ಒಟ್ಟು 1644 ಕಡೆಗಳಲ್ಲಿ , 117 ದಾಸರು , 1328 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಾವು ಕುರುಬರು, ನಮ್ಮ ದೇವರು ಬೀರಯ್ಯಕಾವ ನಮ್ಮಜ್ಜ ನರಕುರಿಯ ಹಿಂಡುಗಳ ಪ ಅಷ್ಟಮದ ಮತ್ಸರಗಳೆಂತೆಂಬ ಟಗರುಗಳುದೃಷ್ಟಿ ಜೀವಾತ್ಮನೆಂತೆಂಬ ಆಡುಸೃಷ್ಟಿ ಸಿದ್ಧ ಪ್ರಸಿದ್ಧವೆಂತೆಂಬ ಹೋತಗಳುಕಟ್ಟಿ ಕೋಲಿನಲಿ ಇರಿಯುತಿಹ ನಮ್ಮಜ್ಜ 1 ವೇದಶಾಸ್ತ್ರ ಪುರಾಣವೆಂತೆಂಬ ಶ್ವಾನಗಳುಕಾದಿದ್ದು ನಮ್ಮಜ್ಜನ ಹಿಂಡೊಳಗೆಹಾದಿಗಾಣದೆ ಕೂಗಿ ಬಾಯಾರಿ ಕಾಲ್ಗೆಡಲುಆದರಿಸಿ ಅಂಬಲಿಯನೆರೆವ ನಮ್ಮಜ್ಜ 2 ಅರಿವೆಂಬ ಮರಿಗಳು ಹಿಂಡಿನೊಳಗಡೆ ಬರಲುಮರೆವೆಂಬ ವ್ಯಾಘ್ರ ಕಿರುಬ ತೋಳಗಳು ಹೊಕ್ಕುತರುಬಿ ಹಿಂಜಾವದಲಿ ಕುರಿಯ ಮುರಿವುದ ಕಂಡು ಅರಿತು ಅರಿಯದ ಹಾಗೆ ಇರುವ ನಮ್ಮಜ್ಜ 3 ಹುಟ್ಟುದಕೆ ಮೊದಲಿಲ್ಲ ಸಾವುದಕೆ ಕೊನೆಯಿಲ್ಲಹುಟ್ಟು ಸಾವಿನ ಹೊಲಬ ಬಲ್ಲ ನಮ್ಮಜ್ಜಅಷ್ಟು ಪ್ರಾಣಿಗಳಿಗೆ ಇಷ್ಟು ಅಂಬಲಿ ಮಾಡಿಹೊಟ್ಟೆ ತುಂಬುವ ಹಾಗೆ ಎರೆವ ನಮ್ಮಜ್ಜ 4 ಕಲಿಯುಗಕೆ ಗೌಡನಿವ ಸಂಗಾತಿ ಮಂತ್ರಿಸುತಕಲಿಯುಗಂಗಳನೆಲ್ಲ ಪೊರೆವಾತನೀತಜಲಜಾಕ್ಷ ಕಾಗಿನೆಲೆಯಾದಿಕೇಶವನ ಮನವೊಲಿಸಿ ಭಜಿಸದ ಮನುಜ ಹುಚ್ಚು ಕುರುಬ 5
--------------
ಕನಕದಾಸ
ನಿಖಿಳ ಯಾದವರೊಳಗೆಮಾನಾಭಿಮಾನವೆಳ್ಳನಿತಿಲ್ಲ ಕೃಷ್ಣ ಪ ದೇವಕೀದೇವಿಯುದರದಿ ಜನಿಸಿ ಬಾಲ್ಯದಲಿಓವಿ ಮೊಲೆ ಕುಡಿಸಿದಳ ಅಸುವ ಸೆಳೆದುಮಾವ ಕಂಸನ ಕೊಂದು ಮನುಜ ವೇಷದಲಿ ಗಾಂ-ಡೀವಿಯ ಮನೆಯ ಬಂಡಿ ಬೋವನಾದೆ1 ಸುರನದಿಯ ಸುತನು ಪಾಂಡವರಿಗಾಪ್ತನು ನಿನಗೆಪರಮಭಕ್ತನು ಸ್ವಯಿಚ್ಛಾ ಮರಣಿಯುಧುರದೊಳಗೆ ಪೂರ್ವ ವೈರದ ಶಿಖಂಡಿಯ ತೋರಿಶರಮಂಚದೊಳುಪಾಯದಲಿ ಮಲಗಿಸಿದೆ 2 ಸೋದರತ್ತೆಯ ಸೊಸೆಯ ಮಗ ನಿನಗೆ ಭಾವಿಸಲುಸೋದರಳಿಯನು ಮೂರು ಲೋಕವರಿಯೆಸಾಧಿಸಿಯೆ ಅಸಮ ಚಕ್ರವ್ಯೂಹವನು ರಚಿಸಿಸೋದರನ ಷಡುರಥರ ಕೈಲಿ ಕೊಲ್ಲಿಸಿದೆ 3 ಕುರುಪತಿಯ ಮೈದುನನ ಕೊಲ್ಲ ಬಗೆದವನ ಸಂ-ಗರದೊಳೇರಿಸಿ ನುಡಿದ ನುಡಿಯ ಕೇಳಿ ಮೈ-ಗರೆಯೆ, ರವಿ ಮಂಡಲಕೆ ಚಕ್ರದಿ ಮರೆಯ ಮಾಡಿನರನ ಕೈಯಿಂದ ಸೈಂಧವನ ಕೊಲ್ಲಿಸಿದೆ 4 ಶಪಥದಲಿ ರಣದೊಳರಸನ ಹಿಡಿವೆನೆಂಬವಗೆತಪಸಿಗಳ ತಂದು ತತ್ತ್ವವ ಬೋಧಿಸಿಕಪಟವರಿಯದ ನೃಪನ ಕೈಯೊಳನೃತವ ನುಡಿಸಿಉಪಮೆಯಲಿ ಶಸ್ತ್ರ ಪಂಡಿತನ ಕೊಲ್ಲಿಸಿದೆ 5 ಯಮಳರನು ಪಡೆದ ತಾಯಿಗೆ ಸಹೋದರನ ಭೂರಮಣರೊಳಗಗ್ಗಳೆಯನತಿ ಧೈರ್ಯನುಸಮರದಲಿ ರವಿಸುತನ ರಥಕೆ ಸೂತನ ಮಾಡಿಯಮಸುತನ ಕೈಲಿ ಮಾವನ ಕೊಲ್ಲಿಸಿದೆ 6 ಜನವರಿಯದಂತೆ ಜೀವನದೊಳಡಗಿರ್ದವಗೆಮನಕೆ ಖತಿಗೊಳಿಸಿ ಬರ ಸೆಳೆದು ನಗುತಅನುವರದೊಳಾಯತದ ತೊಡೆಯ ಸನ್ನೆಯ ತೋರಿಅನಿಲಜನ ಕೈಲಿ ಕೌರವನ ಕೊಲ್ಲಿಸಿದೆ7 ಉರಿಯೊಳಗೆ ಜನಿಸಿದಂಗನೆಯ ನಿಜಸುತರು ಮಂ-ದಿರದೊಳೈವರು ನಿದ್ರೆಗೈಯುತಿರಲುನರವೃಕೋದರ ಧರ್ಮನಂದನರನಗಲಸಿಯೆಗುರು ಸುತನ ಕೈಲಿ ಬಾಲಕರ ಕೊಲ್ಲಿಸಿದೆ 8 ಈ ವಿಧದೊಳವರ ಸುರಲೋಕದಲಿ ನೆಲೆಗೊಳಿಸಿಭಾವ ಮೈದುನರೈವರನು ರಕ್ಷಿಸಿಭೂವಲಯದೊಳು ಕೀರ್ತಿಯನು ಪಡೆದೆಸೆವ ನಮ್ಮದೇವ ನೆಲೆಯಾದಿಕೇಶವ ವೆಂಕಟೇಶ 9
--------------
ಕನಕದಾಸ
ನಿಗಮ ಆಗಮಗೋಚರ ಜಗನ್ಮೋಹ ಜಗದೀಶ ಪಾಲಿಸು ಎನ್ನ ಪ ಖಗವರಗಮನ ಜಗದ ಜೀವನ ಪೊಗಳುವೆ ನಗಧರ ಅನಘನೆ ನಿನ್ನ ನಗೆ ಮೊಗದೋರೆನಗಗಲದೆ ಅನುದಿನ ನಗಜನಮಿತ ಮಿಗಿಲಗಣಿತ ಮಹಿಮ ಅ.ಪ ಕದನಕಂಠೀರವ ಉದಧಿಸದನ ಮಹ ಅಧಮಕುಲದ ಮದಸಂಹರ ಹದಿನಾರುಸಾವಿರ ಸುದತಿಯರ ಮನ ವಿಧ ವಿಧ ಸುಲಿದ ಸುಂದರ ಸದಮಲರಾಧೇಯ ಮದನಕದನದಿಂ ಕದಲದ ಆನಂದ ಮಂದಿರ ಕುದುರೆ ತಿರುವಿ ಪಾದಪದುಮದಾಸನ ಘೋರ ಕದನಗೆಲಿಸಿದ ಗಂಭೀರ ಯುದುಕುಲಪಾವನ ಮದನನಯ್ಯ ರಮಾ ಪದುಮಾವತಿಯ ಪಂಚಜೀವನಸದನ ಪದುಮವದನ ಸದಸದುಗುಣಗಳ ಸದ್ಹøದಯ ಉದಯ ಮುದ ವುದಯಾಗೆನ್ನೊದನದಿ1 ನಲಿದು ನಲಿದು ಪೊಂಗೊಳಲುನೂದುವ ಬಲುಚೆಲುವ ಚಿದ್ರೂಪನಾಟಕ ಒಲದು ಭಜಕಜನರ್ಹೊಲಬು ತಿಳಿವ ಚಿ ತ್ಕಳಾಭರಿತ ವಿಶ್ವವ್ಯಾಪಕ ಜಲಜಮಿತ್ರ ಕೋಟಿಕಳೆಕಿರಣಗಳಿಂ ಖಳಕುಲಭೀತ ಸುಫಲಪ್ರದ ಪರತರ ಇಳೆಮಂಡಲತ್ರಯ ಪಾಲಕ ಕಲಿಮಲಹರ ನಿರ್ಮಲನಿಜಚರಿತ ಮಲಿನ ಕಳೆದು ನಿರ್ಮಲನೆನಿಸೆನ್ನ ಒಲಿದುಪಾಲಿಸು ಸ್ಥಿರ ಚಲಿಸಿದಚಲಮನ ಸುಲಭಭಕುತ ಬಲ ವಿಲಿಸಿತಕರುಣಿ 2 ಸಿಡಿಲುಕೋಟಿಸಮ ಫಡಫಡಸ್ತಂಭವ ಒಡೆದು ಮೂಡಿದ ತ್ರಿವಿಕ್ರಮ ಕಡುರೋಷದಿ ಕೆಂಗಿಡಿಗಳನುಗುಳುವ ಕಡುಗಲಿಗಳಗಲಿ ನಿಸ್ಸೀಮ ಘುಡುಘುಡಿಸುತ ಆರ್ಭಟಿಸುತ ದುರುಳನ ಒಡಲಬಗಿದ ಕಡುಪರಾಕ್ರಮ ಗಡಗಡ ನಡುಗುವ ದೃಢತರ ಬಾಲನ ಪಿಡಿದು ಪೊರೆದ ಭಕ್ತ ಸುಖಧಾಮ ಉಡುಮಂಡಲ ವರಗಡರಿದ ಶಾಪವ ತಡೆಯದೆ ಹಡೆಹಾಯ್ಸ್ಹಿಡಿದೆಲೋಕವರ ಜಡಜಭವ ತೊಡರನು ಗಡ ಕಡಿದೆನ್ನಯ ನುಡಿಯೊಳೊಡೆದು ಮೂಡು ಒಡೆಯ ಶ್ರೀರಾಮ ಪ್ರಭು 3
--------------
ರಾಮದಾಸರು
ನಿಟಿಲಾಕ್ಷ ಪ. ಹರ ರುದ್ರಾಕ್ಷನೆ ಕರುಣದಿ ರಕ್ಷಿಸು ಅ.ಪ. ಅವನಿ ಪಾಲಕಗೆ 1 ದೂರೆಂದೆನಿಸಿದ | ಮಾರುತ ನಿಂದಲಿಸಾರತತ್ವ ಶ್ರುತ | ದೂರ್ವಾಸಾಭಿಧ 2 ಪರಿ | ಲೋಲಾಯತ ಮನಪಾಲಿಸು ಹರಿಯಲಿ | ಶೈಲಜೆ ರಮಣಾ 3 ದೈತ್ಯಾರಾಧಿತ | ದೈತ್ಯವರದ ಶಿವತೊತ್ತಿನ ಪಾಲಿಸಿ | ಮೃತ್ಯುಂಜಯಾಭಿದ4 ಗುಪ್ತ ಮಹಿಮ ಗುರು | ಗೋವಿಂದ ವಿಠಲನಭೃತ್ಯನ ಸುತನು | ಚಿತ್ತವ ಪಾಲಿಸು 5
--------------
ಗುರುಗೋವಿಂದವಿಠಲರು
ನಿತ್ಯ ನಿರುಪಮ ನಿತ್ಯ ಎನ್ನ ಚಿತ್ತದಿ ನಿಲಿಸು ಪ ಮರವೆ ಮಾಯದೆ ಕೆಟ್ಟ ಪರದೆಯೋಳ್ಸದಾ ಬೆರೆದು ಶ್ವಾನಸೂಕರನಂತೆ ಚರಿಸಿದೆ ಧರೆಭೋಗ ನೆಚ್ಚಿ ನರಜನ್ಮ ವಿವರಿಸಿ ನೋಡದೆ ಮರುಳತನದಿ ನರಕಿಯಾದೆ 1 ಮೃತ್ಯುಗೀಡಾದೆ ತವಭೃತ್ಯನೆನಿಸದೆ ಸುತ್ತಿ ಸುತ್ತಿ ಇಹ್ಯಕೆ ಪರಕೆ ಕತ್ತೆಯಂತೆ ತಿರುಗಿ ತಿರುಗಿ ಮರ್ತು ನಿನ್ನ ಚರಣ ಮತ್ರ್ಯದಿ ನಿತ್ಯಸುಖವ ಪಡೆಯದ್ಹೋದೆ 2 ಆದದ್ಹಾಗಿಹೋಯಿತಭವ ವೇದಾಗಮ್ಯ ಪದುಮನಾಭ ಪಾದನಂಬಿದೆ ಪಾಲಿಸಿನ್ನು ಮೋದದೆನ್ನನೆತ್ತಿ ಶ್ರೀರಾಮ 3
--------------
ರಾಮದಾಸರು
ನಿತ್ಯ ನೂತನ ಮಹಿಮಭೃತ್ಯನನು ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ ಅ.ಪ. ವಿತ್ತ ಕರ್ತು ನೀನಾಗಿರಲುಆರ್ತರುದ್ಧರ ಕಾರ್ಯ | ಪೂರ್ತಿಗೊಳಿಸೋ 1 ಉದಧಿ ವಿಧಿ ಜನಕ ವಿಶ್ವೇಶ | ಮುದ ಮುನಿಯ ಸದ್ವಂದ್ಯವದಗಿ ವರಪ್ರದನಾಗಿ | ಮುದವನ್ನೆ ಬೀರೋ 2 ಯೇಸೊ ಜನ್ಮದ ಪುಣ್ಯ | ರಾಶಿ ವದಗಿತೊ ಇವಗೆಆಶಿಸುವ ಹರಿದಾಸ್ಯ | ವಾಸವಾನುಜನೇ ಆಸುರೀ ಭಾವಗಳ | ನಾಶನವ ಗೈಯ್ಯುತ್ತಪೋಷಿಸುವುದಿವನ ಹರಿ | ದಾಸ್ಯ ಕರುಣಿಸುತಾ 3 ನಾನು ನನ್ನದು ಎಂಬ | ಹೀನ ಮತಿಯನೆ ಕಡಿದುದಾಸವಾಂತಕ ಸಲಹೊ | ಜ್ಞಾನ ಪ್ರದನಾಗೀಮೌನಿ ಮಧ್ವರ ಮತದಿ | ಸಾನು ಕೂಲಿಸಿ ದೀಕ್ಷೆಮಾನನಿಧಿ ಗುಣಪೂರ್ಣ | ನೀನಾಗಿ ಪೊರೆಯೋ 4 ಸರ್ವವ್ಯಾಪ್ತ ಸ್ವಾಮಿ | ನಿರ್ವಿಕಾರನೆ ದೇವಸರ್ವಜ್ಞ ಸರ್ವೇಶ | ಸರ್ವಸಮ ಮೂರ್ತೇಗುರ್ವಂತರಾತ್ಮಕನೆ | ದರ್ವಿಜೀವಿಯ ಕಾಯೊದುರ್ವಿ ಭಾವ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಿತ್ಯ ಶುಭಮಂಗಳಂ ಪ. ಹೃದಯವೆಂಬೀ ದಿವ್ಯ ಪದ್ಮಪೀಠದ ಮೇಲೆ ಪದ್ಮಾಕ್ಷಿ ಪದ್ಮೆಯನು ಕುಳ್ಳಿರಿಸಿ ಸದಮಲ ಭಾವದಿಂ ಮಧುಕೈಟಭಾಂತಕನ ಹೃದಯೇಶ್ವರಿಯ ಸೇವೆಗೈವೆ 1 ಜ್ಞಾನವೆಂಬುವ ದಿವ್ಯ ಜ್ಯೋತಿಯಂ ಮುಂದಿರಿಸಿ ಧ್ಯಾನವೆಂಬುವ ನಿಲುವುಗನ್ನಡಿಯ ನಿಲಿಸಿ ದಾನÀವಾಂತಕ ರಾಮಚಂದ್ರಮನ ಧ್ಯಾನಿಸುತ ಜಾನಕಿಯ ಬಲಗೊಂಬೆ ಭರದಿ 2 ನೇಮನಿಷ್ಠೆಯ ಶುದ್ಧ ಹೇಮಕಲಶದಿ ಮತ್ತೆ ಭಕ್ತಿರಸದ ಪನ್ನೀರ ತುಂಬಿ ನಾಮಸಂಕೀರ್ತನೆಯ ನಾರಿಕೇಳವ ಬೆರಸಿ ಶ್ರೀನಾರಿಗಭಿಷೇಕವ ಗೈವೆ 3 ಚಿತ್ತಶುದ್ಧಿಯ ಶುಭ್ರವಸ್ತ್ರದಿ ನೇವರಿಸಿ ಸತ್ವಗುಣದ ಪೀತಾಂಬರವನುಡಿಸಿ ಕಂಚುಕ ತೊಡಿಸಿ ಚಿತ್ತಜನ ಜನನಿಯರ ನೋಡಿ ನಲಿವೆ 4 ಅಂತಃಕರಣ ಶುದ್ಧಿಯ ಅರಿಸಿನವನು ಪೂಸಿ ಶಾಂತಗುಣದ ತಿಲಕ ತಿದ್ದಿ ನಂದಮಲ್ಲಿಗೆಯ ದಂಡೆಯನು ಮುಡಿಸುತ್ತ ಇಂದ್ರಿಯ ನಿಗ್ರಹದ ಗಂಧ ಹಚ್ಚುವೆನು 5 ಪಂಚಭೂತಾತ್ಮಕದ ಛತ್ರಿಯನು ಪಿಡಿದೆತ್ತಿ ಪಂಚನಾದಗಳೆಂಬ ವಾದ್ಯಗಳ ನುಡಿಸಿ ಪಂಚೇಂದ್ರಿಯಂಗಳೇ ಪಂಚಭಕ್ಷ್ಯಗಳಾಗಿನಿ ರ್ವಂಚನೆಯಿಂದಾರೋಗಿಸೆಂಬೆ 6 ರೇಚಕವೆಂಬ ವ್ಯಜನದಿಂ ಬೀಸಿ ತಾರಕ ಚಾಮರವ ಪಿಡಿದು ಕುಂಭಕವೆಂಬ ಪನ್ನೀರಿನಿಂ ತೋಯ್ಸಿ ತಾರಕ ಬ್ರಹ್ಮನರಸಿಯಂ ಸೇವಿಸುವೆ 7 ಭೋಗಭಾಗ್ಯವನೀವ ಭಾಗ್ಯಲಕ್ಷ್ಮಿಗೆ ವೈರಾಗ್ಯದ ತಟ್ಟೆಯನು ಪಿಡಿದು ಭಾವದೀವಿಗೆಯ ಕರ್ಪೂರದಾರಿತಯೆತ್ತಿ ಬಾಗಿವಂದಿಪೆ ತಾಯೆ ಕರುಣಿಸೆಂದು 8 ವರದಾತೆ ಭೂಜಾತೆ ಸುವಿನೀತೆ ಸುವ್ರತೆ ವರಶೇಷಗಿರಿವಾಸದಯಿತೆ ಮಹಿತೇ ಸೆರಗೊಡ್ಡಿ ಬೇಡುವೆನು ಕರಪಿಡಿದು ಸಲಹೆಂದು ನೆರೆನಂಬಿ ನೆನೆನೆನೆದು ನಲಿವೆನಿಂದು 9
--------------
ನಂಜನಗೂಡು ತಿರುಮಲಾಂಬಾ
ನಿತ್ಯ ಶುಭಮಂಗಳಮಂ ಪ ಧರೆಯೊಳು ನಿನ್ನಂಥಾ ತರುಣಿ ಮಣಿಯಳಾ ಕಾಣೆಹರಿಯ ವಕ್ಷಸ್ಥಳದಿ ಇರುವೆ ನೀನುಕರವೆತ್ತಿ ಮುಗಿಯುವೆನು ಸಿರಿಯೆ ತವ ಸೌಭಾಗ್ಯಎರಡು ಕಣ್ಣಿಗೆ ತೋರೆ ವರಮಹಾಲಕ್ಷ್ಮಿ1 ಜರದ ಪೀತಾಂಬರವು ಚರಣದೊಳಗಲಿಯುತಲಿಸಿರಿವಂತೆ ಮೂರು ಹೆಜ್ಜೆ ಬರುವಳಾಗಿಸೆರಗೊಡ್ಡಿ ಬೇಡುವೇನು ಹೆರಳಿನಲಿ ಮುಡಿದಿರುವಮರುಗು ಮಲ್ಲಿಗೆ ಚಂಪಕ ಸರಗಳನ್ನು ನೀಡೆ 2 ಇಂದುಮುಖಿ ನಿನ್ನಗಾರ್ತಿಯ ತಂದು ನಿಂದಿಹೆ ನಿಜಸುಂದರಾ ಮೃದು ಕೀರ್ತಿ ಪಾಡುತಿಹೆನೆಚಂದ್ರಶೇಖರ ಸುರರಿಂದ ವಂದಿತ ಚರಣಇಂದಿರೇಶನ ಸಹ ಬಂದಿಲ್ಲೆ ತೋರಿಸುಮುಖ3
--------------
ಇಂದಿರೇಶರು
ನಿತ್ಯ ಸೋಧಿಸಿ ಭಕ್ತಿ ರಸÀ ಸ್ವಾದ ಮಾಡುವ ಸಾಧುಗಳೊಳಗಿಡೊ ಶ್ರೀಶಾ ರಮೇಶ ಪ ಬೋಧಿಸಿ ತತ್ತ್ವರಸ ಸ್ವಾದ ನೀಡುವ ಮಾಧವ ಶ್ರೀಶನೆ ಮೋದ ಬೀರುತ ನಿನ್ನ ಪಾದವ ತೋರುವ ಸಾಧುಗಳೊಳಗಿಡೊ ಅಗಾಧ ಮಹಿಮನೆ ಅ.ಪ ಭವÀಸಂಸಾರದೊಳಿರಲು ಸಜ್ಜನರು ಅರುಣೋದಯದೊಳೆದ್ದು ನಿನ್ನ ಚರಣಪಲ್ಲವವನ್ನು ಕೃಷ್ಣಾ ಸ್ಮರಿಸುತಲಿರುವರೊ ಪರಮಪುರುಷಕೇಳೊ ಅಂಥಾ ವರ ಭಾಗವತರನು ಕರುಣದಿ ತೋರೋ ಶ್ರೀಶಾ ವರ ನೂಪುರಗೆಜ್ಜೆ ಧರಿಸಿ ಮೆರೆವ ದೇವಾ ವರ ಭಕ್ತರು ಕರೆ ಕರೆದಲ್ಲಿಗೆ ಬಹ ಶರಧಿ ಶಯನ ನಿನ್ನ ಬಿರುದಲ್ಲವೆ ಕೃಷ್ಣಾ ತ್ಪರಿತದಿ ನಿನ್ನಡಿ ಸ್ಮರಿಸುವರನೆ ತೋರೊ 1 ಅಗರು ಚಂದನ ಗಂಧ ಸೊಗವಿಲಿ ಧರಿಸುತ ಮಿಗೆ ಪೀತಾಂಬರದುಡಿಗೆಯನುಟ್ಟು ಕೃಷ್ಣಾ ಸಿರಿ ಸಹಿತಿರೆ ಸೊಗವಿಲಿ ಕರಿರಾಜನ ಸ್ವರ ಆಲಿಸಿ ಅಗಹರ ಸಿರಿಗ್ಹೇಳದೆ ಬಂದೆ ಶ್ರೀಧರ ಝಗಝಗಿಸುತ ನಿನ್ನ ಪದರುಹಗಳನಿಟ್ಟು ಮಿಗೆ ವೇಗದಿ ಬಂದು ಕರಿಯನುದ್ಧರಿಸಿದೆ ಈಗ ಬೇಗ ನಿನ್ನ ಭಕ್ತರ ಸೊಗವಿಲಿ ತೋರೋ ಕೃಷ್ಣಾ 2 ಯತಿ ಮುನಿ ಹೃದಯಾನಂದ ಶ್ರೀಕೃಷ್ಣ ಸತತದಿ ನಿನ್ನ ನಾಮ ಜತನ ಮಾಡುತ ತಮ್ಮ ಮತಿಭ್ರಮಣೆಯಲು ನಿನ್ನಾಕೃತಿ ನೋಡುತ ಸ್ತುತಿಪ ಯತಿಕುಲ ತಿಲಕಾಗ್ರಣಿ ಶ್ರೀ ಶ್ರೀನಿವಾಸ ಎನ್ನ ಮತಿಭ್ರಮಣೆಯನು ನೀಗಿಸುವಂಥಾ ಸುಜನರ ಸತತದಿ ತೋರಿಸೋ ಕ್ಷಿತಿಯೊಳು ವೆಂಕಟ ಪತಿತ ಪಾಮರರನು ಗತಿಕಾಣಿಸೆ ಕೃಷ್ಣಾ3
--------------
ಸರಸ್ವತಿ ಬಾಯಿ
ನಿತ್ಯ ಪರಿಪೂರ್ಣ ಕಾಮ ಪಟ್ಟಾಭಿರಾಮ ತನ್ನ ಸ್ಮರಿಸುವ ಜನಕೀವನು ಕ್ಷೇಮ ಪ ಭಾಸ್ಕರವಂಶ ಭೂಷಣ ತರಣಿಜಮಿತ್ರ ಭವ್ಯ ಚರಿತ್ರ | ದಾಶರಥಿ ಕರುಣಾಳು ಸರೋಜನೇತ್ರ ಅ.ಪ ಜಡಮತಿಯಾದರೂ ಇವನ | ಮರೆಯಾ ಇನ್ನು ಧೃಢಮತಿಗೆ ತನ್ನನೇ ಕೊಡುವೆನೈಯ್ಯಾ 1 ತಮ್ಮೋಳು ತಾವು ತಿಳಿದು | ಭಜಿಸುವರು ಇನ್ನು ಹೆಮ್ಮೆಯ ಮಾತುಗಳು ಬಿಡಿರಿ ಜನರು 2 ರಾಮನು ನರನೆಂಬ ಪಾಮರನ ಬಾಯಲಿ ಮಣ್ಣು ಸೋಮಶೇಖರ ತನ್ನ ಸತಿಗೆ | ಪೇಳಿದ ಇವನ ನಾಮದ ಮಹಿಮೆ ಕುಣಿಕುಣಿದು 3 ನಿರುತಾ ಪೊಗಳುವವಿವನ ವೇದ | ಇವನಾ ಚರಣೆ ಸಜ್ಜನರಿಗೆ ಬಲುಸ್ವಾದ 4 ಸೇತುವೆ ಕಟ್ಟುವುದುಂಟೆ ಕೋತಿದಂಡುಗಳೆಲ್ಲಾ ವ್ರಾತ ರಹಸ್ಯವೇತಕೆ ಚಿಂತೆ 5 ಹೊರಗಿನ ಕಣ್ಣಿಂದ ಅರಿಯಲು ಸಾಧ್ಯವಲ್ಲಾ ನೆರೆ ಒಳಗಣ್ಣಲಿ ನೋಡಬೇಕು | ಸ ದ್ಗುರು ಕಟಾಕ್ಷವಾದವಗೆ ಜೋಕು 6 ಪ್ರತ್ಯಕ್ಷವಾದಿಗಳಿಗೆ ಮೃತ್ಯುವಿನ ಬಾಯೊಳು ಸತ್ತು ಹುಟ್ಟುವುದು ತಪ್ಪುವುದಿಲ್ಲಾ | ಆ ಪತ್ತು ಇದೇ ದುರ್ಜನಿರಿಗೆಲ್ಲಾ 7 ಮಗನು ಬ್ರಹ್ಮನು ಮೊಮ್ಮಗನು ರುದ್ರನು ಮೂ ಜಗವನಾಳುವ ನಾರಾಯಣನಿವನು | ತಾನು ಮಗುವಾಗಿ ದಶರಥಗುದಿಸಿದನು 8 ಮುನಿ ಯಾಗವ ಪಾಲಿಸಿ ವನಿತೆಯ ಶಾಪ ಬಿಡಿಸಿ ತನ್ನೊಳಗಿಟ್ಟು ತಾ ಹುಡುಕಿದನು 9 ನರನಾಗಿ ದೈತ್ಯರ ಮುರಿದು ದೇವತೆಗಳಿಗೆ ಗರಸನಾಗಿ ಸಾಕೇತಪುರದಿ ಪೊಳೆದ 10 ನರನು ಪಾಮರನು ಹ್ಯಾಗೆ ತಿಳಿಯುವನು | ಸಂಸೃತಿ ಶರಧಿಯೊಳು ಬಿದ್ದು ಬಳಲುವನು11
--------------
ಗುರುರಾಮವಿಠಲ
ನಿತ್ಯದಿತಿಜರು ಕಲಿಗೆ ದೂರುತಿಹರೋ ಸತ್ಯಧ್ಯಾನರ ಕಾಟ ತಾಳಲಾರೆವೊಯೆಂದು ಪ ನೀ ಕಲಿಸಿದಾಟವನು ತಾ ಕಳೆದು ಜನರ ಅಘನೂಕಿ ಜಗಸತ್ಯ ಶ್ರೀ ಹರಿಯು ಪರನು ಶ್ರೀಕಮಲಭವರೆಲ್ಲ ದಾಸರೆಂದರುಪಲು ತಾ ಕಲ್ಪಿಸಿದ ಪಾಠಶಾಲೆ ಸಭೆಗಳನೆಂದು 1 ಭೂಸುರರಿಗನ್ನ ಧನ ಭೂಷಣಗಳಿತ್ತು ಅಭ್ಯಾಸಗೈಸಿದ ಸಕಲ ವೇದಶಾಸ್ತ್ರ ಏಸು ವಿಧ ಯತ್ನಗಳು ನಾ ಮಾಡಿದರು ಜಯ ಲೇಸು ಕಾಣದೆ ನಿನ್ನ ಬಳಿಗೆ ಬಂದೆವು ಎಂದು 2 ಇಂತು ತಾ ಮಾಡಿದನು ಪಿಂತಿನಾಶ್ರಮದಿ ಈ ಗಂತು ನಮ್ಮವರಾದ ವದು ಮತ್ಸರಾ ಕಂತು ಕೋಪಾದಿಗಳಿಗಂತಕನು ಯನಿಸಿ ಮುನಿ ಸಂತತಿಪನಾಗಿರುವದೆಂತು ನೋಳ್ಪೆವು ಎಂದು 3 ತಾಪಸೋತ್ತಮ ಸತ್ಯದ್ಯಾನದಿಂ ಭೂತಳದಿ ಪಾಪ ಸರಿದಿತು ಪುಣ್ಯವೆಗ್ಗಳಿಸಿತು ಲೇಪಿಸದು ಖತಿಜನಕ ಇವರ ದಯದಿಂದೆಮ್ಮ ವ್ಯಾಪಾರ ಧರೆಯೊಳಗೆ ಭೂಪ ಇನ್ಯಾಕೆಂದು 4 ನಿರುತ ಸಿರಿಗೋವಿಂದ ವಿಠಲನ್ನ ಸೇವಿಸುತಾ ಪರಹಿಂಸೆ ಧನಯುವತಿ ದ್ಯೂತತೊರದಾ ವರಯತಿಯ ಮೋಹಿಸುವ ಶಕ್ತಿ ತನಗಿಲ್ಲೆಂದು ಅರುಹಿದನು ಭೃತ್ಯರಿಗೆ ಕಲಿ ಮನನೊಂದು 5
--------------
ಅಸ್ಕಿಹಾಳ ಗೋವಿಂದ
ನಿನಗಿಂತ ಅಧಿಕರು ನಿನ್ನಯ ಭಕುತರು ಇದಕೆ ಅನುಮಾನಗೊಳಬೇಡ ಅಂಬುಧಿಶಯನ ಪ ಪದಿನಾಲ್ಕು ಲೋಕಗಳು ಪೊತ್ತೆನೆಂದೆನಬೇಡ ಅದುಸಹಿತ ನಿನ್ನನು ಹೃದಯದೊಳಗೆ ಹುದುಗಿಕೊಂಡಿಪ್ಪರೋ ಪದುಮನಾಭನೆ ಕೇಳೊ ಇದರಿಂದ ಸರಿಮಿಗಿಲು ಆರೊ ಜನದೊಳಗೆ 1 ವನಜಾಂಡಗಳೆಲ್ಲ ಪೊತ್ತೆನೆಂದೆನಬೇಡ ಕೊನೆಯ ನಾಲಿಗೆಯಲ್ಲಿ ನಿನ್ನ ನಿಲಿಸಿ ಭಾರ ಇಲ್ಲದಂತಿಪ್ಪರೊ ಘಣಿಶಯನ ಅಧಿಕಸಮರಾರೊ ಜಗದೊಳಗೆ 2 ಅಣುಮಹತ್ತು ಆದೆನೆಂದೆನೆಬೇಡವೊ ಗಣನೆ ಇಲ್ಲದೆ ನಿನ್ನ ಕರದಿ ಮುಚ್ಚಿ ಘಣಿ ಆಹಾರಗಾಮಿ ನಾ ವಿಜಯವಿಠ್ಠಲ ನಿನಗೆ ಮಣಿದು ಲೆಕ್ಕಿಸರೋ ನಿನ್ನನು ಮೆಚ್ಚಿದಾಳುಗಳು3
--------------
ವಿಜಯದಾಸ
ನಿನಗಿಂತ ಕುಂದೇನೊ ನಮ್ಮಮ್ಮ ಜಯಲಕ್ಷ್ಮೀ ಪ ನಿನಗಿಂತ ಕುಂದೇನೋ ಸನಕಾದಿಗಳ ಸ್ವಾಮಿಮನಸಿಜನೊಡೆಯನೆ ಕನಕಗರ್ಭನ ಜನಕ ಅ ಮಚ್ಚ್ಯಾವತಾರ ನೀನಾದರೆ - ಆಕೆಮಚ್ಚ್ಯಗಂಗಳೆ ತಾನಾದಳೊಹೆಚ್ಚಿನ ಶಂಖವ ಪಿಡಿದರೆ - ಆಕೆನಿಚ್ಚ ಶಂಖಕಂಠಳಾದಳಯ್ಯ 1 ನೀಲವರ್ಣ ನೀನಾದರೆ - ಆಕೆನೀಲಕುಂತಳೆ ತಾನಾದಳೊಲೋಲ ಕಮಲನಾಭನಾದರೆ - ಆಕೆಬಾಲ ಕಮಲಮುಖಿಯಾದಳಯ್ಯ2 ಬೆಟ್ಟವ ನೀನೊಂದು ಪೊತ್ತರೆ - ಆಕೆಬೆಟ್ಟದಂಥ ಕುಚವೆರಡು ಪೊತ್ತಳೊಮೆಟ್ಟಿ ಶೇಷನ ನೀ ತುಳಿದರೆ - ಆಕೆಕಟ್ಟಿ ಬಾಸೆಗೆ ಶೇಷನ ನಿಲಿಸಿಹಳಯ್ಯ3 ಗಜರಾಜವರದ ನೀನಾದರೆ - ಆಕೆಗಜಗಮನೆಯು ತಾನಾದಳಯ್ಯನಿಜ ನರಸಿಂಹ ನೀನಾದರೆ - ಆಕೆಭಜಿಸಿ ಸಿಂಹಮಧ್ಯೆಯಾದಳಯ್ಯ 4 ಈ ಪರಿಯೊಳು ನೀನು ಜನಿಸಿದೆ - ಭಲೆಭಾಪುರೆ ಬಾಡದೊಳು ನೆಲೆಸಿದೆಗೋಪಿಯರ ಮೋಹ ಸಲಿಸಿದೆ - ಚೆಲುವಶ್ರೀಪತಿ ಆದಿಕೇಶವರಾಯ ಮೆರೆದೆ5
--------------
ಕನಕದಾಸ
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು