ಒಟ್ಟು 921 ಕಡೆಗಳಲ್ಲಿ , 93 ದಾಸರು , 714 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಸ್ತಿ ಮಾದಲಾದಉತ್ತಮ ರಥವು ಸಂದಣಿಸಿತು ಕೋಲ ಪ. ಇಂದ್ರನು ತಾನೊಂದು ಗಜೇಂದ್ರನೇರಿಕೊಂಡುಮಂದಗಮನೆಯರ ಶಚಿ ಸಹಿತ ಕೋಲಮಂದಗಮನೆಯರ ಶಚಿ ಸಹಿತ ವಜ್ರಾಯುಧಉಪೇಂದ್ರನ ಮನೆಗೆ ಬರುತಾನೆ ಕೋಲ 1 ಹುತಭುಕ್ತನು ತಾನುಸತಿ ಸ್ವಾಹಾದೇವಿಯ ಕೂಡಿಅತಿಶಯವಾದ ಮೇಷವೇರಿಅತಿಶಯವಾದ ಮೇಷವೇರಿ ಶಕ್ತಿಯ ಧರಿಸಿಕ್ರತುಪತಿ ಮನೆಗೆ ಬರುತಾನೆ ಕೋಲ 2 ಜಾಣ ಯಮನು ತಾನು ಕೋಣ ವೇರಿಕೊಂಡುರಾಣಿ ಶಾಮಲೆಯ ಸಹಿತಾಗಿ ಕೋಲರಾಣಿ ಶಾಮಲೆಯ ಸಹಿತಾಗಿ ದಂಡವ ಧರಿಸಿಪ್ರಾಣೇಶನ ಮನೆಗೆ ಬರುತಾನೆ ಕೋಲ 3 ನಿರುತಿ ತಾನೊಂದು ನರನ ಪೆಗಲನೇರಿತರುಣಿಯ ಸಹಿತ ಆಯುಧ ಧರಿಸಿ ಕೋಲತರುಣಿಯ ಸಹಿತ ಆಯುಧ ಧರಿಸಿನರಹರಿ ಮನೆಗೆ ಬರುತಾನೆ ಕೋಲ4 ಮಕರ ಮೇಲೇರಿ ಶ್ರೀ ಭಾಗೀರಥಿಯ ಒಡಗೂಡಿ ಕೋಲಶ್ರೀ ಭಾಗೀರಥಿಯ ಒಡಗೂಡಿ ಪಾಶವ ಧರಿಸಿದರಾಧರನ ಮನೆಗೆ ಬರುತಾನ ಕೋಲ 5 ಮರುತನು ತಾನೊಂದು ಎರಳಿ ಮೇಲೇರಿತರುಣಿ ಪ್ರವಹಿ ಒಡಗೂಡಿ ಕೋಲತರುಣಿ ಪ್ರವಹಿ ಒಡಗೂಡಿ ಗದೆಯ ಧರಿಸಿಮುರಹರನ ಮನೆಗೆ ಬರುತಾನ ಕೋಲ 6 ವಿತ್ತಪನು ತಾನೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೊಡಿ ಕೋಲಚಿತ್ತದೊಲ್ಲಭೆಯ ಒಡಗೊಡಿ ಖಡ್ಗವ ಧರಿಸಿಪೃಥ್ವೀಶನ ಮನೆಗೆ ಬರುತಾನೆ ಕೋಲ7 ಈಶನು ತಾನೊಂದು ವೃಷಭನ ಮೇಲೇರಿಶ್ರೀ ಸತಿದೇವಿ ಒಡಗೂಡಿಕೋಲಶ್ರೀ ಸತಿದೇವಿ ಒಡಗೂಡಿ ತ್ರಿಶೂಲವ ಧರಿಸಿನರಸಿಂಹನ ಮನೆಗೆ ಬರುತಾನೆ ಕೋಲ8 ಧರ್ಮ ಭೀಮಾರ್ಜುನ ನಕುಲ ಸಹದೇವರುಪ್ರೇಮದಿಂದಲೆ ಪೊರ ಹೊರಟು ಕೋಲಪ್ರೇಮದಿಂದಲೆ ಪೊರ ಹೊರಟು ಬರುತಾರೆ ರಮಿಯರಸನ ಅರಮನೆಗೆ ಕೋಲ 9
--------------
ಗಲಗಲಿಅವ್ವನವರು
ಹಾನಿಯಾದ ಮೇಲೆ ಏನು ಬೆಂಬಲವಾದರಿನ್ನೇನಿನ್ನೇನು ಮಾನಹೋದ ಮೇಲೆ ದಿನವೆಷ್ಟು ಬಾಳಿದರಿನ್ನೇನಿನ್ನೇನು ಪ ಆಪತ್ತಿಗಿಲ್ಲದ ಆಪ್ತರೆಷ್ಟಿದ್ದರು ಇನ್ನೇನಿನ್ನೇನು ತಾ ಪರರಾಳದವಗ್ಹಣವು ಎಷ್ಟಿರ್ದರಿನ್ನೇನಿನ್ನೇನು ಕೋಪಿಷ್ಠನಾದವ ತಪವೆಷ್ಟು ಗೈಯಲು ಇನ್ನೇನಿನ್ನೇನು ಪಾಪಕ್ಕಂಜದನೀಗಧಿಕಾರರ್ವಿರಿನ್ನೇನಿನ್ನೇನು 1 ವನಿತೆಯ ಸೇರದ ಗಂಡ ಮನೆಯೊಳಿರ್ದರಿನ್ನೇನಿನ್ನೇನು ಒಣಗಲು ಪೈರಿಗೆ ಬಾರದ ಮಳೆ ತಾನಿನ್ನೇನಿನ್ನೇನು ಬನ್ನಬಡುವರ ಕÀಂಡು ಗಹಗಹಿಸಿ ನಕ್ಕರಿನ್ನೇನಿನ್ನೇನು ಮನ್ನಣಿಲ್ಲದ ಸಭೆ ಮಾನ್ಯರು ಪೊಕ್ಕರಿನ್ನೇನಿನ್ನೇನು 2 ಅವಮಾನ ಸಮಯಕ್ಕೆ ಒದಗದ ಗೆಳತನವಿನ್ನೇನಿನ್ನೇನು ಧವ ಸತ್ತ ಯುವತಿಯ ಕುರುಳು ಮಾರಿದರಿನ್ನೇನಿನ್ನೇನು ದಯದಾಕ್ಷಿಣ್ಯಲ್ಲದ ಅರಸನಾಳಿಕಿದ್ದರಿನ್ನೇನಿನ್ನೇನು ದಿವಮಣಿ ತನ್ನಯ ಕಿರಣಂಗಳ್ತೋರದಿರಲಿನ್ನೇನಿನ್ನೇನು 3 ಸತಿ ರೂಪಸ್ಥಳಾದರಿನ್ನೇನಿನ್ನೇನು ರೋಗ ಕಳೆಯದ ವೈದ್ಯರಾನಂಗರಿದ್ದರಿನ್ನೇನಿನ್ನೇನು ಆಗಿಬಾರದವರ ಬಾಗಿಲ ಕಾಯ್ದರಿನ್ನೇನಿನ್ನೇನು ಭೋಗಿವಿಷಕೆ ಗರುಡಮಂತ್ರನುವಾಗಲು ಇನ್ನೇನಿನ್ನೇನು 4 ಪ್ರೇಮದವರೆ ತನ್ನೊಳ್ ತಾಮಸರಾದಿರಿನ್ನೇನಿನ್ನೇನು ನೇಮಿಸಿದ್ಯೆಲ್ಲವು ಇದಿರಾಗಿ ಕೂತಮೇಲಿನ್ನೇನಿನ್ನೇನು ಕಾಮಧೇನುವೆ ಮನದಿ ಕಾಮಿತವೀಯದಿರೆ ಇನ್ನೇನಿನ್ನೇನು ಸ್ವಾಮಿ ಶ್ರೀರಾಮನ ಪ್ರೇಮ ಪಡೆಯದ ನರ ಇನ್ನೇನಿನ್ನೇನು 5
--------------
ರಾಮದಾಸರು
ಹಾರುವರಿಗೆ ಭೂಮಿಯಾ ನೀಡಿದೆನೆಂದು | ನೀರೋಳುಮನೆಯ ಮಾಡಿ ಕೊಂಡೆಯಾರಂಗಾ ಪ ಇಂದ್ರಾದಿಗಳು ಕ್ಷಣಕೊಮ್ಮೆ ಮೊರೆಯಿಡಲಾಗಿ ನಿದ್ರೆ ಕಾಣೆನೆಂದು ಸೇರಿದೆ ಗಡ್ಡೆಯಾರಂಗಾ 1 ವಿಷನುಂಡುದಾವಾಗ್ನಿ ನುಂಗಿ ತನು ಶೆಖೆದೋರೇ ಶೇಷನಂಗದ ಮೇಲೆ ಪವಡಿಸಿದೆಯಾ ರಂಗಾ 2 ಶರಣ ವಸರಕ ಎಡತಾಕಲಾರೆನೆಂದು ಗುರುಮಸಿಪತಿ ಸ್ವಾಮಿ ನಾಮ ವಿಟ್ಟೆಯಾ ರಂಗಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಾಲು ಮಾರಲು ಪೋದೇವಮ್ಮ ಗೋಕುಲದೊಳ- ಗ್ಹಾಲು ಮಾರಲು ಪೋದೆವಮ್ಮ ಹಾಲು ಮಾರುವ ಧ್ವನಿ ಆಲಿಸಿ ಕೇಳುತ ಬಾಲಕೃಷ್ಣ ಬಹು ಲೀಲೆ ಮಾಡುತ ಬಂದಪ ಹಸಿರು ಜರದ ಸೀರೆಯನುಟ್ಟು ಕುಸುರಿಕಂಕಣ ಎಸೆವೊ ಹವಳದ ಹಿಂಬಳೆ ಕಟ್ಟು ಮೊಸರಿನ ಕುಂಭ ಕÀುಸುಮ ಮಲ್ಲಿಗೆಯ ಮುಡಿಯಲ್ಲಿಟ್ಟು ಶಶಿವದನೆಯರೆಲ್ಲ ಚೆಂದದಿ ಬರುತಿರೆ ಕುಸುಮನಾಭ ಮುಸುಗೆಳೆದು ಮೊಸರು ಸುರಿದ1 ಬಣ್ಣ ಬಣ್ಣದ ಸೀರೆಯನುಟ್ಟು ಮುತ್ತಿನ ಬಟ್ಟು ಹೊಳೆವೊ ಕಸ್ತೂರಿ ತಿಲಕವನಿಟ್ಟು ಹಾಲಿನಕುಂಭ ಸಣ್ಣಮಲ್ಲಿಗೆ ಮುಡಿಯಲಿಟ್ಟು ಚೆನ್ನಾರ ಚೆಲುವೇರು ಚೆಂದದಿ ಬರುತಿರೆ ಕಣ್ಣು ಸನ್ನೆಮಾಡಿ ಕರೆದು ಮುದ್ದಿಡುವ 2 ಮುಂದೆ ಮುಂದಾಗಿ ಹೋಗುತಿರಲು ಹಿಂದ್ಹಾಲಿನ್ಹರವಿ- ಗೊಂದೊಂದ್ಹರಳು ಮೀಟುತಿರಲು ಧಾರೆಗೆ ಬಾಯಾ- ನಂದದಿಂದೊಡ್ಡಿ ಕುಡಿಯುತಿರಲು ಸÀಂದಣಿಯೊಳು ನಾವು ಒಂದರಿಯದಲೆ ಬಂದಿಳುಹಲು ಬರೀ ಗಡಿಗೆ ಕಾಣಮ್ಮ 3 ಕಡಗೋಲಿಂದೊಡೆದÀು ಗಡಿಗೆಯನು ಬಡವರ ಬೆಣ್ಣೆ ಒಡಲಿಗೆ ಕದ್ದು ತಿಂಬುವುದೇನು ಕಂಡರೆನಗಂಡ ಬಡಿದÀರಿನ್ನೇನು ಮಾಡುವೆ ನೀನು ಗಡಿಬಿಡಿ ಮಾಡುತ ಕತ್ತಲ ಮನೆಯೊಳು ತÀುಡುಗನಂತೆ ತಿರುಗಾಡುವ ತಾನು 4 ಸಿಟ್ಟು ಮಾಡುವುದ್ಯಾತಕಮ್ಮ ಶ್ರೀ ರಮಣನ ಬಿಟ್ಟು ಬಾಹುವುದೆ ಲೇಸಮ್ಮ ಭೀಮೇಶಕೃಷ್ಣನ ಕಟ್ಟಿ ಹಾಕುವುದೆ ಲೇಸಮ್ಮ ಪಟ್ಟುಮಾಡಿ ಪರಹೆಂಗಳೇರೊಳು ಕ- ಣ್ಣಿಟ್ಟ ಮ್ಯಾಲೆ ಒಂದಿಷ್ಟಾದರು ಬಿಡ5
--------------
ಹರಪನಹಳ್ಳಿಭೀಮವ್ವ
ಹಿಂದೂ ಮುಂದೂ ಎಂದೆಂದಿಗೂ ಗೋವಿಂದನೆ ಎನಗೆ ಬಂಧು ಪ. ಮನೆಯೆಂಬೋದೆ ಸುಮ್ಮನೆ ಮಕ್ಕಳೆಂಬೋದೆ ದಂಧನೆಹಣವೆಂಬೋದೆ ಬಲುಬೇನೆ ಹಾರಿಹೋಗುವದು ತಾನೆ 1 ಮಂದಗಮನೆಯರ ಕೂಡಿ ಮದವೆಲ್ಲ ಹೋಗಲಾಡಿಮುಂದೆ ತೋರದಂತೆ ಬಾಡಿ ಮೋಸಹೋಗಲಾಡಬೇಡಿ2 ಪರಧನ ಪರಸತಿ ಪರಕ್ಕೆಬಾರದಿದು ಘಾಸಸಿರಿಹಯವದನನ ಚರಣ ಭಜಿಸಿ ಪಡೆಯೆಲೊ ಕರುಣ3
--------------
ವಾದಿರಾಜ
ಹಿರಿಯ ಅತ್ತಿಗೆಯರ ಗರವು ಕಂಡೆವೆಮೇರುಗಿರಿಗಿಂತ ಕೋಟಿ ಅಧಿಕವೆ ಸಖಿಯೆನಾ ಹ್ಯಾಂಗೆಸುಮ್ಮನಿರಲಿ ಪ. ಓಡಿ ಬಂದವಳು ಒಳಗೆ ಸೇರಿಮಾತಾಡಳು ನೋಡಳು ನಮ್ಮ ಅಣ್ಣನ ಮಡದಿಯುನೋಡಳು ನಮ್ಮ ಅಣ್ಣನು ಮಡದಿಗೆಮಾಡಿದ ಮೋಹ ತಲೆಗೇರಿ1 ಹೆಣ್ಣು ರುಕ್ಮಿಣಿ ತಮ್ಮ ಅಣ್ಣನವಂಚಿಸಿಓಡಿ ಬಂದು ಕಣ್ಣಿಲೆನೋಡಿ ಕರೆಯಳುಕಣ್ಣಿಲೆ ನೋಡಿ ಕರೆಯಳು ಇವಳು ನಮ್ಮಅಣ್ಣನ ಬಲವ ಹಿಡಕೊಂಡು2 ಇಂದು ರುಕ್ಮಿಣಿ ತಿಳಿದು ಬಂದಳು ಭಾಳೆ ವಿನಯದಿಬಂದಳು ಭಾಳೆ ವಿನಯದಿ ದ್ರೌಪತಿಯಆಲಿಂಗನವÀ ಮಾಡಿ ಕರೆದಳು 3 ಬಾರವ್ವ ಸುಭದ್ರೆ ಏರವ್ವ ಸೋಪಾನ ತೋರವ್ವ ನಿನ್ನ ವಚನವತೋರವ್ವ ನಿನ್ನ ವಚನವ ಎನುತಲಿ ದ್ವಾರದಿ ಕೈಯ್ಯ ಹಿಡಕೊಂಡು4 ಬಂದ ಬೀಗಿತ್ತಿಯರು ಚಂದದಿಂದ ಇದುರುಗೊಂಡು ಮಂದಹಾಸದಲೆ ನುಡಿಸುತಮಂದ ಹಾಸದಲೆ ನುಡಿಸುತ ರುಕ್ಮಿಣಿ ಬಂದವರು ಯಾರು ಮನೆಯೊಳು 5 ಸೊಂಡಿಲನಗರದ ಪಾಂಡು ಭೂಪನ ಸೊಸೆಗಂಡುಗಲಿ ಪಾರ್ಥನ ಆರ್ಧಾಂಗಿಗಂಡುಗಲಿ ಪಾರ್ಥನ ಆರ್ಧಾಂಗಿ ಸುಭದ್ರಾಮುಯ್ಯವ ಕೈಕೊಂಡು ಬ್ಯಾಗ ತಿರುಗಿಸು 6 ಹರದಿ ರುಕ್ಮಿಣಿ ದೇವಿ ಸೆರಗ ಹಿಡಿದು ದ್ರೌಪದಿಯದೊರೆಗಳ ಹೆಸರು ನಮಗ್ಹೇಳೆ ದೊರೆಗಳ ಹೆಸರು ನಮಗ್ಹೇಳೆ ರಾಮೇಶನ ಪರಮಭಕ್ತರಿಗೆ ನುಡಿದಳು 7
--------------
ಗಲಗಲಿಅವ್ವನವರು
ಹಿರಿಯ ಮಗಳಿಂದ ಶ್ರೀಕರನಪದ ಸೇರೊ ಬರಿದೆ ಯೋಚನೆಯಿಂದ ಬೇಸರಗೊಳದಿರು ಪ. ಕಾಮಕ್ರೋಧಗಳನ್ನು ಭೌಮಿಯಲಿ ದೂಡುವಳು ವ್ಯಾಮೋಹ ಮದಲೋಭ ಮತ್ಸರಗಳಿಂ ಸೀಮೆಯಿಂಧೊರಗ್ಹಾಕಿ ಡಂಭಹಿಂಸಾನೃತದ ನಾಮವಡಗಿಸಿ ಪೂರ್ಣ ಕಾಮನನು ತೊರೆವ 1 ಭಾವ ಶುದ್ಧಿ ವಿವೇಕ ಬಾಲಕರನೆತ್ತುವಳು ಪಾವನತ್ವವ ಮಾಡಿ ತೂಗುತಿಹಳು ದಾವ ಕುಲಕು ದಶೇಂದ್ರಿಯ ದುಷ್ಟ ತುರಗಗಳ ಭಾವ ಕೆಡದಂದದಲಿ ಕಾವ ಕಮಲಾನನದ 2 ತನುವೆಂಬ ಮನೆಯ ಶುದ್ಧಿಯ ಗೈದು ಸುಜ್ಞಾನ ವೆನಿಸುತಿಹ ದೀವಿಗೆಯ ತೋರುತಿಹಳು ಮೂರ್ತಿ ಮನದೊಳಗೆ ನೆಲೆತೋರ್ಪ ವಿನಯ ವೆಂಕಟಪತಿಯ ನೆನವೆನಿಪ ಹರಿಭಕ್ತಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹುಚ್ಚರಾಗಿ ಕೆಡಬೇಡಿರೆಚ್ಚರವ ಪಡಿರೋ ಮೆಚ್ಚಿ ಸ್ತ್ರೀಯರ ಇಚ್ಛೆಗೊಳಗಾಗದಿರಲೊ ಪ ಬಡಿವಾರತನದಿಂದ ಕಡುದೈನ್ಯದೋರುವರು ಒಡಲೊಳಗಿನ ಹರಳು ಒಡೆದರಳುವಂತೆ ಒಡಲೊಳೊಂಚನೆ ಬಿಡರು ಕಡೆತನಕ ಸ್ಥಿರವಲ್ಲ ಕಡುಪಾಪಿರೂಪಿನ ಮಡದಿಯರ ಮನವು 1 ಮನವ ಕರಗಿಸಿ ತನ್ನ ಮನೆಯ ಪುರುಷನ ಜರೆದು ಮನಮೋಹಿಸಿನ್ನೊಬ್ಬ ಗೆಣೆಯನಂ ಕೂಡಿ ತಿನುವಳು ಬಿಡದೊಂದುದಿನ ಪತಿಯ ಪ್ರಾಣಮಂ ಘನಪಾಪಿ ವನಿತೆಯರ ಮನನಂಬಿಗಲ್ಲ 2 ತನ್ನ ಪುರುಷನಮುಂದೆ ಬಣ್ಣದಮಾತಾಡಿ ಹಣ್ಣಿಗೆತಂದವನ ತನ್ನೊಶದಲಿರಿಸಿ ಮುನ್ನ ಜನನೀ ಜನಕರನ್ನು ಅಗಲಿಸಿ ಒಡನೆ ತನ್ನಯ ಅನುಕೂಲವನ್ನೆ ಸಾಧಿಪಳು 3 ಅವಗೆ ಹಿತವನೆ ತೋರಿ ಇವಗೆ ಕಾಲನೆ ಎತ್ತಿ ಅವನಿಗೆ ಕೈಕೊಟ್ಟು ದಿವರಾತ್ರಿಯೆನದೆ ಭ ಭವ ಭವವ ತಿರುಗುವರು ಜೀವಘಾತಕಿಯರದಾವ ಭರವಸವೊ 4 ಹರಿದಿಯರ ಒಡನಾಟ ನರಕಕ್ಕೆ ಮೂಲವು ದುರಿತಕ್ಕೆ ತವರಿದು ಮರೆಮೋಸದುರುಲು ದುರುಳೆಯರ ಚರಿತಕ್ಕೆ ಮರುಳಾಗಿ ಕೆಡದೆ ಭವ ಹರ ಶ್ರೀರಾಮನ ಪದಸ್ಮರಣೆ ಸಂಪಾದಿಸಿರೊ 5
--------------
ರಾಮದಾಸರು
ಹೇ ದಯಾಸಾಗರ ಸ್ವಾಮಿ ವೇದ ಮಾಧವ ಮುಕುಂದ ಮನುಮುನಿ ಪ್ರೇಮಿ ಪ ವೇದಗೋಚರ ಸಾಧುಸನ್ನುತ ನಾದಪ್ರಿಯ ಭವಬಾಧೆರಹಿತ ಭೇದಹರ ಜಗ ಪಾದ ಭಜಿಸುವೆ ಪಾಲಿಸೆನ್ನ ಅ.ಪ ಮದಗಜ ಮುದದಿಂದ ಪೊರೆದಿ ಪ್ರಭುವೆ ಮದಗಜಗಮನೆಯ ಮಾನದಿಂ ಕಾಯ್ದೆ ಪದುಮವದನೆಶಾಪ ಕಳೆದೆ ಕರುಣಿ ಸದಮಲಬಾಲನ ತಪಕೆ ನೀನೊಲಿದಿ ಸುದಯಹೃದಯ ಸುಸದನಪಾಲ್ಸಿದಿ ಸದಮಲಾಂಗನೆ ಪದುಮವದನ ಮುದದಿ ನಿಮ್ಮಡಿ ಪದುಮಗಳು ಎ ನ್ಹøದಯ ಮಂದಿರದಿರಿಸಿ ರಕ್ಷಿಸು 1 ಗರುಡಂಗೆ ವರಮೋಕ್ಷ ನೀಡ್ದಿ ನಿನ್ನ ಸ್ಮರಿಪರಿಗೆ ದರುಶನಕೊಡುತಲಿ ನಡೆದಿ ತರುಣಿಯ ಎಂಜಲ ಸವಿದಿ ವನ ಚರನಿಗೆ ವಶನಾಗಿ ಅಭಯ ಪಾಲಿಸಿದಿ ಭರದಿ ದಕ್ಷಿಣಶರಧಿ ಹೂಳಿಸಿ ಮೆರೆವ ಲಂಕಾಪುರವ ಮುತ್ತಿದಿ ದುರುಳರ್ಹಾವಳಿ ದೂರಮಾಡಿ ಧರೆಯ ಭಾರವ ನಿಳುಹಿದಯ್ಯ 2 ನುಡಿಸಿದರೆನ್ನಿಂದಲಾವ ವಚನ ನುಡಿಸಿದ ಬಳಿಕದನು ನಡೆಸಿಕೊಡಭವ ನುಡಿಯಂತೆ ನಡೆಯೆನಗೆ ಸ್ಥಿರವ ಕೊಟ್ಟೆ ನ್ನೊಡಲೊಳಗದಂತೆಯಿರು ಅನುದಿನವು ಪೊಡವಿ ಮೂರನು ಒಡಲೊಳಿಟ್ಟಿಡೆ ಬಿಡದೆ ಆಳುವ ಒಡೆಯ ಶ್ರೀರಾಮ ದೃಢದಿ ನಿಮ್ಮಯ ಅಡಿಯ ನಂಬಿದೆ ಬಿಡಿಸು ಎನ್ನಯ ಮಂದಜ್ಞಾನವ 3
--------------
ರಾಮದಾಸರು
ಹೇಳುವೆನು ಕೇಳಿ ಕರ್ಣಾಮೃತವ ಆಲೋಚನೆ ಸಲ್ಲ ತಿಳಿದ ಜ್ಞಾನರಿಗೆ ಪ ಲಕ್ಷಣ ಛಂದಸ್ಸು ಅಡಿಪ್ರಾಸ ಆದಿ ಅಂತಿ ಲಕ್ಷಕ್ಕೊಂದಾದರು ಮೊದಲೇ ಇಲ್ಲಾ ಅಕ್ಷಿ ಇಲ್ಲದವನು ಕೋಲು ಸಂಪಾದಿಸುವ ಅಕ್ಷಿ ಉಂಟಾದವಗೆ ಅದರಿಂದ ಫಲವೇನು 1 ಜ್ಞಾನ ಕರ್ಮರ ಲಂಬನ ಮಾಡಿ ತಿಳಿದಂಥ ಮಾನವನು ನಾನಲ್ಲ ಎಂದೆಂದಿಗೂ ಜ್ಞಾನಿಗಳ ಮನೆಯ ತೊಂಡರ ಪಾದರಕ್ಷೆಯಾ ಪಾಣಿಯಲ್ಲಿ ಪಿಡಿದವನ ನಖಧೂಳಿ ದಯದಿಂದ 2 ರಾಗತಾಳ ಭೇದ ಜತೆ ಜಾಣತನದಿಂದ ವಾಗರ ನಿಮಿತ್ಯ ಪೇಳಲಿಲ್ಲಾ ಹ್ಯಾಗಾದರೇನು ನಾರಾಯಣಚ್ಯುತನೆಂದು ಕೂಗಿ ಕಾಲವ ಕಳದೆ ಜನುಮ ಸಾಧನಕೆ 3 ಬೆಲ್ಲ ಕರದಲಿ ಪಿಡಿದು ಆವನಾದರೇನು ಎಲ್ಲಿ ತಂದರೆ ಅದು ಸೀ ಎಲ್ಲವೇ ಬಲ್ಲನವ ನರಿಯನಿವನೆಂದು ಆಡದಿರಿ ಪುಲ್ಲನಾಭನ ಸ್ಮರಣೆ ಒಂದು ಮುಕ್ತಾರ್ಥ 4 ಹರಿದೈವವೆಂದು ತಾ ಉತ್ತರೋತ್ತರ ತಿಳಿದು ಗುರುಮಧ್ವಮತದಲ್ಲಿ ಲೋಲಾಡಲು ಸಿರಿಯ ಅರಸ ವಿಜಯವಿಠ್ಠಲ ಬಂದು ವೊಲಿವನು ಗುರು ಪುರಂದರನ ದಯೆ ಎನ್ನ ಮೇಲಿರಲಾಗಿ5
--------------
ವಿಜಯದಾಸ
ಹೌರನೆ ಮತಿಯಿತ್ತು ಸಲಬೇಕೆನ್ನ ಪ ಗೌರವ ಗಾತುರ ತೌರ ಮನೆಯ ಹರ ಕೌರವಾಂತಕನೊಳು ಶೌರಿಯ ತೋರಿಸೋ ಅ.ಪ. ಮೃಗಲಾಂಛನ ಸನ್ಮೌಳಿ ಶಿವ ಮಹಾದೇವ ತ್ರಿಗುಣಾತುವ ಗಾತುರ ಭಕ್ತ ಸಂಜೀವ ನಿಗಮತುರಗ ಪಾವ ವನಮಾಲ ಪಾವಾ ಮೃಗಪಾಣಿ ಮೃತ್ಯುಂಜಯ ಸುಪ್ರಭಾವ ನಗೆಪಗೆ ಮಗನನು ಮೃಗನೆವನದಿ ಕಾ ಅಗಣಿತ ಗುಣಮಣಿ ವಾಲಗ ನಿನ್ನವರೊಳು ಮಗಳೆ ಮಗುಳೆ ಕೊಡು ಗಗನೇಶ ಜನಕ 1 ಅವನಿಯೋಳ್ ಕೈಲಾಸ ವಾಸ ಅಪ್ರತಿ ನವ ವಿಧ ಭಕುತಿ ಕೊಡು ಶಂಭು ಪಶುಪತಿ ದಿವಸ ದಿವಸ ವೈಶ್ರವಣ ಬಾಂಧವ ದೇ ಹವೆ ನಿನಗೊಪ್ಪಿತು ಅವನಿಯೊಳುತ್ತಮ ಶ್ರವಣದೊಳಗೆ ರಾಘವನ ಕಥಾಮೃತ ಸವಿದೋರುವುದೋ ಭುವನ ಪವಿತ್ರ 2 ಅಜಭೃಕುಟ ಸಂಭೂತ ಭೂತಗಣೇಶ ಕುಂಡಲ ವಿಭೂತಿ ಭೂಪ ನಿಜ ಮಹಾ ಸ್ಮಶಾನವಾಸ ಉಗ್ರೇಶ ತ್ರಿಜಗಪಾವನ ಗಂಗಾಧರ ವಿಶ್ವೇಶ ಸುಜನರ ಹೃದಯ ಪಂಕಜದೊಳ್ ಮಿನುಗುವ ಗಜ ಪಾಲಕ ರಂಗ ವಿಜಯವಿಠ್ಠಲನಂಘ್ರಿ ಭಜನೆಯ ಕೊಡು ಭೂಭುಜ ದೇವೋತ್ತಮ ಗಜ ಅಜಿನಾಂಬರ 3
--------------
ವಿಜಯದಾಸ
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
(ಇ) ವಾತ್ಸಲ್ಯಭಾವÀ33ಅಮ್ಮ ಕೇಳೆ ಯಶೋದಮ್ಮ ಗೋಪಿಯರೆನ್ನಸುಮ್ಮನೆ ದೂರುತಿದ್ದಾರೆ ಬುದ್ಧಿ ಹೇಳೆ ಇವರಿಗೆ ಪ.ನಾನೊಲ್ಲೆನೆಂದರು ಗೋಪ ಮಾನಿನಿರೆತ್ತಿಕೊಂಬರುಆನೆಯಾಡಬಾರೊ ರಂಗ ಎಂದೆನ್ನನೊಯಿದುತಾನಾಗಿ ಗೋರಸವನು ಕೊಟ್ಟರುಣ್ಣದೆ ಚೆಲ್ಲುವೆನೀನಣ್ಣನ ಕರೆದು ಕೇಳೆ ಗೋವಳೇರ ಠಕ್ಕ ಡೌಲು 1ಸಾಸಿರ ಬಿಸಳಿಗೆ ಬೆಣ್ಣೆ ಕೂಸುಗಳು ಮೆಲ್ಲೋದುಂಟೆಹೇಸಿಕೆಬರುತಿದೆಅವರಮೊಸರು ಕಂಡುಮೀಸಲ ಮುರಿದರೆಅವರಜೆಟ್ಟಿಗ ನನ್ನ ಕಚ್ಚನೆಹಾಸ್ಯದೊಳು ಮಾತನಾಡಿ ಮೋಸ ಮಾಡುತಿಹರಮ್ಮ 2ತಮ್ಮ ಮಕ್ಕಳುಪಟಳ ನಮ್ಮ ಮೇಲಿಕ್ಕುತಿಹರುತಮ್ಮ ನಲ್ಲರ ಕಾಟವು ನಮ್ಮದೆಂಬರುನಿಮ್ಮ ಮಕ್ಕಳ ಗುಣವ ನೀ ಬಲ್ಲೆ ನಂದನರಾಣಿಗುಮ್ಮನಂಜಿಕೆಗೆ ಮನೆಯೊಳಿಹೆನೆ ಪ್ರಸನ್ವೆಂಕಟ 3
--------------
ಪ್ರಸನ್ನವೆಂಕಟದಾಸರು
139-1ಶ್ರೀರಮಣ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಶ್ರೀನಿವಾಸಾಚಾರ್ಯ ಪಂಡಿತೋತ್ತಮರುಅನಿಮಿಶಾಂಶರು ಹೌದು ಭುವಿಯಲ್ಲಿ ಹುಟ್ಟಿಮಾನುಷಾನ್ನವನುಂಡು ಕರ್ಮವಾತಾವರಣಸನ್ನಿವೇಶದ ಬಲದಿ ಗರ್ವಕೊಳಗಾದರು 1ಆದಿತೇಯರು ಭೂಮಿಯಲ್ಲಿ ಜನ್ಮವ ತಾಳೆಜಾತಾಪರೋಕ್ಷಿಗಳು ಶಕ್ತ್ಯಾತ್ಮನಾವ್ಯಕ್ತ್ಯಾತ್ಮನಾಅಪರೋಕ್ಷಪ್ರಕಾಶವುಒದಗಿ ಗುರುಗಳು ಅನುಗ್ರಹವು ಮಾಡಿದರೆ 2ದೇವತಾ ಕಕ್ಷದಲಿ ದೊಡ್ಡ ಮಟ್ಟದವರುವಿಶ್ವಾಮಿತ್ರರಿಗೆ ಉತ್ತಮರು ನಾರದಗೆಆವರರೆನಿಸುವ ಭೃಗುಋಷಿಯೇ ವಿಜಯಾರ್ಯರುತಾವೆ ಬಂದರು ಶ್ರೀನಿವಾಸರ ಬಳಿಗೆ 3ಪೂರ್ವದಲೆ ಕೇಳಿಹರು ಈ ವಿಜಯದಾಸರುದೇವಾಂಶಅಪರೋಕ್ಷಜ್ಞಾನಿಗಳು ಎಂದುಈ ವಿಧದಿಪೇಳುವುದುಪುಸಿಎಂದು ನೆನೆದರುಗರ್ವಮೌಢ್ಯದಿ ಶ್ರೀನಿವಾಸ ಆಚಾರ್ಯ 4ಕನ್ನಡ ನುಡಿ ಹಾಡಿ ಕುಣಿಕುಣಿವ ಈ ದಾಸಜ್ಞಾನಿಯೆ ? ಅರಿತವನೇ ಬ್ರಹ್ಮವಿದ್ಯೆ ಎಂದುಹೀನಮಾತ್ಸರ್ಯದಿ ಮನಸೋತು ಅವಹೇ -ಳನ ಮಾಡಿದರು ವಿಜಯಾರ್ಯರಲ್ಲಿ 5ತಾಳುವ ತನ್ನಲ್ಲಿ ಮಾಡುವ ಅಪರಾಧತಾಳಹರಿ ತನ್ನ ಭಕ್ತರಲಿ ಮಾಡುವುದುಮಾಲೋಲ ನಿಯಮನದಿ ಸ್ವೋತ್ತಮಾಪರಾಧಫಲವು ಕಂಡಿತು ಶ್ರೀನಿವಾಸರಲಿ ಬೇಗ 6ರಾಜಯಕ್ಷ್ಮವೋಗುಲ್ಮಮತ್ತೇನು ರೋಗವೋರಾಜವೈದ್ಯರು ಸಹ ನಿರ್ಣಯಿಸಲಶಕ್ಯಭೋಜನ ಅರುಚಿ ಉದರಶೂಲಿತನು ಕುಗ್ಗಿಲಾಜವೂ ಸಹ ಜೀರ್ಣ ಆಗದ ಮಾಂದ್ಯ 7ಇಂದಿರೇಶಗೆ ಪ್ರಿಯ ಮಹಾತ್ಮ ಸ್ವೋತ್ತಮರಲ್ಲಿಗೈದ ಅಪರಾಧ ಫಲವೆಂದರಿಯದೆವೈದ್ಯಕ್ಕೆ ಹಣ ವೆಚ್ಚ ಮಾಡಿ ಕ್ಷೇತ್ರಗಳಿಗೆಪೋದರು ದೈವಾನುಗ್ರಹ ಪಡೆಯಲಿಕ್ಕೆ 8ವಾದೀಂದ್ರಸನ್ನುತರಾಘವೇಂದ್ರಾರ್ಯರವೃಂದಾವನದಲ್ಲಿ ಸೇವೆ ಮಾಡಿದರುಮುಂದು ಯಾತ್ರೆ ಗೈದು ಘಟಿಕಾದ್ರಿ ಹನುಮಗೆದುಗ್ಧಾಭಿಷೇಕ ಹರಿವಾಯುಸ್ತುತಿಯಿಂದ 9ಮಂತ್ರಾಲಯ ವೆಂಕಟಗಿರಿ ಘಟಿಕಾದ್ರಿಇಂಥಾ ಸುಪುಣ್ಯ ಕ್ಷೇತ್ರಗಳಿಗೆ ಪೋಗಿಮಂತ್ರಾಲಯ ಮತ್ತೂ ಬಂದು ಶ್ರೀ ರಾಘ-ವೇಂದ್ರ ತೀರ್ಥರಪಾದಭಜಿಸಿ ನಮಿಸಿದರು10ಹರಿವಾಯುಸ್ತುತಿ ಪುರಶ್ಚರಣ ಆದರದಿಚರಿಸೆ ಭಾರತೀಶನು ಮತ್ತುಗುರುರಾಘವೇಂದ್ರರುಅರುಪಿದರು ಸ್ವಪ್ನದಿ ವಿಜಯವಿಠಲ ದಾÀಸಆರ್ಯರಲಿ ಶರಣಾಗುಕ್ಷಮೆಬೇಡು ಎಂದು11ಶ್ರೀನಿವಾಸ ಆಚಾರ್ಯರು ಎಚ್ಚರಿತುತಾನು ವಿಜಯಾರ್ಯರಲಿ ಗೈದ ಅಪರಾಧನೆನೆದು ಬಹುವ್ಯಾಕುಲಪಶ್ಚಾತ್ತಪ್ತರು ಆಗಿಕ್ಷಣದಿ ಹೊರಟರು ವಿಜಯದಾಸರ ಬಳಿಗೆ 12ದೀನ ಕರುಣಾಕರರುವಿಜಯದಾಸಾರ್ಯರುಘನದಯದಿ ಶ್ರೀನಿವಾಸಾಚಾರ್ಯರ ಕ್ಷಮಿಸಿತನ್ನ ಶಿಷ್ಯ ಗೋಪಾಲದಾಸಾರ್ಯರುಅನುಗ್ರಹ ಮಾಡುವ ಗುರುಗಳು ಎಂದರು 13ಪರಮಗುರುವರ್ಯ ಶ್ರೀ ವಿಜಯದಾಸಾರ್ಯರನಿವ್ರ್ಯಾಜ ಪ್ರೀತಿ ಅಪ್ಪಣೆಯ ತಾ ಕೊಂಡುಗುರುಗಳು ಗೋಪಾಲದಾಸಾರ್ಯರಲಿ ಪೋಗಿಶರಣಾಗಿ ಶ್ರೀನಿವಾಸರು ನಮಿಸಿದರು 14ತನ್ನಲ್ಲಿ ಗುರುಗಳು ಕಳುಹಿಸಿದವರೆಂದುದೀನ ಆಚಾರ್ಯರು ನಿಜ ಶರಣರೆಂದುಚೆನ್ನಾಗಿ ಆತನ ಪರಿಸ್ಥಿತಿ ಅರಿತುಅನುಗ್ರಹಿಸಿದರು ಗೋಪಾಲವಿಠಲರು 15ಅನ್ನ ಫಲಹಾರಗಳ ಕೊಳ್ಳದ ವ್ಯಾಧಿಯಲಿಸಣ್ಣ ಬಡವಾದಂಥ ಗಾತ್ರದಿಂದಸನ್ನಮಿಸಿದ ಶ್ರೀನಿವಾಸಾಚಾರ್ಯನ್ನಮನೆಯಲ್ಲಿ ಉಪಚರಿಸಿ ಆದರಿಸಿದರು 16ಗುರುಗ ಶಿರಿವಿಜಯವಿಠಲ ತನ್ನೊಳಿಪ್ಪಶಿರಿ ಗೋಪಾಲ ವಿಠsÀಲ ಶ್ರೀನಿವಾಸಸರಸಿಜಭವಾಂಡ ದೊರೆ ಶ್ರೀ ಜನಗ್ನಾಥನ್ನಸ್ಮರಿಸಿ ಅರ್ಚಿಸಿ ನೈವೇದ್ಯ ಮಾಡಿದರು 17ನಿವೇದಿತಾನ್ನ ಜೋಳದ ರೊಟ್ಟಿ ಕೊಟ್ಟುದ್ರವ ಮಾತ್ರ ಕೊಳ್ಳುವ ರೋಗಿ ಆಚಾರ್ಯಗೆದೇವರ ಅನಿಲನಪರಮಗುರುಗಳ ನೆನೆದುಸವಿದು ಉಣ್ಣುವುದೆಂದು ಹಿತದಿ ಪೇಳಿದರು 18ಶ್ರೀನಿವಾಸಾಚಾರ್ಯ ಉಣ್ಣಲು ರೋಗವುದಿನದಿನದಿ ಕ್ರಮದಿಂದ ನಿವಾರಣ ಆಯ್ತೂಧ್ಯಾನ ಪೂಜಾಅನುಸಂಧಾನಕ್ರಮಗಳುಚೆನ್ನಾಗಿ ಆಚಾಯರಾಕರ್ಷಿಸಿದವು 19ಶ್ರೀನಿವಾಸಾಚಾರ್ಯರ ರೋಗಮೋಚನಕೆಧ್ಯಾನಿಸಿ ಜಪಿಸಿ ಶ್ರೀ ಧನ್ವಂತರಿ ಮಂತ್ರಬಿನ್ನಪವ ಮಾಡಿದರು ಕೀರ್ತನಾ ರೂಪದಿದೀನದಯಾಳು ಗೋಪಾಲದಾಸಾರ್ಯ 20ಆಹ್ನಿಕ ಜಪಗುರುಪರಮಗುರು ನಮನವಿಘ್ನವಿಲ್ಲದೆ ಆಚಾರ್ಯರು ಚರಿಸಿದರುಘನರೋಗ ಹೋಯಿತು ತ್ರಾನ ಇನ್ನೂ ಬೇಕುಶ್ರೀನಿಧಿ ನೋಡಿದನು ಕೃಪಾದೃಷ್ಟಿಯಿಂದ 21ಶ್ರೀ ನಿಧಿಃ ಸರ್ವಭೂತಾನಾಂ ಭಯಕೃದ್ಭಯನಾ -ಶನನು ವಿಜಯದಾಸಾರ್ಯ ರೂಪದಲಿತಾನೆ ಸ್ವಪ್ನದಿ ಪೇಳ್ದ ಗೋಪಾಲದಾಸರಿಗೆದಾನ ಕೊಡು ಆಯುಷ್ಯ ಚತ್ವಾರಿವರ್ಷ 22ಶಿರಿವಿಜಯವಿಠ್ಠಲ ವಾಯುಗುರುಇಚ್ಛಾನು -ಸಾರದಿ ಶ್ರೀನಿವಾಸಾಚಾರ್ಯನಲಿ ವಾತ್ಸಲ್ಯಕಾರುಣ್ಯ ತೋರಿಸಿ ತಮಗಿದ್ದ ಆಯುಸ್ಸಲಿಎರೆದರು ಧಾರೆಯ ನಲವತ್ತು ವರ್ಷ 23ಏನೆಂಬೆ ಈ ನಮ್ಮ ಗುರುಗಳ ಔದಾರ್ಯದೀನಕರುಣಾಂಬುಧಿ ಗೋಪಾಲದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ ಆಯುಷ್ಯವ ಕೊಡುವರೆ ಅನ್ಯರಿಗೆ 24ರೋಗಕಳೆದು ಆಯುರ್ದಾನವಕೊಂಡಈಬ್ಯಾಗವಟ್ಟ ಶ್ರೀನಿವಾಸಾಚಾರ್ಯಜಗನ್ನಾಥವಿಠ್ಠಲ ದಾಸರಾಯರು ಎಂದುಜಗತ್ತಲ್ಲಿ ಖ್ಯಾತರಾಗುವ ಬಗೆ ಮಾಡಿದರು 25ಗುರುಹಿರಿಯರಲಿ ಮಾಳ್ಪ ಉದಾಸೀನ ಎಷ್ಟುಭಾರಿತರ ಆಪತ್ತು ಕೊಡುವುದು ಎಂದುಗುರುಅನುಗ್ರಹದಿಂದ ಸೌಭಾಗ್ಯಲಾಭವುಅಪಮೃತ್ಯು ಪರಿಹಾರ ಎಂದು ತಿಳಿಯುತ್ತೆ 26ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲ ದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 27-ದ್ವಿತೀಯಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-5ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ವಿಠ್ಠಲನ ಮಂದಿರದಿ ತಪ್ಪದೇ ಪ್ರತಿದಿನಪಠಿಸಿ ಅರ್ಪಿಸುತ್ತಿದ್ದವಿಶ್ವವಿಷ್ಣುವಷಟ್ಕಾರ ಮೊದಲಾದ ಸಹಸ್ರನಾಮಗಳದಿಟ ಜ್ಞಾನ ಭಕ್ತಿಯಿಂ ಮಾರ್ಗದಿ ಸ್ಮರಿಸಿದರು 1ತನ್ನ ಹೊರ ಒಳಗೆ ಶ್ರೀಹರಿಯ ತಿಳಿಯುತ್ತಕಾಣುವುದು ಎಲ್ಲವೂ ಅನಘಹರಿ ಆವಾಸ್ಯತನಗೆ ಯದೃಚ್ಛದಿ ಲಭಿಸುವುವು ಹರಿಕೊಡುವುವುಎನ್ನುತ ಅನಪೇಕ್ಷಿ ನಿರ್ಭಯದಿ ನಡೆದರು 2ಮಾರ್ಗಸ್ಥ ಅಕ್ಷೋಭ್ಯ ಜಯಮುನಿಗಳಲಿಪೋಗಿ ಬಾಗಿ ಶಿರಸ್ಸಾಷ್ಠಾಂಗ ನಮಸÀ್ಕರಿಸಿ ಮುಂದುಪೋಗಿ ಕೃಷ್ಣಾ ತೀರ ಹನುಮನ್ನ ವಂದಿಸಿಚೀಕಲಪರಿವಿಗೆ ನಮಿಸಿ ಕರಮುಗಿದರು 3ಗುರುಗುಣಸ್ತವನಾದಿ ಗ್ರಂಥಗಳ ರಚಿಸಿರುವಸೂರಿವಾದೀಂದ್ರರ ನಮಿಸಿ ಅಪ್ಪಣೆಯಿಂಶ್ರೀರಾಘವೇಂದ್ರ ತೀರ್ಥರ ನಮಿಸಿ ಶರಣಾಗಿಸ್ತೋತ್ರ ಅರ್ಪಿಸಿದರು ಕವಿತಾರೂಪದಲಿ 4ಹರಿಶಿರಿ ಹನುಮ ಶಿವಗುರು ಅನುಗ್ರಹಕೊಂಡುದಾರಿಯಲ್ಲಿರುವಂಥ ಕ್ಷೇತ್ರ ಮೂರ್ತಿಗಳದರುಶನ ಮಾಡಿ ಗೋಪಾಲ ದಾಸಾರ್ಯರುಇರುವ ಸ್ಥಳ ಸೇರಿದರು ಜಗನ್ನಾಥದಾಸರು 5ಗುರುಗಳ ನೋಡಿ ಆನಂದ ಬಾಷ್ಪವ ಸುರಿಸಿಚರಣಪದ್ಮಗಳಲ್ಲಿ ನಮಿಸಿ ಶರಣಾಗಿಘೋರವ್ಯಾಧಿಹರಿಸಿ ಅಪಮೃತ್ಯು ತರಿದಂಥಕಾರುಣ್ಯ ನಿಧಿ ಉದ್ಧಾರಕರು ಎಂದರು 6ರಾಜೀವಾಲಯಪತಿವಿಜಯಗೋಪಾಲನುಭಜತರ ರಕ್ಷಿಸುವ ಕರುಣಾಸಮುದ್ರಈ ಜಗನ್ನಾಥನೇ ನಿನಗೆ ಒಲಿದಿಹನುಭುಜಗಾದ್ರಿವಾಸ ಫಂಡರಿ ವಿಠ್ಠಲ 7ನಿಜಭಕ್ತಾಗ್ರಣಿ ಗೋಪಾಲ ದಾಸಾರ್ಯರುನಿಜಭಾವದಲಿ ಈ ರೀತಿಯಲಿ ಹೇಳೆಐಜೀ ಮಹಾತ್ಮರು ಸೂಚಿಸಿದರು ಹರಿಯಭೋಜನ ಜಗನ್ನಾಥದಾಸಗೆ ಮಾಡಿಸಿದ್ದು 8ಜಗನ್ನಾಥದಾಸರು ನಡೆದ ವೃತ್ತಾಂತವಮುಗಿದು ಕರಗದ್ಗದ ಕಂಠದಲಿ ಪೇಳೆಚಕಿತರಾದರು ಅಲ್ಲಿ ನೆರೆದಿದ್ದ ಸಜ್ಜನರುಉದ್ಘೊಷ ಜಯ ಜಯ ಶಬ್ದ ಮಾಡಿದರು 9ಉತ್ತನೂರಿಗೆವೇಣಿಸೋಮಪುರದಿಂ ಪೋಗಿಮತ್ತೂವೇಣಿಸೋಮಪುರವನ್ನು ಯೈದಿಸತ್ತತ್ವ ಬ್ರಹ್ಮ ಜಿಜ್ಞಾಸವೂ ಭಾಗ -ವತ ಧರ್ಮ ಆಚರಿಸಿದರು ಮುದದಿಂದ 10ಗೋಪಾಲಕೃಷ್ಣ ಪ್ರಿಯ ಐಜೀಮಹಂತರುಗೋಪಾಲದಾಸಾರ್ಯ ªರದ ಗುರುತಂಗೋಪಾಲ ದಾಸಾರ್ಯರುಗಳ ಸಮೇತದಿಭೂಪಾಲ ಪ್ರಮುಖರು ಸಾಧುಜನಗುಂಪು 11ಶಿರಿವಾಸುದೇವಪ್ರಿಯವಾಸತತ್ವಜÕರಗುರುಗಳು ಗೋಪಾಲದಾಸರ ಅನುಗ್ರಹದಿವರದ ಗುರುತಂದೆ ಗೋಪಾಲರು ಮತ್ತೆಲ್ಲರಿಗೂಕರಮುಗಿದು ಹೊರಟರು ಅಪ್ಪಣೆಕೊಂಡು 12ಗದ್ವಾಲ ಮಾರ್ಗದಿ ಮಂತ್ರಾಲಯ ಪೋಗಿಮಧ್ವಮತ ದುಗ್ಧಾಬ್ಧಿ ಚಂದ್ರ ಶ್ರೀ ರಾಘವೇಂದ್ರ ವಾದೀಂದ್ರರ ನಮಿಸಿ ಅಲ್ಲಿಂದಯೈದಿಹರು ಪರಮಗುರುಗಳು ಇದ್ದ ಸ್ಥಳವ 13ಪರಮಗುರುಗಳು ವಿಜಯವಿಠ್ಠಲ ದಾಸಾರ್ಯರಚರಣಾರವಿಂದದಿ ಶರಣಾಗಿಅವರಕರದಿಂದ ನರಸಿಂಹ ವಿಜಯವಿಠ್ಠಲನಸುಪ್ರಸಾದವ ಕೊಂಡು ಮಾನವಿಗೆ ಹೋದರು 14ಮನುತೀರ್ಥ ತಟದಲಿ ಮನೆಯಲ್ಲಿ ವಾಸಿಸುತಹನುಮಂತಸ್ಥ ನರಹರಿ ಜಗನ್ನಾಥನ್ನಹನುಮನ್ನ ಪೂಜಿಸುತ ಗುರುಗಳ ಸ್ಮರಿಸುತ್ತಜ್ಞಾನಾರ್ಥಿ ವಿದ್ಯಾರ್ಥಿಗಳಿಗೆ ಒದಗಿಹರು 15ಇಷ್ಟರಲ್ಲೇ ಜಗನ್ನಾಥದಾಸರ ಕೀರ್ತಿಅಷ್ಟದಿಕ್ಕಲ್ಲು ಪ್ರಖ್ಯಾತಿಯ ಹೊಂದಿಇಷ್ಟಾರ್ಥ ಸಿದ್ಧಿಗೆ ಬರುವರಾದರು ಜನರುಕೃಷ್ಣನ ಒಲಿಮೆ ಈ ದಾಸರಲಿ ಪೂರ್ಣ 16ಮಾಧ್ವ ಮೂಲಗ್ರಂಥ ಟೀಕಾಟಿಪ್ಪಣಿಗಳುಸಾಧು ಹರಿದಾಸರ ಕೀರ್ತನೆಗಳುವೇದವ್ಯಾಸೋದಿತ ಪುರಾಣ ಇತಿಹಾಸವಿದ್ಯಾರ್ಥಿಗಳಿಗೆಲ್ಲ ಪಾಠ ಪ್ರವಚನವು 17ಯೋಗಿವರ ಪ್ರಾಣೇಶವಿಠ್ಠಲ ದಾಸಾರ್ಯರುಭಾಗವತವರಶ್ರೀಶ ವಿಠ್ಠಲದಾಸಾರ್ಯನಿಗಮವೇದ್ಯನ ಭಕ್ತಜನರು ಬಹುಮಂದಿಯುಬಾಗಿ ದಾಸಾರ್ಯರಿಗೆ ಶಿಷ್ಯ ಜನರಾದರು 18ಪ್ರಾಣೇಶ ದಾಸರಿಗೆ ಶರಣಾದೆ ಎಂದೆಂದುಪ್ರಾಣದೇವನು ಇವರೊಳ್ ಪ್ರಸನ್ನನಾಗಿಹನುಪ್ರಾಣದೇವಾಂತಸ್ಥ ಶ್ರಿಹರಿ ಕೇಶವನಕಾಣುತ ಭಜಿಸುವ ಭಾಗವತರೆಂದು 19ಜಗನ್ನಾಥದಾಸರ ಶಿಷ್ಯ ಸಜ್ಜನರಿಗೆಭಾಗವತವರಶ್ರೀಶ ಶ್ರೀದವಿಠ್ಠಲಾದಿಭಗವದ್ದಾಸರಿಗೆ ನಮಿಪೆ ಶ್ರೀ ಹರಿವಾಯುಝಗಝಗಿಪ ಇವರುಗಳೊಳ್ ಸಂತತ ಎಂದು 20ನೋಡಬೇಕಾಗಿದ್ದ ಕ್ಷೇತ್ರಗಳಿಗೆ ಪೋಗಿನಾಡಿನಲಿಭಾಗವತಧರ್ಮವ ಬೆಳೆಸೆಬೇಡುವ ಯೋಗ್ಯರಿಗೆ ಉಪದೇಶ ಕೊಡೆ ಶಿಷ್ಯರೊಡಗೂಡಿ ಹೊರಟರು ಜಗನ್ನಾಥದಾಸರು 21ಕರ್ಜಗಿ ಕ್ಷೇತ್ರದಲ್ಲಿ ಇರುವ ವರದಾ ನದಿಯುಸಜ್ಜನ ಸಮೂಹವು ಬಹಳ ಅಲ್ಲುಂಟುಶ್ರೀ ಜಗನ್ನಾಥನ್ನ ಭಜಿಸುತ್ತ ದಾಸರುಕರ್ಜಗಿ ಜಮೀನ್ದಾರ ಮನೆಯಲ್ಲಿ ಕುಳಿತರು 22ಸಾಧ್ವಿ ಶಿರೋಮಣಿ ಆ ಗೃಹಸ್ಥನ ಪತ್ನಿಪಾದನಮಿಸಿ ಪತಿಗೆ ಬಿನ್ನಹ ಮಾಡಿದಳುಇಂದುಲೌಕಿಕ ವಿಷಯಲಾಂಪಟ್ಯ ನಿಲ್ಲಿಸಿವಂದಿಸಿ ದಾಸರಿಗೆ ಪೂಜೆ ನೋಡೆಂದು 23ಅಹರ ಆರಾಧಿಸುವ ಕ್ರಮದಿ ದಾಸಾರ್ಯರುಸಾಯಾಹ್ನ ಸಾಮವಾಪ್ರತಿಪಾದ್ಯ ನರಸಿಂಹನವಿಹಿತದಿ ಅರ್ಚಿಸಿ ಕೀರ್ತನೆಗಳರ್ಪಿಸಿಮಹಾಹರ್ವ ಭಜಿಸುವರು ಶಿಷ್ಯರ ಸಮೇತ 24ಅಂದು ಈ ಗೃಹಸ್ಥನು ಹೆಂಡತಿ ಕೋರಿಕೆಯಂತೆಬಂದು ಕುಳಿತನು ದಾಸಾರ್ಯರ ಮುಂದೆಅಂದೇ ಆ ವಿಪ್ರನ ಅನಿಷ್ಠ ಪ್ರಾರಬ್ಧವುಚಂದದಿ ಪೋಪುವದೆಂದರಿತರು ದಾಸಾರ್ಯ 25ಪೂಜಾ ಆರಂಭ ಆಗಲಿಕೆ ಇರುವಾಗ ಆದ್ವಿಜನ ನೋಡಿ ಪ್ರಾಣೇಶ ದಾಸಾರ್ಯಗರ್ಜಿಸಿದರು ಇನ್ನಾದರೂ ಒಳ್ಳೆಋಜುಮಾರ್ಗ ಹಿಡಿ ಹರಿಯ ಒಲಿಸಿಕೊಳ್ಳೆಂದು 26ವಾಗ್ವಜ್ರಧಾರೆಯು ಪರಿಣಮಿಸಿ ವಿಪ್ರನತೀವ್ರ ಆ ಕ್ಷಣದಲ್ಲೆ ಮನಕಲುಷಕಳೆದುಶ್ರೀವರನ ಪ್ರಿಯತರ ಜಗನ್ನಾಥದಾಸರಿಗೆಸುವಿನಯದಿ ನಮಿಸಿ ಉದ್ಧರಿಸಿ ಎಂದ 27ಪ್ರಾಣೇಶ ದಾಸರಿಗು ಜಗನ್ನಾಥದಾಸರಿಗುತನ್ನ ಕೃತಜÕತೆಯನ್ನು ಚೆನ್ನಾಗಿ ತಿಳಿಸಿಮನ ಶುದ್ಧಿ ಭಕ್ತಿಯಿಂದಲಿ ಪೂಜೆ ನೋಡಲುಹನುಮಂತ ದೇವರು ಕುಳಿತಿದ್ದು ಕಂಡ 28ಶ್ರದ್ಧೆ ಭಕ್ತಿಯಿಂದ ಗೃಹಸ್ಥನುದಾಸರಪಾದಕೆರಗಿ ತನ್ನನ್ನು ಹರಿದಾಸವೃಂದದಲಿ ಸೇರಿಸಬೇಕೆಂದು ಪ್ರಾರ್ಥಿಸಿಶ್ರೀದವಿಠ್ಠಲನಾಮ ಅಂಕಿತವಕೊಂಡ29ಜಗನ್ನಾಥದಾಸಾರ್ಯಪರಮದಯಮಾಡಿಆ ಗೃಹಸ್ಥಗೆ ಶ್ರೀದವಿಠ್ಠಲಾಂಕಿತವುಭಕುತ ಜನರಿಗೆ ಫಲಮಂತ್ರಾಕ್ಷತೆ ಕೊಟ್ಟುಶ್ರೀಕರನ ಸ್ಮರಿಸಿ ಸವಣೂರಿಗೆ ಹೊರಟರು 30ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 31- ಇತಿ ಷಷ್ಠ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು