ಒಟ್ಟು 925 ಕಡೆಗಳಲ್ಲಿ , 101 ದಾಸರು , 776 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವಿದ್ಯಾ ಪ್ರಸನ್ನ ಶ್ರೀ ಯತಿಕುಲ ಗುರುರನ್ನ ಸದ್ವ್ಯೆಷ್ಣವ ಘನ್ನ ಪ. ಸಿದ್ಧಸಾಧನ ಮಧ್ವಮುನಿಯ ಚಿನ್ಹ ಧರಿಸಿದ ಬಹುಮಾನ್ಯ ಅ.ಪ. ವಿದ್ಯಾರತ್ನಾಕರ ಯತಿ ಕರಕಮಲದಿ ಜಾತ ಮುದ್ದು ಕುವರನೀತ ವಿದ್ಯಾವಾರಿಧಿ ಮುನಿಕರ ಸಂಜಾತ ಯತಿವರನಾದಾತ ಮಧ್ವಗ್ರಂಥಗಳ ಮನನ ಮಾಡಿದಾತ ಬಹುಮತಿಯುತನೀತ ಬುದ್ಧಿಕುಶಲದಿ ಬುಧರನು ಪೊರೆವಾತ ಸುಜನರ ಮನದಾತ 1 ವ್ಯಾಸತೀರ್ಥನ ಆಸ್ಥಾನಕೊಡೆಯರಾಗಿ ದುರ್ಗುಣಗಳ ನೀಗಿ ಆಸೆಯಿಂದ ಶ್ರೀ ಕೃಷ್ಣನ ಚನ್ನಾಗಿ ಪೂಜಿಸುತಲಿ ಬಾಗಿ ದಾಸತ್ವದ ಲಕ್ಷಣ ತಿಳಿದವರಾಗಿ ವಿಷಯ ಸಂಗ ತ್ಯಾಗಿ ಪಸನ್ನ ಕೃಷ್ಣನೆಂಬಂಕಿತವನೆ ಇಟ್ಟು ಪದರಚಿಸಿದ ಗುಟ್ಟು 2 `ವಿ' ಎನ್ನಲು ನರವಿಷಯ ಸಂಗದೂರ `ಧ್ಯಾ' ಎನೆ ಧ್ಯಾನವರ `ಪ್ರ' ಎನಲು ಸದ್ಗುಣನು `ನ್ನ' ಎನ್ನಲು ಶ್ರೀ ನರಹರಿ ತಾನೊಲಿವ `ತೀ' ಎನೆ ತೀರ್ವ ಭವ `ರ್ಥಾ' ಎನ್ನಲು ಪುರುಷಾರ್ಥ ಪಡೆದ ಭೋಗಿ `ರು' ಎನೆ ರುಜುಮಾರ್ಗಿ 3 ವಿದ್ಯಾಪ್ರಸನ್ನತೀರ್ಥರು ಎಂದೆನ್ನುತಲಿ ಸ್ಮರಿಪರ ಸಲಹುತಲಿ ಮುದ್ದುಕೃಷ್ಣ ಪಟ್ಟಾಭಿರಾಮನಂಘ್ರಿ ಸಚ್ಚರಿತ ಪ್ರಸಂಗಿ ಸದ್ವಿದ್ಯಗಳಿಗೆ ಗರ್ವರಹಿತ ಭಾವ ಬಹು ಸರಳ ಸ್ವಭಾವ ಹೃದ್ವನಜಸÀ್ಥನ ಕಾಂಬ ಮುನಿವರೇಣ್ಯ ಸದ್ಭಕ್ತ ಶರಣ್ಯ 4 ಮಂದ ಮತಿಯು ನಾನು ಕ್ಷಮಿಸು ತಂದೆ ನೀನು ಕುಂದನೆಣಿಸದೆ ಗುಣಗ್ರಹಿಸುತಲಿನ್ನು ಶ್ರೀ ಹರಿ ನುಡಿಸಿದನು ತಂದೆ ಮುದ್ದುಮೋಹನರ ಕೃಪೆಯಿಂದ ರಚಿತ ಪದದಂದ ಮಂದರಧರ ಗೋಪಾಲಕೃಷ್ಣವಿಠ್ಠಲ ಗರ್ಪಿತ ಗುಣಮಾಲ 5
--------------
ಅಂಬಾಬಾಯಿ
ವಿನತಾನುತ ಮಣಿವರೂಥ ಜನಕಸುತಾ ನಾಥಪ್ರೀತ ಪ ಕನಕಾಂಬರ ಪಾರ್ಥಸೂತ ವನಮಾಲಾ ಮಣಿರಾಜಿತ ಅ.ಪ ಶುಕ ಶೌನಕ ಪರಿಪೂಜಿತ ಸಕಲಾಗಮ ವೇದವಿದಿತ ವಕುಳಸುಮಾಭರಣಾಯತ ಸುಕರಾರ್ಜಿತ ಮೋಕ್ಷದಾತ 1 ಪಾಹಿ ಪಾಹಿ ಪರಮನಾಮ ಪಾಹಿ ಪಾಹಿ ಪೂರ್ಣಕಾಮ ಪಾಹಿ ಪಾಹಿ ದನುಜಭೀಮ ಪಾಹಿ ಪಾಹಿ ಮಾಂಗಿರಿಧಾಮ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ವಿಶೇಷ ಸಂದರ್ಭದ ಹಾಡುಗಳು 250 * ಅಡಗಿದೇತಕೊ ರಜತ ಕವಚದೊಳಗೆ ಅಡಿ ಭಕ್ತರಾಡುವೋ ಬಿಡಿ ನುಡಿಗೆ ಪ. ಗೇಣು ಪ್ರಮಾಣದಾ ಪ್ರಾಣರಾಯನೆ ಛಿದ್ರ ಕಾಣುತಿರೆ ಶಿಲೆರೂಪದಲ್ಲಿ ನಲಿದು ಆನಂದದಿಂ ನುಡಿದ ಆನತರ ವಚನಕ್ಕೆ ನೀ ನಾಚಿ ಜಗಕಿನ್ನು ಕಾಣಬಾರದು ಎಂದು 1 ದುರುಳ ಸೀತೆಯ ಕದ್ದು ತೆರಳುತಿರೆ ನಿಮ್ಮ ಕಂ ಡರವಿಂದನಯನೆ ಆಭರಣ ಕಟ್ಟೊಗೆಯೇ ಸಿರಿಚರಣ ಸ್ಪರ್ಶವೆನಗಿರಲೆಂದು ಪೈಜಣವ ಮುರಿಸಿ ಕವಚವ ಮಾಡಿ ಮೆರೆವ ವೈಖರಿಯೇ 2 ರಜತಗಿರಿ ವಾಸ ರಣದಲ್ಲಿ ಬ್ರಹ್ಮಾಸ್ತ್ರವನು ಭುಜಬಲದಿ ಬಿಡಲು ಲೆಕ್ಕಿಸದೆ ಮೂದಲಿಸೀ ನಿಜವಾಸ ಸ್ಥಳವಿಲ್ಲದಲೆಯಲೆಂದೆನ್ನುತಲಿ ರಜತಗಿರಿ ಕವಚ ಮಾಡಿರುವ ವೈಭವವೋ 3 ಕುನ್ನಿ ಮತಗಳ ಮುರಿದು ಘನ್ನ ಶಾಸ್ತ್ರವನೊರೆದು ಚನ್ನಕೃಷ್ಣನ ರಜತ ಪೀಠದಲಿ ನಿಲಿಸೀ ಎನ್ನೊಡೆಯನಾಸನವು ಎನಗೆ ಭೂಷಣವೆಂದು ಚನ್ನಾಗಿ ಮೈಗೆ ಸುತ್ತಿರುವ ವಿಸ್ಮøತಿಯೋ 4 ನಿನ್ನಲ್ಲಿ ವಡಕಿರಲು ಪೂಜಿಸುವ ಜ್ಞಾನಿಗಳಿ ಗಿನ್ನೊಂದು ನುಡಿ ಅಜ್ಞರಿಂ ಬೇಡವೆಂದೂ ಚನ್ನಾಗಿ ಹಿಂದೆ ಮುಂದೆಡಬಲದಿ ಮೇಲ್ ಕೆಳಗೆ ಇನ್ನು ತೋರದ ತೆರದಿ ಮರೆಮಾಡಿಕೊಂಡೂ5 ವಡೆಯ ಈರೇಳು ಲೋಕದಿ ವ್ಯಾಪ್ತನಾಗಿ ನೀ ನುಡಿದು ಶ್ರೀಮಂತ್ರ ಜೀವರ ಕಾಯೊ ಎನಲೂ ವಡೆಯಗುತ್ತರ ಪೇಳಲಾರದಲೆ ಬ್ಯಾಸತ್ತು ಪರಿ ಏನೋ 6 ಕಂಡವರು ಬಿಡುವರೇ ಆಡದಲೆ ನಿನ ಚರಿತೆ ಚಂಡ ವಿಕ್ರಮನಹುದೊ ಮುನಿಯದಲೆ ಸಲಹೋ ಕರ ಪೂಜ್ಯ 7
--------------
ಅಂಬಾಬಾಯಿ
ವಿಶ್ವ ಕಾಯೋ ಎನ್ನ ಪ ಪರಮಾತ್ಮ ನೀ ದೂರ ಮಾಡಿದರೆ ಗತಿಯೇನು ಅ.ಪ ನಿನ್ನ ಲೋಕಕೆ ಎನ್ನ ವೈದಾಗ ಕರುಣಾತ್ಮ ನಿನ್ನ ಕ್ರಿಯ ಗುಣ ರೂಪ ತೋರಿ ಎನಗೆ ನಿನ್ನ ಪರಿವಾರ ಜನರಲ್ಲಿ ಸೇರಿಸಿ ಪರಮ ಧನ್ಯನಾ ಮಾಡಯ್ಯ ಮದ್ಬಿಂಬ ಮಾರಮಣ 1 ಸ್ಮøತಿ ಜ್ಞಾನ ಮನ ಬುದ್ಧಿ ಮಾತ್ರ ಭೂತವು ಕರಣ ಧಾತು ಸಪ್ತಕ ಪಂಚ ಕೋಶಗಳಲಿ ಸತಿ ಸಹಿತ ಪ್ರಥಮಾಂಗನಲಿ ಕುಳಿತು ನೀ ಸತತ ಪ್ರತಿ ತತ್ವ ವ್ಯಾಪಿಸಿ ಜೀವಕರ್ಮವ ಮಾಳ್ಪೆ 2 ಚತುರ ದಶಲೋಕದಲಿ ಪ್ರತಿದೇಹರಥ ನಿನಗೆ ಕೃತಿರಮಣ ಸರ್ವತ್ರ ನಿನ್ನ ಲೀ¯ ಸತಿ ರಮಣ ಸುರರೆಲ್ಲ ಗತನಿದ್ರರಾಗಿನ್ನು ನೋಳ್ಪರೈ ಮಹಚಿತ್ರ 3 ಕಂಡ ಕಡೆಯಲಿ ಪೂಜೆ ಭಂಡಾರ ತುಂಬಿಹುದು ವಿಧಿ ಸುರರು ಸರ್ವತ್ರ ನಿನ್ನ ಕಂಡು ಪೂಜಿಪರಯ್ಯಾ ಪೂರ್ಣ ವಿಭವಗಳಿಂದ ಮಂಡÉ ಬಾಗಿದೆ ಭಕ್ತ ತಂಡದಲಿ ಇಡು ಎನ್ನ 4 ಪೂಜ್ಯ ಪೂಜಕನಾಗಿ ಪರಿಪೂರ್ಣ ವೈಭವದಿ ಪೂಜಿಸುವೆ ನಿನ್ನ ನೀ ಸರ್ವಕಾಲ ಭೋಜ್ಯ ಭೋಕ್ತøನಾಗಿ ಆನಂದ ಸಿರಿಗೀವೆ ಅಜರುದ್ರ ಸುರಗಣಕೆ ಉಣಿಸಿ 5 ಹದಿನೆಂಟು ನರಮುಖವು ಮಧ್ಯ ಗಜಮುಖ ದೇವ ಪದವೆರೆಡು ಭುಜ ನಾಲ್ಕು ಪದುಮೆ ರಮಣ ಉದಯಾರ್ಕ ಕಿರೀಟ ಕುಂಡಲಭೂಷ ಗದೆ ಪದುಮ ಆರೆ ಶಂಖ ಮಣಿಯುಕ್ತ ಮಾಲಧರ 6 ಮೂರ್ತಿ ಜಯೇಶವಿಠಲ ವಿಶ್ವನಾಮಕ ವಿಶ್ವವ್ಯಾಪ್ತಗುಪ್ತ ಉಚ್ಛ್ವಾಸ ಬಿಡುತಿಹೆನೊ ಉಡುಗಿ ಸಕಲ ಶಕ್ತಿ ಉತ್ಸಾಹ ನೀಡಯ್ಯ ಸ್ವಾಂತರದಿ ಕಲೆತೆನ್ನ 7
--------------
ಜಯೇಶವಿಠಲ
ವಿಷಯಾಸೆ ಬಿಡಲೊಲ್ಲದೋ ದೇವ ಪ. ವಸುದೇವಸುತ ನಿನ್ನ ವಶವಾಗೋತನಕ ಅ.ಪ. ಉದಯದಲಿ ಎದ್ದು ಹರಿಪದಗಳನು ಸ್ಮರಿಸದಲೆಕುದಿದು ಪರರನ್ನೆ ಬೈದು ಸುಯಿದುಮುದದಿಂದ ಮಜ್ಜನವ ಮಾಡದಲೆ ಕಂಡಕಡೆಒದಗಿ ಪರಸದನಕಾಗಿ ಪೋಗಿಮದಗರ್ವದಿಂದ ಗುರುಹಿರಿಯರಿಗೆ ವಂದಿಸದೆಕದನವನೆ ತೆಗೆದು ಬಂದು ನಿಂದುಇದೆ ಸಾಧನವೆಂದು ಉದರ ನೆವದಿ ತಿರುಗಿಸುದತಿಯರ ಸುಖಬಡಿಸಿ ಮದನವೆಗ್ಗಳನಾದೆ 1 ಓದುವೆನು ವಿದ್ಯೆಗಳ ಓದನದ ಬಯಕೆಯಲಿಸಾಧುಶಾಸ್ತ್ರಗಳ ಮರೆದು ತೊರೆದುಕಾದುವೆನು ತರ್ಕವ್ಯಾಕರಣ ಬಲದಿಂದಬೀದಿಬೀದಿಯಲಿ ಚರಿಸಿ ಅರಸಿಮಾಧವನ ಪೂಜಿಸದೆ ಪರರ ಅನ್ನವನುಂಡು ಶೋಧಿಸದೆ ಪುಣ್ಯಪಾಪ ಲೇಪಕ್ರೋಧದಿಂದಲಿ ಇನಿತು ಪರಿಪರಿಯ ಬವಣೆÀಯಿಂದಬೋಧನೆಗೆ ಒಳಗಾಗಿ ಕುಧರ್ಮವನು ಪಡೆದೆ2 ಪರರ ಸೌಭಾಗ್ಯ ವಿದ್ಯಾ ಮಕ್ಕಳ ಕಂಡುಮರುಗಿ ಮನದೊಳಗೆ ಕೊರಗಿ ಸೊರಗಿತರತರಕೆ ಪರರಾಂಗನೆಯರ ಚೆಲುವಿಕೆ ಕಂಡು[ತೆರೆದ] ಕಣ್ಣಿಂದ ನೋಡಿ ಬಾಡಿಎರಗಿ ಮನ ಅವರಲ್ಲಿ ಏಕಾಂತದಲಿ ಕಂಡುಕರದಿ ಸನ್ನೆಯನು ಮಾಡಿ ಕೂಡಿಹೊರಗೆ ಗುಣವಂತನೆಂದೆನಿಸಿ ಧರೆಯೊಳಗೆ ಪಾಮರ ಬುದ್ಧಿಯಿಂದ ಸಂಚರಿಸಿ ನಿನ್ನನು ಮರೆದೆ3 ದೇಶದೇಶಕೆ ಧನದಾಸೆಗಾಗಿ ನಡೆದುಬ್ಯಾಸರದೆ ಮನೆ ಮನೆಗೆ ಪೋಗಿ ಕೂಗಿಭೂಸುರೋತ್ತಮರು ನಾವೆಂದು ಪರರಮುಂದೆಹೇಸದಲೆ ಪೇಳಿಕೊಂಡು ಭಂಡುಮೋಸಗೊಳಿಸಿ ಪರರ ಆಶ್ರಯವನೆ ಮಾಡಿಭೇಷಜವ ತೋರಿ ಕಳೆದೆ ಪೊಳೆದೆಈಸುಪರಿ ಧನವ ತಂದು ಕೂಳನೆ ಹಾಕಿಆಸತಿಸುತರೆನಗೆ ಗತಿಯೆಂದು [ಗುಣಿಸಿದೆ] 4 ಕಾಯದಾಸೆಗಾಗಿ ನೋಯಬಯಸದಲೆ ಉ-ಪಾಯವ ಚಿಂತಿಸುತ್ತಲಿತ್ತಹೇಯವಿಲ್ಲದೆ ಸ್ನಾನ ಸಂಧ್ಯಾವಂದನೆ ತೊರೆದುತೋಯಿಸದೆ ದೇಹವನ್ನು ಇನ್ನುಮಾಯಮೋಸಗಳಿಂದ ಬಾಯಿಗೆ ಬೇಕಾದ್ದುಆಯಾಸಪಟ್ಟು ತಂದು ತಿಂದುಶ್ರೀಯರಸ ಹಯವದನರಾಯನೆ ನಾ ನಿನ್ನಮಾಯವನು ತಿಳಿಯದನ್ಯಾಯದಿಂದಲಿ ಕೆಟ್ಟೆ 5
--------------
ವಾದಿರಾಜ
ವೃಂದಾವನದ ಸೇವೆಯ ಪ. ವೃಂದಾವನದ ಸೇವೆಮಾಡಿದವರಿಗೆ ಭೂ-ಬಂಧನ ಬಿಡುಗಡೆಯಾಗುವುದು ಅ.ಪ. ಕರವ ಮುಗಿದು ಬೇಗೀ-ರೇಳು ಲೋಕದ ಮಾತೆಗೆ ನಮೋಯೆಂಬೋದಲ್ಲದೆಏಳು ಪರದಕ್ಷಿಣೆಯನು ಮಾಡಿದವರಿಗೆಏಳು ಜನಮದ ಪಾಪ ಹಿಂಗುವುದು1 ಸಾರಿಸಿ ರಂಗವಲ್ಲಿಯನಿಟ್ಟು ಮೇಲೆ ಪ-ನ್ನೀರನೆರೆದು ಪ್ರತಿದಿವಸದಲ್ಲಿಸಾರಿ ಸೇವೆಯ ಮಾಡಿದವರಿಗೊಲಿದು ಮುನ್ನಸೇರಿಸುವಳು ತನ್ನ ಪದವಿಯನು 2 ಒಡೆಯನ ಮನೆಗೆ ನೀರುತರುತಲೊಬ್ಬಳುಎಡಹಿ ಬಿದ್ದಳು ತನ್ನ ಕೊಡನೊಡೆಯೆಸಿಡಿದು ಶ್ರೀತುಳಸಿಗೆ ತಂಪಾಗಲು ಮುನ್ನಕೊಡಳೆ ಅವಳಿಗೆ ಮೋಕ್ಷಪದವಿಯನು 3 ಕೇಶವ ಎಂಬ ಭೂಸುರಗೆ ಶುಕಯೋಗಿ ಉಪ-ದೇಶಿಸಿದನು ತನ್ನ ಭಾಗವತದಲ್ಲಿಕಾಸುವೀಸ ಹೊನ್ನು ಹಣ ಸವೆಯದಾಮುನ್ನ ನಿ-ರಾಶೆಯಿಂದಲಿ ಮುಕ್ತಿ ದೊರಕುವುದು 4 ಪೊಡವಿಗಧಿಕವಾದ ಸೋದೆ ಪುರದ ತ್ರಿವಿಕ್ರಮಎಡಭಾಗದಲಿ ಲಕ್ಷ್ಮಿದೇವಿಯ ಸಹಿತಸಡಗರದಿಂದಲಿ ಹಯವದನನ ಪಾದಬಿಡದೆ ಪೂಜಿಸಿ ಭಕ್ತಿ ಪಡೆಯಿರಯ್ಯ 5
--------------
ವಾದಿರಾಜ
ವೃಂದಾವನೀ ದೇವಿ ವಂದಿಸುವೆ ಶ್ರೀ ತುಳಸಿ ವಂದಾರು ಜನತತಿಗೆ ಮಂದಾರಳೆನಿಸಿರುವಿ ಸಂದೇಹವಿಲ್ಲವಿದಕೆ 1 ಅಂದು ಧನ್ವಂತರಿಯು ತಂದಿರುವ ಪೀಯೂಷ ದಿಂದ ಪೂರಿತ ಕಲಶದಿ ಇಂದಿರಾಪತಿಯ ಆನಂದ ಬಾಷ್ಪೋದಕದ ಬಿಂದು ಬೀಳಲು ಜನಿಸಿದಿ2 ಶ್ರೀ ತುಳಸಿ ನಿನ್ನನು ನಿಕೇತನದಿ ಪೂಜಿಪರ ಪಾತಕವ ಪರಿಹರಿಸುವಿ ಶ್ರೀ ತರುಣಿಪತಿಗೆ ಬಲುಪ್ರೀತಿ ವಿಷಯಳೆನಿನ್ನ ನಾ ಸ್ತುತಿಸಲೆಂತು ಜನನಿ 3 ಸರ್ವ ತೀರ್ಥಗಳೆಲ್ಲ ತರುಮೂಲದಲ್ಲಿಹವು ಸರ್ವ ವಿಬುಧರು ಮಧ್ಯದಿ ಸರ್ವ ವೇದಗಳೆಲ್ಲ ತರುಅಗ್ರಭಾಗದಲಿ ಇರುತಿಹರು ಬಿಡದೆ ನಿರುತ 4 ತುಳಸಿ ನಿಮ್ಮಯ ಲಕ್ಷದಳಗಳಿಂದಲಿ ಲಕ್ಷ್ಮಿನಿಲಯನಂಘ್ರಿಗಳರ್ಚಿಸಿ ಕಲುಷ ವರ್ಜಿತನಾಗಿ ಬಲುಬೇಗ ಶ್ರೀಹರಿಯ ಒಲುಮೆ ಪಡೆವನು ಜಗದೊಳು 5 ತುಳಸಿ ದೇವಿಯೆ ನಿನಗೆ ಜಲವೆರೆದು ಕುಂಕುಮದ ತಿಲಕವಿಡುತಲಿ ನಿತ್ಯದಿ ಲಲನೆಯರು ಪೂಜಿಸಲು ಒಲಿದಿತ್ತು ಸೌಭಾಗ್ಯ ಸಲಹುವಿಯೆ ಕರುಣದಿಂದ 6 ಮಾಧವ ಪ್ರಿಯ ತುಳಸಿ ಸಾದರದಿ ನಿನ್ನೊಳಗೆ ಶ್ರೀದೇವಿ ನಿಂದಿರುವಳು ಮೋದಮುನಿ ಶಾಸ್ತ್ರವನು ಬೋಧಿಸುವ ಬುಧಜನರ ಪಾದಸೇವೆಯ ಕರುಣಿಸು 7 ಮಿತ್ರನುದಯದಲೆದ್ದು ಚಿತ್ತನಿರ್ಮಲರಾಗಿ ಭಕ್ತಿಯಲಿ ಶ್ರೀ ತುಳಸಿಯ ಮೃತ್ತಿಕೆಯ ಧರಿಸಿದ ಮಹಾತ್ಮರನು ಕಂಡು ಯಮ ಭೃತ್ಯರಂಜುವರು ಭಯದಿ 8 ಇಂತು ಶ್ರೀತುಳಸಿ ಸೀಮಂತಿನಿಯ ಸ್ತೋತ್ರವ ನಿ- ರಂತರದಿ ಪಠಿಸುವವರ ಚಿಂತಿತ ಪ್ರದನಾಗಿ ನಿಂತು ಕಾರ್ಪರದಿ ಸಿರಿ ಕಾಂತ ನರಹರಿ ಪೊರೆವನು 9
--------------
ಕಾರ್ಪರ ನರಹರಿದಾಸರು
ವೆಂಕಟಾಚಲ ನಿವಾಸಾ-ಜಗದೀಶ ಸಂಕಟ ಹರಿಸೋ ಶ್ರೀಶಾ ಪ ಪಂಕಜಾಸನ ಪ್ರಮುಖ ಶಶಾಂಕಸುರವರಪೂಜಿತ ಅಕಳಂಕಮಹಿಮ ಖಗಾಂಕ ಚಕ್ರಗದಾ ಶಂಖಶ್ರೀಕರಕಂಜಧರಪಾಣೀ ಅ.ಪ ಲೋಕನಾಥ ಲೋಕಬಂಧು-ದಯಾಸಿಂಧು ಭಕುತರನಿಮಿತ್ತಬಂಧು-ಎಂದೆಂದೂ ಭಕುತರ ಬೆಂಬಲನು ಎಂದೂ-ಇಂತೆಂದೂ ಪಾಕಶಾಸನಪೂಜ್ಯ ಪಿನಾಕಿಪಿತ ಸುರಜೇಷ್ಠವಂದ್ಯ ಏಕಮೇವ ನೀ ಕೈಬಿಡದೆ ಕರ್ಮ- ಪಾಕಮಾಡಿಸೋ-ಕಾಲನಾಮಕ1 ಬಂಧಕಗಳ ತಂದೊಡ್ಡೀ-ಭಕುತರ ಮನ ಪರಿ ಧೃಢಮಾಡಿ-ಪರಿಯುನೋಡಿ ಬಂದ ಬಂಧವ ಹರಿಸಿ-ಹೃದ್ವಾಸೀ ಹಿಂದುಮುಂದೂಕಾಣದ ಮಹ- ಅಂಧಕಾರಣ್ಯದಲಿ ಸಲಹಿದೆ ಬಂಧ ಮೋಚಕನಹುದೋ ಅನಾಥ ಬಂಧು ನೀನೆಂದು ನಂಬಿದೇ 2 ಕರುಣಾಸಾಗರನೇ ನಿನ್ನಾ-ನಾ ನಂಬಿದೆ ಸ್ಮರಣೆಯೊಂದನೆ ಪಾಲಿಸೋ ಈ ಜನುಮದೀ ಪರಮಸಾಧನ ಕಾಣದೇ-ಪರಿತಪಿಸುವೇ ನಿರುತ ಭವಸಂಕೋಲೆಯಾ ಕಡಿದು ಪೊರೆಯುವುದೋ ಶ್ರೀ ವೆಂಕಟೇಶನೆ ಸ್ಮರಿಪರಘ ಪರಿಹರಿಪ ಶ್ರೀ- ಉರಗಾದ್ರಿವಾಸವಿಠಲ ಪ್ರಭೋ 3
--------------
ಉರಗಾದ್ರಿವಾಸವಿಠಲದಾಸರು
ವೈಕುಂಠನಾಯಕನೂ ಈ ಮಹಾತ್ಮನು ವೈಕುಂಠನಾಯಕನು ಪ. ಪಾಕಶಾಸನತ, ನಾಕಪಾಲಕ ಸರ್ವಲೋಕನಾಯಕ ಭಕ್ತರಕ್ಷಕ ಶ್ರೀಕಳತ್ರ ಸುಪವಿತ್ರನೀತನು ಅ.ಪ. ವೆಂಕಟಗಿರಿಯಿಂದ ಅಂಕನಶೆಟ್ಟಿಪುರಕೆ ಬಿಂಕದಿಂದೈತಂದ ಕಾಂಕ್ಷಿತಾರ್ಥವನೀವನು ಭಕ್ತರಮನಶಂಕೆಯ ಕಳೆಯುವನು ಕಂಕಣಕರ ಬದ್ಧನಾಗಿಹ ಪಂಕಜಾಸನ ಜನಕ ಲಕ್ಷ್ಮೀಕಾಂತ ಸರ್ವಾಂತರ್ಯಾಮಿಯಾಗಿಹ 1 ಬಂದವರೆಲ್ಲ ತಾವು ಬಂದಂತೆ ಮನನೊಂದು ಹಿಂದಿರುಗಿ ಪೋಗುವರೆಂಬ ಮಾತಿಲ್ಲ ಬಂದು ಬಂದವರಿಗೆಲ್ಲ ಬೇಡಿದುದಿತ್ತಾನಂದ ದಿಂದವರೀಯುವ ಕಾಣಿಕೆಗಳ ಚೆಂದದಿಂ ಸುರೇಂದ್ರ ವಂದ್ಯ ಕರೀಂದ್ರಪೂಜಿತ ನಂದ ಕಂದ ಮುಚುಕುಂದ ವರದನು 2 ಅಂಗವಿಹೀನರಿಗಂಗವ ಸರಿಗೈದು ಇಂಗದ ಭೋಗಭಾಗ್ಯಂಗಳ ನೀವನು ಕಂಗೆಟ್ಟಿಹರಕಾಯ್ವನು - ಬೇಡುತ್ತಿಹ ಬಂಜೆಗೆ ಮಕ್ಕಳನು ನೀಡುವನು ತನ್ನ ನಂಬಿದವರ ಕೈಬಿಡನು ಸತ್ಯಾತ್ಮನು ಮಂಗಳಾಂಗ ಯದುಪುಂಗವ ಸದಯಾಪಾಂಗ ಶ್ರೀ ರಂಗ ತುಂಗವಿಕ್ರಮ ಶೇಷಗಿರಿವರ 3
--------------
ನಂಜನಗೂಡು ತಿರುಮಲಾಂಬಾ
ವ್ಯರ್ಥವಾಗೊದÉೂ ಜನ್ಮ ಸಾರ್ಥಕಾಗದೊ ಭಕ್ತಿ ಭಾವದಿಂದ ಪುರುಷೋತ್ತಮನ ಪೂಜಿಸದ ಜನ್ಮ ಪ ಪರಮ ಶ್ರೇಷ್ಠಜನ್ಮದಿ ಬಂದು ಪರಮ ಭಕುತಿಯಿಂದಲೀಗ ಪರಮಾತ್ಮನ್ನ ಪಾದವ ಭಜಿಸದೆ ಪಾಮರನಾಗಿ ಕಳೆವೋ ಜನ್ಮ 1 ಲಕ್ಷ್ಯ ಇಟ್ಟಧೋಕ್ಷಜ ನಿನ್ನನುಗ್ರಹ ಅಪÉೀಕ್ಷಿಸದಲೆ ಲಕ್ಷ್ಮೀಪತಿಯ ಪಾದವನ್ನಲಕ್ಷ್ಯ ಮಾಡದವನ ಜನ್ಮ 2 ಕರ್ಮ ಕಳೆದು ಪಂಚಮುಖನ ಪ್ರಿಯನ ನಾಮ ಮುಂಚೆ ನೆನೆಯದವನ ಜನ್ಮ 3 ನಿತ್ಯ ನಿನ್ನ ನಾಮ ಬಿಟ್ಟನಿತ್ಯ ಮಾರ್ಗ ಹಿಡಿದು ಮುಂದೆ ಕೆಟ್ಟು ಹೋಗೋದಕ್ಕೆ ಒಡಂಬಟ್ಟು ಹರಿಯ ಬಿಟ್ಟ ಜನ್ಮ 4 ಏಸುಏಸು ಜನ್ಮದಲ್ಲಿ ಬ್ಯಾಸರದಲೆ ಸಲಹುತಿಹ ಭೀ- ಮೇಶ ಕೃಷ್ಣನಂಘ್ರಿಗಳನು ದರ್ಶನ ಮಾಡದವನ ಜನ್ಮ 5
--------------
ಹರಪನಹಳ್ಳಿಭೀಮವ್ವ
ವ್ಯರ್ಥವಾಯಿತೆನ್ನಿ ಜನ್ಮ ಸ್ವಾರ್ಥವಿಲ್ಲದೆ ಪರ ಕೃತ್ತಿ ವಾಸನ ಪೂಜೆಯನ್ನು ಮಾಡದೆ ಪ ಹಿಂದೆ ಜನನಿ ಗರ್ಭವಾಸದಿಂದ ಹೊರಟು ಬಂದ ಮೇಲೆ ಕೊಂದು ದಿವಸನಾನು ನಿಷ್ಠೆಯಿಂದ ಲಿರ್ದು ಆಗಮೋಕ್ತ ದಿಂದ ಶಿವಗೆ ಜಲದಿ ರುದ್ರದಿಂದ ಜಳಕ ಗೈದು ಶ್ರೀ ಗಂಧ ಪುಷ್ಪ ಪತ್ರೆಯಿಂದ ಪೂಜೆಯನ್ನು ಮಾಡದೆ 1 ಪುಣ್ಯನದಿಯು ಪುಣ್ಯಕ್ಷೇತ್ರ ಪುಣ್ಯ ಭೂಮಿಯಲ್ಲಿ ವಾಸ ಪುಣ್ಯಕಥೆಯು ಪುಣ್ಯತೀರ್ಥ ಸ್ನಾನವಿಲ್ಲದೆ ಪುಣ್ಯ ಮೂರ್ತಿಯಲ್ಲಿ ಧ್ಯಾನ ಪುಣ್ಯಪುರುಷರೊಡನೆ ಸಂಗ ಪುಣ್ಯ ಕಾಲದಲ್ಲಿ ಶಿವನ ಪೂಜೆಯನ್ನು ಮಾಡದೆ 2 ಮಂಡೆ ಜುಟ್ಟ ಸೂತ್ರವನ್ನು ಖಂಡಿಸಿರ್ದುಯತಿಎನುತ್ತ ದಂಡವನ್ನು ಧರಿಸಿ ಪೀತ ಕೌಶೇಯ ವಸನವನ್ನು ಪೊದ್ದು ಮೊಂಡತನದಿ ಸಕಲ ವಿಷಯ ಭೋಗವನು ಭೋಗಿಸುತ್ತ ಮಂಡೆ ಬೋಳನಾದರೇನು ಮನವ ಬÉೂೀಳಮಾಡದೆ 3 ಕಾಮಾರಿಯನ್ನು ಆಗಮೋಕ್ತದಿಂದ ಪೂಜೆಯನ್ನು ಮಾಡಿ ಘೋರಪಾತಕಂಗಳನು ಸುಟ್ಟುಸೂರೆಮಾಡದೆ 4 ಬೆಟ್ಟದೊಳಗನಂತ ವ್ಯಕ್ಷ ಹುಟ್ಟಿಮಡಿದ ವೊಲು ಜನ್ಮ ನಷ್ಟ ವಾಯ್ತು ವಿಧಿಯು ಬರೆದಿಟ್ಟ ದುರ್ಲಿಖಿತವೆಲ್ಲ ತುಟ್ಟಿಸಿತ್ತು ತಿಳಿದು ಶಿವನ ಮುಟ್ಟಿ ಪೂಜಿಸಾದರಿನ್ನು ಕೆಟ್ಟು ಹೋಗ ಬೇಡ ಲಕ್ಷ್ಮೀಪತಿಯ ಸ್ಮರಣೆಮಾಡದೆ 5
--------------
ಕವಿ ಪರಮದೇವದಾಸರು
ವ್ಯಾಸಕೂಟ-ದಾಸಕೂಟದ ಇತರ ಗುರುಗಳ ವರ್ಣನೆ ಮುನಿವರ್ಯ ಶ್ರೀಕಾರ್ಪರ ಮುನಿವರ್ಯ ಪ ಗೃಂಥಾರ್ಥ ಜ್ಞಾನ ವಿಷಯವ ನೆನೆಸದಂದದಿ ಮಾಡೋ ವನಜನಾಭನ ಪ್ರೀಯ ಅ.ಪ ಮುನಿವರ್ಯ ಮನವಾಚಾಕಾಯಾ ದಿಂದ ಅನುದಿನ ನಡೆಯುವ ಕ್ರಿಯಾ ಶ್ರೀ ಕೃಷ್ಣನೆ ಮಾಡಿಸುವನೆಂಬೊ ಮತಿಯಾ ಕೊಡು ಯನಗೆಂದು ಮುಗಿವೆನು ಕೈಯಾ ಆಹಾ ಭವ ವನಧಿ ದಾಟಿಸುವ ಸಜ್ಜನರ ಸಂಗವ ಕೊಡು 1 ಶ್ರೀಕಾಂತನಶ್ವತ್ಥ ರೂಪ ದಿಂದ ಒಲಿದು ಬಂದು ನಿಂತು ಭಕ್ತ ವೃಂದವ ಪಾಲಿಪ ನಿರುತ ಆಹ ಇಂದುಮೌಲಿ ಮುಖರಿಂದ ಸಹಿತನಾಗಿ ಮಂದ ಜಾಸನನಿಲ್ಲಿ ಬಂದು ಪೂಜಿಪನಿತ್ಯ 2 ಶ್ರೀ ಕಾರ್ಪರಾಗಾರ ಬಹುಶರಣು ಜನರಿಗೆ ಮಂದಾರ ನರಹರಿಯನೊಲಿಸಿದಂಥ ಧೀರಾ ಆಹಾ ಕರುಣ ಶರಧೆಯನ್ನ ದುರಿತಗಳೋಡಿಸಿ ಹರಿಗುರು ಚರಣದಿ ಪರಮಭಕ್ತಿಯ ಕೊಡೊ 3
--------------
ಕಾರ್ಪರ ನರಹರಿದಾಸರು
ವ್ಯಾಸರಾಯರ ಸ್ಮರಿಸಿ ಏಸು ಜನ್ಮದ ಪಾಪ ನಾಶವಾಗುವುದು ನಿಮ್ಮಾಶೆ ಸಿದ್ಧಿಸುವುದು ಲೇಸಾಗಿ ಸುಖಿಸಿ ಆನಂದ ವೈಕುಂಠದಲಿ ವಾಸವಾಗುವುದು ನಿಜ ಭಕುತಿಯಲಿ ಬಿಡದೆ ಪ ಪಿತನಿಂದ ನೊಂದು ರತಿಪಿತನ ಸ್ಮರಿಸುತ ಪ್ರತಿಬಂಧಕಗಳ ಪ್ರತಿಯಾಗಿ ಬಂದಿರಲು ಬಲು ಮತಿವಂತನಾಗಿ ಮುದದೀ ಕ್ಷಿತಿಯ ಭಾರವ ವೊಹಿಸಿ ಕೃತಭುಜ ಮುನೀಶ್ವರನ ಸ್ತುತಿಸುತಲ್ಲಿದ್ದು ಮಿತಿಕಾಲ ಹಿಂಗಳದು ಅಚ್ಯುತನ ವರದಿಂದ ಬಂದು 1 ಅಲ್ಲಿ ತ್ರಿಣಿನೇತ್ರ ಶ್ರೀ ವಲ್ಲಭನ ಶ್ರೀಪಾದ ಪಲ್ಲವಾರುಣಿ ಚಿತ್ತದಲ್ಲಿ ಪ್ರತಿದಿವಸದಲಿ ನಿಲ್ಲಿಸಿ ನಿಗಮಾರ್ಥದಿಂದ ಪೂಜಿಸುತ್ತಿದ್ದ ಬಲ್ಲ ಭಕುತಿಂದ ಸತತ ಖುಲ್ಲನಲಿ ಪುಟ್ಟಿದ ಪ್ರಲ್ಹಾದ ದೇವನು ಬಲ್ಲಿದಾನಾಗೆಲ್ಲಿ ಸಂಸಾರನುತ್ತರಿಸಿ ಮುನಿ ಮೆಲ್ಲನೇ ನಡತಂದನು2 ಬಂದ ನಾರದಗೆ ಪ್ರಲ್ಹಾದ ದೇವನು ಎರಗಿ ನಿಂದು ಕಂಗಳ ಮುಗಿದು ತ್ರಾಹಿ ತ್ರಾಹಿ ಎಂದು ಇಂದು ನಿಮ್ಮಯಾ ದರುಶನಾ ಛಂದವಾಯಿತೆನಗೆತ್ತಲಿಂದ ಬಂದಿರಿ ಇತ್ತ ಬಂದ ವಿಚಾರ ಪೇಳೆಂದು ಬಿನ್ನೈಸಲು ನಂದದಲಿ ಹಾಹಾ ಎನುತಾ 3 ವೃಕೋದರನಿಂದ ನೊಂದು ದೇಹವನು ಬಿಡುವಾಗ ಬಾ ಲ್ಹಕರಾಯನಾಗಿ ಹುಟ್ಟಿದ ಪ್ರಲ್ಹಾದನು ವೈದಿಕ ಮಾರ್ಗವನ್ನೇ ಧರಿಸಿ ಉಕುತಿಯನೇ ಸಾಧಿಸಿ ಕಲಿಯೊಳಗೆ ನಿಮ್ಮ ಪೂ ಜಕನಾಗಿಪ್ಪೆನೆಂದು ತಲೆವಾಗಲು ಇಂದು ಪ್ರಕಟವಾಯಿತು ಧರೆಯೊಳು 4 ದಿಕ್ಕುಗಳಂ ಮರದು ಧಿಗಿಧಿಗಿನೆ ಚಿಗಿದಾಡುತ್ತ ಉಕ್ಕಿದವು ಕಣ್ಣಿಂದ ಅಶ್ರು ಜಲಧಾರೆ ತಾ ಮೈಮರೆದು ದೇವಕಿ ನಂದನನ ನೆನೆದು ನಕ್ಕು ಕಿಲಿಕಿಲಿ ರಾಹಸ್ಯಗಳನುಚ್ಚರಿಸುತಾ ತಕ್ರ್ಕೈಸಿ ತಿಳುಪಿದನು ಮುಂದಣಾಗಮವೆಲ್ಲ ವೃತ್ತಾಂತ ಅಕ್ಕಟ ಅದ್ಭುತವೇನೆಂಬೆ 5 ಬನ್ನೂರು ಗ್ರಾಮದಲಿ ಜನಿಸಿದನು ಭೂಸ್ವರೂಪ ಮುನ್ನಿಲ್ಲದೇ ಬೆಳೆದು ಮುನಿ ಸುಬ್ರಾಹ್ಮಣ ರನ್ನು ಪಾಲಿಸುವ ಪರಮಾನಂದವುಳ್ಳ ಬ್ರಹ್ಮಣ್ಯತೀರ್ಥರ ಕರದಿ ಚೆನ್ನಾಗಿ ಪೋಷಿಸಿಕೊಂಡು ಉಪನೀತವಾಗಿ ಸನ್ಯಾಸಿ ಪಟ್ಟವನೆ ಧರಿಸಿ ಧರ್ಮದಲಿ ಸ ವಿದ್ಯವನೋದಿ ಧನ್ಯ ಕೀರ್ತಿಯಲಿ ಮೆರೆದಾ 6 ರಾಯಗದ್ದುಗೆನೇರಿ ಅವನಿಗೆ ಬಂದ ಮಹಾ ಕುಹುಯೋಗವ ನೂಕಿ ರಾಜ್ಯದೊಳಗೆ ಇದ್ದ ಸುವರ್ಣ ಛಾಯದಂತೆ ಕಾಂತಿಲೀ ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆ ಎಂಬ ಸ್ಥಾಯವಾದರು ಪೊಂಪದಿ7 ಯಂತ್ರೋದ್ಧಾರಕನ ಪ್ರತಿಷ್ಠಿಸಿ ವಿಜಯೀಂದ್ರ ಸಂತ ವಾದಿರಾಜಗೊಲಿದು ಪುರಂದರ ಮಂತ್ರ ಸಿದ್ಧಿಯನೆ ಕೊಟ್ಟು ಭ್ರಾಂತಗೊಳಿಸುವ ಮಹಾ ಅನ್ಯಾಯ ಮತವೆಂಬ ಕಾಂತಾರ ಪಾವಕನೆ ವ್ಯಾಸಾಬ್ಧಿಯನು ಬಿಗಿದು ಚಿಂತಿತಾ ಫಲದಾಯಕ 8 ಮಧ್ವಮತವೆಂಬ ದುಗ್ಧಾಬ್ಧಿಗೆ ಪೂರ್ಣೇಂದು ಹೃದ್ವನಜದೊಳಗಿರಿಸಿ ಕೃಷ್ಣನ ಪದಾಂಬುಜವ ಚಿದ್ವಾತ್ಯದಲಿ ನಿಲಿಸಿ ಕಾವ್ಯದಲಿ ಕೊಂಡಾಡಿ ಸದ್ವೀರ ವೈಷ್ಣವರಿಗೆ ಪದ್ಧತಿಯನು ಪೇಳಿ ತವಕದಿಂದಲಿ ತಾವು ಸದ್ವೈಷ್ಣವ ಲೋಕ ಸಿರಿಮರಳೈದಿದರು ಪಾದದ್ವಯವ ಭಜಿಸುವವರೂ ಕೇಳಿ 9
--------------
ವಿಜಯದಾಸ
ಶಂಕರಾವ ಮಾಂ ಶಂಕರಾವ ಮಾಂ ಶಂಕರಾವ ಮಾಂ ಕಿಂಕರಂ ತವ ಪಶಂಕರಾವ ಮಾಂ ಪಂಕಜಾಲಯಾ ಲಂಕೃತಾಂಘ್ರಿಣಾ ನಿರತ ಪೂಜಿತ ಅ.ಪ ಫಾಲಲೋಚನ ಫಣಿವಿಭೂಷಣ ಕಾಲಖಂಡನ ಕಲುಷಭಂಜನಲೋಲಕಂಕಣಾಲಿಪ್ತಚಂದನ ಮೂಲಕರಣ ಮೃದುಸುಭಾಷಣ 1ಭಕ್ತಪಾಲಕ ಮುಕ್ತಿದಾಯಕ ಶಕ್ತಿಪ್ರೇರಕ ಯುಕ್ತಿಬೋಧಕತ್ಯಕ್ತಲೌಕಿಕ ಮುಕ್ತಬಂಧಕ ದಿಕ್ತಟಾದಿಕ ವ್ಯಕ್ತರೂಪಕ 2ಭೂತಭಾವನ ಭೂರಿಲೋಚನ ಭೀತಿಭೇದನ ನೀತಿವರ್ಧನವೀತಬಹುಜನ ವಿತತಸದ್ಗುಣ ಪಾತಕೀಜನ ಪಾಪ ಶೋಧನ 3ಶಿವ ಮಹೇಶ್ವರ ಶಿವಗುಶೇಖರ ಭವ ಪರಾತ್ಪರ ಭುವನಮಂದಿರಧ್ರುವ ದಿಗಂಬರ ಧೂರ್ತಪುರಹರ ದಿವಪ ಭಾಸುರ ಶ್ರೀ ಉಮಾವರ 4ತಿರುಪತೀತಿಭೂಧರ ವರೇಸದಾ ವರದ ವೆಂಕಟೇಶ್ವರ ಇತಿಸ್ಥಿತವರ ಕಕುದ್ಗಿರೀಶ್ವರ ಗಂಗಾಧರ ಚರಣಸೇವಕಂ ಮಾಂ ಕುರು ಪ್ರಭೂ 5ಓಂ ಪರಮ ಪುರುಷಾಯ ನಮಃ
--------------
ತಿಮ್ಮಪ್ಪದಾಸರು