ಒಟ್ಟು 697 ಕಡೆಗಳಲ್ಲಿ , 94 ದಾಸರು , 603 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅನುದಿನಭವಾಬ್ಧಿಯಲ್ಲಿ ಭವತರಂಗ ರಾಶಿಯಲ್ಲಿಮುಳುಗುತಿಹೆ ಕೈಯ ಪಿಡಿಯೊ ಜನಕ ಕೃಷ್ಣಯ್ಯ ಪ.ಶ್ರೀನಿವಾಸ ನಿನ್ನ ಭಕ್ತಿ ಮಾಡದ ಅಘವಂತನೆಂದುಹೀನ ಜನರ್ಪಾಳಕಿಟ್ಟರೇನ ಹೇಳಲೊನೀನು ಪಾಲಿಪ ರಾಜ್ಯದಲ್ಲಜ್ಞಾನಿ ದೇಶಿಗನೊಬ್ಬ ಕೆಡಲುಹಾನಿ ಹೆಚ್ಚಳ ನಿನ್ನದಲ್ಲೆ ದೀನದಯಾಳು 1ಚಿತ್ತವೇಗಕ್ಕವಧಿ ಇಲ್ಲ ಹೊತ್ತುಕೊಂಡು ಕಂಡ ಕಡೆಗೆಸುತ್ತುತಿದೆ ತನ್ನ ದಳವ ಕೂಡಿ ರಂಗಯ್ಯಕರ್ತನಿನ್ನ ಪಾದದೆಡೆಯೆ ಒತ್ತಿ ನೀನಿದನಾಳಬೇಕುಹೆತ್ತ ತಾಯಿ ನೀನೆ ಗಡಾನೆತ್ತಿಕೊಳ್ಳಯ್ಯ 2ಹಳುವಗಳು ದಾರಿಕಾಣೆ ಸೆಳವಿನೊಳಾಶ್ರಯ ಕಾಣೆನಳಿನನೇತ್ರ ನೀನೆ ಕಾಯೊ ಸುಲಭರೊಡೆಯನೆಲೆಯ ತೋರಾತಂಕಹಾರಿ ಒಲಿದು ವರಾಭಯವ ಬೀರಿಒಲಿಯೊ ಪ್ರಸನ್ವೆಂಕಟಾದ್ರಿನಿಲಯ ಉದಾರಿ 3
--------------
ಪ್ರಸನ್ನವೆಂಕಟದಾಸರು
ಇಕ್ಕಲಾರೆ ಕೈಯಂಜಲು - ಚಿಕ್ಕಮಕ್ಕಳು ಅಳುತಾವೆ ಹೋಗೋ ದಾಸಯ್ಯ ಪ.ಮಡಿಕೆ ತೊಳೆಯುತೇನೆ ಮನೆಯ ಸಾರಿಸುತ್ತೇನೆಒಡೆಯರಿಲ್ಲ ಕಾಣೋ ಹೋಗೋ ದಾಸಯ್ಯತೊಡೆಯ ಮೇಲಣ ಕೂಸು ಮೊಲೆ ಹಾಲನುಣಿಸುತಿದೆನಡೆನಡೆ ಕರಕರೆ ಮಾಡದೆ ದಾಸಯ್ಯ 1ಅಟ್ಟದ ಮೇಲಿನ ಅಕ್ಕಿ ತೆಗೆಯಲಾರೆಹೊಟ್ಟೆನೋವು ಕಾಣು ಹೋಗೋ ದಾಸಯ್ಯಮುಟ್ಟಾಗಿ ಕುಳಿತೇನೆ ಮನೆಯವರಿಲ್ಲವೊಕಟ್ಟುಗ್ರ ಮಾಡದೆ ಹೋಗೋ ದಾಸಯ್ಯ 2ವೀಸದ ಕಾಸಿದ ದವಸವ ತಂದಾರೆಕೂಸಿಗೆ ಸಾಲದು ಹೇಗೋ ದಾಸಯ್ಯಆಸೆ ಮಾಡಲು ದೋಷಕಾರ್ತಿ ಬೇಡ ನಾನುಶೇೀಷಾದ್ರಿ ಪುರಂದರವಿಠಲದಾಸಯ್ಯ 3
--------------
ಪುರಂದರದಾಸರು
ಇಲ್ಲೇ ವೈಕುಂಠ ಕಾಣಿರೊ -ಸಿರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಲ್ಲಭನಂಘ್ರಿಯ ನೆರೆನಂಬಿದವರಿಗೆ ಪ.ನುಡಿಯೆರಡಾಗದೆ ಕಡುಕೋಪ ಮಾಡದೆ |ಬಡತನ ಬಂದರು ಲೆಕ್ಕಿಸದೆ ||ಬೆಡಗು ಹೆಣ್ಣುಗಳ ಕಡೆಗಣ್ಣೊಳು ನೋಡದೆ |ಧೃಡಚಿತ್ತದಲಿ ಶ್ರೀ ಹರಿಯ ನಂಬಿದವರಿಗೆ 1ಪಕ್ಷಪಾತವಿಲ್ಲದನ್ನದಾನಂಗಳನು - |ಪೇಕ್ಷೆಯ ಮಾಡದೆ ಗುರುಹಿರಿಯರನು |ಮೋಕ್ಷವ ಬಯಸುತ ಅನ್ಯಾಯವಳಿಯುತ |ಲಕ್ಷ್ಮೀನಾರಾಯಣನ ಬಿಡದೆ ಧೇನಿಪರಿಗೆ 2ಪರಹಿತವನು ಮಾಡಿ ಕೆರೆಬಾವಿಗಳ |ಅರವಟಿಗೆಯ ಸಾಲಮರವ ಹಾಕಿ ||ಸಿರಿಪುರದರಸು ಶ್ರೀ ಪುರಂದರವಿಠಲನ |ಸ್ಥಿರಚಿತ್ತದಲಿ ಬಿಡದೆ ಸ್ಮರಿಸುತಲಿ ಹರಿಗೆ 3
--------------
ಪುರಂದರದಾಸರು
ಇಷ್ಟುಪಾಪವನು ಮಾಡಿದುದೆ ಸಾಕೊ |ಸೃಷ್ಟಿಗೀಶನೆ ಎನ್ನನುದ್ಧರಿಸಬೇಕೊ ಪಒಡಲಕಿಚ್ಚಿಗೆ ಪರರ ಕಡು ನೋಯಿಸಿದೆ ಕೃಷ್ಣ |ಕೊಡದೆ ಅನ್ಯರ ಋಣವನಪಹರಿಸಿದೆ |ಮಡದಿಯ ನುಡಿಕೇಳಿಒಡಹುಟ್ಟಿದವರೊಡನೆ |ಹಡೆದ ತಾಯಿಯ ಕೂಡಹಗೆಮಾಡಿದೆ1ಸ್ನಾನಸಂಧ್ಯಾನಜಪ ಮಾಡದಲೆ ಮೈಗೆಟ್ಟೆ |ಜ್ಞಾನಮಾರ್ಗವನಂತು ಮೊದಲೆ ಬಿಟ್ಟೆ ||ಏನ ಹೇಳಲಿ ಪರರ ಮಾನಿನಿಗೆ ಮನಸಿಟ್ಟೆ |ಶ್ವಾನ- ಸೂಕರನಂತೆ ಹೊರೆದೆ ಹೊಟ್ಟೆ2ವ್ರತ ನೇಮ ಉಪವಾಸ ಒಂದು ದಿನ ಮಾಡಲಿಲ್ಲ |ಅತಿಥಿಗಳಿಗನ್ನವನು ನೀಡಲಿಲ್ಲ |ಶೃತಿ ಶಾಸ್ತ್ರ ಪುರಾಣ ಕಥೆಗಳನು ಕೇಳಲಿಲ್ಲ |ವೃಥವಾಗಿ ಬಹುಕಾಲ ಕಳೆದನಲ್ಲ 3ಶುದ್ಧ ವೈಷ್ಣವ ಕುಲದಿ ಉದ್ಭವಿಸಿದೆನೋ ನಾನು |ಮಧ್ವ ಮತಸಿದ್ದಾಂತ ಪದ್ಧತಿಗಳ ||ಬುದ್ಧಿಪೂರ್ವಕ ತಿಳಿದು ಪದ್ಮನಾಭನು ದಿನದಿ |ಕದ್ದುಂಡು ಕಾಯವನು ವೃದ್ಧಿಮಾಡಿದನಯ್ಯ 4ತಂದೆ - ತಾಯ್ಗಳ ಸೇವೆ ಒಂದು ದಿನ ಮಾಡಲಿಲ್ಲ |ಮಂದಭಾಗ್ಯದಬವಣೆತಪ್ಪಲಿಲ್ಲ ||ಹಿಂದೆ ಮಾಡಿದ ದೋಷ ಬಂದುಳಿಯದರುಹಿದೆನು |ತಂದೆ ಪುರಂದರವಿಠಲ ಮುಂದೆನ್ನ ಕಾಯೊ 5
--------------
ಪುರಂದರದಾಸರು
ಈಗಲೆ ಭಜಿಸಲೆಜಿಹ್ವೆ - ನೀ - |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಾಗುಮಾಡದೆಶ್ರೀ ಹರಿಪಾದಾಂಬುಜವಪ.ದೇಹದೇಹ ಸಂಬಂಧಿಗಳು - ಅವರು |ಮೋಹಬದ್ಧರಾಗಿ ಕುಳಿತಿಹರು ||ಆಹಾರ ಗುಹ್ಯೇಂದ್ರಿಯವೆಂಬ ಎರಡರ |ಬೇಹಾರದಲಿ ನೀನು ಮುಳುಗಿಸದಲೆ ಮನ 1ಮರಣ ತೊಡಗಿ ನಾಲಗೆಯುಡುಗಿ - ನಿನ್ನ - |ತರುಣಿ ಪುತ್ರ ಮಿತ್ರರಳುತಿರಲು ||ಕೊರಳೊಳು ಗುರುಗುರು ಗುರುಗುಟ್ಟುವಾಗನರ - |ಹರಿಯ ನಾಮವೆನ್ನಗೊಡದೆಲೊ ಪ್ರಾಣಿ 2ಅಸಿಪತ್ರವನದೊಳು ಹೊಗಿಸಿ - ನಿನ್ನ - |ಬಸೆವಸೆಖಂಡ ಹೊರವೊಡಿಸಿ |ಬಿಸಿಬಿಸಿ ನೆತ್ತರು ಬಸಿದು ಹೋಗುವಾಗ |ಕುಸುಮನಾಭನ ನಾಮ ನೆನೆಯಗೊಡದು ಮನ 3ತಪ್ತಲೋಹದ ಮೋಲೊರಗಿಸಿ - ನಿನ್ನ - |ಕತ್ತರಿಸಿದ ಖಂಡ ಬೇಯಿಸುವರು ||ನೆತ್ತಿಯ ಕೊರೆದು ನಾಲಗೆ ಹಿರಿದೊಗೆವಾಗ |ಚಿತ್ತಜನಯ್ಯನ ನೆನೆಯಗೊಡದು ಮನ 4ಕುಂಭಿಪಾಕದೊಳಗೆ ಕುದಿಸಿ - ನಿನ್ನ |ಅಂಬುಮೊನೆಗಳಿಂದಿರಿಯಿಸಿ ||ಅಂಬರಕೊಗೆಯ ಕಾಗೆಯು ಕಚ್ಚಿ ಕಡ್ಞಿಗ |ಅಂಬುಜಾಕ್ಷನ ನಾಮ ನೆನೆಯಗೊಡದು ಮನ 5ದುರುಳ ಯವದೂತರಾರ್ಭಟಿಸಿ - ನಿನ್ನ - |ಎರಕದ ಕಾಯ್ದ ಕಂಬಕೆ ತಕ್ಕೆಗೆಯ್ಸಿ ||ಪರಿಪರಿ ಭವದೊಳು ಬಳಲಿಸುತಿರುವಾಗ |ಪುರುಷೋತ್ತಮನ ನಾಮ ನೆನೆಯಗೊಡದು ಮನ 6ದುರಿತಕೋಟಿಗಳ ಹರಿಸುವ - ನಿನ್ನ - |ನರಕಬಾಧೆಗಳ ತಪ್ಪಿಸುವ ||ಪರಮ ಪುರುಷ ನಮ್ಮ ಪುರಂದರವಿಠಲನ |ನಿರುತದಿ ನೆನೆದು ನೀ ಸುಖಿಯೊಗೋ ಮನವೆ 7
--------------
ಪುರಂದರದಾಸರು
ಈಸಬೇಕು ಇದ್ದು ಜಯಿಸಬೇಕುಹೇಸಿಕೆಸಂಸಾರದಲ್ಲಿ ಲೇಶ ಆಶೆ ಇಡದ ಹಾಗೆಪ.ತಾಮರಸ ಜಲದಂತೆ ಪ್ರೇಮವಿಟ್ಟು ಭವದೊಳುಸ್ವಾಮಿರಾಮನೆನುತ ಪಾಡಿ ಕಾಮಿತವ ಕೈಕೊಂಬರೆಲ್ಲ 1ಗೇರು ಹಣ್ಣಿನಲ್ಲಿ ಬೀಜ ಸೇರಿದಂತೆ ಸಂಸಾರದಿಮೀರಿ ಆಶೆ ಮಾಡದ ಹಾಗೆ ಧೀರ ಕೃಷ್ಣನ ನೆನೆಯುವರೆಲ್ಲ 2ಮಾಂಸದಾಶೆಗೆ ಮತ್ಸ್ಯವು ಸಿಲುಕಿ ಹಿಂಸೆ ಪಟ್ಟಪರಿಯೊಳುಮೋಸ ಹೋಗದೆ ಪುರಂದರವಿಠಲ ಜಗದೀಶನೆನುತ ಕೊಂಡಾಡುವರೆಲ್ಲ 3
--------------
ಪುರಂದರದಾಸರು
ಉಪಕಾರ ಮರೆವುದುಚಿತವಲ್ಲೋ |ತಪನಾಪ್ತಾಕ್ಷನೆ ನಮ್ಮ ಹಿರಿಯರಂದು ಮಾಡಿದಾ ಪಹರಿಯೆ ನಿನ್ನವರಿಗಮೃತವ ನೀಡುವೆನೆಂದು |ಭರದಿಂದ ಮಥÀನ ಮಾಡಿಸಿದೆ ಕಡಲ ||ಗರಳವುದ್ಭವಿಸಲು ದಿವಿಜರಂಜಲು ಆಗ |ತ್ವರದಿಂದದರಭಯ ಪರಿಹರಿಸಿದರಾರೊ 1ಆರಣ್ಯದೊಳು ನೀನಿರಲು ನಿನ್ನೊಲ್ಲಭಿಯ |ಆ ರಾವಣನೊಯ್ಯಲು ಕಪಿಗಳೆಲ್ಲ ||ಹಾರಲಾರೆವೊ ಸಮೂದ್ರಾ ಎನ್ನಲು ಬೇಗ |ಭಾರತೀ ರಮಣನೇ ಪೋಗಿ ವಾರ್ತೆಯ ತಂದ 2ಶರಧಿಕಟ್ಟುವುದಕ್ಕೆ ರೋಮ ರೋಮದಿ ಗುಡ್ಡ |ಧರಿಸಿ ತಂದನು ನೊಂದೆನೆನ್ನದಲೆ |ಹರಿಜಿತು ಶರದಿಂದ ಬಿಗಿಯೆ ಪ್ಲವಗರೆಲ್ಲಾ |ಧರಣಿ ಹೊಂದಲು ಸಂಜೀವನ ತಂದು ಉಳುಹಿದ 3ವಸುದೇವಜನಾಗಿ ನೀಂ ಜರಿಜನ ಭಯದಿಂದ |ವಸುಧೆಯೊಳಗೆ ನಿಲ್ಲಲಾರದಿದ್ದೆ ||ಶಶಿಕುಲದಲ್ಲಿವಾತಜನಿಸಿ ಅವನ ಕೊಂದು |ಕುಸುಮನಾಭನೆ ನಿನ್ನ ಭಯ ಬಿಡಿಸಿದನಲ್ಲೋ 4ಮಣಿಮಂತಜಗದೊಳು ನಿನ್ನ ಮಹಿಮೆಯನ್ನು |ಮುಣುಗಿಸಿದನು ತ್ವರಿತ ನಮ್ಮ ಗುರುವು ||ಘನಶಾಸ್ತ್ರಂಗಳ ರಚಿಸಿ ದುರ್ಮತವ ಸೋಲಿಸಿ |ಮನಸಿಜಪಿತನೇ ಪರನೆಂದು ಮೆರೆಸಿದ5ಇಷ್ಟು ಸೇವೆಯ ಮಾಡಿ ಮೆಚ್ಚಿಸಿದನು ಗೇಣು |ಬಟ್ಟೆಬೇಡಿದನೇನೋ ಆತ ನಿನ್ನ ||ಬಿಟ್ಟದ್ದಾನಾದಿತು ನಮ್ಮ ವಂಶಕರಿಗೆ |ಕೊಟ್ಟು ರಕ್ಷಿಸುವನು ಸ್ವಾಮಿ ಒಳ್ಳೆವನೆಂದು 6ಈಸು ಪರಿಯಿಂದ ನಮ್ಮ ಭಾರತೀಕಾಂತ |ತಾ ಸೋತಿರಲು ನಿನಗೆ ನಮ್ಮನೀಗ ||ಘಾಸಿಮಾಡದೆ ಸಲಹುವದುಚಿತವೋ ಶ್ರೀ ಪ್ರಾ- |ಣೇಶ ವಿಠ್ಠಲರೇಯ ಅಪಕೀರ್ತಿ ಕೊಳಬೇಡ7
--------------
ಪ್ರಾಣೇಶದಾಸರು
ಉರುಗುಣಗಣಶ್ರೇಣಿ ಕರುಣೀ ಪಎರಗಿ ಬಿನೈಪೆ ತಾಯೆ ಸುಖವೀಯೇ ಅ.ಪವನಜಸಂಭವಮುಖ್ಯ ಅನಿಮಿಶೇಷರಸ್ತೋಮಕನಕವೃಷ್ಟಿಯ ಸುರಿದು ಪೊರೆಯೇ ಧ್ವರಿಯೇ 1ಸೃಷ್ಟಿಕಾರಣಿ ನೀನೆ ಕಷ್ಟ ತರಿದು ಕೃಪಾ -ಇಷ್ಟು ವಿಧದಲಿ ಬೇಡಿಕೊಂಬೆ ಅಂಬೆ 2ಖ್ಯಾತಮಹಿಮಳೆ ಎನ್ನ ಮಾತುಲಾಲಿಸುದೇವಿಪೋತನಾನಲ್ಲೆ ನಿನಗೆನಾಥನಾಗಿ ಭಾಗ್ಯಪಡೆದ ಜಸಪಡೆದಾ 3ಬ್ರಹ್ಮದೇವರುಸುಮ್ಮನ ನೀಡುಇಮ್ಮನಮಾಡದೆ
--------------
ಗುರುಜಗನ್ನಾಥದಾಸರು
ಎನಗೂ ಆಣೆ- ನಿನಗೂ ಆಣೆ |ಎನಗೂ ನಿನಗೂ ಇಬ್ಬರಿಗೂ ಭಕ್ತರಾಣೆ ಪನಿನ್ನನು ಬಿಟ್ಟು ಅನ್ಯರ ಭಜಿಸಿದರೆನಗೆ ಆಣೆ-ರಂಗ |ಎನ್ನನು ನೀ ಕೈ ಬಿಟ್ಟು ಪೋದರೆ ನಿನಗೆ ಆಣೆ 1ತನು-ಮನ-ಧನದಲಿ ವಂಚಕನಾದರೆ ಎನಗೆ ಆಣೆ-ರಂಗ-|ಮನಸು ನಿನ್ನೊಳು ನಿಲಿಸದಿದ್ದರೆ ನಿನಗೆಆಣೆ 2ಕಾಕುಮನುಜರ ಸಂಗವ ಮಾಡಿದರೆನಗೆ ಆಣೆ-ರಂಗ-|ಲೌಕಿಕವನ್ನು ಬಿಡಿಸದಿದ್ದರೆ ನಿನಗೆ ಆಣೆ 3ಶಿಷ್ಟರ ಸಂಗವ ಮಾಡದಿದ್ದರೆ ಎನಗೆ ಆಣೆ-ರಂಗ-|ದುಷ್ಟರ ಸಂಗವ ಬಿಡಿಸದಿದ್ದರೆ ನಿನಗೆ ಆಣೆ 4ಹರಿನಿನ್ನಾಶ್ರಯ ಮಾಡದಿದ್ದರೆ ಎನಗೆ ಆಣೆ-ರಂಗ-|ಪುರಂದರವಿಠಲ ನೀನೊಲಿಯದಿದ್ದರೆ ನಿನಗೆ ಆಣೆ 5
--------------
ಪುರಂದರದಾಸರು
ಎಲೆ ದುರಿತವೆ ನೀ ಎನ್ನಏಳಿಲ ಮಾಡದೆ ಸಾಗಿನ್ನ ಕಡುಛÀಲ ಮಾಡಲಿ ಬನ್ನಬಡುವೆ ನಮ್ಮನಳಿನಾಕ್ಷನಾಣೆ ನೀ ಕೆಡುವೆ ಪ.ಪಾಪಿ ನಾನೆಂದು ಸೋಂಕ ಬಂದೆ ನಮ್ಮಶ್ರೀಪತಿ ಕರುಣಿಸಿದಿಂದೆ ಇನ್ನಾಪರೆ ನಿಲ್ಲು ಮುಂದೆ ನಿನ್ನಾಟೋಪವ ಮುರಿವೆನು ಇಂದೆ 1ಪರುಸ ಮುಟ್ಟಿದ ಲೋಹಚಿನ್ನಸಿರಿಅರಸನ ಭಟನೆ ಮಾನ್ಯ ಇನ್ನೊರೆದೆ ನೋಡೆಲೆ ಬಲುವೆಡ್ಡೆ ನಮ್ಮಸರಸವ ಬಿಡು ಕೈಕಡ್ಡೆ 2ಲೇಸು ಬೇಕಾದರಿನ್ನುಳಿಯೈಹರಿದಾಸರ ಸಂಗವ ಕಳೆಯೈ ಭೃತ್ಯಾವಾಸೆಯ ಬಿಡುವವನಲ್ಲ ಶ್ರೀಪ್ರಸನ್ವೆಂಕಟ ಚೆಲ್ವ 3
--------------
ಪ್ರಸನ್ನವೆಂಕಟದಾಸರು
ಏಕಾರತಿಯನೆತ್ತುವ ಬನ್ನಿ ನಮ್ಮಲೋಕನಾಥನಸಿರಿಪಾದವ ಬೆಳಗುವಪ.ತುಪ್ಪದೊಳ್ಬೆರಸಿದ ಮೂರು ಬತ್ತಿಯನಿಟ್ಟುಒಪ್ಪುವ ದೀಪಕ್ಕೆ ದೀಪಹಚ್ಚಿ ||ತಪ್ಪದೆ ಸಕಲ ಪಾಪಂಗಳ ಹರಿಸುವಅಪ್ಪ ವಿಠಲನ ಪದಾಬ್ಜವ ಬೆಳಗುವ 1ಹರುಷದಿ ಏಕಾರತಿ ಬೆಳಗಿದ ಫಲನರಕದಿಂದುದ್ಧಾರ ಮಾಡುವುದು ||ಪರಮ ಭಕುತಿಯಿಂದ ಬೆಳಗುವ ನರರನುಹರಿತನ್ನ ಹೃದಯದಿ ಧರಿಸುವನಯ್ಯ2ಅನ್ಯ ಚಿಂತೆ ಮಾಡದೆ ಅನ್ಯರ ಭಜಿಸದೆ ಮತ್ತನ್ಯ ದೇವರನು ಸ್ಮರಿಸದೆ ಅ ||ನನ್ಯವಾಗಿ ಶ್ರೀ ಪುರಂದರವಿಠಲನಪುಣ್ಯನಾಮಗಳ ಧ್ಯಾನಿಸುತ 3
--------------
ಪುರಂದರದಾಸರು
ಏಕೆನ್ನೊಳಿಂತು ಕೃಪೆಯಿಲ್ಲ ಹರಿಯೆಕಾಕಮಾಡದೆ ಕಾಯೊ ಸಂಗದೊಳು ಬಳಲಿದೆನು ಪಕಂದರ್ಪಬಾಧೆಯಿಂ ಮಾನಿನಿಯ ವಶನಾಗಿಮಂದಮತಿಯಿಂದ ನಾ ಮರುಳಾದೆನೋ ||ಸಂದಿತೈ ಯೌವನವು ಬುದ್ದಿ ಬಂದಿತು ಈಗಸಂದೇಹಪಡದೆ ನೀ ಕರುಣಿಸೈ ಎನ್ನ 1ಹೆಂಡತಿಯು ಕಡೆಗಣ್ಣಿನಿಂದ ನೋಡುವಳೀಗಹಿಂಡುಮಕ್ಕಳು ಎನ್ನ ತಿನ್ನುತಿಹರು ||ಮುಂಡಮೋಚಿದೆ ನಾನು ಇನ್ನಾರು ಗತಿಯೆನಗೆಪುಂಡರೀಕಾಕ್ಷನೀ ಪಾಲಿಸೈ ಎನ್ನ2ಅಟ್ಟಮೇಲೊಲೆಯುರಿಯುವಂತೆಹರಿಎನಗೀಗಕೆಟ್ಟ ಮೇಲರಿವು ತಾ ಬಂದಿತಯ್ಯ ||ನೆಟ್ಟನೇಪುರಂದರವಿಠಲನೆ ಕೈ ಬಿಡದೆದಿಟ್ಟಿಯಲಿ ನೋಡಿ ಪರಿಪಾಲಿಸೈ ಎನ್ನ 3
--------------
ಪುರಂದರದಾಸರು
ಏನ ಮಾಡಲಿ ಶ್ರೀಹರಿ- ಇಂಥ |ಮಾನವಜನ್ಮ ನಚ್ಚಿಸಬಹುದೆ? ಪಮಾತನಾಡದೆ ಮೌನದೊಳಿದ್ದರೆ-ಮೂಕ-|ನೀತನೆಂದು ಧಿಕ್ಕರಿಸುವರು ||ಚಾತುರ್ಯದಿಂದಲಿ ಮಾತುಗಳಾಡಲು |ಈತನು ಬಲು ಬಾಯ್ಬಡಿಕನೆಂಬುವರಯ್ಯ 1ಮಡಿ ನೇಮ ಜಪ-ತಪಂಗಳ ಮಾಡುತಿದ್ದರೆ |ಬಡಿವಾರದವನೆಂದಾಡುವರು ||ಮಡಿ ನೇಮ ಜಪ-ತಪಂಗಳ ಮಾಡದಿದ್ದರೆ |ನಡತೆ ಹೀನನೆಂದು ಬಲು ನಿಂದಿಸುವರಯ್ಯ 2ಗಟ್ಟಿಯಾಗಿ ಒಪ್ಪತ್ತಿನೂಟದೊಳಿದ್ದರೆ |ನಿಷ್ಟೆಯೇನು ಸುಟ್ಟಿತೆಂಬರು |ಗಟ್ಟಿಯಾಗಿ ಎರಡು ಮೂರು ಬಾರಿಯುಂಡರೆ |ಹೊಟ್ಟೆ ಬಾಕನೆಂದು ತೆಗಳಾಡುವರಯ್ಯ 3ಒಲಪಿನೊಳ್ಚೆನ್ನಿಗತನವನು ಮಾಡಲು |ಬಲು ಹೆಮ್ಮೆಗಾರನೆಂದಾಡುವರು ||ಸುಲಭತನದಿ ತಾ ನಿಗರ್ವಿಯಾಗಿದ್ದರೆ |ಕಲಿಯುಗದಲಿ ಮಂದಮತಿಯೆಂಬುವರಯ್ಯ 4ನರಜನ್ಮದೊಳಗಿನ್ನು ಮುಂದೆ ಪುಟ್ಟಿಸಬೇಡ |ಮೊರೆ ಹೊಕ್ಕೆ ಮತ್ಸ್ಯಾವತಾರ ನಿನ್ನ ||ಧರೆಯೊಳಗಿಹ ಪರಿಯಂತರ ಸಲಹೆನ್ನ |ಕರುಣವಾರಿಧಿ ಶ್ರೀಪುರಂದರವಿಠಲ5
--------------
ಪುರಂದರದಾಸರು
ಏನಿದ್ದೀತೇನಿದ್ದೀತೋ ಈ ನಾಮದಲ್ಲೇನಿದ್ದೀತೇನಿದ್ದೀತೋ ಪಏನಿದ್ದೀತೇನಿದ್ದೀತೇನ ಪೇಳಲಿ ನಾಜಾನಕೀಶನ ನಾಮ ಹಾನಿಮಾಡದೆ ಕಾಯ್ವುದೇ ಅ.ಪಜ್ಞಾನ ಕೊಡುವುದಲ್ಲೋ ಅಜ್ಞಾನ ಖೂನಕ್ಕುಳಿಸದಿರೆಲೋಸಾನುರಾಗದಿ ನಿಜಜ್ಞಾನ ಬೋಧಿಸಿ ಮಹಹೀನ ಬವಣೆಕಳೆದಾನಂದ ಕೊಡುವುದು 1ನರಕಕ್ಹೋಗುವನನ್ನು ಭರದಿಕರುಣಿಸಿ ಪದವನ್ನುಕರುಣದಿತ್ತು ಹರಿಶರಣರೊಳಾಡಿಸಿಪರಮಪರತರವೆನಿಪ ಸ್ಥಿರಸುಖ ಪಾಲಿಸಿತು2ಜರಮರಣಳಿಯುವುದು ಅದರೊಳ್ಕರುಣವೆ ತುಂಬಿಹ್ಯದುದುರಿತದಿ ಸಿಲ್ಕೆಲ್ಲಿ ಕರೆದರು ಅಲ್ಲಿಗೆತ್ವರಿತದೊದಗಿ ಬಂದು ನಿರುತದಿಂ ಸಲಹುವುದು 3ಭವಬಾಧೆ ಕಳೆಯುವುದುಜವನ ಭಯವೆ ತಪ್ಪಿಸುತಿಹ್ಯದುದಿವರಾತ್ರಿ ಎನ್ನದೆ ನಯದಿ ಭಜಿಪರೊಳುದಯದಿ ನಿಂತು ತಾನೆ ಜಯವ ನೀಡುವುದು 4ಅಂತ್ಯಪಾರಿಲ್ಲ ಕಾಣೋ ಶ್ರೀರಾಮನಾಮದ್ದೆಂಥ ಶಕ್ತಿಯೇನೋಚಿಂತಿಪ ಭಕ್ತರ ಅಂತರಂಗವನರಿತುಸಂತಸ ನೀಡಿ ಮುಕ್ತಿಸಂಪದ ಕೊಡುವುದು 5
--------------
ರಾಮದಾಸರು
ಏಳಯ್ಯ ಬೆಳಗಾಯಿತು ಪ.ಬೆಳಗಾಯಿತೇಳಯ್ಯ ಬಿಸಿಲು ಮೈದೋರುತಿದೆಸುಳಿದೋರೈ ನಿನ್ನ ಹಾರಯ್ಸಿ ನಿಂದಿಹರುತಳುವ ಮಾಡದಿರಯ್ಯ ಸ್ವಾಮಿ ತಿರುಮಲೆರಾಯಸೆಳೆಮಂಚದಿಂದಲೇಳು ಅಪವೇದವನು ತರಲೇಳು ಮಂದರವ ಹೊರಲೇಳುಛೇದಿಸುತ ಅಸುರರನು ಭೂಮಿಯ ತರಲೇಳುಕಾದಿ ಹಿರಣ್ಯನ ಕರುಳ ಕೊರಳೊಳಗೆ ಧರಿಸೇಳು ಕಾದುಬಲಿಬಾಗಿಲೊಳಗೆ ||ಭೇದದಲಿ ಭೂಮಿಯ ತ್ರಿಪಾದದಿಂದಳೆಯೇಳುಛೇಧಿಸುತ ಕ್ಷತ್ರಿಯರ ಕೊಡಲಿಯಿಂ ಕಡಿಯೇಳುಸಾಧಿಸುತ ಶರಧಿಯಲಿ ಸೇತುವೆಯ ಕಟ್ಟೇಳುನಂದಗೋಪನ ಉದರದಿ 1ಪುರಮೂರ ಗೆಲಬೇಕು ಅರಿವೆಯನು ಕಳೆದೇಳುದುರುಳರನು ಕೊಲಬೇಕು ತುರಗವಾಹನನಾಗುಪರಿಪರಿಯ ಕೆಲಸಗಳ ಮಾಡಲುದ್ಯೋಗಿಸದೆ ಮರೆತುನಿದ್ರೆಯಗೈವರೆ||ಉರಿಗೈಯನಟ್ಟಿದರೆ ಹರನೋಡಿ ಬಂದಿಹನುಗಿರಿಜೆ ವರವನು ಬೇಡಬೇಕೆಂದು ನಿಂದಿಹಳುಸುರಪಾರಿಜಾತವನು ಕೊಂಡುಸುರರಾಜಬಂದಿರುವನೇಳಯ್ಯ ಹರಿಯೆ 2ಆಲದೆಲೆಯಿಂದೇಳು ಮಾಲಕುಮಿ ಬಂದಿಹಳುಹಾಲುಗಡಲಿಂದೇಳು ಶ್ರೀದೇವಿನಿಂದಿಹಳುಕಾಲಹೆಡೆಯಿಂದೇಳು ಭೂದೇವಿ ಬಂದಿಹಳು ಸಾಲಮಂಚಿಗಳಿಂದಲಿ ||ಕ್ಷಿತಿನಾಥ ನೀನೇಳು ಸತ್ಯಭಾಮೆ ಬಂದಿಹಳುಮತಿವಂತ ನೀನೇಳು ಜಾಂಬವತಿ ಬಂದಿಹಳುಗತಿವಂತ ನೀನೇಳು ಶ್ರೀತುಳಸಿ ಬಂದಿಹಳು ಏಕಾಂತ ಸೇವೆಯಮಾಡಲು 3ಅಂಬುರುಹದಿಂದ ಜನಿಸಿದ ಬ್ರಹ್ಮ ಬಂದಿಹನುಗಂಭೀರ ಗಾಯನದ ನಾರದನು ನಿಂದಿಹನುರಂಭೆ ಮೇನಕೆ ಮೊದಲು ನರ್ತನಕೆಐದಿಹರು ಶಂಬರಾರಿಪಿತನೆ ಏಳು||ರಾಜಸೂಯವಕೊಳಲು ವಾಯುಸುತ ಬಂದಿಹನುತೇಜಿಯಾಟಕೆ ಅರ್ಜುನನು ಕರೆದು ಬಂದಿಹನುಸಾಜಧರ್ಮಜ ಅಗ್ರಪೂಜೆ ಮಾಡುವೆನೆಂದು ಹೂಜೆಯನುಪಿಡಿದುಕೊಂಡು 4ದೇವ ನಿನ್ನಂಘ್ರಿಯನು ಪೂಜೆ ಮಾಡುವೆನೆಂದುಕಾವೇರಿ ಕೃಷ್ಣೆ ಗೌತಮಿ ಗಂಗೆ ಮಲಪಹರಿಸಾವಧಾನದಿ ಯಮುನೆ ತುಂಗಾ ಸರಸ್ವತೀಭೀಮರಥಿ ನೇತ್ರಾವತಿ ||ದುರಿತ ಬಂಧನವನ್ನು ಪರಿಹರಿಸಿದೆಯೊ ಸ್ವಾಮಿದುರಿತ ದುಷ್ಕರ್ಮವನು ದೇವ ಎಂದರೆ ಸುಡುವೆದುರಿತ ತಾಪಕೆ ಚಂದ್ರ ನೀನೆನಿಸಿಕೊಂಡೆಯೊಶ್ರೀ ಪುರಂದರವಿಠಲನೆ 5
--------------
ಪುರಂದರದಾಸರು