ಒಟ್ಟು 5385 ಕಡೆಗಳಲ್ಲಿ , 130 ದಾಸರು , 3673 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಕ ಚಿಂತಿಸಲಯ್ಯ ಈ ಜಗದ ಸುಖಕಾಗಿ ಸಾಕು ಇದರೊಳು ಸುಖದ ಲೇಶವನು ಕಾಣೆ ಪ ಒಂದು ಸುಖ ಬಯಸಿದೊಡೆ ಹಿಂದೆ ನೂರೆಂಟಾಗಿ ಸಂದಣಿಪ ದುಃಖಗಳು ಬಂದು ಒದಗುವವಿದಕೆ ಎಂದಿಗೂ ಬಯಸೆನಾ ಈ ತೆರೆದ ಸುಖವನ್ನು ಹಿಂದಿನಾ ಕರ್ಮದಂತಾಗುತಿರುವುದಕೆ 1 ಮೊದಲು ಸವಿಯಾಗಿಹುದು ತುದಿಯಲಿದು ವಿಷವಹುದು ಬದಲಾಗುತಿಹ ಇಂಥ ಸುಖ ಬೇಡವೆನಗೆ ಮೊದಲುಕೊನೆ ಇಲ್ಲದಿಹ ಸದಮಲಾನಂದವಹ ಪದವ ಮರೆಯಿಸುತಿರುವದಿದು ಬೇಡವೆನಗೆ 2 ಅನಿಸಿಕೆಯೆ ಕೂಡಿರುವ ಈ ಸುಖವು ನಿಜವಲ್ಲ ಮನವಾಣಿಗಳಿಗಾಚೆಗಿಹ ಸುಖವು ನಿಜವು ತಾನೆ ಸುಖರೂಪನೆಂದನಿತರೊಳು ನಿಶ್ಚಯಿಸಿ ಜ್ಞಾನಿಶಂಕರನೆ ನಾನಾದ ಮೇಲಿನ್ನು 3
--------------
ಶಂಕರಭಟ್ಟ ಅಗ್ನಿಹೋತ್ರಿ
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಏಕಾದಶಿ ಉತ್ಸವಗೀತೆ ಲೋಕನಾಯಕನ ಏಕಾದಶಿಯ ಉತ್ಸವಕೆ ಅ ನೇಕ ವಿಧದಿಂದ ಪಟ್ಟಣವ ಸಿಂಗರಿಸಿ 1 ಸುಣ್ಣ ಕೆಮ್ಮಣ್ಣಿಂದ ಕಾರಣೆಯನು ರಚಿಸಿ ಚೀಣೆ ಚೀಣಾಂಬರದ ಮೇಲುಕಟ್ಟುಗಳು 2 ಕದಳಿಯ ಕಂಬಗಳು ಗೊನೆಸಹಿತ ನಿಲ್ಲಿಸಿ ತೆಂಗು ಕ್ರಮುಕದ ಫಲವ ತಂದು ಸಿಂಗರಿಸಿ 3 ವಿಧ ವಿಧವಾದ ಪುಷ್ಪಗಳನು ತರಿಸಿ ಮದನನಯ್ಯನ ಮಂಟಪವ ಸಿಂಗರಿಸಿ 4 ಶುದ್ಧ ಪಾಡ್ಯದ ದಿವಸ ಮುದ್ದು ಶ್ರೀರಂಗ ಅಧ್ಯಯನೋತ್ಸವಕೆಂದು ಪೊರಟು ತಾ ಬಂದ 5 ಭಟ್ಟರು ವೇದಾಂತಿ ಜಯಿಸಿದರ್ಥವನು [ನಟ್ಟ]ಮಾವಾಸೆರಾತ್ರಿಯಲಿ ಅರೆಯರ್ಪಾಡಿದರು 6 ಸಂಧ್ಯಾರಾಗವ ಪೋಲ್ವ ಅಂಗಿಕುಲಾವಿ ಛಂದ ಛಂದದ ಆಭರಣವನು ಧರಿಸಿ 7 ಸಿಂಹನಡೆಯಿಂದ ಮೂರಡಿಯಲಿ ನಿಂದು ಮಹಾಶ್ರೀವೈಷ್ಣವರಿಗೆ ಶ್ರೀಪಾದವಿತ್ತು 8 ಮಂತ್ರಿ ಎದುರಲಿ ನಿಂತು ಮಾಲೆಗಳನಿತ್ತು ಕಂತುಪಿತ ಬಂದ ನಾಗಿಣಿಯ ಮಂಟಪಕೆ 9 ವಾಸುಕೀಶಯನಮಂಟಪದಲಿ ನಿಂತು ದಾಸಿ ವರವನು ಸಲಿಸಿದ ಕ್ಲೇಶನಾಶಕನ 10 ಸುರರಿಗೊಡೆಯನು ಸುಂದರಾಂಗ ತಾ ಬಂದು [ವರ]ಸುಲ್ತಾನಿ ಎದುರಲಿ ನಲಿನಲಿದು ನಿಂದು 11 ಕುಂದಣದ ಛತ್ರಿ ಚಾಮರಗಳಲುಗಾಡೆ ಇಂದಿರಾರಮಣ ಸತಿಯಿದುರೆ ನಲಿದಾಡೆ 12 ಆದಿಮೂರುತಿ ಮಂಟಪದೊಳು ನಿಂತು ಆದಿ ಆಳ್ವಾರುಗಳಿಗೆಲ್ಲ ಆಸ್ಥಾನವಿತ್ತು 13 ವಿಷ್ಣುಚಿತ್ತರು ಮಾಡಿದರ್ಥಂಗಳನ್ನು [ವಿಶೇಷ]ದಭಿನಯದಿಂದ ಪೇಳಿದರು14 ಅರೆಯರು ಬಂದು ತಾವೆದುರಲ್ಲಿ ಪಾಡೆ ಭೂ ಸುರೋತ್ತಮರೆಲ್ಲ ಹರುಷದಿಂ ನೋಡೆ 15 ಮಂಟಪದಲ್ಲಿ ನೇವೇದ್ಯವನ್ನು ಗ್ರಹಿಸಿ ವೈ ಕುಂಠವಾಸನು ಬಂದ ವೈಯ್ಯಾರದಿಂದ16 ದರ್ಪಣದೆದುರಲ್ಲಿ ನಿಂತು ಶ್ರೀರಂಗ ಕಂ ದರ್ಪನಾಪಿತ ಬಂದ ಆನಂದದಿಂದ 17 ಮದಗಜದಂತೆ ಮೆಲ್ಲಡಿಯಿಟ್ಟು ಬಂದು ಒದಗಿ ಮೂರಡಿಯಲ್ಲಿ ತಿರಿಗುತಾ ನಿಂದು 18 ಅಡಿಗೊಂದು ಉಭಯವನ ಗ್ರಹಿಸಿ ಶ್ರೀರಂಗ ಬೆಡಗಿನಿಂದಲೆ ಬಂದ ಮಂಟಪಕೆ ಭವಭಂಗ 19 ಶ್ರೀಧರನು ಮಂಟಪದಲ್ಲಿ ತಾ ನಿಂತು ಮ ರ್ಯಾದೆಯನಿತ್ತು ಶ್ರೀವೈಷ್ಣವರಿಗೆ 20 ವೈಯ್ಯಾರ ನಡೆಯಿಂದ ಒಲಿದೊಲಿದು ಬಂದು [ನಯ] ಸೋಪಾನದೆದುರಲಿ ನಲಿನಲಿದು ನಿಂದು 21 ಕರ್ಪೂರ ಪುಷ್ಪವನು ಬೆರೆಸಿ ತಾವ್ತಂದು ಅಪ್ರಮೇಯನ ಶಿರದೊಳೆರೆಚಿದರು [ಅ]ಂದು 22 ಇಂದಿರಾರಮಣ ಗುಂಭಾರತಿಯ ಗ್ರಹಿಸಿ ಎಂದಿನಂದದಿ ತನ್ನ ಮಂದಿರಕೆ ನಡೆದ 23 ಬಿದಿಗೆ ತದಿಗೆಯು ಚೌತಿ ಪಂಚಮಿಯಲ್ಲಿ ವಿಧವಿಧದ ಆಭರಣಮನೆ ಧರಿಸಿ 24 ಷಷ್ಠಿ ಸಪ್ತಮಿ ಅಷ್ಟಮಿ ನೌಮಿಯಲ್ಲಿ ಸೃಷ್ಟಿಯೊಳಗುಳ್ಳ ಶೃಂಗಾರವನೆ ಮಾಡಿ 25 ದಶಮಿಯ ದಿವಸದಲಿ ಕುಸುಮನಾಭನಿಗೆ ಶಶಿಮುಖಿಯ ಅಲಂಕಾರವನ್ನು ಮಾಡಿದರು 26 ಸುರರು ಅಸುರರು ಕೂಡಿ ಶರಧಿಯನು ಮಥಿಸೆ ಭರದಿ ಅಮೃತವು ಬರಲು ಅಸುರರಪಹರಿಸೆ 27 ಸುರರೆಲ್ಲರು ಬಂದು ಶ್ರೀಹರಿಗೆ ಇಡಲು ಮೊರೆ ಸಾಧಿಸುವೆನೆಂದೆನುತ ವರಗಳನು ಕೊಡಲು 28 ಎನಗೆ ತನಗೆಂದು ಹೋರಾಡುವ ಸಮಯದಿ ವನಜನಾಭನು ಮೋಹಿನಿಯ ರೂಪಿನಲಿ 29 ವಾರೆಗೊಂಡೆಯವನು ವೈಯ್ಯಾರದಿಂದ ಧರಿಸಿ ತೋರಮುತ್ತಿನ ಕುಚ್ಚುಗಳ ಅಳವಡಿಸಿ 30 ಹೆರಳು ರಾಗಟೆಯು ಬಂಗಾರಗೊಂಡ್ಯಗಳು ಅರಳುಮಲ್ಲಿಗೆ ಹೂವ ದಂಡೆಗಳ ಮುಡಿದು 31 ಪಾನಪಟ್ಟಿಯು ಸೂರ್ಯಚಂದ್ರಮರನಿಟ್ಟು ಫಣೆಯಲ್ಲಿ ತಿದ್ದಿದ ಕಸ್ತೂರಿ ಬಟ್ಟು 32 ಚಾಪವನು ಪೋಲುವಾ ಪುಬ್ಬಿನಾ ಮಾಯ ಆಪ್ತಭಕ್ತರನು ಕರುಣದಿಂ ನೋಡುವ ನೋಟ 33 ತಿಲಕುಸುಮವನು ಪೋಲ್ವ ನಾಸಿಕದ ಚಂದ ಥಳಥಳಿಸೆ ಮುತ್ತಿನ ಮುಕುರದ ಅಂದ 34 ಕುಂದಕುಸುಮವ ಪೋಲ್ವ ದಂತಪಂಕ್ತಿಗಳು ಕೆಂ[ದ]ವಳಲತೆಯಂತಿರುವ ಅಧರಕಾಂತಿಗಳು 35 ಚಳತುಂಬು ಬುಗುಡಿ ಬಾವುಲಿಗಳನಿಟ್ಟು ಥಳಥಳಿಪ ವಜ್ರದ ಓಲೆ ಅಳವಟ್ಟು 36 ಗಲ್ಲದಲಿ ಪೊಳೆಯುವ ದೃಷ್ಟಿಯ ಬೊಟ್ಟು ಮೊಗ ದಲ್ಲಿ ಮಂದಹಾಸದ ಕಾಂತಿ ಇನ್ನಷ್ಟು 37 ಕೊರಳೊಳಗೆ ಹಾರ ಪದಕವನು ತಾನಿಟ್ಟು [ಉರದಿ] ದುಂಡುಮುತ್ತಿನ ದಿವ್ಯಸರಗಳಳವಟ್ಟು 38 ಧರಿಸಿ ನಾನಾವಿಧ ಪುಷ್ಪ ಗಿಣಿಮಾಲೆಯನು ಅರಳುಮಲ್ಲಿಗೆ ಹೂವಸರಗಳಲಂಕರಿಸಿ 39 ಉಂಗುರ ವಂಕಿ ಬಾಜಿಯ ಬಂದುದ್ವಾರ್ಯ(?) ಕೈಕಟ್ಟು ಮುಂಗೈ ಮುರಾರಿಯನ್ನು ಇಟ್ಟು 40 ಬಿಳಿಯ ಪೀತಾಂಬರವ ನಿರಿಹಿಡಿದುಟ್ಟು ಥಳಥಳಿಪ ಕುಂದಣದ ವಡ್ಯಾಣವಿಟ್ಟು 41 ಅಂದುಗೆ ಗೆಜ್ಜೆಗಳ ಚಂದದಿಂದಿಟ್ಟು ಕುಂದಣದ ಪಾಡಗವನ್ನು ಅಳವಟ್ಟು 42 ಈ ರೂಪಿನಿಂದ ಅಸುರರನು ಮೋಹಿಸುತ ಸುರರಿಗೆ ಅಮೃತವನು ಎರೆದು ಪಾಲಿಸುತ 43 ಮೂರುಕಣ್ಣುಳ್ಳವನು ಮೋಹಿಸಿದ ರೂಪ ಈ[ರೇಳು]ಲೋಕದವರಿಗೆ ತೋರಿದನು ಭೂಪ 44 ಗರುಡಮಂಟಪದಲ್ಲಿ ನಿಂತು ಶ್ರೀರಂಗ ಬೆರಗಿನಿಂದೆಲ್ಲರಿಗೆ ಬಿಡದೆ ಸೇವೆಯನಿತ್ತು 45 ಆಳ್ವಾರುಗಳಿಗೆಲ್ಲ ವಸ್ತ್ರಗಂಧವನಿತ್ತು ಅವರವರ ಆಸ್ಥಾನಕ್ಕವರ ಕಳುಹಿಸುತ 46 ಬಂದು ಬಾಗಿಲ ಹಾಕಿ ಇಂದಿರಾರಮಣ ನಿಂದ ವೆಂಕಟರಂಗ ಆನಂದದಿಂದ 47
--------------
ಯದುಗಿರಿಯಮ್ಮ
ಏಕಿಷ್ಟು ಕರುಣವೊ ಶ್ರೀಕೃಷ್ಣದೇವ ಪ ನಾಲ್ಕ್ಹತ್ತು ಲೋಕದಲಿ ಸುಖ ಸೂರೆ ಮಾಳ್ಪೊ ಹರಿ ಅ.ಪ ಮುಕ್ತಗಣ ನೋಡಯ್ಯ ನಿತ್ಯಮುಕ್ತಳ ನೋಡು ಶಕ್ತವಿಧಿ ವಾಣೀಶ ಭಕ್ತಿ ದೇವ ಫಣಿ ರುದ್ರ ಇವರ ಸತಿಯರ ನೋಡು ಉತ್ತಮೋತ್ತಮ ಸುಖವ ಸೂರೆಗೊಂಬರೊ ಹರಿಯೆ 1 ನಿನ್ನಾರು ಮಹಿಷಿಯರ ಸುರಪ ಸುರಗಣ ನೋಡು ಪುಣ್ಯತಮ ಸುರಮನಿಯ ಭೃಗುವ ನೋಡು ಚಿಣ್ಣ ಪ್ರಹ್ಲಾದನನ್ನ ಬಲಿ ಧ್ರುವ ಭೀಷ್ಮನ್ನ ಇನ್ನು ದ್ರೌಪದಿ ಶುಕನ ಆನಂದ ನೋಡಂiÀi್ಯ 2 ಅಂಬರೀಷನ ನೋಡು ರಾವಣಾನುಜ ಜನಕ ಪರೀಕ್ಷಿತ ವೃತ್ತ ಶಬರಿ ತುಂಬಿದ ಸದ್ಭಕ್ತ ಋಷಿಪತ್ನಿಯರ ನೋಡು ಕಂಬನಿಯ ಸುರಿಸುವೆನೊ ಕರುಣಿಸೊ ಹೃದ್ಗøಹದಿ 3 ನೀಯೆನ್ನ ಸತ್ವ ನೀಯೆನ್ನ ಜ್ಞಾನ ನೀಯೆನ್ನ ಮನ ಬುದ್ಧಿ ಕರುಣ ನಿಧಿಯೆ ನೀಯೆನ್ನ ಪ್ರಾಣರತಿ ನೀಯೆನ್ನ ಸತ್ಕರಣ ನೀಯೆನ್ನ ಧೃತಿ ಶಾಂತಿ ನೀಯೆನ್ನ ಸರ್ವನಿಧಿ 4 ನೀ ಮಾಡೆ ನಾ ಮಾಳ್ಪೆ ನೀನಾಡಿಸಿದರಾಡ್ವೆ ಕಾಮದನೆ ಕಾಮಪಿತ ಜಯೇಶವಿಠಲ ಶ್ರೀ ರಮಣ ಸರ್ವೇಶ ಈ ಮನಸು ನಿನ್ನಲ್ಲಿ ಪ್ರೇಮದಿ ನೆಲಸಿ ಇರುವಂತೆ ಕೃಪೆಮಾಡು 5
--------------
ಜಯೇಶವಿಠಲ
ಏಕೆ ಪೋಗುವೆ ರಂಗಾ, ರಂಗಯ್ಯ ರಂಗ ಪ ಏಕಾಂತದೊಳು ಪೇಳ್ವ ವಾಕ್ಕುಗಳನು ಕೇಳಿ ಅ.ಪ ಮುನಿಸತಿ ಶಿಲೆಯಾಗಿ ವನಜನಾಭಾಯೆಂದು ನೆನೆಯುತಲಿಲ್ಲವೋ ಮನ ಮೋಹನಾ ತನಯ ಪ್ರಹ್ಲಾದ ತಾ ಜನಕಾ ಬಾರೆನಲಿಲ್ಲ 1 ದುರುಳ ಮಕರಿಯಿಂದೆ ಪರಿತಾಪವಾಂತಿಲ್ಲ ಸ್ಮರಿಸಲಿಲ್ಲ ದುರುಳ ಕದ್ದೊಯ್ಯಲಿಲ್ಲ ಸರಸಿಜಾನನನೀಗ ಚರಣಕೆರಗಲಿಲ್ಲ 2 ಹದಿನಾರು ಸಾವಿರ ಸುದತೀ ಮಣಿಯರೆಲ್ಲ ಮದನಾಂಗ ಬಾರೆಂದು ಕರೆಯಲಿಲ್ಲ ಉದಧಿ ನಿನ್ನರಸಲಿಲ್ಲ ಪದುಳದೆ ಬಲಿ ನಿನ್ನ ಚದುರ ಬಾರೆನಲಿಲ್ಲ 3 ಕರದೆ ಕೊಡಲಿಯ ಪಿಡಿದು ಮರದೆ ನಿ[ಲ್ಲೆನುತಲಿ] ನೂರಾರು ಕೈಯವ ಕರೆಯಲಿಲ್ಲ ಹರನೀಗ ತ್ರಿಪುರರ ತರಿಯೆ ಬಾರೆನಲಿಲ್ಲ ವರತುರುಗವೇರಿ ಧುರಕೆ ಬಾರೆಂಬರಿಲ್ಲ4 ಕಾಮಿತವೀಯೆಂದು ಪ್ರೇಮದಿ ಭಜಿಸುವ ಪಾಮರರಿಲ್ಲಿಗೇ ಬರುತಿರ್ಪರೋ ಶಾಮನೆ ಮಾಂಗಿರಿಗಾಮಿಯಾಗಿಹೆಯೇಕೆ ಕಾಮಹರನೆ ಬಾರೊ ರಾಮದಾಸಜೀವ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಕೆ ಬೇಕಾಗಿತ್ತೊ ನಿನಗೆ ಈ ಆಟಲೋಕೇಶ ಸಾಕಯ್ಯ ಇಲಿ ಬೆಕ್ಕಿನಾಟಾ ಪ ಸುಷ್ಟು ಜಲಧಿಶಯನ ಬಿಸುಟಿ ಬಿಸಲ್ಯಾಕೆಸೃಷ್ಟಿಪುದು ಮೊದಲ್ಯಾಕೆ ಸೃಷ್ಟಿಸಲು ಪ್ರಾಣಿಗಳಕಷ್ಟ ಪಡಿಸುವುದ್ಯಾಕೆ ಕಷ್ಟವನು ನೋಡಿತುಷ್ಟಪಡುವುದು ಯಾಕೆ ಇಷ್ಟಕೆ ಬಯಕೆ 1 ಸ್ವರ್ಗ ನರಕಗಳೇಕೆ ಜನ್ಮ ಜನ್ಮಾಂತರಕೆವರ್ಗ ಮಾಡುವುದೇಕೆ ಪಾಪಪುಣ್ಯಗಳೇಕೆದುರ್ಗಮದ ವೈಕುಂಠದಾಸೆ ತೋರುವುದೇಕೆನಿರ್ಗುಣನೆ ಸಲ್ಲದಿ ಉದ್ಯೋಗವ್ಯಾಕೆ 2 ಉದಧಿಶಯನದೊಳಾತ್ಮಾನಂದದಲಿ ಮುಳುಗಿಹೃದಯದೊಳು ನೀನೊಂದು ನೀನೇಯೇ ನೀನಾಗಿಮೋದ ಪಡುವುದು ಬಿಟ್ಟು ವೀರನಾರಾಯಣನೆಗದುಗಿನೊಳು ಬಂದಿಲ್ಲಿ ನಿಂತಿರುವುದೇಕೇ 3
--------------
ವೀರನಾರಾಯಣ
ಏಣನಯನೆ ಏಣಭೋಜ ಮಧ್ಯಳೆ ತೋರೆಏಣಾಂಕ ಬಿಂಬ ಮುಖಿಏಣವೈರಿಯ ವೈರಿಯ ಶಿರಕುಚಯುಗೆ ಕರೆತಾರೆಏಣಾಂಕಧರ ಸಖನ ಪ ಚಳಿಯ ಮಗಳ ತಾಯಳಿಯನ ತನಯನಇಳುಹದೆ ಪೊತ್ತಿಹನಬಳಿದುಣ್ಣಲೀಸದೆ ಸೆಳೆದುಂಡನಣ್ಣನಸಲಹಿದಾತನ ಸುತನಕಳದೊಳು ತಲೆ ಚೆಂಡಾಡಿದ ಧೀರನಬಳಿ ವಾಘೆಯನು ಪಿಡಿದನಇಳೆಯ ಮೊರೆಯನು ಕೇಳಿ ಖಳರುತ್ತಮಾಂಗವನಿಳುಹಿದಾತನ ತೋರೆಲೆ 1 ಇಪ್ಪತ್ತುನಾಲ್ಕು ನಾಮಗಳೊಳಗೇಳನುತಪ್ಪದೆಣಿಸಿ ಕಳೆದುಬಪ್ಪ ಎಂಟನೆಯ ನಾಮದ ಪೆಸರಿನೊಳ್‍ಇಪ್ಪ ಕಡೆಯ ಬೀಡಲಿಅಪ್ಪ ಜಯದರಸನ ಕೂಡೆ ಜನಿಸಿದಕಪ್ಪು ವರ್ಣದ ಮೈಯಳಅಪ್ಪನ ಮಿತ್ರನ ಮಗನೆಂಬ ಬೊಮ್ಮನಬೊಪ್ಪನ ತೋರೆನಗೆ2 ಬಿಡುಗಣ್ಣ ಬಾಲೆ ತನ್ನೊಡೆಯನ ನುಡಿಗೇಳಿದೃಢದಿಂದ ನಡೆದು ಬಂದುಜಡಿವ ಕೋಪಕೆ ಶಾಪ ಪಡೆದುಕೊಂಡಾಕ್ಷಣನುಡಿದ ದಿನವು ದಾಟಲುಪಡೆಯನೆಲ್ಲವ ನಡು ರಣದಲಿ ಸೋಲಿಸಿಜಡಿದು ಗೋವುಗಳನೆಲ್ಲಒಡನೆ ತನ್ನಯ ಪುರಕೆ ಹೊಡೆತಂದ ಧೀರನಒಡೆಯನ ತೋರೆನಗೆ 3
--------------
ಕನಕದಾಸ
ಏತಕಿನಿತು ಕೋಪವಾಂತು ಭೀತಿಗೊಳಿಸುವೆ ರೀತಿಯೇನಿದನಾಥ ನಾಥ ನೀತಿಯೆನಿಪುದೆ ಪ. ಪರಮದಯಾಕರನು ನೀನೆನುತೊರೆವುದಾಗಮ ಪರಿಯ ನೋಡಲು, ಕರುಣೆ ನಿನ್ನೊಳಿರುವುದರಿಯೆ ನಾ1 ಪಾಲನೂಡಿದ ನಾರಿಗಂದು ಕಾಲನೆನಿಸಿದೆ ಕಾಲಕಾಲ ಶೂಲಿವಿನುತ ನೀಲವರ್ಣನೆ 2 ವರವನೀವ ವರದನೆಂದೇ ಹಿರಿಯರೊರೆವರು ಚರಣತಲದಿ ಶಿರವನಿಟ್ಟರು ತೆರೆಯೆ ಕಣ್ಗಳಂ3 ಅಡಿಯ ಪಿಡಿದು ಬೇಡಿಕೊಂಬೆ ಪೊಡವಿಗೊಡೆಯನೆ ಬಿಡದೆ ಕೈಯಪಿಡಿದು ಸಲಹೊ ಒಡೆಯ ಬೇಗನೆ 4 ಶೇಷಶೈಲ ಶಿಖರಧಾಮ ಯದುಕುಲೋತ್ತಮ ಶೇಷಶಯನ ಸಲಹು ನಮ್ಮ ಸತ್ಯವಿಕ್ರಮ5
--------------
ನಂಜನಗೂಡು ತಿರುಮಲಾಂಬಾ
ಏತಕೆ ಒಣಭ್ರಾಂತಿ ತಿಳಿಯದು ಮೂರುದಿನದ ಸಂತಿ ನೀತಿಗೆಟ್ಟು ಸತಿಮೋಹದಿ ಕುಳಿತೆಮದೂತರೆಳೆಯುವಾಗೇನಂತಿ ಪ ಬರುವಾಗೊರ್ವಬಂದಿ ಬರುತಲೆ ಮಂದಿ ಮಕ್ಕಳೆಂದಿ ಇರು ಇರುತೆಲ್ಲ ನನ್ನದೆಂದಿ ಮರೆವಿನ ಆಲಯದೊಳು ನಿಂದಿ ಕರುಣವಿಲ್ಲದೆತುಸು ಹೆಡತಲೆಮೃತ್ಯು ಮುರಿದು ತಿನ್ನುವಾಗ್ಯಾರಿಲ್ಲ ಹಿಂದೆ 1 ತನುಜನರು ಇವರು ಧನಕನಕಿರುವತನಕ ಹಿತರು ಜನಕಜನನಿಯರು ಕೊನೆಗೆ ಸಂಗಡ ಬರರ್ಯಾರು ಕನಿಕರವಿಲ್ಲದೆ ಕಾಲದೂತರು ಘನಬಾಧೆಪಡಿಸಲು ಬಿಡಿಸರೋರ್ವರು 2 ಭೂಮಿ ಸೀಮೆಯೆಲ್ಲ ಈ ಮಹರಾಜ್ಯ ಭಂಡಾರ ಸುಳ್ಳು ಪಾಮರ ಸಂಸಾರ ಕಾಮಿಸಿ ಕೆಡಬೇಡೇಲೆ ಮಳ್ಳ ಕಾಮಜನಕ ನಮ್ಮ ಸ್ವಾಮಿ ಶ್ರೀರಾಮನ ನಾಮಭಜಿಸಿ ಭವಗೆಲಿದು ನೀ ಬಾಳೋ3
--------------
ರಾಮದಾಸರು
ಏತಕೆ ನೀ ಚಿಂತಿಸುವೆ ಹೇಡಿ ಜೀವವೇ ಪ ವೀತಮೋಹರಾಗನಾಗಿ ವಿಧಿಪಿತ ದಾತತಾನೆಂದು ತಿಳಿಯಲು ಹೃತ್ತಾಪನಾಶನಾ ಅ.ಪ ಹೊನ್ನು ಹೆಣ್ಣು ಮಣ್ಣು ಮೂರು ನಂಬಬ್ಯಾಡಲೊ ನಿನ್ನೊಳಿರುವ ಮೂರ್ತಿಯನ್ನು ಅರಿತು ಬಾಳೆಲೊ 1 ವಂದಿಸುತ ಸಜ್ಜನರ ಕಂಡರಾನಂದ ಪೊಂದುತ ಸಂದೇಹಗಳೆಲ್ಲ ತೊರೆದು ಸತತ ನಲಿಯುತ 2 ಆತ್ಮವತ್ ಸರ್ವಭೂತನೆಂಬೊ ವಚನವು ಆತ್ಮನಲ್ಲಿ ಸಮರ್ಪಿಸಿದರೆ ಪಡೆವೆ ಸೌಖ್ಯವು 3 ಸಾಮಜೇಂದ್ರ ವರದ ಶ್ರೀ ಗುರುರಾಮವಿಠಲನ ಪ್ರೇಮದಿಂ ನಿಷ್ಕಾಮನಾಗಿ ಸೇವಿಸುನುದಿನ 4
--------------
ಗುರುರಾಮವಿಠಲ
ಏತಕೆ ಸಂತತ ಚಿಂತಿಸುವೆ ಪ ಕೋತಿಗೆ ಮದ್ದಿಕ್ಕಿದ ರೀತಿಲಿ ಮನವೆಅ.ಪ ಹಾನಿ ವೃದ್ಧಿಗಳು ತಾನಾಗಿ ಬರುವುದು ಏನೇನು ಮಾಡಲು ಬಿಡಲೊಲ್ಲದು ಜ್ಞಾನವಿಲ್ಲದೆ ವೃಥಾ ಧೇನಿಸಿ ಧೇನಿಸಿ 1 ದೇಹಸಂಬಂಧಿಗಳ ಮೋಹ ಪಾಶಕ್ಕೆ ಸಿಕ್ಕಿ ಸಾಹಸ ಮಾಡುವುದೇನು ಫಲ ಊಹಿಸಿ ನೋಡಲು ಭ್ರಾಂತಿಯದಲ್ಲವೆ 2 ಪೂರ್ವ ಕರ್ಮಾನುಸಾರ ನಡೆಸುವನು ಗರ್ವವಿರಹಿತನು ಗುರುರಾಮವಿಠಲನು 3
--------------
ಗುರುರಾಮವಿಠಲ
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಯ್ಯ ವಾರಿಜನಯನಾ | ಎನ್ನನುದ್ದರಿಸಲಾರೆಯಾ | ದೀನಾನಾಥ ದಯಾಂಬುಧಿಯಂಬಾ | ಶ್ರೀನಾಮದ ಬಿರುದಿನ ಮಹಾಮಹಿಮನಾ ಪ ಪಾತಕ | ತಾ ಮೊದಲಿಗೆ ಇಲ್ಲವೋ ಎನುತಾ | ಆ ಮಹಾಶೃತಿ ಸಾರುತಲಿರೆ ದುಷ್ಕ್ರತ | ನಾ ಮಾಡಿದ ಘನವಾಯಿತೇ ದೇವಾ1 ಗಜಗಣಿಕಾ ಅಜಮಿಳನಹಲ್ಯಾ | ವೃಜಗೋವಳ ವ್ಯಾಧರ ಮೊದಲು | ಭಜನಿಯಿರಲಿ ಇರದಿರಲಿ ಸನಾತನ | ನಿಜಪದದೋರಿದ ಪರಮ ಉದಾರಾ2 ನೀನೇ ಗತಿ ಎಂದಾನತೆ ನಾದೆ | ಇನ್ನೇನು ನೋಡುವಿ ಅಂತವಾ | ನ್ಯೊನವಾರಿಸದೆವೆ ತಾರಿಸು ಪಾಮರ | ವಣನವನನು ಗುರು ಮಹಿಪತಿ ಸ್ವಾಮಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನಿದು ಬಯಲ ಪಾಶ ನೋಡಿದರಿಲ್ಲಿ ಏನು ಹುರುಡುಗಾಣೆನೊ ನಾನಾಜನ್ಮದಿ ಬಂದು ಹೊಂದಲಾರೆನು ನಿನ್ನ ಧ್ಯಾನವ ಕೊಡೊ ಅಭಿಮಾನದೊಡೆಯ ರಂಗ ಪ. ನೀರಬೊಬ್ಬುಳಿಯಂದದ ದೇಹವ ನೆಚ್ಚಿ ದೂರ ಹೊತ್ತೆನು ಹರಿಯೆ ಯಾರು ಎನಗೆ ಸರಿಯಿಲ್ಲೆಂಬಹಂ- ಕಾರ ಪ್ರಪಂಚದ ಬಂಧನದೊಳು ಸಿಲುಕಿ ನೊಂದೆನೊ ಸದ್ಗತಿ ತೋರೊ 1 ಬಡವರಾಧಾರಿ ಕೇಳೊ ಸಂಸಾರದ ಮಡುವಿನೊಳಗೆ ಧುಮುಕಿ ಕಡೆಹಾಯಿಸೊ ಕೈಪಿಡಿದು ಕೃಪೆಯೊಳೆನ್ನ ದಡವ ಸೆÉೀರಿಸೊ ಜಗದೊಡೆಯ ಶ್ರಿರಂಗಯ್ಯ 2 ಸುತ್ತೆಲ್ಲ ಬಂಧು ಬಳಗ ನವಮಾಸದಿ ಹೊತ್ತು ಪಡೆದ ಜನನಿ ಪುತ್ರ ಸಹೋದರರ ಘಳಿಗ್ಯಗಲಲಾರದೆ ಮತ್ತೆ ಯಮನವರೊಯ್ವಾಗ ಯಾರು ಸಂಗಡ ಇಲ್ಲ 3 ಆಸೆಯೆಂಬುದು ಬಿಡದು ಈ ಭುವನದೊಳ್ ಲೇಸುಗಾಣೆನು ಹರಿಯೆ ಭಾಷೆಯ ಕೊಡು ಮುಂದೆ ಜನುಮಬಾರದ ಹಾಗೆ ಈಶಸನ್ನುತ ಹೆಳವನಕಟ್ಟೆರಂಗಯ್ಯ 4
--------------
ಹೆಳವನಕಟ್ಟೆ ಗಿರಿಯಮ್ಮ
ಏನಿದ್ದರೇನು ಈ ಮಾನವನಿಗೆ ಜಗದಲ್ಲಿ ದಾನವಾಂತಕನ ಗುಣಜ್ಞಾನವನು ಪೊಂದದಲೆ ಪ ಕಾನನದಿ ಬೆಳಗುತಿಹ ಬೆಳದಿಂಗಳಂದದಲಿ ಜ್ಞಾನ ಹೀನನಿಗೆ ಈ ಮಾನವನ ಜನುಮ ಅ.ಪ ದಾನ ಮಾಡಿದರೇನು ಧರ್ಮ ಮಾಡಿದರೇನು ಸ್ನಾನ ಮಾಡಿದರೇನು ನದಿನದದಲಿ ಜ್ಞಾನವಿಲ್ಲದ ಕರ್ಮಗಳ ರಚಿಸಲೇನುಂಟು ವಾನರಗೆ ಕರದೊಳಿಹ ಮಣಿಗಳಿಂದೇನು ಫಲ 1 ಯಾತ್ರೆ ಮಾಡಿದರೇನು ಕಾಶಿ ರಾಮೇಶ್ವರದ ಕ್ಷೇತ್ರಗಳ ವಾಸದಿಂದೇನು ಫಲವು ಚಿತ್ರ ಚರಿತನಲಿ ದೃಢಭಕುತಿಯನು ಪೊಂದದಿರೆ ನೇತ್ರರಹಿತನಿಗುಂಟೆ ಚಿತ್ರಗಳ ಫಲವು 2 ಹೊನ್ನಿನ ಮದದಿಂದ ಹೆಮ್ಮೆಗೋಸುಗ ಬಹಳ ಅನ್ನಛತ್ರಗಳ ರಚಿಸಿದರೇನು ಫಲವು ತನ್ನವರ ದೃಢಭಕುತಿಯನ್ನರಿವ ಸತತ ಪ್ರ ಸನ್ನ ಹರಿದಾಸರಿಗೆ ಇನ್ನೇನು ಬೇಕು 3
--------------
ವಿದ್ಯಾಪ್ರಸನ್ನತೀರ್ಥರು