಕಮಲದಲಿ ಮತಿ ಕೊಟ್ಟುಕಾಮನಯ್ಯನ ತೋರು ಸೋಮಶೇಖರ ಜನನಿ 1 ಮಧ್ವಮತದಲಿ ಎನಗೆ ಶ್ರದ್ಧೆ ಪುಟ್ಟದೆ ಪೋಯ್ತುಸಿದ್ಧವಾಗಿಹುದು ಮನ ದುರ್ವಿಷಯಕೆಬುದ್ಧಿವಂತಳೆ ನಿನ್ನ ಮುದ್ದು ಮುಖವನು ತೋರಿಉದ್ಧಾರ ಮಾಡೆ ಶ್ರೀ ಹದ್ದುವಾಹನ ತನಯೆ 2 ಕರುಣವಾರಿಧಿಯೆಂದು ಮರೆಯ ಪೊಕ್ಕೆನು ತಾಯೆಕರಪಿಡಿದು ಕಾಪಾಡೆ ಉರಗವೇಣಿಕರುಣಸಾಗರ ತಂದೆವರದವಿಠಲನನ್ನುನಿರುತದಿ ಭಜಿಸುವ ಭರತರಾಜನ ರಾಣಿ 3
--------------
ಸಿರಿಗುರುತಂದೆವರದವಿಠಲರು
ಭಾರತಿದೇವಿಯೆ ನಿನ್ನನು ಭಾವದಲಿ ಭಜಿಸುವೆ ಪ್ರಬಲಿಸಮ್ಮಾ ಪ ಮಂದ ಬುದ್ದಿಯಿಂದನಾ ಬಲುಮಾನ ಹೀನನಾಗಿ ಬಾಳಿದೆ ಕೋಮಾಲಾಂಗಿಯೆ 1 ಹತ್ತು ಎಂಟು ಅಂತರದಿ ಜಿಹ್ವದಿ ತಿಳಿವಂತೆನ್ನ ಮಾಡಮ್ಮಾ ಸತ್ಯ ವಾಕ್ಯ ಪ್ರವೀಣೆ ನೀನು ಸಾರುವೆನು ನಾನು 2 ಫಾಲನೇತ್ರಾದಿಗಳಿಲ್ಲಾ ಪರಮ ಮಂಗಳತೋರುವಿ ಬಾಲರಾಮ ಪದಾಬ್ಜ ಭೃಂಗನ ಪಟ್ಟದರಸಿಯೆ 3 ಭಕ್ತಿಯಲಿ ನೀನಿತ್ತರುಂಟು ಭಾದ್ಯರಿದಕಾರು ಕಾಣೆನು ಮುಕ್ತಿ ಮಾರ್ಗವ ತೋರಿಸೆನ್ನನು ಮುಕ್ತನೆನಿಸಮ್ಮಾ 4 ಭೂಮಿಗಧಿಕ ಹೆನ್ನೆಪುರ ಹೆನ್ನೆ ವಿಠಲನ ಪಾದಪದ್ಮವ ಪ್ರೇಮದಿಂದಲಿ ಹೃದಯದಲಿ ಇಟ್ಟು ಪ್ರೀತಿ ತೋರಮ್ಮಾ 5
--------------
ಹೆನ್ನೆರಂಗದಾಸರು
ಭಾರತೀಯ ರಮಣ ಪ್ರಾಣಾ | ಜಗಭಾರ ನಿನ್ನದಯ್ಯ ಪವನಾ ಪ ಘೋರದುರಿತ ಅಟವಿ ದಹನಾ | ಮಾರನಯ್ಯನ ತೋರೊ ಕರುಣ ಅ.ಪ. ಪಾದ ಪಾದ ಬಿಸಜ ಭವ ವಾರಿಧಿ ಮುರ | ವೈರಿಯ ಪದ | ತೋರುತ ಉ | ದ್ಧಾರವಗೈ 1 ದಿವಿಜ ವಿನುತಾ | ನೀ ಸಲಹೊ ಸಕಲ ವ್ಯಾಪ್ತಾ ||ವೀಶ ಶೇಷ | ಈಶಾ ಸುರ | ಪೇಶಾ ರವಿ | ಭಾಸಾ ಸ್ವಪ್ರಕಾಶಕ ಜಗ | ಪೋಷಕ ಚಿ | ತ್ತಾಕಾಶದಿ | ಭಾಸಿಸನಿಲ 2 ಕರಿ ಪರಿ ಪರಿಯಲಿ | ನಿರಂತರ 3
--------------
ಗುರುಗೋವಿಂದವಿಠಲರು
ಭಾರತೀರÀಮಣನೆ ಸಾರಿದೆನು ಚರಣ ತೋರು ಮನ್ಮನದಲಿ ಭೂರಿಸುಕÀರುಣ ಪ ನಾರಾಯಣಾಂಕದಿ ಕುಳಿತಿಹ ಶೂರಾ ಸೂರಿಸ್ತೋಮತೇಜೊರಂಜಿಪುದಾರಾ ಮಾರಮಣನಾಙÁ್ಞದಿಂ ಬ್ರಹ್ಮಾಂಡಧಾರಾ ಧಾರಕಾನಂದ ವಿಠಲನ್ನಚಾರಾ 1 ದುರುಳರಕ್ಕಸತತಿಯ ದ್ವಿರದ ವಿದಾರ ಹರಿರಘುವರನಪಾದ ಶರಧಿಜ ಚಕೋರ ಹರಮುಖ್ಯ ಸುರಸರಸಿರುಹಕೆ ದಿನಕರ ವರದೇಶವಿಠ್ಠಲನ ಸ್ಮರಿಪÀ ಸಮೀರ 2 ಕುರುಕುಲ ಸಂಜಾತ ದ್ರುಪದಜಾನಾಥ ದುರಿಯೋಧನನ ಊರುತರಿದ ನಿರ್ಭೀತ ಪರಮ ಭಗವದ್ಭಕÀ್ತವೃಂದ ಸುಪ್ರೀತ ವರದೇಂದ್ರ ವಿಠ್ಠಲನ ಪ್ರೀಯ ಸುತನೀತ 3 ಅದ್ವೈತ ಮತತಿಮಿರ ಧ್ವಂಸÀನ ಧಿರ ಶುದ್ಧವೈಷ್ಣವ ಮತಸ್ಥಾಪನಾಪಾರ ಸದ್ವಾಕ್ಯದಿಂದಲಿ ಹರಿಪಾರವಾರ ಮಧÀ್ವಸುಂದರ ವಿಠ್ಠಲನ ಸುಕುಮಾರ 4 ವರದೇಶವಿಠ್ಠಲ ವರದೇಂದ್ರ ವಿಠಲ ಸುಂ - ದರ ವಿಠಲ ಆನಂದ ವಿಠ್ಠಲನ್ನ ಪರಿಪರಿ ವಿಧದಲ್ಲಿ ಕರುಣವ ಪಡೆದಿಹ ಗುರುಜಗನ್ನಾಥ ವಿಠ್ಠಲನ ನಿಜದೂತ 5
--------------
ವರದೇಶವಿಠಲ
ಭಾರತೀರಮಣಾ ಮನ್ಮನದಲಿ ತೋರು ತವ ಚರಣಾ ಪ ಮೂರೇಳು ಸಾವಿರದಾರುನೂರು ಜಪ ಓರಂತೆ ಜಪಿಸಿ ಉದ್ಧಾರ ಮಾಡುವಿ ಎಮ್ಮ ಅ.ಪ. ಮೂರುವಿಧ ಜೀವರೋಳು ಹೊರ ನೀ ಪ್ರೇರಕನೋ ದೇವ ನಾರಾಯಣನ ನಿಜಾರಾಧಕರೊಳು ಆರು ನಿನಗೆ ಸರಿ ಮೂರವತಾರನೆ 1 ಚತುರವಿಂಶಶಿ ತತ್ವೇಶರಾಪತಿಯ ನಿನ್ನ ತುತಿಪ ಉಪೇಂದ್ರ ಸುಯತಿಕರ ಪೂಜಿತ ನತಿಸುವೆ ಎಮಗೆ ಸನ್ನತಿ ಕೊಡು ಸರ್ವದಾ 2 ಪ್ರಾಣಪಂಚಕ ರೂಪನೆ ಖಳ ಶ್ರೇಣೀವಂಚಕ ಕ್ಷೋಣಿಯೊಳಗೆ ಕೃಷ್ಣ ವೇಣೀತರಂಗಿಣಿ ತ್ರಾಣಗೈದ ನಿರ್ವಾಣ ಪ್ರದಾಯಕ 3 ಲೋಕರೂಪನೆ ಜಗದೊಳನೇಕ ಚರಿತನೆ ಪಿನಾಕಿ ಸುರೇಂದ್ರ ದಿ ವೌಕಸರೆಮ್ಮನು ಸಾಕುವರನುದಿನ4 ಮಾತರಿಶ್ವನು ಜಾತಹನುಮ ಜಗನ್ನಾಥವಿಠಲನ ಪ್ರೀತಿಯಿಂದಲಿ ತೋರೋ 5
--------------
ಜಗನ್ನಾಥದಾಸರು
ಭಾರತೀಶನ ಸೇರಿರೋ ಭವವಾರಿಧಿ ದಾಟುವರೆ ಸಾರ ತೋರುವ ಪ. ತುಂಗ ವಿಷಯಾಂಗಜನಿತೋತ್ತುಂಗ ತರಂಗದೊಳು ಅಂಗಜಾತ ತಿಮಿಂಗಿಲನು ತಾನುಂಗುವ ನಿಮಿಷದೊಳು ಮಂಗಳಾತ್ಮಕ ಮಾರುತನ ಸದಪಾಂಗಲೇಶವನೈದೆ ಸುಲಭದಿ ರಂಗನಿರವನು ತೋರಿ ಸಲಹುವ 1 ತ್ರೇತೆಯೊಳಗಿನ ಜಾತನಿಗೆ ರಘುನಾಥನ ತೋರಿಸಿದ ಕಾತುರದ ಪುರಹೂತನನು ಯದುನಾಥನಿಗೊಪ್ಪಿಸಿದಾ ಭೂತನಾಥನ ವಾಕ್ಯಬಲದಿಂದಾತ್ಮ ಜೀರಿಗೈಕ್ಯಪೇಳುವ ಪಾತಕಿಗಳನು ಗೆದ್ದು ತ್ರಿಜಗನ್ನಾಥ ಮುತ್ತಿದನೆಂದು ಮೆರಸಿದಿ 2 ಸೂತ್ರನಾಮಕ ಪ್ರಣವನಾಯಕ ಕ್ಷತ್ರಪುರದೊಳಿರುವಾ ಶತ್ರುತಾಪನ ಶೇಷಗಿರಿ ಪತಿಪುತ್ರನೆನಿಸಿ ಮೆರೆವಾ ಚಿತ್ರಕರ್ಮ ಚಿರಂತನಾಣುಗ ಪುತ್ರಮಿತ್ರಕಳತ್ರ ಭಾಗ್ಯದ ನೇತ್ರ ವಿಷಯ ಪರತ್ರ ರಕ್ಷಕ ಧಾತ್ರಪದಸತ್ಪಾತ್ರನೆನಿಸುವ 3
--------------
ತುಪಾಕಿ ವೆಂಕಟರಮಣಾಚಾರ್ಯ
ಭಾರತೀಶನೆ ಬೇಗ ಬಾರೊ ಮನ್ಮನದಲಿ ಹರಣ ಪ ಚಾರು ಭಾಸ್ಕರ ಕ್ಷೇತ್ರ ಗಾರನೆ ದಶರಥಕುಮಾರ ಸೇವಕಾಗ್ರಣಿ ಅ.ಪ ವಾರಿಧಿ ಲಂಘಿಸಿದ ಶೂರನೆ ಗಿರಿಯಾಶ್ರಯದಿ ತೋರುವಿ ಶ್ರಮಪರಿ- ಹಾರಾರ್ಥಿಗಳ ತೆರ ಘೋರ ಪಾತಕಾಂಬುದ ಸ ಮೀರ ಪಾಲಿಸೆನ್ನನು 1 ತಂದು ನೀಡಿದಿ ದ್ರುಪದ ನಂದಿನಿಯಳಿಗೆ ಸೌ ಗಂಧಿಕ ಪುಷ್ಪ ದಯದಿ ವಂದಿಸುವೆನು ಮನ ಮಂದಿರದಲಿ ಯದು ನಂದನನಂಘ್ರೀ ನೋಳ್ಪಾ ನಂದವ ಕರುಣಿಸೊ 2 ಭೇದಾಬೋಧಿಸಿ ಬಲುಮೋದವ ಗರಿವ ಶಾಸ್ತ್ರ ನೀದಯದಲಿ ರಚಿಸಿ ವಾದಿ ಮದಗಜ ಮೃ ಗಾಧಿಪನೆನಿಸಿದ ಮೋದತೀರ್ಥಾಹ್ವಯಾ- ಗಾಧ ಮಹಿಮ ಗುರು 3 ಸತತ ಸೇವಿಪ ಗರ್ಭವತಿಯಾಗಿರುವ ವಿಪ್ರ ಸತಿಯ ನುಡಿಯ ಲಾಲಿಸಿ ನತಜನ ಪಾಲನೆ ಪ- ರ್ವತ ದಿಂದಿಳಿದಶ್ವತ್ಥ ಕ್ಷಿತಿರುಹ ಮೂಲದಿ ಪಾ- ರ್ವಾತಿ ನಾಥ ಸೇವಿತನೆ 4 ಈ ಸುಕ್ಷೇತ್ರದೊಳು ವಿದ್ವಾಂಸ ದೇವರಾಜಾಖ್ಯ ಸನ್ನುತ ವಾಸಕಾರ್ಪರ ನರ ಕೇಸರಿ ಗತಿ ಪ್ರಿಯ ದಾಸ ಪಾಲಿಸೊ ಗುರು ವ್ಯಾಸರಾಜ ಪೂಜಿತ 5
--------------
ಕಾರ್ಪರ ನರಹರಿದಾಸರು
ಭಾರ್ಗವಿ ದೇವಿಭೃಗುವಾರ ಬರಲಿಬೇಕು ಪ ಭೃಗುವಾರ ಬರಲಿಬೇಕ್ಹಗಲು ಪಾಯಸವುಂಡುನಗುತ ರಾತ್ರಿಲಿ ತಾಂಬೂಲಗಳ ಮೆಲ್ಲುವುದಕ್ಕೆ ಅ.ಪ. ನೂಪುರ ಮುಖ ಭೂಷನೀ ಪದ ಕುಣಿಸುತ್ತಶ್ರೀಪತಿ ಸಹ ಸುಖಾಲಾಪಗಳಾಡುತ 1 ಕಂಕಣ ಮುಖರತ್ನಾಲಂಕಾರಗಳನಿಟ್ಟುಕಿಂಕರರಿಗೆ ಮುಖಾಲಂಕಾರ ತೋರುತ2 ಶಂಕರ ಮುಖ್ಯ ಸುರಪುಂಖ ಮಧ್ಯದಿ ಶ್ರೀಮ-ದ್ವೇಂಕಟೇಶನ ದಿವ್ಯ ಟೊಂಕಾದೊಳಗೆ ಕೂತು 3 ಪಕ್ಷಿವಾಹನ ದಿವ್ಯ ವಕ್ಷಸ್ಥಳಾಶ್ರಿತೆಲಕ್ಷ್ಮೀಲೀಲಾಮೃತ ಲಕ್ಷ್ಮೀ ಕೇಳುವುದಕ್ಕೆ 4 ಇಂದಿರೇಶನ ಮೃದು ಸುಂದರೋತ್ಸಂಗದಿಪೊಂದಿ ಭಕ್ತರ ಪೂಜಾನಂದ ಭುಂಜಿಪುದಕ್ಕೆ 5
--------------
ಇಂದಿರೇಶರು
ಭಾವೀ ಸಮೀರ ಶ್ರೀವಾದಿರಾಜರು ಕಾಯ ಕಾಯ ಬೇಕಯ್ಯ ಪ ಕಾಯ ಬೇಕೈ | ವಿಪ ಅಹಿಪ ಸುರಪಾದಿ ವಂದ್ಯವೆ |ವಿಪುಲ ಪಾಪಾಳಿಗಳ ಹರಿಸೀ | ಸುಪಥ ಸದ್ಗತಿಗೆನ್ನ ಒಯ್ದು ಅ.ಪ. ಗೌರಿದೇವಿಯ ಉದರಸಂಭವನೆ | ಹಯಾಸ್ಯನಂಘ್ರಿಸರಸಿರುಹದಲಿ ಮಧುಪ ನೆನಿಸಿದನೆ ||ದ್ವಾರಕಾದಿ ಕ್ಷೇತ್ರ ಚರಿಸುತ | ಥೋರ ಹಿಮಗಿರಿ ಸೇತುಯಾತ್ರೆಯಸಾರಿ ಸತ್ತೀರ್ಥ ಪ್ರಬಂಧವ | ಧೀರ ನೀ ರಚಿಸುತ್ತ ಮೆರೆದೆಯೊ 1 ಲಕ್ಷಿಸುತ್ತಲಿ ಮಾತೆ ಬಿನ್ನಪವ | ಮಹ ಭಾರತಸ್ಥಲಕ್ಷಪದ ಬಹು ಕ್ಲಿಷ್ಟವೆನಿಸೂವ ||ಲಕ್ಷಣದಿ ಸದ್ಯುಕ್ತ ಪದಗಳ | ಈಕ್ಷಿಸುತ ಅವಕರ್ಥ ಪೇಳುತಲಕ್ಷಸದ್ದಾಭರಣ ಮಾಲಿಕೆ | ಲಕ್ಷ್ಮಿಪತಿ ಹಯಾಸ್ಯಗರ್ಪಿತ 2 ಸೇವಿಸುತ್ತಿಹ ವಿಪ್ರನಾದವನ | ಕೌಟಿಲ್ಯ ಕಂಡುತೀವ್ರದಿಂದಲಿ ಶಾಪವಿತ್ತವನ ||ಭಾವ ತಿಳಿದು ಬೊಮ್ಮರಾಕ್ಷಸ | ಭಾವತಾಳೆಂದೆನುತ ಪೇಳಲುತೀವ್ರ ಯಾಚಿಸೆ ಕ್ಷಮೆಯ ಮಂತ್ರವ | ಆವ ಆಕಾಮ್ಮೈವ ನೊರೆದೆ 3 ಮರಳಿ ಉತ್ತರ ಯಾತ್ರೆಯಲ್ಲಿರಲು | ಗುರು ವಾದಿರಾಜರಅರಿಯದಲೆ ತನ್ಮಂತ್ರ ಪೇಳಲು ||ಒರೆದರೂ ರಂಡೇಯ ಮಗ ನೀ | ನಿರುತಿರುವೆನ ಸ್ನಾತ ಕಾರ್ತಿಕಮರಳಿ ಮಾಘಾಷಾಢ ವಿಶಿಖದಿ | ಹರಿಯಿತೂ ನಿನ ಶಾಪವೆಂದರು 4 ಆತುಗುರುಪದ ಕ್ಷಮೆಯ ಪ್ರಾರ್ಥಿಸಲು | ಗುರುರಾಜರಾಗಭೂತ ರಾಜನು ನೀನೆ ಎನ್ನುತಲು ||ಖ್ಯಾತಿ ಪೊಂದುತ ಭಾವಿರುದ್ರನೆ | ಪೊತ್ತು ಎನ್ನಯ ಮೇನೆ ಮುಂಗಡೆಕೌತುಕವ ತೋರುತ್ತ ಮೆರೆವುದು | ಪೋತ ಭಾವದಿ ತಮಗೆ ಎಂದರು 5 ಕಾಕು ಶೈವನ ಖಂಡಿಸುತ್ತಲಿಆಕೆವಾಳರ ಪೊರೆದು ದಶಮತಿ | ತೋಕನೆಂದೆನಿಸುತ್ತ ಮೆರೆದೇ 6 ಭೂವಲಯದೊಳು ಕಾರ್ಯ ಪೂರೈಸಿ | ಬದರಿಯಿಂದಲಿಭಾವಿ ಶಿವನಿಂ ಪ್ರತಿಮೆ ರಥತರಿಸೀ ||ದೇವ ಗೃಹ ಸಹ ವಿರುವ ವಿಗ್ರಹ | ತ್ರೈವಿಕ್ರಮನ ಸಂಸ್ಥಾಪಿಸುತ್ತಭಾವ ಭಕ್ತಿಯಲಿಂದ ಉತ್ಸವ | ತೀವರದಿ ರಚಿಸುತ್ತ ಮೆರೆದೆ 7 ಹಂಚಿಕಿಂದಲಿ ಪೂರ್ವರಚಿತೆನ್ನ | ವೃಂದಾವನಂಗಳುಪಂಚ ಸಂಖ್ಯೆಯಲಿಂದ ಮೆರೆವನ್ನೆ ||ಮುಂಚೆಯೇ ಸ್ಥಾಪಿತವು ಎನ್ನುವ | ಪಂಚರೂಪೀ ವ್ಯಾಸ ಸಮ್ಮುಖಸಂಚುಗೊಳಿಸೀ ಸ್ಥಾಪಿಸುತ್ತ | ಕೊಂಚವಲ್ಲದ ಕಾರ್ಯ ರಚಿಸಿದೆ 8 ಯುಕ್ತಿಮಲ್ಲಿಕೆ ರುಕ್ಮೀಣೀಶ ಜಯ | ಗುರ್ವರ್ಥ ದೀಪಿಕೆಮತ್ತೆ ಪರಿಪರಿ ಶಾಸ್ತ್ರ ಗ್ರಂಥಗಳ ||ವಿಸ್ತರಿಸಿ ಭುವನದಲಿ ಮೆರೆದೆ | ಉತ್ತಮೋತ್ತಮ ದೇವ ದೇವನುಕರ್ತೃ ಶ್ರೀಹಯ ಮುಖನು ಎನ್ನುತ | ವತ್ತಿ ಪೇಳುತ ವ್ಯಾಪ್ತಿಸಾರಿದೆ 9 ಶಿಷ್ಟ ಜನ ಸಂಸೇವ್ಯ ಧೀವರನೆ | ಶಮದಮಾನ್ವಿತಕಷ್ಟಹರ ಕಾರುಣ್ಯ ಸಾಗರನೇ ||ಕುಷ್ಟ ಅಪಸ್ಮಾರ ರೋಗದ | ಅಟ್ಟುಳಿಯ ಕಳೆಯುತ್ತ ಮೃತ್ತಿಕೆಸುಷ್ಠುಸೇವನೆಯಿಂದ ಭಕ್ತರ | ಇಷ್ಟವನೆ ಸಲಿಸುತ್ತ ಮೆರೆವೆ 10 ಹಯಾಸ್ಯ ವಾಹನ | ಬಿಡದೆ ಏರುತ ಸಾರ್ದೆ ಹರಿಯನು 11
--------------
ಗುರುಗೋವಿಂದವಿಠಲರು
ಭೀಮ ಶಾಮ ಕಾಮಿನಿಯಾದನು ಪ ಭೀಮ ಶಾಮ ಕಾಮಿನಿಯಾಗಲು ಪತಿ ಪುಲೋಮ ಜಿತುವಿನ ಕಾಮಿನಿ ಸಕಲ ವಾಮ ಲೋಚನೆಯ- ರಾಮೌಳಿ ಕೂಗುತಲೊಮ್ಮನದಿ ಪಾಡೆಅ.ಪ ದಾಯವಾಡಿ ಸೋತು ರಾಯ ಪಾಂಡವರು ನ್ಯಾಯದಿಂದ ಸ್ವಾಮಿಯ ಸೇವೆಯೆಂದು ಕಾಯದೊಳಗೆ ಅಸೂಯೆಪಡದಲೆ ಮಾಯದಲ್ಲಿ ವನವಾಯಿತೆಂದು ರಾಯ ಮತ್ಸ್ಯನಾಲಯದೊಳು ತಮ್ಮ ಕಾಜು ವಡಗಿಸಿ ಅಯೋನಿಜೆ ದ್ರೌಪ- ದೀಯ ವಡಗೂಡಿ ಆಯಾಸವಿಲ್ಲದೆ ಅಯ್ವರು ಬಿಡದೆ ತಾವಿರಲು 1 ಬಾಚಿ ಹಿಕ್ಕುವ ಪರಿಚಾರತನದಲಾ ಪಾಂಚಾಲಿಗೆ ಮತ್ಸ್ಯನಾ ಚದುರೆಯಲ್ಲಿ ಆಚರಣೆಯಿಂದ ಯಾಚಕರಂದದಿ ವಾಚವಾಡಿ ಕಾಲೋಚಿತಕೆ ನೀಚರಲ್ಲಿಗೆ ಕೀಚಕನಲ್ಲಿಗೆ ಸೂಚಿಸಲು ಆಲೋಚನೆಯಿಂದಲಿ ನಾಚಿಕೆ ತೋರುತಲಾ ಚೆನ್ನೆ ಪೋಗಲು ಕರ ಚಾಚಿದನು 2 ಎಲೆಗೆ ಹೆಣ್ಣೆ ನಿನ್ನೊಲುಮೆಗೆ ಕಾಮನು ಕಳವಳಿಸಿದ ನಾ ಗೆಲಲಾರೆನಿಂದು ವಲಿಸಿಕೊ ಎನ್ನ ಲಲನೆಯ ಕರುಣಾ- ಜಲಧಿಯೆ ನಾರೀ ಕುಲಮಣಿಯೆ ಬಳಲಿಸದಲೆ ನೀ ಸಲಹಿದಡೇ ವೆ- ಗ್ಗಳೆಯಳ ಮಾಡಿಪೆನಿಳೆಯೊಳೆನ್ನೆ-ಆ- ಖಳನಾ ಮಾತಿಗೆ ತಲೆದೂಗುತಲಿ ಅ- ನಿಳಜನೆನ್ನ ನೀ ಸಲಹೆಂದ 3 ಮೌನಿ ದ್ರೌಪದಿ ಮೌನದಲ್ಲಿ ಹೀನನಾಡಿದಾ ಊನ ಪೂರ್ಣಗಳು ಮನೋಭಾವವ ಧೇನಿಸಿ ನೋಡುತ್ತ ಹೀನಕೆ ತಿಳಿದಳು ಮನದಲಿ ದೀನವತ್ಸಲ ಕರುಣವು ಮೀರಿತು ಕಾನನದೊಳ್ಕಣ್ಣು ಕಾಣದಂತಾಯಿತು ಏನು ಮಾಡಲೆಂದು ಜಾಣೆಯು ಚಿಂತಿಸಿ ಅನಿಲಗೆ ಬಂದು ಮ-ಣಿದಳು4 ಚೆಲ್ವೆ ಕಂಗಳೇ ನಿಲ್ಲೆ ನೀ ಘಳಿಗೆ ಸಲ್ಲದೆ ಆತನ ಹಲ್ಲನು ಮುರಿದು ಹಲ್ಲಣವ ಹಾಕಿ ಕೊಲ್ಲುವೆ ನಾನೀಗ ತಲ್ಲಣಿಸದಿರೇ ಗೆಲ್ಲುವೆನೆ ಪುಲ್ಲನಾಭ ಸಿರಿನಲ್ಲನ ದಯವಿ- ದ್ದಲ್ಲಿಗೆ ಬಂದಿತು ಎಲ್ಲ ಕಾರ್ಯಗಳ ಸಲ್ಲಿಸಿ ಕೊಡುವನು ಬಲ್ಲಿದ ನಮಗೆ ಮಲ್ಲಿಗೆ ಮುಡಿಯಾ ವಲ್ಲಭಳೆ 5 ಎಂದ ಮಾತಿಗಾನಂದ ಮಯಳಾಗಿ ಬಂದಳಾ ಖಳನ ಮಂದಿರದೊಳು ನೀ- ನೆಂದ ಮಾತಿಗೆ ನಾನೊಂದನು ಮೀರೆನು ಕಪಟ ಸೈರಂಧಿರಿಯೂ ಕುಂದಧಾಭರಣವ ತಂದು ಕೊಡಲು ಆ- ನಂದದಿಂ ಪತಿಯ ಮುಂದೆ ತಂದಿಟ್ಟಳು ಮಂದರೋದ್ಧರನ ಚಂದದಿ ಪೊಗಳುತ ಇಂದು ಸುದಿನವೆಂದ ಭೀಮ6 ಉಟ್ಟ ಪೀತಾಂಬರ ತೊಟ್ಟ ಕುಪ್ಪಸವು ಇಟ್ಟತಿ ಸಾದಿನ ಬಟ್ಟು ಫಣಿಯಲ್ಲಿ ಕಟ್ಟಿದ ಮುತ್ತಿನ ಪಟ್ಟಿಸ ಕಿವಿಯಲ್ಲಿ ಇಟ್ಟೋಲೆ ತೂಗಲು ಬಟ್ಟ ಕುಚ ಘಟ್ಟಿ ಕಂಕಣ ರ್ಯಾಗಟೆ ಚೌರಿ ಅ- ದಿಟ್ಟಂಥ ಈರೈದು ಬೆಟ್ಟುಗಳುಂಗರ ಮುಟ್ಟೆ ಮಾನೆರಿ ದಟ್ಟಡಿವೊಪ್ಪತಿ ಕಟ್ಟುಗ್ರದ ಜಗ ಜಟ್ಟಿಗನು 7 ತೋರ ಮೌಕ್ತಿಕದ ಹಾರ ಸರಿಗೆ ಕೇ ಯೂರ ಪದಕ ಭಂಗಾರ ಕಾಳಿಸರ ವೀರ ವಿದ್ರುಮದ ಭಾಪುರಿ ಉ- ತ್ತಾರಿಗೆ ವರ ಭುಜಕೀರುತಿಯು ಮೂರೇಖೆಯುಳ್ಳ ಉದಾರ ನಾಭಿವರ ನಾರಿ ನಡು ಉಡುಧಾರ ಕಿಂಕಿಣಿ ಕ- ಸ್ತೂರಿ ಬೆರಸಿದ ಗೀರುಗಂಧವು ಗಂ- ಬೂರ ಲೇಪ ಶೃಂಗಾರದಲಿ8 ವಂಕಿ ದೋರ್ಯವು ಕಂಕಣ ಒಮ್ಮೆಯೀ- ಚಾಪ ಭ್ರೂ ಅಲಂಕಾರ ಭಾವ ಪಂಕಜಮಾಲೆ ಕಳಂಕವಿಲ್ಲದಲೆ ಸಂಕಟ ಕಳೆವ ಪಂಕಜಾಂಘ್ರಿ ಝಂಕಾರಕೆ ಲೋಕ ಶಂಕಿಸೆ ನಾನಾ- ಅಂಕುರ ವೀರ- ಕಂಕಣ ಕಟ್ಟಿದ ಬಿಂಕದಿಂದಲಾ- ತಂಕವಿಲ್ಲದೆಲೆ ಕಂಕಾನುಜ 9 ಕಂಬು ಕೊರಳು ದಾಳಿಂಬ ಬೀಜ ದಂತ ದುಂಬಿಗುರುಳು ನೀಲಾಂಬುದ ಮಿಂಚೆಂ- ದೆಂಬ ತೆರದಲಾ ಅಂಬಕದ ನೋಟ ತುಂಬಿರೆ ಪವಳ ಬಿಂಬಾಧರ ಜಂಬೀರ ವರ್ಣದ ಬೊಂಬೆಯಂತೆಸೆವ ತಾಂಬೂಲ ಗಿಳಿಯೆಂಬ ಗಂಭೀರ ಪುರುಷನು ಹಂಬಲಿಸಿದ ತಾ ಸಂಭ್ರಮದಿ 10 ಸಂಧ್ಯಾದೇವಿಯೊ ಇಂದ್ರನ ರಾಣಿಯೊ ಚಂದ್ರನ ಸತಿಯೋ ಕಂದರ್ಪನಾಕರ- ದಿಂದ ಬಂದ ಅರವಿಂದದ ಮೊಗ್ಗೆಯೊ ಅಂದ ವರ್ಣಿಪರಾರಿಂದಿನಲಿ ಇಂದು ರಾತ್ರಿ ಇದೆ ಎಂದಮರಮುನಿ ಸಂದೋಹ ಕೊಂಡಾಡೆ ಇಂದುಮುಖಿಯೊಡ ನಂದು ತಾ ನಾಟ್ಯದ ಮಂದಿರಕೆ ನಗೆ- ಯಿಂದ ಬಂದ ಕುಂತಿನಂದನನು11 ಭಂಡ ಉಡಿಯಲಿ ಕೆಂಡವೊ ಪರರ ಹೆಂಡರ ಸಂಗ ಭೂಮಂಡಲದೊಳೆನ್ನ ಗಂಡರು ಬಲು ಉದ್ದಂಡರು ನಿನ್ನನು ಕಂಡರೆ ಬಿಡರೋ ಹಂಡಿಪರೋ ಲಂಡ ಬಾಯೆಂದು ಮುಕೊಂಡು ಕೈದುಡುಕಿ ಅಂಡಿಗೆಳೆದು ಅಖಂಡಲನ ಭಾಗ್ಯ ಮಂಡೆ ಮೊಗ ಗಲ್ಲ ಡುಂಡು ಕುಚ ಮುಟ್ಟಿ ಬೆಂಡಾದನು 12 ಸಾರಿಯಲ್ಲ ಮಕಮಾರಿಯಿದೆನುತ ಶ- ರೀರ ವತಿ ಕಠೋರವ ಕಂಡು ಜ- ಝಾರಿತನಾಗಿ ನೀನಾರು ಪೇಳೆಂದು ವಿ- ಕಾರದ್ಯಬ್ಬರಿಸಿ ಕೂರ್ರನಾಗಿ ತೋರು ಕೈಯೆಂದು ಸಮೀರನು ಎದ್ದು ವಿ ಚಾರಿಸಿಕೋ ಎನ್ನ ನಾರಿತನವೆಂದು ವೀರ ಮುಷ್ಟಿಯಿಂದ್ಹಾರಿ ಹೊಡೆಯಲು ಕ್ರೂರನು ರಕ್ತವ ಕಾರಿದನು 13 ಹಾರಿ ಹೊಯ್ಯತಲೆ ಮೋರೆಲಿದ್ದ ಕಳೆ- ಸೂರೆಯಾಯಿತು ಪರನಾರೇರ ಮೋಹಿಸಿ ಪಾರಗಂಡವರುಂಟೆ ಶರೀರದೊಳಿದ್ದ ಮಾರುತೇಶ ಹೊರಸಾರಿ ಬರೆ ಧೀರ ಭೀಮರಾಯ ಭೋರಿಡುತ ಹಾರಿ ಕೋರ ಮೀಸೆಯನೇರಿಸಿ ಹುರಿಮಾಡಿ ನಾರಿಮಣಿ ಯಿತ್ತ ಬಾರೆಂದು ಕರೆದು ಸಾರಿದನು ನಿಜಾಗಾರವನು 14 ಸರಸವು ನಿನಗೆ ವಿರಸವು ಆಯಿತು ಕರೆಸೆಲೊ ಈ ಪುರದರಸಾ ಕಳ್ಳನ ನರಸಿಂಹನ ನಿಜ ಅರಸಿಗೆ ಮನವನು ಮಂದರ ಅರಸನೆ ಅರಸಿ ನೋಡುತಿರೆ ವರೆಸಿದನಾ ಜೀವ ದೊರಸೆಯ ಖೂಳನ ಬೆರೆಸಿ ಸವಾಂಗ ಸಿರಿ ವಿಜಯವಿಠ್ಠಲ ಅರಸಿನ ಲೀಲೆಯ ಸ್ಮರಿಸುತಲಿ 15
--------------
ವಿಜಯದಾಸ
ಭೀಮಸೇನ ಭಾಮಿನಿಯಾದನು ಪ. ಭೀಮಸೇನ ಭಾಮಿನಿಯಾಗಲುಪ್ರೇಮದ ಸತಿಯ ಕಾಮಿಸಿದವನಝಾಮರಾತ್ರಿಗೆ ಸೀಳುವೆನೆನ್ನುತಸಾಮಜವರದನ ಪಾಡುತಲಿ ಅ.ಪ. ರಾಜಾಧಿರಾಜನು ಗಜಪುರದಲ್ಲಿಜೂಜಾಡಿ ತಮ್ಮ ರಾಜ್ಯವನು ಸೋತುವಿಜಯಮುಖ್ಯ ಅನುಜರೊಡಗೂಡಿಭುಜಂಗಶಾಯಿಯ ಭಜಿಸುತ್ತಸೂಜಿಮೊನೆಯಷ್ಟು ಗೋಜಿಲ್ಲದೆ ಬೇರೆವ್ಯಾಜದಿಂದ ರೂಪಮಾಜಿಕೊಂಡು ಪೋಗೆರಾಜ ಮತ್ಸ್ಯನೊಳು ಭೋಜನ ಮಾಡುತ್ತಪೂಜಿಸಿಕೊಂಬೋ ಸೋಜಿಗವೇನಿದು1 ಮಾನಿನಿ ದ್ರೌಪದಿ ಶ್ರೇಣಿಯೊಳು ಬರುತ ತ್ರಾಣಿ ವಿರಾಟನ ರಾಣಿಯು ಕಾಣುತಧ್ಯಾನಿಸಿ ಯಾರೆಂದು ಮನ್ನಿಸಿ ಕೇಳಲುಮುನ್ನಿನ ಸಂಗತಿ ಪೇಳಿದಳುಆಣಿಮುತ್ತಿನಂಥಾ ವಾಣಿಯ ಕೇಳಲುಕ್ಷೋಣಿಲಿ ನಿನ್ನಂಥ ಜಾಣೆಯ ಕಾಣೆನುಪ್ರಾಣ ನೀನೆನಗೆ ವೇಣಿ ಹಾಕೆನುತಪಾಣಿ ಪಿಡಿದು ಕರೆತಂದಳಾಗ2 ಈಶ ಕೇಳೊ ಪರದೇಶದಿಂದೊಬ್ಬಳುಕೇಶಕಟ್ಟುವಂಥ ವೇಷದಿ ಬಂದಳುಸಾಸಿರಮುಖದ ಶೇಷನೀರೂಪವಲೇಶವು ತಾ ವರ್ಣಿಸಲರಿಯನುವಾಸಮಾಡುವೆನು ಮಾಸಯೀರಾರುಗ್ರಾಸವ ಕೊಟ್ಟೆನ್ನ ಪೋಷಿಸೆಂದಾ ನುಡಿದೋಸನು ಪೇಳಲು ಮೀಸೆಯ ತಿರುವುತಮೀಸಲೆನಗೆಂದು ತೋಷಿಸಿದ 3 ನಾರಿ ಅಕ್ಕನಲ್ಲಿ ಸೇರಿಕೊಂಡಿಹಳುಮೋರೆಯ ನೋಡಲು ಭಾರಿ ಗುಣವಂತೆತೋರುತಲಿದೆ ಎನ್ನ ಸೇರಿದ ಮೇಲನು-ಚಾರಿ ಎನಿಸುವೆ ಮೀರಿದ್ದಕ್ಕೆವಾರೆಗಣ್ಣಿಲೊಂದು ಸಾರಿ ನೋಡ್ಯಾಳೆಂದುಬಾರಿ ಬಾರಿಯಾಕೆ ಮೋರೆ ನೋಡುತಿರೆನೀರೆ ಆ ಕ್ರೂರನ್ನ ಘೋರರೂಪಕಂಜಿಮೋರೆ ತೋರದೆ ಗಂಭೀರದಿಂದಿರೆ 4 ಅಕ್ಕನಿಗೆ ಬಾಚಿ ಹಿಕ್ಕುವ ಸೇವೆಗೆಪುಕ್ಕಟೆ ಅನ್ನಕೆ ಸಿಕ್ಕುವರೆ ನೀನುಚಿಕ್ಕಪ್ರಾಯಕೆನ್ನ ಪಕ್ಕಕ್ಕೆ ಬಂದರೆಸಕ್ಕರೆದುಟಿಸವಿ ದಕ್ಕಿಸುವೆರಕ್ಕಸ ನಿನಗೆ ದಕ್ಕುವಳೆ ನಾನುಮುಕ್ಕಣ್ಣನಾದರು ಲೆಕ್ಕಿಸದಾ ಪತಿಗಕ್ಕನೆ ಬಂದರೆ ತಿಕ್ಕಿ ನಿನ್ನ ಕಾಯದಿಕ್ಕು ದಿಕ್ಕಿಗೆ ಬಲಿಯಿಕ್ಕುವರೊ 5 ಭಂಡಕೀಚಕನುದ್ದಂಡತನ ಕೇಳುಮಂಡೆ ಹಿಕ್ಕುವಳೆಂದು ಕಂಡಕಂಡ ಬಳಿಪುಂಡು ಮಾಡುವನು ಗಂಡಕಂಡರೆ ತಲೆಚಂಡನಾಡುವನು ಖಂಡಿತದಿಮಂಡಲಾಧಿಪನ ಹೆಂಡತಿ ನೀನಮ್ಮಉಂಡಮನೆಗೆ ಹಗೆಗೊಂಡಳೆನ್ನದಿರುಲಂಡನಿಗೆ ಬುದ್ಧಿ ದಂಡಿಸಿ ಪೇಳದೆಹಿಂಡಿಕೊಳ್ಳದಿರು ದುಂಡುಮುಖ 6 ತರಳ ನಿನ್ನಯ ದುರುಳತನದಬೆರಳ ಸನ್ನೆಯು ಗರಳವಾಯಿತೆಸರಳ ಗುರಿಗೆ ಕೊರಳ ಕೊಡದೆಪುರದೊಳಿರದೆ ತೆರಳೊ ನೀಅರಳಮೊಗ್ಗೆಯ ಹೆರಳಿಗ್ಹಾ ಕುತಕುರುಳು ತಿದ್ದುವ ತರಳೆಯ ಕಂಡುಇರಳು ಹಗಲು ಬಾರಳು ಎನ್ನುತಮರುಳುಗೊಂಡರೆ ಬರುವಳೆ 7 ನಿಷ್ಠೆ ಸೈರಂಧ್ರಿಯ ದೃಷ್ಟಿಸಿ ನೋಡಲುನಷ್ಟವಾಗುವುದು ಅಷ್ಟೈಶ್ವರ್ಯವುಭ್ರಷ್ಟ ನಿನಗೆ ನಾನೆಷ್ಟು ಪೇಳಲಿನ್ನುಕಟ್ಟಕಡೆಗೆ ನೀನು ಕೆಟ್ಟಿಕಂಡ್ಯಾಸೃಷ್ಟಿಲಿ ನನ್ನಂಥ ಗಟ್ಟಿಗನ್ಯಾರಕ್ಕದುಷ್ಟರ ಎದೆಯ ಮೆಟ್ಟಿ ಸೀಳುವೆನುಗುಟ್ಟಿಂದ ನಾರಿಯ ಕೊಟ್ಟುಕಳುಹಲುಪಟ್ಟದ ರಾಣಿಯೊಳಿಟ್ಟುಕೊಂಬೆ 8 ಕರವ ಬಾಚಿದನುಬಾಚಿ ಹಿಕ್ಕುವಂಥ ಪ್ರಾಚೀನವೇನಿದುವಾಚನಾಡು ಮೀನಲೋಚನೆ ಎನ್ನಲುಆಚರಿಸಿ ಮುಂದುತೋಚದೆ ಖಳನವಿಚಾರಿಸಿಕೊ ಶ್ರೀಚಕ್ರಪಾಣಿ 9 ಪೊಡವಿಪತಿಗಳ ಮಡದಿ ನಾನಾಗಿಬಡತನವು ಬಂದೊಡಲಿಗಿಲ್ಲದೆನಾಡದೊರೆಗಳ ಬೇಡುವುದಾಯಿತುಮಾಡುವುದೇನೆಂದು ನುಡಿದಳುಕೇಡಿಗ ಕೀಚಕ ಮಾಡಿದ ಚೇಷ್ಟೆಗೆಕಡಲಶಾಯಿ ಕಾಪಾಡಿದ ಎನ್ನನುಆಡಲಂಜಿಕೇನು ಷಡುರಸಾನ್ನದಅಡುಗೆ ರುಚಿಯ ನೋಡುವರೇ 10 ನಡುಗುವೊ ಧ್ವನಿ ಬಿಡುತ ಕಣ್ಣೀರಿಂ-ದಾಡುವ ಮಾತನು ಬಾಡಿದ ಮುಖವನೋಡಿದನಾಕ್ಷಣ ತೊಡೆದು ನೇತ್ರವಬಿಡುಬಿಡು ದುಃಖ ಮಾಡದಿರುಪುಡುಕಿ ನಿನ್ನನು ಹಿಡಿದವನನ್ನು ಬಡಿದು ಯಮಗೆ ಕೊಡುವೆ ನೋಡೀಗತಡವ ಮಾಡದೆ ಗಾಢದಿ ಪೋಗು ನೀಮಾಡಿದ ಚಿಂತೆ ಕೈಗೊಡಿತೆಂದು 11 ಶಶಿಮುಖಿ ಕೇಸರಿ ಗÀಂಧವದಾಸಿಯರಿಂದ ಪೂಸಿಕೊಂಡುಹಾಸುಮಂಚದಲ್ಲಿ ಬೀಸಿ ಕೊಳುತಲಿಗಾಸಿ ಪಡುತಿರೆ ಆ ಸಮಯದಲಿಲೇಸಾಗಿ ನಿನ್ನಭಿಲಾಷೆ ಸಲ್ಲಿಸುವೆಈಸು ಸಂಶಯ ಬೇಡ ಭಾಷೆ ಕೊಟ್ಟೆ 12 ನಳಿನಮುಖಿಯು ಪೇಳಿದ ಮಾತನುಕೇಳಿ ಹರುಷವ ತಾಳಿದನಾಕ್ಷಣಖಳನು ಹೊನ್ನಿನ ಜಾಳಿಗೆಯ[ತೊಟ್ಟಿನ್ನುಳಿಯದಲೆ] ರತಿಕೇಳಿಗಿನ್ನುಕಾಳಗದ ಮನೆಯೊಳಗೆ ಬಾರೆಂದುಪೇಳಿದ ಸುಳುವು ಪೇಳಲು ಭೀಮಗೆಖಳನ ಕಾಯವ ಸೀಳುವವೇಳೆ ಬಂತೆನ್ನುತ ತೋಳ ಹೊಯಿದ 13 ನಾರಿಯಿನ್ಯಾವಾಗ ಬರುವಳೋಯೆಂದುದಾರಿಯ ನೋಡುವ ಚೋರ ಕೀಚಕನುತೋರಿದ ಠಾವಿಲಿ ಸೇರುವ ಬೇಗನೆಊರೊಳಗಾರು ಅರಿಯದಂತೆಕ್ರೂರನು ಮೋಹಿಪತೆರದಿ ಎನಗೆನಾರಿಯ ರೂಪ ಶೃಂಗರಿಸು ನೀನೆಂದುವಾರಿಜಮುಖಿಯ ಮೋರೆಯ ನೋಡಲುನೀರೆ ದ್ರೌಪದಿ ತಾ ನಾಚಿದಳು14 ಬಟ್ಟ ಮುಖಕೆ ತಾನಿಟ್ಟಳು ಸಾದಿನಬಟ್ಟು ಫಣೆಯಲಿ ಇಟ್ಟು ಕಣ್ಣಕಪ್ಪಪಟ್ಟ್ಟೆಪೀತಾಂಬರ ಉಟ್ಟುಕೋ ನೀನೆಂದುಪುಟ್ಟಾಣಿ ಕುಪ್ಪಸ ಕೊಟ್ಟಳಾಗಕಟ್ಟಾಣಿ ಮುತ್ತು ತಾಕಟ್ಟಿ ಕೊರಳಿಗೆಗಟ್ಟ್ಯಾಗಿ ಚಿನ್ನದಪಟ್ಟಿಯುಡುದಾರದಿಟ್ಟನ ಬೆರಳಿಗಿಟ್ಟಳು ಉಂಗುರವಿಟಪುರುಷರ ದೃಷ್ಟಿತಾಕುವಂತೆ15 ಮುತ್ತಿನ ಮೂಗುತಿ ಕೆತ್ತಿದ ವಾಲೆಯುಇತ್ತೆರÀ ಬುಗುಡಿಯು ನೆತ್ತೀಗರಳೆಲೆಚಿತ್ರದ ರಾಕಟೆ ಉತ್ತಮಕ್ಯಾದಿಗೆಒತ್ತೀಲಿ ಶ್ಯಾಮಂತಿಗ್ಹ್ಹೂವು ಗೊಂಡ್ಯಾಹಸ್ತದ ಕಡಗವು ಮತ್ತೆ ಚೂಡ್ಯ ವಂಕಿಮುತ್ತಿನ ಹಾರವು ರತ್ನದ ಪದಕವುಅರ್ತಿಲಿ ನಾರಿಯು ಕುತ್ತಿಗ್ಗ್ಯೆಹಾಕಲುಹಸ್ತಿನಿಯೋ ಈಕೆ ಚಿತ್ತಿನಿಯೊ16 ಮುಡಿಗೆ ಮಲ್ಲಿಗೆ ಮುಡಿಸಿ ಸುಗಂಧತೊಡೆದು ತಾಂಬೂಲ ಮಡಿಸಿಕೊಡುತಪ್ರೌಢನ ಸ್ತ್ರೀರೂಪ ನೋಡಲು ಖಳನುಕೊಡದೆ ಪ್ರಾಣವ ಬಿಡನೆಂದಳುಮಾಡಿದ್ಯೋಚನೆ ಕೈಗೂಡಿತು ಇಂದಿಗೆನೋಡು ಆ ಕೃಷ್ಣನು ಹೂಡಿದ ಆಟವಮಡದಿ ನೀನೆನ್ನ ಒಡನೆ ಬಾರೆಂದುನಡೆದ ಖಳನ ಬಿಡಾರಕೆ 17 ಇಂದುಮುಖಿ ಅರವಿಂದನಯನದ ಮಂದಗಮನೆಯು ಬಂದಳು ಎನ್ನುತನಂದನತನಯನ ಕಂದನ ಬಾಧೆಗೆಕಂದಿ ಕುಂದಿ ಬಹು ನೊಂದೆನೆಂದಹಿಂದಿನ ಸುಕೃತದಿಂದಲಿ ನಿನ್ನೊಳಾ-ನಂದವಾಗಿಹುದು ಇಂದಿಗೆ ಕೂಡಿತುಕುಂದದಾಭರಣ ತಂದೆ ನಾ ನಿನಗೆಚಂದದಿಂದಿಟ್ಟು ನೀನಂದವಾಗೆ18 ಗುಲ್ಲುಮಾಡದಿರೊ ಮೆಲ್ಲಗೆ ಮಾತಾಡೊವಲಭರ್ತಾಕಂಡರೆ ಹಲ್ಲು ಮುರಿವರೊಬಲ್ಲವ ನಿನಗೆ ಸಲ್ಲದು ಈ ಕಾರ್ಯಗೆಲ್ಲಲರಿಯೆ ನೀ ಕೊಲ್ಲಿಸಿಕೊಂಬೆಚೆಲ್ವೆ ಕೇಳು ನಿನ್ನ ಹುಲ್ಲೆಗಣ್ಣ ನೋಟಕೊಲ್ವಬಗೆ ಗೆಲ್ಲಲಾರೆನೆಂದುಗಲ್ಲವ ಮುದ್ದಿಟ್ಟು ಮೈಯೆಲ್ಲ ಹುಡುಕಲುಕಲ್ಲೆದೆಯಲ್ಲ್ಲಿರೆ ಖೂಳ ನೊಂದ 19 ನಾರಿಯೊ ನೀನೇನು ಮಾರಿಯೊ ಇನ್ನೊಂದುಬಾರಿ ನೀ ಎನಗೆ ಮೋರೆ ತೋರಿಸೆಂದಧೀರನ ಸಮೀಪಬಾರದೆ ಓಡುವದಾರಿಯ ನೋಡುತಿರಲಾಗಬಾರದಂಥಾ ಪರದಾರರ ಮೋಹಿಪಕ್ರೂರಗೆ ಈ ರೂಪ ಘೋರವಾಗಿಹುದುಸಾರದ ಮಾತಿದು ಯಾರಾದರೇನೀಗಮಾರನ ತಾಪವ ಪರಿಹರಿಸುವೆ 20 ಸಮೀರಜ ಗುದ್ದಲು ಕೀಚಕಬಿದ್ದನು ಭೂಮಿಲಿ ಗೆದ್ದೆನೆನುತ ಅನಿ-ರುದ್ಧನ ಸ್ಮರಿಸುತಲೆದ್ದ ಭೀಮ 21 ಕೆಟ್ಟ ಕೀಚಕ ತಾ ತೊಟ್ಟ ಛಲದಿಂದಬೆಟ್ಟದಂಥ ದೇಹ ಬಿಟ್ಟಿನ್ನವನಪಟ್ಟಾಗಿ ತೋರುವೆ ದೃಷ್ಟಿಸು ಎನ್ನಲುಭ್ರಷ್ಟನ ನೋಡುವುದೇನೆಂದಳುಕೊಟ್ಟ ಭಾಷೆಯು ಈಗ ಮುಟ್ಟಿತು ನಿನಗೆಕೃಷ್ಣನ ದಯದಿ ಕಷ್ಟವು ಹಿಂಗಿತುಪಟ್ಟಣಕೀಸುದ್ದಿ ಮುಟ್ಟದ ಮುಂಚೆಗುಟ್ಟಲಿ ಪೋಗುವ ಥಟ್ಟನೆಂದ 22 ಅರಸಿ ನಿನ್ನೊಳು ಸರಸ ಬೇಕೆಂದಪುರುಷನ ಜೀವ ಒರೆಸಿ ಕೊಂದೆನುಹರುಷದೀ ಪುರದರಸು ನಮ್ಮನುಇರಿಸಿಕೊಂಡೊಂದೊರುಷವಾಯಿತುಬೆರೆಸಿದ ಸ್ನೇಹಕ್ಕೆ ವಿರಸ ಬಂತೆಂದುಸರಸಿಜಾಕ್ಷಿಯು ಕರೆಸಿ ನಿನ್ನೊಳಗಿರಿಸದಿದ್ದರೆ ಹಯವದನನಸ್ಮರಿಸಿ ಗದೆಯನು ಧರಿಸುವೆ23
--------------
ವಾದಿರಾಜ
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಭೂಮಿಜೆಯು ಸೀತೆಯು ಜನನಿ ಗರ್ಭವ ವಡೆದು ಬಂದಳು ದನುಜ ವಧಕೆಂದೇ ಪ ದುರುಳ ದನುಜರು ಪೆಸರು ರಾವಣ ಕುಂಭಕರ್ಣರು ಋಷಿ ಜನಂಗಳ ಮುಖವ ಕೆಡಿಸುತ ಮೆರೆಯುತಿರೆ ಕೇಳ್ದು 1 ಭವದ ಭಟ ಶ್ರೀರಾಮಚಂದ್ರನು ಮೂವರನು ಜರ ಕೂಡಿ ಜನಿಸಿದಾ ಭುವನ ಭಾರವ ಪರಿಹರಿಪೆನೆಂದಭಯ ತೋರುತಲೀ 2 ಸಿರಿಲಕುಮಿ ನಿಜವರನು ಜನಿಸಿದ- ನರಿತು ¥ರಮಾನಂದದಲಿ ತಾ ಭರದಿ ಮೈದೋರಿದಳು ಹರಿಗೆ ತಾನರಸಿ ಎನಿಸಿದಳು 3 ವಾನರರ ಸೇನಾಧಿಪನು ಪವ- ಸೂನು ಶ್ರೀ ಹನುಮನೆಂಬುವನು ದಾನವಾರಿ ಶ್ರೀ ರಾಮಚಂದ್ರಗೆ ಭೃತ್ಯನೆನಿಸಿದನು 4 ವಿಪಿನ ಚರವ್ಯಾಜದಲಿ ರಕ್ಕಸ- ರಪರಿಮಿತ ಕೆಡಹಿದನು ಧರಣಿಗೆ ವಿಪರೀತ ಬತ್ತದ ಶರಧಿಯನು ಹನುಮಂತನ್ಹಾರಿದನು 5 ಪ್ರತಿಭಟಿಸಿ ಶ್ರೀ ರಾಮಚಂದ್ರನು ಅತಿಮೆರೆವ ರಾವಣನ ಮಡುಹಿದಾ ಮತಿವಂತ ಹನುಮನಿಗೆ ಇತ್ತಾ ಚತುರವದನ ಪದಾ 6 ಧರಣಿ ಮಗಳಿಂಗೂಡಿ ರಾಮನು ಧರೆಯನೆಲ್ಲವನಾಳಿ ನ್ಯಾಯದಿ ಸ್ವರಗವಾಸಕೆ ತೆರಳಿದನು ನರಸಿಂಹವಿಠಲನು 7
--------------
ನರಸಿಂಹವಿಠಲರು
ಭೂಮಿಸುರರ ಘನ | ಸ್ತೋಮವಂದಿತ ಮಹಾ ಮಹಿಮಾ ಮಹಾಮಹಿಮ ಸಜ್ಜನ - ತತಿ - ಪ್ರೇಮಾ ಪ ಕಾಮಧೇನು ಸುಕಲ್ಪತರು ಚಿಂ - ತಾಮಣಿಯು ತಾನೆನಿಸಿ ಸರ್ವದ ಕಾಮಿತಾರ್ಥವನಿತ್ತು ಮೆರೆವನು ಈ ಮಹಿಯೊಳು ಸಾರ್ವಭೌಮನು ಅ.ಪ ಪ್ರಾಣತನಯ ವಿಷ್ವಕ್ಸೇನ ಶ್ರೀಹರಿ ಶಾಪದಿಂದ ಶಾಪದಿಂದ ಭೂತಳದಲಿ ಬಂದಾ ಮಾಣವಕ ಪ್ರಹ್ಲಾದನೆನಿಸಿ - ಪ್ರಾಣದೇವಾವೇಶ ಶೇಷನು ಕ್ಷೋಣಿಯೊಳು ಶಿರಿವ್ಯಾಸನೆನಿಸೀ ಮಾಣದಲೆ ಗುರುರಾಘವೇಂದ್ರನು 1 ಅಲವಬೋಧರ ಮತ - ಜಲಧಿಚಂದಿರನೆನಿಪನೀತಾ ನೆನಿಪನೀತ ಲೋಕದಿ ಬಹು ಖ್ಯಾತಾ ಲಲಿತ ವೃಂದಾವನದಿ ನಿಂತು ಹಲವು ಭಕುತರಭೀಷ್ಠಕಾರ್ಯವ ಸಲಿಸಿ ಸುಜನರ ಸಲಹೊಗೋಸುಗ ಸುಲಭತರನಾಗಿರುವ ಗುರುವರ 2 ಕಿಟಜಸರಿದ್ವರ - ತಟದಿ ಸಂತತ ತಾನಿರುವ ತಾನಿರುವ ಭಕ್ತರು ಕರೆಯೆ ಬರುವಾ ಧಿಟ ಸುಭಕ್ತರ ಬಿಡದೆ ತಾನು ಪ್ರ - ಕಟನಾಗಿ ಮಹಿಮೆ ತೋರುವ ಧಿಟ ಗುರು ಜಗನ್ನಾಥ ವಿಠಲನ ಭಟಜನಾಗ್ರಣಿ ಎನಿಸಿ ಮೆರೆವ 3
--------------
ಗುರುಜಗನ್ನಾಥದಾಸರು