ಒಟ್ಟು 1698 ಕಡೆಗಳಲ್ಲಿ , 111 ದಾಸರು , 1382 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರ್ಜನರ ಸಂಗ ಎಂದಿಗೂ ಒಲ್ಲೆನು ಇಂಥ,ಸಜ್ಜನರ ಸಂಗದೊಳಗಿರಿಸೆನ್ನ ರಂಗ ಪ ಭಂಗ ರಂಗ 1 ನಂಬಿದ ಠಾವಿನಲಿ ಕೇಡನೆಣಿಪನ ಸಂಗಸಂಭ್ರಮದಿ ಜಗಳ ಕಾಯುವನ ಸಂಗಹಂಬಲಿಸಿ ಭವದ ಸುಖ ಮೆಚ್ಚಿದಾತನ ಸಂಗರಂಭೆಯರ ನೋಡಿ ಮೋಹಿಪನ ಸಂಗ2 ಕುಹಕ ಮಾಡುವಾತನ ಸಂಗಬಲು ಬೇಡೆ ಕೊಡದಿರುವ ಲೋಭಿ ಸಂಗಕುಲಹೀನರ ಕೂಡೆ ಸ್ನೇಹ ಬೆಳೆಪನ ಸಂಗಹಲವು ಮಾತಾಡಿ ಆಚರಿಸದನ ಸಂಗ3 ಗುರುಸತಿಗೆ ಪರಸತಿಗೆ ಎರಡು ಎಣಿಪನ ಸಂಗಗುರುನಿಂದೆ ಪರನಿಂದೆ ಮಾಡುವನ ಸಂಗಪರಹಿತಾರ್ಥದ ಧರ್ಮ ಪಡೆಯದಾತನ ಸಂಗಪರಮಪಾಮರ ಸಂಗ ಬಹುಭಂಗ ರಂಗ 4 ಭಂಗ 5
--------------
ಕನಕದಾಸ
ದುರ್ಜನರ ಸಂಗವನು ತ್ಯಜಿಸು ಮನವೆ, ಸಾಧು ಸಜ್ಜನರ ಸಂಗವನು ಭಜಿಸಿ ಸುಖಿಯಾಗೆಲವೊ ಪ ದುಷ್ಟ ವ್ಯಾಘ್ರನ ಕೈಯ ಮುಟ್ಟಿ ಹಿಡಿ ತರಬಹುದು ಅಟ್ಟಿಬಹ ಮದಕರಿಯ ಕಟ್ಟಬಹುದು ಕೃಷ್ಣಸರ್ಪನ ಹುತ್ತ ಕಲಕಿ ಜೀವಿಸಬಹುದು ದುಷ್ಟಾತ್ಮರಾದವರ ಬಿಟ್ಟು ಕಳೆ ಮನವೆ 1 ಚೇಳಬಾಲದ ಉರಿಯ ಜ್ವಾಲೆ ತಾಳಲುಬಹುದು ಕಾಲಮೇಘದ ಸಿಡಿಲು ಬೀಳಬಹುದು ಶೂಲಪಾಣಿಯ ಫಣೆಯ ಆಲಿ ಕೀಳಲುಬಹುದು ಕಾಳುಮೂಳರ ಸಂಗ ಮರೆದು ಕಳೆ ಮನವೆ 2 ಹರಿವ ಗರಗಸಿನಲ್ಲಿ ಶಿರವನೊಡ್ಡಲುಬಹುದು ಬೆರಸಿಬಹ ಕಾಡ್ಗಿಚ್ಚ ಧರಿಸಬಹುದು ಸರಿಸದಲಿ ನಿಂತು ಕೇಸರಿಯ ಕೆಣಕಲುಬಹುದು ಮರೆಸಿ ಕೊರಳನು ಕೊಯ್ವ ನರರ ಮರೆ ಮನವೆ 3 ಒಂದು ಜಾತಿಗೆ ವಿಷವು ಪುಚ್ಚದೊಳಗಿರುತಿಹುದು ಮ- ತ್ತೊಂದು ಜಾತಿಗೆ ದಂತದೊಳಗೆ ವಿಷವು ಒಂದು ಜಾತಿಗೆ ಮೈಯ ಅಂದವೆಲ್ಲವು ವಿಷವು ಹಿಂದೆಯಾಡುವ ನುಡಿಯು ಘೋರ ವಿಷ ಮನವೆ 4 ತೇರ ಕಂಡರೆ ತೊಲಗು ಮಾರೈದನಾಕ್ಷಣದಿ ವಾರುವಗೆ ಕಡೆ ಸಾರು ಈರೈದು ಮಾರುವನು ದಾರಿಯನು ಬಿಡು ಗಜಕೆ ಮೂರು ಸಾವಿರವನ್ನು ಊರ ಬಿಡು ದುರ್ಜನರ ಸೇರದಿರು ಮನವೆ 5 ಸತ್ಯವಂತರ ಕಂಡರರ್ಥಿಯಿಂದಲೆ ಎರಗು ನಿತ್ಯದೊಳು ಶ್ರೀಹರಿಯ ಕೀರ್ತನೆಯ ಮಾಡು ಉತ್ತಮೋತ್ತಮ ಪದವ ಹತ್ತಿಸುವವರ ಬೇಡು ಧೂರ್ತಮನುಜರ ಸಂಗ ಕಿತ್ತು ಕಳೆ ಮನವೆ 6 ಶುದ್ಧಮನವೆ ಎನ್ನ ಬುದ್ಧಿಯೊಳಗಡಗಿರ್ದು ಉದ್ಧರಿಸು ವರಾಹತಿಮ್ಮಪ್ಪನನು ನೆನೆದು ಮದ್ದನರೆ ಜನ್ಮದೊಳು ಮರಳಿಬಾರದ ಹಾಗೆ ಗದ್ದುಗೆಯ ಹಾಯ್ಕೆನ್ನ ಹೃದಯ ಮಧ್ಯದಲಿ 7
--------------
ವರಹತಿಮ್ಮಪ್ಪ
ದುರ್ಲಭ ಇದು ಕಲಿಯುಗದೊಳಗೆ ಕಾಣಾ ಎಲ್ಲರಿಗೆ ದೊರಕಬಲ್ಲದೆ ಶ್ರೀ ವಲ್ಲಭನ ಪಾದಸೇವೆ ಮಾಡೋ ನೀ ನಲಿದಾಡೋ ಎಲೆ ಮನುಜಾ ಪ ಗಂಧರ್ವರು ಸಿದ್ಧರು ವಿದ್ಯಾ ದರಸಾಧ್ಯ ಗುಹ್ಯಕ ಸುರಮುನಿಗಣ ಗರುಡಾದ್ಯರೆ ನೆರೆದು ಪುರಹರ ಮೂವನ ಬಲ್ಲಿದರೀ ಇಲ್ಲವೆನುತಲಿ ಬರಿದು ರೇಖೆಯ ಬರಿಸಿದರೊ ಡಂಗುರ ಹೊಯಿಸಿದರೊ ಎಲೆ ಮನುಜಾ 1 ಹರಿಯೆಂತೆಂದವ ಧರ್ಮಕೆ ಸಂದವ ಕರದಲಿ ದಂಡಿಗೆ ಪಿಡಿದವ ಪುಣ್ಯವ ಪಡೆದವ ಚರಣದ್ವಯದಲಿ ಗೆಜ್ಜೆಯ ಕಟ್ಟಿದವ ಅಟ್ಟಿದವ ಯಮ ಭಟರ ಹರಿಹರಿದಾಡುತ ಕುಣಿದವ ಉತ್ತಮ ಗುಣದವ ಹಿರಿದಾಗಿ ಗಾಯನ ಪಾಡಿದವ ಸುರರನ ಗೂಡಿದವ ಮಾಯವ ಬಿಡೋ ಎಲೆ ಮನುಜಾ2 ಭವಾಬ್ಧಿ ದಾಟಿದವ ಇಂಬಾಗಿ ಕಡ್ಡಿ ವಾದ್ಯವ ಹಾಕಿದವ ದುರುತವ ನೂಕಿದವ ಸಂಭ್ರಮ ತಾಳ ಕಟದವ ಊಟದವ ಸುರರೊಡನೆ ತುಂಬಿದ ದಾಸರ ಸಭೆಯೊಳಗಿದ್ದವ ನರಕವನೊದ್ದವ ಕಂಬನಿ ಪುಳಕೋತ್ಸವ ಸುರಿದವ ತತ್ವವನರಿದವ ನೀ ಸುಖದಲಿ ಬಾಳೊ ಎಲೆ ಮನುಜಾ 3 ಬೇಸರದಲೆ ಹೇಳಿ ಏಕಾದಶಿಯ ವಾಸರದಲಿ ಜಾಗರವನು ಗೈದ ಮಾನೀಸನು ಅಘನಾಶನು ಚರಣಕೆ ಏರಿಸಿದನಿವ ಬೆರೆದು ಎಲೆ ಮನುಜಾ4 ಗೋಪಾಳವನು ಬೇಡಿ ನಿತ್ಯಸುಖಿಯಾಗಿ ತಾಪತ್ರೆಯ ಮೊದಲಾದ ದುಷ್ಕರ್ಮ ಪಾಪರಹಿತನಾಗಿ ಸಿರಿ ಪದ್ಮವ ಪೊಂದಿದ ಭಜಕರು ಒಂದೇ ಗೇಣೊ ಎಲೆ ಮನುಜಾ 5
--------------
ವಿಜಯದಾಸ
ದೂರಕ್ಕೆ ದೂರನೆಂದು ಹೆರೆ ಸಾರಲಿ ಬೇಡಸಾರಿಗೆ ಸಾರಿ ನಮ್ಮ ಕೃಷ್ಣನ್ನ ಸಾರಿರೈಯ ಪ ಅನಂತ ಜನುಮದೊಳೊಂದೆ ಜನುಮಅನಂತ ಕ್ಷಣದೊಳಗೊಂದೆ ಕ್ಷಣಅನಂತ ನಾಮದೊಳೊಂದೇ ನಾಮವಮುನಮುಟ್ಟಿ ನೆನೆದರೆ ಬೆನ್ಹತ್ತಿ ಬಿಡನೈಯ 1 ಅನಂತರೂಪದೊಳೊಂದೆ ರೂಪಅನಂತ ಗುಣದೊಳಗೊಂದೆ ಗುಣಅನಂತ ಜೀವರೊಳಗಾವನಾದರುಂ ಕನಸಿಲಿ ನೆನೆದರೆ ಋಣಿಯಾಗಿಪ್ಪನೈಯ 2 ಒಂದೆ ಹೂವು ಒಂದೆ ಫಲವೊಂದೆಬಿಂದು ಜಲವೊಂದೆ ತುಳಸಿಒಂದೇ ವಂದನೆಯೊಂದೆ ಪ್ರದಕ್ಷಿಣೆಒಂದನರ್ಪಸಿದೊಡಂ ಕುಂದದಾನಂದವೀವನೈ 3 ಹರಿ ಚಿನ್ಹಾಂಕನ ಹರಿದಿನದುಪವಾಸನೆರೆಯೂಧ್ರ್ವ ಪುಂಡ್ರ ತುಳಸಿಮಾಲೆಹರಿಯುತ್ಸವ ಸೇವೆ ಹರಿದಾಸರ ಸಂಗದುರಿತಾಬ್ಧಿಗೆ ಕುಂಭಸಂಭವನಲ್ಲವೆ 4 ಹರಿಪಾದ ತೀರ್ಥವು ಹರಿಯ ನಿರ್ಮಾಲ್ಯವುಹರಿ ಆರತಿ ಧೂಪ ಶೇಷಂಗಳುಹರಿಯ ಪ್ರಸಾದ ಶಂಖೋದಕ ಪ್ರತ್ಯೇಕದುರಿತ ರಾಸಿಗಳನ್ನು ಸೋಕಲು ಸುಡದೆ 5 ಒಮ್ಮೆ ಪಾಡಿದಡಂ ಒಮ್ಮೆ ಪೊಗಳಿದೊಡಂಒಮ್ಮೆ ಬೇಡಿದಡಂ ಒಮ್ಮೆ ನೋಡಿದಡಂಒಮ್ಮೆ ಸಾರಿದಡಂ ಮತ್ತೊಮ್ಮೆ ಕರೆದಡಂನಮ್ಮಾತನಿವನೆಂದು ಕೈಯ ನೀಡುವನೈಯ 6 ತನ್ನಲ್ಲಿಪ್ಪನಾಗಿ ದೂರನಲ್ಲ ನರಹೊನ್ನು ಬೇಡ ಲಕುವಿರಮಣಗೆ ಅನ್ಯವ್ಯಾತಕ್ಕೆ ಈ ಪರಿಪೂರ್ಣಾನಂದಗೆನಿನ್ನವನೆಂದರೆ ತನ್ನನೀವನು ಕೃಷ್ಣ7
--------------
ವ್ಯಾಸರಾಯರು
ದೃಢಚಿತ್ತದೊಳಗೆನ್ನ ಒಡೆಯನೀತಗೆ ಮುನ್ನ ಪಡಿಯೆನಿಪರಿನ್ನುಂಟೆ ಪೊಡವಿಯಲ್ಲಿ ಜನವಾರ್ತೆಯನೆ ಕೇಳಿ ವನಿತೆಯೊಳು ಖತಿತಾಳಿ ಇನಿತು ಕಾಡಿದ ಚಾಳಿಯೊರೆವೆ ಕೇಳಿ ಮಡಿವಳನ ನುಡಿಗಾಗಿ ಕಡುಮೂರ್ಖ ತಾನಾಗಿ ಅಡವಿಗಟ್ಟುವರೇನೆ ಮಡದಿಯನ್ನೆ ಧರ್ಮಪತ್ನಿಯುಮಂತು ಪೂರ್ಣಗರ್ಭವನಾಂತ ಅರ್ಧಾಂಗಿಯನ್ನುಳಿದ ನಿರ್ದಯಾತ್ಮ ದಯೆಯೆಂಬುದಿವನಲ್ಲಿ ತೋರದಿಲ್ಲಿ ಪ್ರಿಯರಾರು ಮತ್ತಿವಗೆ ಧಾತ್ರಿಯಲ್ಲಿ ಭಯವಿಲ್ಲ ಮಾತಿನೊಳು ನಯವದಿಲ್ಲ
--------------
ನಂಜನಗೂಡು ತಿರುಮಲಾಂಬಾ
ದೇವ ಗುರುಸ್ತುತಿ ಅಂಗವೇ ಶ್ರೀ ಮಹಾಂಗಿರೀಶ ಲಿಂಗವಾದುದು ಸಂಗ ಸುಖದ ದುರಿತವೆಲ್ಲ ಹಿಂಗಿ ಪೋದುದು ಪ ನಿರ್ಮಲಾತ್ಮ ಗುರುಕಟಾಕ್ಷ ಮರ್ಮಸಿಕ್ಕಿತು ಕರ್ಮ ಹರಿದು ಜ್ಞಾನಜ್ಯೋತಿ ಬೆಳಕು ಮಿಕ್ಕಿತು ಧರ್ಮ ತತ್ವದಮೃತವೆಂಬ ಶರಧಿಯುಕ್ಕಿತು ಪ್ರೇಮದಿಂದ ಪ್ರಕಟವಾದ ಬ್ರಹ್ಮ ದಕ್ಕಿತು 1 ಮಾಯೆಯಿಂದ ಮಮತೆಯೆಲ್ಲ ಸತ್ಯವಾದುದು ನ್ಯಾಯಪಥವ ತಿಳಿಯೆ ಸರ್ವ ಮಿಥ್ಯವಾದುದು ಸಾಯುತೊಡನೆ ಹುಟ್ಟುವುದರ ಭೀತಿಪೋಪುದು ಕಾಯದೊಳಗೆ ದಿವ್ಯಜ್ಯೋತಿ ಪಥ್ಯವಾದುದು 2 ಪರಶಿವಾತ್ಮಲಿಂಗವೆನ್ನ ಮನಕೆ ಸಾರಿತು ತುಂಬಿ ತುಳುಕಿ ಬೀರಿತು ಪರಮಾನಂದರಸದ ಲಹರಿ ಉಕ್ಕಿ ಹರಿಯಿತು 3
--------------
ಭಟಕಳ ಅಪ್ಪಯ್ಯ
ದೇವದೇವರ ದೇವ ಭಕ್ತ ಸಂಜೀವಿ ಮಹಾನುಭಾವ ಪ ದಶರಥ ಸುಕುಮಾರ ಜಾನಕೀವರ ಧೀರ ಅಸಮ ಸಾಹಸಿ ಕಪಿವೆರಸಿ ಲಂಕೆಯಪೊಕ್ಕ ಅಸುರರ ಕೊಂದ ಶ್ರೀ ರಾಮಾವತಾರ 1 ಯದುಕುಲದೊಳಗುದಿಸಿ ಮಾತುಲಮದ ಮುಖರನ್ನು ವಧಿಸಿ ಪಾಂಡುವರನ್ನೇ ವಹಿಸಿದೆ 2 ಮೃಗ ಪುರದೆಡೆಯೊಳು ನಿಂದು ಸೇವಕÀ ವೆಂಕಟಾಚಲಗೋವಿಂದ 3
--------------
ಕವಿ ಪರಮದೇವದಾಸರು
ದೇವನಲ್ಲವೇನೋ ಸದ್ಗುರು ಮಹಾದೇವನಲ್ಲವೇನೋ | ಆದಿಯೋಳ್ ಸಿದ್ಧರು ಹೋದ ದಾರಿಯ | ತೋರಿ ಭೇದವ ಬಿಡಿಸಿದ ಮೂರುತಿ ಪ ನರಜನ್ಮದೊಳಗೆ ಬಂದು ನೀನು | ಪ್ರಪಂಚದ ಕಡಲು ಮಧ್ಯದಿ ನಿಂದು | ಅರಿತು ಮರೆತು ಒಮ್ಮೆ ಗುರುವೆಂದು ನೆನೆದರೆ | ಗುರುತಿಟ್ಟು ಅವರಿಗೆ ಪರತರ ತೋರುವ 1 ಆಶಾಪಾಶವ ಬಿಡಿಸಿ ಮಾಡಿದ | ದೋಷ ಭವಂಗಳ ಕರ್ಮವ ಕೆಡಿಸಿ | ನ್ಯಾಸ ಧ್ಯಾಸದಿ ಜಪ ಮಾಡೆ ಗುರು |ಬೋಧ ಪ್ರಕಾಶವ ತೋರಿದ ಈಶನು 2 ಭಕ್ತಿ ಜ್ಞಾನವ ಹಿಡಿದು ನಂಬಿದಗೆ | ಮುಕ್ತಿಯ ನಿಶ್ಚಯದಿ ಪಾಲಿಸುವ | ಕರ್ತೃ ಸದ್ಗುರು ಭವತಾರಕ ಧರೆಯಲಿ | ಪ್ರತ್ಯಕ್ಷವಾದಂಥ ಪರಬ್ರಹ್ಮರೂಪನು 3
--------------
ಭಾವತರಕರು
ದೇವಾ ನಿನ್ನ ಪಾದವನ್ನು ಯಾವಾಗಲೂ ಸ್ಮರಿಸುವೆನೂ ಭಾವ ಭಕ್ತಿ ಪ್ರೇಮವಿತ್ತು ಕಾವುವೆನ್ನ ಹರಿಯೇ ನೀನು ಪ ದೀನನಾಥನೆಂಬ ಬಿರುದಾ ಮಾನಭಕ್ತರಿಂದ ಪೊರೆದಾ ಹೀನ ದೀನನಾದ ಎನ್ನಾ ಜ್ಞಾನವಿತ್ತು ರಕ್ಷಿಪುದು 1 ಇಂದಿರೇಶ ನಾರಾಯಣಾ ಬೃದದಿಂದಾ ಭಜಿಪೆ ನಿನ್ನಾ ಮಂದಮತಿಯ ಕಳೆದು ನಿಜಾನಂದದೊಳಗಿರಿಸೊ ಯನ್ನಾ 2 ಬೇಡಿಕೊಂಬೆನೀಗ ನಿನ್ನಾ ನೋಡುವುದು ಕೃಪೆಯೊಳೆನ್ನಾ] ಬಿಡಬ್ಯಾಡಾ ಬ್ಯಾರೆನಗೆ ಇಡೊ ಇಡೊ ನಿನ್ನೊಳೆನ್ನಾ 3 ಚಿಂತೆಗಳನ್ನೆಲ್ಲಾ ತೊರಿಸೊ ಸಂತ ಸಂಗದೊಳಿರಿಸೊ ಕಂತುಪಿತನೆ ಗುರುವೆ ಎನ್ನಾ ಶಾಂತಿ ಪದವ ಪಾಲಿಸೊ 4
--------------
ಶಾಂತಿಬಾಯಿ
ದೇವಾ ಬಾರಯ್ಯಾ ವೈಭವದಿ ರಥವನೇರಿ ಸೇವಿಸುವೆನು ಮಧ್ಭಾವದಿ ನೆಲಸೆಂದು ಪಾವನ ಮಣಿಪುರ ಠಾವಿನೊಳಿಹ ಭೂದೇವ ವರ್ಯ ಸಂಶೇವಿತ ಕೇಶವ ಪ ದೇವಗಂಗೆಯಪೆತ್ತ ಪಾವನಗಾತ್ರಧ್ರುವ ಭೂವರೋÀಪಾಸಿತನಾಗಿ ಈ ವಸುಧಿಗೆ ಬಂದು ಪಾವಮಾನ ಶಾಸ್ತ್ರದಿ ಕೋವಿದಯತಿ ವರ ಶ್ರೀ ವಿದ್ಯಾನಿಧಿ ತೀರ್ಥ ಸೇವಿತ ಸಂಸ್ಥಾಪಿತ ಸೇವಕ ಜನ ಸಂಭಾವಿತ ಕಾಮಿತ ವೀವ ಕಾವ ಸದಶಾವತಾರ ನಮೋ ಶ್ರಿವಿರಂಚಿಮುಖ ದೇವನ ಮಿತ ಕಂಚೀವರದನೆ ಪೊರೆ ಶ್ರೀ ವರಕೇಶವ 1 ಕಡು ಶೋಭಿಸುವ ಬಿಳಿಗೊಡೆ ಚಾಮರಾದಿಗಳ ಪಿಡಿದು ಶೇವಿಪ ಜನರೆಡಬಲದಿ ಬರೆ ಸುರರು ಪಂಥsÀವಿಡಿದು ವೇದಪಠಣ ಬಿಡದೆ ಮಾಡುತ ಬರೆ ನುಡಿವ ವಾದ್ಯಗಳಿಂದ ಸಡಗರದಲಿ ದ್ವಿಜಮಡದಿಯರಾರುತಿ ಪಿಡಿದು ಬೆಳಗುತಿರೆ ಕಡು ವೈಭವದಲಿ ಅಡಿಗೆರಗುವೆ ಪಾಲ್ಗಡಲ ಶಯನ ಮೂ- ರಡಿ ರೂಪನೆ ಜಗದೊಡೆಯ ಕೇಶವ 2 ನಂದ ತೀರ್ಥರ ಮತ ಸಿಂಧುವಿಗೆ ಪೂರ್ಣ ಚಂದ್ರರೆನಿಪಯತೀಂದ್ರ ಸತ್ಯ ಪ್ರಮೋದ ರಿಂದ ಪೂಜಿತ ಪದ ದ್ವಂದ್ವ ಮಧ್ಯದೊಳಿಹ ಮಂದಾಕಿನಿಗೆ ಪಿತನೆಂದು ತೋರಿಸಿದಂಥ ಇಂದಿರೆಯರಸನೆ ಮಂದರಧರ ಗೋ ವಿಂದ ಪಾಹಿ ಮುಕುಂದನೆ ಬಾಬಾ- ರೆಂದು ಕರೆವ ದ್ವಿಜ ವೃಂದಮಧ್ಯದಲಿ ಶ್ಯಂದನ ವೇರಿದ ಸುಂದರ ಕೇಶವ 3 ಅಂಬುಜನಾಭನೆ ನಿತಂಬದಿ ಪೊಳೆವ ಪೀ- ತಾಂಬರ ಧೃತ ಶಾತಕುಂಭ ಮಕುಟವದ- ನಾಂಬೋಜವನು ತೋರೋಕುಂಭೀನಸ ಪರಿಯಂಕ ಶಂಭ್ವಾದಿನಮಿತ ನೀಲಾಂಬುಧ ನಿಭಗಾತ್ರ ಕಂಬುಚಕ್ರಸುತ- ದಾಂಬುಜಧರ ಬಲು ಸಂಭ್ರಮದಲಿ ಮುನಿಕುಂಭಜ ಪೂಜಿತ ಕದಂಬ ದುರಿತ ಕಾದಂಬನಿ ಪವನ ಕೃ ಪಾಂಬುಧೆ ಕೇಶವ 4 ಗರುಡ ಮಾರುತರಿಂದ ಪರಶೇವಿತನೆ ಬಾರೊ ಶರಣು ಜನರ ಸುರತರುವೆ ಚನ್ನಕೇಶವ ಧರೆಯೊಳಧಿಕ ಮಣಿಪುರ ಪಂಡಿತಾಗ್ರಣಿ ಸನ್ನುತ ಸರಸಿಜಾಸನ ಪಿತ ಸಿರಿದೇವಿಯು ಈರೆರಡು ರೂಪದಲಿ ಕರದೊಳಗಾರುತಿ ವರಚಾಮರಗಳ ಧರಿಸಿ ಸಿರಿ ' ಕಾರ್ಪರ ನರಹರಿ ' ರೂಪನೆ ಮಾಂ ಪೊರೆವುದು ಕೇಶವ 5
--------------
ಕಾರ್ಪರ ನರಹರಿದಾಸರು
ದೇಶದೊಳಗೀ ಕ್ಷೇತ್ರ ಬಲು ಉತ್ತಮಾ ದಾಸೋಹಂ ಎಂದೆನಲು ಗತಿಗೆ ಪಥವ ಕೊಡುವ ಪ ಹರಿಸರ್ವೋತ್ತಮನೆಂದು ನೆರಪಿದಂಥ ಮುನಿ ವರನ ಶಾಪದಲಿ ಪಾವಕನು ಬಂದು ಪರಮತಪ ಮಾಡಿದನು ವರವಿತ್ತ ಪುಷ್ಕರಣಿ ಎನಿಸುವುದು1 ದಿವಿಜರಿಗೆ ಸೋತು ದಾನವರು ಶುಕ್ರಗೆ ಹೇಳಿ ಶಿವನೊಲಿಸೆ ಅಮೃತವ ಮಾಳ್ಪೆನೆಂದು ಕವಿ ಇಲ್ಲೆ ತಪಮಾಡೆ ಅಂದು ಸುರಧೇನು ವಾ ಸವನ ಕೈಕೊಳಲು ಶ್ರೀರಾಮನಿಂದಲಿಗತಿ 2 ರಾಯ ಋಷಿಗಾಧೇಯು ಬ್ರಹ್ಮತ್ವಗೋಸುಗ ಗಾಯತ್ರಿ ಒಲಿಸಿದನು ಈ ಸಿಲೆಯಲೀ ಆಯು ಉಳ್ಳದರೊಳಗೆ ಇಲ್ಲಿ ಕುಳಿತು ಬಂದು ಗಾಯತ್ರಿ ಮಂತ್ರವನು ಜಪಿಸೆ ನರನು ಮುಕ್ತಾ 3 ಅಗಸ್ತೀಶ್ವರವಿಡಿದು ರಾಮಲಿಂಗ ಪರಿಯಂತ ಬಗೆಬಗೆ ತೀರ್ಥ ಎರಡೊಂದು ಪದ್ಮ ಮಿಗೆ ಷೋಡಶಕೋಟಿ ಅರವತ್ತು ಸಾವಿರ ಸೊಗಸಾಗಿವಿಪ್ಪವಿಲ್ಲಿ ಕಾವೇರಿ ಮಧ್ಯದಲ್ಲಿ 4 ರಾಮನಾಥನ ಪುರವೆಂಬೊ ಪೆಸರೆ ಉಂಟು ವ್ಯೋಮಕೇಶನು ನಾಲ್ಕು ಹೆಸರಿನಿಂದಾ
--------------
ವಿಜಯದಾಸ
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ಧರೆಯನಾಳುವನೊಬ್ಬ ದೊರೆ ಜೈಶೀಲನಾ ಹರದಿ ಮಂಜುಳೆಯಿರಲು ಮಕ್ಕಳಿಗಾಗಿ ಮರುಗುತ ಸೊರಗಿರಲು ಈ ಪರಿಯ ನೋಡುತ ಹರನು ಬ್ಯಾಗ ತಾ ತಿಳಿದವರ ಮನ ತಿರುಕನಂದದಿ ಬರಲು ಧಾನ್ಯವ ಕರೆದು ನೀಡಿದರೊಲ್ಲದಾಗಲೆ ತಿರುಗಿ ಪೋದನೆ ಉರಗಭೂಷಣ ಮಂಗಳ ಜಯವೆನ್ನಿ ಮಂಗಳ ಶುಭವೆನ್ನಿ ಮಂಗಳಾಂಗಿಯರು ಬ್ಯಾಗ 1 ನಂದಿವಾಹನನ ಪೂಜಿಸಿ ಫಲಗಳ ಬೇಡೆ ಕಂದನಿಗಾಯುಷ್ಯವು ಐದರಾ ಮ್ಯಾಲ್ ಹ- ನ್ನೊಂದು ವರುಷವೆನಲು ವರ ನೀಡುತಿರಲು ಮಂಜುಳೆಯು ಗರ್ಭವನೆ ಧರಿಸಲು ಬಂಧುಗಳು ಹೂ ಮುಡಿಸಿ ಪರಮಸಂಭ್ರಮದಿ ಸೀ- ಮಂತ ಮಾಡಲು ತುಂಬಿತಾ ನವಮಾಸವಾಗಲೆ 2 ಜಾತವಾಗಲು ನಾಮಕರಣ ಮಾಡುತ ಚಂದ್ರಶೇಖರ- ನೆಂದ್ಹೆಸರಿಡುತ ಜಾವಳ ಜುಟ್ಟು ಪ್ರೀತಿಂದುಪನಯನ ಮಾಡುತ ವಿದ್ಯೆಗಳ ಕಲಿಸುತ ಆತಘದಿನಾರ್ವರುಷ ಬರುತಿರೆ ಪ್ರೀತಿಯಿಂದ್ಹಣಕೊಟ್ಟು ಕಾಶಿಯಾತ್ರೆಗೆನುತಲಿ ಕಳುಹೆ ಬ್ಯಾಗನೆ3 ಒಂದಾಗಿ ಅಳಿಯ ಮಾವಂದಿರು ಬರುತಿರೆ ಕಂಡಿಳಿದರು ತೋಟವ ಗೆಳತಿಯರು ಬಂದು ಹೂವಿಗೆ ಆಟವಾಡುತಲಿ ಕೋಪಿಸೆ ಒಂದಕ್ಕೊಂದು ಮಾತಾಡೆ ರಾಜ ನಂದನೆಯು ತಾ ನೊಂದುಕೊಳ್ಳದೆ ನಂದಿವಾಹನನರಸಿ ದಯವಿರಲೆಂದು ನಡೆದಳು ಮಂದಿರಕೆ 4 ಬಂದ ರಾಜನ ಮಗಳಿಗೆ ನಿಬ್ಬಣವು ಕರೆ- ತಂದರಸುಕುಮಾರನ ಧಾರೆಯನೆರೆದು ಮಂಗಳ ಸೂತ್ರವನು ಬಂಧನವ ಮಾಡಿದ- ರÀಂದದಿಂದಲಿ ಲಾಜಹೋಮವ ಬಂಧುಗಳ ಸಹಿತುಂಡು ಭೌಮವ ಚೆಂದದಿಂದಲಿ ಸುತ್ತಿಸಾಡ್ಯವ ಅಂದಿನಿರುಳಲಾನಂದವಾಗಿರೆ 5 ಸತಿಪತಿಯರು ಭಾಳ ಹಿತದಿಂದ ಮಲಗಿರೆ ಅತಿ ಹಸಿವೆನಗೆನಲು ಲಡ್ಡಿಗೆ ತಂದು ಘೃತ ಬಟ್ಟಲೊಳು ಕೊಡಲು ತಿಂದಿಡಲು ಮುದ್ರಿಕಾ ಸತಿ ಸಹಿತ ಸುಖನಿದ್ರೆಲಿರೆ ಪಾ- ರ್ವತಿಯು ಬಂದಾ ಖದ್ರುದೇವಿಸುತ ಬರುವನೆಂದ್ಹೇಳೆ ಕಳಸವ ಅತಿಬ್ಯಾಗದಿ ತುಂಬಿಟ್ಟಳುರಗವ 6 ಅತ್ತೆ ಕಾಶಿಗೆ ಪೋಗಿ ಅಳಿಯ ಮಾವಂದಿರು ಕ್ವಾಷ್ಟನ ಕರೆದು ತಂದು ಕುಳಿತಿರಲಾಗ್ವಿಚಿತ್ರ- ಭೂಷಿತಳು ಬಂದು ನೋಡುತಲಿ ನಿಂದು ಥಟ್ಟನೆದ್ದು ತಾ ತಿರುಗಿ ಪೋಗೆನ್ನ ಪಟ್ಟದರಸಿವನಲ್ಲವೆನುತಲಿ ಹೆತ್ತಜನಕ ನೀ ಅನ್ನಕ್ಷೇತ್ರವ ಇಟ್ಟು ನಡೆಸೀಗ್ವೀಳ್ಯಗಳ ಕೊಡುವುದು 7 ತಂದು ಭೋಜನಮಾಡುತ ಕುಳಿತಿರಲಾಗ ತಂದು ವೀಳ್ಯವ ಕೊಡುತ ಮುಖ ನೋಡಿ ನಗುತ ಸಂದೇಹಿಲ್ಲದೆ ಎನ್ನಪತಿ ಹೌದೆಂದು ನುಡಿದಳು ಬಂದು ಜನರು ನಿಂದು ಗುರುತೇನೆಂದು ಕೇಳಲು ತಂದು ತೋರಿದುಂ(ದಳುಂ?) ಗುರವ ಜನರಿಗೆ 8 ನಿನ್ನ ಗುರುತು ಏನ್ಹೇಳೆನ್ನಲು ಸಭೆಯೊಳು ಪನ್ನಂಗದ ಕಳಸವನು ತೆಗೆಯಲು ಬಾಯಿ ರನ್ನ ಮುತ್ತಿನ ಸರವು ಆಗಿರಲು ಉರಗವು ಕನ್ನೆಯರು ಹರಸ್ಹಾಕೆ ಕೊರಳಿಗೆ ಮನ್ನಿಸುತ ಮಹಾರಾಜ ಮಗಳನು ಚಿನ್ನದಾಭರಣಗಳು ಉಡುಗೊರೆ ತನ್ನಳಿಯಗುಪಚಾರ ಮಾಡುತ 9 ಸತಿಪತಿಯರು ತಮ್ಮ ಪಿತರ ಅಪ್ಪಣೆಗೊಂಡು ರತುನದಂದಣವೇರಲು ಮಾರ್ಗದಿ ಗೌರೀ- ವ್ರತ ಮಾಡಿ ನಡೆತರಲು ಪಿತಗ್ಹೇಳಿ ಕಳುಹಲು ಸುತನು ಬಂದರಮನೆಗೆ ಭಾಗೀ- ರಥಿಯು ಮಾತುಳ ಮಡದಿ ಸಹಿತ ಹಿತದಿ ಬಂದೆರಗಿದರೆ ಸೊಸೆಮಗ ಅತಿಹರುಷದಿಂದಪ್ಪಿ ಕೇಳುತ 10 ದಾವ ಪುಣ್ಯದ ಫಲದಿಂದ ನಿನ್ನರಸನ ಪ್ರಾಣ ಪಡೆದಿಯೆನಲು ಮಂಗಳಗೌರಿ ದೇವಿ- ದಯವಿರಲೆಂದು ಹೇಳಲು ಶ್ರೀಗೌರಿಕಥೆಯನು ಕಾಮಿತವನದೊಳಗೆ ದ್ರೌಪದಿಗ್ಹೇಳಿದನು ಭೀಮೇಶಕೃಷ್ಣನು ಮಾಡಿದರೆ ಮುತ್ತೈದೆತನಗಳ ಬೇಡಿದಿಷ್ಟಾರ್ಥಗಳ ಕೊಡುವೋಳು ಮಂಗಳ ಜಯವೆನ್ನಿ ಮಂಗಳ ಶುಭವೆನ್ನಿ ಮಂಗಳಾಂಗಿಯರು ಬ್ಯಾಗ 11
--------------
ಹರಪನಹಳ್ಳಿಭೀಮವ್ವ